<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>bhavani revanna &#8211; Peepal Media</title>
	<atom:link href="https://peepalmedia.com/tag/bhavani-revanna/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 18 Jun 2024 07:09:27 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>bhavani revanna &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು</title>
		<link>https://peepalmedia.com/kidnapping-victim-case-bhavani-revanna-granted-anticipatory-bail/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 18 Jun 2024 07:09:26 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[bengalure]]></category>
		<category><![CDATA[bhavani revanna]]></category>
		<category><![CDATA[devegowada]]></category>
		<category><![CDATA[hasan]]></category>
		<category><![CDATA[hdd]]></category>
		<category><![CDATA[HDK]]></category>
		<category><![CDATA[hdrevanna]]></category>
		<category><![CDATA[jws]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[prajwalrevanna]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=40909</guid>

					<description><![CDATA[ಬೆಂಗಳೂರು: ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಮಹಿಳೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿರುವ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಈ ಆದೇಶವನ್ನು ಪ್ರಕಟಿಸಿದೆ. ‘ಮಹಿಳೆಯರ ರಕ್ಷಣೆ ವಿಚಾರದಲ್ಲಿ ಅವರನ್ನು ಅನಗತ್ಯವಾಗಿ ವಶಕ್ಕೆ ಪಡೆಯುವ ಅಗತ್ಯವಿಲ್ಲ. ಆದಾಗ್ಯೂ ಅವರನ್ನು ತನಿಖೆಗಾಗಿ ಮೈಸೂರು ಮತ್ತು ಹಾಸನ ಹಾಗೂ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಮಹಿಳೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿರುವ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ</p>



<p>‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಈ ಆದೇಶವನ್ನು ಪ್ರಕಟಿಸಿದೆ. </p>



<p>‘ಮಹಿಳೆಯರ ರಕ್ಷಣೆ ವಿಚಾರದಲ್ಲಿ ಅವರನ್ನು ಅನಗತ್ಯವಾಗಿ ವಶಕ್ಕೆ ಪಡೆಯುವ ಅಗತ್ಯವಿಲ್ಲ. ಆದಾಗ್ಯೂ ಅವರನ್ನು ತನಿಖೆಗಾಗಿ ಮೈಸೂರು ಮತ್ತು ಹಾಸನ ಹಾಗೂ ಅಗತ್ಯವಿದ್ದ ಕಡೆ ಕರೆದುಕೊಂಡು ಹೋಗಬಹುದಾಗಿದೆ. ಈಗಾಗಲೇ ಅರ್ಜಿದಾರರು ತನಿಖೆಗೆ ಸಹಕಾರ ನೀಡಿದ್ದಾರೆ. ಅವರಿಗೆ ತನಿಖೆಯ ವೇಳೆ 85 ಪ್ರಶ್ನೆಗಳನ್ನು ಕೇಳಲಾಗಿದೆ. ಅವರು ಎಲ್ಲವಕ್ಕೂ ಉತ್ತರಿಸಿದ್ದಾರೆ. ಪೊಲೀಸರು ಕೇಳಿದ ರೀತಿಯಲ್ಲೇ ಉತ್ತರಿಸಬೇಕು ಎಂದು ಹೇಳಲಾಗುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.</p>



<p><strong>ಮಾದ್ಯಮಗಳಿಗೆ ಬುದ್ಧಿ ಹೇಳಿದ ಕೋರ್ಟ್‌: </strong>ಸಾಮಾನ್ಯ ಜನರು ಮಾಧ್ಯಮಗಳನ್ನು ಗಮನಿಸಿ ಚರ್ಚೆ ನಡೆಸುತ್ತಾರೆ. ಆದರೆ, ಈ ಬಗ್ಗೆ ಯಾರೂ ನಿರ್ಧಾರ ಮಾಡುವುದಕ್ಕೆ ಸಾಧ್ಯವಿಲ್ಲ ಪತ್ರಿಕೆಗಳನ್ನು ನೋಡಿ ನಾವು ಆದೇಶ ನೀಡಲಾಗದು. ನಾಗರಿಕ ಸಮಾಜ ಸ್ವಲ್ಪ ಸಂಯಮ ಪ್ರದರ್ಶನ ಮಾಡಬೇಕು’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>



<p>‘ಸ್ತ್ರೀಯರು ಈ ರೀತಿಯ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಅಂಶಗಳಿರುವಾಗ ವಾರ್ತಾ ಪತ್ರಿಕೆಗಳು, ಎಲೆಕ್ಟ್ರಾನಿಕ್ ಮಾಧ್ಯಮಗಳು ಸಂಯಮದಿಂದ ಇರಬೇಕಾಗುತ್ತದೆ. ಈಗಲೇ ಅಪರಾಧಿ ಎಂದರೆ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆಯಾಗಲಿದೆ. ಮಾಧ್ಯಮಗಳ ವಿಚಾರಣೆ ಪರಿಗಣಿಸಲಾಗದು’ ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ನ್ಯಾಯಪೀಠ ಉಲ್ಲೇಖಿಸಿದೆ.</p>



<p>ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.</p>



<p>ಪ್ರಕರಣದ ಮೊದಲ ಆರೋಪಿ ಎಚ್‌.ಡಿ.ರೇವಣ್ಣ ಬಂಧನಕ್ಕೊಳಗಾಗಿದ್ದರು. ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದಲ್ಲಿ ಭವಾನಿ ಅವರ ಹೆಸರೂ ಕೇಳಿ ಬಂದ ಕಾರಣ ಭವಾನಿ ನಿರೀಕ್ಷಣಾ ಜಾಮೀನು ಕೋರಿದ್ದರು. ಅವರನ್ನು ಬಂಧಿಸದಂತೆ ಹೈಕೋರ್ಟ್‌ನ ಜನಪ್ರತಿನಿಧಿಗಳ ವಿಶೇಷ ನ್ಯಾಯಪೀಠ ಮಧ್ಯಂತರ ಜಾಮೀನು ನೀಡಿತ್ತು. ತನಿಖಾಧಿಕಾರಿ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ಇದೇ 7ರಂದು ಸೂಚಿಸಿತ್ತು.</p>
]]></content:encoded>
					
		
		
			</item>
		<item>
		<title>ಮಗನ ಬಂಧನ ಬೆನ್ನಲ್ಲೆ ತಾಯಿಗೂ ನೋಟಿಸ್‌: ನಾಳೆ ವಿಚಾರಣೆಗೆ ಹಾಜರಾಗಲು ಭವಾನಿಗೆ SIT ಸೂಚನೆ</title>
		<link>https://peepalmedia.com/notice-to-mother-after-sons-arrest-bhavani-instructed-to-attend-hearing-tomorrow/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 31 May 2024 06:58:44 +0000</pubDate>
				<category><![CDATA[ಹಾಸನ]]></category>
		<category><![CDATA[#Kumaraswamy #JDS #ramanagara #mysore #kodagu #kannadaexpress9 #prathapsimha #Simha #SaRaMahesh #GTDevegowda #DeveGowda #HDK H D Kumaraswamy]]></category>
		<category><![CDATA[bengalure]]></category>
		<category><![CDATA[bhavani revanna]]></category>
		<category><![CDATA[h d revanna]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Prajwal Revanna]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=40158</guid>

					<description><![CDATA[ಹಾಸನ: ಇಂದು ಬೆಳಗಿ ಜಾವ ಜರ್ಮನಿಯಿಂದ ಆಗಮಿಸಿದ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಂಧನದ ಬೆನ್ನಲ್ಲೆ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ಎಸ್‌ಐಟಿ ತಂಡ ಮತ್ತೊಂದು ನೋಟೀಸ್‌ ನೀಡಿದೆ. ಕೆ.ಆರ್‌. ನಗರ ತಾಲ್ಲೂಕಿನ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 1ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಎಸ್‌ಐಟಿ ತಂಡ, ಭವಾನಿ ಅವರಿಗೆ ನೋಟಿಸ್‌ ಜಾರಿಗೆ ಮಾಡಿದೆ. ಮೊದಲು ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ಅವರು ತನಿಖೆಗೆ ಅವಶ್ಯವಿದ್ದರೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇರುವುದಾಗಿ ಭವಾನಿ ತಿಳಿಸಿದ್ದರು. [&#8230;]]]></description>
										<content:encoded><![CDATA[
<p>ಹಾಸನ: ಇಂದು ಬೆಳಗಿ ಜಾವ ಜರ್ಮನಿಯಿಂದ ಆಗಮಿಸಿದ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಂಧನದ ಬೆನ್ನಲ್ಲೆ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ಎಸ್‌ಐಟಿ ತಂಡ ಮತ್ತೊಂದು ನೋಟೀಸ್‌ ನೀಡಿದೆ. </p>



<p> ಕೆ.ಆರ್‌. ನಗರ ತಾಲ್ಲೂಕಿನ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 1ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಎಸ್‌ಐಟಿ ತಂಡ, ಭವಾನಿ ಅವರಿಗೆ ನೋಟಿಸ್‌ ಜಾರಿಗೆ ಮಾಡಿದೆ. ಮೊದಲು ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ  ಅವರು ತನಿಖೆಗೆ ಅವಶ್ಯವಿದ್ದರೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇರುವುದಾಗಿ ಭವಾನಿ ತಿಳಿಸಿದ್ದರು. ಆ</p>



<p>‘ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ಒಳೆಗೆ ವಿಚಾರಣೆಗೆ ಬರುತ್ತೇವೆ. ಆ ಸಂದರ್ಭದಲ್ಲಿ ಮನೆಯಲ್ಲಿ ಖುದ್ದು ಹಾಜರಿರಬೇಕು’ ಎಂದು ಎಸ್ಐಟಿ ಇನ್‌ಸ್ಪೆಕ್ಟರ್ ಹೇಮಂತ್ ಕುಮಾರ್ ನೀಡಿರುವ ನೋಟಿಸ್‌ನಲ್ಲಿ ಸೂಚನೆ ನೀಡಿದ್ದಾರೆ. </p>



<p>ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.  ಶುಕ್ರವಾರ ವಿಚಾರಣೆ ನಡೆಯಲಿದೆ. ಈ ಮಧ್ಯೆ ಎಸ್‌ಐಟಿ ಖುದ್ದು ಹಾಜರಿರುವಂತೆ ನೋಟಿಸ್‌ ನೀಡಿದ್ದು, ನಿರೀಕ್ಷಣಾ ಜಾಮೀನು ಸಿಗದಿದ್ದರೆ ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. </p>
]]></content:encoded>
					
		
		
			</item>
		<item>
		<title>ಪ್ರಜ್ವಲ್‌ ವಿಡಿಯೋ ಕೊಟ್ಟಿದ್ದು ನಾನೇ: ಮಾಜಿ ಚಾಲಕ ಕಾರ್ತಿಕ್</title>
		<link>https://peepalmedia.com/prajwal-revannas-former-driver-gave-his-videos/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 30 Apr 2024 06:44:31 +0000</pubDate>
				<category><![CDATA[ಅಪರಾಧ]]></category>
		<category><![CDATA[bhavani revanna]]></category>
		<category><![CDATA[Hasana]]></category>
		<category><![CDATA[JDS]]></category>
		<category><![CDATA[pendrive]]></category>
		<category><![CDATA[prajwal]]></category>
		<category><![CDATA[Prajwal Revanna]]></category>
		<category><![CDATA[revanna]]></category>
		<category><![CDATA[sex scandle]]></category>
		<category><![CDATA[Sexual abuse]]></category>
		<guid isPermaLink="false">https://peepalmedia.com/?p=38951</guid>

					<description><![CDATA[ಹಾಸನ: ಪ್ರಜ್ವಲ್​​‌ ಅಶ್ಲೀಲ ವಿಡಿಯೋ ನಾನೇ ಕೊಟ್ಟಿದ್ದು ನಾನೇ ಎಂದು ಪ್ರಜ್ವಲ್‌ ಮಾಜಿ ಚಾಲಕ ಕಾರ್ತಿಕ್‌ ಬಹಿರಂಗ ಪಡಿಸಿದ್ದಾರೆ. &#8220;ನಾನು ಅವರ ಬಳಿಕ ಕೆಲಸ ಮಾಡುತ್ತಿದ್ದೆ, ಅವರಿಂದ ನನಗೆ ಅನ್ಯಾಯವಾದ ಸಲುವಾಗಿ ನಾನು ಅಲ್ಲಿ ಕೆಲಸ ಬಿಟ್ಟೆ ಅಂತ ಹೇಳಿದೆ. ಇನ್ನೂ ನನ್ನ ವಿರುದ್ದ ನ್ಯಾಯಾಲಯದಿಂದ ಮಾನ ಹಾನಿ ಪ್ರಕರಣವನ್ನು ಪ್ರಕಟ ಮಾಡದಂತೆ ಪ್ರಜ್ವಲ್‌ ಆದೇಶವನ್ನು ತಂದರು,&#8221; ಎಂದು ಕಾರ್ತಿಕ್‌ ವಿಡಿಯೋದಲ್ಲಿ ಹೇಳಿದ್ದಾರೆ. &#8220;ಇನ್ನೂ ನನ್ನ ಬಳಿ ಇರುವ ವಿಡಿಯೋ, ಪೋಟೋಗಳನ್ನು ಕೊಡುವಂತೆ ದೇವರಾಜೇಗೌಡರು ಕೇಳಿದರು. ಇದಲ್ಲದೇ [&#8230;]]]></description>
										<content:encoded><![CDATA[
<p><strong>ಹಾಸನ: </strong>ಪ್ರಜ್ವಲ್​​‌ ಅಶ್ಲೀಲ ವಿಡಿಯೋ ನಾನೇ ಕೊಟ್ಟಿದ್ದು ನಾನೇ ಎಂದು ಪ್ರಜ್ವಲ್‌ ಮಾಜಿ ಚಾಲಕ ಕಾರ್ತಿಕ್‌ ಬಹಿರಂಗ ಪಡಿಸಿದ್ದಾರೆ. </p>



<p>&#8220;ನಾನು ಅವರ ಬಳಿಕ ಕೆಲಸ ಮಾಡುತ್ತಿದ್ದೆ, ಅವರಿಂದ ನನಗೆ ಅನ್ಯಾಯವಾದ ಸಲುವಾಗಿ ನಾನು ಅಲ್ಲಿ ಕೆಲಸ ಬಿಟ್ಟೆ ಅಂತ ಹೇಳಿದೆ. ಇನ್ನೂ ನನ್ನ ವಿರುದ್ದ ನ್ಯಾಯಾಲಯದಿಂದ ಮಾನ ಹಾನಿ ಪ್ರಕರಣವನ್ನು ಪ್ರಕಟ ಮಾಡದಂತೆ ಪ್ರಜ್ವಲ್‌ ಆದೇಶವನ್ನು ತಂದರು,&#8221; ಎಂದು ಕಾರ್ತಿಕ್‌ ವಿಡಿಯೋದಲ್ಲಿ ಹೇಳಿದ್ದಾರೆ.</p>



<p>&#8220;ಇನ್ನೂ ನನ್ನ ಬಳಿ ಇರುವ ವಿಡಿಯೋ, ಪೋಟೋಗಳನ್ನು ಕೊಡುವಂತೆ ದೇವರಾಜೇಗೌಡರು ಕೇಳಿದರು. ಇದಲ್ಲದೇ ಇದು ನಾನು ಕೋರ್ಟ್‌ಗೆ ನೀಡುವುದಾಗಿ ಹೇಳಿದರು. ಕೆಲ ದಿನಗಳ ನಂತರ ಈ ಬಗ್ಗೆ ಕೇಳಿದಾಗ ʼಮುಂದೆ ಈ ಬಗ್ಗೆ ನಿರ್ಧಾರ ಮಾಡುವುದಾಗಿ ಹೇಳಿದರುʼ ಅಂತ ಹೇಳಿದರು. ಇನ್ನೂ ನಾನು ದೇವರಾಜೇಗೌಡರಿಗೆ ಬಿಟ್ಟರೆ ಬೇರೆ ಯಾರಿಗೂ ಕೂಡ ವಿಡಿಯೋವನ್ನು ನೀಡಿಲ್ಲ. ಇದು ಹೇಗೆ ಬೇರೆಯವರಿಗೆ ಹೋಗಿದೆ ಎಂಬುದು ತಿಳಿದಿಲ್ಲ. ನಾನು ಈಕೂಡಲೇ ಎಸ್‌ಐಟಿ ತನಿಖೆ ಮುಂದೆ ಹಾಜರಾಗಿ ನನಗೆ ತಿಳಿದಿರುವ ಬಗ್ಗೆ ಮಾಹಿತಿಯನ್ನು ನೀಡುವತ್ತೇನೆ,&#8221; ಎಂದು ಹೇಳಿದ್ದಾರೆ. </p>



<p> ಪ್ರಜ್ವಲ್‌ ವಿಡಿಯೋ ಬಹಿರಂಗದ ಹಿಂದೆ ಕಾಂಗ್ರೇಸ್‌ ಪಕ್ಷದ ಕೈವಾಡವಿಲ್ಲ ಎಂದು ಕಾರ್ತಿಕ್‌ ಸ್ಪಷ್ಟಪಡಿಸಿದ್ದಾರೆ. </p>



<p>ಪ್ರಜ್ವಲ್ ರೇವಣ್ಣ ಹಾಗೂ ಭವಾನಿ ರೇವಣ್ಣ ಇಬ್ಬರೂ ಹೊಳೆನರಸೀಪುರ ಠಾಣೆ ಪೊಲೀಸರ ಮೂಲಕ ಬಲವಂತವಾಗಿ ಕರೆದೊಯ್ದು, ಚಿತ್ರಹಿಂಸೆ ನೀಡಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಕಾರ್ತಿಕ್‌ ಆರೋಪ ಮಾಡಿದ್ದರು. ಹೊಳೆನರಸೀಪುರ ತಾಲ್ಲೂಕಿನಲ್ಲಿ ಇರುವ 13 ಎಕರೆ ಭೂಮಿಗಾಗಿ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. </p>



<p>ಹತ್ತು ವರ್ಷಗಳಿಗೂ ಹೆಚ್ಚು ಕಾಲ ಪ್ರಜ್ವಲ್ ರೇವಣ್ಣನ ಕಾರು ಚಾಲಕನಾಗಿದ್ದ ಕಾರ್ತಿಕ್, ಇದೀಗ ಪ್ರಜ್ವಲ್ ರೇವಣ್ಣ, ರೇವಣ್ಣ ಪತ್ನಿ ಭವಾನಿ ವಿರುದ್ಧ ದೂರು ನೀಡಿದ್ದಾರೆ. 2023ರ ಮಾರ್ಚ್ 12ರಂದು ತನ್ನನ್ನು ಕಿಡ್ನಾಪ್ ಮಾಡಿದ್ದರು ಎಂದು ಆರೋಪ ಮಾಡಿದ್ದಾರೆ.</p>



<p>ಕಾರ್ತಿಕ್ ಮತ್ತು ಅವರ ಪತ್ನಿ ಶಿಲ್ಪ ಅವರ ಮೇಲೆ 2023ರ ಮಾರ್ಚ್‌ನಲ್ಲಿ ಭವಾನಿ ರೇವಣ್ಣ ಹಲ್ಲೆ ನಡೆಸಿದ್ದು, ಇದರಿಂದಾಗಿ ಶಿಲ್ಪ ಅವರಿಗೆ ಗರ್ಭಪಾತವಾಗಿದೆ ಎಂದು ಆರೋಪಿಸಿ ಹಾಸನದಲ್ಲಿ ಮಾಜಿ ಶಾಸಕ ಎಟಿ ರಾಮಸ್ವಾಮಿ ಮತ್ತು ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದ್ದರು. ಈ ಕುರಿತು ಕಾರ್ತಿಕ್‌ ಅವರು ಭವಾನಿ ರೇವಣ್ಣ ವಿರುದ್ಧ ಕೇಸು ನೀಡಿದ್ದರೂ ಪೊಲೀಸರು ಪ್ರಕರಣ ದಾಖಲಿಸಿರಲಿಲ್ಲ.</p>
]]></content:encoded>
					
		
		
			</item>
	</channel>
</rss>
