<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Brij bhushan &#8211; Peepal Media</title>
	<atom:link href="https://peepalmedia.com/tag/brij-bhushan/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 07 Aug 2024 10:09:32 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Brij bhushan &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ವಿನೇಶ್‌ ಪೋಗಟ್‌: ಈ ದಿಟ್ಟ ಹುಡುಗಿಯನ್ನು ಭಾರತದ ಬೀದಿಗಳಲ್ಲಿ ಅಕ್ಷರಶಃ ಎಳೆದಾಡಲಾಗಿತ್ತು!</title>
		<link>https://peepalmedia.com/vinesh-pogat-this-bold-girl-was-literally-dragged-on-the-streets-of-india/</link>
		
		<dc:creator><![CDATA[Hanumanth Halageri]]></dc:creator>
		<pubDate>Wed, 07 Aug 2024 08:30:40 +0000</pubDate>
				<category><![CDATA[ಅಂಕಣ]]></category>
		<category><![CDATA[ಆಟೋಟ]]></category>
		<category><![CDATA[ಜನ-ಗಣ-ಮನ]]></category>
		<category><![CDATA[ಸತ್ಯ ಶೋಧ]]></category>
		<category><![CDATA[bengalure]]></category>
		<category><![CDATA[Brij bhushan]]></category>
		<category><![CDATA[india]]></category>
		<category><![CDATA[Indian Olympic Association]]></category>
		<category><![CDATA[indiansports]]></category>
		<category><![CDATA[International Olympic Committee]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[modi]]></category>
		<category><![CDATA[news]]></category>
		<category><![CDATA[Olympic]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[sprots]]></category>
		<category><![CDATA[Vinesh pogat]]></category>
		<category><![CDATA[vineshpogat]]></category>
		<category><![CDATA[writing]]></category>
		<guid isPermaLink="false">https://peepalmedia.com/?p=43464</guid>

					<description><![CDATA[ “ನನ್ನ ಸಹ ಆಟಗಾರ್ತಿಯರ, ನನ್ನ ಗೆಳತಿಯರ ಮೇಲೆ ಕೆಲವು ತಿಂಗಳ  ಹಿಂದೆಯಷ್ಟೇ ನಮ್ಮವರಿಂದಲೇ ಲೈಂಗಿಕ ದೌರ್ಜನ್ಯ  ನಡಿತಲ್ಲ,  ಆಗ ಆದ ಅವಮಾನದ ಕೆಂಡ ಇನ್ನೂ ನನ್ನ ಎದೆಯಲ್ಲಿ ಹಾಗೆ ಉರಿಯುತ್ತಿದೆ. ಆಗ ನನಗೆ ಅನಿಸಿದ್ದು ಗೆಲುವೊಂದೆ ಇದಕ್ಕೆಲ್ಲ ಉತ್ತರ. ನಾನು ಒಲಂಪಿಕ್‌ನಲ್ಲಿ ಗೆಲುವು ದಾಖಲಿಸುವ ಮೂಲಕ ನಾವು ಮಹಿಳಾ ಕುಸ್ತಿ ಪಟುಗಳು ಅಂದ್ರೆ ಎಂಥ ತಾಕತ್ತು ಅನ್ನುವುದನ್ನುತೋರಿಸ್ತಿನಿ ನೋಡ್ತಿರಿ” ಎಂದಿದ್ದಳು ಈ ಹುಡುಗಿ ವಿನೇಶ್‌ ಪೊಗಟ್.‌ &#160;ಹೀಗಂತ ಟಿವಿ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ ಟೋಕಿಯೋದಲ್ಲಿ ಒಲಂಪಿಕ್‌ನಲ್ಲಿ ಕಂಚು ಗೆದ್ದು &#160;ತಂದಿರುವ [&#8230;]]]></description>
										<content:encoded><![CDATA[
<ul class="wp-block-list">
<li><strong>ಹನುಮಂತ ಹಾಲಿಗೇರಿ</strong> </li>
</ul>



<p> “ನನ್ನ ಸಹ ಆಟಗಾರ್ತಿಯರ, ನನ್ನ ಗೆಳತಿಯರ ಮೇಲೆ ಕೆಲವು ತಿಂಗಳ  ಹಿಂದೆಯಷ್ಟೇ ನಮ್ಮವರಿಂದಲೇ ಲೈಂಗಿಕ ದೌರ್ಜನ್ಯ  ನಡಿತಲ್ಲ,  ಆಗ ಆದ ಅವಮಾನದ ಕೆಂಡ ಇನ್ನೂ ನನ್ನ ಎದೆಯಲ್ಲಿ ಹಾಗೆ ಉರಿಯುತ್ತಿದೆ. ಆಗ ನನಗೆ ಅನಿಸಿದ್ದು ಗೆಲುವೊಂದೆ ಇದಕ್ಕೆಲ್ಲ ಉತ್ತರ. ನಾನು ಒಲಂಪಿಕ್‌ನಲ್ಲಿ ಗೆಲುವು ದಾಖಲಿಸುವ ಮೂಲಕ ನಾವು ಮಹಿಳಾ ಕುಸ್ತಿ ಪಟುಗಳು ಅಂದ್ರೆ ಎಂಥ ತಾಕತ್ತು ಅನ್ನುವುದನ್ನುತೋರಿಸ್ತಿನಿ ನೋಡ್ತಿರಿ” ಎಂದಿದ್ದಳು ಈ ಹುಡುಗಿ ವಿನೇಶ್‌ ಪೊಗಟ್.‌</p>



<p>&nbsp;ಹೀಗಂತ ಟಿವಿ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ ಟೋಕಿಯೋದಲ್ಲಿ ಒಲಂಪಿಕ್‌ನಲ್ಲಿ ಕಂಚು ಗೆದ್ದು &nbsp;ತಂದಿರುವ ಹೆಮ್ಮೆಯ ಕ್ರೀಡಾಪಟು ಭಜರಂಗ್‌ ಪೋನಿಯಾ. ಅಂಥ ದಿಟ್ಟ ಹುಡುಗಿಯ ಚಿನ್ನದ ಕನಸು ಈಗ ಭಗ್ನಗೊಂಡಿದೆ. ಈ ನೆಲದ ಮಗಳು ಚಿನ್ನ ತಂದೆ ತರುತ್ತಾಳೆ ಎಂದು ಕಾಯ್ತು ಕುಳಿತಿದ್ದ ಭಾರತೀಯರೆಲ್ಲರಿಗೂ ಸಹ ಈಗ ನಿರಾಶೆ ಮಡುವುಗಟ್ಟಿದೆ. ಕೇವಲ ತೂಕದಲ್ಲಿ 100 ಗ್ರಾಮ ವ್ಯತ್ಯಾಸವಾಯಿತೆಂಬ ಕ್ಷುಲ್ಲಕ ಕಾರಣಕ್ಕೆ ವಿನೇಶ್‌ ಪೊಗಟ್‌ ಅವರನ್ನು ಆಟದಿಂದ ಹೊರಗಿಟ್ಟಿರುವುದನ್ನು ಅನ್ಯಾಯ ಏನ್ನಬೇಕೋ, ವಿಧಿ ವಿಪರ್ಯಾಸವೆನ್ನಬೇಕೋ ಗೊತ್ತಾಗುತ್ತಿಲ್ಲ.</p>



<p>ಇತ್ತೀಚೆಗಷ್ಟೇ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಭಾರತೀಯ ಕುಸ್ತಿ ಸಂಸ್ಥೆ ವಿರುದ್ಧದ ದಿಲ್ಲಿಯ ಜಂತರ್‌ ಮಂತರ್‌ನಲ್ಲಿ ಮಹಿಳಾ ಕುಸ್ತಿಪಟುಗಳು ವಾರಗಟ್ಟಲೇ ಪ್ರತಿಭಟನೆ ನಡೆಸಿದ್ದರು. ಆಗ &nbsp;ಯಥಾಪ್ರಕಾರ ನಮ್ಮ ದೇಶದ ಕ್ಷುಲ್ಲಕ ರಾಜಕಾರಣಿಗಳ ಕುಮ್ಮಕ್ಕಿನಿಂದಾಗಿ ಪೊಲೀಸರು ಈ ವಿನೇಶ್‌ ಪೋಗಟ್‌ಪ್ರತಿಭಟನಾ ನಿರತ ಕ್ರೀಡಾಪಟುಗಳನ್ನು ದರದರನೆ ಎಳೆದೊಯ್ದಿದ್ದರು. ಆದರೆ, ಆಗ ಅವರ ಬೆಂಬಲಕ್ಕೆ ಯಾವ ಸರ್ಕಾರವೂ ಬರಲಿಲ್ಲ. ಕುಸ್ತಿ ಸಂಸ್ಥೆಯ ಅಧ್ಯಕ್ಷ ಮತ್ತು ಸಂಸದ ಬೃಜ್‌ ಭೂಷಣ್‌ ಶರಣ್‌ ಸಿಂಗ್‌ ತಮ್ಮ ಅಧಿಕಾರ ಬಳಸಿ ಕುಸ್ತಿಪಟುಗಳ ಧರಣಿಯನ್ನು ಬಲವಂತವಾಗಿ ಅಂತ್ಯಗೊಳಿಸಿದ್ದರು. ನ್ಯಾಯ ಸಿಗದೇ ಇದ್ದ ಕಾರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೆದ್ದ ಪದಕಗಳನ್ನೇ ಕುಸ್ತಿಪಟುಗಳು ನದಿಗೆ ಬಿಸಾಡಿದ್ದ ಹೀನಾಯ ಘಟನೆಗೆ ಅಂದು ದೆಹಲಿ ಸಾಕ್ಷಿಯಾಗಿತ್ತು.</p>



<p>ಆ ಪ್ರತಿಭಟನೆಯ ಸಂದರ್ಭದಲ್ಲಿ ಒಳಗೊಳಗೆ ಉರಿಯುತ್ತ ಕುಳಿತಿದ್ದ ವಿನೇಶ್‌ಗೆ ಅಂದೇ ನಮ್ಮಗಳ ಗೆಲುವೊಂದೆ ಇದಕ್ಕೆಲ್ಲ ಉತ್ತರ. ನಾನು ಗೆದ್ದು ತೋರಿಸುತ್ತೇನೆ. ಇವರ ದೌರ್ಜನ್ಯಕ್ಕೆ ಅದೇ ನನ್ನ ಉತ್ತರ ಎಂದು ಸಂಕಲ್ಪ ಮಾಡಿದ್ದರು. ಆ ಮೂಲಕ ಅವರು, ದೌರ್ಜನ್ಯದ ವಿರುದ್ಧ ಹೋರಾಟ ನಡೆಸಲು ವಿಭಿನ್ನ ಮಾರ್ಗ ತುಳಿಯಲು ಹಟ ತೊಟ್ಟಿದ್ದರು.</p>



<p>ವಿಶ್ವಚಾಂಪಿಯನ್‌ ಆಗಲು ಹೊರಟಿರುವ ಈ ಹುಡುಗಿಯನ್ನು ಅವಳ ದೇಶದಲ್ಲಿ ಕಾಲಿನಿಂದ ಒದೆಯಲಾಗಿತ್ತು, ಈ ಹುಡುಗಿಯನ್ನು ತನ್ನ ದೇಶದ ಬೀದಿಗಳಲ್ಲಿ ಎಳೆದಾಡಲಾಗಿತ್ತು. ಈ ಹುಡುಗಿ ಈಗ ಜಗತ್ತನ್ನು ಗೆಲ್ಲಲು ಹೊರಟಿದ್ದಾಳೆ. ಆದರೆ ಈ ದೇಶದ ವ್ಯವಸ್ಥೆ ವಿರುದ್ಧ ಹೋರಾಡಿ ಆಕೆ ಸೋತಿದ್ದಳು.&#8221; ಎಂದು ವಿನೇಶ್‌ ಫೋಗಾಟ್‌ ಅವರ ಭಾವ ಕೂಡ ಆಗಿರುವ ಬಜರಂಗ್ ಪುನಿಯಾ ಟ್ವೀಟ್‌ ಮಾಡಿದ್ದಾರೆ.  ಅಷ್ಟೇ ಅಲ್ಲದೇ ಇಎಸ್‌ಪಿಎನ್‌ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಬಜರಂಗ್ ಪುನಿಯಾ, ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ವಿನೇಶ್‌ ಫೋಗಾಟ್‌ ಭಾರತೀಯ ಯುವ ಮಹಿಳಾ ಕುಸ್ತಿಪಟುಗಳ ಭವಿಷ್ಯ ಸಲುವಾಗಿ ಪದಕ ಗೆಲ್ಲಲು ಹೊರಟಿದ್ದಾರೆ ಎಂದು ಹೇಳಿದ್ದಾರೆ.</p>



<p>&#8220;ನಾನು ಕುಸ್ತಿಪಟುಗಳ ಭವಿಷ್ಯ ಸಲುವಾಗಿ ಹೋರಾಡುತ್ತಿದ್ದೇನೆ. ಇದು ನನಗೋಸ್ಕರ ಅಲ್ಲ. ನನ್ನ ವೃತ್ತಿಬದುಕು ಮುಗಿದಿದೆ. ಇದು ನನ್ನ ಕೊನೆಯ ಒಲಿಂಪಿಕ್ಸ್‌. ನಾನು ಯುವ ಮಹಿಳಾ ಕುಸ್ತಿಪಟುಗಳ ಸಲುವಾಗಿ ಹೋರಾಡಬೇಕು. ದೇಶದಲ್ಲಿ ಯುವ ಮಹಿಳಾ ಕುಸ್ತಿಪಟುಗಳು ಯಾವುದೇ ಭಯ ಅಂಜಿಕೆ ಇಲ್ಲದೆ ಬಂದು ಕುಸ್ತಿ ಅಖಾಡದಲ್ಲಿ ಸುರಕ್ಷಿತವಾಗಿ ಹೋರಾಡುವಂತ್ತಾಗಬೇಕು. ಈ ಉದ್ದೇಶ ಸಲುವಾಗಿಯೇ ನಾನು ಜಂತರ್‌ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದೆ. ಈಗ ಇಲ್ಲಿದ್ದೇನೆ ಎಂದು ವಿನೇಶ್ ನನ್ನ ಬಳಿ ಹೇಳಿದ್ದರು,&#8221; ಎಂದು ಬಜರಂಗ್ ಪೂನಿಯಾ ಇಎಸ್‌ಪಿಎನ್‌ಗೆ ತಿಳಿಸಿದ್ದಾರೆ.</p>



<p>&nbsp;ವಿನೇಶ್‌ ಅವರ ಹಟ ಇನ್ನೇನು ಫಲಪ್ರದವಾಗುವುದರಲ್ಲಿತ್ತು. ಆ ಕ್ಷಣಕ್ಕಾಗಿ ಇಡೀ ಭಾರತ ಕಾಯ್ದು ಕುಳಿತಿತ್ತು. &nbsp;ನಿನ್ನೆಯಷ್ಟೆ ಸೆಮಿಫೈನಲ್‌ನಲ್ಲಿ ವಿಜಯ ಸಾಧಿಸಿ ಐತಿಹಾಸಿಕ &nbsp;ಬೆಳ್ಳಿ ಪದಕ ಖಾತರಿಪಡಿಸಿದ್ದ ವಿನೇಶ್‌ ಇವತ್ತು ಬೆಳಗ್ಗೆ ಮಾಡಿಕೊಂಡ ಸಣ್ಣ ಎಡವಟ್ಟಿನಿಂದ ಚಿನ್ನದ ಪದಕವನ್ನು ಜಸ್ಟ್‌ ಮಿಸ್‌ ಮಾಡಿಕೊಂಡಿರುವುದು ಭಾರತೀಯರೆಲ್ಲರ ಕಣ್ಣಲ್ಲಿ ನಿರಾಸೆ ಕವಿಯುವಂತಿದೆ ಮಾಡಿದೆ.</p>



<p>&#8220;ನಿನ್ನೆಯಷ್ಟೇ ನಡೆ ಬ್ಯಾಕ್ ಟು ಬ್ಯಾಕ್ ಪಂದ್ಯಗಳಲ್ಲಿ ಗೆದ್ದ ಭಾರತದ ಸಿಂಹಿಣಿ ವಿನೇಶ್ ಫೋಗಟ್, 4 ಬಾರಿಯ ವಿಶ್ವ ಚಾಂಪಿಯನ್ ಮತ್ತು ಪ್ರಸ್ತುತ ಒಲಿಂಪಿಕ್ ಚಾಂಪಿಯನ್ ಕುಸ್ತಿಪಟುಗಳನ್ನು ಸೋಲಿಸಿ ವಿಜಯದ ನಗೆ ಬೀರಿದ್ದರು. ಆ ನಂತರ ಕ್ವಾರ್ಟರ್ ಫೈನಲ್‌ನಲ್ಲಿ ಮಾಜಿ ವಿಶ್ವಚಾಂಪಿಯನ್‌ ಎದುರು ಜಯ ದಾಖಲಿಸಿದರು.</p>



<p>ಇಂದು,ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳೆಯರ 50 ಕೆಜಿ ಫ್ರೀಸ್ಟೈಲ್‌ ಕುಸ್ತಿಯ ಫೈನಲ್‌ನಲ್ಲಿ ಐತಿಹಾಸಿಕ ಚಿನ್ನದ ಪದಕ ಸಲುವಾಗಿ ವಿನೇಶ್‌ ಫೋಗಾಟ್‌ ಅಮೆರಿಕದ ರೆಸ್ಲರ್‌ ಸಾರಾ ಹಿಲ್‌ಡೆಬ್ರಾಂಟ್‌ ಎದುರು ಪೈಪೋಟಿ ನಡೆಸಲಿದ್ದರು. ಗೆದ್ದರೆ ಚಿನ್ನ ಸೋತರೆ ಬೆಳ್ಳಿ ಪದಕಕ್ಕೆ ಕೊರಳೊಡ್ಡವವರಿದ್ದರು. ಆದರೆ ತೂಕದಲ್ಲಾದ ಸಣ್ಣ ಎಡವಟ್ಟಿನಿಂದ ಈ ದಿಟ್ಟ ಹುಡುಗಿಯ ಕನಸು ಭಗ್ನಗೊಂಡಿರುವುದು ಭಾರತೀಯ ಕ್ರೀಡಾಜಗತ್ತಿಗಾದ ದೊಡ್ಡ ಗಾಯವೇ ಸರಿ.</p>



<ul class="wp-block-list">
<li><strong>ಹನುಮಂತ ಹಾಲಿಗೇರಿ</strong><br><br></li>
</ul>
]]></content:encoded>
					
		
		
			</item>
		<item>
		<title>WFI ನೂತನ ಅಧ್ಯಕ್ಷನ ಆಯ್ಕೆ : ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಕುಸ್ತಿಪಟು ಸಾಕ್ಷಿ ಮಲಿಕ್</title>
		<link>https://peepalmedia.com/wrestler-sakshi-malik-bid-farewell-to-professional-life/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 22 Dec 2023 02:57:48 +0000</pubDate>
				<category><![CDATA[ಆಟೋಟ]]></category>
		<category><![CDATA[Brij bhushan]]></category>
		<category><![CDATA[india]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Sakshi Malik]]></category>
		<category><![CDATA[WFI]]></category>
		<guid isPermaLink="false">https://peepalmedia.com/?p=33967</guid>

					<description><![CDATA[ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ (WFI) ಹೊಸ ಅಧ್ಯಕ್ಷರಾಗಿ ಗುರುವಾರ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಖ್ಯಾತ ಕುಸ್ತಿ ತಾರೆ ಸಾಕ್ಷಿ ಮಲಿಕ್ ಅವರು ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಹಲವಾರು ಮುಂದೂಡಿಕೆಗಳ ನಂತರ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಚುನಾವಣೆಯನ್ನು ಡಿಸೆಂಬರ್ 21 ರಂದು ಗುರುವಾರ ನಡೆಸಲಾಯಿತು. ಹೊಸದಿಲ್ಲಿಯಲ್ಲಿ ಮುಂಜಾನೆ ಮತದಾನ ನಡೆದಿದ್ದು, ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ನಡೆಯಿತು. ಡಬ್ಲ್ಯುಎಫ್‌ಐ ಚುನಾವಣೆಯಲ್ಲಿ ಸಂಜಯ್ ಸಿಂಗ್ [&#8230;]]]></description>
										<content:encoded><![CDATA[
<p>ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ (WFI) ಹೊಸ ಅಧ್ಯಕ್ಷರಾಗಿ ಗುರುವಾರ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಖ್ಯಾತ ಕುಸ್ತಿ ತಾರೆ ಸಾಕ್ಷಿ ಮಲಿಕ್ ಅವರು ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ.</p>



<p>ಹಲವಾರು ಮುಂದೂಡಿಕೆಗಳ ನಂತರ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಚುನಾವಣೆಯನ್ನು ಡಿಸೆಂಬರ್ 21 ರಂದು ಗುರುವಾರ ನಡೆಸಲಾಯಿತು. ಹೊಸದಿಲ್ಲಿಯಲ್ಲಿ ಮುಂಜಾನೆ ಮತದಾನ ನಡೆದಿದ್ದು, ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ನಡೆಯಿತು.</p>



<p>ಡಬ್ಲ್ಯುಎಫ್‌ಐ ಚುನಾವಣೆಯಲ್ಲಿ ಸಂಜಯ್ ಸಿಂಗ್ ಅವರ ಪ್ಯಾನೆಲ್ 40 ಮತಗಳಿಂದ ಗೆದ್ದರೆ ಇನ್ನೊಂದು ಪ್ಯಾನೆಲ್ 7 ಮತಗಳನ್ನು ಪಡೆದುಕೊಂಡಿತು. ವಿಜೇತರ ಘೋಷಣೆಯ ನಂತರ, ಕುಸ್ತಿಪಟು ಸಾಕ್ಷಿ ಮಲಿಕ್ ಕುಸ್ತಿಯಿಂದ ಹೊರಬರಲು ನಿರ್ಧರಿಸಿದರು.</p>



<p>“ನಾವು 40 ದಿನಗಳ ಕಾಲ ರಸ್ತೆಗಳಲ್ಲಿ ಮಲಗಿದ್ದೇವೆ. ಈ ವರ್ಷದ ಆರಂಭದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ನಮ್ಮನ್ನು ಬೆಂಬಲಿಸಲು ಬಂದ ನಮ್ಮ ದೇಶದ ಹಲವಾರು ಜನರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಬ್ರಿಜ್ ಭೂಷಣ್ ಸಿಂಗ್ ಅವರ ವ್ಯಾಪಾರ ಪಾಲುದಾರ ಮತ್ತು ನಿಕಟ ಸಹವರ್ತಿ ಡಬ್ಲ್ಯುಎಫ್‌ಐ ಅಧ್ಯಕ್ಷನಾಗಿ ಆಯ್ಕೆಯಾಗಿದ್ದಕ್ಕೆ ನಾನು ಕುಸ್ತಿಯನ್ನು ತ್ಯಜಿಸುತ್ತಿದ್ದೇನೆ” ಎಂದು ಸಾಕ್ಷಿ ಮಲಿಕ್ ಗುರುವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳಿಗೆ ತಿಳಿಸಿದರು.</p>
]]></content:encoded>
					
		
		
			</item>
		<item>
		<title>ಬೀದಿ ಹೋರಾಟ ಅಂತ್ಯ, ಇನ್ನೇನಿದ್ದರೂ ಕಾನೂನು ಸಮರ : ಕುಸ್ತಿಪಟುಗಳು</title>
		<link>https://peepalmedia.com/no-more-street-fighting-legal-battle-if-anything-else-wrestlers/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 26 Jun 2023 06:06:30 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[bajarang punia]]></category>
		<category><![CDATA[Brij bhushan]]></category>
		<category><![CDATA[india]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Sakshi Malik]]></category>
		<category><![CDATA[Vinesh pogat]]></category>
		<category><![CDATA[wrestlers protest]]></category>
		<guid isPermaLink="false">https://peepalmedia.com/?p=22704</guid>

					<description><![CDATA[ಡಬ್ಲ್ಯುಎಫ್‌ಐ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ&#160;ಲೈಂಗಿಕ ಕಿರುಕುಳದ ಆರೋಪದ ಪ್ರಕರಣದ ಹೋರಾಟ ಇನ್ನು ನ್ಯಾಯಾಲಯದಲ್ಲಿ ಮುಂದುವರೆಯಲಿದೆ ಎಂದು ಹೋರಾಟ ನಿರತ ಕುಸ್ತಿಪಟುಗಳು ಹೇಳಿದ್ದಾರೆ. ನಿರಂತರ 5 ತಿಂಗಳ ಬೀದಿ ಹೋರಾಟದ ಬಳಿಕ ಈಗ ಕುಸ್ತಿಪಟುಗಳು ಕಾನೂನು ಸಮರದ ಹಾದಿಯಲ್ಲಿ ಯಶಸ್ವಿಯಾಗಬಹುದು ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ&#160;ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದ ಕುಸ್ತಿಪಟುಗಳು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.&#160;ಇವರ ಹೋರಾಟಕ್ಕೆ [&#8230;]]]></description>
										<content:encoded><![CDATA[
<p>ಡಬ್ಲ್ಯುಎಫ್‌ಐ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ&nbsp;ಲೈಂಗಿಕ ಕಿರುಕುಳದ ಆರೋಪದ ಪ್ರಕರಣದ ಹೋರಾಟ ಇನ್ನು ನ್ಯಾಯಾಲಯದಲ್ಲಿ ಮುಂದುವರೆಯಲಿದೆ ಎಂದು ಹೋರಾಟ ನಿರತ ಕುಸ್ತಿಪಟುಗಳು ಹೇಳಿದ್ದಾರೆ.</p>



<p>ನಿರಂತರ 5 ತಿಂಗಳ ಬೀದಿ ಹೋರಾಟದ ಬಳಿಕ ಈಗ ಕುಸ್ತಿಪಟುಗಳು ಕಾನೂನು ಸಮರದ ಹಾದಿಯಲ್ಲಿ ಯಶಸ್ವಿಯಾಗಬಹುದು ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ&nbsp;ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿದ್ದ ಕುಸ್ತಿಪಟುಗಳು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.&nbsp;ಇವರ ಹೋರಾಟಕ್ಕೆ ಭಾರತೀಯ ಕಿಸಾನ್ ಯೂನಿಯನ್ ಸೇರಿದಂತೆ ಹಲವು ಜನಪರ ಸಂಘಟನೆಗಳು ಬೆಂಬಲ ನೀಡಿದ್ದರು.</p>



<p>ವಿನೇಶ್ ಫೋಘಟ್, ಸಾಕ್ಷಿ ಮಲ್ಲಿಕ್, ಬಜರಂಗ್ ಪೂನಿಯಾ ಅವರು ಪ್ರತಿಭಟನೆಯನ್ನು ಅಂತ್ಯಗೊಳಿಸುವುದಾಗಿ ಟ್ವಿಟ್ ಮೂಲಕ ತಿಳಿಸಿದ್ದಾರೆ. ಇನ್ನು ಮುಂದೆ ನಾವು ರಸ್ತೆಯಲ್ಲಿ ಪ್ರತಿಭಟನೆ ನಡೆಸುವುದಿಲ್ಲ. ಆದರೆ ಬ್ರಿಜ್ ಬೂಷಣ್ ಸಿಂಗ್ ವಿರುದ್ಧ ನ್ಯಾಯಾಲಯದಲ್ಲಿ ನಮ್ಮ ಹೋರಾಟ ಮುಂದುವರೆಸುತ್ತೇವೆ, ನಮ್ಮ ಅಭಿಯಾನವನ್ನು ಕೈಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>



<p>&#8216;ಸಧ್ಯ ಸರ್ಕಾರ ನೀಡಿದ ಭರವಸೆಯಂತೆ ಭಾರತೀಯ ಕುಸ್ತಿ ಒಕ್ಕೂಟದಲ್ಲಿನ ಬದಲಾವಣೆಗೆ ಮುಂದಾಗಿದೆ. ಅದರ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಆ ನಿಟ್ಟಿನಲ್ಲಿ ಜುಲೈ 11ರಂದು ಚುನಾವಣೆ ನಡೆಯಲಿದೆ ಎಂಬ ಮಾತು ಕೇಳಿ ಬಂದಿದೆ. ನಾವು ಭರವಸೆ ಕಾರ್ಯಗತವಾಗುವ ತನಕ ಕಾಯುತ್ತೇವೆ.&#8217; ಎಂದು ಕುಸ್ತಿಪಟುಗಳು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.</p>



<p>ಈಗಾಗಲೇ ಜೂನ್‌ನಲ್ಲಿ ನಡೆಯಬೇಕಿದ್ದ ಚುನಾವಣೆ ಮಹಾರಾಷ್ಟ್ರ, ಹರ್ಯಾಣ, ಹಿಮಾಚಲ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಸ್ಥಳೀಯ ಕುಸ್ತಿ ಸಂಘಟನೆಗಳ ಚುನಾವಣೆ ಮತ್ತು ಮಾನ್ಯತೆಗೆ ಸಂಬಂಧಿಸಿದ ಗೊಂದಲದಿಂದಾಗಿ ಮುಂದೂಡಲಾಗಿತ್ತು. ಹಾಗಾಗಿ ಕೊಟ್ಟ ಭರವಸೆಯಂತೆ ಜುಲೈ 11 ರಂದು ಚುನಾವಣೆ ನಡೆಯುವ ಮುನ್ಸೂಚನೆಯನ್ನು ಸರ್ಕಾರ ನೀಡಿದೆ.</p>



<p>ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕೇಳಿ ಬಂದಿರುವ ಆರೋಪದ ಬಗ್ಗೆ ಈಗಾಗಲೇ ದೆಹಲಿ ಪೊಲೀಸರು ತನಿಖೆ ನಡೆಸಿದ್ದಾರೆ. ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ಗೆ 1500 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ. 200 ಹೇಳಿಕೆಗಳನ್ನು ದಾಖಲು ಮಾಡಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಜೂನ್ 27ರಿಂದ ಕೋರ್ಟ್‌ನಲ್ಲಿ ಈ ಕುರಿತು ವಿಚಾರಣೆ ನಡೆಯಲಿದೆ.</p>



<p>ಚಾರ್ಜ್‌ ಶೀಟ್‌ನಲ್ಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 354 ( ಹಲ್ಲೆ ಅಥವ ಕ್ರಿಮಿನಲ್ ಬಲ ಪ್ರಯೋಗ), 354 ಎ (ಲೈಂಗಿಕ ಕಿರುಕುಳ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಆರೋಪಗಳನ್ನು ದಾಖಲು ಮಾಡಿದ್ದಾರೆ.</p>
]]></content:encoded>
					
		
		
			</item>
	</channel>
</rss>
