<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>badami &#8211; Peepal Media</title>
	<atom:link href="https://peepalmedia.com/tag/badami/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 01 Jul 2023 09:06:48 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>badami &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ರಾಜ್ಯದಲ್ಲಿ ಮುಂದುವರೆದ ಅನೈತಿಕ ಪೊಲೀಸ್ ಗಿರಿ : ದೌರ್ಜನ್ಯವೆಸಗಿದವರ ಮೇಲೆ ಸರ್ಕಾರದ ಕ್ರಮವೇನು?</title>
		<link>https://peepalmedia.com/continued-unethical-police-brutality-in-the-state/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 01 Jul 2023 08:55:45 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[badami]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=22975</guid>

					<description><![CDATA[ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಬಹುತೇಕ ಕಡೆಗಳಲ್ಲಿ ವ್ಯಾಪಕವಾಗಿ ಕಂಡುಬರುತ್ತಿದ್ದ ಅನೈತಿಕ ಪೊಲೀಸ್ ಗಿರಿ ಈಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಮುಂದುವರೆದಿದೆ. ಕಳೆದ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸಿದ್ದ ಬಾದಾಮಿಯಲ್ಲೇ ಉತ್ತರ ಪ್ರದೇಶ ಮಾದರಿ ಕ್ರೌರ್ಯ ನಡೆದಿದ್ದು, ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ದೌರ್ಜನ್ಯ ನಡೆಸಲಾಗಿದೆ. ಘಟನೆಯ ವಿವರ : ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಗೋಹತ್ಯೆ ಮಾಡಲು ಬಂದಿರಬಹುದು ಎಂಬ ನೆಪದಲ್ಲಿ ಯುವಕನೊಬ್ಬನನ್ನು ಮರಕ್ಕೆ ಕಟ್ಟಿ ಹಾಕಿ ಸ್ಥಳೀಯ ಸಾರ್ವಜನಿಕರು ಥಳಿಸಿದ್ದಾರೆ. ಹಿಂದುತ್ವದ ಸಂಘಟನೆಗೆ ಸೇರಿರಬಹುದಾದ ಕೆಲವು [&#8230;]]]></description>
										<content:encoded><![CDATA[
<p>ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಬಹುತೇಕ ಕಡೆಗಳಲ್ಲಿ ವ್ಯಾಪಕವಾಗಿ ಕಂಡುಬರುತ್ತಿದ್ದ ಅನೈತಿಕ ಪೊಲೀಸ್ ಗಿರಿ ಈಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಮುಂದುವರೆದಿದೆ. ಕಳೆದ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸಿದ್ದ ಬಾದಾಮಿಯಲ್ಲೇ ಉತ್ತರ ಪ್ರದೇಶ ಮಾದರಿ ಕ್ರೌರ್ಯ ನಡೆದಿದ್ದು, ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ದೌರ್ಜನ್ಯ ನಡೆಸಲಾಗಿದೆ.</p>



<p>ಘಟನೆಯ ವಿವರ : ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಗೋಹತ್ಯೆ ಮಾಡಲು ಬಂದಿರಬಹುದು ಎಂಬ ನೆಪದಲ್ಲಿ ಯುವಕನೊಬ್ಬನನ್ನು ಮರಕ್ಕೆ ಕಟ್ಟಿ ಹಾಕಿ ಸ್ಥಳೀಯ ಸಾರ್ವಜನಿಕರು ಥಳಿಸಿದ್ದಾರೆ. ಹಿಂದುತ್ವದ ಸಂಘಟನೆಗೆ ಸೇರಿರಬಹುದಾದ ಕೆಲವು ಗೂಂಡಾಗಳು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಯುವಕನನ್ನು ಹಿಡಿದು ಆತನನ್ನು ಮೇಲಿಂದ ಮೇಲೆ ಪ್ರಶ್ನಿಸಿ ಇಕ್ಕಟ್ಟಿಗೆ ಸಿಕ್ಕಿಸಿದ್ದಾರೆ.</p>



<p>ಅನಿರೀಕ್ಷಿತ ಬೆಳವಣಿಗೆಯಿಂದ ಗಲಿಬಿಲಿಗೆ ಒಳಗಾದ ಯುವಕ ಏನು ಹೇಳಲೂ ಬಾರದೆ ಉತ್ತರಿಸಲು ತಡಬಡಾಯಿಸಿದ್ದು ವೈರಲ್ ಆಗಿರುವವಿಡಿಯೋದಲ್ಲಿ ಗಮನಿಸಬಹುದು. ಅನುಮಾನಾಸ್ಪದ ಯುವಕನನ್ನು ಕಟ್ಟಿಹಾಕಿರುವ ವಿಡಿಯೋ ವೈರಲ್‌ ಆಗಿದ್ದು, ವಿಜಯವಾಣಿ ಪತ್ರಿಕೆ ಈ ಯುವಕನನ್ನು ಕಟ್ಟಿಹಾಕಿರುವ ಚಿತ್ರವನ್ನು ಪ್ರಕಟಿಸಿದೆ.</p>



<p>ಬಾದಾಮಿಯ ಖಾಜಿ ಎಂಬುವವರ ತೋಟದಲ್ಲಿ ಈ ಘಟನೆ ನಡೆದಿದ್ದು,ಯುವಕನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಮೇಲ್ನೋಟಕ್ಕೆ ಯುವಕ ಮುಸ್ಲಿಂ ಎಂದು ಕಂಡುಬಂದಿದೆ. ಉತ್ತರಪ್ರದೇಶ, ಬಿಹಾರಗಳಲ್ಲಿ ನಡೆಯುವ ಮಾದರಿಯ ದೌರ್ಜನ್ಯ ಇದಾಗಿದ್ದು ಕರ್ನಾಟಕದಲ್ಲಿ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.</p>



<p>ಆ ಯುವಕ ತಪ್ಪು ಮಾಡಿರಲಿ ಅಥವಾ ಮಾಡದೇ ಇರಲಿ, ವಿಚಾರಿಸಲು ಪೊಲೀಸರಿದ್ದಾರೆ, ಕೋರ್ಟ್ ಇದೆ, ಕಾನೂನು ಇದೆ. ಅಂತಹ ಅನುಮಾನ ಏನೇ ಕಂಡುಬಂದರೂ ಆತನನ್ನು ತಕ್ಷಣ ಪೊಲೀಸರಿಗೆ ಒಪ್ಪಿಸುವುದು ಬಿಟ್ಟು, ಕಾನೂನು ಕೈಗೆ ತಗೆದುಕೊಳ್ಳಲು ಇವರು ಯಾರು ಎಂಬ ಬಗ್ಗೆ ಮಾತುಗಳು ಕೇಳಿ ಬಂದಿವೆ.</p>



<p>ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಇಂತದ್ದಕ್ಕೆ ಕಡಿವಾಣ ಹಾಕಬಹುದು ಎಂಬ ನಿರೀಕ್ಷೆ ಹಲವು ಮಂದಿಗೆ ಇತ್ತು. ಆದರೆ ಈ ಅವಧಿಯಲ್ಲೂ ಇದು ಮುಂದುವರೆದಿದ್ದು, ಜನಸಾಮಾನ್ಯರಲ್ಲಿ ಆತಂಕ ಹೆಚ್ಚಿಸಿದೆ. ಸರ್ಕಾರ ಇಂತಹ ಅನೈತಿಕ ಪೊಲೀಸ್ ಗಿರಿ ನಡೆಸುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕ ವಲಯದಿಂದ ವಲಯದಿಂದ ಕೇಳಿಬರುತ್ತಿರುವ ಆಗ್ರಹವಾಗಿದೆ.</p>



<figure class="wp-block-embed is-type-video is-provider-youtube wp-block-embed-youtube wp-embed-aspect-16-9 wp-has-aspect-ratio"><div class="wp-block-embed__wrapper">
<iframe title="ಬಾದಾಮಿಯಲ್ಲಿ ಯುಪಿ ಮಾದರಿ ಕ್ರೌರ್ಯ, ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ದೌರ್ಜನ್ಯ" width="696" height="392" src="https://www.youtube.com/embed/UcIf8FTOlBE?feature=oembed" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" allowfullscreen></iframe>
</div></figure>
]]></content:encoded>
					
		
		
			</item>
		<item>
		<title>ರಾಜ್ಯದ ಐದು ಜಿಲ್ಲೆಗಳಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣ: ಸಚಿವ ಮುರುಗೇಶ್‌ ನಿರಾಣಿ</title>
		<link>https://peepalmedia.com/construction-of-new-airports-in-five-districts-of-the-state-minister-murugesh-nirani/</link>
		
		<dc:creator><![CDATA[Peepal Media]]></dc:creator>
		<pubDate>Mon, 26 Sep 2022 10:35:08 +0000</pubDate>
				<category><![CDATA[ರಾಜ್ಯ]]></category>
		<category><![CDATA[badami]]></category>
		<category><![CDATA[chikkamagaluru]]></category>
		<category><![CDATA[davanagere]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[koppala]]></category>
		<category><![CDATA[Minister Murugesh Nirani]]></category>
		<category><![CDATA[new airports]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rayachuru]]></category>
		<guid isPermaLink="false">https://peepalmedia.com/?p=7267</guid>

					<description><![CDATA[ಹುಬ್ಬಳ್ಳಿ: ರಾಜ್ಯದ ದಾವಣಗೆರೆ, ಬಾದಾಮಿ, ರಾಯಚೂರು, ಕೊಪ್ಪಳ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಹೇಳಿದರು. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ 94ನೇ ಸಂಸ್ಥಾಪನಾ ದಿನ ಹಾಗೂ ‘ವಾಣಿಜ್ಯ ರತ್ನʼಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ಸಾಕಷ್ಟು ಉದ್ಯಮಿಗಳು ಒಲವು ತೋರಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಎಲ್ಲ ಕಡೆಯೂ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಅದಕ್ಕೆ ಅನುಕೂಲವಾಗುವಂತೆ ರಾಜ್ಯದ ಈ ಐದು ಜಿಲ್ಲೆಗಳಲ್ಲಿ ಹೊಸ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗುವುದು ಎಂದು [&#8230;]]]></description>
										<content:encoded><![CDATA[
<p style="font-size:20px"><strong>ಹುಬ್ಬಳ್ಳಿ</strong>: ರಾಜ್ಯದ ದಾವಣಗೆರೆ, ಬಾದಾಮಿ, ರಾಯಚೂರು, ಕೊಪ್ಪಳ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಹೇಳಿದರು.</p>



<p style="font-size:20px">ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ 94ನೇ ಸಂಸ್ಥಾಪನಾ ದಿನ ಹಾಗೂ ‘ವಾಣಿಜ್ಯ ರತ್ನʼಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ಸಾಕಷ್ಟು ಉದ್ಯಮಿಗಳು ಒಲವು ತೋರಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಎಲ್ಲ ಕಡೆಯೂ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಅದಕ್ಕೆ ಅನುಕೂಲವಾಗುವಂತೆ ರಾಜ್ಯದ ಈ ಐದು ಜಿಲ್ಲೆಗಳಲ್ಲಿ ಹೊಸ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗುವುದು ಎಂದು ಮುರುಗೇಶ್‌ ನಿರಾಣಿ ಹೇಳಿದರು.</p>



<p style="font-size:20px"> ಈ ಹಿನ್ನಲೆ ರಾಜ್ಯವು ಅಭಿವೃದ್ಧಿಯತ್ತ ಸಾಗುತ್ತಿದ್ದು, 18 ತಿಂಗಳುಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ, ಹಾಗೆಯೇ ತುಮಕೂರು ಮತ್ತು ಶಿರಾ ನಡುವೆ ಹಾಗೂ ಬೆಳಗಾವಿಯ ಕಿತ್ತೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು.</p>
]]></content:encoded>
					
		
		
			</item>
	</channel>
</rss>
