<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>BM Rohini &#8211; Peepal Media</title>
	<atom:link href="https://peepalmedia.com/tag/bm-rohini/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 23 May 2023 11:14:12 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>BM Rohini &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಬಿ.ಎಂ. ರೋಹಿಣಿಯವರ ಕೃತಿಗೆ ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ</title>
		<link>https://peepalmedia.com/b-m-vijaya-dabbe-literary-award-for-rohinis-work/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 22 May 2023 14:07:04 +0000</pubDate>
				<category><![CDATA[ಕಲೆ – ಸಾಹಿತ್ಯ]]></category>
		<category><![CDATA[BM Rohini]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Vijaya dabbe prize]]></category>
		<guid isPermaLink="false">https://peepalmedia.com/?p=21825</guid>

					<description><![CDATA[ಮಂಗಳೂರಿನ &#8216;ಆಕೃತಿ ಆಶಯ&#8217; ಪ್ರಕಾಶನ 2022ರಲ್ಲಿ ಪ್ರಕಟಿಸಿದ ಲೇಖಕಿ ಬಿ.ಎಂ.ರೋಹಿಣಿ ಅವರ&#160; &#8216;ವೇಶ್ಯಾವಾಟಿಕೆಯ ಕಥೆ-ವ್ಯಥೆ&#8217;&#160; ಸಂಶೋಧನಾ ಕೃತಿಯನ್ನು 2023ನೇ ಸಾಲಿನ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಮತಾ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಡಾ.ಸಬಿಹಾ ಭೂಮಿಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು&#160; ಸ್ಥಾಪಿಸಿರುವ&#160; ಈ ಪ್ರಶಸ್ತಿಗೆ 2019 &#8211; 2022 ರ ಅವಧಿಯಲ್ಲಿ ಮಹಿಳೆಯರಿಂದ ಪ್ರಕಟವಾದ &#8216;ವಿಮರ್ಶೆ ಮತ್ತು ಸಂಶೋಧನಾ ಕೃತಿಗಳನ್ನು&#8217; ಆಹ್ವಾನಿಸಲಾಗಿತ್ತು. 46 ಲೇಖಕಿಯರು ತಮ್ಮ ಕೃತಿಗಳನ್ನು ಕಳುಹಿಸಿದ್ದರು.&#160; ಎಲ್ಲ [&#8230;]]]></description>
										<content:encoded><![CDATA[
<p>ಮಂಗಳೂರಿನ &#8216;ಆಕೃತಿ ಆಶಯ&#8217; ಪ್ರಕಾಶನ 2022ರಲ್ಲಿ ಪ್ರಕಟಿಸಿದ ಲೇಖಕಿ ಬಿ.ಎಂ.ರೋಹಿಣಿ ಅವರ&nbsp; &#8216;ವೇಶ್ಯಾವಾಟಿಕೆಯ ಕಥೆ-ವ್ಯಥೆ&#8217;&nbsp; ಸಂಶೋಧನಾ ಕೃತಿಯನ್ನು 2023ನೇ ಸಾಲಿನ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಮತಾ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಡಾ.ಸಬಿಹಾ ಭೂಮಿಗೌಡ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>



<p>ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು&nbsp; ಸ್ಥಾಪಿಸಿರುವ&nbsp; ಈ ಪ್ರಶಸ್ತಿಗೆ 2019 &#8211; 2022 ರ ಅವಧಿಯಲ್ಲಿ ಮಹಿಳೆಯರಿಂದ ಪ್ರಕಟವಾದ &#8216;ವಿಮರ್ಶೆ ಮತ್ತು ಸಂಶೋಧನಾ ಕೃತಿಗಳನ್ನು&#8217; ಆಹ್ವಾನಿಸಲಾಗಿತ್ತು. 46 ಲೇಖಕಿಯರು ತಮ್ಮ ಕೃತಿಗಳನ್ನು ಕಳುಹಿಸಿದ್ದರು.&nbsp;</p>



<p>ಎಲ್ಲ ಕೃತಿಗಳನ್ನು ಅವಲೋಕಿಸಿದ ಡಾ. ಎಂ.ಉಷಾ, ಡಾ.ಸೆಲ್ವಕುಮಾರಿ ಮತ್ತು ಡಾ.ಆರ್.ಸುನಂದಮ್ಮ ಅವರನ್ನೊಳಗೊಂಡ&nbsp; ಆಯ್ಕೆ ಸಮಿತಿಯು ಸಂಶೋಧನೆಯ ವಸ್ತು, ವ್ಯಾಪ್ತಿ, ವಿಷಯ ಮತ್ತು ಒಳನೋಟಗಳನ್ನು ಪರಿಗಣಿಸಿ ರೋಹಿಣಿಯವರ ಕೃತಿಯನ್ನು ಆಯ್ಕೆ ಮಾಡಿದೆ. ಸಾಹಿತ್ಯ ಪ್ರಶಸ್ತಿಯು 25,000 ರೂ. ನಗದು ಬಹುಮಾನ, ಫಲಕವನ್ನು ಒಳಗೊಂಡಿದ್ದು, ಜೂನ್&nbsp; 1ರಂದು ಮೈಸೂರಿನಲ್ಲಿ ಪ್ರದಾನ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.</p>



<figure class="wp-block-gallery has-nested-images columns-default is-cropped wp-block-gallery-1 is-layout-flex wp-block-gallery-is-layout-flex">
<figure class="wp-block-image size-large"><img fetchpriority="high" decoding="async" width="265" height="400" data-id="21828" src="https://peepalmedia.com/wp-content/uploads/2023/05/rohini-1.png" alt="" class="wp-image-21828" srcset="https://peepalmedia.com/wp-content/uploads/2023/05/rohini-1.png 265w, https://peepalmedia.com/wp-content/uploads/2023/05/rohini-1-199x300.png 199w, https://peepalmedia.com/wp-content/uploads/2023/05/rohini-1-150x226.png 150w" sizes="(max-width: 265px) 100vw, 265px" /></figure>
</figure>



<p><strong>ರೋಹಿಣಿ ಪರಿಚಯ</strong></p>



<p>ಹೊಸ ವಿಚಾರ, ಆಲೋಚನೆಗಳಿಗೆ ಸದಾ ತೆರೆದುಕೊಳ್ಳುವ ಸರಳ ಸ್ವಭಾವದ ಬಿ.ಎಂ.ರೋಹಿಣಿ ಮಂಗಳೂರು ತಾಲೂಕು ಬಂಟ್ವಾಳ ಹತ್ತಿರದ ತುಂಬೆಯ ಕಾಣೆಮಾರಿನಲ್ಲಿ 1944 ಏಪ್ರಿಲ್ 6 ರಂದು ಜನಿಸಿದರು. ತಾಯಿ ದೇವಕಿ, ತಂದೆ ಕೊಗ್ಗಪ್ಪ.&nbsp;</p>



<p>ಕಪ್ಪು ಬಣ್ಣದ ಹುಡುಗಿಗೆ ಶಾಲೆ ಕಲಿವ ಆಸೆ. ಬಡತನ ಇವರಿಗೆ 6ನೇ ತರಗತಿಯಿಂದಲೇ ಬೀಡಿ ಕಟ್ಟಲು ಕಲಿಸಿತು. ತಂದೆಯಿಂದ ಸಾಹಿತ್ಯ-ಸಂಗೀತದ ಆಸಕ್ತಿ ಬಳುವಳಿಯಾಗಿ ಬಂದಿತ್ತಾದರೂ ವಿದ್ಯೆಗೆ ಬೆಂಗಾವಲಾಗಿದ್ದು ತಾಯಿ. ಬಾಲ್ಯದಿಂದಲೇ ಬರೆವಣಿಗೆ&nbsp; ಕೈ ಹಿಡಿದಿತ್ತು. ಆದರೆ ಇತರರಿಗೆ ತೋರಿಸುವ ಧೈರ್ಯವಿರಲಿಲ್ಲ. ಬಡತನ, ಅವಮಾನಗಳು, ಮೈಬಣ್ಣ ಇವರನ್ನು ಕೀಳರಿಮೆಯ ಕೂಪಕ್ಕೆ ನೂಕಿತ್ತು. ಇವೆಲ್ಲದರ ಮಧ್ಯೆ ಬದುಕನ್ನು ಹಿಡಿದಿಟ್ಟು ನಡೆಸುವ ಛಲಕ್ಕೆ ಕೊರತೆ ಇರಲಿಲ್ಲ. ಓದು ಮುಗಿಸಿ ಶಾಲಾ ಶಿಕ್ಷಕಿಯಾದರು.&nbsp; ಏಳು ಬೀಳುಗಳೊಂದಿಗೆ ಜೀವನ ಅನುಭವಿಸುತ್ತಾ, ಓದು-ಬರಹ ರೂಢಿಸಿಕೊಂಡರು. ಅನುಭವಗಳ ಆಧಾರದ ಮೇಲೆ ನೇರವಾಗಿ, ಸರಳವಾಗಿ ಬರೆದರು. ಅವರಿಗೆ ಬದುಕು ಬೇರೆಯಲ್ಲ, ಬರಹ ಬೇರೆಯಲ್ಲ. ಅಸಾಧ್ಯವಾದ ಆದರ್ಶಗಳನ್ನು ಅವರು ಬರೆದಿಲ್ಲ. ಇದುವೇ ಪರಮ ಸತ್ಯ ಎನ್ನುವುದಕ್ಕಿಂತ, ಬೇರೆಬೇರೆ ಆಲೋಚನೆಗಳಿಗೆ ತೆರೆದುಕೊಳ್ಳುವ ಪ್ರಯತ್ನ ಮಾಡಿದ್ದು ಅವರ ಬರೆವಣಿಗೆಯಲ್ಲಿ ಎದ್ದುಕಾಣುತ್ತದೆ. ಶಿಕ್ಷಕಿಯಾಗಿ ಅವರ ಸಾಧನೆ ಅಪಾರ.&nbsp;</p>



<p><strong>ಪ್ರಕಟಿತ ಕೃತಿಗಳು</strong></p>



<p>ಕರ್ತವ್ಯ , ಗರಿಕೆಯ ಕುಡಿಗಳು, ಒಂದು ಹಿಡಿ ಮಣ್ಣು ಇವರ ಕಥಾ ಸಂಕಲನಗಳು. ಸ್ತ್ರೀ-ಸಂವೇದನೆ, ಸ್ತ್ರೀ ಶಿಕ್ಷಣ ಸಂಸ್ಕೃತಿ ,ಸ್ತ್ರೀ ಭಿನ್ನ ಮುಖಗಳು , ಸಾಮಾಜಿಕ ತಲ್ಲಣಗಳು, ಆರಾಧನಾ ರಂಗದಲ್ಲಿ ಸ್ತ್ರೀ , ಪ್ರತಿಸ್ಪಂದನ ಮತ್ತು&nbsp; ಸಮೀಕ್ಷೆ&nbsp; ಅವರ ಲೇಖನ/ವಿಮರ್ಶಾ ಕೃತಿಗಳು.&nbsp;</p>



<p>ಸಂಶೋಧನಾ ಕ್ಷೇತ್ರಕ್ಕೆ ಅವರ ಕೊಡುಗೆ ವಿಶಿಷ್ಟ. ಅವಿವಾಹಿತ ಮಹಿಳೆ- ಸಮಾಜೋ ಸಾಂಸ್ಕೃತಿಕ ಅಧ್ಯಯನ, ತುಳುನಾಡಿನ ಮಾಸ್ತಿಕಲ್ಲುಗಳು-ವೀರಗಲ್ಲುಗಳು, ದಕ್ಷಿಣಕನ್ನಡ ಜಿಲ್ಲೆಯ ಮಹಿಳಾ ಹೋರಾಟದ ದಾಖಲೀಕರಣ, ದಕ್ಷಿಣಕನ್ನಡ ಜಿಲ್ಲೆಯ ಬಿಲ್ಲವರ ಗುತ್ತು ಮನೆಗಳ ಅಧ್ಯಯನ ಇವು&nbsp; ಇತರರೊಂದಿಗೆ ಸೇರಿ ನಡೆಸಿದ ಸಂಶೋಧನಾ ಅಧ್ಯಯನಗಳು. ವೇಶ್ಯಾವಾಟಿಕೆಯ ಕಥೆ-ವ್ಯಥೆ (2022) ಅವರದೇ ಸಂಶೋಧನಾ ಕೃತಿ. &#8216;ಅಧ್ಯಾಪಕಿಯ ಅಧ್ವಾನಗಳು &#8216; ಅನುಭವ ಕಥನ. &#8216;ನಾಗಂದಿಗೆಯೊಳಗಿನಿಂದ&#8217; ಜೀವನ ಕಥನ.</p>



<p>ಬರೆವಣಿಗೆ, ಓದಿಗಷ್ಟೆ ಸೀಮಿತವಾಗದೆ ವಿಭಿನ್ನ ಸಾಮಾಜಿಕ ಚಟುವಟಿಕೆಗಳ ಒಡನಾಟವನ್ನು ಸದಾ ಇಟ್ಟುಕೊಂಡವರು. ಕರಾವಳಿ ಲೇಖಕಿಯರ-ವಾಚಕಿಯರ ಸಂಘ, ಡೀಡ್ಸ್, ವೆಲೊರೆಡ್, ಸಂಚಲನ, ಶಿಕ್ಷಕ-ಸಂಗತಿ ಮುಂತಾದ ಹಲವು ಸಂಘಸಂಸ್ಥೆಗಳ ಜೊತೆ ಸಕ್ರಿಯವಾಗಿದ್ದಾರೆ.&nbsp; ಹೊರನೋಟಕ್ಕೆ ಅತ್ಯಂತ ಸರಳವಾಗಿ, ನಮ್ರವಾಗಿ ಕಾಣುವ ಅವರ ಬದುಕಿನ ತುಂಬ ದಿಟ್ಟ ನಿರ್ಧಾರಗಳೇ ತುಂಬಿವೆ.&nbsp;</p>



<p>ಎಪ್ಪತ್ತೊಂಬತ್ತರ ಹರೆಯದಲ್ಲೂ&nbsp; ಓದು, ಸಂಶೋಧನೆ, ಸಂಘಟನೆ, ಸಮಾಲೋಚನೆಗಳಲ್ಲಿ ಕ್ರಿಯಾಶೀಲರಾಗಿರುವ ರೋಹಿಣಿಯವರನ್ನು ಹಲವು‌ ಸಂಘ ಸಂಸ್ಥೆಗಳು‌ ಗೌರವಿಸಿವೆ. ಸಮತಾ ಅಧ್ಯಯನ ‌ಕೇಂದ್ರವು ವಿಜಯಾ ದಬ್ಬೆ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಪ್ರಶಸ್ತಿಯನ್ನು ಮೊದಲನೆಯ ವರ್ಷವೇ ಈ ಹಿರಿಯಕ್ಕನಿಗೆ ನೀಡಲು ಹೆಮ್ಮೆ ಪಡುತ್ತದೆ ಎಂದೂ ಡಾ.ಸಬಿಹಾ ಭೂಮಿಗೌಡ ಹೇಳಿದ್ದಾರೆ.</p>



<p><strong>ಇದನ್ನೂ ಓದಿ</strong>&#8211;<a rel="noreferrer noopener" href="https://peepalmedia.com/?page_id=21826" data-type="page" data-id="21826" target="_blank">ತೆರೆಮರೆಯ ಪ್ರತಿಭೆ ಬಿ ಎಂ.ರೋಹಿಣಿ</a>  <a href="https://peepalmedia.com/behind-the-scenes-talent-is-b-m-rohini/" target="_blank" rel="noreferrer noopener">https://peepalmedia.com/behind-the-scenes-talent-is-b-m-rohini/</a></p>
]]></content:encoded>
					
		
		
			</item>
		<item>
		<title>ತೆರೆಮರೆಯ ಪ್ರತಿಭೆ ಬಿ ಎಂ.ರೋಹಿಣಿ</title>
		<link>https://peepalmedia.com/behind-the-scenes-talent-is-b-m-rohini/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 07 Jan 2023 12:57:50 +0000</pubDate>
				<category><![CDATA[ಹೆಣ್ಣೋಟ]]></category>
		<category><![CDATA[bengalure]]></category>
		<category><![CDATA[BM Rohini]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[writing]]></category>
		<guid isPermaLink="false">https://peepalmedia.com/?p=18975</guid>

					<description><![CDATA[ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟಕ್ಕೆ 10 ವರ್ಷಗಳಾದ ನೆನಪಿಗೆ ಒಕ್ಕೂಟವು ಪಯಣ ನಡೆಸಿದ 11 ಜಿಲ್ಲೆಗಳಿಂದ ಒಬ್ಬೊಬ್ಬ ಹಿರಿಯ ಸಂಗಾತಿಯ ವ್ಯಕ್ತಿಗತ-ಸಂಘಟಿತ ಹೋರಾಟದ ಸ್ಫೂರ್ತಿಯನ್ನು ತೆರೆದಿಡುತ್ತಾ, `ನಮ್ಮ ಅಕ್ಕ, ನಮ್ಮ ಹಿರಿಮೆ’ ಎಂದು ಅವರನ್ನು ಗೌರವಿಸಲಿದೆ. ಅಕ್ಕಂದಿರ ಬದುಕು-ಸಾಧನೆಯ ಕಿರು ಚಿತ್ರಗಳನ್ನು ಪೀಪಲ್‌ ಮೀಡಿಯಾವು ಪ್ರಕಟಿಸುತ್ತಿರುವ ಹತ್ತನೇ ಮತ್ತು ಕೊನೆಯ ಸರಣಿಯಲ್ಲಿ ಹತ್ತು ಹಲವು ಸಾಧನೆಗಳನ್ನು ಮಾಡಿಯೂ ತೆರೆಮರೆಯಲ್ಲೇ ಉಳಿದ ಮಂಗಳೂರಿನ ಬಿ.ಎಂ ರೋಹಿಣಿಯವರ ಸಾಧನೆಯ ಚಿತ್ರಣವನ್ನು ನೀಡಿದ್ದಾರೆ ಸಾಮಾಜಿಕ ಕಾರ್ಯಕರ್ತರಾಗಿರುವ ಪವಿತ್ರಾ ಜ್ಯೋತಿಗುಡ್ಡೆ. ‘ನಮಗೆ ಗೊತ್ತಿಲ್ಲದ [&#8230;]]]></description>
										<content:encoded><![CDATA[
<p><strong>ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟಕ್ಕೆ 10 ವರ್ಷಗಳಾದ ನೆನಪಿಗೆ ಒಕ್ಕೂಟವು ಪಯಣ ನಡೆಸಿದ 11 ಜಿಲ್ಲೆಗಳಿಂದ ಒಬ್ಬೊಬ್ಬ ಹಿರಿಯ ಸಂಗಾತಿಯ ವ್ಯಕ್ತಿಗತ-ಸಂಘಟಿತ ಹೋರಾಟದ ಸ್ಫೂರ್ತಿಯನ್ನು ತೆರೆದಿಡುತ್ತಾ, `ನಮ್ಮ ಅಕ್ಕ, ನಮ್ಮ ಹಿರಿಮೆ’ ಎಂದು ಅವರನ್ನು ಗೌರವಿಸಲಿದೆ. ಅಕ್ಕಂದಿರ ಬದುಕು-ಸಾಧನೆಯ ಕಿರು ಚಿತ್ರಗಳನ್ನು ಪೀಪಲ್‌ ಮೀಡಿಯಾವು ಪ್ರಕಟಿಸುತ್ತಿರುವ ಹತ್ತನೇ ಮತ್ತು ಕೊನೆಯ ಸರಣಿಯಲ್ಲಿ ಹತ್ತು ಹಲವು ಸಾಧನೆಗಳನ್ನು ಮಾಡಿಯೂ ತೆರೆಮರೆಯಲ್ಲೇ ಉಳಿದ ಮಂಗಳೂರಿನ ಬಿ.ಎಂ ರೋಹಿಣಿಯವರ ಸಾಧನೆಯ ಚಿತ್ರಣವನ್ನು ನೀಡಿದ್ದಾರೆ ಸಾಮಾಜಿಕ ಕಾರ್ಯಕರ್ತರಾಗಿರುವ ಪವಿತ್ರಾ ಜ್ಯೋತಿಗುಡ್ಡೆ.</strong></p>



<p>‘ನಮಗೆ ಗೊತ್ತಿಲ್ಲದ ವಿಷಯ ಇನ್ನೂ ಎಷ್ಟೊಂದು ಇದೆಯಲ್ಲಾ &#8230;’ ಎನ್ನುತ್ತಾ ಅಚ್ಚರಿಯಿಂದ ಹೊಸ ವಿಚಾರ, ಆಲೋಚನೆಗಳಿಗೆ ಸದಾ ತೆರೆದುಕೊಳ್ಳುವ ಸರಳ ಸ್ವಭಾವದವರು ಬಿ.ಎಂ.ರೋಹಿಣಿ. ಮಂಗಳೂರು ತಾಲೂಕಿನ ಬಂಟ್ವಾಳ ಹತ್ತಿರದ ತುಂಬೆಯ ಕಾಣೆಮಾರಿನಲ್ಲಿ 06.04.1944ರಂದು ಇವರು ಜನಿಸಿದರು. ತಾಯಿ ದೇವಕಿ, ತಂದೆ ಕೊಗ್ಗಪ್ಪ.</p>



<p>ಕಪ್ಪು ಬಣ್ಣದ ಹುಡುಗಿಗೆ ಶಾಲೆ ಕಲಿವ ಆಸೆ ಅಪಾರ. ಬಡತನ ಇವರಿಗೆ ಆರನೇ ತರಗತಿಯಿಂದಲೇ ಬೀಡಿ ಕಟ್ಟಲು ಕಲಿಸಿತು. ತಂದೆಯಿಂದ ಸಾಹಿತ್ಯ-ಸಂಗೀತದ ಆಸಕ್ತಿ ಬಳುವಳಿಯಾಗಿ ಬಂದಿತ್ತು. ತಂದೆ ಇವರನ್ನು ವ್ಯಾಯಾಮ ಶಾಲೆಗೆ ಕಳುಹಿಸಿದ್ದೂ ಇತ್ತು. ಆದರೆ ಸಂಗೀತ ಹಾಡಬಾರದೆಂಬ ಕಟ್ಟಳೆ ತಂದೆಯದು. ಮನೆ ನಡೆಸಿದವರು, ಮಗಳ ವಿದ್ಯೆಗೆ ಬೆಂಗಾವಲಾದವರು ಮಾತ್ರ ತಾಯಿ. ಬರೆವಣಿಗೆ ಬಾಲ್ಯದಿಂದಲೂ ಇವರ ಕೈ ಹಿಡಿದಿತ್ತು. ಆದರೆ ಇತರರಿಗೆ ತೋರಿಸುವ ಧೈರ್ಯವಿರಲಿಲ್ಲ. ಬಡತನ, ಅವಮಾನಗಳು, ಮೈಬಣ್ಣ ಇವರನ್ನು ಕೀಳರಿಮೆಯ ಕೂಪಕ್ಕೆ ನೂಕಿದ್ದವು. ಇವೆಲ್ಲದರ ಮಧ್ಯೆ ಬದುಕನ್ನು ಹಿಡಿದಿಟ್ಟು ನಡೆಸುವ ಛಲಕ್ಕೆ ಕಡಿಮೆ ಇರಲಿಲ್ಲ. ಓದು ಮುಗಿಸಿ ಶಾಲಾ ಶಿಕ್ಷಕಿಯೂ ಆದರು.</p>



<figure class="wp-block-image size-full"><img decoding="async" width="300" height="333" src="https://peepalmedia.com/wp-content/uploads/2023/01/Screenshot-2023-01-07-182815.jpg" alt="" class="wp-image-18978" srcset="https://peepalmedia.com/wp-content/uploads/2023/01/Screenshot-2023-01-07-182815.jpg 300w, https://peepalmedia.com/wp-content/uploads/2023/01/Screenshot-2023-01-07-182815-270x300.jpg 270w, https://peepalmedia.com/wp-content/uploads/2023/01/Screenshot-2023-01-07-182815-150x167.jpg 150w" sizes="(max-width: 300px) 100vw, 300px" /><figcaption class="wp-element-caption">ಬಿ.ಎಂ ರೋಹಿಣಿ</figcaption></figure>



<p>ನಡುವಯಸ್ಸಿನಲ್ಲಿ ಅವಿವಾಹಿತರಾಗಿ ಉಳಿಯುವ ತೀರ್ಮಾನ ಮಾಡಿದರು. ಅದರ ಸವಾಲುಗಳು ಕಡಿಮೆ ಏನೂ ಇರಲಿಲ್ಲ. ಏಳು ಬೀಳುಗಳೊಂದಿಗೆ ಜೀವನವನ್ನು ಅನುಭವಿಸುತ್ತಾ, ಓದು-ಬರಹಗಳನ್ನು ರೂಢಿಸಿಕೊಳ್ಳುತ್ತಾ ಮುಂದುವರಿದರು. ಅನುಭವಗಳ ಆಧಾರದ ಮೇಲೇ ನೇರವಾಗಿ, ಸರಳವಾಗಿ ಬರೆದರು. ಅವರಿಗೆ ಬದುಕು ಬೇರೆಯಲ್ಲ, ಬರಹ ಬೇರೆಯಲ್ಲ. ಅಸಾಧ್ಯವಾದ ಆದರ್ಶಗಳನ್ನು ಅವರು ಬರೆದಿಲ್ಲ. ಇದುವೇ ಪರಮ ಸತ್ಯ ಎನ್ನುವುದಕ್ಕಿಂತ, ಬೇರೆಬೇರೆ ಆಲೋಚನೆಗಳಿಗೆ ತೆರೆದುಕೊಳ್ಳುವ ಪ್ರಯತ್ನ ಅವರ ಬರೆವಣಿಗೆಯಲ್ಲಿ ಎದ್ದುಕಾಣುತ್ತದೆ. ಶಾಲಾ ಅಧ್ಯಾಪಕಿಯಾಗಿ ಅವರು ಮಾಡಿದ ಸಾಧನೆ ಅಪಾರ. ವೃತ್ತಿಯಲ್ಲಿ ಇದ್ದುಕೊಂಡೇ ಹಿಂದಿ ಪ್ರವೀಣ, ಕನ್ನಡ ಎಂ.ಎ. ಪದವಿ ಪಡೆದರು.</p>



<p><strong>ಪ್ರಕಟಿತ ಕೃತಿಗಳು:&nbsp;</strong></p>



<p>ಕರ್ತವ್ಯ (1996), ಗರಿಕೆಯ ಕುಡಿಗಳು (2004), ಒಂದು ಹಿಡಿ ಮಣ್ಣು (2016) ಇವರ ಕಥಾ ಸಂಕಲನಗಳು. ಸ್ತ್ರೀ-ಸಂವೇದನೆ(1995), ಸ್ತ್ರೀ ಶಿಕ್ಷಣ ಸಂಸ್ಕೃತಿ (2000), ಸ್ತ್ರೀ ಭಿನ್ನ ಮುಖಗಳು (2005), ಸಾಮಾಜಿಕ ತಲ್ಲಣಗಳು (2007), ಆರಾಧನಾ ರಂಗದಲ್ಲಿ ಸ್ತ್ರೀ (2004), ಪ್ರತಿಸ್ಪಂದನ (2020) ಮತ್ತು&nbsp; ಸಮೀಕ್ಷೆ (2020) ಅವರ ಲೇಖನ/ವಿಮರ್ಶಾ ಕೃತಿಗಳು. ಅಧ್ಯಾಪಕಿಯ ಅಧ್ವಾನಗಳು (2007) ಅವರ ಅನುಭವ ಕಥನ. ಸಂಶೋಧನಾ ಕ್ಷೇತ್ರಕ್ಕೆ ಅವರ ಕೊಡುಗೆ ವಿಶಿಷ್ಟವಾಗಿದೆ. ಅವಿವಾಹಿತ ಮಹಿಳೆ-ಸಮಾಜೋ ಸಾಂಸ್ಕೃತಿಕ ಅಧ್ಯಯನ(2008), ತುಳುನಾಡಿನ ಮಾಸ್ತಿಕಲ್ಲುಗಳು-ವೀರಗಲ್ಲುಗಳು(2010), ದಕ್ಷಿಣಕನ್ನಡ ಜಿಲ್ಲೆಯ&nbsp; ಮಹಿಳಾ ಹೋರಾಟದ ದಾಖಲೀಕರಣ(2014), ದಕ್ಷಿಣಕನ್ನಡ ಜಿಲ್ಲೆಯ ಬಿಲ್ಲವರ ಗುತ್ತು ಮನೆಗಳ ಅಧ್ಯಯನ(2020) ಇವು ಅವರು ಇತರರೊಂದಿಗೆ ಸೇರಿ ನಡೆಸಿದ ಸಂಶೋಧನಾ ಅಧ್ಯಯನಗಳಾದರೆ, ವೇಶ್ಯಾವಾಟಿಕೆಯ ಕಥೆ-ವ್ಯಥೆ (2022) ಅವರ ಕೃತಿ. ಲಲಿತಾ ರೈ, ಚಿತ್ರ ಕಲಾವಿದ ಪಾವಂಜೆ ಗೋಪಾಲ ಕೃಷ್ಣಯ್ಯ, ಸಂಗೀತ ವಿದ್ವಾನ್ ಎನ್ ಕೇಶವ ಭಟ್ ಮತ್ತು ಸಮಾಜ ಸೇವಕಿ ಹಿಲ್ಡಾ ರಾಯಪ್ಪನ್ ಕುರಿತು ವ್ಯಕ್ತಿಚಿತ್ರಗಳ ಬರಹಗಳನ್ನೂ ಇವರು ಬರೆದಿದ್ದಾರೆ.</p>



<p>ಬರೆಯುತ್ತಾ ಓದುತ್ತಾ ಜನರಿಂದ ಪ್ರತ್ಯೇಕವಾಗಿ ಉಳಿದವರಲ್ಲ ರೋಹಿಣಿ. ವಿಭಿನ್ನ ಸಾಮಾಜಿಕ ಚಟುವಟಿಕೆಗಳ ಒಡನಾಟವನ್ನು ಸದಾ ಅವರು ಇಟ್ಟುಕೊಂಡವರು. ಕರಾವಳಿ ಲೇಖಕಿಯರ-ವಾಚಕಿಯರ ಸಂಘದ ಕಾರ್ಯದರ್ಶಿಯಾಗಿ, ಸಂಘವನ್ನು ಕಟ್ಟಿ ಬೆಳೆಸುವುದರಲ್ಲಿ, ಸಂಘವು ಹುಟ್ಟಿದಂದಿನಿಂದ ನಿರಂತರ ಶಮಿಸುತ್ತಿರುವ ಇವರು ಈಗ ಸೆಸ್ಕಾ ಸಹಯೋಗದೊಂದಿಗೆ ಉದಯೋನ್ಮುಖರನ್ನು ಕಥಾರಚನೆಯಂಥ ಶಿಬಿರಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸುತ್ತಿದ್ದಾರೆ. ಡೀಡ್ಸ್, ವೆಲೊರೆಡ್, ಸಂಚಲನ, ಶಿಕ್ಷಕ-ಸಂಗತಿ ಮುಂತಾದ ಹಲವು ಸಂಘಸಂಸ್ಥೆಗಳ ಜೊತೆ ಸಕ್ರಿಯವಾಗಿದ್ದಾರೆ. ಯಾವುದೇ ಸಾಮಾಜಿಕ-ಸಾಹಿತ್ಯಿಕ ಕಾರ್ಯಕ್ರಮ ನಡೆಯುವಲ್ಲಿ, ಸದ್ದಿಲ್ಲದೆ ಭಾಗವಹಿಸಿ, ತಮ್ಮ ಪಾಲಿನ ಕೆಲಸವನ್ನು ಶ್ರದ್ಧೆಯಿಂದ ಮಾಡಿಕೊಡುವುದು ರೋಹಿಣಿಯವರ ವಿಶಿಷ್ಟತೆ. ಬದುಕಿನ ಬಗ್ಗೆ ಖುಷಿ, ಪ್ರೀತಿ ಇಟ್ಟುಕೊಳ್ಳಲು ಸಾಧ್ಯವಾದ ಬಗ್ಗೆ ಅವರಿಗೆ ಹೆಮ್ಮೆಯಿದೆ. ರೋಹಿಣಿಯವರು ಬದುಕಿನಲ್ಲಿ ವಿರೋಧಿಸಿದ ಹಾಗೂ ಶರಣಾದ ರೀತಿ ವಿಶಿಷ್ಟ. ಹೊರನೋಟಕ್ಕೆ ಅತ್ಯಂತ ಸರಳವಾಗಿ, ನಮ್ರವಾಗಿ ಕಾಣುವ ಅವರ ಬದುಕಿನ ತುಂಬ ದಿಟ್ಟ ನಿರ್ಧಾರಗಳೇ ತುಂಬಿವೆ. ಇವರ ‘ಸ್ತ್ರೀಸಂವೇದನೆ’ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿನಿಧಿ ಬಹುಮಾನ, ‘ಸ್ತ್ರೀ ಶಿಕ್ಷಣ ಸಂಸ್ಕೃತಿ’ ಕೃತಿಗೆ ದಕ್ಷಿಣಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಪ್ರಶಸ್ತಿಗಳು ದೊರೆತಿವೆ.</p>



<p>&nbsp;ಎಪ್ಪತ್ತೆಂಟರ ಹರೆಯದ ರೋಹಿಣಿಯವರನ್ನು ಹಲವರು ಗೌರವಿಸಿ ತಾವೂ ಸಂಭ್ರಮಿಸಿದ್ದಾರೆ. ಮೌಲ್ಯ ಗೌರವ ಪ್ರಶಸ್ತಿ (2002), ಕಾಂತಾವರ ಸಾಹಿತ್ಯ ಪ್ರಶಸ್ತಿ (2015), ಕರ್ನಾಟಕ ಸರಕಾರದ ವೀರರಾಣಿ ಅಬ್ಬಕ್ಕ ಪ್ರಶಸ್ತಿ(2016), ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗೌರವ ಪ್ರಶಸ್ತಿ (2015), ಇನ್ಫೋಸಿಸ್ ಪ್ರತಿಷ್ಠಾನದ ಸಾಹಿತ್ಯ ಪ್ರಶಸ್ತಿ(2021) ಮುಂತಾದವು ಅವುಗಳಲ್ಲಿ ಕೆಲವು. ಇಂತಹ ತೆರೆಮರೆಯಲ್ಲೇ ಉಳಿದು ಈ ವಯಸ್ಸಿನಲ್ಲಿಯೂ ಓದು, ಸಂಶೋಧನೆ, ಸಂಘಟನೆ, ಸಮಾಲೋಚನೆಗಳಲ್ಲಿ ಕ್ರಿಯಾಶೀಲರಾಗಿರುವ ಹಿರಿಯಕ್ಕ ರೋಹಿಣಿಯವರು ನಮ್ಮ ಹೆಮ್ಮೆ.</p>



<p><strong>ಪವಿತ್ರಾ ಜ್ಯೋತಿಗುಡ್ಡೆ</strong></p>



<p>ಸಾಮಾಜಿಕ ಕಾರ್ಯಕರ್ತರು.</p>
]]></content:encoded>
					
		
		
			</item>
	</channel>
</rss>
