<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Border Issue &#8211; Peepal Media</title>
	<atom:link href="https://peepalmedia.com/tag/border-issue/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 12 Oct 2023 05:38:18 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Border Issue &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>Maharashtra Vs Karnataka : ಗಡಿ ವಿಚಾರದಲ್ಲಿ ಮತ್ತೆ ಖ್ಯಾತೆ ತಗೆಯುತ್ತಿರುವ ಮಹಾರಾಷ್ಟ್ರ</title>
		<link>https://peepalmedia.com/maharashtra-is-gaining-fame-again-in-the-border-issue/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 12 Oct 2023 05:37:16 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[Border Issue]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=29635</guid>

					<description><![CDATA[ಬೆಳಗಾವಿ : ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಬೆಳಗಾವಿ ಗಡಿ ವಿಚಾರದಲ್ಲಿ ಮತ್ತೆ ಮಹಾರಾಷ್ಟ್ರ ಖ್ಯಾತೆ ತೆಗೆಯಲು ಮುಂದಾಗಿದೆ. ಮುಂಬೈನಲ್ಲಿ MES ಸದಸ್ಯರ ಜೊತೆ ಮಹಾರಾಷ್ಟ್ರದ ಗಡಿ ಉನ್ನತ ಮಟ್ಟದ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಸಭೆ ನಡೆಸಿ, ಕೆಲವು ಅಗತ್ಯ ಭರವಸೆ ಬಗ್ಗೆ ಮಾತನಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಗಡಿ ಉನ್ನತ ಮಟ್ಟದ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆಯವರು MES ಸದಸ್ಯರ ಜೊತೆ ಮಹಾರಾಷ್ಟ್ರದ ಗಡಿ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ್ದಾರೆ. ಅದರಂತೆ MES [&#8230;]]]></description>
										<content:encoded><![CDATA[
<p>ಬೆಳಗಾವಿ : ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ಬೆಳಗಾವಿ ಗಡಿ ವಿಚಾರದಲ್ಲಿ ಮತ್ತೆ ಮಹಾರಾಷ್ಟ್ರ ಖ್ಯಾತೆ ತೆಗೆಯಲು ಮುಂದಾಗಿದೆ. ಮುಂಬೈನಲ್ಲಿ MES ಸದಸ್ಯರ ಜೊತೆ ಮಹಾರಾಷ್ಟ್ರದ ಗಡಿ ಉನ್ನತ ಮಟ್ಟದ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಸಭೆ ನಡೆಸಿ, ಕೆಲವು ಅಗತ್ಯ ಭರವಸೆ ಬಗ್ಗೆ ಮಾತನಾಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.</p>



<p>ಗಡಿ ಉನ್ನತ ಮಟ್ಟದ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆಯವರು MES ಸದಸ್ಯರ ಜೊತೆ ಮಹಾರಾಷ್ಟ್ರದ ಗಡಿ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ್ದಾರೆ. ಅದರಂತೆ MES ನ ಬಹು ದಿನಗಳ ಬೇಡಿಕೆಯಂತೆ, ಮಹಾರಾಷ್ಟ್ರ ಕರ್ನಾಟಕ ಗಡಿ ಭಾಗದ 865 ಹಳ್ಳಿಗಳ ಮರಾಠಿ ಭಾಷಿಕರಿಗೆ ಆರೋಗ್ಯ ವಿಮೆ ಯೋಜನೆ ವಿಚಾರವಾಗಿ ಚರ್ಚೆ ನಡೆಸಿರುವುದು ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.</p>



<p>ಇಷ್ಟೆ ಅಲ್ಲದೇ ಗಡಿ ಪ್ರದೇಶದ ಮರಾಠಿ ಭಾಷಿಕರಿಗಾಗಿ ಗಡಿಭಾಗದಲ್ಲಿ ಪ್ರತ್ಯೇಕ ಕಚೇರಿ ಸ್ಥಾಪನೆ ಮಾಡುವುದರ ಬಗ್ಗೆ ಕೂಡ ಚರ್ಚೆ ನಡೆದಿದೆ. ಇದರ ಮುಂದುವರಿದ ಭಾಗವಾಗಿ, ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಚಂದಗಡ್‌ನಲ್ಲಿ ಕಚೇರಿ ಸ್ಥಾಪನೆ ಮಾಡುವುದಕ್ಕೆ ಮಹಾರಾಷ್ಟ್ರ ಸರ್ಕಾರ MES ನೇತೃತ್ವದಲ್ಲಿ ಸಕಲ ಸಿದ್ದತೆಯನ್ನು ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ.</p>
]]></content:encoded>
					
		
		
			</item>
		<item>
		<title>ಚೀನಾ ಗಡಿರೇಖೆ ಉಲ್ಲಂಘನೆ : ಸಂಸತ್ತಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಧರಣಿ ಸಾಧ್ಯತೆ</title>
		<link>https://peepalmedia.com/violation-of-china-border-there-is-a-possibility-of-a-sit-in-by-parties-against-the-central-government-in-parliament/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 14 Dec 2022 06:19:35 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[Border Issue]]></category>
		<category><![CDATA[china]]></category>
		<category><![CDATA[india]]></category>
		<category><![CDATA[indian army]]></category>
		<category><![CDATA[LOC]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=18456</guid>

					<description><![CDATA[ಭಾರತ-ಚೀನಾ ಗಡಿ ಭಾಗದ‌ ಸಂಘರ್ಷ ಮತ್ತು ಇತರ ವಿಷಯಗಳ ಕುರಿತು ಜಂಟಿ ಕಾರ್ಯತಂತ್ರವನ್ನು ರೂಪಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಛೇರಿಯಲ್ಲಿ ಪ್ರತಿಪಕ್ಷ ನಾಯಕರ ಸಭೆ ಆರಂಭವಾಗಿದೆ. ಡಿಸೆಂಬರ್ 9 ರಂದು ಭಾರತ-ಚೀನಾ ಗಡಿ ಭಾಗದಲ್ಲಿ ಚೀನಾ ಸೈನಿಕರ ಉಪಟಳವನ್ನು ಮತ್ತು ಭಾರತದ 6 ಮಂದಿ ಸೈನಿಕರ ಮೇಲಾದ ಹಲ್ಲೆ ಬಗ್ಗೆ ಚರ್ಚಿಸಲು ಇಂದು ಪ್ರತಿಪಕ್ಷಗಳು ಕಾರ್ಯತಂತ್ರ ರೂಪಿಸಲಿವೆ. ಪ್ರಮುಖವಾಗಿ ಕಳೆದ ಡಿಸೆಂಬರ್ 9 ಕ್ಕೆ ಇಷ್ಟು ಗಂಭೀರವಾದ ಘಟನೆ ನಡೆದರೂ ಕೇಂದ್ರ [&#8230;]]]></description>
										<content:encoded><![CDATA[
<p style="font-size:20px">ಭಾರತ-ಚೀನಾ ಗಡಿ ಭಾಗದ‌ ಸಂಘರ್ಷ ಮತ್ತು ಇತರ ವಿಷಯಗಳ ಕುರಿತು ಜಂಟಿ ಕಾರ್ಯತಂತ್ರವನ್ನು ರೂಪಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಛೇರಿಯಲ್ಲಿ ಪ್ರತಿಪಕ್ಷ ನಾಯಕರ ಸಭೆ ಆರಂಭವಾಗಿದೆ.</p>



<p style="font-size:20px">ಡಿಸೆಂಬರ್ 9 ರಂದು ಭಾರತ-ಚೀನಾ ಗಡಿ ಭಾಗದಲ್ಲಿ ಚೀನಾ ಸೈನಿಕರ ಉಪಟಳವನ್ನು ಮತ್ತು ಭಾರತದ 6 ಮಂದಿ ಸೈನಿಕರ ಮೇಲಾದ ಹಲ್ಲೆ ಬಗ್ಗೆ ಚರ್ಚಿಸಲು ಇಂದು ಪ್ರತಿಪಕ್ಷಗಳು ಕಾರ್ಯತಂತ್ರ ರೂಪಿಸಲಿವೆ. ಪ್ರಮುಖವಾಗಿ ಕಳೆದ ಡಿಸೆಂಬರ್ 9 ಕ್ಕೆ ಇಷ್ಟು ಗಂಭೀರವಾದ ಘಟನೆ ನಡೆದರೂ ಕೇಂದ್ರ ಸರ್ಕಾರ ಇದನ್ನು ಮುಚ್ಚಿಟ್ಟ ಬಗ್ಗೆಯೂ ಚರ್ಚಿಸಲು ಪ್ರತಿಪಕ್ಷಗಳು ಪಟ್ಟು ಹಿಡಿಯಲಿವೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="en" dir="ltr"><a href="https://twitter.com/hashtag/ParliamentWinterSession?src=hash&amp;ref_src=twsrc%5Etfw">#ParliamentWinterSession</a> | Opposition leaders&#39; meeting underway at the chamber of Leader of Opposition in Rajya Sabha, Mallikarjun Kharge, to chalk out a joint strategy on the Indo-China tussle and other issues.<br><br>(Pics source: Mallikarjun Kharge&#39;s office) <a href="https://t.co/KSo6iuC7Fi">pic.twitter.com/KSo6iuC7Fi</a></p>&mdash; ANI (@ANI) <a href="https://twitter.com/ANI/status/1602891808857817088?ref_src=twsrc%5Etfw">December 14, 2022</a></blockquote><script async src="https://platform.twitter.com/widgets.js" charset="utf-8"></script>
</div></figure>



<p style="font-size:20px">ಮಂಗಳವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತವಾಂಗ್ ಘರ್ಷಣೆಯ ಕುರಿತು ಸಂಸತ್ತಿನ ಉಭಯ ಸದನಗಳಲ್ಲಿ ಹೇಳಿಕೆ ನೀಡಿದ್ದಾರೆ.&nbsp;ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಇದೇ ರೀತಿಯ ಹೇಳಿಕೆಗಳಲ್ಲಿ, &#8220;ಯಾವುದೇ ಸಾವುನೋವುಗಳು ಅಥವಾ ಗಂಭೀರ ಗಾಯಗಳಾಗಿಲ್ಲ&#8221; ಎಂದು ಸಿಂಗ್ ಹೇಳಿದ್ದರು. ಆದರೆ ಚೀನಾ ನಿರಂತರವಾಗಿ ಅರುಣಾಚಲ ಪ್ರದೇಶ, ಅಸ್ಸಾಂ ಭಾಗದಲ್ಲಿ ಗಡಿರೇಖೆ ಉಲ್ಲಂಘನೆ ಮಾಡುತ್ತಲೇ ಇರುವ ಬಗ್ಗೆ ಈ ವರೆಗೂ ಕೇಂದ್ರ ಸರ್ಕಾರ ತುಟಿ ಬಿಚ್ಚಿಲ್ಲ.</p>



<p style="font-size:20px">ಈ ಎಲ್ಲಾ ವಿಷಯಗಳ ಕುರಿತು ಕಾಂಗ್ರೆಸ್ ಸೇರಿದಂತೆ ಇತರೆ ಎಲ್ಲಾ&nbsp; ಪ್ರತಿಪಕ್ಷಗಳು ಜಂಟಿ ಕಾರ್ಯತಂತ್ರವನ್ನು ರೂಪಿಸಲು ಹೊರಟಿವೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಚೇಂಬರ್‌ನಲ್ಲಿ ವಿರೋಧ ಪಕ್ಷದ ನಾಯಕರ ಸಭೆ ನಡೆದಿದೆ.</p>
]]></content:encoded>
					
		
		
			</item>
		<item>
		<title>ಬೆಳಗಾವಿ ಗಡಿ ವಿವಾದ ವಿಚಾರಣೆ ; ಕರ್ನಾಟಕ ಸರ್ಕಾರದ ನಿಲುವೇನು?</title>
		<link>https://peepalmedia.com/belgaum-border-dispute-inquiry-what-is-the-karnataka-governments-stand/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 23 Nov 2022 09:11:06 +0000</pubDate>
				<category><![CDATA[ಸತ್ಯ ಶೋಧ]]></category>
		<category><![CDATA[basavaraja bommai]]></category>
		<category><![CDATA[BELAGAVI]]></category>
		<category><![CDATA[Border Issue]]></category>
		<category><![CDATA[Ekanath Shinde]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[maharashtra]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=16283</guid>

					<description><![CDATA[1956 ರ ರಾಜ್ಯ ಪುನರ್ ವಿಂಗಡನಾ ಕಾಯ್ದೆಯನ್ನು ಪ್ರಶ್ನಿಸಿ 2004 ರಲ್ಲಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಉನ್ನತ ಮಟ್ಟದ ಸಮಿತಿ ಸೇರಿದಂತೆ ಸರ್ವ ಪಕ್ಷಗಳನ್ನು ಒಳಗೊಂಡಂತೆ ಮೇಲಿಂದ ಮೇಲೆ ಸಭೆಗಳನ್ನೂ ಸಹ ಮಾಡಿದೆ. ಈ ವಿಚಾರದಲ್ಲಿ ಕರ್ನಾಟಕ ಸರ್ಕಾರ ಮಾತ್ರ ಅದರ ಬಗೆಗಿನ ಸಿದ್ಧತೆ ಬಗ್ಗೆ ಇಲ್ಲಿಯವರೆಗೆ ತುಟಿ ಬಿಚ್ಚಿಲ್ಲ. 2004 ರಲ್ಲಿ ಸಲ್ಲಿಕೆಯಾದ ಅರ್ಜಿಯ ಬಗ್ಗೆ ಬರೋಬ್ಬರಿ 18 ವರ್ಷಗಳ ನಂತರ ಸುಪ್ರೀಂಕೋರ್ಟ್ ವಿಚಾರಣೆಗೆ [&#8230;]]]></description>
										<content:encoded><![CDATA[
<p style="font-size:20px">1956 ರ ರಾಜ್ಯ ಪುನರ್ ವಿಂಗಡನಾ ಕಾಯ್ದೆಯನ್ನು ಪ್ರಶ್ನಿಸಿ 2004 ರಲ್ಲಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಉನ್ನತ ಮಟ್ಟದ ಸಮಿತಿ ಸೇರಿದಂತೆ ಸರ್ವ ಪಕ್ಷಗಳನ್ನು ಒಳಗೊಂಡಂತೆ ಮೇಲಿಂದ ಮೇಲೆ ಸಭೆಗಳನ್ನೂ ಸಹ ಮಾಡಿದೆ. ಈ ವಿಚಾರದಲ್ಲಿ ಕರ್ನಾಟಕ ಸರ್ಕಾರ ಮಾತ್ರ ಅದರ ಬಗೆಗಿನ ಸಿದ್ಧತೆ ಬಗ್ಗೆ ಇಲ್ಲಿಯವರೆಗೆ ತುಟಿ ಬಿಚ್ಚಿಲ್ಲ.</p>



<p style="font-size:20px">2004 ರಲ್ಲಿ ಸಲ್ಲಿಕೆಯಾದ ಅರ್ಜಿಯ ಬಗ್ಗೆ ಬರೋಬ್ಬರಿ 18 ವರ್ಷಗಳ ನಂತರ ಸುಪ್ರೀಂಕೋರ್ಟ್ ವಿಚಾರಣೆಗೆ ಸಿದ್ದವಾಗಿದ್ದು, ಗಡಿ ವಿವಾದವನ್ನು ಸುಪ್ರೀಂಕೋರ್ಟ್ ತಗೆದುಕೊಳ್ಳಬೇಕೇ, ಬೇಡವೇ ಎಂಬ ನಿರ್ಧಾರವನ್ನು ಪ್ರಕಟಿಸಲಿದೆ. ಸರ್ಕಾರ ಈ ವರೆಗೂ ತಜ್ಞರ ಅಭಿಪ್ರಾಯವನ್ನು ಒಳಗೊಂಡ ಯಾವುದೇ ಸಿದ್ಧತೆಗಳನ್ನು ಮಾಡಿಕೊಂಡಿಲ್ಲ. ಜೊತೆಗೆ 2018 ರ ನಂತರ ಸರ್ಕಾರದ ಕಡೆಯಿಂದ ಇಲ್ಲಿಯವರೆಗೆ ಗಡಿ ಉಸ್ತುವಾರಿ ಸಚಿವರನ್ನೂ ನೇಮಿಸದಿರುವುದು ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಸ್ಪಷ್ಟ ಸಾಕ್ಷಿಯಂತಿದೆ.</p>



<p style="font-size:20px">ಇನ್ನು ಗಡಿ ವಿವಾದದಲ್ಲಿ ಸುಪ್ರೀಂಕೋರ್ಟ್ ಅಷ್ಟು ಸುಲಭವಾಗಿ ಕೇವಲ ಒಂದು ರಾಜ್ಯದ ಪರ ನಿಲ್ಲುವಂತಿಲ್ಲ. ಗಡಿ ವಿವಾದ ಎಂದರೆ ಅದು ಸಂಪೂರ್ಣ ಒಕ್ಕೂಟ ವ್ಯವಸ್ಥೆಯ ಅಸ್ತಿತ್ವಕ್ಕೇ ಕೈ ಇಟ್ಟಂತೆ. ಈ ಸಂದರ್ಭಕ್ಕೆ ಭಾಷಾವಾರು ಪ್ರಾಂತ್ಯದ ವಿಂಗಡಣೆ ಎಂದರೆ ಕೇವಲ ಮಹಾರಾಷ್ಟ್ರಕ್ಕೆ ಹೋಗುವ ಭೂಪ್ರದೇಶ ಮಾತ್ರವಲ್ಲ ಕರ್ನಾಟಕಕ್ಕೆ ಸೇರಬೇಕಾದ ಭೂ ಪ್ರದೇಶಕ್ಕೂ ದಾರಿ ಮಾಡಿಕೊಟ್ಟಂತಾಗಲಿದೆ. ಕನ್ನಡವನ್ನೇ ಹೆಚ್ಚಾಗಿ ಮಾತನಾಡುವ ನೆರೆ ರಾಜ್ಯಗಳ ಗಡಿರೇಖೆಯ ಒಳಗಿರುವ ಕಾಸರಗೋಡು, ಸೊಲ್ಲಾಪುರ, ದಕ್ಷಿಣ ಕೊಲ್ಲಾಪುರ, ಅಕ್ಕಲಕೋಟೆ, ಮಂತ್ರಾಲಯ ಸೇರಿದಂತೆ ಸುತ್ತಲಿನ ಐದು ರಾಜ್ಯಗಳಿಂದ ಬರುವ ಮತ್ತು ಆ ರಾಜ್ಯಗಳಿಗೆ ಸೇರುವ ಅಸಂಖ್ಯಾತ ಊರುಗಳ ವಿವಾದವನ್ನು ಹೊಸದಾಗಿ ಸುಪ್ರೀಂಕೋರ್ಟೇ ಹುಟ್ಟು ಹಾಕಿದಂತಾಗಲಿದೆ. ಹಾಗೊಂದು ವೇಳೆ ಸುಪ್ರೀಂಕೋರ್ಟ್ ವಿಚಾರಣೆಗೆ ತೀರ್ಪು ಕೊಟ್ಟಂತೆ ಜೇನುಗೂಡಿಗೆ ಕಲ್ಲು ಹೊಡೆದಂತಾಗಲಿದೆ.</p>



<p style="font-size:20px">ಸಾಮಾನ್ಯವಾಗಿ ಇಂತಹ ವಿಚಾರಗಳಲ್ಲಿ ಸುಪ್ರೀಂಕೋರ್ಟ್ ಎರಡು ರಾಜ್ಯಗಳ ಗಡಿ ವಿವಾದದ ನಡುವೆ ಮೂಗು ತೂರಿಸುವುದು ಅಷ್ಟು ಸೂಕ್ತವಲ್ಲ, ಹಾಗೂ ಸುಲಭವೂ ಅಲ್ಲ. ಹಾಗೊಂದು ವೇಳೆ ಮಹಾರಾಷ್ಟ್ರದ ಪಟ್ಟಿಗೆ ಕಟ್ಟು ಬಿದ್ದು ವಿಚಾರಣೆಗೆ ತೀರ್ಪು ಪ್ರಕಟಿಸಿದ್ದೇ ಆದರೆ ಅದಕ್ಕೂ ಮುನ್ನ ಸುಪ್ರೀಂಕೋರ್ಟ್ ಅದಕ್ಕೆ ಬೇಕಾದಂತಹ ಆಯೋಗವನ್ನು ರಚಿಸಿ ಆಯೋಗ ಕೊಟ್ಟ ವರದಿ ಆಧಾರದಲ್ಲಿ ನಿರ್ಧಾರ ಪ್ರಕಟಿಸಬೇಕು. ಆದರೆ ಈ ಹಿಂದೆ ಗಡಿ ಭಾಗಕ್ಕೆ ಸಂಬಂಧಿಸಿದ ಮೆಹರ್ ಚಂದ್ ಮಹಾಜನ್ ಆಯೋಗ ಈಗಾಗಲೇ ಕೊಟ್ಟ ವರದಿಯಂತೆ ಖಾನಾಪುರ ನಿಪ್ಪಾಣಿ ಅಷ್ಟೆ ಮಹಾರಾಷ್ಟ್ರಕ್ಕೆ ಸೇರ್ಪಡೆ ಆಗಲಿದೆ. ಆದರೆ ಮಹಾರಾಷ್ಟ್ರದ ಮುಖ್ಯವಾದ ವಾದ ಎಂದರೆ ನೇರ ಬೆಳಗಾವಿಯೇ ತಮಗೆ ಸೇರಬೇಕೆಂಬುದು.</p>



<p style="font-size:20px">ಮಹಾರಾಷ್ಟ್ರದ ವಿಚಾರಕ್ಕೆ ಹೇಳುವುದಾದರೆ ಬೆಳಗಾವಿ ಎಂಬುದು ಅಲ್ಲಿನ ಭಾವನೆಗಳಿಗೆ ಸಂಬಂಧಿಸಿದ ವಿಚಾರ. ಮಹಾರಾಷ್ಟ್ರದ ಶಿವಸೇನೆ, NCP ನಾ ಮುಂದು ತಾ ಮುಂದು ಎಂಬಂತೆ ಗಡಿ ವಿವಾದವನ್ನು ಜೀವಂತವಾಗಿ ಇರಿಸಿಕೊಂಡು ಬಂದಿವೆ. ಬಿಜೆಪಿ ಮತ್ತು ಕಾಂಗ್ರೆಸ್ ಕೂಡಾ ಅಲ್ಲಿನ ದೊಡ್ಡ ಪಕ್ಷಗಳ ಜೊತೆಗೆ ಹಿನ್ನೆಲೆಯಲ್ಲಿ ನಿಂತು ಪೋಷಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿವೆ. ಈಗ ಭಾರತ ಪಾಕಿಸ್ತಾನ ಹೇಗೆ ಶತ್ರುರಾಷ್ಟ್ರಗಳು ಎಂಬುದನ್ನು ಜೀವಂತವಾಗಿ ಇಟ್ಟಿವೆಯೋ ಹಾಗೆ. ಇದು ಆ ಭಾಗದಲ್ಲಿ ಮತ ಗಿಟ್ಟಿಸುವ ಒಂದು ಮಾರ್ಗ ಎಂಬುದು ತೆರೆದಿಟ್ಟ ಗುಟ್ಟು. ಇಂದಿನ ವಿಚಾರಣೆ ಕೂಡಾ ಮಹಾರಾಷ್ಟ್ರ ಸರ್ಕಾರದ ತಂತ್ರಗಾರಿಕೆಯ ಮುಂದುವರಿದ ಭಾಗ.</p>



<p style="font-size:20px">ಇನ್ನು ರಚನೆಯಾಗಿ ವರದಿ ಬಂದಿದ್ದ ಮಹಾಜನ್ ವರದಿ ಜಾರಿಯಾದರೆ ಕರ್ನಾಟಕಕ್ಕೆ ಒಂದು ರೀತಿಯಲ್ಲಿ ಲಾಭವೇ ಆಗಲಿದೆ. ಕರ್ನಾಟಕದಿಂದ ಹೋಗುವ ಕೆಲವು ಸಣ್ಣಪುಟ್ಟ ಊರುಗಳಿದ್ದರೂ ದೊಡ್ಡ ಊರುಗಳೇ ರಾಜ್ಯಕ್ಕೆ ಸೇರ್ಪಡೆ ಆಗಲಿವೆ. ಆದರೆ ಇದಕ್ಕೆ ಮಹಾರಾಷ್ಟ್ರದ ವಿರೋಧವಿದೆ.</p>



<p style="font-size:20px">ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಈಗಾಗಲೇ ಸರ್ವ ಪಕ್ಷಗಳನ್ನು ಒಳಗೊಂಡಂತೆ ವಾರದಿಂದಲೂ ಸಭೆ ನಡೆಸಿ ತಜ್ಞರ ಸಮಿತಿಯನ್ನು ನೇಮಿಸಿದೆ. ಆದರೆ ಕರ್ನಾಟಕದ ಪರ ವಾದ ಮಂಡಿಸುವ ವಕೀಲರ ಪರ ನಿಲ್ಲಲು ಈ ವರೆಗೂ ಯಾವುದೇ ತಜ್ಞರು, ಸರ್ಕಾರದ ಪ್ರತಿನಿಧಿಯಾಗಿ ಯಾವುದೇ ಸಚಿವರು ಈ ವರೆಗೂ ನಿಂತಿಲ್ಲದಿರುವುದು ಕನ್ನಡಿಗರ ಕೆಂಗಣ್ಣಿಗೆ ಗುರಿಯಾದಂತಾಗಿದೆ.</p>
]]></content:encoded>
					
		
		
			</item>
	</channel>
</rss>
