<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>bjp govt &#8211; Peepal Media</title>
	<atom:link href="https://peepalmedia.com/tag/bjp-govt/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 15 Apr 2025 09:51:54 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>bjp govt &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿ ಎಂದು ಆರೋಪಿಸಿ ರಾಜಿನಾಮೆ ನೀಡಿದ ಮಾಜಿ ಶಾಸಕ</title>
		<link>https://peepalmedia.com/former-mla-resigns-alleging-bjp-government-is-unconstitutional/</link>
		
		<dc:creator><![CDATA[Peepal Media]]></dc:creator>
		<pubDate>Tue, 15 Apr 2025 09:51:53 +0000</pubDate>
				<category><![CDATA[ದೇಶ]]></category>
		<category><![CDATA[bjp]]></category>
		<category><![CDATA[bjp govt]]></category>
		<category><![CDATA[india]]></category>
		<category><![CDATA[modi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=57262</guid>

					<description><![CDATA[ನವದೆಹಲಿ: ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿ ಸರ್ಕಾರವಾಗಿದೆ. ಈ ಸರ್ಕಾರ ನಮ್ಮ ದೇಶವನ್ನು ಸಂವಿಧಾನ ಪ್ರಕಾರವಾಗಿ ನಡೆಸುತ್ತಿಲ್ಲ ಎಂದು ಆರೋಪಿಸಿ ಗುಜರಾತ್‌ನ ದೇದಿಯಪದ ಕ್ಷೇತ್ರದ ಮಾಜಿ ಶಾಸಕ, ಬುಡಕಟ್ಟು ನಾಯಕ ಮಹೇಶ್ ವಾಸವ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಭಾವಿ ಬುಡಕಟ್ಟು ನಾಯಕ ಛೋಟು ವಾಸವ ಅವರ ಪುತ್ರರಾಗಿರುವ ಮಹೇಶ್ ವಾಸವ ಅಂಬೇಡ್ಕರ್ ಜಯಂತಿ ದಿನವೇ ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಅವರಿಗೆ ರಾಜೀನಾಮೆ ಸಲ್ಲಿಸಿರುವುದು ವಿಶೇಷವಾಗಿದೆ. ಮಹೇಶ್ ವಾಸವ ಮಾರ್ಚ್ 2024 [&#8230;]]]></description>
										<content:encoded><![CDATA[
<p><strong>ನವದೆಹಲಿ:</strong>  ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿ ಸರ್ಕಾರವಾಗಿದೆ. ಈ ಸರ್ಕಾರ ನಮ್ಮ ದೇಶವನ್ನು ಸಂವಿಧಾನ ಪ್ರಕಾರವಾಗಿ ನಡೆಸುತ್ತಿಲ್ಲ ಎಂದು ಆರೋಪಿಸಿ  ಗುಜರಾತ್‌ನ ದೇದಿಯಪದ ಕ್ಷೇತ್ರದ ಮಾಜಿ ಶಾಸಕ, ಬುಡಕಟ್ಟು ನಾಯಕ ಮಹೇಶ್ ವಾಸವ  ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. </p>



<p>ಪ್ರಭಾವಿ ಬುಡಕಟ್ಟು ನಾಯಕ ಛೋಟು ವಾಸವ ಅವರ ಪುತ್ರರಾಗಿರುವ ಮಹೇಶ್ ವಾಸವ ಅಂಬೇಡ್ಕರ್ ಜಯಂತಿ ದಿನವೇ ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಅವರಿಗೆ ರಾಜೀನಾಮೆ ಸಲ್ಲಿಸಿರುವುದು ವಿಶೇಷವಾಗಿದೆ. </p>



<p>ಮಹೇಶ್ ವಾಸವ ಮಾರ್ಚ್ 2024 ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಡಾ. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ದೇಶವು ಸಂವಿಧಾನದ ಪ್ರಕಾರ ನಡೆಯುತ್ತಿಲ್ಲ ಎಂದು ನಾನು ಹೇಳಲೇಬೇಕು. ಆದಿವಾಸಿಗಳು, ದಲಿತರು, ಒಬಿಸಿಗಳು, ಮುಸ್ಲಿಮರು, ಕ್ರಿಶ್ಚಿಯನ್ನರು, ಸಿಖ್ಖರು ಮತ್ತು ಇತರ ಬಡ ವರ್ಗಗಳು ಒಂದಾಗಿ ಆರೆಸ್ಸೆಸ್ ಮತ್ತು ಬಿಜೆಪಿಯ ಸಿದ್ಧಾಂತದ ವಿರುದ್ಧ ಹೋರಾಡುತ್ತೇವೆ ಎಂದು  ಅವರು ಘೋಷಿಸಿದ್ದಾರೆ. </p>



<p></p>
]]></content:encoded>
					
		
		
			</item>
		<item>
		<title>ಫೊರೆನಿಕ್ಸ್ ಲ್ಯಾಬಲ್ಲಿ ಪತ್ತೆಯಾದ ಮೊಸಳೆ ಕಣ್ಣೀರು (ರಾಜಕೀಯ ವಿಡಂಬನೆ)</title>
		<link>https://peepalmedia.com/crocodile-tears-discovered-in-forensics-lab-political-satire/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 03 Sep 2024 11:43:00 +0000</pubDate>
				<category><![CDATA[ಅಂಕಣ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[bjp dirty politics]]></category>
		<category><![CDATA[bjp govt]]></category>
		<category><![CDATA[Bjp IT cell]]></category>
		<category><![CDATA[bjp karnataka]]></category>
		<category><![CDATA[BJP leader]]></category>
		<category><![CDATA[BJP leader Gurtaj Bhullar wife]]></category>
		<category><![CDATA[Boycott Modhi]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[modhiji]]></category>
		<category><![CDATA[modi]]></category>
		<category><![CDATA[Narendra modhi road show]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Satire]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=44863</guid>

					<description><![CDATA[ತಣ್ಣಗೆ ಮಲಗಿದ್ದ ಕತ್ತಲನ್ನು ಸೀಳುತ್ತ ಸುದ್ದಿ ನಿಧಾನವಾಗಿ ಹರಡುತ್ತಿತ್ತು. ಆ ತಡರಾತ್ರಿ ಅಶರೀರವಾಣಿಯಾಗಿ ಕೇಳಿ ಬಂದ ಸುದ್ದಿಯಿಂದ ಆತಂಕಗೊಂಡ ಅಖಿಲ ಬ್ರಹ್ಮಾಂಡ ಅಂಡಾಂಡ ಪಿಂಡ ಲಂಡ ಭಕ್ತರು ತಂಡೋಪತಂಡವಾಗಿ, ಪ್ರಜೆಗಳ ತೆರಿಗೆಯ ಬೆವರಲ್ಲಿ ಕಟ್ಟಿದ ನಮೋನ ಐಷಾರಾಮಿ ಅರಮನೆಯತ್ತ ದೌಡಾಯಿಸಿದ್ದರು. ವಿಷಯವೇನೆಂದು ವಿಶದವಾಗಿ ಯಾರಿಗೂ ತಿಳಿದಿರಲಿಲ್ಲ. ಮುಂಜಾನೆ ಎದ್ದಾಗಿಂದ, ಮೂಲೆ ಸಂದಿಯಲ್ಲಿದ್ದ ನಮೋ ವಿರೋಧಿಗಳನ್ನು ಹುಡುಕಿ, ಮತ್ತವರು ಉಸಿರೆತ್ತದಂತೆ ತದುಕಲು ಇಡಿ, ಐಟಿ, ಸಿಬಿಐಗಳನ್ನು ಛೂ ಬಿಟ್ಟು ಸುಸ್ತಾಗಿ ಮಲಗಿದ್ದ ಅಪರಿಮಿತ ಕುತಂತ್ರಿ ಮಂತ್ರಿ ಕೂಡ ಸುದ್ದಿ [&#8230;]]]></description>
										<content:encoded><![CDATA[
<p>ತಣ್ಣಗೆ ಮಲಗಿದ್ದ ಕತ್ತಲನ್ನು ಸೀಳುತ್ತ ಸುದ್ದಿ ನಿಧಾನವಾಗಿ ಹರಡುತ್ತಿತ್ತು. ಆ ತಡರಾತ್ರಿ ಅಶರೀರವಾಣಿಯಾಗಿ ಕೇಳಿ ಬಂದ ಸುದ್ದಿಯಿಂದ ಆತಂಕಗೊಂಡ ಅಖಿಲ ಬ್ರಹ್ಮಾಂಡ ಅಂಡಾಂಡ ಪಿಂಡ ಲಂಡ ಭಕ್ತರು ತಂಡೋಪತಂಡವಾಗಿ, ಪ್ರಜೆಗಳ ತೆರಿಗೆಯ ಬೆವರಲ್ಲಿ ಕಟ್ಟಿದ ನಮೋನ ಐಷಾರಾಮಿ ಅರಮನೆಯತ್ತ ದೌಡಾಯಿಸಿದ್ದರು. ವಿಷಯವೇನೆಂದು ವಿಶದವಾಗಿ ಯಾರಿಗೂ ತಿಳಿದಿರಲಿಲ್ಲ. ಮುಂಜಾನೆ ಎದ್ದಾಗಿಂದ, ಮೂಲೆ ಸಂದಿಯಲ್ಲಿದ್ದ ನಮೋ ವಿರೋಧಿಗಳನ್ನು ಹುಡುಕಿ, ಮತ್ತವರು ಉಸಿರೆತ್ತದಂತೆ ತದುಕಲು ಇಡಿ, ಐಟಿ, ಸಿಬಿಐಗಳನ್ನು ಛೂ ಬಿಟ್ಟು ಸುಸ್ತಾಗಿ ಮಲಗಿದ್ದ ಅಪರಿಮಿತ ಕುತಂತ್ರಿ ಮಂತ್ರಿ ಕೂಡ ಸುದ್ದಿ ಕೇಳಿ ಗೊಣಗುತ್ತ ಅರೆನಿದ್ದೆಯಿಂದ ಎಚ್ಚೆತ್ತ. ನಮೋ ಗ್ರಹಚಾರವನ್ನು ಹಳಿಯುತ್ತ ಅರಮನೆಯತ್ತ ಹೆಜ್ಜೆ ಹಾಕಿದ.</p>



<p>ಇನ್ನೇನು ಅರಮನೆ ಬಂತು ಅನ್ನುವಷ್ಟರಲ್ಲಿ ಗಕ್ಕನೆ ನಿಂತ ಅಪರಿಮಿತ ಕುತಂತ್ರಿ ಆಕಾಶದತ್ತ ದಿಟ್ಟಿಸಿದ. ಫಳಫಳನೆ ಹೊಳೆವ ನಕ್ಷತ್ರಗಳು, ಚಂದ್ರನ ಬಿಟ್ಟರೆ ಎಲ್ಲೂ ಚಾದರದಷ್ಟು ಮೋಡಗಳು ಕಾಣಲಿಲ್ಲ. ಹಾಗಿದ್ದರೆ, ರಸ್ತೆಯೆಲ್ಲಾ ತೇವಗೊಂಡು ನೀರು ಹರಿದು ಬರುತ್ತಿರುವುದಾದರೂ ಎಲ್ಲಿಂದ? ಗಾಬರಿಯಿಂದ ಅರಮನೆ ಹೊಕ್ಕಾಗ ಅಲ್ಲಿಯ ದೃಶ್ಯ ಕಂಡು ಗಕ್ಕನೆ ನಿಂತ. ನೆರೆದಿದ್ದ ನೂರಾರು ಲಂಡಭಕ್ತರ ರೋದನೆಯ ಕಣ್ಣೀರು ಹೊಳೆಯಾಗಿ ಹರಿದು ಬರುತ್ತಿತ್ತು.</p>



<p>ಹೆಜ್ಜೆ ಇರಿಸಲು ಜಾಗವಿಲ್ಲದಂತೆ ನೆರೆದಿದ್ದ ಭಕ್ತರ ಮಧ್ಯೆ ಇರುಕಿಸಿಕೊಂಡವನು ತಳ್ಳಾಡುತ್ತ ಅವರನ್ನು ದೂಡಿ ಕೊಂಡು ನಮೋ ಕೊಠಡಿಯತ್ತ ಬಂದ. ಅದಾಗಲೇ ಮಂತ್ರಿಗಳು, ಪೂರ್ವಾಶ್ರಮದ ಚಡ್ಡಿಧಾರಿಗಳು, ಗೋದಿ ಮಾಧ್ಯಮದ ಬಕೆಟ್ ಪತ್ರಕರ್ತರು &#8211; ಎಲ್ಲರೂ ಮ್ಲಾನವದನರಾಗಿ ನಿಂತದ್ದು ಕಂಡ ಅಪರಿಮಿತ ಕುತಂತ್ರಿಗೆ ಸುದ್ದಿ ತನಗೆ ತಡವಾಗಿ ಸಿಕ್ಕು ಕೊನೆಯವನಾಗಿ ಬಂದದ್ದಕ್ಕೆ ಮುಜುಗರವಾಯಿತು. ಏನು ನಡೆದಿದೆ? ಸಾಮ್ರಾಟನಿಗೆ ಏನಾದರೂ ವಿಪತ್ತು ಒದಗಿ ಬಂತೆ? ಏನೊಂದು ತಿಳಿಯದೆ ಕಮಲೀ ಮುಖಂಡ ಕಪಿ ದಡ್ಡನತ್ತ ಕಣ್ಸನ್ನೆಯಲ್ಲಿ ಕೇಳಿದರೆ ʼಎಲ್ಲಾ ಮುಗಿದು ಹೋದ ಹಾಗೆ!ʼ ಎನ್ನುವಂತೆ ಕೊಠಡಿಯತ್ತ ಜೋಲು ಮೋರೆ ಮಾಡಿದ. ಕೊಠಡಿಯ ಬಾಗಿಲ ಕೆಳಗಿನ ಸಂದಿಯಲ್ಲಿ ನೀರು ಹರಿದು ಬಂದು ಲಂಡಭಕ್ತರ ಕಣ್ಣೀರನ ಮುಖ್ಯವಾಹಿನಿಯಲ್ಲಿ ಸೇರುತ್ತಿತ್ತು.</p>



<p>ಮತ್ತಷ್ಟು ಗೊಂದಲಗೊಂಡ ಅಪರಿಮಿತ ಕುತಂತ್ರಿ, ಅಲ್ಲೇ ನಿಂತು ಕಣ್ಣೀರನ್ನು ಒರೆಸುತ್ತ ಕರ್ಚೀಫನ್ನು ಹಿಂಡುತ್ತಿದ್ದ ನಮೋ ಆಪ್ತಕಾರ್ಯದರ್ಶಿಗೆ “ಸಾಮ್ರಾಟರು ಎಲ್ಲಿ?” ಎಂದ.</p>



<p>“ವಿದೇಶಕ್ಕೆ ತೆರಳಿದ್ದ ನಮೋ ಮಹಾಸ್ವಾಮಿಗಳು ತಡರಾತ್ರಿ ಬಂದಾಗ ಬಹಳ ಚಿಂತೆಯಲ್ಲಿದ್ದಂತೆ ಕಂಡರು. ತುಟಿ ಎರಡು ಮಾಡದೆ ಬಿರುಗಾಳಿಯಂತೆ ಕೊಠಡಿ ಸೇರಿ ದಢಾರೆಂದು ಅಗುಳಿ ಹಾಕಿಕೊಂಡರು. ನಾನು ಮಾತಾಡಿಸುವ ಧೈರ್ಯ ಮಾಡಲಿಲ್ಲ. ಅರ್ಧತಾಸಿನ ನಂತರ “ಅಯ್ಯೋ!” ಎಂದು ಕೂಗಿದ ಹಾಗಾಯಿತು. ಎಷ್ಟು ಕೂಗಿದರೂ ಬಾಗಿಲು ತೆರೆಯಲಿಲ್ಲ. ಒಳಗಿನಿಂದ ಒಂದೇ ಸಮನೆ ನೀರು ಪ್ರವಾಹದಂತೆ ಹರಿದು ಬಂತು”</p>



<p>ಕಳೆದ ವರ್ಷ ಕೂಡ ಇಂಥದ್ದೇ ಪ್ರಸಂಗ ನಡೆದದ್ದು ಅ. ಕುತಂತ್ರಿಯ ನೆನಪಿಗೆ ಬಂತು. ʼಆಗ ಮಮ್ಮೀ…ಮಮ್ಮೀನ ನೋಡ್ಬೇಕು ಅಂತ ರಚ್ಚೆ ಹಿಡಿದಿದ್ದ. ಈಗ ಮಮ್ಮೀ ಇಲ್ಲ. ಮತ್ಯಾವ ಹೊಸ ನೌಟಂಕಿ ಶುರು ಮಾಡಿದ್ದಾನೊ! ಇತ್ತೀಚಿಗೆ ಮೆಥೆಡ್ ಆಕ್ಟಿಂಗ್ ಬೇರೆ ಪ್ರಾಕ್ಟಿಸ್ ಮಾಡ್ತಿದ್ದಾನೆʼ ಎಂದು ತಲೆ ಕೆರೆದುಕೊಂಡು, ಬಾಗಿಲನ್ನು ಒಡೆಯಲು ಕಾವಲುಗಾರರಿಗೆ ಹೇಳಿದ.</p>



<p>ಯಾರೂ ಒಳ ಬರದಂತೆ ಎಚ್ಚರಿಸಿ ತಾನೊಬ್ಬನೇ ರೂಮಿನೊಳಗೆ ಬಂದರೆ, ನಮೋ ಬಿಟ್ಟ ಕಣ್ಣು ಬಿಟ್ಟಂತೆ ಶೂನ್ಯದತ್ತ ದಿಟ್ಟಿಸುತ್ತ ಮಂಚದ ಮೇಲೆ ಕುಳಿತಿದ್ದ. ಮುಖದಲ್ಲಿ ದುಃಖ ಕೆರೆಯಂತೆ ನಿಂತಿತ್ತು. ಬಲಗಣ್ಣಿಂದ ಮಾತ್ರ ನೀರು ಧಾರಾಕಾರವಾಗಿ ಹರಿಯುತ್ತಿತ್ತು. ʼಒಂದೇ ಕಣ್ಣಿನಿಂದ ಅಳು…ವಾಹ್! ಗ್ರೇಟ್ ಆಕ್ಟಿಂಗ್ʼ. ಯಾವುದಕ್ಕೂ ಇರಲಿ ಎಂದು ತನ್ನ ಮೊಬೈಲಲ್ಲಿ ಫೋಟೊ ಕ್ಲಿಕ್ಕಿಸಿದ. ಹಿನ್ನೆಲೆಯಲ್ಲಿ ಕಣ್ಣೀರಧಾರೆ…ಇದೇಕೆ…ಇದೇಕೆ…ಪ್ಯಾತೊ ಸಾಂಗ್ ಕೇಳಿಬರುತ್ತಿತ್ತು. “ಮಹಾಸ್ವಾಮಿಗಳೆ… ಏನಾಯಿತು? ಎಚ್ಚರಗೊಳ್ಳಿ” ಎಂದರೆ ನಮೋ ಅಲುಗಾಡದೆ ಶಿಲೆಯಾಗಿದ್ದ.</p>



<p>ಅ. ಕುತಂತ್ರಿ ಕೂಡಲೇ &#8211; ಆಪ್ತಕಾರ್ಯದರ್ಶಿ, ಕಪಿ ದಡ್ಡ, ಮಂತ್ರಿಮಂಡಲ, ಮಾ.ಕೃ.ಕುಟೀರದ ಪುರೋಹಿತ ಸೇರಿದಂತೆ ಎಲ್ಲಾ ಕೇಸರಿ ಪ್ರಮುಖರನ್ನು ಸೇರಿಸಿ ನಮೋ ಸಾಮ್ರಾಟರಿಗೆ ಆಗಿರುವ ಆಘಾತವನ್ನು ಅರಿಯಲು ತುರ್ತುಸಭೆಯನ್ನು ಕರೆದ. ಸಭೆಯಲ್ಲಿ ಕಳೆದೆರೆಡು ದಿನಗಳಿಂದ ನಮೋ ಸುತ್ತ ಆದ ಘಟನೆಗಳನ್ನು ಕೆದಕುತ್ತ ಶೋಧನೆ ನಡೆಯಿತು.</p>



<p>24&#215;7 – ನಮೋಗೆ ಸಕಲ ಇಷ್ಟಾರ್ಥ ಸೇವೆ ಸಲ್ಲಿಸುತ್ತ ಜೊತೆಗಿರುವ ಆಪ್ತಕಾರ್ಯದರ್ಶಿಯ ಅಭಿಪ್ರಾಯವನ್ನು ಮೊದಲು ಕೇಳಲಾಗಿ “ಬಾಲಕನಂತಿದ್ದ ರಾಗಾ ಈಗ ಬ್ಲಾಕ್ ಬೆಲ್ಟ್ ತೊಟ್ಟು, ತೊಡೆ ತಟ್ಟುತ್ತ ಅಗ್ನಿವೀರ್, ಶೇರ್ ಮಾರ್ಕೆಟ್ ಸ್ಕಾಂಡಲ್, ಪರೀಕ್ಷೆ ಪೇಪರ್ ಲೀಕ್, ಜಾತಿ ಜನಗಣತಿ..ಎಕ್ಸೆಟ್ರಾಂತ ಇತ್ತೀಚಿಗೆ ಎಸೆಯುವ ಸವಾಲುಗಳಿಗೆ ಕೌಂಟರ್ ಕೊಡಲಾಗದೆ ಮಹಾಸ್ವಾಮಿಗಳು ಕಂಗೆಟ್ಟಿದ್ದರು. ಅದೂ ಸಾಲದೂಂತ ತಮ್ಮದೇ ಕಮಲೀ ಸಭಾ ನಡಾವಳಿಗಳ ಬಗ್ಗೆ ಬಹಳ ಕಳವಳಗೊಂಡಿದ್ದರು. ತಾನು ಎತ್ತಿ ಆಡಿಸಿ, ಮುದ್ದಾಡಿ ಗದ್ದುಗೆ ಮೇಲೆ ಕೂರಿಸಿದ ಬುಲ್ಡ್ ಡೋಜರ್ ಭೋಗಿಬಾಬಾ, ಸಭೆಗಳಲ್ಲಿ ಎಲ್ಲರಂತೆ ಸಾಷ್ಟಾಂಗ ಬೀಳುವುದಿರಲಿ ಕನಿಷ್ಟ ನಮಸ್ಕರಿಸಿ ಗೌರವ ಕೊಡದೆ ಅಪಮಾನಿಸಿದ್ದು ಅವರನ್ನು ಚಿಂತೆಯ ಕೂಪಕ್ಕೆ ತಳ್ಳಿತ್ತು. ಮೊನ್ನೆ ಅವರ ಫ್ಯಾಷನ್ ಡಿಸೈನರ್ ಅಳತೆ ತೆಗೆದುಕೊಳ್ಳುವಾಗ ಐವತ್ತಾರು ಇದ್ದ ಎದೆ ಗಾತ್ರ ಇಂಚಿನ ಪಟ್ಟಿಯಲ್ಲಿ ಮೂವತ್ತಾರಕ್ಕೆ ಇಳಿದದ್ದನ್ನು ನೋಡಿ ಅವರು ಕುಸಿದು ಹೋಗಿದ್ದರು” ಎಂದು ಬಿಕ್ಕಿ ಬಿಕ್ಕಿ ಅಳಲು ಆರಂಭಿಸಿದ.</p>



<p>“ಅದು ಇರಬಹುದು. ಆದರೆ…” ಎಂದು ಮಧ್ಯೆ ಬಾಯಿ ಹಾಕಿದ ವಿದೇಶಾಂಗ ಮಂತ್ರಿ “ನೆನ್ನೆ ರೂಸ್ ಗೆ ಹೋಗಿದ್ದಾಗ ಎರಡೂ ದೇಶದ ಪ್ರಧಾನಿಗಳನ್ನು ಕೂಡಿಸಿ ʼಫಾರಿನ್ ಮಿತ್ರೋ…ಇದು ಕಲಹಕ್ಕೆ ಕಾಲವಲ್ಲ. ಯುದ್ದ ನಿಲ್ಲಿಸಿʼ ಎಂದು ಶಾಂತಿಯ ಮಂತ್ರ ಜಪಿಸಿದ ವಿಶ್ವಗುರುವಿನ ಮಾತಿಗೆ ಅವರುಗಳು ಮೊದಲಿಗೆ ತಲೆಯಾಡಿಸಿ, ಕೈ ಕುಲುಕಿ ಹಗ್ ಮಾಡಿದ್ದರು. ಆದರೆ…ಅನಿವಾಸಿಗಳನ್ನು ಸ್ಟೇಡಿಯಮ್ಮಲ್ಲಿ ಗುಡ್ಡೇ ಹಾಕಿ, ದೇಶದಲ್ಲಿ ಆಗುತ್ತಿರುವ ಬುಲೆಟ್ ಟ್ರೈನ್ ಸ್ಪೀಡಿನ ಡೆವಲಪ್ ಮೆಂಟ್ ಬಗ್ಗೆ ಬುರುಡೆ ಬಿಡುತ್ತಿರಬೇಕಾದರೆ ಬಾಂಬೊಂದು ನಮೋ ಸಾಹೇಬರ ಅಡಿಗೆ ಬಂದು ಬಿತ್ತು. ಎದ್ದೇನೊ ಬಿದ್ದೇನೆಂದು ಪುಷ್ಪಕ ವಿಮಾನ ಹತ್ತಿ ವಾಪಸ್ಸು ಬರೋವಾಗ ನಮೋ ಸಾಹೇಬರು ಭಯದಿಂದ ನಡುಗುತ್ತಿದ್ದರು. ಅದೂ ಒಂದು ಕಾರಣ ಇರಬಹುದು” ಎಂದದ್ದು ಅ.ಕುತಂತ್ರಿಗೆ ಸರಿಬರಲಿಲ್ಲ. “ಹು…ಹು…ಇಲ್ಲ..ನಮೋ ಸಾಹೇಬರು ರಾಕೆಟ್ಟುಗಳನ್ನು ಕೈಯಲ್ಲೇ ಹಿಡಿದು ಹಾರಿಸುವ ಎಂಟೆದೆ ಅಲ್ಲ…ಹದಿನೆಂಟೆದೆ ಭಂಟ. ಹೆದರಿಕೊಂಡು ಬಂದಿರಲಾರರು. ತಾನಿಲ್ಲದ ಟೈಮಲ್ಲಿ ವೈರಿಗಳು ದೇಶವನ್ನು ಒಡೆದು ಹಾಕುತ್ತಾರೆಂದು ಬೇಗ ಬಂದಿದ್ದಾರೆ…ಅಷ್ಟೇ” ಎಂದು ಕಿತ್ತು ಹೋದ ನಮೋ ಧೈರ್ಯಕ್ಕೆ ಒಂದಷ್ಟು ತೇಪೆ ಮೆತ್ತಿದ.</p>



<p>ಅಷ್ಟರಲ್ಲಿ ಕಪಿ ದಡ್ಡ “ಕುತಂತ್ರಿಗಳೇ…ಸಾಮ್ರಾಟರ ಮನೋ ವೇದನೆಗೆ ನಾನೂ ಕಾರಣ ಇರಬಹುದು. ಆ ಪೊಮೆರಿಯನ್ ತಳಿಯ ಮಂಗನಾ ಶೇಪೌಟನ್ನು ಕಮಲೀ ಪಕ್ಷಕ್ಕೆ ಸೇರಿಸಿ ತಪ್ಪು ಮಾಡಿದೆ. ಎಷ್ಟು ಹೇಳಿದರೂ ನಾಬಾಲಿಕ್ ಬುದ್ದಿಯ ಅದಕ್ಕೆ ಅರ್ಥವಾಗುತ್ತಿಲ್ಲ. ಚಳುವಳಿ ಮಾಡುತ್ತಿರುವ ರೈತರು ಟೆರರಿಷ್ಟ್ ಗಳು. ಅಲ್ಲಿ ರೇಪ್ ಗಳು ಆಗುತ್ತಿವೆ. ಮರ್ಡರ್ ಮಾಡಿ ಡೆಡ್ ಬಾಡಿಗಳನ್ನು ನೇತು ಹಾಕಿದ್ದಾರೆ…ಹೀಗೆ ತಲೆಬುಡ ಇಲ್ಲದೆ ಮಾತಾಡುತ್ತಿದ್ದಾಳೆ. ಜನರು, ವಿರೋಧಿಗಳು ಇವೆಲ್ಲ ನಮೋ ಹೇಳಿಕೊಟ್ಟ ಗಿಳಿಮಾತುಗಳು ಎಂದು ವೃಥಾ ಸಾಮ್ರಾಟರನ್ನು ಛೇಡಿಸುತ್ತಿದ್ದಾರೆ. ಅಕಟಕಟಾ…” ಎಂದು ಗದ್ಗದಿತನಾದ.</p>



<p>ಎಷ್ಟು ಚರ್ಚಿಸಿದರೂ ನಮೋ ರೋದನೆಯ ಮೂಲ ಯಾವುದೆಂದು ತಿಳಿಯಲು ಸಭೆ ಸೋತಾಗ ಅ.ಕುತಂತ್ರಿ ಫೋರೆನಿಕ್ಸ್ ಲ್ಯಾಬ್ ತಂತ್ರಜ್ಞರಿಗೆ ಬರಹೇಳಿದ. ಇಡೀ ದೇಹ ಮುಚ್ಚುವಂತೆ ಪಿಪಿಇ ತೊಟ್ಟು ಬಂದ ಪರಿಣಿತರು ಸ್ಟ್ಯಾಚು ಆಗಿದ್ದ ನಮೋ ಕಣ್ಣೀರಿನ ಸ್ಯಾಂಪಲ್ಲನ್ನು ಸಂಗ್ರಹಿಸಿ ಅ.ಕುತಂತ್ರಿಗೆ ವಂದಿಸಿ ಹೊರಟಾಗ, “ವರ್ಷಗಟ್ಟಲೆ ರಿಸರ್ಚ್ ಮಾಡುತ್ತ ಕೂರಬೇಡಿ. ಬೇಗ ರಿಸಲ್ಟ್ ಬೇಕು. ಇದು ದೇಶದ ಅಳಿವು ಉಳಿವಿನ ಪ್ರಶ್ನೆ” ಎಂದು ಗುಟುರು ಹಾಕಿದ. ಅಷ್ಟರಲ್ಲಿ ಕಾವಲುಗಾರ ಬಂದು ಆಪ್ತಕಾರ್ಯದರ್ಶಿಯ ಕಿವಿಗೆ ಉಸಿರಿದ್ದನ್ನು, ಅವನು ಅ.ಕುತಂತ್ರಿಯ ಕಿವಿಗೆ ಸುರಿದ.</p>



<p>ನಮೋ ಸಂಕಟದಲ್ಲಿ ಏನನ್ನೋ ಹೇಳಲು ಪ್ರಯತ್ನಿಸುತ್ತಿದ್ದ. “ಏನದು ಹೇಳಿ. ನಿಮ್ಮ ಬೇಗುದಿ ಕಡಿಮೆಯಾಗುತ್ತೆ” ಎಂದು ಅ.ಕುತಂತ್ರಿ ಬೆನ್ನನ್ನು ನೀವಿದ. “ಅಲ್ಲಿ…ಅಲ್ಲಿ…ಬಂಗಾಲದಲ್ಲಿ… ಅತ್ಯಾಚಾರ…ಬಲಾತ್ಕಾರ…ದೀದಿ…ದೀದಿ…ಬೇಟಿ ಬಚಾವ್…ಬೇಟಿ ಪಡಾವ್” ಎಂದು ತೊದಲುತ್ತ ತೆರೆದಿದ್ದ ಕಣ್ಣುಗಳನ್ನು ಮುಚ್ಚಿ ಹಾಸಿಗೆಗೆ ಒರಗಿದ. ಒಂಟಿ ಕಣ್ಣೀರು ಮತ್ತಷ್ಟು ಒಸರಿ ಬಂತು.</p>



<p>ಮಹಿಳೆ ಶೋಷಣೆ ಬಗ್ಗೆ ನಮೋ ಸುರಿಸಿದ ಕೊಳಗಗಟ್ಟಲೆ ಕಣ್ಣೀರ ಬಗ್ಗೆ ಬಕೆಟ್ ಮಾಧ್ಯಮಗಳು ತರಹೇವಾರಿ ಹೆಡ್ಡಿಂಗ್ ಗಳನ್ನು ಕೊಟ್ಟು ಪ್ರಸಾರ ಮಾಡಿದವು. ಮಾತೃಹೃದಯದ ನಮೋ ಸಂಕಟಕ್ಕೆ ಲಂಡಭಕ್ತರ ಕರುಳು ಕಿವಿಚಿ ಬಂದು ಕಣ್ಣೀರಧಾರೆಯನ್ನು ಹರಿಸಿ, ಅಂಗಡಿಮುಂಗಟ್ಟು ಆಸ್ಪತ್ರೆಗಳ ಮೇಲೆ ದಾಳಿ ಎಸಗಿ ಧ್ವಂಸ ಮಾಡಿದರು. ರಸ್ತೆಗಳನ್ನು ಬಂದು ಮಾಡಿ, ವಾಹನಗಳಿಗೆ ಬೆಂಕಿ ಹಚ್ಚಿ ಶೋಷಿತಳಿಗೆ ಸಂತಾಪ ಸೂಚಿಸಿದರು.</p>



<p>ಫೋರೆನಿಕ್ಸ್ ಲ್ಯಾಬ್ ನಲ್ಲಿ ತನಿಖೆ ನಡೆಸಿದ್ದ ತಂತ್ರಜ್ಞರಿಗೆ ಅಸಹಜ, ವಿಶೇಷವಾದ ಫಲಿತಾಂಶ ದೊರೆತು ʼಯುರೇಕಾ!ʼ ಎಂದು ಸಂಭ್ರಮಗೊಂಡರು. “ನಮೋ ಅವರ ಒಂದೇ ಕಣ್ಣಿನಲ್ಲಿ ಅಶ್ರು ಬಂದದ್ದಕ್ಕೆ ಕಾರಣ ಸಿಗುತ್ತಿಲ್ಲ. ಇನ್ನೂ ಹೆಚ್ಚಿನ ಸಂಶೋಧನೆಯಿಂದ ತಿಳಿಯಬಹುದು. ಆದರೆ, ನಮೋ ಅವರು ಸುರಿಸಿದ ಕಣ್ಣೀರು, ಮೊಸಳೆ ಕಣ್ಣೀರಿಗೆ ಹೋಲಿಕೆಯಾಗುತ್ತಿರುವುದು ತನಿಖೆಯಲ್ಲಿ ತಿಳಿದು ಬಂದು ಅಚ್ಚರಿ ತಂದಿದೆ” ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದರು.</p>



<p>“ದೇಶದಲ್ಲಿ ಇಪ್ಪತ್ತು ನಿಮಿಷಕ್ಕೊಮ್ಮೆ ಮಹಿಳೆಯರ ಮೇಲೆ ಅತ್ಯಾಚಾರವಾಗುತ್ತಿದೆ. ಯೋಧರ ಪತ್ನಿಯರನ್ನು ಸೇರಿ ಹಲವು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ, ಮಾನಭಂಗ ಎಸಗಲಾಗಿದೆ. ಇದ್ಯಾವುದರ ಬಗ್ಗೆ ಉಸಿರೆತ್ತದೆ ಬಾಯಿಗೆ ಪ್ಲಾಸ್ಟರ್ ಹಾಕಿಕೊಂಡಿರುವ ಸಾಮ್ರಾಟ ಈಗ ಮೊಸಳೆ ಕಣ್ಣೀರು ಸುರಿಸುತ್ತಿದ್ದಾನೆ. ಎಂಥಾ ನಾಚಿಗೆಗೇಡು!” ಎಂದು ದೇಶವಾಸಿಗಳು ನಮೋ ಆಷಾಢಭೂತಿತನಕ್ಕೆ ಉಗಿದು ಉಪ್ಪಿನಕಾಯಿ ಹಾಕಿದರು.</p>



<p>ಚಂದ್ರಪ್ರಭ ಕಠಾರಿ<br>cpkatari@yahoo.com</p>
]]></content:encoded>
					
		
		
			</item>
		<item>
		<title>ಬಿಜೆಪಿಯೇ ಇಡಿ ಹೆಸರಿನಲ್ಲಿ ತನಿಖೆ ನಡೆಸುತ್ತಿದೆ: ಎಎಪಿ ಆರೋಪ</title>
		<link>https://peepalmedia.com/bjp-is-investigating-in-the-name-of-ed-aap-alleges/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 25 Mar 2024 13:26:37 +0000</pubDate>
				<category><![CDATA[Uncategorized]]></category>
		<category><![CDATA[ದೇಶ]]></category>
		<category><![CDATA[AAP]]></category>
		<category><![CDATA[aap candidate]]></category>
		<category><![CDATA[aap challeng bjp]]></category>
		<category><![CDATA[bjp]]></category>
		<category><![CDATA[bjp dirty politics]]></category>
		<category><![CDATA[bjp govt]]></category>
		<category><![CDATA[bjp karnataka]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[politics]]></category>
		<guid isPermaLink="false">https://peepalmedia.com/?p=37485</guid>

					<description><![CDATA[ನವದೆಹಲಿ: ಇಡಿ ಸ್ವಾಯತ್ತ ಸಂಸ್ಥೆ ಎನ್ನುವುದು ಸಂಪೂರ್ಣ ಸುಳ್ಳು. ಬಿಜೆಪಿ ಕಚೇರಿಯೇ ಇಡಿ ಹೆಸರಿನಲ್ಲಿ ತನಿಖೆ ನಡೆಸುತ್ತಿದೆ ಎಂದು ಎಎಪಿ ಆರೋಪಿಸಿದೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿ ಸಚಿವೆ ಅತಿಶಿ, ಜಾರಿ ನಿರ್ದೇಶನಾಲಯವು ಸ್ವತಂತ್ರ ತನಿಖಾ ಸಂಸ್ಥೆ ಎನ್ನುವುದು ಸುಳ್ಳು. ಇಡಿ ಆರೋಪಿತರಿಗೆ ಏನಾದರೂ ಹೇಳಬೇಕಾದರೆ, ಮೊದಲು ಆರೋಪಪಟ್ಟಿ ಸಿದ್ದಪಡಿಸಿಕೊಂಡು ಸಲ್ಲಿಸಬೇಕು. ಅದನ್ನು ನ್ಯಾಯಾಧೀಶರ ಮುಂದೆ ಒಪ್ಪಿಸಬೇಕು. ಇದ್ಯಾವುದು ಇಲ್ಲದೇ ಬಿಜೆಪಿ ತಾಳಕ್ಕೆ ಇಡಿ ಕುಣಿಯುತ್ತಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ಹಗರಣದ [&#8230;]]]></description>
										<content:encoded><![CDATA[
<p>ನವದೆಹಲಿ: ಇಡಿ ಸ್ವಾಯತ್ತ ಸಂಸ್ಥೆ ಎನ್ನುವುದು ಸಂಪೂರ್ಣ ಸುಳ್ಳು. ಬಿಜೆಪಿ ಕಚೇರಿಯೇ ಇಡಿ ಹೆಸರಿನಲ್ಲಿ ತನಿಖೆ ನಡೆಸುತ್ತಿದೆ ಎಂದು ಎಎಪಿ ಆರೋಪಿಸಿದೆ.</p>



<p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿ ಸಚಿವೆ ಅತಿಶಿ, ಜಾರಿ ನಿರ್ದೇಶನಾಲಯವು ಸ್ವತಂತ್ರ ತನಿಖಾ ಸಂಸ್ಥೆ ಎನ್ನುವುದು ಸುಳ್ಳು. ಇಡಿ ಆರೋಪಿತರಿಗೆ ಏನಾದರೂ ಹೇಳಬೇಕಾದರೆ, ಮೊದಲು ಆರೋಪಪಟ್ಟಿ ಸಿದ್ದಪಡಿಸಿಕೊಂಡು ಸಲ್ಲಿಸಬೇಕು. ಅದನ್ನು ನ್ಯಾಯಾಧೀಶರ ಮುಂದೆ ಒಪ್ಪಿಸಬೇಕು. ಇದ್ಯಾವುದು ಇಲ್ಲದೇ ಬಿಜೆಪಿ ತಾಳಕ್ಕೆ ಇಡಿ ಕುಣಿಯುತ್ತಿದೆ ಎಂದು ಆರೋಪಿಸಿದರು.</p>



<p>ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ಹಗರಣದ ದಾಖಲೆಗಳನ್ನು ಹೊಂದಿರುವ ಹಳೆಯ ಫೋನ್ ಅನ್ನು ಕಳೆದುಕೊಂಡಿದ್ದಾರೆ ಎನ್ನುವುದೆಲ್ಲ ಸುಳ್ಳು ಆರೋಪ ಎಂದು ತಿರಸ್ಕರಿಸಿರುವ ಅವರು, ಬಿಜೆಪಿ ಕಚೇರಿಯಿಂದಲೇ ತನಿಖೆ ನಡೆಸಲಾಗುತ್ತಿದೆ. ಜಾರಿ ನಿರ್ದೇಶನಾಲಯ ಬಿಜೆಪಿಯ ರಾಜಕೀಯ ಪಾಲುದಾರ &nbsp;ಪಕ್ಷದಂತೆ ವರ್ತಿಸುತ್ತಿದೆ ಎಂದು ದೂರಿದರು.</p>



<p>ದೇಶದ ಸಂವಿಧಾನ ಮತ್ತು ಕಾನೂನು ಇಡಿ ಅಧಿಕಾರಿಗಳಿಗೆ ಅಧಿಕಾರ ನೀಡಿದೆ ಎಂದು ಹೇಳಲು ಬಯಸುತ್ತೇನೆ. ನೀವು ಸಂವಿಧಾನವನ್ನು ಉಲ್ಲಂಘಿಸಬೇಡಿ; ಸಂವಿಧಾನವನ್ನು ಕೊಲ್ಲಬೇಡಿ. ನೀವು ಭಾರತೀಯ ಜನತಾ ಪಕ್ಷದ ಅಂಗಸಂಸ್ಥೆಯಲ್ಲ. ನೀವು ಈ ದೇಶದ ಕಾನೂನುಗಳ ಅಡಿಯಲ್ಲಿ ರಚಿಸಲಾದ ಸ್ವತಂತ್ರ ತನಿಖಾ ಸಂಸ್ಥೆ ಎಂಬುದನ್ನು ಮರೆಯಬಾರದು ಎಂದು ಅವರು ಎಚ್ಚರಿಕೆ ನೀಡಿದರು.</p>



<p>ಎರಡು ವರ್ಷಗಳ ಹಿಂದೆ ಕೇಜ್ರಿವಾಲ್ ಅವರು ಅಬಕಾರಿ ಹಗರಣ ನಡೆದಾಗ ಬಳಸಿದ್ದ ಫೋನ್ ಕಾಣೆಯಾಗಿದೆ ಎಂದು ಕೇಜ್ರಿವಾಲ್‌ ಹೇಳುತ್ತಿದ್ದಾರೆ ಎಂದು ಇಡಿ ಮೂಲಗಳು ನಿನ್ನೆ ಮಾಹಿತಿ ನೀಡಿದ್ದವು.</p>



<p>ಕೇಜ್ರಿವಾಲ್ ಅವರನ್ನು ಗುರುವಾರ ಸಂಜೆ ತಡರಾತ್ರಿ ಬಂಧಿಸಲಾಗಿದ್ದು, ಅವರು ಜೈಲಿನಿಂದಲೇ ಸಿಎಂ ಅಧಿಕಾರ ಚಲಾಯಿಸುವುದಾಗಿ ಘೋಷಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಚುನಾವಣಾ ಬಾಂಡ್‍ ಮೂಲಕ ಬಿಜೆಪಿ ಭ್ರಷ್ಟಾಚಾರಗಳು ಬಯಲಾಗುತ್ತಿವೆ: ಜೈರಾಮ್‌ ರಮೇಶ್‌</title>
		<link>https://peepalmedia.com/bjp-corruptions-are-being-exposed-through-election-bonds-jairam-ramesh/</link>
		
		<dc:creator><![CDATA[Peepal Media]]></dc:creator>
		<pubDate>Fri, 15 Mar 2024 10:09:13 +0000</pubDate>
				<category><![CDATA[ಕರ್ನಾಟಕ ಚುನಾವಣೆ - 2023]]></category>
		<category><![CDATA[ಕೋರ್ಟು - ಕಾನೂನು]]></category>
		<category><![CDATA[ಚುನಾವಣೆ 2023]]></category>
		<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[bjp]]></category>
		<category><![CDATA[bjp govt]]></category>
		<category><![CDATA[india]]></category>
		<category><![CDATA[jairam ramesh]]></category>
		<category><![CDATA[jairamramesh]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[sbi]]></category>
		<category><![CDATA[sbibaņk]]></category>
		<guid isPermaLink="false">https://peepalmedia.com/?p=37055</guid>

					<description><![CDATA[ನವದೆಹಲಿ: ಚುನಾವಣಾ ಬಾಂಡ್ ಮೂಲಕ ಬಿಜೆಪಿಯ ಹಲವಾರು ಬಗೆಯ ಭ್ರಷ್ಟಾಚಾರಗಳು ಬಯಲಿಗೆ ಬರುತ್ತಿವೆ. ನಿಮ್ಮ ಕಂಪನಿಗೆ ಸರ್ಕಾರದ ರಕ್ಷಣೆ ಬೇಕೆಂದರೆ ದೇಣಿಗೆ ಕೊಡಿ ಎಂದು ಕೇಳುವುದು, ಕಿಕ್‍ಬ್ಯಾಕ್ ಪಡೆಯುವುದು ಮತ್ತು ಶೆಲ್ ಕಂಪನಿಗಳ ಮೂಲಕ ಹಣ ದುರುಪಯೋಗ ಮಾಡುವುದು ಸೇರಿದಂತೆ  ನಾಲ್ಕು ಬಿಜೆಪಿಯ ಭ್ರಷ್ಟ ತಂತ್ರಗಾರಿಕೆಗಳು ಬಯಲುಗೊಗೊಂಡಿವೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ. ವಿಶಿಷ್ಟ ಬಾಂಡ್ ಐಡಿ ಸಂಖ್ಯೆಗಳನ್ನು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸುತ್ತದೆ. ಇದರಿಂದ ಯಾವ ದಾನಿಗಳು ಯಾವ ಪಕ್ಷಗಳಿಗೆ ದೇಣಿಗೆ [&#8230;]]]></description>
										<content:encoded><![CDATA[
<p>ನವದೆಹಲಿ: ಚುನಾವಣಾ ಬಾಂಡ್ ಮೂಲಕ ಬಿಜೆಪಿಯ ಹಲವಾರು ಬಗೆಯ ಭ್ರಷ್ಟಾಚಾರಗಳು ಬಯಲಿಗೆ ಬರುತ್ತಿವೆ. ನಿಮ್ಮ ಕಂಪನಿಗೆ ಸರ್ಕಾರದ ರಕ್ಷಣೆ ಬೇಕೆಂದರೆ ದೇಣಿಗೆ ಕೊಡಿ ಎಂದು ಕೇಳುವುದು, ಕಿಕ್‍ಬ್ಯಾಕ್ ಪಡೆಯುವುದು ಮತ್ತು ಶೆಲ್ ಕಂಪನಿಗಳ ಮೂಲಕ ಹಣ ದುರುಪಯೋಗ ಮಾಡುವುದು ಸೇರಿದಂತೆ  ನಾಲ್ಕು ಬಿಜೆಪಿಯ ಭ್ರಷ್ಟ ತಂತ್ರಗಾರಿಕೆಗಳು ಬಯಲುಗೊಗೊಂಡಿವೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.</p>



<p>ವಿಶಿಷ್ಟ ಬಾಂಡ್ ಐಡಿ ಸಂಖ್ಯೆಗಳನ್ನು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸುತ್ತದೆ. ಇದರಿಂದ ಯಾವ ದಾನಿಗಳು ಯಾವ ಪಕ್ಷಗಳಿಗೆ ದೇಣಿಗೆ ನೀಡಿದ್ದಾರೆ ಎನ್ನುವುದು ಕೂಡಾ ತಿಳಿಯುತ್ತದೆ ಎಂದು ಅವರು ಎಕ್ಸ್ ಪೋಸ್ಟ್ ನಲ್ಲಿ &nbsp;ಆಗ್ರಹಿಸಿದ್ದಾರೆ.</p>



<p>ಚುನಾವಣೆ ಮುಗಿಯುವವರೆಗೂ ವಿವರ ಬಹಿರಂಗಪಡಿಸುವುದನ್ನು ಮುಂದೂಡುವ ಸತತ ಪ್ರಯತ್ನ ಎಸ್‌ಬಿಐ ಮತ್ತು ಬಿಜೆಪಿ ಮಾಡಿದವು. ಈಗ ಸುಪ್ರೀಂಕೋರ್ಟ್ ಒತ್ತಡದ ನಿರ್ದೇಶನದಂತೆ ಎಸ್‍ಬಿಐ ಒಂದಿಷ್ಟು ವಿವರಗಳನ್ನು ಬಹಿರಂಗಪಡಿಸಿದೆ. 1300ಕ್ಕೂ ಅಧಿಕ ಕಂಪನಿಗಳು ಮತ್ತು ವ್ಯಕ್ತಿಗಳು ಚುನಾವಣಾ ಬಾಂಡ್‍ಗಳ ಮೂಲಕ ದೇಣಿಗೆ ಬಿಜೆಪಿಗೆ ದೇಣಿಗೆ ನೀಡಿದ್ದಾರೆ. ಬಿಜೆಪಿ 2019ರ ಬಳಿಕ 6000 ಕೋಟಿಗೂ ಅಧಿಕ ಮೊತ್ತದ ದೇಣಿಗೆ ಸ್ವೀಕರಿಸಿದೆ. ಚುನಾವಣಾ ಬಾಂಡ್‍ಗಳ ವಿವರಗಳು ಸದ್ಯಕ್ಕೆ ಬಿಜೆಪಿಯ ನಾಲ್ಕು ತಂತ್ರಗಳನ್ನು ಬಯಲುಗೊಳಿಸಿವೆ. ಇನ್ನೆಷ್ಟು ತಂತ್ರಗಳಿವೆಯೋ ಎಂದು ಅವರು ಆರೋಪಿಸಿದ್ದಾರೆ.</p>



<p>ಮೇಘಾ ಎಂಜಿನಿಯರಿಂಗ್ ಎಂಬ ಕಂಪನಿಯು 2023ರ ಏಪ್ರಿಲ್‍ನಲ್ಲಿ 800 ಕೋಟಿಗೂ ಅಧಿಕ ಮೊತ್ತವನ್ನು ಬಾಂಡ್ ಖರೀದಿಗೆ ವ್ಯಯಿಸಿದೆ. ಇದಕ್ಕೂ ಒಂದು ತಿಂಗಳ ಮುನ್ನ ಕಂಪನಿಗೆ 14400 ಕೋಟಿ ರೂಪಾಯಿ ಮೊತ್ತದ ಥಾಣೆ- ಬೊರಿವಿಲಿ ಅವಳಿ ಸುರಂಗ ಕಾಮಗಾರಿಯ ಗುತ್ತಿಗೆ ನೀಡಲಾಗಿತ್ತು. ಹೀಗೆ ಕಂಪನಿಗಳ ಜೊತೆ ಕೊಡುವ ಮತ್ತು ತೆಗೆದುಕೊಳ್ಳುವ ಭ್ರಷ್ಟಾಚಾರವನ್ನು ಬಿಜೆಪಿ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಇಲ್ಲಿ ನಮ್ಮವರಿಗೆ ಉದ್ಯೋಗ ಇಲ್ಲ, ಪಾಕಿಸ್ತಾನದಿಂದ ಕರೆತಂದು ಉದ್ಯೋಗ ಕೊಡುವುದು ಸರಿಯೇ?: CAA ಕುರಿತು ಕೇಜ್ರಿವಾಲ್‌ ಪ್ರತಿಕ್ರಿಯೆ</title>
		<link>https://peepalmedia.com/we-dont-have-jobs-here-is-it-right-to-bring-jobs-from-pakistan-kejriwals-response-on-caa/</link>
		
		<dc:creator><![CDATA[Peepal Media]]></dc:creator>
		<pubDate>Wed, 13 Mar 2024 12:01:59 +0000</pubDate>
				<category><![CDATA[ಚುನಾವಣೆ 2023- ಪರಿಣಾಮ]]></category>
		<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ದೇಶ]]></category>
		<category><![CDATA[ವ್ಯಾಪಾರ- ವಹಿವಾಟು]]></category>
		<category><![CDATA[Aam Aadmi Party]]></category>
		<category><![CDATA[AAP]]></category>
		<category><![CDATA[aravind kejrival]]></category>
		<category><![CDATA[BJP ADVERTISMENT]]></category>
		<category><![CDATA[bjp dirty politics]]></category>
		<category><![CDATA[bjp govt]]></category>
		<category><![CDATA[Bjp IT cell]]></category>
		<category><![CDATA[bjp karnataka]]></category>
		<category><![CDATA[BJP leader]]></category>
		<category><![CDATA[bjp narendra modi]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[modi]]></category>
		<category><![CDATA[modi government]]></category>
		<category><![CDATA[modiji]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=36985</guid>

					<description><![CDATA[ನವದೆಹಲಿ: ಇಲ್ಲಿ ನಮ್ಮ ನಮ್ಮ ದೇಶದ ಯುವಜನರಿಗೆ ಉದ್ಯೋಗ ಇಲ್ಲ, ಪಾಕಿಸ್ತಾನ, ಅಪಘಾನಿಸ್ತಾನಗಳಿಂದ ಜನರನ್ನು ಕರೆತಂದು ಅವರಿಗೆ ಉದ್ಯೋಗ ಕೊಡುವುದು ಸರಿಯೇ ಎಂದು ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಪ್ರಶ್ನಿಸಿದ್ದಾರೆ. ಸಿಎಎ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ಈ ಮೂರು ದೇಶಗಳ ಹಿಂದೂ ಧಾರ್ಮಿಕ ಅಲ್ಪಸಂಖ್ಯಾತರು ಭಾರತೀಯ ಪೌರತ್ವ ಪಡೆಯಲು ಬಯಸಿದರೆ ಅಂಥವರಿಗೆ ಮಾತ್ರ ಸಿಎಎ ಕಾನೂನು ಅನ್ವಯ ಬಿಜೆಪಿಯ ಕೇಂದ್ರ ಸರ್ಕಾರ ಹೇಳುತ್ತದೆ. ಅಂದರೆ  ಹೆಚ್ಚಿನ [&#8230;]]]></description>
										<content:encoded><![CDATA[
<p>ನವದೆಹಲಿ: ಇಲ್ಲಿ ನಮ್ಮ ನಮ್ಮ ದೇಶದ ಯುವಜನರಿಗೆ ಉದ್ಯೋಗ ಇಲ್ಲ, ಪಾಕಿಸ್ತಾನ, ಅಪಘಾನಿಸ್ತಾನಗಳಿಂದ ಜನರನ್ನು ಕರೆತಂದು ಅವರಿಗೆ ಉದ್ಯೋಗ ಕೊಡುವುದು ಸರಿಯೇ ಎಂದು ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಪ್ರಶ್ನಿಸಿದ್ದಾರೆ.</p>



<p>ಸಿಎಎ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ಈ ಮೂರು ದೇಶಗಳ ಹಿಂದೂ ಧಾರ್ಮಿಕ ಅಲ್ಪಸಂಖ್ಯಾತರು ಭಾರತೀಯ ಪೌರತ್ವ ಪಡೆಯಲು ಬಯಸಿದರೆ ಅಂಥವರಿಗೆ ಮಾತ್ರ ಸಿಎಎ ಕಾನೂನು ಅನ್ವಯ ಬಿಜೆಪಿಯ ಕೇಂದ್ರ ಸರ್ಕಾರ ಹೇಳುತ್ತದೆ. ಅಂದರೆ  ಹೆಚ್ಚಿನ ಸಂಖ್ಯೆಯ ಹಿಂದೂ ಅಲ್ಪಸಂಖ್ಯಾತರು ನಮ್ಮ ದೇಶಕ್ಕೆ ಬರುವಂತೆ ಮಾಡುತ್ತೇವೆ,  ಕರೆ ತರುತ್ತೇವೆ. ಅವರಿಗೆ ಉದ್ಯೋಗ ಕೊಡಿಸುತ್ತೇವೆ, ಮನೆ ಕಟ್ಟಿಸಿಕೊಡುತ್ತೇವೆ, ಇಲ್ಲೇ ನೆಲೆಸುವಂತೆ ಮಾಡುತ್ತೇವೆ ಅನ್ನುವುದು ವಿಚಿತ್ರ ಅಲ್ಲವೇ ಎಂದು ಪ್ರಶ್ನಿಸಿದರು.</p>



<p> ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದ ಮೋದಿ ಸರ್ಕಾರಕ್ಕೆ ಯಾವ ಒಳ್ಳೆಯ ಕೆಲಸವನ್ನು ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಈಗ ಚುನಾವಣೆ ಸಂದರ್ಭದಲ್ಲಿ CAA ಜಾರಿಗೆ ಅಧಿಸೂಚನೆ ಹೊರಡಿಸಿದೆ. ಬಿಜೆಪಿ ಸರ್ಕಾರ ಏನಾದರು ಒಳ್ಳೆ ಕೆಲಸ ಮಾಡಿದ್ದರೆ ಇವತ್ತು CAA ಬದಲಾಗಿ ತಾವು ಮಾಡಿದ ಕೆಲಸ ತೋರಿಸಿ ಓಟು ಕೇಳಬಹುದ್ದೀತು ಎಂದರು.</p>



<p>ಹಣದುಬ್ಬರ ಮತ್ತು ನಿರುದ್ಯೋಗ ಇಂದು ದೇಶ ಎದುರಿಸುತ್ತಿರುವ ದೊಡ್ಡ ಸಮಸ್ಯೆಗಳಾಗಿವೆ. ಮಧ್ಯಮವರ್ಗದ ಕುಟುಂಬಕ್ಕೂ ಇಂದು ಮನೆ ನಡೆಸುವುದು ಕಷ್ಟವಾಗುತ್ತಿದೆ. ಹಣದುಬ್ಬರ ಬೆನ್ನು ಮುರಿಯುತ್ತಿದೆ, ಮತ್ತೊಂದೆಡೆ ನಮ್ಮ ಯುವಕರು ಉದ್ಯೋಗಕ್ಕಾಗಿ ಪರದಾಡುತ್ತಿದ್ದಾರೆ. ಅವರ ಮೇಲೆ ಲಾಠಿ ಪ್ರಹಾರ ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಿರುದ್ಯೋಗ, ಮತ್ತು ಹಣದುಬ್ಬರಕ್ಕೆ ಸರಕಾರ ಪರಿಹಾರ ಹುಡುಕುವ ಬದಲು ಸಿಎ ಬಗ್ಗೆ ಮಾತನಾಡುತ್ತಿರುವುದು ತುಂಬಾ ದುಖಃಕರ ಸಂಗತಿ ಎಂದರು.</p>



<p>ಭಾರತದ ಅನೇಕ ಜನರು ನಿರಾಶ್ರಿತರಾಗಿದ್ದಾರೆ. &nbsp;ಆದರೆ ಬಿಜೆಪಿಯವರು ಪಾಕಿಸ್ತಾನದಿಂದ ಜನರನ್ನು ಕರೆತಂದು ಭಾರತದಲ್ಲಿ ನೆಲೆಸಲು ಬಯಸುತ್ತಾರೆ. &nbsp;ಅವರಿಗೆ ಮನೆಗಳನ್ನು ನೀಡಲು ಬಯಸುತ್ತಾರೆ. &nbsp;ನಮ್ಮ ಕುಟುಂಬ ಮತ್ತು ದೇಶದ ಅಭಿವೃದ್ಧಿಗೆ ಖರ್ಚು ಮಾಡಬೇಕಾದ ಭಾರತ ಸರ್ಕಾರದ ಸರ್ಕಾರಿ ಹಣ ಬೇರೆ ದೇಶದ ಜನರಿಗೆ ಖರ್ಚು ಮಾಡಲು ಹೊರಟಿರುವುದು ಎಷ್ಟು ಸರಿ? ಎಂದು ಅವರು ಪ್ರಶ್ನಿಸಿದರು.</p>



<p>ಆ ಮೂರು ದೇಶಗಳಲ್ಲಿ ಸುಮಾರು 2.5 ರಿಂದ 3 ಕೋಟಿ ಹಿಂದೂ ಧಾರ್ಮಿಕ ಅಲ್ಪಸಂಖ್ಯಾತರಿದ್ದಾರೆ. ಈ ಮೂರು ದೇಶಗಳು ಬಡ ದೇಶಗಳು ಹೌದು. ಭಾರತದ ಬಾಗಿಲು ತೆರೆದ ತಕ್ಷಣ ಈ ಮೂರು ದೇಶಗಳಿಂದ ಭಾರಿ ಜನಸಮೂಹವು ನಮ್ಮ ಭಾರತಕ್ಕೆ ಬರುತ್ತದೆ, ಈ 2.5 ಕೋಟಿ ಜನರಲ್ಲಿಯೂ ಸಹ. 1.5 ಕೋಟಿ ಜನರು ಭಾರತಕ್ಕೆ ಬರುತ್ತಾರೆ. ಹಾಗಾದರೆ ಅವರಿಗೆಲ್ಲ &nbsp;ಯಾರು ಉದ್ಯೋಗ ಕೊಡುತ್ತಾರೆ? &nbsp;ನೀವು ಅವರನ್ನು ಎಲ್ಲಿ ನೆಲೆಗೊಳಿಸುತ್ತೀರಿ? ಇವರಿಗೆಲ್ಲ ಬಿಜೆಪಿಯವರು ತಮ್ಮ &nbsp;ಮನೆಯಲ್ಲಿ ಪಾಲು ಕೊಡುತ್ತಾರೆಯೇ? ಅವರು ತಮಗೆ ಸಿಗುವ ಉದ್ಯೋಗವನ್ನು ಇವರಿಗೆಲ್ಲ ಬಿಟ್ಟುಕೊಡುತ್ತಾರೆಯೇ ಎಂದು ಕೇಜ್ರಿವಾಲ್‌ ಪ್ರಶ್ನಿಸಿದರು.</p>



<p>ಹಾಗಾದರೆ ಬಿಜೆಪಿ ಏಕೆ ಇಂಥ ಮಹಾನ್‌ ತಪ್ಪನ್ನು ಮಾಡುತ್ತಿದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.̤ ಉತ್ತರ ಬಹಳ ಸರಳವಾಗಿದೆ. ಕೇವಲ ವೋಟ್ ಬ್ಯಾಂಕ್ ಸೃಷ್ಟಿಸುವ ಕೊಳಕು ರಾಜಕೀಯವನ್ನು ಬಿಜೆಪಿ ಮಾಡುತ್ತಿದೆ. ಒಂದೂವರೆ ಕೋಟಿ ಜನರನ್ನು ಭಾರತಕ್ಕೆ ಕರೆತಂದು ಓಟ್‌ ಬ್ಯಾಂಕ್‌ ಮಾಡಿಕೊಳ್ಳುವುದು ಬಿಜೆಪಿ ಉದ್ದೇಶ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಇದರಿಂದ ಭಾರೀ ಲಾಭವಾಗಬಹುದು. ಒಂದೆಡೆ &nbsp;ಹರಿಯಾಣದ ಬಿಜೆಪಿಯ ಸರ್ಕಾರಕ್ಕೆ ಅಲ್ಲಿನ ಮಕ್ಕಳಿಗೆ ಉದ್ಯೋಗ ನೀಡಲು ಸಾಧ್ಯವಾಗುತ್ತಿಲ್ಲ. ಇಲ್ಲಿನ ಮಕ್ಕಳನ್ನು ಇಸ್ರೇಲ್‌ಗೆ ಉದ್ಯೋಗಕ್ಕಾಗಿ ಕಳುಹಿಸುತ್ತಿದೆ. &nbsp;ನಮ್ಮ ಮಕ್ಕಳನ್ನು ಯುದ್ಧಕ್ಕೆ ತಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದರು.</p>



<p>ಇಡೀ ಪ್ರಪಂಚದ ಯಾವುದೇ ದೇಶವು ತನ್ನ ನೆರೆಹೊರೆಯವರಿಗೆ ಸಹಾಯ ಮಾಡಲು ಸಾಧ್ಯವಿಲ್ಲ. ದೇಶಗಳ ಬಡವರನ್ನು ನೆರೆಯ ದೇಶಗಳ ಜನರು ತಮ್ಮ ದೇಶಕ್ಕೆ ಬರುವುದನ್ನು ತಡೆಯಲು ವಿವಿಧ ರೀತಿಯ ಕಾನೂನುಗಳನ್ನು ಮಾಡುತ್ತದೆ. ಗಡಿಗಳಲ್ಲಿ ಗೋಡೆಗಳನ್ನು ನಿರ್ಮಿಸಲಾಗುತ್ತಿದೆ. ವಿದ್ಯುತ್ ತಂತಿಗಳನ್ನು ಅಳವಡಿಸಲಾಗುತ್ತಿದೆ. &nbsp;ಪಕ್ಕದ ದೇಶದ ಬಡವರಿಗೆ ದೇಶವನ್ನು ಪ್ರವೇಶಿಸಲು ಬಾಗಿಲು ಪ್ರವೇಶಿಸುವುತ್ತಿರುವುದು ನಮ್ಮಲ್ಲಿಯೇ ಮೊದಲು. ಇಂಥ ಕೊಳಕು ರಾಜಕೀಯ ಮಾಡುತ್ತಿರುವ ಪ್ರಪಂಚದಲ್ಲೇ ಏಕೈಕ ಪಕ್ಷವೆಂದರೆ ಅದು ಬಿಜೆಪಿಯಾಗಿದೆ ಎಂದು ಹರಿಹಾಯ್ದರು.</p>



<p>&nbsp;ಯೋಚಿಸಬೇಕಾದ ವಿಷಯವೆಂದರೆ ಕಳೆದ 10 ವರ್ಷಗಳಲ್ಲಿ ಭಾರತದ 11 ಲಕ್ಷಕ್ಕೂ ಹೆಚ್ಚು ದೊಡ್ಡ ಶ್ರೀಮಂತ ಕೈಗಾರಿಕೋದ್ಯಮಿಗಳು ಮತ್ತು ಉದ್ಯಮಿಗಳು ಭಾರತವನ್ನು ತೊರೆದಿದ್ದಾರೆ. ಈ ಜನರು ಭಾರತದಲ್ಲಿ ಕಾರ್ಖಾನೆಗಳು, ಕೈಗಾರಿಕೆಗಳನ್ನು ನಡೆಸುತ್ತಿದ್ದರು. &nbsp;ಜನರಿಗೆ ಉದ್ಯೋಗ ನೀಡುತ್ತಿದ್ದರು. &nbsp;ಬಿಜೆಪಿಯ ತಪ್ಪು ನೀತಿಗಳು ಮತ್ತು ಅವರ ದೌರ್ಜನ್ಯಗಳಿಂದ ಬೇಸತ್ತು ಅವರು ಭಾರತವನ್ನು ತೊರೆದರು. ನಿಜವಾಗಿಯೂ ವಾಪಸ್‌ ಕರೆತರಬೇಕಾದರೆ ಆ ಉದ್ಯಮಿಗಳನ್ನು ಕರೆತನ್ನಿ. ಅವರು ಭಾರತದಲ್ಲಿ ಹೂಡಿಕೆ ಮಾಡುತ್ತಾರೆ. &nbsp;ಅವರು ಹೊಸ ಕಾರ್ಖಾನೆಗಳನ್ನು ಮತ್ತು &nbsp;ಹೊಸ ಉದ್ಯಮಗಳನ್ನು ತೆರೆಯುತ್ತಾರೆ ಎಂದು ಅವರು ಕಿವಿಮಾತು ಹೇಳಿದರು.</p>



<p>2014ರ ಹಿಂದೆ ಬಂದ ನುಸುಳುಕೋರರಿಗೆ ಪೌರತ್ವ ನೀಡುತ್ತೇವೆ ಎಂದು ಬಿಜೆಪಿಯವರು ಹೇಳುತ್ತಿರುವುದು ಸುಳ್ಳು. ಇದು ಕೇವಲ ಆರಂಭ. &nbsp;ಒಮ್ಮೆ ಬಾಗಿಲು ತೆರೆದರೆ ಪಾಕಿಸ್ತಾನ, ಬಾಂಗ್ಲಾದೇಶಗಳಿಂದ ಸಮುದ್ರೋಪಾದಿಯಲ್ಲಿ ಜನ ಬರುತ್ತಾರೆ. &nbsp;ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ ಈಶಾನ್ಯ ರಾಜ್ಯಗಳು ಅದರಲ್ಲೂ ವಿಶೇಷವಾಗಿ ಅಸ್ಸಾಂ ಈ ವಲಸೆ ಜನರ ಭಾರವನ್ನು ಹೊರಬೇಕಾಗುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.</p>
]]></content:encoded>
					
		
		
			</item>
		<item>
		<title>40% ಕಮೀಷನ್ ಹಗರಣ ನ್ಯಾಯಾಂಗ ತನಿಖೆಗೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ</title>
		<link>https://peepalmedia.com/40-commission-scam-to-judicial-probe/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 11 Aug 2023 07:05:58 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[40% commission]]></category>
		<category><![CDATA[bjp govt]]></category>
		<category><![CDATA[bjp v/s congress]]></category>
		<category><![CDATA[congress adhyaksha]]></category>
		<guid isPermaLink="false">https://peepalmedia.com/?p=25294</guid>

					<description><![CDATA[ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘ ಇಂದು ಕಾಂಗ್ರೆಸ್ ಸರ್ಕಾರ ಬಾಕಿ ಬಿಲ್ ಪಾವತಿಗೆ ತೋರುತ್ತಿರುವ ವಿಳಂಬದ ಕಾರಣಕ್ಕೆ ಪತ್ರಿಕಾಗೋಷ್ಠಿ ಕರೆದಿತ್ತು. ಅದಕ್ಕೂ ಮುನ್ನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು (40% Scam) ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು&#160;ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಸುದೀರ್ಘ ಮಾಹಿತಿಯ ಮೂಲಕ ವಿವರಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಕೊಟ್ಟ ಮಾತಿನಂತೆ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ [&#8230;]]]></description>
										<content:encoded><![CDATA[
<p>ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘ ಇಂದು ಕಾಂಗ್ರೆಸ್ ಸರ್ಕಾರ ಬಾಕಿ ಬಿಲ್ ಪಾವತಿಗೆ ತೋರುತ್ತಿರುವ ವಿಳಂಬದ ಕಾರಣಕ್ಕೆ ಪತ್ರಿಕಾಗೋಷ್ಠಿ ಕರೆದಿತ್ತು. ಅದಕ್ಕೂ ಮುನ್ನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು (40% Scam) ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು&nbsp;ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಸುದೀರ್ಘ ಮಾಹಿತಿಯ ಮೂಲಕ ವಿವರಿಸಿದ್ದಾರೆ.</p>



<p>ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಕೊಟ್ಟ ಮಾತಿನಂತೆ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು ಸರ್ಕಾರದ ವಿರುದ್ಧ ತಿರುಗಿ ಬಿದ್ದ ಗುತ್ತಿಗೆದಾರರಿಗೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.</p>



<p>ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು ತಿಳಿಸಿದ್ದಾರೆ‌‌.</p>



<p>&#8220;ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯು ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ&#8221; ಎಂದು ಬಿಲ್ ಪಾವತಿ ವಿಳಂಬಕ್ಕೆ ಕಾರಣ ನೀಡಿದ್ದಾರೆ.</p>



<p>&#8220;ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ.. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ?&#8221; ಎಂದು ಕಿಚಾಯಿಸಿದ್ದಾರೆ.</p>



<p>&#8220;ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್. ಅಶೋಕ್ ಅವರು ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅವರ ಮನಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ&#8221; ಎಂದು ಬಿಜೆಪಿ ನಾಯಕರ ಧೋರಣೆ ಬಗ್ಗೆ ವ್ಯಂಗ್ಯವಾಡಿದ್ದಾರೆ.</p>



<p>&#8220;ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದುಬಂದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ ಜನತೆಯೆದುರು ಸಾಬೀತು ಮಾಡುತ್ತೇವೆ&#8221; ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದೇಶದಲ್ಲಿ ತಿಳಿಸಿದ್ದಾರೆ.</p>



<p>&#8220;ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯ ಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ, ನರೇಂದ್ರ ಮೋದಿ ಅವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದು ನೋಡಿದರೆ ಸ್ವತಃ ಬೊಮ್ಮಾಯಿಯವರಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ&#8221; ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದೋರಣೆ ಬಗ್ಗೆ ವ್ಯಂಗ್ಯವಾಡಿದ್ದಾರೆ.</p>



<p>&#8220;ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, P.O.W ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ&#8221; ಎಂದು ಗುತ್ತಿಗೆದಾರರಿಗೆ ಅಭಯ ನೀಡುವ ಮಾತನ್ನಾಡಿದ್ದಾರೆ.</p>



<p>&#8220;ಈ ನಡುವೆ ಕೆಲವೇ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು&#8221; ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.</p>



<p>ಒಟ್ಟಾರೆ ಸರ್ಕಾರ ಮತ್ತು ಗುತ್ತಿಗೆದಾರರ ನಡುವಿನ ತಿಕ್ಕಾಟ ನೋಡಿದರೆ, ಹಿಂದಿನ ಬಿಜೆಪಿ ಸರ್ಕಾರದ 40% ಕಮೀಷನ್ ನ ತನಿಖೆ ಮತ್ತೆ ಬಿಜೆಪಿ ಕೊರಳಿಗೇ ಉರುಳಾಗುವ ಸಾಧ್ಯತೆ ಇದೆ ಎನ್ನಲಾಗಿದೆ.</p>
]]></content:encoded>
					
		
		
			</item>
		<item>
		<title>ಪಿಎಸ್ಐ ಅಕ್ರಮ ನೇಮಕಾತಿ ಹಗರಣ ; ತನಿಖೆಗೆ ಆದೇಶಿಸಿದ ಸರ್ಕಾರ</title>
		<link>https://peepalmedia.com/psi-illegal-recruitment-scamordered-an-investigation/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 22 Jul 2023 03:54:35 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[bjp govt]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[psi scam]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=24180</guid>

					<description><![CDATA[ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತಿ ಹೆಚ್ಚು ಸುದ್ದಿ ಮಾಡಿದ ಹಾಗೂ ದೊಡ್ಡ ದೊಡ್ಡ ಕುಳಗಳ ತಲೆದಂಡಕ್ಕೆ ಕಾರಣ ಆಗಬಹುದಾದ 545 ಪಿಎಸ್ಐ ಅಕ್ರಮ ನೇಮಕಾತಿ ಹಗರಣದ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಮಾಜಿ ಮುಖ್ಯಮಂತ್ರಿ, ಬಸವರಾಜ ಬೊಮ್ಮಾಯಿ ಅವರ ಅವಧಿಯ ಸರ್ಕಾರದಲ್ಲಿ ವ್ಯಾಪಕವಾಗಿ ಸದ್ದು ಮಾಡಿದ್ದ 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ಏಕ ಸದಸ್ಯ ತನಿಖಾ ಆಯೋಗವನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.&#160;ಪಿಎಸ್ಐ ನೇಮಕಾತಿ ಪರೀಕ್ಷಾ [&#8230;]]]></description>
										<content:encoded><![CDATA[
<p>ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತಿ ಹೆಚ್ಚು ಸುದ್ದಿ ಮಾಡಿದ ಹಾಗೂ ದೊಡ್ಡ ದೊಡ್ಡ ಕುಳಗಳ ತಲೆದಂಡಕ್ಕೆ ಕಾರಣ ಆಗಬಹುದಾದ 545 ಪಿಎಸ್ಐ ಅಕ್ರಮ ನೇಮಕಾತಿ ಹಗರಣದ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.</p>



<p>ಮಾಜಿ ಮುಖ್ಯಮಂತ್ರಿ, ಬಸವರಾಜ ಬೊಮ್ಮಾಯಿ ಅವರ ಅವಧಿಯ ಸರ್ಕಾರದಲ್ಲಿ ವ್ಯಾಪಕವಾಗಿ ಸದ್ದು ಮಾಡಿದ್ದ 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ಏಕ ಸದಸ್ಯ ತನಿಖಾ ಆಯೋಗವನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.&nbsp;ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದ ತನಿಖೆಯನ್ನು 3 ತಿಂಗಳೊಳಗೆ ಪೂರ್ಣಗೊಳಿಸಲು ಬಿ.ವೀರಪ್ಪ ನೇತೃತ್ವದ ಏಕ ಸದಸ್ಯ ಪೀಠಕ್ಕೆ ಕರ್ನಾಟಕ ಸರ್ಕಾರ ಸೂಚಿಸಿದೆ.</p>



<p>ಕಳೆದ ಅವಧಿಯಲ್ಲಿ ಬಿಜೆಪಿ ಸರ್ಕಾರ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ಬೃಹತ್‌ ಹೋರಾಟವನ್ನೇ ನಡೆಸಿತ್ತು. ಕಾಂಗ್ರೆಸ್ ಸರ್ಕಾರ ಬಂದರೆ ತಪ್ಪದೇ ಇದರ ತನಿಖೆ ನಡೆಸುತ್ತೇವೆ ಎಂದೇ ಕಾಂಗ್ರೆಸ್ ಪಕ್ಷ ಹೇಳಿಕೊಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚನೆಯಾದ ದಿನದಿಂದಲೂ ಪಿಎಸ್ಐ ನೇಮಕಾತಿ ಹಗರಣದ ತನಿಖೆಯ ಬಗ್ಗೆ ಮಾತುಗಳು ಕೇಳಿಬಂದಿತ್ತು. ಅದಕ್ಕೆ ಸರಿಯಾಗಿ ಈಗ ಸರ್ಕಾರ ತನಿಖೆಗೆ ಆದೇಶಿಸಿದೆ.</p>



<figure class="wp-block-image size-full"><img fetchpriority="high" decoding="async" width="640" height="479" src="https://peepalmedia.com/wp-content/uploads/2023/07/images-2023-07-22T091558.545-1.jpeg" alt="" class="wp-image-24181" srcset="https://peepalmedia.com/wp-content/uploads/2023/07/images-2023-07-22T091558.545-1.jpeg 640w, https://peepalmedia.com/wp-content/uploads/2023/07/images-2023-07-22T091558.545-1-300x225.jpeg 300w, https://peepalmedia.com/wp-content/uploads/2023/07/images-2023-07-22T091558.545-1-150x112.jpeg 150w" sizes="(max-width: 640px) 100vw, 640px" /></figure>



<p>ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಜನವರಿ 21, 2021ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅಕ್ಟೋಬರ್‌ 3, 2021 ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಸಿಐಡಿ ತನಿಖೆಗೆ ಒಳಪಡಿಸಿತ್ತು.</p>



<p>ಈಗಾಗಲೇ ನಡೆದ ತನಿಖೆ ಹಿನ್ನೆಲೆಯಲ್ಲಿ 52 ಅಭ್ಯರ್ಥಿಗಳ ಅಕ್ರಮ ಸಾಭೀತಾಗಿದೆ. ಇದರ ಜೊತೆಗೆ ಅನೇಕ ರಾಜಕೀಯ ವ್ಯಕ್ತಿಗಳ ಭಾಗಿಯ ಬಗ್ಗೆಯೂ ತನಿಖೆ ನಡೆಸಲಾಗಿದೆ. 52 ಅಭ್ಯರ್ಥಿಗಳು ಒಳಗೊಂಡಂತೆ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿದ್ದು, ಹೆಚ್ಚುವರಿ ತನಿಖೆಯನ್ನು ಮುಂದುವರಿಸಲಾಗಿದೆ.</p>



<figure class="wp-block-image size-full"><img decoding="async" width="783" height="391" src="https://peepalmedia.com/wp-content/uploads/2023/07/images-2023-07-22T091626.299-1.jpeg" alt="" class="wp-image-24182" srcset="https://peepalmedia.com/wp-content/uploads/2023/07/images-2023-07-22T091626.299-1.jpeg 783w, https://peepalmedia.com/wp-content/uploads/2023/07/images-2023-07-22T091626.299-1-300x150.jpeg 300w, https://peepalmedia.com/wp-content/uploads/2023/07/images-2023-07-22T091626.299-1-768x384.jpeg 768w, https://peepalmedia.com/wp-content/uploads/2023/07/images-2023-07-22T091626.299-1-150x75.jpeg 150w, https://peepalmedia.com/wp-content/uploads/2023/07/images-2023-07-22T091626.299-1-696x348.jpeg 696w" sizes="(max-width: 783px) 100vw, 783px" /></figure>



<p>ಗಂಭೀರ ಸ್ವರೂಪದ ಪ್ರಕರಣ ಇದಾಗಿದ್ದು, ಸಾರ್ವಜನಿಕ ಮಹತ್ವವುಳ್ಳ ವಿಷಯವಾಗಿರುವುದರಿಂದ, ಇನ್ನುಮುಂದೆ ನಡೆಯುವ ಪೊಲೀಸ್ ನೇಮಕಾತಿಗಳು ಅತ್ಯಂತ ಪಾರದರ್ಶಕವಾಗಿ ನಡೆಸುವ ಅಗತ್ಯವಿರುವುದರಿಂದ ಈ ಪ್ರಕರಣದಲ್ಲಿ ನ್ಯಾಯಾಂಗ ತನಿಖೆಯ ಅಗತ್ಯವಿರುವುದನ್ನು ಮನಗಂಡು Commission of enquiry act 1952ರ ನಿಯಮ 3ರ ಉಪ ನಿಯಮ ರನ್ವಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲು ವಿಚಾರಣಾ ಆಯೋಗ ರಚಿಸಲು ಸರ್ಕಾರ ನಿರ್ಧರಿಸಿ, ಈಗ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ಏಕ ಸದಸ್ಯ ತನಿಖಾ ಆಯೋಗವನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.</p>



<p>ಬಹುಶಃ ತನಿಖೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಹಲವು ಮಂದಿ ಇದರಲ್ಲಿ ಭಾಗಿ ಆಗಿರಬಹುದು ಎನ್ನಲಾಗಿದೆ. ಅಷ್ಟೆ ಅಲ್ಲದೆ ಗೃಹ ಸಚಿವ ಆರಗ ಜ್ಞಾನೇಂದ್ರ ಆಪ್ತ ವಲಯದವರೂ ಸಹ ಈ ಪ್ರಕರಣದಲ್ಲಿ ಭಾಗಿ ಆಗಿರುವ ಬಗ್ಗೆಯೂ ಮಾತುಗಳು ಕೇಳಿ ಬಂದಿವೆ. 3 ತಿಂಗಳ ಅವಧಿಯಲ್ಲಿ ಸಿದ್ದವಾಗುವ ವರದಿಯಲ್ಲಿ ಯಾರ್ಯಾರು ಭಾಗಿ ಆಗಿರಬಹುದು ಎಂಬುದು ಮಾತ್ರ ಕುತೂಹಲ ಮೂಡಿಸಿದೆ.</p>
]]></content:encoded>
					
		
		
			</item>
		<item>
		<title>ಕೋವಿಡ್ ಸಾವಿನ ಸಂಖ್ಯೆಯಲ್ಲಿ ಸುಳ್ಳು ಲೆಕ್ಕ ಕೊಟ್ಟ ಬಿಜೆಪಿ ಸರ್ಕಾರ : PAC ವರದಿ (ವರದಿಯಲ್ಲಿವೆ ಆಘಾತಕಾರಿ ಅಂಶಗಳು)</title>
		<link>https://peepalmedia.com/bjp-government-gave-false-count-of-covid-deaths/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 19 Jul 2023 03:56:47 +0000</pubDate>
				<category><![CDATA[ರಾಜ್ಯ]]></category>
		<category><![CDATA[bjp govt]]></category>
		<category><![CDATA[covid 19]]></category>
		<category><![CDATA[Covid Scam]]></category>
		<category><![CDATA[health department]]></category>
		<category><![CDATA[karnataka]]></category>
		<category><![CDATA[PAC]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=23952</guid>

					<description><![CDATA[WHO ಒಪ್ಪಿಗೆ ನೀಡದಿದ್ದರೂ Ivermectin ಟ್ಯಾಬ್ಲೆಟ್ ಗಳನ್ನು ಹೆಚ್ಚು ಪ್ರಮಾಣದಲ್ಲಿ ಖರೀದಿ ಮಾಡಲಾಗಿದೆ. ಪಿಎಂ ಕೇರ್ಸ್ ಫಂಡ್ ಮೂಲಕ ನೀಡಲಾದ ವೆಂಟಿಲೇಟರ್ ಗಳನ್ನು ಖಾಸಗಿ ಆಸ್ಪತ್ರೆಗಳಿಗೆ ನೀಡಲಾಗಿದೆ ಎಂಬುದನ್ನು ಸಮಿತಿ ಕಂಡುಹಿಡಿದಿದೆ. 2020 ಹಾಗೂ 2021 ರ ಅವಧಿಯಲ್ಲಿ ಸಂಭವಿಸಿದ ಭೀಕರ ಕೋವಿಡ್ ಸೋಂಕಿನಲ್ಲಿ ಅಂದಿನ ಬಿಜೆಪಿ ಸರ್ಕಾರ ಮಾಡಿದ ಅಕ್ರಮಗಳನ್ನು PAC ವರದಿ ಬಹಿರಂಗಪಡಿಸಿದೆ. ವಿಶೇಷವಾಗಿ ಆ ಸಂದರ್ಭದಲ್ಲಿ ಆದ ಸಾವಿನ ಸಂಖ್ಯೆಯಲ್ಲಿ ಆಗಿನ ಸರ್ಕಾರ ಕಡಿಮೆ ಲೆಕ್ಕ ನೀಡಿದೆ ಎಂದು ರಾಜ್ಯ ಶಾಸಕಾಂಗದ ಸಾರ್ವಜನಿಕ [&#8230;]]]></description>
										<content:encoded><![CDATA[
<p><strong><mark style="background-color:#ffffff;color:#ee6300" class="has-inline-color"><code>WHO ಒಪ್ಪಿಗೆ ನೀಡದಿದ್ದರೂ Ivermectin ಟ್ಯಾಬ್ಲೆಟ್ ಗಳನ್ನು ಹೆಚ್ಚು ಪ್ರಮಾಣದಲ್ಲಿ ಖರೀದಿ ಮಾಡಲಾಗಿದೆ. ಪಿಎಂ ಕೇರ್ಸ್ ಫಂಡ್ ಮೂಲಕ ನೀಡಲಾದ ವೆಂಟಿಲೇಟರ್ ಗಳನ್ನು ಖಾಸಗಿ ಆಸ್ಪತ್ರೆಗಳಿಗೆ ನೀಡಲಾಗಿದೆ ಎಂಬುದನ್ನು ಸಮಿತಿ ಕಂಡುಹಿಡಿದಿದೆ</code>.</mark></strong></p>



<p>2020 ಹಾಗೂ 2021 ರ ಅವಧಿಯಲ್ಲಿ ಸಂಭವಿಸಿದ ಭೀಕರ ಕೋವಿಡ್ ಸೋಂಕಿನಲ್ಲಿ ಅಂದಿನ ಬಿಜೆಪಿ ಸರ್ಕಾರ ಮಾಡಿದ ಅಕ್ರಮಗಳನ್ನು PAC ವರದಿ ಬಹಿರಂಗಪಡಿಸಿದೆ. ವಿಶೇಷವಾಗಿ ಆ ಸಂದರ್ಭದಲ್ಲಿ ಆದ ಸಾವಿನ ಸಂಖ್ಯೆಯಲ್ಲಿ ಆಗಿನ ಸರ್ಕಾರ ಕಡಿಮೆ ಲೆಕ್ಕ ನೀಡಿದೆ ಎಂದು ರಾಜ್ಯ ಶಾಸಕಾಂಗದ ಸಾರ್ವಜನಿಕ ಲೆಕ್ಕಪತ್ರ ಸಮಿತಿ (PAC) ವರದಿ ತಿಳಿಸಿದೆ.&nbsp;ಜುಲೈ 17, ಸೋಮವಾರ ಕರ್ನಾಟಕ ಅಸೆಂಬ್ಲಿಯಲ್ಲಿ ವರದಿಯನ್ನು ಮಂಡಿಸಿದ ಸಮಿತಿಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೋವಿಡ್ ಸಂದರ್ಭದ ನಿರ್ವಹಣೆಯನ್ನು ತೀವ್ರವಾಗಿ ಟೀಕಿಸಿದೆ.</p>



<p>ಔಷಧಿ ಮತ್ತು ವೈದ್ಯಕೀಯ ಉಪಕರಣಗಳ ಪೂರೈಕೆಗೆ ಬಿಡ್ ಗಳಲ್ಲಿ ಆಯ್ಕೆಯಾದ ಕಂಪನಿಗಳು, ವೈದ್ಯಕೀಯ ಉಪಕರಣಗಳನ್ನು ದುಬಾರಿ ಬೆಲೆಗೆ ಖರೀದಿಸಲಾಗಿದೆ. ಅಗತ್ಯಕ್ಕೆ ಅನುಗುಣವಾಗಿ ಬೇಡಿಕೆ ಇದ್ದ ಔಷಧಿಗಳನ್ನೂ ಪೂರೈಸಿಲ್ಲ. ಅಗತ್ಯವಿಲ್ಲದಿದ್ದಾಗ ಹೆಚ್ಚು ಔಷಧಿಗಳನ್ನು ಖರೀದಿಸಲಾಗಿದೆ ಎಂದು ಸಮಿತಿ ಹೇಳಿದೆ. ಸಮಿತಿಯು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದೆ ಮತ್ತು ಈ ಬಗ್ಗೆ ಸ್ವತಂತ್ರ ತನಿಖೆಗೂ ಕೂಡ ಒತ್ತಾಯಿಸಿದೆ.</p>



<p>ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಹಾಗೂ ಡಾ.ಕೆ.ಸುಧಾಕರ್ ಆರೋಗ್ಯ ಸಚಿವರಾಗಿದ್ದ ಸಂದರ್ಭದ 2020 ರ ಸಂದರ್ಭದಲ್ಲಿ ಮೊದಲು ಕಾಂಗ್ರೆಸ್ ಸಚಿವ ಎಚ್‌ಕೆ ಪಾಟೀಲ್ ನೇತೃತ್ವದಲ್ಲಿ ಮತ್ತು ನಂತರ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ, ಕೋವಿಡ್ -19 ಗೆ ಸಂಬಂಧಿಸಿದ ಔಷಧಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ದುರುಪಯೋಗ ಮತ್ತು ಭ್ರಷ್ಟಾಚಾರದ ಆರೋಪಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಲಾಯಿತು.</p>



<p>ಕೋವಿಡ್ ಕಾರಣದಿಂದಾದ ಸಾವುಗಳು ಸಂಖ್ಯೆ ತೀರಾ ಕಡಿಮೆ ವರದಿ ಮಾಡಿದ್ದಕ್ಕಾಗಿ ಆರೋಗ್ಯ ಇಲಾಖೆಯನ್ನು ಟೀಕಿಸುವ ಸಂದರ್ಭದಲ್ಲಿ, ಇತರ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಸಾವುಗಳು ಹೆಚ್ಚು ಎಂದು ಸಮಿತಿಯು ಕಂಡುಹಿಡಿದಿದೆ.&nbsp;“ದೇಶದ ಬೇರೆ ಮಹಾನಗರಗಳಿಗೆ ಹೋಲಿಸಿದರೆ ಬೆಂಗಳೂರು ನಗರವು ಅತಿ ಹೆಚ್ಚು ಸಾವಿನ ಪ್ರಮಾಣವನ್ನು ಹೊಂದಿದೆ. ಅಷ್ಟೆ ಅಲ್ಲದೆ&nbsp;ಸೋಂಕಿತ ರೋಗಿಗಳನ್ನು ಪತ್ತೆಹಚ್ಚುವಲ್ಲಿ ವಿಳಂಬ, ಪರೀಕ್ಷಾ ಸಾಮರ್ಥ್ಯದಲ್ಲಿ ವಿಫಲ, ಪರೀಕ್ಷಾ ವರದಿಗಳನ್ನು ನೀಡುವಲ್ಲಿ ವಿಳಂಬ, ಔಷಧದ ಕೊರತೆ ಮತ್ತು ಆಮ್ಲಜನಕದ ಕೊರತೆಯಂತಹ ರಾಜ್ಯದ ಚಿಕಿತ್ಸಾ ವ್ಯವಸ್ಥೆಯಲ್ಲಿನ ದೋಷಗಳ ಬಗ್ಗೆಯೂ ಸಮಿತಿ ಬಹಿರಂಗಪಡಿಸಿದೆ.</p>



<p><strong>ಸಾವಿನ ಸಂಖ್ಯೆಯಲ್ಲಿ ಸುಳ್ಳು ಲೆಕ್ಕ</strong><br>ಲೆಕ್ಕಪತ್ರ ಮತ್ತು ಅಂಕಿ ಅಂಶಗಳ ನಿರ್ದೇಶನಾಲಯದಿಂದ ಪಡೆದ ಮಾಹಿತಿಯ ಪ್ರಕಾರ ಜನವರಿಯಿಂದ ಜುಲೈ 2020 ರವರೆಗೆ 2,69,029 ಮತ್ತು ಜನವರಿಯಿಂದ ಜುಲೈ 2021 ರವರೆಗೆ 4,26,943 ಸಾವುಗಳಲ್ಲಿ ಹಿಂದಿನ ಅವಧಿಗಿಂತ 1,57,914 ರಷ್ಟು ಹೆಚ್ಚಳವಾಗಿದೆ ಎಂದು ಸಮಿತಿಯ ತನಿಖಾ ವರದಿ ತೋರಿಸಿದೆ.</p>



<figure class="wp-block-image size-full"><img decoding="async" width="739" height="415" src="https://peepalmedia.com/wp-content/uploads/2023/07/images-2023-07-19T092142.551.jpeg" alt="" class="wp-image-23954" srcset="https://peepalmedia.com/wp-content/uploads/2023/07/images-2023-07-19T092142.551.jpeg 739w, https://peepalmedia.com/wp-content/uploads/2023/07/images-2023-07-19T092142.551-300x168.jpeg 300w, https://peepalmedia.com/wp-content/uploads/2023/07/images-2023-07-19T092142.551-150x84.jpeg 150w, https://peepalmedia.com/wp-content/uploads/2023/07/images-2023-07-19T092142.551-696x391.jpeg 696w" sizes="(max-width: 739px) 100vw, 739px" /></figure>



<p><font style="vertical-align: inherit;"><font style="vertical-align: inherit;">“ಆತಂಕಕಾರಿ ಸಂಗತಿಯೆಂದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಾವಿನ ಸಂಖ್ಯೆ ಕೇವಲ 3206 ಎಂದು ತಪ್ಪು ಮಾಹಿತಿ ನೀಡಲಾಗಿದೆ. </font><font style="vertical-align: inherit;">ಸುಮಾರು 1,20,708% ಇದ್ದ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ಅಧಿಕಾರಿಗಳು ಘೋರ ಅನ್ಯಾಯ ಮತ್ತು ಅಪರಾಧ ಮಾಡಿದ್ದಾರೆ ಎಂದು ಸಮಿತಿ ಅಭಿ</font></font>ಪ್ರಾಯ<font style="vertical-align: inherit;"><font style="vertical-align: inherit;"> ಪಟ್ಟಿ ಮಾಡಿದೆ. </font><font style="vertical-align: inherit;">ಈ ಮೃತರ ಕುಟುಂಬಗಳನ್ನು ಗುರುತಿಸಿ ಅವರಿಗೆ ಪರಿಹಾರ ನೀಡಲು ಪ್ರಯತ್ನಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.</font></font></p>



<p><strong>ಐವರ್ಮೆಕ್ಟಿನ್ ಔಷಧಿ ಖರೀದಿ ಗೊಂದಲ ಮತ್ತು ಭ್ರಷ್ಟಾಚಾರ</strong><br>ಕೋವಿಡ್-19 ಚಿಕಿತ್ಸೆಗಾಗಿ ಶಿಫಾರಸು ಮಾಡಲಾದ ಐವರ್‌ಮೆಕ್ಟಿನ್ ಟ್ಯಾಬ್ಲೆಟ್ ಅನ್ನು ಇಲಾಖೆಯು ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿದೆ ಎಂದು ಸಮಿತಿಯು ಕಂಡುಹಿಡಿದಿದೆ. 2021 ರ ಸಂದರ್ಭದಲ್ಲಿ WHO, &#8216;ಕೋವಿಡ್ ಸೋಂಕಿತರಿಗೆ ಐವರ್ಮೆಕ್ಟಿನ್ ಔಷಧಿ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ&#8217; ಎಂದು ಐವರ್ಮೆಕ್ಟಿನ್ ಔಷಧಿ ಬಗ್ಗೆ ಎಚ್ಚರಿಕೆ ನೀಡಿದ್ದರೂ ಸಹ ಇಲಾಖೆ WHO ಎಚ್ಚರಿಕೆಯನ್ನು ಬದಿಗೊತ್ತಿ ಅದೇ ಔಷಧಿಗಳನ್ನು ಖರೀದಿ ಮಾಡಿದೆ‌. ಏಪ್ರಿಲ್ 2021 ರಲ್ಲಿ, WHO ಎಚ್ಚರಿಕೆ ನೀಡಿದ ನಂತರವೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 1.10 ಕೋಟಿ ಮಾತ್ರೆಗಳನ್ನು ಖರೀದಿಸಿದೆ.&nbsp;ಖರೀದಿಗೆ ಖರ್ಚು ಮಾಡಿದ ಮೊತ್ತ ಮತ್ತು ಅದನ್ನು ರಾಜ್ಯದಲ್ಲಿ ಎಲ್ಲಿ ವಿತರಿಸಲಾಗಿದೆ ಎಂಬ ಬಗ್ಗೆ PAC ಮಾಹಿತಿ ನೀಡಿಲ್ಲ.</p>



<figure class="wp-block-image size-full"><img loading="lazy" decoding="async" width="711" height="400" src="https://peepalmedia.com/wp-content/uploads/2023/07/images-2023-07-19T090846.544.jpeg" alt="" class="wp-image-23955" srcset="https://peepalmedia.com/wp-content/uploads/2023/07/images-2023-07-19T090846.544.jpeg 711w, https://peepalmedia.com/wp-content/uploads/2023/07/images-2023-07-19T090846.544-300x169.jpeg 300w, https://peepalmedia.com/wp-content/uploads/2023/07/images-2023-07-19T090846.544-150x84.jpeg 150w, https://peepalmedia.com/wp-content/uploads/2023/07/images-2023-07-19T090846.544-696x392.jpeg 696w" sizes="auto, (max-width: 711px) 100vw, 711px" /></figure>



<p>ಈ ಹಿನ್ನೆಲೆಯಲ್ಲಿ ಎಚ್ಚರಿಕೆಯನ್ನು ನಿರ್ಲಕ್ಷಿಸಿದ ಮತ್ತು ಅನುಮಾನಾಸ್ಪದ ರೋಗಿಗಳಿಗೆ ಚಿಕಿತ್ಸಾ ವಿಧಾನವಾಗಿ ಶಿಫಾರಸು ಮಾಡುವುದನ್ನು ಮುಂದುವರಿಸಿದ ಅಧಿಕಾರಿಗಳನ್ನು ಪರಿಶೀಲಿಸಿ, ತನಿಖೆ ನಡೆಸಿ ಶಿಕ್ಷೆಗೆ ಗುರಿಪಡಿಸುವಂತೆ PAC ಶಿಫಾರಸು ಮಾಡಿದೆ.&nbsp;</p>



<p><strong>ವೆಂಟಿಲೇಟರ್ ಹಗರಣ</strong><br>ಮೊದಲಿನಿಂದಲೂ ಗೊಂದಲದ ಗೂಡಾಗಿದ್ದ, ಇಂದಿಗೂ ಸಹ ಅದರ ಮಾಹಿತಿಯ ಬಗ್ಗೆ ಗೌಪ್ಯತೆ ತೋರ್ಪಡಿಸುವ ಪಿಎಂ ಕೇರ್ಸ್&nbsp;ಫಂಡ್ ಬಗ್ಗೆಯೂ ಸಮಿತಿಯ ವರದಿ ಸಿದ್ದಪಡಿಸಿದೆ. ಅದರಂತೆ ಪಿಎಂ ಕೇರ್ಸ್ ಫಂಡ್ ಅಡಿಯಲ್ಲಿ ಕರ್ನಾಟಕಕ್ಕೆ ನೀಡಲಾದ ಸುಮಾರು 165 ವೆಂಟಿಲೇಟರ್‌ಗಳನ್ನು ಖಾಸಗಿ ಆಸ್ಪತ್ರೆಗಳಿಗೆ ನೀಡಲಾಗಿದೆ. ಇದು ಸ್ಪಷ್ಟವಾಗಿ ನ್ಯಾಯಸಮ್ಮತವಲ್ಲ ಎಂದು PAC ಹೇಳಿದೆ. ಇಷ್ಟಾದರೂ ಬಡ ಮತ್ತು ಮಧ್ಯಮ ವರ್ಗದ, ಆರ್ಥಿಕವಾಗಿ ಸಬಲರಲ್ಲದ ರೋಗಿಗಳು ಖಾಸಗಿ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲೂ&nbsp;ಖಾಸಗಿ ಆಸ್ಪತ್ರೆಗಳು ತಮ್ಮ ವೆಚ್ಚದಲ್ಲಿ ಯಾವುದೇ ವಿನಾಯಿತಿ ನೀಡದೇ ಬಡವರಿಂದ ಸುಲಿಗೆ ಮಾಡಿವೆ.&nbsp;ಇಲಾಖೆಯ ಅಧಿಕಾರಿಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾಗಿ ಸಾರ್ವಜನಿಕ ಹಿತಾಸಕ್ತಿ ಕಡೆಗಣಿಸಿದ್ದಾರೆ ಎಂದು ಸಮಿತಿ ಹೇಳಿದೆ.</p>



<figure class="wp-block-image size-large"><img loading="lazy" decoding="async" width="1024" height="576" src="https://peepalmedia.com/wp-content/uploads/2023/07/ventilators3-1024x576.jpg" alt="" class="wp-image-23957" srcset="https://peepalmedia.com/wp-content/uploads/2023/07/ventilators3-1024x576.jpg 1024w, https://peepalmedia.com/wp-content/uploads/2023/07/ventilators3-300x169.jpg 300w, https://peepalmedia.com/wp-content/uploads/2023/07/ventilators3-768x432.jpg 768w, https://peepalmedia.com/wp-content/uploads/2023/07/ventilators3-150x84.jpg 150w, https://peepalmedia.com/wp-content/uploads/2023/07/ventilators3-696x392.jpg 696w, https://peepalmedia.com/wp-content/uploads/2023/07/ventilators3-1068x601.jpg 1068w, https://peepalmedia.com/wp-content/uploads/2023/07/ventilators3.jpg 1200w" sizes="auto, (max-width: 1024px) 100vw, 1024px" /></figure>



<p>&#8216;ಅನೇಕ ಖಾಸಗಿ ಆಸ್ಪತ್ರೆಗಳು ಸೋಂಕಿತರ ಚಿಕಿತ್ಸೆಗಾಗಿ ಇಲಾಖೆ ನಿಗದಿಪಡಿಸಿದ ದರ ಪಟ್ಟಿಯನ್ನು ಅನುಸರಿಸದೆ ಸಾರ್ವಜನಿಕರಿಂದ ಹೆಚ್ಚಿನ ದರದಲ್ಲಿ ಹಣವನ್ನು ಸುಲಿಗೆ ಮಾಡಿವೆ ಮತ್ತು ಕೆಲವು ಸಂದರ್ಭಗಳಲ್ಲಿ ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಿಂದಿರುಗಿಸಲು ಹೆಚ್ಚಿನ ಹಣಕ್ಕಾಗಿ ಬೇಡಿಕೆ ಇಟ್ಟಿವೆ,&#8217; ಎಂದು ಸಮಿತಿ ಹೇಳಿದೆ. ಕೋವಿಡ್ ಮೊದಲ ಅಲೆಯಲ್ಲಿ ಎಚ್ಚೆತ್ತುಕೊಳ್ಳಬೇಕಾದ ಇಲಾಖೆ ಎರಡನೇ ಅಲೆಯಲ್ಲೂ ಎಚ್ಚೆತ್ತುಕೊಳ್ಳದ ಬಗ್ಗೆ ಸಮಿತಿಯು ಆಕ್ರೋಶ ವ್ಯಕ್ತಪಡಿಸಿದೆ. ಎರಡನೇ ಅಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಾಗ ವೆಂಟಿಲೇಟರ್‌ಗಳ ಅಲಭ್ಯತೆ, ಆಕ್ಸಿಜನ್ ಅಲಭ್ಯತೆ ಮತ್ತು ಪರಿಹಾರ ಸಾಧನಗಳ ಲಭ್ಯತೆಯಿಲ್ಲ ಎಂದು ಅದು ಸೂಚಿಸಿದೆ.</p>



<p>ಇಂತಹ ಗಂಭೀರ ಪರಿಸ್ಥಿತಿಯ ಹೊರತಾಗಿಯೂ, ಅಧಿಕಾರಿಗಳು ಸಮಿತಿಗೆ ನೀಡಿದ ಉತ್ತರದಲ್ಲಿ &#8220;ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್‌ಗಳ ಕೊರತೆಯಿಲ್ಲ&#8221; ಎಂದು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಸಮಿತಿಯು ತನ್ನ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.</p>



<p><strong>ವೈದ್ಯಕೀಯ ಉಪಕರಣಗಳ ಖರೀದಿಯಲ್ಲೂ ಭ್ರಷ್ಟಾಚಾರ</strong><br>ತುರ್ತು ಸಂದರ್ಭದ ಹೆಲ್ತ್ ಕಿಟ್ ಗಳು, ರಕ್ತ ಪರೀಕ್ಷೆಯ ಕಿಟ್ ಗಳು, ಯುಪಿಎಸ್‌ನಂತಹ ಉಪಕರಣಗಳ ಖರೀದಿಯಲ್ಲಿ ಇತರ ರಾಜ್ಯಗಳಾದ ಕೇರಳ, ತಮಿಳುನಾಡು ಮತ್ತು ಹಿಮಾಚಲ ಪ್ರದೇಶಕ್ಕೆ ಹೋಲಿಸಿದರೆ ಇಲಾಖೆಯು ಹೆಚ್ಚಿನ ವೆಚ್ಚದಲ್ಲಿ ಉಪಕರಣಗಳನ್ನು ಖರೀದಿಸಿದೆ ಎಂದು ಸಮಿತಿಯು ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.&nbsp;ಕೆಲವು ಸಲಕರಣೆಗಳಿಗೆ ಅವಶ್ಯಕತೆ ಇಲ್ಲದಿದ್ದರೂ ಬಿಡ್‌ಗಳನ್ನು ಹಾಕಲಾಗಿದೆ. ಉಪಕರಣಗಳ ಆರ್ಡರ್‌ಗಳ ಒಂದು ಭಾಗವನ್ನು ಮಾತ್ರ ಪೂರೈಸಿದ ಸಂಸ್ಥೆಗಳನ್ನು ಈವರೆಗೂ ಕಪ್ಪುಪಟ್ಟಿಗೆ ಸೇರಿಸಲಾಗಿಲ್ಲ. ಪರೀಕ್ಷೆಯ ಸಂದರ್ಭದಲ್ಲಿ ದೋಷಯುಕ್ತ ಉತ್ಪನ್ನಗಳು ಕಂಡುಬಂದ ಕಂಪನಿಗಳೊಂದಿಗೇ ಮತ್ತೆ ವ್ಯವಹಾರ ನಡೆಸಲಾಗಿದೆ. ಒಟ್ಟಾರೆ ಯಾವುದೇ ವೈದ್ಯಕೀಯ ಉಪಕರಣಗಳ ಸಂಗ್ರಹಣೆಯಲ್ಲಿ ಇಲಾಖೆ ಪಾರದರ್ಶಕತೆ ತೋರಿಲ್ಲ ಎಂದು ಸಮಿತಿ ಹೇಳಿದೆ.</p>



<figure class="wp-block-image size-full"><img loading="lazy" decoding="async" width="743" height="413" src="https://peepalmedia.com/wp-content/uploads/2023/07/images-2023-07-19T090640.936.jpeg" alt="" class="wp-image-23958" srcset="https://peepalmedia.com/wp-content/uploads/2023/07/images-2023-07-19T090640.936.jpeg 743w, https://peepalmedia.com/wp-content/uploads/2023/07/images-2023-07-19T090640.936-300x167.jpeg 300w, https://peepalmedia.com/wp-content/uploads/2023/07/images-2023-07-19T090640.936-150x83.jpeg 150w, https://peepalmedia.com/wp-content/uploads/2023/07/images-2023-07-19T090640.936-696x387.jpeg 696w" sizes="auto, (max-width: 743px) 100vw, 743px" /></figure>



<p><strong>ಬ್ಲಾಕ್ ಫಂಗಸ್ ಚಿಕಿತ್ಸೆಯಲ್ಲೂ ಗೊಂದಲ</strong><br>ಕೋವಿಡ್ ಸಾಂಕ್ರಾಮಿಕದ ನಂತರ ಕಂಡುಬಂದ ಬ್ಲಾಕ್ ಫಂಗಸ್ ಪರೀಕ್ಷೆಯಲ್ಲೂ ಸಹ ಇಲಾಖೆಯ ಅವ್ಯವಹಾರವನ್ನು PAC ವರದಿ ನೀಡಿದೆ. ಬ್ಲಾಕ್ ಫಂಗಸ್ ಚಿಕಿತ್ಸೆಯಲ್ಲಿ ಬಳಸಲಾಗುವ ಆಂಫೊಟೆರಿಸಿನ್ ಔಷಧಿಯ 25,000 ಬಾಟಲುಗಳನ್ನು ಅತಿ ಕಡಿಮೆ 2 ನೇ ಬಿಡ್ ದಾರ ಮೈಲಾನ್ ಫಾರ್ಮಾಸ್ಯುಟಿಕಲ್ಸ್‌ನೊಂದಿಗೆ ಹೆಚ್ಚಿನ ಬೆಲೆಗೆ ಖರೀದಿಸಲು ಇಲಾಖೆ ಆದೇಶ ನೀಡಿದೆ ಎಂದು PAC ಕಂಡುಹಿಡಿದಿದೆ.</p>



<p>&#8220;ಭಾರತ್ ಸೀರಮ್ಸ್ ಮತ್ತು ಲಸಿಕೆಗಳಿಂದ ಆರ್ಡರ್ ಮಾಡಿದ 50,000 ಬಾಟಲುಗಳಲ್ಲಿ, ಅವರು ಹೆಚ್ಚು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿಲ್ಲ ಎಂದು ಹೇಳುವ ಮೂಲಕ ಕೇವಲ 1,092 ಬಾಟಲುಗಳನ್ನು ಪೂರೈಸಿದ್ದಾರೆ.&nbsp;ಅವರು ತಮ್ಮ ಆದೇಶಗಳನ್ನು ಪೂರೈಸಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಯಾವುದೇ ಪ್ರಯತ್ನಗಳನ್ನು ಮಾಡಲಾಗಿಲ್ಲ,&#8221; PAC ಗಮನಿಸಿದೆ.</p>



<p>ಔಷಧಿಗಳನ್ನು ಹೆಚ್ಚಿನ ಬೆಲೆಗೆ ಖರೀದಿಸಿ, ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯುವಲ್ಲಿ ಇಲಾಖೆ ವಿಫಲವಾಗಿದೆ.&nbsp;ಕೋವಿಡ್-19 ಸಮಯದಲ್ಲಿ ಮಾಡಿದ ಅನೇಕ ಖರೀದಿಗಳಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಮಾಹಿತಿಯನ್ನು ಇಲಾಖೆಯಿಂದ ಪಡೆಯುವಲ್ಲಿ ವಿಫಲವಾಗಿದೆ ಎಂದು PAC ಸಮಿತಿಯು ಬಹಿರಂಗಪಡಿಸಿದೆ. ಹಾಗೂ ಒಟ್ಟಾರೆ ಈ ವರದಿಗೆ ಅನುಗುಣವಾಗಿ ಸ್ವತಂತ್ರ ತನಿಖೆಗೆ ಆದೇಶಿಸುವಂತೆ ಶಿಫಾರಸು ಮಾಡಲಾಗಿದೆ.<br><strong>(ಆಧಾರ : TNM ಮತ್ತು PAC ವರದಿ)</strong></p>
]]></content:encoded>
					
		
		
			</item>
		<item>
		<title>ಹಿರಿಯ ನಾಗರಿಕರ ಪಿಂಚಣಿ, ಅಂಗವಿಕಲರ ಮಾಸಾಶನ ಬಾಕಿ: ಎಎಪಿ ಖಂಡನೆ</title>
		<link>https://peepalmedia.com/arrears-of-pension-for-senior-citizens-disabled-persons-aap-condemns/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 03 Dec 2022 09:02:28 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[AAP]]></category>
		<category><![CDATA[bengalure]]></category>
		<category><![CDATA[bjp govt]]></category>
		<category><![CDATA[cm bhammai]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=17404</guid>

					<description><![CDATA[ಬೆಂಗಳೂರು : ಹಿರಿಯ ನಾಗರಿಕರಿಗೆ ಪಿಂಚಣಿ ಹಾಗೂ ಅಂಗವಿಕಲರಿಗೆ ಮಾಸಾಶಾನ ನೀಡಲೂ ಸಾಧ್ಯವಾಗದಷ್ಟು ರಾಜ್ಯ ಬಿಜೆಪಿ ಸರ್ಕಾರ ದಿವಾಳಿಯಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿಯವರು ತಾವು ಹೋದ ಕಡೆಯೆಲ್ಲ ಯೋಜನೆಗಳಿಗೆ ಕೇವಲ ಶಂಕುಸ್ಥಾಪನೆ ಮಾಡುತ್ತಾ ಜನರನ್ನು ವಂಚಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಟಿ.ನಾಗಣ್ಣ, “ರಾಜ್ಯ ಸರ್ಕಾರವು ಕಳೆದ ನಾಲ್ಕು ತಿಂಗಳಿನಿಂದ ಹಿರಿಯ ನಾಗರಿಕರಿಗೆ ಪಿಂಚಣಿ ನೀಡಿಲ್ಲ. ಅಂಗವಿಕಲರಿಗೆ ಮಾಸಾಶನವನ್ನೂ ಸರ್ಕಾರ ನೀಡುತ್ತಿಲ್ಲ. ಅಂಗವಿಕಲರಿಗೆ 2,000 ರೂಪಾಯಿ ಮಾಸಾಶನ ನೀಡುವ [&#8230;]]]></description>
										<content:encoded><![CDATA[
<p><strong>ಬೆಂಗಳೂರು :</strong> ಹಿರಿಯ ನಾಗರಿಕರಿಗೆ ಪಿಂಚಣಿ ಹಾಗೂ ಅಂಗವಿಕಲರಿಗೆ ಮಾಸಾಶಾನ ನೀಡಲೂ ಸಾಧ್ಯವಾಗದಷ್ಟು ರಾಜ್ಯ ಬಿಜೆಪಿ ಸರ್ಕಾರ ದಿವಾಳಿಯಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿಯವರು ತಾವು ಹೋದ ಕಡೆಯೆಲ್ಲ ಯೋಜನೆಗಳಿಗೆ ಕೇವಲ ಶಂಕುಸ್ಥಾಪನೆ ಮಾಡುತ್ತಾ ಜನರನ್ನು ವಂಚಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಹೇಳಿದರು.</p>



<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಟಿ.ನಾಗಣ್ಣ, “ರಾಜ್ಯ ಸರ್ಕಾರವು ಕಳೆದ ನಾಲ್ಕು ತಿಂಗಳಿನಿಂದ ಹಿರಿಯ ನಾಗರಿಕರಿಗೆ ಪಿಂಚಣಿ ನೀಡಿಲ್ಲ. ಅಂಗವಿಕಲರಿಗೆ ಮಾಸಾಶನವನ್ನೂ ಸರ್ಕಾರ ನೀಡುತ್ತಿಲ್ಲ. ಅಂಗವಿಕಲರಿಗೆ 2,000 ರೂಪಾಯಿ ಮಾಸಾಶನ ನೀಡುವ ಸರ್ಕಾರದ ಭರವಸೆಯು ಕೇವಲ ಘೋಷಣೆಯಾಗಿ ಉಳಿದಿದೆಯೇ ಹೊರತು ಜಾರಿಗೆ ಬರುತ್ತಿಲ್ಲ. ಬಿಜೆಪಿ ಶಾಸಕರು ಹಾಗೂ ಸಚಿವರ ಭ್ರಷ್ಟಾಚಾರದಿಂದಾಗಿ ಸರ್ಕಾರದ ಬೊಕ್ಕಸ ಬರಿದಾಗಿದೆ. ಆದ್ದರಿಂದಲೇ ಸಿಎಂ ಬಸವರಾಜ ಬೊಮ್ಮಾಯಿಯವರು ಯೋಜನೆಗಳನ್ನು ಜಾರಿಗೆ ತರುವ ಬದಲು ಕೇವಲ ಘೋಷಣೆ ಹಾಗೂ ಶಂಕುಸ್ಥಾಪನೆಯಲ್ಲೇ ಕಾಲ ಕಳೆಯುತ್ತಿದ್ದಾರೆ” ಎಂದು ಹೇಳಿದರು.</p>



<p>“ಆರ್ಥಿಕ ಶಿಸ್ತು ಕಾಪಾಡಿಕೊಳ್ಳುವುದರಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಮುಂತಾದವರು ಬೀದಿಗಿಳಿದು ಪ್ರತಿಭಟಿಸಿದರೆ ಮಾತ್ರ ಅವರಿಗೆ ಸಂಬಳ ಸಿಗುತ್ತದೆ. ಇಲ್ಲದಿದ್ದರೆ ಐದಾರು ತಿಂಗಳ ವೇತನ ಬಾಕಿಯಿದ್ದರೂ ಸರ್ಕಾರ ಈ ಕುರಿತು ತಲೆ ಕೆಡಿಸಿಕೊಳ್ಳುವುದಿಲ್ಲ. ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಕೂಡ ಅನುದಾನ ಬಿಡುಗಡೆ ಮಾಡದೇ, ಅವರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿರುವುದು ಖಂಡನೀಯ. ಭ್ರಷ್ಟ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವ ತನಕ ರಾಜ್ಯದ ಹಾಗೂ ಜನಸಾಮಾನ್ಯರ ಆರ್ಥಿಕ ಸ್ಥಿತಿ ಸುಧಾರಿಸಲು ಸಾಧ್ಯವಿಲ್ಲ” ಎಂದು ಬಿ.ಟಿ.ನಾಗಣ್ಣ ಹೇಳಿದರು.</p>
]]></content:encoded>
					
		
		
			</item>
		<item>
		<title>ಬಿಜೆಪಿ ಬೆಂಬಲಿತ ಅತ್ಯಾಚಾರಿಗಳ ಒಳ್ಳೆಯ ಗುಣ ಮತ್ತು ಅದರಾಚೆಗಿನ ಸತ್ಯಗಳು</title>
		<link>https://peepalmedia.com/good-nature-of-bjp-backed-rapists-and-the-truth-behind-it/</link>
		
		<dc:creator><![CDATA[Peepal Media]]></dc:creator>
		<pubDate>Thu, 20 Oct 2022 04:35:10 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[Bilkis Bano]]></category>
		<category><![CDATA[bjp govt]]></category>
		<category><![CDATA[gujarath]]></category>
		<category><![CDATA[india]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=12026</guid>

					<description><![CDATA[2002 ರ ಗುಜರಾತ್ ಗಲಭೆಯಲ್ಲಿ ಗರ್ಭಿಣಿ ಹೆಣ್ಣು ಮಗಳಾಗಿದ್ದ ಬಿಲ್ಕಿಸ್ ಬಾನೋ ಮೇಲೆ ಅತ್ಯಾಚಾರ ಮತ್ತು ಆಕೆಯ ಇಡೀ ಕುಟುಂಬವನ್ನು ಕೊಂದ 11 ಮಂದಿ ಅಪರಾಧಿಗಳನ್ನು &#8220;ಸನ್ನಡತೆ&#8221; ಆಧಾರದಲ್ಲಿ ಗುಜರಾತ್ ಸರ್ಕಾರ ಬಿಡುಗಡೆ ಮಾಡಿತ್ತು. ವ್ಯಾಪಕ ಟೀಕೆ ಮತ್ತು ಕಾನೂನು ಸಮರಕ್ಕೆ ಕೈ ಇಟ್ಟ ನಂತರ ಅಪರಾಧಿಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ಅನುಮೋದನೆ ಸಿಕ್ಕ ಬಗೆಗಿನ ಆತಂಕಕಾರಿ ವಿಚಾರ ಕೂಡಾ ಹೊರಬಿದ್ದಿತ್ತು. ಆದರೆ ಅಪರಾಧಿಗಳ &#8220;ಸನ್ನಡತೆ&#8221;ಯ ಬಿಡುಗಡೆಗೂ ಮುನ್ನ ಪ್ರಕರಣ ವಿಚಾರಣೆ ಹಂತದಲ್ಲಿದ್ದಾಗ ಪೆರೋಲ್‌ನಲ್ಲಿರುವಾಗಲೇ ಅಪರಾಧಿಗಳು ಈ [&#8230;]]]></description>
										<content:encoded><![CDATA[
<p style="font-size:20px">2002 ರ ಗುಜರಾತ್ ಗಲಭೆಯಲ್ಲಿ ಗರ್ಭಿಣಿ ಹೆಣ್ಣು ಮಗಳಾಗಿದ್ದ ಬಿಲ್ಕಿಸ್ ಬಾನೋ ಮೇಲೆ ಅತ್ಯಾಚಾರ ಮತ್ತು ಆಕೆಯ ಇಡೀ ಕುಟುಂಬವನ್ನು ಕೊಂದ 11 ಮಂದಿ ಅಪರಾಧಿಗಳನ್ನು &#8220;ಸನ್ನಡತೆ&#8221; ಆಧಾರದಲ್ಲಿ ಗುಜರಾತ್ ಸರ್ಕಾರ ಬಿಡುಗಡೆ ಮಾಡಿತ್ತು. ವ್ಯಾಪಕ ಟೀಕೆ ಮತ್ತು ಕಾನೂನು ಸಮರಕ್ಕೆ ಕೈ ಇಟ್ಟ ನಂತರ ಅಪರಾಧಿಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ಅನುಮೋದನೆ ಸಿಕ್ಕ ಬಗೆಗಿನ ಆತಂಕಕಾರಿ ವಿಚಾರ ಕೂಡಾ ಹೊರಬಿದ್ದಿತ್ತು.</p>



<p style="font-size:20px">ಆದರೆ ಅಪರಾಧಿಗಳ &#8220;ಸನ್ನಡತೆ&#8221;ಯ ಬಿಡುಗಡೆಗೂ ಮುನ್ನ ಪ್ರಕರಣ ವಿಚಾರಣೆ ಹಂತದಲ್ಲಿದ್ದಾಗ ಪೆರೋಲ್‌ನಲ್ಲಿರುವಾಗಲೇ ಅಪರಾಧಿಗಳು ಈ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಮತ್ತು ಕಿರುಕುಳ ನೀಡಿದ ದೂರುಗಳ ಬಗೆಗಿನ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಇದು &#8220;ಸನ್ನಡತೆ&#8221;ಯ ಸಮರ್ಥನೆಗೆ ವಿರುದ್ಧವಾಗಿದೆ. ಈ ನಡುವೆ ಅಪರಾಧಿಗಳು ಶಿಕ್ಷೆ ಅನುಭವಿಸುತ್ತಿರುವಾಗ ಅವರು ಯಾವುದೇ ತಪ್ಪು ಎಸಗಿಲ್ಲ, ಜೊತೆಗೆ ಈ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಗುಜರಾತ್ ಸರ್ಕಾರ ಈಗಾಗಲೇ ಹೇಳಿಕೊಂಡಿತ್ತು.</p>



<p style="font-size:20px">ಆದರೆ 2017 ರಿಂದ 2021 ರ ನಡುವೆ, ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳ ವಿರುದ್ಧ ಪ್ರಕರಣದ ಸಾಕ್ಷಿಗಳು ದೂರುಗಳನ್ನು ನೀಡಿದ್ದು ಮತ್ತು ಈ ಬಗ್ಗೆ ಎಫ್‌ಐಆರ್‌ ಕೂಡಾ ದಾಖಲಿಸಿದ್ದು ಗುಜರಾತ್ ಪೊಲೀಸ್ ಇಲಾಖೆಯ ಕಡತಗಳಲ್ಲೇ ಇನ್ನೂ ಜೀವಂತವಾಗಿದೆ.</p>



<p style="font-size:20px">ಜುಲೈ 6, 2020 ರಂದು ಇಬ್ಬರು ಅಪರಾಧಿಗಳಾದ ರಾಧೇಶ್ಯಾಮ್ ಶಾ ಮತ್ತು ಮಿತೇಶ್‌ಭಾಯ್ ಭಟ್ ವಿರುದ್ಧ ಬಿಲ್ಕಿಸ್ ಬಾನೋ ಪ್ರಕರಣದ ಪ್ರಮುಖ ಸಾಕ್ಷಿಗಳಾದ ಪಿಂಟುಭಾಯ್ ದೂರು ನೀಡಿದ್ದರು. ಈ ಬಗ್ಗೆ ಐಪಿಸಿ ಸೆಕ್ಷನ್‌ 354 (ಹಲ್ಲೆ ಅಥವಾ ಕ್ರಿಮಿನಲ್‌ ಹಿನ್ನೆಲೆ), 504 (ಬೆದರಿಕೆ), 506 (2) (ಕೊಲೆ ಬೆದರಿಕೆ) ಮತ್ತು 114 (ಪ್ರಚೋದನೆ) ಅಡಿಯಲ್ಲಿ ದಾಹೋದ್‌ನ ರಾಧಿಕಪುರ ಪೊಲೀಸ್ ಠಾಣೆಯಲ್ಲಿ ಅಪರಾಧಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.</p>



<figure class="wp-block-image size-full is-resized"><img loading="lazy" decoding="async" src="https://peepalmedia.com/wp-content/uploads/2022/10/20221019_170036.jpg" alt="" class="wp-image-12030" width="495" height="638"/></figure>



<p style="font-size:20px">ಇಬ್ಬರು ಅಪರಾಧಿಗಳಾದ ರಾಧೇಶ್ಯಾಮ್, ಮಿಥೇಶ್ ಭಾಯ್ ಭಟ್ ಮತ್ತು ಮತ್ತೊಬ್ಬ ಆರೋಪಿ ಆಶಿಶ್ ಸೇರಿದಂತೆ ಮೂವರು ವ್ಯಕ್ತಿಗಳು, ಸಬೆರಾಬೆನ್ ಮತ್ತು ಆಕೆಯ ಮಗಳು ಅರ್ಫಾ ಮತ್ತು ಸಾಕ್ಷಿ ಪಿಂಟೂಭಾಯ್‌ಗೆ ಬೆದರಿಕೆ ಹಾಕಿದ್ದಾರೆ ಎಂದು ಈಗ ಬೆಳಕಿಗೆ ಬಂದ ಎಫ್‌ಐಆರ್ ಹೇಳುತ್ತದೆ. ಮತ್ತೊಬ್ಬ ಸಾಕ್ಷಿಯಾದ ಮನ್ಸೂರಿ ಅಬ್ದುಲ್ ರಜಾಕ್, ಅಬ್ದುಲ್ ಮಜೀದ್ ಅವರು ಜನವರಿ 1, 2021 ರಂದು ಸೈಲೇಶ್ ಚಿಮ್ಮನ್‌ಲಾಲ್ ಭಟ್ ವಿರುದ್ಧ ದಾಹೋದ್ ಪೊಲೀಸರಿಗೆ ದೂರು ಸಲ್ಲಿಸಿದರು. ಅವರು ಪೆರೋಲ್‌ನಲ್ಲಿ ಹೊರಬಂದ ಅಪರಾಧಿಯಿಂದ ಬೆದರಿಕೆ ಬಂದಿದೆ ಎಂದು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಸೈಲೇಶ್ ಚಿಮ್ಮನಲಾಲ್ ಭಟ್ ಕೂಡಾ ಬಿಲ್ಕೀಸ್ ಬಾನೋ ಪ್ರಕರಣದ ಪ್ರಮುಖ ಅಪರಾಧಿ.</p>



<figure class="wp-block-image size-large"><img loading="lazy" decoding="async" width="1024" height="576" src="https://peepalmedia.com/wp-content/uploads/2022/10/20221019_170055-1024x576.jpg" alt="" class="wp-image-12031" srcset="https://peepalmedia.com/wp-content/uploads/2022/10/20221019_170055-1024x576.jpg 1024w, https://peepalmedia.com/wp-content/uploads/2022/10/20221019_170055-300x169.jpg 300w, https://peepalmedia.com/wp-content/uploads/2022/10/20221019_170055-768x432.jpg 768w, https://peepalmedia.com/wp-content/uploads/2022/10/20221019_170055-150x84.jpg 150w, https://peepalmedia.com/wp-content/uploads/2022/10/20221019_170055-696x392.jpg 696w, https://peepalmedia.com/wp-content/uploads/2022/10/20221019_170055-1068x601.jpg 1068w, https://peepalmedia.com/wp-content/uploads/2022/10/20221019_170055.jpg 1280w" sizes="auto, (max-width: 1024px) 100vw, 1024px" /></figure>



<figure class="wp-block-image size-large"><img loading="lazy" decoding="async" width="1024" height="576" src="https://peepalmedia.com/wp-content/uploads/2022/10/20221019_170058-1024x576.jpg" alt="" class="wp-image-12032" srcset="https://peepalmedia.com/wp-content/uploads/2022/10/20221019_170058-1024x576.jpg 1024w, https://peepalmedia.com/wp-content/uploads/2022/10/20221019_170058-300x169.jpg 300w, https://peepalmedia.com/wp-content/uploads/2022/10/20221019_170058-768x432.jpg 768w, https://peepalmedia.com/wp-content/uploads/2022/10/20221019_170058-150x84.jpg 150w, https://peepalmedia.com/wp-content/uploads/2022/10/20221019_170058-696x392.jpg 696w, https://peepalmedia.com/wp-content/uploads/2022/10/20221019_170058-1068x601.jpg 1068w, https://peepalmedia.com/wp-content/uploads/2022/10/20221019_170058.jpg 1280w" sizes="auto, (max-width: 1024px) 100vw, 1024px" /></figure>



<p style="font-size:20px">ಈ ನಡುವೆ ಪೆರೋಲ್ ನಲ್ಲಿ ಇದ್ದ ಸಮಯದಲ್ಲೇ ಲಿಮ್ಖೇಡಾ ಶಾಸಕ ಸೈಲೇಶ್ ಭಾಯ್ ಬಾಭೋರ್ ಮತ್ತು ಸಂಸದ ಜಸ್ವಂತ್ ಸಿಂಗ್ ಬಾಭೋರ್ ಅವರು ಅಪರಾಧಿ ಸೈಲೇಶ್ ಚಿಮ್ಮನ್‌ಲಾಲ್ ಭಟ್ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಮತ್ತು ಅವರನ್ನು ಸನ್ಮಾನಿಸಿದ ಬಗ್ಗೆಯೂ ದೂರಿನಲ್ಲಿ ದಾಖಲಾಗಿದೆ‌‌. ಇಬ್ಬರು ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡಿರುವ ಫೋಟೋವನ್ನು ದೂರಿನಲ್ಲಿ ಲಗತ್ತಿಸಲಾಗಿದೆ. ಆದರೆ ದೂರಿನಲ್ಲಿ ಬಿಜೆಪಿ ಜನಪ್ರತಿನಿಧಿಗಳು ಇದ್ದ ಕಾರಣಕ್ಕೋ ಏನೋ, ಈ ಬಗ್ಗೆ ಎಫ್ಐಆರ್ ದಾಖಲಾಗಿಲ್ಲ.</p>



<p style="font-size:20px">ಪ್ರಕರಣದ ಇತರ ಇಬ್ಬರು ಸಾಕ್ಷಿಗಳಾದ ಘಾಂಚಿ ಆದಂಭೈ ಇಸ್ಮಾಯಿಲ್‌ಭಾಯ್ ಮತ್ತು ಘಾಂಚಿ ಇಮ್ತಿಯಾಜ್‌ಭಾಯ್ ಯೂಸುಫ್‌ಭಾಯ್ ಅವರು ಅಪರಾಧಿಗಳಲ್ಲಿ ಒಬ್ಬರಾದ ಗೋವಿಂದ್ ನಾಯ್ ವಿರುದ್ಧ ಜುಲೈ 28, 2017 ರಂದು ದೂರು ದಾಖಲಿಸಿದ್ದಾರೆ. &#8220;ರಾಜಿ ಮಾಡಿಕೊಳ್ಳಲು ಒಪ್ಪದಿದ್ದರೆ ಆರೋಪಿಗಳು ತಮ್ಮನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ&#8221; ಎಂದು ಅರ್ಜಿದಾರರು ಗುಜರಾತ್ ಪೊಲೀಸರಿಗೆ ದೂರು ದಾಖಲಿಸಿದ್ದರು. ಈ ದೂರು ಕೂಡಾ ಎಫ್‌ಐಆರ್ ಆಗಿ ಬದಲಾಗಲೇ ಇಲ್ಲ.</p>



<p style="font-size:20px">ಆಗಸ್ಟ್ 15 ರ ಸ್ವಾತಂತ್ರ್ಯ ದಿನದಂದು &#8220;ಉತ್ತಮ ನಡವಳಿಕೆ&#8221; ಅಡಿಯಲ್ಲಿ ಮೇಲೆ ಉಲ್ಲೇಖಿಸಿದ ಅಪರಾಧಿಗಳೂ ಸೇರಿದಂತೆ ಒಟ್ಟು 11 ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡಲಾಯಿತು. ಬಿಜೆಪಿ ಪಕ್ಷದ ಮುಖಂಡರು ಗುಜರಾತ್‌ನ ಜೈಲಿನ ಹೊರಗೆ ನಿಂತು ಅವರನ್ನು ವೀರರಂತೆ ಹೂಮಾಲೆ ಮತ್ತು ಸಿಹಿತಿಂಡಿಗಳೊಂದಿಗೆ ಸ್ವಾಗತಿಸಿದ್ದರು. ಅಪರಾಧಿಗಳನ್ನು ಏಕೆ ಬಿಡುಗಡೆ ಮಾಡಲಾಯಿತು ಎಂಬುದಕ್ಕೆ ಗುಜರಾತ್‌ ಸರ್ಕಾರ ಉತ್ತರವಾಗಿ ಸರಣಿ ತೀರ್ಪುಗಳನ್ನು ಉಲ್ಲೇಖಿಸಿದೆ.</p>



<p style="font-size:20px">ಆದರೆ ಗುಜರಾತ್ ಸರ್ಕಾರ ಸುಪ್ರೀಂಕೋರ್ಟ್ ಗೆ ಕೊಟ್ಟ &#8220;ಉತ್ತಮ ನಡವಳಿಕೆ&#8221;ಯ ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ನಿನ್ನೆ ಟೀಕಿಸಿದೆ. &#8220;ತೀರ್ಪುಗಳ ಸರಣಿಯನ್ನು ಉಲ್ಲೇಖಿಸಿರುವ ಕೌಂಟರ್ ಅಫಿಡವಿಟ್ ಅನ್ನು ನಾನು ನೋಡಿಲ್ಲ. ಗುಜರಾತ್ ಸರ್ಕಾರದ ಈ ಅಭಿಪ್ರಾಯದಲ್ಲಿ ಹಲವಷ್ಟು ಲೋಪಗಳಿವೆ&#8221; ಎಂದು ನ್ಯಾಯಮೂರ್ತಿ ಅಜಯ್ ರಸ್ತೋಗಿ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.</p>



<p style="font-size:20px">ಅಪರಾಧಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅವರ ಉತ್ತಮ ನಡವಳಿಕೆಯನ್ನು ಉಲ್ಲೇಖಿಸಿದ್ದಾರೆ. &#8220;ಸರ್ಕಾರ ಮತ್ತು ಸಂಬಂಧಪಟ್ಟವರು ಈ ನಿರ್ಧಾರವನ್ನು ತೆಗೆದುಕೊಂಡಾಗ, ಇದು ಕಾನೂನಿನ ಪ್ರಕ್ರಿಯೆಯಾಗಿರುವುದರಿಂದ ನನಗೆ ಅದರಲ್ಲಿ ಯಾವುದೇ ತಪ್ಪು ಕಂಡುಬಂದಿಲ್ಲ&#8221; ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.</p>



<p style="font-size:20px">ಪ್ರಕರಣದ ಒಟ್ಟು 11 ಮಂದಿ ಅಪರಾಧಿಗಳಲ್ಲಿ 7 ಜನರ ವಿರುದ್ಧ ಆರೋಪ ಕೇಳಿ ಬಂದಿದೆ. ಅದರಲ್ಲಿ 5 ಮಂದಿಯ ಮೇಲೆ ಕೇಸು ದಾಖಲಾದರೆ, 3 ಜನರ ಮೇಲಷ್ಟೇ ಎಫ್ಐಆರ್ ದಾಖಲು ಮಾಡಲಾಗಿದೆ. ಈ ಇಷ್ಟೂ ಜನ ಬಿಜೆಪಿ ಹಿನ್ನೆಲೆಯವರಾಗಿದ್ದು, ಅಪರಾಧ ನಡೆದ ನಂತರ ಬಿಜೆಪಿ ಪಕ್ಷದ ಚುನಾಯಿತ ಶಾಸಕರು, ಸಂಸದರ ಕಡೆಯಿಂದಲೇ ಸನ್ಮಾನಿತರಾದವರು ಎಂಬುದು ಗಮನಾರ್ಹ ಅಂಶ.</p>



<p style="font-size:20px">ದೂರು ದಾಖಲು ಮಾಡಲು ಮತ್ತು ಮುಂದಿನ ಪ್ರಕ್ರಿಯೆಯಲ್ಲಿ ಎಫ್ಐಆರ್ ದಾಖಲಾಗಲು ಈ ಶಾಸಕ ಮತ್ತು ಸಂಸದರು ಮುಖ್ಯವಾಗಿ ಅಡ್ಡಗಾಲು ಆಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇಷ್ಟಾದರೂ ಬಿಜೆಪಿ ಪಕ್ಷ ಇವರಿಗೆ &#8220;ಒಳ್ಳೆಯ ನಡತೆ&#8221; ಪ್ರಮಾಣ ಪತ್ರ ನೀಡಿದ್ದು ದುರಂತ. ಈ ಘಟನೆಯಿಂದ ಒಂದಂತೂ ಸ್ಪಷ್ಟ, ಅಪರಾಧಿಯೊಬ್ಬ ಅತ್ಯಾಚಾರ, ಕೊಲೆ, ಗುಂಪುಗಲಭೆಯಂತಹ ಎಂತಹ ಕ್ರಿಮಿನಲ್ ಪ್ರಕರಣದಲ್ಲಿ ಇದ್ದರೂ ಬಿಜೆಪಿ ಪಕ್ಷದ ಹಿನ್ನೆಲೆ ಇದ್ದರೆ ಇಂದಲ್ಲ ನಾಳೆ ಖಂಡಿತ ಎಲ್ಲಾ ಪ್ರಕರಣಗಳಿಂದ ಮುಕ್ತ ಆಗಬಹುದು ಎಂಬ ಸಂದೇಶವನ್ನು ಸಮಾಜಕ್ಕೆ ಕೊಟ್ಟಂತಾಗುತ್ತದೆ.</p>



<p style="font-size:20px">ಸಧ್ಯ ಈ ಬಿಡುಗಡೆ ಪ್ರಕರಣಕ್ಕೆ ತಡೆ ಹಿಡಿಯಬೇಕು ಎಂದು ಸಲ್ಲಿಸಿರುವ ಅರ್ಜಿ ಈಗ ಸುಪ್ರೀಂಕೋರ್ಟ್ ಅಂಗಳದಲ್ಲಿದೆ. ಟಿಎಂಸಿ ಸಂಸದೆ ಮೊಹುವಾ ಮೋಯಿತ್ರಾ ಸೇರಿ ಈ ಬಗ್ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ನಡುವೆ ಅಪರಾಧಿಗಳ ವಿರುದ್ಧದ ದೂರು, ಎಫ್ಐಆರ್ ಕೂಡಾ ಈಗ ಬೆಳಕಿಗೆ ಬಂದಿರುವುದು, ಅಪರಾಧಿಗಳು ಮತ್ತೆ ಜೈಲು ಸೇರಬಹುದು ಎಂದೇ ಅಂದಾಜಿಸಲಾಗುತ್ತಿದೆ.</p>
]]></content:encoded>
					
		
		
			</item>
	</channel>
</rss>
