<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>annamalai &#8211; Peepal Media</title>
	<atom:link href="https://peepalmedia.com/tag/annamalai/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 27 Dec 2024 09:55:18 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>annamalai &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಮಾಧ್ಯಮಗಳೆದುರು ಚಾಟಿಯಿಂದ ದಂಡಿಸಿಕೊಂಡ ಅಣ್ಣಾಮಲೈ: ಕಾರಣವೇನು ಗೊತ್ತೆ?</title>
		<link>https://peepalmedia.com/annamalai-who-was-whipped-in-front-of-the-media-do-you-know-the-reason/</link>
		
		<dc:creator><![CDATA[Peepal Media]]></dc:creator>
		<pubDate>Fri, 27 Dec 2024 09:46:52 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ದೇಶ]]></category>
		<category><![CDATA[annamalai]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[stalin]]></category>
		<category><![CDATA[state politics]]></category>
		<category><![CDATA[tamilu]]></category>
		<category><![CDATA[tamilunadu]]></category>
		<category><![CDATA[writing]]></category>
		<guid isPermaLink="false">https://peepalmedia.com/?p=51345</guid>

					<description><![CDATA[ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅಣ್ಣಾ ಯೂನಿವರ್ಸಿಟಿ ವಿದ್ಯಾರ್ಥಿನಿ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಡಿಎಂಕೆ ಸರ್ಕಾರದದ ನಡೆಯನ್ನು ಖಂಡಿಸಿ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಭರವಸೆಯಂತೆ ಆರು ಬಾರಿ ಚಾಟಿಯಿಂದ ತಮ್ಮನ್ನು ತಾವು ದಂಡಿಸಿಕೊಂಡಿದ್ದಾರೆ. ಅಣ್ಣಾಮಲೈ ಸಾರ್ವಜನಿಕವಾಗಿ ದಂಡಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಸಿರು ‘ಮುಂಡು’ ಧರಿಸಿ, ಶರ್ಟ್ ರಹಿತವಾಗಿ ಅಣ್ಣಾಮಲೈ ಮಾಧ್ಯಮ ಪ್ರತಿನಿಧಿಗಳು ಮತ್ತು ಭಾರತೀಯ ಜನತಾ ಪಕ್ಷದ ಸದಸ್ಯರ ಸಮ್ಮುಖದಲ್ಲಿ ಉದ್ದವಾದ, ಬಿಳಿ ಚಾವಟಿಯಿಂದ ತನ್ನನ್ನು ತಾನೇ ಹೊಡೆದುಕೊಂಡರು. “ನಿಮಗೆ ನಾಚಿಕೆ ಇಲ್ಲವೇ ಸ್ಟಾಲಿನ್?”, [&#8230;]]]></description>
										<content:encoded><![CDATA[
<p>ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅಣ್ಣಾ ಯೂನಿವರ್ಸಿಟಿ ವಿದ್ಯಾರ್ಥಿನಿ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಡಿಎಂಕೆ ಸರ್ಕಾರದದ ನಡೆಯನ್ನು ಖಂಡಿಸಿ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಭರವಸೆಯಂತೆ ಆರು ಬಾರಿ ಚಾಟಿಯಿಂದ ತಮ್ಮನ್ನು ತಾವು ದಂಡಿಸಿಕೊಂಡಿದ್ದಾರೆ.</p>



<p>ಅಣ್ಣಾಮಲೈ ಸಾರ್ವಜನಿಕವಾಗಿ ದಂಡಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಸಿರು ‘ಮುಂಡು’ ಧರಿಸಿ, ಶರ್ಟ್ ರಹಿತವಾಗಿ ಅಣ್ಣಾಮಲೈ ಮಾಧ್ಯಮ ಪ್ರತಿನಿಧಿಗಳು ಮತ್ತು ಭಾರತೀಯ ಜನತಾ ಪಕ್ಷದ ಸದಸ್ಯರ ಸಮ್ಮುಖದಲ್ಲಿ ಉದ್ದವಾದ, ಬಿಳಿ ಚಾವಟಿಯಿಂದ ತನ್ನನ್ನು ತಾನೇ ಹೊಡೆದುಕೊಂಡರು. “ನಿಮಗೆ ನಾಚಿಕೆ ಇಲ್ಲವೇ ಸ್ಟಾಲಿನ್?”, “ಆರೋಪಿ ಜ್ಞಾನಶೇಖರನ್‌ ಅವರನ್ನು ಗಲ್ಲಿಗೇರಿಸಿ” ಎಂಬ ಘೋಷಣೆಗಳ ಫಲಕಗಳನ್ನು ಬಿಜೆಪಿ ಬೆಂಬಲಿಗರು ಹಿಡಿದುಕೊಂಡಿದ್ದರು.</p>



<p>ಸ್ವಯಂ ಚಾಟಿ ಬೀಸಿಕೊಂಡ ಬಳಿಕ ಅವರು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ತಮಿಳು ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳುವ ಯಾರಿಗಾದರೂ ಈ ಆಚರಣೆಗಳು ‘ಮಾರ್ಗಗಳು’ ಎಂದು ತಿಳಿಯುತ್ತದೆ ಎಂದು ಅವರು ಹೇಳಿದರು.</p>



<p>“ನಮ್ಮನ್ನು ನಾವೇ ಹೊಡೆದುಕೊಳ್ಳುವುದು, ನಮ್ಮನ್ನು ನಾವೇ ಶಿಕ್ಷಿಸಿಕೊಳ್ಳುವುದು, ಅತ್ಯಂತ ಕಠಿಣವಾದ ಆಚರಣೆಗಳ ಮೂಲಕ ನಮ್ಮನ್ನು ನಾವು ದಂಡಿಸಿಕೊಳ್ಳುವುದು ಇತ್ಯಾದಿಗಳು ಈ ಸಂಸ್ಕೃತಿಯ ಭಾಗವಾಗಿದೆ. ಇದು ಯಾವುದೇ ವ್ಯಕ್ತಿಯ ವಿರುದ್ಧ ಅಲ್ಲ ಅಥವಾ ಯಾವುದರ ವಿರುದ್ಧವೂ ಅಲ್ಲ. ಇದು ರಾಜ್ಯದಲ್ಲಿ ಆಗುತ್ತಿರುವ ನಿರಂತರ ಅನ್ಯಾಯದ ವಿರುದ್ಧ. ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದಿರುವುದು ಒಂದು ಟಿಪ್ಪಿಂಗ್ ಪಾಯಿಂಟ್ ಮಾತ್ರ” ಎಂದರು.</p>



<p>“ನನ್ನ ಅನೇಕ ಪೂರ್ವಜರು ಈ ಮಾರ್ಗದಲ್ಲಿ ನಡೆದಿದ್ದಾರೆ; ನಾನು ಕೂಡ ಅದನ್ನು ಆರಿಸಿಕೊಂಡಿದ್ದೇನೆ. ಇದು ಉನ್ನತ ಶಕ್ತಿಗೆ ಶರಣಾಗುವ, ದೇವರಿಗೆ ಶರಣಾಗುವ ಪ್ರಕ್ರಿಯೆಯಾಗಿದೆ” ಎಂದು ಬಿಜೆಪಿ ರಾಜ್ಯ ಮುಖ್ಯಸ್ಥರು ಹೇಳಿದ್ದಾರೆ.</p>



<p>“ಡಿಎಂಕೆಯ ಆಡಳಿತದ ಅದಕ್ಷತೆಯಿಂದ ಸಾಮಾನ್ಯ ಜನರು ಪ್ರತಿದಿನ ತೊಂದರೆಗೊಳಗಾಗುತ್ತಿದ್ದಾರೆ. ನನ್ನ ಚಪ್ಪಲಿಗಳನ್ನು ತೆಗೆದುಹಾಕುವ ಬಗ್ಗೆ, ನಾನು ಸಾಕಷ್ಟು ಪರಿಗಣನೆಯ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಪಕ್ಷ ಮತ್ತು ಕಾರ್ಯಕರ್ತರು ಮಾಡಿದ ಎಲ್ಲ ಶ್ರಮದ ನಂತರ, ನೀವು ದೊಡ್ಡ ಶಕ್ತಿಗೆ ನಿಮ್ಮನ್ನು ಒಪ್ಪಿಸುವುದು ಮತ್ತು ನಡೆಯುತ್ತಿರುವ ವಿಷಯಗಳನ್ನು ನೋಡಿಕೊಳ್ಳಲು ದೊಡ್ಡ ಶಕ್ತಿಗೆ ಬಿಡುವುದು ಸಹ ಮುಖ್ಯವಾಗಿದೆ ಎಂದು ನಾನು ನಂಬುತ್ತೇನೆ” ಎಂದು ಅವರು ಹೇಳಿದ್ದಾರೆ. </p>



<p>“</p>



<p></p>
]]></content:encoded>
					
		
		
			</item>
		<item>
		<title>ಕಮಲ್ ಹಾಸನ್ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು: ಅಣ್ಣಾಮಲೈ</title>
		<link>https://peepalmedia.com/kamal-haasan-should-be-admitted-to-a-mental-hospital-annamalai/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 10 Apr 2024 04:58:49 +0000</pubDate>
				<category><![CDATA[ದೇಶ]]></category>
		<category><![CDATA[annamalai]]></category>
		<category><![CDATA[bjp]]></category>
		<category><![CDATA[DMK]]></category>
		<category><![CDATA[india]]></category>
		<category><![CDATA[kamal haasan]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=38160</guid>

					<description><![CDATA[ಚೆನ್ನೈ: ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರ ಜೋರಾಗಿದೆ. ಚುನಾವಣಾ ಪ್ರಚಾರದ ಅಂಗವಾಗಿ ಮುಖಂಡರು ಪರಸ್ಪರ ಟೀಕೆ ಮಾಡುತ್ತಿದ್ದಾರೆ. ಇತ್ತೀಚೆಗೆ ಅಣ್ಣಾಮಲೈ ಮತ್ತು ಕಮಲ್ ಹಾಸನ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಅಣ್ಣಾಮಲೈ ನಟ ಕಮಲ್‌ ವಿರುದ್ಧ ವಿವಾದಸ್ಪದ ಹೇಳಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಣ್ಣಾಮಲೈ ಮಾತನಾಡಿ, ದೇಶದ ರಾಜಧಾನಿ ಬದಲಿಸುವ ಇಂತಹ ಆರೋಪಗಳನ್ನು ಯಾರಾದರೂ ಮಾಡಿದರೆ ಕೂಡಲೇ ಅವರನ್ನು ಮಾನಸಿಕ ಆಸ್ಪತ್ರೆಗೆ ದಾಖಲಿಸಬೇಕು. ಅವರ ಮೆದುಳು ಸರಿಯಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂದು ಪರೀಕ್ಷಿಸಬೇಕು. ಕಮಲ್ ಮನೋವೈದ್ಯರ ಬಳಿ [&#8230;]]]></description>
										<content:encoded><![CDATA[
<p>ಚೆನ್ನೈ: ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರ ಜೋರಾಗಿದೆ. ಚುನಾವಣಾ ಪ್ರಚಾರದ ಅಂಗವಾಗಿ ಮುಖಂಡರು ಪರಸ್ಪರ ಟೀಕೆ ಮಾಡುತ್ತಿದ್ದಾರೆ. ಇತ್ತೀಚೆಗೆ ಅಣ್ಣಾಮಲೈ ಮತ್ತು ಕಮಲ್ ಹಾಸನ್ ನಡುವೆ ಮಾತಿನ ಚಕಮಕಿ ನಡೆದಿತ್ತು.</p>



<p>ಈ ಹಿನ್ನೆಲೆಯಲ್ಲಿ ಅಣ್ಣಾಮಲೈ ನಟ ಕಮಲ್‌ ವಿರುದ್ಧ ವಿವಾದಸ್ಪದ ಹೇಳಿಕೆ ನೀಡಿದ್ದಾರೆ.</p>



<p>ಈ ಸಂದರ್ಭದಲ್ಲಿ ಅಣ್ಣಾಮಲೈ ಮಾತನಾಡಿ, ದೇಶದ ರಾಜಧಾನಿ ಬದಲಿಸುವ ಇಂತಹ ಆರೋಪಗಳನ್ನು ಯಾರಾದರೂ ಮಾಡಿದರೆ ಕೂಡಲೇ ಅವರನ್ನು ಮಾನಸಿಕ ಆಸ್ಪತ್ರೆಗೆ ದಾಖಲಿಸಬೇಕು. ಅವರ ಮೆದುಳು ಸರಿಯಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂದು ಪರೀಕ್ಷಿಸಬೇಕು. ಕಮಲ್ ಮನೋವೈದ್ಯರ ಬಳಿ ಹೋಗಿ ಸಲಹೆ ಪಡೆಯಬೇಕು. ದೇಶದ ರಾಜಧಾನಿಯನ್ನು ನಾಗ್ಪುರಕ್ಕೆ ಹೇಗೆ ಸ್ಥಳಾಂತರಿಸಲಾಗುತ್ತದೆ? ಎಂದು ಅವರು ಕೇಳಿದರು. ಆದರೆ, ಚೆನ್ನೈಯನ್ನು ದೇಶದ ಬೇಸಿಗೆ ಅಥವಾ ಚಳಿಗಾಲದ ರಾಜಧಾನಿಯನ್ನಾಗಿ ಮಾಡಲು ಕಮಲ್ ಮುಂದಾದರೆ ನಾನು ಅದನ್ನು ಒಪ್ಪಿಕೊಳ್ಳುತ್ತೇನೆ. ಅದೇ ಸಮಯದಲ್ಲಿ ಡಿಎಂಕೆಯಿಂದ ರಾಜ್ಯಸಭಾ ಸಂಸದರಾಗುವ ಉದ್ದೇಶದಿಂದ ಕಮಲ್ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಅವರು ಹೇಳಿದರು. ಇದೀಗ ಕಮಲ್ ಹಾಸನ್ ಅಭಿಮಾನಿಗಳು ಅಣ್ಣಾಮಲೈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.</p>



<p>ಈ ನಡುವೆ ಚುನಾವಣಾ ಸಂದರ್ಭದಲ್ಲಿ ಡಿಎಂಕೆ-ಎಂಎನ್‌ಎಂ ಮೈತ್ರಿಕೂಟದ ಭಾಗವಾಗಿ ಅಭ್ಯರ್ಥಿ ಕಲಾನಿಧಿ ವೀರಸ್ವಾಮಿ ಪರ ಪ್ರಚಾರದಲ್ಲಿ ಕಮಲ್ ಹಾಸನ್ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಕಮಲ್, ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ನಾಗ್ಪುರವನ್ನು ಭಾರತದ ಹೊಸ ರಾಜಧಾನಿಯನ್ನಾಗಿ ಮಾಡುತ್ತದೆ. ಬಿಜೆಪಿ ನಾಯಕರು ಆದಾಯ ತೆರಿಗೆ ಇಲಾಖೆ ಮೂಲಕ ಪ್ರತಿಪಕ್ಷಗಳಿಗೆ ಬೆದರಿಕೆ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.</p>



<p>ಅಲ್ಲದೆ, ರಾಷ್ಟ್ರಧ್ವಜವನ್ನು ತ್ರಿವರ್ಣ ಧ್ವಜದಿಂದ ಒಂದೇ ಬಣ್ಣದ ಧ್ವಜಕ್ಕೆ (ಕೇಸರಿ ಧ್ವಜ) ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದ್ದರು. ಇದೇ ವೇಳೆ ಗುಜರಾತ್ ಮಾದರಿಯನ್ನೂ ಕಮಲ್ ಟೀಕಿಸಿದ್ದಾರೆ. ಜನರು ಎಂದಿಗೂ ಗುಜರಾತ್ ಮಾದರಿಯನ್ನು ಬಯಸಲಿಲ್ಲ, ಅದು ಶ್ರೇಷ್ಟ ಮಾದರಿಯಲ್ಲ. ಗುಜರಾತ್ ಮಾದರಿಗಿಂತ ದ್ರಾವಿಡ ಮಾದರಿ ಉತ್ತಮವಾಗಿದೆ. ಅದನ್ನೇ ನಾವು ಅನುಸರಿಸುತ್ತಿದ್ದೇವೆ. ಆದರೆ ಬಿಜೆಪಿ ನಾಯಕರು ದ್ರಾವಿಡ ಮಾದರಿಯನ್ನು ಕಡೆಗಣಿಸುತ್ತಿದ್ದಾರೆ ಎಂದು ಅವರು ಹೇಳಿಕೆ ನೀಡಿದ್ದಾರೆ.</p>
]]></content:encoded>
					
		
		
			</item>
	</channel>
</rss>
