<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>bail &#8211; Peepal Media</title>
	<atom:link href="https://peepalmedia.com/tag/bail/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 18 Nov 2022 07:33:57 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>bail &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಭೀಮಾ ಕೋರೆಗಾಂವ್‌ ಪ್ರಕರಣ: ಹಿರಿಯ ಚಿಂತಕ ಆನಂದ್‌ ತೇಲ್ತುಂಬ್ಡೆಯವರಿಗೆ ಜಾಮೀನು</title>
		<link>https://peepalmedia.com/bombay-high-court-graants-bail-to-activist-anand-teltumbde/</link>
		
		<dc:creator><![CDATA[Peepal Media]]></dc:creator>
		<pubDate>Fri, 18 Nov 2022 07:28:19 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[anand teltumbde]]></category>
		<category><![CDATA[bail]]></category>
		<category><![CDATA[bheema koregaon]]></category>
		<category><![CDATA[Bombay High Court]]></category>
		<category><![CDATA[elgar parishad]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=15803</guid>

					<description><![CDATA[2018ರ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಆರೋಪಿತ ಪಾತ್ರಕ್ಕಾಗಿ 2020ರಿಂದ ತಲೋಜಾ ಕೇಂದ್ರ ಕಾರಾಗೃಹದಲ್ಲಿ ಪ್ರಸ್ತುತ ಬಂಧಿತರಾಗಿರುವ ದಲಿತ ಹಕ್ಕುಗಳ ಹೋರಾಟಗಾರ ಮತ್ತು ವಿದ್ವಾಂಸ ಆನಂದ್ ತೇಲ್ತುಂಬ್ಡೆ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ಮಿಲಿಂದ್ ಜಾಧವ್ ಅವರ ಪೀಠದಿಂದ ಅರ್ಜಿಯ ವಿವರವಾದ ವಿಚಾರಣೆಯ ನಂತರ ಇಂದು ತೀರ್ಪು ಪ್ರಕಟಣೆ ಈ ಹಿಂದೆ NIA ನ್ಯಾಯಲವು ತೇಲ್ತುಂಬ್ಡೆ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) [&#8230;]]]></description>
										<content:encoded><![CDATA[
<p>2018ರ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಆರೋಪಿತ ಪಾತ್ರಕ್ಕಾಗಿ 2020ರಿಂದ ತಲೋಜಾ ಕೇಂದ್ರ ಕಾರಾಗೃಹದಲ್ಲಿ ಪ್ರಸ್ತುತ ಬಂಧಿತರಾಗಿರುವ ದಲಿತ ಹಕ್ಕುಗಳ ಹೋರಾಟಗಾರ ಮತ್ತು ವಿದ್ವಾಂಸ ಆನಂದ್ ತೇಲ್ತುಂಬ್ಡೆ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.</p>



<p>ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ಮಿಲಿಂದ್ ಜಾಧವ್ ಅವರ ಪೀಠದಿಂದ ಅರ್ಜಿಯ ವಿವರವಾದ ವಿಚಾರಣೆಯ ನಂತರ ಇಂದು ತೀರ್ಪು ಪ್ರಕಟಣೆ</p>



<p>ಈ ಹಿಂದೆ NIA ನ್ಯಾಯಲವು ತೇಲ್ತುಂಬ್ಡೆ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಆಧಾರದ ಮೇಲೆ ಅವರಿಗೆ ಜಾಮೀನು ನಿರಾಕರಿಸಿತ್ತು. ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ನೀಡಿದ್ದ ಆದೇಶದ ವಿರುದ್ಧ ಆನಂದ್‌ ತೇಲ್ತುಂಬೆ ಕಳೆದ ವರ್ಷ ಹೈಕೋರ್ಟ್‌ ಮೊರೆ ಹೋಗಿದ್ದರು.</p>



<p>ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ಮಿಲಿಂದ್ ಜಾಧವ್ ಅವರ ಪೀಠವು ಅರ್ಜಿಯನ್ನು ವ್ಯಾಪಕವಾಗಿ ಆಲಿಸಿ ಕಳೆದ ವಾರ ತನ್ನ ಆದೇಶವನ್ನು ಕಾಯ್ದಿರಿಸಿದ ನಂತರ ಇಂದು ತೀರ್ಪು ಪ್ರಕಟಿಸಿತು.</p>



<p>ಸೆಕ್ಷನ್ 38 ಮತ್ತು 39ರ ಅಡಿಯಲ್ಲಿ (ಭಯೋತ್ಪಾದಕ ಸಂಘಟನೆಯಲ್ಲಿ ಸದಸ್ಯತ್ವಕ್ಕೆ ಸಂಬಂಧಿಸಿದ) ಅಪರಾಧಗಳನ್ನು ಮಾತ್ರ ತೇಲ್ತುಂಬ್ಡೆ ವಿರುದ್ಧ ಮಾಡಲಾಗಿದೆ ಎಂದು ಪೀಠ ಹೇಳಿದೆ. ಮತ್ತು ಅಂತಹ ಅಪರಾಧಗಳಲ್ಲಿ ಗರಿಷ್ಠ ಶಿಕ್ಷೆ 10 ವರ್ಷಗಳ ಜೈಲು ಶಿಕ್ಷೆಯಾಗಿತ್ತು ಮತ್ತು ತೇಲ್ತುಂಬ್ಡೆ ಈಗಾಗಲೇ 2 ವರ್ಷಗಳಿಗಿಂತ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆದೇಶಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು NIA ಸಂಸ್ಥೆಗೆ ಅನುವು ಮಾಡಿಕೊಡುವ ಸಲುವಾಗಿ ಮಾನ್ಯ ನ್ಯಾಯಾಲಯವು ತನ್ನ ಆದೇಶಕ್ಕೆ ಒಂದು ವಾರ ತಡೆ ನೀಡಿದೆ ಎಂದು ಬಾರ್‌ ಎಂಡ್‌ ಬೆಂಚ್‌ ಎನ್ನುವ ಕಾನೂನು ಸುದ್ದಿಗಳ ವೆಬ್ಸೈಟ್‌ ವರದಿ ಮಾಡಿದೆ.</p>



<p>2017ರ ಡಿಸೆಂಬರ್ 31ರಂದು ನಗರದಲ್ಲಿ ಎಲ್ಗರ್ ಪರಿಷದ್ ಸಮಾವೇಶ ನಡೆದ ಒಂದು ದಿನದ ನಂತರ ಪುಣೆ ಬಳಿಯ ಕೋರೆಗಾಂವ್ ಭೀಮಾ ಗ್ರಾಮದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಆನಂದ್ ತೇಲ್ತುಂಬ್ಡೆ ಮತ್ತು ಇತರ ಕಾರ್ಯಕರ್ತರ ಮೇಲೆ ಪುಣೆ ಪೊಲೀಸರು ಆರಂಭದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಮಾವೇಶವು, ಪಶ್ಚಿಮ ಮಹಾರಾಷ್ಟ್ರ ನಗರದ ಹೊರವಲಯದಲ್ಲಿರುವ ಭೀಮಾ-ಕೋರೆಗಾಂವ್ ಯುದ್ಧ ಸ್ಮಾರಕದ ಬಳಿ ಮರುದಿನ ಹಿಂಸಾಚಾರವನ್ನು ಪ್ರಚೋದಿಸಿತು ಎಂದು ಪೊಲೀಸರು ಹೇಳಿದ್ದರು. ಮಾವೋವಾದಿ ನಂಟು ಹೊಂದಿರುವವರು ಈ ಸಮಾವೇಶವನ್ನು ಆಯೋಜಿಸಿದ್ದರು ಎಂದು ಪೊಲೀಸರು ಪ್ರತಿಪಾದಿಸಿ, ನಂತರ ಈ ಪ್ರಕರಣದ ತನಿಖೆಯನ್ನು NIA ವಹಿಸಿಕೊಂಡಿತು. ರೋನಾ ವಿಲ್ಸನ್, ಆನಂದ್ ತೇಲ್ತುಂಬ್ಡೆ, ವೆರ್ನಾನ್ ಗೊನ್ಸಾಲ್ವಿಸ್, ವರವರ ರಾವ್, ಸುಧಾ ಭಾರದ್ವಾಜ್, ಹನಿ ಬಾಬು ಮತ್ತು ಶೋಮಾ ಸೇನ್ ಈ ಪ್ರಕರಣದ ಏಳು ಆರೋಪಿಗಳಾಗಿದ್ದರು. ಮತ್ತು ಈಗ ಅವರಲ್ಲಿ ಮೂವರಿಗೆ ಜಾಮೀನು ದೊರೆತಂತಾಗಿದೆ.</p>



<p>ಈ ನಡುವೆ ವಾಷಿಂಗ್ಟನ್ ಪೋಸ್ಟ್‌ ಪತ್ರಿಕೆಯ ವರದಿಯು ʼಆರೋಪಿಗಳ ಲ್ಯಾಪ್‌ಟಾಪ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಕಂಡುಬಂದ ದೋಷಾರೋಪಣೆಯ ದಾಖಲೆಗಳನ್ನು ಕಳ್ಳ ಮಾರ್ಗದಲ್ಲಿ ಇರಿಸಲಾಗಿತ್ತು,ʼ ಎಂದು ವರದಿ ಮಾಡಿತ್ತು. ಇದರ ನಂತರ NIA ಏಳು ಆರೋಪಿಗಳ ಫೋನುಗಳನ್ನು ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಫೆಬ್ರವರಿ 2022ರಲ್ಲಿ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಗೆ ಸಲ್ಲಿಸಲು ಅನುಮತಿ ನೀಡಿತು.</p>



<p>ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಪತ್ರಕರ್ತರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ದನಿಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆಯೆಂದು ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಕೂಗು ಎದ್ದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಹಾಗೂ ನಿನ್ನೆ RSS ಜಂಟಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ &#8220;ಸಂಘದ ಅಭಿಪ್ರಾಯಗಳನ್ನು ಜನರು ಒಪ್ಪಿಕೊಂಡಿದ್ದಾರೆ ಮತ್ತು ಸ್ವೀಕರಿಸಿದ್ದರೆ, ಆದರೆ ಮಾವೋವಾದಿಗಳು, ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು, ಇಸ್ಲಾಮಿಸ್ಟ್‌ಗಳು ಮತ್ತು ಜಾಗತಿಕ ಬಂಡವಾಳಶಾಹಿಗಳು ಹಿಂದುತ್ವ ಮತ್ತು ಭಾರತದ ವಿರುದ್ಧ ತಮ್ಮ ಅಭಿಪ್ರಾಯಗಳನ್ನು ಮುಖ್ಯವಾಹಿನಿಯ ಮೇಲೆ ಹೇರಲು ಒಂದು ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ. ಅಂತಹ ಸಂಕಥನವನ್ನು ಎದುರಿಸಿ ನಿಲ್ಲುವುದು ಮುಖ್ಯ.&#8221; ಎಂದು ಹೇಳಿದ್ದನ್ನು ಸಹ ಇಲ್ಲಿ ಸ್ಮರಿಸಬಹುದು.</p>



<p></p>
]]></content:encoded>
					
		
		
			</item>
		<item>
		<title>200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಜಾಮೀನು</title>
		<link>https://peepalmedia.com/200-crore-money-laundering-case-actress-jacqueline-fernandez-granted-bail/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 15 Nov 2022 12:24:46 +0000</pubDate>
				<category><![CDATA[ದೇಶ]]></category>
		<category><![CDATA[bail]]></category>
		<category><![CDATA[Delhi court]]></category>
		<category><![CDATA[india]]></category>
		<category><![CDATA[Jacqueline Fernandez]]></category>
		<category><![CDATA[money laundering case]]></category>
		<category><![CDATA[New Delhi]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Sukesh Chandrasekhar]]></category>
		<guid isPermaLink="false">https://peepalmedia.com/?p=15620</guid>

					<description><![CDATA[ಹೊಸದಿಲ್ಲಿ: ಸುಕೇಶ್‌ ಚಂದ್ರಶೇಖರ್‌ ಅವರ 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್‌ ಫರ್ನಾಂಡೀಸ್‌ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಪಟಿಯಾಲ ಹೌಸ್ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಜಾಮೀನು ಮಂಜೂರು ಮಾಡಿದರು. ಆದರೆ ಪ್ರಕರಣದ ಹಿನ್ನಲೆಯಲ್ಲಿ, ಈ ಹಿಂದೆ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ತನಿಖೆ ಈಗಾಗಲೇ ಪೂರ್ಣಗೊಂಡಿರುವುದರಿಂದ ಮತ್ತು ಚಾರ್ಜ್ ಶೀಟ್ ಸಲ್ಲಿಸಿರುವುದರಿಂದ ತನ್ನ ಬಂಧನದ ಅಗತ್ಯವಿಲ್ಲ ಎಂಬ [&#8230;]]]></description>
										<content:encoded><![CDATA[
<p><strong>ಹೊಸದಿಲ್ಲಿ:</strong> ಸುಕೇಶ್‌ ಚಂದ್ರಶೇಖರ್‌ ಅವರ 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್‌ ಫರ್ನಾಂಡೀಸ್‌ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.</p>



<p>ಪಟಿಯಾಲ ಹೌಸ್ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್ ಅವರು ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಜಾಮೀನು ಮಂಜೂರು ಮಾಡಿದರು. ಆದರೆ ಪ್ರಕರಣದ ಹಿನ್ನಲೆಯಲ್ಲಿ, ಈ ಹಿಂದೆ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿತ್ತು.</p>



<p>ತನಿಖೆ ಈಗಾಗಲೇ ಪೂರ್ಣಗೊಂಡಿರುವುದರಿಂದ ಮತ್ತು ಚಾರ್ಜ್ ಶೀಟ್ ಸಲ್ಲಿಸಿರುವುದರಿಂದ ತನ್ನ ಬಂಧನದ ಅಗತ್ಯವಿಲ್ಲ ಎಂಬ ಆಧಾರದ ಮೇಲೆ &nbsp;ಫರ್ನಾಂಡಿಸ್ ಜಾಮೀನು ಕೋರಿದ್ದರು.</p>



<p>ಈ ಕಾರಣ ಆಗಸ್ಟ್ 31 ರಂದು ಜಾರಿ ನಿರ್ದೇಶನಾಲಯವು ಸಲ್ಲಿಸಿದ ಪೂರಕ ಚಾರ್ಜ್ ಶೀಟ್ ಅನ್ನು ನ್ಯಾಯಾಲಯವು ಸ್ವೀಕರಿಸಿತ್ತು ಮತ್ತು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಫರ್ನಾಂಡಿಸ್ ಅವರಿಗೆ ಸೂಚಿಸಿತ್ತು.</p>



<p>ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಹಲವಾರು ಬಾರಿ ಸಮನ್ಸ್ ಪಡೆದ ಫರ್ನಾಂಡಿಸ್ ಅವರನ್ನು ಪೂರಕ ಚಾರ್ಜ್ ಶೀಟ್ ನಲ್ಲಿ ಮೊದಲ ಬಾರಿಗೆ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಏಜೆನ್ಸಿಯ ಹಿಂದಿನ ಚಾರ್ಜ್ ಶೀಟ್ ಮತ್ತು ಪೂರಕ ಚಾರ್ಜ್ ಶೀಟ್ ನಲ್ಲಿ ಆಕೆಯನ್ನು ಆರೋಪಿ ಎಂದು ಉಲ್ಲೇಖಿಸಿಲ್ಲ.</p>



<p>ಖ್ಯಾತನಾಮರು ಮತ್ತು ಉದ್ಯಮಿಗಳಿಂದ ಕೋಟಿಗಟ್ಟಲೆ ಹಣವನ್ನು ಸುಲಿಗೆ ಮಾಡಿದ ಸುಕೇಶ್ ಚಂದ್ರಶೇಖರ್ ಅವರಿಂದ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ನಟಿ ಮೇಲಿದ್ದ ಕಾರಣ, ಈ ಹಿಂದೆ, ನಟಿಗೆ ಜಾಮೀನು ಸಿಗುವುದರ ವಿರುದ್ಧ ಜಾರಿ ನಿರ್ದೇಶನಾಲಯದ ಪ್ರಮುಖ ವಾದಗಳಿಂದಾಗಿ ಫರ್ನಾಂಡಿಸ್ ದೇಶದಿಂದ ಪಲಾಯನ ಮಾಡಲು ಪ್ರಯತ್ನಿಸಿದ್ದರು. ನಂತರ ಆರ್ಥಿಕ ಅಪರಾಧಗಳ ಬಗ್ಗೆ ತನಿಖೆ ನಡೆಸುತ್ತಿರುವ ಏಜೆನ್ಸಿ, ನಟಿ ದೇಶವನ್ನು ತೊರೆಯುವುದನ್ನು ತಡೆಯಲು ವಿಮಾನ ನಿಲ್ದಾಣಗಳಲ್ಲಿ ಈ ಹಿಂದೆ ಲುಕ್ಔಟ್ ಸುತ್ತೋಲೆ (ಎಲ್ಒಸಿ) ಎಂಬ ಎಚ್ಚರಿಕೆಯನ್ನು ನೀಡಿತ್ತು.</p>
]]></content:encoded>
					
		
		
			</item>
		<item>
		<title>ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ದೇಶಮುಖ್‌ಗೆ ಜಾಮೀನು ಮಂಜೂರು</title>
		<link>https://peepalmedia.com/money-laundering-case-anil-deshmukh-granted-bail/</link>
		
		<dc:creator><![CDATA[Peepal Media]]></dc:creator>
		<pubDate>Tue, 04 Oct 2022 11:28:35 +0000</pubDate>
				<category><![CDATA[Uncategorized]]></category>
		<category><![CDATA[Anil Deshmukh]]></category>
		<category><![CDATA[bail]]></category>
		<category><![CDATA[Bombay High Court]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[money laundering case]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=8952</guid>

					<description><![CDATA[ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅನಿಲ್ ದೇಶಮುಖ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನು ಮಂಜೂರಾಗಿದ್ದು, 1 ಲಕ್ಷದ ಶ್ಯೂರಿಟಿ ಮೊತ್ತದ ಮೇಲೆ ಜಾಮೀನು ನೀಡಲಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣದಲ್ಲಿ ಜಾಮೀನು ಪಡೆದ ನಂತರವೂ ಅನಿಲ್ ದೇಶಮುಖ್ ಅವರ ವಿರುದ್ಧ ದಾಖಲಾಗಿರುವ ಸಿಬಿಐ ಪ್ರಕರಣದಿಂದಾಗಿ ಅವರು ಬಂಧನದಲ್ಲಿಯೇ ಇರಬೇಕಾಗುತ್ತದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.]]></description>
										<content:encoded><![CDATA[
<p style="font-size:20px"><strong>ಮುಂಬೈ:</strong> ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.</p>



<p style="font-size:20px">ಅನಿಲ್ ದೇಶಮುಖ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ್ದ ಪ್ರಕರಣದಲ್ಲಿ ಜಾಮೀನು ಮಂಜೂರಾಗಿದ್ದು, 1 ಲಕ್ಷದ ಶ್ಯೂರಿಟಿ ಮೊತ್ತದ ಮೇಲೆ ಜಾಮೀನು ನೀಡಲಾಗಿದೆ.</p>



<p style="font-size:20px">ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣದಲ್ಲಿ ಜಾಮೀನು ಪಡೆದ ನಂತರವೂ ಅನಿಲ್ ದೇಶಮುಖ್ ಅವರ ವಿರುದ್ಧ ದಾಖಲಾಗಿರುವ ಸಿಬಿಐ ಪ್ರಕರಣದಿಂದಾಗಿ ಅವರು ಬಂಧನದಲ್ಲಿಯೇ ಇರಬೇಕಾಗುತ್ತದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.</p>
]]></content:encoded>
					
		
		
			</item>
		<item>
		<title>ಬಿಜೆಪಿ ಪಕ್ಷದವರು ಜಾಮೀನಿನ ಮೇಲೆ ಹೊರಗಿದ್ದಾರೆ: ಬೊಮ್ಮಾಯಿಗೆ ಡಿ.ಕೆ.ಶಿ ತಿರುಗೇಟು</title>
		<link>https://peepalmedia.com/bjp-party-is-out-on-bail-dk-shis-revenge-for-bomma/</link>
		
		<dc:creator><![CDATA[Peepal Media]]></dc:creator>
		<pubDate>Sun, 02 Oct 2022 08:24:42 +0000</pubDate>
				<category><![CDATA[ಮೈಸೂರು]]></category>
		<category><![CDATA[ರಾಜ್ಯ]]></category>
		<category><![CDATA[bail]]></category>
		<category><![CDATA[bharath jodo yathre]]></category>
		<category><![CDATA[congrees]]></category>
		<category><![CDATA[D K shivakumar]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mysore]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rahulgandhi]]></category>
		<category><![CDATA[SoniaGandhi]]></category>
		<guid isPermaLink="false">https://peepalmedia.com/?p=8550</guid>

					<description><![CDATA[ಮೈಸೂರು: ಕಾಂಗ್ರೆಸ್‌ ಪಕ್ಷದವರು ಜಾಮೀನಿನ ಮೇಲೆ ಹೊರಗಿದ್ದಾರೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ತಿರುಗೇಟು ನೀಡಿದ್ದಾರೆ. ಈ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಯಿಸಿದ ಅವರು, ಹೌದು, ನಾನು ಜಾಮೀನಿನ ಮೇಲೆ ಇದ್ದೇನೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಜಾಮೀನಿನ ಮೇಲೆ ಇದ್ದಾರೆ. ಬಿಜೆಪಿಯ ಹತ್ತಾರು ಮಂದಿ ಕೂಡ ಜಾಮೀನಿನ ಮೇಲೆ ಇದ್ದಾರೆ. ಅಷ್ಟೇಲ್ಲಾ ಏಕೆ ಯಡಿಯೂರಪ್ಪ ವಿರುದ್ಧ ಕೇಸ್ ಇಲ್ಲವೇ? ಎಂದು ಪ್ರಶ್ನಿಸಿದರು. ನನ್ನ [&#8230;]]]></description>
										<content:encoded><![CDATA[
<p style="font-size:20px"><strong>ಮೈಸೂರು:</strong> ಕಾಂಗ್ರೆಸ್‌ ಪಕ್ಷದವರು ಜಾಮೀನಿನ ಮೇಲೆ ಹೊರಗಿದ್ದಾರೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ತಿರುಗೇಟು ನೀಡಿದ್ದಾರೆ.</p>



<p style="font-size:20px">ಈ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಯಿಸಿದ ಅವರು, ಹೌದು, ನಾನು ಜಾಮೀನಿನ ಮೇಲೆ ಇದ್ದೇನೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಜಾಮೀನಿನ ಮೇಲೆ ಇದ್ದಾರೆ. ಬಿಜೆಪಿಯ ಹತ್ತಾರು ಮಂದಿ ಕೂಡ ಜಾಮೀನಿನ ಮೇಲೆ ಇದ್ದಾರೆ. ಅಷ್ಟೇಲ್ಲಾ ಏಕೆ ಯಡಿಯೂರಪ್ಪ ವಿರುದ್ಧ ಕೇಸ್ ಇಲ್ಲವೇ? ಎಂದು ಪ್ರಶ್ನಿಸಿದರು.</p>



<p style="font-size:20px">ನನ್ನ ವಿರುದ್ಧ ಬೊಮ್ಮಾಯಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ನನ್ನನ್ನು ಪರಪ್ಪನ ಅಗ್ರಹಾರಕ್ಕೆ (ಕೇಂದ್ರ ಕಾರಾಗೃಹ) ಕಳುಹಿಸಲಿ, ನಾನು ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳುತ್ತೇನೆ ಎಂದು ಡಿ.ಕೆ.ಶಿ ಹೇಳಿದರು.</p>
]]></content:encoded>
					
		
		
			</item>
		<item>
		<title>ಪತ್ರಕರ್ತ ಸಿದ್ದೀಕ್ ಕಪ್ಪನ್ ಗೆ ಜಾಮೀನು</title>
		<link>https://peepalmedia.com/siddique-kappan-gets-bail/</link>
		
		<dc:creator><![CDATA[Peepal Media]]></dc:creator>
		<pubDate>Fri, 09 Sep 2022 08:48:26 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[bail]]></category>
		<category><![CDATA[india]]></category>
		<category><![CDATA[kerala]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Siddique Kappan]]></category>
		<category><![CDATA[Supreme Court]]></category>
		<category><![CDATA[Unlawful Activities Prevention Act]]></category>
		<guid isPermaLink="false">https://peepalmedia.com/?p=4442</guid>

					<description><![CDATA[ನವದೆಹಲಿ: ಹತ್ರಾಸ್ ನಲ್ಲಿ ನಡೆದ ಹತ್ತೊಂಬತ್ತು ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದ ವರದಿಗಾಗಿ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. ಕಳೆದ ಎರಡು ವರ್ಷಗಳಿಂದ ಪೊಲೀಸ್ ಬಂಧನದಲ್ಲಿ ಇದ್ದ ಎಸ್ ಕಪ್ಪನ್ ಅವರಿಗೆ ಸುಪ್ರೀಂ ಕೋರ್ಟ್ ಬೇಲ್ ನೀಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರು ಸಿದ್ದೀಕ್ ಅವರಿಗೆ ಮುಂದಿನ ಮೂರು ವಾರಗಳ [&#8230;]]]></description>
										<content:encoded><![CDATA[
<pre class="wp-block-preformatted has-medium-font-size"><strong>ನವದೆಹಲಿ</strong>: ಹತ್ರಾಸ್ ನಲ್ಲಿ ನಡೆದ ಹತ್ತೊಂಬತ್ತು ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದ ವರದಿಗಾಗಿ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು.

ಕಳೆದ ಎರಡು ವರ್ಷಗಳಿಂದ ಪೊಲೀಸ್ ಬಂಧನದಲ್ಲಿ ಇದ್ದ ಎಸ್ ಕಪ್ಪನ್ ಅವರಿಗೆ ಸುಪ್ರೀಂ ಕೋರ್ಟ್ ಬೇಲ್ ನೀಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರು ಸಿದ್ದೀಕ್ ಅವರಿಗೆ ಮುಂದಿನ ಮೂರು ವಾರಗಳ ಕಾಲ ದೆಹಲಿ ಪೊಲೀಸರಿಗೆ, ಆ ನಂತರ ಕೇರಳ ಪೊಲೀಸರಿಗೆ ವರದಿ ಮಾಡಲು ಆದೇಶ ನೀಡಿದ್ದಾರೆ.

ಸಪ್ಟೆಂಬರ್ 14, 2020 ರಂದು ಹತ್ತೊಂಬತ್ತು ವರ್ಷದ ದಲಿತ ಬಾಲಕಿಯ ಮೇಲೆ ನಾಲ್ಕು ಮಂದಿಯಿಂದ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಎರಡು ವಾರಗಳ ನಂತರ ಬಾಲಕಿ ಸಾವನ್ನಪ್ಪಿ, ಹೆಣವನ್ನು ಕುಟುಂಬದ ಅನುಮತಿ ಇಲ್ಲದೆ ಬಲವಂತವಾಗಿ ಪೊಲೀಸರು ದಹನ ಮಾಡಿದ್ದರು. ಪ್ರಕರಣದಲ್ಲಿ ಸರ್ಕಾರದ ಪ್ರಭಾವವನ್ನು ವಿರೋಧಿಸಿ ಆದಿತ್ಯನಾಥ್ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆದವು.

ಈ ಪ್ರಕರಣವನ್ನು ವರದಿ ಮಾಡಲು ಉತ್ತರ ಪ್ರದೇಶಕ್ಕೆ ಹೋಗಿದ್ದ ಮಲಯಾಳಂ ಸುದ್ದಿ ಮಾಧ್ಯಮ ಅಳಿಮುಖಂನ ವರದಿಗಾರ ಸಿದ್ದೀಕ್ ಕಪ್ಪನ್ ಅವರನ್ನು ಯುಎಪಿಎ ಕಾಯ್ದೆಯಡಿ ಎರಡು ವರ್ಷಗಳ ವರೆಗೆ ಬಂಧಿಸಿಡಲಾಗಿತ್ತು.</pre>
]]></content:encoded>
					
		
		
			</item>
	</channel>
</rss>
