<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>bajarang punia &#8211; Peepal Media</title>
	<atom:link href="https://peepalmedia.com/tag/bajarang-punia/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 27 Dec 2023 03:05:36 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>bajarang punia &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>&#8220;ಪ್ರಧಾನಿಗಳೇ.. ನಾವು ದೇಶದ್ರೋಹಿಗಳೇ?&#8221; : ವಿನೇಶ್ ಪೋಗಟ್ ಪ್ರಶ್ನೆ</title>
		<link>https://peepalmedia.com/mr-prime-ministers-are-we-traitors/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 27 Dec 2023 03:03:41 +0000</pubDate>
				<category><![CDATA[ರಾಜಕೀಯ]]></category>
		<category><![CDATA[athletes]]></category>
		<category><![CDATA[bajarang punia]]></category>
		<category><![CDATA[india]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Sakshi Malik]]></category>
		<category><![CDATA[state politics]]></category>
		<category><![CDATA[Vinesh pogat]]></category>
		<guid isPermaLink="false">https://peepalmedia.com/?p=34097</guid>

					<description><![CDATA[ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ತಾವು ಪಡೆದಿರುವ ರಾಜ್ಯ ಗೌರವಗಳಾದ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಬಹಿರಂಗ ಪತ್ರಿಕಾಗೋಷ್ಠಿಯಲ್ಲಿ ತನ್ನ ವೃತ್ತಿಪರ ಜೀವನದಿಂದ ನಿವೃತ್ತಿ ಆಗುವುದಾಗಿ ಘೋಷಿಸಿದ್ದರು. ಪತ್ರಿಕಾಗೋಷ್ಠಿಯಲ್ಲಿ ಭಾವನಾತ್ಮಕವಾಗಿ ತನ್ನ ನಿರ್ಧಾರ ಪ್ರಕಟಿಸಿದ ಕೆಲವೇ ದಿನಗಳಲ್ಲಿ ನಂತರ ಬಜರಂಗ್ ಪುನಿಯಾ ತಮಗೆ ಬಂದ [&#8230;]]]></description>
										<content:encoded><![CDATA[
<p>ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ತಾವು ಪಡೆದಿರುವ ರಾಜ್ಯ ಗೌರವಗಳಾದ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.</p>



<p>ಕೆಲವೇ ದಿನಗಳ ಹಿಂದೆ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಬಹಿರಂಗ ಪತ್ರಿಕಾಗೋಷ್ಠಿಯಲ್ಲಿ ತನ್ನ ವೃತ್ತಿಪರ ಜೀವನದಿಂದ ನಿವೃತ್ತಿ ಆಗುವುದಾಗಿ ಘೋಷಿಸಿದ್ದರು. ಪತ್ರಿಕಾಗೋಷ್ಠಿಯಲ್ಲಿ ಭಾವನಾತ್ಮಕವಾಗಿ ತನ್ನ ನಿರ್ಧಾರ ಪ್ರಕಟಿಸಿದ ಕೆಲವೇ ದಿನಗಳಲ್ಲಿ ನಂತರ ಬಜರಂಗ್ ಪುನಿಯಾ ತಮಗೆ ಬಂದ ಪದ್ಮಶ್ರೀ ಪುರಸ್ಕಾರವನ್ನು ಹಿಂದಿರುಗಿಸಿದ್ದಾರೆ.</p>



<p>ಅದಾಗಿ ಎರಡೇ ದಿನಗಳಲ್ಲಿ ಮತ್ತೋರ್ವ ಕುಸ್ತಿಪಟು ವಿನೇಶ್ ಪೋಗಟ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ತಮಗೆ ಬಂದಿರುವ ಪುರಸ್ಕಾರಗಳನ್ನು ಸರ್ಕಾರಕ್ಕೆ ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ. ಸಧ್ಯಕ್ಕೆ ಇದು ಸರ್ಕಾರಕ್ಕೆ ಮುಜುಗರ ತರುವ ವಿಚಾರವೇ ಆದರೂ ಸರ್ಕಾರ ಇದನ್ನು ಹೇಗೆ ಸ್ವೀಕರಿಸಲಿದೆ ಎಂಬುದು ಮುಖ್ಯವಾದ ಅಂಶ.</p>



<p>ಕೇಂದ್ರ ಸಚಿವ ಬ್ರಿಜ್ ಭೂಷಣ್ ಅವರ ಆಪ್ತ ಸಹಾಯಕ ಸಂಜಯ್ ಸಿಂಗ್ WFI ಚುನಾವಣೆಯಲ್ಲಿ ಗೆದ್ದ ನಂತರ ಫೋಗಟ್ ಮತ್ತು ಇತರ ಇಬ್ಬರು ಕುಸ್ತಿಪಟುಗಳು ತಮ್ಮ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ.</p>



<p>ವಿನೇಶ್ ಪೋಗಟ್ ಅವರು ತಮ್ಮ ಸಾಮಾಜಿಕ ಮಾಧ್ಯಮ X ನಲ್ಲಿ ಟ್ವಿಟ್ ಮಾಡಿ, ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ಮಲಿಕ್ ಮತ್ತು ಪೂನಿಯಾ ಅವರ ನಿರ್ಧಾರಗಳನ್ನು ಉಲ್ಲೇಖಿಸಿದ್ದಾರೆ. &#8220;ಪ್ರತಿಯೊಬ್ಬ ಮಹಿಳೆ ಘನತೆಯಿಂದ ಬದುಕಲು ಬಯಸುತ್ತಾಳೆ. ಅದಕ್ಕಾಗಿಯೇ ಪ್ರಧಾನ ಮಂತ್ರಿಗಳೇ, ನನ್ನ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ನಿಮಗೆ ಹಿಂದಿರುಗಿಸಲು ನಾನು ಬಯಸುತ್ತೇನೆ &#8211; ಆದ್ದರಿಂದ ಈ ಬಹುಮಾನಗಳು ಘನತೆಯಿಂದ ಬದುಕುವ ನಮ್ಮ ಹಾದಿಯಲ್ಲಿ ನಮಗೆ ಹೊರೆಯಾಗುವುದಿಲ್ಲ&#8221; ಎಂದು ಫೋಗಟ್ ಹಿಂದಿಯಲ್ಲಿ ಬರೆದಿದ್ದಾರೆ.</p>



<p>&#8220;ನನಗೆ 2016 ರ ವರ್ಷ ನೆನಪಿದೆ. ಸಾಕ್ಷಿ ಮಲಿಕ್ ಅವರು ಒಲಂಪಿಕ್ ಪದಕವನ್ನು ಗೆದ್ದಾಗ ಮತ್ತು ಸರ್ಕಾರವು ಅವಳನ್ನು &#8216;<em>ಬೇಟಿ ಬಚಾವೋ, ಬೇಟಿ ಪಢಾವೋ</em>&nbsp;&#8216; [ಪ್ರಚಾರದ] ಬ್ರಾಂಡ್ ಅಂಬಾಸಿಡರ್ ಆಗಿ ಮಾಡಿದೆ&#8221; ಎಂದು ಅವರು ಬರೆದಿದ್ದಾರೆ, ಈ ನಿರ್ಧಾರವು ಜನರಲ್ಲಿ ಸಂಭ್ರಮವನ್ನು ಹುಟ್ಟುಹಾಕಿತ್ತು. ಈಗ [ಮಲಿಕ್] ಕುಸ್ತಿಯನ್ನು ತೊರೆಯಬೇಕಾಗಿದೆ, ನಾನು 2016 ರ ವರ್ಷವನ್ನು ನಿರಂತರವಾಗಿ ನೆನಪಿಸಿಕೊಳ್ಳುತ್ತೇನೆ. ನಾವು ಮಹಿಳಾ ಕ್ರೀಡಾಪಟುಗಳು ಸರ್ಕಾರದ ಜಾಹೀರಾತುಗಳಲ್ಲಿ ಪ್ರಕಟಿಸಲು ಮಾತ್ರ ಯೋಗ್ಯರೇ?&#8221; ಎಂದು ನರೇಂದ್ರ ಮೋದಿಯವರನ್ನು ಪ್ರಶ್ನಿಸಿದ್ದಾರೆ.</p>



<p>ಮಹಿಳಾ ಅಥ್ಲೀಟ್‌ಗಳ ಜೀವನವು ಸರ್ಕಾರದ ಪೋಸ್ಟರ್‌ಗಳಲ್ಲಿ ಹೇಗೆ ಇರುತ್ತವೆ ಎಂಬುದನ್ನು ಚಿತ್ರಿಸುವುದಕ್ಕಿಂತ ಭಿನ್ನವಾಗಿದೆ ಎಂದು ತಮ್ಮ ಪತ್ರದಲ್ಲಿ ಹೇಳಿದ ಫೋಗಟ್, &#8220;ತಮಗಾದ ಶೋಷಣೆ ಬಗ್ಗೆ ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳನ್ನು ಕೇಳಲು ಜೀವನದಲ್ಲಿ ಕೇವಲ ಐದು ನಿಮಿಷಗಳನ್ನಾದರೂ ತೆಗೆದುಕೊಳ್ಳಿ&#8221; ಎಂದು ಪ್ರಧಾನಿಗೆ ಹೇಳಿದ್ದಾರೆ.</p>



<p>&#8220;ಹೆಚ್ಚು ಗಂಭೀರವಾದ ವಿಷಯವೆಂದರೆ ಅವರು ಎಷ್ಟು ಮಹಿಳಾ ಕುಸ್ತಿಪಟುಗಳನ್ನು ಬಲವಂತವಾಗಿ ಹೊರಹಾಕಿದ್ದಾರೆ.&nbsp;ಇದು ತುಂಬಾ ಭಯಾನಕವಾಗಿದೆ, ”ಎಂದು ಅವರು ಬರೆದಿದ್ದಾರೆ, ಕುಸ್ತಿಪಟುಗಳು ಪದಕಗಳನ್ನು ಗೆದ್ದಿದ್ದಕ್ಕಾಗಿ ಪ್ರಶಂಸಿಸಲ್ಪಟ್ಟರು ಆದರೆ ತಮ್ಮ ಧ್ವನಿಯನ್ನು ಎತ್ತಿದ್ದಕ್ಕಾಗಿ ರಾಷ್ಟ್ರದ್ರೋಹಿಗಳೆಂದು ಬಿಂಬಿಸಿಕೊಂಡರು. ಮಿಸ್ಟರ್ ಪ್ರಧಾನಿಗಳೇ, ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ, ನಾವು ದೇಶದ್ರೋಹಿಗಳೇ?&#8221; ಎಂದು ಖಡಕ್ಕಾಗಿ ಪ್ರಶ್ನಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಬೀದಿ ಹೋರಾಟ ಅಂತ್ಯ, ಇನ್ನೇನಿದ್ದರೂ ಕಾನೂನು ಸಮರ : ಕುಸ್ತಿಪಟುಗಳು</title>
		<link>https://peepalmedia.com/no-more-street-fighting-legal-battle-if-anything-else-wrestlers/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 26 Jun 2023 06:06:30 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[bajarang punia]]></category>
		<category><![CDATA[Brij bhushan]]></category>
		<category><![CDATA[india]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Sakshi Malik]]></category>
		<category><![CDATA[Vinesh pogat]]></category>
		<category><![CDATA[wrestlers protest]]></category>
		<guid isPermaLink="false">https://peepalmedia.com/?p=22704</guid>

					<description><![CDATA[ಡಬ್ಲ್ಯುಎಫ್‌ಐ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ&#160;ಲೈಂಗಿಕ ಕಿರುಕುಳದ ಆರೋಪದ ಪ್ರಕರಣದ ಹೋರಾಟ ಇನ್ನು ನ್ಯಾಯಾಲಯದಲ್ಲಿ ಮುಂದುವರೆಯಲಿದೆ ಎಂದು ಹೋರಾಟ ನಿರತ ಕುಸ್ತಿಪಟುಗಳು ಹೇಳಿದ್ದಾರೆ. ನಿರಂತರ 5 ತಿಂಗಳ ಬೀದಿ ಹೋರಾಟದ ಬಳಿಕ ಈಗ ಕುಸ್ತಿಪಟುಗಳು ಕಾನೂನು ಸಮರದ ಹಾದಿಯಲ್ಲಿ ಯಶಸ್ವಿಯಾಗಬಹುದು ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ&#160;ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದ ಕುಸ್ತಿಪಟುಗಳು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.&#160;ಇವರ ಹೋರಾಟಕ್ಕೆ [&#8230;]]]></description>
										<content:encoded><![CDATA[
<p>ಡಬ್ಲ್ಯುಎಫ್‌ಐ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ&nbsp;ಲೈಂಗಿಕ ಕಿರುಕುಳದ ಆರೋಪದ ಪ್ರಕರಣದ ಹೋರಾಟ ಇನ್ನು ನ್ಯಾಯಾಲಯದಲ್ಲಿ ಮುಂದುವರೆಯಲಿದೆ ಎಂದು ಹೋರಾಟ ನಿರತ ಕುಸ್ತಿಪಟುಗಳು ಹೇಳಿದ್ದಾರೆ.</p>



<p>ನಿರಂತರ 5 ತಿಂಗಳ ಬೀದಿ ಹೋರಾಟದ ಬಳಿಕ ಈಗ ಕುಸ್ತಿಪಟುಗಳು ಕಾನೂನು ಸಮರದ ಹಾದಿಯಲ್ಲಿ ಯಶಸ್ವಿಯಾಗಬಹುದು ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ&nbsp;ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದ ಕುಸ್ತಿಪಟುಗಳು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.&nbsp;ಇವರ ಹೋರಾಟಕ್ಕೆ ಭಾರತೀಯ ಕಿಸಾನ್ ಯೂನಿಯನ್ ಸೇರಿದಂತೆ ಹಲವು ಜನಪರ ಸಂಘಟನೆಗಳು ಬೆಂಬಲ ನೀಡಿದ್ದರು.</p>



<p>ವಿನೇಶ್ ಫೋಘಟ್, ಸಾಕ್ಷಿ ಮಲ್ಲಿಕ್, ಬಜರಂಗ್ ಪೂನಿಯಾ ಅವರು ಪ್ರತಿಭಟನೆಯನ್ನು ಅಂತ್ಯಗೊಳಿಸುವುದಾಗಿ ಟ್ವಿಟ್ ಮೂಲಕ ತಿಳಿಸಿದ್ದಾರೆ. ಇನ್ನು ಮುಂದೆ ನಾವು ರಸ್ತೆಯಲ್ಲಿ ಪ್ರತಿಭಟನೆ ನಡೆಸುವುದಿಲ್ಲ. ಆದರೆ ಬ್ರಿಜ್ ಬೂಷಣ್ ಸಿಂಗ್ ವಿರುದ್ಧ ನ್ಯಾಯಾಲಯದಲ್ಲಿ ನಮ್ಮ ಹೋರಾಟ ಮುಂದುವರೆಸುತ್ತೇವೆ, ನಮ್ಮ ಅಭಿಯಾನವನ್ನು ಕೈಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>



<p>&#8216;ಸಧ್ಯ ಸರ್ಕಾರ ನೀಡಿದ ಭರವಸೆಯಂತೆ ಭಾರತೀಯ ಕುಸ್ತಿ ಒಕ್ಕೂಟದಲ್ಲಿನ ಬದಲಾವಣೆಗೆ ಮುಂದಾಗಿದೆ. ಅದರ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಆ ನಿಟ್ಟಿನಲ್ಲಿ ಜುಲೈ 11ರಂದು ಚುನಾವಣೆ ನಡೆಯಲಿದೆ ಎಂಬ ಮಾತು ಕೇಳಿ ಬಂದಿದೆ. ನಾವು ಭರವಸೆ ಕಾರ್ಯಗತವಾಗುವ ತನಕ ಕಾಯುತ್ತೇವೆ.&#8217; ಎಂದು ಕುಸ್ತಿಪಟುಗಳು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.</p>



<p>ಈಗಾಗಲೇ ಜೂನ್‌ನಲ್ಲಿ ನಡೆಯಬೇಕಿದ್ದ ಚುನಾವಣೆ ಮಹಾರಾಷ್ಟ್ರ, ಹರ್ಯಾಣ, ಹಿಮಾಚಲ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಸ್ಥಳೀಯ ಕುಸ್ತಿ ಸಂಘಟನೆಗಳ ಚುನಾವಣೆ ಮತ್ತು ಮಾನ್ಯತೆಗೆ ಸಂಬಂಧಿಸಿದ ಗೊಂದಲದಿಂದಾಗಿ ಮುಂದೂಡಲಾಗಿತ್ತು. ಹಾಗಾಗಿ ಕೊಟ್ಟ ಭರವಸೆಯಂತೆ ಜುಲೈ 11 ರಂದು ಚುನಾವಣೆ ನಡೆಯುವ ಮುನ್ಸೂಚನೆಯನ್ನು ಸರ್ಕಾರ ನೀಡಿದೆ.</p>



<p>ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕೇಳಿ ಬಂದಿರುವ ಆರೋಪದ ಬಗ್ಗೆ ಈಗಾಗಲೇ ದೆಹಲಿ ಪೊಲೀಸರು ತನಿಖೆ ನಡೆಸಿದ್ದಾರೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ಗೆ 1500 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ. 200 ಹೇಳಿಕೆಗಳನ್ನು ದಾಖಲು ಮಾಡಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಜೂನ್ 27ರಿಂದ ಕೋರ್ಟ್‌ನಲ್ಲಿ ಈ ಕುರಿತು ವಿಚಾರಣೆ ನಡೆಯಲಿದೆ.</p>



<p>ಚಾರ್ಜ್‌ ಶೀಟ್‌ನಲ್ಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 354 ( ಹಲ್ಲೆ ಅಥವ ಕ್ರಿಮಿನಲ್ ಬಲ ಪ್ರಯೋಗ), 354 ಎ (ಲೈಂಗಿಕ ಕಿರುಕುಳ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಆರೋಪಗಳನ್ನು ದಾಖಲು ಮಾಡಿದ್ದಾರೆ.</p>
]]></content:encoded>
					
		
		
			</item>
		<item>
		<title>ಕುಸ್ತಿಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದ ಬಜರಂಗ್ ಪುನಿಯಾ</title>
		<link>https://peepalmedia.com/kustiyalli-bharatakke-modala-chinnada-padaka-tanda-bajarang-puniya/</link>
		
		<dc:creator><![CDATA[Peepal Media]]></dc:creator>
		<pubDate>Sat, 06 Aug 2022 09:58:22 +0000</pubDate>
				<category><![CDATA[ಆಟೋಟ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[bajarang punia]]></category>
		<category><![CDATA[bengalure]]></category>
		<category><![CDATA[commanwealth game 2022]]></category>
		<category><![CDATA[games]]></category>
		<category><![CDATA[gold]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[writing]]></category>
		<guid isPermaLink="false">https://peepalmedia.com/?p=786</guid>

					<description><![CDATA[ಬರ್ಮಿಂಗ್ ಹ್ಯಾಮ್: ಕಾಮನ್‌ವೆಲ್ತ್ ಕ್ರೀಡಾಕೂಟ 2022ರ ಫ್ರೀಸ್ಟೈಲ್ ಕುಸ್ತಿ ಫೈನಲ್ ಸ್ಪರ್ಧೆಯಲ್ಲಿ ಭಾರತದ ಬಜರಂಗ್ ಪುನಿಯಾ, ಕೆನಾಡದ ಲಾಚ್ಲಾನ್ ಮೆಕ್‌ನೀಲ್ ಅವರನ್ನು ಸೋಲಿಸುವುದರ ಮೂಲಕ ಭಾರತಕ್ಕೆ ಮೊದಲ ಚಿನ್ನದ ಪದಕ ತಂದು ಕೊಟ್ಟಿದ್ದಾರೆ. ಅದೇ ದಿನ ಕೆಲವು ನಿಮಿಷಗಳ ನಂತರ ಮಹಿಳೆಯರ 62 ಕೆಜಿ ವಿಭಾಗದಲ್ಲಿ, ಭಾರತದ ಸಾಕ್ಷಿ ಮಲ್ಲಿಕ್ ಅವರು ಕೆನಾಡದ ಅನಾ ಗೊನ್ಜಾಲೆಜ್ ಅವರನ್ನು ಹಿಂದಿಕ್ಕಿ ಭಾರತಕ್ಕೆ ಎರಡನೇ ಚಿನ್ನದ ಪದಕವನ್ನು ಮತ್ತು 86 ಕೆಜಿ ಪುರುಷರ ವಿಭಾಗದಲ್ಲಿ ಪಾಕಿಸ್ತಾನದ ಮುಹಮ್ಮದ್ ಇನಾಮ್ ಅವರನ್ನು [&#8230;]]]></description>
										<content:encoded><![CDATA[
<p class="has-medium-font-size"><strong>ಬರ್ಮಿಂಗ್ ಹ್ಯಾಮ್</strong>: ಕಾಮನ್‌ವೆಲ್ತ್ ಕ್ರೀಡಾಕೂಟ 2022ರ ಫ್ರೀಸ್ಟೈಲ್ ಕುಸ್ತಿ ಫೈನಲ್ ಸ್ಪರ್ಧೆಯಲ್ಲಿ ಭಾರತದ ಬಜರಂಗ್ ಪುನಿಯಾ, ಕೆನಾಡದ ಲಾಚ್ಲಾನ್ ಮೆಕ್‌ನೀಲ್ ಅವರನ್ನು ಸೋಲಿಸುವುದರ ಮೂಲಕ ಭಾರತಕ್ಕೆ ಮೊದಲ ಚಿನ್ನದ ಪದಕ ತಂದು ಕೊಟ್ಟಿದ್ದಾರೆ.</p>



<p class="has-medium-font-size">ಅದೇ ದಿನ ಕೆಲವು ನಿಮಿಷಗಳ ನಂತರ ಮಹಿಳೆಯರ 62 ಕೆಜಿ ವಿಭಾಗದಲ್ಲಿ, ಭಾರತದ ಸಾಕ್ಷಿ ಮಲ್ಲಿಕ್ ಅವರು ಕೆನಾಡದ ಅನಾ ಗೊನ್ಜಾಲೆಜ್ ಅವರನ್ನು ಹಿಂದಿಕ್ಕಿ ಭಾರತಕ್ಕೆ ಎರಡನೇ ಚಿನ್ನದ ಪದಕವನ್ನು ಮತ್ತು 86 ಕೆಜಿ ಪುರುಷರ ವಿಭಾಗದಲ್ಲಿ ಪಾಕಿಸ್ತಾನದ ಮುಹಮ್ಮದ್ ಇನಾಮ್ ಅವರನ್ನು ಸೋಲಿಸುವ ಮೂಲಕ ಭಾರತದ ದೀಪಕ್ ಪುನಿಯಾ ಭಾರತಕ್ಕೆ ಕುಸ್ತಿಯಲ್ಲಿ ಮೂರನೇ ಚಿನ್ನದ ಪದಕವನ್ನು ತಂದು ಕೊಟ್ಟಿದ್ದಾರೆ.</p>
]]></content:encoded>
					
		
		
			</item>
	</channel>
</rss>
