<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Arrangements for Navratri Darshan package tour &#8211; Peepal Media</title>
	<atom:link href="https://peepalmedia.com/tag/arrangements-for-navratri-darshan-package-tour/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 22 Sep 2025 08:16:50 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Arrangements for Navratri Darshan package tour &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಕರಾವಳಿ ಪ್ರವಾಸೋದ್ಯಮ ಉತ್ತೇಜನ : ನವರಾತ್ರಿ ದರ್ಶನ ಪ್ಯಾಕೇಜ್‌ ಟೂರ್‌ಗೆ ವ್ಯವಸ್ಥೆ</title>
		<link>https://peepalmedia.com/coastal-tourism-boost-arrangements-for-navratri-darshan-package-tour/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Mon, 22 Sep 2025 07:57:51 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[ರಾಜ್ಯ]]></category>
		<category><![CDATA[Arrangements for Navratri Darshan package tour]]></category>
		<category><![CDATA[news]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=66497</guid>

					<description><![CDATA[ಕರಾವಳಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗವು ದಸರಾ ಪ್ಯಾಕೇಜ್ ಪ್ರವಾಸವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಆಯೋಜಿಸಿದೆ. ಈ ಪ್ರವಾಸವು ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನ, ಮಡಿಕೇರಿ, ಕೊಲ್ಲೂರು ಮತ್ತು ಸಿಗಂದೂರುಗಳಿಗೆ ವಿಶೇಷ ಪ್ಯಾಕೇಜ್‌ಗಳನ್ನು ಒಳಗೊಂಡಿದೆ. ಕಡಿಮೆ ಖರ್ಚಿನಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಆನ್‌ಲೈನ್ ಬುಕ್ಕಿಂಗ್ ವ್ಯವಸ್ಥೆಯನ್ನೂ ಮಾಡಲಾಗಿದೆ. ಹೈಲೈಟ್ಸ್‌: ಮಂಗಳೂರು: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ನವರಾತ್ರಿ ಉತ್ಸವ ಸಂದರ್ಭ ಕರಾವಳಿಯ ದೇವಸ್ಥಾನಗಳಲ್ಲಿ ದೂರದೂರಿನ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ಭಾಗವಹಿಸಲು ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಮಂಗಳೂರು [&#8230;]]]></description>
										<content:encoded><![CDATA[
<p>ಕರಾವಳಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗವು ದಸರಾ ಪ್ಯಾಕೇಜ್ ಪ್ರವಾಸವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಆಯೋಜಿಸಿದೆ. ಈ ಪ್ರವಾಸವು ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನ, ಮಡಿಕೇರಿ, ಕೊಲ್ಲೂರು ಮತ್ತು ಸಿಗಂದೂರುಗಳಿಗೆ ವಿಶೇಷ ಪ್ಯಾಕೇಜ್‌ಗಳನ್ನು ಒಳಗೊಂಡಿದೆ. ಕಡಿಮೆ ಖರ್ಚಿನಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಆನ್‌ಲೈನ್ ಬುಕ್ಕಿಂಗ್ ವ್ಯವಸ್ಥೆಯನ್ನೂ ಮಾಡಲಾಗಿದೆ.</p>



<h3 class="wp-block-heading"><strong>ಹೈಲೈಟ್ಸ್‌:</strong></h3>



<ul class="wp-block-list">
<li>ಸೆ.22ರಿಂದ ಅ.2ರ ವರೆಗೆ ದರ್ಶನ ಪ್ಯಾಕೇಜ್‌ ಟೂರ್‌ಗೆ ವ್ಯವಸ್ಥೆ</li>



<li>ಬೆಳಗ್ಗೆ 8ರಿಂದ ರಾತ್ರಿ 8.30ರ ವರೆಗೆ ಸಾಗಲಿದೆ. ಪ್ರಯಾಣದರ ವಯಸ್ಕರಿಗೆ 500 ರೂ. ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ 400 ರೂ. ಇರಲಿದೆ.</li>



<li>ಈ ಬಾರಿ ಮತ್ತಷ್ಟು ವಿಶೇಷತೆಗಳ ಜತೆಗೆ ಸ್ಥಳೀಯ ಕೊಡ್ಯಡ್ಕ ದೇವಸ್ಥಾನ ಹಾಗೂ ಹೊಸಭಾಗದ ಸಿಗಂದೂರು ದೇವಸ್ಥಾನಕ್ಕೂ ಪ್ಯಾಕೇಜ್‌ನಲ್ಲಿಅವಕಾಶ ನೀಡಲಾಗಿದೆ.</li>
</ul>



<p>ಮಂಗಳೂರು: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ನವರಾತ್ರಿ ಉತ್ಸವ ಸಂದರ್ಭ ಕರಾವಳಿಯ ದೇವಸ್ಥಾನಗಳಲ್ಲಿ ದೂರದೂರಿನ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ಭಾಗವಹಿಸಲು ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ದಸರಾ ಪ್ಯಾಕೇಜ್‌ ಟೂರ್‌ ಆರಂಭಿಸಿ ದೇವರ ದರ್ಶನದ ಭಾಗ್ಯ ಕರುಣಿಸಿದೆ</p>



<p>ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಸಿಗಂದೂರು ವಿಶೇಷ ಪ್ಯಾಕೇಜ್‌ ಪ್ರವಾಸ ಕಾರ್ಯಾಚರಣೆಯನ್ನು ಸೆ.22ರಿಂದ ಅ.2ರವರೆಗೆ ಆಯೋಜಿಸಿದೆ. ಕಳೆದ ಕೆಲವು ವರ್ಷಗಳಿಂದ ಯೋಜನೆ ಮಾಡಿಕೊಂಡು ಬರಲಾಗುತ್ತಿದ್ದು, ಈ ಬಾರಿ ಮತ್ತಷ್ಟು ವಿಶೇಷತೆಗಳ ಜತೆಗೆ ಸ್ಥಳೀಯ ಕೊಡ್ಯಡ್ಕ ದೇವಸ್ಥಾನ ಹಾಗೂ ಹೊಸಭಾಗದ ಸಿಗಂದೂರು ದೇವಸ್ಥಾನಕ್ಕೂ ಪ್ಯಾಕೇಜ್‌ನಲ್ಲಿಅವಕಾಶ ನೀಡಲಾಗಿದೆ.</p>



<figure class="wp-block-image size-full"><img fetchpriority="high" decoding="async" width="700" height="393" src="https://peepalmedia.com/wp-content/uploads/2025/09/ksrtc.avif" alt="" class="wp-image-66498" srcset="https://peepalmedia.com/wp-content/uploads/2025/09/ksrtc.avif 700w, https://peepalmedia.com/wp-content/uploads/2025/09/ksrtc-300x168.jpg 300w, https://peepalmedia.com/wp-content/uploads/2025/09/ksrtc-150x84.jpg 150w, https://peepalmedia.com/wp-content/uploads/2025/09/ksrtc-696x391.jpg 696w" sizes="(max-width: 700px) 100vw, 700px" /></figure>



<h3 class="wp-block-heading"><br>ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್‌:</h3>



<p>ಮಂಗಳೂರು ಬಸ್‌ ನಿಲ್ದಾಣದಿಂದ-ಮರೋಳಿ ಸೂರ್ಯನಾರಾಯಣ ದೇವಸ್ಥಾನ, ಬೋಳಾರ ಹಳೇ ಕೋಟೆ ದೇವಸ್ಥಾನ-ಶ್ರೀಮಂಗಳಾದೇವಿ ದೇವಸ್ಥಾನ- ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ- ಹೊಸನಾಡು ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ)- ಶ್ರೀ ಕಟೀಲು ದುರ್ಗಾಪರಮೆಶ್ವರಿ ದೇವಸ್ಥಾನ-ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮೂಲ್ಕಿ-ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ-ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ &#8211; ಶ್ರೀ ಉರ್ವ ಮಾರಿಯಮ್ಮ ದೇವಸ್ಥಾನ &#8211; ಕುದ್ರೋಳಿ ಗೋಕರ್ಣನಾಥ ದೇವಸ್ಥಾನ, ಮಂಗಳೂರು ಬಸ್‌ ನಿಲ್ದಾಣ. ಬೆಳಗ್ಗೆ 8 ರಿಂದ ರಾತ್ರಿ 8.30ರ ವರೆಗೆ ಸಾಗಲಿದೆ. ಪ್ರಯಾಣದರ ವಯಸ್ಕರಿಗೆ 500 ರೂ. ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ 400 ರೂ. ಇರಲಿದೆ.</p>



<p></p>



<h3 class="wp-block-heading">ಮಂಗಳೂರು- ಮಡಿಕೇರಿ ಪ್ಯಾಕೇಜ್‌ ಪ್ರವಾಸ:</h3>



<p>ಮಂಗಳೂರು-ಮಡಿಕೇರಿ-ರಾಜಾಸೀಟ್‌- ಅಬ್ಬಿಫಾಲ್ಸ್‌- ನಿಸರ್ಗಧಾಮ-ಗೋಲ್ಡನ್‌ ಟೆಂಪಲ್‌-ಮಂಗಳೂರು ಬಸ್‌ ನಿಲ್ದಾಣ. ಬೆಳಗ್ಗೆ 7ರಿಂದ ರಾತ್ರಿ 9.30ರ ವರೆಗೆ ಸಾಗಲಿದೆ. ಪ್ರಯಾಣದರ ವಯಸ್ಕರಿಗೆ 600 ರೂ., ಮಕ್ಕಳಿಗೆ (6ವರ್ಷದಿಂದ 12 ವರ್ಷದವರಿಗೆ) 500ರೂ. ಇರಲಿದೆ.</p>



<p></p>



<h3 class="wp-block-heading">ಮಂಗಳೂರು- ಕೊಲ್ಲೂರು ಪ್ಯಾಕೇಜ್‌ ಪ್ರವಾಸ:</h3>



<p>ಉಚ್ಚಿಲ ಶ್ರೀ ಮಹಾಲಕ್ಷಿತ್ರ್ಮೕ ದೇವಸ್ಥಾನ-ಕಾಪು ಮಾರಿಯಮ್ಮ ದೇವಸ್ಥಾನ- ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ)- ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನ-ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ &#8211; ಮಂಗಳೂರು ಬಸ್‌ ನಿಲ್ದಾಣ. ಪ್ರಯಾಣದರ ವಯಸ್ಕರಿಗೆ 600 ರೂ., ಮಕ್ಕಳಿಗೆ 6ವರ್ಷದಿಂದ 12 ವರ್ಷದವರಿಗೆ 500 ರೂ. ಇರಲಿದೆ. ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಪ್ರಯಾಣ ಸಾಗಲಿದೆ.</p>



<h3 class="wp-block-heading">ಮಂಗಳೂರು-ಸಿಗಂದೂರು ಪ್ಯಾಕೇಜ್‌ ಪ್ರವಾಸ</h3>



<p>ಮಂಗಳೂರು ಬಸ್‌ ನಿಲ್ದಾಣ, ಕುಂದಾಪುರ-ಸಿಗಂದೂರ ಶ್ರೀ ಚೌಡೇಶ್ವರಿ ದೇವಸ್ಥಾನ-ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಮಂಗಳೂರು ಬಸ್‌ ನಿಲ್ದಾಣ. ಪ್ರಯಾಣದರ ವಯಸ್ಕರಿಗೆ 700 ರೂ. ಮಕ್ಕಳಿಗೆ 600 ರೂ. ಇರಲಿದೆ. ಬೆಳಗ್ಗೆ 7ರಿಂದ ರಾತ್ರಿ 7.30ರ ವರೆಗೆ ಪ್ರಯಾಣ ಇರಲಿದೆ.</p>



<h3 class="wp-block-heading">ದಸರಾ ದುರ್ಗಾ ದರ್ಶನ:</h3>



<p>ದಸರಾ ದುರ್ಗಾ ದರ್ಶನದಲ್ಲಿ 8 ದೇವಾಲಯಗಳ ದರ್ಶನ ಮಾಡಿಸಲಾಗುತ್ತದೆ. ಬೆಳಗ್ಗೆ 7.30ಕ್ಕೆ ಉಡುಪಿ ನಗರ ಸಾರಿಗೆ ಬಸ್‌ ನಿಲ್ದಾಣದ ಬಳಿಯಿಂದ ಹೊರಟು, 8.30ಕ್ಕೆ ಬ್ರಹ್ಮಾವರದ ನೀಲಾವರ ಶ್ರೀ ಮಹಿಷ ಮರ್ಧಿನಿ ದೇವಸ್ಥಾನ, 9.30-10 ಗಂಟೆಯ ಅವಧಿಯಲ್ಲಿ ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ, 11.30ರಿಂದ ಮಧ್ಯಾಹ್ನ 1 ಗಂಟೆಯ ಅವಧಿಯಲ್ಲಿ ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗ ದೇವಸ್ಥಾನ, ಬಳಿಕ 2 ಗಂಟೆಗೆ ಕೊಲ್ಲೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕೊಲ್ಲೂರು ಶ್ರೀ ಮೂಕಾಂಬಿಕ ದೇವಸ್ಥಾನ, 4 ಗಂಟೆಗೆ ಮಾರಣಕಟ್ಟೆ ಶ್ರೀಬ್ರಹ್ಮಲಿಂಗೇಶ್ವರ ದೇವಸ್ಥಾನ ಬಳಿಕ ನೇರಳಕಟ್ಟೆ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಭೇಟಿ ಆಗಿ ರಾತ್ರಿ 7.30ಕ್ಕೆ ಉಡುಪಿ ನಗರ ನಗರ ಬಸ್‌ ನಿಲ್ದಾಣದ ಬಳಿ ಪ್ಯಾಕೇಜ್ ಮುಗಿಯುತ್ತದೆ.</p>
]]></content:encoded>
					
		
		
			</item>
	</channel>
</rss>
