<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ARREST &#8211; Peepal Media</title>
	<atom:link href="https://peepalmedia.com/tag/arrest/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 04 Mar 2024 04:40:30 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ARREST &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಇಡಿ ವಿಚಾರಣೆಗೆ ಸಹಕರಿಸುವೆ, ಆದರೆ ಕೆಲವು ಷರತ್ತುಗಳಿವೆ ಎಂದ ಕೇಜ್ರಿವಾಲ್</title>
		<link>https://peepalmedia.com/ready-to-face-investigation-but-with-conditions-kejriwal/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 04 Mar 2024 04:40:28 +0000</pubDate>
				<category><![CDATA[ರಾಜಕೀಯ]]></category>
		<category><![CDATA[AAP]]></category>
		<category><![CDATA[ARREST]]></category>
		<category><![CDATA[Delhi]]></category>
		<category><![CDATA[ED]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[kejriwal]]></category>
		<category><![CDATA[liqour scam]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=36621</guid>

					<description><![CDATA[ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗಲು ಮತ್ತೊಮ್ಮೆ ನಿರಾಕರಿಸಿದ್ದಾರೆ. ಆದರೆ, ಈಗ ಅವರು ಇಡಿ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧರಾಗಿದ್ದಾರೆ. ಕೇಜ್ರಿವಾಲ್ ಇಂದು ಇಡಿಗೆ ತಮ್ಮ ಉತ್ತರವನ್ನು ಕಳುಹಿಸಿದ್ದಾರೆ ಮತ್ತು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಲು ಸಿದ್ಧ ಎಂದು ಹೇಳಿದ್ದಾರೆ. ಇದಕ್ಕಾಗಿ ಮಾರ್ಚ್ 12ರ ನಂತರ ದಿನಾಂಕ ನೀಡುವಂತೆ ಇಡಿಯನ್ನು ಕೋರಿದ್ದಾರೆ. ಮದ್ಯದ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿರುವ ಕೇಜ್ರಿವಾಲ್‌ಗೆ ಮಾರ್ಚ್ 4ರಂದು ಹಾಜರಾಗುವಂತೆ ಇಡಿ [&#8230;]]]></description>
										<content:encoded><![CDATA[
<p>ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗಲು ಮತ್ತೊಮ್ಮೆ ನಿರಾಕರಿಸಿದ್ದಾರೆ. ಆದರೆ, ಈಗ ಅವರು ಇಡಿ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧರಾಗಿದ್ದಾರೆ. ಕೇಜ್ರಿವಾಲ್ ಇಂದು ಇಡಿಗೆ ತಮ್ಮ ಉತ್ತರವನ್ನು ಕಳುಹಿಸಿದ್ದಾರೆ ಮತ್ತು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಲು ಸಿದ್ಧ ಎಂದು ಹೇಳಿದ್ದಾರೆ.</p>



<p>ಇದಕ್ಕಾಗಿ ಮಾರ್ಚ್ 12ರ ನಂತರ ದಿನಾಂಕ ನೀಡುವಂತೆ ಇಡಿಯನ್ನು ಕೋರಿದ್ದಾರೆ.</p>



<p>ಮದ್ಯದ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿರುವ ಕೇಜ್ರಿವಾಲ್‌ಗೆ ಮಾರ್ಚ್ 4ರಂದು ಹಾಜರಾಗುವಂತೆ ಇಡಿ ಫೆಬ್ರವರಿ 27ರಂದು 8 ನೇ ಸಮನ್ಸ್ ಕಳುಹಿಸಿತ್ತು. ಇಡಿ ಸಮನ್ಸ್‌ಗೆ ಕೇಜ್ರಿವಾಲ್ ಏಜೆನ್ಸಿಯ ಮುಂದೆ ಹಾಜರಾಗದಿರುವುದು ಇದು ಎಂಟನೇ ಬಾರಿ. ಕೇಜ್ರಿವಾಲ್ ಇದುವರೆಗೆ ಇಡಿ ಮುಂದೆ ಒಂದೇ ಒಂದು ಸಮನ್ಸ್‌ಗೆ ಹಾಜರಾಗಿಲ್ಲ. ಪ್ರತಿ ಬಾರಿಯೂ ಅವರು ಈ ಸಮನ್ಸ್‌ಗಳನ್ನು &#8216;ಅಕ್ರಮ&#8217; ಎಂದು ಘೋಷಿಸಿದ್ದಾರೆ. ಇದಕ್ಕೂ ಮುನ್ನ ಜಾರಿ ನಿರ್ದೇಶನಾಲಯಕ್ಕೂ ಪತ್ರ ಬರೆದು ಸಮನ್ಸ್ ಹಿಂಪಡೆಯುವಂತೆ ಒತ್ತಾಯಿಸಿದ್ದರು.</p>



<p>ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಕಾರ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯಕ್ಕೆ ಉತ್ತರವನ್ನು ಕಳುಹಿಸಿದ್ದಾರೆ. ಸಮನ್ಸ್ ಕಾನೂನು ಬಾಹಿರವಾಗಿದೆ ಎಂದ ಅವರು, ಆದರೂ ಉತ್ತರಿಸಲು ಸಿದ್ಧ ಎಂದಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಇಡಿಯಿಂದ ಮಾರ್ಚ್ 12ರ ನಂತರ ದಿನಾಂಕವನ್ನು ಕೇಳಿದ್ದಾರೆ. ನಂತರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲಿರುವುದಾಗಿ ಹೇಳಿದ್ದಾರೆ.</p>



<p>ಈ ಹಿಂದೆ, ಫೆಬ್ರವರಿ 22ರಂದು ಇಡಿ ಕಳುಹಿಸಿದ ಏಳನೇ ನೋಟಿಸನ್ನು ಕೇಜ್ರಿವಾಲ್ ನಿರ್ಲಕ್ಷಿಸಿದ್ದರು ಮತ್ತು ನ್ಯಾಯಾಲಯದ ತೀರ್ಪಿಗಾಗಿ ಕಾಯುವಂತೆ ಸಲಹೆ ನೀಡಿದ್ದರು. ಈ ಕುರಿತು ನ್ಯಾಯಾಲಯ ಆದೇಶ ನೀಡಿದರೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವುದಾಗಿ ಹೇಳಿದ್ದರು.</p>



<p>ಮದ್ಯ ಹಗರಣದಲ್ಲಿ ಹಲವು ಬಾರಿ ವಿಚಾರಣೆಗೆ ಸಮನ್ಸ್ ನೀಡಿದರೂ ಕೇಜ್ರಿವಾಲ್ ಹಾಜರಾಗದಿರುವ ಬಗ್ಗೆ ನ್ಯಾಯಾಲಯದಲ್ಲಿ ದೂರು ದಾಖಲಾಗಿರುವುದು ಗಮನಾರ್ಹ. ಈ ಹಿನ್ನೆಲೆಯಲ್ಲಿ ಮಾರ್ಚ್ 16ರಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ನ್ಯಾಯಾಲಯ ಸೂಚಿಸಿದೆ.</p>
]]></content:encoded>
					
		
		
			</item>
		<item>
		<title>ಚೈತ್ರ ಕುಂದಾಪುರ ಹೇಳಿದ ಆ ಮತ್ತೊಂದು ಮಾಸ್ಟರ್ ಮೈಂಡ್ ಯಾರು ಗೊತ್ತಾ?</title>
		<link>https://peepalmedia.com/know-who-is-another-mastermind/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 14 Sep 2023 12:14:06 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ARREST]]></category>
		<category><![CDATA[chaitra kundapura]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=27783</guid>

					<description><![CDATA[&#8220;ಸ್ವಾಮೀಜಿ ಅರೆಸ್ಟ್ ಆಗಲಿ, ಆಗ ದೊಡ್ಡ ದೊಡ್ಡವರೆಲ್ಲರ ಬಂಡವಾಳ ಹೊರಬರುತ್ತೆ&#8221; ಹೀಗನ್ನುತ್ತಲೇ ಟಿಕೆಟ್ ಹಗರಣದ ಪ್ರಮುಖ ಆರೋಪಿ ಚೈತ್ರ ಕುಂದಾಪುರ ಮಹಿಳಾ ಸಾಂತ್ವನ ಕೇಂದ್ರದೊಳಗೆ ಹೋಗಿದ್ದು ಈಗ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ಅಡಿಯಲ್ಲಿ ಈಗಾಗಲೇ ಒಂದೊಂದೇ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸುತ್ತಿದ್ದಾರೆ. ಚೈತ್ರಾ ಕುಂದಾಪುರ ಅವರ ಜೊತೆಗೆ ಬಂಧಿತ ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್​ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಸಧ್ಯಕ್ಕೆ ಪ್ರಕರಣದ 5ನೇ ಆರೋಪಿ ಚನ್ನ [&#8230;]]]></description>
										<content:encoded><![CDATA[
<p>&#8220;ಸ್ವಾಮೀಜಿ ಅರೆಸ್ಟ್ ಆಗಲಿ, ಆಗ ದೊಡ್ಡ ದೊಡ್ಡವರೆಲ್ಲರ ಬಂಡವಾಳ ಹೊರಬರುತ್ತೆ&#8221; ಹೀಗನ್ನುತ್ತಲೇ ಟಿಕೆಟ್ ಹಗರಣದ ಪ್ರಮುಖ ಆರೋಪಿ ಚೈತ್ರ ಕುಂದಾಪುರ ಮಹಿಳಾ ಸಾಂತ್ವನ ಕೇಂದ್ರದೊಳಗೆ ಹೋಗಿದ್ದು ಈಗ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.</p>



<p>ಪ್ರಕರಣದ ಅಡಿಯಲ್ಲಿ ಈಗಾಗಲೇ ಒಂದೊಂದೇ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸುತ್ತಿದ್ದಾರೆ. ಚೈತ್ರಾ ಕುಂದಾಪುರ ಅವರ ಜೊತೆಗೆ ಬಂಧಿತ ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್​ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಸಧ್ಯಕ್ಕೆ ಪ್ರಕರಣದ 5ನೇ ಆರೋಪಿ ಚನ್ನ ನಾಯ್ಕ್ ನನ್ನು ಪೊಲೀಸರು ಬಂಧಿಸಿದ್ದಾರೆ.</p>



<p>5 ನೇ ಆರೋಪಿ ಚನ್ನನಾಯ್ಕ್ ಈ ಪ್ರಕರಣದಲ್ಲಿ ವಿಶ್ವನಾಥ್ ಜೀ ಪಾತ್ರಧಾರಿಯಾಗಿ ಗುರುತಿಸಿಕೊಂಡಿದ್ದ. ಸಧ್ಯ ಚನ್ನನಾಯ್ಕ್ ನನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>



<p>ಈಗ ಎದ್ದಿರುವ ದೊಡ್ಡ ಚರ್ಚೆ ಎಂದರೆ ಪ್ರಕರಣದ ಎ1 ಆರೋಪಿ ಚೈತ್ರ ಕುಂದಾಪುರ ಸಾಂತ್ವನ ಕೇಂದ್ರದೊಳಗೆ ಹೋಗುತ್ತಾ, ದೊಡ್ಡ ದೊಡ್ಡವರ ಬಂಡವಾಳದ ಬಗ್ಗೆ ಮಾತನಾಡಿದ್ದಾರೆ. ಹೇಳಿಕೇಳಿ ಚೈತ್ರ ಕುಂದಾಪುರ ಬಿಜೆಪಿ ಪಕ್ಷಕ್ಕೆ ಬಾಡಿಗೆಗೆ ಭಾಷಣ ಮಾಡುವಾಕೆ. ಇದೇ ರೀತಿಯ ಬಿಜೆಪಿ ಪಕ್ಷದ ಬಾಡಿಗೆ ಭಾಷಣಕಾರನೊಬ್ಬನಿಗೂ ಈ 7 ಕೋಟಿಯಲ್ಲಿ ಪಾಲು ಹೋಗಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ.</p>



<p>ಅಷ್ಟೆ ಅಲ್ಲದೆ ಈ ಟಿಕೇಟ್ ಡೀಲಿಂಗ್ ನ ಹಿಂದೆ ಬಿಜೆಪಿ ಪಕ್ಷದ ಎರಡನೇ ದರ್ಜೆಯ ನಾಯಕರು, ಬಿಜೆಪಿಯ ಬಾಡಿಗೆ ಭಾಷಣಕಾರನೊಬ್ಬನ ಸಂಪೂರ್ಣ ನಿರ್ದೇಶನ ಇದೆ ಎಂಬ ರೀತಿಯಲ್ಲಿ ಚರ್ಚೆ ಶುರುವಾಗಿದೆ. ಇಲ್ಲಿ ಚೈತ್ರ ಕುಂದಾಪುರ ಕೂಡಾ ನಾನೊಬ್ಬಳೇ ಇದರ ಪಾಲುದಾರ ಅಲ್ಲ ಎಂಬ ಸಂದೇಶವನ್ನು ನೀಡಿದ್ದಾಳೆ. ಇಲ್ಲಿ ಅಭಿನವ ಹಾಲಸ್ವಾಮಿಯ ಜೊತೆಗೆ ಇನ್ನೊಂದು ಮಾಸ್ಟರ್ ಮೈಂಡ್ ಕೂಡಾ ಕೆಲಸ ಮಾಡಿದೆ ಎಂಬುದು ಸ್ಪಷ್ಟವಾದಂತಿದೆ. ಈ ಮೂಲಕ ಈ ಹಗರಣದ ಪ್ರಮುಖ ವ್ಯಕ್ತಿಗೂ ಸಜೆ ಆಗಲಿ ಎಂದು ಚೈತ್ರ ಬಯಸಿದ್ದಾಳೆ.</p>



<p>ಹಾಗಾದರೆ ಆ ಇನ್ನೊಂದು ಮತ್ತೊಂದು ತಲೆ ಯಾರದ್ದು? ಅಭಿನವ ಹಾಲಸ್ವಾಮಿ ಮತ್ತು ಚೈತ್ರ ಕುಂದಾಪುರ ಇಬ್ಬರಿಗೂ ಆಪ್ತನಾದ ವ್ಯಕ್ತಿ ಯಾರು? 7 ಕೋಟಿ ಹಣದಲ್ಲಿ ಒಂದೂವರೆ ಕೋಟಿ ಹಾಲಸ್ವಾಮಿಗೆ ಹೋದರೆ ಉಳಿದ ಐದೂವರೆ ಕೋಟಿಯ ಪಾಲುದಾರಿಕೆ ಯಾರ್ಯಾರಿಗೆ ಹೋಗುತ್ತೆ? ಈಗಾಗಲೇ ಟಿಕೆಟ್ ಹಗರಣದಲ್ಲಿ ಬಂಧಿತರಾಗಿರುವ ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್​ ಹೊರತಾಗಿ ಇರುವ ಘಟಾನುಘಟಿ ಯಾರು ಎಂಬ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಶುರುವಾಗಿದೆ.</p>



<p>ಇನ್ನೊಂದು ಮೂಲದ ಪ್ರಕಾರ ಬಿಜೆಪಿಯ ಬಾಡಿಗೆ ಭಾಷಣಕಾರನೇ ಈ ಎಲ್ಲಾ ಹಗರಣದ ಮುಖ್ಯ ರೂವಾರಿ ಎಂಬ ಅನುಮಾನ ಕೂಡಾ ಇದೆ. ಹಲವಷ್ಟು ಬಾರಿ ತಾನು ಹೋಗಲು ಆಗದಂತಹ &#8216;ಸಂಘದ&#8217; ಅಥವಾ ಬಿಜೆಪಿ ಪಕ್ಷದ ಕಾರ್ಯಕ್ರಮಗಳಿಗೆ ಆತ ಚೈತ್ರ ಕುಂದಾಪುರಳನ್ನು ಕಳುಹಿಸುತ್ತಿದ್ದ ಎಂದೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಶುರುವಾಗಿದೆ. ಈ ಬಗ್ಗೆ ಇನ್ನಷ್ಟೇ ತನಿಖೆ ನಡೆದು ಸತ್ಯ ಹೊರಬರಬೇಕಿದೆ.</p>
]]></content:encoded>
					
		
		
			</item>
		<item>
		<title>ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅರೆಸ್ಟ್</title>
		<link>https://peepalmedia.com/former-cm-chandrababu-naidu-arrested/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 09 Sep 2023 01:48:28 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[andrapradesh]]></category>
		<category><![CDATA[ARREST]]></category>
		<category><![CDATA[Chandrababu Naidu]]></category>
		<category><![CDATA[india]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=27471</guid>

					<description><![CDATA[ಸ್ಕಿಲ್​ ಹಗರಣದ ಆರೋಪದ ಮೇಲೆ ಆಂದ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ. ತಡರಾತ್ರಿ ಸಿಐಡಿ ಪೊಲೀಸರು ಆಂದ್ರಪ್ರದೇಶದ ನಂದ್ಯಾಲದಲ್ಲಿ ಬಂಧಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರ ಮೇಲೆ ಸ್ಕಿಲ್​ ಡೆವಲಪ್​​ಮೆಂಟ್​ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಎಸಗಿದ ಆರೋಪ ಬಂದಿದ್ದು, ಹಗರಣ ಸಂಬಂಧ ಈವರೆಗೆ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ. ಚಂದ್ರಬಾಬು ನಾಯ್ಡು ಅವರ ವಿರುದ್ಧ 58 ಕೋಟಿ ಯೋಜನೆಯ ವೆಚ್ಚವನ್ನು 371 ಕೋಟಿ [&#8230;]]]></description>
										<content:encoded><![CDATA[
<p>ಸ್ಕಿಲ್​ ಹಗರಣದ ಆರೋಪದ ಮೇಲೆ ಆಂದ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ. ತಡರಾತ್ರಿ ಸಿಐಡಿ ಪೊಲೀಸರು ಆಂದ್ರಪ್ರದೇಶದ ನಂದ್ಯಾಲದಲ್ಲಿ ಬಂಧಿಸಿದ್ದಾರೆ.</p>



<p>ಚಂದ್ರಬಾಬು ನಾಯ್ಡು ಅವರ ಮೇಲೆ ಸ್ಕಿಲ್​ ಡೆವಲಪ್​​ಮೆಂಟ್​ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಎಸಗಿದ ಆರೋಪ ಬಂದಿದ್ದು, ಹಗರಣ ಸಂಬಂಧ ಈವರೆಗೆ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ.</p>



<p>ಚಂದ್ರಬಾಬು ನಾಯ್ಡು ಅವರ ವಿರುದ್ಧ 58 ಕೋಟಿ ಯೋಜನೆಯ ವೆಚ್ಚವನ್ನು 371 ಕೋಟಿ ರೂ.ಗೆ ಹೆಚ್ಚಿಸಿದ ಆರೋಪ ಕೇಳಿ ಬಂದಿತ್ತು. ಕೋರ್ಟ್ ಉತ್ತರಿಸದ ಕಾರಣ ಹಾಗೂ ವಿವಿಧ ಆರೋಪದ ಮೇಲೆ ಹೈಕೋರ್ಟ್ ಸೂಚನೆ ಮೇರೆಗೆ ಐಪಿಸಿ ಸೆಕ್ಷನ್​ 166, 167, 481, 420, 465, 468, 471, 409, 201, r/w 109, 34 ಮತ್ತು 37ರ ಅಡಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ.</p>



<p>ಚಂದ್ರಬಾಬು ನಾಯ್ಡು ಬಂಧನಕ್ಕೆ ಪೊಲೀಸರು ಬಂದ ಸಂದರ್ಭದಲ್ಲಿ ಪೊಲೀಸರಿಗೇ ಧಿಕ್ಕಾರ ಕೂಗಿದ್ದಾರೆ ಎಂದು ತಿಳಿದು ಬಂದಿದೆ. ಇದರ ಜೊತೆಗೆ ಅರೆಸ್ಟ್ ವಾರೆಂಟ್ ಬೇಕು, ಎಫ್ಐಆರ್ ಆಗಿಲ್ಲ, ನಮ್ಮ ಹಕ್ಕು ಕಸಿಯುವ ಕೆಲಸ ಆಗ್ತಿದೆ, ಮುಖ್ಯಮಂತ್ರಿ ಜಗನ್ ಗೆ ಧಿಕ್ಕಾರ ಎಂದೆಲ್ಲಾ ಕೂಗಿ ಹೈಡ್ರಾಮ ಮಾಡಿದ್ದಾರೆ ಎನ್ನಲಾಗಿದೆ.</p>
]]></content:encoded>
					
		
		
			</item>
		<item>
		<title>ಸಿಎಮ್‌ ಎಚ್ಚರಿಕೆ ನೀಡಿದ ಮರುದಿನವೇ ಮತ್ತೆ ಅನೈತಿಕ ಪೊಲೀಸ್‌ ಗಿರಿ: ಹಿಂದೂ ಜಾಗರಣ ವೇದಿಕೆಯ ಐವರ ಬಂಧನ</title>
		<link>https://peepalmedia.com/moral-policing-5-arrested-in-karkala/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 02 Aug 2023 05:09:05 +0000</pubDate>
				<category><![CDATA[ಉಡುಪಿ]]></category>
		<category><![CDATA[ARREST]]></category>
		<category><![CDATA[kannada]]></category>
		<category><![CDATA[karkala]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[police]]></category>
		<category><![CDATA[politics]]></category>
		<category><![CDATA[vhp]]></category>
		<guid isPermaLink="false">https://peepalmedia.com/?p=24778</guid>

					<description><![CDATA[ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದರೂ ಕೂಡ ಅನೈತಿಕ ಪೊಲೀಸ್ ಗಿರಿ ಮುಂದುವರೆದಿದ್ದು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಮೂಲಗಳ ಪ್ರಕಾರ ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿ ತೆರಳಿ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ವಿಭಿನ್ನ ಕೋಮಿನವರು ತೆರಳುತ್ತಿದ್ದರು. ಮಂಗಳೂರಿನ ಹೆಸರಾಂತ ಕಾಲೇಜೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರಿಗೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು [&#8230;]]]></description>
										<content:encoded><![CDATA[
<p><strong>ಉಡುಪಿ:</strong> ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದರೂ ಕೂಡ ಅನೈತಿಕ ಪೊಲೀಸ್ ಗಿರಿ ಮುಂದುವರೆದಿದ್ದು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ.</p>



<p>ಮೂಲಗಳ ಪ್ರಕಾರ ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿ ತೆರಳಿ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ವಿಭಿನ್ನ ಕೋಮಿನವರು ತೆರಳುತ್ತಿದ್ದರು. ಮಂಗಳೂರಿನ ಹೆಸರಾಂತ ಕಾಲೇಜೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರಿಗೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಮಾಳ ಎಸ್ ಕೆ ಬಾರ್ಡರ್ ಬಳಿಯಿಂದ ಇವರ ಕಾರನ್ನು ಹಿಂಬಾಲಿಸಿದ್ದು ಮತ್ತೊಂದು ಕಾರಿನಲ್ಲಿ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ದೂರು ದಾಖಲಾಗಿದೆ.</p>



<p>ಕಾರಿನಲ್ಲಿದ್ದ ಮಹಿಳೆಯರು ನೇರವಾಗಿ ಸಹಾಯವಾಣಿ 112 ಕ್ಕೆ ಕರೆ ಮಾಡಿ ಘಟನೆಯ ಕುರಿತು ಪೊಲೀಸ್ ಮಾಹಿತಿ ನೀಡಿದ್ದು ಕೂಡಲೇ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.</p>



<p>ಘಟನಾ ಸ್ಥಳಕ್ಕೆ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜೆ, ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ್ , ನಗರ ಠಾಣಾಧಿಕಾರಿ ಸಂದೀಪ್ ಶೆಟ್ಟಿ, ಗ್ರಾಮಾಂತರ ಠಾಣಾಧಿಕಾರಿ ದಿಲೀಪ್ ಭೇಟಿ ಪರಿಶೀಲನೆ ನಡೆಸಿದ್ದಾರೆ.</p>



<p>ಬಂಧಿತರನ್ನು ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ಸಫಲಿಗ ತೆಳ್ಳಾರು ಎಂದು ಗುರುತಿಸಲಾಗಿದೆ. </p>



<p>ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನಂತರ ಜಾಮೀನಿನ ಬಿಡುಗಡೆ ಮಾಡಲಾಗಿದೆ.</p>
]]></content:encoded>
					
		
		
			</item>
		<item>
		<title>ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರ ಬಂಧನ</title>
		<link>https://peepalmedia.com/vitla-four-arrested-under-pocso-act/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 01 Aug 2023 06:47:28 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[ARREST]]></category>
		<category><![CDATA[dakshina kannada]]></category>
		<category><![CDATA[karnataka]]></category>
		<category><![CDATA[mangalore]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=24731</guid>

					<description><![CDATA[ಮಂಗಳೂರು: ವಿಟ್ಲದಲ್ಲಿ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ದಕ್ಷಿಣ ಕನ್ನಡ ಪೊಲೀಸರು ಬಂಧಿಸಿದ್ದಾರೆ. ಜುಲೈ 29ರಂದು ವಿಟ್ಲ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಬಾಲಕಿಯ ತಾಯಿ ತನ್ನ ಮಗಳ ಮೇಲೆ ಐದು ವ್ಯಕ್ತಿಗಳು ವಿವಿಧ ದಿನಾಂಕಗಳಂದು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಸುಕುಮಾರ್‌, ಕಮಲಾಕ್ಷ, ಅಕ್ಷಯ್, ಮತ್ತು ಜಯಪ್ರಕಾಶ್ ಎನ್ನುವ ನಾಲ್ವರನ್ನು ಬಂಧಿಸಿದ್ದಾರೆ. ಐದನೇ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ಬಂಧಿತರಲ್ಲಿ [&#8230;]]]></description>
										<content:encoded><![CDATA[
<p>ಮಂಗಳೂರು: ವಿಟ್ಲದಲ್ಲಿ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ದಕ್ಷಿಣ ಕನ್ನಡ ಪೊಲೀಸರು ಬಂಧಿಸಿದ್ದಾರೆ.</p>



<p>ಜುಲೈ 29ರಂದು ವಿಟ್ಲ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಬಾಲಕಿಯ ತಾಯಿ ತನ್ನ ಮಗಳ ಮೇಲೆ ಐದು ವ್ಯಕ್ತಿಗಳು ವಿವಿಧ ದಿನಾಂಕಗಳಂದು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.</p>



<p>ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಸುಕುಮಾರ್‌, ಕಮಲಾಕ್ಷ, ಅಕ್ಷಯ್, ಮತ್ತು ಜಯಪ್ರಕಾಶ್ ಎನ್ನುವ ನಾಲ್ವರನ್ನು ಬಂಧಿಸಿದ್ದಾರೆ. ಐದನೇ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.</p>



<p>ಬಂಧಿತರಲ್ಲಿ ಅಕ್ಷಯ್ ಪೇಂಟರ್ ಕೆಲಸ ಮಾಡುತ್ತಿದ್ದು, ಬೇರಿಪದವುನಲ್ಲಿರುವ ತನ್ನ ಅಣ್ಣನ ಮನೆಯಲ್ಲಿ ಉಳಿದುಕೊಂಡಿದ್ದ. ಕಮಲಾಕ್ಷ ಗಾರೆ ಕೆಲಸ ಮಾಡುತ್ತಿದ್ದರೆ, ಸುಕುಮಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ.</p>



<p>ಆರೋಪಿಗಳಲ್ಲಿ ಸುಕುಮಾರ್‌ ಮತ್ತು ಜಯಪ್ರಕಾಶ್‌ ಬಜರಂಗ ದಳಕ್ಕೆ ಸೇರಿದವರು ಎನ್ನಲಾಗುತ್ತಿದೆ</p>



<p>ಆದರೆ, ಸುಕುಮಾರ್ ಮತ್ತು ಜಯಪ್ರಕಾಶ್ ಬಜರಂಗದಳದೊಂದಿಗೆ ಸಂಬಂಧ ಹೊಂದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಗೋಪಾಲ್ ಕುತ್ತಾರ್ ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮುಖಂಡರ ಬಂಧನ: ಸಿದ್ದರಾಮಯ್ಯ ಖಂಡನೆ</title>
		<link>https://peepalmedia.com/arrest-of-internal-reservation-enforcement-struggle-committee-leaders-siddaramaiah-condemned/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 11 Dec 2022 15:14:35 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ARREST]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[reservation]]></category>
		<category><![CDATA[siddaramayya]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=18251</guid>

					<description><![CDATA[ಬೆಂಗಳೂರು: ಒಳಮೀಸಲಾತಿ ಜಾರಿಗೆ ತರುವಂತೆ ಒತ್ತಾಯಿಸಿ ಸಿಎಂ ಮನೆಯೆಡೆಗೆ ಪಾದಯಾತ್ರೆ ಹೊರಟಿದ್ದ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಹಲವು ಮುಖಂಡರನ್ನು ಬಂಧಿಸಿದ್ದು, ಸರ್ಕಾರದ ಈ ವರ್ತನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ ಬಿಜೆಪಿ ಸರ್ಕಾರ ಬಂಧಿಸಿರುವುದು ಅತ್ಯಂತ ಖಂಡನೀಯವಾಗಿದೆ. ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ. [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಒಳಮೀಸಲಾತಿ ಜಾರಿಗೆ ತರುವಂತೆ ಒತ್ತಾಯಿಸಿ ಸಿಎಂ ಮನೆಯೆಡೆಗೆ ಪಾದಯಾತ್ರೆ ಹೊರಟಿದ್ದ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಹಲವು ಮುಖಂಡರನ್ನು ಬಂಧಿಸಿದ್ದು, ಸರ್ಕಾರದ ಈ ವರ್ತನೆಯನ್ನು  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.</p>



<p>ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ ಬಿಜೆಪಿ ಸರ್ಕಾರ ಬಂಧಿಸಿರುವುದು ಅತ್ಯಂತ ಖಂಡನೀಯವಾಗಿದೆ. ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.</p>



<p>ರಾಜ್ಯ ಬಿಜೆಪಿ ಸರ್ಕಾರ ಒಂದೋ ಹೋರಾಟಗಾರರ ನ್ಯಾಯಬದ್ಧ ಬೇಡಿಕೆಯನ್ನು ಈಡೇರಿಸಬೇಕು, ಇಲ್ಲವಾದರೆ ಕನಿಷ್ಠ ಅವರನ್ನು ಮಾತುಕತೆಗಾದರೂ ಆಹ್ವಾನಿಸಬೇಕಾಗಿತ್ತು. ಇದ್ಯಾವುದನ್ನು ಮಾಡದೆ ಹೋರಾಟಗಾರರನ್ನು ಪೊಲೀಸರ ಮೂಲಕ ಹಣಿಯಲು ನಡೆಸಿದ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿಯಾದುದು ಎಂದು ಕಿಡಿಕಾರಿದ್ದಾರೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ. 4/4<a href="https://twitter.com/hashtag/SocialJustice?src=hash&amp;ref_src=twsrc%5Etfw">#SocialJustice</a></p>&mdash; Siddaramaiah (@siddaramaiah) <a href="https://twitter.com/siddaramaiah/status/1601953048926253057?ref_src=twsrc%5Etfw">December 11, 2022</a></blockquote><script async src="https://platform.twitter.com/widgets.js" charset="utf-8"></script>
</div></figure>



<p>ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ರಾಜ್ಯದ ಬಿಜೆಪಿ ಸರ್ಕಾರ ಈಗ ಹೋರಾಟಗಾರರನ್ನೇ ಬಂಧಿಸಲು ಹೊರಟಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>



<p>ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ ಎಂದು ಟ್ವೀಟ್‌ ಮಾಡುವ ಮುಖಾಂತರ ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಗೋವಾದಲ್ಲಿ ಜೋರಾದ ವಿದೇಶಿಗರ ಡ್ರಗ್ಸ್‌ ವ್ಯವಹಾರ : ಇಬ್ಬರ ಬಂಧನ</title>
		<link>https://peepalmedia.com/drug-dealing-by-foreigners-rampant-in-goa-two-arrested/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 29 Nov 2022 04:56:12 +0000</pubDate>
				<category><![CDATA[ದೇಶ]]></category>
		<category><![CDATA[ವಿದೇಶ]]></category>
		<category><![CDATA[ARREST]]></category>
		<category><![CDATA[bengalure]]></category>
		<category><![CDATA[drugs]]></category>
		<category><![CDATA[goa]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=16866</guid>

					<description><![CDATA[ಗೋವಾ : ಗೋವಾದಲ್ಲಿದ್ದು, ಮಾಧಕ ವಸ್ತುಗಳ ದಂಧೆ ಮಾಡುತ್ತಿದ್ದ ಇಬ್ಬರು ವಿದೇಶಿಗರನ್ನು ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋ(NCB) ಬಂಧಿಸಿದ್ದು, 107 ಎಂಡಿಎಂಎ(MDMA) ಮಾತ್ರೆಗಳು, 40 ಗ್ರಾಂ ಹೈಗ್ರೇಡ್‌ ಮೆಫೆಡ್ರೋನ್‌( high grade Mephedrone) ಮತ್ತು 55 ಗ್ರಾಂ ಗುಣಮಟ್ಟದ ಹಶೀಶ್‌(quality hashish) ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೋವಾದಲ್ಲಿ ಸಿಕ್ಕಿಬಿದ್ದಿರುವ ಇಬ್ಬರು ಆರೋಪಿಗಳ ಬಳಿಯಿದ್ದ 4.5 ಲಕ್ಷ ರೂಗಳನ್ನು NCB ಅಧಿಕಾರಿಗಳೂ ವಶಪಡಿಸಿಕೊಂಡಿದ್ದು, ವಿಚಾರಣೆ ವೇಳೆ ಆರೋಪಿಗಳು ಮಾಧಕ ವಸ್ತುಗಳ ವ್ಯವಹಾರದಿಂದಲೇ ಆ ಹಣವನ್ನು ಪಡೆದಿರುವುದು ಎಂದು [&#8230;]]]></description>
										<content:encoded><![CDATA[
<p><strong>ಗೋವಾ </strong>: ಗೋವಾದಲ್ಲಿದ್ದು, ಮಾಧಕ ವಸ್ತುಗಳ ದಂಧೆ ಮಾಡುತ್ತಿದ್ದ ಇಬ್ಬರು ವಿದೇಶಿಗರನ್ನು ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋ(NCB) ಬಂಧಿಸಿದ್ದು, 107 ಎಂಡಿಎಂಎ(MDMA) ಮಾತ್ರೆಗಳು, 40 ಗ್ರಾಂ ಹೈಗ್ರೇಡ್‌ ಮೆಫೆಡ್ರೋನ್‌( high grade Mephedrone) ಮತ್ತು 55 ಗ್ರಾಂ ಗುಣಮಟ್ಟದ ಹಶೀಶ್‌(quality hashish) ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>



<p>ಗೋವಾದಲ್ಲಿ ಸಿಕ್ಕಿಬಿದ್ದಿರುವ ಇಬ್ಬರು ಆರೋಪಿಗಳ ಬಳಿಯಿದ್ದ 4.5 ಲಕ್ಷ ರೂಗಳನ್ನು NCB ಅಧಿಕಾರಿಗಳೂ ವಶಪಡಿಸಿಕೊಂಡಿದ್ದು, ವಿಚಾರಣೆ ವೇಳೆ ಆರೋಪಿಗಳು ಮಾಧಕ ವಸ್ತುಗಳ ವ್ಯವಹಾರದಿಂದಲೇ ಆ ಹಣವನ್ನು ಪಡೆದಿರುವುದು ಎಂದು ತಪ್ಪೊಪ್ಪಿಕೊಂಡಿದ್ದಾರೆ. ಅದಲ್ಲದೇ ಉತ್ತರ ಗೋವಾ ಪ್ರದೇಶದಲ್ಲಿ ವಿದೇಶಿಗರು ನಿರ್ವಹಿಸಲ್ಪಡುತ್ತಿರುವ ಡ್ರಗ್ಸ್‌ ಸಿಂಡಿಕೇಟ್‌ ಇದೆ, ಅದಲ್ಲದೇ ಈ ದಂದೆಯಲ್ಲಿ ಅಂಬಿಕಾ ಎಂಬ ಮಹಿಳೆಯೂ ಭಾಗಿಯಾಗಿದ್ದು, ಅವರು ರಷ್ಯಾ ಮೂಲದವರು ಎಂಬ ಮಾಹಿತಿಯನ್ನೂ ಆರೋಪಿಗಳು ಹೊರಹಾಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>



<p>ನಂತರ, ಆರೋಪಿಗಳಿಂದ ಪಡೆದ ಮಾಹಿತಿಯ ಮೇರೆಗೆ, NCB ಅಧಿಕಾರಿಗಳು ಉತ್ತರ ಗೋವಾದ ಸಿಯೋಲಿಂನ ಉಡ್ಡೋ ಬೀಚ್ ಬಳಿ ಬಲೆ ಬೀಸಿ, ಅಂಬಿಕಾ ಮತ್ತು ಆಕೆಯ ಬಳಿಯಿದ್ದ ಮಾಧಕ ವಸ್ತುಗಳೊಂದಿಗೆ ಅವಳನ್ನು ಬಂಧಿಸಿದ್ದಾರೆ.</p>



<p>ಅಂಬಿಕಾ ಬಳಿ ಇದ್ದ, ಸುಮಾರು 50 ಮಾಧಕ ಮಾತ್ರೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಆಕೆಯನ್ನು ವಿಚಾರಣೆ ನಡೆಸಿದಾಗ ಮತ್ತೊಂದು ಸತ್ಯ ಹೊರಬಂದಿದೆ. ಈ ಮಾಧಕ ದಂದೆಯಲ್ಲಿ ಬ್ರಿಟಿಷ್‌ ಪ್ರಜೆಯಾದ ಜೆ.ಲೀ ಎಂಬುವವರ ಪಾತ್ರವೂ ಇದ್ದು, ಅವರು ಗೋವಾದ ಮಾಪುಸಾದಲ್ಲಿ ನೆಲೆಸಿದ್ದಾರೆ ಎಂದು ಮತ್ತೊಂದು ತನಿಖೆಗೆ ಪೂರಕವಾಗಿರುವ ಮಾಹಿತಿಯನ್ನು ಬಿಚ್ಚಿಟ್ಟಿದ್ದಾಳೆ.</p>



<p>ಅಂಬಿಕಾಳ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ NCB ತಂಡವು, ಜೆ.ಲೀ ಅವರನ್ನು ಬಂಧಿಸಿದ್ದು, ಅವರು ಆಕೆಯ ತಂದೆಯೇ ಆಗಿದ್ದಾರೆ ಎನ್ನುವ ಮತ್ತೊಂದು ಸತ್ಯ ತಿಳಿದುಬಂದಿದ್ದು, ಅವರ ಬಳಿ ಇದ್ದ 57 ಎಕ್ಸ್ಟಸಿ, 40 ಗ್ರಾಂ ಮೆಫೆಡ್ರೋನ್‌( high grade Mephedrone) ಮತ್ತು 55 ಗ್ರಾಂ ಗುಣಮಟ್ಟದ ಹಶೀಶ್‌(quality hashish) ಮತ್ತು 4,50,420 ರೂಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>



<p>ಈ ಕುರಿತು NCB ಪ್ರಕಟಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ, ʼಪ್ರಮಾಣ, ಗುಣಮಟ್ಟ, ಭೂಗತ ನಂಟು ಮತ್ತು ಮಾಧಕ ವಸ್ತುಗಳ ವ್ಯವಹಾರಗಳಲ್ಲಿ ವಿದೇಶಿಗರ ಪಾತ್ರ ಮತ್ತು ಅವರು ಬಿಳಿ ಪ್ರವಾಸಿಗರಿಗೆ ಮಾತ್ರ ಡ್ರಗ್ಸ್‌ ಸರಬರಾಜು ಮಾಡಿರುವ ಬಗ್ಗೆ ಮತ್ತು ಗೋವಾದಲ್ಲಿಯೇ ದೀರ್ಘಕಾಲ ನೆಲೆಸಿ ಕಾರ್ಯನಿರ್ವಹಿಸುತ್ತಿದ್ದʼ ಬಗ್ಗೆ ತಿಳಿಸಲಾಗಿದೆ.</p>
]]></content:encoded>
					
		
		
			</item>
		<item>
		<title>3 ತಿಂಗಳ ಮಗನನ್ನು ಕೊಂದ ಆರೋಪ: ತಂದೆ ಬಂಧನ</title>
		<link>https://peepalmedia.com/accused-of-killing-3-month-old-son-father-arrested/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 26 Nov 2022 11:52:26 +0000</pubDate>
				<category><![CDATA[ದೇಶ]]></category>
		<category><![CDATA[andhra pradesha]]></category>
		<category><![CDATA[ARREST]]></category>
		<category><![CDATA[india]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Tirupati]]></category>
		<guid isPermaLink="false">https://peepalmedia.com/?p=16647</guid>

					<description><![CDATA[ತಿರುಪತಿ: ಆಂಧ್ರಪ್ರದೇಶದ ತಿರುಪತಿಯ ಶ್ರೀಕಾಳಹಸ್ತಿ ಶುಕಬ್ರಹ್ಮ ಆಶ್ರಮದ ಬಳಿಯ ವಾಟರ್ ಹೌಸ್ ಕಾಲೋನಿಯಲ್ಲಿ ತನ್ನ ಮೂರು ತಿಂಗಳ ಮಗನನ್ನು ನೆಲಕ್ಕೆ ಎಸೆದು ಕೊಂದ ಆರೋಪದ ಮೇಲೆ ತಂದೆಯನ್ನು ಬಂಧಿಸಲಾಗಿದೆ ಎಂದು ಆಂಧ್ರಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ. ಮಗುವಿನ ಅಳುವಿನಿಂದ ಕೋಪಗೊಂಡ ಆತ ಈ ಕೃತ್ಯಕ್ಕೆ ಇಳಿದಿದ್ದಾನೆ ಎಂದು ಸ್ಥಳೀಯರ ಹೇಳಿಕೆ ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸರ್ಕಲ್ ಇನ್ಸ್ಪೆಕ್ಟರ್‌ರೊಬ್ಬರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಸ್ಥಳೀರು ನೀಡಿರುವ ಮಾಹಿತಿ ಪ್ರಕಾರ, ನಾಲ್ಕು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾದ ಕಾರಣ [&#8230;]]]></description>
										<content:encoded><![CDATA[
<p><strong>ತಿರುಪತಿ:</strong> ಆಂಧ್ರಪ್ರದೇಶದ ತಿರುಪತಿಯ ಶ್ರೀಕಾಳಹಸ್ತಿ ಶುಕಬ್ರಹ್ಮ ಆಶ್ರಮದ ಬಳಿಯ ವಾಟರ್ ಹೌಸ್ ಕಾಲೋನಿಯಲ್ಲಿ ತನ್ನ ಮೂರು ತಿಂಗಳ ಮಗನನ್ನು ನೆಲಕ್ಕೆ ಎಸೆದು ಕೊಂದ ಆರೋಪದ ಮೇಲೆ ತಂದೆಯನ್ನು ಬಂಧಿಸಲಾಗಿದೆ ಎಂದು ಆಂಧ್ರಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.</p>



<p>ಮಗುವಿನ ಅಳುವಿನಿಂದ ಕೋಪಗೊಂಡ ಆತ ಈ ಕೃತ್ಯಕ್ಕೆ ಇಳಿದಿದ್ದಾನೆ ಎಂದು ಸ್ಥಳೀಯರ ಹೇಳಿಕೆ ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.</p>



<p>ಈ ಕುರಿತು ಸರ್ಕಲ್ ಇನ್ಸ್ಪೆಕ್ಟರ್‌ರೊಬ್ಬರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಸ್ಥಳೀರು ನೀಡಿರುವ ಮಾಹಿತಿ ಪ್ರಕಾರ, ನಾಲ್ಕು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾದ ಕಾರಣ ಮಗು ಅಳುತಿತ್ತು, ಈ ಕಾರಣ ಪತ್ನಿ ಸ್ವಾತಿಗೆ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುವಂತೆ ಪತಿ ಅನಿಲ್‌ ಹೇಳಿದ್ದಾರೆ. ಆದರೆ ಇಬ್ಬರು ಯಾವುದೋ ಕಾರಣಕ್ಕೆ ಜಗಳವಾಡಲು ಪ್ರಾರಂಭಿಸಿದರು. ಆಗ ಮಗುವು ಜೋರಾಗಿ ಅಳಲು ಪ್ರಾರಂಭಿಸಿತು. ಈ ಕಾರಣ ಕೋಪಗೊಂಡ ಅನಿಲ್‌, ಮಗು ನಿಖಿಲ್‌ನನ್ನು ನೆಲದ ಮೇಲೆ ಎಸೆದಿದ್ದು, ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದದ್ದರಿಂದ ಮೃತಪಟ್ಟಿದೆ ಎಂದು ತಿಳಿಸಿದ್ದಾರೆ.</p>



<p>ಘಟನೆ ಬಳಿಕ ಸ್ಥಳೀಯರು ತಕ್ಷಣ ಪೊಲೀಸರನ್ನು ಸಂಪರ್ಕಿಸಿದ್ದು, ಅವರು ಮಗುವನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಆದರೆ ಬಲವಾಗಿ ತೆಲೆಗೆ ಪೆಟ್ಟು ಬಿದ್ದಿದ್ದರಿಂದ ಮಗು ಸಾವನ್ನಪ್ಪಿದೆ ಎಂದು ವೈದ್ಯರು ಹೇಳಿದ್ದಾರೆ.</p>



<p>ಸರ್ಕಲ್ ಇನ್ಸ್ಪೆಕ್ಟರ್ ಮಗುವಿನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತೆಗೆದುಕೊಂಡು ಹೋಗಲಾಗಿದ್ದು, ಏತನ್ಮಧ್ಯೆ, ಅನಿಲ್ ಅವರನ್ನು ವಶಕ್ಕೆ ಪಡೆದುಕೊಳ್ಳಲಾಯಿತು ಎಂದು ಹೇಳಿದ್ದಾರೆ.</p>



<p>ಈ ಬಗ್ಗೆ ಪ್ರಕರಣ ದಾಖಲಿಸಲಾಗಿರುವುದಾಗಿ ತಿಳಿಸಿದ ಪೊಲೀಸರು, ಪ್ರಕರಣದ ಕುರಿತು ಮುಂದಿನ ಕಾನೂನು ಕ್ರಮವನ್ನು ಅನುಸರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಸೂಟ್ಕೇಸ್ನಲ್ಲಿ ಬಾಲಕಿಯ ಶವ ಪತ್ತೆ: ಪೋಷಕರನ್ನು ಬಂಧಿಸಿದ ಯುಪಿ ಪೊಲೀಸರು</title>
		<link>https://peepalmedia.com/girls-body-found-in-suitcase-up-police-arrests-parents/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 23 Nov 2022 06:15:08 +0000</pubDate>
				<category><![CDATA[ದೇಶ]]></category>
		<category><![CDATA[ARREST]]></category>
		<category><![CDATA[india]]></category>
		<category><![CDATA[Mathura Yamuna Express Highway]]></category>
		<category><![CDATA[murder]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[up police]]></category>
		<guid isPermaLink="false">https://peepalmedia.com/?p=16263</guid>

					<description><![CDATA[ಉತ್ತರ ಪ್ರದೇಶ: ಶ್ರದ್ಧಾ ಕೊಲೆ ಪ್ರಕರಣದ ಆಘಾತದಿಂದ ರಾಷ್ಟ್ರದ ರಾಜಧಾನಿ ಹೊರಬರುವ ಮೊದಲೇ, ತಾವು ಹೇಳಿದಂತೆ ನಡೆದುಕೊಳ್ಳದ ಕಾರಣ 22 ವರ್ಷದ ಬಾಲಕಿಯನ್ನು ಆಕೆಯ ಪೋಷಕರು ಕೊಂದು, ಆಕೆಯ ದೇಹವನ್ನು ಸೂಟ್ಕೇಸ್ನಲ್ಲಿ ಹಾಕಿ ಹೆದ್ದಾರಿಯಲ್ಲಿ ಎಸೆದಿರುವ ಭಯಾನಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಕಳೆದ ವಾರ 22 ವರ್ಷದ ಆಯುಷಿ ಮೃತದೇಹವನ್ನು ಪೊಲೀಸರು ಸೂಟ್ಕೇಸ್ನಲ್ಲಿ ಪತ್ತೆಹಚ್ಚಿದ್ದರು. ಪೊಲೀಸರು ಶವವನ್ನು ಗುರುತಿಸಲು ಸಾಧ್ಯವಾಗದ ಕಾರಣ, ಅವರು ಮೊಬೈಲ್‌, ಸಿಸಿಟಿವಿ ದೃಶ್ಯಾವಳಿಗಳನ್ನು [&#8230;]]]></description>
										<content:encoded><![CDATA[
<p><strong>ಉತ್ತರ ಪ್ರದೇಶ:</strong> ಶ್ರದ್ಧಾ ಕೊಲೆ ಪ್ರಕರಣದ ಆಘಾತದಿಂದ ರಾಷ್ಟ್ರದ ರಾಜಧಾನಿ ಹೊರಬರುವ ಮೊದಲೇ, ತಾವು ಹೇಳಿದಂತೆ ನಡೆದುಕೊಳ್ಳದ ಕಾರಣ 22 ವರ್ಷದ ಬಾಲಕಿಯನ್ನು ಆಕೆಯ ಪೋಷಕರು ಕೊಂದು, ಆಕೆಯ ದೇಹವನ್ನು ಸೂಟ್ಕೇಸ್ನಲ್ಲಿ ಹಾಕಿ ಹೆದ್ದಾರಿಯಲ್ಲಿ ಎಸೆದಿರುವ ಭಯಾನಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.</p>



<p>ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಕಳೆದ ವಾರ 22 ವರ್ಷದ ಆಯುಷಿ ಮೃತದೇಹವನ್ನು ಪೊಲೀಸರು ಸೂಟ್ಕೇಸ್ನಲ್ಲಿ ಪತ್ತೆಹಚ್ಚಿದ್ದರು.</p>



<p>ಪೊಲೀಸರು ಶವವನ್ನು ಗುರುತಿಸಲು ಸಾಧ್ಯವಾಗದ ಕಾರಣ, ಅವರು ಮೊಬೈಲ್‌, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು, ನಂತರ ಯಾವುದೇ ಸುಳಿವು ಸಿಗದ ಕಾರಣ ಸಾಮಾಜಿಕ ಮಾಧ್ಯಮವನ್ನು ಪರಿಶೀಲಿಸಿದರು. ನಂತರ &nbsp;ಮಹಿಳೆಯನ್ನು ಗುರುತಿಸಲು ಅವರು ನಗರದಾದ್ಯಂತ ಪೋಸ್ಟರ್ ಗಳನ್ನು ಅಂಟಿಸಿದ್ದರು.</p>



<p>ಪೊಲೀಸರು ಭಾನುವಾರ ಅಪರಿಚಿತ ಕರೆಯಿಂದ ಮಾಹಿತಿ ಪಡೆದಿದ್ದು, ಮೃತಳ ತಾಯಿ ಮತ್ತು ಸಹೋದರರನ್ನು ಪತ್ತೆಹಚ್ಚಿದ್ದಾರೆ. ನಂತರ ಅವರು ಮೃತಳು ಆಯುಷಿ ಎಂದು ಗುರುತಿಸಿದ್ದಾರೆ. ನಂತರ ಅವರನ್ನು ವಿಚಾರಣೆ ನಡೆಸಿದ ಬಳಿಕ ಯುವತಿಯ ತಂದೆ ಕೊಲೆ ಮಾಡಿರುವ ವಿಚಾರ ತಿಳಿದಿದ್ದು, ಸೋಮವಾರ ಪೊಲೀಸರು ಆತನನ್ನು ಬಂಧಿಸಿದ್ದಾರೆ.</p>


<div class="wp-block-image">
<figure class="aligncenter size-full is-resized"><img fetchpriority="high" decoding="async" src="https://peepalmedia.com/wp-content/uploads/2022/11/parents.jpg" alt="" class="wp-image-16266" width="401" height="218"/><figcaption class="wp-element-caption"><strong>ಆಯುಷಿ ಪೋಷಕರನ್ನು ಯುಪಿ ಪೋಲೀಸರು ಬಂಧಿಸಿರುವ ದೃಶ್ಯ</strong></figcaption></figure></div>


<p>ಉತ್ತರ ಪ್ರದೇಶ ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆಯುಷಿಯನ್ನು ಅವರ ತಂದೆ ಗುಂಡಿಕ್ಕಿ ಕೊಂದಿದ್ದಾರೆ.</p>



<p>&nbsp;ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಪೊಲೀಸರು, ಆಯುಷಿ ತನ್ನ ಹೆತ್ತವರಿಗೆ ತಿಳಿಸದೆ ಬೇರೆ ಜಾತಿಗೆ ಸೇರಿದ ಛತ್ರಪಾಲ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದಳು. ಹೀಗಾಗಿ ಅವಳು ಬೇರೆ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದರಿಂದ ಅವಳ ಮದುವೆಯ ಬಗ್ಗೆ ಅವಳ ಹೆತ್ತವರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಅವರ ತಂದೆ ನಿತೀಶ್ ಯಾದವ್ ಆಯುಷಿಯು ಗುಂಡಿಕ್ಕಿ ಕೊಂದು, ದೆಹಲಿಗೆ ಸ್ಥಳಾಂತರಗೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>



<p>ಪರವಾನಗಿ ಪಡೆದ ಬಂದೂಕಿನಿಂದ ಮಗಳನ್ನು ಕೊಂದ ನಂತರ, ಶವವನ್ನು ಪ್ಲಾಸ್ಟಿಕ್ನಲ್ಲಿ ಸುತ್ತಿ, ಸೂಟ್ಕೇಸ್ನಲ್ಲಿ ಹಾಕಿ ಯಮುನಾ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಎಸೆದಿದ್ದಾರೆ, ಘಟನೆ ಕುರಿತು ಇನ್ನು ಹೆಚ್ಚಿನ ತಿನಿಖೆ ನಡೆಯುತ್ತಿದ್ದು, ಇನ್ನೂ ಹೆಚ್ಚಿನ ಮಾಹಿತಿಗಾಗಿ ಕಾದು ನೋಡಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಯುಪಿ&#124; ಅತ್ಯಾಚಾರದ ಬಳಿಕ ವಿದ್ಯಾರ್ಥಿನಿ ಸಾವು: ಆರೋಪಿ ಬಂಧನ</title>
		<link>https://peepalmedia.com/up-students-death-after-rape-accused-arrested/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 14 Nov 2022 06:16:51 +0000</pubDate>
				<category><![CDATA[ದೇಶ]]></category>
		<category><![CDATA[ARREST]]></category>
		<category><![CDATA[india]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rape case]]></category>
		<guid isPermaLink="false">https://peepalmedia.com/?p=15419</guid>

					<description><![CDATA[ಉತ್ತರ ಪ್ರದೇಶ: ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯನ್ನು ಬಂಧಿಸಿರುವ ಘಟನೆ, ಉತ್ತರ ಪ್ರದೇಶದ ಉನ್ನಾವೊ ನಗರದಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಬಂಧಿತ ವ್ಯಕ್ತಿ ರಾಜ್ ಗೌತಮ್, ಸಂತ್ರಸ್ತೆಯು ಒಬ್ಬಳೇ ಇದ್ದಾಗ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿಸಿದ್ದಾರೆ. ಈ ಕುರಿತು ತನಿಖೆ ನಡೆಸಿದಾಗ, ಆ ವ್ಯಕ್ತಿಯು ಕೃತ್ಯಕ್ಕೆ ಮೊದಲು ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮಾತ್ರೆಯನ್ನು ತೆಗೆದುಕೊಂಡಿದ್ದಾನೆ ಎಂದು ಹೇಳಿಕೊಂಡಿದ್ದಾನೆ. ಸಂತ್ರಸ್ತೆಯ ಪ್ರತಿಭಟನೆಯ ಹೊರತಾಗಿಯೂ, ಅವಳು ಮೂರ್ಛೆಹೋಗುವವರೆಗೆ ಮತ್ತು ಅವಳ ಖಾಸಗಿ ಭಾಗಗಳಿಂದ [&#8230;]]]></description>
										<content:encoded><![CDATA[
<p><strong>ಉತ್ತರ ಪ್ರದೇಶ:</strong> ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯನ್ನು ಬಂಧಿಸಿರುವ ಘಟನೆ, ಉತ್ತರ ಪ್ರದೇಶದ ಉನ್ನಾವೊ ನಗರದಲ್ಲಿ ನಡೆದಿದೆ.</p>



<p>ಪೊಲೀಸರ ಪ್ರಕಾರ, ಬಂಧಿತ ವ್ಯಕ್ತಿ ರಾಜ್ ಗೌತಮ್, ಸಂತ್ರಸ್ತೆಯು ಒಬ್ಬಳೇ ಇದ್ದಾಗ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿಸಿದ್ದಾರೆ.</p>



<p>ಈ ಕುರಿತು ತನಿಖೆ ನಡೆಸಿದಾಗ, ಆ ವ್ಯಕ್ತಿಯು ಕೃತ್ಯಕ್ಕೆ ಮೊದಲು ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮಾತ್ರೆಯನ್ನು ತೆಗೆದುಕೊಂಡಿದ್ದಾನೆ ಎಂದು ಹೇಳಿಕೊಂಡಿದ್ದಾನೆ. ಸಂತ್ರಸ್ತೆಯ ಪ್ರತಿಭಟನೆಯ ಹೊರತಾಗಿಯೂ, ಅವಳು ಮೂರ್ಛೆಹೋಗುವವರೆಗೆ ಮತ್ತು ಅವಳ ಖಾಸಗಿ ಭಾಗಗಳಿಂದ ರಕ್ತಸ್ರಾವವಾಗುವವರೆಗೂ ಅವನು ಆಕೆಯ ಮೇಲೆ ಅತ್ಯಾಚಾರವನ್ನು ಮುಂದುವರಿಸಿದ್ದು, ನಂತರ ಭಯಭೀತನಾಗಿ ಬಿಟ್ಟು ಓಡಿ ಹೋಗಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ.</p>



<p>ಘಟನೆ ನಡೆದು ಸ್ವಲ್ಪ ಸಮಯದ ನಂತರ ಅವಳ ತಂಗಿ ಮನೆಗೆ ಹಿಂತಿರುಗಿದ್ದು, ನೋಡಿದಾಗ ಸಂತ್ರಸ್ತೆಯು ಹಾಸಿಗೆಯ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅತಿಯಾದ ರಕ್ತಸ್ರಾವದಿಂದ ಮಹಿಳೆಯು ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ನಂತರ ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.</p>



<p>ಘಟನೆ ಬಳಿಕ ಸಂತ್ರಸ್ತೆಯ ಮೊಬೈಲ್ ಫೋನ್ ಡೇಟಾದ ಆಧಾರದ ಮೇಲೆ ಗೌತಮ್ ನನ್ನು ಬಂಧಿಸಲಾಗಿದ್ದು, ಸಂತ್ರಸ್ತೆ ಒಬ್ಬಳೇ ಇದ್ದಾಳೆ ಎಂದು ತಿಳಿದ ನಂತರ, ಅವನು ಅವಳ ಮನೆಗೆ ಹೋಗಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವದಾಗಿ &nbsp;ಗೌತಮ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಮಾಹಿತಿ ನೀಡಿದ್ದಾರೆ.</p>
]]></content:encoded>
					
		
		
			</item>
	</channel>
</rss>
