<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>baskar rav &#8211; Peepal Media</title>
	<atom:link href="https://peepalmedia.com/tag/baskar-rav/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 20 Dec 2022 10:18:44 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>baskar rav &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಎಎಪಿ ಅಧಿಕಾರಕ್ಕೆ ಬಂದರೆ ಶೀಘ್ರವೇ ಒಪಿಎಸ್‌ ಜಾರಿ: ಭಾಸ್ಕರ್‌ ರಾವ್</title>
		<link>https://peepalmedia.com/if-aap-comes-to-power-ops-will-be-implemented-soon-bhaskar-rao/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 20 Dec 2022 10:18:43 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[Aam Aadmi Party]]></category>
		<category><![CDATA[baskar rav]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[NPS]]></category>
		<category><![CDATA[OPS]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=18622</guid>

					<description><![CDATA[ಬೆಂಗಳೂರು: ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಮರುಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಆಮ್‌ ಆದ್ಮಿ ಪಾರ್ಟಿ ಬೆಂಬಲ ಸೂಚಿಸಿದ್ದು, ಪಕ್ಷದ ಮುಖಂಡರೊಂದಿಗೆ ಫ್ರೀಡಂ ಪಾರ್ಕ್‌ಗೆ ತೆರಳಿದ ರಾಜ್ಯ ಎಎಪಿ ಉಪಾಧ್ಯಕ್ಷ ಭಾಸ್ಕರ್‌ ರಾವ್‌ರವರು ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಶೀಘ್ರವೇ ಎನ್‌ಪಿಎಸ್‌ ರದ್ದುಪಡಿಸಿ, ಒಪಿಎಸ್‌ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಭಾಸ್ಕರ್‌ ರಾವ್‌, ʼಅಧಿಕಾರ ಸಿಕ್ಕರೆ ಒಪಿಎಸ್‌ ಜಾರಿಗೆ ತರುವುದಾಗಿ ಪಂಜಾಬ್‌ ಚುನಾವಣೆ ವೇಳೆ ಆಮ್‌ ಆದ್ಮಿ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಮರುಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಆಮ್‌ ಆದ್ಮಿ ಪಾರ್ಟಿ ಬೆಂಬಲ ಸೂಚಿಸಿದ್ದು, ಪಕ್ಷದ ಮುಖಂಡರೊಂದಿಗೆ ಫ್ರೀಡಂ ಪಾರ್ಕ್‌ಗೆ ತೆರಳಿದ ರಾಜ್ಯ ಎಎಪಿ ಉಪಾಧ್ಯಕ್ಷ ಭಾಸ್ಕರ್‌ ರಾವ್‌ರವರು ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಶೀಘ್ರವೇ ಎನ್‌ಪಿಎಸ್‌ ರದ್ದುಪಡಿಸಿ, ಒಪಿಎಸ್‌ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ.</p>



<p>ಪ್ರತಿಭಟನೆಯಲ್ಲಿ ಮಾತನಾಡಿದ ಭಾಸ್ಕರ್‌ ರಾವ್‌, ʼಅಧಿಕಾರ ಸಿಕ್ಕರೆ ಒಪಿಎಸ್‌ ಜಾರಿಗೆ ತರುವುದಾಗಿ ಪಂಜಾಬ್‌ ಚುನಾವಣೆ ವೇಳೆ ಆಮ್‌ ಆದ್ಮಿ ಪಾರ್ಟಿಯು ಗ್ಯಾರೆಂಟಿ ನೀಡಿತ್ತು. ಅದರಂತೆ ಅಲ್ಲಿನ ಸಚಿವ ಸಂಪುಟವು ಒಪಿಎಸ್‌ ಜಾರಿಗೆ ನವೆಂಬರ್‌ ತಿಂಗಳಿನಲ್ಲಿ ಅನುಮೋದನೆ ನೀಡಿ, ಸರ್ಕಾರವು ಗೆಜೆಟ್‌ ನೋಟಿಫಿಕೇಷನ್‌ ಹೊರಡಿಸಿದೆ. ಗುಜರಾತ್‌ನಲ್ಲಿ ಕೂಡ ಒಪಿಎಸ್‌ ಜಾರಿ ಕುರಿತು ಎಎಪಿ ಗ್ಯಾರೆಂಟಿ ನೀಡಿತ್ತಾದರೂ ಅಲ್ಲಿ ಪಕ್ಷ ಅಧಿಕಾರಕ್ಕೆ ಬರಲಿಲ್ಲ. ಕರ್ನಾಟಕದಲ್ಲಿ ನಾವು ಅಧಿಕಾರಕ್ಕೆ ಬಂದರೆ ಒಪಿಎಸ್‌ ಜಾರಿಗೆ ತರಲು ಬದ್ಧರಾಗಿದ್ದೇವೆ. ಚುನಾವಣಾ ಪ್ರಣಾಳಿಕೆ ಹಾಗೂ ಜನರಿಗೆ ನೀಡುವ ಗ್ಯಾರೆಂಟಿ ಕಾರ್ಡ್‌ನಲ್ಲಿ ಈ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸುತ್ತೇವೆ. ಎಎಪಿಯು ಸರ್ಕಾರಿ ನೌಕರರ ಹಿತ ಕಾಪಾಡಲು ಸದಾ ಬದ್ಧವಾಗಿರುತ್ತದೆʼ ಎಂದು ಹೇಳಿದ್ದಾರೆ.</p>



<p>ಆಮ್‌ ಆದ್ಮಿ ಪಾರ್ಟಿ ಮುಖಂಡರು ಹಾಗೂ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಬ್ರಿಜೇಶ್‌ ಕಾಳಪ್ಪ ಮಾತನಾಡಿ, &#8216;ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳಿಗೆ ಬಂಡವಾಳಶಾಹಿ ಉದ್ಯಮಿಗಳು ಮಾತ್ರ ಮುಖ್ಯವಾಗಿದ್ದಾರೆ. ನೌಕರರು, ಕಾರ್ಮಿಕರು, ರೈತರು, ಸಣ್ಣಪುಟ್ಟ ಉದ್ದಿಮೆದಾರರು ಸೇರಿದಂತೆ ಜನಸಾಮಾನ್ಯರ ಅಗತ್ಯಗಳು ಬಿಜೆಪಿ ಸರ್ಕಾರಗಳಿಗೆ ಲೆಕ್ಕಕ್ಕೇ ಇಲ್ಲ. ಇಷ್ಟು ದಿನ ಬೇರೆಬೇರೆ ವರ್ಗದ ಜನರು ಪ್ರತಿಭಟನೆ ನಡೆಸುತ್ತಿದ್ದು, ಈಗ ಸರ್ಕಾರಿ ನೌಕರರೇ ಬೀದಿಗಿಳಿಯುವ ಸ್ಥಿತಿ ಬಂದಿದೆ. ಸರ್ಕಾರಿ ನೌಕರರ ಬಗ್ಗೆ ಬಿಜೆಪಿ ನಾಯಕರಿಗೆ ಸ್ವಲ್ಪವಾದರೂ ಕಾಳಜಿಯಿದ್ದರೆ, ಶೀಘ್ರವೇ ಎನ್‌ಪಿಎಸ್‌ ರದ್ದುಪಡಿಸಿ ಒಪಿಎಸ್‌ ಜಾರಿಗೆ ತರಲಿ&#8217; ಎಂದು ಆಗ್ರಹಿಸಿದ್ದಾರೆ.</p>



<p>ಆಮ್‌ ಆದ್ಮಿ ಪಾರ್ಟಿಯ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ರವಿಶಂಕರ್‌ ಮಾತನಾಡಿ, ʼ2006ರ ನಂತರ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಎನ್‌ಪಿಎಸ್‌ನಿಂದಾಗಿ ಅಭದ್ರತೆ ಕಾಡುತ್ತಿದೆ. ನಿವೃತ್ತಿ ನಂತರದ ಬದುಕಿನ ಬಗ್ಗೆ ಅವರು ಚಿಂತೆಗೀಡಾಗಿದ್ದಾರೆ. ಎನ್‌ಪಿಎಸ್‌ ರದ್ದುಪಡಿಸಿ ಒಪಿಎಸ್‌ ಜಾರಿಗೊಳಿಸುವುದರಿಂದ ಸರ್ಕಾರಕ್ಕೆ ಹೆಚ್ಚೇನೂ ಆರ್ಥಿಕ ಹೊರೆ ಆಗುವುದಿಲ್ಲ. ಎನ್‌ಪಿಎಸ್‌ ಟ್ರಸ್ಟ್‌ನಲ್ಲಿ ವಂತಿಗೆ ಮೊತ್ತವೇ 16 ಸಾವಿರ ಕೋಟಿಗೂ ಹೆಚ್ಚಿದ್ದು, ಒಪಿಎಸ್‌ ಜಾರಿಯಾದರೆ ವಂತಿಗೆ ಕಟ್ಟುವುದು ತಪ್ಪುತ್ತದೆ. ಎನ್‌ಪಿಎಸ್‌ ರದ್ದುಗೊಳಿಸಿದಾಗ ಬಡ್ಡಿಸಮೇತ ವಾಪಸ್‌ ಬರುವ ವಂತಿಗೆ ಹಣವನ್ನು ಸರಕಾರದ ಅಭಿವೃದ್ಧಿ ಕಾರ್ಯಗಳಿಗೆ ಬಳಸಬಹುದುʼ ಎಂದು ಹೇಳಿದ್ದಾರೆ.</p>



<p>ಈ ವೇಳೆ ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಸುರೇಶ್‌ ರಾಥೋಡ್‌, ಮೋಹನ್‌ ದಾಸರಿ, ಜ್ಯೋತೀಶ್‌ ಕುಮಾರ್‌ ಮತ್ತಿತರರು ಭಾಗವಹಿಸಿದ್ದರು.</p>
]]></content:encoded>
					
		
		
			</item>
		<item>
		<title>ಕರ್ನಾಟಕ ವಿಧಾನಸಭಾ ಚುನಾವಣೆ: ಗುಜರಾತ್ ಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುವುದಾಗಿ ಎಎಪಿ ಭರವಸೆ</title>
		<link>https://peepalmedia.com/karnataka-assembly-elections-aap-promises-to-do-better-than-gujarat/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 09 Dec 2022 13:11:15 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[Aam Aadmi Party]]></category>
		<category><![CDATA[baskar rav]]></category>
		<category><![CDATA[bengalure]]></category>
		<category><![CDATA[delhi municipal election]]></category>
		<category><![CDATA[gujarath election]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=18068</guid>

					<description><![CDATA[ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಕೆಲವೇ ತಿಂಗಳುಗಳಲ್ಲಿ ನಡೆಯುತ್ತಿದ್ದು, ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ತಮ್ಮದೇ ಆದ ಖ್ಯಾತಿಯ ಮೇಲೆ ಗೆಲ್ಲಬಲ್ಲ ಉತ್ತಮ ಅಭ್ಯರ್ಥಿಗಳನ್ನು ಹುಡುಕುತ್ತದೆ, ಹಾಗೆಯೇ ಚುನಾವಣೆಯಲ್ಲಿ ಗೆಲ್ಲುವ ಸುಮಾರು 60 ಕ್ಷೇತ್ರಗಳತ್ತ ಗಮನ ಹರಿಸಲಾಗುತ್ತಿದೆ ಎಂದು ತಿಳಿಸಿದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಅನ್ನು ಬಿಜೆಪಿಯಿಂದ ವಶಪಡಿಸಿಕೊಂಡ ನಂತರ ಮತ್ತು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ನಂತರ ಎಎಪಿ ಉತ್ಸಾಹಭರಿತವಾಗಿದೆ ಎಂದು ಕರ್ನಾಟಕದ ಎಎಪಿಪಕ್ಷದ ನಾಯಕರು ಹೇಳುತ್ತಿದ್ದಾರೆ. ಈ ಕುರಿತು [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಕೆಲವೇ ತಿಂಗಳುಗಳಲ್ಲಿ ನಡೆಯುತ್ತಿದ್ದು, ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ತಮ್ಮದೇ ಆದ ಖ್ಯಾತಿಯ ಮೇಲೆ ಗೆಲ್ಲಬಲ್ಲ ಉತ್ತಮ ಅಭ್ಯರ್ಥಿಗಳನ್ನು ಹುಡುಕುತ್ತದೆ, ಹಾಗೆಯೇ ಚುನಾವಣೆಯಲ್ಲಿ ಗೆಲ್ಲುವ ಸುಮಾರು 60 ಕ್ಷೇತ್ರಗಳತ್ತ ಗಮನ ಹರಿಸಲಾಗುತ್ತಿದೆ ಎಂದು ತಿಳಿಸಿದೆ.</p>



<p>ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಅನ್ನು ಬಿಜೆಪಿಯಿಂದ ವಶಪಡಿಸಿಕೊಂಡ ನಂತರ ಮತ್ತು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ನಂತರ ಎಎಪಿ ಉತ್ಸಾಹಭರಿತವಾಗಿದೆ ಎಂದು ಕರ್ನಾಟಕದ ಎಎಪಿಪಕ್ಷದ ನಾಯಕರು ಹೇಳುತ್ತಿದ್ದಾರೆ.</p>



<p>ಈ ಕುರಿತು ಶುಕ್ರವಾರ ನಡೆದ ಪತಿಕಾಗೋಷ್ಠಿಯಲ್ಲು ಮಾತನಾಡಿದ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಭಾಸ್ಕರ್ ರಾವ್ ಅವರು, ಗುಜರಾತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಐವರು ಎಎಪಿ ಅಭ್ಯರ್ಥಿಗಳು ʼಹಣ ಮತ್ತು ಸ್ನಾಯುಬಲʼದಿಂದ ಬೆಂಬಲಿತರಾಗಿರಲಿಲ್ಲ ಮತ್ತು ಅವರು ತಮ್ಮದೇ ಆದ ಖ್ಯಾತಿಯಿಂದ ಗೆದ್ದಿದ್ದಾರೆ. ಇದೇ ಮಾರ್ಗವನ್ನು ನಾವು ಕರ್ನಾಟಕದಲ್ಲೂ ಮುಂದುವರೆಸಲು ಬಯಸುತ್ತೇವೆ ಎಂದು ಹೇಳಿದ್ದಾರೆ.</p>



<p>ಕರ್ನಾಟಕದಲ್ಲಿ ಮೇ ತಿಂಗಳೊಳಗೆ ಚುನಾವಣೆ ನಡೆಯಲಿದ್ದು, ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷವು ʼಹೊಸ ಮತ್ತು ಉತ್ತಮ ಅಭ್ಯರ್ಥಿಗಳನ್ನುʼ ಕಣಕ್ಕಿಳಿಸಲಿದೆ. ಹಾಗೆಯೇ 50 ರಿಂದ 60 ʼಗೆಲ್ಲಬಹುದಾದʼ ಕ್ಷೇತ್ರಗಳ ಮೇಲೆ ಗಮನ ಹರಿಸಲಿದೆ ಎಂದು ಭಾಸ್ಕರ್ ರಾವ್ ತಿಳಿಸಿದ್ದಾರೆ.</p>



<p>ʼನಾವು ಗುಜರಾತ್ನಲ್ಲಿ ಏನು ಮಾಡಿದ್ದೇವೆಯೋ ಅದಕ್ಕಿಂತ ಉತ್ತಮ ಛಾಪು ಕರ್ನಾಟಕದಲ್ಲಿಯೂ ಮೂಡಿಸಲಿದ್ದೇವೆ, &nbsp;ನಾವು ತುಂಬಾ ಆಶಾವಾದಿಗಳಾಗಿದ್ದೇವೆ, ಕರ್ನಾಟಕ ವಿಧಾನಸಭಾ ಚುನಾವಣೆಗೆ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಚಾರವು ಖಂಡಿತವಾಗಿಯೂ ಪಕ್ಷದ ಗೆಲುವು, ಸ್ವೀಕಾರಾರ್ಹತೆ ಮತ್ತು ಅವಕಾಶಗಳನ್ನು ಹೆಚ್ಚಿಸುತ್ತದೆ ಎಂದು ರಾವ್ ಅಭಿಪ್ರಾಯ ಪಟ್ಟಿದ್ದಾರೆ<strong>.</strong></p>



<p>ಕರ್ನಾಟಕಕ್ಕೆ ಸಂಪೂರ್ಣವಾಗಿ ಹೊಸ ಮಾದರಿಯ ಅಗತ್ಯವಿದೆ. ಆದರೆ ರಾವ್‌ ಅವರ ಪ್ರಕಾರ ಕಾಂಗ್ರೆಸ್, ಬಿಜೆಪಿ ಮತ್ತು ಮೈತ್ರಿ ಮಾದರಿಗಳನ್ನು ತಿರಸ್ಕರಿಸಿದ್ದಾರೆ.</p>



<p>ಗುಜರಾತ್‌ನಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಕಾಂಗ್ರೆಸ್ ಮತಗಳನ್ನು ತಿಂದು ಹಾಕಿದೆ ಎಂಬ ರಾಜ್ಯದ ಕಾಂಗ್ರೆಸ್‌ ಪಕ್ಷದ ನಾಯಕರ ವಾದದ ಬಗ್ಗೆ ಪ್ರತಿಕ್ರಿಯಿಸಿದ ಅವರು, &nbsp;ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಪಕ್ಷಕ್ಕೆ ತಮ್ಮ ಮತಗಳನ್ನು ಕ್ರೋಢೀಕರಿಸುವುದನ್ನು ಯಾರೂ ತಡೆಯಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.</p>
]]></content:encoded>
					
		
		
			</item>
		<item>
		<title>ಗುಜರಾತ್‌ ಚುನಾವಣೆ: ಆಮ್‌ ಆದ್ಮಿ ಪಾರ್ಟಿ ಪರ ಭಾಸ್ಕರ್‌ ರಾವ್‌ ಪ್ರಚಾರ</title>
		<link>https://peepalmedia.com/gujarat-election-bhaskar-rao-campaign-for-aam-aadmi-party/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 23 Nov 2022 05:15:51 +0000</pubDate>
				<category><![CDATA[ದೇಶ]]></category>
		<category><![CDATA[Aam Aadmi Party]]></category>
		<category><![CDATA[AAP State President Gopal Italia]]></category>
		<category><![CDATA[baskar rav]]></category>
		<category><![CDATA[gujarath]]></category>
		<category><![CDATA[gujarath election]]></category>
		<category><![CDATA[india]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=16256</guid>

					<description><![CDATA[ಗುಜರಾತ್: ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ರವರು ಗುಜರಾತ್‌ ಚುನಾವಣೆಯಲ್ಲಿ ಪಕ್ಷದ ಪರ ಬಿರುಸಿನ ಪ್ರಚಾರದಲ್ಲಿ ಭಾಗಿಯಾಗಿದ್ದು, ಸೂರತ್‌ ಜಿಲ್ಲೆಯ ಕತಾರ್‌ಗಾಮ್‌ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಗುಜರಾತ್‌ ಎಎಪಿ ರಾಜ್ಯಾಧ್ಯಕ್ಷ ಗೋಪಾಲ್‌ ಇಟಾಲಿಯಾ ಪರ ಭಾಸ್ಕರ್‌ ರಾವ್‌ ಮತಯಾಚನೆ ಮಾಡಿದರು. ಪ್ರಚಾರದ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ಭಾಸ್ಕರ್‌ ರಾವ್‌, ʼದೆಹಲಿ ಹಾಗೂ ಪಂಜಾಬ್‌ ನಂತರ ಇದೀಗ ಗುಜರಾತ್‌ನಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಕಳೆದ 27 ವರ್ಷಗಳಲ್ಲಿ ಬಿಜೆಪಿಯು ಗುಜರಾತ್‌ [&#8230;]]]></description>
										<content:encoded><![CDATA[
<p>ಗುಜರಾತ್: ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ರವರು ಗುಜರಾತ್‌ ಚುನಾವಣೆಯಲ್ಲಿ ಪಕ್ಷದ ಪರ ಬಿರುಸಿನ ಪ್ರಚಾರದಲ್ಲಿ ಭಾಗಿಯಾಗಿದ್ದು, ಸೂರತ್‌ ಜಿಲ್ಲೆಯ ಕತಾರ್‌ಗಾಮ್‌ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಗುಜರಾತ್‌ ಎಎಪಿ ರಾಜ್ಯಾಧ್ಯಕ್ಷ ಗೋಪಾಲ್‌ ಇಟಾಲಿಯಾ ಪರ ಭಾಸ್ಕರ್‌ ರಾವ್‌ ಮತಯಾಚನೆ ಮಾಡಿದರು.</p>



<p>ಪ್ರಚಾರದ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ಭಾಸ್ಕರ್‌ ರಾವ್‌, ʼದೆಹಲಿ ಹಾಗೂ ಪಂಜಾಬ್‌ ನಂತರ ಇದೀಗ ಗುಜರಾತ್‌ನಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಕಳೆದ 27 ವರ್ಷಗಳಲ್ಲಿ ಬಿಜೆಪಿಯು ಗುಜರಾತ್‌ ರಾಜ್ಯವನ್ನು ಅಭಿವೃದ್ಧಿ ಪಡಿಸುವ ಬದಲು, ಇಲ್ಲಿನ ಸಣ್ಣಪುಟ್ಟ ಯೋಜನೆಗಳಿಗೆ ದೇಶಾದ್ಯಂತ ಸುಳ್ಳು ಪ್ರಚಾರ ಪಡೆಯುವುದಕ್ಕೆ ಆದ್ಯತೆ ನೀಡಿದೆ. ಗುಜರಾತ್‌ ಮಾಡೆಲ್‌ ಎಂಬುದು ಕಳಪೆ ಮಾಡೆಲ್‌ ಎಂಬುದು ಜನರಿಗೆ ಅರ್ಥವಾಗುತ್ತಿದ್ದು, ಗುಣಮಟ್ಟದ ಮೂಲಸೌಕರ್ಯಗಳಿಗಾಗಿ ಅವರು ಆಮ್‌ ಆದ್ಮಿ ಪಾರ್ಟಿಯನ್ನು ಬೆಂಬಲಿಸುತ್ತಿದ್ದಾರೆ. ಬಿಜೆಪಿಯ ಹಣಬಲ ಹಾಗೂ ತೋಳ್ಬಲದ ನಡುವೆಯೂ ಆಮ್‌ ಆದ್ಮಿ ಪಾರ್ಟಿಗೆ ಜನಬೆಂಬಲವು ವ್ಯಾಪಕವಾಗಿ ಹೆಚ್ಚಾಗುತ್ತಿರುವುದು ಕಂಡುಬರುತ್ತಿದೆ. ವಿವಿಧ ಮಾಧ್ಯಮಗಳ ಇತ್ತೀಚಿನ ಸಮೀಕ್ಷೆಗಳು ಕೂಡ ಇದನ್ನು ದೃಢಪಡಿಸಿವೆʼ ಎಂದು ಹೇಳಿದರು.</p>



<p>ಈ ಸಂದರ್ಭದಲ್ಲಿ, ಆಮ್‌ ಆದ್ಮಿ ಪಾರ್ಟಿಯ ವಲಯ ಉಸ್ತುವಾರಿ ವಿಜಯ್‌ ಶಾಸ್ತ್ರಿಮಠ್‌ ಹಾಗೂ ಪಕ್ಷದ ಮುಖಂಡರಾದ ನಿತ್ಯಾನಂದ ಸಾಹುರವರು ಭಾಸ್ಕರ್‌ ರಾವ್‌ ಜೊತೆಗಿದ್ದರು.</p>
]]></content:encoded>
					
		
		
			</item>
	</channel>
</rss>
