<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Bangalore Rural &#8211; Peepal Media</title>
	<atom:link href="https://peepalmedia.com/tag/bangalore-rural/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 30 Mar 2024 13:09:34 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Bangalore Rural &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಮೋರ್​ ಸ್ಟ್ರಾಂಗ್​ ಮೋರ್ ಎನಿಮಿಸ್​​, ಮೋರ್ ಸ್ಟ್ರಾಂಗ್​ ಮೋರ್ ಪವರ್ : ಡಿಕೆ ಶಿವಕುಮಾರ್</title>
		<link>https://peepalmedia.com/more-enemies-more-strong-more-power-more/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 30 Mar 2024 13:09:32 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[ಲೋಕಸಭೆ ಚುನಾವಣೆ -2024]]></category>
		<category><![CDATA[Bangalore Rural]]></category>
		<category><![CDATA[dk shivakumar]]></category>
		<category><![CDATA[dk suresh]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37747</guid>

					<description><![CDATA[ಬಿಜೆಪಿ ಹೈಕಮಾಂಡ್ ನಾಯಕರು ಬೆಂಗಳೂರು ಗ್ರಾಮಾಂತರದಿಂದಲೇ ಚುನಾವಣಾ ಪ್ರಚಾರ ಆರಂಭಿಸುವ ಸುದ್ದಿಯ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಮೋರ್​ ಸ್ಟ್ರಾಂಗ್​ ಮೋರ್ ಎನಿಮಿಸ್​​, ಮೋರ್ ಸ್ಟ್ರಾಂಗ್​ ಮೋರ್ ಪವರ್ ಎಂದು ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ ಹೆಚ್ಚಿನ ಅಭ್ಯರ್ಥಿಗಳು ರಾಜ್ಯಾದ್ಯಂತ ಬಿರುಸಿನ ಪ್ರಚಾರಕ್ಕೆ ಇಳಿದಿರುವಾಗ, ಮೈತ್ರಿ ಅಭ್ಯರ್ಥಿಗಳು ಕಾಂಗ್ರೆಸ್ ಪಕ್ಷದ ಓಟಕ್ಕೆ ಯಾವ ಬ್ರೇಕ್ ಕೂಡಾ ಹಾಕಲಾರರು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರನ್ನು ಸೋಲಿಸಲೇಬೇಕು ಎಂಬ ಪಣ [&#8230;]]]></description>
										<content:encoded><![CDATA[
<p>ಬಿಜೆಪಿ ಹೈಕಮಾಂಡ್ ನಾಯಕರು ಬೆಂಗಳೂರು ಗ್ರಾಮಾಂತರದಿಂದಲೇ ಚುನಾವಣಾ ಪ್ರಚಾರ ಆರಂಭಿಸುವ ಸುದ್ದಿಯ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಮೋರ್​ ಸ್ಟ್ರಾಂಗ್​ ಮೋರ್ ಎನಿಮಿಸ್​​, ಮೋರ್ ಸ್ಟ್ರಾಂಗ್​ ಮೋರ್ ಪವರ್ ಎಂದು ಪ್ರತಿಕ್ರಿಯಿಸಿದ್ದಾರೆ.</p>



<p>ಈಗಾಗಲೇ ಹೆಚ್ಚಿನ ಅಭ್ಯರ್ಥಿಗಳು ರಾಜ್ಯಾದ್ಯಂತ ಬಿರುಸಿನ ಪ್ರಚಾರಕ್ಕೆ ಇಳಿದಿರುವಾಗ, ಮೈತ್ರಿ ಅಭ್ಯರ್ಥಿಗಳು ಕಾಂಗ್ರೆಸ್ ಪಕ್ಷದ ಓಟಕ್ಕೆ ಯಾವ ಬ್ರೇಕ್ ಕೂಡಾ ಹಾಕಲಾರರು ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರನ್ನು ಸೋಲಿಸಲೇಬೇಕು ಎಂಬ ಪಣ ತೊಟ್ಟು, ಅಮಿತ್ ಷಾ ಅವರನ್ನು ಗ್ರಾಮಾಂತರದಿಂದ ಪ್ರಚಾರ ಶುರು ಮಾಡುವ ತಂತ್ರಗಾರಿಕೆ ಹಿಂದೆ ಈಗ ಡಿ.ಕೆ.ಶಿವಕುಮಾರ್ ಮತ್ತಷ್ಟು ಪ್ರತಿತಂತ್ರಕ್ಕೆ ಮುಂದಾಗಿದ್ದಾರೆ.</p>



<p>ಹೆಚ್​ಡಿ ದೇವೇಗೌಡ ಅವರನ್ನು ಎದುರಿಸಿದ್ದೇವೆ, ಗೌಡರ ಮಗ ಹೆಚ್​ಡಿ ಕುಮಾರಸ್ವಾಮಿ ಅವರನ್ನ ಎದರಿಸಿದ್ದೇವೆ. ಗೌಡರ ಮೊಮ್ಮಗನನ್ನು ಎದುರಿಸಿದ್ದೇವೆ, ಸೊಸೆಯನ್ನೂ ಎದುರಿಸಿದ್ದೇವೆ. ಈಗ ಗೌಡರ ಅಳಿಯನನ್ನ ಎದುರಿಸುತ್ತೇವೆ ಎಂದರು.</p>



<p>ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವಾಗ ಕೋವಿಡ್ ಸಂದರ್ಭದಲ್ಲಿ ಹೆಣ ಹೊತ್ತವರು, ಮಣ್ಣು ಮಾಡಿದವರು ಯಾರು ಇರಲಿಲ್ಲ. ಈಗ ಮಾತಾಡುವವರು ಕೋವಿಡ್​ ಸಂದರ್ಭದಲ್ಲಿ ಎಲ್ಲಿ ಹೋಗಿದ್ದರು? ಆಹಾರದ ಕಿಟ್, ಔಷದಿ ಕೊಡುವಾಗ ಯಾರು ಇರಲಿಲ್ಲ. ಆಗ ಕ್ಷೇತ್ರದಲ್ಲಿ ಇದ್ದದ್ದು ಕಾಂಗ್ರೆಸ್ ಮತ್ತು ಡಿಕೆ ಸುರೇಶ್ ಮಾತ್ರ ಎಂದಿದ್ದಾರೆ.</p>
]]></content:encoded>
					
		
		
			</item>
		<item>
		<title>ಜೆಡಿಎಸ್ ನವರನ್ನು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮಾಡಿದ್ದೇ ನಾವು : ಡಿ.ಕೆ. ಸುರೇಶ್</title>
		<link>https://peepalmedia.com/we-made-jds-prime-minister-chief-minister-d-k-suresh/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 20 Mar 2024 07:28:21 +0000</pubDate>
				<category><![CDATA[ದೇಶ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[Bangalore Rural]]></category>
		<category><![CDATA[dk suresh]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37221</guid>

					<description><![CDATA[“ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ ಮಾಡಿದ್ದೇವೆ” ಎಂದು ಸಂಸದ ಡಿ.ಕೆ. ಸುರೇಶ್ ಜೆಡಿಎಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಬುಧವಾರ ಬೆಳಿಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ಸಿನಂತೆ ಬಿಜೆಪಿಯವರು ಕುತ್ತಿಗೆ ಕೊಯ್ಯುವ ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಸುರೇಶ್ ಅವರು ಉತ್ತರಿಸಿದ್ದು ಹೀಗೆ: “ಜೆಡಿಎಸ್ ನವರನ್ನು ಈ ದೇಶದ ಪ್ರಧಾನಿ, ರಾಜ್ಯದ ಸಿಎಂ ಮಾಡಿದ್ದೇವೆ. [&#8230;]]]></description>
										<content:encoded><![CDATA[
<p>“ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ ಮಾಡಿದ್ದೇವೆ” ಎಂದು ಸಂಸದ ಡಿ.ಕೆ. ಸುರೇಶ್ ಜೆಡಿಎಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.</p>



<p>ಬುಧವಾರ ಬೆಳಿಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ಸಿನಂತೆ ಬಿಜೆಪಿಯವರು ಕುತ್ತಿಗೆ ಕೊಯ್ಯುವ ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಸುರೇಶ್ ಅವರು ಉತ್ತರಿಸಿದ್ದು ಹೀಗೆ:</p>



<p>“ಜೆಡಿಎಸ್ ನವರನ್ನು ಈ ದೇಶದ ಪ್ರಧಾನಿ, ರಾಜ್ಯದ ಸಿಎಂ ಮಾಡಿದ್ದೇವೆ. ಈ ದೇಶ ಗುರುತಿಸುವಂತಹ ಕೆಲಸಗಳನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಕಾಂಗ್ರೆಸ್ ಪ್ರಧಾನಿ ಮಾಡದೇ ಹೋಗಿದ್ದರೆ ಅವರನ್ನು ಈ ದೇಶ ನೆನಪಿಸಿಕೊಳ್ಳುತ್ತಿರಲಿಲ್ಲ. ರಾಜ್ಯದ ಮೂವತ್ತು ಸಿಎಂಗಳಲ್ಲಿ ಕುಮಾರಸ್ವಾಮಿ ಅವರು ಒಬ್ಬರಾಗುತ್ತಿರಲಿಲ್ಲ” ಎಂದು ತಿರುಗೇಟು ನೀಡಿದರು.</p>



<p>ಆಸ್ಪತ್ರೆಯಿಂದ ಬಂದ ನಂತರ ಬಲಿಷ್ಠವಾಗಿ ಪ್ರಚಾರ ಮಾಡುತ್ತೇನೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರ ಪ್ರಶ್ನೆಗಳಿಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ಆರೋಗ್ಯ ಸರಿ ಇಲ್ಲ ಎಂದು ಆಸ್ಪತ್ರೆ ಸೇರಿರುವ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ರಾಜಕಾರಣದಲ್ಲಿ ಎದುರಾಳಿಗಳು ಬಲಿಷ್ಟವಾಗಿದ್ದಷ್ಟು ಚೆನ್ನಾಗಿ ಕೆಲಸ ಮಾಡಲು ಸಾಧ್ಯ. ಅದಕ್ಕೆ ಅವರು ಮೊದಲು ಗುಣಮುಖರಾಗಲಿ” ಎಂದು ಹೇಳಿದರು.</p>



<p><strong>ದೇವೇಗೌಡರು ಈ ಹಿಂದೆ ಆಡಿದ್ದ ಮಾತುಗಳನ್ನು ಜನರಿಗೆ ತೋರಿಸಿ</strong><br>ಬಿಜೆಪಿ- ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಂತೆ ಇದೆಯಲ್ಲ ಎಂದು ಕೇಳಿದಾಗ, “ಜಾತ್ಯಾತೀತ ತತ್ವಗಳ ಬಗ್ಗೆ ನಾನು ಮಾತನಾಡಿದರೆ ಪ್ರಚಾರ ಆಗುವುದಿಲ್ಲ. ನಿಮಗೆ ಬೇಕಾದ ಹೇಳಿಕೆಗಳನ್ನು ನಾನು ಕೊಡಲು ಆಗುವುದಿಲ್ಲ. ಮಾಜಿ ಪ್ರಧಾನಿಗಳು ಹಿಂದೆ ಹೇಳಿದ್ದ, ʼಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆʼ, ʼಮೋದಿ ಗೆದ್ದರೆ ದೇಶ ಬಿಟ್ಟು ಹೋಗುತ್ತೇನೆʼ, ʼರಾಜ್ಯಕ್ಕೆ ರಾಷ್ಟ್ರೀಯ ಪಕ್ಷಗಳ ಅವಶ್ಯಕತೆಯಿಲ್ಲ, ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ಇದೆʼ &#8211; ಎಂಬೆಲ್ಲ ಹೇಳಿಕೆಗಳನ್ನು ಜನರಿಗೆ&nbsp; ತೋರಿಸಿ. ನಾನು ಮಾಡಿರುವ ಕೆಲಸಗಳಿಗೆ ನನ್ನ ಕ್ಷೇತ್ರದ ಜನತೆಯ ಬಳಿ ಕೂಲಿ ಕೇಳುತ್ತಿದ್ದೇನೆ. ಮಾಧ್ಯಮದವರು ನನಗೆ ಕೂಲಿ ಕೊಡಿಸುತ್ತೀರಾ ಎನ್ನುವ ಭಾವನೆ ಇದೆ” ಎಂದು ಹೇಳಿದರು.</p>



<p>ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆಗೆ ಇಳಿಯುತ್ತಾರೆ ಎಂದಾಗ “ನಮ್ಮ ಅಭ್ಯರ್ಥಿ ಬಲಿಷ್ಠವಾಗಿದ್ದಾರೆ, ಗೆಲ್ಲುತ್ತಾರೆ. ನಾವು ಕೊಟ್ಟಿರುವ ಐದು ಗ್ಯಾರಂಟಿಗಳು, ಮುಂದಿನ ಐದು ವರ್ಷದಲ್ಲಿ ಈ ರಾಜ್ಯದ ಅಭಿವೃದ್ದಿಗೆ ನಾವು ಕೈಗೊಂಡಿರುವ ಕೆಲಸಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ” ಎಂದರು.</p>



<p>ಹನುಮಾನ್ ಚಾಲೀಸಾ ವಿವಾದದ ಬಗ್ಗೆ ಕೇಳಿದಾಗ “ಮಾಧ್ಯಮದವರು ಪ್ರಚಾರ ನೀಡುತ್ತಾರೆ ಎಂದು ಭಾವಿಸಿ ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ. ಸಣ್ಣ ವಿಚಾರಗಳನ್ನು ಅನವಶ್ಯಕವಾಗಿ ದೊಡ್ಡದು ಮಾಡುವ ಪ್ರವೃತ್ತಿಯನ್ನು ಬಿಜೆಪಿಗೆ ಯಾರೂ ಹೇಳಿಕೊಡಬೇಕಾಗಿಲ್ಲ” ಎಂದು ವ್ಯಂಗ್ಯವಾಡಿದರು.</p>



<p>ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್- ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆ ಬಗ್ಗೆ ಪ್ರಶ್ನಿಸಿದಾಗ “ನಾನು ಕ್ಷೇತ್ರದ ಕೆಲಸದಲ್ಲಿ ನಿರತನಾಗಿದ್ದು, ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರನ್ನು ಕೇಳಬೇಕು. ಈಗ ನಾನು ಏನನ್ನೂ ಹೇಳುವುದಿಲ್ಲ. ನಾನು ಗ್ರೌಂಡಿನಲ್ಲಿ ಇದ್ದೇನೆ, ನೀವು ಮೇಲೆ ಇದ್ದೀರಿ. ಈ ಬಗ್ಗೆ ನನಗೆ ಗೊತ್ತಿಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್ ನಿರ್ಧಾರ” ಎಂದರು.</p>



<p><strong>ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಿ:</strong><br>ತಮಿಳುನಾಡಿನ ಕೃಷ್ಣಗಿರಿ ಸೇರಿದಂತೆ ಇತರೆಡೆಯಿಂದ ಬಂದು ಬಾಂಬ್ ಇಡುತ್ತಾರೆ ಎನ್ನುವ ಶೋಭಾ ಕರಂದ್ಲಾಜೆ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಉನ್ನತ ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಬಳಿ ಇವೆ. ಭಯೋತ್ಪಾದಕರು ಎಲ್ಲೆಲ್ಲಿ ಇದ್ದಾರೆ ಎನ್ನುವುದು ಅವರಿಗೆ ಗೊತ್ತಿದೆ. ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುವುದು ಬಿಟ್ಟು ಕೇಂದ್ರ ಸರ್ಕಾರದ ಬಳಿ ಪ್ರಶ್ನೆ ಮಾಡಲಿ. ಕೃಷ್ಣಗಿರಿಯಿಂದ ಬರುತ್ತಾರೆ ಎನ್ನುವುದು ಅವರಿಗೆ ತಿಳಿದಿದೆ ಎಂದರೆ ಬೇಕಂತಲೇ ಎಲ್ಲವನ್ನು ಮುಚ್ಚಿಡುತ್ತಿದ್ದಾರೆ ಎಂದರ್ಥವಲ್ಲವೇ? ಈ ವಿಚಾರದಲ್ಲೂ ರಾಜಕಾರಣಕ್ಕೆ ಮುಂದಾಗಿದ್ದಾರೆ” ಎಂದು ಹೇಳಿದರು.</p>
]]></content:encoded>
					
		
		
			</item>
		<item>
		<title>ಬೆಂಗಳೂರು ಗ್ರಾಮಾಂತರ ಬಿಜೆಪಿ-ಜೆಡಿಎಸ್ ಲೋಕಸಭಾ ಅಭ್ಯರ್ಥಿಯಾಗಿ ಹೆಚ್.ಡಿ.ಕುಮಾರಸ್ವಾಮಿ!</title>
		<link>https://peepalmedia.com/kumaraswamy-as-candidate-for-bangalore-rural/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 21 Dec 2023 01:37:41 +0000</pubDate>
				<category><![CDATA[ರಾಜಕೀಯ]]></category>
		<category><![CDATA[ವಿಶೇಷ]]></category>
		<category><![CDATA[Bangalore Rural]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[dk shivakumar]]></category>
		<category><![CDATA[dk suresh]]></category>
		<category><![CDATA[HD Kumaraswamy]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[Jds BJP alliance]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=33918</guid>

					<description><![CDATA[ಇತ್ತೀಚಿನ ದಿನಗಳ ರಾಜ್ಯ ರಾಜಕೀಯದಲ್ಲಿ ಹಿಟ್ ಅಂಡ್ ರನ್ ರಾಜಕಾರಣಿ ಅಂತಲೇ ಪ್ರಸಿದ್ಧಿ ಪಡೆದಿರುವ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಈಗ ಲೋಕಸಭಾ ಅಖಾಡಕ್ಕೆ ಹೆಜ್ಜೆ ಇರಿಸುವುದು ಬಹುತೇಕ ಖಚಿತ ಎನ್ನುವಂತಾಗಿದೆ. ರಾಮನಗರದಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ನೋವು ಮಾಸುವ ಮುನ್ನವೇ ಕಾಂಗ್ರೆಸ್ ನ ದೊಡ್ಡ ಭದ್ರಕೋಟೆಯಂತಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಕುಮಾರಸ್ವಾಮಿ ಸ್ವತಃ ಅಭ್ಯರ್ಥಿಯಾಗುವ ಕಣ್ಣಿಟ್ಟಿದ್ದಾರೆ. ಇದೇ ಹಿನ್ನೆಲೆಯಲ್ಲಿ ಗುರುವಾರ ಬಿಜೆಪಿ ವರಿಷ್ಠರೊಂದಿಗೆ ಮಾತುಕಥೆ ನಡೆಸಲು ತೆರಳಿರುವ ಕುಮಾರಸ್ವಾಮಿ ಹಳೆ ಮೈಸೂರು ಭಾಗದ ಕೆಲವು ಲೋಕಸಭಾ [&#8230;]]]></description>
										<content:encoded><![CDATA[
<p>ಇತ್ತೀಚಿನ ದಿನಗಳ ರಾಜ್ಯ ರಾಜಕೀಯದಲ್ಲಿ ಹಿಟ್ ಅಂಡ್ ರನ್ ರಾಜಕಾರಣಿ ಅಂತಲೇ ಪ್ರಸಿದ್ಧಿ ಪಡೆದಿರುವ ಮಾಜಿ ಮುಖ್ಯಮಂತ್ರಿ <a href="http://ಹೆಚ್‌.ಡಿ.ಕುಮಾರಸ್ವಾಮಿ">ಹೆಚ್‌.ಡಿ.ಕುಮಾರಸ್ವಾಮಿ</a> ಈಗ ಲೋಕಸಭಾ ಅಖಾಡಕ್ಕೆ ಹೆಜ್ಜೆ ಇರಿಸುವುದು ಬಹುತೇಕ ಖಚಿತ ಎನ್ನುವಂತಾಗಿದೆ. ರಾಮನಗರದಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ನೋವು ಮಾಸುವ ಮುನ್ನವೇ ಕಾಂಗ್ರೆಸ್ ನ ದೊಡ್ಡ ಭದ್ರಕೋಟೆಯಂತಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಕುಮಾರಸ್ವಾಮಿ ಸ್ವತಃ ಅಭ್ಯರ್ಥಿಯಾಗುವ ಕಣ್ಣಿಟ್ಟಿದ್ದಾರೆ.</p>



<p>ಇದೇ ಹಿನ್ನೆಲೆಯಲ್ಲಿ ಗುರುವಾರ ಬಿಜೆಪಿ ವರಿಷ್ಠರೊಂದಿಗೆ ಮಾತುಕಥೆ ನಡೆಸಲು ತೆರಳಿರುವ ಕುಮಾರಸ್ವಾಮಿ ಹಳೆ ಮೈಸೂರು ಭಾಗದ ಕೆಲವು ಲೋಕಸಭಾ ಕ್ಷೇತ್ರಗಳ ಬಗ್ಗೆ ಪ್ರಸ್ತಾಪಿಸಲಿದ್ದಾರೆ. ಸೀಟು ಹಂಚಿಕೆ ಬಗ್ಗೆ ಬಿಜೆಪಿ ಅಧ್ಯಕ್ಷ <a href="http://ಜೆ.ಪಿ.ನಡ್ಡಾ">ಜೆ.ಪಿ.ನಡ್ಡಾ</a>, ಅಮಿತ್ ಷಾ ಜೊತೆಗೆ ಚರ್ಚೆ ನಡೆಸಿ ಎಷ್ಟು ಸಾಧ್ಯವೋ ಅಷ್ಟು ಕ್ಷೇತ್ರ‌ಗಳನ್ನು ಜೆಡಿಎಸ್ ತೆಕ್ಕೆಗೆ ತಗೆದುಕೊಳ್ಳುವ ಬಗ್ಗೆ ಮಾತುಕತೆ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ.</p>



<figure class="wp-block-image size-full is-resized"><img fetchpriority="high" decoding="async" width="259" height="194" src="https://peepalmedia.com/wp-content/uploads/2023/12/download-58.jpeg" alt="" class="wp-image-33920" style="width:376px;height:auto" srcset="https://peepalmedia.com/wp-content/uploads/2023/12/download-58.jpeg 259w, https://peepalmedia.com/wp-content/uploads/2023/12/download-58-150x112.jpeg 150w" sizes="(max-width: 259px) 100vw, 259px" /></figure>



<p>ವಿಶೇಷವಾಗಿ ಒಕ್ಕಲಿಗ ಪ್ರಾಬಲ್ಯ ಹೊಂದಿರುವ ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ತುಮಕೂರು, ಹಾಸನ ಕ್ಷೇತ್ರ ಹಾಗೂ ಕೋಲಾರ, ಚಿಕ್ಕಬಳ್ಳಾಪುರ ಸೇರಿ ಒಟ್ಟು 8 ಕ್ಷೇತ್ರಕ್ಕೆ ಕುಮಾರಸ್ವಾಮಿ ಕಣ್ಣಿಟ್ಟಿದ್ದಾರೆ. ಆ ಮೂಲಕ ಈ ಕ್ಷೇತ್ರಗಳನ್ನು ಜೆಡಿಎಸ್ ತೆಕ್ಕೆಗೆ ತಗೆದುಕೊಂಡು ಕ್ಷೇತ್ರ ತಮ್ಮದಾಗಿಸಿಕೊಳ್ಳಲು ಅಭ್ಯರ್ಥಿಗಳ ಪಟ್ಟಿ ಜೊತೆಗೇ ಕುಮಾರಸ್ವಾಮಿ ದೆಹಲಿಗೆ ಪಯಣ ಬೆಳೆಸಿದ್ದಾರೆ.</p>



<p>ಆಶ್ಚರ್ಯ ಎಂದರೆ ಈ ಬಾರಿ ಸ್ವತಃ ತಾವೇ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಜೆಡಿಎಸ್ ಮುಖಂಡರ ಕಡೆಯಿಂದಲೂ ಅನುಮತಿ ಪಡೆದು ಬಿಜೆಪಿ ನಾಯಕರೊಂದಿಗೆ ಮಾತುಕತೆಗೆ ಮುಂದಾಗಲಿದ್ದಾರೆ. ಇಲ್ಲಿ ಜೆಡಿಎಸ್ ತಂತ್ರಗಾರಿಕೆ ಏನು, ಅದಕ್ಕೆ ಬಿಜೆಪಿ ಹೇಗೆ ಸಾತ್ ಕೊಡಬಹುದು ಎಂಬ ನಿಟ್ಟಿನಲ್ಲಿ ಅಮಿತ್ ಷಾ ಮತ್ತು ಜೆಪಿ ನಡ್ಡಾಗೆ ಮನವರಿಕೆ ಮಾಡುವುದು ಈಗ ಕುಮಾರಸ್ವಾಮಿ ಮುಂದಿರುವ ದೊಡ್ಡ ಸವಾಲು.</p>



<p>ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ಮಂಡ್ಯ ಹೊರತುಪಡಿಸಿ ಬೇರೆಲ್ಲಾ ಕ್ಷೇತ್ರಗಳಲ್ಲಿ ಹಾಲಿ ಬಿಜೆಪಿ ಸಂಸದರೇ ಇರುವ ಹಿನ್ನೆಲೆಯಲ್ಲಿ ಈ ಉಳಿದ ಕ್ಷೇತ್ರಗಳ ಸೀಟು ಹಂಚಿಕೆ ಜೆಡಿಎಸ್ ಪಾಲಿಗೆ ಕಗ್ಗಂಟಾಗಿ ಉಳಿಯಲಿದೆ. ಆದರೆ ರಾಜ್ಯ ವಿಧಾನಸಭಾ ಚುನಾವಣೆ ನಂತರ ಈ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯ ಮೆರೆದಿದೆ. ಈ ಕಾರಣದಿಂದ ಜೆಡಿಎಸ್ ಈ ಎಲ್ಲಾ ಕ್ಷೇತ್ರಗಳಲ್ಲಿ ತನ್ನ ಅಸ್ತಿತ್ವ ಸ್ಥಾಪಿಸಲು ಬಿಜೆಪಿ ವರಿಷ್ಟರೊಂದಿಗೆ ಪಟ್ಟು ಹಿಡಿಯಬಹುದು.</p>



<figure class="wp-block-image size-full"><img decoding="async" width="690" height="388" src="https://peepalmedia.com/wp-content/uploads/2023/12/images-2023-12-21T065952.093.jpeg" alt="" class="wp-image-33921" srcset="https://peepalmedia.com/wp-content/uploads/2023/12/images-2023-12-21T065952.093.jpeg 690w, https://peepalmedia.com/wp-content/uploads/2023/12/images-2023-12-21T065952.093-300x169.jpeg 300w, https://peepalmedia.com/wp-content/uploads/2023/12/images-2023-12-21T065952.093-150x84.jpeg 150w" sizes="(max-width: 690px) 100vw, 690px" /></figure>



<p>ಇನ್ನು ಬೆಂಗಳೂರು ಗ್ರಾಮಾಂತರ ಜೆಡಿಎಸ್ ಗೆ ಹೊಸ ಕ್ಷೇತ್ರವೇನೂ ಅಲ್ಲ. ಈ ಹಿಂದೆ 2009 ರಲ್ಲಿ <a href="http://ಹೆಚ್.ಡಿ.ಕುಮಾರಸ್ವಾಮಿ">ಹೆಚ್.ಡಿ.ಕುಮಾರಸ್ವಾಮಿ</a> ಸಂಸದರಾಗಿ ಆಯ್ಕೆಯಾಗಿದ್ದರು. ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಕೂಡಾ ರಾಮನಗರದಲ್ಲಿ ಒಂದು ಅವಧಿಗೆ, ಕುಮಾರಸ್ವಾಮಿ ನಾಲ್ಕು ಅವಧಿಗೆ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಹಾಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಶಾಸಕರೂ ಆಗಿರುವ ಕುಮಾರಸ್ವಾಮಿಗೆ ಬೆಂಗಳೂರು ಗ್ರಾಮಾಂತರದಲ್ಲಿ ಸವಾಲು ಎನ್ನಿಸುವ ಕ್ಷೇತ್ರಗಳೆಂದರೆ ಕನಕಪುರ, ಮಾಗಡಿ, ಆನೇಕಲ್ ಹಾಗೂ ಕುಣಿಗಲ್ ವಿಧಾನಸಭಾ ಕ್ಷೇತ್ರಗಳು.</p>



<p>ಕುಮಾರಸ್ವಾಮಿ ಮಟ್ಟಿಗೆ ಈ ಅವಧಿಯಲ್ಲಿ ಕನಕಪುರ ಗಗನ ಕುಸುಮವೇ ಸರಿ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜ್ಯದ ಇತಿಹಾಸದಲ್ಲೇ ದಾಖಲೆ ಅಂತರದಲ್ಲಿ ಗೆಲುವು ಸಾಧಿಸಿದ ಕ್ಷೇತ್ರವಾಗಿದೆ ಕನಕಪುರ. ಡಿಕೆಶಿ ಬೇರಾವ ಕ್ಷೇತ್ರ ಬಿಟ್ಟುಕೊಟ್ಟರೂ ಕನಕಪುರವನ್ನು ಮಾತ್ರ ಯಾವ ಕಾರಣಕ್ಕೂ ಬಿಟ್ಟು ಕೊಡಲಾರರು. ಇನ್ನು ತಮ್ಮ ಪುತ್ರ ನಿಖಿಲ್ ಸೋಲಿನ ಬಳಿಕ ರಾಮನಗರದ ಜನತೆ ಬಗ್ಗೆ ಕುಮಾರಸ್ವಾಮಿ ನಡೆದುಕೊಂಡ ರೀತಿ ಈಗಲೂ ಚರ್ಚಿತ ವಿಷಯವೇ. ಅದೆಲ್ಲದರ ಹೊರತುಪಡಿಸಿ ಅನುಕಂಪ ಏನಾದರೂ ವರ್ಕೌಟ್ ಆದರೆ ರಾಮನಗರದಲ್ಲಿ ಕುಮಾರಸ್ವಾಮಿ ಹೆಚ್ಚಿನ ಅಂತರದ ಮತ ಪಡೆಯಬಹುದು.</p>



<p>ಇನ್ನು ಮಾಗಡಿ, ಆನೇಕಲ್ ಹಾಗೂ ಕುಣಿಗಲ್ ಈ ಮೂರೂ ಕ್ಷೇತ್ರಗಳಲ್ಲಿ ಜೆಡಿಎಸ್ ಎರಡನೇ ಸ್ಥಾನದಲ್ಲಿದ್ದರೂ ಈ ಬಾರಿ ಜೆಡಿಎಸ್ ಗೆ ಇಲ್ಲಿ ಕಡಿಮೆ ಅಂತರವೇನೂ ಇಲ್ಲ ಎಂಬುದು ಮುಖ್ಯವಾದ ಅಂಶ. ಆದರೆ ನೇರವಾಗಿ ಕುಮಾರಸ್ವಾಮಿಯೇ ಅಖಾಡಕ್ಕೆ ಇಳಿದರೆ ಈ ಮೂರೂ ಕ್ಷೇತ್ರಗಳಲ್ಲಿ ಏನಾದರೂ ಮ್ಯಾಜಿಕ್ ನಡೆದರೂ ಆಶ್ಚರ್ಯವಿಲ್ಲ. ಇವೆಲ್ಲವನ್ನೂ ಹೊರತುಪಡಿಸಿ <a href="http://ಹೆಚ್.ಡಿ.ಕುಮಾರಸ್ವಾಮಿಗೆ">ಹೆಚ್.ಡಿ.ಕುಮಾರಸ್ವಾಮಿಗೆ</a> ಇರುವ ಅತಿ ದೊಡ್ಡ ಮತ್ತು ಬೇಧಿಸಲು ತೀರಾ ಕಷ್ಟಸಾಧ್ಯ ಎನ್ನಿಸುವ ಸವಾಲು ಎಂದರೆ ಅದು ಹಾಲಿ ಸಂಸದ <a href="http://ಡಿ.ಕೆ.ಸುರೇಶ್">ಡಿ.ಕೆ.ಸುರೇಶ್</a>.</p>



<figure class="wp-block-image size-full"><img decoding="async" width="621" height="494" src="https://peepalmedia.com/wp-content/uploads/2023/12/images-2023-12-21T070105.778.jpeg" alt="" class="wp-image-33922" srcset="https://peepalmedia.com/wp-content/uploads/2023/12/images-2023-12-21T070105.778.jpeg 621w, https://peepalmedia.com/wp-content/uploads/2023/12/images-2023-12-21T070105.778-300x239.jpeg 300w, https://peepalmedia.com/wp-content/uploads/2023/12/images-2023-12-21T070105.778-150x119.jpeg 150w" sizes="(max-width: 621px) 100vw, 621px" /></figure>



<p>ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಈ ಕ್ಷಣಕ್ಕೆ ಚುನಾವಣೆ ನಡೆದರೂ ಗೆಲ್ಲೋದು ಬಂಡೆಯಂತೆ ಇರೋ ಡಿಕೆ ಸುರೇಶ್ ಅಂತ ಆ ಕ್ಷೇತ್ರದ ಪ್ರತಿಯೊಬ್ಬರೂ ಅಭಿಪ್ರಾಯ ಪಡುತ್ತಾರೆ. ಯಾಕೆಂದರೆ ಸಂಸದರಾಗಿ ಆಯ್ಕೆ ಆದ ದಿನದಿಂದಲೂ <a href="http://ಡಿ.ಕೆ.ಸುರೇಶ್">ಡಿ.ಕೆ.ಸುರೇಶ್</a> ಕ್ಷೇತ್ರದ ಜನರೊಂದಿಗೆ ದಿನನಿತ್ಯವೂ ಬೆರೆಯುತ್ತಿದ್ದಾರೆ. ಅಷ್ಟು ಮಾತ್ರವಲ್ಲ, ತಮ್ಮ ಕಾರ್ಯಕರ್ತರಲ್ಲಿ ಒಬ್ಬರನ್ನೂ ಬಿಡದೇ ವಿಶ್ವಾಸಕ್ಕೆ ತೆಗೆದುಕೊಂಡು ಹೋಗ್ತಿದ್ದಾರೆ.</p>



<p>ಇನ್ನು ತಂತ್ರಗಾರಿಕೆಯಲ್ಲಿ ಹೇಳುವುದೇ ಆದರೆ ತಮ್ಮ ಅಣ್ಣ ಡಿಕೆ ಶಿವಕುಮಾರ್ ಗಿಂತ ಒಂದು ಕೈ ಮೇಲೆಯೇ ಡಿಕೆ ಸುರೇಶ್ ಇದ್ದಾರೆ ಎಂಬುದರಲ್ಲಿ ಎರಡು ಮಾತಿಲ್ಲ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಡಿಕೆ ಸುರೇಶ್ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಮೂಲಕ ಕಣಕ್ಕಿಳಿಯುವ ಬಗ್ಗೆ ಒಂದು ಊಹಾಪೋಹವಿತ್ತು. ಅಕಸ್ಮಾತ್ ಡಿಕೆ ಸುರೇಶ್ ಕಣಕ್ಕಿಳಿದಿದ್ದರೆ <a href="http://ಆರ್.ಅಶೋಕ್">ಆರ್.ಅಶೋಕ್</a> ಗೆ ಪದ್ಮನಾಭ ನಗರ ಕೂಡಾ ಗೆಲುವಿಗೆ ಏದುಸಿರು ಬಿಡುವುದಿತ್ತು. ಇದಕ್ಕೆ ಇಂಬು ಕೊಡುವಂತೆ ಈಗ ಕೆಲವೇ ತಿಂಗಳ ಹಿಂದೆ ಪದ್ಮನಾಭ ನಗರದಲ್ಲಿ ಘಟಾನುಘಟಿ ಬಿಜೆಪಿ ನಾಯಕರುಗಳ &#8216;ಆಪರೇಷನ್ ಹಸ್ತ&#8217;ದ ಹಿಂದೆ ಇದ್ದದ್ದು ಇದೇ ಡಿಕೆ ಸುರೇಶ್.</p>



<figure class="wp-block-image size-large"><img loading="lazy" decoding="async" width="1024" height="768" src="https://peepalmedia.com/wp-content/uploads/2023/12/IMG-20231221-WA0077-1024x768.jpg" alt="" class="wp-image-33923" srcset="https://peepalmedia.com/wp-content/uploads/2023/12/IMG-20231221-WA0077-1024x768.jpg 1024w, https://peepalmedia.com/wp-content/uploads/2023/12/IMG-20231221-WA0077-300x225.jpg 300w, https://peepalmedia.com/wp-content/uploads/2023/12/IMG-20231221-WA0077-768x576.jpg 768w, https://peepalmedia.com/wp-content/uploads/2023/12/IMG-20231221-WA0077-1536x1152.jpg 1536w, https://peepalmedia.com/wp-content/uploads/2023/12/IMG-20231221-WA0077-2048x1536.jpg 2048w, https://peepalmedia.com/wp-content/uploads/2023/12/IMG-20231221-WA0077-150x113.jpg 150w, https://peepalmedia.com/wp-content/uploads/2023/12/IMG-20231221-WA0077-696x522.jpg 696w, https://peepalmedia.com/wp-content/uploads/2023/12/IMG-20231221-WA0077-1068x801.jpg 1068w, https://peepalmedia.com/wp-content/uploads/2023/12/IMG-20231221-WA0077-1920x1440.jpg 1920w" sizes="auto, (max-width: 1024px) 100vw, 1024px" /></figure>



<p>ಇದೆಲ್ಲದರ ನಡುವೆ <a href="http://ಹೆಚ್.ಡಿ.ಕುಮಾರಸ್ವಾಮಿ">ಹೆಚ್.ಡಿ.ಕುಮಾರಸ್ವಾಮಿ</a> ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಶತಾಯಗತಾಯ ಜೆಡಿಎಸ್ ಪಕ್ಷದ ಹೀನಾಯ ಸೋಲಿಗೆ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಉತ್ತರ ಕೊಡುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಆದರೆ ಗೆಲುವು ಮಾತ್ರ ತೀರಾ ಕಷ್ಟ ಎನ್ನುವಂತಿದೆ. ಅಷ್ಟಕ್ಕೂ ಬಿಜೆಪಿ ಹೈಕಮಾಂಡ್ ಎಷ್ಟು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲಿದೆ, ಜೆಡಿಎಸ್ ಇದಕ್ಕೆ ತೃಪ್ತಿ ಹೊಂದಲಿದೆಯೇ ಎಂಬುದನ್ನು ಮಾತ್ರ ಕಾದು ನೋಡಬೇಕಿದೆ.</p>
]]></content:encoded>
					
		
		
			</item>
	</channel>
</rss>
