<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>bk hariprasad &#8211; Peepal Media</title>
	<atom:link href="https://peepalmedia.com/tag/bk-hariprasad/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sun, 06 Nov 2022 13:19:54 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>bk hariprasad &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಬಿಜೆಪಿಯವರಂತೆ ಮಿಸ್ ಕಾಲ್ ಕೊಟ್ಟು ಸದಸ್ಯರನ್ನು ನೇಮಕ ಮಾಡಿಲ್ಲ: ಬಿ.ಕೆ ಹರಿಪ್ರಸಾದ್</title>
		<link>https://peepalmedia.com/bjpyavaranthe-miss-call-kottu-sadasyarannu-nemaka-madilla-bk-hariprasad/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 06 Nov 2022 13:19:50 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[bk hariprasad]]></category>
		<category><![CDATA[congress]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[sarvodhaya samavesha]]></category>
		<guid isPermaLink="false">https://peepalmedia.com/?p=14488</guid>

					<description><![CDATA[ಬೆಂಗಳೂರು : AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಬೆಂಗಳೂರಿಗೆ ಆಗಮಿಸಿದ್ದು, ಈ ಸಲುವಾಗಿ ಹಮ್ಮಿಕೊಂಡಿದ್ದ ಸರ್ವೋದಯ ಸಮಾವೇಶದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಭಾಗವಹಿಸಿದ್ದು, ಕಾಂಗ್ರೆಸ್ ಪಕ್ಷದ ಒಬ್ಬ ನಿಷ್ಠಾವಂತ ನಾಯಕರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ನಮ್ಮ ಪುಣ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಮಾರಂಭದಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್‌, ʼಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರುವ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಇಡೀ ರಾಷ್ಟ್ರದಲ್ಲಿನ ಕಾಂಗ್ರೆಸ್ ಪಕ್ಷದ ಪರವಾಗಿ [&#8230;]]]></description>
										<content:encoded><![CDATA[
<p><strong>ಬೆಂಗಳೂರು :</strong> AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಬೆಂಗಳೂರಿಗೆ ಆಗಮಿಸಿದ್ದು, ಈ ಸಲುವಾಗಿ ಹಮ್ಮಿಕೊಂಡಿದ್ದ ಸರ್ವೋದಯ ಸಮಾವೇಶದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಭಾಗವಹಿಸಿದ್ದು, ಕಾಂಗ್ರೆಸ್ ಪಕ್ಷದ ಒಬ್ಬ ನಿಷ್ಠಾವಂತ ನಾಯಕರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ನಮ್ಮ ಪುಣ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>



<p>ಸಮಾರಂಭದಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್‌, ʼಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರುವ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಇಡೀ ರಾಷ್ಟ್ರದಲ್ಲಿನ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ. ಕಾಂಗ್ರೆಸ್ ಪಕ್ಷದ ಒಬ್ಬ ನಿಷ್ಠಾವಂತ ನಾಯಕರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ನಮ್ಮ ಪುಣ್ಯ. ಇದೊಂದು ಪವಿತ್ರವಾದ ಪಕ್ಷವಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿರುವ ಪಕ್ಷವಾಗಿದೆʼ ಎಂದು ಹೇಳಿದರು.</p>



<p>ʼಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗುವ ಮುನ್ನ ಬಿಜೆಪಿ ಅವರು ಕಾಂಗ್ರೆಸ್ ನಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂದು ಆರೋಪ ಮಾಡುತ್ತಿತ್ತು. ಪ್ರಪಂಚದಲ್ಲಿ ಅತ್ಯಂತ ಹಳೆಯ ಹಾಗೂ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ. ನಾವು ಬಿಜೆಪಿಯವರಂತೆ ಮಿಸ್ ಕಾಲ್ ಕೊಟ್ಟು ಸದಸ್ಯರನ್ನು ನೇಮಕ ಮಾಡಿಲ್ಲʼ ಎಂದು ಬಿಜೆಪಿಯನ್ನು ಟೀಕಿಸಿದರು.</p>



<p>ʼಇದುವರೆಗೂ ಪಾರ್ಸಿ, ಮುಸಲ್ಮಾನರು, ಕ್ರೈಸ್ತರು, ಮಹಿಳೆಯರು ಪಕ್ಷದ ಅಧ್ಯಕ್ಷರಾಗಿದ್ದಾರೆ. ಬಿಜೆಪಿ ಅವರು ಚುನಾವಣೆ ಮಾಡಿದ್ದೀರಾ? ನಮ್ಮಲ್ಲಿ ಎಲ್ಲಾ ಜಾತಿ ಧರ್ಮದವರನ್ನು ಅಧ್ಯಕ್ಷರನ್ನಾಗಿ ಮಾಡಿದೆ. ಆದರೆ ಆರ್ ಎಸ್ ಎಸ್ ಕೇವಲ ಒಂದು ಜಾತಿಗೆ ಸೇರಿದ ಸಂಘಟನೆ ಆಗಿದೆ. ಹೀಗಾಗಿ ಬಿಜೆಪಿ, ಕಾಕಿ ಚಡ್ಡಿ ಹಾಗೂ ಕರಿ ಟೋಪಿ ಅವರಿಂದ ಆಂತರಿಕ ಪ್ರಜಾಪ್ರಭುತ್ವದ ಬಗ್ಗೆ ನಾವು ಕಲಿಯುವ ಅಗತ್ಯವಿಲ್ಲʼ ಎಂದು ಮಾತನಾಡಿದರು.</p>



<p>ʼಈ ಸಂದರ್ಭದಲ್ಲಿ ಖರ್ಗೆ ಅವರ ಮುಂದೆ ಈ ತ್ರಿವರ್ಣ ಧ್ವಜ ಮರ್ಯಾದೆ ಕಾಪಾಡುವ ಜವಾಬ್ದಾರಿ ಇದೆ. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಿಸುವ ಸವಾಲು ಇದೆ. ಈ ಹೋರಾಟದಲ್ಲಿ ನಾವೆಲ್ಲರೂ ನಿಮ್ಮ ಜತೆಯಾಗಿ ಹೆಜ್ಜೆ ಹಾಕುತ್ತೇವೆʼ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಖರ್ಗೆಯವರಿಗೆ ಭರವಸೆ ನೀಡಿದರು.</p>
]]></content:encoded>
					
		
		
			</item>
		<item>
		<title>ರಾಹುಲ್ ಗಾಂಧಿ ಅವರ ಪಾದಯಾತ್ರೆ ಕಂಡು ವಿಶ್ವಗುರು ತಲೆ ಕೆಡಿಸಿಕೊಂಡಿದ್ದಾರೆ : ಬಿ.ಕೆ. ಹರಿಪ್ರಸಾದ್</title>
		<link>https://peepalmedia.com/vishwaguru-seeing-rahul-gandhis-padayatra-b-k-hariprasad/</link>
		
		<dc:creator><![CDATA[Peepal Media]]></dc:creator>
		<pubDate>Sat, 15 Oct 2022 12:50:09 +0000</pubDate>
				<category><![CDATA[ಬಳ್ಳಾರಿ]]></category>
		<category><![CDATA[ballary]]></category>
		<category><![CDATA[bengalure]]></category>
		<category><![CDATA[bharath jodo yathre]]></category>
		<category><![CDATA[bk hariprasad]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[modi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Rahul Gandhi]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=10920</guid>

					<description><![CDATA[2014ರಲ್ಲಿ ವಿಶ್ವಗುರು ಕಾಂಗ್ರೆಸ್ ಮುಕ್ತ ಭಾರತ ಎಂದು ಪ್ರಚಾರ ಘೋಷಣೆ ಮಾಡಿದ್ದರು. ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಲ್ಲಿ ಆರಂಭಿಸಿದ ಈ ಯಾತ್ರೆಯಲ್ಲಿ ನಿತ್ಯ ಲಕ್ಷಾಂತರ ಮಂದಿ ಉತ್ಸಾಹ ನೀಡುತ್ತಿರುವುದನ್ನು ಕಂಡು ವಿಶ್ವಗುರು ತಲೆ ಕೆಡಿಸಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಟೀಕಿಸಿದ್ದಾರೆ. ಬಳ್ಳಾರಿಯಲ್ಲಿ ಶನಿವಾರ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಇಂದು ಭಾರತ ಜೋಡೋ ಯಾತ್ರೆ 1000 ಕಿ.ಮೀ ದೂರ ಕ್ರಮಿಸಿ ಬಳ್ಳಾರಿಗೆ ಬಂದಿದೆ. ಕರ್ನಾಟಕ ರಾಜ್ಯದಲ್ಲಿ ಸೆ.30ರಂದು ಆರಂಭವಾದ [&#8230;]]]></description>
										<content:encoded><![CDATA[
<p>2014ರಲ್ಲಿ ವಿಶ್ವಗುರು ಕಾಂಗ್ರೆಸ್ ಮುಕ್ತ ಭಾರತ ಎಂದು ಪ್ರಚಾರ ಘೋಷಣೆ ಮಾಡಿದ್ದರು. ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಲ್ಲಿ ಆರಂಭಿಸಿದ ಈ ಯಾತ್ರೆಯಲ್ಲಿ ನಿತ್ಯ ಲಕ್ಷಾಂತರ ಮಂದಿ ಉತ್ಸಾಹ ನೀಡುತ್ತಿರುವುದನ್ನು ಕಂಡು ವಿಶ್ವಗುರು ತಲೆ ಕೆಡಿಸಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಟೀಕಿಸಿದ್ದಾರೆ.</p>



<p>ಬಳ್ಳಾರಿಯಲ್ಲಿ ಶನಿವಾರ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಇಂದು ಭಾರತ ಜೋಡೋ ಯಾತ್ರೆ 1000 ಕಿ.ಮೀ ದೂರ ಕ್ರಮಿಸಿ ಬಳ್ಳಾರಿಗೆ ಬಂದಿದೆ. ಕರ್ನಾಟಕ ರಾಜ್ಯದಲ್ಲಿ ಸೆ.30ರಂದು ಆರಂಭವಾದ ಈ ಯಾತ್ರೆ 429 ಕಿ.ಮೀ ಪೂರ್ಣಗೊಳಿಸಿ ಇಂದು ರಾಹುಲ್ ಗಾಂಧಿ ಅವರು ನಿಮ್ಮನ್ನು ಉದ್ದೇಶಿಸಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಲಿದ್ದಾರೆ. ರಾಹುಲ್ ಗಾಂಧಿ ಅವರು ರಾಜಕೀಯ ದುರುದ್ದೇಶಕ್ಕೆ ಈ ಪಾದಯಾತ್ರೆ ಮಾಡುತ್ತಿಲ್ಲ. ದೇಶದ ತ್ರಿವರ್ಣ ಧ್ವಜ, ಅಂಬೇಡ್ಕರ್ ಅವರ ಸಂವಿಧಾನ, ನಮ್ಮ ಹಕ್ಕು ಪ್ರತಿಪಾದಿಸುವ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ನಮ್ಮೆಲ್ಲರ ನೆಚ್ಚಿನ ನಾಯಕ ರಾಹುಲ್ ಗಾಂಧಿ ಅವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಹೇಳಿದ್ದಾರೆ.</p>



<p>ಪಾದಯಾತ್ರೆ ಮೂಲ ಉದ್ದೇಶ ಸಂಕ್ಷಿಪ್ತವಾಗಿ ಹೇಳುವುದಾದರೆ, ಭಾರತ ದೇಶವನ್ನು ದ್ವೇಷಮುಕ್ತ, ಹಿಂಸೆ ಮುಕ್ತ, ನಿರುದ್ಯೋಗ ಮುಕ್ತ, ಪ್ರಜಾಪ್ರಭುತ್ವ ರಕ್ಷಿಸುವ, ಬಡಮುಕ್ತ ಭಾರತ ಉದ್ದೇಶದಿಂದ ಈ ಯಾತ್ರೆ ಆರಂಭವಾಗಿದೆ. ಈ ಯಾತ್ರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3570 ಕಿ.ಮೀ ಯಾತ್ರೆಯಾಗಿದೆ. ಭಾರತ ಯಾತ್ರೆ, ರಾಜ್ಯದ ಪ್ರದೇಶ ಯಾತ್ರಿ, ಅಥಿಥಿ ತ್ರಿಗಳಿದ್ದಾರೆ. ನಮ್ಮ ರಾಜ್ಯದಲ್ಲಿ ನಿತ್ಯ 1 ಲಕ್ಷ ಜನ ಹೆಜ್ಜೆ ಹಾಕಿದ್ದು, ವಿಶ್ವದಲ್ಲಿ ಇದು ಐತಿಹಾಸಿಕ ಯಾತ್ರೆ. ಸ್ವಾತಂತ್ರ್ಯ ಪೂರ್ವದಲ್ಲಿ ಗಾಂಧಿ ನೇತೃತ್ವದಲ್ಲಿ ಯಾತ್ರೆ ನಡೆದಿದ್ದು, ಸ್ವಾತಂತ್ರ್ಯದ ನಂತರ ನಭೂತೋ ನಭವಿಷ್ಯತಿ ಎಂಬ ರೀತಿಯಲ್ಲಿ ಈ ಯಾತ್ರೆ ನಡೆಯುತ್ತಿದೆ ಎಂದಿದ್ದಾರೆ.</p>



<p>ದೇಶದ ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರಲಾಂಛನ, ಸಂವಿಧಾನ ಇವೆಲ್ಲವಕ್ಕೂ ಆರ್,ಎಸ್‌,ಎಸ್‌ ಮತ್ತು ಸಂಘ ಪರಿವಾರ ವಿರೋಧ ಮಾಡುತ್ತಿದೆ. ಇದನ್ನು ಬಹಿರಂಗವಾಗಿ ಮತ್ತು ಆಡಳಿತಾತ್ಮಕವಾಗಿ ಅವರು ವಿರೋಧ ಮಾಡುತ್ತಿದ್ದಾರೆ, ಇದರಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಇದನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ. ಇಂದು ನರೇಂದ್ರ ಮೋದಿ ಅವರು ಪ್ರಧಾನಿಯಾಗಿರುವುದು, ನಾನು ಮುಖ್ಯಮಂತ್ರಿಯಾಗಿರುವುದು ಕೂಡ ಬಾಬಾ ಸಾಹೇಬರು ನೀಡಿರುವ ಸಂವಿಧಾನದಿಂದ. ಇದನ್ನೇ ನಾಶ ಮಾಡಲು ಹೊರಟಿದ್ದೀರಲ್ವಾ ನಿಮಗೆ ನಾಚಿಕೆಯಾಗಲ್ವಾ?  ಎಂದು ಪ್ರಶ್ನಿಸಿದ್ದಾರೆ.</p>



<p></p>



<p>ನಾನು ರಾಹುಲ್‌ ಗಾಂಧಿ ಅವರಿಗೆ ಭಾರತ ಐಕ್ಯತಾ ಯಾತ್ರೆ ಎಂಬ ದೊಡ್ಡ ಸಾಹಸಕ್ಕೆ ಕೈ ಹಾಕಿರುವುದಕ್ಕಾಗಿ ತುಂಬುಹೃದಯದಿಂದ ನಮಸ್ಕಾರ ಮಾಡುತ್ತೇನೆ, ನಾವೆಲ್ಲರೂ ರಾಹುಲ್‌ ಗಾಂಧಿ ಅವರ ಹೆಗಲಿಗೆ ಹೆಗಲು ಕೊಟ್ಟು ದುಡಿಯೋಣ, ಕರ್ನಾಟಕದಲ್ಲಿ ಪಾದಯಾತ್ರೆಯು ನಮ್ಮ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುತ್ತಾರೆ ಎಂಬ ಭರವಸೆಯನ್ನು ನಾನು ರಾಹುಲ್‌ ಗಾಂಧಿ ಅವರಿಗೆ ನೀಡಲು ಬಯಸುತ್ತೇನೆ. ಇದು ನೂರಕ್ಕೆ ನೂರರಷ್ಟು ಸತ್ಯ.</p>



<p>ರಾಹುಲ್ ಗಾಂಧಿ ಅವರ ಜತೆ ಫೋಟೋ ತೆಗೆಸಿಕೊಳ್ಳಲು ಸಾವಿರಾರು ಜನ ಪ್ರಯತ್ನಿಸಿದ್ದು, ಅವರಿಗೆ ಭದ್ರತೆ ಕಾರಣದಿಂದ ಅವಕಾಶ ನೀಡಲಿಲ್ಲ. ಈ ಯಾತ್ರೆಯಿಂದ ಬಿಜೆಪಿ ನಿದ್ದೆಗೆಟ್ಟು ಸುಳ್ಳು ಜಾಹೀರಾತು ನೀಡುತ್ತಿದ್ದಾರೆ. ಈ ಯಾತ್ರೆಗೆ ಬೆಂಬಲ ನೀಡಿರುವ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.</p>
]]></content:encoded>
					
		
		
			</item>
	</channel>
</rss>
