<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>B S YADIYURAPPA &#8211; Peepal Media</title>
	<atom:link href="https://peepalmedia.com/tag/b-s-yadiyurappa/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 19 Dec 2024 09:09:21 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>B S YADIYURAPPA &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಸಾಕ್ಷಿಗಳ ಹೇಳಿಕೆ ಆಧರಿಸಿ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ: ಕರ್ನಾಟಕ ಹೈಕೋರ್ಟ್</title>
		<link>https://peepalmedia.com/pocso-case-against-yediyurappa-cannot-be-quashed-based-on-witness-statements/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 19 Dec 2024 09:08:50 +0000</pubDate>
				<category><![CDATA[ಅಪರಾಧ]]></category>
		<category><![CDATA[B S YADIYURAPPA]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[bjp]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[karnataka bjp]]></category>
		<category><![CDATA[pocso]]></category>
		<category><![CDATA[yadiyurappa]]></category>
		<guid isPermaLink="false">https://peepalmedia.com/?p=50928</guid>

					<description><![CDATA[ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆಯಡಿ (POCSO) ದಾಖಲಾಗಿರುವ ಪ್ರಕರಣವನ್ನು ಸಂತ್ರಸ್ತೆಯ ಹೇಳಿಕೆಗೆ ವಿರುದ್ಧವಾಗಿರುವ ಇತರ ಸಾಕ್ಷಿಗಳ ಅಭಿಪ್ರಾಯವನ್ನು ಪರಿಗಣಿಸಿ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಡಿಸೆಂಬರ್ 18, ಬುಧವಾರ ತನ್ನ ಪ್ರಾಥಮಿಕ ಅಭಿಪ್ರಾಯ ವ್ಯಕ್ತಪಡಿಸಿದೆ. “S.161 ಮತ್ತು S.164 Crpc ಅಡಿಯಲ್ಲಿ ದಾಖಲಾದ ಹೇಳಿಕೆಗಳ ಆಧಾರದ ಮೇಲೆ ಪ್ರಕ್ರಿಯೆಗಳನ್ನು ರದ್ದುಗೊಳಿಸುವುದು ಲಭ್ಯವಿಲ್ಲ, ಇದು ನನ್ನ ಪ್ರಾಥಮಿಕ ಹೇಳಿಕೆಯಾಗಿದೆ. ಸೆಕ್ಷನ್ 161 ಮತ್ತು ಸೆಕ್ಷನ್ 164 [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆಯಡಿ (POCSO) ದಾಖಲಾಗಿರುವ ಪ್ರಕರಣವನ್ನು ಸಂತ್ರಸ್ತೆಯ ಹೇಳಿಕೆಗೆ ವಿರುದ್ಧವಾಗಿರುವ ಇತರ ಸಾಕ್ಷಿಗಳ ಅಭಿಪ್ರಾಯವನ್ನು ಪರಿಗಣಿಸಿ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಡಿಸೆಂಬರ್ 18, ಬುಧವಾರ ತನ್ನ ಪ್ರಾಥಮಿಕ ಅಭಿಪ್ರಾಯ ವ್ಯಕ್ತಪಡಿಸಿದೆ.</p>



<p>“S.161 ಮತ್ತು S.164 Crpc ಅಡಿಯಲ್ಲಿ ದಾಖಲಾದ ಹೇಳಿಕೆಗಳ ಆಧಾರದ ಮೇಲೆ ಪ್ರಕ್ರಿಯೆಗಳನ್ನು ರದ್ದುಗೊಳಿಸುವುದು ಲಭ್ಯವಿಲ್ಲ, ಇದು ನನ್ನ ಪ್ರಾಥಮಿಕ ಹೇಳಿಕೆಯಾಗಿದೆ. ಸೆಕ್ಷನ್ 161 ಮತ್ತು ಸೆಕ್ಷನ್ 164 ರ ಅಡಿಯಲ್ಲಿ ನೀಡಲಾದ ಹೇಳಿಕೆಗಳನ್ನು ಆಧರಿಸಿ, ಪ್ರಕ್ರಿಯೆಗಳನ್ನು ರದ್ದುಗೊಳಿಸಬಹುದಾದ ಒಂದು ತೀರ್ಪನ್ನು ನನಗೆ ತೋರಿಸಿ,&#8221; ಎಂಬ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಮಾತುಗಳನ್ನು <a href="https://www.livelaw.in/high-court/karnataka-high-court/karnataka-hc-cannot-quash-pocso-proceedings-b-s-yediyurappa-statement-of-witnesses-denied-alleged-incident-278778" target="_blank" rel="noreferrer noopener"><em>ಲೈವ್ ಲಾ</em></a> ವರದಿ ಮಾಡಿದೆ.</p>



<p>“ಇದು POCSO ಅಡಿಯಲ್ಲಿ ದಾಖಲಾಗಿರುವ ಪ್ರಕರಣವಾಗಿದೆ. ಬಲಿಪಶುವನ್ನು ಕೋಣೆಯೊಳಗೆ ಕರೆದೊಯ್ದಿಲ್ಲ ಎಂಬುದಕ್ಕೆ ಸಾಕ್ಷಿಗಳ ಸಾಕ್ಷ್ಯವನ್ನು ಅಡ್ಡ ಪರೀಕ್ಷೆಗೆ ಒಳಪಡಿಸಬೇಕೇ? ಅವಳನ್ನು (ಬಲಿಪಶು) ಸಹ ಅಡ್ಡ ಪರೀಕ್ಷೆಗೆ ಒಳಪಡಿಸಬೇಕು. ವಿಚಾರಣೆಗೆ ಒಳಪಡಿಸದಿದ್ದಲ್ಲಿ ಹೇಳಿಕೆಗಳು ದೇವವಾಣಿಯಾಗಳಾಗುತ್ತಾ,  (ಸಾಕ್ಷಿಗಳ) ಹೇಳಿಕೆಯನ್ನು ಸರಿಯೆಂದು ಪರಿಗಣಿಸಿ ಸಂಪೂರ್ಣ ಪ್ರಕ್ರಿಯೆಗಳನ್ನು ರದ್ದುಗೊಳಿಸಬೇಕಾ, ಅದನ್ನು ವಿಚಾರಣೆಗೆ ಒಳಪಡಿಸಬಾರದಾ, ಸಂತ್ರಸ್ತೆಯ ಹೇಳಿಕೆಗಳು ಸುಳ್ಳು ಎಂದು ನೀವು ಹೇಗೆ ಹೇಳುತ್ತೀರಿ?&#8221; ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಪ್ರಶ್ನಿಸಿದ್ದಾರೆ. </p>



<p>ಹೇಳಿಕೆಗಳು ವಿಚಾರಣೆಯನ್ನು ರದ್ದುಗೊಳಿಸುವ ಒಂದು ಭಾಗವಾಗಬಹುದೇ ಎಂಬ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡಲು ನ್ಯಾಯಾಲಯವು ವಕೀಲರಿಗೆ ಸೂಚಿಸಿತು.</p>



<p>“ಸೆಕ್ಷನ್ 161 ಹೇಳಿಕೆಗಳನ್ನು ನಂಬಲಾಗುವುದಿಲ್ಲ, ಏಕೆಂದರೆ ಅವುಗಳನ್ನು ನಿಮಗೆ ತಿಳಿದಿಲ್ಲದ ಪರಿಸ್ಥಿತಿಯಲ್ಲಿ ತೆಗೆದುಕೊಳ್ಳಲಾಗಿದೆ. ಹಾಗಿದ್ದೂ, ಸೆಕ್ಷನ್ 164 ಹೇಳಿಕೆಯು ಉನ್ನತ ಪೀಠದಲ್ಲಿದೆ ಏಕೆಂದರೆ ಅದು ಮ್ಯಾಜಿಸ್ಟ್ರೇಟ್ ಮುಂದೆ ಇದೆ,” ಎಂದು ನ್ಯಾಯಾಲಯ ಹೇಳಿದೆ.</p>



<p>ಫೆಬ್ರವರಿಯಲ್ಲಿ ಸಹಾಯ ಕೋರಿ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿದಾಗ ಮಾಜಿ ಮುಖ್ಯಮಂತ್ರಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ 17 ವರ್ಷದ ಬಾಲಕಿಯ ತಾಯಿ ಮಾಡಿದ ಆರೋಪ ಮಾಡಿದ್ದರು. ಯಡಿಯೂರಪ್ಪ ವಿರುದ್ಧ ಮಾರ್ಚ್ 14 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ದೂರು ದಾಖಲಿಸಲಾಗಿದೆ.</p>
]]></content:encoded>
					
		
		
			</item>
		<item>
		<title>ಬಿಜೆಪಿಯಲ್ಲಿ ʻಜೋಕರ್ʼ ಆಗಿಯೇ ಉಳಿದುಬಿಟ್ಟರಾ ಬಸನಗೌಡ ಪಾಟೀಲ್‌ ಯತ್ನಾಳ್?‌</title>
		<link>https://peepalmedia.com/has-basanagowda-patil-yatnal-remained-a-joker-in-bjp/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 18 Nov 2023 07:11:18 +0000</pubDate>
				<category><![CDATA[ರಾಜಕೀಯ]]></category>
		<category><![CDATA[B S YADIYURAPPA]]></category>
		<category><![CDATA[Basanagowda Patil Yatnal]]></category>
		<category><![CDATA[bjp]]></category>
		<category><![CDATA[by vijayendra]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=32543</guid>

					<description><![CDATA[ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ನೇಮಕ ಆದ ಬೆನ್ನಲ್ಲೇ ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನ ಆರ್.ಅಶೋಕ್‌ ಅವರಿಗೆ ಒಲಿದುಬಂದಿದೆ. ಸದ್ಯದ ಮಟ್ಟಿಗೆ ರಾಜ್ಯ ಬಿಜೆಪಿಯಲ್ಲಿ ಇರುವುದು ಎರಡೇ ಪ್ರಮುಖ ಹುದ್ದೆಗಳು. ಈ ಎರಡರಲ್ಲಿ ಒಂದು ತನಗೆ ಒಲಿಯಬಹುದೆಂದು, ಅದರಲ್ಲೂ ಪ್ರತಿಪಕ್ಷ ನಾಯಕನ ಸ್ಥಾನ ತನಗೇ ದೊರೆಯಬಹುದೆಂದು ಕಾದಿದ್ದ ಬಸನಗೌಡ ಪಾಟೀಲ ಯತ್ನಾಳ್‌ ಅವರಿಗೆ ದೊಡ್ಡ ನಿರಾಶೆಯಾಗಿದೆ. ನಿರಾಶೆ ಮಾತ್ರವಲ್ಲ ಅದು ಹತಾಶೆಯ ಹಾಗೂ ಕಾಣುತ್ತಿದೆ. ಬಿಜೆಪಿ ಪಾಲಿಗೆ ಯತ್ನಾಳ್‌ ಒಬ್ಬ ಜೋಕರ್‌ [&#8230;]]]></description>
										<content:encoded><![CDATA[
<p>ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ನೇಮಕ ಆದ ಬೆನ್ನಲ್ಲೇ ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನ ಆರ್.ಅಶೋಕ್‌ ಅವರಿಗೆ ಒಲಿದುಬಂದಿದೆ. ಸದ್ಯದ ಮಟ್ಟಿಗೆ ರಾಜ್ಯ ಬಿಜೆಪಿಯಲ್ಲಿ ಇರುವುದು ಎರಡೇ ಪ್ರಮುಖ ಹುದ್ದೆಗಳು. ಈ ಎರಡರಲ್ಲಿ ಒಂದು ತನಗೆ ಒಲಿಯಬಹುದೆಂದು, ಅದರಲ್ಲೂ ಪ್ರತಿಪಕ್ಷ ನಾಯಕನ ಸ್ಥಾನ ತನಗೇ ದೊರೆಯಬಹುದೆಂದು ಕಾದಿದ್ದ ಬಸನಗೌಡ ಪಾಟೀಲ ಯತ್ನಾಳ್‌ ಅವರಿಗೆ ದೊಡ್ಡ ನಿರಾಶೆಯಾಗಿದೆ. ನಿರಾಶೆ ಮಾತ್ರವಲ್ಲ ಅದು ಹತಾಶೆಯ ಹಾಗೂ ಕಾಣುತ್ತಿದೆ. ಬಿಜೆಪಿ ಪಾಲಿಗೆ ಯತ್ನಾಳ್‌ ಒಬ್ಬ ಜೋಕರ್‌ ಆಗಿಯೇ ಉಳಿದುಹೋಗಿದ್ದಾರೆ.</p>



<p>ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹಿಂದೆ ಅಟಲ್‌ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ರೈಲ್ವೆ ಇಲಾಖೆ ರಾಜ್ಯ ಸಚಿವರಾಗಿದ್ದರು. ಅವರ ರಾಜಕೀಯ ಜೀವನದ ದೊಡ್ಡ ಸಾಧನೆ ಅದೇನೇ. ನಂತರ ಯತ್ನಾಳ್‌ ಪಕ್ಷ ತೊರೆದು ಜೆಡಿಎಸ್‌ ಸೇರಿದರು. ಅಲ್ಲೂ ಅವರು ಬಾಳಲಿಲ್ಲ. ಮತ್ತೆ ಬಿಜೆಪಿಗೆ ಬಂದರಾದರೂ ಪಕ್ಷದಲ್ಲಿ ಅವರು ಬಯಸುವ ಸ್ಥಾನಮಾನ ಸಿಗಲೇ ಇಲ್ಲ. ಬಹುಶಃ ಅದು ಸಿಗುವುದೂ ಇಲ್ಲ. ಯಾಕೆಂದರೆ ಬಿಜೆಪಿ ಯತ್ನಾಳ್‌ ಅವರನ್ನು ಎಂದೂ ಗಂಭೀರವಾಗಿ ತೆಗೆದುಕೊಂಡಿದ್ದೇ ಇಲ್ಲ.</p>



<p>ಬಹುಶಃ ಇಡೀ ದೇಶದಲ್ಲಿ ಪಕ್ಷ ವಿರೋಧಿ ಮಾತುಗಳನ್ನು ಆಡಿದ ಎಲ್ಲ ರಾಜಕೀಯ ಪಕ್ಷಗಳ ಧುರೀಣರ ಪಟ್ಟಿ ಮಾಡಿದರೆ ಯತ್ನಾಳ್‌ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನ ಬೇಕೆಂದರೆ ಹೈಕಮಾಂಡ್‌ ಗೆ ಇಪ್ಪತ್ತೈದು ಸಾವಿರ ಕೋಟಿ ರುಪಾಯಿ ಕೊಡಬೇಕು ಎಂದುಬಿಟ್ಟಿದ್ದರು ಯತ್ನಾಳ್.‌ ಬೇರೆ ಯಾರಾದರೂ ಈ ಮಾತು ಆಡಿದ್ದರೆ ಇಪ್ಪತ್ತ್ನಾಲ್ಕು ಗಂಟೆಯೊಳಗೆ ಅವರು ಉಚ್ಛಾಟನೆಗೊಳ್ಳುತ್ತಿದ್ದರು. ಆದರೆ ಯತ್ನಾಳ್‌ ಅವರನ್ನು ಬಿಜೆಪಿ ನಾಯಕರು ಉಚ್ಛಾಟಿಸಲಿಲ್ಲ, ಕನಿಷ್ಠ ಅಮಾನತು ಕೂಡ ಮಾಡಲಿಲ್ಲ.</p>



<p>ಇದೊಂದೇ ವಿಷಯವೆಂದೇನಲ್ಲ, ಯತ್ನಾಳ್‌ ಸತತವಾಗಿ ಪಕ್ಷದ ನಾಯಕರ ವಿರುದ್ಧ ಗುರುಗುಟ್ಟುತ್ತಲೇ ಬಂದಿದ್ದಾರೆ. ಅದರಲ್ಲೂ ರಾಜ್ಯ ಬಿಜೆಪಿಯ ಮುಂಚೂಣಿ ನಾಯಕ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕಿಡಿಕಾರುತ್ತಲೇ ಬಂದಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರು ಯತ್ನಾಳ್‌ ಹೇಳಿಕೆಗಳನ್ನೇ ಕೋಟ್‌ ಮಾಡುತ್ತಾ ಇದೆಲ್ಲ ನೋಡಿ ನಿಮ್ಮ ಪಕ್ಷದವರೇ ಹೇಳಿರೋದು ಎಂದು ಮುಜುಗರಕ್ಕೆ ಸಿಲುಕಿಸಿದ್ದರು. ಏನೇ ಆದರೂ ಯತ್ನಾಳ್‌ ಅವರ ವಿರುದ್ಧ ಪಕ್ಷ ಶಿಸ್ತುಕ್ರಮ ತೆಗೆದುಕೊಳ್ಳಲೇ ಇಲ್ಲ. ಒಂದು ಬಾರಿ ನೋಟೀಸ್‌ ಕೊಟ್ಟರೂ ಅದು ಮುಂದಕ್ಕೆ ಹೋಗಲೇ ಇಲ್ಲ. ಬಿಜೆಪಿ ನಾಯಕರಿಗೆ ಯತ್ನಾಳ್‌ ಪಕ್ಷ ಬಿಡುವುದೂ ಬೇಕಿಲ್ಲ. ಸಮಯ ಬಂದಾಗ ಎದುರಾಳಿಗಳ ವಿರುದ್ಧ ತನ್ನ ಹರಿತ ನಾಲಿಗೆಯಿಂದ ನಿಂದಿಸಲು ಯತ್ನಾಳ್‌ ಅವರಿಗೆ ಬೇಕು. ಹಿಂದು-ಮುಸ್ಲಿಂ ವಿಷಯ ಬಂದಾಗ ವಿಷ ಕಾರುವ ಹೇಳಿಕೆ ನೀಡಲೂ ಯತ್ನಾಳ್‌ ಬೇಕು. ಆದರೆ ಅಧಿಕಾರ-ಸ್ಥಾನಮಾನ ಮಾತ್ರ ಕೊಡುವುದಿಲ್ಲ.</p>



<p>ಯತ್ನಾಳ್‌ ಮುಸ್ಲಿಂ ಬಾಹುಳ್ಯವುಳ್ಳ ವಿಜಯಪುರ ಕ್ಷೇತ್ರದಿಂದ ಆರಿಸಿ ಬರುತ್ತಿದ್ದಾರೆ. ಅಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಒಂದು ಲಕ್ಷ ಮೂವತ್ತು ಸಾವಿರಕ್ಕೂ ಹೆಚ್ಚು. ಹೇಳಿಕೇಳಿ ಯತ್ನಾಳ್‌ ಮುಸ್ಲಿಂ ದ್ವೇಷದ ಹೇಳಿಕೆ ನೀಡುವುದರಲ್ಲಿ ಎತ್ತಿದ ಕೈ. ಹೀಗಿದ್ದೂ ಅಲ್ಲಿ ಗೆಲ್ಲುತ್ತಿರುವುದೇ ಯತ್ನಾಳ್‌ ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಾರೆ ಮತ್ತು ರಾಜಾರೋಷವಾಗಿ ಮುಸ್ಲಿಮರ ಮತಗಳು ತನಗೆ ಬೇಕಾಗಿಲ್ಲ ಎಂದು ಚುನಾವಣಾ ಪೂರ್ವದಲ್ಲಿ ಘೋಷಿಸಿಕೊಳ್ಳುತ್ತಾರೆ. ವಿಜಯಪುರದಲ್ಲಿ ಮುಸ್ಲಿಂ ಮತಗಳು ಪ್ರತಿ ಚುನಾವಣೆಯಲ್ಲಿ ವಿಭಜನೆಯಾಗಿ ಯತ್ನಾಳ್‌ ಗೆಲ್ಲುತ್ತಾರೆ. ಇದನ್ನು ತಡೆಯುವ ಪ್ರಯತ್ನವನ್ನು ಕಾಂಗ್ರೆಸ್‌ ಪಕ್ಷ ಮಾಡಿಯೂ ಇಲ್ಲ. ಕೆಲವು ಹಿರಿಯ ಕಾಂಗ್ರೆಸ್‌ ಮುಖಂಡರು ಯತ್ನಾಳ್‌ ಗೆಲಿಸುವ ಸಲುವಾಗಿಯೇ ದುರ್ಬಲ ಅಭ್ಯರ್ಥಿಗಳನ್ನು ಹಾಕುತ್ತಾರೆ ಎಂಬ ಮಾತಿದೆ. ಹಿಂದೂಗಳ ಮತಗಳನ್ನೂ ಸೆಳೆಯಬಲ್ಲ ಪ್ರಬಲ ಅಭ್ಯರ್ಥಿಯನ್ನು ಸ್ಪರ್ಧೆಗೆ ತಂದರೆ ಯತ್ನಾಳ್‌ ಸೋಲುವುದು ಖಚಿತ. ಒಂದು ರೀತಿಯಲ್ಲಿ ಅವರಿಗೆ ಕಾಂಗ್ರೆಸ್‌ ಋಣವೂ ಇದೆ. ಭಾರತೀಯ ಜನತಾ ಪಕ್ಷದ ಮುಖಂಡರಿಗೆ ಈ ಸೂಕ್ಷ್ಮಗಳೆಲ್ಲ ಗೊತ್ತಿಲ್ಲ. ಕ್ಷೇತ್ರದಿಂದ ಆಚೆಗೆ ಯತ್ನಾಳ್‌ ಅವರಿಗೆ ಇರುವ ಬೆಂಬಲ ಅಷ್ಟಕ್ಕಷ್ಟೆ. ಮೀಡಿಯಾಗಳ ಮುಂದೆ ಅಬ್ಬರಿಸುವುದನ್ನು ಹೊರತುಪಡಿಸಿ ರಚನಾತ್ಮಕವಾಗಿ ಕೆಲಸ ಮಾಡಿದ ಹಿನ್ನೆಲೆ ಯತ್ನಾಳ್‌ ಅವರಿಗಿಲ್ಲ. ಹೀಗಾಗಿ ಅವರಿಗೆ ಮಹತ್ವದ ಹುದ್ದೆಗಳನ್ನು ಅದು ಕೊಡುವುದೂ ಇಲ್ಲ.</p>



<figure class="wp-block-image size-full"><img fetchpriority="high" decoding="async" width="600" height="349" src="https://peepalmedia.com/wp-content/uploads/2023/11/images-2023-11-18T123757.471.jpeg" alt="" class="wp-image-32544" srcset="https://peepalmedia.com/wp-content/uploads/2023/11/images-2023-11-18T123757.471.jpeg 600w, https://peepalmedia.com/wp-content/uploads/2023/11/images-2023-11-18T123757.471-300x175.jpeg 300w, https://peepalmedia.com/wp-content/uploads/2023/11/images-2023-11-18T123757.471-150x87.jpeg 150w" sizes="(max-width: 600px) 100vw, 600px" /></figure>



<p>ವಿರೋಧ ಪಕ್ಷದ ನಾಯಕಸ್ಥಾನ ತಪ್ಪಿದ ಸಿಟ್ಟಿನಲ್ಲಿ ಯತ್ನಾಳ್‌ ಮಾಧ್ಯಮದವರ ಜೊತೆ ಮಾತನಾಡುತ್ತ, ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜಯೇಂದ್ರ ಅವರುಗಳನ್ನು ʻಚಿಂದಿ ಚೋರ್‌ʼಗಳು ಎಂದು ನಿಂದಿಸಿದ್ದಾರೆ. ಈಗಲೂ ಯಥಾಪ್ರಕಾರ ಬಿಜೆಪಿ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಯಾಕೆಂದರೆ ಬಿಜೆಪಿ ಯತ್ನಾಳ್‌ ಅವರನ್ನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ. ಮುಂದೆಯೂ ಲೆಕ್ಕಕ್ಕೆ ಇಟ್ಟುಕೊಳ್ಳುವ ಸಾಧ್ಯತೆ ಇಲ್ಲ. ಇಸ್ಪೀಟ್‌ ಎಲೆಗಳ ನಡುವಿನ ಜೋಕರ್‌ ನಂತೆ ಯತ್ನಾಳ್‌ ಬಿಜೆಪಿಯಲ್ಲಿ ಇದ್ದಾರೆ ಅಷ್ಟೆ.</p>
]]></content:encoded>
					
		
		
			</item>
		<item>
		<title>ಯಡಿಯೂರಪ್ಪ ಆಪ್ತ ರೇಣುಕಾಚಾರ್ಯರಿಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ; ಉಳಿದವರಿಗೇಕಿಲ್ಲ?</title>
		<link>https://peepalmedia.com/bjp-disciplinary-committee-notice-to-renukacharya/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 30 Jun 2023 05:43:01 +0000</pubDate>
				<category><![CDATA[ರಾಜಕೀಯ]]></category>
		<category><![CDATA[B S YADIYURAPPA]]></category>
		<category><![CDATA[bjp]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mp renukacharya]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=22917</guid>

					<description><![CDATA[ಬಿಜೆಪಿ ಪಕ್ಷದ ಹೀನಾಯ ಸೋಲಿನ ಹತಾಶೆಗೆ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದರೆ ಇತ್ತ ಬಿಜೆಪಿ ಶಿಸ್ತು ಸಮಿತಿ ನಿಮ್ಮ ಮೇಲೆ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ರೇಣುಕಾಚಾರ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ. ಹೇಳಬೇಕೆಂದರೆ ಕೇವಲ ರೇಣುಕಾಚಾರ್ಯ ಮಾತ್ರವಲ್ಲ, ಬಿಜೆಪಿ ಪಕ್ಷದ ಸಿ.ಟಿ.ರವಿ, ಪ್ರತಾಪ್ ಸಿಂಹ, ಬಸನಗೌಡ ಪಾಟೀಲ್ ಯತ್ನಾಳ್, ಮುರುಗೇಶ್ ನಿರಾಣಿ, ಈಶ್ವರಪ್ಪ, ಸೋಮಣ್ಣ ಇನ್ನೂ ಹಲವು ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಆದರೆ ಇವರೆಲ್ಲ ಪಕ್ಷದ ಸೋಲಿಗೆ ಕಾರಣ ಆಗಿರೋದು ಬಿಜೆಪಿ [&#8230;]]]></description>
										<content:encoded><![CDATA[
<p>ಬಿಜೆಪಿ ಪಕ್ಷದ ಹೀನಾಯ ಸೋಲಿನ ಹತಾಶೆಗೆ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದರೆ ಇತ್ತ ಬಿಜೆಪಿ ಶಿಸ್ತು ಸಮಿತಿ ನಿಮ್ಮ ಮೇಲೆ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ರೇಣುಕಾಚಾರ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.</p>



<p>ಹೇಳಬೇಕೆಂದರೆ ಕೇವಲ ರೇಣುಕಾಚಾರ್ಯ ಮಾತ್ರವಲ್ಲ, ಬಿಜೆಪಿ ಪಕ್ಷದ ಸಿ.ಟಿ.ರವಿ, ಪ್ರತಾಪ್ ಸಿಂಹ, ಬಸನಗೌಡ ಪಾಟೀಲ್ ಯತ್ನಾಳ್, ಮುರುಗೇಶ್ ನಿರಾಣಿ, ಈಶ್ವರಪ್ಪ, ಸೋಮಣ್ಣ ಇನ್ನೂ ಹಲವು ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಆದರೆ ಇವರೆಲ್ಲ ಪಕ್ಷದ ಸೋಲಿಗೆ ಕಾರಣ ಆಗಿರೋದು ಬಿಜೆಪಿ ಪಕ್ಷದವರೇ ಹೊರತು ಬೇರಾರೂ ಅಲ್ಲ ಅಂತಲೇ. ಬಿಜೆಪಿ ಪಕ್ಷ ಈಗ ಒಡೆದ ಮನೆಯಂತಾಗಿದ್ದು ಹಿರಿಯ ನಾಯಕ ಎನಿಸಿಕೊಂಡ ಯಡಿಯೂರಪ್ಪ ಮಾತ್ರ ಇಲ್ಲಿ ಕಂಡೂ ಕಾಣದಂತೆ, ಕೇಳಿಯೂ ಕೇಳದಂತೆ ಇರುವುದು ಆಶ್ಚರ್ಯ ತಂದಿದೆ.</p>



<p>ಚುನಾವಣೆಗೂ ಮುನ್ನ ಯಡಿಯೂರಪ್ಪರನ್ನು ಎಷ್ಟು ಬೇಕೋ ಅಷ್ಟು ಬಳಸಿಕೊಂಡು ಈಗ ಮಾತ್ರ ಅವರನ್ನು ಯಾವ ನಾಯಕರೂ ಗಣನೆಗೆ ತಗೆದುಕೊಳ್ಳದೇ ಇರುವುದು ಭವಿಷ್ಯದಲ್ಲಿ ಯಡಿಯೂರಪ್ಪ ಸ್ಥಾನಮಾನದ ಬಗ್ಗೆ ಅನುಮಾನ ಹುಟ್ಟುವಂತಾಗಿದೆ. ಯಡಿಯೂರಪ್ಪ ಮಾತ್ರವಲ್ಲ ಈಶ್ವರಪ್ಪ ಕೂಡಾ ಅಲ್ಲೊಂದು ಇಲ್ಲೊಂದು ಹೇಳಿಕೆ ನೀಡಿ ತಣ್ಣಗಿರುವುದು ಬಿಜೆಪಿ ಪಕ್ಷದಲ್ಲಿ ಯಾವುದೂ ಸರಿಯಿಲ್ಲ ಎಂಬುದನ್ನು ಸಾರಿ ಹೇಳುತ್ತಿವೆ.</p>



<p>ಅಷ್ಟಕ್ಕೂ ರೇಣುಕಾಚಾರ್ಯ ನೀಡುತ್ತಿರುವ ಹೇಳಿಕೆ ಬಿಜೆಪಿ ಪಕ್ಷ ಈ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎನ್ನುವ ಉದ್ದೇಶವಾಗಿದ್ದರೆ ಬಿಜೆಪಿ ಮಾತ್ರ ಇದನ್ನು ಒಪ್ಪಿಕೊಳ್ಳಲು ಸಿದ್ದವಿಲ್ಲ. &#8216;ಸಿದ್ದವಿಲ್ಲ&#8217; ಎನ್ನುವುದಕ್ಕಿಂತ ಹೆಚ್ಚಾಗಿ ಯಡಿಯೂರಪ್ಪ ಆಪ್ತರ ಸಲಹೆಗಳು ಇಲ್ಲಿ ನಗಣ್ಯ ಎನ್ನಿಸಿವೆ. ಅದೇ ಕಾರಣಕ್ಕೆ ಮುರುಗೇಶ್ ನಿರಾಣಿ, ಯತ್ನಾಳ್ ರಂತಹ ನಾಯಕರು ಬೀದಿಯಲ್ಲಿ ನಿಂತು ಕಚ್ಚಾಡುತ್ತಿದ್ದರೂ ಅವರಿಗೆ ನೀಡದ ನೋಟಿಸ್, ಯಡಿಯೂರಪ್ಪ ಕಟ್ಟಾ ಬೆಂಬಲಿಗ ಎನ್ನಿಸಿಕೊಂಡ ರೇಣುಕಾಚಾರ್ಯ ಅವರಿಗೆ ಏಕೆ ಎಂಬುದು ಪ್ರಶ್ನಾರ್ಹ ವಿಚಾರವಾಗಿದೆ.</p>



<p>ಕಳೆದ ಕೆಲವು ದಿನಗಳಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಆಡಳಿತ ವೈಖರಿ, ಚುನಾವಣಾ ಸಂದರ್ಭದಲ್ಲಿ ಪ್ರಣಾಳಿಕೆಯ ಉಸ್ತುವಾರಿ ವಹಿಸಿದ್ದ ಮಾಜಿ ಸಚಿವ ಡಾ. ಕೆ. ಸುಧಾಕರ್, ಕರ್ನಾಟಕ ಚುನಾವಣೆ ಸಹ ಉಸ್ತುವಾರಿಯಾಗಿದ್ದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹೀಗೆ ವಿವಿಧ ನಾಯಕರ ವಿರುದ್ಧ ಟೀಕೆ ಮಾಡಿದ ಆರೋಪದ ಮೇಲೆ ರೇಣುಕಾಚಾರ್ಯ ಶಿಸ್ತು ಸಮಿತಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅದರಂತೆ ನೋಟಿಸ್ ಸಿಕ್ಕ 7 ದಿನಗಳ ಒಳಗೆ ಶಿಸ್ತು ಸಮಿತಿಗೆ ಹಾಜರಾಗಿ ಉತ್ತರ ನೀಡಬೇಕೆಂದು ಸೂಚಿಸಿದೆ.</p>



<p>ಅಷ್ಟಕ್ಕೂ ರೇಣುಕಾಚಾರ್ಯ ನೀಡಿದ ಹೇಳಿಕೆ ಏನು ಎಂದು ನೋಡುವುದಾದರೆ</p>



<ul class="wp-block-list">
<li>ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈರನ್ನು ಗುರಿಯಾಗಿಸಿಕೊಂಡು ಅಣ್ಣಾಮಲೈ ಏನು ಹೀರೋನಾ? ಒಂದು ಗ್ರಾಮ ಪಂಚಾಯ್ತಿ ಚುನಾವಣೆ ಗೆಲ್ಲಲಾಗದವರು ಇಲ್ಲಿ ಬಂದು ನಮಗೆ ಚುನಾವಣಾ ಪಾಠ ಹೇಳ್ತಾರೆ ಎಂದು ಕಿಡಿಕಾರಿದ್ದರು.</li>



<li>ಚುನಾವಣೆ ಬಳಿಕ ನೈತಿಕ ಹೊಣೆ ಹೊತ್ತು ನಳಿನ್ ಕುಮಾರ್ ಕಟೀಲ್ ಅವರು ರಾಜೀನಾಮೆ ನೀಡಬೇಕಿತ್ತು. ಆದರೆ ಅದಾಗುತ್ತಿಲ್ಲ. ಬದಲಾಗಿ ಕಾರ್ಯಕರ್ತರ ಮೇಲೆ ಗದರಿದರೆ ಪಕ್ಷದಲ್ಲಿ ಆದ ತಪ್ಪು ಸರಿಯಾಗುವುದಿಲ್ಲ ಎಂದು ನಳಿನ್ ಕುಮಾರ್ ಮೇಲೆ ಆರೋಪಿಸಿದ್ದರು.</li>



<li>10 ಕೆಜಿ ನೀಡುತ್ತಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿ ಕೊನೆಗೆ 4 ಕೆಜಿಗೆ ಬಂದ ಬಗ್ಗೆಯೂ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದರು. ಹಾಗೆಯೇ ಚುನಾವಣೆಗೆ ಮುನ್ನ ನೀವು ಕೊಟ್ಟ ಭರವಸೆಗಳು ಏನು? ಎಂತಹವರನ್ನು ಇಟ್ಟುಕೊಂಡು ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಣಾಳಿಕೆಯನ್ನು ಸಿದ್ಧಪಡಿಸಿದಿರಿ? ಎಂದು ಡಾ.ಸುಧಾಕರ್ ಮೇಲೂ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದರು.</li>



<li>ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಿ ಬೀದಿ ಬೀದಿ ಸುತ್ತಿಸಿ ಚುನಾವಣಾ ಪ್ರಚಾರ ಮಾಡಿಸಿದಿರಿ. ಏಕೆ ನಿಮಗೆ ರಾಜ್ಯ ನಾಯಕರ ಮೇಲೆ ನಂಬಿಕೆ ಇರಲಿಲ್ಲವೇ? ಕೇವಲ ಆಯನೂರಿನ ಸಮಾವೇಶಕ್ಕೆ 25 ಸಾವಿರ ಜನರನ್ನು ಸೇರಿಸಲು ನನಗೆ ಸೂಚನೆ ನೀಡಿದ್ದರು. ಬೇರಾವ ನಾಯಕರಿಗೆ ಅಷ್ಟು ಜನರನ್ನು ಸೇರಿಸಲು ಹೇಳಿದ್ದಾರೆ ತಿಳಿಸಿ ಎಂದು ಬಿಜೆಪಿ ಹೈಕಮಾಂಡ್ ಗೇ ಪ್ರಶ್ನೆ ಎಸೆದಿದ್ದಾರೆ.</li>



<li>ಚುನಾವಣೆಯಲ್ಲಿ ಸೋತ ಸಚಿವ ಡಾ. ಕೆ. ಸುಧಾಕರ್ ಮನೆಗೆ ಬಸವರಾಜ ಬೊಮ್ಮಾಯಿ ಹೋಗಿ ಸಮಾಧಾನ ಹೇಳುತ್ತಾರೆ. ಯಾಕೆ ಸುಧಾಕರ್ ಅವರೊಬ್ಬರೇ ಚುನಾವಣೆ ಸೋತಿರುವುದೇ?, ನಾವ್ಯಾರೂ ಸೋತಿಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಬೊಮ್ಮಾಯಿಯವರ ಮೇಲೂ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ</li>



<li>ಇನ್ನು ಎಷ್ಟೋ ಮಂದಿ ಹಾಲಿ ಶಾಸಕರಿಗೆ ಟಿಕೇಟ್ ನೀಡದೇ ಇರುವುದು ಪಕ್ಷದ ಸೋಲಿಗೆ ಕಾರಣ. ಅದೂ ಸಹ ಸೋಮಣ್ಣ, ಈಶ್ವರಪ್ಪರಂತಹ ನಾಯಕರು ವಿಧಾನಸಭೆ ಮೆಟ್ಟಿಲು ಹತ್ತಬೇಕಿತ್ತು. ಅಂತಹವರನ್ನು ಬಿಜೆಪಿ ಪಕ್ಷ ಮೂಲೆಗುಂಪು ಮಾಡಿದೆ ಎಂಬ ರೀತಿಯಲ್ಲಿ ಬಿಜೆಪಿ ಹೈಕಮಾಂಡ್ ನ್ನೇ ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.</li>
</ul>



<p>ಅಷ್ಟಕ್ಕೂ ರೇಣುಕಾಚಾರ್ಯ ಹೇಳಿದ ಮಾತುಗಳಲ್ಲಿ ಅಂತಹ ತಪ್ಪೇನಿದೆ ಎಂಬುದು ಅವರ ಆಪ್ತ ವಲಯದವರ ಪ್ರಶ್ನೆ. ಚುನಾವಣೆಯಲ್ಲಿ ಸೋತು ತಿಂಗಳು ಕಳೆದರೂ ಒಂದು ಆತ್ಮಾವಲೋಕನ ಸಭೆ ಕರೆಯದ ಬಿಜೆಪಿ ಈಗ ಯಡಿಯೂರಪ್ಪ ಬೆಂಬಲಿಗ ಎಂಬ ಕಾರಣಕ್ಕೆ ನೋಟಿಸ್ ಜಾರಿ ಮಾಡಿದೆ. ಇದು ಸ್ಪಷ್ಟವಾಗಿ ಯಡಿಯೂರಪ್ಪ ಅವರ ಆಪ್ತ ಬಳಗಕ್ಕೆ ಬಿಜೆಪಿ ಕೊಡುತ್ತಿರುವ ಮತ್ತೊಂದು ಆಘಾತ ಎಂಬುದರಲ್ಲಿ ಅನುಮಾನವಿಲ್ಲ. ಹಾಗೊಂದು ವೇಳೆ ನೋಟಿಸ್ ಜಾರಿ ಮಾಡುವುದೇ ಆದರೆ ಸಿ.ಟಿ.ರವಿಗೆ, ಈಶ್ವರಪ್ಪ, ಪ್ರತಾಪ್ ಸಿಂಹ, ಯತ್ನಾಳ್, ನಿರಾಣಿ ಅವರಿಗೆ ಯಾಕಿಲ್ಲ ಎಂಬ ಅನುಮಾನ ಹುಟ್ಟುವಂತಾಗಿದೆ.</p>



<p>ಹೇಳಬೇಕೆಂದರೆ ಯಡಿಯೂರಪ್ಪ ನಂತರ ರಾಜ್ಯ ಬಿಜೆಪಿಯಲ್ಲಿ ಎಲ್ಲರನ್ನೂ ಹಿಡಿದಿಟ್ಟುಕೊಳ್ಳಬಲ್ಲ ಸಮರ್ಥ ನಾಯಕನ ಕೊರತೆಯಿದೆ. ಒಂದು ಕಡೆ ಜಗದೀಶ್ ಶೆಟ್ಟರ್ ರಂತಹ ಹಿರಿಯರಿಗೂ ಟಿಕೆಟ್ ನೀಡದೇ ಉದ್ದೇಶಪೂರ್ವಕವಾಗಿ ಅವರನ್ನು ದೂರ ತಳ್ಳಿದ್ದು ಕೂಡಾ ಹಲವರ ಕೆಂಗಣ್ಣಿಗೆ ಗುರಿಯಾಗಿತ್ತು. ಒಂದು ಕಾಲದಲ್ಲಿ ಬಿಜೆಪಿದ ಭದ್ರವಾದ ಓಟ್ ಬ್ಯಾಂಕ್ ಆಗಿದ್ದ ಲಿಂಗಾಯತರನ್ನು ದೂರ ತಳ್ಳಿದ್ದು, ಇತ್ತೀಚಿನ ದಿನಗಳಲ್ಲಿ ಬಿಜೆಪಿ ಲಿಂಗಾಯತರ ವಿರೋಧಿ ಎಂಬ ಆರೋಪ ಎದುರಿಸಿದ್ದರ ಜೊತೆಗೆ ನಿರಂತರವಾಗಿ ಲಿಂಗಾಯತ ನಾಯಕರನ್ನು ನಿರ್ಲಕ್ಷಿಸಿದ್ದೂ ಸಹ ಬಿಜೆಪಿ ಸೋಲಿನ ಪ್ರಮುಖ ಕಾರಣಗಳಲ್ಲಿ ಒಂದು ಎಂಬುದು ಸ್ಪಷ್ಟ. ಈಗ ರೇಣುಕಾಚಾರ್ಯರನ್ನು ಗುರಿಯಾಗಿಸಿ ನೋಟಿಸ್ ನೀಡಿರುವುದೂ ಸಹ ಯಡಿಯೂರಪ್ಪ ಆಪ್ತ ಎಂಬ ಕಾರಣಕ್ಕೆ ಎಂಬುದು ರೇಣುಕಾಚಾರ್ಯ ಬೆಂಬಲಿಗರ ಅಭಿಪ್ರಾಯವಾಗಿದೆ.</p>
]]></content:encoded>
					
		
		
			</item>
		<item>
		<title>ಗುಜರಾತ್ ಫಲಿತಾಂಶದ ಬಗ್ಗೆ ರಾಜ್ಯ ಬಿಜೆಪಿ ಉತ್ಸಾಹ: 2023ಕ್ಕೆ ಸ್ಥಳೀಯ ಸಮಸ್ಯೆಗಳು ಮುಖ್ಯ ಎಂದ ಕಾಂಗ್ರೆಸ್</title>
		<link>https://peepalmedia.com/state-bjp-excited-about-gujarat-result-congress-says-local-issues-are-important-for-2023/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 09 Dec 2022 06:14:43 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[2023 Assembly Election]]></category>
		<category><![CDATA[B S YADIYURAPPA]]></category>
		<category><![CDATA[BASAVARAJ BOMMAYI]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[gujarath election]]></category>
		<category><![CDATA[himachal pradesh e;lection]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[siddaramayya]]></category>
		<guid isPermaLink="false">https://peepalmedia.com/?p=18009</guid>

					<description><![CDATA[ಬೆಂಗಳೂರು: ಗುಜತಾರ್‌ನಲ್ಲಿ ಬಿಜೆಪಿ ಗೆದ್ದಿರುವುದರಿಂದ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅಧಿಕಾರದ ಪಟ್ಟ ಏರುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಅಭಿಪ್ರಾಯ ಪಟ್ಟಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯ ಕಾಂಗ್ರೆಸ್‌ ಪಕ್ಷ, ಒಂದು ರಾಜ್ಯದ ಚುನಾವಣೆಗೂ, ಇನ್ನೊಂದು ರಾಜ್ಯದ ಚುನಾವಣೆಗೂ ಯಾವುದೇ ಸಂಬಂಧವಿಲ್ಲ, ಹೀಗಾಗಿ ಚುನಾವಣೆಗಳಿಗೆ ಮುಖ್ಯವಾಗಿ ಬೇಕಾಕಿರುವುದು ಅಲ್ಲಿನ ಸ್ಥಳಿಯ ಸಮಸ್ಯೆಗಳು ಎಂದು ಹೇಳಿದೆ. ಕರ್ನಾಟಕದ ಎರಡೂ ಪ್ರಮುಖ ಪಕ್ಷಗಳು ಗುರುವಾರದ ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಪ್ರೋತ್ಸಾಹವನ್ನು ಕಂಡಿವೆ. ಆಡಳಿತಾರೂಢ ಬಿಜೆಪಿ ಗುಜರಾತ್‌ನಲ್ಲಿ ತನ್ನ ಪ್ರಚಂಡ ಗೆಲುವಿನಿಂದ [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ಗುಜತಾರ್‌ನಲ್ಲಿ ಬಿಜೆಪಿ ಗೆದ್ದಿರುವುದರಿಂದ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅಧಿಕಾರದ ಪಟ್ಟ ಏರುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಅಭಿಪ್ರಾಯ ಪಟ್ಟಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯ ಕಾಂಗ್ರೆಸ್‌ ಪಕ್ಷ, ಒಂದು ರಾಜ್ಯದ ಚುನಾವಣೆಗೂ, ಇನ್ನೊಂದು ರಾಜ್ಯದ ಚುನಾವಣೆಗೂ ಯಾವುದೇ ಸಂಬಂಧವಿಲ್ಲ, ಹೀಗಾಗಿ ಚುನಾವಣೆಗಳಿಗೆ ಮುಖ್ಯವಾಗಿ ಬೇಕಾಕಿರುವುದು ಅಲ್ಲಿನ ಸ್ಥಳಿಯ ಸಮಸ್ಯೆಗಳು ಎಂದು ಹೇಳಿದೆ.</p>



<p>ಕರ್ನಾಟಕದ ಎರಡೂ ಪ್ರಮುಖ ಪಕ್ಷಗಳು ಗುರುವಾರದ ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಪ್ರೋತ್ಸಾಹವನ್ನು ಕಂಡಿವೆ. ಆಡಳಿತಾರೂಢ ಬಿಜೆಪಿ ಗುಜರಾತ್‌ನಲ್ಲಿ ತನ್ನ ಪ್ರಚಂಡ ಗೆಲುವಿನಿಂದ ಸ್ಫೂರ್ತಿ ಪಡೆದುಕೊಂಡಿದ್ದರೆ, ಕಾಂಗ್ರೆಸ್ ಪಕ್ಷವು ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಗೆಲುವಿನಿಂದ ಸ್ಪೂರ್ತಿ ಪಡೆದುಕೊಂಡಿದೆ ಎನ್ನಲಾಗಿದೆ.</p>



<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಕಾರ, ʼಗುಜರಾತ್ ಫಲಿತಾಂಶವು ಏಪ್ರಿಲ್ 2023 ರಲ್ಲಿ ಮತ ಚಲಾಯಿಸುವಾಗ ಕರ್ನಾಟಕದ ಚುನಾವಣಾ ಫಲಿತಾಂಶದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಹೀಗಾಗಿ ಇತರ ಪಕ್ಷಗಳು ಆಡಳಿತ ನಡೆಸುತ್ತಿರುವ ಸರ್ಕಾರಗಳ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದರೂ, ಜನರು ಬಿಜೆಪಿ ಸರ್ಕಾರಗಳನ್ನು ಬೆಂಬಲಿಸುವ ವಾತಾವರಣವಿದ. ಗುಜರಾತ್ ಫಲಿತಾಂಶವನ್ನು ನೋಡುವುದಾದರೆ, ಜನರು ಉತ್ತಮ ಆಡಳಿತಕ್ಕೆ ಪ್ರತಿಫಲ ನೀಡುತ್ತಾರೆ ಎಂದೆನಿಸುತ್ತಿದೆ ಎಂದು ಹೇಳಿದ್ದಾರೆ.</p>



<p>ʼಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಸಂಘಟನೆಯಿಂದಾಗಿ ಪಶ್ಚಿಮ ರಾಜ್ಯದಲ್ಲಿ ಸತತ ಏಳನೇ ಬಾರಿಗೆ ಬಿಜೆಪಿ ಅಧಿಕಾರ ಹಿಡಿಯಲು ಸಾಧ್ಯವಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.</p>



<p>ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಗುಜರಾತ್ ಫಲಿತಾಂಶವು ಮುಂದಿನ ಕರ್ನಾಟಕ &nbsp;ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಘಟಕಕ್ಕೆ 140 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆ ಮಾಡಿಸಿದೆ. ಹೀಗಾಗಿ ವಿರೋಧ ಪಕ್ಷಗಳು ಈಗಲಾದರೂ ರಾಜ್ಯದಲ್ಲಿ ಅಧಿಕಾರ ಪಡೆಯುವ ಬಗ್ಗೆ ಹಗಲುಗನಸು ಕಾಣುವುದನ್ನು ನಿಲ್ಲಿಸಬೇಕುʼ ಎಂದು ಹೇಳಿದ್ದಾರೆ.</p>



<p>ʼಗುಜರಾತ್ ಫಲಿತಾಂಶವು ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷವು ಯಾವುದೇ ಪ್ರಚಾರವಿಲ್ಲದೆ ಸುಲಭವಾಗಿ ಗೆಲ್ಲುತ್ತದೆ ಎಂದು ಅಭಿಪ್ರಾಪಟ್ಟಿದ್ದಾರೆ.</p>



<p>ʼಕರ್ನಾಟಕವು ಅತ್ಯಂತ ಭ್ರಷ್ಟ ಸರ್ಕಾರವನ್ನು ಹೊಂದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದು, &nbsp;ವಿಧಾನಸಭಾ ಚುನಾವಣೆಯ ಫಲಿತಾಂಶವು ಸ್ಥಳೀಯ ವಿಷಯಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಹೇಳಿದ್ದಾರೆ.</p>



<p>ಗುಜರಾತ್‌ ನಲ್ಲಿ ಆಮ್ ಆದ್ಮಿ ಪಕ್ಷವು ಕಾಂಗ್ರೆಸ್ ಮತಗಳನ್ನು ಕಬಳಿಸಿದೆ ಎಂದು ಆರೋಪಿಸಿದ ಸಿದ್ದರಾಮಯ್ಯನವರು, ʼಬಿಜೆಪಿಯೂ, ಎಎಪಿಗೆ ಹಣಕಾಸು ನೆರವು ನೀಡುವ ಮತ್ತು ಅದರ ಗೆಲುವನ್ನು ಖಚಿತಪಡಿಸಿಕೊಳ್ಳಲು ಮತಗಳನ್ನು ವಿಭಜಿಸುವ ತಂತ್ರವನ್ನು ಬಳಸಿದೆ ಎಂದು ಹೇಳಿದ್ದಾರೆ.</p>



<p>ಕರ್ನಾಟಕದಲ್ಲಿ &nbsp;ಜೆಡಿಎಸ್ ಅನ್ನು ಬಳಸುವ ಮೂಲಕ ಅದೇ ತಂತ್ರವನ್ನು ಅನುಸರಿಸಬಹುದು. ಆದರೆ ಅದು ಇಲ್ಲಿ ಕೆಲಸ ಮಾಡುವುದಿಲ್ಲʼ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಗುಜರಾತ್ ಚುನಾವಣೆ ಫಲಿತಾಂಶ: ಅನೇಕ ಕಾಂಗ್ರೆಸ್ ನಾಯಕರು ಬಿಜೆಪಿಗೆ ಪಲಾಯನ- ಸಚಿವ ಆರ್.ಅಶೋಕ್</title>
		<link>https://peepalmedia.com/gujarat-election-result-many-congress-leaders-fled-to-bjp-minister-r-ashok/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 09 Dec 2022 03:43:16 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[2023 Assembly Election]]></category>
		<category><![CDATA[B S YADIYURAPPA]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[gujarath election]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[r ashok]]></category>
		<guid isPermaLink="false">https://peepalmedia.com/?p=18000</guid>

					<description><![CDATA[ಬೆಂಗಳೂರು: 2023ರ ಮೊದಲಾರ್ಧದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದ್ದು, ಗುಜರಾತ್‌ ಚುನಾವಣೆಯಲ್ಲಿನ ಬಿಜೆಪಿಯ ಭರ್ಜರಿ ಗೆಲುವನ್ನು ನೋಡಿ, ಕಾಂಗ್ರೆಸ್ ನಾಯಕರು ಮತ್ತು ಶಾಸಕರು ಬಿಜೆಪಿಗೆ ಪಲಾಯನ ಮಾಡಲು ಬಯಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ʼಹಲವಾರು ಕಾಂಗ್ರೆಸ್ ನಾಯಕರಲ್ಲಿ ಸುಮಾರು 12 ಜನರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ, ಏಕೆಂದರೆ ಅವರು ತಮ್ಮ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಲು ಬಯಸುತ್ತಿದ್ದಾರೆʼ ಎಂದು ತಿಳಿಸಿದ್ದಾರೆ. ʼಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> 2023ರ ಮೊದಲಾರ್ಧದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದ್ದು, ಗುಜರಾತ್‌ ಚುನಾವಣೆಯಲ್ಲಿನ ಬಿಜೆಪಿಯ ಭರ್ಜರಿ ಗೆಲುವನ್ನು ನೋಡಿ, ಕಾಂಗ್ರೆಸ್ ನಾಯಕರು ಮತ್ತು ಶಾಸಕರು ಬಿಜೆಪಿಗೆ ಪಲಾಯನ ಮಾಡಲು ಬಯಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.</p>



<p>ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ʼಹಲವಾರು ಕಾಂಗ್ರೆಸ್ ನಾಯಕರಲ್ಲಿ ಸುಮಾರು 12 ಜನರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ, ಏಕೆಂದರೆ ಅವರು ತಮ್ಮ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಲು ಬಯಸುತ್ತಿದ್ದಾರೆʼ ಎಂದು ತಿಳಿಸಿದ್ದಾರೆ.</p>



<p>ʼಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಹಾಯ ಮಾಡಲಿಲ್ಲ.ಆದರ ಬದಲು ಎಎಪಿ ಕಾಂಗ್ರೆಸ್ ಮತಗಳನ್ನು ಪಡೆದುಕೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಎಎಪಿ ಸುಮಾರು 5 ಪ್ರತಿಶತದಷ್ಟು ಮತಗಳನ್ನು ಪಡೆದರೂ, ಕರ್ನಾಟಕದಲ್ಲೂ ಕಾಂಗ್ರೆಸ್ ನಿರ್ನಾಮವಾಗುತ್ತದೆʼ ಎಂದು ಟೀಕಿಸಿದ್ದಾರೆ.</p>



<p>ಗುರುವಾರ ಗುಜರಾತ್‌ ಚುನಾವಣೆಯ ಫಲಿತಾಂಶದ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರು,ʼ ಬಿಜೆಪಿ ಪಕ್ಷವು ರಾಜ್ಯದಲ್ಲೂ ತನ್ನ ಗುಜರಾತ್ ಸಾಧನೆಯನ್ನು ಪುನರಾವರ್ತಿಸಲಿದೆ, ಹಾಗೆಯೇ ಮುಂಬರುವ 224 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್‌ನಂತೆ ಬಿಜೆಪಿ ಪಕ್ಷವು ಎಂದಿಗೂ ಓಲೈಕೆ ರಾಜಕಾರಣ ಮಾಡಿಲ್ಲ: ಡಾ.ಕೆ.ಸುಧಾಕರ್‌</title>
		<link>https://peepalmedia.com/unlike-congress-bjp-has-never-done-politics-of-appeasement-dr-k-sudhakar/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 08 Nov 2022 08:28:12 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[B S YADIYURAPPA]]></category>
		<category><![CDATA[BASAVARAJ BOMMAYI]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[dr k sudhakar]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[narendramodi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sathish jarakiholi]]></category>
		<category><![CDATA[siddaramayya]]></category>
		<guid isPermaLink="false">https://peepalmedia.com/?p=14767</guid>

					<description><![CDATA[ದೇವನಹಳ್ಳಿ: ಬಿಜೆಪಿ ಎಂದಿಗೂ ಜಾತಿ, ಲಿಂಗ, ಧರ್ಮ ಆಧಾರಿತವಾದ ರಾಜಕಾರಣ ಮಾಡಿಲ್ಲ ಅಥವಾ ಅದರ ಆಧಾರಿತವಾಗಿ ಯೋಜನೆ ರೂಪಿಸಿಲ್ಲ. ಆದರೆ ಕಾಂಗ್ರೆಸ್‌ ನಾಯಕರು 60 ವರ್ಷಗಳಿಂದ ಓಲೈಕೆ ರಾಜಕಾರಣವನ್ನೇ ಮಾಡಿಕೊಂಡು ಬಂದಿದ್ದು, ಈಗ ಬಿಜೆಪಿಯ ಅಭಿವೃದ್ಧಿ ಕಾರ್ಯಗಳಿಂದ ನಿರಾಶರಾಗಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ದೇವನಹಳ್ಳಿಯ ಸಮೀಪದ ನಾಡಪ್ರಭು ಕೆಂಪೇಗೌಡರ ಕಂಚಿನ ʼಪ್ರಗತಿಯ ಪ್ರತಿಮೆʼ ಹಾಗೂ ಉದ್ಘಾಟನಾ ಕಾರ್ಯಕ್ರಮದ ಸಿದ್ಧತೆಯನ್ನು ಸಚಿವರು ಪರಿಶೀಲನೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ [&#8230;]]]></description>
										<content:encoded><![CDATA[
<p><strong>ದೇವನಹಳ್ಳಿ: </strong>ಬಿಜೆಪಿ ಎಂದಿಗೂ ಜಾತಿ, ಲಿಂಗ, ಧರ್ಮ ಆಧಾರಿತವಾದ ರಾಜಕಾರಣ ಮಾಡಿಲ್ಲ ಅಥವಾ ಅದರ ಆಧಾರಿತವಾಗಿ ಯೋಜನೆ ರೂಪಿಸಿಲ್ಲ. ಆದರೆ ಕಾಂಗ್ರೆಸ್‌ ನಾಯಕರು 60 ವರ್ಷಗಳಿಂದ ಓಲೈಕೆ ರಾಜಕಾರಣವನ್ನೇ ಮಾಡಿಕೊಂಡು ಬಂದಿದ್ದು, ಈಗ ಬಿಜೆಪಿಯ ಅಭಿವೃದ್ಧಿ ಕಾರ್ಯಗಳಿಂದ ನಿರಾಶರಾಗಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.</p>



<p>ದೇವನಹಳ್ಳಿಯ ಸಮೀಪದ ನಾಡಪ್ರಭು ಕೆಂಪೇಗೌಡರ ಕಂಚಿನ ʼಪ್ರಗತಿಯ ಪ್ರತಿಮೆʼ ಹಾಗೂ ಉದ್ಘಾಟನಾ ಕಾರ್ಯಕ್ರಮದ ಸಿದ್ಧತೆಯನ್ನು ಸಚಿವರು ಪರಿಶೀಲನೆ ಮಾಡಿದರು.</p>



<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉದ್ಘಾಟನೆ, ವಿಮಾನ ನಿಲ್ದಾಣದ ಟರ್ಮಿನಲ್‌-2, ವಂದೇ ಭಾರತ್‌ ರೈಲು ಚಾಲನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಮುನ್ನ ಸ್ಥಳ ಪರಿಶೀಲನೆ ಮಾಡಿ, ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.</p>



<p>ಸರ್ವ ವ್ಯಾಪಿ, ಸರ್ವ ಸ್ಪರ್ಶಿ, ಸರ್ವರ ಕಲ್ಯಾಣ ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಮಂತ್ರ. ಬಿಜೆಪಿ ಎಂದಿಗೂ ಯಾವುದೇ ಸಮುದಾಯ, ಜಾತಿ, ಧರ್ಮ, ಲಿಂಗದ ಆಧಾರಿತವಾಗಿ ಯೋಜನೆಗಳನ್ನು ರೂಪಿಸಲು ಮುಂದಾಗುವುದಿಲ್ಲ. ಕಾಂಗ್ರೆಸ್‌ ಪಕ್ಷ ಹಿಂದಿನಿಂದಲೂ ಓಲೈಕೆ ರಾಜಕಾರಣ ಮಾಡಿಕೊಂಡು ಬಂದಿದೆ. ಈಗಲೂ ಅದನ್ನೇ ಮುಂದುವರಿಸುತ್ತಿದೆ. ಹೀಗಾಗಿ ಶ್ರೇಷ್ಠವಾದ ರಾಜಕಾರಣವನ್ನು ಅವರು ಎಂದೂ ಮಾಡಿಲ್ಲ ಎಂದರು.</p>



<p>ಆರ್ಥಿಕವಾಗಿ ಹಿಂದುಳಿದವರಿಗೆ ಕೇಂದ್ರ ಬಿಜೆಪಿ ಸರ್ಕಾರ ನೀಡಿರುವ ಮೀಸಲಾತಿಯನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಇಂತಹ ಕ್ರಮವನ್ನು ತರಲು ಬಿಜೆಪಿಗೆ ಮಾತ್ರ ಸಾಧ್ಯವಾಗುತ್ತದೆ. ಇಂತಹ ಆಲೋಚನೆಗಳು ಕಾಂಗ್ರೆಸ್‌ ಅಥವಾ ಜೆಡಿಎಸ್‌ ಬರಲು ಸಾಧ್ಯವಿಲ್ಲ ಎಂದರು.</p>



<p>ನಾಡಪ್ರಭು ಕೆಂಪೇಗೌಡರು ಒಕ್ಕಲಿಗ ಸಮುದಾಯಕ್ಕೆ ಸೇರಿದ್ದರೂ, ಅವರು ಎಲ್ಲರ ನಾಯಕರು. ಆದರೆ ಒಕ್ಕಲಿಗ ಸಮುದಾಯಕ್ಕೆ ಕಾಂಗ್ರೆಸ್‌ನವರು ಏನೂ ಮಾಡಿಲ್ಲ. ಜನಪ್ರಿಯ ನಾಯಕರಾದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಸೇರಿದಂತೆ ಹಿರಿಯ ಒಕ್ಕಲಿಗ ನಾಯಕರನ್ನು ಕಾಂಗ್ರೆಸ್‌ ಅಪಮಾನ ಮಾಡಿದೆ. ಅವರನ್ನು ಅಧಿಕಾರದಿಂದ ಒಂದೇ ಬಾರಿಗೆ ತೆಗೆದುಹಾಕಲು ಇದುವರೆಗೂ ಕಾರಣ ನೀಡಿಲ್ಲ ಎಂದರು.</p>



<p>ನಾಡಪ್ರಭು ಕೆಂಪೇಗೌಡರ ʼಪ್ರಗತಿಯ ಪ್ರತಿಮೆʼ ನಿರ್ಮಾಣದ ಚಿಂತನೆಯನ್ನು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಚರ್ಚೆಗೆ ತಂದಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಇಚ್ಛಾಶಕ್ತಿಯಿಂದ ಇಂತಹ ಸುಂದರ ಐತಿಹಾಸಿಕ ಪ್ರತಿಮೆ ನಿರ್ಮಾಣವಾಗಿದೆ ಎಂದರು.</p>



<p>ಕಾಂಗ್ರೆಸ್‌ನವರ ರಾಜಕೀಯ ಮಾತುಗಳನ್ನು ಗಂಭೀರವಾಗಿ ಪರಿಗಣಿಸಬಾರದು. ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬರುವ ಕಾಂಗ್ರೆಸ್‌ನವರಿಗೂ ಸ್ವಾಗತ ನೀಡುತ್ತೇವೆ ಎಂದು ನಾವು ಕೂಡ ಹೇಳುತ್ತೇವೆ. ಕಾಂಗ್ರೆಸ್‌ನವರು ಲೋಕಾರೂಢಿಯಾಗಿ ಹೇಳಿದ್ದಾರೆ. ಅನ್ಯಪಕ್ಷಗಳಿಂದ ಬಂದವರ ಜೊತೆಗೆ ಬಿಜೆಪಿಗೆ ಇನ್ನಷ್ಟು ನಾಯಕರು ಸೇರ್ಪಡೆಯಾಗುತ್ತಾರೆಯೇ ಹೊರತು, ಮೈನಸ್‌ ಆಗುವುದಿಲ್ಲ. ಹಿರಿಯ ಐಎಎಸ್‌ ಅಧಿಕಾರಿ,&nbsp; ಇಬ್ಬರು ಮಾಜಿ ಸಂಸದರು, ಕೋಲಾರ ಜಿಲ್ಲೆಯ ಇಬ್ಬರು ಮಾಜಿ ಶಾಸಕರು, ಚಿಕ್ಕಬಳ್ಳಾಪುರದಲ್ಲಿ ಒಬ್ಬ ಮಾಜಿ ಶಾಸಕರು ಬಿಜೆಪಿಗೆ ಬಂದಿದ್ದಾರೆ ಎಂದರು.</p>



<p><strong>ಸತೀಶ್‌ </strong><strong>ಜಾರಕಿಹೊಳಿ </strong><strong>ಅರಿವು </strong><strong>ಮೂಡಿಸಿಕೊಳ್ಳಲಿ</strong></p>



<p>ಸತೀಶ್‌ ಜಾರಕಿಹೊಳಿ ಅವರು ಇತಿಹಾಸದ ಬಗ್ಗೆ ಇರುವ ತಪ್ಪು ಕಲ್ಪನೆಯನ್ನು ಪ್ರದರ್ಶನ ಮಾಡಿದ್ದಾರೆ. ಹಿಂದೂ ಪದದ ಬಗ್ಗೆ, ಹಿಂದುತ್ವದ ಬಗ್ಗೆ, ದೇಶದ ಇತಿಹಾಸದ ಬಗ್ಗೆ ಅವರು ಪರಿಚಯ ಮಾಡಿಕೊಂಡು, ಅರಿವು ಮೂಡಿಸಿಕೊಳ್ಳುವ ಕೆಲಸ ಮಾಡಬೇಕಾಗುತ್ತದೆ. ಇಡೀ ವಿಶ್ವದಲ್ಲಿ ಹಿಂದೂ ಧರ್ಮದ ಬಗ್ಗೆ ವಿಶೇಷ ಗೌರವ ಇದೆ. ಸನಾತನ ಹಿಂದೂ ಧರ್ಮ ಒಂದು ಜೀವನಶೈಲಿ. ಇದು ಅತಿ ಉನ್ನತ ಆದರ್ಶವಾಗಿದೆ ಎಂದು ಸುಧಾಕರ್‌ ಹೇಳಿದರು.</p>
]]></content:encoded>
					
		
		
			</item>
		<item>
		<title>ಯಡಿಯೂರಪ್ಪ ಮೇಲಿನ ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಬೇರೊಂದು ಪೀಠಕ್ಕೆ ವರ್ಗಾವಣೆ</title>
		<link>https://peepalmedia.com/illegal-denotification-case-against-yeddyurappa-transferred-to-another-bench/</link>
		
		<dc:creator><![CDATA[Peepal Media]]></dc:creator>
		<pubDate>Fri, 14 Oct 2022 09:01:24 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[B S YADIYURAPPA]]></category>
		<category><![CDATA[CJI YU Lalit]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Supreme Court]]></category>
		<guid isPermaLink="false">https://peepalmedia.com/?p=10641</guid>

					<description><![CDATA[ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 26 ಎಕರೆ ಡಿನೋಟಿಫಿಕೇಷನ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಅಲಂ ಪಾಷಾ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಯು.ಯು.ಲಲಿತ್ ಈ ವಿಚಾರಣೆಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸುವಂತೆ ಸೂಚಿಸಿದ್ದಾರೆ. ಮುಂದಿನ ತಿಂಗಳು ನ್ಯಾ.ಯು.ಯು.ಲಲಿತ್ ಅವರು ನಿವೃತ್ತರಾಗುವ ಕಾರಣ ಮತ್ತು ಈಗ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಆಗಿರುವ ಲಲಿತ್ ಈ ಹಿಂದೆ ಸೀನಿಯರ್ ಕೌನ್ಸಿಲ್ ಆಗಿದ್ದಾಗ ಯಡಿಯೂರಪ್ಪ ಮತ್ತು ಜನಾರ್ಧನ ರೆಡ್ಡಿ ಪರ ವಕಾಲತ್ತು ವಹಿಸಿರೋ ಕಾರಣಕ್ಕೆ ಇದನ್ನು ತಾನು [&#8230;]]]></description>
										<content:encoded><![CDATA[
<p style="font-size:20px">ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 26 ಎಕರೆ ಡಿನೋಟಿಫಿಕೇಷನ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಅಲಂ ಪಾಷಾ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಯು.ಯು.ಲಲಿತ್ ಈ ವಿಚಾರಣೆಯನ್ನು ಬೇರೊಂದು ಪೀಠಕ್ಕೆ ವರ್ಗಾಯಿಸುವಂತೆ ಸೂಚಿಸಿದ್ದಾರೆ.</p>



<p style="font-size:20px">ಮುಂದಿನ ತಿಂಗಳು ನ್ಯಾ.ಯು.ಯು.ಲಲಿತ್ ಅವರು ನಿವೃತ್ತರಾಗುವ ಕಾರಣ ಮತ್ತು ಈಗ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಆಗಿರುವ ಲಲಿತ್ ಈ ಹಿಂದೆ ಸೀನಿಯರ್ ಕೌನ್ಸಿಲ್ ಆಗಿದ್ದಾಗ ಯಡಿಯೂರಪ್ಪ ಮತ್ತು ಜನಾರ್ಧನ ರೆಡ್ಡಿ ಪರ ವಕಾಲತ್ತು ವಹಿಸಿರೋ ಕಾರಣಕ್ಕೆ ಇದನ್ನು ತಾನು ಸದಸ್ಯನಲ್ಲದ ಪೀಠ ವಿಚಾರಣೆ ನಡೆಸಲಿ ಎಂದಿದ್ದಾರೆ. ಆ ಕಾರಣ ದೀಪಾವಳಿಯ ನಂತರ ನ್ಯಾ.ಲಲಿತ್ ಅವರು ಇಲ್ಲದ ಪೀಠದಲ್ಲಿ ಈ ಪ್ರಕರಣ ಸಂಬಂಧ ಅರ್ಜಿ ವಿಚಾರಣೆ ನಡೆಯಲಿದೆ.</p>



<p style="font-size:20px">ಇನ್ನೊಂದು ಭ್ರಷ್ಟಾಚಾರ ಪ್ರಕರಣದಲ್ಲಿ ಹಾಲಿ ಸಚಿವ ಎಸ್.ಟಿ.ಸೋಮಶೇಖರ್ ಈ ಹಿಂದೆ ಬಿಡಿಎ ಅಧ್ಯಕ್ಷರಾಗಿದ್ದ ಸಮಯದಲ್ಲಿ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕೂಡ ಆರೋಪಿಯಾಗಿದ್ದಾರೆ.&nbsp;ಈ ಪ್ರಕರಣದಲ್ಲಿ ಯಡಿಯೂರಪ್ಪ ಅವರ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ಹಿಡಿದಿದೆ.</p>



<figure class="wp-block-image size-full"><img decoding="async" width="743" height="413" src="https://peepalmedia.com/wp-content/uploads/2022/10/images-2022-10-14T142748.821.jpeg" alt="" class="wp-image-10642" srcset="https://peepalmedia.com/wp-content/uploads/2022/10/images-2022-10-14T142748.821.jpeg 743w, https://peepalmedia.com/wp-content/uploads/2022/10/images-2022-10-14T142748.821-300x167.jpeg 300w, https://peepalmedia.com/wp-content/uploads/2022/10/images-2022-10-14T142748.821-150x83.jpeg 150w, https://peepalmedia.com/wp-content/uploads/2022/10/images-2022-10-14T142748.821-696x387.jpeg 696w" sizes="(max-width: 743px) 100vw, 743px" /></figure>



<p style="font-size:20px">ಸ್ವತಃ ಜನಪ್ರತಿನಿಧಿಯೂ ಆಗಿರುವ ಯಡಿಯೂರಪ್ಪ ಅವರನ್ನು ವಿಚಾರಣೆ ನಡೆಸಲು ಕಾನೂನಿನ ಅಡಿಯಲ್ಲಿ ತೊಡಕು ಇರುವುದರಿಂದ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ತನಿಖೆಗೆ ರಾಜ್ಯಪಾಲರ ಪೂರ್ವಾನುಮತಿ ಇಲ್ಲದೇ ಮುಂದುವರೆಯುವಂತಿಲ್ಲ ಎಂದು ಯಡಿಯೂರಪ್ಪ ಪರ ವಕೀಲರು ವಾದ ಮಂಡಿಸಿದ್ದರು. ಸಧ್ಯ ಈ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ಹಿಡಿದಿದೆ.</p>



<p style="font-size:20px">ಈ ಪ್ರಕರಣದ ಅಡಿಯಲ್ಲಿ ಕೇವಲ ಯಡಿಯೂರಪ್ಪರ ವಿಚಾರಣೆ ಅಷ್ಟೇ ತಡೆ ಹಿಡಿದಿದ್ದು, ಯಡಿಯೂರಪ್ಪ ಪುತ್ರ ವಿಜಯೇಂದ್ರ ಸೇರಿದಂತೆ ಪ್ರಕರಣದಲ್ಲಿ ಉಲ್ಲೇಖಿತರಾದ ಒಟ್ಟು 9 ಮಂದಿ ಪ್ರತಿವಾದಿಗಳಿಗೆ ನೊಟೀಸ್ ಜಾರಿ ಮಾಡಿರುವ ಸುಪ್ರೀಂಕೋರ್ಟ್ 4 ವಾರಗಳ ಒಳಗೆ ಉತ್ತರಿಸುವಂತೆ ಸೂಚನೆ ನೀಡಿದೆ.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಸಿಎಂ ಬೊಮ್ಮಾಯಿ</title>
		<link>https://peepalmedia.com/congress-muluguttiruva-hadagu/</link>
		
		<dc:creator><![CDATA[Peepal Media]]></dc:creator>
		<pubDate>Wed, 12 Oct 2022 12:34:54 +0000</pubDate>
				<category><![CDATA[ರಾಜ್ಯ]]></category>
		<category><![CDATA[ವಿಜಯನಗರ]]></category>
		<category><![CDATA[anand sing]]></category>
		<category><![CDATA[B S YADIYURAPPA]]></category>
		<category><![CDATA[BASAVARAJ BOMMAYI]]></category>
		<category><![CDATA[bjp]]></category>
		<category><![CDATA[CM]]></category>
		<category><![CDATA[hosapete]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[vijaya nagara]]></category>
		<guid isPermaLink="false">https://peepalmedia.com/?p=10322</guid>

					<description><![CDATA[ಹೊಸಪೇಟೆ: ಕಾಂಗ್ರೆಸ್ ನವರಿಗೆ ರಾಜಕೀಯವಾಗಿ ಭಯವಿದೆ. ಮಾಡಿದುಣ್ಣೋ ಮಹಾರಾಯ ಎನ್ನುವಂತೆ, ನಿಮಗೆ ಅಧಿಕಾರ ಬಂದಾಗ, ಜನರನ್ನು ಮರೆತಿರಿ, ಈಗ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ವಿಜಯನಗರ ಜಿಲ್ಲೆ, ಹೊಸಪೇಟೆಯ ಡಾ. ಪುನಿತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನ ಸಂಕಲ್ಪ ಯಾತ್ರೆ ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೀನದಲಿತರು, ವಿದ್ಯಾರ್ಥಿಗಳು, ಮಹಿಳೆಯರು, ಯುವಕರ ಭವಿಷ್ಯ ಭದ್ರಗೊಳಿಸಲಾಗಿದ್ದು ಅವರಿಗೆ ಯಾವುದೇ ಭಯವಿಲ್ಲ. ಆದರೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದವರಿಗೆ ಭಯ ಇದೆ ಎಂದರು. ಕಾಂಗ್ರೆಸ್ [&#8230;]]]></description>
										<content:encoded><![CDATA[
<p><strong>ಹೊಸಪೇಟೆ:</strong> ಕಾಂಗ್ರೆಸ್ ನವರಿಗೆ ರಾಜಕೀಯವಾಗಿ ಭಯವಿದೆ. ಮಾಡಿದುಣ್ಣೋ ಮಹಾರಾಯ ಎನ್ನುವಂತೆ, ನಿಮಗೆ ಅಧಿಕಾರ ಬಂದಾಗ, ಜನರನ್ನು ಮರೆತಿರಿ, ಈಗ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>



<p>ಇಂದು ವಿಜಯನಗರ ಜಿಲ್ಲೆ, ಹೊಸಪೇಟೆಯ ಡಾ. ಪುನಿತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನ ಸಂಕಲ್ಪ ಯಾತ್ರೆ ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೀನದಲಿತರು, ವಿದ್ಯಾರ್ಥಿಗಳು, ಮಹಿಳೆಯರು, ಯುವಕರ ಭವಿಷ್ಯ ಭದ್ರಗೊಳಿಸಲಾಗಿದ್ದು ಅವರಿಗೆ ಯಾವುದೇ ಭಯವಿಲ್ಲ. ಆದರೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದವರಿಗೆ ಭಯ ಇದೆ ಎಂದರು.</p>



<p><strong>ಕಾಂಗ್ರೆಸ್ ನ ಭ್ರಷ್ಟಾಚಾರ ಬಣ್ಣ ಬಯಲಾಗುತ್ತದೆ:</strong></p>



<p>ನಿಮ್ಮ ಕಾಲದಲ್ಲಿ ನಡೆದ ಭ್ರಷ್ಟಾಚಾರ ಮುಚ್ಚಿ ಹಾಕಲು ಎಸಿಬಿ ರಚನೆ ಮಾಡಿ ಲೋಕಾಯುಕ್ತ ಮುಚ್ಚುವ ಕೆಲಸ ಮಾಡಿದ್ದಿರಿ.ಈಗ ‌ಲೋಕಾಯುಕ್ತ ಬಲಗೊಂಡಿದೆ. ನೀವು ಮಾಡಿರುವ ಎಲ್ಲ ಹಗರಣಗಳು ಬೆಳಕಿಗೆ ಬರುತ್ತಿವೆ. ನಿಮ್ಮ ವಿರುದ್ದದ ಪ್ರಕರಣಗಳ ತನಿಖೆಯಾಗುತ್ತದೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ. ಆಗ ಕಾಂಗ್ರೆಸ್ ನ ಭ್ರಷ್ಟಾಚಾರದ ಬಣ್ಣ ಬಯಲಾಗುತ್ತದೆ ಎಂದರು.</p>



<p><strong>ರಾಜಾಹುಲಿಯ ಘರ್ಜನೆಗೆ ಕಾಂಗ್ರೆಸ್ ತತ್ತರ:</strong></p>



<p>ನಿನ್ನೆ ನಮ್ಮ ರಾಜಾಹುಲಿಯ ಘರ್ಜನೆಗೆ ಕಾಂಗ್ರೆಸ್ ನವರು ತತ್ತರಿಸಿದ್ದಾರೆ‌ ಎಂದರು. ಅದಕ್ಕೆ ಯಡಿಯೂರಪ್ಪ ನವರ ಬಗ್ಗೆ ಒಂದು ಮಾತನಾಡಿದ್ದಾರೆ‌ ಯಡಿಯೂರಪ್ಪ ಅವರಿಗೆ ಅರಳು ಮರಳು ಅಂತ ಹೇಳಿದ್ದಾರೆ. ಆದರೆ ರಾಜಾ ಹುಲಿ ಯಾವುದಕ್ಕೂ ಜಗ್ಗುವುದಿಲ್ಲ ಬಗ್ಗುವುದಿಲ್ಲ. ಅವರನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ ಮಾಡಿದ್ದೀರಿ, ಅವರನ್ನು ಅಧಿಕಾರದಿಂದ ದೂರ ಇಡಲು ಅವರ ಮೇಲೆ ಸುಳ್ಳು ಕೇಸ್ ಹಾಕಿಸಿದಿರಿ. ಅವರು ಮತ್ತೆ ಪುಟಿದೆದ್ದು ಮತ್ತೆ ಸಿಎಂ ಆದರು ಎಂದು ತಿಳಿಸಿದರು.</p>



<p><strong>ಸಿದ್ದರಾಮಯ್ಯ ಅವರಿಗೆ ಅರಳು ಮರಳು:</strong></p>



<p>ಮೋದಿಯವರು ನೆಹರು ಅವರ ಪಾದದ ಧೂಳಿನ ಸಮಾನಾನ ಅಂತ ಕೇಳಿದ್ದಾರೆ‌ ನಾವೂ ಕೇಳಬಹುದು ನೆಹರೂ ಗಾಂಧೀಜಿ ಪಾದದ ಧೂಳಿಗೆ ಸಮಾನಾನಾ . ಕೊರೊನಾ ಸಂದರ್ಭದಲ್ಲಿ ಇಡೀ ದೇಶಕ್ಕೆ ಲಸಿಕೆ ಕೊಡಿಸಿ, ವಿಶ್ವವೇ ಮೆಚ್ಚುವ ಕೆಲಸ ಮಾಡಿದ್ದಾರೆ. ಅನೇಕ ದೇಶಗಳಿಗೆ ಲಸಿಕೆ ನೀಡಿದ್ದಾರೆ‌ ಉಜ್ವಲ ಯೋಜನೆ ಬೇಟಿ ಬಚಾವೋ ಬೇಟಿ ಪಢಾವೋ ಅಂತ ಯೋಜನೆ ಮಾಡಿದರು. ಕಿಸಾನ್ ಸಮ್ಮಾನ ಯೋಜನೆ ಜಾರಿಗೆ ತಂದರು. ಇಡೀ ವಿಶ್ವವೇ ಆರ್ಥಿಕ ಹಿಂಜರಿತ ಕಾಣುತ್ತಿದೆ ಆದರೆ ಭಾರತ ಮಾತ್ರ ಆರ್ಥಿಕವಾಗಿ ಸದೃಢವಾಗಿದೆ. ಸಿದ್ದರಾಮಯ್ಯ ನವರೇ ನಿಮಗೆ ಅರಳು ಮರಳಾಗಿದೆ ಎಂದರು.</p>



<p>ಇದನ್ನೂ ಓದಿ: <a href="https://peepalmedia.com/siddaramaiah-spoke-for-five-minutes-without-naming-names-siddu-challenge-to-bjp-leaders/">ಸಿದ್ದರಾಮಯ್ಯ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ : ಬಿಜೆಪಿ ಮುಖಂಡರಿಗೆ ಸಿದ್ದು ಸವಾಲು</a></p>



<p><strong>ಅಧಿಕಾರಕ್ಕಾಗಿ ದೇಶ ಒಡೆದ ಕಾಂಗ್ರೆಸ್:</strong> </p>



<p>ರಾಹುಲ್ ಗಾಂಧಿಗೆ ಡಿಕೆಶಿ ಸಿದ್ದರಾಮಯ್ಯ ಅವರನ್ನು ಜೋಡಿಸುವುದರಲ್ಲಿ ಸುಸ್ತಾಗಿ ಹೋಗಿದ್ದಾರೆ‌. ಎರಡು ದೇಶದ ಕಲ್ಪನೆ ಮೌಂಟ್ ಬ್ಯಾಟನ್ ಹಾಗೂ ಮಹಮದ್ ಅಲಿ ಜಿನ್ನಾ ಇಟ್ಟರು.‌ ಅವರ ಮಾತಿಗೆ ಒಪ್ಪಿ ಅಧಿಕಾರದ ಆಸೆಗೆ ಗಾಂಧಿಜಿ ಮಾತು ದಿಕ್ಕರಿಸಿ ದೇಶ ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡಿತು. ನಿಮ್ಮ ಅಧಿಕಾರಕ್ಕಾಗಿ ದೇಶವನ್ನು ಒಡೆದು, ಈಗ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದೀರಿ. ಕಲಿಸ್ತಾನಕ್ಕೆ ಬೆಂಬಲ ಕೊಟ್ಟವರು ಇಂದಿರಾಗಾಂಧಿ , ತಮಿಳುನಾಡಿನಲ್ಲಿ ಎಲ್.ಟಿ.ಟಿ.ಇ ಗೆ ಬೆಂಬಲ ಕೊಟ್ಡವರು ಕಾಂಗ್ರೆಸ್ ನವರು, ನಿಮ್ಮ ಸ್ವಾರ್ಥಕ್ಕಾಗಿ ದೇಶದ ಹೃದಯದ ಮೇಲೆ ಗಾಯದ ಬರೆಗಳನ್ನು ಹಾಕಿದಿರಿ ಎಂದರು.</p>



<p>ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಗೋವಿಂದ್ ಕಾರಜೋಳ, ಶ್ರೀರಾಮುಲು, ಹಾಲಪ್ಪ ಆಚಾರ್, ಸಂಸದರಾದ ವೈ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಶಶೀಲ್ ನಮೋಶಿ, ಶಾಸಕರಾದ ರಾಜು ಗೌಡ, ಬಸವರಾಜ ದಡೆಸುಗೂರು, ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿಗಳು ಸಿದ್ದೇಶ್ ಯಾದವ್,ವಿಜಯನಗರ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಮತ್ತಿತರರು ಹಾಜರಿದ್ದರು.</p>



<p></p>



<figure class="wp-block-embed is-type-video is-provider-youtube wp-block-embed-youtube wp-embed-aspect-16-9 wp-has-aspect-ratio"><div class="wp-block-embed__wrapper">
<iframe title="ಶೆಟ್ಟೀಸ್‌ ಸ್ಪೆಷಲ್! ರಕ್ಷಿತ್‌, ರಾಜ್‌, ರಿಷಬ್‌ ಅವರ ಐದು ಬೆಸ್ಟ್‌ ಸಿನಿಮಾಗಳು!" width="696" height="392" src="https://www.youtube.com/embed/9AhplPICZFc?feature=oembed" frameborder="0" allow="accelerometer; autoplay; clipboard-write; encrypted-media; gyroscope; picture-in-picture" allowfullscreen></iframe>
</div></figure>



<p></p>
]]></content:encoded>
					
		
		
			</item>
		<item>
		<title>ಸಿದ್ದರಾಮಯ್ಯ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ : ಬಿಜೆಪಿ ಮುಖಂಡರಿಗೆ ಸಿದ್ದು ಸವಾಲು</title>
		<link>https://peepalmedia.com/siddaramaiah-spoke-for-five-minutes-without-naming-names-siddu-challenge-to-bjp-leaders/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 12 Oct 2022 11:56:45 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[B S YADIYURAPPA]]></category>
		<category><![CDATA[BASAVARAJ BOMMAYI]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[siddaramayya]]></category>
		<guid isPermaLink="false">https://peepalmedia.com/?p=10316</guid>

					<description><![CDATA[ಬೆಂಗಳೂರು: ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ ಮತ್ತು ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ. ಈ ಕುರಿತು ತಮ್ಮ ಟ್ವಿಟ್‌ ಮಾಡಿರುವ ಅವರು, ಬಸವರಾಜ ಬೊಮ್ಮಾಯಿ ಅವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು:</strong> ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ ಮತ್ತು ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ.</p>



<p style="font-size:20px">ಈ ಕುರಿತು ತಮ್ಮ ಟ್ವಿಟ್‌ ಮಾಡಿರುವ ಅವರು, ಬಸವರಾಜ ಬೊಮ್ಮಾಯಿ ಅವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ ಯಡಿಯೂರಪ್ಪ ಅವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ ಎಂದು ಟೀಕಿಸಿದ್ದಾರೆ.</p>



<p style="font-size:20px">ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ ಯಡಿಯೂರಪ್ಪನವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ.</p>



<p style="font-size:20px">ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ, ಬೊಮ್ಮಾಯಿ ಅವರೊಬ್ಬ ‘ಎರಡುವರೆ ಸಾವಿರ ಕೋಟಿ ರೂಪಾಯಿಯ ʼಪೇ ಸಿಎಂʼ ಹೈಕಮಾಂಡ್ ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ ಎಂದಿದ್ದಾರೆ.</p>



<p style="font-size:20px">ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ ಯಡಿಯೂರಪ್ಪ ಅವರೇ, ನಿಮ್ಮ ನರೇಂದ್ರ ಮೋದಿ ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ</p>



<p style="font-size:20px">ಪಾಪ, ಯಡಿಯೂರಪ್ಪನವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.</p>



<p style="font-size:20px">ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ ಬಿಜೆಪಿಯ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಹೀಗಾಘಿ ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ <a href="https://twitter.com/BSYBJP?ref_src=twsrc%5Etfw">@BSYBJP</a> ಮತ್ತು ಹಾಲಿ ಮುಖ್ಯಮಂತ್ರಿ <a href="https://twitter.com/BSBommai?ref_src=twsrc%5Etfw">@BSBommai</a> ಅವರಿಗೆ ನನ್ನ ಎರಡೇ ಎರಡು ಸವಾಲು.. <br>1. ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ. <br>2. ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ. 1/7<a href="https://twitter.com/hashtag/%E0%B2%AC%E0%B2%A1%E0%B2%BE%E0%B2%AF%E0%B2%BF%E0%B2%AC%E0%B3%8A%E0%B2%AE%E0%B3%8D%E0%B2%AE%E0%B2%BE%E0%B2%AF%E0%B2%BF?src=hash&amp;ref_src=twsrc%5Etfw">#ಬಡಾಯಿಬೊಮ್ಮಾಯಿ</a></p>&mdash; Siddaramaiah (@siddaramaiah) <a href="https://twitter.com/siddaramaiah/status/1580142108631240704?ref_src=twsrc%5Etfw">October 12, 2022</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
		<item>
		<title>ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಜನರ ತೆರಿಗೆ ಹಣವನ್ನು ಹಗಲು ದರೋಡೆ ಮಾಡಿದೆ: ಯಡಿಯೂರಪ್ಪ</title>
		<link>https://peepalmedia.com/congress-looted-peoples-tax-money-in-broad-daylight-yeddyurappa/</link>
		
		<dc:creator><![CDATA[Peepal Media]]></dc:creator>
		<pubDate>Tue, 11 Oct 2022 11:36:52 +0000</pubDate>
				<category><![CDATA[ರಾಜ್ಯ]]></category>
		<category><![CDATA[ರಾಯಚೂರು]]></category>
		<category><![CDATA[B S YADIYURAPPA]]></category>
		<category><![CDATA[congrees]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rahulgandhi]]></category>
		<category><![CDATA[rayachuru]]></category>
		<category><![CDATA[SoniaGandhi]]></category>
		<guid isPermaLink="false">https://peepalmedia.com/?p=10087</guid>

					<description><![CDATA[ರಾಯಚೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಪಕ್ಷದ ನಾಯಕರು ಜನರ ತೆರಿಗೆ ಹಣವನ್ನು ಲೂಟಿ ಮಾಡಿ ಹಗಲು ದರೋಡೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ. ರಾಯಚೂರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಆಯೋಜಿಸಿದ್ದ ಜನ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಸರ್ಕಾರದ ಖಜಾನೆಯನ್ನು ಲೂಟಿ ಮಾಡಿ ಹಗಲು ದರೋಡೆಯಲ್ಲಿ ನಿರತರಾಗಿತ್ತು ಎಂದು ಇಂದಿನ ವಿಧಾನ ಸಭೆಯ ಅಧ್ಯಕ್ಷರಾಗಿರುವಂತಹ ರಮೇಶ್‌ ಕುಮಾರ್‌ ಹೇಳಿದ್ದಾರೆ. ಈ ಮಾತಿಗೆ [&#8230;]]]></description>
										<content:encoded><![CDATA[
<p style="font-size:20px"><strong>ರಾಯಚೂರು:</strong> ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಪಕ್ಷದ ನಾಯಕರು ಜನರ ತೆರಿಗೆ ಹಣವನ್ನು ಲೂಟಿ ಮಾಡಿ ಹಗಲು ದರೋಡೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ.</p>



<p style="font-size:20px">ರಾಯಚೂರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಆಯೋಜಿಸಿದ್ದ ಜನ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಸರ್ಕಾರದ ಖಜಾನೆಯನ್ನು ಲೂಟಿ ಮಾಡಿ ಹಗಲು ದರೋಡೆಯಲ್ಲಿ ನಿರತರಾಗಿತ್ತು ಎಂದು ಇಂದಿನ ವಿಧಾನ ಸಭೆಯ ಅಧ್ಯಕ್ಷರಾಗಿರುವಂತಹ ರಮೇಶ್‌ ಕುಮಾರ್‌ ಹೇಳಿದ್ದಾರೆ. ಈ ಮಾತಿಗೆ ಭಾರತ ಐಕ್ಯತಾ ಯಾತ್ರೆ ನಡೆಸುತ್ತಿರುವ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಕೂಡ ವಿರೋಧ ಮಾಡಿಲ್ಲ. ಇದರ ಅರ್ಥ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಮೇಲೆ ಜನರು ಕೊಟ್ಟಂತಹ ತೆರಿಗೆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಉಪಯೋಗಿಸಿಕೊಳ್ಳದೇನೆ ರಾತ್ರಿ, ಹಗಲು ದರೋಡೆಯಲ್ಲಿ ನಿರತರಾಗಿದ್ದರು ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷೀ ಬೇಕಿಲ್ಲ ಎಂದರು.</p>



<p style="font-size:20px">ಮುಂದುವರೆದು ಮಾತನಾಡಿದ ಅವರು, ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದಲ್ಲಿ ಕೂಡ ಕಲ್ಲಿದ್ದಲು ಹಗರಣ, ಕಾಮಲ್‌ವೆಲ್ತ್‌, 2ಜಿ ಹಗರಣ ಸೇರಿದಂತೆ 12 ಲಕ್ಷ ಕೋಟಿ.ರೂ ಅವ್ಯವಹಾರ ನಡೆದಿದೆ ಎಂದು ಯಡಿಯೂರಪ್ಪ ಹೇಳಿದರು.</p>
]]></content:encoded>
					
		
		
			</item>
	</channel>
</rss>
