<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Atrocity &#8211; Peepal Media</title>
	<atom:link href="https://peepalmedia.com/tag/atrocity/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 22 Apr 2025 10:16:43 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Atrocity &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಜಾತಿ ದೌರ್ಜನ್ಯ &#8211; ಅಸ್ಪೃಶ್ಯತೆ ಆಚರಣೆ: ತಿಂಗಳಾದರೂ ತಪ್ಪಿತಸ್ಥರ ಮೇಲೆ ಕ್ರಮ ಇಲ್ಲ</title>
		<link>https://peepalmedia.com/caste-atrocities-untouchability-celebrations-month-no-action-taken-against-guilty/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 22 Apr 2025 10:14:23 +0000</pubDate>
				<category><![CDATA[ಅಪರಾಧ]]></category>
		<category><![CDATA[Atrocity]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[caste]]></category>
		<category><![CDATA[castism]]></category>
		<category><![CDATA[halli mysore]]></category>
		<category><![CDATA[hasan]]></category>
		<category><![CDATA[karnataka]]></category>
		<category><![CDATA[SC-ST]]></category>
		<category><![CDATA[untouchability]]></category>
		<guid isPermaLink="false">https://peepalmedia.com/?p=57657</guid>

					<description><![CDATA[ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರಿನಲ್ಲಿ ಇರುವ ತಮ್ಮ ವಿಶ್ವ ವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಜಾತಿ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮವನ್ನು ತಗೆದುಕೊಳ್ಳಲಾಗಿಲ್ಲ. ಇಲ್ಲಿ ಕಳೆದ 4 ವರ್ಷಗಳಿಂದ ಪರಿಚಾರಕರಾಗಿ (ಅಟೆಂಡರ್) ಕೆಲಸ ಮಾಡುತ್ತಿರುವ ಪರಿಶಿಷ್ಟ ಜಾತಿ(ಎಸ್.ಸಿ) ಸಮುದಾಯಕ್ಕೆ ಸೇರಿದ ಪರಮೇಶ್ ಜಿ.ಕೆ ಎಂಬುವವರು ಮೇಲೆ ಇಬ್ಬರು ಅತಿಥಿ ಉಪನ್ಯಾಸಕರು ಅಸ್ಪೃಶ್ಯತೆಯ ದೌರ್ಜನ್ಯವನ್ನು ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಇವರ ಮೇಲೆ ಅದೇ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಕವಿತಾ ಬಿ.ಡಿ ಮತ್ತು ಡಾ. ಚಂದ್ರಶೇಖರ್ ಎಚ್.ಆರ್ [&#8230;]]]></description>
										<content:encoded><![CDATA[
<pre class="wp-block-code"><code><strong>* ಜಾತಿ ದೌರ್ಜನ್ಯ ಮತ್ತು ಅಸ್ಪೃಶ್ಯತೆ ಆಚರಣೆ ಪ್ರಕರಣ ಕುರಿತು ತಿಂಗಳಾದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಇಲ್ಲ
* ಕಾಲೇಜಿಗೆ ಡಿಎಚ್ಎಸ್ ನಿಯೋಗ ಬೇಟಿ ನೀಡಿ ಕ್ರಮಕ್ಕೆ ಒತ್ತಾಯ</strong></code></pre>



<p>ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರಿನಲ್ಲಿ ಇರುವ ತಮ್ಮ ವಿಶ್ವ ವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಜಾತಿ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮವನ್ನು ತಗೆದುಕೊಳ್ಳಲಾಗಿಲ್ಲ. ಇಲ್ಲಿ ಕಳೆದ 4 ವರ್ಷಗಳಿಂದ ಪರಿಚಾರಕರಾಗಿ (ಅಟೆಂಡರ್) ಕೆಲಸ ಮಾಡುತ್ತಿರುವ ಪರಿಶಿಷ್ಟ ಜಾತಿ(ಎಸ್.ಸಿ) ಸಮುದಾಯಕ್ಕೆ ಸೇರಿದ ಪರಮೇಶ್ ಜಿ.ಕೆ ಎಂಬುವವರು ಮೇಲೆ ಇಬ್ಬರು ಅತಿಥಿ ಉಪನ್ಯಾಸಕರು ಅಸ್ಪೃಶ್ಯತೆಯ ದೌರ್ಜನ್ಯವನ್ನು ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. <br><br>ಇವರ ಮೇಲೆ ಅದೇ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಕವಿತಾ ಬಿ.ಡಿ ಮತ್ತು ಡಾ. ಚಂದ್ರಶೇಖರ್ ಎಚ್.ಆರ್ ಎಂಬುವವರು ಹಲವು ತಿಂಗಳುಗಳಿಂದ ಪರಮೇಶ್ ರವರು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಕಾಲೇಜಿನಲ್ಲಿ ಮಧ್ಯಾಹ್ನದ ಊಟದ ಸಂದರ್ಭಗಳಲ್ಲಿ &#8220;ಕೀಳು ಜಾತಿಯವನು ಹೇಗೆ ನಮ್ಮ ಜೊತೆಯಲ್ಲೇ ಒಟ್ಟಿಗೆ ಊಟ ಮಾಡುತ್ತಾನೆ,&#8221; ಎಂದು ಹಲವು ನೆಪಗಳನ್ನೊಡ್ಡಿ ಪರಮೇಶ್ ಊಟ ಮಾಡುವುದನ್ನು ತಪ್ಪಿಸಿರುತ್ತಾರೆ ಎಂಬ ಆರೋಪ ಮಾಡಲಾಗಿದೆ. <br><br>ಜೊತೆಗೆ ಕುರ್ಚಿ ಮೇಲೆ ಕೂರುವುದನ್ನು ಸಹಿಸದಿರುವುದು, ನಾಯಿಗೆ ನಿಂದಿಸುವ ನೆಪದಲ್ಲಿ ಮಾರ್ಮಿಕವಾಗಿ ಬಯ್ಯುವುದು ಸೇರಿದಂತೆ, ನಾವು ಒಬ್ಬ ಎಸ್.ಸಿ (ಪರಿಶಿಷ್ಟ ಜಾತಿ) ಯವನ ಜೊತೆ ಕೂರಬೇಕಾ ಎಂದು ಸಾರ್ವಜನಿಕವಾಗಿ ಅವರಿವರ ನೆಪದಲ್ಲಿ ನಿಂದಿಸಿ, ಜಾತಿಯತೆ ಅಸ್ಪೃಶ್ಯತೆ ಆಚರಣೆ ಮಾಡುತ್ತಿದ್ದುದು ತಿಳಿದು ಬಂದಿದೆ.<br><br>ಕವಿತ ಮತ್ತು ಚಂದ್ರಶೇಖರ್ ರವರುಗಳು ಮಾರ್ಚ್‌ 20, 2025 ರಂದು ಪರಮೇಶ್ ರವರ ಮಾನಕ್ಕೆ ಕುಂದುಂಟಾಗುಂತೆ ಮತ್ತೊರ್ವರ‌ ಸಮ್ಮುಖದಲ್ಲಿ ಜಾತಿಯ ಹೆಸರು ಹಿಡಿದು ಅಪಮಾನಿಸಿ ಮಾತನಾಡಿದ್ದಾರೆ.<br><br>ಈ ಬಗ್ಗೆ ಕವಿತ ಬಿ.ಡಿ ರವರು &#8220;ನೀನು ಪ್ರಾಂಶುಪಾಲರು ಅಥವಾ ಪೊಲೀಸ್ ಗೆ ದೂರು ನೀಡಲು ಮುಂದಾದರೆ, ನಾನು ಹೇಗಿದ್ದರೂ ಹೆಂಗಸು ಬೇರೆ ಕೇಸನ್ನೇ ಕೊಡುತ್ತೇನೆಂದು ಮತ್ತು ನಿನ್ನನ್ನು ಇಲ್ಲಿ ಇರುಲು ಬಿಡುವುದಿಲ್ಲ. ಬೇರೆ ಕಡೆಗೆ ವರ್ಗಾವಣೆ ಮಾಡಿಸುತ್ತೇನೆಂದು ಬೆದರಿಕೆ ಹಾಕುವುದರ ಜೊತೆಗೆ ನೀನು ನಮ್ಮಂಥವರೊಂದಿಗೆ ಕೆಲಸ ಅರ್ಹನಲ್ಲ, ಎಲ್ಲಾದರೂ ಹೋಗಿ ಸಾಯಿರಿ,&#8221; ಎಂದು ತಮ್ಮ ಜಾತಿ ಹೆಸರನ್ನು ಕೀಳಾಗಿ ಬಳಸಿ ಅಪಮಾನಿಸಿ ತೊಂದರೆ ಕೊಟ್ಟಿದ್ದಾರೆ ಎಂದು ಪರಮೇಶ್ ಅವರು ಆರೋಪಿಸಿದ್ದಾರೆ.<br><br>ಈ ಘಟನೆಯಿಂದ ನೊಂದ ಪರಮೇಶ್ ರವರು ಕವಿತ.ಬಿ.ಡಿ ಮತ್ತು ಡಾ.ಚಂದ್ರಶೇಖರ್ ಎಚ್. ಆರ್. ಎಂಬುವವರ ಮೇಲೆ ಮಾರ್ಚ್‌ 20, 2025 ರಂದು ಹಳ್ಳಿ‌ಮೈಸೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಎಫ್ಐಆರ್ ಮಾಡಲಾಗಿರುತ್ತದೆ. ಘಟನೆ ಇಷ್ಟು ದಿನವಾದರೂ ವಿ.ವಿ ಕೇಂದ್ರದಿಂದ ತಪ್ಪಿತಸ್ಥರ ಮೇಲೆ‌ ಯಾವುದೇ ಕ್ರಮ ಕೈಗೊಳ್ಳದಿರುವುದು ಅತ್ಯಂತ ನಿರ್ಲಕ್ಷ್ಯತನವಾಗಿರುತ್ತದೆ.</p>



<p>ನಂತರ ಶಾಸಕ‌ ಎ. ಮಂಜು ರವರು ಕಾಲೇಜಿಗೆ ಬೇಟಿ ನೀಡಿ, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವ ಬದಲು ಜಾತಿ ನಿಂದನೆಗೆ ಒಳಗಾಗಿ ನೊಂದಿರುವ ತಮ್ಮ  ದಬ್ಬಾಳಿಕೆಯ ಮಾತುಗಳನ್ನಾಡಿ, ಬೆದರಿಕೆ ಒಡ್ಡಿದ್ದಾರೆ ಎಂದು ಪರಮೇಶ್ ಆರೋಪಿಸಿದ್ದಾರೆ.</p>



<p>ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಾಠ ಹೇಳುವ ಉಪನ್ಯಾಸಕರೇ ಈ ರೀತಿಯಲ್ಲಿ ಅನಾಗರೀಕವಾಗಿ ಅಸ್ಪೃಶ್ಯತೆ, ಜಾತಿ ತಾರತಮ್ಯ ಮಾಡಿರುವುದು ಅತ್ಯಂತ ದುರಂತದ ಸಂಗತಿ ಮತ್ತು ನಾಗರೀಕ ಸಮಾಜ ತಲೆ ತಗ್ಗಿಸುವಂತಹದ್ದಾಗಿರುತ್ತದೆ. ಈ ಘಟನೆಯನ್ನು ದಲಿತ ಹಕ್ಕುಗಳ ಸಮಿತಿ- ಕರ್ನಾಟಕ (ಡಿಎಚ್ಎಸ್) ತೀವ್ರವಾಗಿ ಖಂಡಿಸಿದೆ.</p>


<div class="wp-block-image">
<figure class="aligncenter size-full is-resized"><img fetchpriority="high" decoding="async" width="839" height="466" src="https://peepalmedia.com/wp-content/uploads/2025/04/Screenshot-2025-04-22-153615.png" alt="" class="wp-image-57663" style="width:475px;height:auto" srcset="https://peepalmedia.com/wp-content/uploads/2025/04/Screenshot-2025-04-22-153615.png 839w, https://peepalmedia.com/wp-content/uploads/2025/04/Screenshot-2025-04-22-153615-300x167.png 300w, https://peepalmedia.com/wp-content/uploads/2025/04/Screenshot-2025-04-22-153615-768x427.png 768w, https://peepalmedia.com/wp-content/uploads/2025/04/Screenshot-2025-04-22-153615-150x83.png 150w, https://peepalmedia.com/wp-content/uploads/2025/04/Screenshot-2025-04-22-153615-696x387.png 696w" sizes="(max-width: 839px) 100vw, 839px" /><figcaption class="wp-element-caption"><strong>ಡಿಎಚ್‌ಎಸ್ ಜಿಲ್ಲಾ ಸಂಚಾಲಕ ಪೃಥ್ವಿ ಎಂ.ಜಿ</strong></figcaption></figure></div>


<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಾಸನ ವಿಶ್ವವಿದ್ಯಾನಿಲಯದ ಉಪ ಕುಲಪತಿ ಮತ್ತು ಕುಸಚಿವರಿಗೆ ಜಾತಿ ದೌರ್ಜನ್ಯ ಮತ್ತು ಅಸ್ಪೃಶ್ಯತೆ ಆಚರಿಸಿರುವ ಕವಿತ ಬಿ.ಡಿ. ಮತ್ತು ಡಾ. ಚಂದ್ರಶೇಖರ್ ಎಚ್. ಆರ್. ಎಂಬುವವರ ಮೇಲೆ ಸೂಕ್ತ ಕ್ರಮ‌ ಜರುಗಿಸಿ, ನೊಂದ ಪರಮೇಶ್ ರವರಿಗೆ ನ್ಯಾಯ ದೊರಕಿಸಬೇಕೆಂದು ಒತ್ತಾಯಿಸಿ ಡಿಎಚ್ಎಸ್ ಹಾಸನ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಸಲಾಗಿದೆ.</p>



<p>ಇಂದು, ಎಪ್ರಿಲ್‌ 22 ರಂದು ಡಿಎಚ್‌ಎಸ್ಜಿಲ್ಲಾ ಸಂಚಾಲಕ, ಎಂ.ಜಿ ಪೃಥ್ವಿ ಹಾಗೂ ಜಿಲ್ಲಾ ಸಮಿತಿ ಸದಸ್ಯ ರಮೇಶ್ ಹಳ್ಳಿ ಮೈಸೂರಿನ ಪದವಿ ಕಾಲೇಜಿಗೆ ಬೇಟಿ ನೀಡಿ, ಪ್ರಾಂಶುಪಾಲರನ್ನು ಬೇಟಿ ಮಾಡಿದ್ದಾರೆ. ಜಾತಿ ದೌರ್ಜನ್ಯ ಮತ್ತು ಅಸ್ಪೃಶ್ಯತೆ ಆಚರಿಸಿರುವವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಮತ್ತು ಜಾತಿ ದೌರ್ಜನ್ಯ ಕೊಳಗಾದ ಪರಮೇಶ ರವರಿಗೆ ನ್ಯಾಯ ದೊರಕಿಸದಿದ್ದರೆ ಮುಂದಿನ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಡಿಎಚ್‌ಎಸ್ ಜಿಲ್ಲಾ ಸಂಚಾಲಕ ಪೃಥ್ವಿ ಎಂ.ಜಿ ತಿಳಿಸಿದ್ದಾರೆ.</p>



<p></p>
]]></content:encoded>
					
		
		
			</item>
		<item>
		<title>ನಟ ಉಪೇಂದ್ರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು ; ಪೊಲೀಸರಿಗೆ ಸಿಗದ &#8216;ಬುದ್ಧಿವಂತ&#8217;</title>
		<link>https://peepalmedia.com/another-fir-filed-against-actor-upendra-the-intelligent-that-the-police-did-not-find/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 14 Aug 2023 08:27:04 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[Atrocity]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[upendra]]></category>
		<guid isPermaLink="false">https://peepalmedia.com/?p=25483</guid>

					<description><![CDATA[ಸಮಾಜದ ತಳ ವರ್ಗಗಳ ಅಪಹಾಸ್ಯ ಮಾಡುವ ಗಾದೆ ಮಾತು ಬಳಸಿದ ಆರೋಪದ ಮೇಲೆ ಚಿತ್ರನಟ ಉಪೇಂದ್ರ ವಿರುದ್ಧ ಹಲವು ಕಡೆಗಳಲ್ಲಿ ಪೊಲೀಸರಿಗೆ ದೂರು ಸಲ್ಲಿಕೆಯಾಗುತ್ತಿದೆ. ಈಗಾಗಲೇ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಅಟ್ರಾಸಿಟಿ ಪ್ರಕರಣ ಕೂಡಾ ದಾಖಲಾಗಿದೆ. ಈ ಬಗ್ಗೆ ಸಾಮಾಜಿಕ ಹೋರಾಟಗಾರ ಬೈರಪ್ಪ ಹರೀಶ್ ಕುಮಾರ್ ನೇತೃತ್ವದ ಕರ್ನಾಟಕ ರಣಧೀರ ಪಡೆ ಕೂಡಾ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, FIR ಕೂಡಾ ದಾಖಲಾಗಿದೆ. ಕರ್ನಾಟಕ ರಣಧೀರ ಪಡೆ ಸಂಘಟನೆಯ ರಾಜ್ಯಾಧ್ಯಕ್ಷ ಭೈರಪ್ಪ [&#8230;]]]></description>
										<content:encoded><![CDATA[
<p>ಸಮಾಜದ ತಳ ವರ್ಗಗಳ ಅಪಹಾಸ್ಯ ಮಾಡುವ ಗಾದೆ ಮಾತು ಬಳಸಿದ ಆರೋಪದ ಮೇಲೆ ಚಿತ್ರನಟ ಉಪೇಂದ್ರ ವಿರುದ್ಧ ಹಲವು ಕಡೆಗಳಲ್ಲಿ ಪೊಲೀಸರಿಗೆ ದೂರು ಸಲ್ಲಿಕೆಯಾಗುತ್ತಿದೆ. ಈಗಾಗಲೇ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಅಟ್ರಾಸಿಟಿ ಪ್ರಕರಣ ಕೂಡಾ ದಾಖಲಾಗಿದೆ. ಈ ಬಗ್ಗೆ ಸಾಮಾಜಿಕ ಹೋರಾಟಗಾರ ಬೈರಪ್ಪ ಹರೀಶ್ ಕುಮಾರ್ ನೇತೃತ್ವದ ಕರ್ನಾಟಕ ರಣಧೀರ ಪಡೆ ಕೂಡಾ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, FIR ಕೂಡಾ ದಾಖಲಾಗಿದೆ.</p>



<p>ಕರ್ನಾಟಕ ರಣಧೀರ ಪಡೆ ಸಂಘಟನೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್, &#8220;ದಲಿತ ಸಮುದಾಯವನ್ನು ನಿಂದಿಸುವ ಮತ್ತು ಸಮುದಾಯಗಳನ್ನು/ಜಾತಿಗಳನ್ನು ಎತ್ತಿ ಕಟ್ಟಿ ಸಮಾಜದಲ್ಲಿ ಅಶಾಂತಿ, ಗಲಭೆ ಹುಟ್ಟಿಸುವ ಉದ್ದೇಶದಿಂದ ದಲಿತ ನಿಂಧನೆ ಮಾಡಿರುವ ನಟ ಉಪೇಂದ್ರ ವಿರುದ್ಧ ಕಲಂ 505 (1)(B)(C) , 153 a, 295, 295 A, ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಅಟ್ರಾಸಿಟಿ ದಾಖಲು ಮಾಡುವಂತೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>



<figure class="wp-block-image size-full"><img decoding="async" width="554" height="554" src="https://peepalmedia.com/wp-content/uploads/2023/08/images-2023-08-14T135216.702.jpeg" alt="" class="wp-image-25486" srcset="https://peepalmedia.com/wp-content/uploads/2023/08/images-2023-08-14T135216.702.jpeg 554w, https://peepalmedia.com/wp-content/uploads/2023/08/images-2023-08-14T135216.702-300x300.jpeg 300w, https://peepalmedia.com/wp-content/uploads/2023/08/images-2023-08-14T135216.702-150x150.jpeg 150w" sizes="(max-width: 554px) 100vw, 554px" /></figure>



<p>ನಟ ಉಪೇಂದ್ರ ಒಬ್ಬ ಬ್ರಾಹ್ಮಣ ಸಮುದಾಯದವರಾಗಿದ್ದು, ತಳ ಸಮುದಾಯ ಎಂದೇ ಗುರುತಿಸಿಕೊಂಡು ಬಂದ ಹೊಲಯ ಸಮುದಾಯದವರು ವಾಸಿಸುವ ಪ್ರದೇಶವನ್ನು &#8216;ಹೊಲಗೇರಿ&#8217; ಎಂಬ ಪದದಿಂದ ಅವಹೇಳನಕಾರಿಯಾಗಿ ಬಳಸಿದ್ದಾರೆ. ಅದರಲ್ಲೂ ಊರು ಅಂದ್ರೆ ಕೆಟ್ಟ ಪ್ರದೇಶ, ಕೆಟ್ಟ ಜನರೂ ಇರುತ್ತಾರೆ ಎನ್ನುವುದನ್ನು ಹೇಳಲು ಹೋಗಿ, &#8216;ಊರು ಅಂದ್ರೆ ಹೊಲಗೇರಿ ಇರುತ್ತೆ, ನಾವು ಅಂತವರ ವಿರುದ್ಧ ಇರಬೇಕು..&#8217; ಎಂಬರ್ಥದಲ್ಲಿ ಮಾತನಾಡಿದ್ದಾರೆ. ಇದು ಸ್ಪಷ್ಟವಾಗಿ ದಲಿತ ನಿಂದನೆ ಅಡಿಯಲ್ಲಿ ಬರುವಂತದ್ದು ಎಂದೂ ಕರ್ನಾಟಕ ರಣಧೀರ ಪಡೆ ಆರೋಪಿಸಿದೆ.</p>



<p>ಇದು ನೇರವಾಗಿ ಸಮಾಜದ ಜನ ಇಂತವರ (ದಲಿತ ಸಮುದಾಯದವರ) ವಿರುದ್ಧವಾಗಿ ಇರಬೇಕು ಎಂದು ಕರೆ ನೀಡಲಾಗಿದೆ. ಸ್ಪಷ್ಟವಾಗಿ ಇದು ಸಮಾಜವನ್ನು ದಲಿತರ ವಿರುದ್ಧ ಎತ್ತಿ ಕಟ್ಟುವ ಕೆಲಸ. ಇದು ಸಾರ್ವಜನಿಕರಿಗೆ ಭಯ ಅಥವಾ ಎಚ್ಚರಿಕೆ ಉಂಟುಮಾಡುವ ಉದ್ದೇಶದಿಂದ ಅಥವಾ ಯಾವುದೇ ವ್ಯಕ್ತಿಯನ್ನು ಸಾರ್ವಜನಿಕ ನೆಮ್ಮದಿಯ ವಿರುದ್ಧ ಅಪರಾಧ ಮಾಡಲು ಪ್ರೇರೇಪಿಸುವುದಾಗಿದೆ‌.. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ನಟ ಉಪೇಂದ್ರ ವಿರುದ್ಧ ದೂರು ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಬೈರಪ್ಪ ಹರೀಶ್ ಕುಮಾರ್ ಪೊಲೀಸರಿಗೆ ಆಗ್ರಹಿಸಿದ್ದಾರೆ.</p>



<p>ಈ ಬಗ್ಗೆ ದೂರು ದಾಖಲಿಸಿಕೊಂಡ ಹಲಸೂರು ಗೇಟ್ ಪೊಲೀಸರು ನಟ ಉಪೇಂದ್ರ ಮೇಲೆ FIR ದಾಖಲು ಮಾಡಿಕೊಂಡಿದ್ದಾರೆ. ಇದಕ್ಕೂ ಮೊದಲು ಸಮಾಜ ಕಲ್ಯಾಣ ಇಲಾಖೆಯ ಉದ್ಯೋಗಿಯೊಬ್ಬರು ಉಪೇಂದ್ರ ವಿರುದ್ಧ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಇಲ್ಲೂ ಕೂಡಾ ಉಪೇಂದ್ರ ವಿರುದ್ಧ FIR ದಾಖಲಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ನಟ ಉಪೇಂದ್ರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸೋಮವಾರದ ದಿನ ರಾಜ್ಯದ ಹಲವು ಕಡೆಗಳಲ್ಲಿ ದೂರು ದಾಖಲಾಗುವ ಸಾಧ್ಯತೆ ಕಂಡುಬಂದಿದೆ.</p>



<p>ಇದನ್ನೂ ಓದಿ : <strong><a href="https://peepalmedia.com/upendra-is-not-accesseble-for-police/" data-type="link" data-id="https://peepalmedia.com/upendra-is-not-accesseble-for-police/">ಪೊಲೀಸರೊಡನೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ಉಪೇಂದ್ರ – ಫೋನ್‌ ಸ್ಚಿಚಾಫ್‌, ಮನೆಯಲ್ಲಿಲ್ಲ ಎನ್ನುತ್ತಿರುವ ಸೆಕ್ಯುರಿಟಿ</a></strong></p>



<p>ಇತ್ತ ವಿಚಾರಣೆ ಹಿನ್ನೆಲೆಯಲ್ಲಿ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಉಪೇಂದ್ರ ಅವರನ್ನು ಸಂಪರ್ಕಿಸಲು ಮುಂದಾದರೆ, ಉಪೇಂದ್ರ ಯಾರ ಕೈಗೂ ಸಿಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಅವರ ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿದ್ದು, ಮನೆಯಲ್ಲಿ ಸೆಕ್ಯೂರಿಟಿ ಕೊಟ್ಟ ಮಾಹಿತಿಯಂತೆ ಅವರು ಮನೆಯಲ್ಲಿ ಇಲ್ಲ ಎಂಬ ಮಾಹಿತಿ ಹೊರಬಿದ್ದಿದೆ.</p>



<p><strong>ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್</strong><br>ಈ ನಡುವೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ ದೂರುದಾರ ದಲಿತ ಅಲ್ಲದ ಕಾರಣಕ್ಕೆ ಆ ಕೇಸಿನ ರದ್ದತಿಗೆ ಉಪೇಂದ್ರ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಆ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ಕೂಡಾ ನೀಡಿದೆ. ಆದರೆ ಬೈರಪ್ಪ ಹರೀಶ್ ಕುಮಾರ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ ದೂರಿಗೆ ಉಪೇಂದ್ರ ಅವರಿಗೆ ಹೈಕೋರ್ಟ್ ನಿಂದ ತಡೆ ಸಿಕ್ಕಿಲ್ಲ.</p>



<p>ಬೈರಪ್ಪ ಹರೀಶ್ ಕುಮಾರ್ ತಮ್ಮ ದೂರಿನಲ್ಲಿ ದಾಖಲಿಸಿದ ಎಲ್ಲಾ ಕಲಂ ಅಡಿಯಲ್ಲೂ ಕೇಸು ದಾಖಲಾಗಿದೆ. ಮೇಲಾಗಿ ನಟ ಉಪೇಂದ್ರ ಯಾವ ಮಾನದಂಡದ ಅಡಿಯಲ್ಲಿ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯ ಕೇಸು ರದ್ಧತಿಗೆ ಅವಕಾಶ ಕೋರಿದ್ದರೋ, ಹಲಸೂರು ಗೇಟ್ ಠಾಣೆಯಲ್ಲಿ ದಾಖಲಾದ ಕೇಸ್ ಇದಕ್ಕೆ ವ್ಯತಿರಿಕ್ತವಾಗಿದೆ. ಯಾಕೆಂದರೆ ಸ್ವತಃ ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯಿಂದಲೇ ಕೇಸ್ ದಾಖಲು ಮಾಡಲಾಗಿದೆ. ಹಾಗಾಗಿ ನಟ ಉಪೇಂದ್ರರಿಗೆ ಈ ಪ್ರಕರಣದಿಂದ ಬಿಡುಗಡೆ ಸಿಗುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.</p>
]]></content:encoded>
					
		
		
			</item>
		<item>
		<title>ತಳಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ : ಉಪೇಂದ್ರ ಬಗ್ಗೆ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದೇನು?</title>
		<link>https://peepalmedia.com/what-did-minister-hc-mahadevappa-say-about-upendra/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 14 Aug 2023 05:38:05 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[Atrocity]]></category>
		<category><![CDATA[HC Mahadevappa]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[upendra]]></category>
		<guid isPermaLink="false">https://peepalmedia.com/?p=25475</guid>

					<description><![CDATA[ಕನ್ನಡ ಚಿತ್ರನಟ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋ ಒಂದು ಈಗ ಹೆಚ್ಚು ಸದ್ದು ಮಾಡುತ್ತಿದೆ. ಇದೇ ಕಾರಣಕ್ಕೆ ಉಪೇಂದ್ರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಅಟ್ರಾಸಿಟಿ ದಾಖಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಉಪೇಂದ್ರ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ತಾನು ಮಾಡಿದ ವಿಡಿಯೋ ಒಂದರಲ್ಲಿ ಕೆಳವರ್ಗವನ್ನು ನಿಂದಿಸುವ ಹಿನ್ನೆಲೆಯಲ್ಲಿ ಬಳಸಿರುವ ವಾಕ್ಯದ ಬಗ್ಗೆ ಜಾಲತಾಣ ಸೇರಿದಂತೆ ಎಲ್ಲೆಡೆ ಉಪೇಂದ್ರ ವಿರುದ್ಧ ಆಕ್ಷೇಪ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ [&#8230;]]]></description>
										<content:encoded><![CDATA[
<p>ಕನ್ನಡ ಚಿತ್ರನಟ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋ ಒಂದು ಈಗ ಹೆಚ್ಚು ಸದ್ದು ಮಾಡುತ್ತಿದೆ. ಇದೇ ಕಾರಣಕ್ಕೆ ಉಪೇಂದ್ರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಅಟ್ರಾಸಿಟಿ ದಾಖಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಉಪೇಂದ್ರ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.</p>



<p>ತಾನು ಮಾಡಿದ ವಿಡಿಯೋ ಒಂದರಲ್ಲಿ ಕೆಳವರ್ಗವನ್ನು ನಿಂದಿಸುವ ಹಿನ್ನೆಲೆಯಲ್ಲಿ ಬಳಸಿರುವ ವಾಕ್ಯದ ಬಗ್ಗೆ ಜಾಲತಾಣ ಸೇರಿದಂತೆ ಎಲ್ಲೆಡೆ ಉಪೇಂದ್ರ ವಿರುದ್ಧ ಆಕ್ಷೇಪ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪನವರು &#8216;ಉಪೇಂದ್ರ ಅವರಿಗೆ ಭಾರತದ ಇತಿಹಾಸ, ಚರಿತ್ರೆ ಸಾಂಸ್ಕೃತಿಕ ಬದುಕಿನ ಅರಿವು, ಸಾಮಾಜಿಕ ಅಸಮಾನತೆಗಳ ಪ್ರಜ್ಞೆ ಅಗತ್ಯವಾಗಿ ಇದೆ ಅಂದುಕೊಂಡಿದ್ದೆ. ಆದರೆ ಸಮಾಜದ ಕೆಳವರ್ಗಗಳ ಬಗೆಗಿರುವ ಅವರ ಅಸಹನೆ ಬಗ್ಗೆ ಬಲವಾಗಿ ಖಂಡಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>



<figure class="wp-block-image size-large"><img decoding="async" width="1024" height="768" src="https://peepalmedia.com/wp-content/uploads/2023/08/69399401-1024x768.webp" alt="" class="wp-image-25448" srcset="https://peepalmedia.com/wp-content/uploads/2023/08/69399401-1024x768.webp 1024w, https://peepalmedia.com/wp-content/uploads/2023/08/69399401-300x225.webp 300w, https://peepalmedia.com/wp-content/uploads/2023/08/69399401-768x576.webp 768w, https://peepalmedia.com/wp-content/uploads/2023/08/69399401-150x113.webp 150w, https://peepalmedia.com/wp-content/uploads/2023/08/69399401-696x522.webp 696w, https://peepalmedia.com/wp-content/uploads/2023/08/69399401-1068x801.webp 1068w, https://peepalmedia.com/wp-content/uploads/2023/08/69399401.webp 1200w" sizes="(max-width: 1024px) 100vw, 1024px" /></figure>



<p>&#8220;ಉಪೇಂದ್ರ ಅವರು ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು ಬಯಸುತ್ತಿರುವ ವ್ಯಕ್ತಿ. ಇಂತಹ ವ್ಯಕ್ತಿಗೆ ಭಾರತದ ಇತಿಹಾಸ, ಚರಿತ್ರೆ ಸಾಂಸ್ಕೃತಿಕ ಬದುಕಿನ ಅರಿವು, ಸಾಮಾಜಿಕ ಅಸಮಾನತೆಗಳ ಪ್ರಜ್ಞೆ ಅಗತ್ಯವಾಗಿ ಇದೆ ಅಂದುಕೊಂಡಿದ್ದೆ. ಆದರೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅವರು ಜಾತಿ ಹೆಸರನ್ನು ಕರೆಯುತ್ತಿರುವುದನ್ನು ನೋಡಿದರೆ ಇದು ಸಮುದಾಯ ಮಾತ್ರವಲ್ಲದೇ ಸಂವಿಧಾನಕ್ಕೂ ಮಾಡಿದ ಅಪಚಾರ ಆಗಿದೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ&#8221; ಎಂದು ಸಚಿವರಾದ ಹೆಚ್‌.ಸಿ.ಮಹದೇವಪ್ಪ ಉಪೇಂದ್ರ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.</p>



<p>ಇದನ್ನೂ ಓದಿ : <a href="https://peepalmedia.com/atracity-case-against-upendra/" data-type="link" data-id="https://peepalmedia.com/atracity-case-against-upendra/"><strong>ಉಪೇಂದ್ರ ವಿರುದ್ದ ‘ಅಟ್ರಾಸಿಟಿ ಕೇಸ್‌’ ದಾಖಲು</strong></a></p>



<p>&#8220;ಇನ್ನು ಸೂಕ್ಷ್ಮವಾಗಿ ಗಮನಿಸುವಾಗ ಉಪೇಂದ್ರ ಅವರು ತಮ್ಮ ಮಾತುಗಳಿಗೆ ಪೂರಕವಾಗಿ ಹೊಲಗೇರಿ ಎಂಬ ಪದವನ್ನು ಬಳಸಿರುವುದೇ ಅಪ್ರಸ್ತುತ. ಜೊತೆಗೆ ಅವರು ಕ್ಷಮೆಯಾಚನೆಯಲ್ಲೂ ಸಹ ನಾನೂ ಕೂಡಾ ಬಡತನದಿಂದ ಬಂದಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ ಬಡತನವೇ ಬೇರೆ ಜಾತಿ ಆಧಾರಿತವಾದ ಸಾಮಾಜಿಕ ಅಸಮಾನತೆಯೇ ಬೇರೆ ಎಂಬ ಸಂಗತಿಯು ಉಪೇಂದ್ರ ಅವರಿಗೆ ಸಹಜವಾಗಿ ತಿಳಿದಿಲ್ಲ ಎಂದು ಕಾಣುತ್ತದೆ. ಹೀಗಾಗಿ ಸಾರ್ವಜನಿಕ ಜೀವನದಲ್ಲಿ ಇರುವ ಅವರು ಈ ದೇಶದ ಅಸಮಾನತೆ ಮತ್ತು ನೋವಿನ ಚರಿತ್ರೆಯನ್ನೇ ತಿಳಿಯದಿದ್ದ ಮೇಲೆ ಇವರ ಸಮಾಜ ಬದಲಾಯಿಸುವಂತಹ ಮಾತುಗಳಿಗೆ ಯಾವ ಅರ್ಥವಿದೆ&#8221; ಎನ್ನುವ ಮೂಲಕ ಉಪೇಂದ್ರ ಅವರಿಗೆ ಸಾಮಾಜಿಕ ಅರಿವಿನ ಅಗತ್ಯವಿದೆ ಎಂದು ಹೇಳಿದ್ದಾರೆ.</p>



<p>ತಮ್ಮ ಸಾಮಾಜಿಕ ಜಾಲತಾಣದ ಖಾತೆಯ ಮೂಲಕ ಉಪೇಂದ್ರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ ಸಚಿವರು &#8220;ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಮುಂದೆ ಶೋಷಿತ ಸಮುದಾಯಗಳನ್ನು Taken for granted ಆಗಿ ಉಲ್ಲೇಖಿಸುವ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಸಮಾನ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು&#8221; ಎಂದೂ ತಿಳಿಸಿದ್ದಾರೆ.</p>



<p>ಪ್ರಸ್ತುತ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಕಡೆಗಳಲ್ಲಿ ಚಿತ್ರನಟ ಉಪೇಂದ್ರ ವಿರುದ್ಧ ದೂರು ದಾಖಲಾಗಿದ್ದು, ಈ ಪ್ರಕರಣ ಯಾವ ಹಂತಕ್ಕೆ ಹೋಗಲಿದೆ ಎಂಬುದನ್ನು ಕಾದು ನೋಡಬೇಕಿದೆ.</p>
]]></content:encoded>
					
		
		
			</item>
	</channel>
</rss>
