<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>bjp dirty politics &#8211; Peepal Media</title>
	<atom:link href="https://peepalmedia.com/tag/bjp-dirty-politics/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 03 Sep 2024 12:04:52 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>bjp dirty politics &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಫೊರೆನಿಕ್ಸ್ ಲ್ಯಾಬಲ್ಲಿ ಪತ್ತೆಯಾದ ಮೊಸಳೆ ಕಣ್ಣೀರು (ರಾಜಕೀಯ ವಿಡಂಬನೆ)</title>
		<link>https://peepalmedia.com/crocodile-tears-discovered-in-forensics-lab-political-satire/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 03 Sep 2024 11:43:00 +0000</pubDate>
				<category><![CDATA[ಅಂಕಣ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[bjp dirty politics]]></category>
		<category><![CDATA[bjp govt]]></category>
		<category><![CDATA[Bjp IT cell]]></category>
		<category><![CDATA[bjp karnataka]]></category>
		<category><![CDATA[BJP leader]]></category>
		<category><![CDATA[BJP leader Gurtaj Bhullar wife]]></category>
		<category><![CDATA[Boycott Modhi]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[modhiji]]></category>
		<category><![CDATA[modi]]></category>
		<category><![CDATA[Narendra modhi road show]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Satire]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=44863</guid>

					<description><![CDATA[ತಣ್ಣಗೆ ಮಲಗಿದ್ದ ಕತ್ತಲನ್ನು ಸೀಳುತ್ತ ಸುದ್ದಿ ನಿಧಾನವಾಗಿ ಹರಡುತ್ತಿತ್ತು. ಆ ತಡರಾತ್ರಿ ಅಶರೀರವಾಣಿಯಾಗಿ ಕೇಳಿ ಬಂದ ಸುದ್ದಿಯಿಂದ ಆತಂಕಗೊಂಡ ಅಖಿಲ ಬ್ರಹ್ಮಾಂಡ ಅಂಡಾಂಡ ಪಿಂಡ ಲಂಡ ಭಕ್ತರು ತಂಡೋಪತಂಡವಾಗಿ, ಪ್ರಜೆಗಳ ತೆರಿಗೆಯ ಬೆವರಲ್ಲಿ ಕಟ್ಟಿದ ನಮೋನ ಐಷಾರಾಮಿ ಅರಮನೆಯತ್ತ ದೌಡಾಯಿಸಿದ್ದರು. ವಿಷಯವೇನೆಂದು ವಿಶದವಾಗಿ ಯಾರಿಗೂ ತಿಳಿದಿರಲಿಲ್ಲ. ಮುಂಜಾನೆ ಎದ್ದಾಗಿಂದ, ಮೂಲೆ ಸಂದಿಯಲ್ಲಿದ್ದ ನಮೋ ವಿರೋಧಿಗಳನ್ನು ಹುಡುಕಿ, ಮತ್ತವರು ಉಸಿರೆತ್ತದಂತೆ ತದುಕಲು ಇಡಿ, ಐಟಿ, ಸಿಬಿಐಗಳನ್ನು ಛೂ ಬಿಟ್ಟು ಸುಸ್ತಾಗಿ ಮಲಗಿದ್ದ ಅಪರಿಮಿತ ಕುತಂತ್ರಿ ಮಂತ್ರಿ ಕೂಡ ಸುದ್ದಿ [&#8230;]]]></description>
										<content:encoded><![CDATA[
<p>ತಣ್ಣಗೆ ಮಲಗಿದ್ದ ಕತ್ತಲನ್ನು ಸೀಳುತ್ತ ಸುದ್ದಿ ನಿಧಾನವಾಗಿ ಹರಡುತ್ತಿತ್ತು. ಆ ತಡರಾತ್ರಿ ಅಶರೀರವಾಣಿಯಾಗಿ ಕೇಳಿ ಬಂದ ಸುದ್ದಿಯಿಂದ ಆತಂಕಗೊಂಡ ಅಖಿಲ ಬ್ರಹ್ಮಾಂಡ ಅಂಡಾಂಡ ಪಿಂಡ ಲಂಡ ಭಕ್ತರು ತಂಡೋಪತಂಡವಾಗಿ, ಪ್ರಜೆಗಳ ತೆರಿಗೆಯ ಬೆವರಲ್ಲಿ ಕಟ್ಟಿದ ನಮೋನ ಐಷಾರಾಮಿ ಅರಮನೆಯತ್ತ ದೌಡಾಯಿಸಿದ್ದರು. ವಿಷಯವೇನೆಂದು ವಿಶದವಾಗಿ ಯಾರಿಗೂ ತಿಳಿದಿರಲಿಲ್ಲ. ಮುಂಜಾನೆ ಎದ್ದಾಗಿಂದ, ಮೂಲೆ ಸಂದಿಯಲ್ಲಿದ್ದ ನಮೋ ವಿರೋಧಿಗಳನ್ನು ಹುಡುಕಿ, ಮತ್ತವರು ಉಸಿರೆತ್ತದಂತೆ ತದುಕಲು ಇಡಿ, ಐಟಿ, ಸಿಬಿಐಗಳನ್ನು ಛೂ ಬಿಟ್ಟು ಸುಸ್ತಾಗಿ ಮಲಗಿದ್ದ ಅಪರಿಮಿತ ಕುತಂತ್ರಿ ಮಂತ್ರಿ ಕೂಡ ಸುದ್ದಿ ಕೇಳಿ ಗೊಣಗುತ್ತ ಅರೆನಿದ್ದೆಯಿಂದ ಎಚ್ಚೆತ್ತ. ನಮೋ ಗ್ರಹಚಾರವನ್ನು ಹಳಿಯುತ್ತ ಅರಮನೆಯತ್ತ ಹೆಜ್ಜೆ ಹಾಕಿದ.</p>



<p>ಇನ್ನೇನು ಅರಮನೆ ಬಂತು ಅನ್ನುವಷ್ಟರಲ್ಲಿ ಗಕ್ಕನೆ ನಿಂತ ಅಪರಿಮಿತ ಕುತಂತ್ರಿ ಆಕಾಶದತ್ತ ದಿಟ್ಟಿಸಿದ. ಫಳಫಳನೆ ಹೊಳೆವ ನಕ್ಷತ್ರಗಳು, ಚಂದ್ರನ ಬಿಟ್ಟರೆ ಎಲ್ಲೂ ಚಾದರದಷ್ಟು ಮೋಡಗಳು ಕಾಣಲಿಲ್ಲ. ಹಾಗಿದ್ದರೆ, ರಸ್ತೆಯೆಲ್ಲಾ ತೇವಗೊಂಡು ನೀರು ಹರಿದು ಬರುತ್ತಿರುವುದಾದರೂ ಎಲ್ಲಿಂದ? ಗಾಬರಿಯಿಂದ ಅರಮನೆ ಹೊಕ್ಕಾಗ ಅಲ್ಲಿಯ ದೃಶ್ಯ ಕಂಡು ಗಕ್ಕನೆ ನಿಂತ. ನೆರೆದಿದ್ದ ನೂರಾರು ಲಂಡಭಕ್ತರ ರೋದನೆಯ ಕಣ್ಣೀರು ಹೊಳೆಯಾಗಿ ಹರಿದು ಬರುತ್ತಿತ್ತು.</p>



<p>ಹೆಜ್ಜೆ ಇರಿಸಲು ಜಾಗವಿಲ್ಲದಂತೆ ನೆರೆದಿದ್ದ ಭಕ್ತರ ಮಧ್ಯೆ ಇರುಕಿಸಿಕೊಂಡವನು ತಳ್ಳಾಡುತ್ತ ಅವರನ್ನು ದೂಡಿ ಕೊಂಡು ನಮೋ ಕೊಠಡಿಯತ್ತ ಬಂದ. ಅದಾಗಲೇ ಮಂತ್ರಿಗಳು, ಪೂರ್ವಾಶ್ರಮದ ಚಡ್ಡಿಧಾರಿಗಳು, ಗೋದಿ ಮಾಧ್ಯಮದ ಬಕೆಟ್ ಪತ್ರಕರ್ತರು &#8211; ಎಲ್ಲರೂ ಮ್ಲಾನವದನರಾಗಿ ನಿಂತದ್ದು ಕಂಡ ಅಪರಿಮಿತ ಕುತಂತ್ರಿಗೆ ಸುದ್ದಿ ತನಗೆ ತಡವಾಗಿ ಸಿಕ್ಕು ಕೊನೆಯವನಾಗಿ ಬಂದದ್ದಕ್ಕೆ ಮುಜುಗರವಾಯಿತು. ಏನು ನಡೆದಿದೆ? ಸಾಮ್ರಾಟನಿಗೆ ಏನಾದರೂ ವಿಪತ್ತು ಒದಗಿ ಬಂತೆ? ಏನೊಂದು ತಿಳಿಯದೆ ಕಮಲೀ ಮುಖಂಡ ಕಪಿ ದಡ್ಡನತ್ತ ಕಣ್ಸನ್ನೆಯಲ್ಲಿ ಕೇಳಿದರೆ ʼಎಲ್ಲಾ ಮುಗಿದು ಹೋದ ಹಾಗೆ!ʼ ಎನ್ನುವಂತೆ ಕೊಠಡಿಯತ್ತ ಜೋಲು ಮೋರೆ ಮಾಡಿದ. ಕೊಠಡಿಯ ಬಾಗಿಲ ಕೆಳಗಿನ ಸಂದಿಯಲ್ಲಿ ನೀರು ಹರಿದು ಬಂದು ಲಂಡಭಕ್ತರ ಕಣ್ಣೀರನ ಮುಖ್ಯವಾಹಿನಿಯಲ್ಲಿ ಸೇರುತ್ತಿತ್ತು.</p>



<p>ಮತ್ತಷ್ಟು ಗೊಂದಲಗೊಂಡ ಅಪರಿಮಿತ ಕುತಂತ್ರಿ, ಅಲ್ಲೇ ನಿಂತು ಕಣ್ಣೀರನ್ನು ಒರೆಸುತ್ತ ಕರ್ಚೀಫನ್ನು ಹಿಂಡುತ್ತಿದ್ದ ನಮೋ ಆಪ್ತಕಾರ್ಯದರ್ಶಿಗೆ “ಸಾಮ್ರಾಟರು ಎಲ್ಲಿ?” ಎಂದ.</p>



<p>“ವಿದೇಶಕ್ಕೆ ತೆರಳಿದ್ದ ನಮೋ ಮಹಾಸ್ವಾಮಿಗಳು ತಡರಾತ್ರಿ ಬಂದಾಗ ಬಹಳ ಚಿಂತೆಯಲ್ಲಿದ್ದಂತೆ ಕಂಡರು. ತುಟಿ ಎರಡು ಮಾಡದೆ ಬಿರುಗಾಳಿಯಂತೆ ಕೊಠಡಿ ಸೇರಿ ದಢಾರೆಂದು ಅಗುಳಿ ಹಾಕಿಕೊಂಡರು. ನಾನು ಮಾತಾಡಿಸುವ ಧೈರ್ಯ ಮಾಡಲಿಲ್ಲ. ಅರ್ಧತಾಸಿನ ನಂತರ “ಅಯ್ಯೋ!” ಎಂದು ಕೂಗಿದ ಹಾಗಾಯಿತು. ಎಷ್ಟು ಕೂಗಿದರೂ ಬಾಗಿಲು ತೆರೆಯಲಿಲ್ಲ. ಒಳಗಿನಿಂದ ಒಂದೇ ಸಮನೆ ನೀರು ಪ್ರವಾಹದಂತೆ ಹರಿದು ಬಂತು”</p>



<p>ಕಳೆದ ವರ್ಷ ಕೂಡ ಇಂಥದ್ದೇ ಪ್ರಸಂಗ ನಡೆದದ್ದು ಅ. ಕುತಂತ್ರಿಯ ನೆನಪಿಗೆ ಬಂತು. ʼಆಗ ಮಮ್ಮೀ…ಮಮ್ಮೀನ ನೋಡ್ಬೇಕು ಅಂತ ರಚ್ಚೆ ಹಿಡಿದಿದ್ದ. ಈಗ ಮಮ್ಮೀ ಇಲ್ಲ. ಮತ್ಯಾವ ಹೊಸ ನೌಟಂಕಿ ಶುರು ಮಾಡಿದ್ದಾನೊ! ಇತ್ತೀಚಿಗೆ ಮೆಥೆಡ್ ಆಕ್ಟಿಂಗ್ ಬೇರೆ ಪ್ರಾಕ್ಟಿಸ್ ಮಾಡ್ತಿದ್ದಾನೆʼ ಎಂದು ತಲೆ ಕೆರೆದುಕೊಂಡು, ಬಾಗಿಲನ್ನು ಒಡೆಯಲು ಕಾವಲುಗಾರರಿಗೆ ಹೇಳಿದ.</p>



<p>ಯಾರೂ ಒಳ ಬರದಂತೆ ಎಚ್ಚರಿಸಿ ತಾನೊಬ್ಬನೇ ರೂಮಿನೊಳಗೆ ಬಂದರೆ, ನಮೋ ಬಿಟ್ಟ ಕಣ್ಣು ಬಿಟ್ಟಂತೆ ಶೂನ್ಯದತ್ತ ದಿಟ್ಟಿಸುತ್ತ ಮಂಚದ ಮೇಲೆ ಕುಳಿತಿದ್ದ. ಮುಖದಲ್ಲಿ ದುಃಖ ಕೆರೆಯಂತೆ ನಿಂತಿತ್ತು. ಬಲಗಣ್ಣಿಂದ ಮಾತ್ರ ನೀರು ಧಾರಾಕಾರವಾಗಿ ಹರಿಯುತ್ತಿತ್ತು. ʼಒಂದೇ ಕಣ್ಣಿನಿಂದ ಅಳು…ವಾಹ್! ಗ್ರೇಟ್ ಆಕ್ಟಿಂಗ್ʼ. ಯಾವುದಕ್ಕೂ ಇರಲಿ ಎಂದು ತನ್ನ ಮೊಬೈಲಲ್ಲಿ ಫೋಟೊ ಕ್ಲಿಕ್ಕಿಸಿದ. ಹಿನ್ನೆಲೆಯಲ್ಲಿ ಕಣ್ಣೀರಧಾರೆ…ಇದೇಕೆ…ಇದೇಕೆ…ಪ್ಯಾತೊ ಸಾಂಗ್ ಕೇಳಿಬರುತ್ತಿತ್ತು. “ಮಹಾಸ್ವಾಮಿಗಳೆ… ಏನಾಯಿತು? ಎಚ್ಚರಗೊಳ್ಳಿ” ಎಂದರೆ ನಮೋ ಅಲುಗಾಡದೆ ಶಿಲೆಯಾಗಿದ್ದ.</p>



<p>ಅ. ಕುತಂತ್ರಿ ಕೂಡಲೇ &#8211; ಆಪ್ತಕಾರ್ಯದರ್ಶಿ, ಕಪಿ ದಡ್ಡ, ಮಂತ್ರಿಮಂಡಲ, ಮಾ.ಕೃ.ಕುಟೀರದ ಪುರೋಹಿತ ಸೇರಿದಂತೆ ಎಲ್ಲಾ ಕೇಸರಿ ಪ್ರಮುಖರನ್ನು ಸೇರಿಸಿ ನಮೋ ಸಾಮ್ರಾಟರಿಗೆ ಆಗಿರುವ ಆಘಾತವನ್ನು ಅರಿಯಲು ತುರ್ತುಸಭೆಯನ್ನು ಕರೆದ. ಸಭೆಯಲ್ಲಿ ಕಳೆದೆರೆಡು ದಿನಗಳಿಂದ ನಮೋ ಸುತ್ತ ಆದ ಘಟನೆಗಳನ್ನು ಕೆದಕುತ್ತ ಶೋಧನೆ ನಡೆಯಿತು.</p>



<p>24&#215;7 – ನಮೋಗೆ ಸಕಲ ಇಷ್ಟಾರ್ಥ ಸೇವೆ ಸಲ್ಲಿಸುತ್ತ ಜೊತೆಗಿರುವ ಆಪ್ತಕಾರ್ಯದರ್ಶಿಯ ಅಭಿಪ್ರಾಯವನ್ನು ಮೊದಲು ಕೇಳಲಾಗಿ “ಬಾಲಕನಂತಿದ್ದ ರಾಗಾ ಈಗ ಬ್ಲಾಕ್ ಬೆಲ್ಟ್ ತೊಟ್ಟು, ತೊಡೆ ತಟ್ಟುತ್ತ ಅಗ್ನಿವೀರ್, ಶೇರ್ ಮಾರ್ಕೆಟ್ ಸ್ಕಾಂಡಲ್, ಪರೀಕ್ಷೆ ಪೇಪರ್ ಲೀಕ್, ಜಾತಿ ಜನಗಣತಿ..ಎಕ್ಸೆಟ್ರಾಂತ ಇತ್ತೀಚಿಗೆ ಎಸೆಯುವ ಸವಾಲುಗಳಿಗೆ ಕೌಂಟರ್ ಕೊಡಲಾಗದೆ ಮಹಾಸ್ವಾಮಿಗಳು ಕಂಗೆಟ್ಟಿದ್ದರು. ಅದೂ ಸಾಲದೂಂತ ತಮ್ಮದೇ ಕಮಲೀ ಸಭಾ ನಡಾವಳಿಗಳ ಬಗ್ಗೆ ಬಹಳ ಕಳವಳಗೊಂಡಿದ್ದರು. ತಾನು ಎತ್ತಿ ಆಡಿಸಿ, ಮುದ್ದಾಡಿ ಗದ್ದುಗೆ ಮೇಲೆ ಕೂರಿಸಿದ ಬುಲ್ಡ್ ಡೋಜರ್ ಭೋಗಿಬಾಬಾ, ಸಭೆಗಳಲ್ಲಿ ಎಲ್ಲರಂತೆ ಸಾಷ್ಟಾಂಗ ಬೀಳುವುದಿರಲಿ ಕನಿಷ್ಟ ನಮಸ್ಕರಿಸಿ ಗೌರವ ಕೊಡದೆ ಅಪಮಾನಿಸಿದ್ದು ಅವರನ್ನು ಚಿಂತೆಯ ಕೂಪಕ್ಕೆ ತಳ್ಳಿತ್ತು. ಮೊನ್ನೆ ಅವರ ಫ್ಯಾಷನ್ ಡಿಸೈನರ್ ಅಳತೆ ತೆಗೆದುಕೊಳ್ಳುವಾಗ ಐವತ್ತಾರು ಇದ್ದ ಎದೆ ಗಾತ್ರ ಇಂಚಿನ ಪಟ್ಟಿಯಲ್ಲಿ ಮೂವತ್ತಾರಕ್ಕೆ ಇಳಿದದ್ದನ್ನು ನೋಡಿ ಅವರು ಕುಸಿದು ಹೋಗಿದ್ದರು” ಎಂದು ಬಿಕ್ಕಿ ಬಿಕ್ಕಿ ಅಳಲು ಆರಂಭಿಸಿದ.</p>



<p>“ಅದು ಇರಬಹುದು. ಆದರೆ…” ಎಂದು ಮಧ್ಯೆ ಬಾಯಿ ಹಾಕಿದ ವಿದೇಶಾಂಗ ಮಂತ್ರಿ “ನೆನ್ನೆ ರೂಸ್ ಗೆ ಹೋಗಿದ್ದಾಗ ಎರಡೂ ದೇಶದ ಪ್ರಧಾನಿಗಳನ್ನು ಕೂಡಿಸಿ ʼಫಾರಿನ್ ಮಿತ್ರೋ…ಇದು ಕಲಹಕ್ಕೆ ಕಾಲವಲ್ಲ. ಯುದ್ದ ನಿಲ್ಲಿಸಿʼ ಎಂದು ಶಾಂತಿಯ ಮಂತ್ರ ಜಪಿಸಿದ ವಿಶ್ವಗುರುವಿನ ಮಾತಿಗೆ ಅವರುಗಳು ಮೊದಲಿಗೆ ತಲೆಯಾಡಿಸಿ, ಕೈ ಕುಲುಕಿ ಹಗ್ ಮಾಡಿದ್ದರು. ಆದರೆ…ಅನಿವಾಸಿಗಳನ್ನು ಸ್ಟೇಡಿಯಮ್ಮಲ್ಲಿ ಗುಡ್ಡೇ ಹಾಕಿ, ದೇಶದಲ್ಲಿ ಆಗುತ್ತಿರುವ ಬುಲೆಟ್ ಟ್ರೈನ್ ಸ್ಪೀಡಿನ ಡೆವಲಪ್ ಮೆಂಟ್ ಬಗ್ಗೆ ಬುರುಡೆ ಬಿಡುತ್ತಿರಬೇಕಾದರೆ ಬಾಂಬೊಂದು ನಮೋ ಸಾಹೇಬರ ಅಡಿಗೆ ಬಂದು ಬಿತ್ತು. ಎದ್ದೇನೊ ಬಿದ್ದೇನೆಂದು ಪುಷ್ಪಕ ವಿಮಾನ ಹತ್ತಿ ವಾಪಸ್ಸು ಬರೋವಾಗ ನಮೋ ಸಾಹೇಬರು ಭಯದಿಂದ ನಡುಗುತ್ತಿದ್ದರು. ಅದೂ ಒಂದು ಕಾರಣ ಇರಬಹುದು” ಎಂದದ್ದು ಅ.ಕುತಂತ್ರಿಗೆ ಸರಿಬರಲಿಲ್ಲ. “ಹು…ಹು…ಇಲ್ಲ..ನಮೋ ಸಾಹೇಬರು ರಾಕೆಟ್ಟುಗಳನ್ನು ಕೈಯಲ್ಲೇ ಹಿಡಿದು ಹಾರಿಸುವ ಎಂಟೆದೆ ಅಲ್ಲ…ಹದಿನೆಂಟೆದೆ ಭಂಟ. ಹೆದರಿಕೊಂಡು ಬಂದಿರಲಾರರು. ತಾನಿಲ್ಲದ ಟೈಮಲ್ಲಿ ವೈರಿಗಳು ದೇಶವನ್ನು ಒಡೆದು ಹಾಕುತ್ತಾರೆಂದು ಬೇಗ ಬಂದಿದ್ದಾರೆ…ಅಷ್ಟೇ” ಎಂದು ಕಿತ್ತು ಹೋದ ನಮೋ ಧೈರ್ಯಕ್ಕೆ ಒಂದಷ್ಟು ತೇಪೆ ಮೆತ್ತಿದ.</p>



<p>ಅಷ್ಟರಲ್ಲಿ ಕಪಿ ದಡ್ಡ “ಕುತಂತ್ರಿಗಳೇ…ಸಾಮ್ರಾಟರ ಮನೋ ವೇದನೆಗೆ ನಾನೂ ಕಾರಣ ಇರಬಹುದು. ಆ ಪೊಮೆರಿಯನ್ ತಳಿಯ ಮಂಗನಾ ಶೇಪೌಟನ್ನು ಕಮಲೀ ಪಕ್ಷಕ್ಕೆ ಸೇರಿಸಿ ತಪ್ಪು ಮಾಡಿದೆ. ಎಷ್ಟು ಹೇಳಿದರೂ ನಾಬಾಲಿಕ್ ಬುದ್ದಿಯ ಅದಕ್ಕೆ ಅರ್ಥವಾಗುತ್ತಿಲ್ಲ. ಚಳುವಳಿ ಮಾಡುತ್ತಿರುವ ರೈತರು ಟೆರರಿಷ್ಟ್ ಗಳು. ಅಲ್ಲಿ ರೇಪ್ ಗಳು ಆಗುತ್ತಿವೆ. ಮರ್ಡರ್ ಮಾಡಿ ಡೆಡ್ ಬಾಡಿಗಳನ್ನು ನೇತು ಹಾಕಿದ್ದಾರೆ…ಹೀಗೆ ತಲೆಬುಡ ಇಲ್ಲದೆ ಮಾತಾಡುತ್ತಿದ್ದಾಳೆ. ಜನರು, ವಿರೋಧಿಗಳು ಇವೆಲ್ಲ ನಮೋ ಹೇಳಿಕೊಟ್ಟ ಗಿಳಿಮಾತುಗಳು ಎಂದು ವೃಥಾ ಸಾಮ್ರಾಟರನ್ನು ಛೇಡಿಸುತ್ತಿದ್ದಾರೆ. ಅಕಟಕಟಾ…” ಎಂದು ಗದ್ಗದಿತನಾದ.</p>



<p>ಎಷ್ಟು ಚರ್ಚಿಸಿದರೂ ನಮೋ ರೋದನೆಯ ಮೂಲ ಯಾವುದೆಂದು ತಿಳಿಯಲು ಸಭೆ ಸೋತಾಗ ಅ.ಕುತಂತ್ರಿ ಫೋರೆನಿಕ್ಸ್ ಲ್ಯಾಬ್ ತಂತ್ರಜ್ಞರಿಗೆ ಬರಹೇಳಿದ. ಇಡೀ ದೇಹ ಮುಚ್ಚುವಂತೆ ಪಿಪಿಇ ತೊಟ್ಟು ಬಂದ ಪರಿಣಿತರು ಸ್ಟ್ಯಾಚು ಆಗಿದ್ದ ನಮೋ ಕಣ್ಣೀರಿನ ಸ್ಯಾಂಪಲ್ಲನ್ನು ಸಂಗ್ರಹಿಸಿ ಅ.ಕುತಂತ್ರಿಗೆ ವಂದಿಸಿ ಹೊರಟಾಗ, “ವರ್ಷಗಟ್ಟಲೆ ರಿಸರ್ಚ್ ಮಾಡುತ್ತ ಕೂರಬೇಡಿ. ಬೇಗ ರಿಸಲ್ಟ್ ಬೇಕು. ಇದು ದೇಶದ ಅಳಿವು ಉಳಿವಿನ ಪ್ರಶ್ನೆ” ಎಂದು ಗುಟುರು ಹಾಕಿದ. ಅಷ್ಟರಲ್ಲಿ ಕಾವಲುಗಾರ ಬಂದು ಆಪ್ತಕಾರ್ಯದರ್ಶಿಯ ಕಿವಿಗೆ ಉಸಿರಿದ್ದನ್ನು, ಅವನು ಅ.ಕುತಂತ್ರಿಯ ಕಿವಿಗೆ ಸುರಿದ.</p>



<p>ನಮೋ ಸಂಕಟದಲ್ಲಿ ಏನನ್ನೋ ಹೇಳಲು ಪ್ರಯತ್ನಿಸುತ್ತಿದ್ದ. “ಏನದು ಹೇಳಿ. ನಿಮ್ಮ ಬೇಗುದಿ ಕಡಿಮೆಯಾಗುತ್ತೆ” ಎಂದು ಅ.ಕುತಂತ್ರಿ ಬೆನ್ನನ್ನು ನೀವಿದ. “ಅಲ್ಲಿ…ಅಲ್ಲಿ…ಬಂಗಾಲದಲ್ಲಿ… ಅತ್ಯಾಚಾರ…ಬಲಾತ್ಕಾರ…ದೀದಿ…ದೀದಿ…ಬೇಟಿ ಬಚಾವ್…ಬೇಟಿ ಪಡಾವ್” ಎಂದು ತೊದಲುತ್ತ ತೆರೆದಿದ್ದ ಕಣ್ಣುಗಳನ್ನು ಮುಚ್ಚಿ ಹಾಸಿಗೆಗೆ ಒರಗಿದ. ಒಂಟಿ ಕಣ್ಣೀರು ಮತ್ತಷ್ಟು ಒಸರಿ ಬಂತು.</p>



<p>ಮಹಿಳೆ ಶೋಷಣೆ ಬಗ್ಗೆ ನಮೋ ಸುರಿಸಿದ ಕೊಳಗಗಟ್ಟಲೆ ಕಣ್ಣೀರ ಬಗ್ಗೆ ಬಕೆಟ್ ಮಾಧ್ಯಮಗಳು ತರಹೇವಾರಿ ಹೆಡ್ಡಿಂಗ್ ಗಳನ್ನು ಕೊಟ್ಟು ಪ್ರಸಾರ ಮಾಡಿದವು. ಮಾತೃಹೃದಯದ ನಮೋ ಸಂಕಟಕ್ಕೆ ಲಂಡಭಕ್ತರ ಕರುಳು ಕಿವಿಚಿ ಬಂದು ಕಣ್ಣೀರಧಾರೆಯನ್ನು ಹರಿಸಿ, ಅಂಗಡಿಮುಂಗಟ್ಟು ಆಸ್ಪತ್ರೆಗಳ ಮೇಲೆ ದಾಳಿ ಎಸಗಿ ಧ್ವಂಸ ಮಾಡಿದರು. ರಸ್ತೆಗಳನ್ನು ಬಂದು ಮಾಡಿ, ವಾಹನಗಳಿಗೆ ಬೆಂಕಿ ಹಚ್ಚಿ ಶೋಷಿತಳಿಗೆ ಸಂತಾಪ ಸೂಚಿಸಿದರು.</p>



<p>ಫೋರೆನಿಕ್ಸ್ ಲ್ಯಾಬ್ ನಲ್ಲಿ ತನಿಖೆ ನಡೆಸಿದ್ದ ತಂತ್ರಜ್ಞರಿಗೆ ಅಸಹಜ, ವಿಶೇಷವಾದ ಫಲಿತಾಂಶ ದೊರೆತು ʼಯುರೇಕಾ!ʼ ಎಂದು ಸಂಭ್ರಮಗೊಂಡರು. “ನಮೋ ಅವರ ಒಂದೇ ಕಣ್ಣಿನಲ್ಲಿ ಅಶ್ರು ಬಂದದ್ದಕ್ಕೆ ಕಾರಣ ಸಿಗುತ್ತಿಲ್ಲ. ಇನ್ನೂ ಹೆಚ್ಚಿನ ಸಂಶೋಧನೆಯಿಂದ ತಿಳಿಯಬಹುದು. ಆದರೆ, ನಮೋ ಅವರು ಸುರಿಸಿದ ಕಣ್ಣೀರು, ಮೊಸಳೆ ಕಣ್ಣೀರಿಗೆ ಹೋಲಿಕೆಯಾಗುತ್ತಿರುವುದು ತನಿಖೆಯಲ್ಲಿ ತಿಳಿದು ಬಂದು ಅಚ್ಚರಿ ತಂದಿದೆ” ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದರು.</p>



<p>“ದೇಶದಲ್ಲಿ ಇಪ್ಪತ್ತು ನಿಮಿಷಕ್ಕೊಮ್ಮೆ ಮಹಿಳೆಯರ ಮೇಲೆ ಅತ್ಯಾಚಾರವಾಗುತ್ತಿದೆ. ಯೋಧರ ಪತ್ನಿಯರನ್ನು ಸೇರಿ ಹಲವು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ, ಮಾನಭಂಗ ಎಸಗಲಾಗಿದೆ. ಇದ್ಯಾವುದರ ಬಗ್ಗೆ ಉಸಿರೆತ್ತದೆ ಬಾಯಿಗೆ ಪ್ಲಾಸ್ಟರ್ ಹಾಕಿಕೊಂಡಿರುವ ಸಾಮ್ರಾಟ ಈಗ ಮೊಸಳೆ ಕಣ್ಣೀರು ಸುರಿಸುತ್ತಿದ್ದಾನೆ. ಎಂಥಾ ನಾಚಿಗೆಗೇಡು!” ಎಂದು ದೇಶವಾಸಿಗಳು ನಮೋ ಆಷಾಢಭೂತಿತನಕ್ಕೆ ಉಗಿದು ಉಪ್ಪಿನಕಾಯಿ ಹಾಕಿದರು.</p>



<p>ಚಂದ್ರಪ್ರಭ ಕಠಾರಿ<br>cpkatari@yahoo.com</p>
]]></content:encoded>
					
		
		
			</item>
		<item>
		<title>ಲೋಕಸಭೆ ಚುನಾವಣೆ ಟಾರ್ಗೆಟ್; ಬಿಜೆಪಿಯಲ್ಲೇ ವಿಜಯೇಂದ್ರ ತಲೆದಂಡಕ್ಕೆ ಕ್ಷಣಗಣನೆ!</title>
		<link>https://peepalmedia.com/countdown-to-vijayendras-beheading-in-bjp-itself/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 14 May 2024 11:16:02 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[bjp dirty politics]]></category>
		<category><![CDATA[by vijayendra]]></category>
		<category><![CDATA[congress]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=39457</guid>

					<description><![CDATA[ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಬಿಜೆಪಿಯ ಗದ್ದುಗೆ ಗುದ್ದಾಟ ಒಂದು ರೀತಿಯದ್ದಾದರೆ, ರಾಜ್ಯದಲ್ಲಿ ಈ ಬಾರಿಯ ಚುನಾವಣಾ ಫಲಿತಾಂಶದ ನಂತರ ದೊಡ್ಡ ದೊಡ್ಡ ತಲೆಗಳು ಬಿಜೆಪಿಯಲ್ಲಿ ನೆಲಕ್ಕುರುಳಲಿವೆ. ಹೀಗೊಂದು ಸುಳಿವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಹಾಕಿ, ಬಿಜೆಪಿ ನಾಯಕರ ತಲೆಗೆ ಹುಳ ಬಿಟ್ಟಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ನಳಿನ್ ಕುಮಾರ್ ಕಟೀಲು ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರದಲ್ಲಿದ್ದಾಗ ಬಿಜೆಪಿ ಪಕ್ಷ ಬರೋಬ್ಬರಿ 25 ಸೀಟುಗಳನ್ನು ಪಡೆಯುವ ಮೂಲಕ ಗೆಲುವಿನ ಕೇಕೆ ಹಾಕಿತ್ತು. ಆದರೆ ಈ ಬಾರಿ ಆ ಮಟ್ಟಿಗಿನ [&#8230;]]]></description>
										<content:encoded><![CDATA[
<p></p>



<p>ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಬಿಜೆಪಿಯ ಗದ್ದುಗೆ ಗುದ್ದಾಟ ಒಂದು ರೀತಿಯದ್ದಾದರೆ, ರಾಜ್ಯದಲ್ಲಿ ಈ ಬಾರಿಯ ಚುನಾವಣಾ ಫಲಿತಾಂಶದ ನಂತರ ದೊಡ್ಡ ದೊಡ್ಡ ತಲೆಗಳು ಬಿಜೆಪಿಯಲ್ಲಿ ನೆಲಕ್ಕುರುಳಲಿವೆ. ಹೀಗೊಂದು ಸುಳಿವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಹಾಕಿ, ಬಿಜೆಪಿ ನಾಯಕರ ತಲೆಗೆ ಹುಳ ಬಿಟ್ಟಿದ್ದಾರೆ.</p>



<p>ರಾಜ್ಯದಲ್ಲಿ ಈ ಹಿಂದೆ ನಳಿನ್ ಕುಮಾರ್ ಕಟೀಲು ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರದಲ್ಲಿದ್ದಾಗ ಬಿಜೆಪಿ ಪಕ್ಷ ಬರೋಬ್ಬರಿ 25 ಸೀಟುಗಳನ್ನು ಪಡೆಯುವ ಮೂಲಕ ಗೆಲುವಿನ ಕೇಕೆ ಹಾಕಿತ್ತು. ಆದರೆ ಈ ಬಾರಿ ಆ ಮಟ್ಟಿಗಿನ ಗೆಲುವು ಕಷ್ಟಸಾಧ್ಯ ಎಂಬ ಅರಿವಿದ್ದರೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಕನಿಷ್ಟ 20 ರಿಂದ 22 ಸೀಟುಗಳ ಟಾರ್ಗೆಟ್ ಕೊಡಲಾಗಿತ್ತು.</p>



<p>ಪ್ರಸ್ತುತ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಟ 18 ರಿಂದ 20 ಸೀಟುಗಳನ್ನು ಪಡೆದೇ ತೀರುತ್ತೇವೆ ಎಂಬ ಉಮೇದಿನಲ್ಲಿರುವಾಗ 15 ರಿಂದ 18 ಸೀಟು ತನ್ನದಾಗಿಸಿಕೊಂಡರೂ ಅದು ಕಾಂಗ್ರೆಸ್ ಪಕ್ಷದ ನಿಜವಾದ ಗೆಲುವು ಎಂದೇ ಹೇಳಲಾಗುತ್ತಿದೆ. ಹೀಗಿರುವಾಗ, ಬಿಜೆಪಿ ಈ ಹಿಂದಿನ ಅತಿ ಹೆಚ್ಚು ಸೀಟುಗಳನ್ನು ಕಳೆದುಕೊಳ್ಳಲಿದೆ, ಅಷ್ಟೇ ಅಲ್ಲದೇ ರಾಜ್ಯದಲ್ಲಿ ಹೊಸ ಪ್ರಯೋಗಗಳಿಗೆ ಕೈ ಇಟ್ಟ ಎಲ್ಲಾ ಕ್ಷೇತ್ರಗಳು ಬಿಜೆಪಿ ಪಾಲಿಗೆ ಗಗನ ಕುಸುಮವಾಗಲಿವೆ ಎಂಬ ಮಾತುಗಳು ಕೇಳಿ ಬಂದಿದೆ.</p>



<p>ಈ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಮಾಧ್ಯಮ ಪ್ರಕಟಣೆಯಲ್ಲಿ &#8220;ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ &#8211; ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್ ಎಸ್ ಎಸ್‌ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ&#8221; ಎಂದಿದ್ದಾರೆ.</p>



<p>ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ ಬಿಎಸ್ ಯಡಿಯೂರಪ್ಪ ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸದಿದ್ದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.</p>



<p>ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು. ಈ ಪಕ್ಷದ್ರೋಹಿ ಶಿಂಧೆ ಅವರ ಪಕ್ಷ ಈ ಚುನಾವಣೆಯಲ್ಲಿ ಧೂಳೀಪಟವಾಗಲಿರುವುದು ಮಾತ್ರವಲ್ಲ ಮಹಾರಾಷ್ಟ್ರದ ರಾಜಕೀಯದಲ್ಲಿ ಅವರು ಮೂಲೆ ಸೇರುವುದು ಖಚಿತ. ಈ ಹತಾಶೆಯಿಂದ ಏನೋ ಬಡಬಡಿಸಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಸ್ವೀಕರಿಸುವ ಅಗತ್ಯ ಇಲ್ಲ ಎಂದು ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>



<p>ರಾಜ್ಯ ವಿಧಾನಸಭೆ ಚುನಾವಣೆ ನಂತರ ಬಿಜೆಪಿ ಕಷ್ಟಕಾಲದಲ್ಲಿ ಉದ್ದೇಶಪೂರ್ವಕವಾಗಿ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಯಶಸ್ಸಿನಲ್ಲಿ ಇರುವಾಗ ನೆಲ ಕಚ್ಚಿರುವ ಬಿಜೆಪಿ ಪಕ್ಷವನ್ನು ಮೇಲೆತ್ತುವುದು ತೀರಾ ಕಷ್ಟ. ಇಂತಹ ಸಂದರ್ಭದಲ್ಲೇ ವಿಜಯೇಂದ್ರ ಪಕ್ಷದ ಸಾರಥಿಯಾದರೆ ಸುಲಭವಾಗಿ ಸೋಲಿನ ಹೊಣೆಯನ್ನ ವಿಜಯೇಂದ್ರ ಅಥವಾ ಯಡಿಯೂರಪ್ಪ ತಲೆಗೆ ಕಟ್ಟಬಹುದು ಎಂಬ ಲೆಕ್ಕಾಚಾರ ಬಿಎಸ್​ವೈ ವಿರೋಧಿಗಳ ಲೆಕ್ಕಾಚಾರ ಎಂಬ ಮಾತು ಕೇಳಿ ಬಂದಿದೆ.</p>
]]></content:encoded>
					
		
		
			</item>
		<item>
		<title>ಪ್ರಜ್ವಲ್ ರೇವಣ್ಣ ಬಗ್ಗೆ ಬಿಜೆಪಿಗೆ ಎಲ್ಲವೂ ಗೊತ್ತಿತ್ತು, ಆದರೂ ಹಾಸನ ಟಿಕೇಟ್ ಅಂತಿಮಗೊಳಿಸಿದ್ದೇಕೆ?</title>
		<link>https://peepalmedia.com/bjp-knew-everything-about-prajwal-revanna/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 29 Apr 2024 06:50:27 +0000</pubDate>
				<category><![CDATA[ಅಪರಾಧ]]></category>
		<category><![CDATA[ಲೋಕಸಭೆ ಚುನಾವಣೆ -2024]]></category>
		<category><![CDATA[bjp dirty politics]]></category>
		<category><![CDATA[JDS Dirty Politics]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Prajwal Revanna]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=38878</guid>

					<description><![CDATA[2023 ರ ಡಿಸೆಂಬರ್ ತಿಂಗಳಲ್ಲೇ ಹಾಸನದ ಜಿಲ್ಲಾ ಬಿಜೆಪಿ ಮುಖಂಡರೊಬ್ಬರು ತಮ್ಮ ಹೈಕಮಾಂಡ್ ಗೆ ಪತ್ರ ಬರೆದು, ಪ್ರಜ್ವಲ್ ರೇವಣ್ಣನ ಬಗ್ಗೆ ಮುನ್ನೆಚ್ಚರಿಕೆ ತಿಳಿಸಿದ್ದರು. ಅಷ್ಟೇ ಅಲ್ಲದೇ ಹಾಸನದ ಬಿಜೆಪಿ ಮುಖಂಡ, ಹೊಳೆನರಸೀಪುರ ಬಿಜೆಪಿ ಪರಾಜಿತ ಅಭ್ಯರ್ಥಿ ದೇವರಾಜೇ ಗೌಡ 2023 ರಂದೇ ಹಾಸನದಲ್ಲಿ ಪ್ರಜ್ವಲ್ ರೇವಣ್ಣನ ಲೈಂಗಿಕ ಹಗರಣದ ವಿಡಿಯೋ ಸಾಕ್ಷಿ ಬಗ್ಗೆ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿದ್ದರು. ಅಷ್ಟೇ ಅಲ್ಲದೇ ಬಿಜೆಪಿ ಜೆಡಿಎಸ್ ಮೈತ್ರಿಗೆ ಇಡೀ ಹಾಸನದ ಯಾವ ನಾಯಕರಿಗೂ ಸಮ್ಮತಿ ಇರಲಿಲ್ಲ. ಈ ಬಗ್ಗೆ [&#8230;]]]></description>
										<content:encoded><![CDATA[
<p></p>



<p>2023 ರ ಡಿಸೆಂಬರ್ ತಿಂಗಳಲ್ಲೇ ಹಾಸನದ ಜಿಲ್ಲಾ ಬಿಜೆಪಿ ಮುಖಂಡರೊಬ್ಬರು ತಮ್ಮ ಹೈಕಮಾಂಡ್ ಗೆ ಪತ್ರ ಬರೆದು, ಪ್ರಜ್ವಲ್ ರೇವಣ್ಣನ ಬಗ್ಗೆ ಮುನ್ನೆಚ್ಚರಿಕೆ ತಿಳಿಸಿದ್ದರು. ಅಷ್ಟೇ ಅಲ್ಲದೇ ಹಾಸನದ ಬಿಜೆಪಿ ಮುಖಂಡ, ಹೊಳೆನರಸೀಪುರ ಬಿಜೆಪಿ ಪರಾಜಿತ ಅಭ್ಯರ್ಥಿ ದೇವರಾಜೇ ಗೌಡ 2023 ರಂದೇ ಹಾಸನದಲ್ಲಿ ಪ್ರಜ್ವಲ್ ರೇವಣ್ಣನ ಲೈಂಗಿಕ ಹಗರಣದ ವಿಡಿಯೋ ಸಾಕ್ಷಿ ಬಗ್ಗೆ ಬಹಿರಂಗ ಪತ್ರಿಕಾಗೋಷ್ಠಿ ನಡೆಸಿದ್ದರು.</p>



<p>ಅಷ್ಟೇ ಅಲ್ಲದೇ ಬಿಜೆಪಿ ಜೆಡಿಎಸ್ ಮೈತ್ರಿಗೆ ಇಡೀ ಹಾಸನದ ಯಾವ ನಾಯಕರಿಗೂ ಸಮ್ಮತಿ ಇರಲಿಲ್ಲ. ಈ ಬಗ್ಗೆ ಹಾಸನ ಜಿಲ್ಲಾ ಬಿಜೆಪಿ ಸಮಿತಿ ಬಹಿರಂಗವಾಗಿ ಹೈಕಮಾಂಡ್ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿತ್ತು. ಅದು ಜೆಡಿಎಸ್ ಜೊತೆಗಿನ ತಮ್ಮ ಸೈದ್ಧಾಂತಿಕ ವಿರೋಧದ ಜೊತೆಗೆ ರೇವಣ್ಣ ಕುಟುಂಬದ ಇಂತಹ ಲೈಂಗಿಕ ಹಗರಣದ ವಿಚಾರವನ್ನೇ ಮುಖ್ಯವಾಗಿಸಿಕೊಂಡು ತನ್ನ ಅಭಿಪ್ರಾಯ ತಿಳಿಸಿತ್ತು.</p>



<p>ಈ ನಡುವೆ ತಮ್ಮ ಯಾವುದೇ ರಾಜ್ಯ ನಾಯಕರಿಗೆ ತಿಳಿಸದೇ, ಇತ್ತ ರಾಜ್ಯ ಬಿಜೆಪಿ ನಾಯಕರಿಗೂ ಸಹ ತಿಳಿಸದೇ ದೇವೇಗೌಡರ ಪೂರ್ತಿ ಕುಟುಂಬ ನೇರವಾಗಿ ನರೇಂದ್ರ ಮೋದಿ, ಜೆಪಿ ನಡ್ಡಾ ಹಾಗೂ ಅಮಿತ್ ಶಾ ಭೇಟಿ ಮಾಡಿ ತಮ್ಮ ಮೈತ್ರಿ ಕುದುರಿಸಿಕೊಂಡಿದ್ದರು. ಈ ಬಗ್ಗೆ ಎರಡೂ ಪಕ್ಷಗಳ ನಾಯಕರಿಗೆ ತೀವ್ರ ಅಸಮಾಧಾನ ಇದ್ದರೂ ಹೈಕಮಾಂಡ್ ಕಟ್ಟಪ್ಪಣೆ ಮೀರದ ಒಂದು ನಿಯಮ ಎರಡೂ ಪಕ್ಷಗಳಲ್ಲಿ ಇರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಈ ಮೈತ್ರಿ ಒಪ್ಪಿಕೊಳ್ಳಬೇಕಾಯಿತು.</p>



<p>ಇದರಲ್ಲಿ ಗಮನಿಸಬೇಕಾದ ಅಂಶವೆಂದರೆ, ಜೆಡಿಎಸ್ ನ ಯಾವುದೇ ಅಕ್ರಮಕ್ಕೂ ಕೇಂದ್ರ ಬಿಜೆಪಿ ನಾಯಕರ ಸಹಕಾರ ಅಥವಾ ರಕ್ಷಣೆ ಸಿಕ್ಕೇ ಸಿಗುತ್ತೆ ಎಂಬ ಅಂಶವೇ ರೇವಣ್ಣ ಕುಟುಂಬಕ್ಕೆ ದೊಡ್ಡ ಭರವಸೆಯಾಗಿತ್ತು. ಕೇಂದ್ರ ನಾಯಕರ ಮೂಲಕ ರಾಜ್ಯ ನಾಯಕರ ಬಾಯಿ ಮುಚ್ಚಿಸುವ ಬಗ್ಗೆಯೂ ದೇವೇಗೌಡರ ಕುಟುಂಬ ಯೋಚಿಸಿತ್ತು ಎಂಬುದು ಸುಳ್ಳಲ್ಲ. ಆಮೇಲೆ ಈಗ ಪ್ರಜ್ವಲ್ ಜರ್ಮನಿಗೇ ಎಸ್ಕೇಪ್ ಆಗಿರುವ ಪ್ರಕರಣದ ಹಿಂದೆಯೂ ಬಿಜೆಪಿ ಕೇಂದ್ರ ನಾಯಕರ ಕೃಪೆ ಇರಬಹುದೇ ಎಂಬ ಅನುಮಾನ ಕೂಡ ವ್ಯಕ್ತವಾಗಿವೆ.</p>



<p>ದೇವೇಗೌಡರ ಕುಟುಂಬಕ್ಕೆ ಕೇಂದ್ರ ನಾಯಕರ ಕೃಪೆ ಒಂದು ಕಡೆಯಾದರೆ ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಹ ಪ್ರಜ್ವಲ್ ರೇವಣ್ಣನ ಬಗ್ಗೆ ಇಷ್ಟೆಲ್ಲ ಸತ್ಯ ಗೊತ್ತಿದ್ದರೂ ಮುಚ್ಚಿಟ್ಟು, ಟಿಕೇಟ್ ನೀಡಿದ್ದು ಯಾಕೆ ಎಂಬ ಪ್ರಶ್ನೆ ಉದ್ಭವವಾಗಿದೆ. ಹಾಸನ ಜಿಲ್ಲಾ ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣನಿಗೆ ಟಿಕೇಟ್ ನೀಡಿದ್ದೇ ಆದರೆ ಚುನಾವಣೆ ಸಮಯದಲ್ಲಿ ಇಡೀ ರಾಜ್ಯ ಬಿಜೆಪಿ ಮುಜುಗರಕ್ಕೆ ಸಿಕ್ಕುವ ಸಾಧ್ಯತೆ ಇದೆ ಎಂದು ಏಚ್ಚರಿಸಿದ್ದರೂ ಈ ಬಗ್ಗೆ ಗಮನಹರಿಸದೇ ಟಿಕೇಟ್ ಅಂತಿಮಗೊಳಿಸಿದುದರ ಹಿಂದೆ, ಪ್ರಜ್ವಲ್ ರೇವಣ್ಣನಿಗೆ ಬಿಜೆಪಿ ಕೃಪೆ ಇತ್ತೇ ಎಂಬ ಬಗ್ಗೆಯೂ ಅನುಮಾನ ವ್ಯಕ್ತವಾಗಿವೆ.</p>



<p>ಇನ್ನು ಏಪ್ರಿಲ್ 28 ರ ಭಾನುವಾರವೇ ಪ್ರಜ್ವಲ್ ರೇವಣ್ಣ ಹಾಗು ಆತನ ತಂದೆ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿ ಎಫ್ಐಆರ್ ಆಗಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354ಎ (ಲೈಂಗಿಕ ಕಿರುಕುಳ), 354ಡಿ (ಹಿಂಬಾಲಿಸುವಿಕೆ), 506 (ಕ್ರಿಮಿನಲ್ ಬೆದರಿಕೆ) ಮತ್ತು 509 (ಅತಿರೇಕದ ವರ್ತನೆ) ಅಡಿಯಲ್ಲಿ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ದೂರು ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಪ್ರಥಮ ಮಾಹಿತಿ ವರದಿಗಳನ್ನು (ಎಫ್‌ಐಆರ್) ಸಿಐಡಿ ಅಡಿಯಲ್ಲಿ ಕಾರ್ಯನಿರ್ವಹಿಸುವ ಎಸ್‌ಐಟಿ ತನಿಖೆ ನಡೆಸುತ್ತಿದೆ.</p>
]]></content:encoded>
					
		
		
			</item>
		<item>
		<title>ಸೋಲಿನ ಭಯ : ಬಿಜೆಪಿ ದ್ವೇಷ ರಾಜಕಾರಣಕ್ಕೆ ಮೊರೆ : ಸಮಾಜ ಒಡೆಯುವ ಸಂಚಿನ ಬಗ್ಗೆ ಜಾಗೃತರಾಗೋಣ</title>
		<link>https://peepalmedia.com/fear-of-defeat-bjp-turns-to-hate-politics/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 23 Apr 2024 12:44:32 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ಮೀಡಿಯಾ]]></category>
		<category><![CDATA[ರಾಜಕೀಯ]]></category>
		<category><![CDATA[ಲೋಕಸಭೆ ಚುನಾವಣೆ -2024]]></category>
		<category><![CDATA[bjp dirty politics]]></category>
		<category><![CDATA[Jagruta Karnataka]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=38635</guid>

					<description><![CDATA[ಬಿಜೆಪಿ ಪಕ್ಷದ ದ್ವೇಷ ರಾಜಕಾರಣದ ಬಗ್ಗೆ ಎಚ್ಚೆತ್ತುಕೊಂಡು, ಸಮಾಜ ಒಡೆಯುವ ಅವರ ತಂತ್ರದ ಬಗ್ಗೆ ರಾಜ್ಯದ ಜನತೆ ಸದಾ ಜಾಗೃತರಾಗಿ ಇರಬೇಕು ಎಂದು ಜನಪರ ಸಂಘಟನೆ ಜಾಗೃತ ಕರ್ನಾಟಕ ರಾಜ್ಯದ ಜನರಲ್ಲಿ ಮನವಿ ಮಾಡಿದೆ. ಈ ಮೂಲಕ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಘಟನೆ ಬಿಜೆಪಿ ಸೋಲಿನ ಮುನ್ಸೂಚನೆ ಅರಿತು ಇಂತಹ ಕೆಲಸಕ್ಕೆ ಮುಂದಾಗಿದೆ. ಇದರ ಬಗ್ಗೆ ಎಲ್ಲರಿಗೂ ಅರಿವಿರಲಿ ಎಂದು ಮನವಿ ಮಾಡಿದೆ. &#8220;ನಾವೆಲ್ಲರೂ ಕೂಡಿ ನಾಲ್ಕು ವರ್ಷ ರಾಜ್ಯಕ್ಕೆ ಅತಿ ಕೆಟ್ಟ ದುರಾಡಳಿತ ನೀಡಿದ ಬಿಜೆಪಿಯನ್ನು [&#8230;]]]></description>
										<content:encoded><![CDATA[
<p></p>



<p>ಬಿಜೆಪಿ ಪಕ್ಷದ ದ್ವೇಷ ರಾಜಕಾರಣದ ಬಗ್ಗೆ ಎಚ್ಚೆತ್ತುಕೊಂಡು, ಸಮಾಜ ಒಡೆಯುವ ಅವರ ತಂತ್ರದ ಬಗ್ಗೆ ರಾಜ್ಯದ ಜನತೆ ಸದಾ ಜಾಗೃತರಾಗಿ ಇರಬೇಕು ಎಂದು ಜನಪರ ಸಂಘಟನೆ ಜಾಗೃತ ಕರ್ನಾಟಕ ರಾಜ್ಯದ ಜನರಲ್ಲಿ ಮನವಿ ಮಾಡಿದೆ. ಈ ಮೂಲಕ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಘಟನೆ ಬಿಜೆಪಿ ಸೋಲಿನ ಮುನ್ಸೂಚನೆ ಅರಿತು ಇಂತಹ ಕೆಲಸಕ್ಕೆ ಮುಂದಾಗಿದೆ. ಇದರ ಬಗ್ಗೆ ಎಲ್ಲರಿಗೂ ಅರಿವಿರಲಿ ಎಂದು ಮನವಿ ಮಾಡಿದೆ.</p>



<p>&#8220;ನಾವೆಲ್ಲರೂ ಕೂಡಿ ನಾಲ್ಕು ವರ್ಷ ರಾಜ್ಯಕ್ಕೆ ಅತಿ ಕೆಟ್ಟ ದುರಾಡಳಿತ ನೀಡಿದ ಬಿಜೆಪಿಯನ್ನು ಸೋಲಿಸಿ ಅಧಿಕಾರದಿಂದ ಕೆಳಗಿಳಿಸಿದ್ದೇವೆ. ಈಗ ಮತ್ತೊಮ್ಮೆ ನಾವೆಲ್ಲರೂ ಸೇರಿ ಹತ್ತು ವರ್ಷ ಮಹಾಮೋಸಗಳ ಆಳ್ವಿಕೆ ನೀಡಿದ ಮೋದಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಗಳಿಗೆ ಬಂದಿದೆ. ದೇಶವ್ಯಾಪಿಯಾಗಿ ಜನ, ವಿಶೇಷವಾಗಿ ದುಡಿಯುವ ಮತ್ತು ದಮನಿತ ಜನ ವರ್ಗಗಳು ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ಸೋಲುವ ಭೀತಿ ಬಿಜೆಪಿಯನ್ನು ಕಾಡುತ್ತಿದೆ.</p>



<p>ಜನರ ಬಳಿ ಹೋಗಲು, ಓಟು ಕೇಳಲು ಬಿಜೆಪಿಯವರಿಗೆ ವಿಷಯ ಇಲ್ಲವಾಗಿದೆ. ಮಾಡಿದ ಸಾಧನೆ ಶೂನ್ಯ. ಕೊಟ್ಟ ಯಾವ ಮಾತನ್ನೂ ಈಡೇರಿಸಿಲ್ಲ. ಬೆಲೆ ಏರಿಕೆ, ನಿರುದ್ಯೋಗ, ರೈತರ ಸಂಕಷ್ಟ, ಮಹಿಳೆಯರ ಮೇಲೆ ಅತ್ಯಾಚಾರಗಳು, ದಲಿತ – ದಮನಿತರ ಮೇಲಿನ ದೌರ್ಜನ್ಯಗಳು…..ಎಲ್ಲಾ ಹೆಚ್ಚಾಗಿವೆ. ಜನರ ಆದಾಯ, ಅವಕಾಶಗಳು, ಮೀಸಲಾತಿ, ಹಕ್ಕು, ಭದ್ರತೆ, ನೆಮ್ಮದಿ, ಶಾಂತಿ …..ಎಲ್ಲವೂ ಗಣನೀಯವಾಗಿ ಕಡಿಮೆಯಾಗಿದೆ. ಸಂವಿಧಾನವನ್ನು ಬದಲಾಯಿಸಲು ಅವರು ನಡೆಸುತ್ತಿರುವ ಒಳಸಂಚು ಅವರ ಮುಖಂಡರುಗಳ ಬಾಯಿಂದಲೇ ಬಯಲಾಗಿದೆ. ಎಂತಹ ದುಸ್ಥಿತಿ ಎಂದರೆ ಕೊಡಲು ಹೊಸ ಭರವಸೆಗಳೂ ಬಿಜೆಪಿ ಬಳಿ ಇಲ್ಲವಾಗಿವೆ. ಕಾಂಗ್ರೆಸ್ ಪ್ರಣಾಳಿಕೆಯ ಮುಂದೆ ಬಿಜೆಪಿಯ ಪ್ರಣಾಳಿಕೆ ಮಂಕು ಬಡಿದಿದೆ. ಮೋದಿಯ ಫೋಟೋಗಳು ಬಿಟ್ಟರೆ ಜನತೆಯ ಪಾಲಿಗೆ ಅದರಲ್ಲಿ ಯಾವುದೇ ನಿರ್ಧಿಷ್ಟ ಆಶಾದಾಯಕ ಭರವಸೆಗಳಿಲ್ಲ, ಯೋಜನೆಗಳಿಲ್ಲ, ನೀತಿಗಳಿಲ್ಲ.</p>



<p>ಬಿಜೆಪಿಯೊಳಗೆ ಆಂತರಿಕ ಕಲಹ ಭುಗಿಲೆದ್ದಿದೆ. ಬಿಜೆಪಿಯ ದ್ವಿಜರೆಂದು ಕರೆಸಿಕೊಳ್ಳುವ ಎಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಸಂಘರ್ಷವನ್ನೂ ತಣಿಸುವ ಶಕ್ತಿ ಮೋದಿಗಿಲ್ಲ. ಮೋದಿಯ ಭಾಷಣಗಳಿಗೆ ಜನ ಸೇರುತ್ತಿಲ್ಲ, ರ್ಯಾಲಿಯಲ್ಲಿ ಉತ್ಸಾಹವಿಲ್ಲ. ಬಸ್ಸಿನಲ್ಲಿ ತುಂಬಿಸಿಕೊಂಡು ಬಂದ ಜನರೂ ಮೋದಿ ಭಾಷಣ ಮಾಡುವಾಗಲೇ, ಅವರ ಕಣ್ಣ ಮುಂದೆಯೇ ಎದ್ದು ಹೋಗುತ್ತಿದ್ದಾರೆ. ಏಪ್ರಿಲ್ 19ರಂದು ನಡೆದ ಮೊದಲ ಸುತ್ತಿನ ಚುನಾವಣೆಯಲ್ಲಿ ಬಿಜೆಪಿಯ ಭದ್ರ ಬೂತ್ ಗಳಿಂದಲೇ ಜನ ಮತ ಹಾಕಲು ಬಂದಿಲ್ಲ, ಅವರಿಗೆ ಉತ್ಸಾಹ ಉಳಿದಿಲ್ಲ. ಇದು ಮೋದಿ ಸಾಮ್ರಾಜ್ಯ ಕುಸಿಯುತ್ತಿರುವ ಸ್ಪಷ್ಟ ಸೂಚನೆಯಾಗಿದೆ.</p>



<p>ಮೋದಿ, ಬಿಜೆಪಿ ಮತ್ತು ಸಂಘಪರಿವಾರ ಚಿಂತಾಕ್ರಾಂತರಾಗಿದ್ದಾರೆ. ಜನರನ್ನು ಜಾತಿ, ಧರ್ಮದ ಮೇಲೆ ಭಾವೋದ್ರೇಕಗೊಳಿಸಿ ಓಟು ಪಡೆಯುವ ಹಳೆಯ ತಂತ್ರಕ್ಕೆ ಮರಳಿದ್ದಾರೆ. ರಾಜಸ್ಥಾನದಲ್ಲಿ ಮೋದಿ ಮಾಡಿದ ಭಾಷಣ ಕೀಳುತನದ ಪರಮಾವಧಿಯಾಗಿದೆ. ತಳ ಸಮುದಾಯಗಳು ಅಭಿವೃದ್ದಿಯ ಮೊದಲ ಹಕ್ಕುದಾರರು ಎಂದು ಮನಮೋಹನ್ ಸಿಂಗ್ ಮಾಡಿದ ಭಾಷಣವನ್ನು ತಿರುಚಿ “ಮುಸ್ಲಿಮರು ಮೊದಲ ಹಕ್ಕುದಾರರು” ಎಂದು ಹೇಳಿರುವುದಾಗಿ ಹಸಿ ಸುಳ್ಳು ಹೇಳಿದ್ದಲ್ಲದೆ, ಒಂದು ಸಮುದಾಯವನ್ನು “ನುಸುಳುಕಾರರು” ಎಂದು ಕರೆದು, ಮಹಿಳೆಯರನ್ನು “ನಿಮ್ಮ ಮಂಗಳ ಸೂತ್ರ ಕಸಿದು ಅವರಿಗೆ ಕೊಡುತ್ತಾರೆ” ಎಂದು ಪ್ರಚೋದಿಸುವ ತುಚ್ಛ ಮಾತುಗಳನ್ನು ಆಡಿದ್ದಾರೆ. ಇತ್ತೀಚಿನ ಮೋದಿ ಭಾಷಣಗಳು ಸಂವಿಧಾನ ವಿರೋಧಿಯಾಗಿದ್ದರೂ ಅವರೇ ಆಯ್ಕೆ ಮಾಡಿ ಕೂರಿಸಿರುವ ಕೈಗೊಂಬೆ ಎಲೆಕ್ಷನ್ ಕಮಿಷನ್ ಏನೂ ಆಗಿಲ್ಲ ಎಂಬಂತೆ ಬಾಯಿಮುಚ್ಚಿ ಕೂತಿದೆ.</p>



<p>ಕರ್ನಾಟಕದಲ್ಲಿ ಕಾಂಗ್ರೆಸ್ ಕೊಟ್ಟ ‘ಚೊಂಬು’ ಜಾಹಿರಾತಿನಿಂದ ಕಕ್ಕಾಬಿಕ್ಕಿಯಾದ ಬಿಜೆಪಿ ಹಸಿಹಸಿ ಸುಳ್ಳುಗಳಿಂದ ಕೂಡಿದ ಕೋಮು ಪ್ರಚೋದಕ ಜಾಹಿರಾತನ್ನು ಎಲ್ಲಾ ಪತ್ರಿಕೆಗಳಲ್ಲೂ ನೀಡಿದೆ. ಅದರಲ್ಲಿ ‘ಪಾಕಿಸ್ತಾನ’, ‘ಕುಕ್ಕರ್ ಬಾಂಬ್’, ‘ಜೆಹಾದ್’, ‘ಕಸಾಯಿಖಾನೆ’ ಅಂತಹ ಪದಗಳಿಂದ ಜನರನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ. ಅಲ್ಲದೆ ಗಂಡು ದರ್ಪಕ್ಕೆ ಗುರಿಯಾದ ನೇಹಾ ಕೊಲೆ ಎಲ್ಲರ ಹೃದಯ ಹಿಂಡಿದೆ. ನೇಹಾ, ರುಕ್ಸಾನಾ, ಚಂದ್ರಮ್ಮ, ಶರಣಮ್ಮ, ಮುಂತಾದ ಅನೇಕ ಹೆಣ್ಣು ಮಕ್ಕಳು ಗಂಡು ದರ್ಪಕ್ಕೆ ಸಿಲುಕಿ ಹೊಸಕಿಹೋಗುತ್ತಿದ್ದಾರೆ. ಇಡೀ ಸಮಾಜವಾಗಿ ನಾವು ತಲೆತಗ್ಗಿಸಬೇಕಾದ ವಿಚಾರ. ಜಾತಿ, ಧರ್ಮದ ಬೇಧವಿಲ್ಲದೆ ತೀವ್ರ ಕ್ರಮಕ್ಕಾಗಿ ಆಳುವವರ ಮೇಲೆ ಒತ್ತಾಯ ಹೇರಬೇಕಿದೆ. ಆದರೆ ನೇಹ ಸಾವು ಬಿಜೆಪಿ ಮತ್ತು ಸಂಘ ಪರಿವಾರಕ್ಕೆ ನೋವು ತರುವ ಬದಲು ಸಂತಸ ತಂದಿದೆ. ಹೆಣ್ಣನ್ನು ಅತಿ ಕೀಳಾಗಿ ನಡೆಸಿಕೊಂಡ, ಮಹಿಳೆಯರ ಮೇಲಿನ ಯಾವೊಂದು ದೌರ್ಜನ್ಯದ ವಿರುದ್ಧವೂ ದನಿ ಎತ್ತದ ಇವರು, ಈಗ ಓಟಿಗಾಗಿ ಹೆಣವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡಲು ಹೊರಟಿದ್ದಾರೆ. ಬರುವ ದಿನಗಳಲ್ಲಿ ಕೋಮು ಪ್ರಚೋದನೆಯ ಪ್ರಯತ್ನಗಳನ್ನು ಮತ್ತಷ್ಟು ಹೆಚ್ಚು ಮಾಡಲಿದ್ದಾರೆ.</p>



<p><strong>ಬಂಧುಗಳೇ,</strong></p>



<p><strong>ಈ ಬಾರಿ ಬಿಜೆಪಿ ಸೋಲುವುದು ಶತಸಿದ್ಧ. ಅವರ ನಾಟಕಕ್ಕೆ ಮರುಳಾಗುವಷ್ಟು ಕರ್ನಾಟಕದ ಜನರು ಮೂರ್ಖರಲ್ಲ. ಅವರ ಹುನ್ನಾರಗಳಿಗೆ ಬಲಿಯಾಗುವುದು ಬೇಡ, ಪ್ರಚೋದನೆಗಳಿಗೆ ಗುರಿಯಾಗುವುದು ಬೇಡ. ಯಾವುದೇ ಕಾರಣಕ್ಕೂ ನಾವು ನಮ್ಮ ತಾಳ್ಮೆ ಕಳೆದುಕೊಳ್ಳುವುದು ಬೇಡ. ಭಾವೋದ್ರೇಕಕ್ಕೆ ಗುರಿಯಾಗದಂತೆ, ದುಡುಕಿನ ತಪ್ಪುಗಳು ನಡೆಯದಂತೆ ಎಚ್ಚರಿಕೆವಹಿಸೋಣ. ಬಿಜೆಪಿಯ ಮಹಾಮೋಸಗಳನ್ನು, ದುಷ್ಟ ಆಡಳಿತವನ್ನು, ನೀಚ ರಾಜಕಾರಣವನ್ನು, ಜನ ವಿರೋಧಿ ನೀತಿಗಳನ್ನು ಬಯಲುಗೊಳಿಸುವ ಕೆಲಸವನ್ನು ಸಂಯಮದ ಜೊತೆ, ಸಂಪೂರ್ಣ ತನ್ಮಯತೆ ಜೊತೆ ಮುಂದುವರಿಸೋಣ&#8221; </strong>ಎಂದು ಜಾಗೃತ ಕರ್ನಾಟಕ&nbsp; ಸಂಘಟನೆ ಮನವಿ ಮಾಡಿದೆ.</p>
]]></content:encoded>
					
		
		
			</item>
		<item>
		<title>ಚುನಾವಣಾ ಬಾಂಡ್ ಮತ್ತೆ ಜಾರಿ ; ನಿರ್ಮಲಾ ಸೀತಾರಾಮನ್, ಕಾಂಗ್ರೆಸ್ ಕಿಡಿ</title>
		<link>https://peepalmedia.com/electoral-bond-reissued-nirmala-sitharaman/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 21 Apr 2024 09:26:02 +0000</pubDate>
				<category><![CDATA[ದೇಶ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[ಲೋಕಸಭೆ ಚುನಾವಣೆ -2024]]></category>
		<category><![CDATA[bjp]]></category>
		<category><![CDATA[bjp dirty politics]]></category>
		<category><![CDATA[congress]]></category>
		<category><![CDATA[karnataka]]></category>
		<category><![CDATA[nirmala sitaraman]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=38564</guid>

					<description><![CDATA[ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಚುನಾವಣಾ ಬಾಂಡ್ ಗಳು ಮತ್ತೆ ಜಾರಿಗೆ ಬರಬಹುದು ಎಂಬ ಸೂಚನೆ ಕೊಟ್ಟಿದ್ದಾರೆ. ಈಗಾಗಲೇ ಸುಪ್ರೀಂಕೋರ್ಟ್ ಕೂಡಾ ಇದೊಂದು ಕಾನೂನು ಬಾಹಿರ ಯೋಜನೆ ಎಂಬ ಅಭಿಪ್ರಾಯ ನೀಡಿ, ಚುನಾವಣಾ ಬಾಂಡ್ ರದ್ದು ಮಾಡಿದ್ದರೂ ಬಿಜೆಪಿ ಮತ್ತೆ ಅದನ್ನು ಜಾರಿಗೆ ತರುವ ಅಭಿಪ್ರಾಯ ಹೊಂದಿದೆ ಎಂಬುದು ಸ್ಪಷ್ಟವಾಗಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಆಕ್ಷೇಪ ವ್ಯಕ್ತಪಡಿಸಿದ್ದು, ಬಿಜೆಪಿ ಪಕ್ಷ ಆಡಳಿತಕ್ಕೆ ಬಂದರೃ ಭ್ರಷ್ಟಾಚಾರವನ್ನು ಮತ್ತೊಮ್ಮೆ ಕಾನೂನುಬದ್ಧಗೊಳಿಸಲು ಮುಂದಾಗಲಿದೆ. [&#8230;]]]></description>
										<content:encoded><![CDATA[
<p>ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಚುನಾವಣಾ ಬಾಂಡ್ ಗಳು ಮತ್ತೆ ಜಾರಿಗೆ ಬರಬಹುದು ಎಂಬ ಸೂಚನೆ ಕೊಟ್ಟಿದ್ದಾರೆ. ಈಗಾಗಲೇ ಸುಪ್ರೀಂಕೋರ್ಟ್ ಕೂಡಾ ಇದೊಂದು ಕಾನೂನು ಬಾಹಿರ ಯೋಜನೆ ಎಂಬ ಅಭಿಪ್ರಾಯ ನೀಡಿ, ಚುನಾವಣಾ ಬಾಂಡ್ ರದ್ದು ಮಾಡಿದ್ದರೂ ಬಿಜೆಪಿ ಮತ್ತೆ ಅದನ್ನು ಜಾರಿಗೆ ತರುವ ಅಭಿಪ್ರಾಯ ಹೊಂದಿದೆ ಎಂಬುದು ಸ್ಪಷ್ಟವಾಗಿದೆ.</p>



<p>ಈ ಬಗ್ಗೆ ಕಾಂಗ್ರೆಸ್ ಪಕ್ಷ ಆಕ್ಷೇಪ ವ್ಯಕ್ತಪಡಿಸಿದ್ದು, ಬಿಜೆಪಿ ಪಕ್ಷ ಆಡಳಿತಕ್ಕೆ ಬಂದರೃ ಭ್ರಷ್ಟಾಚಾರವನ್ನು ಮತ್ತೊಮ್ಮೆ ಕಾನೂನುಬದ್ಧಗೊಳಿಸಲು ಮುಂದಾಗಲಿದೆ. ಈಗಾಗಲೇ ಸುಪ್ರೀಂಕೋರ್ಟ್ ಈ ಯೋಜನೆ ರದ್ದು ಮಾಡಿದ್ದರೂ ಮತ್ತೆ ಅದನ್ನೇ ಜಾರಿಗೊಳಿಸುವ ಹಿಂದೆ ಬಿಜೆಪಿ ಲಜ್ಜೆ ಬಿಟ್ಟು ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದೆ.</p>



<p>ನಿರ್ಮಲಾ ಸೀತಾರಾಮನ್ ಅವರ ಸಂದರ್ಶನದ ವರದಿಯನ್ನು ಪೋಸ್ಟ್​ ಮಾಡಿರುವ ಕಾಂಗ್ರೆಸ್​ ನಾಯಕ ಜೈರಾಮ್ ರಮೇಶ್​, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಅದು ಚುನಾವಣಾ ಬಾಂಡ್​ಗಳನ್ನು ಮರಳಿ ತರುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅದು ಕಾನೂನು ಬಾಹಿರ ಎಂದು ಸುಪ್ರೀಂಕೋರ್ಟ್​ ಘೋಷಿಸಿದೆ, ಅವುಗಳನ್ನು ಅಸಂವಿಧಾನಿಕ ಎಂದು ಕರೆಯಲಾಗುತ್ತಿದೆ.</p>



<p>ಪೇಪಿಎಂ ಹಗರಣದಲ್ಲಿ ಬಿಜೆಪಿ ಸಾರ್ವಜನಿಕರಿಂದ ಸುಮಾರು 4 ಲಕ್ಷ ಕೋಟಿ ರೂ. ಹಣವನ್ನು ಬಿಜೆಪಿ ಲೂಟಿ ಮಾಡಿರುವುದು ನಮಗೆ ತಿಳಿದಿದೆ. ಈಗ ಮತ್ತೆ ಲೂಟಿ ಮುಂದುವರೆಸಲು ಬಿಜೆಪಿ ಬಯಸುತ್ತಿದೆ ಎಂದು ಜೈರಾಮ್ ರಮೇಶ್​ ಹೇಳಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲಾ ಪಾಲುದಾರರೊಂದಿಗೆ ಸಮಾಲೋಚಿಸಿ ಚುನಾವಣಾ ಬಾಂಡ್​ಗಳನ್ನು ಮರಳಿ ತರಲು ಬಿಜೆಪಿ ಉದ್ದೇಶಿಸಿದೆ ಎಂದು ಸೀತಾರಾಮನ್​ ಖಾಸಗಿ ಸುದ್ದಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ಹೇಳಿದ್ದರು.</p>
]]></content:encoded>
					
		
		
			</item>
		<item>
		<title>ಚುನಾವಣೆ ನಂತರ ಬಿಜೆಪಿ ಜೆಡಿಎಸ್ ಮೈತ್ರಿ ಖತಂ!</title>
		<link>https://peepalmedia.com/bjp-jds-alliance-break-after-election/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 19 Apr 2024 06:49:11 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[ಲೋಕಸಭೆ ಚುನಾವಣೆ -2024]]></category>
		<category><![CDATA[bjp]]></category>
		<category><![CDATA[bjp dirty politics]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[Jds BJP alliance]]></category>
		<category><![CDATA[karnataka]]></category>
		<category><![CDATA[kumaraswami]]></category>
		<category><![CDATA[modi]]></category>
		<category><![CDATA[narendra modi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=38492</guid>

					<description><![CDATA[ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮೈತ್ರಿ ಮುರಿದು ಬೀಳುವ ಬಗ್ಗೆ ಮುನ್ಸೂಚನೆ ಸಿಕ್ಕಿದೆ. ಜೆಡಿಎಸ್ ಮತ್ತು ಬಿಜೆಪಿ ಎರಡೂ ಮೂಲಗಳಿಂದ ಸಿಕ್ಕ ಮಾಹಿತಿಯಂತೆ ಕಾಂಗ್ರೆಸ್ ಪಕ್ಷ ಸೋಲಿಸುವ ಏಕೈಕ ಉದ್ದೇಶದಿಂದ ಈ ಎರಡೂ ಪಕ್ಷಗಳು ಒಟ್ಟಾಗಿವೆಯೇ ಹೊರತು ಈ ಮೈತ್ರಿ ಮುಂದುವರಿಯಲು ಸಾಧ್ಯವೇ ಇಲ್ಲ ಎಂಬ ಮಾತುಗಳು ಕೇಳಿ ಬಂದಿವೆ. ಸಧ್ಯ ಜೆಡಿಎಸ್ ಕಡೆಯಿಂದ ಕೇಳಿ ಬಂದ ಅಪಸ್ವರ ಏನೆಂದರೆ, ರಾಜ್ಯದಲ್ಲಿ ಜೆಡಿಎಸ್ ಅಳಿವು ಉಳಿವಿನ ದಾರಿಯಲ್ಲಿ ನಡೆಯುತ್ತಿದೆ‌. ಶತಾಯಗತಾಯ ತನ್ನ [&#8230;]]]></description>
										<content:encoded><![CDATA[
<p>ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮೈತ್ರಿ ಮುರಿದು ಬೀಳುವ ಬಗ್ಗೆ ಮುನ್ಸೂಚನೆ ಸಿಕ್ಕಿದೆ. ಜೆಡಿಎಸ್ ಮತ್ತು ಬಿಜೆಪಿ ಎರಡೂ ಮೂಲಗಳಿಂದ ಸಿಕ್ಕ ಮಾಹಿತಿಯಂತೆ ಕಾಂಗ್ರೆಸ್ ಪಕ್ಷ ಸೋಲಿಸುವ ಏಕೈಕ ಉದ್ದೇಶದಿಂದ ಈ ಎರಡೂ ಪಕ್ಷಗಳು ಒಟ್ಟಾಗಿವೆಯೇ ಹೊರತು ಈ ಮೈತ್ರಿ ಮುಂದುವರಿಯಲು ಸಾಧ್ಯವೇ ಇಲ್ಲ ಎಂಬ ಮಾತುಗಳು ಕೇಳಿ ಬಂದಿವೆ.</p>



<p>ಸಧ್ಯ ಜೆಡಿಎಸ್ ಕಡೆಯಿಂದ ಕೇಳಿ ಬಂದ ಅಪಸ್ವರ ಏನೆಂದರೆ, ರಾಜ್ಯದಲ್ಲಿ ಜೆಡಿಎಸ್ ಅಳಿವು ಉಳಿವಿನ ದಾರಿಯಲ್ಲಿ ನಡೆಯುತ್ತಿದೆ‌. ಶತಾಯಗತಾಯ ತನ್ನ ಅಸ್ತಿತ್ವ ಕಾಪಾಡಿಕೊಳ್ಳಲೇ ಬೇಕಾದ ಅನಿವಾರ್ಯತೆ ಜೆಡಿಎಸ್ ಗೆ ಎದುರಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಬಲಿಷ್ಠ ಪಕ್ಷವಾಗಿರುವಾಗ ಆ ಪಕ್ಷದ ಜೊತೆಗೆ ಮೈತ್ರಿ ಅಸಾಧ್ಯ. ಸೀಟು ಹಂಚಿಕೆ ವಿಚಾರವಂತೂ ದೂರದ ಮಾತು. ಹೀಗಿರುವಾಗ ಕಳೆದ ಬಾರಿಯ ಒಂದೂ ಸೀಟು ಕೈ ತಪ್ಪಿ ಹೋದರೆ ಸಂಸತ್ತಿನಲ್ಲಿ ಜೆಡಿಎಸ್ ಗೆ ಒಂದು ಸ್ಥಾನವೂ ಇಲ್ಲದಂತಾಗಲಿದೆ. ಹೀಗಾಗಿ ಈ ಮೈತ್ರಿ ಅನಿವಾರ್ಯವೇ ಹೊರತು ಅವಶ್ಯಕ ಆಗಿರಲಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ.</p>



<p>ಇನ್ನು ರಾಜಕೀಯವಾಗಿ ಬಿಜೆಪಿ ಜೊತೆಗಿನ ಮೈತ್ರಿ ದೂರವಾಗಲು ಇನ್ನೊಂದು ಕಾರಣ ಏನೆಂದರೆ ಮಹಾರಾಷ್ಟ್ರದಲ್ಲಿ ಶಿವಸೇನೆ ಪಕ್ಷ ಹೊರತುಪಡಿಸಿ ಈವರೆಗೆ ಬಿಜೆಪಿ ಜೊತೆಗೆ ಗುರುತಿಸಿಕೊಂಡ ಯಾವೊಂದು ಪ್ರಾದೇಶಿಕ ಪಕ್ಷಗಳೂ ಜೀವಂತವಾಗಿಲ್ಲ. ಇದ್ದರೂ ಸಹ ಬಿಜೆಪಿ ಪಕ್ಷ ಕೊಟ್ಟ ಭಿಕ್ಷೆಯಂತಹ ಸ್ಥಾನಮಾನಕ್ಕೆ ತೃಪ್ತಿ ಪಟ್ಟು ಇದ್ದಾರೆ. ಕಾಂಗ್ರೆಸ್ ಜೊತೆಗೆ INDIA ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ಡಿಎಂಕೆ, ತೃಣಮೂಲ ಕಾಂಗ್ರೆಸ್, ಕೇರಳದ ಪ್ರಾದೇಶಿಕ ಪಕ್ಷಗಳು, ಆಮ್ ಆದ್ಮಿ ಪಕ್ಷ, ಶಿವಸೇನೆ, ಕಮ್ಯುನಿಸ್ಟ್ ಪಾರ್ಟಿ, RJD, NCP, ಸಮಾಜವಾದಿ ಪಾರ್ಟಿ ಸೇರಿದಂತೆ ಮೈತ್ರಿಕೂಟದ ಎಲ್ಲಾ 24 ಪಕ್ಷಗಳು ಘಟಾನುಘಟಿ ಪಕ್ಷಗಳೇ.. ಹಾಗೆಯೇ ತಮ್ಮ ತಮ್ಮ ರಾಜ್ಯಗಳಲ್ಲಿ ತಮ್ಮ ಅಸ್ತಿತ್ವ ಉಳಿಸಿಕೊಂಡಿವೆ. ಹೀಗಿರುವಾಗ, ಬಿಜೆಪಿ ಪಕ್ಷದ ಸಖ್ಯದಿಂದ ಎಷ್ಟು ಬೇಗ ಹೊರಬರುವುದೋ ಅಷ್ಟು ಬೇಗ ಜೆಡಿಎಸ್ ಗೆ ಉಳಿಗಾಲ ಎಂಬುದು ಜೆಡಿಎಸ್ ಪಕ್ಷದ ಮೂಲದಿಂದ ತಿಳಿದು ಬಂದಿದೆ.</p>



<p>ಅಷ್ಟೇ ಅಲ್ಲದೆ ಜಾತ್ಯಾತೀತ ಎಂಬ ಹಣೆಪಟ್ಟಿ ಹೊಂದಿರುವ ಪಕ್ಷ ಕೋಮುವಾದಿ ಎಂದೇ ಗುರುತಿಸಿಕೊಂಡ ಪಕ್ಷದ ಜೊತೆಗೆ ಎಲ್ಲಿಯವರೆಗೆ ಇರುವುದೋ ಅಲ್ಲಿಯವರೆಗೆ ತಮಗೆ ಅಪವಾದ ತಪ್ಪಿದ್ದಲ್ಲ. ಈಗಾಗಲೇ ಆದಷ್ಟು ತಮ್ಮ ಪಕ್ಷದ ವರ್ಚಸ್ಸು ಕುಂದಿರುವ ಹೊತ್ತಲ್ಲಿ ಜೆಡಿಎಸ್ ಇನ್ನೂ ಬಿಜೆಪಿ ಜೊತೆಯಲ್ಲಿ ಗುರುತಿಸಿಕೊಂಡರೆ ತನ್ನ ಅಸ್ತಿತ್ವಕ್ಕೆ ಕುಂದು ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಜೆಡಿಎಸ್ ಮೂಲಗಳಿಂದ ಬಂದ ಅಭಿಪ್ರಾಯವಾಗಿದೆ.</p>



<p>ಬೆಂಗಳೂರು ಗ್ರಾಮಾಂತರದಲ್ಲೂ ಸಹ ಇದರ ಛಾಯೆ ದಟ್ಟವಾಗಿದ್ದು ದೇವೇಗೌಡರ ಅಳಿಯ ಸಿಎನ್ ಮಂಜುನಾಥ್ ಗೆಲುವು ಸಹ ಅನುಮಾನ ಎನ್ನುವಂತಾಗಿದೆ. ಹೀಗಿರುವಾಗ ಚುನಾವಣೆ ಸಮಯದಲ್ಲಷ್ಟೆ ಬಿಜೆಪಿ ಸೇರ್ಪಡೆಯಾಗಿ, ಚುನಾವಣೆ ನಂತರ ಜೆಡಿಎಸ್ ಸೇರ್ಪಡೆ ಅಥವಾ ರಾಜಕೀಯದಿಂದ ದೂರ ಸರಿಯುವ ಬಗ್ಗೆಯೂ ಸಿಎನ್ ಮಂಜುನಾಥ್ ತನ್ನ ಆಪ್ತರಲ್ಲಿ ಹೇಳಿಕೊಂಡ ಬಗ್ಗೆ ಮಾಹಿತಿ ಲಭ್ಯವಾಗಿದೆ.</p>



<p>ಅಭ್ಯರ್ಥಿಗಳ ಆಯ್ಕೆ ಗೊಂದಲದಲ್ಲಿದ್ದ ಸಂದರ್ಭದಲ್ಲಿಯೂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ವಿರುದ್ಧ ಸಣ್ಣಗೆ ಮುನಿಸಿಕೊಂಡಿದ್ದು ಇನ್ನೂ ಸಹ ಜೆಡಿಎಸ್ ಪಾಳಯದಲ್ಲಿ ಮರೆತಿಲ್ಲ. ಕೇವಲ 2 ಸೀಟಿಗೆ ತೃಪ್ತಿ ಪಡುವಂತಾದರೆ ಈ ಮೈತ್ರಿಯ ಅಗತ್ಯ ಇರಲಿಲ್ಲ ಎಂದೇ ಜೆಡಿಎಸ್ ನಾಯಕ ತನ್ನ ಅಸಮಾಧಾನ ಹೊರಹಾಕಿದ್ದರು.</p>



<p>ಇನ್ನು ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ ಸಹ ಒಂದು ಸ್ಪಷ್ಟ ಸಿದ್ಧಾಂತ ಮತ್ತು ನಿಲುವಿಗೆ ನಿಲ್ಲದೇ ಇರುವುದು ಜೆಡಿಎಸ್ ಕಾರ್ಯಕರ್ತರಲ್ಲೇ ಗೊಂದಲ ಮತ್ತು ಅಸಮಾಧಾನ ಏರ್ಪಟ್ಟಿದೆ. ಈಗಾಗಲೇ ಜೆಡಿಎಸ್ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ಜೊತೆಗೆ ಎರಡೆರಡು ಬಾರಿ ಮೈತ್ರಿ ಮಾಡಿ ಮುರಿದು ಬಿದ್ದಿರುವಾಗ ವಿರೋಧಿಗಳಿಗೆ ಉತ್ತರ ಕೊಡುವಲ್ಲಿಯೂ ಸಹ ತೀವ್ರ ಗೊಂದಲಕ್ಕೆ ಒಳಗಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೋದಿ ಮತ್ತು ಬಿಜೆಪಿಗೆ ಬೈದು ವಿರೋಧಿಸಿಕೊಂಡು ಬಂದಿದ್ದ ಸಿದ್ಧಾಂತವನ್ನೇ ಏಕಾಏಕಿ ಅಪ್ಪಿಕೊಂಡಿರುವುದು ಸಹ ಕಾರ್ಯಕರ್ತರಲ್ಲಿ ತೀವ್ರ ಗೊಂದಲ ಉಂಟುಮಾಡಿದೆ‌.</p>



<p>ಅಷ್ಟೆ ಅಲ್ಲದೆ ಪಕ್ಷದ ಯಾವೊಬ್ಬ ಮುಖಂಡ, ಶಾಸಕರೊಂದಿಗೂ ಚರ್ಚಿಸದೇ, ರಾಜ್ಯ ಬಿಜೆಪಿ ನಾಯಕರೊಂದಿಗೂ ಸಮಾಲೋಚಿಸದೇ ನೇರವಾಗಿ ಬಿಜೆಪಿ ಹೈಕಮಾಂಡ್ ಕದ ತಟ್ಟಿದ ನಂತರ ನಿರ್ಮಾಣಗೊಂಡ ಮೈತ್ರಿಯನ್ನು ಕಾರ್ಯಕರ್ತರು, ಮುಖಂಡರು ಮತ್ತು ಪಕ್ಷದ ಉನ್ನತ ಮಟ್ಟದ ನಾಯಕರು ಅನಿವಾರ್ಯವಾಗಿ ಒಪ್ಪಬೇಕಾದ ಸ್ಥಿತಿ, ಜೆಡಿಎಸ್ ಪಕ್ಷದೊಳಗೇ ಆಂತರಿಕ ಸರ್ವಾಧಿಕಾರವನ್ನು ಅನಿವಾರ್ಯವಾಗಿ ಒಪ್ಪುವ ಹಂತಕ್ಕೆ ಜೆಡಿಎಸ್ ತಲುಪಿರುವುದು, ಈ ಬಗ್ಗೆ ಕುಮಾರಸ್ವಾಮಿ ಮೇಲೆ ಕೆಲವು ನಾಯಕರು ಸಣ್ಣ ಅಸಮಾಧಾನ ಹೊಂದಿರುವ ಹಿನ್ನೆಲೆಯಲ್ಲಿ ಚುನಾವಣೆ ನಂತರ ಬಿಜೆಪಿ ಸಖ್ಯ ತೊರೆಯುವ ಬಗ್ಗೆ ಎಲ್ಲಾ ಮುನ್ಸೂಚನೆಗಳು ಹಾಗೂ ಸಾಧ್ಯತೆಗಳು ಜೆಡಿಎಸ್ ಮೂಲಗಳಿಂದ ತಿಳಿದು ಬಂದಿದೆ.</p>
]]></content:encoded>
					
		
		
			</item>
		<item>
		<title>ಬಿಯರ್ ಬಾಟೆಲ್ ಮೇಲೆ ಡಿಕೆ ಸುರೇಶ್ ಫೋಟೋ ; ವೈರಲ್  ಸುದ್ದಿಯ ಅಸಲೀಯತ್ತೇನು?</title>
		<link>https://peepalmedia.com/dk-suresh-photo-on-beer-bottle/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 17 Apr 2024 15:07:40 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[ಸತ್ಯ ಶೋಧ]]></category>
		<category><![CDATA[bjp dirty politics]]></category>
		<category><![CDATA[dk suresh]]></category>
		<category><![CDATA[Fact check]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=38440</guid>

					<description><![CDATA[ದೇಶದಲ್ಲಿ ಚುನಾವಣಾ ಕಾವು ಜೋರಾಗುತ್ತಿದ್ದಂತೆ ಆರೋಪ ಪ್ರತ್ಯಾರೋಪಗಳು ಸರ್ವೆ ಸಾಮಾನ್ಯವಾಗಿದೆ. ಇದರ ಜೊತೆಗೆ ಫೇಕ್ ನ್ಯೂಸ್ ಗಳ ಹಾವಳಿ ಸಹ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಶಿವಮೊಗ್ಗ ಬಿಜೆಪಿ ಪಕ್ಷದ ಅಧಿಕೃತ ಫೇಸ್ಬುಕ್ ಪೇಜ್ ನಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಸದ ಡಿಕೆ ಸುರೇಶ್ ಗೆ ಸಂಬಂಧಿಸಿದ ಫೋಟೋ ಹರಿದಾಡುತ್ತಿದ್ದು, &#8216;ಹೊಸ ಗ್ಯಾರಂಟಿ&#8217; ಎಂಬ ಶೀರ್ಷಿಕೆ ಅಡಿಯಲ್ಲಿ ವೈರಲ್ ಆಗಿದೆ. https://www.facebook.com/bjp4shivamogga?mibextid=ZbWKwL ವೈರಲ್ ಆಗುತ್ತಿರುವ ಫೋಟೋದಲ್ಲಿ ಬಿಯರ್ ಬಾಟಲಿಯ ಮೇಲೆ ಡಿಕೆ ಸುರೇಶ್ ಅವರ ಚಿತ್ರ [&#8230;]]]></description>
										<content:encoded><![CDATA[
<p>ದೇಶದಲ್ಲಿ ಚುನಾವಣಾ ಕಾವು ಜೋರಾಗುತ್ತಿದ್ದಂತೆ ಆರೋಪ ಪ್ರತ್ಯಾರೋಪಗಳು ಸರ್ವೆ ಸಾಮಾನ್ಯವಾಗಿದೆ. ಇದರ ಜೊತೆಗೆ ಫೇಕ್ ನ್ಯೂಸ್ ಗಳ ಹಾವಳಿ ಸಹ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಶಿವಮೊಗ್ಗ ಬಿಜೆಪಿ ಪಕ್ಷದ ಅಧಿಕೃತ ಫೇಸ್ಬುಕ್ ಪೇಜ್ ನಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಸದ ಡಿಕೆ ಸುರೇಶ್ ಗೆ ಸಂಬಂಧಿಸಿದ ಫೋಟೋ ಹರಿದಾಡುತ್ತಿದ್ದು, &#8216;ಹೊಸ ಗ್ಯಾರಂಟಿ&#8217; ಎಂಬ ಶೀರ್ಷಿಕೆ ಅಡಿಯಲ್ಲಿ ವೈರಲ್ ಆಗಿದೆ.</p>



<figure class="wp-block-image size-large"><img fetchpriority="high" decoding="async" width="650" height="1024" src="https://peepalmedia.com/wp-content/uploads/2024/04/IMG-20240417-WA0036-650x1024.jpg" alt="" class="wp-image-38444" srcset="https://peepalmedia.com/wp-content/uploads/2024/04/IMG-20240417-WA0036-650x1024.jpg 650w, https://peepalmedia.com/wp-content/uploads/2024/04/IMG-20240417-WA0036-191x300.jpg 191w, https://peepalmedia.com/wp-content/uploads/2024/04/IMG-20240417-WA0036-768x1209.jpg 768w, https://peepalmedia.com/wp-content/uploads/2024/04/IMG-20240417-WA0036-975x1536.jpg 975w, https://peepalmedia.com/wp-content/uploads/2024/04/IMG-20240417-WA0036-150x236.jpg 150w, https://peepalmedia.com/wp-content/uploads/2024/04/IMG-20240417-WA0036-300x472.jpg 300w, https://peepalmedia.com/wp-content/uploads/2024/04/IMG-20240417-WA0036-696x1096.jpg 696w, https://peepalmedia.com/wp-content/uploads/2024/04/IMG-20240417-WA0036.jpg 1016w" sizes="(max-width: 650px) 100vw, 650px" /></figure>



<p><a href="https://www.facebook.com/bjp4shivamogga?mibextid=ZbWKwL">https://www.facebook.com/bjp4shivamogga?mibextid=ZbWKwL</a></p>



<p>ವೈರಲ್ ಆಗುತ್ತಿರುವ ಫೋಟೋದಲ್ಲಿ ಬಿಯರ್ ಬಾಟಲಿಯ ಮೇಲೆ ಡಿಕೆ ಸುರೇಶ್ ಅವರ ಚಿತ್ರ ಅಂಟಿಸಿದಂತಿದ್ದು, ಮೇಲೆ ಚಿಕ್ಕದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಫೋಟೋ ಕೂಡಾ ಫೋಟೋದ ಒಳಗೆ ಇದೆ.</p>



<p><a href="https://www.facebook.com/bjp4shivamogga?mibextid=ZbWKwL">https://www.facebook.com/bjp4shivamogga?mibextid=ZbWKwL</a></p>



<p>ಸಧ್ಯ ಶಿವಮೊಗ್ಗ ಬಿಜೆಪಿ ಅಧಿಕೃತ ಫೇಸ್ಬುಕ್ ಪೇಜ್ ಹಾಗೂ ಇತರೆ ಫೇಸ್ಬುಕ್ ಖಾತೆಗಳ ಮೂಲಕ ವೈರಲ್ ಆಗುತ್ತಿರುವ ಫೋಟೋ ಅಸಲಿಯದ್ದು ಅಲ್ಲ ಎಂದು ತಿಳಿದು ಬಂದಿದೆ. ಈ ಫೋಟೋ 2023 ರ ವರ್ಷದ್ದಾಗಿದ್ದು, ಬೇರೆ ಯಾವುದೋ ಫೋಟೋಗೆ ಡಿಕೆ ಸುರೇಶ್ ಫೋಟೋ ಹಾಕಿ ಎಡಿಟ್ ಮಾಡಲಾಗಿದೆ.</p>



<figure class="wp-block-image size-full"><img decoding="async" width="772" height="1024" src="https://peepalmedia.com/wp-content/uploads/2024/04/IMG-20240417-WA0037.jpg" alt="" class="wp-image-38445" srcset="https://peepalmedia.com/wp-content/uploads/2024/04/IMG-20240417-WA0037.jpg 772w, https://peepalmedia.com/wp-content/uploads/2024/04/IMG-20240417-WA0037-226x300.jpg 226w, https://peepalmedia.com/wp-content/uploads/2024/04/IMG-20240417-WA0037-768x1019.jpg 768w, https://peepalmedia.com/wp-content/uploads/2024/04/IMG-20240417-WA0037-150x199.jpg 150w, https://peepalmedia.com/wp-content/uploads/2024/04/IMG-20240417-WA0037-300x398.jpg 300w, https://peepalmedia.com/wp-content/uploads/2024/04/IMG-20240417-WA0037-696x923.jpg 696w" sizes="(max-width: 772px) 100vw, 772px" /></figure>



<p>2023 ರ ನವೆಂಬರ್ ತಿಂಗಳಲ್ಲಿ ತೆಲಂಗಾಣದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಡೆಸಿದ ಪ್ರಚಾರದ ಸಂದರ್ಭದಲ್ಲಿ ತಗೆದ ಫೋಟೋ ಬಳಸಿಕೊಂಡು ಅದಕ್ಕೆ ಡಿಕೆ ಸುರೇಶ್ ಅವರಿರುವ ಭಾವಚಿತ್ರ ಅಂಟಿಸಿದ ಎಡಿಟ್ ಮಾಡಿದ ಫೋಟೋ ಇದಾಗಿದೆ. ಈ ಒಂದು ಸುಳ್ಳು ಸುದ್ದಿಯನ್ನು ಬಿಜೆಪಿ ಪಕ್ಷ ಎಲ್ಲಾ ಕಡೆಗೂ ವೈರಲ್ ಮಾಡುತ್ತಿದ್ದು ಈಗಾಗಲೇ 150 ಕ್ಕೂ ಹೆಚ್ಚು ಮಂದಿ ಶೇರ್ ಮಾಡಿರುವುದು ಈಗ ಬೆಳಕಿಗೆ ಬಂದಿದೆ.</p>
]]></content:encoded>
					
		
		
			</item>
		<item>
		<title>ಬಿಜೆಪಿ ಚುನಾವಣಾ ಪ್ರಣಾಳಿಕೆ ಸಮಿತಿಯಲ್ಲಿ ಕರ್ನಾಟಕಕ್ಕಿಲ್ಲ ಯಾವುದೇ ಸ್ಥಾನ</title>
		<link>https://peepalmedia.com/karnataka-has-no-seat-in-the-bjp-election-manifesto-committee/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 31 Mar 2024 05:32:01 +0000</pubDate>
				<category><![CDATA[ದೇಶ]]></category>
		<category><![CDATA[ರಾಜಕೀಯ]]></category>
		<category><![CDATA[ಲೋಕಸಭೆ ಚುನಾವಣೆ -2024]]></category>
		<category><![CDATA[bjp dirty politics]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37772</guid>

					<description><![CDATA[ಲೋಕಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆ ರಚಿಸಲು ಬಿಜೆಪಿ ರಾಷ್ಟ್ರ ಮಟ್ಟದಲ್ಲಿ ಸಮಿತಿ ರಚಿಸಿದೆ. ಆದರೆ ಆ ಸಮಿತಿಯಲ್ಲಿ ಕರ್ನಾಟಕದ ಯಾವುದೇ ನಾಯಕರಿಗೆ ಒಂದು ಸ್ಥಾನವನ್ನೂ ಬಿಜೆಪಿ ನೀಡಿಲ್ಲ ಎಂಬ ಅಂಶ ಎದ್ದು ಕಾಣುವಂತಿದೆ. ಅದರಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರನ್ನು ಕರ್ನಾಟಕದವರೆಂದು ಉಲ್ಲೇಖಿಸಿದರೂ ಅವರದು ಮೂಲತಃ ಕೇರಳ ರಾಜ್ಯದವರಾದ್ದರಿಂದ ಕರ್ನಾಟಕದ ಯಾವ ನಾಯಕರಿಗೂ ಪ್ರಣಾಳಿಕೆ ಸಮಿತಿಯಲ್ಲಿ ಸ್ಥಾನ ನೀಡಿಲ್ಲ. ಅಷ್ಟೇ ಅಲ್ಲದೇ ಈ ಅಪವಾದ ಮರೆಮಾಚಲು ರಾಜೀವ್ ಚಂದ್ರಶೇಖರ್ ಅವರಿಗೆ ಕರ್ನಾಟಕದವರೆಂದು ಉಲ್ಲೇಖಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. [&#8230;]]]></description>
										<content:encoded><![CDATA[
<p>ಲೋಕಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆ ರಚಿಸಲು ಬಿಜೆಪಿ ರಾಷ್ಟ್ರ ಮಟ್ಟದಲ್ಲಿ ಸಮಿತಿ ರಚಿಸಿದೆ. ಆದರೆ ಆ ಸಮಿತಿಯಲ್ಲಿ ಕರ್ನಾಟಕದ ಯಾವುದೇ ನಾಯಕರಿಗೆ ಒಂದು ಸ್ಥಾನವನ್ನೂ ಬಿಜೆಪಿ ನೀಡಿಲ್ಲ ಎಂಬ ಅಂಶ ಎದ್ದು ಕಾಣುವಂತಿದೆ.</p>



<p>ಅದರಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರನ್ನು ಕರ್ನಾಟಕದವರೆಂದು ಉಲ್ಲೇಖಿಸಿದರೂ ಅವರದು ಮೂಲತಃ ಕೇರಳ ರಾಜ್ಯದವರಾದ್ದರಿಂದ ಕರ್ನಾಟಕದ ಯಾವ ನಾಯಕರಿಗೂ ಪ್ರಣಾಳಿಕೆ ಸಮಿತಿಯಲ್ಲಿ ಸ್ಥಾನ ನೀಡಿಲ್ಲ. ಅಷ್ಟೇ ಅಲ್ಲದೇ ಈ ಅಪವಾದ ಮರೆಮಾಚಲು ರಾಜೀವ್ ಚಂದ್ರಶೇಖರ್ ಅವರಿಗೆ ಕರ್ನಾಟಕದವರೆಂದು ಉಲ್ಲೇಖಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ.</p>



<p>ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆ ಹೊಂದಿರುವ ಈ ಸಮಿತಿಯು 27 ಸದಸ್ಯರನ್ನು ಒಳಗೊಂಡಿದ್ದು, ಅದರಲ್ಲಿ ಉತ್ತರ ಪ್ರದೇಶದಿಂದ 5 ಮಂದಿ ಸದಸ್ಯರು ಇದ್ದರೆ, ರಾಜಸ್ಥಾನ 3, ಒಡಿಶಾ 3, ಮಹಾರಾಷ್ಟ್ರ 2,  ಮಧ್ಯಪ್ರದೇಶ 2, ಬಿಹಾರ 2 ಸದಸ್ಯರು ಇದ್ದರೆ, ಗುಜರಾತ್, ತಮಿಳುನಾಡು, ಜಾರ್ಖಂಡ್, ಅರುಣಾಚಲ ಪ್ರದೇಶ, ಅಸ್ಸಾಂ, ಛತ್ತೀಸಗಡ, ದೆಹಲಿ ಹಾಗೂ ಕೇರಳ ರಾಜ್ಯಗಳ ನಾಯಕರಿಗೆ ತಲಾ ಒಂದೊಂದು ಸ್ಥಾನವನ್ನು ಬಿಜೆಪಿ ನೀಡಿದೆ.</p>



<p>ಸಮಿತಿಗೆ ರಾಜನಾಥ್ ಸಿಂಗ್ ಅಧ್ಯಕ್ಷರಾದರೆ, ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಸಚಿವ ಪೀಯೂಷ್ ಗೋಯಲ್‌ ಅವರನ್ನು ಕ್ರಮವಾಗಿ ಸಂಚಾಲಕಿ ಮತ್ತು ಉಪಸಂಚಾಲರಾಗಿ ನೇಮಕ ಮಾಡಲಾಗಿದೆ. ಸಮಿತಿಯಲ್ಲಿ ಕೇಂದ್ರದ ಹಲವು ಸಚಿವರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.</p>



<p>ಅರ್ಜುನ್ ಮುಂಡಾ, ಭೂಪೇಂದ್ರ ಯಾದವ್, ಅರ್ಜುನ್‌ರಾಮ್ ಮೇಘವಾಲ್, ಕಿರಣ್ ರಿಜಿಜು, ಅಶ್ವಿನಿ ವೈಷ್ಣವ್, ಧರ್ಮೇಂದ್ರ ಪ್ರಧಾನ್, ಭೂಪೇಂದ್ರ ಪಟೇಲ್, ಹಿಮಂತ ವಿಶ್ವಶರ್ಮ, ವಿಷ್ಣುದೇವ್ ಸಾಯಿ, ಮೋಹನ್ ಯಾದವ್, ಶಿವರಾಜ್ ಸಿಂಗ್ ಚೌಹಾಣ್, ವಸುಂಧರಾ ರಾಜೇ, ಸ್ಮೃತಿ ಇರಾನಿ, ಜುಯಲ್ ಓರಾಮ್, ಸುರಸಿಲ್, ರವಿಶಂಕರ್, ಮೋದಿ ಕೇಶವ್ ಪ್ರಸಾದ್ ಮೌರ್ಯ, ರಾಜೀವ್ ಚಂದ್ರಶೇಖರ್, ವಿನೋದ್ ತಾವ್ಡೆ, ರಾಧಾಮೋಹನ್ ದಾಸ್ ಅಗರ್ವಾಲ್, ಮಂಜಿಂದರ್ ಸಿಂಗ್ ಸಿರ್ಸಾ, ಒಪಿ ಧಂಖರ್, ಅನಿಲ್ ಆಂಟೋನಿ, ತಾರಿಕ್ ಮನ್ಸೂರ್ ಈ ಸಮಿತಿಯ ಸದಸ್ಯರಾಗಿದ್ದಾರೆ.</p>
]]></content:encoded>
					
		
		
			</item>
		<item>
		<title>ಡಿ ಕೆ ಸುರೇಶ್ ದಿಢೀರ್ ಹಾರ್ಟ್ ಸರ್ಜನ್ ಆದಾಗ..!</title>
		<link>https://peepalmedia.com/when-dk-suresh-suddenly-became-a-heart-surgeon/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 29 Mar 2024 16:25:52 +0000</pubDate>
				<category><![CDATA[ಅಂಕಣ]]></category>
		<category><![CDATA[ರಾಜಕೀಯ]]></category>
		<category><![CDATA[ವಿಶೇಷ]]></category>
		<category><![CDATA[bjp]]></category>
		<category><![CDATA[bjp dirty politics]]></category>
		<category><![CDATA[CN Manjunath]]></category>
		<category><![CDATA[congress]]></category>
		<category><![CDATA[dk suresh]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37684</guid>

					<description><![CDATA[ಯಾವುದೇ ವ್ಯಕ್ತಿ, ಯಾವುದೇ ವಯಸ್ಸಿನಲ್ಲಿ, ಈ ನೆಲದ ಕಾನೂನು ಸಮ್ಮತವಾದ ಯಾವುದೇ ವೃತ್ತಿಪರ ಉದ್ಯೋಗ ಆಯ್ಕೆ ಮಾಡಿಕೊಳ್ಳುವುದು ನಮ್ಮ ದೇಶದಲ್ಲಿ ನಿಷಿದ್ಧವಲ್ಲ. ಅಂತಹ ನಿರ್ಬಂಧವನ್ನು ನಮ್ಮ ಸಂವಿಧಾನವೂ ಹೇರಿಲ್ಲ. ಹೆಚ್ಚೆಂದರೆ, ಆ ಉದ್ಯೋಗಕ್ಕೆ ಬೇಕಾದ ಶಿಕ್ಷಣ, ತರಬೇತಿ, ಮಾನ್ಯತೆ ಪತ್ರವನ್ನಷ್ಟೇ ಪರಿಗಣಿಸಲಾಗುತ್ತದೆ. ವ್ಯಕ್ತಿಯ ವಯಸ್ಸನ್ನಲ್ಲ. ಹಿಂದಿಯ ಹೆಸರಾಂತ ಮುನ್ನಾಭಾಯ್ ಎಂಬಿಬಿಎಸ್ ಸಿನಿಮಾ ನಿಮಗೆ ಈ ಸಂದರ್ಭದಲ್ಲಿ ನೆನಪಾಗಬಹುದು. ಇವತ್ತು ನಮ್ಮ ದೇಶದಲ್ಲಿ ಶಿಕ್ಷಣವನ್ನು ಮಾರಾಟದ ಸರಕನ್ನಾಗಿ ಮಾಡಲಾಗಿದೆ. ದುಡ್ಡು ಸುರಿದು ಸರ್ಟಿಫಿಕೇಟುಗಳನ್ನು ಕೊಳ್ಳುವ ಕಾಲ. ಈ ಆಯಾಮದಿಂದ [&#8230;]]]></description>
										<content:encoded><![CDATA[
<ul class="wp-block-list">
<li>ಹೀಗೊಮ್ಮೆ ಕಲ್ಪಿಸಿಕೊಂಡು ನೋಡಿ&#8230; ಡಿ ಕೆ ಶಿವಕುಮಾರ್ ಅವರ ತಮ್ಮ ಡಿ ಕೆ ಸುರೇಶ್ ದಿಢೀರ್ ಹಾರ್ಟ್ ಸರ್ಜನ್ ಆಗಿ ಜಯದೇವ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಆಗಿಬಿಡುತ್ತಾರೆ ಎಂದಿಟ್ಟುಕೊಳ್ಳಿ. ಆಗ ನಾವದನ್ನು ಹೇಗೆ ಸ್ವೀಕರಿಸುತ್ತೇವೆ?</li>
</ul>



<p>ಯಾವುದೇ ವ್ಯಕ್ತಿ, ಯಾವುದೇ ವಯಸ್ಸಿನಲ್ಲಿ, ಈ ನೆಲದ ಕಾನೂನು ಸಮ್ಮತವಾದ ಯಾವುದೇ ವೃತ್ತಿಪರ ಉದ್ಯೋಗ ಆಯ್ಕೆ ಮಾಡಿಕೊಳ್ಳುವುದು ನಮ್ಮ ದೇಶದಲ್ಲಿ ನಿಷಿದ್ಧವಲ್ಲ. ಅಂತಹ ನಿರ್ಬಂಧವನ್ನು ನಮ್ಮ ಸಂವಿಧಾನವೂ ಹೇರಿಲ್ಲ. ಹೆಚ್ಚೆಂದರೆ, ಆ ಉದ್ಯೋಗಕ್ಕೆ ಬೇಕಾದ ಶಿಕ್ಷಣ, ತರಬೇತಿ, ಮಾನ್ಯತೆ ಪತ್ರವನ್ನಷ್ಟೇ ಪರಿಗಣಿಸಲಾಗುತ್ತದೆ. ವ್ಯಕ್ತಿಯ ವಯಸ್ಸನ್ನಲ್ಲ. ಹಿಂದಿಯ ಹೆಸರಾಂತ ಮುನ್ನಾಭಾಯ್ ಎಂಬಿಬಿಎಸ್ ಸಿನಿಮಾ ನಿಮಗೆ ಈ ಸಂದರ್ಭದಲ್ಲಿ ನೆನಪಾಗಬಹುದು.</p>



<p>ಇವತ್ತು ನಮ್ಮ ದೇಶದಲ್ಲಿ ಶಿಕ್ಷಣವನ್ನು ಮಾರಾಟದ ಸರಕನ್ನಾಗಿ ಮಾಡಲಾಗಿದೆ. ದುಡ್ಡು ಸುರಿದು ಸರ್ಟಿಫಿಕೇಟುಗಳನ್ನು ಕೊಳ್ಳುವ ಕಾಲ. ಈ ಆಯಾಮದಿಂದ ನೋಡಿದಾಗ, ಡಿಕೆ ಸೋದರರ ಬಳಿ ಒಂದು ಯಕಶ್ಚಿತ್ ಎಂಬಿಬಿಎಸ್ ಪದವಿಯನ್ನೂ, ಕಾರ್ಡಿಯಾಲಜಿ ಸ್ಪೆಷಲಿಸಂನ ಮಾಸ್ಟರ್ ಡಿಗ್ರಿಯನ್ನೂ ಖರೀದಿಸಲು ಸಾಧ್ಯವಿಲ್ಲವೇ? ಖಂಡಿತ ಸಾಧ್ಯವಿದೆ ಮತ್ತು ಇವತ್ತಿನ ಸಂದರ್ಭದಲ್ಲಿ ಅದು ಆಲ್ಮೋಸ್ಟ್ ಕಾನೂನುಬದ್ಧ ವಹಿವಾಟೂ ಹೌದು.</p>



<p>ಈಗ ಅಸಲೀ ವಿಚಾರಕ್ಕೆ ಬರೋಣ. ಹಾಗೊಮ್ಮೆ ಡಿ ಕೆ ಸುರೇಶ್ ಈ ವಯಸ್ಸಲ್ಲಿ ದಿಢಿರ್ ಹಾರ್ಟ್ ಸರ್ಜನ್ ಆಗಿ ಅವತರಿಸಿಬಿಟ್ಟರೆ, ನಾವು ಆ ವಿದ್ಯಮಾನವನ್ನ ಹೇಗೆ ಸ್ವೀಕರಿಸುತ್ತೇವೆ. ಎಲ್ಲವೂ ನ್ಯಾಯಸಮ್ಮತವಾಗಿಯೇ ನಡೆದಿರಬಹುದು, ಆದರೆ ನಾವದನ್ನು ಖಂಡಿತ ಒಪ್ಪುವುದಿಲ್ಲ. ಯಾಕೆಂದರೆ ವೈದ್ಯಕೀಯ ಅಂತಲ್ಲ, ಯಾವುದೇ ಕ್ಷೇತ್ರಕ್ಕಾಗಲಿ ಒಬ್ಬ ವ್ಯಕ್ತಿ ಪಾದಾರ್ಪಣೆ ಮಾಡಬೇಕೆಂದರೆ ಕೇವಲ ಕಾಗದಪತ್ರಗಳು ಸರಿ ಇದ್ದರೆ ಮಾತ್ರ ಸಾಲದು; ಆ ಕ್ಷೇತ್ರದಲ್ಲಿ ಆ ವ್ಯಕ್ತಿಗೆ ನಿಪುಣತೆ ಇರಬೇಕು, ಪ್ರಾಮಾಣಿಕ ಅಧ್ಯಯನವಿರಬೇಕು, ತನ್ನ ಕೆಲಸದ ಬಗ್ಗೆ ಕಾಳಜಿ ಇರಬೇಕು, ಎಲ್ಲಕ್ಕಿಂತ ಮುಖ್ಯವಾಗಿ ಆ ಕ್ಷೇತ್ರದ ಕುರಿತು ಆತನಿಗೆ ಆಸಕ್ತಿಯಿರಬೇಕು. ಅದ್ಯಾವುದೂ ಇಲ್ಲದ ಡಿ.ಕೆ. ಸುರೇಶ್ ಅವರು ದಿಢೀರ್ ಹಾರ್ಟ್ ಸರ್ಜನ್ ಆಗುವುದನ್ನು ನಾವು ಒಪ್ಪುವುದಿಲ್ಲ ಎನ್ನುವುದಾದರೆ, ರಾಜಕೀಯ ಕ್ಷೇತ್ರದೆಡೆಗೆ ಇದ್ಯಾವುದೂ ಇಲ್ಲದ ಡಾ.ಸಿ.ಎನ್. ಮಂಜುನಾಥ್ ಅವರನ್ನು ರಾಜಕಾರಣಿಯಾಗಿ ಸ್ವೀಕರಿಸಲು ಸಾಧ್ಯವೇ? ಬೇರೆಬೇರೆ ಕಾರಣಗಳಿಗೆ ಹಾಗೆ ಸ್ವೀಕರಿಸುವುದು ಸಾಧುವೇ?</p>



<p>ಎಸ್.ಪಿ. ಬಾಲಸುಬ್ರಹ್ಮಣ್ಯಂ ಒಳ್ಳೆಯ ಹಾಡುಗಾರ ಅಂತ ಹೇಳಿ, ಅವರನ್ನು ನೃತ್ಯದ ವೇದಿಕೆ ಹತ್ತಿಸಿ, ನಾಟ್ಯ ಮಾಡಲು ಹೇಳುವುದು ಸರಿಯೇ? ನಮ್ಮ ಸ್ವಾರ್ಥಕ್ಕಾಗಿ ಹಾಗೊಮ್ಮೆ ನಾವು ಮಾಡಿದ್ದರೆ, ಅದು ಆ ವ್ಯಕ್ತಿಯ ಗಾಯನ ಪಾಂಡಿತ್ಯಕ್ಕೆ ನಾವು ಮಾಡುವ ಅವಮಾನವೇ ಸರಿ. ಈಗ ಡಾ. ಸಿ. ಎನ್ ಮಂಜುನಾಥ್ ಅವರ ಜೊತೆ ದೇವೇಗೌಡರ ಕುಟುಂಬ ವರ್ತಿಸುತ್ತಿರುವ ರೀತಿ ಕೂಡಾ ಇದೇ ರೀತಿಯದ್ದು. ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ರಾಜಕೀಯದ ಬಗ್ಗೆ ಎಳ್ಳಷ್ಟೂ ಆಸಕ್ತಿಯಿರದ ಮಂಜುನಾಥ್ ಅವರನ್ನು, ತಮ್ಮ ಪಕ್ಷವಿದ್ದೂ ಬೇರೊಂದು ಪಕ್ಷದ ಮೂಲಕ ಅವರು ಕಣಕ್ಕಿಳಿಸಿದ್ದಾರೆ. ಸ್ವತಃ ಮಂಜುನಾಥ್ ಅವರೇ, ಬಿಜೆಪಿಯಿಂದ ಟಿಕೆಟ್ ಘೋಷಣೆಯಾದ ನಂತರವೂ, ತಮಗೆ ರಾಜಕಾರಣದಲ್ಲಿ ಯಾವತ್ತೂ ಆಸಕ್ತಿಯಿಲ್ಲ ಎಂದು ಹೇಳಿದ್ದಾರೆ. ಇನ್ನು ಕುಮಾರಸ್ವಾಮಿಯವರು ಕೂಡಾ ಸಭೆಯೊಂದರಲ್ಲಿ, ಮಂಜುನಾಥ್ ಅವರ ಮಡದಿ ಮಕ್ಕಳ ಇಷ್ಟಕ್ಕೆ ವಿರುದ್ಧವಾಗಿ ನಾವು ರಾಜಕಾರಣಕ್ಕೆ ಕರೆತಂದಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ.</p>



<p>ಈಗ ಜನರ ಮುಂದೆ ಇರುವ ಪ್ರಶ್ನೆ ಸರಳವಾದದ್ದು. ವೈದ್ಯಕೀಯ ಕ್ಷೇತ್ರದಲ್ಲಿ ಎಳ್ಳಷ್ಟೂ ಆಸಕ್ತಿ, ಅಭಿರುಚಿ, ತಜ್ಞತೆ ಇಲ್ಲದ ಡಿ ಕೆ ಸುರೇಶ್ ಅವರನ್ನು ಹಾರ್ಟ್ ಸರ್ಜನ್ ಆಗಿ ಸ್ವೀಕರಿಸಲು ಸಾಧ್ಯವಿಲ್ಲ ಎಂದಾದರೆ; ರಾಜಕೀಯ ಕ್ಷೇತ್ರದತ್ತಲೂ ಅಷ್ಟೇ ನಿರಾಸಕ್ತಿ ಹೊಂದಿರುವ ಸಿ ಎನ್ ಮಂಜುನಾಥ್ ಅವರನ್ನು ಒಳ್ಳೆಯ ಡಾಕ್ಟರ್ ಎಂಬ ಕಾರಣಕ್ಕೆ ರಾಜಕಾರಣಿಯಾಗಿ ಸ್ವೀಕರಿಸಬೇಕೆ? ಡಿ ಕೆ ಸುರೇಶ್ ಮುನ್ನಾಭಾಯ್ ಅವತಾರವೆತ್ತಿ ಹಾರ್ಟ್ ಆಪರೇಷನ್ ಮಾಡಿದರೆ, ಆ ನಿರ್ದಿಷ್ಟ ರೋಗಿ ಮಾತ್ರ ಸಂತ್ರಸ್ತನಾಗಬಹದು; ಆದರೆ ಮಂಜುನಾಥ್ ಅವರು ಅನಾಸಕ್ತ ರಾಜಕಾರಣಿಯಾಗಿ ವಿಫಲವಾದರೆ ಇಡೀ ಕ್ಷೇತ್ರದ ಜನತೆ ಸಂತ್ರಸ್ತರಾಗಬೇಕಾಗುತ್ತದೆ.</p>



<p>ಹಾಗಂತ ಸುರೇಶ್ ಮತ್ತು ಮಂಜುನಾಥ್ ಅವರ ವೈಯಕ್ತಿಕ ವ್ಯಕ್ತಿತ್ವಗಳನ್ನು ನಾನಿಲ್ಲಿ ತೂಗಿ ಮಾತಾಡುತ್ತಿಲ್ಲ. ಆಯಾ ಕ್ಷೇತ್ರದ ಅನುಭವ ಮತ್ತು ನಿಪುಣತೆಯ ಬಗ್ಗೆ ವಿವರಿಸುತ್ತಿದ್ದೇನಷ್ಟೆ. ಒಂದು ಕ್ಷೇತ್ರದ ನಿಪುಣತೆಯು, ಸಂಬಂಧವೇ ಇಲ್ಲದ ಮತ್ತೊಂದು ಕ್ಷೇತ್ರದಲ್ಲಿ ನಗಣ್ಯ! ಈ ಸರಳ ಸತ್ಯ ಅರ್ಥ ಮಾಡಿಕೊಳ್ಳುವುದು ಕಾಲದ ತುರ್ತು.</p>



<p><em>ಮಾಚಯ್ಯ ಎಂ ಹಿಪ್ಪರಗಿ</em></p>
]]></content:encoded>
					
		
		
			</item>
		<item>
		<title>ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದನಿಗೆ ಕಾರ್ಯಕರ್ತರಿಂದಲೇ ಧಿಕ್ಕಾರದ ಸುರಿಮಳೆ ; ವೇದಿಕೆಯಿಂದ ಇಳಿದ ಪಿಸಿ ಮೋಹನ್</title>
		<link>https://peepalmedia.com/pc-mohan-stepped-down-from-the-stage/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 29 Mar 2024 07:41:29 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[bjp]]></category>
		<category><![CDATA[bjp dirty politics]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[PC Mohan]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37674</guid>

					<description><![CDATA[ಲೋಕಸಭೆ ಚುನಾವಣೆ ಸಂಬಂಧ ಚುನಾವಣಾ ಪ್ರಚಾರದಲ್ಲಿದ್ದ ಬಿಜೆಪಿ ಪಕ್ಷದ ಹಾಲಿ ಸಂಸದರಿಗೆ ಕಾರ್ಯಕರ್ತರಿಂದಲೇ ಧಿಕ್ಕಾರ ಕೇಳಿಬಂದಿದೆ. ಬಿಜೆಪಿ ಪ್ರಚಾರ ಸಭೆಯಲ್ಲಿ ಸಂಸದ ಪಿಸಿ ಮೋಹನ್‌ ವಿರುದ್ಧ ಸ್ವತಃ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ದು, ಈ ಹಿನ್ನೆಲೆ ಮುಖಭಂಗಕ್ಕೊಳಗಾದ ಸಂಸದ ಕಾರ್ಯಕ್ರಮವನ್ನು ಅರ್ಧಕ್ಕೇ ಮೊಟಕುಗೊಳಿಸಿ ಹೊರನಡೆದ ಘಟನೆ ನಡೆದಿದೆ. ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ಪಿಸಿ ಮೋಹನ್ ಅವರಿಗೆ ಅವರದೇ ಕ್ಷೇತ್ರದಲ್ಲಿ ತೀವ್ರ ಮುಖಭಂಗವಾಗಿದೆ. ಶಾಂತಿನಗರದಲ್ಲಿ ನಡೆಯುತ್ತಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಸ್ಥಳೀಯ ನಾಯಕರು, ಬಿಜೆಪಿ [&#8230;]]]></description>
										<content:encoded><![CDATA[
<p>ಲೋಕಸಭೆ ಚುನಾವಣೆ ಸಂಬಂಧ ಚುನಾವಣಾ ಪ್ರಚಾರದಲ್ಲಿದ್ದ ಬಿಜೆಪಿ ಪಕ್ಷದ ಹಾಲಿ ಸಂಸದರಿಗೆ ಕಾರ್ಯಕರ್ತರಿಂದಲೇ ಧಿಕ್ಕಾರ ಕೇಳಿಬಂದಿದೆ. ಬಿಜೆಪಿ ಪ್ರಚಾರ ಸಭೆಯಲ್ಲಿ ಸಂಸದ ಪಿಸಿ ಮೋಹನ್‌ ವಿರುದ್ಧ ಸ್ವತಃ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ದು, ಈ ಹಿನ್ನೆಲೆ ಮುಖಭಂಗಕ್ಕೊಳಗಾದ ಸಂಸದ ಕಾರ್ಯಕ್ರಮವನ್ನು ಅರ್ಧಕ್ಕೇ ಮೊಟಕುಗೊಳಿಸಿ ಹೊರನಡೆದ ಘಟನೆ ನಡೆದಿದೆ.</p>



<p>ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ಪಿಸಿ ಮೋಹನ್ ಅವರಿಗೆ ಅವರದೇ ಕ್ಷೇತ್ರದಲ್ಲಿ ತೀವ್ರ ಮುಖಭಂಗವಾಗಿದೆ. ಶಾಂತಿನಗರದಲ್ಲಿ ನಡೆಯುತ್ತಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಸ್ಥಳೀಯ ನಾಯಕರು, ಬಿಜೆಪಿ ಕಾರ್ಯಕರ್ತರು ಹಾಗೂ ಸಂಸದ ಪಿಸಿ ಮೋಹನ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.</p>



<p>ತಾವು 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರೂ ಏನೂ ಸಹಾಯ, ಕೆಲಸ ನಮಗಾಗಿ ಮಾಡಿಲ್ಲಾ. ಜನರ ಮುಂದೆ ನಮಗೆ ಮತ ಕೇಳಲು ಹೋಗಲು ಆಗುತ್ತಿಲ್ಲಾ. ನೀವು ಮತ್ತೆ ಟಿಕೆಟ್ ತಂದಿದ್ದೇಕೆ? ನೀವೂ ಸದಾನಂದಗೌಡರ ರೀತಿ ನಿವೃತ್ತಿ ಪಡೆಯಬೇಕಿತ್ತು ಎಂದು ಶಾಂತಿನಗರ ಮಾಜಿ ಕಾರ್ಪೊರೇಟರ್ ಶಿವಕುಮಾರ ಹಾಗೂ ಬಿಜೆಪಿ ಕಾರ್ಯಕರ್ತರು ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಆಕ್ರೋಶ ತಾಳಲಾರದೆ ಪಿಸಿ ಮೋಹನ್‌ ಕಾರ್ಯಕ್ರಮದಿಂದ ಹೊರನಡೆದಿದ್ದಾರೆ.</p>
]]></content:encoded>
					
		
		
			</item>
	</channel>
</rss>
