<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Bjp IT cell &#8211; Peepal Media</title>
	<atom:link href="https://peepalmedia.com/tag/bjp-it-cell/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 03 Sep 2024 12:04:52 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Bjp IT cell &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಫೊರೆನಿಕ್ಸ್ ಲ್ಯಾಬಲ್ಲಿ ಪತ್ತೆಯಾದ ಮೊಸಳೆ ಕಣ್ಣೀರು (ರಾಜಕೀಯ ವಿಡಂಬನೆ)</title>
		<link>https://peepalmedia.com/crocodile-tears-discovered-in-forensics-lab-political-satire/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 03 Sep 2024 11:43:00 +0000</pubDate>
				<category><![CDATA[ಅಂಕಣ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[bjp dirty politics]]></category>
		<category><![CDATA[bjp govt]]></category>
		<category><![CDATA[Bjp IT cell]]></category>
		<category><![CDATA[bjp karnataka]]></category>
		<category><![CDATA[BJP leader]]></category>
		<category><![CDATA[BJP leader Gurtaj Bhullar wife]]></category>
		<category><![CDATA[Boycott Modhi]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[modhiji]]></category>
		<category><![CDATA[modi]]></category>
		<category><![CDATA[Narendra modhi road show]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Satire]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=44863</guid>

					<description><![CDATA[ತಣ್ಣಗೆ ಮಲಗಿದ್ದ ಕತ್ತಲನ್ನು ಸೀಳುತ್ತ ಸುದ್ದಿ ನಿಧಾನವಾಗಿ ಹರಡುತ್ತಿತ್ತು. ಆ ತಡರಾತ್ರಿ ಅಶರೀರವಾಣಿಯಾಗಿ ಕೇಳಿ ಬಂದ ಸುದ್ದಿಯಿಂದ ಆತಂಕಗೊಂಡ ಅಖಿಲ ಬ್ರಹ್ಮಾಂಡ ಅಂಡಾಂಡ ಪಿಂಡ ಲಂಡ ಭಕ್ತರು ತಂಡೋಪತಂಡವಾಗಿ, ಪ್ರಜೆಗಳ ತೆರಿಗೆಯ ಬೆವರಲ್ಲಿ ಕಟ್ಟಿದ ನಮೋನ ಐಷಾರಾಮಿ ಅರಮನೆಯತ್ತ ದೌಡಾಯಿಸಿದ್ದರು. ವಿಷಯವೇನೆಂದು ವಿಶದವಾಗಿ ಯಾರಿಗೂ ತಿಳಿದಿರಲಿಲ್ಲ. ಮುಂಜಾನೆ ಎದ್ದಾಗಿಂದ, ಮೂಲೆ ಸಂದಿಯಲ್ಲಿದ್ದ ನಮೋ ವಿರೋಧಿಗಳನ್ನು ಹುಡುಕಿ, ಮತ್ತವರು ಉಸಿರೆತ್ತದಂತೆ ತದುಕಲು ಇಡಿ, ಐಟಿ, ಸಿಬಿಐಗಳನ್ನು ಛೂ ಬಿಟ್ಟು ಸುಸ್ತಾಗಿ ಮಲಗಿದ್ದ ಅಪರಿಮಿತ ಕುತಂತ್ರಿ ಮಂತ್ರಿ ಕೂಡ ಸುದ್ದಿ [&#8230;]]]></description>
										<content:encoded><![CDATA[
<p>ತಣ್ಣಗೆ ಮಲಗಿದ್ದ ಕತ್ತಲನ್ನು ಸೀಳುತ್ತ ಸುದ್ದಿ ನಿಧಾನವಾಗಿ ಹರಡುತ್ತಿತ್ತು. ಆ ತಡರಾತ್ರಿ ಅಶರೀರವಾಣಿಯಾಗಿ ಕೇಳಿ ಬಂದ ಸುದ್ದಿಯಿಂದ ಆತಂಕಗೊಂಡ ಅಖಿಲ ಬ್ರಹ್ಮಾಂಡ ಅಂಡಾಂಡ ಪಿಂಡ ಲಂಡ ಭಕ್ತರು ತಂಡೋಪತಂಡವಾಗಿ, ಪ್ರಜೆಗಳ ತೆರಿಗೆಯ ಬೆವರಲ್ಲಿ ಕಟ್ಟಿದ ನಮೋನ ಐಷಾರಾಮಿ ಅರಮನೆಯತ್ತ ದೌಡಾಯಿಸಿದ್ದರು. ವಿಷಯವೇನೆಂದು ವಿಶದವಾಗಿ ಯಾರಿಗೂ ತಿಳಿದಿರಲಿಲ್ಲ. ಮುಂಜಾನೆ ಎದ್ದಾಗಿಂದ, ಮೂಲೆ ಸಂದಿಯಲ್ಲಿದ್ದ ನಮೋ ವಿರೋಧಿಗಳನ್ನು ಹುಡುಕಿ, ಮತ್ತವರು ಉಸಿರೆತ್ತದಂತೆ ತದುಕಲು ಇಡಿ, ಐಟಿ, ಸಿಬಿಐಗಳನ್ನು ಛೂ ಬಿಟ್ಟು ಸುಸ್ತಾಗಿ ಮಲಗಿದ್ದ ಅಪರಿಮಿತ ಕುತಂತ್ರಿ ಮಂತ್ರಿ ಕೂಡ ಸುದ್ದಿ ಕೇಳಿ ಗೊಣಗುತ್ತ ಅರೆನಿದ್ದೆಯಿಂದ ಎಚ್ಚೆತ್ತ. ನಮೋ ಗ್ರಹಚಾರವನ್ನು ಹಳಿಯುತ್ತ ಅರಮನೆಯತ್ತ ಹೆಜ್ಜೆ ಹಾಕಿದ.</p>



<p>ಇನ್ನೇನು ಅರಮನೆ ಬಂತು ಅನ್ನುವಷ್ಟರಲ್ಲಿ ಗಕ್ಕನೆ ನಿಂತ ಅಪರಿಮಿತ ಕುತಂತ್ರಿ ಆಕಾಶದತ್ತ ದಿಟ್ಟಿಸಿದ. ಫಳಫಳನೆ ಹೊಳೆವ ನಕ್ಷತ್ರಗಳು, ಚಂದ್ರನ ಬಿಟ್ಟರೆ ಎಲ್ಲೂ ಚಾದರದಷ್ಟು ಮೋಡಗಳು ಕಾಣಲಿಲ್ಲ. ಹಾಗಿದ್ದರೆ, ರಸ್ತೆಯೆಲ್ಲಾ ತೇವಗೊಂಡು ನೀರು ಹರಿದು ಬರುತ್ತಿರುವುದಾದರೂ ಎಲ್ಲಿಂದ? ಗಾಬರಿಯಿಂದ ಅರಮನೆ ಹೊಕ್ಕಾಗ ಅಲ್ಲಿಯ ದೃಶ್ಯ ಕಂಡು ಗಕ್ಕನೆ ನಿಂತ. ನೆರೆದಿದ್ದ ನೂರಾರು ಲಂಡಭಕ್ತರ ರೋದನೆಯ ಕಣ್ಣೀರು ಹೊಳೆಯಾಗಿ ಹರಿದು ಬರುತ್ತಿತ್ತು.</p>



<p>ಹೆಜ್ಜೆ ಇರಿಸಲು ಜಾಗವಿಲ್ಲದಂತೆ ನೆರೆದಿದ್ದ ಭಕ್ತರ ಮಧ್ಯೆ ಇರುಕಿಸಿಕೊಂಡವನು ತಳ್ಳಾಡುತ್ತ ಅವರನ್ನು ದೂಡಿ ಕೊಂಡು ನಮೋ ಕೊಠಡಿಯತ್ತ ಬಂದ. ಅದಾಗಲೇ ಮಂತ್ರಿಗಳು, ಪೂರ್ವಾಶ್ರಮದ ಚಡ್ಡಿಧಾರಿಗಳು, ಗೋದಿ ಮಾಧ್ಯಮದ ಬಕೆಟ್ ಪತ್ರಕರ್ತರು &#8211; ಎಲ್ಲರೂ ಮ್ಲಾನವದನರಾಗಿ ನಿಂತದ್ದು ಕಂಡ ಅಪರಿಮಿತ ಕುತಂತ್ರಿಗೆ ಸುದ್ದಿ ತನಗೆ ತಡವಾಗಿ ಸಿಕ್ಕು ಕೊನೆಯವನಾಗಿ ಬಂದದ್ದಕ್ಕೆ ಮುಜುಗರವಾಯಿತು. ಏನು ನಡೆದಿದೆ? ಸಾಮ್ರಾಟನಿಗೆ ಏನಾದರೂ ವಿಪತ್ತು ಒದಗಿ ಬಂತೆ? ಏನೊಂದು ತಿಳಿಯದೆ ಕಮಲೀ ಮುಖಂಡ ಕಪಿ ದಡ್ಡನತ್ತ ಕಣ್ಸನ್ನೆಯಲ್ಲಿ ಕೇಳಿದರೆ ʼಎಲ್ಲಾ ಮುಗಿದು ಹೋದ ಹಾಗೆ!ʼ ಎನ್ನುವಂತೆ ಕೊಠಡಿಯತ್ತ ಜೋಲು ಮೋರೆ ಮಾಡಿದ. ಕೊಠಡಿಯ ಬಾಗಿಲ ಕೆಳಗಿನ ಸಂದಿಯಲ್ಲಿ ನೀರು ಹರಿದು ಬಂದು ಲಂಡಭಕ್ತರ ಕಣ್ಣೀರನ ಮುಖ್ಯವಾಹಿನಿಯಲ್ಲಿ ಸೇರುತ್ತಿತ್ತು.</p>



<p>ಮತ್ತಷ್ಟು ಗೊಂದಲಗೊಂಡ ಅಪರಿಮಿತ ಕುತಂತ್ರಿ, ಅಲ್ಲೇ ನಿಂತು ಕಣ್ಣೀರನ್ನು ಒರೆಸುತ್ತ ಕರ್ಚೀಫನ್ನು ಹಿಂಡುತ್ತಿದ್ದ ನಮೋ ಆಪ್ತಕಾರ್ಯದರ್ಶಿಗೆ “ಸಾಮ್ರಾಟರು ಎಲ್ಲಿ?” ಎಂದ.</p>



<p>“ವಿದೇಶಕ್ಕೆ ತೆರಳಿದ್ದ ನಮೋ ಮಹಾಸ್ವಾಮಿಗಳು ತಡರಾತ್ರಿ ಬಂದಾಗ ಬಹಳ ಚಿಂತೆಯಲ್ಲಿದ್ದಂತೆ ಕಂಡರು. ತುಟಿ ಎರಡು ಮಾಡದೆ ಬಿರುಗಾಳಿಯಂತೆ ಕೊಠಡಿ ಸೇರಿ ದಢಾರೆಂದು ಅಗುಳಿ ಹಾಕಿಕೊಂಡರು. ನಾನು ಮಾತಾಡಿಸುವ ಧೈರ್ಯ ಮಾಡಲಿಲ್ಲ. ಅರ್ಧತಾಸಿನ ನಂತರ “ಅಯ್ಯೋ!” ಎಂದು ಕೂಗಿದ ಹಾಗಾಯಿತು. ಎಷ್ಟು ಕೂಗಿದರೂ ಬಾಗಿಲು ತೆರೆಯಲಿಲ್ಲ. ಒಳಗಿನಿಂದ ಒಂದೇ ಸಮನೆ ನೀರು ಪ್ರವಾಹದಂತೆ ಹರಿದು ಬಂತು”</p>



<p>ಕಳೆದ ವರ್ಷ ಕೂಡ ಇಂಥದ್ದೇ ಪ್ರಸಂಗ ನಡೆದದ್ದು ಅ. ಕುತಂತ್ರಿಯ ನೆನಪಿಗೆ ಬಂತು. ʼಆಗ ಮಮ್ಮೀ…ಮಮ್ಮೀನ ನೋಡ್ಬೇಕು ಅಂತ ರಚ್ಚೆ ಹಿಡಿದಿದ್ದ. ಈಗ ಮಮ್ಮೀ ಇಲ್ಲ. ಮತ್ಯಾವ ಹೊಸ ನೌಟಂಕಿ ಶುರು ಮಾಡಿದ್ದಾನೊ! ಇತ್ತೀಚಿಗೆ ಮೆಥೆಡ್ ಆಕ್ಟಿಂಗ್ ಬೇರೆ ಪ್ರಾಕ್ಟಿಸ್ ಮಾಡ್ತಿದ್ದಾನೆʼ ಎಂದು ತಲೆ ಕೆರೆದುಕೊಂಡು, ಬಾಗಿಲನ್ನು ಒಡೆಯಲು ಕಾವಲುಗಾರರಿಗೆ ಹೇಳಿದ.</p>



<p>ಯಾರೂ ಒಳ ಬರದಂತೆ ಎಚ್ಚರಿಸಿ ತಾನೊಬ್ಬನೇ ರೂಮಿನೊಳಗೆ ಬಂದರೆ, ನಮೋ ಬಿಟ್ಟ ಕಣ್ಣು ಬಿಟ್ಟಂತೆ ಶೂನ್ಯದತ್ತ ದಿಟ್ಟಿಸುತ್ತ ಮಂಚದ ಮೇಲೆ ಕುಳಿತಿದ್ದ. ಮುಖದಲ್ಲಿ ದುಃಖ ಕೆರೆಯಂತೆ ನಿಂತಿತ್ತು. ಬಲಗಣ್ಣಿಂದ ಮಾತ್ರ ನೀರು ಧಾರಾಕಾರವಾಗಿ ಹರಿಯುತ್ತಿತ್ತು. ʼಒಂದೇ ಕಣ್ಣಿನಿಂದ ಅಳು…ವಾಹ್! ಗ್ರೇಟ್ ಆಕ್ಟಿಂಗ್ʼ. ಯಾವುದಕ್ಕೂ ಇರಲಿ ಎಂದು ತನ್ನ ಮೊಬೈಲಲ್ಲಿ ಫೋಟೊ ಕ್ಲಿಕ್ಕಿಸಿದ. ಹಿನ್ನೆಲೆಯಲ್ಲಿ ಕಣ್ಣೀರಧಾರೆ…ಇದೇಕೆ…ಇದೇಕೆ…ಪ್ಯಾತೊ ಸಾಂಗ್ ಕೇಳಿಬರುತ್ತಿತ್ತು. “ಮಹಾಸ್ವಾಮಿಗಳೆ… ಏನಾಯಿತು? ಎಚ್ಚರಗೊಳ್ಳಿ” ಎಂದರೆ ನಮೋ ಅಲುಗಾಡದೆ ಶಿಲೆಯಾಗಿದ್ದ.</p>



<p>ಅ. ಕುತಂತ್ರಿ ಕೂಡಲೇ &#8211; ಆಪ್ತಕಾರ್ಯದರ್ಶಿ, ಕಪಿ ದಡ್ಡ, ಮಂತ್ರಿಮಂಡಲ, ಮಾ.ಕೃ.ಕುಟೀರದ ಪುರೋಹಿತ ಸೇರಿದಂತೆ ಎಲ್ಲಾ ಕೇಸರಿ ಪ್ರಮುಖರನ್ನು ಸೇರಿಸಿ ನಮೋ ಸಾಮ್ರಾಟರಿಗೆ ಆಗಿರುವ ಆಘಾತವನ್ನು ಅರಿಯಲು ತುರ್ತುಸಭೆಯನ್ನು ಕರೆದ. ಸಭೆಯಲ್ಲಿ ಕಳೆದೆರೆಡು ದಿನಗಳಿಂದ ನಮೋ ಸುತ್ತ ಆದ ಘಟನೆಗಳನ್ನು ಕೆದಕುತ್ತ ಶೋಧನೆ ನಡೆಯಿತು.</p>



<p>24&#215;7 – ನಮೋಗೆ ಸಕಲ ಇಷ್ಟಾರ್ಥ ಸೇವೆ ಸಲ್ಲಿಸುತ್ತ ಜೊತೆಗಿರುವ ಆಪ್ತಕಾರ್ಯದರ್ಶಿಯ ಅಭಿಪ್ರಾಯವನ್ನು ಮೊದಲು ಕೇಳಲಾಗಿ “ಬಾಲಕನಂತಿದ್ದ ರಾಗಾ ಈಗ ಬ್ಲಾಕ್ ಬೆಲ್ಟ್ ತೊಟ್ಟು, ತೊಡೆ ತಟ್ಟುತ್ತ ಅಗ್ನಿವೀರ್, ಶೇರ್ ಮಾರ್ಕೆಟ್ ಸ್ಕಾಂಡಲ್, ಪರೀಕ್ಷೆ ಪೇಪರ್ ಲೀಕ್, ಜಾತಿ ಜನಗಣತಿ..ಎಕ್ಸೆಟ್ರಾಂತ ಇತ್ತೀಚಿಗೆ ಎಸೆಯುವ ಸವಾಲುಗಳಿಗೆ ಕೌಂಟರ್ ಕೊಡಲಾಗದೆ ಮಹಾಸ್ವಾಮಿಗಳು ಕಂಗೆಟ್ಟಿದ್ದರು. ಅದೂ ಸಾಲದೂಂತ ತಮ್ಮದೇ ಕಮಲೀ ಸಭಾ ನಡಾವಳಿಗಳ ಬಗ್ಗೆ ಬಹಳ ಕಳವಳಗೊಂಡಿದ್ದರು. ತಾನು ಎತ್ತಿ ಆಡಿಸಿ, ಮುದ್ದಾಡಿ ಗದ್ದುಗೆ ಮೇಲೆ ಕೂರಿಸಿದ ಬುಲ್ಡ್ ಡೋಜರ್ ಭೋಗಿಬಾಬಾ, ಸಭೆಗಳಲ್ಲಿ ಎಲ್ಲರಂತೆ ಸಾಷ್ಟಾಂಗ ಬೀಳುವುದಿರಲಿ ಕನಿಷ್ಟ ನಮಸ್ಕರಿಸಿ ಗೌರವ ಕೊಡದೆ ಅಪಮಾನಿಸಿದ್ದು ಅವರನ್ನು ಚಿಂತೆಯ ಕೂಪಕ್ಕೆ ತಳ್ಳಿತ್ತು. ಮೊನ್ನೆ ಅವರ ಫ್ಯಾಷನ್ ಡಿಸೈನರ್ ಅಳತೆ ತೆಗೆದುಕೊಳ್ಳುವಾಗ ಐವತ್ತಾರು ಇದ್ದ ಎದೆ ಗಾತ್ರ ಇಂಚಿನ ಪಟ್ಟಿಯಲ್ಲಿ ಮೂವತ್ತಾರಕ್ಕೆ ಇಳಿದದ್ದನ್ನು ನೋಡಿ ಅವರು ಕುಸಿದು ಹೋಗಿದ್ದರು” ಎಂದು ಬಿಕ್ಕಿ ಬಿಕ್ಕಿ ಅಳಲು ಆರಂಭಿಸಿದ.</p>



<p>“ಅದು ಇರಬಹುದು. ಆದರೆ…” ಎಂದು ಮಧ್ಯೆ ಬಾಯಿ ಹಾಕಿದ ವಿದೇಶಾಂಗ ಮಂತ್ರಿ “ನೆನ್ನೆ ರೂಸ್ ಗೆ ಹೋಗಿದ್ದಾಗ ಎರಡೂ ದೇಶದ ಪ್ರಧಾನಿಗಳನ್ನು ಕೂಡಿಸಿ ʼಫಾರಿನ್ ಮಿತ್ರೋ…ಇದು ಕಲಹಕ್ಕೆ ಕಾಲವಲ್ಲ. ಯುದ್ದ ನಿಲ್ಲಿಸಿʼ ಎಂದು ಶಾಂತಿಯ ಮಂತ್ರ ಜಪಿಸಿದ ವಿಶ್ವಗುರುವಿನ ಮಾತಿಗೆ ಅವರುಗಳು ಮೊದಲಿಗೆ ತಲೆಯಾಡಿಸಿ, ಕೈ ಕುಲುಕಿ ಹಗ್ ಮಾಡಿದ್ದರು. ಆದರೆ…ಅನಿವಾಸಿಗಳನ್ನು ಸ್ಟೇಡಿಯಮ್ಮಲ್ಲಿ ಗುಡ್ಡೇ ಹಾಕಿ, ದೇಶದಲ್ಲಿ ಆಗುತ್ತಿರುವ ಬುಲೆಟ್ ಟ್ರೈನ್ ಸ್ಪೀಡಿನ ಡೆವಲಪ್ ಮೆಂಟ್ ಬಗ್ಗೆ ಬುರುಡೆ ಬಿಡುತ್ತಿರಬೇಕಾದರೆ ಬಾಂಬೊಂದು ನಮೋ ಸಾಹೇಬರ ಅಡಿಗೆ ಬಂದು ಬಿತ್ತು. ಎದ್ದೇನೊ ಬಿದ್ದೇನೆಂದು ಪುಷ್ಪಕ ವಿಮಾನ ಹತ್ತಿ ವಾಪಸ್ಸು ಬರೋವಾಗ ನಮೋ ಸಾಹೇಬರು ಭಯದಿಂದ ನಡುಗುತ್ತಿದ್ದರು. ಅದೂ ಒಂದು ಕಾರಣ ಇರಬಹುದು” ಎಂದದ್ದು ಅ.ಕುತಂತ್ರಿಗೆ ಸರಿಬರಲಿಲ್ಲ. “ಹು…ಹು…ಇಲ್ಲ..ನಮೋ ಸಾಹೇಬರು ರಾಕೆಟ್ಟುಗಳನ್ನು ಕೈಯಲ್ಲೇ ಹಿಡಿದು ಹಾರಿಸುವ ಎಂಟೆದೆ ಅಲ್ಲ…ಹದಿನೆಂಟೆದೆ ಭಂಟ. ಹೆದರಿಕೊಂಡು ಬಂದಿರಲಾರರು. ತಾನಿಲ್ಲದ ಟೈಮಲ್ಲಿ ವೈರಿಗಳು ದೇಶವನ್ನು ಒಡೆದು ಹಾಕುತ್ತಾರೆಂದು ಬೇಗ ಬಂದಿದ್ದಾರೆ…ಅಷ್ಟೇ” ಎಂದು ಕಿತ್ತು ಹೋದ ನಮೋ ಧೈರ್ಯಕ್ಕೆ ಒಂದಷ್ಟು ತೇಪೆ ಮೆತ್ತಿದ.</p>



<p>ಅಷ್ಟರಲ್ಲಿ ಕಪಿ ದಡ್ಡ “ಕುತಂತ್ರಿಗಳೇ…ಸಾಮ್ರಾಟರ ಮನೋ ವೇದನೆಗೆ ನಾನೂ ಕಾರಣ ಇರಬಹುದು. ಆ ಪೊಮೆರಿಯನ್ ತಳಿಯ ಮಂಗನಾ ಶೇಪೌಟನ್ನು ಕಮಲೀ ಪಕ್ಷಕ್ಕೆ ಸೇರಿಸಿ ತಪ್ಪು ಮಾಡಿದೆ. ಎಷ್ಟು ಹೇಳಿದರೂ ನಾಬಾಲಿಕ್ ಬುದ್ದಿಯ ಅದಕ್ಕೆ ಅರ್ಥವಾಗುತ್ತಿಲ್ಲ. ಚಳುವಳಿ ಮಾಡುತ್ತಿರುವ ರೈತರು ಟೆರರಿಷ್ಟ್ ಗಳು. ಅಲ್ಲಿ ರೇಪ್ ಗಳು ಆಗುತ್ತಿವೆ. ಮರ್ಡರ್ ಮಾಡಿ ಡೆಡ್ ಬಾಡಿಗಳನ್ನು ನೇತು ಹಾಕಿದ್ದಾರೆ…ಹೀಗೆ ತಲೆಬುಡ ಇಲ್ಲದೆ ಮಾತಾಡುತ್ತಿದ್ದಾಳೆ. ಜನರು, ವಿರೋಧಿಗಳು ಇವೆಲ್ಲ ನಮೋ ಹೇಳಿಕೊಟ್ಟ ಗಿಳಿಮಾತುಗಳು ಎಂದು ವೃಥಾ ಸಾಮ್ರಾಟರನ್ನು ಛೇಡಿಸುತ್ತಿದ್ದಾರೆ. ಅಕಟಕಟಾ…” ಎಂದು ಗದ್ಗದಿತನಾದ.</p>



<p>ಎಷ್ಟು ಚರ್ಚಿಸಿದರೂ ನಮೋ ರೋದನೆಯ ಮೂಲ ಯಾವುದೆಂದು ತಿಳಿಯಲು ಸಭೆ ಸೋತಾಗ ಅ.ಕುತಂತ್ರಿ ಫೋರೆನಿಕ್ಸ್ ಲ್ಯಾಬ್ ತಂತ್ರಜ್ಞರಿಗೆ ಬರಹೇಳಿದ. ಇಡೀ ದೇಹ ಮುಚ್ಚುವಂತೆ ಪಿಪಿಇ ತೊಟ್ಟು ಬಂದ ಪರಿಣಿತರು ಸ್ಟ್ಯಾಚು ಆಗಿದ್ದ ನಮೋ ಕಣ್ಣೀರಿನ ಸ್ಯಾಂಪಲ್ಲನ್ನು ಸಂಗ್ರಹಿಸಿ ಅ.ಕುತಂತ್ರಿಗೆ ವಂದಿಸಿ ಹೊರಟಾಗ, “ವರ್ಷಗಟ್ಟಲೆ ರಿಸರ್ಚ್ ಮಾಡುತ್ತ ಕೂರಬೇಡಿ. ಬೇಗ ರಿಸಲ್ಟ್ ಬೇಕು. ಇದು ದೇಶದ ಅಳಿವು ಉಳಿವಿನ ಪ್ರಶ್ನೆ” ಎಂದು ಗುಟುರು ಹಾಕಿದ. ಅಷ್ಟರಲ್ಲಿ ಕಾವಲುಗಾರ ಬಂದು ಆಪ್ತಕಾರ್ಯದರ್ಶಿಯ ಕಿವಿಗೆ ಉಸಿರಿದ್ದನ್ನು, ಅವನು ಅ.ಕುತಂತ್ರಿಯ ಕಿವಿಗೆ ಸುರಿದ.</p>



<p>ನಮೋ ಸಂಕಟದಲ್ಲಿ ಏನನ್ನೋ ಹೇಳಲು ಪ್ರಯತ್ನಿಸುತ್ತಿದ್ದ. “ಏನದು ಹೇಳಿ. ನಿಮ್ಮ ಬೇಗುದಿ ಕಡಿಮೆಯಾಗುತ್ತೆ” ಎಂದು ಅ.ಕುತಂತ್ರಿ ಬೆನ್ನನ್ನು ನೀವಿದ. “ಅಲ್ಲಿ…ಅಲ್ಲಿ…ಬಂಗಾಲದಲ್ಲಿ… ಅತ್ಯಾಚಾರ…ಬಲಾತ್ಕಾರ…ದೀದಿ…ದೀದಿ…ಬೇಟಿ ಬಚಾವ್…ಬೇಟಿ ಪಡಾವ್” ಎಂದು ತೊದಲುತ್ತ ತೆರೆದಿದ್ದ ಕಣ್ಣುಗಳನ್ನು ಮುಚ್ಚಿ ಹಾಸಿಗೆಗೆ ಒರಗಿದ. ಒಂಟಿ ಕಣ್ಣೀರು ಮತ್ತಷ್ಟು ಒಸರಿ ಬಂತು.</p>



<p>ಮಹಿಳೆ ಶೋಷಣೆ ಬಗ್ಗೆ ನಮೋ ಸುರಿಸಿದ ಕೊಳಗಗಟ್ಟಲೆ ಕಣ್ಣೀರ ಬಗ್ಗೆ ಬಕೆಟ್ ಮಾಧ್ಯಮಗಳು ತರಹೇವಾರಿ ಹೆಡ್ಡಿಂಗ್ ಗಳನ್ನು ಕೊಟ್ಟು ಪ್ರಸಾರ ಮಾಡಿದವು. ಮಾತೃಹೃದಯದ ನಮೋ ಸಂಕಟಕ್ಕೆ ಲಂಡಭಕ್ತರ ಕರುಳು ಕಿವಿಚಿ ಬಂದು ಕಣ್ಣೀರಧಾರೆಯನ್ನು ಹರಿಸಿ, ಅಂಗಡಿಮುಂಗಟ್ಟು ಆಸ್ಪತ್ರೆಗಳ ಮೇಲೆ ದಾಳಿ ಎಸಗಿ ಧ್ವಂಸ ಮಾಡಿದರು. ರಸ್ತೆಗಳನ್ನು ಬಂದು ಮಾಡಿ, ವಾಹನಗಳಿಗೆ ಬೆಂಕಿ ಹಚ್ಚಿ ಶೋಷಿತಳಿಗೆ ಸಂತಾಪ ಸೂಚಿಸಿದರು.</p>



<p>ಫೋರೆನಿಕ್ಸ್ ಲ್ಯಾಬ್ ನಲ್ಲಿ ತನಿಖೆ ನಡೆಸಿದ್ದ ತಂತ್ರಜ್ಞರಿಗೆ ಅಸಹಜ, ವಿಶೇಷವಾದ ಫಲಿತಾಂಶ ದೊರೆತು ʼಯುರೇಕಾ!ʼ ಎಂದು ಸಂಭ್ರಮಗೊಂಡರು. “ನಮೋ ಅವರ ಒಂದೇ ಕಣ್ಣಿನಲ್ಲಿ ಅಶ್ರು ಬಂದದ್ದಕ್ಕೆ ಕಾರಣ ಸಿಗುತ್ತಿಲ್ಲ. ಇನ್ನೂ ಹೆಚ್ಚಿನ ಸಂಶೋಧನೆಯಿಂದ ತಿಳಿಯಬಹುದು. ಆದರೆ, ನಮೋ ಅವರು ಸುರಿಸಿದ ಕಣ್ಣೀರು, ಮೊಸಳೆ ಕಣ್ಣೀರಿಗೆ ಹೋಲಿಕೆಯಾಗುತ್ತಿರುವುದು ತನಿಖೆಯಲ್ಲಿ ತಿಳಿದು ಬಂದು ಅಚ್ಚರಿ ತಂದಿದೆ” ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದರು.</p>



<p>“ದೇಶದಲ್ಲಿ ಇಪ್ಪತ್ತು ನಿಮಿಷಕ್ಕೊಮ್ಮೆ ಮಹಿಳೆಯರ ಮೇಲೆ ಅತ್ಯಾಚಾರವಾಗುತ್ತಿದೆ. ಯೋಧರ ಪತ್ನಿಯರನ್ನು ಸೇರಿ ಹಲವು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ, ಮಾನಭಂಗ ಎಸಗಲಾಗಿದೆ. ಇದ್ಯಾವುದರ ಬಗ್ಗೆ ಉಸಿರೆತ್ತದೆ ಬಾಯಿಗೆ ಪ್ಲಾಸ್ಟರ್ ಹಾಕಿಕೊಂಡಿರುವ ಸಾಮ್ರಾಟ ಈಗ ಮೊಸಳೆ ಕಣ್ಣೀರು ಸುರಿಸುತ್ತಿದ್ದಾನೆ. ಎಂಥಾ ನಾಚಿಗೆಗೇಡು!” ಎಂದು ದೇಶವಾಸಿಗಳು ನಮೋ ಆಷಾಢಭೂತಿತನಕ್ಕೆ ಉಗಿದು ಉಪ್ಪಿನಕಾಯಿ ಹಾಕಿದರು.</p>



<p>ಚಂದ್ರಪ್ರಭ ಕಠಾರಿ<br>cpkatari@yahoo.com</p>
]]></content:encoded>
					
		
		
			</item>
		<item>
		<title>ಇಲ್ಲಿ ನಮ್ಮವರಿಗೆ ಉದ್ಯೋಗ ಇಲ್ಲ, ಪಾಕಿಸ್ತಾನದಿಂದ ಕರೆತಂದು ಉದ್ಯೋಗ ಕೊಡುವುದು ಸರಿಯೇ?: CAA ಕುರಿತು ಕೇಜ್ರಿವಾಲ್‌ ಪ್ರತಿಕ್ರಿಯೆ</title>
		<link>https://peepalmedia.com/we-dont-have-jobs-here-is-it-right-to-bring-jobs-from-pakistan-kejriwals-response-on-caa/</link>
		
		<dc:creator><![CDATA[Peepal Media]]></dc:creator>
		<pubDate>Wed, 13 Mar 2024 12:01:59 +0000</pubDate>
				<category><![CDATA[ಚುನಾವಣೆ 2023- ಪರಿಣಾಮ]]></category>
		<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ದೇಶ]]></category>
		<category><![CDATA[ವ್ಯಾಪಾರ- ವಹಿವಾಟು]]></category>
		<category><![CDATA[Aam Aadmi Party]]></category>
		<category><![CDATA[AAP]]></category>
		<category><![CDATA[aravind kejrival]]></category>
		<category><![CDATA[BJP ADVERTISMENT]]></category>
		<category><![CDATA[bjp dirty politics]]></category>
		<category><![CDATA[bjp govt]]></category>
		<category><![CDATA[Bjp IT cell]]></category>
		<category><![CDATA[bjp karnataka]]></category>
		<category><![CDATA[BJP leader]]></category>
		<category><![CDATA[bjp narendra modi]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[modi]]></category>
		<category><![CDATA[modi government]]></category>
		<category><![CDATA[modiji]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=36985</guid>

					<description><![CDATA[ನವದೆಹಲಿ: ಇಲ್ಲಿ ನಮ್ಮ ನಮ್ಮ ದೇಶದ ಯುವಜನರಿಗೆ ಉದ್ಯೋಗ ಇಲ್ಲ, ಪಾಕಿಸ್ತಾನ, ಅಪಘಾನಿಸ್ತಾನಗಳಿಂದ ಜನರನ್ನು ಕರೆತಂದು ಅವರಿಗೆ ಉದ್ಯೋಗ ಕೊಡುವುದು ಸರಿಯೇ ಎಂದು ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಪ್ರಶ್ನಿಸಿದ್ದಾರೆ. ಸಿಎಎ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ಈ ಮೂರು ದೇಶಗಳ ಹಿಂದೂ ಧಾರ್ಮಿಕ ಅಲ್ಪಸಂಖ್ಯಾತರು ಭಾರತೀಯ ಪೌರತ್ವ ಪಡೆಯಲು ಬಯಸಿದರೆ ಅಂಥವರಿಗೆ ಮಾತ್ರ ಸಿಎಎ ಕಾನೂನು ಅನ್ವಯ ಬಿಜೆಪಿಯ ಕೇಂದ್ರ ಸರ್ಕಾರ ಹೇಳುತ್ತದೆ. ಅಂದರೆ  ಹೆಚ್ಚಿನ [&#8230;]]]></description>
										<content:encoded><![CDATA[
<p>ನವದೆಹಲಿ: ಇಲ್ಲಿ ನಮ್ಮ ನಮ್ಮ ದೇಶದ ಯುವಜನರಿಗೆ ಉದ್ಯೋಗ ಇಲ್ಲ, ಪಾಕಿಸ್ತಾನ, ಅಪಘಾನಿಸ್ತಾನಗಳಿಂದ ಜನರನ್ನು ಕರೆತಂದು ಅವರಿಗೆ ಉದ್ಯೋಗ ಕೊಡುವುದು ಸರಿಯೇ ಎಂದು ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಪ್ರಶ್ನಿಸಿದ್ದಾರೆ.</p>



<p>ಸಿಎಎ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ಈ ಮೂರು ದೇಶಗಳ ಹಿಂದೂ ಧಾರ್ಮಿಕ ಅಲ್ಪಸಂಖ್ಯಾತರು ಭಾರತೀಯ ಪೌರತ್ವ ಪಡೆಯಲು ಬಯಸಿದರೆ ಅಂಥವರಿಗೆ ಮಾತ್ರ ಸಿಎಎ ಕಾನೂನು ಅನ್ವಯ ಬಿಜೆಪಿಯ ಕೇಂದ್ರ ಸರ್ಕಾರ ಹೇಳುತ್ತದೆ. ಅಂದರೆ  ಹೆಚ್ಚಿನ ಸಂಖ್ಯೆಯ ಹಿಂದೂ ಅಲ್ಪಸಂಖ್ಯಾತರು ನಮ್ಮ ದೇಶಕ್ಕೆ ಬರುವಂತೆ ಮಾಡುತ್ತೇವೆ,  ಕರೆ ತರುತ್ತೇವೆ. ಅವರಿಗೆ ಉದ್ಯೋಗ ಕೊಡಿಸುತ್ತೇವೆ, ಮನೆ ಕಟ್ಟಿಸಿಕೊಡುತ್ತೇವೆ, ಇಲ್ಲೇ ನೆಲೆಸುವಂತೆ ಮಾಡುತ್ತೇವೆ ಅನ್ನುವುದು ವಿಚಿತ್ರ ಅಲ್ಲವೇ ಎಂದು ಪ್ರಶ್ನಿಸಿದರು.</p>



<p> ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದ ಮೋದಿ ಸರ್ಕಾರಕ್ಕೆ ಯಾವ ಒಳ್ಳೆಯ ಕೆಲಸವನ್ನು ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಈಗ ಚುನಾವಣೆ ಸಂದರ್ಭದಲ್ಲಿ CAA ಜಾರಿಗೆ ಅಧಿಸೂಚನೆ ಹೊರಡಿಸಿದೆ. ಬಿಜೆಪಿ ಸರ್ಕಾರ ಏನಾದರು ಒಳ್ಳೆ ಕೆಲಸ ಮಾಡಿದ್ದರೆ ಇವತ್ತು CAA ಬದಲಾಗಿ ತಾವು ಮಾಡಿದ ಕೆಲಸ ತೋರಿಸಿ ಓಟು ಕೇಳಬಹುದ್ದೀತು ಎಂದರು.</p>



<p>ಹಣದುಬ್ಬರ ಮತ್ತು ನಿರುದ್ಯೋಗ ಇಂದು ದೇಶ ಎದುರಿಸುತ್ತಿರುವ ದೊಡ್ಡ ಸಮಸ್ಯೆಗಳಾಗಿವೆ. ಮಧ್ಯಮವರ್ಗದ ಕುಟುಂಬಕ್ಕೂ ಇಂದು ಮನೆ ನಡೆಸುವುದು ಕಷ್ಟವಾಗುತ್ತಿದೆ. ಹಣದುಬ್ಬರ ಬೆನ್ನು ಮುರಿಯುತ್ತಿದೆ, ಮತ್ತೊಂದೆಡೆ ನಮ್ಮ ಯುವಕರು ಉದ್ಯೋಗಕ್ಕಾಗಿ ಪರದಾಡುತ್ತಿದ್ದಾರೆ. ಅವರ ಮೇಲೆ ಲಾಠಿ ಪ್ರಹಾರ ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಿರುದ್ಯೋಗ, ಮತ್ತು ಹಣದುಬ್ಬರಕ್ಕೆ ಸರಕಾರ ಪರಿಹಾರ ಹುಡುಕುವ ಬದಲು ಸಿಎ ಬಗ್ಗೆ ಮಾತನಾಡುತ್ತಿರುವುದು ತುಂಬಾ ದುಖಃಕರ ಸಂಗತಿ ಎಂದರು.</p>



<p>ಭಾರತದ ಅನೇಕ ಜನರು ನಿರಾಶ್ರಿತರಾಗಿದ್ದಾರೆ. &nbsp;ಆದರೆ ಬಿಜೆಪಿಯವರು ಪಾಕಿಸ್ತಾನದಿಂದ ಜನರನ್ನು ಕರೆತಂದು ಭಾರತದಲ್ಲಿ ನೆಲೆಸಲು ಬಯಸುತ್ತಾರೆ. &nbsp;ಅವರಿಗೆ ಮನೆಗಳನ್ನು ನೀಡಲು ಬಯಸುತ್ತಾರೆ. &nbsp;ನಮ್ಮ ಕುಟುಂಬ ಮತ್ತು ದೇಶದ ಅಭಿವೃದ್ಧಿಗೆ ಖರ್ಚು ಮಾಡಬೇಕಾದ ಭಾರತ ಸರ್ಕಾರದ ಸರ್ಕಾರಿ ಹಣ ಬೇರೆ ದೇಶದ ಜನರಿಗೆ ಖರ್ಚು ಮಾಡಲು ಹೊರಟಿರುವುದು ಎಷ್ಟು ಸರಿ? ಎಂದು ಅವರು ಪ್ರಶ್ನಿಸಿದರು.</p>



<p>ಆ ಮೂರು ದೇಶಗಳಲ್ಲಿ ಸುಮಾರು 2.5 ರಿಂದ 3 ಕೋಟಿ ಹಿಂದೂ ಧಾರ್ಮಿಕ ಅಲ್ಪಸಂಖ್ಯಾತರಿದ್ದಾರೆ. ಈ ಮೂರು ದೇಶಗಳು ಬಡ ದೇಶಗಳು ಹೌದು. ಭಾರತದ ಬಾಗಿಲು ತೆರೆದ ತಕ್ಷಣ ಈ ಮೂರು ದೇಶಗಳಿಂದ ಭಾರಿ ಜನಸಮೂಹವು ನಮ್ಮ ಭಾರತಕ್ಕೆ ಬರುತ್ತದೆ, ಈ 2.5 ಕೋಟಿ ಜನರಲ್ಲಿಯೂ ಸಹ. 1.5 ಕೋಟಿ ಜನರು ಭಾರತಕ್ಕೆ ಬರುತ್ತಾರೆ. ಹಾಗಾದರೆ ಅವರಿಗೆಲ್ಲ &nbsp;ಯಾರು ಉದ್ಯೋಗ ಕೊಡುತ್ತಾರೆ? &nbsp;ನೀವು ಅವರನ್ನು ಎಲ್ಲಿ ನೆಲೆಗೊಳಿಸುತ್ತೀರಿ? ಇವರಿಗೆಲ್ಲ ಬಿಜೆಪಿಯವರು ತಮ್ಮ &nbsp;ಮನೆಯಲ್ಲಿ ಪಾಲು ಕೊಡುತ್ತಾರೆಯೇ? ಅವರು ತಮಗೆ ಸಿಗುವ ಉದ್ಯೋಗವನ್ನು ಇವರಿಗೆಲ್ಲ ಬಿಟ್ಟುಕೊಡುತ್ತಾರೆಯೇ ಎಂದು ಕೇಜ್ರಿವಾಲ್‌ ಪ್ರಶ್ನಿಸಿದರು.</p>



<p>ಹಾಗಾದರೆ ಬಿಜೆಪಿ ಏಕೆ ಇಂಥ ಮಹಾನ್‌ ತಪ್ಪನ್ನು ಮಾಡುತ್ತಿದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ.̤ ಉತ್ತರ ಬಹಳ ಸರಳವಾಗಿದೆ. ಕೇವಲ ವೋಟ್ ಬ್ಯಾಂಕ್ ಸೃಷ್ಟಿಸುವ ಕೊಳಕು ರಾಜಕೀಯವನ್ನು ಬಿಜೆಪಿ ಮಾಡುತ್ತಿದೆ. ಒಂದೂವರೆ ಕೋಟಿ ಜನರನ್ನು ಭಾರತಕ್ಕೆ ಕರೆತಂದು ಓಟ್‌ ಬ್ಯಾಂಕ್‌ ಮಾಡಿಕೊಳ್ಳುವುದು ಬಿಜೆಪಿ ಉದ್ದೇಶ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಇದರಿಂದ ಭಾರೀ ಲಾಭವಾಗಬಹುದು. ಒಂದೆಡೆ &nbsp;ಹರಿಯಾಣದ ಬಿಜೆಪಿಯ ಸರ್ಕಾರಕ್ಕೆ ಅಲ್ಲಿನ ಮಕ್ಕಳಿಗೆ ಉದ್ಯೋಗ ನೀಡಲು ಸಾಧ್ಯವಾಗುತ್ತಿಲ್ಲ. ಇಲ್ಲಿನ ಮಕ್ಕಳನ್ನು ಇಸ್ರೇಲ್‌ಗೆ ಉದ್ಯೋಗಕ್ಕಾಗಿ ಕಳುಹಿಸುತ್ತಿದೆ. &nbsp;ನಮ್ಮ ಮಕ್ಕಳನ್ನು ಯುದ್ಧಕ್ಕೆ ತಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದರು.</p>



<p>ಇಡೀ ಪ್ರಪಂಚದ ಯಾವುದೇ ದೇಶವು ತನ್ನ ನೆರೆಹೊರೆಯವರಿಗೆ ಸಹಾಯ ಮಾಡಲು ಸಾಧ್ಯವಿಲ್ಲ. ದೇಶಗಳ ಬಡವರನ್ನು ನೆರೆಯ ದೇಶಗಳ ಜನರು ತಮ್ಮ ದೇಶಕ್ಕೆ ಬರುವುದನ್ನು ತಡೆಯಲು ವಿವಿಧ ರೀತಿಯ ಕಾನೂನುಗಳನ್ನು ಮಾಡುತ್ತದೆ. ಗಡಿಗಳಲ್ಲಿ ಗೋಡೆಗಳನ್ನು ನಿರ್ಮಿಸಲಾಗುತ್ತಿದೆ. ವಿದ್ಯುತ್ ತಂತಿಗಳನ್ನು ಅಳವಡಿಸಲಾಗುತ್ತಿದೆ. &nbsp;ಪಕ್ಕದ ದೇಶದ ಬಡವರಿಗೆ ದೇಶವನ್ನು ಪ್ರವೇಶಿಸಲು ಬಾಗಿಲು ಪ್ರವೇಶಿಸುವುತ್ತಿರುವುದು ನಮ್ಮಲ್ಲಿಯೇ ಮೊದಲು. ಇಂಥ ಕೊಳಕು ರಾಜಕೀಯ ಮಾಡುತ್ತಿರುವ ಪ್ರಪಂಚದಲ್ಲೇ ಏಕೈಕ ಪಕ್ಷವೆಂದರೆ ಅದು ಬಿಜೆಪಿಯಾಗಿದೆ ಎಂದು ಹರಿಹಾಯ್ದರು.</p>



<p>&nbsp;ಯೋಚಿಸಬೇಕಾದ ವಿಷಯವೆಂದರೆ ಕಳೆದ 10 ವರ್ಷಗಳಲ್ಲಿ ಭಾರತದ 11 ಲಕ್ಷಕ್ಕೂ ಹೆಚ್ಚು ದೊಡ್ಡ ಶ್ರೀಮಂತ ಕೈಗಾರಿಕೋದ್ಯಮಿಗಳು ಮತ್ತು ಉದ್ಯಮಿಗಳು ಭಾರತವನ್ನು ತೊರೆದಿದ್ದಾರೆ. ಈ ಜನರು ಭಾರತದಲ್ಲಿ ಕಾರ್ಖಾನೆಗಳು, ಕೈಗಾರಿಕೆಗಳನ್ನು ನಡೆಸುತ್ತಿದ್ದರು. &nbsp;ಜನರಿಗೆ ಉದ್ಯೋಗ ನೀಡುತ್ತಿದ್ದರು. &nbsp;ಬಿಜೆಪಿಯ ತಪ್ಪು ನೀತಿಗಳು ಮತ್ತು ಅವರ ದೌರ್ಜನ್ಯಗಳಿಂದ ಬೇಸತ್ತು ಅವರು ಭಾರತವನ್ನು ತೊರೆದರು. ನಿಜವಾಗಿಯೂ ವಾಪಸ್‌ ಕರೆತರಬೇಕಾದರೆ ಆ ಉದ್ಯಮಿಗಳನ್ನು ಕರೆತನ್ನಿ. ಅವರು ಭಾರತದಲ್ಲಿ ಹೂಡಿಕೆ ಮಾಡುತ್ತಾರೆ. &nbsp;ಅವರು ಹೊಸ ಕಾರ್ಖಾನೆಗಳನ್ನು ಮತ್ತು &nbsp;ಹೊಸ ಉದ್ಯಮಗಳನ್ನು ತೆರೆಯುತ್ತಾರೆ ಎಂದು ಅವರು ಕಿವಿಮಾತು ಹೇಳಿದರು.</p>



<p>2014ರ ಹಿಂದೆ ಬಂದ ನುಸುಳುಕೋರರಿಗೆ ಪೌರತ್ವ ನೀಡುತ್ತೇವೆ ಎಂದು ಬಿಜೆಪಿಯವರು ಹೇಳುತ್ತಿರುವುದು ಸುಳ್ಳು. ಇದು ಕೇವಲ ಆರಂಭ. &nbsp;ಒಮ್ಮೆ ಬಾಗಿಲು ತೆರೆದರೆ ಪಾಕಿಸ್ತಾನ, ಬಾಂಗ್ಲಾದೇಶಗಳಿಂದ ಸಮುದ್ರೋಪಾದಿಯಲ್ಲಿ ಜನ ಬರುತ್ತಾರೆ. &nbsp;ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ ಈಶಾನ್ಯ ರಾಜ್ಯಗಳು ಅದರಲ್ಲೂ ವಿಶೇಷವಾಗಿ ಅಸ್ಸಾಂ ಈ ವಲಸೆ ಜನರ ಭಾರವನ್ನು ಹೊರಬೇಕಾಗುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.</p>
]]></content:encoded>
					
		
		
			</item>
		<item>
		<title>ಅತ್ಯಾ*ರ ಪ್ರಕರಣ : ಬಿಜೆಪಿ ಐಟಿ ಸೆಲ್ ಸದಸ್ಯರ ಬಂಧಿಸಲು ಎಬಿವಿಪಿ ಆಗ್ರಹ</title>
		<link>https://peepalmedia.com/abvp-demands-arrest-of-bjp-it-cell-members/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 01 Jan 2024 02:35:18 +0000</pubDate>
				<category><![CDATA[Uncategorized]]></category>
		<category><![CDATA[ABVP]]></category>
		<category><![CDATA[bjp]]></category>
		<category><![CDATA[Bjp IT cell]]></category>
		<category><![CDATA[india]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[uttar pradesh]]></category>
		<guid isPermaLink="false">https://peepalmedia.com/?p=34266</guid>

					<description><![CDATA[ನವೆಂಬರ್‌ ತಿಂಗಳಿನಲ್ಲಿ ಉತ್ತರ ಪ್ರದೇಶದ ವಾರಣಾಸಿಯ ಹಾಸ್ಟೆಲ್ ಬಳಿ ಐಐಟಿ-ಬಿಎಚ್‌ಯು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯಲ್ಲಿ ಪೊಲೀಸರು  ಎಲ್ಲಾ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳ ಗುರುತಿಸಿ ಅವರ ಸಾಮಾಜಿಕ ಸ್ಥಾನಮಾನ ನೋಡಿದಾಗ ಅವರು, ಉತ್ತರ ಪ್ರದೇಶದ ಬಿಜೆಪಿ ಪಕ್ಷದ ಐಟಿ ಸೆಲ್ ಸದಸ್ಯರು ಎಂದು ತಿಳಿದು ಬಂದಿದೆ. ಕ್ರೈಂ ಬ್ರಾಂಚ್ ಮತ್ತು ಲಂಕಾ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಸುಸುವಾಹಿ ಪ್ರದೇಶದಿಂದ ಬಂಧಿಸಿದ್ದು, ಆರೋಪಿಗಳನ್ನು ಈಗ ವಿಚಾರಣೆಗೆ ಒಳಪಡಿಸಲಾಗಿದೆ. ವರದಿಗಳ ಪ್ರಕಾರ, ಬಂಧಿತ ಆರೋಪಿಗಳನ್ನು ಬ್ರಿಜ್ [&#8230;]]]></description>
										<content:encoded><![CDATA[
<p>ನವೆಂಬರ್‌ ತಿಂಗಳಿನಲ್ಲಿ ಉತ್ತರ ಪ್ರದೇಶದ ವಾರಣಾಸಿಯ ಹಾಸ್ಟೆಲ್ ಬಳಿ ಐಐಟಿ-ಬಿಎಚ್‌ಯು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯಲ್ಲಿ ಪೊಲೀಸರು  ಎಲ್ಲಾ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳ ಗುರುತಿಸಿ ಅವರ ಸಾಮಾಜಿಕ ಸ್ಥಾನಮಾನ ನೋಡಿದಾಗ ಅವರು, ಉತ್ತರ ಪ್ರದೇಶದ ಬಿಜೆಪಿ ಪಕ್ಷದ ಐಟಿ ಸೆಲ್ ಸದಸ್ಯರು ಎಂದು ತಿಳಿದು ಬಂದಿದೆ.</p>



<p>ಕ್ರೈಂ ಬ್ರಾಂಚ್ ಮತ್ತು ಲಂಕಾ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಸುಸುವಾಹಿ ಪ್ರದೇಶದಿಂದ ಬಂಧಿಸಿದ್ದು, ಆರೋಪಿಗಳನ್ನು ಈಗ ವಿಚಾರಣೆಗೆ ಒಳಪಡಿಸಲಾಗಿದೆ. ವರದಿಗಳ ಪ್ರಕಾರ, ಬಂಧಿತ ಆರೋಪಿಗಳನ್ನು ಬ್ರಿಜ್ ಎನ್‌ಕ್ಲೇವ್ ಕಾಲೋನಿ ಸುಂದರ್‌ಪುರದ ಕುನಾಲ್ ಪಾಂಡೆ ಮತ್ತು ಜಿವಾಧಿಪುರ ಬಜಾರ್ದಿಹಾದ ಆನಂದ್ ಅಲಿಯಾಸ್ ಅಭಿಷೇಕ್ ಚೌಹಾನ್ ಮತ್ತು ಸಕ್ಷಮ್ ಪಟೇಲ್ ಎಂದು ಗುರುತಿಸಲಾಗಿದೆ.&nbsp;ಅಪರಾಧ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್ ಅನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>



<p>ಸಾಮಾಜಿಕ ಮಾಧ್ಯಮ ಪೋಸ್ಟ್‌ ಹಾಗೂ ಸ್ಥಳೀಯ ಮಾಧ್ಯಮಗಳ ವರದಿಯಂತೆ, ಬಂಧಿತ ಆರೋಪಿಗಳು ಬಿಜೆಪಿ ಐಟಿ ಸೆಲ್‌ಗೆ ಸಂಪರ್ಕ ಹೊಂದಿದ್ದರು ಎಂದು ವರದಿ ಮಾಡಲಾಗುತ್ತಿದೆ.&nbsp;&nbsp;ವಾರಣಾಸಿಯ ಬಿಜೆಪಿ ಐಟಿ ಸೆಲ್‌ನಲ್ಲಿ ಕುನಾಲ್ ಪಾಂಡೆ ಮಹಾನಗರ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು&nbsp;ವರದಿಯಾಗಿದೆ&nbsp;,&nbsp; ಆದರೆ ಸಕ್ಷಮ್ ಪಟೇಲ್ ಐಟಿ ಸೆಲ್‌ನಲ್ಲಿ ವಾರಣಾಸಿ ಮೆಟ್ರೋಪಾಲಿಟನ್ ಸಹ-ಸಂಚಾಲಕರಾಗಿ ಸೇವೆ ಸಲ್ಲಿಸುತ್ತಾರೆ ಎಂದು ಹೇಳಲಾಗಿದೆ.</p>



<p>ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಬಂಧಿತ ವ್ಯಕ್ತಿಗಳ ಫೇಸ್‌ಬುಕ್ ಪ್ರೊಫೈಲ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ, ಬಿಜೆಪಿ ಐಟಿ ಸೆಲ್‌ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.</p>



<p>ಆರೋಪಿಯ ಬಂಧನದ ಬಳಿಕ ಎಬಿವಿಪಿ ಹೇಳಿಕೆ ಬಿಡುಗಡೆ ಮಾಡಿ, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಆರೋಪಿಗಳಿಗೆ ಆಶ್ರಯ ನೀಡುತ್ತಿರುವವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ರಾಷ್ಟ್ರೀಯ ಮಾಧ್ಯಮ ಸಂಚಾಲಕ ಎಬಿವಿಪಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಬರೆದಂತೆ, “ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತ ಆರೋಪಿಗಳ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸುವ ಮೂಲಕ ತಕ್ಷಣ ಕ್ರಮ ಕೈಗೊಳ್ಳಿ. ಈವರೆಗೆ ಆರೋಪಿಗಳಿಗೆ ರಕ್ಷಣೆ ನೀಡುತ್ತಿದ್ದವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಮೊದಲಿನಿಂದಲೂ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ABVP ಪ್ರತಿಭಟನೆ ನಡೆಸುತ್ತಿದೆ.&#8221; ಎಂದು ಒತ್ತಾಯಿಸಿದರು.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="hi" dir="ltr">एबीवीपी की मॉंग: <a href="https://twitter.com/hashtag/IITBHU?src=hash&amp;ref_src=twsrc%5Etfw">#IITBHU</a> में छात्रा के साथ गैंगरेप मामले में पकड़े गए आरोपियों पर चार्जशीट दाखिल कर शीघ्र कार्रवाई करे <a href="https://twitter.com/Uppolice?ref_src=twsrc%5Etfw">@Uppolice</a>। अब तक आरोपियों को जो लोग संरक्षण दे रहे थे,उनको चिन्हित कर कार्रवाई हो। मामले में शुरूआत से कार्रवाई की माँग को लेकर प्रदर्शनरत है परिषद। <a href="https://t.co/rfKk6JiCvt">pic.twitter.com/rfKk6JiCvt</a></p>&mdash; Ashutosh Singh (आशुतोष सिंह) (@iAshutoshdu) <a href="https://twitter.com/iAshutoshdu/status/1741365458731962796?ref_src=twsrc%5Etfw">December 31, 2023</a></blockquote><script async src="https://platform.twitter.com/widgets.js" charset="utf-8"></script>
</div></figure>



<p>ವಿದ್ಯಾರ್ಥಿನಿಯೊಬ್ಬಳನ್ನು ವಿವಸ್ತ್ರಗೊಳಿಸಿ, ಮೂವರು ಅಪರಿಚಿತ ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆಯನ್ನು ದಾಖಲಿಸಿದ ಎರಡು ತಿಂಗಳ ನಂತರ ಈ ಬಂಧನಗಳು ನಡೆದಿವೆ.&nbsp;ಇದು ಕ್ಯಾಂಪಸ್‌ನಲ್ಲಿ ಬೃಹತ್ ಪ್ರತಿಭಟನೆಗೆ ಕಾರಣವಾಯಿತು ಮತ್ತು ಲೈಂಗಿಕ ದೌರ್ಜನ್ಯ ಘಟನೆಯನ್ನು ವಿರೋಧಿಸಿ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.</p>



<p>ವರದಿಗಳ ಪ್ರಕಾರ, ಘಟನೆಯ ಎರಡನೇ ದಿನ, ಎಲ್ಲಾ ಮೂವರು ಆರೋಪಿಗಳು ಬುಲೆಟ್ ಸವಾರಿ ಮಾಡುತ್ತಿರುವುದು ಚೆಟ್‌ಗಂಜ್‌ನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.&nbsp;ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಾವಳಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.&nbsp;ಖಚಿತವಾದ ಹಿನ್ನೆಲೆಯಲ್ಲಿ ಪೊಲೀಸರು ಈ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ.</p>



<p> ಸವಾರಿ ಮಾಡುತ್ತಿರುವುದು ಚೆಟ್‌ಗಂಜ್‌ನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಾವಳಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಖಚಿತವಾದ ಹಿನ್ನೆಲೆಯಲ್ಲಿ ಪೊಲೀಸರು ಈ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ.</p>
]]></content:encoded>
					
		
		
			</item>
	</channel>
</rss>
