<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Chief Minister &#8211; Peepal Media</title>
	<atom:link href="https://peepalmedia.com/tag/chief-minister/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 25 Mar 2025 10:35:27 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Chief Minister &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಸಿಎಂ-ಶಾಶಕರ ವೇತನ 100% ಹೆಚ್ಚಳ: ಐದನೇ ಸ್ಥಾನದಲ್ಲಿ ಕರ್ನಾಟಕ</title>
		<link>https://peepalmedia.com/100-increase-in-salaries-of-cms-and-governors-karnataka-in-fifth-place/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 25 Mar 2025 10:35:26 +0000</pubDate>
				<category><![CDATA[ರಾಜ್ಯ]]></category>
		<category><![CDATA[Chief Minister]]></category>
		<category><![CDATA[CM]]></category>
		<category><![CDATA[Delhi]]></category>
		<category><![CDATA[karnataka]]></category>
		<category><![CDATA[maharashtra]]></category>
		<category><![CDATA[MLA]]></category>
		<category><![CDATA[salary hike]]></category>
		<category><![CDATA[Siddaramaiah]]></category>
		<category><![CDATA[telangana]]></category>
		<category><![CDATA[uttara pradesh]]></category>
		<guid isPermaLink="false">https://peepalmedia.com/?p=55740</guid>

					<description><![CDATA[ಶುಕ್ರವಾರ ಕರ್ನಾಟಕ ವಿಧಾನಸಭೆಯು ಮುಖ್ಯಮಂತ್ರಿ ಮತ್ತು ಎಲ್ಲಾ ಶಾಸಕರಿಗೆ ಶೇ. 100 ರಷ್ಟು ವೇತನ ಹೆಚ್ಚಳವನ್ನು ಮಾಡುವ ಮಸೂದೆಗಳನ್ನು ಅಂಗೀಕರಿಸಿತು. ಇಷ್ಟಾಗಿಯೂ ಇವರು ಇತರ ನಾಲ್ಕು ರಾಜ್ಯಗಳ ಶಾಸಕರಿಗಿಂತ ಕಡಿಮೆ ಸಂಬಳ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಶಾಸಕರಿಗೆ ಅತಿ ಹೆಚ್ಚು ಸಂಬಳ ನೀಡುವ ಐದು ರಾಜ್ಯಗಳು: ತೆಲಂಗಾಣ ಮುಖ್ಯಮಂತ್ರಿಗಳ ವೇತನ &#8211; ವಸತಿ, ಪ್ರಯಾಣ ಮತ್ತು ಭದ್ರತೆಗೆ ಸಂಬಂಧಿಸಿದ ಭತ್ಯೆಗಳು ಸೇರಿದಂತೆ ತಿಂಗಳಿಗೆ &#8211; 4.10 ಲಕ್ಷ ರೂ. ಸಚಿವರ ವೇತನ &#8211; 3-3.5 ಲಕ್ಷ ರೂ. [&#8230;]]]></description>
										<content:encoded><![CDATA[
<p>ಶುಕ್ರವಾರ ಕರ್ನಾಟಕ ವಿಧಾನಸಭೆಯು ಮುಖ್ಯಮಂತ್ರಿ ಮತ್ತು ಎಲ್ಲಾ ಶಾಸಕರಿಗೆ ಶೇ. 100 ರಷ್ಟು ವೇತನ ಹೆಚ್ಚಳವನ್ನು ಮಾಡುವ ಮಸೂದೆಗಳನ್ನು ಅಂಗೀಕರಿಸಿತು. ಇಷ್ಟಾಗಿಯೂ ಇವರು ಇತರ ನಾಲ್ಕು ರಾಜ್ಯಗಳ ಶಾಸಕರಿಗಿಂತ ಕಡಿಮೆ ಸಂಬಳ ಪಡೆಯುತ್ತಿದ್ದಾರೆ.</p>



<p>ಮುಖ್ಯಮಂತ್ರಿಗಳು ಮತ್ತು ಶಾಸಕರಿಗೆ ಅತಿ ಹೆಚ್ಚು ಸಂಬಳ ನೀಡುವ ಐದು ರಾಜ್ಯಗಳು:</p>



<p><strong>ತೆಲಂಗಾಣ</strong></p>



<ol class="wp-block-list"></ol>



<p>ಮುಖ್ಯಮಂತ್ರಿಗಳ ವೇತನ &#8211; ವಸತಿ, ಪ್ರಯಾಣ ಮತ್ತು ಭದ್ರತೆಗೆ ಸಂಬಂಧಿಸಿದ ಭತ್ಯೆಗಳು ಸೇರಿದಂತೆ ತಿಂಗಳಿಗೆ &#8211; 4.10 ಲಕ್ಷ ರೂ.</p>



<p>ಸಚಿವರ ವೇತನ &#8211; 3-3.5 ಲಕ್ಷ ರೂ.</p>



<p>ಶಾಸಕರ ವೇತನ &#8211; 2.5 ಲಕ್ಷ ರೂ.</p>



<p><strong>ದೆಹಲಿ</strong></p>



<p>ಮುಖ್ಯಮಂತ್ರಿಗಳ ವೇತನ &#8211; 3.90 ಲಕ್ಷ ರೂ.</p>



<p>ಸಚಿವರ ಸಂಬಳ &#8211; 3 ಲಕ್ಷ ರೂ.</p>



<p>ಶಾಸಕರ ವೇತನ &#8211; 90,000 ರೂ.</p>



<p><strong>ಉತ್ತರ ಪ್ರದೇಶ</strong></p>



<ol start="3" class="wp-block-list"></ol>



<p>ಮುಖ್ಯಮಂತ್ರಿಗಳ ವೇತನ &#8211; 3.65 ಲಕ್ಷ ರೂ.</p>



<p>ಸಚಿವರ ವೇತನ &#8211; 2-2.5 ಲಕ್ಷ ರೂ.</p>



<p>ಶಾಸಕರ ವೇತನ &#8211; 1.87 ಲಕ್ಷ ರೂ.</p>



<p><strong>ಮಹಾರಾಷ್ಟ್ರ</strong></p>



<ol start="4" class="wp-block-list"></ol>



<p>ಮುಖ್ಯಮಂತ್ರಿಗಳ ವೇತನ &#8211; 3.40 ಲಕ್ಷ ರೂ.</p>



<p>ಸಚಿವರ ವೇತನ &#8211; 2.5-3 ಲಕ್ಷ ರೂ.</p>



<p>ಶಾಸಕರ ವೇತನ &#8211; 1.60 ಲಕ್ಷ ರೂ.</p>



<p><strong>ಕರ್ನಾಟಕ (ಮಾರ್ಚ್ ನಂತರ)</strong></p>



<ol start="5" class="wp-block-list"></ol>



<p>ಮುಖ್ಯಮಂತ್ರಿಗಳ ಸಂಬಳ &#8211; 3 ಲಕ್ಷ ರೂ.</p>



<p>ಸಚಿವರ ವೇತನ &#8211; 2-2.5 ಲಕ್ಷ ರೂ.</p>



<p>ಶಾಸಕರ ವೇತನ &#8211; 1.60 ಲಕ್ಷ ರೂ.<br><br>ಈ‌ ಪಟ್ಟಿಯನ್ನು <a href="https://www.deccanherald.com/india/karnataka/salary-hike-takes-karnataka-cm-mlas-incomes-to-5th-rank-which-states-pay-higher-3457949#5">ಡೆಕ್ಕನ್‌ ಹೆರಾಲ್ಡ್‌</a> ಪ್ರಕಟಿಸಿದೆ. ಸಂಬಳವು ವಸತಿ, ಪ್ರಯಾಣ ಭತ್ಯೆಗಳು, ಭದ್ರತಾ ಪ್ರದೇಶ ಭತ್ಯೆಗಳು ಮತ್ತು ವೈದ್ಯಕೀಯ ಸೌಲಭ್ಯಗಳ ಜೊತೆಗೆ ವಿಧಾನಸಭಾ ಅಧಿವೇಶನಗಳಿಗೆ ಹಾಜರಾಗಲು ಒಂದು ದಿನದ ವೇತನವನ್ನು ಒಳಗೊಂಡಿದೆ. ಭತ್ಯೆಗಳ ಸಂಖ್ಯೆ ಮತ್ತು ಪ್ರಕಾರವು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ.</p>



<p>ಭತ್ಯೆಗಳನ್ನು ಹೊರತುಪಡಿಸಿ ಸಿದ್ದರಾಮಯ್ಯ ಅವರ ಸಂಬಳ 1.5 ಲಕ್ಷ ರೂ. (ಹೆಚ್ಚಳದ ನಂತರ). ವಿವಿಧ ಭತ್ಯೆಗಳನ್ನು ಸೇರಿಸಿದರೆ ತಿಂಗಳಿಗೆ ಒಟ್ಟು 3 ಲಕ್ಷ ರೂ.</p>



<p>ಅದೇ ರೀತಿ, ಶಾಸಕರು ತಿಂಗಳಿಗೆ 1.25 ಲಕ್ಷ ರೂ. ಗಳಿಸುತ್ತಾರೆ ಮತ್ತು 25,000 ರೂ. ಪ್ರದೇಶ ಭತ್ಯೆ, ಪ್ರತಿ ಕಿ.ಮೀ.ಗೆ 35 ರೂ. ಪ್ರಯಾಣ ಭತ್ಯೆ ಮತ್ತು ವಿಧಾನಸಭಾ ಅಧಿವೇಶನಗಳ ಸಮಯದಲ್ಲಿ ದಿನಕ್ಕೆ 2,500 ರೂ. ಪಡೆಯುತ್ತಾರೆ.</p>



<p>ಹೆಚ್ಚುವರಿಯಾಗಿ, ಅವರಿಗೆ ಕ್ಷೇತ್ರ ಅಭಿವೃದ್ಧಿಗಾಗಿ ವಾರ್ಷಿಕವಾಗಿ 2 ಕೋಟಿ ರೂ.ಗಳನ್ನು ನಿಗದಿಪಡಿಸಲಾಗುತ್ತದೆ.</p>



<p>ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ ಮತ್ತು ಕರ್ನಾಟಕ ಶಾಸಕಾಂಗ ವೇತನ, ಪಿಂಚಣಿ ಮತ್ತು ಭತ್ಯೆ (ತಿದ್ದುಪಡಿ) ಮಸೂದೆಯನ್ನು ಯಾವುದೇ ಚರ್ಚೆಯಿಲ್ಲದೆ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು, ವಿರೋಧ ಪಕ್ಷ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.</p>



<p>&#8220;ಜೀವನ ವೆಚ್ಚದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಮುಖ್ಯಮಂತ್ರಿ ಸಚಿವರು, ರಾಜ್ಯ ಸಚಿವರು ಮತ್ತು ಉಪ ಮಂತ್ರಿಗಳ ವೇತನ ಮತ್ತು ಭತ್ಯೆಗಳನ್ನು ಬಹಳ ಸಮಯದಿಂದ ಪರಿಷ್ಕರಿಸಲಾಗಿಲ್ಲ,&#8221; ಎಂದು ಮಸೂದೆಯಲ್ಲಿ ಹೇಳಲಾಗಿದೆ.</p>
]]></content:encoded>
					
		
		
			</item>
		<item>
		<title>ಕಾರಂಜಾ ಜಲಾಶಯ ಯೋಜನೆಯ ಮುಳುಗಡೆ ಪ್ರದೇಶದ ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ : ಸಿದ್ದರಾಮಯ್ಯ</title>
		<link>https://peepalmedia.com/technical-committee-formed-to-examine-demands-of-victims-of-karanja-reservoir-project-inundation-area-siddaramaiah/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 19 Dec 2024 08:10:49 +0000</pubDate>
				<category><![CDATA[ರಾಜ್ಯ]]></category>
		<category><![CDATA[BELAGAVI]]></category>
		<category><![CDATA[Chief Minister]]></category>
		<category><![CDATA[congress]]></category>
		<category><![CDATA[dk shivakumar]]></category>
		<category><![CDATA[karanja]]></category>
		<category><![CDATA[karnataka]]></category>
		<category><![CDATA[Karnataka assembly elections]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=50925</guid>

					<description><![CDATA[ಬೆಳಗಾವಿ, ಡಿ.19: ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಗುರುವಾರ ಸುವರ್ಣ ಸೌಧದಲ್ಲಿ ಕಾರಂಜಾ ಯೋಜನೆ ಸಂತ್ರಸ್ರರ ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ, ಸಂತ್ರಸ್ತರ ಬೇಡಿಕೆ ಅನುಷ್ಠಾನದ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದರು. ತಮ್ಮನ್ನು ಭೇಟಿ ಮಾಡಿದ ನಿಯೋಗ ಮತ್ತು ಮುಖಂಡರುಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ತಾಂತ್ರಿಕ ಸಮಿತಿಯೊಂದನ್ನು [&#8230;]]]></description>
										<content:encoded><![CDATA[
<p><strong>ಬೆಳಗಾವಿ, ಡಿ.19: </strong>ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.<br>ಅವರು ಗುರುವಾರ ಸುವರ್ಣ ಸೌಧದಲ್ಲಿ ಕಾರಂಜಾ ಯೋಜನೆ ಸಂತ್ರಸ್ರರ ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ, ಸಂತ್ರಸ್ತರ ಬೇಡಿಕೆ ಅನುಷ್ಠಾನದ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದರು.</p>



<p>ತಮ್ಮನ್ನು ಭೇಟಿ ಮಾಡಿದ ನಿಯೋಗ ಮತ್ತು ಮುಖಂಡರುಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ತಾಂತ್ರಿಕ ಸಮಿತಿಯೊಂದನ್ನು ರಚಿಸಿ, ಸಮಿತಿ ನೀಡುವ ವರದಿಯಾಧರಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.</p>



<p>ಕಾರಂಜಾ ಜಲಾಶಯ ನಿರ್ಮಾಣಕ್ಕೆ 1972-73ರಲ್ಲಿ ಭೂಸ್ವಾಧೀನ ವಾಗಿತ್ತು. ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಎಕರೆಗೆ ರೂ 3000 ದಂತೆ 1981-86ರಲ್ಲಿ ಆಗಿನ ಮಾರುಕಟ್ಟೆ ಬೆಲೆ ಆಧರಿಸಿ ಪರಿಹಾರ ನೀಡಲಾಗಿತ್ತು. ಆದರೆ ಪರಿಹಾರ ಧನದ ಬಗ್ಗೆ ತಕರಾರು ಎತ್ತಿ ನ್ಯಾಯಾಲಯದ ಮೊರೆ ಹೋದ ಸಂತ್ರಸ್ತರು ಹೆಚ್ಚು ಪರಿಹಾರ ಧನ ಪಡೆದಿದ್ದರು. ನ್ಯಾಯಾಲಯದ ಮೊರೆ ಹೋಗದ ರೈತರು ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸಿ ಕಳೆ 20 ಹೋರಾಟ ನಡೆಸುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದರು.<br>ಸಚಿವರಾದ ರಹೀಂ ಖಾನ್, ಕೆಕೆಡಿಬಿ ಅಧ್ಯಕ್ಷ ಅಜಯ ಸಿಂಗ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಜಾತಿ ಜನಗಣತಿ, ಒಳಮೀಸಲಾತಿ: ಮುಖ್ಯಮಂತ್ರಿಗಳ ಒಳಮರ್ಮ</title>
		<link>https://peepalmedia.com/caste-census-internal-reservation-the-inner-secrets-of-the-chief-minister/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 04 Dec 2024 13:01:58 +0000</pubDate>
				<category><![CDATA[ಅಂಕಣ]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[caste census]]></category>
		<category><![CDATA[Chief Minister]]></category>
		<category><![CDATA[congress]]></category>
		<category><![CDATA[internal reservation]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Siddaramaiah]]></category>
		<category><![CDATA[siddaramaiah muda case]]></category>
		<guid isPermaLink="false">https://peepalmedia.com/?p=50171</guid>

					<description><![CDATA[ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳ ಗೆಲುವು ಕಾಂಗ್ರೆಸ್‌ ಪಕ್ಷಕ್ಕೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೊಸ ಉತ್ಸಾಹವನ್ನು ತಂದಂತೆ ಕಾಣುತ್ತಿದೆ. ಮುಡಾ, ವಾಲ್ಮೀಕಿ ಹಗರಣಗಳ ಸುಳಿಗಳಲ್ಲಿ ಸಿಲುಕಿ ಸ್ವಲ್ಪ ಆತಂಕ ಮತ್ತು ಇರಿಸು ಮುರಸಿಗೆ ಒಳಗಾದಂತೆ ಕಾಣುತ್ತಿದ್ದ ಸಿದ್ದರಾಮಯ್ಯ ಕಳೆದ ಕೆಲದಿನಗಳಿಂದ ಮತ್ತೆ ಪುಟಿದೆದ್ದಿದ್ದಾರೆ. ಅವರು ಮಾಧ್ಯಮದವರ ಮುಂದೆ ಮೇಜು ಕುಟ್ಟಿ ಮಾತನಾಡುವ ಮೂಲಕ ವಿರೋಧ ಪಕ್ಷಗಳಿಗೆ ಮತ್ತು ಪಕ್ಷದೊಳಗಿನ ಆಂತರಿಕ ವಿರೋಧಿಗಳಿಗೆ ವಿಭಿನ್ನ ಸಂದೇಶಗಳನ್ನು ನೀಡತೊಡಗಿದ್ದಾರೆ. ಇದರ ಬೆನ್ನಲ್ಲೇ ಅವರ ಅಭಿಮಾನಿಗಳು ಡಿಸೆಂಬರ್‌ 5ರಂದು ಹಾಸನದಲ್ಲಿ ಸಿದ್ದರಾಮಯ್ಯನವರಿಗೋಸ್ಕರ [&#8230;]]]></description>
										<content:encoded><![CDATA[
<pre class="wp-block-code"><code>
<strong>ಸಾಮಾಜಿಕ ನ್ಯಾಯದ ಪರ ಒಲವು ಮತ್ತು ಬಲಾಡ್ಯರ ಬ್ಲಾಕ್‌ಮೇಲ್‌ ದ್ವಂದ್ವದಲ್ಲಿ ಸಿದ್ದರಾಮಯ್ಯ</strong>

<strong>ಲೇಖನ: ರಾಜೇಶ್‌ ಮಲವಳ್ಳಿ</strong></code></pre>



<p>ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳ ಗೆಲುವು ಕಾಂಗ್ರೆಸ್‌ ಪಕ್ಷಕ್ಕೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೊಸ ಉತ್ಸಾಹವನ್ನು ತಂದಂತೆ ಕಾಣುತ್ತಿದೆ. ಮುಡಾ, ವಾಲ್ಮೀಕಿ ಹಗರಣಗಳ ಸುಳಿಗಳಲ್ಲಿ ಸಿಲುಕಿ ಸ್ವಲ್ಪ ಆತಂಕ ಮತ್ತು ಇರಿಸು ಮುರಸಿಗೆ ಒಳಗಾದಂತೆ ಕಾಣುತ್ತಿದ್ದ ಸಿದ್ದರಾಮಯ್ಯ ಕಳೆದ ಕೆಲದಿನಗಳಿಂದ ಮತ್ತೆ ಪುಟಿದೆದ್ದಿದ್ದಾರೆ. ಅವರು ಮಾಧ್ಯಮದವರ ಮುಂದೆ ಮೇಜು ಕುಟ್ಟಿ ಮಾತನಾಡುವ ಮೂಲಕ ವಿರೋಧ ಪಕ್ಷಗಳಿಗೆ ಮತ್ತು ಪಕ್ಷದೊಳಗಿನ ಆಂತರಿಕ ವಿರೋಧಿಗಳಿಗೆ ವಿಭಿನ್ನ ಸಂದೇಶಗಳನ್ನು ನೀಡತೊಡಗಿದ್ದಾರೆ. ಇದರ ಬೆನ್ನಲ್ಲೇ ಅವರ ಅಭಿಮಾನಿಗಳು ಡಿಸೆಂಬರ್‌ 5ರಂದು ಹಾಸನದಲ್ಲಿ ಸಿದ್ದರಾಮಯ್ಯನವರಿಗೋಸ್ಕರ ಬೃಹತ್‌ ಸ್ವಾಭಿಮಾನಿ ಸಮಾವೇಶವನ್ನು ಏರ್ಪಡಿಸಿದ್ದಾರೆ. ಹೆಸರಿಗೆ ಕಾಂಗ್ರೆಸ್‌ ಸಮಾವೇಶವಾದರೂ ಸ್ವರೂಪದಲ್ಲಿ ಇದು ಸಿದ್ದರಾಮಯ್ಯನವರ ಕೂರ್ಚಿಯನ್ನು ಭದ್ರಪಡಿಸಲು ಮತ್ತು ಅವರ ಹಿಂದೆ ಅಹಿಂದ ವರ್ಗದ ಅಚಲ ಬೆಂಬಲ ಹಾಗೂ ಸಿದ್ದರಾಮಯ್ಯನವರ ಜನಪ್ರೀಯತೆಯನ್ನು ಸಾಬೀತುಪಡಿಸುವುದೇ ಆಗಿದೆ.</p>



<p>ಆ ಮೂಲಕ ಕಾಂಗ್ರೆಸ್‌ ಹೈಕಮಾಂಡ್‌ಗೂ ಸಿದ್ದರಾಮಯ್ಯನವರು ನನ್ನನ್ನು ಹಗುರವಾಗಿ ಪರಿಗಣಿಸದಿರಿ ಎಂಬ ಸಂದೇಶವನ್ನು ನೀಡಲು ಬಯಸಿರುವುದು ಸ್ಪಷ್ಟ. ಮಹಾರಾಷ್ಟ್ರ, ಹರಿಯಾಣ ಚುನಾವಣಾ ಸೋಲಿನ ನಂತರ ಕಾಂಗ್ರೆಸ್‌ ಹೈಕಮಾಂಡ್‌ ತರಾತುರಿಯಲ್ಲಿ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಧೈರ್ಯ ಮಾಡಲಾರದು. ಇಡಿ ಭಾರತದಲ್ಲಿ ಕಾಂಗ್ರೆಸ್‌ ಪಕ್ಷದ ಒಬಿಸಿ ಮುಖಂಡರಲ್ಲಿ ಸಿದ್ದರಾಮಯ್ಯ ಮತ್ತು ಅಶೋಕ್‌ ಗೆಹ್ಲೋಟ್‌ ಅಗ್ರಗಣ್ಯರು. ರಾಜಸ್ಥಾನ ಚುನಾವಣೆ ಸೋಲಿನ ನಂತರ ಗೆಹ್ಲೋಟ್‌ ಕೊಂಚ ಹಿನ್ನಡೆಯನ್ನು ಅನುಭವಿಸಿದ್ದಾರೆ. ಈ ಹೊತ್ತಿನಲ್ಲಿ ಸಿದ್ದರಾಮಯ್ಯನವರ ಮುಖ್ಯಮಂತ್ರಿ ಸ್ಥಾನ ಭದ್ರವಾಗಿದೆ ಎಂದು ಹೇಳಬಹುದು.</p>



<p>ಬಣ ರಾಜಕೀಯದ ಕೆಸರೆರಚಾಟದಲ್ಲಿ ಮುಳುಗಿರುವ ಬಿಜೆಪಿ ಮತ್ತು ಚನ್ನಪಟ್ಟಣ ಸೋಲಿನಿಂದ ಕಂಗೆಟ್ಟಿರುವ ಜೆಡಿಎಸ್ ಈಗ ತಮ್ಮ ಆಂತರಿಕ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುವಲ್ಲಿ ಹೆಣಗಾಡುತ್ತಿವೆ. ಹೀಗಿರುವಾಗ ಡಿಸೆಂಬರ್‌ 9 ರಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಸರ್ಕಾರ ಉಪಚುನಾವಣೆಗಳ ಗೆಲುವು ಮತ್ತು ಒಂದು ಮುಕ್ಕಾಲು ವರ್ಷಗಳ ಅವಧಿಯಲ್ಲಿಯೇ ದುರ್ಬಲ ವಿರೋಧ ಪಕ್ಷಗಳನ್ನು ಎದುರು ಇಟ್ಟುಕೊಂಡು ಅಧಿವೇಶನಕ್ಕೆ ಅಣಿಯಾಗುತ್ತಿವೆ.</p>



<p>ಕಳೆದ ಮುಂಗಾರು ಅಧಿವೇಶನದಲ್ಲಿ ಸರ್ಕಾರವನ್ನು ಅಲ್ಲಾಡಿಸಿದ್ದ ಮುಡಾ ಹಗರಣದ ಕಾವು ಇಳಿದಿದೆ. ಮುಖ್ಯಮಂತ್ರಿ ಬದಲಾವಣೆ ಎನ್ನುವ ಚರ್ಚೆ ಕೂಡ ತಣ್ಣಗಾಗಿದೆ. ಈ ಹೊತ್ತಿಗೇ ಜಾತಿ ಗಣತಿ ವರದಿ ಚರ್ಚೆ ಮುನ್ನೆಲೆಗೆ ಬರಬೇಕಿದೆ. ಗ್ಯಾರಂಟಿಗಳ ಗೆಲುವಿನ ಕಥೆ ಈಗ ಹಳಸಲಾಗಿದೆ, ಜವಾಬ್ದಾರಿಯುತ ಸರ್ಕಾರವೊಂದು ಕೇವಲ ಆರ್ಥಿಕ ಸಬಲೀಕರಣಕ್ಕೆ ಮಾತ್ರ ಸೀಮಿತವಾಗದೇ ಸಾಮಾಜಿಕ ಬದಲಾವಣೆ ಮತ್ತು ಕ್ರಾಂತಿಗೆ ಮುನ್ನುಡಿಯನ್ನು ಬರೆಯಬೇಕು.</p>



<p>ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿಯವರ ಎನ್‌ಡಿಎ ಸರ್ಕಾರ ಏನಕೇನ ಪ್ರಕಾರೇಣ ತನ್ನ ಉದ್ಧೇಶಿತ ಮಸೂದೆಗಳನ್ನು ಜಾರಿಗೆ ತರಲು ಪ್ರತಿ ಅಧಿವೇಶನವನ್ನು ಬಳಸಿಕೊಳ್ಳುತ್ತಿದೆ. ಹೀಗಿರುವಾಗ ಸಿದ್ದರಾಮಯ್ಯನವರ ಕಾಂಗ್ರೆಸ್‌ ಸರ್ಕಾರ ತಾನು ಕಳೆದ ಚುನಾವಣೆಯಲ್ಲಿ ನೀಡಿದ ಬರವಸೆಯನ್ನು ಈಡೇರಿಸಲು ಹಿಂದೇಟು ಹಾಕುತ್ತಿದೆ.</p>



<p>ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಸರಕಾರ ಜಾತಿ ಗಣತಿಯನ್ನು ಜಾರಿಗೊಳಿಸುತ್ತೇವೆ ಎನ್ನುವ ಭರವಸೆಯನ್ನು ಜನತೆಗೆ ನೀಡಿತ್ತು. ಅಷ್ಟೇ ಅಲ್ಲ, ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ಜಾತಿ ಗಣತಿಯನ್ನು ನಡೆಸುವ ಹೇಳಿಕೆಯನ್ನು ರಾಹುಲ್‌ ಗಾಂಧಿ ಕೂಡ ನೀಡಿದ್ದರು. ರಾಜ್ಯದಲ್ಲಿ ಭರ್ಜರಿ ಬಹುಮತದ ಜೊತೆಗೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಆದರೆ ಈಗ ರಾಜ್ಯದ ಸರ್ವತೋಮುಖ ಅಭಿವೃದ್ಧಿಯಲ್ಲಿ ಪರಿಣಾಮಕಾರಿ ಪಾತ್ರವಹಿಸಬಹುದಾದ ಜಾತಿ ಗಣತಿಯನ್ನು ಸಂಪುಟದ ಮುಂದೆ ಮಂಡಿಸಿ, ಅದನ್ನು ಜಾರಿಗೊಳಿಸಲು ಸರಕಾರ ಅಂಜುತ್ತಿದೆ.</p>



<p>ಜಾತಿ ಗಣತಿಯನ್ನು ಜಾರಿಗೊಳಿಸಿಯೇ ಸಿದ್ಧ’’ ಎಂದು ಇತ್ತೀಚೆಗೆ ಸಿದ್ದರಾಮಯ್ಯ ಸಾರ್ವಜನಿಕ ವೇದಿಕೆಗಳಲ್ಲಿ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಕಾಂತರಾಜು ಆಯೋಗದ ವರದಿಯನ್ನು ಸರ್ಕಾರ ಸ್ವೀಕರಿಸಿ ಸುಮಾರು 8 ತಿಂಗಳು ಕಳೆದಿದೆ. ಅದರ ಬೆನ್ನಲ್ಲೇ ಸರ್ಕಾರ ಏಕಸದಸ್ಯ ಸಮಿತಿಯೊಂದನ್ನು ರಚಿಸಿ ಬೀಸೋ ದೊಣ್ಣೆಯಿಂದ ಪಾರಾಗುವ ನಾಜೂಕಿನ ನಡೆ ಅನುಸರಿಸುತ್ತಿದೆ.</p>



<p>ಜಾತಿಗಣತಿ ಮತ್ತು ಎಸ್ಸಿ ಒಳಮೀಸಲಾತಿ ಸಂಬಂಧ ಸಿದ್ದರಾಮಯ್ಯನವರ ಮುಂದೆ ಹೊರಗಿನ ಸಮಸ್ಯೆಗಳಿಗಿಂತ ಆಂತರಿಕ ಸವಾಲುಗಳೇ ಅಧಿಕಗೊಂಡಿರುವಂತೆ ಕಾಣುತ್ತಿದೆ. ಹಾಗಿದ್ದರೆ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ‌ಗಣತಿ ವಿಚಾರದಲ್ಲಿ ಗಟ್ಟಿನಿರ್ಧಾರ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದೇಕೆ ಎಂದು ಗಮನಿಸೋಣ.</p>



<p>ಅಕ್ಟೋಬರ್‌ 15 ರಂದು ಜಾತಿ ಜನಗಣತಿ ವರದಿ ಸಚಿವ ಸಂಪುಟದ ಮುಂದೆ ಚರ್ಚೆಗೆ ಬಂದ ಬೆನ್ನಿಗೇ ಕೆಲವು ಅಪಸ್ವರಗಳು ಸರಕಾರದೊಳಗಿಂದಲೇ ಎದ್ದವು. ‘‘ಜಾತಿ ಗಣತಿ ವಿಚಾರದಲ್ಲಿ ಸಿಎಂ ಎಚ್ಚರಿಕೆಯ ಹೆಜ್ಜೆ ಇಡಬೇಕು’’ ಎಂದು ಒಕ್ಕಲಿಗ ಸಮುದಾಯಕ್ಕೆ ಸೇರಿದ ಕಾಂಗ್ರೆಸ್‌ ಮುಖಂಡರು ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ಶಾಮನೂರು ಶಿವಶಂಕರಪ್ಪ ಅವರು ‘‘ನಾವು ಹಳೇ ಜಾತಿ ಗಣತಿ ಒಪ್ಪುವುದಿಲ್ಲ. ಸರಕಾರ ಹೊಸದಾಗಿ ಗಣತಿ ಮಾಡಲಿ ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ. ವೀರಶೈವ ಲಿಂಗಾಯತರ ಒಳ ಪಂಗಡಗಳನ್ನು ಬೇರೆಬೇರೆಯಾಗಿ ಗಣತಿ ಮಾಡಿ ವೀರಶೈವ ಲಿಂಗಾಯತರ ಒಟ್ಟು ಸಂಖ್ಯೆ ಕಡಿಮೆ ತೋರಿಸಲಾಗಿದೆ’’ ಎಂದು ಹೇಳಿದ್ದಾರೆ.</p>



<p>ಒಕ್ಕಲಿಗರ ಸಂಘಟನೆ ಈಗಾಗಲೇ ಜಾತಿ ಗಣತಿಯನ್ನು ವಿರೋಧಿಸಿ ಹೇಳಿಕೆಯನ್ನು ನೀಡಿದೆ. ಒಕ್ಕಲಿಗ ಸಮುದಾಯದ ಮುಖಂಡರು ಪಕ್ಷಾತೀತವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಕಾಂತರಾಜು ವರದಿಯನ್ನು ವಿರೋಧಿಸಿ ಮನವಿ ಪತ್ರವನ್ನು ನೀಡಿವೆ. ಲಿಂಗಾಯತ ಸಂಘಟನೆಗಳು ಕೂಡ ಒಳಗೊಳಗೆ ಜಾತಿ ಗಣತಿಯ ವಿರುದ್ಧ ಕತ್ತಿ ಮಸೆಯುತ್ತಿವೆ.</p>



<p>ಆರಂಭದಲ್ಲಿ ಬಿಜೆಪಿ ದೊಡ್ಡ ಮಟ್ಟದಲ್ಲಿ ಜಾತಿ ಗಣತಿ ವರದಿಯ ವಿರುದ್ಧ ತೀವ್ರ ಹೇಳಿಕೆಗಳನ್ನು ನೀಡಿತ್ತು. ‘ಜಾತಿ ಗಣತಿ ಹಿಂದೂ ಸಮಾಜವನ್ನು ಒಡೆಯುತ್ತದೆ’ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ‘ಜಾತಿ ಗಣತಿಗಾಗಿ ಅನಗತ್ಯವಾಗಿ ಸಮಯ ಮತ್ತು ಹಣವನ್ನು ಕಾಂಗ್ರೆಸ್ ಸರಕಾರ ವ್ಯಯಿಸಿದೆ’ ಎಂದು ದೂರಿದ್ದರು. ಆದರೆ, ಈಗ ಬಿಜೆಪಿ ಈ ಕುರಿತು ಮೌನವಾಗಿದೆ. ಯಾಕೆಂದರೆ, ಕೇಂದ್ರದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಜಾತಿ ಗಣತಿಯ ಕುರಿತು ಮೃದು ನಿಲುವು ತಾಳಿದ್ದಾರೆ. ಕೇಂದ್ರ ಸರಕಾರದ ಆಪ್ತ ಮಿತ್ರರಾದ ನಿತೀಶ್ ಕೂಮಾರ್ ಅವರು ಜಾತಿ ಗಣತಿಯ ಬೆಂಬಲಿಗರಾಗಿರುವುದರಿಂದ, ಅದನ್ನು ವಿರೋಧಿಸುವುದು ಕೇಂದ್ರ ಸರಕಾರಕ್ಕೆ ಕಷ್ಟಕರವಾಗಿದೆ. ಅಲ್ಲದೆ, ದೇಶಾದ್ಯಾಂತ ಜಾತಿ ಗಣತಿಗಾಗಿ ಒತ್ತಾಯಗಳು ಹೆಚ್ಚಾಗುತ್ತಿರುವುದರಿಂದ, ಜಾತಿ ಗಣತಿಯನ್ನು ಹಿಂದೂ ವಿರೋಧಿ ಗಣತಿಯೆಂದು ಕರೆದ ಮೋದಿ ಅವರೇ ತಮ್ಮ ಹೇಳಿಕೆಯಿಂದ ಹಿಂದೆ ಸರಿಯುತ್ತಿದ್ದಾರೆ. ಆರೆಸ್ಸೆಸ್ ಕೂಡ ಜಾತಿ ಗಣತಿಯ ಕುರಿತು ಸತತವಾಗಿ ಮಾರ್ಗದರ್ಶನ ನೀಡುತ್ತಿದೆ. ಈ ಕಾರಣದಿಂದಲೇ, ಜಾತಿ ಗಣತಿ ವರದಿ ಜಾರಿಯಾಗಬೇಕು ಎಂಬ ಒತ್ತಾಯಕ್ಕೆ ರಾಜ್ಯದ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಲು ಹಿಂಜರಿಯುತ್ತಿದ್ದಾರೆ.</p>



<p>ವಿಪರ್ಯಾಸವೆಂದರೆ, ಕಳೆದ ಒಂದು ವರ್ಷದಿಂದ ಜಾತಿಗಣತಿಯ ವಿರುದ್ಧ ಕಾಂಗ್ರೆಸ್ ಸರಕಾರದೊಳಗಿಂದಲೇ ಭಿನ್ನಮತಗಳು ಕೇಳಿ ಬರುತ್ತಿವೆ. ಇಂದು ಜಾತಿ ಗಣತಿ ವರದಿಗಾಗಿ ಸಿದ್ದರಾಮಯ್ಯ ಅವರಿಗೆ ಬಿಜೆಪಿಯ ಭಯವಿಲ್ಲ. ಬದಲಿಗೆ, ತನ್ನ ಸರಕಾರದೊಳಗಿರುವ ನಾಯಕರ ಕುರಿತಂತೆ ಆತಂಕವಿದೆ. ವರದಿಯ ಕಾರಣದಿಂದ ಲಿಂಗಾಯತ ಮತ್ತು ಒಕ್ಕಲಿಗ ನಾಯಕರು ಕಾಂಗ್ರೆಸ್‌ನೊಳಗೆ ಬಂಡೆದ್ದರೆ ಅದರಿಂದ ಸರಕಾರಕ್ಕೆ ಧಕ್ಕೆಯಾಗಬಹುದು ಎಂದು ಅವರು ಭಯಪಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ, ಕಾಂಗ್ರೆಸ್‌ನ ಹಿರಿಯ ನಾಯಕರಾಗಿರುವ ಬಿ. ಕೆ. ಹರಿಪ್ರಸಾದ್ ಅವರು ‘‘ಸರಕಾರ ಬಿದ್ದರೆ ಬೀಳಲಿ, ಜಾತಿ ಗಣತಿ ವರದಿ ಜಾರಿ ಮಾಡಲೇ ಬೇಕು’’ ಎಂದು ಸಾರ್ವಜನಿಕ ಸಮಾರಂಭವೊಂದರಲ್ಲಿ ಒತ್ತಾಯಿಸಿದ್ದಾರೆ.</p>



<p>ಇದೀಗ, ಕಾಂಗ್ರೆಸ್ ನಾಯಕರು ಕೆಲವು ಪ್ರಶ್ನೆಗಳಿಗೆ ಉತ್ತರಿಸಲೇಬೇಕಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಜಾತಿ ಗಣತಿಯನ್ನು ಜಾರಿಗೊಳಿಸುವುದಾಗಿ ಭರವಸೆಯೊಂದಿಗೆ ಮತ ಯಾಚನೆ ಮಾಡಿದ್ದರು. ಇದೀಗ ಜಾತಿ ಗಣತಿ ಜಾರಿಗೆ ಹಿಂದೇಟು ಹಾಕಿದರೆ ಜನಸಾಮಾನ್ಯರನ್ನು ವಂಚಿಸಿದಂತಾಗುತ್ತೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ಶೋಷಿತ ಸಮುದಾಯದ ಪ್ರತಿನಿಧಿ ಎಂದು ಕರೆದುಕೊಳ್ಳುತ್ತಾರೆ. ಜಾತಿ ಗಣತಿ ಶೋಷಿತ ಸಮುದಾಯದ ಹಿತಾಸಕ್ತಿಯನ್ನು ಹೊಂದಿದೆ. ಈ ಹಿತಾಸಕ್ತಿಯನ್ನು ತಮ್ಮ ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಬಲಿಕೊಡುತ್ತಾರೆಯೆ?</p>



<p>ಎಲ್ಲಕ್ಕಿಂತ ಮುಖ್ಯವಾಗಿ, ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರು ಜಾತಿ ಗಣತಿಯನ್ನು ದೇಶಾದ್ಯಂತ ಜಾರಿಗೊಳಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ರಾಹುಲ್‌ಗಾಂಧಿ ಜಾತಿಗಣತಿಯ ಅಗತ್ಯವನ್ನು ಒತ್ತಿ ಹೇಳಿದರು. ಹೀಗಿರುವಾಗ, ‘‘ಜಾತಿ ಗಣತಿ ವರದಿ ಜಾರಿಗೊಳಿಸಿಯೇ ಸಿದ್ಧ’’ ಎಂದು ಇತ್ತೀಚಿನ ಸಮಾರಂಭವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಜಾತಿ ಗಣತಿ ವರದಿಯನ್ನು ಜಾರಿಗೊಳಿಸುವಲ್ಲಿ ಸಿದ್ದರಾಮಯ್ಯ ಅವರನ್ನು ಈವರೆಗೆ ತಡೆದವರು ಯಾರು? ಎನ್ನುವುದನ್ನು ಮಾತ್ರ ಅವರು ಸ್ಪಷ್ಟಪಡಿಸಿಲ್ಲ. ‘‘ಈ ಹಿಂದೆ ನಡೆಸಿದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷಾ ವರದಿ ನನ್ನ ಕೈ ಸೇರಿದ್ದು ಶೀಘ್ರದಲ್ಲೇ ಕ್ಯಾಬಿನೆಟ್‌ನಲ್ಲಿ ಇಟ್ಟು ಜಾರಿಗೆ ತರುತ್ತೇನೆ. ಜಾತಿ ಗಣತಿ ವರದಿ ನಮ್ಮ ಪಕ್ಷದ ಅಜೆಂಡಾ’’ ಎಂದು ಅವರು ಕೆಲ ತಿಂಗಳ ಹಿಂದೆ ಹೇಳಿದ್ದರು.</p>



<p>ಈ ರೀತಿಯ ಹೇಳಿಕೆಯನ್ನು ಅವರು ಹಿಂದೆಯೂ ಹಲವು ಬಾರಿ ನೀಡಿರುವುದರಿಂದ ಇತ್ತೀಚೆಗೆ ಅದನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ವಿಪರ್ಯಾಸವೆಂದರೆ, ದೇಶದಲ್ಲೇ ಮೊದಲಿಗೆ ಜಾತಿ ಗಣತಿಯನ್ನು ನಡೆಸಿರುವುದು ಕರ್ನಾಟಕ. ನಮ್ಮ ರಾಜ್ಯದಲ್ಲಿ ನಡೆದ ಬಳಿಕ ಬಿಹಾರದಲ್ಲಿ ಈ ಗಣತಿ ನಡೆಯಿತು. ಆದರೆ, ವರದಿ ಮೊದಲು ಮಂಡನೆಯಾದದ್ದು ಬಿಹಾರದಲ್ಲಿ. 2015ರಲ್ಲಿ ಸಿದ್ದರಾಮಯ್ಯ ಸರಕಾರವೇ ಜಾತಿ ಗಣತಿಗೆ ಆದೇಶ ನೀಡಿತ್ತು. ಆದರೆ ಈ ವರದಿಯನ್ನು ಸ್ವೀಕರಿಸಲು ಆ ಬಳಿಕದ ಸರಕಾರಗಳು ಹಿಂದೇಟು ಹಾಕಿದವು.</p>



<p>ವಿಪರ್ಯಾಸವೆಂದರೆ, ಕಾಂಗ್ರೆಸ್ ನೇತೃತ್ವದ ಮೈತ್ರಿ ಸರಕಾರದ ಅವಧಿಯಲ್ಲೂ ಜಾತಿ ಗಣತಿ ವರದಿ ನನೆಗುದಿಗೆ ಬಿತ್ತು. ಇದೇ ಸಂದರ್ಭದಲ್ಲಿ ಜಾತಿ ಗಣತಿಯ ಅಧಿಕೃತತೆಯನ್ನು ಕೆಲವರು ಪ್ರಶ್ನಿಸತೊಡಗಿದರು. ‘‘ವರದಿ ಸೋರಿಕೆಯಾಗಿದೆ’’ ಎಂದು ಕೆಲವರು ಆರೋಪಿಸಿದ್ದರೆ, ಸಮೀಕ್ಷೆಗೆ ಬಳಸಿದ ಮಾನದಂಡವೇ ಸರಿಯಿಲ್ಲ ಎಂದು ಕೆಲವರು ತಕರಾರು ತೆಗೆಯಿದ್ದರು. ಅವರಿಗೆ ಜಾತಿ ಗಣತಿ ವರದಿಯನ್ನು ಸರಕಾರ ಸ್ವೀಕರಿಸುವುದೇ ಬೇಡವಾಗಿತ್ತು.</p>



<p>ಕಾಂಗ್ರೆಸ್ ತನ್ನ ಒಳಗಿರುವ ನಾಯಕರಿಗೆ ಹೆದರಿಯೇ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಹಿಂದೇಟು ಹಾಕುತ್ತಾ ಬಂದಿದೆ ಬಿಜೆಪಿಯಂತೂ ಜಾತಿ ಗಣತಿಯ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಾ ಬಂದಿರುವುದರಿಂದ, ಅದು ವರದಿಯನ್ನು ಸ್ವೀಕರಿಸಿ ಜಾರಿಗೊಳಿಸುವ ಪ್ರಶ್ನೆಯೇ ಬರುವುದಿಲ್ಲ. ಜಾತಿ ಗಣತಿಯ ಕುರಿತಂತೆ ಕಾಂಗ್ರೆಸ್‌ನೊಳಗಿರುವ ಭಿನ್ನಾಭಿಪ್ರಾಯಗಳಿಂದ ಅರ್ಥವಾಗುವುದೇನೆಂದರೆ, ಜಾತಿಗಣತಿಯ ಅಗತ್ಯ ಮತ್ತು ಅನಿವಾರ್ಯತೆಯ ಬಗ್ಗೆ ಕಾಂಗ್ರೆಸ್‌ನೊಳಗಿರುವ ನಾಯಕರಿಗೆ ಪ್ರಾಥಮಿಕ ಅರಿವೂ ಇಲ್ಲ.</p>



<p>ಇಂದು ರಾಜ್ಯದಲ್ಲಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯ ಬಿಜೆಪಿ ಮತ್ತು ಆರೆಸ್ಸೆಸ್‌ನ ಪಿತೂರಿಯ ಪರಿಣಾಮವಾಗಿ ಜಾತಿಗಣತಿಯ ವಿರುದ್ಧ ಮಾತನಾಡುತ್ತಿದೆ. ನೇರವಾಗಿ ವಿರೋಧಿಸಲು ಸಾಧ್ಯವಿಲ್ಲ ಎನ್ನುವ ಕಾರಣಕ್ಕೆ ಆರೆಸ್ಸೆಸ್ ನಾಯಕರು ಬಲಾಢ್ಯ ಜಾತಿ ಸಂಘಟನೆಯೊಳಗಿರುವ ತಮ್ಮ ಪ್ರತಿನಿಧಿಗಳಿಂದ ಮಾತನಾಡಿಸುತ್ತಿದ್ದಾರೆ.</p>



<p>ಇವರಿಗೆ ಕಾಂಗ್ರೆಸ್‌ನೊಳಗಿರುವ ಆಯಾ ಜಾತಿ ಮುಖಂಡರು ಉತ್ತರ ನೀಡಬೇಕೇ ಹೊರತು, ಆ ಪ್ರತಿನಿಧಿಗಳ ಪರವಾಗಿ ಕಾಂಗ್ರೆಸ್ ಪಕ್ಷವನ್ನೇ ಬ್ಲ್ಯಾಕ್‌ಮೇಲ್ ಮಾಡುವಂತಹ ಸ್ಥಿತಿಗೆ ಇಳಿಯಬಾರದು. ಅಂತಹ ನಾಯಕರ ವಿರುದ್ಧ ಕಠಿಣ ಕ್ರಮ ಜರುಗಿಸಲು ಕಾಂಗ್ರೆಸ್ ವರಿಷ್ಠರು ಹಿಂಜರಿಯಬಾರದು.</p>



<p>ವರದಿ ಜಾರಿಗೊಳಿಸುವ ಭರವಸೆಯನ್ನು ಮುಖ್ಯಮಂತ್ರಿ ನೀಡುತ್ತಿರುವಾಗಲೇ, ಅತ್ತ ಒಕ್ಕಲಿಗರ ಸಂಘಟನೆಯೊಂದು ‘‘ಹೊಸದಾಗಿ ಸಮೀಕ್ಷೆ’’ಯನ್ನು ಮಾಡಬೇಕು ಎನ್ನುವ ಬೇಡಿಕೆಯನ್ನು ಮುಂದಿಟ್ಟಿದೆ. ವರದಿಯೊಳಗೆ ಏನಿದೆ, ಎಲ್ಲಿ ತಪ್ಪಾಗಿದೆ ಎನ್ನುವುದು ಇನ್ನೂ ಸ್ಪಷ್ಟವಿಲ್ಲದೇ ಇರುವಾಗ ಸಂಘಟನೆ, ಸಮೀಕ್ಷೆ ಸರಿಯಿಲ್ಲ ಎಂದು ತಕರಾರು ತೆಗೆಯುವುದೇ ವಿಚಿತ್ರವಾಗಿದೆ.</p>



<p>ಆಳದಲ್ಲಿ ಆ ಸಂಘಟನೆಗೆ ವರದಿಯಲ್ಲಿರುವ ಸತ್ಯಾಂಶಗಳು ಬಹಿರಂಗವಾಗುವುದು ಮತ್ತು ಜಾರಿಗೊಳ್ಳುವುದು ಬೇಡವಾಗಿದೆ. ಇಂದು ಈ ವರದಿಯನ್ನು ಕುಂಟು ನೆಪ ತೆಗೆದು ತಿರಸ್ಕರಿಸುವ ಸಂಘಟನೆಗಳು ನಾಳೆ ಹೊಸದಾಗಿ ಸಮೀಕ್ಷೆ ನಡೆದರೂ ಅದನ್ನೂ ಅದು ಬೇರೆ ಬೇರೆ ನೆಪಗಳನ್ನು ಒಡ್ಡಿ ತಿರಸ್ಕರಿಸುವುದರಲ್ಲಿ ಅನುಮಾನವಿಲ್ಲ.</p>



<p>ವಿಪರ್ಯಾಸವೆಂದರೆ, ಕಾಂಗ್ರೆಸ್‌ನೊಳಗಿರುವ ಲಿಂಗಾಯತ ಮತ್ತು ಒಕ್ಕಲಿಗ ನಾಯಕರು ಈಗಲೂ ಸಮೀಕ್ಷೆಯ ಬಗ್ಗೆ ತಮ್ಮ ತಮ್ಮ ಜಾತಿ ಸಂಘಟನೆಗಳ ಮನವೊಲಿಸುವುದರಲ್ಲಿ ವಿಫಲವಾಗಿದ್ದಾರೆ. ಜಾತಿ ಗಣತಿಯನ್ನು ಜಾರಿಗೊಳಿಸುವಲ್ಲಿ ಸಿದ್ದರಾಮಯ್ಯ ತನ್ನ ಪಕ್ಷದೊಳಗಿರುವ ಬಲಿಷ್ಟ ಜಾತಿ ಶಕ್ತಿಗಳಿಗೆ ಹೆದರುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಒಂದೆಡೆ ಕಾಂಗ್ರೆಸ್ ಪಕ್ಷ ರಾಷ್ಟ್ರಮಟ್ಟದಲ್ಲಿ ಜಾತಿ ಗಣತಿಯ ಪರವಾಗಿ ಹೇಳಿಕೆಗಳನ್ನು ನೀಡುತ್ತಾ ಬಂದಿದೆ. ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಜಾತಿಗಣತಿಯನ್ನು ನಡೆಸುವುದಾಗಿ ರಾಹುಲ್‌ಗಾಂಧಿ ಭರವಸೆಯನ್ನು ನೀಡಿದ್ದಾರೆ.</p>



<p>ಕಳೆದ ಸೆಪ್ಟಂಬರ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಕೂಡ ಜಾತಿ ಗಣತಿಯ ಬಗ್ಗೆ ಮೃದು ನಿಲುವು ತಳೆದಿದ್ದಾರೆ. ಹೀಗಿರುವಾಗ, ರಾಜ್ಯದಲ್ಲಿ ಪೂರ್ಣ ಪ್ರಮಾಣದ ಜನಬೆಂಬಲವಿರುವ ಕಾಂಗ್ರೆಸ್ ಸರಕಾರಕ್ಕೆ ಜಾತಿ ಗಣತಿಯ ಕುರಿತಂತೆ ಸ್ಪಷ್ಟ ನಿಲುವಿಗೆ ಬರಲು ಸಾಧ್ಯವಾಗದೇ ಇರುವುದು ದೊಡ್ಡ ಹಿನ್ನಡೆಯಾಗಿದೆ.</p>



<p><strong>ಒಳಮೀಸಲಾತಿ ಬಗೆಹರಿಯದ ಗೊಂದಲ</strong></p>



<p><br>ಸಾಮಾಜಿಕ ನ್ಯಾಯ ಎನ್ನುವ ಪದಗುಚ್ಛ ಕಾಂಗ್ರೆಸ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಹಳ ಆಪ್ಯಾಯಮಾನವಾದುದು. ಒಳ ಮೀಸಲು ಕೂಡ ಸಾಮಾಜಿಕ ನ್ಯಾಯದ ಭಾಗ. ಈ ಸೌಲಭ್ಯಕ್ಕಾಗಿ ಕಾಂಗ್ರೆಸ್‌ನಲ್ಲಿರುವ ಎಸ್‌ಸಿ ಎಡಗೈ ಪಂಗಡದವರು ಹಲವು ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದ್ದಾರೆ. ಆದರೆ, ಕಾಂಗ್ರೆಸ್‌ನಲ್ಲಿ ಮೊದಲಿನಿಂದಲೂ ಬಲಗೈ ಪ್ರಾಬಲ್ಯವಿರುವುದರಿಂದ ನ್ಯಾಯಯುತವಾದ ಈ ಬೇಡಿಕೆ ಸಂಬಂಧದಲ್ಲಿ ದೃಢ ನಿರ್ಧಾರ ಕೈಗೊಳ್ಳಲು ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ.</p>



<p>ಒಳಮೀಸಲಾತಿಯ ಬಗ್ಗೆಯೂ ರಾಜ್ಯ ಸರಕಾರ ಗೊಂದಲದಲ್ಲಿದೆ. ಸುಪ್ರೀಂಕೋರ್ಟ್ ಒಳ ಮೀಸಲಾತಿ ಅನುಷ್ಠಾನದ ಜವಾಬ್ದಾರಿಯನ್ನು ರಾಜ್ಯಗಳ ಮೇಲೆ ಹಾಕಿದಾಗ, ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದರು. ದಲಿತ ಸಮುದಾಯದ ಒಂದು ಗುಂಪು ಒಳ ಮೀಸಲಾತಿಯ ಬೇಡಿಕೆಯಿಟ್ಟಾಗ ರಾಜ್ಯ ಸರಕಾರಗಳು ಕೇಂದ್ರ ಮತ್ತು ಸುಪ್ರೀಂಕೋರ್ಟ್‌ನ ಕಡೆಗೆ ಕೈತೋರಿಸಿದ್ದವು.</p>



<p>ಇತ್ತೀಚೆಗೆ, ಸುಪ್ರೀಂಕೋರ್ಟ್ ಹಸಿರು ನಿಶಾನೆ ನೀಡಿದ ನಂತರ, ಸರ್ಕಾರ ಮೀನಾಮೇಷ ಎಣಿಸುತ್ತಿದೆ. ತೆಲಂಗಾಣದಲ್ಲಿ ಈಗಾಗಲೇ ಅಲ್ಲಿನ ಕಾಂಗ್ರೆಸ್ ಸರಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಸುಪ್ರೀಂಕೋರ್ಟ್ ತೀರ್ಪನ್ನು ಅಧ್ಯಯನ ಮಾಡಿ ಶಿಫಾರಸು ಮಾಡಲು ಒಂದು ಸಂಪುಟ ಉಪ ಸಮಿತಿಯನ್ನು ರಚಿಸಿದೆ. ಪರಿಶಿಷ್ಟ ಜಾತಿಗಳ ವಿವಿಧ ಸಂಘಸಂಸ್ಥೆಗಳಿಂದ ಈ ಸಮಿತಿ ಈಗಾಗಲೇ ಹೇಳಿಕೆಗಳನ್ನು ಆಹ್ವಾನಿಸಿದೆ. ಕನಿಷ್ಠ ಇಷ್ಟನ್ನಾದರೂ ಮಾಡಲು ರಾಜ್ಯ ಸರಕಾರ ಯಾಕೆ ಹಿಂದೇಟು ಹಾಕುತ್ತಿದೆ? ಎನ್ನುವ ಪ್ರಶ್ನೆಯನ್ನು ಜನರು ಕೇಳುತ್ತಿದ್ದಾರೆ.</p>



<p>ದೇವರಾಜ ಅರಸು ಅವರ ಅನುಯಾಯಿ ಎಂದು ಹೇಳಿಕೊಳ್ಳುತ್ತ ಆಗಾಗಾ ರಾಮ್‌ ಮನೋಹರ್‌ ಲೋಹಿಯಾ ಅವರ ಚಿಂತನೆಗಳನ್ನು ಸದನದ ಒಳಗೆ ಮತ್ತು ಸಾರ್ವಜನಿಕ ಜೀವನದಲ್ಲಿ ವ್ಯಕ್ತಪಡಿಸುವ ಸಿದ್ದರಾಮಯ್ಯನವರು ಜಾತಿ ಜನಗಣತಿ ಮತ್ತು ಎಸ್‌ಸಿ ಎಸ್ಟಿ ಒಳಮೀಸಲಾತಿ ಕುರಿತು ಗಟ್ಟಿ ನಿರ್ಧಾರಗಳನ್ನು ಕೈಗೊಳ್ಳುವ ಸಮಯ ಬಂದಿದೆ.</p>



<p>ಸಿದ್ದರಾಮಯ್ಯನವರು ಜನರಿಗೆ ಮಾತು ನೀಡಿದಂತೆ ತಮ್ಮ ಮಾತಿಗೆ ಬದ್ಧರಾಗಿ ಐತಿಹಾಸಿಕ ನಿರ್ಣಯ ಕೈಗೊಂಡರೆ ಅವರು ಸದಾ ಪಠಿಸುವ ಸಾಮಾಜಿಕ ನ್ಯಾಯಕ್ಕೆ ಒಂದು ಅರ್ಥ ಬರಲಿದೆ. ಇಲ್ಲವಾದರೆ ತಮ್ಮ ಕುರ್ಚಿ ಕಾಪಾಡಿಕೊಳ್ಳುವ ಆತಂಕದಲ್ಲಿ ತಮ್ಮ ವಿಚಾರ ಧಾರೆ, ಜನರಿಗೆ ನೀಡಿದ ವಚನಗಳಿಂದ ಹಿಂದೆ ಸರಿದರೆ ನೂರರಲ್ಲಿ ಒಬ್ಬರಾಗಿ ಇತಿಹಾಸದಲ್ಲಿ ಕಳೆದುಹೋಗಲಿದ್ದಾರೆ.</p>



<p>ಕರ್ನಾಟಕ ಈಗಾಗಲೇ 23 ಮುಖ್ಯಮಂತ್ರಿಗಳನ್ನು ಕಂಡಿದೆ, ಇನ್ನೂ ಅನೇಕರು ಆ ಸಾಲಿಗೆ ಸೇರುತ್ತಾರೆ. ಇವರ ನಡುವೆ ವಿಶೇಷ ಎನ್ನಿಸುವ ಮತ್ತು ಇತಿಹಾಸ ತನ್ನನ್ನು ಹೇಗೆ ಗುರುತಿಸಬೇಕು ಎಂದು ನಿರ್ಧರಿಸುವ ಅವಕಾಶ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈಯಲ್ಲೇ ಇದೆ. ಜಾತಿ ಗಣತಿ, ವರದಿಯನ್ನು ಸಂಪುಟದಲ್ಲಿ ಮಂಡಿಸಿ ಅದನ್ನು ಜಾರಿಗೊಳಿಸುವ ಮತ್ತು ಒಳಮೀಸಲಾತಿ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳುವ ವಿಷಯದಲ್ಲಿ ಮುಖ್ಯಮಂತ್ರಿಯವರು ಇನ್ನಾದರೂ ಇಚ್ಛಾಶಕ್ತಿಯನ್ನು ಪ್ರಕಟಿಸಬೇಕಾಗಿದೆ.</p>



<p>ಈಗ ಮೂಡಾ, ವಾಲ್ಮೀಕಿ ಬಿಸಿ ಇಳಿದಿದೆ, ಸದ್ಯಕ್ಕೆ ಮುಖ್ಯಮಂತ್ರಿಯ ಬದಲಾವಣೆ ಚರ್ಚೆ ಹಿನ್ನೆಲೆಗೆ ಸರಿದಿದೆ. ಉಪಚುನಾವಣೆ ಸೋಲಿನ ನಂತರ ಬಿಜೆಪಿ ಮತ್ತು ಜೆಡಿಎಸ್‌ ತಮ್ಮ ಆಂತರಿಕ ಒಳಜಗಳಗಳನ್ನು ನಿವಾರಿಸುವುದರಲ್ಲಿ ಹೆಣಗುತ್ತಿವೆ. ಇದೇ ಸಮಯದಲ್ಲಿ ಸಿದ್ದರಾಮಯ್ಯನವರಿಗೆ ಜಾತಿ ಜನಗಣತಿ, ಒಳಮೀಸಲಾತಿ, ಸಾಮಾಜಿಕ ಬದಲಾವಣೆ, ಮೀಸಲಾತಿಯ ಕಾನೂನುಗಳನ್ನು ಜಾರಿಗೆ ತರಲು ಸುವರ್ಣಾವಕಾಶ. ಸಮಾಜದ ಎಲ್ಲಾ ವರ್ಗವನ್ನು ತೃಪ್ತಿಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಗಾಂಧಿ, ಅಂಬೇಡ್ಕರ್‌, ಅಬ್ರಾಹಂ ಲಿಂಕನ್‌ ವರೆಗೆ ಎಲ್ಲ ನಾಯಕರು ಪ್ರಗತಿಪರ ಮತ್ತು ಸಾಮಾಜಿಕ ಬದಲಾವಣೆಗಳನ್ನು ತರಲು ಮುಂದಾದಾಗ ಸಾಮಾಜದ ಪ್ರಿವಿಲೇಜ್ಡ್‌ ವರ್ಗಗಳಿಂದ ಕಠು ವಿಮರ್ಶೆ ಮತ್ತು ವಿರೋಧವನ್ನು ಎದುರಿಸಿದ್ದಾರೆ. ಇದರಿಂದ ಸಿದ್ದರಾಮಯ್ಯ ಏನು ಹೊರತಾಗಿಲ್ಲ. ಇದರ ಅರಿವು ಅವರಿಗಿದೆ.</p>



<p>ಆಂತರಿಕ ವಿರೋಧವನ್ನು ನಿಭಾಯಿಸಲಾಗದೇ, ವೊಕ್ಕಲಿಗ-ಲಿಂಗಾಯತ ಸಮುದಾಯದ ಕೋಪಕ್ಕೆ ಗುರಿಯಾಗುವ ಆಂತಂಕದಲ್ಲಿ ಮುಖ್ಯಮಂತ್ರಿಯವರು ದ್ವಂದ್ವದಲ್ಲಿ ಸಿಲುಕಿದಂತಿವೆ. ಈ ಸಮುದಾಯಗಳು ಕಾಂಗ್ರೆಸ್‌ ಅಥವಾ ಸಿದ್ದರಾಮಯ್ಯನವರನ್ನು ಎಂದೂ ಕೂಡ ದೊಡ್ಡ ಮಟ್ಟದಲ್ಲಿ ಬೆಂಬಲಿಸಿಲ್ಲ. ಕೆಲವು ಸ್ಥಳೀಯ ಕಾರಣದಿಂದ ಅಲ್ಲಲ್ಲಿ ಒಂದಷ್ಟು ವೊಕ್ಕಲಿಗ ಮತ್ತು ಲಿಂಗಾಯತ ಮತಗಳು ಕಾಂಗ್ರೆಸ್‌ಗೆ ಬಂದಿವೆ. ಅವು ಆಡಳಿತ ವಿರೋಧಿ ಮತಗಳೇ ಹೊರತು ಕಾಂಗ್ರೆಸ್‌ ನ ಕೋರ್‌ ವೋಟ್‌ಗಳಲ್ಲ. ಇಂದಿರಾಗಾಂಧಿಯವರ ಅವಧಿಯಿಂದ ಇತ್ತೀಚಿನ 2024 ರ ಲೋಕಸಭಾ ಚುನಾವಣೆ ವರೆಗೆ ಕಾಂಗ್ರೆಸ್‌ಗೆ ಬೆನ್ನೆಲುಬಾಗಿ ನಿಂತಿರುವುದು ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಗಳೂ. ಜೊತೆಯಲ್ಲಿ ಜಾತಿ ಗಣತಿ ಮತ್ತು ಎಸ್‌ಸಿ ಒಳ ಮೀಸಲಾತಿ ಯಾವುದೇ ಸಮುದಾಯದ ಹಕ್ಕುಗಳನ್ನು ಕಿತ್ತುಕೊಳ್ಳುವುದಿಲ್ಲ. ಹೀಗಿರುವಾಗ ಇದನ್ನು ಸರ್ಕಾರ ಜನಸಾಮಾನ್ಯರಿಗೆ ಅರ್ಥಮಾಡಿಸಬೇಕು.</p>



<p>ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್‌ ಗಾಂಧಿಯವರು ಲೋಕಸಭೆ ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಜಸಂಖ್ಯೆಗೆ ಅನುಸಾರ ಅಧಿಕಾರ ಮತ್ತು ಪ್ರಾತಿನಿಧ್ಯಕ್ಕೆ ಒತ್ತಾಯಿಸಿದ್ದರು. ಮುಖ್ಯಮಂತ್ರಿಯವರು ಈ ನಿಲುವಿಗೆ ಸಹಮತ ಹೊಂದಿದ್ದಾರೆ ಎಂಬುದನ್ನು ಕ್ರಿಯೆಯ ಮೂಲಕ ಸಾಬೀತುಪಡಿಸಬೇಕು. ಇನ್ನೂ ಕಾಲ ಮಿಂಚಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದಿವಂಗತ ದೇವರಾಜ ಅರಸು ಅವರ ದಾರಿಯಲ್ಲಿ ನಡೆಯಲು ಮುಕ್ತ ಅವಕಾಶವಿದೆ. ಇದಕ್ಕೆ ಧೃಢವಾದ ರಾಜಕೀಯ ಇಚ್ಛಾಶಕ್ತಿ ಒಂದು ಬೇಕಿದೆ.</p>



<p><strong><strong>ಲೇಖನ: ರಾಜೇಶ್‌ ಮಲವಳ್ಳಿ</strong></strong></p>
]]></content:encoded>
					
		
		
			</item>
		<item>
		<title>ದೇಶದ ವಿರೋಧಪಕ್ಷಗಳ ವಿರುದ್ಧ ಮೋದಿ ದ್ವೇಷ- ಬಿಜೆಪಿ ಜೆಡಿಎಸ್ ಪಿತೂರಿಗೆ ನಾನು ಹೆದರಲ್ಲ: ಸಿಎಂ ಸ್ಪಷ್ಟ ಎಚ್ಚರಿಕೆ</title>
		<link>https://peepalmedia.com/modi-has-hate-to-opposition-parties-i-dont-care-for-bjp-jds-conspiracy/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 24 Sep 2024 11:16:42 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[bjp]]></category>
		<category><![CDATA[Chief Minister]]></category>
		<category><![CDATA[CM]]></category>
		<category><![CDATA[CM siddaramaiah]]></category>
		<category><![CDATA[congress]]></category>
		<category><![CDATA[HD Kumaraswamy]]></category>
		<category><![CDATA[HDK]]></category>
		<category><![CDATA[JDS]]></category>
		<category><![CDATA[kumaraswamy]]></category>
		<category><![CDATA[modi]]></category>
		<category><![CDATA[narendra modi]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=46051</guid>

					<description><![CDATA[ಬೆಂಗಳೂರು, ಸೆಪ್ಟೆಂಬರ್ 24: ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯದ ಆದೇಶ ಹೊರಬಂದ ನಂತರ ಪತ್ರಿಕಾ ಗೋಷ್ಠಿ ನಡೆಸಿ, ತಮ್ಮ ಮೊದಲ ಪ್ರತಿಕ್ರಿಯೆ ನೀಡಿದರು. ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ , ಬಿಎನ್ ಎಸ್ ಎಸ್ ಪ್ರಕಾರ 218 ಹಾಗೂ ಪಿಸಿ ಕಾಯ್ದೆ [&#8230;]]]></description>
										<content:encoded><![CDATA[
<p><strong>ಬೆಂಗಳೂರು, ಸೆಪ್ಟೆಂಬರ್ 24:</strong> ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>



<p>ಅವರು ಇಂದು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯದ ಆದೇಶ ಹೊರಬಂದ ನಂತರ ಪತ್ರಿಕಾ ಗೋಷ್ಠಿ ನಡೆಸಿ, ತಮ್ಮ ಮೊದಲ ಪ್ರತಿಕ್ರಿಯೆ ನೀಡಿದರು.</p>



<p><strong>ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ</strong></p>



<p>ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ , ಬಿಎನ್ ಎಸ್ ಎಸ್ ಪ್ರಕಾರ 218 ಹಾಗೂ ಪಿಸಿ ಕಾಯ್ದೆ 19ರಂತೆ ತನಿಖೆಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17 ಎ ಪ್ರಕಾರ ತನಿಖೆಗೆ ಉಚ್ಛನ್ಯಾಯಾಲಯ ಆದೇಶ ನೀಡಿದೆ. ಈ ತೀರ್ಪಿನ ಮೇಲೆ ಕಾನೂನು ಹೋರಾಟದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ , ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.</p>



<p><strong>ಬಿಜೆಪಿ ಜೆಡಿಎಸ್ ನ ಪಿತೂರಿಗೆ ಹೆದರುವುದಿಲ್ಲ</strong></p>



<p>ಬಿಜೆಪಿ ಜೆಡಿಎಸ್ ನ ಪಿತೂರಿಗೆ ನಾನು ಎಂದೂ ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ಸಂಚು , ರಾಜಭವನ ದುರುಪಯೋಗ ಹಾಗೂ ದುರ್ಬಳಕೆಗೆ ನಾನು ಹೆದರುವುದಿಲ್ಲ. ರಾಜ್ಯದ ಜನ , ಪಕ್ಷದ ಹೈಕಮಾಂಡ್, ಶಾಸಕರು, ಸಚಿವರು, ಕಾರ್ಯಕರ್ತರು ನನ್ನೊಂದಿಗಿದ್ದಾರೆ. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಹಕಾರ ನೀಡಲಿದೆ. ನರೆಂದ್ರ ಮೋದಿಯವರ ಬಿಜೆಪಿ ಸರ್ಕಾರ , ಕೇವಲ ನನ್ನ ಮೇಲಷ್ಟೇ ಅಲ್ಲ , ಇಡೀ ದೇಶದ ವಿರೋಧಪಕ್ಷಗಳ ವಿರುದ್ಧ ಮೇಲೆ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಮಾಡುತ್ತಿದ್ದಾರೆ ಎಂದರು.</p>



<p><strong>ಆಪರೇಷನ್ ಕಮಲದ ಪ್ರಯತ್ನ ವಿಫಲ</strong></p>



<p>ಬಿಜೆಪಿ ಹಾಗೂ ಜೆಡಿಎಸ್ ನವರು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದಾರೆ. ಅವರು ಹಣಬಲದಿಂದ, ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದೊಂದಿಗೆ ಎಂದಿಗೂ ಬಿಜೆಪಿ-ಜೆಡಿಎಸ್ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಕ್ಷ ಬಂದಿದ್ದರಿಂದ ಆಪರೇಷನ್ ಕಮಲ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ದುಡ್ಡನ್ನು ಕೊಟ್ಟು ಶಾಸಕರನ್ನು ಖರೀದಿಸುವ ಪ್ರಯತ್ನ ಮಡಿದರು. ನಮ್ಮ ಯಾವ ಶಾಸಕರೂ ದುಡ್ಡಿನ ಹಿಂದೆ ಹೋಗದ ಕಾರಣ,ಅವರ ಪ್ರಯತ್ನ ವಿಫಲವಾಯಿತು ಎಂದರು.</p>



<p><strong>ಬಿಜೆಪಿಯವರು ಸಾಮಾಜಿಕ ನ್ಯಾಯ, ಬಡವರ ವಿರೋಧಿಗಳು</strong></p>



<p>ಕಾಂಗ್ರೆಸ್ ಸರ್ಕಾರದ ಬಡವರ ಪರ ಕಾರ್ಯಕ್ರಮಗಳನ್ನು ಬಿಜೆಪಿ ವಿರೋಧಿಸುತ್ತಾ ಬಂದಿದ್ದಾರೆ. ಶೂಭಾಗ್ಯ, ಪಶುಭಾಗ್ಯ, ಶಾದಿಭಾಗ್ಯ , ಕ್ಷೀರಭಾಗ್ಯ ಸೇರಿದಂತೆ ಹಲವು ಜನಪರ ಯೋಜನೆಗಳು ಹಾಗೂ ಈಗಿನ ಗ್ಯಾರಂಟಿ ಯೋಜನೆಗಳನ್ನು ಸಹ ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಸಾಮಾಜಿಕ ನ್ಯಾಯ, ಬಡವರ ವಿರೋಧಿಗಳು. ಸರ್ಕಾರಕ್ಕೆ ಕಪ್ಪು ಮಸಿ ಬಳಿಯುವುದು ಅವರ ದುರಾಲೋಚನೆ. ಹೈಕೋರ್ಟ್ ಆದೇಶದ ಪ್ರತಿಯನ್ನು ಸಂಪೂರ್ಣ ಪರಿಶೀಲಿಸಿ , ಮುಂದಿನ ಪ್ರತಿಕ್ರಿಯೆಯನ್ನು ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಇಡೀ ದೇಶದಲ್ಲಿ ಪಿತೂರಿ ಮಾಡಿದಂತೆ ಕರ್ನಾಟಕದಲ್ಲಿಯೂ ನನ್ನ ಹಾಗೂ ಸರ್ಕಾರದ ವಿರುದ್ಧ ಪಿತೂರಿ ಮಾಡಲಾಗಿದೆ ಎಂದರು.</p>



<p><strong>ಕಾನೂನಾತ್ಮಕ ಹೋರಾಟ:</strong><br>ಆದೇಶ ತೃಪ್ತಿ ತಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಇದೊಂದು ಕಾನೂನಾತ್ಮಕ ಹೋರಾಟ. ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು.</p>



<p><strong>ತಪ್ಪು ಮಾಡಿಲ್ಲ</strong><br>ನನ್ನ ಪ್ರಕಾರ ನಾನು ತಪ್ಪು ಮಾಡಿಲ್ಲ. 17 ಎ ರಡಿ ತನಿಖೆ ಮಾಡಲು ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ಬಿ ಎನ್.ಎಸ್.ಎಸ್ ಕಾಯ್ದೆಯಡಿ 218 ಆದೇಶ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದರು.</p>



<p><strong>ಸಚಿವ ಕುಮಾರಸ್ವಾಮಿಯವರಿಗೆ ಅನ್ವಯವಾಗುವುದಿಲವೇ</strong>?</p>



<p>ಬಿಜೆಪಿಯವರು ಮುಖ್ಯಮಂತ್ರಿಗಳು ರಾಜಿನಾಮೆ ಕೊಡಲು ಒತ್ತಾಯಿಸಿ ಪ್ರತಿಭಟನೆ ಮಾಡುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಅವರನ್ನು ನಾವು ಎದುರಿಸುತ್ತೇವೆ. ರಾಜಿನಾಮೆ ಏಕೆ ಕೊಡಬೇಕು ಎಂದು ಪ್ರಶ್ನಿಸಿದರು. ರಾಜಿನಾಮೆ ಕೇಳುವುದಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಹೇಳಿಕೆಗೆ ಪ್ರತಿಕ್ರಿಯಿಸಿ ಅವರ ಮೇಲೆ ಎಫ್.ಐ.ಆರ್ ಆಗಿದ್ದು ಅವರು ಜಾಮೀನಿನ ಮೇಲೆ ಇದ್ದಾರೆ.ಅವರು ರಾಜಿನಾಮೆ ಕೊಟ್ಟಿದ್ದಾರೆಯೇ? ಇದು ಅವರಿಗೆ ಅನ್ವಯವಾಗುವುದಿಲ್ಲವೇ? ತನಿಖೆ ಹಂತದಲ್ಲಿಯೇ ರಾಜಿನಾಮೆ ಕೊಡುವ ಬಗ್ಗೆ ಕುಮಾರಸ್ವಾಮಿಯವರನ್ನು ಕೇಳಿ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.</p>



<p>ನ್ಯಾಯಾಲಯದ ತೀರ್ಪನ್ನು ನಾನು ಪೂರ್ತಿ ಓದಿಲ್ಲ. ಮಾಧ್ಯಮಗಳಲ್ಲಿ ಬಿತ್ತರಿಸಿರುವುದನ್ನು ಮಾತ್ರ ಓದಿದ್ದೇನೆ ಎಂದರು. ಓದಿದ ನಂತರ ಪುನಃ ಪ್ರತಿಕ್ರಿಯೆ ನೀಡುತ್ತೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.</p>
]]></content:encoded>
					
		
		
			</item>
		<item>
		<title>ದೆಹಲಿಗೆ ಅತಿಶಿ ಮರ್ಲೆನಾ ನೂತನ ಮುಖ್ಯಮಂತ್ರಿ</title>
		<link>https://peepalmedia.com/atishi-marlena-new-cm-to-delhi/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 17 Sep 2024 07:00:33 +0000</pubDate>
				<category><![CDATA[ದೇಶ]]></category>
		<category><![CDATA[Aam Aadmi Party]]></category>
		<category><![CDATA[AAP]]></category>
		<category><![CDATA[arvind kejriwal]]></category>
		<category><![CDATA[Atishi Marlena]]></category>
		<category><![CDATA[Chief Minister]]></category>
		<category><![CDATA[Delhi]]></category>
		<category><![CDATA[New Delhi]]></category>
		<guid isPermaLink="false">https://peepalmedia.com/?p=45596</guid>

					<description><![CDATA[ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಅವರು ಆಯ್ಕೆಯಾಗಿದ್ದಾರೆ. ಆಮ್ ಆದ್ಮಿ ಪಕ್ಷದ ಶಾಸಕಾಂಗದ ನಾಯಕರು ಅತಿಶಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಆ ಬಳಿಕ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ. ದೆಹಲಿಯ ಕೇಜ್ರಿವಾಲ್ ಸಂಪುಟದಲ್ಲಿ ಶಿಕ್ಷಣ, ಲೋಕೋಪಯೋಗಿ ಸೇರಿದಂತೆ [&#8230;]]]></description>
										<content:encoded><![CDATA[
<p>ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಅವರು ಆಯ್ಕೆಯಾಗಿದ್ದಾರೆ. ಆಮ್ ಆದ್ಮಿ ಪಕ್ಷದ ಶಾಸಕಾಂಗದ ನಾಯಕರು ಅತಿಶಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ.</p>



<p>ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಆ ಬಳಿಕ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.</p>



<p>ದೆಹಲಿಯ ಕೇಜ್ರಿವಾಲ್ ಸಂಪುಟದಲ್ಲಿ ಶಿಕ್ಷಣ, ಲೋಕೋಪಯೋಗಿ ಸೇರಿದಂತೆ ಹಲವು ಖಾತೆ ನಿಭಾಯಿಸಿರುವ ಅತಿಶಿ ಚಿಕ್ಕ ವಯಸ್ಸಿನವರಾದರೂ ಸಂಪುಟದಲ್ಲಿ ತನಗೆ ಸಿಕ್ಕ ಅವಕಾಶಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ದೆಹಲಿಯ ಶೈಕ್ಷಣಿಕ ಕ್ಷೇತ್ರದಲ್ಲಿ ಅತಿಶಿ ನಿಭಾಯಿಸಿದ ಜವಾಬ್ದಾರಿ ದೇಶಕ್ಕೇ ಮಾದರಿ ಎನ್ನುವಂತಿದೆ.</p>



<p>ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಸಮೀಪಿಸುತ್ತಿದೆ. 2025ರ ಫೆಬ್ರವರಿಯಲ್ಲಿ ದಿಲ್ಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೆ ಕೇಜ್ರಿವಾಲ್ ಅವರು 2024ರ ನವೆಂಬರ್‌ನಲ್ಲೇ ಚುನಾವಣೆ ನಡೆಯಬೇಕು ಎಂದು ಆಗ್ರಹಿಸುತ್ತಿದ್ದಾರೆ.&nbsp;ಪಕ್ಷ ಸಂಘಟನೆ ಹಾಗೂ ಚುನಾವಣಾ ತಂತ್ರಗಾರಿಕೆ ನಡೆಸುವ ಹಿನ್ನೆಲೆಯಲ್ಲಿ ಸಿಎಂ ಪಟ್ಟ ಅತಿಶಿ ಹೆಗಲಿಗೇರಿದೆ.</p>
]]></content:encoded>
					
		
		
			</item>
		<item>
		<title>ಚಾಮುಂಡಿ ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ &#8211; ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆ</title>
		<link>https://peepalmedia.com/special-taskforce-to-chamundi-hill-and-development-of-23-temple-belong-to-chamundi-temple/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 03 Sep 2024 12:13:31 +0000</pubDate>
				<category><![CDATA[ರಾಜ್ಯ]]></category>
		<category><![CDATA[chamundi hill]]></category>
		<category><![CDATA[chamundi temple]]></category>
		<category><![CDATA[Chief Minister]]></category>
		<category><![CDATA[CM]]></category>
		<category><![CDATA[CM siddaramaiah]]></category>
		<category><![CDATA[mysore]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=44869</guid>

					<description><![CDATA[ಮೈಸೂರು, ಸೆಪ್ಟೆಂಬರ್ 03: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಚಾಮುಂಡೇಶ್ವರಿ ಪ್ರಾಧಿಕಾರವನ್ನು ಸರ್ಕಾರ ರಚಿಸಿದ್ದು, ಹಿಂದೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯಡಿ ಕಾರ್ಯನಿರ್ವಾಹಕ ಅಧಿಕಾರಿಗಳು ದೇವಸ್ಥಾನದ ಅಭಿವೃದ್ಧಿ ಮತ್ತು ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತಿದ್ದರು. ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವೂ ರಚನೆಯಾಗಿದೆ. ಹುಲಿಗೆಮ್ಮ [&#8230;]]]></description>
										<content:encoded><![CDATA[
<pre class="wp-block-code"><code><strong>ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ, ಚಾಮುಂಡಿಬೆಟ್ಟ ಪ್ರದೇಶದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸಲು ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ</strong></code></pre>



<p><strong>ಮೈಸೂರು, ಸೆಪ್ಟೆಂಬರ್ 03</strong>: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>



<p>ಚಾಮುಂಡೇಶ್ವರಿ ಪ್ರಾಧಿಕಾರವನ್ನು ಸರ್ಕಾರ ರಚಿಸಿದ್ದು, ಹಿಂದೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯಡಿ ಕಾರ್ಯನಿರ್ವಾಹಕ ಅಧಿಕಾರಿಗಳು ದೇವಸ್ಥಾನದ ಅಭಿವೃದ್ಧಿ ಮತ್ತು ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತಿದ್ದರು. ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವೂ ರಚನೆಯಾಗಿದೆ. ಹುಲಿಗೆಮ್ಮ ದೇವಸ್ಥಾನ ಮಹದೇಶ್ವರ ದೇವಸ್ಥಾನÀ, ಸವದತ್ತಿಯ ಎಲ್ಲಮ್ಮ, ಘಾಟಿ ಸುಬ್ಮಣ್ಯ ದೇವಸ್ಥಾನಕ್ಕೂ ಪ್ರಾಧಿಕಾರವನ್ನು ಸರ್ಕಾರ ರಚಿಸಿದೆ. ವಿಶ್ವವಿಖ್ಯಾತ ದಸರಾ ಹಬ್ಬದ ಜೊತೆಗೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಾವಿರಾರು ಜನ ಭಕ್ತಾದಿಗಳು ಶುಕ್ತವಾರ, ಶನಿವಾರ ಭಾನುವಾರಗಳಂದು ಬಹಳ ಭಕ್ತಾದಿಗಳು ಭೇಟಿ ನೀಡುತ್ತಾರೆ. ಶ್ರೀಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಅವುಗಳ ಪೈಕಿ ಕೆಲವು ಪೂರ್ಣಗೊಂಡಿದ್ದರೆ ಕೆಲವು ಪೂರ್ಣಗೊಂಡಿಲ್ಲ ಎಂದರು.</p>



<p><strong>ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ</strong></p>



<p>ಪ್ರಾಧಿಕಾರವು ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ಧಿ, ಹಾಗೂ ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂಬ ಉದ್ದೇಶದಿಂದ ಪ್ರಾಧಿಕಾರ ರಚನೆಯಾಗಿದೆ. ಹಿಂದೆ ಬಸ್ ನಿಲ್ದಾಣ, ವಾಹನ ನಿಲುಗಡೆ ಮತ್ತು ಮಳಿಗೆಗಳ ನಿರ್ಮಾಣವಾಗಿದೆ. ಹಿಂದೆ ಕೈಗೆತ್ತಿಕೊಂಡಿರುವ ಕಾರ್ಯಕ್ರಮಗಳನ್ನು ಕೂಡಲೇ ಪೂಣಗೊಳಿಸಲು ಸೂಚನೆ ನೀಡಲಾಗಿದೆ. 2018 ರಲ್ಲಿ ಕುಡಿಯುವ ನೀರಿನ ಕಾಮಗಾರಿ ಮಂಜೂರಾಗಿದ್ದರೂ ಇನ್ನೂ ಪೂರ್ಣವಾಗಿಲ್ಲ. ಅದನ್ನು ಕೂಡಲೇ ಪೂರ್ಣಗೊಳಿಸಲು ನಗರಾಭಿವೃದ್ಧಿ ಪ್ರಾಧಿಕಾರದವರಿಗೆ ಸೂಚನೆ ನೀಡಲಾಗಿದೆ. ಕಸ ವಿಲೇವಾರಿ ಕಾಮಗಾರಿಯ ಸಿವಿಲ್ ಕಾಮಗಾರಿಗಳು ಪೂರ್ಣವಾಗಿದ್ದು, ಈ ತಿಂಗಳೊಳಗೆ ವಿದ್ಯುದ್ದೀಕರಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸವೇಕು. ಸ್ವಚ್ಛತೆಗೆ ಗಮನ ಹರಿಸಬೇಕೆಂದು ಸೂಚಿಸಲಾಗಿದೆ ಚಾಮುಂಡಿ ದೇವಸ್ಥಾನ ಮಾತ್ರವಲ್ಲದೇ ಎಲ್ಲಾ ದೇವಸ್ಥಾನಗಳಲ್ಲಿಯೂ ಸ್ವಚ್ಛತೆಯನ್ನು ಕಾಪಾಡಬೇಕು ಎಂದರು.</p>



<p><strong>ಪ್ರತಿ ವರ್ಷ ದೇವಾಲಯಯದ ಆದಾಯ ಹೆಚ್ಚಳ</strong></p>



<p>ಪ್ರಾಧಿಕಾರದಲ್ಲಿ ಒಟ್ಟು 169.22 ಕೋಟಿ ¯ಭ್ಯವಿದ್ದು, ದೇವಾಲಯದ ಉಳಿತಾಯ ಖಾತೆಯಲ್ಲಿ 20.24 ಕೋಟಿ ರೂ.ಗಳು ಲಭ್ಯವಿದೆ. 2023-24 ರಲ್ಲಿ 49.64 ಕೋಟಿ ರೂ.ಗಳ ಆದಾಯ 28.18 ಕೋಟಿ ನಿವ್ವಳ ಆದಾಯ ಬಂದಿದೆ. ಜುಲೈ ಕೊನೆಯವರೆಗೆ 17.4 ಕೋಟಿ ಆದಾಯ ಬಂದಿದ್ದು, 6.97 ಕೋಟಿ ವೆಚ್ಚವಾಗಿದೆ. ಪ್ರತಿ ವರ್ಷ ಆದಾಯ ಹೆಚ್ಚಾಗುತ್ತಿದೆ. ಅಂದರೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿರುವ ದೇವಿಕೆರೆ, ನಂದಿ ಪ್ರತಿಮೆ ಅಭಿವೃದ್ಧಿಗೆ ತೀರ್ಮಾನ ಮಾಡಲಾಗಿದೆ. ಶಾಸಕರು ಹಾಗೂ ಸಚಿವರು ವ್ಯಕ್ತ ಮಾಡಿರುವ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು ಪ್ರಾಧಿಕಾರ ಕೆಲಸ ಮಾಡುತ್ತದೆ ಎಂದು ತಿಳಿಸಿದರು.</p>



<p>ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ರೋಪ್ ವೇ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆಯಾಗಿಲ್ಲ. ಪರಿಸರವಾದಿಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಅದನ್ನು ಹಿಂದೆಯೇ ಸ್ಥಗಿತಗೊಳಿಸಲಾಗಿದೆ ಎಂದರು.</p>



<p><strong>ವಸ್ತ್ರ ಸಂಹಿತೆ ಇಲ್ಲ</strong></p>



<p>ಬೆಟ್ಟಕ್ಕೆ ಬರುವ ಮೆಟ್ಟಿಲುಗಳನ್ನು ಅಭಿವೃದ್ಧಿಪಡಿಲಾಗುವುದು ಎಂದ ಮುಖ್ಯಮಂತ್ರಿಗಳು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವವರಿಗೆ ಯಾವುದೇ ವಸ್ತ್ರ ಸಂಹಿತೆಯನ್ನು ಜಾರಿ ಮಾಡಿಲ್ಲ. ಎಲ್ಲಾ ಜಾತಿ , ಧರ್ಮದವರು ದೇವಸ್ಥಾನಕ್ಕೆ ಬರಬಹುದು ಎಂದರು.</p>



<p><strong>ಚಾಮುಂಡಿಬೆಟ್ಟ ಪ್ರದೇಶದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆ</strong></p>



<p>ದೇವಾಲಯಗಳಲ್ಲಿ ಅಗತ್ಯವಿರುವೆಡೆ ಸಿಸಿಟಿವಿ ಅಳವಡಿಸಬೇಕೆಂದು ತೀರ್ಮಾನಿಸಿ, ಯೂನಿಯನ್ ಬ್ಯಾಂಕ್ ನವರು ಸಿಎಸ್ ಆರ್ ನಿಧಿಯಿಂದ ಸಿಸಿಟಿವಿಗಳನ್ನು ಅಳವಡಿಕೆಗೆ ಸಹಕಾರ ನೀಡಲಿದ್ದಾರೆ. ದೇವಸ್ಥಾನದ ಸುತ್ತಮುತ್ತಲಿನ ದೀಪದ ವ್ಯವಸ್ಥೆಗೊಳಿಸುವ ಜೊತೆಗೆ ಈ ಪ್ರದೇಶದಲ್ಲಿ ಅಪರಾಧಗಳನ್ನು ನಿಗ್ರಹಿಸಲು ಒಂದು ಟಾಸ್ಕ್ ಫೋರ್ಸ್ ನ್ನು ರಚನೆ ಮಾಡಲಾಗುವುದು ಎಂದರು.</p>



<p><strong>ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಕ್ರಮ</strong></p>



<p>ಚಾಮುಂಡಿ ಬೆಟ್ಟದ ಮೇಲೆ ಧೂಮಪಾನ, ಮದ್ಯಪಾನ, ಗುಟ್ಕಾ ಪಾನ್ ಗಳನ್ನು ಸಂಪೂರ್ಣ ನಿಷೇದಿಸಲಾಗಿದೆ. ಬೆಟ್ಟದ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ತೀರ್ಮಾನಿಸಲಾಗಿದೆ. ಪ್ರಸಾದ ಯೋಜನೆಯನ್ನು ಕೇಂದ್ರ ಸರ್ಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದ್ದು, ಈ ಯೋಜನೆಗೆ ಹೆಚ್ಚುವರಿಯಾಗಿ ಬೇಕಾಗುವ 11 ಕೋಟಿ ರೂ.ಗಳನ್ನು ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದಿಂದ ಭರಿಸಲಾಗುವುದು. ದೇವಾಲಯದ ಒಳಗೆ ಛಾಯಾಗ್ರಹಣವನ್ನು ನಿಷೇದಿಸಲಾಗಿದ್ದು, ಮೊಬೈಲ್ ಗಳನ್ನು ಬಂದ್ ಮಾಡಿಕೊಳ್ಳುವ ಆದೇಶ ನೀಡಲಾಗುವುದು ಎಂದರು.</p>



<p><strong>ಐದು ದೇವಾಲಯ ಸಮೂಹದ ಜೀರ್ಣೋದ್ಧಾರ</strong></p>



<p>ಪ್ರಸನ್ನ ಕೃಷ್ಣ ಸ್ವಾಮಿ ದೇವಾಲಯ,ಗಾಯತ್ರಿಯಮ್ಮನವರ ದೇವಾಲಯ,ಭುವನೇಶ್ವರಿ ಅಮ್ಮನವರ ದೇವಾಲಯ , ಕೋಟೆ ಆಂಜನೀಯದೇವಾಲಯ, ವರಾಹ ಸ್ವಾಮಿ ದೇವಾಲಯಗಳ ಐದು ದೇವಾಲಯಗಳ ಸಮೂಹವನ್ನು ಜೀರ್ಣೋದ್ಧಾರ ಕಾರ್ಯವನ್ನು ಕೈಗೊಳ್ಳಲಾಗುವುದು. ಇಲ್ಲಿ ಕರ್ತವ್ಯನಿರ್ವಹಿಸುವ ಖಾಯಂ ಸಿಬ್ಬಂದಿಗಳಿಗೆ ವೈದ್ಯಕೀಯ ಸೌಲಭ್ಯ ಹಾಗೂಅವರ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದರು.</p>



<p><strong>ಚಾಮುಂಡೇಶ್ವರಿ ಕ್ಷೇತ್ರವನ್ನು ಆಕರ್ಷಕವಾಗಿಸಿ ಹೆಚ್ಚು ಸವಲತ್ತು ನೀಡಲು ತೀರ್ಮಾನ</strong></p>



<p>ಚಾಮುಂಡಿಬೆಟ್ಟ ಕ್ಷೇತ್ರವನ್ನು ಹೆಚ್ಚು ಆಕರ್ಷಣೀಯವಾಗಿ ಮಾಡುವ ಜೊತೆಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಇಲ್ಲಿನ ದಾಸೋಹ ಭವನದ ವ್ಯವಸ್ಥೆಗಳನ್ನು ಸುಧಾರಿಸಿ, ಭಕ್ತಾದಿಗಳಿಗೆ ಶುಚಿ ರುಚಿಯಿರುವಂತಹ ಊಟವ್ಯವಸ್ಥೆಗಳನ್ನು ಮಾಡಲು ವ್ಯವಸ್ಥೆಗೊಳಿಸಲು ತೀರ್ಮಾನಿಸಲಾಗಿದೆ. ಚಾಮುಂಡಿಕ್ಷೇತ್ರದ ಪ್ರಾದಿಕಾರದಲ್ಲಿ 169 ಕೋಟಿ ಖಾಯಂ ಠೇವಣಿ ಇದ್ದು, ಇದರ ಆದಾಯದಲ್ಲಿ ಈ ಎಲ್ಲ ವೆಚ್ಚಗಳನ್ನು ಭರಿಸಬಹುದಾಗಿದೆ ಎಂದರು.</p>



<p><strong>ದೇವಸ್ಥಾನದ ಆಸ್ತಿಗಳ ಸರ್ವೆ</strong></p>



<p>ದೇವಸ್ಥಾನದ ಆಸ್ತಿಯಾಗಿರುವ ಭೂಮಿ ಒತ್ತುವರಿ ಆಗಿರುವ ಸಾಧ್ಯತೆಯಿರುವುದರಿಂದ, ಅವುಗಳ ಸರ್ವೇ ಮಾಡಲು ತಿಳಿಸಲಾಗಿದ್ದು, ಸರ್ವೆ ನಡೆಸಿದ ವರದಿಯನ್ನು ಪ್ರಾಧಿಕಾರದ ಮುಂದಿನ ಸಭೆಯಲ್ಲಿ ಮಂಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಆರ್ ಎಸ್ ಎಸ್ ನವರು ಜಾತಿ ಜನಗಣತಿ ವರದಿ ದುರ್ಬಳಕೆಯಾಗಬಾರದು ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಜನಗಣತಿ ವರದಿಯನ್ನು ಆರ್ಥಿಕ ಹಾಗೂ ಸಾಮಾಜಿಕ ಕಾರ್ಯಗಳಿಗಾಗಿ ಮಾತ್ರ ಬಳಕೆಯಾಗಬೇಕೆಂಬ ಷರತ್ತಿದೆ ಎಂದರು.</p>



<p></p>
]]></content:encoded>
					
		
		
			</item>
		<item>
		<title>ಗುತ್ತಿಗೆ ನೇಮಕಾತಿ ವ್ಯವಸ್ಥೆಯನ್ನು ರದ್ದುಗೊಳಿಸಿದ ಒಡಿಶಾ ಸರ್ಕಾರ : ಸಾವಿರಾರು ಗುತ್ತಿಗೆ ನೌಕರರು ಖಾಯಂ</title>
		<link>https://peepalmedia.com/end-of-contract-employment-in-odisha/</link>
		
		<dc:creator><![CDATA[Peepal Media]]></dc:creator>
		<pubDate>Sun, 16 Oct 2022 17:49:56 +0000</pubDate>
				<category><![CDATA[ದೇಶ]]></category>
		<category><![CDATA[Chief Minister]]></category>
		<category><![CDATA[contract employment]]></category>
		<category><![CDATA[contract workers]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Naveen Patnaik]]></category>
		<category><![CDATA[news]]></category>
		<category><![CDATA[Odisha]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=11325</guid>

					<description><![CDATA[ಗುತ್ತಿಗೆ ನೌಕರಿ ಎಂದರೆ ತಂತಿ ಮೇಲಿನ ನಡಿಗೆಯಾಗೆ ಯಾವಾಗ ಬೇಕಾದರೂ ಈ ಹುದ್ದೆಯಿಂದ ನೌಕರರನ್ನು ಕಿತ್ತೊಗೆಯಬಹುದು. ಇಂತಹ ಒಂದು ಕೆಟ್ಟ ವ್ಯವಸ್ಥೆಗೆ ನಿನ್ನೆ ಒಡಿಶಾ ಸರ್ಕಾರ ಕೊನೆ ಮೊಳೆ ಹೊಡೆದಿದೆ. ಹೌದು, ಒಡಿಶಾ ಸರ್ಕಾರ ಗುತ್ತಿಗೆ ನೇಮಕಾತಿ ವ್ಯವಸ್ಥೆಯನ್ನು ರದ್ದುಪಡಿಸಿದೆ. ಇದಲ್ಲದೇ, ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಾಹಿಸುತ್ತಿದ್ದ 57 ಸಾವಿರ ನೌಕರರನ್ನು ಕಾಯಂಗೊಳಿಸಿ ಭಾನುವಾರ ಅಧಿಸೂಚನೆ ಹೊರಡಿಸಿದೆ. ಒಡಿಶಾ ಕ್ಯಾಬಿನೆಟ್ ಸಭೆಯಲ್ಲಿ ಗುತ್ತಿಗೆ ನೇಮಕಾತಿಗಳನ್ನು ರದ್ದುಪಡಿಸುವ ನಿರ್ಧಾರ ಕೈಗೊಂಡು ಮಾತನಾಡಿದ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಗುತ್ತಿಗೆ ನೇಮಕಾತಿಗಳನ್ನು [&#8230;]]]></description>
										<content:encoded><![CDATA[
<p></p>



<p>ಗುತ್ತಿಗೆ ನೌಕರಿ ಎಂದರೆ ತಂತಿ ಮೇಲಿನ ನಡಿಗೆಯಾಗೆ ಯಾವಾಗ ಬೇಕಾದರೂ ಈ ಹುದ್ದೆಯಿಂದ ನೌಕರರನ್ನು ಕಿತ್ತೊಗೆಯಬಹುದು. ಇಂತಹ ಒಂದು ಕೆಟ್ಟ ವ್ಯವಸ್ಥೆಗೆ ನಿನ್ನೆ ಒಡಿಶಾ ಸರ್ಕಾರ ಕೊನೆ ಮೊಳೆ ಹೊಡೆದಿದೆ.</p>



<p>ಹೌದು, ಒಡಿಶಾ ಸರ್ಕಾರ ಗುತ್ತಿಗೆ ನೇಮಕಾತಿ ವ್ಯವಸ್ಥೆಯನ್ನು ರದ್ದುಪಡಿಸಿದೆ. ಇದಲ್ಲದೇ, ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಾಹಿಸುತ್ತಿದ್ದ 57 ಸಾವಿರ ನೌಕರರನ್ನು ಕಾಯಂಗೊಳಿಸಿ ಭಾನುವಾರ ಅಧಿಸೂಚನೆ ಹೊರಡಿಸಿದೆ.</p>



<p>ಒಡಿಶಾ ಕ್ಯಾಬಿನೆಟ್ ಸಭೆಯಲ್ಲಿ ಗುತ್ತಿಗೆ ನೇಮಕಾತಿಗಳನ್ನು ರದ್ದುಪಡಿಸುವ ನಿರ್ಧಾರ ಕೈಗೊಂಡು ಮಾತನಾಡಿದ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಗುತ್ತಿಗೆ ನೇಮಕಾತಿಗಳನ್ನು ರದ್ದುಪಡಿಸಿ, 57,000 ಗುತ್ತಿಗೆ ನೌಕರರನ್ನು ಕಾಯಂಗೊಳಿಸಲಾಗುವುದು. ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ 1300 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಹೇಳಿದ್ದಾರೆ.</p>



<p>ಮುಂದುವರೆದು, 2013 ರಲ್ಲಿ ಗುತ್ತಿಗೆ ನೇಮಕಾತಿ ವ್ಯವಸ್ಥೆಯು ಪ್ರಾರಂಭವಾಯಿತು. ಇದು ನನಗೆ ಕಠಿಣ ನಿರ್ಧಾರವಾಗಿತ್ತು. ಈಗ ನಮ್ಮ ಆರ್ಥಿಕತೆ ಗಮನಾರ್ಹವಾಗಿ ಸುಧಾರಿಸಿದೆ. ಒಡಿಶಾ ದೇಶದ ಅಭಿವೃದ್ಧಿ ಕ್ಷೇತ್ರದಲ್ಲಿ ಹೊಸ ಗುರುತನ್ನು ಸೃಷ್ಟಿಸಿಕೊಂಡಿದೆ. ಕಳೆದ ವರ್ಷ, ನಾವು ಆರಂಭಿಕ ನೇಮಕಾತಿಗಳೊಂದಿಗೆ ಗುತ್ತಿಗೆ ನೇಮಕಾತಿ ಪೋಸ್ಟ್‌ಗಳನ್ನು ಬದಲಿಸಿದ್ದೇವೆ ಎಂದು ಅವರು ಹೇಳಿದರು.</p>



<p>ಒಡಿಶಾ ಸರ್ಕಾರ, ಗ್ರೂಪ್ ಬಿ ಹುದ್ದೆಗಳು(ಒಪ್ಪಂದದ ನೇಮಕಾತಿಗಳು), ನಿಯಮಗಳು, 2013 ಮತ್ತು ಒಡಿಶಾ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳ(ಒಪ್ಪಂದದ ನೇಮಕಾತಿ) ನಿಯಮಗಳು 2013 ಅನ್ನು ಈ ಮೂಲಕ ರದ್ದುಗೊಳಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.</p>



<p>ಆಯಾ ಒಪ್ಪಂದದ ನಿಯಮಗಳ ಅಡಿಯಲ್ಲಿ ವೇತನವನ್ನು ನಿಗದಿಪಡಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p>



<p><strong>ಕರ್ನಾಟಕದಲ್ಲೂ ಗುತ್ತಿಗೆ ನೇಮಕಾತಿ ಪದ್ದತಿ</strong>:</p>



<p>ರಾಜ್ಯದಲ್ಲಿ ಸರಕಾರಿ ಗುತ್ತಿಗೆ ನೌಕರರ ಸೇವೆಯನ್ನು ಖಾಯಂ ಗೊಳಿಸಬೇಕು ಮತ್ತು ನ್ಯೂ ಪೆನ್ಸನ್ ಸ್ಟೀಮ್ ಮಂಜೂರ ಮಾಡುವಂತೆ ಅನೇಕ ವರ್ಷಗಳಿಂದ ಪ್ರತಿಭಟನೆಗಳು ನಡೆಯುತ್ತಲೇ ಇದೆ‌. ಆದರೆ ಕರ್ನಾಟಕ ಸರ್ಕಾರ ತನ್ನ ನಿಲುವನ್ನು ಬದಲಿಸದೇ ನೌಕರರ ಸಮಸ್ಯೆಗಳನ್ನು ಆಲಿಸದೆ ಗುತ್ತಿಗೆ ನೇಮಕಾತಿ ಮತ್ತು ನೌಕರಿಯನ್ನು ಮುಂದುವರೆಸುತ್ತಿದೆ.</p>
]]></content:encoded>
					
		
		
			</item>
	</channel>
</rss>
