<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>BJP ADVERTISMENT &#8211; Peepal Media</title>
	<atom:link href="https://peepalmedia.com/tag/bjp-advertisment/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 05 Jun 2024 06:52:35 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>BJP ADVERTISMENT &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ʼಇಂಡಿಯಾʼ ಕೂಟದಿಂದ ಪ್ರಧಾನಿ ಅಭ್ಯರ್ಥಿ ಯಾರೆಂದು ಇಂದು ನಿರ್ಧರಿಸುತ್ತೇವೆ: ಉದ್ಧವ್ ಠಾಕ್ರೆ</title>
		<link>https://peepalmedia.com/today-we-will-decide-who-will-be-the-prime-ministerial-candidate-from-the-india-party-uddhav-thackeray/</link>
		
		<dc:creator><![CDATA[Peepal Media]]></dc:creator>
		<pubDate>Wed, 05 Jun 2024 06:51:38 +0000</pubDate>
				<category><![CDATA[ಲೋಕಸಭೆ ಚುನಾವಣೆ -2024]]></category>
		<category><![CDATA[bengalure]]></category>
		<category><![CDATA[BJP ADVERTISMENT]]></category>
		<category><![CDATA[india]]></category>
		<category><![CDATA[NDA]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Uddhav Thackeray]]></category>
		<guid isPermaLink="false">https://peepalmedia.com/?p=40374</guid>

					<description><![CDATA[ಮುಂಬೈ: ‌ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗೊಳಿಸುವುದು ಮತ್ತು ಮತ್ತು ಸಂವಿಧಾನವನ್ನು ಉಳಿಸುವುದು ನಮ್ಮ ಉದ್ದೇಶ. ಹೀಗಾಗಿ ಇಂಡಿಯಾ ಕೂಟದಿಂದ ಕಾರ್ಯತಂತ್ರ ಜಾರಿಯಲ್ಲಿದ್ದು, ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ಇಂದಿನ ಸಭೆಯಲ್ಲಿ ನಿರ್ಧರಿಸಲಿದ್ದೇವೆ ಎಂಬುದರ ಕುರಿತು ಸಭೆಯಲ್ಲಿ ನಿರ್ಧರಿಸುತ್ತೇವೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ. 543 ಸದಸ್ಯ ಬಲದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 291 ಸ್ಥಾನಗಳನ್ನು ಹಾಗೂ &#8216;ಇಂಡಿಯಾ&#8217; ಮೈತ್ರಿಕೂಟ 234 ಸ್ಥಾನಗಳು ಸಾಧಿಸಿವೆ. ಸರ್ಕಾರ [&#8230;]]]></description>
										<content:encoded><![CDATA[
<p><strong>ಮುಂಬೈ:</strong> ‌ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗೊಳಿಸುವುದು ಮತ್ತು ಮತ್ತು ಸಂವಿಧಾನವನ್ನು ಉಳಿಸುವುದು ನಮ್ಮ ಉದ್ದೇಶ. ಹೀಗಾಗಿ ಇಂಡಿಯಾ ಕೂಟದಿಂದ ಕಾರ್ಯತಂತ್ರ ಜಾರಿಯಲ್ಲಿದ್ದು, ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ಇಂದಿನ ಸಭೆಯಲ್ಲಿ ನಿರ್ಧರಿಸಲಿದ್ದೇವೆ ಎಂಬುದರ ಕುರಿತು ಸಭೆಯಲ್ಲಿ ನಿರ್ಧರಿಸುತ್ತೇವೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.</p>



<p>543 ಸದಸ್ಯ ಬಲದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 291 ಸ್ಥಾನಗಳನ್ನು ಹಾಗೂ &#8216;ಇಂಡಿಯಾ&#8217; ಮೈತ್ರಿಕೂಟ 234 ಸ್ಥಾನಗಳು ಸಾಧಿಸಿವೆ. ಸರ್ಕಾರ ರಚಿಸುವ ಕಸರತ್ತು ಎರಡು ಕೂಟಗಳಲ್ಲೂ ಜಾರಿಯಲ್ಲಿದ್ದು, ಈ ಸಂಬಂಧ ಎನ್‌ಡಿಎ ಹಾಗೂ ಇಂಡಿಯಾ ನಾಯಕರು ಇಂದು ಸಭೆ ಸೇರಲಿದ್ದಾರೆ. </p>



<p>ಸುದ್ದಿಗಾರರೊಂದಿಗೆ ಮಾತನಾಡಿದ ಠಾಕ್ರೆ, ‘ಇಂಡಿಯಾ’ ಮೈತ್ರಿಕೂಟ ರಚನೆಯಾದ ದಿನವೇ ನಾವು ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗಾಣಿಸುವುದರ ಜತೆಗೆ ಸಂವಿಧಾನವನ್ನು ಉಳಿಸಬೇಕೆಂದು ನಮ್ಮ ಕೂಟದ ಉದ್ದೇಶವಾಗಿತ್ತು ಎಂದು ಹೇಳಿದ್ದಾರೆ. </p>



<p>ಈ ಬಾರಿ ಮಹಾರಾಷ್ಟ್ರದಲ್ಲಿ 45 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಕೇವಲ 17 ಸ್ಥಾನಗಳು ಸಿಕ್ಕಿವೆ. ಆದರೆ, ನಾವು (ಇಂಡಿಯಾ ಬಣ) 28 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೇವೆ ಎಂದಿದ್ದಾರೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡುಗೆ ಕಿರುಕುಳ ನೀಡುತ್ತಿದೆ ಎಂದು ಠಾಕ್ರೆ ಆರೋಪಿಸಿದ್ದಾರೆ.</p>



<p>ಸಂವಿಧಾನ ವಿರೋಧಿಗಳು ಮತ್ತು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ದೇಶದಲ್ಲಿ ಸ್ಥಾನವಿಲ್ಲ ಎಂಬುದನ್ನು ದೇಶದ ಜನರು ತೋರಿಸಿಕೊಟ್ಟಿದ್ದಾರೆ ಎಂದು ಶಿವಸೇನಾ  ಮತ್ತೊಬ್ಬ ನಾಯಕ ಆದಿತ್ಯ ಠಾಕ್ರೆ ಹೇಳಿಕೆ ನೀಡಿದ್ದಾರೆ. </p>
]]></content:encoded>
					
		
		
			</item>
		<item>
		<title>ಇಲ್ಲಿ ನಮ್ಮವರಿಗೆ ಉದ್ಯೋಗ ಇಲ್ಲ, ಪಾಕಿಸ್ತಾನದಿಂದ ಕರೆತಂದು ಉದ್ಯೋಗ ಕೊಡುವುದು ಸರಿಯೇ?: CAA ಕುರಿತು ಕೇಜ್ರಿವಾಲ್‌ ಪ್ರತಿಕ್ರಿಯೆ</title>
		<link>https://peepalmedia.com/we-dont-have-jobs-here-is-it-right-to-bring-jobs-from-pakistan-kejriwals-response-on-caa/</link>
		
		<dc:creator><![CDATA[Peepal Media]]></dc:creator>
		<pubDate>Wed, 13 Mar 2024 12:01:59 +0000</pubDate>
				<category><![CDATA[ಚುನಾವಣೆ 2023- ಪರಿಣಾಮ]]></category>
		<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ದೇಶ]]></category>
		<category><![CDATA[ವ್ಯಾಪಾರ- ವಹಿವಾಟು]]></category>
		<category><![CDATA[Aam Aadmi Party]]></category>
		<category><![CDATA[AAP]]></category>
		<category><![CDATA[aravind kejrival]]></category>
		<category><![CDATA[BJP ADVERTISMENT]]></category>
		<category><![CDATA[bjp dirty politics]]></category>
		<category><![CDATA[bjp govt]]></category>
		<category><![CDATA[Bjp IT cell]]></category>
		<category><![CDATA[bjp karnataka]]></category>
		<category><![CDATA[BJP leader]]></category>
		<category><![CDATA[bjp narendra modi]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[modi]]></category>
		<category><![CDATA[modi government]]></category>
		<category><![CDATA[modiji]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=36985</guid>

					<description><![CDATA[ನವದೆಹಲಿ: ಇಲ್ಲಿ ನಮ್ಮ ನಮ್ಮ ದೇಶದ ಯುವಜನರಿಗೆ ಉದ್ಯೋಗ ಇಲ್ಲ, ಪಾಕಿಸ್ತಾನ, ಅಪಘಾನಿಸ್ತಾನಗಳಿಂದ ಜನರನ್ನು ಕರೆತಂದು ಅವರಿಗೆ ಉದ್ಯೋಗ ಕೊಡುವುದು ಸರಿಯೇ ಎಂದು ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಪ್ರಶ್ನಿಸಿದ್ದಾರೆ. ಸಿಎಎ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ಈ ಮೂರು ದೇಶಗಳ ಹಿಂದೂ ಧಾರ್ಮಿಕ ಅಲ್ಪಸಂಖ್ಯಾತರು ಭಾರತೀಯ ಪೌರತ್ವ ಪಡೆಯಲು ಬಯಸಿದರೆ ಅಂಥವರಿಗೆ ಮಾತ್ರ ಸಿಎಎ ಕಾನೂನು ಅನ್ವಯ ಬಿಜೆಪಿಯ ಕೇಂದ್ರ ಸರ್ಕಾರ ಹೇಳುತ್ತದೆ. ಅಂದರೆ  ಹೆಚ್ಚಿನ [&#8230;]]]></description>
										<content:encoded><![CDATA[
<p>ನವದೆಹಲಿ: ಇಲ್ಲಿ ನಮ್ಮ ನಮ್ಮ ದೇಶದ ಯುವಜನರಿಗೆ ಉದ್ಯೋಗ ಇಲ್ಲ, ಪಾಕಿಸ್ತಾನ, ಅಪಘಾನಿಸ್ತಾನಗಳಿಂದ ಜನರನ್ನು ಕರೆತಂದು ಅವರಿಗೆ ಉದ್ಯೋಗ ಕೊಡುವುದು ಸರಿಯೇ ಎಂದು ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಪ್ರಶ್ನಿಸಿದ್ದಾರೆ.</p>



<p>ಸಿಎಎ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ಈ ಮೂರು ದೇಶಗಳ ಹಿಂದೂ ಧಾರ್ಮಿಕ ಅಲ್ಪಸಂಖ್ಯಾತರು ಭಾರತೀಯ ಪೌರತ್ವ ಪಡೆಯಲು ಬಯಸಿದರೆ ಅಂಥವರಿಗೆ ಮಾತ್ರ ಸಿಎಎ ಕಾನೂನು ಅನ್ವಯ ಬಿಜೆಪಿಯ ಕೇಂದ್ರ ಸರ್ಕಾರ ಹೇಳುತ್ತದೆ. ಅಂದರೆ  ಹೆಚ್ಚಿನ ಸಂಖ್ಯೆಯ ಹಿಂದೂ ಅಲ್ಪಸಂಖ್ಯಾತರು ನಮ್ಮ ದೇಶಕ್ಕೆ ಬರುವಂತೆ ಮಾಡುತ್ತೇವೆ,  ಕರೆ ತರುತ್ತೇವೆ. ಅವರಿಗೆ ಉದ್ಯೋಗ ಕೊಡಿಸುತ್ತೇವೆ, ಮನೆ ಕಟ್ಟಿಸಿಕೊಡುತ್ತೇವೆ, ಇಲ್ಲೇ ನೆಲೆಸುವಂತೆ ಮಾಡುತ್ತೇವೆ ಅನ್ನುವುದು ವಿಚಿತ್ರ ಅಲ್ಲವೇ ಎಂದು ಪ್ರಶ್ನಿಸಿದರು.</p>



<p> ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದ ಮೋದಿ ಸರ್ಕಾರಕ್ಕೆ ಯಾವ ಒಳ್ಳೆಯ ಕೆಲಸವನ್ನು ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಈಗ ಚುನಾವಣೆ ಸಂದರ್ಭದಲ್ಲಿ CAA ಜಾರಿಗೆ ಅಧಿಸೂಚನೆ ಹೊರಡಿಸಿದೆ. ಬಿಜೆಪಿ ಸರ್ಕಾರ ಏನಾದರು ಒಳ್ಳೆ ಕೆಲಸ ಮಾಡಿದ್ದರೆ ಇವತ್ತು CAA ಬದಲಾಗಿ ತಾವು ಮಾಡಿದ ಕೆಲಸ ತೋರಿಸಿ ಓಟು ಕೇಳಬಹುದ್ದೀತು ಎಂದರು.</p>



<p>ಹಣದುಬ್ಬರ ಮತ್ತು ನಿರುದ್ಯೋಗ ಇಂದು ದೇಶ ಎದುರಿಸುತ್ತಿರುವ ದೊಡ್ಡ ಸಮಸ್ಯೆಗಳಾಗಿವೆ. ಮಧ್ಯಮವರ್ಗದ ಕುಟುಂಬಕ್ಕೂ ಇಂದು ಮನೆ ನಡೆಸುವುದು ಕಷ್ಟವಾಗುತ್ತಿದೆ. ಹಣದುಬ್ಬರ ಬೆನ್ನು ಮುರಿಯುತ್ತಿದೆ, ಮತ್ತೊಂದೆಡೆ ನಮ್ಮ ಯುವಕರು ಉದ್ಯೋಗಕ್ಕಾಗಿ ಪರದಾಡುತ್ತಿದ್ದಾರೆ. ಅವರ ಮೇಲೆ ಲಾಠಿ ಪ್ರಹಾರ ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಿರುದ್ಯೋಗ, ಮತ್ತು ಹಣದುಬ್ಬರಕ್ಕೆ ಸರಕಾರ ಪರಿಹಾರ ಹುಡುಕುವ ಬದಲು ಸಿಎ ಬಗ್ಗೆ ಮಾತನಾಡುತ್ತಿರುವುದು ತುಂಬಾ ದುಖಃಕರ ಸಂಗತಿ ಎಂದರು.</p>



<p>ಭಾರತದ ಅನೇಕ ಜನರು ನಿರಾಶ್ರಿತರಾಗಿದ್ದಾರೆ. &nbsp;ಆದರೆ ಬಿಜೆಪಿಯವರು ಪಾಕಿಸ್ತಾನದಿಂದ ಜನರನ್ನು ಕರೆತಂದು ಭಾರತದಲ್ಲಿ ನೆಲೆಸಲು ಬಯಸುತ್ತಾರೆ. &nbsp;ಅವರಿಗೆ ಮನೆಗಳನ್ನು ನೀಡಲು ಬಯಸುತ್ತಾರೆ. &nbsp;ನಮ್ಮ ಕುಟುಂಬ ಮತ್ತು ದೇಶದ ಅಭಿವೃದ್ಧಿಗೆ ಖರ್ಚು ಮಾಡಬೇಕಾದ ಭಾರತ ಸರ್ಕಾರದ ಸರ್ಕಾರಿ ಹಣ ಬೇರೆ ದೇಶದ ಜನರಿಗೆ ಖರ್ಚು ಮಾಡಲು ಹೊರಟಿರುವುದು ಎಷ್ಟು ಸರಿ? ಎಂದು ಅವರು ಪ್ರಶ್ನಿಸಿದರು.</p>



<p>ಆ ಮೂರು ದೇಶಗಳಲ್ಲಿ ಸುಮಾರು 2.5 ರಿಂದ 3 ಕೋಟಿ ಹಿಂದೂ ಧಾರ್ಮಿಕ ಅಲ್ಪಸಂಖ್ಯಾತರಿದ್ದಾರೆ. ಈ ಮೂರು ದೇಶಗಳು ಬಡ ದೇಶಗಳು ಹೌದು. ಭಾರತದ ಬಾಗಿಲು ತೆರೆದ ತಕ್ಷಣ ಈ ಮೂರು ದೇಶಗಳಿಂದ ಭಾರಿ ಜನಸಮೂಹವು ನಮ್ಮ ಭಾರತಕ್ಕೆ ಬರುತ್ತದೆ, ಈ 2.5 ಕೋಟಿ ಜನರಲ್ಲಿಯೂ ಸಹ. 1.5 ಕೋಟಿ ಜನರು ಭಾರತಕ್ಕೆ ಬರುತ್ತಾರೆ. ಹಾಗಾದರೆ ಅವರಿಗೆಲ್ಲ &nbsp;ಯಾರು ಉದ್ಯೋಗ ಕೊಡುತ್ತಾರೆ? &nbsp;ನೀವು ಅವರನ್ನು ಎಲ್ಲಿ ನೆಲೆಗೊಳಿಸುತ್ತೀರಿ? ಇವರಿಗೆಲ್ಲ ಬಿಜೆಪಿಯವರು ತಮ್ಮ &nbsp;ಮನೆಯಲ್ಲಿ ಪಾಲು ಕೊಡುತ್ತಾರೆಯೇ? ಅವರು ತಮಗೆ ಸಿಗುವ ಉದ್ಯೋಗವನ್ನು ಇವರಿಗೆಲ್ಲ ಬಿಟ್ಟುಕೊಡುತ್ತಾರೆಯೇ ಎಂದು ಕೇಜ್ರಿವಾಲ್‌ ಪ್ರಶ್ನಿಸಿದರು.</p>



<p>ಹಾಗಾದರೆ ಬಿಜೆಪಿ ಏಕೆ ಇಂಥ ಮಹಾನ್‌ ತಪ್ಪನ್ನು ಮಾಡುತ್ತಿದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.̤ ಉತ್ತರ ಬಹಳ ಸರಳವಾಗಿದೆ. ಕೇವಲ ವೋಟ್ ಬ್ಯಾಂಕ್ ಸೃಷ್ಟಿಸುವ ಕೊಳಕು ರಾಜಕೀಯವನ್ನು ಬಿಜೆಪಿ ಮಾಡುತ್ತಿದೆ. ಒಂದೂವರೆ ಕೋಟಿ ಜನರನ್ನು ಭಾರತಕ್ಕೆ ಕರೆತಂದು ಓಟ್‌ ಬ್ಯಾಂಕ್‌ ಮಾಡಿಕೊಳ್ಳುವುದು ಬಿಜೆಪಿ ಉದ್ದೇಶ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಇದರಿಂದ ಭಾರೀ ಲಾಭವಾಗಬಹುದು. ಒಂದೆಡೆ &nbsp;ಹರಿಯಾಣದ ಬಿಜೆಪಿಯ ಸರ್ಕಾರಕ್ಕೆ ಅಲ್ಲಿನ ಮಕ್ಕಳಿಗೆ ಉದ್ಯೋಗ ನೀಡಲು ಸಾಧ್ಯವಾಗುತ್ತಿಲ್ಲ. ಇಲ್ಲಿನ ಮಕ್ಕಳನ್ನು ಇಸ್ರೇಲ್‌ಗೆ ಉದ್ಯೋಗಕ್ಕಾಗಿ ಕಳುಹಿಸುತ್ತಿದೆ. &nbsp;ನಮ್ಮ ಮಕ್ಕಳನ್ನು ಯುದ್ಧಕ್ಕೆ ತಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದರು.</p>



<p>ಇಡೀ ಪ್ರಪಂಚದ ಯಾವುದೇ ದೇಶವು ತನ್ನ ನೆರೆಹೊರೆಯವರಿಗೆ ಸಹಾಯ ಮಾಡಲು ಸಾಧ್ಯವಿಲ್ಲ. ದೇಶಗಳ ಬಡವರನ್ನು ನೆರೆಯ ದೇಶಗಳ ಜನರು ತಮ್ಮ ದೇಶಕ್ಕೆ ಬರುವುದನ್ನು ತಡೆಯಲು ವಿವಿಧ ರೀತಿಯ ಕಾನೂನುಗಳನ್ನು ಮಾಡುತ್ತದೆ. ಗಡಿಗಳಲ್ಲಿ ಗೋಡೆಗಳನ್ನು ನಿರ್ಮಿಸಲಾಗುತ್ತಿದೆ. ವಿದ್ಯುತ್ ತಂತಿಗಳನ್ನು ಅಳವಡಿಸಲಾಗುತ್ತಿದೆ. &nbsp;ಪಕ್ಕದ ದೇಶದ ಬಡವರಿಗೆ ದೇಶವನ್ನು ಪ್ರವೇಶಿಸಲು ಬಾಗಿಲು ಪ್ರವೇಶಿಸುವುತ್ತಿರುವುದು ನಮ್ಮಲ್ಲಿಯೇ ಮೊದಲು. ಇಂಥ ಕೊಳಕು ರಾಜಕೀಯ ಮಾಡುತ್ತಿರುವ ಪ್ರಪಂಚದಲ್ಲೇ ಏಕೈಕ ಪಕ್ಷವೆಂದರೆ ಅದು ಬಿಜೆಪಿಯಾಗಿದೆ ಎಂದು ಹರಿಹಾಯ್ದರು.</p>



<p>&nbsp;ಯೋಚಿಸಬೇಕಾದ ವಿಷಯವೆಂದರೆ ಕಳೆದ 10 ವರ್ಷಗಳಲ್ಲಿ ಭಾರತದ 11 ಲಕ್ಷಕ್ಕೂ ಹೆಚ್ಚು ದೊಡ್ಡ ಶ್ರೀಮಂತ ಕೈಗಾರಿಕೋದ್ಯಮಿಗಳು ಮತ್ತು ಉದ್ಯಮಿಗಳು ಭಾರತವನ್ನು ತೊರೆದಿದ್ದಾರೆ. ಈ ಜನರು ಭಾರತದಲ್ಲಿ ಕಾರ್ಖಾನೆಗಳು, ಕೈಗಾರಿಕೆಗಳನ್ನು ನಡೆಸುತ್ತಿದ್ದರು. &nbsp;ಜನರಿಗೆ ಉದ್ಯೋಗ ನೀಡುತ್ತಿದ್ದರು. &nbsp;ಬಿಜೆಪಿಯ ತಪ್ಪು ನೀತಿಗಳು ಮತ್ತು ಅವರ ದೌರ್ಜನ್ಯಗಳಿಂದ ಬೇಸತ್ತು ಅವರು ಭಾರತವನ್ನು ತೊರೆದರು. ನಿಜವಾಗಿಯೂ ವಾಪಸ್‌ ಕರೆತರಬೇಕಾದರೆ ಆ ಉದ್ಯಮಿಗಳನ್ನು ಕರೆತನ್ನಿ. ಅವರು ಭಾರತದಲ್ಲಿ ಹೂಡಿಕೆ ಮಾಡುತ್ತಾರೆ. &nbsp;ಅವರು ಹೊಸ ಕಾರ್ಖಾನೆಗಳನ್ನು ಮತ್ತು &nbsp;ಹೊಸ ಉದ್ಯಮಗಳನ್ನು ತೆರೆಯುತ್ತಾರೆ ಎಂದು ಅವರು ಕಿವಿಮಾತು ಹೇಳಿದರು.</p>



<p>2014ರ ಹಿಂದೆ ಬಂದ ನುಸುಳುಕೋರರಿಗೆ ಪೌರತ್ವ ನೀಡುತ್ತೇವೆ ಎಂದು ಬಿಜೆಪಿಯವರು ಹೇಳುತ್ತಿರುವುದು ಸುಳ್ಳು. ಇದು ಕೇವಲ ಆರಂಭ. &nbsp;ಒಮ್ಮೆ ಬಾಗಿಲು ತೆರೆದರೆ ಪಾಕಿಸ್ತಾನ, ಬಾಂಗ್ಲಾದೇಶಗಳಿಂದ ಸಮುದ್ರೋಪಾದಿಯಲ್ಲಿ ಜನ ಬರುತ್ತಾರೆ. &nbsp;ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ ಈಶಾನ್ಯ ರಾಜ್ಯಗಳು ಅದರಲ್ಲೂ ವಿಶೇಷವಾಗಿ ಅಸ್ಸಾಂ ಈ ವಲಸೆ ಜನರ ಭಾರವನ್ನು ಹೊರಬೇಕಾಗುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.</p>
]]></content:encoded>
					
		
		
			</item>
		<item>
		<title>ಮಹಿಳಾ ಮೀಸಲಾತಿ ಮಸೂದೆ: ನಾಲ್ಕು ದಶಕದ ಇತಿಹಾಸ</title>
		<link>https://peepalmedia.com/women-reservation-bill-2023-history-of-female-representation/</link>
		
		<dc:creator><![CDATA[Charan Aivarnad]]></dc:creator>
		<pubDate>Wed, 20 Sep 2023 12:07:01 +0000</pubDate>
				<category><![CDATA[ಅಂಕಣ]]></category>
		<category><![CDATA[bengalure]]></category>
		<category><![CDATA[bharat]]></category>
		<category><![CDATA[bharata]]></category>
		<category><![CDATA[BJP ADVERTISMENT]]></category>
		<category><![CDATA[congress]]></category>
		<category><![CDATA[constitution]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[modi]]></category>
		<category><![CDATA[narendra modi]]></category>
		<category><![CDATA[news]]></category>
		<category><![CDATA[parliment]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Rahul Gandhi]]></category>
		<category><![CDATA[rajyasabha]]></category>
		<category><![CDATA[reservation]]></category>
		<category><![CDATA[state politics]]></category>
		<category><![CDATA[vidhana parishat]]></category>
		<category><![CDATA[vidhanasabha]]></category>
		<category><![CDATA[women]]></category>
		<category><![CDATA[women empowerment]]></category>
		<category><![CDATA[women reservation bill]]></category>
		<category><![CDATA[writing]]></category>
		<guid isPermaLink="false">https://peepalmedia.com/?p=28152</guid>

					<description><![CDATA[ಕಳೆದ ಒಂದು ದಶಕದಿಂದಲೂ ನೆನೆಗುದಿಗೆ ಬಿದ್ದಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಇದೀಗ ಮತ್ತೆ ಜೀವ ಬಂದಿದೆ. ಸಪ್ಟೆಂಬರ್‌ 18, 2023 ಮಂಗಳವಾರ, ಲೋಕಸಭೆಯಲ್ಲಿ 128ನೇ ತಿದ್ದುಪಡಿ ತಂದು ಸಂವಿಧಾನ ಮಸೂದೆ ಮಹಿಳಾ ಮೀಸಲಾತಿ ವಿಧೆಯಕ ಮಂಡನೆಯಾಗಿದೆ. ಈ ರೀತಿ ಮಹಿಳಾ ಮೀಸಲಾತಿ ಮಸೂದೆ ದೊಡ್ಡ ಸದ್ದು ಮಾಡುತ್ತಾ ಸಂಸತ್ತಿನಲ್ಲಿ ಮಂಡನೆಯಾಗುವುದು ಇದೇನೂ ಮೊದಲಲ್ಲ. ಈಗಲೂ ಎರಡೂ ಸದನಗಳಲ್ಲಿ ಒಪ್ಪಿಗೆಯಾಗಿ ರಾಷ್ಟ್ರಪತಿಯವರ ಅಂಕಿತ ಬಿದ್ದೇ ಬೀಳುತ್ತದೆ ಎಂದು ನಂಬಿ ಕೂರುವ ಸ್ಥಿತಿಯೂ ಇಲ್ಲ. ಆದರೆ ಈಗ ಕೇಂದ್ರದಲ್ಲಿ ನರೇಂದ್ರ [&#8230;]]]></description>
										<content:encoded><![CDATA[
<p class="has-text-align-left">ಕಳೆದ ಒಂದು ದಶಕದಿಂದಲೂ ನೆನೆಗುದಿಗೆ ಬಿದ್ದಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಇದೀಗ ಮತ್ತೆ ಜೀವ ಬಂದಿದೆ. ಸಪ್ಟೆಂಬರ್‌ 18, 2023 ಮಂಗಳವಾರ, ಲೋಕಸಭೆಯಲ್ಲಿ 128ನೇ ತಿದ್ದುಪಡಿ ತಂದು ಸಂವಿಧಾನ ಮಸೂದೆ ಮಹಿಳಾ ಮೀಸಲಾತಿ ವಿಧೆಯಕ ಮಂಡನೆಯಾಗಿದೆ. ಈ ರೀತಿ ಮಹಿಳಾ ಮೀಸಲಾತಿ ಮಸೂದೆ ದೊಡ್ಡ ಸದ್ದು ಮಾಡುತ್ತಾ ಸಂಸತ್ತಿನಲ್ಲಿ ಮಂಡನೆಯಾಗುವುದು ಇದೇನೂ ಮೊದಲಲ್ಲ. ಈಗಲೂ ಎರಡೂ ಸದನಗಳಲ್ಲಿ ಒಪ್ಪಿಗೆಯಾಗಿ ರಾಷ್ಟ್ರಪತಿಯವರ ಅಂಕಿತ ಬಿದ್ದೇ ಬೀಳುತ್ತದೆ ಎಂದು ನಂಬಿ ಕೂರುವ ಸ್ಥಿತಿಯೂ ಇಲ್ಲ. ಆದರೆ ಈಗ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಇರುವುದರಿಂದ ಮಸೂದೆ ಜಾರಿಯೇ ಆಯ್ತೇನೋ ಎನ್ನುವಂತ ಪ್ರಚಾರ ಮಾತ್ರ ಹೊರಗಡೆ ಜೋರಾಗಿದೆ.&nbsp;</p>



<p>ಮತ್ತೊಮ್ಮೆ ಮಸೂದೆಯನ್ನು ಮಂಡಿಸಿರುವುದಕ್ಕೆ ಇಡೀ ದೇಶದಲ್ಲೇ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿ&nbsp; ʼನಾರಿ ಶಕ್ತಿ ವಂದನ್ ಅಧಿನಿಯಮ&#8217; ನಮ್ಮ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುತ್ತದೆ. ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಹಲವಾರು ಬಾರಿ ಮಂಡಿಸಲಾಯಿತು. ಆದರೆ ಬಹುಮತವಿಲ್ಲದೆ ಆಂಗೀಕಾರವಾಗಲಿಲ್ಲ. ಈಗ ನನಗೆ ಈ ಮಸೂದೆ ಜಾರಿಗೆ ತರಲು ದೇವರು ಅವಕಾಶ ನೀಡಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ.</p>



<p>ಈ ನಡುವೆ, ಕಾಂಗ್ರೇಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹಿಳಾ ಮೀಸಲಾತಿ ಮಸೂದೆಯನ್ನು 2010 ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿಯೇ ತರಲಾಗಿತ್ತು, ಇದರ ಕ್ರೆಡಿಟ್‌ ಕಾಂಗ್ರೇಸ್‌ಗೆ ಕೊಡಬೇಕು ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ. 2010 ರಲ್ಲಿ ಯುಪಿಎ ಸರ್ಕಾರ ಮಂಡಿಸಿದ ಮಸೂದೆಯು ಲೋಕಸಭೆ ಮತ್ತು ರಾಜ್ಯ ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿಯನ್ನು ನೀಡಿತ್ತು. ಅದರಲ್ಲಿ ಮೂರನೇ ಒಂದು ಭಾಗದಷ್ಟು ಸೀಟುಗಳನ್ನು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಮಹಿಳೆಯರಿಗೆ ಮೀಸಲಿಡಲಾಗಿತ್ತು. 2010ರಲ್ಲಿ ರಾಜ್ಯಸಭೆಯಲ್ಲಿ ಈ ಮಸೂದೆ ಅಂಗೀಕಾರವಾದರೂ ಲೋಕಸಭೆಯಲ್ಲಿ ಅಂಗೀಕಾರವಾಗಿರಲಿಲ್ಲ. ಆಗ ಹಿಂದುಳಿದ ವರ್ಗಗಳ ಮಹಿಳಾ ಮೀಸಲಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಪಡಿಸಿದ್ದ ಕಾರಣ ಮಸೂದೆ ನೆನೆಗುದಿಗೆ ಬಿದ್ದಿತ್ತು.  ಈಗ ಮಂಡಿಸಿರುವ ಮಸೂದೆಯಲ್ಲೂ ಒಬಿಸಿ ಮಹಿಳೆಯರಿಗೆ ಒಳ ಮೀಸಲಾತಿ ಕಲ್ಪಿಸಲಾಗಿಲ್ಲ.</p>



<p><strong>ವಿಡಿಯೋ:<a href="https://fb.watch/naEQm3QVU9/" data-type="link" data-id="https://fb.watch/naEQm3QVU9/"> ಮಹಿಳಾ ಮೀಸಲಾತಿ ಮಸೂದೆ: ನಾಲ್ಕು ದಶಕದ ಇತಿಹಾಸ!</a></strong></p>



<p>ಈಗ ಮಂಡಿಸಲಾಗಿರುವ ಮಸೂದೆ ಅಂಗೀಕಾರಕೊಂಡು ಕಾಯ್ದೆಯಾದರೂ ಅದು ಸಧ್ಯದಲ್ಲೇನು ಜಾರಿಯಾಗುವುದಿಲ್ಲ. ಅದು ಜಾರಿಯಾಗುವುದು 2029ಕ್ಕೆ! ಯಾಕೇಂದರೆ, ಈ ಮೀಸಲಾತಿ 2026 ರಲ್ಲಿ ಡಿಲಿಮಿಟೇಶನ್ ಪ್ರಕ್ರಿಯೆ ಮುಗಿದ ನಂತರವೇ ಜಾರಿಗೊಳಿಸುವ ಸಾಧ್ಯತೆಯಿದೆ. ಈ ಮಹಿಳಾ ಮೀಸಲಾತಿಯು ಲೋಕಸಭಾ&nbsp; ಮತ್ತು ರಾಜ್ಯ ವಿಧಾನಸಭಾ ಸ್ಥಾನಗಳಿಗೆ ಮಾತ್ರ ಅನ್ವಯಿಸುತ್ತದೆಯೇ ಹೊರತು ರಾಜ್ಯಸಭೆ ಮತ್ತು ವಿಧಾನ ಪರಿಷತ್ತುಗೆ ಅನ್ವಯಿಸುವುದಿಲ್ಲ ಎಂದೂ ಮಸೂದೆಯಲ್ಲಿ ಹೇಳಲಾಗಿದೆ. ಈಗ ಮೋದಿ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ 2010ರಲ್ಲಿ ಮನಮೋಹನ್‌ ಸಿಂಗ್‌ ಸರ್ಕಾರ ಮಂಡಿಸಿದ್ದ ಮಸೂದೆಯ ತದ್ರೂಪವೇ ಆಗಿದೆ. </p>



<p>ಇದರಲ್ಲಿ ಸೇರಿರುವ ಎರಡು ಸಣ್ಣ ಹೊಸ ಅಂಶಗಳು ಏನೆಂದರೆ ಈ</p>



<p>•&nbsp;ಕಾಯ್ದೆ ಜಾರಿಯಾದ 15 ವರ್ಷಗಳವರೆಗೆ ಇರಲಿದ್ದು, ಆನಂತರವೂ&nbsp; ಅವಧಿಯನ್ನು ವಿಸ್ತರಿಸಬಹುದು.</p>



<p>•&nbsp;ಆಂಗ್ಲೋ-ಇಂಡಿಯನ್ ಸಮುದಾಯಕ್ಕೆ ಮೀಸಲಾತಿಯನ್ನು ಒಳಗೊಂಡಿರುವ ಎರಡು ಆರ್ಟಿಕಲ್‌ಗಳಿಗೆ ತಿದ್ದುಪಡಿಯನ್ನು ಮೋದಿ ಸರ್ಕಾರದ ಮಸೂದೆಯಲ್ಲಿ ಕೈಬಿಡಲಾಗಿದೆ.</p>



<figure class="wp-block-image size-large"><img fetchpriority="high" decoding="async" width="1024" height="669" src="https://peepalmedia.com/wp-content/uploads/2023/09/೫೬೫೭೬೮೮೬-1024x669.jpg" alt="" class="wp-image-28175" srcset="https://peepalmedia.com/wp-content/uploads/2023/09/೫೬೫೭೬೮೮೬-1024x669.jpg 1024w, https://peepalmedia.com/wp-content/uploads/2023/09/೫೬೫೭೬೮೮೬-300x196.jpg 300w, https://peepalmedia.com/wp-content/uploads/2023/09/೫೬೫೭೬೮೮೬-768x501.jpg 768w, https://peepalmedia.com/wp-content/uploads/2023/09/೫೬೫೭೬೮೮೬-150x98.jpg 150w, https://peepalmedia.com/wp-content/uploads/2023/09/೫೬೫೭೬೮೮೬-696x454.jpg 696w, https://peepalmedia.com/wp-content/uploads/2023/09/೫೬೫೭೬೮೮೬-1068x697.jpg 1068w, https://peepalmedia.com/wp-content/uploads/2023/09/೫೬೫೭೬೮೮೬.jpg 1340w" sizes="(max-width: 1024px) 100vw, 1024px" /></figure>



<figure class="wp-block-image size-large"><img decoding="async" width="1024" height="485" src="https://peepalmedia.com/wp-content/uploads/2023/09/೬೬೬೬೬-1024x485.jpg" alt="" class="wp-image-28176" srcset="https://peepalmedia.com/wp-content/uploads/2023/09/೬೬೬೬೬-1024x485.jpg 1024w, https://peepalmedia.com/wp-content/uploads/2023/09/೬೬೬೬೬-300x142.jpg 300w, https://peepalmedia.com/wp-content/uploads/2023/09/೬೬೬೬೬-768x364.jpg 768w, https://peepalmedia.com/wp-content/uploads/2023/09/೬೬೬೬೬-150x71.jpg 150w, https://peepalmedia.com/wp-content/uploads/2023/09/೬೬೬೬೬-696x330.jpg 696w, https://peepalmedia.com/wp-content/uploads/2023/09/೬೬೬೬೬-1068x506.jpg 1068w, https://peepalmedia.com/wp-content/uploads/2023/09/೬೬೬೬೬.jpg 1320w" sizes="(max-width: 1024px) 100vw, 1024px" /></figure>



<p>ದೇಶದಲ್ಲಿ ಇಂದು ಪಂಚಾಯತ್‌ ರಾಜ್‌ ಸಂಸ್ಥೆಗಳಲ್ಲಿ ಶೇಕಡಾ 50ರ ವರೆಗೂ ಮಹಿಳಾ ಮೀಸಲಾತಿ ಜಾರಿಯಲ್ಲಿದೆ. ಆದರೆ ಪಾರ್ಲಿಮೆಂಟು ಮತ್ತು ವಿಧಾನಸಭೆ ವಿಧಾನ ಪರಿಷತ್ತುಗಳಿಗೂ 33% ಮೀಸಲಾತಿ ಕಲ್ಪಿಸಬೇಕು ಎಂಬ ಒತ್ತಾಯದ ಹೋರಾಟಕ್ಕೆ ಬರೋಬ್ಬರಿ ಮೂರು ದಶಕಗಳ ಇತಿಹಾಸವೇ ಇದೆ.&nbsp;</p>



<p style="font-size:19px"><strong>ಮಹಿಳಾ ಪ್ರಾತಿನಿಧ್ಯದ ಇತಿಹಾಸ:</strong></p>



<p>ಲೋಕಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯ 1970 ರ ದಶಕದವರೆಗೆ 5% ರಷ್ಟಿತ್ತು.&nbsp; ಅದು ಎರಡಂಕಿಗೆ ಏರಿದ್ದೇ 2009 ರಲ್ಲಿ. ರಾಜ್ಯಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯವು ಲೋಕಸಭೆಗಿಂತ ಕಡಿಮೆಯಾಗಿದೆ. 1951 ರಿಂದ ಇದು ಒಟ್ಟು ಸದಸ್ಯತ್ವದ 13% ನ್ನೂ ದಾಟಿಲ್ಲ. ಅಂದರೆ 545 ರಷ್ಟು ಸಂಸದ ಬಲ ಇರುವ ಲೋಕಸಭೆಯಲ್ಲಿ 50 ಜನ ಮಹಿಳೆಯರೂ ಇಲ್ಲ ಎಂದರೆ ಎಂತಹ ವಿಪರ್ಯಾಸ ನೋಡಿ.</p>



<p>ಇಡೀ ದೇಶದಲ್ಲಿ ಸ್ಥಳೀಯ ಸಂಸ್ಥೆಗಳನ್ನು ಜಾರಿಗೊಳಿಸಿದ್ದು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಿದ ಮೊದಲ ರಾಜ್ಯ ಕರ್ನಾಟಕ ಎಂಬುದು ನಮಗೆ ಹೆಮ್ಮೆಯ ಸಂಗತಿ. 1983ರಲ್ಲಿ ಜನತಾದಳ ಸರ್ಕಾರ ರಾಜ್ಯದಲ್ಲಿ ಪಂಚಾಯ್ತಿಗಳಲ್ಲಿ 25% ಮೀಸಲಾತಿ ನೀಡುವ ಮೂಲಕ ಇತಿಹಾಸ ಬರೆದಿತ್ತು.</p>



<p>1988ರಲ್ಲಿ ರಚನೆಯಾದ ನ್ಯಾಶನಲ್‌ ವಿಶನ್‌ ಪ್ರೋಗ್ರಾಮ್‌ನಲ್ಲಿ ಪಂಚಾಯ್ತಿಯಿಂದ ಲೋಕಸಭೆಯ ವರೆಗೆ ಮೂರನೇ ಒಂದರಷ್ಟು ಮಹಿಳಾ ಮೀಸಲಾತಿ ನೀಡುವ ಕಾರ್ಯಕ್ರಮ ರೂಪಿಸಲಾಯಿತು. ಇದರಂತೆ ಮರು ವರ್ಷ ಅಂದರೆ, 1989ರಲ್ಲಿ ಅಂದಿನ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ಮೇ ತಿಂಗಳಿನಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿಯನ್ನು ಒದಗಿಸಲು ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಿ ಮಹಿಳಾ ಮೀಸಲಾತಿ ನೀಡುವ ಮೊದಲ ಪ್ರಯತ್ನ ನಡೆಸಿದರು. ಆ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾದರೂ ರಾಜ್ಯಸಭೆಯಲ್ಲಿ ಅಂಗೀಕಾರವಾಗಲಿಲ್ಲ. ಹೀಗಾಗಿ ರಾಜೀವ್‌ ಗಾಂಧಿಯವರ ಪ್ರಯತ್ನಕ್ಕೆ ಹಿನ್ನಡೆಯಾಯ್ತು.</p>



<p>ಮುಂದೆ 1992 ಮತ್ತು 1993ರಲ್ಲಿ ಆಗಿನ ಪ್ರಧಾನಿ ಪಿ.ವಿ. ನರಸಿಂಹ ರಾವ್ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪಂಚಾಯತ್‌ ರಾಜ್‌ಗೆ 72 ಮತ್ತು 73ನೇ ತಿದ್ದುಪಡಿ ತಂದಿತು. ದೇಶದಾದ್ಯಂತ ಕರ್ನಾಟಕ ಮಾದರಿಯಲ್ಲಿ ಸ್ಥಳೀಯ ಸಂಸ್ಥೆಗಳ ಆಡಳಿತ ಆರಂಭವಾಗುವ ಜೊತೆಯಲ್ಲಿ ಮಹಿಳಾ ಮೀಸಲಾತಿಯೂ ಜಾರಿಗೊಂಡಿತು.&nbsp; ಇಂದು ಎಲ್ಲಾ ಮೂರು ಹಂತದ ಪಂಚಾಯ್ತಿಗಳಲ್ಲಿ ಮಹಿಳೆಯರಿಗೆ ಎಲ್ಲಾ ಸ್ಥಾನಗಳಲ್ಲಿ ಮತ್ತು ಅಧ್ಯಕ್ಷ ಸ್ಥಾನಗಳಲ್ಲಿ ಮೂರನೇ ಒಂದು ಭಾಗ ಅಂದರೆ (33%) ಸ್ಥಾನಗಳನ್ನು ಮೀಸಲಿಡಲಾಗಿದೆ. ಮಸೂದೆಗಳು ಉಭಯ ಸದನಗಳಿಂದ ಅಂಗೀಕಾರವಾಯಿತು. ಆದರೆ ಸಮಾಜದಲ್ಲಿ ಅರ್ಧದಷ್ಟು ಮಹಿಳೆಯರು ಇರುವುದರಿಂದ ಅಷ್ಟೇ ಪ್ರಮಾಣದ ಮೀಸಲಾತಿ ಇರಬೇಕು ಎಂದು ಪ್ರತಿಪಾದಿಸಿದ ಹಲವು ರಾಜ್ಯಗಳಲ್ಲಿ ಇಂದು ಶೇಕಡಾ 50 ಮಹಿಳಾ ಮೀಸಲಾತಿ ಜಾರಿಯಲ್ಲಿದೆ. ಇದರಲ್ಲಿ ಕರ್ನಾಟಕವೇ ಮುಂದು. ಹೀಗೆ 1988-89 ರಿಂದ 1992-93 ರ ನಡುವೆ ಆದಂತಹ ಒಂದೇ ಒಂದು ಸಂವಿಧಾನ ತಿದ್ದುಪಡಿಯ ಫಲವಾಗಿ ಈಗ ದೇಶಾದ್ಯಂತ ಪಂಚಾಯತ್ ಮತ್ತು ನಗರಪಾಲಿಕೆಗಳಲ್ಲಿ ಸುಮಾರು 15 ಲಕ್ಷ ಚುನಾಯಿತ ಮಹಿಳಾ ಪ್ರತಿನಿಧಿಗಳಿದ್ದಾರೆ.</p>



<p>ಆದರೆ, ಈ ಸನ್ನಿವೇಶ ವಿಧಾನ ಸಭೆ ಲೋಕಗಭೆಗಳಲ್ಲೂ ಆಗಬೇಕೆಂಬ ಪ್ರಯತ್ನವೂ ನಿರಂತರವಾಗಿದೆ.</p>



<p>ಸೆಪ್ಟೆಂಬರ್ 12, 1996 ರಂದು, ನಮ್ಮ ದೇವೇಗೌಡರು ಪ್ರಧಾನಿಯಾಗಿದ್ದ ಸಂಯುಕ್ತ ರಂಗ ಸರ್ಕಾರವು ಮೊದಲ ಬಾರಿಗೆ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿಗಾಗಿ ಲೋಕಸಭೆಯಲ್ಲಿ 81 ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಿತು. ಆದರೆ ಲೋಕಸಭೆಯಲ್ಲಿ ಅನುಮೋದನೆ ಸಿಗಲಿಲ್ಲ. ನಂತರ ಇದನ್ನು  ಕಮ್ಯುನಿಷ್ಟ್‌ ನಾಯಕಿ ಗೀತಾ ಮುಖರ್ಜಿ ಅಧ್ಯಕ್ಷತೆಯ ಜಂಟಿ ಸಂಸದೀಯ ಸಮಿತಿಗೆ ನೀಡಲಾಯಿತು.  ಡಿಸೆಂಬರ್ 1996 ರಂದು ಈ ಸಮಿತಿ ತನ್ನ ವರದಿಯನ್ನು ಮಂಡಿಸಿದರೂ, ಲೋಕಸಭೆಯಲ್ಲಿ ಮಸೂದೆಯು ಬಿದ್ದುಹೋಯಿತು.</p>



<p><strong>ವಿಡಿಯೋ ನೋಡಿ: <a href="https://www.youtube.com/watch?v=s4YZr3z98mg&amp;t=11s" data-type="link" data-id="https://www.youtube.com/watch?v=s4YZr3z98mg&amp;t=11s">ಮಹಿಳಾ ಮೀಸಲಾತಿ ಮಸೂದೆ: ನಾಲ್ಕು ದಶಕದ ಇತಿಹಾಸ!</a></strong></p>



<p>ಎರಡು ವರ್ಷಗಳ ನಂತರ, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ NDA ಸರ್ಕಾರವು 1998 ರಲ್ಲಿ 12 ನೇ ಲೋಕಸಭೆಯಲ್ಲಿ WRB ಮಸೂದೆಯನ್ನು ಮಂಡಿಸಿತು. ಆದರೆ ಆಗಲೂ ವಿಫಲವಾಯಿತು. ವಾಜಪೇಯಿ ಸರ್ಕಾರ 1999, 2002 ಮತ್ತು 2003 ರಲ್ಲಿ ಮತ್ತೆ ಮಂಡಿಸಿದರೂ ಯಶಸ್ವಿಯಾಗಲಿಲ್ಲ.</p>



<p>1996 ರ ಮಹಿಳಾ ಮೀಸಲಾತಿ ಮಸೂದೆ ವರದಿ OBC ಮಹಿಳೆಯರಿಗೆ ಒಳಮೀಸಲಾತಿಯನ್ನು ನೀಡಲು ಶಿಫಾರಸ್ಸು ಮಾಡುತ್ತದೆ. ಅಲ್ಲದೇ, ರಾಜ್ಯಸಭೆ ಮತ್ತು ವಿಧಾನ ಪರಿಷತ್ತುಗಳಿಗೂ ಮೀಸಲಾತಿಯನ್ನು ವಿಸ್ತರಿಸುವಂತೆ ಹೇಳುತ್ತದೆ. ಆದರೆ ಎರಡೂ ಶಿಫಾರಸುಗಳನ್ನು 2008ರ&nbsp; ಮಸೂದೆಯಲ್ಲಿ ಅಳವಡಿಸಿರಲಿಲ್ಲ. ಹೀಗಾಗಿ ಸಮಾಜವಾದಿ ಪಕ್ಷ, ರಾಷ್ಟ್ರೀಯ ಜನತಾ ದಳ, ಬಹುಜನ ಸಮಾಜ ಪಕ್ಷಗಳು ಈ ಮಸೂದೆಗೆ ಪ್ರಬಲ ವಿರೋಧ ವ್ಯಕ್ತಪಡಿಸಿದವು.</p>



<p>ಮನಮೋಹನ್ ಸಿಂಗ್ ನೇತೃತ್ವದ ಯುಪಿಎ-1 ರ ಅವಧಿಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮತ್ತೆ ಚರ್ಚೆಗೆ ಬಂತು. 2004 ರಲ್ಲಿ ಸರ್ಕಾರ ಅದನ್ನು ತನ್ನ ಸಾಮಾನ್ಯ ಕನಿಷ್ಠ ಕಾರ್ಯಕ್ರಮದಲ್ಲಿ (Common Minimum Programme)&nbsp;&nbsp; ಸೇರಿಸಿತು. ಅದನ್ನು 108ನೇ ಸಾಂವಿಧಾನಿಕ ತಿದ್ದುಪಡಿಯನ್ನು ತಂದು 6 ಮೇ 2008 ರಂದು ಮಂಡಿಸಲಾಯಿತು. 1996 ರ ಗೀತಾ ಮುಖರ್ಜಿ ಸಮಿತಿಯು ಮಾಡಿದ ಏಳು ಶಿಫಾರಸುಗಳಲ್ಲಿ ಐದನ್ನು ಈ ಮಸೂದೆಯಲ್ಲಿ ಸೇರಿಸಲಾಯಿತು. ಮಸೂದೆಯನ್ನು ಮೇ 9, 2008 ರಂದು ಸ್ಥಾಯಿ ಸಮಿತಿಗೆ ಕಳುಹಿಸಲಾಯಿತು. ಸ್ಥಾಯಿ ಸಮಿತಿ ಡಿಸೆಂಬರ್ 17, 2009 ರಂದು ತನ್ನ ವರದಿಯನ್ನು ಮಂಡಿಸಿತು. ಇದು ಫೆಬ್ರವರಿ 2010 ರಲ್ಲಿ ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆಯನ್ನೂ ಪಡೆಯಿತು. ಅಂತಿಮವಾಗಿ ಮಸೂದೆ ರಾಜ್ಯಸಭೆಯಲ್ಲಿ ಮಾರ್ಚ್ 8ರ ಮಹಿಳಾ ದಿನದಂದು ಮಂಡನೆಗೊಂಡು, ಮಾರ್ಚ್‌ 9, 2010 ರಂದು 186 ಮತಗಳೊಂದಿಗೆ ಸರ್ವಾನುಮತದಿಂದ ಅಂಗೀಕಾರವಾಯಿತು. ಇದು ದೇಶದ ಮಹಿಳಾ ಮೀಸಲಾತಿ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ ಎಂದರೂ ತಪ್ಪಿಲ್ಲ.</p>


<div class="wp-block-image">
<figure class="aligncenter size-large"><img decoding="async" width="1024" height="671" src="https://peepalmedia.com/wp-content/uploads/2023/09/೧೧-1024x671.jpg" alt="" class="wp-image-28173" srcset="https://peepalmedia.com/wp-content/uploads/2023/09/೧೧-1024x671.jpg 1024w, https://peepalmedia.com/wp-content/uploads/2023/09/೧೧-300x196.jpg 300w, https://peepalmedia.com/wp-content/uploads/2023/09/೧೧-768x503.jpg 768w, https://peepalmedia.com/wp-content/uploads/2023/09/೧೧-150x98.jpg 150w, https://peepalmedia.com/wp-content/uploads/2023/09/೧೧-696x456.jpg 696w, https://peepalmedia.com/wp-content/uploads/2023/09/೧೧-1068x700.jpg 1068w, https://peepalmedia.com/wp-content/uploads/2023/09/೧೧.jpg 1368w" sizes="(max-width: 1024px) 100vw, 1024px" /></figure></div>

<div class="wp-block-image">
<figure class="aligncenter size-large"><img loading="lazy" decoding="async" width="1024" height="771" src="https://peepalmedia.com/wp-content/uploads/2023/09/೩೩-1024x771.jpg" alt="" class="wp-image-28174" srcset="https://peepalmedia.com/wp-content/uploads/2023/09/೩೩-1024x771.jpg 1024w, https://peepalmedia.com/wp-content/uploads/2023/09/೩೩-300x226.jpg 300w, https://peepalmedia.com/wp-content/uploads/2023/09/೩೩-768x578.jpg 768w, https://peepalmedia.com/wp-content/uploads/2023/09/೩೩-150x113.jpg 150w, https://peepalmedia.com/wp-content/uploads/2023/09/೩೩-696x524.jpg 696w, https://peepalmedia.com/wp-content/uploads/2023/09/೩೩-1068x804.jpg 1068w, https://peepalmedia.com/wp-content/uploads/2023/09/೩೩.jpg 1162w" sizes="auto, (max-width: 1024px) 100vw, 1024px" /></figure></div>


<p>ಆದರೂ ಈ ಮಸೂದೆ ಲೋಕಸಭೆಯಲ್ಲಿ ಮಾತ್ರ ಅಂಗೀಕಾರವಾಗಲೇ ಇಲ್ಲ, 2014 ರಲ್ಲಿ ಲೋಕಸಭೆಯ ವಿಸರ್ಜನೆಯೊಂದಿಗೆ ಬಿಲ್ ಲ್ಯಾಪ್ಸ್ ಆಯಿತು. ರಾಜ್ಯಸಭೆಯಲ್ಲಿ ಮಂಡಿಸಿದ/ಅನುಮೋದಿತವಾದ ಮಸೂದೆಗಳು ಅನೂರ್ಜಿತಗೊಳ್ಳುವುದಿಲ್ಲ, ಆದ್ದರಿಂದ ಮಹಿಳಾ ಮೀಸಲಾತಿ ಮಸೂದೆಯು ಇನ್ನೂ ಹೆಚ್ಚು ಸಕ್ರಿಯವಾಗಿದೆ.</p>



<p>2019 ರ ಚುನಾವಣೆಯಲ್ಲಿ ಲೋಕಸಭೆಗೆ ಆಯ್ಕೆಯಾದ ಮಹಿಳಾ ಪ್ರತಿನಿಧಿಗಳ ಸಂಖ್ಯೆ ಹಿಂದಿಗಿಂತ ಹೆಚ್ಚಿದ್ದರೂ, ಅವರ ಪ್ರಮಾಣವು ಒಟ್ಟು ಸದಸ್ಯತ್ವದ ಶೇಕಡಾ 15 ರಷ್ಟು ಮಾತ್ರ ಇದೆ. 2014ರಲ್ಲಿ ರಾಜ್ಯಸಭೆಯಲ್ಲಿ ಮಹಿಳಾ ಪ್ರತಿನಿಧಿಗಳ ಸಂಖ್ಯೆ ಶೇಕಡಾ 12.7 ರಷ್ಟಿತ್ತು.</p>



<p style="font-size:21px"><strong>ಲೋಕಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯತೆ:</strong></p>


<div class="wp-block-image">
<figure class="aligncenter size-large is-resized"><img loading="lazy" decoding="async" src="https://peepalmedia.com/wp-content/uploads/2023/09/Womens-Representation-in-the-Lok-Sabha-1-945x1024.jpg" alt="" class="wp-image-28167" style="width:533px;height:578px" width="533" height="578" srcset="https://peepalmedia.com/wp-content/uploads/2023/09/Womens-Representation-in-the-Lok-Sabha-1-945x1024.jpg 945w, https://peepalmedia.com/wp-content/uploads/2023/09/Womens-Representation-in-the-Lok-Sabha-1-277x300.jpg 277w, https://peepalmedia.com/wp-content/uploads/2023/09/Womens-Representation-in-the-Lok-Sabha-1-768x832.jpg 768w, https://peepalmedia.com/wp-content/uploads/2023/09/Womens-Representation-in-the-Lok-Sabha-1-150x163.jpg 150w, https://peepalmedia.com/wp-content/uploads/2023/09/Womens-Representation-in-the-Lok-Sabha-1-300x325.jpg 300w, https://peepalmedia.com/wp-content/uploads/2023/09/Womens-Representation-in-the-Lok-Sabha-1-696x754.jpg 696w, https://peepalmedia.com/wp-content/uploads/2023/09/Womens-Representation-in-the-Lok-Sabha-1-1068x1157.jpg 1068w, https://peepalmedia.com/wp-content/uploads/2023/09/Womens-Representation-in-the-Lok-Sabha-1.jpg 1188w" sizes="auto, (max-width: 533px) 100vw, 533px" /><figcaption class="wp-element-caption">ಕೃಪೆ: ಭಾರತೀಯ ಚುನಾವಣಾ ಆಯೋಗ</figcaption></figure></div>


<p style="font-size:21px">ರಾಜ್ಯಸಭೆಯಲ್ಲಿ ಮಹಿಳಾ ಪ್ರಾತಿನಿಧ್ಯತೆ</p>


<div class="wp-block-image">
<figure class="aligncenter size-large is-resized"><img loading="lazy" decoding="async" src="https://peepalmedia.com/wp-content/uploads/2023/09/Womens-Representation-in-the-Rajya-Sabha-1-2-630x1024.jpg" alt="" class="wp-image-28168" style="width:552px;height:897px" width="552" height="897" srcset="https://peepalmedia.com/wp-content/uploads/2023/09/Womens-Representation-in-the-Rajya-Sabha-1-2-630x1024.jpg 630w, https://peepalmedia.com/wp-content/uploads/2023/09/Womens-Representation-in-the-Rajya-Sabha-1-2-185x300.jpg 185w, https://peepalmedia.com/wp-content/uploads/2023/09/Womens-Representation-in-the-Rajya-Sabha-1-2-768x1247.jpg 768w, https://peepalmedia.com/wp-content/uploads/2023/09/Womens-Representation-in-the-Rajya-Sabha-1-2-946x1536.jpg 946w, https://peepalmedia.com/wp-content/uploads/2023/09/Womens-Representation-in-the-Rajya-Sabha-1-2-150x244.jpg 150w, https://peepalmedia.com/wp-content/uploads/2023/09/Womens-Representation-in-the-Rajya-Sabha-1-2-300x487.jpg 300w, https://peepalmedia.com/wp-content/uploads/2023/09/Womens-Representation-in-the-Rajya-Sabha-1-2-696x1130.jpg 696w, https://peepalmedia.com/wp-content/uploads/2023/09/Womens-Representation-in-the-Rajya-Sabha-1-2-1068x1735.jpg 1068w, https://peepalmedia.com/wp-content/uploads/2023/09/Womens-Representation-in-the-Rajya-Sabha-1-2.jpg 1203w" sizes="auto, (max-width: 552px) 100vw, 552px" /><figcaption class="wp-element-caption">ಕೃಪೆ: ಭಾರತೀಯ ಚುನಾವಣಾ ಆಯೋಗ</figcaption></figure></div>


<p style="font-size:21px"><strong>ಲೋಕಸಭಾ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿಗಳ ಸಂಖ್ಯೆ (1957-2019)</strong></p>


<div class="wp-block-image">
<figure class="aligncenter size-full is-resized"><a href="https://www.statista.com/statistics/1010882/women-candidates-lok-sabha-elections-india/"><img loading="lazy" decoding="async" src="https://peepalmedia.com/wp-content/uploads/2023/09/Number-of-Women-Candidates.jpg" alt="" class="wp-image-28177" style="width:520px;height:350px" width="520" height="350" srcset="https://peepalmedia.com/wp-content/uploads/2023/09/Number-of-Women-Candidates.jpg 660w, https://peepalmedia.com/wp-content/uploads/2023/09/Number-of-Women-Candidates-300x202.jpg 300w, https://peepalmedia.com/wp-content/uploads/2023/09/Number-of-Women-Candidates-150x101.jpg 150w" sizes="auto, (max-width: 520px) 100vw, 520px" /></a><figcaption class="wp-element-caption">ಕೃಪೆ:  <a href="https://www.statista.com/statistics/1010882/women-candidates-lok-sabha-elections-india/" data-type="link" data-id="https://www.statista.com/statistics/1010882/women-candidates-lok-sabha-elections-india/">Statista</a></figcaption></figure></div>


<p style="font-size:21px"><strong>ಭೌಗೋಳಿಕತೆಯ ಆಧಾರದಲ್ಲಿ ಮಹಿಳೆಯರ ಸಂಸದೀಯ ಪ್ರಾತಿನಿಧ್ಯ:</strong></p>



<figure class="wp-block-image size-large"><img loading="lazy" decoding="async" width="1024" height="353" src="https://peepalmedia.com/wp-content/uploads/2023/09/gtjkghhk-1-1024x353.jpg" alt="" class="wp-image-28182" srcset="https://peepalmedia.com/wp-content/uploads/2023/09/gtjkghhk-1-1024x353.jpg 1024w, https://peepalmedia.com/wp-content/uploads/2023/09/gtjkghhk-1-300x103.jpg 300w, https://peepalmedia.com/wp-content/uploads/2023/09/gtjkghhk-1-768x265.jpg 768w, https://peepalmedia.com/wp-content/uploads/2023/09/gtjkghhk-1-150x52.jpg 150w, https://peepalmedia.com/wp-content/uploads/2023/09/gtjkghhk-1-696x240.jpg 696w, https://peepalmedia.com/wp-content/uploads/2023/09/gtjkghhk-1-1068x368.jpg 1068w, https://peepalmedia.com/wp-content/uploads/2023/09/gtjkghhk-1.jpg 1454w" sizes="auto, (max-width: 1024px) 100vw, 1024px" /><figcaption class="wp-element-caption">ಕೃಪೆ: &nbsp;<a rel="noreferrer noopener" href="https://data.ipu.org/women-averages?month=5&amp;year=2022&amp;op=Show+averages&amp;form_build_id=form-8t9vx839F4GPWWbSuGDMqsgQed3R3GlWQbSgtwIS96M&amp;form_id=ipu__women_averages_filter_form" target="_blank"><em>IPU Parline: Global Data on National Parliament</em></a><em>&nbsp;(as of May 2022)</em><strong>&nbsp;</strong></figcaption></figure>



<p>ಇದೀಗ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2014ರಲ್ಲಿ ಅಧಿಕಾರಕ್ಕೆ ಬಂದು 5 ವರ್ಷಗಳ ಅವಧಿಯಲ್ಲಿ ಈ ಕುರಿತು ಚಕಾರವೆತ್ತಲಿಲ್ಲ, ಮತ್ತೆ 2019ರಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳ ಕಾಲವೂ ಈ ಬಗ್ಗೆ ಉಸಿರೇ ಬಿಡಲಿಲ್ಲ. ಇದೀಗ ಇನ್ನೇನು ಚುನಾವಣೆ ಬಂತೆನ್ನುವ ಸಮಯದಲ್ಲಿ ಭಾರೀ ಪ್ರಚಾರದೊಂದಿಗೆ ಮಹಿಳಾ ಮಸೂದೆ ಮಂಡಿಸಲಾಗಿದೆ. </p>



<p>2019ರಲ್ಲಿ ಮೋದಿ ಸರ್ಕಾರ ಮೇಲ್ಜಾತಿಗಳಿಗೆ ಸಂವಿಧಾನಬಾಹಿರವಾಗಿ 10% ಮೀಸಲಾತಿ ನೀಡುವ ಮಸೂದೆ ಮಂಡಿಸಿ ಮೂರೇ ದಿನದಲ್ಲಿ ರಾಷ್ಟ್ಟಪತಿ ಸಹಿಯೂ ಬಿದ್ದು ಕಾಯ್ದೆಯಾಗಿ ಜಾರಿಯೂ ಅಗಿಬಿಟ್ಟಿತು. ಆಗಲೂ ಮಹಿಳಾ ಮೀಸಲಾತಿಯನ್ನು ಮಾತ್ರ ಕಡೆಗಣಿಸಲಾಗಿತ್ತು.</p>



<p>ಕನಿಷ್ಟ ಈಗಲಾದರೂ ಚುನಾವಣಾ ದೃಷ್ಟಿಯಿಂದಲಾದರೂ ಮತ್ತೆ ಇದು ಮುನ್ನೆಲೆಗೆ ಬಂದಿದೆ. ಆದರೆ ಇದರಲ್ಲಿ ಒಬಿಸಿ ಒಳಮೀಸಲಾತಿ ಇಲ್ಲದಿರುವುದು ಮತ್ತು ಇದು ಜಾರಿಯಾಗುವುದೇ 2029ಕ್ಕೆ ಎಂಬುದು ಸಮಸ್ಯಾತ್ಮಕವಾಗಿದೆ.</p>



<p>ಒಳಮೀಸಲಾತಿಯೊಂದಿಗೆ, ತಕ್ಷಣದಲ್ಲೇ ಮಹಿಳಾ ಮೀಸಲಾತಿ ಜಾರಿಗೆ ಬರಲಿ ಎಂಬುದೇ ಎಲ್ಲರ ಆಶಯವಾಗಿದೆ.</p>



<p><strong>ಲೇಖನ:</strong> ಚರಣ್‌ ಐವರ್ನಾಡು, ಬೆಂಗಳೂರು</p>
]]></content:encoded>
					
		
		
			</item>
		<item>
		<title>ಭಾರತ ಐಕ್ಯತಾ ಯಾತ್ರೆ ವಿರುದ್ಧ ಬಿಜೆಪಿ ಜಾಹಿರಾತು: ಕಾಂಗ್ರೆಸ್‌ ತಿರುಗೇಟು</title>
		<link>https://peepalmedia.com/bjp-ad-against-bharat-ekyata-yatra-congress-hits-back/</link>
		
		<dc:creator><![CDATA[Peepal Media]]></dc:creator>
		<pubDate>Sat, 01 Oct 2022 09:16:32 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[bengalure]]></category>
		<category><![CDATA[bharath jodo yathre]]></category>
		<category><![CDATA[BJP ADVERTISMENT]]></category>
		<category><![CDATA[BJP VS CNG]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=8369</guid>

					<description><![CDATA[ಬೆಂಗಳೂರು: ತೋಡೋ ಪಿತಾಮಹನ ಮರಿಮಗನಿಂದ ಭಾರತ ಜೋಡಿಸಲು ಸಾಧ್ಯವೇ? ಎಂದು ಭಾರತೀಯ ಜನತಾ ಪಕ್ಷವು ಕನ್ನಡ ದಿಪತ್ರಿಕೆಯೊಂದರಲ್ಲಿ ಜಾಹಿರಾತು ನೀಡಿರುವುದರ ವಿರುದ್ಧ ರಾಜ್ಯ ಕಾಂಗ್ರೆಸ್‌ ಘಟಕವು ತಿರುಗೇಟು ನೀಡಿದೆ. ಕನ್ನಡ ದಿನಪತ್ರಿಕೆಯೊಂದರ ಮುಖಪುಟದ ಜಾಹಿರಾತುವಿನಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ಪಕ್ಷದ ಬಗ್ಗೆ ಟೀಕೆ ಮಾಡಲಾಗಿದ್ದು, ಭಾರತ ಐಕ್ಯತಾ ಯಾತ್ರೆಯ ನಿಜವಾದ ಅಜೆಂಡಾ ಬಾರತ ವಿಭಜನೆಯೇ ಆಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕ, ಭಾರತ [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು:</strong> ತೋಡೋ ಪಿತಾಮಹನ ಮರಿಮಗನಿಂದ ಭಾರತ ಜೋಡಿಸಲು ಸಾಧ್ಯವೇ? ಎಂದು ಭಾರತೀಯ ಜನತಾ ಪಕ್ಷವು ಕನ್ನಡ ದಿಪತ್ರಿಕೆಯೊಂದರಲ್ಲಿ ಜಾಹಿರಾತು ನೀಡಿರುವುದರ ವಿರುದ್ಧ ರಾಜ್ಯ ಕಾಂಗ್ರೆಸ್‌ ಘಟಕವು ತಿರುಗೇಟು ನೀಡಿದೆ.</p>



<p style="font-size:20px">ಕನ್ನಡ ದಿನಪತ್ರಿಕೆಯೊಂದರ ಮುಖಪುಟದ ಜಾಹಿರಾತುವಿನಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ಪಕ್ಷದ ಬಗ್ಗೆ ಟೀಕೆ ಮಾಡಲಾಗಿದ್ದು, ಭಾರತ ಐಕ್ಯತಾ ಯಾತ್ರೆಯ ನಿಜವಾದ ಅಜೆಂಡಾ ಬಾರತ ವಿಭಜನೆಯೇ ಆಗಿದೆ ಎಂದು ಆರೋಪಿಸಲಾಗಿದೆ.</p>


<div class="wp-block-image">
<figure class="aligncenter size-large is-resized"><img loading="lazy" decoding="async" src="https://peepalmedia.com/wp-content/uploads/2022/10/ಬಿಜಿಪಿ-ಜಾಹಿರಾತು-626x1024.jpg" alt="" class="wp-image-8372" width="264" height="427"/><figcaption>ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ರಾಜ್ಯ ಬಿಜೆಪಿ ನೀಡಿರುವ ಜಾಹಿರಾತು</figcaption></figure></div>


<p style="font-size:20px">ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕ, ಭಾರತ ಐಕ್ಯತಾ ಯಾತ್ರೆಯ ಯಶಸ್ಸಿನಿಂದ ಕಂಗೆಟ್ಟಿರುವ ಬಿಜೆಪಿ ಕನ್ನಡ ಪತ್ರಿಕೆಯೊಂದರಲ್ಲಿ ಎಂದಿನಂತೆ ಇತಿಹಾಸ ತಿರುಚುವ ಮುಖಪುಟದ ಜಾಹೀರಾತು ನೀಡಿದೆ ಎಂದು ತಿರುಗೇಟು ನೀಡಿದೆ.</p>



<p style="font-size:20px">ಸಾವರ್ಕರ್ ಎರಡು ರಾಷ್ಟ್ರ ಸಿದ್ಧಾಂತವನ್ನು ಪ್ರತಿಪಾದಿಸಿದ್ದರು, ಜಿನ್ನಾ ಅದನ್ನು ಪೂರೈಸಿಕೊಂಡರು. ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ್ ಮುಖರ್ಜಿ ಬಂಗಾಳದ ವಿಭಜನೆಯಲ್ಲಿ ಮುಂದಾಳತ್ವ ವಹಿಸಿದ್ದರು ಎಂದು ರಾಜ್ಯ ಕಾಂಗ್ರೆಸ್‌ ಘಟಕ ವಾಗ್ದಾಳಿ ನಡೆಸಿದೆ.</p>



<p style="font-size:20px">ರಾಜಕೀಯ ಪಕ್ಷಗಳು ಸಹಜವಾಗಿ ತಮ್ಮ ಸಾಧನೆ ಹೇಳಲು, ಸಕಾರಾತ್ಮಕ ಸಂದೇಶ ನೀಡಲು ಪತ್ರಿಕೆಗಳ ಮುಖಪುಟದ ಜಾಹೀರಾತು ನೀಡುವುದು ವಾಡಿಕೆ. ಆದರೆ ಬಿಜೆಪಿ ಪಕ್ಷವು ಕೋಟಿ ಕೋಟಿ ಖರ್ಚು ಮಾಡಿ ನಕಾರಾತ್ಮಕ ಜಾಹೀರಾತು ನೀಡಿದೆ ಎಂದರೆ ಅವರಲ್ಲಿ ಅದೆಷ್ಟು ಭಯ, ಆತಂಕ, ಅಭದ್ರತೆಯನ್ನು ಭಾರತ ಐಕ್ಯತಾ ಯಾತ್ರೆ ಮೂಡಿಸಿರಬಹುದೆಂದು ಊಹಿಸಬಹುದು. ಬಿಜೆಪಿ ತನ್ನೊಳಗಿನ ಭಯ, ಆತಂಕ, ಅಭದ್ರತೆಯನ್ನು ಪತ್ರಿಕೆಗಳ ಮುಖಪುಟಗಳಲ್ಲಿ ಜಾಹೀರು ಮಾಡಿಕೊಂಡಿದೆ. ಅದೂ ಕೂಡ ಹಣ ಖರ್ಚು ಮಾಡಿ! ಎಂದು ವ್ಯಂಗಿಸಿದೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr"><a href="https://twitter.com/hashtag/BharatJodoYatra?src=hash&amp;ref_src=twsrc%5Etfw">#BharatJodoYatra</a> ಯಶಸ್ಸಿನಿಂದ ಕಂಗೆಟ್ಟಿರುವ ಬಿಜೆಪಿ ಕನ್ನಡ ಪತ್ರಿಕೆಯೊಂದರಲ್ಲಿ ಎಂದಿನಂತೆ ಇತಿಹಾಸ ತಿರುಚುವ ಮುಖಪುಟದ ಜಾಹೀರಾತು ನೀಡಿದೆ.<br><br>ಸಾವರ್ಕರ್ ಎರಡು ರಾಷ್ಟ್ರ ಸಿದ್ಧಾಂತವನ್ನು ಪ್ರತಿಪಾದಿಸಿದ್ದರು, ಜಿನ್ನಾ ಅದನ್ನು ಪೂರೈಸಿಕೊಂಡರು.<br><br>ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ್ ಮುಖರ್ಜಿ ಬಂಗಾಳದ ವಿಭಜನೆಯಲ್ಲಿ ಮುಂದಾಳತ್ವ ವಹಿಸಿದ್ದರು.</p>&mdash; Jairam Ramesh (@Jairam_Ramesh) <a href="https://twitter.com/Jairam_Ramesh/status/1576046344719900672?ref_src=twsrc%5Etfw">October 1, 2022</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
	</channel>
</rss>
