<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>CM &#8211; Peepal Media</title>
	<atom:link href="https://peepalmedia.com/tag/cm/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 25 Mar 2025 10:35:27 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>CM &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಸಿಎಂ-ಶಾಶಕರ ವೇತನ 100% ಹೆಚ್ಚಳ: ಐದನೇ ಸ್ಥಾನದಲ್ಲಿ ಕರ್ನಾಟಕ</title>
		<link>https://peepalmedia.com/100-increase-in-salaries-of-cms-and-governors-karnataka-in-fifth-place/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 25 Mar 2025 10:35:26 +0000</pubDate>
				<category><![CDATA[ರಾಜ್ಯ]]></category>
		<category><![CDATA[Chief Minister]]></category>
		<category><![CDATA[CM]]></category>
		<category><![CDATA[Delhi]]></category>
		<category><![CDATA[karnataka]]></category>
		<category><![CDATA[maharashtra]]></category>
		<category><![CDATA[MLA]]></category>
		<category><![CDATA[salary hike]]></category>
		<category><![CDATA[Siddaramaiah]]></category>
		<category><![CDATA[telangana]]></category>
		<category><![CDATA[uttara pradesh]]></category>
		<guid isPermaLink="false">https://peepalmedia.com/?p=55740</guid>

					<description><![CDATA[ಶುಕ್ರವಾರ ಕರ್ನಾಟಕ ವಿಧಾನಸಭೆಯು ಮುಖ್ಯಮಂತ್ರಿ ಮತ್ತು ಎಲ್ಲಾ ಶಾಸಕರಿಗೆ ಶೇ. 100 ರಷ್ಟು ವೇತನ ಹೆಚ್ಚಳವನ್ನು ಮಾಡುವ ಮಸೂದೆಗಳನ್ನು ಅಂಗೀಕರಿಸಿತು. ಇಷ್ಟಾಗಿಯೂ ಇವರು ಇತರ ನಾಲ್ಕು ರಾಜ್ಯಗಳ ಶಾಸಕರಿಗಿಂತ ಕಡಿಮೆ ಸಂಬಳ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಶಾಸಕರಿಗೆ ಅತಿ ಹೆಚ್ಚು ಸಂಬಳ ನೀಡುವ ಐದು ರಾಜ್ಯಗಳು: ತೆಲಂಗಾಣ ಮುಖ್ಯಮಂತ್ರಿಗಳ ವೇತನ &#8211; ವಸತಿ, ಪ್ರಯಾಣ ಮತ್ತು ಭದ್ರತೆಗೆ ಸಂಬಂಧಿಸಿದ ಭತ್ಯೆಗಳು ಸೇರಿದಂತೆ ತಿಂಗಳಿಗೆ &#8211; 4.10 ಲಕ್ಷ ರೂ. ಸಚಿವರ ವೇತನ &#8211; 3-3.5 ಲಕ್ಷ ರೂ. [&#8230;]]]></description>
										<content:encoded><![CDATA[
<p>ಶುಕ್ರವಾರ ಕರ್ನಾಟಕ ವಿಧಾನಸಭೆಯು ಮುಖ್ಯಮಂತ್ರಿ ಮತ್ತು ಎಲ್ಲಾ ಶಾಸಕರಿಗೆ ಶೇ. 100 ರಷ್ಟು ವೇತನ ಹೆಚ್ಚಳವನ್ನು ಮಾಡುವ ಮಸೂದೆಗಳನ್ನು ಅಂಗೀಕರಿಸಿತು. ಇಷ್ಟಾಗಿಯೂ ಇವರು ಇತರ ನಾಲ್ಕು ರಾಜ್ಯಗಳ ಶಾಸಕರಿಗಿಂತ ಕಡಿಮೆ ಸಂಬಳ ಪಡೆಯುತ್ತಿದ್ದಾರೆ.</p>



<p>ಮುಖ್ಯಮಂತ್ರಿಗಳು ಮತ್ತು ಶಾಸಕರಿಗೆ ಅತಿ ಹೆಚ್ಚು ಸಂಬಳ ನೀಡುವ ಐದು ರಾಜ್ಯಗಳು:</p>



<p><strong>ತೆಲಂಗಾಣ</strong></p>



<ol class="wp-block-list"></ol>



<p>ಮುಖ್ಯಮಂತ್ರಿಗಳ ವೇತನ &#8211; ವಸತಿ, ಪ್ರಯಾಣ ಮತ್ತು ಭದ್ರತೆಗೆ ಸಂಬಂಧಿಸಿದ ಭತ್ಯೆಗಳು ಸೇರಿದಂತೆ ತಿಂಗಳಿಗೆ &#8211; 4.10 ಲಕ್ಷ ರೂ.</p>



<p>ಸಚಿವರ ವೇತನ &#8211; 3-3.5 ಲಕ್ಷ ರೂ.</p>



<p>ಶಾಸಕರ ವೇತನ &#8211; 2.5 ಲಕ್ಷ ರೂ.</p>



<p><strong>ದೆಹಲಿ</strong></p>



<p>ಮುಖ್ಯಮಂತ್ರಿಗಳ ವೇತನ &#8211; 3.90 ಲಕ್ಷ ರೂ.</p>



<p>ಸಚಿವರ ಸಂಬಳ &#8211; 3 ಲಕ್ಷ ರೂ.</p>



<p>ಶಾಸಕರ ವೇತನ &#8211; 90,000 ರೂ.</p>



<p><strong>ಉತ್ತರ ಪ್ರದೇಶ</strong></p>



<ol start="3" class="wp-block-list"></ol>



<p>ಮುಖ್ಯಮಂತ್ರಿಗಳ ವೇತನ &#8211; 3.65 ಲಕ್ಷ ರೂ.</p>



<p>ಸಚಿವರ ವೇತನ &#8211; 2-2.5 ಲಕ್ಷ ರೂ.</p>



<p>ಶಾಸಕರ ವೇತನ &#8211; 1.87 ಲಕ್ಷ ರೂ.</p>



<p><strong>ಮಹಾರಾಷ್ಟ್ರ</strong></p>



<ol start="4" class="wp-block-list"></ol>



<p>ಮುಖ್ಯಮಂತ್ರಿಗಳ ವೇತನ &#8211; 3.40 ಲಕ್ಷ ರೂ.</p>



<p>ಸಚಿವರ ವೇತನ &#8211; 2.5-3 ಲಕ್ಷ ರೂ.</p>



<p>ಶಾಸಕರ ವೇತನ &#8211; 1.60 ಲಕ್ಷ ರೂ.</p>



<p><strong>ಕರ್ನಾಟಕ (ಮಾರ್ಚ್ ನಂತರ)</strong></p>



<ol start="5" class="wp-block-list"></ol>



<p>ಮುಖ್ಯಮಂತ್ರಿಗಳ ಸಂಬಳ &#8211; 3 ಲಕ್ಷ ರೂ.</p>



<p>ಸಚಿವರ ವೇತನ &#8211; 2-2.5 ಲಕ್ಷ ರೂ.</p>



<p>ಶಾಸಕರ ವೇತನ &#8211; 1.60 ಲಕ್ಷ ರೂ.<br><br>ಈ‌ ಪಟ್ಟಿಯನ್ನು <a href="https://www.deccanherald.com/india/karnataka/salary-hike-takes-karnataka-cm-mlas-incomes-to-5th-rank-which-states-pay-higher-3457949#5">ಡೆಕ್ಕನ್‌ ಹೆರಾಲ್ಡ್‌</a> ಪ್ರಕಟಿಸಿದೆ. ಸಂಬಳವು ವಸತಿ, ಪ್ರಯಾಣ ಭತ್ಯೆಗಳು, ಭದ್ರತಾ ಪ್ರದೇಶ ಭತ್ಯೆಗಳು ಮತ್ತು ವೈದ್ಯಕೀಯ ಸೌಲಭ್ಯಗಳ ಜೊತೆಗೆ ವಿಧಾನಸಭಾ ಅಧಿವೇಶನಗಳಿಗೆ ಹಾಜರಾಗಲು ಒಂದು ದಿನದ ವೇತನವನ್ನು ಒಳಗೊಂಡಿದೆ. ಭತ್ಯೆಗಳ ಸಂಖ್ಯೆ ಮತ್ತು ಪ್ರಕಾರವು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ.</p>



<p>ಭತ್ಯೆಗಳನ್ನು ಹೊರತುಪಡಿಸಿ ಸಿದ್ದರಾಮಯ್ಯ ಅವರ ಸಂಬಳ 1.5 ಲಕ್ಷ ರೂ. (ಹೆಚ್ಚಳದ ನಂತರ). ವಿವಿಧ ಭತ್ಯೆಗಳನ್ನು ಸೇರಿಸಿದರೆ ತಿಂಗಳಿಗೆ ಒಟ್ಟು 3 ಲಕ್ಷ ರೂ.</p>



<p>ಅದೇ ರೀತಿ, ಶಾಸಕರು ತಿಂಗಳಿಗೆ 1.25 ಲಕ್ಷ ರೂ. ಗಳಿಸುತ್ತಾರೆ ಮತ್ತು 25,000 ರೂ. ಪ್ರದೇಶ ಭತ್ಯೆ, ಪ್ರತಿ ಕಿ.ಮೀ.ಗೆ 35 ರೂ. ಪ್ರಯಾಣ ಭತ್ಯೆ ಮತ್ತು ವಿಧಾನಸಭಾ ಅಧಿವೇಶನಗಳ ಸಮಯದಲ್ಲಿ ದಿನಕ್ಕೆ 2,500 ರೂ. ಪಡೆಯುತ್ತಾರೆ.</p>



<p>ಹೆಚ್ಚುವರಿಯಾಗಿ, ಅವರಿಗೆ ಕ್ಷೇತ್ರ ಅಭಿವೃದ್ಧಿಗಾಗಿ ವಾರ್ಷಿಕವಾಗಿ 2 ಕೋಟಿ ರೂ.ಗಳನ್ನು ನಿಗದಿಪಡಿಸಲಾಗುತ್ತದೆ.</p>



<p>ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ ಮತ್ತು ಕರ್ನಾಟಕ ಶಾಸಕಾಂಗ ವೇತನ, ಪಿಂಚಣಿ ಮತ್ತು ಭತ್ಯೆ (ತಿದ್ದುಪಡಿ) ಮಸೂದೆಯನ್ನು ಯಾವುದೇ ಚರ್ಚೆಯಿಲ್ಲದೆ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು, ವಿರೋಧ ಪಕ್ಷ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.</p>



<p>&#8220;ಜೀವನ ವೆಚ್ಚದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಮುಖ್ಯಮಂತ್ರಿ ಸಚಿವರು, ರಾಜ್ಯ ಸಚಿವರು ಮತ್ತು ಉಪ ಮಂತ್ರಿಗಳ ವೇತನ ಮತ್ತು ಭತ್ಯೆಗಳನ್ನು ಬಹಳ ಸಮಯದಿಂದ ಪರಿಷ್ಕರಿಸಲಾಗಿಲ್ಲ,&#8221; ಎಂದು ಮಸೂದೆಯಲ್ಲಿ ಹೇಳಲಾಗಿದೆ.</p>
]]></content:encoded>
					
		
		
			</item>
		<item>
		<title>ಯಾದಗಿರಿ ಅತ್ಯಾಚಾರ ಪ್ರಕರಣ&#124; ಅತ್ಯಾಚಾರ ವಿಚಾರದಲ್ಲೂ ಬಡವರಿಗೆ ಒಂದು ನ್ಯಾಯ, ಉಳ್ಳವರಿಗೆ ಮತ್ತೊಂದು ನ್ಯಾಯ: ಜಿ. ರಾಮಕೃಷ್ಣ</title>
		<link>https://peepalmedia.com/one-justice-for-the-poor-another-for-the-rich-in-rape-cases-gramakrishna/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 26 Feb 2025 05:34:58 +0000</pubDate>
				<category><![CDATA[ಯಾದಗಿರಿ]]></category>
		<category><![CDATA[ರಾಜ್ಯ]]></category>
		<category><![CDATA[CM]]></category>
		<category><![CDATA[news]]></category>
		<category><![CDATA[peepalmedia]]></category>
		<category><![CDATA[protest]]></category>
		<category><![CDATA[rape case]]></category>
		<category><![CDATA[Siddaramaiah]]></category>
		<category><![CDATA[yadagiri]]></category>
		<guid isPermaLink="false">https://peepalmedia.com/?p=54483</guid>

					<description><![CDATA[ಯಾದಗಿರಿ ಜಿಲ್ಲೆಯಲ್ಲಿ ಚಿಂದಿ ಆಯಲು ತೆರಳಿದ್ದ ಬುಡ್ಗ ಜಂಗಮ ಅಲೆಮಾರಿ ಸಮುದಾಯದ ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಫೆಬ್ರವರಿ 25, ಮಂಗಳವಾರ ಸಂಜೆ 5ಗಂಟೆಗೆ ವಿವಿಧ ಜನಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.&#160; ಹಿರಿಯ ಚಿಂತಕ ಜಿ ರಾಮಕೃಷ್ಣ ಅವರು ಮಾತನಾಡಿ, “ಈ ದೇಶದಲ್ಲಿ ನಡೆಯುತ್ತಿರುವ ಅನಾಚಾರ, ಅತ್ಯಾಚಾರ ಗಮನಿಸಿದರೆ ನಾವು ಮನುಷ್ಯರಾಗಿ ಬದುಕುತ್ತಿದ್ದೇವಾ ಎಂಬ ಅನುಮಾನ ಮೂಡುತ್ತಿದೆ. ಉತ್ತರ ಪ್ರದೇಶದಲ್ಲಿ ದಲಿತ ಹೆಣ್ಣು ಮಗಳು [&#8230;]]]></description>
										<content:encoded><![CDATA[
<p>ಯಾದಗಿರಿ ಜಿಲ್ಲೆಯಲ್ಲಿ ಚಿಂದಿ ಆಯಲು ತೆರಳಿದ್ದ ಬುಡ್ಗ ಜಂಗಮ ಅಲೆಮಾರಿ ಸಮುದಾಯದ ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಫೆಬ್ರವರಿ 25, ಮಂಗಳವಾರ ಸಂಜೆ 5ಗಂಟೆಗೆ ವಿವಿಧ ಜನಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.&nbsp;</p>



<p>ಹಿರಿಯ ಚಿಂತಕ ಜಿ ರಾಮಕೃಷ್ಣ ಅವರು ಮಾತನಾಡಿ, “ಈ ದೇಶದಲ್ಲಿ ನಡೆಯುತ್ತಿರುವ ಅನಾಚಾರ, ಅತ್ಯಾಚಾರ ಗಮನಿಸಿದರೆ ನಾವು ಮನುಷ್ಯರಾಗಿ ಬದುಕುತ್ತಿದ್ದೇವಾ ಎಂಬ ಅನುಮಾನ ಮೂಡುತ್ತಿದೆ. </p>



<p>ಉತ್ತರ ಪ್ರದೇಶದಲ್ಲಿ ದಲಿತ ಹೆಣ್ಣು ಮಗಳು ನದಿಯಲ್ಲಿ ಸ್ನಾನ ಮಾಡಲು ಇಳಿದಳೆಂದು ಕ್ರೂರಿಗಳು ಆಕೆಯನ್ನು ಬಡಿಗೆಗಳಿಂದ ಹೊಡೆದು ಸಾಯಿಸಿದ್ದರು. ಇಂಥವರಿಗೆ ರಕ್ಷಣೆ ಕೊಡುವ ಸಂಸ್ಕೃತಿ ನಮ್ಮ ದೇಶದಲ್ಲಿ ಇದೆ. ಇಂತಹ ಸಮಾಜದಲ್ಲಿ ನಾವಿನ್ನೂ ಫ್ಯಾಸಿಸ್ಟ್‌ ಆಗಿದ್ದೀವಾ, ಅರೆ ಫ್ಯಾಸಿಸ್ಟ್ ಆಗಿದ್ದೀವಾ, ಸೆಮಿ ಫ್ಯಾಸಿಸ್ಟ್ ಆಗಿದ್ದೀವಾ ಎಂದು ಚರ್ಚೆ ಮಾಡುತ್ತಿದ್ದೇವೆ. </p>



<p>ದೇಶದೆಲ್ಲೆಡೆ ಈಗ ಪುನೀತರಾದ ಜನರೇ ಇರುವುದು. ಗಂಗೆಯಲ್ಲಿ ಸ್ನಾನ ಮಾಡಿ ಬಂದಿದ್ದಾರೆ. ಐವತ್ತು ಕೋಟಿ ಜನರಲ್ಲಿ ನಲುವತ್ತು ಕೋಟಿ ಜನರಿಗೆ ಒಂದು ತರಹದ ನೀರು, ಇನ್ನು ಹತ್ತು ಕೋಟಿ ಜನರಿಗೆ ಒಂದು ತರಹದ ನೀರು. ನಾರಾಯಣ ಮೂರ್ತಿ, ಸುಧಾಮೂರ್ತಿ ತರದವರಿಗೆ ಬೇಲಿ ಕಟ್ಟಿ ಚೆನ್ನಾಗಿ ನೀರು ಹರಿಯುವ ಜಾಗ, ಸಾಮಾನ್ಯ ಜನರಿಗೆ ಚರಂಡಿ ನೀರು ಸೇರುವ ಜಾಗ.                                                  </p>



<p>ಇದೇ ರೀತಿ ಈ ಅತ್ಯಾಚಾರ ವಿಚಾರದಲ್ಲೂ ಬಡವರಿಗೆ ಒಂದು ನ್ಯಾಯ, ಉಳ್ಳವರಿಗೆ ಮತ್ತೊಂದು ನ್ಯಾಯ ಎಂಬಂತಾಗಿದೆ. ಯಾದಗಿರಿಯೇನು ಬೆಂಗಳೂರಲ್ಲ, ಪುಟ್ಟ ಹಳ್ಳಿ. ಆರೋಪಿಗಳನ್ನು ಪತ್ತೆ ಹಚ್ಚುವುದು ಅಷ್ಟೇವೇನು ಕಷ್ಟ ಅಲ್ಲ. ಆದರೆ, ಇದು ಅಧಿಕಾರಿಗಳಿಗೆ ಬಡವರ ಮೇಲೆ ಇರುವ ಅಸಡ್ಡೆ ತೋರಿಸುತ್ತದೆ” ಎಂದು ಹೇಳಿದರು.&nbsp;</p>



<figure class="wp-block-image size-large"><img fetchpriority="high" decoding="async" width="1024" height="460" src="https://peepalmedia.com/wp-content/uploads/2025/02/alemarisamudaya-1024x460.jpeg" alt="" class="wp-image-54488" srcset="https://peepalmedia.com/wp-content/uploads/2025/02/alemarisamudaya-1024x460.jpeg 1024w, https://peepalmedia.com/wp-content/uploads/2025/02/alemarisamudaya-300x135.jpeg 300w, https://peepalmedia.com/wp-content/uploads/2025/02/alemarisamudaya-768x345.jpeg 768w, https://peepalmedia.com/wp-content/uploads/2025/02/alemarisamudaya-1536x689.jpeg 1536w, https://peepalmedia.com/wp-content/uploads/2025/02/alemarisamudaya-150x67.jpeg 150w, https://peepalmedia.com/wp-content/uploads/2025/02/alemarisamudaya-696x312.jpeg 696w, https://peepalmedia.com/wp-content/uploads/2025/02/alemarisamudaya-1068x479.jpeg 1068w, https://peepalmedia.com/wp-content/uploads/2025/02/alemarisamudaya.jpeg 1600w" sizes="(max-width: 1024px) 100vw, 1024px" /></figure>



<p>ಇದೇ ವೇಳೆ ಮಾತನಾಡಿದ ದಲಿತ ಮುಖಂಡ ವಡ್ಡಗೆರೆ ನಾಗರಾಜಯ್ಯ, “ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ ಕೊಲೆ ನಡೆದು ಹತ್ತು ದಿನಗಳಾಗಿವೆ. ಆದರೆ, ಈವರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ, ಇದು ಹಲವು ಅನುಮಾನಗಳಿವೆ ಎಡೆ ಮಾಡಿಕೊಟ್ಟಿದೆ. </p>



<p>ಕರ್ನಾಟಕ ಎಂದಲ್ಲ, ಇಡೀ ದೇಶದಲ್ಲಿ ಪ್ರಸ್ತುತ ದಲಿತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ನಡೆಯುತ್ತಿದೆ. ಆದರೆ, ಸರ್ಕಾರಗಳು, ಪೊಲೀಸರು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಗಳ ಪರ ನಿಲ್ಲಬೇಕು. ಅತ್ಯಾಚಾರವೆಸಗಿ, ಕೊಲೆಗೈದವರನ್ನು ತಕ್ಷಣ ಬಂಧಿಸಬೇಕು” ಎಂದು ಒತ್ತಾಯಿಸಿದರು.</p>



<p>ಬರಹಗಾರ, ದಲಿತ ಮುಖಂಡ ಹುಲಿಕುಂಟೆ ಮೂರ್ತಿ ಮಾತನಾಡಿ, “ಆರೋಪಿಗಳು ಸಂತ್ರಸ್ತರ ಮನೆಗಳ ಬಳಿ ಹೋಗಿ ಧಮ್ಕಿ ಹಾಕಿರುವುದು ಗೊತ್ತಾಗಿದೆ. ಆದರೆ, ಪೊಲೀಸರು ಆರೋಪಿಗಳು ಸಿಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿಮಗೆ ಬಾಬಾ ಸಾಹೇಬರ ಮೇಲೆ ನಿಜಕ್ಕೂ ಗೌರವ ಇದ್ದರೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಮನವಿ ಮಾಡಿದರು.</p>



<p>“ಇಡೀ ದೇಶದಲ್ಲಿ ಯಾವುದೇ ಸರ್ಕಾರ, ಅಲೆಮಾರಿಗಳಿಗೆ ಇದುವರೆಗೆ ಯಾವುದೇ ರೀತಿಯಲ್ಲಿ ರಕ್ಷಣೆ ಕೊಟ್ಟಿಲ್ಲ, ಮನೆ ಕೊಟ್ಟಿಲ್ಲ. ಯಾಕೆ ಅಲೆಮಾರಿಗಳಾಗಿದ್ದಾರೆ ಎಂಬ ಮೂಲ ಪ್ರಶ್ನೆ ಕೇಳಬೇಕಾಗಿದೆ. ಯಾರೂ ಸರ್ಕಾರಗಳ ಮೇಲೆ ಒತ್ತಡ ಹಾಕುತ್ತಿಲ್ಲ. </p>



<p>ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ನಾವು ಯಾಕೆ ಹೀಗಿದ್ದೇವೆ? ನಾವೀಗ ಒಟ್ಟಾಗಿ ಅಲೆಮಾರಿಗಳಿಗೆ ಭೂಮಿ ಕೊಡಿ ನೌಕರಿ ಕೊಡಿ ಎಂದು ಕೇಳಬೇಕಿದೆ. ಯಾದಗಿರಿಯ ಅತ್ಯಾಚಾರ ಪ್ರಕರಣದಲ್ಲಿ ಅರೋಪಿಗಳ ಬಂಧನ ಸರ್ಕಾರದ ಕೈಯಲ್ಲಿ ಆಗಲ್ಲ ಅಂತಲ್ಲ, ಪೊಲೀಸರು ಮನಸ್ಸು ಮಾಡಿದರೆ ಆರೋಪಿಗಳನ್ನು ಬಂಧಿಸುವುದು ಕಷ್ಟವೇನಲ್ಲ. ಹಾಗಾಗಿ, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು” ಎಂದು ಅಲೆಮಾರಿ ಸಮುದಾಯಗಳ ಹೋರಾಟಗಾರರು ಎಚ್ಚರಿಸಿದರು.</p>



<p>ಜೊತೆಗೆ ದೆಹಲಿಯ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ದೇಶದೆಲ್ಲೆಡೆ ಸಾರ್ವಜನಿಕ ವಲಯದಲ್ಲಿ ಭುಗಿಲೆದ್ದ ಆಕ್ರೋಶ ಮತ್ತು ಅದಕ್ಕೆ ಸರ್ಕಾರ ಸ್ಪಂದಿಸಿ ರೀತಿಯಲ್ಲಿ ಬಡ, ದಲಿತ ಸಮುದಾಯಗಳ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಕೊಲೆ ನಡೆದಾಗ ಸ್ಪಂದಿಸದಿರುವುದು ದುರದೃಷ್ಟಕರ ಎಂದು ವಿವಿಧ ಸಂಘಟನೆಗಳ ಮುಖಂಡರು ವಿಷಾಧ ವ್ಯಕ್ತಪಡಿಸಿದರು.</p>
]]></content:encoded>
					
		
		
			</item>
		<item>
		<title>ಮುಖ್ಯಮಂತ್ರಿಗಳೇ, ತುಳುನಾಡಿನ ಕಂಬಳದಲ್ಲಿನ ಶ್ರೇಣಿಕೃತ ಜಾತಿ ವ್ಯವಸ್ಥೆಯನ್ನು ಗಮನಿಸಿ</title>
		<link>https://peepalmedia.com/chief-minister-note-the-hierarchical-caste-system-in-kambala-tulu-nadu/</link>
		
		<dc:creator><![CDATA[Peepal Media]]></dc:creator>
		<pubDate>Sun, 12 Jan 2025 16:46:35 +0000</pubDate>
				<category><![CDATA[ಅಂಕಣ]]></category>
		<category><![CDATA[bengalure]]></category>
		<category><![CDATA[CM]]></category>
		<category><![CDATA[india]]></category>
		<category><![CDATA[kambala]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=52171</guid>

					<description><![CDATA[ಕಂಬಳಕ್ಕೆ ಜಾತಿ, ಧರ್ಮದ ಬೇಲಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿಗಳ ಈ ಹೇಳಿಕೆ ಸತ್ಯಕ್ಕೆ ದೂರವಾಗಿರುವ ವಿಚಾರ. ಕಂಬಳ ಎನ್ನುವುದು ತುಳುವರ ಜನಪದ ಕ್ರೀಡೆ, ತುಳುವರ ಸಾಂಸ್ಕೃತಿಕ ಆಸ್ಮಿತೆ ಎಂದು ಬಿಂಬಿತವಾಗಿದೆ. ವಾಸ್ತವವಾಗಿ ಕಂಬಳ ಎನ್ನುವುದು ಫ್ಯೂಡಲ್ ವ್ಯವಸ್ಥೆಯ ಪಳೆಯುಳಿಕೆಯಾಗಿದ್ದು, ಈಗಲೂ ಕಂಬಳವನ್ನು ವಿಜೃಂಭಿಸುವುದು ಸಮಾಜದಲ್ಲಿ ಜಾತಿ ಆಧರಿತ ಅಸಮಾನತೆ ಮತ್ತು ಸಾಂಸ್ಕೃತಿಕ ಯಜಮಾನ್ಯದ ಪಾರಂಪರಿಕ ಆಚರಣೆಗಳನ್ನು ಇನ್ನೂ ಜಾರಿಯಲ್ಲಿಡುವ ವ್ಯವಸ್ಥಿತ ಹುನ್ನಾರವಾಗಿದೆ.ಒಂದು ನಿರ್ದಿಷ್ಟ ಜಾತಿಯ ಮೆರೆದಾಟಕ್ಕೆ ಮತ್ತು ಕೆಳಜಾತಿ, ಕೆಳವರ್ಗಗಳ ದಬ್ಬಾಳಿಕೆಗೆ ಮಾಧ್ಯಮವಾಗಿದ್ದ [&#8230;]]]></description>
										<content:encoded><![CDATA[
<p>ಕಂಬಳಕ್ಕೆ ಜಾತಿ, ಧರ್ಮದ ಬೇಲಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿಗಳ ಈ ಹೇಳಿಕೆ ಸತ್ಯಕ್ಕೆ ದೂರವಾಗಿರುವ ವಿಚಾರ. ಕಂಬಳ ಎನ್ನುವುದು ತುಳುವರ ಜನಪದ ಕ್ರೀಡೆ, ತುಳುವರ ಸಾಂಸ್ಕೃತಿಕ ಆಸ್ಮಿತೆ ಎಂದು ಬಿಂಬಿತವಾಗಿದೆ. ವಾಸ್ತವವಾಗಿ ಕಂಬಳ ಎನ್ನುವುದು ಫ್ಯೂಡಲ್ ವ್ಯವಸ್ಥೆಯ ಪಳೆಯುಳಿಕೆಯಾಗಿದ್ದು, ಈಗಲೂ ಕಂಬಳವನ್ನು ವಿಜೃಂಭಿಸುವುದು ಸಮಾಜದಲ್ಲಿ ಜಾತಿ ಆಧರಿತ ಅಸಮಾನತೆ ಮತ್ತು ಸಾಂಸ್ಕೃತಿಕ ಯಜಮಾನ್ಯದ ಪಾರಂಪರಿಕ ಆಚರಣೆಗಳನ್ನು ಇನ್ನೂ ಜಾರಿಯಲ್ಲಿಡುವ ವ್ಯವಸ್ಥಿತ ಹುನ್ನಾರವಾಗಿದೆ.<br>ಒಂದು ನಿರ್ದಿಷ್ಟ ಜಾತಿಯ ಮೆರೆದಾಟಕ್ಕೆ ಮತ್ತು ಕೆಳಜಾತಿ, ಕೆಳವರ್ಗಗಳ ದಬ್ಬಾಳಿಕೆಗೆ ಮಾಧ್ಯಮವಾಗಿದ್ದ ಕಂಬಳವನ್ನು ಇಡೀ ತುಳುನಾಡಿನ ಸಾಂಸ್ಕೃತಿಕ ಐಡೆಂಟಿಟಿಯ ರೂಪದಲ್ಲಿ ಬಿಂಬಿಸಲಾಗುತ್ತಿದೆ. ರೈತರು ತಮ್ಮ ಕೃಷಿ ಕಾಯಕದ ಬಿಡುವಿನ ವೇಳೆಯಲ್ಲಿ, ಕಂಬಳದ ಗದ್ದೆಯಲ್ಲಿ ಕೋಣಗಳನ್ನು ಓಡಿಸುವುದರ ಮೂಲಕ ಮನರಂಜನೆಯನ್ನು ಪಡೆದುಕೊಳ್ಳುತ್ತಾರೆ ಎಂಬುದಾಗಿ ಕಂಬಳದ ಸಮರ್ಥನೆ ಮಾಡಲಾಗುತ್ತಿದೆ. ಆದರೆ, ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಕಂಬಳದಲ್ಲಿ ಕಂಡುಬರುವ <code>ಸ್ಪರ್ಧೆ’ ಅಥವಾ</code>ಕ್ರೀಡೆ’ ಅನ್ನುವುದು ಕುಂಟಾಬಿಲ್ಲೆ ಅಥವಾ ಕಬ್ಬಡ್ಡಿಯಂತಹ ಸಹಜ ಮನೋರಂಜಕ ಪಂದ್ಯಾಟವಲ್ಲ. ಬದಲಿಗೆ ಅದು ಉಳ್ಳವರ ಆಟ- ಮೇಲಾಟದ, ಪೌರುಷದ ಮತ್ತು ಯಜಮಾನಿಕೆಯ ಅಭಿವ್ಯಕ್ತಿಯಾಗಿದೆ. ಮೂಲದಲ್ಲಿ ಕಂಬಳ ಬಂಟರ ಗುತ್ತಿನ ಅಧಿಕಾರವನ್ನು ಪ್ರತಿಷ್ಠಾಪಿಸಲು ಮತ್ತು ಅದಕ್ಕೆ ಸಾಂಸ್ಕೃತಿಕ ಮಾನ್ಯತೆಯನ್ನು ದಕ್ಕಿಸಿಕೊಳ್ಳುವ ಸಲುವಾಗಿ ಸೃಷ್ಠಿಯಾದ ಒಂದು ಆಚರಣೆಯಾಗಿದೆ. ಅಂದರೆ ಕಂಬಳ ಪ್ರಾರಂಭವಾಗಿದ್ದೇ ಒಕ್ಕಲು ರೈತರನ್ನು ಸುಲಿಯಲು ಮತ್ತು ಕೆಳ ಸಮುದಾಯಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಸಲುವಾಗಿ. ತುಳುನಾಡಿನಲ್ಲಿ ಜಾತಿ ಶ್ರೇಣೀಕರಣದ ಉಳಿವು ಮತ್ತು ಮುಂದುವರಿಕೆಯಲ್ಲಿ ಕಂಬಳದ ಪಾತ್ರ ಅಧ್ಯಯನಾರ್ಹ ವಿಚಾರವಾಗಿದೆ.<br>ಮೂಲದಲ್ಲಿ ಕಂಬಳದ ಕೋಣಗಳು ಬಂಟರ ಗುತ್ತಿನ ಮನೆಗಳಲ್ಲಿ ಮಾತ್ರ ಇರುತ್ತಿದ್ದವು. ಉಳುಮೆ ಮಾಡದ ಕೋಣಗಳನ್ನು ಕಂಬಳಕ್ಕಾಗಿಯೇ ಸಾಕುವುದು ಗುತ್ತಿನ ಮನೆಯ ಪ್ಯಾಶನ್ ಆಗಿತ್ತು. ದಷ್ಟಪುಷ್ಟವಾಗಿ ಕೊಬ್ಬಿರುತ್ತಿದ್ದ ಕಂಬಳದ ಕೋಣಗಳು ಗುತ್ತಿನ ಮನೆಗಳ ಗತ್ತಿಗೆ, ಪೌರುಷಕ್ಕೆ ಸಾಕ್ಷಿಯಾಗಿರುತ್ತಿದ್ದವು. ಅಂತಹ ಕೋಣಗಳನ್ನು ಸಾಕಿ ಸಲಹುವ ತಾಕತ್ತಿಲ್ಲದ ಬಡ ಹಾಗೂ ಸಣ್ಣ ರೈತರ, ಒಕ್ಕಲುದಾರರ ಮತ್ತು ಕೆಳಜಾತಿಗಳ ನಡುವೆ ಕಂಬಳ ಬಂಟರ ಗುತ್ತಿನ ಮನೆಗಳಿಗೆ ಹಿರಿಮೆಯನ್ನೂ, ಫ್ಯೂಡಲ್ ಅಧಿಕಾರದ ಛತ್ರವನ್ನೂ ನೀಡುತಿತ್ತು ; ಮತ್ತು ಇದೇ ಫ್ಯೂಡಲ್ ಅಧಿಕಾರದ ಬಲದಲ್ಲಿ ಗುತ್ತಿನ ಮನೆಗಳು ಸಮುದಾಯಗಳ ಸಂಪನ್ಮೂಲ ಹಾಗೂ ಉತ್ಪಾದನೆಯ ಮೇಲೂ ನಿಯಂತ್ರಣ ಸಾಧಿಸುತ್ತಿದ್ದವು. ಕಂಬಳದ ಕೋಣಗಳನ್ನು ಕೊಬ್ಬಿಸಲು, ಅವುಗಳಿಗೆ ಅಕ್ಕಿಯಲ್ಲಿ ಗಂಜಿ ಮಾಡಿ ತಿನ್ನಿಸಲು ಅಕ್ಕಿ, ದಾನ್ಯಗಳನ್ನು ಒಕ್ಕಲಿನ ರೈತರಿಂದ ಸಂಗ್ರಹಿಸಿಲಾಗುತ್ತಿತ್ತು. ಕೋಣಗಳಿಗೆ ತೆಂಗಿನ ಎಣ್ಣೆ ಹಚ್ಚಿ ಆರೈಕೆ ಮಾಡಲೆಂದೇ ಬಿಲ್ಲವರು, ದಲಿತರು ಮತ್ತಿತರ ಕೆಳವರ್ಗಗಳ ಹತ್ತಾರು ಸಂಖ್ಯೆಯ ಆಳುಗಳನ್ನು ನೇಮಿಸಿಕೊಳ್ಳಲಾಗುತ್ತಿತ್ತು. ಒಕ್ಕಲುದಾರ ಬಡ ರೈತ ಹಾಗೂ ಕೆಳಜಾತಿಗಳ ಶ್ರಮ ಹಾಗೂ ಸಂಪನ್ಮೂಲಗಳ ಮೇಲೆ ಹತೋಟಿ ಸಾಧಿಸಲು ಕಂಬಳ ಒಂದು ಮಾಧ್ಯಮದಂತೆ ಬಳಕೆಯಾಗುತಿತ್ತು. ಹೀಗಾಗಿಯೇ ಆ ಕಾಲದಲ್ಲಿ ರೈತ ಹಸಿವಿನಿಂದ ಸಾಯುತ್ತಿದ್ದರೂ ಊರ ಗುತ್ತಿನ ಕಂಬಳದ ಕೋಣಗಳಿಗೆ ಅಕ್ಕಿ ಗಂಜಿ, ಹುರುಳಿ ಕಾಳಿನ ಗಂಜಿಗೆ ಕೊರತೆಯಾಗುತ್ತಿರಲಿಲ್ಲ. ಹೀಗೆ ಕಂಬಳ ಜಾತಿ ಶ್ರೇಣೀಕರಣದ ಅಸಮಾನ ಮತ್ತು ಶೋಷಕ ಸ್ವರೂಪದೊಂದಿಗೆ ಅವಿಭಾಜ್ಯ ಸಂಬಂಧವನ್ನು ಹೊಂದಿದೆ. ಹಲವು ಅಮಾನವವೀಯ ಅಸ್ಪೃಶ್ಯತಾ ಆಚರಣೆಗಳು ಮತ್ತು ಅಜಲು ಪದ್ದತಿ ಈ ಕಂಬಳ ಕ್ರೀಡೆಯ ಮೂಲಕ ತೀರಾ ಇತ್ತಿಚ್ಚಿನವರೆಗೂ ನಡೆಯುತ್ತಿದ್ದವು.<br>ಕಂಬಳ ಅನ್ನೋದು ಹಲವು ಊರಿನ ಗುತ್ತು ಮನೆತನಗಳ ನಡುವೆ ನಡೆಯುತ್ತಿದ್ದ ಪ್ರತಿಷ್ಟಿತ ಸ್ಪರ್ಧೆಯಾಗಿದ್ದರಿಂದ ಪ್ರತಿಸ್ಪರ್ಧಿ ಗುತ್ತಿನ ಜನರು ಬಂದು ಕಂಬಳದ ಗದ್ದೆಯನ್ನು ಹಾಳು ಮಾಡಬಹುದು ಎಂಬ ಕಾರಣಕ್ಕಾಗಿ ಕೊರಗ ಎಂಬ ಅತಿ ಶೋಷಿತ ಸಮುದಾಯ <code>ಪನಿ ಕುಲ್ಲುನು’ ಎಂಬ ಸಂಪ್ರದಾಯವನ್ನು ಆಚರಿಸಬೇಕಿತ್ತು.</code>ಪನಿ ಕುಲ್ಲುನು’ ಅಂದರೆ ಕೊರಗರು ತಮ್ಮ ಹೆಂಡತಿ ಮಕ್ಕಳ ಜೊತೆ ಇಡೀ ರಾತ್ರಿ ಕಂಬಳ ಗದ್ದೆಯನ್ನು ಕಾಯಬೇಕು. ಇದಕ್ಕಿಂತಲೂ ಅಮಾನುಷವೆಂದರೆ, ಕಂಬಳ ನಡೆಯುವ ಒಂದೆರಡು ಗಂಟೆಗಳ ಮೊದಲು ಕಂಬಳ ಗದ್ದೆಯಲ್ಲಿ ಕೊರಗರು ಓಡಬೇಕು. ಕಂಬಳ ಗದ್ದೆಯಲ್ಲಿ ಗುತ್ತಿನ ಮನೆಯ ವೈರಿಗಳು ಗಾಜು, ಕಲ್ಲುಗಳನ್ನು ಹಾಕಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಕೊರಗರು ಓಡಿ ಪರಿಶೀಲನೆ ಮಾಡಬೇಕು. ಗುತ್ತಿನ ಕೊಣಗಳಿಗೆ ಗಾಜು ಚುಚ್ಚುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗುತ್ತದೆ. ಜಮೀನ್ದಾರಿ ಕುಟುಂಬಗಳ ಮಧ್ಯೆ ನಡೆಯುವ ಪಕ್ಕಾ ಫ್ಯೂಡಲ್ ಕ್ರೀಡೆಯಾಗಿರುವ ಕಂಬಳ ಈಗ ಸ್ವರೂಪದಲ್ಲಿ ಸ್ವಲ್ಪ ಮಾರ್ಪಾಡುಗಳನ್ನು ಹೊಂದಿದೆಯಾದರೂ ಆಳದಲ್ಲಿ ಫ್ಯೂಡಲ್ ವ್ಯವಸ್ಥೆಯನ್ನು ಜಾರಿಯಲ್ಲಿಡುವ ತಂತ್ರವೇ ಆಗಿದೆ.<br>ಸದ್ಯ ಕರಾವಳಿಯ ಹಲವೆಡೆ ನಡೆಯುತ್ತಿರುವ ಕಂಬಳದ ಸಂಚಾಲಕ ಸಮಿತಿಗಳನ್ನು ನೋಡಿದಲ್ಲಿ ಅದರ ವರ್ಗೀಯ ಮತ್ತು ಜಮೀನ್ದಾರಿ ಸ್ವರೂಪ ಮನದಟ್ಟಾಗುತ್ತದೆ. ಕರಾವಳಿಯ ಬಾರಾಡಿ ಬೀಡು (ಕಾರ್ಕಳದ ಸಮೀಪ), ಈದು (ಕಾರ್ಕಳ), ಮಿಯಾರು (ಕಾರ್ಕಳದ ಸಮೀಪ), ಐಕಳ ಬಾವ (ಮೂಡುಬಿದಿರೆ-ಮುಲ್ಕಿ ಮಧ್ಯೆ), ಬಂಗಾಡಿ (ಬೆಳ್ತಂಗಡಿ), ಹೊಕ್ಯಾಡಿಗೋಳಿ (ಬಂಟ್ವಾಳ), ಪಜೀರು (ಬಂಟ್ವಾಳ), ಪಿಲಿಕುಳ ನಿಸರ್ಗಧಾಮ (ಮಂಗಳೂರ ಸಮೀಪ), ಜಪ್ಪಿನಮೊಗರು (ಮಂಗಳೂರ ಸಮೀಪ), ತಲಪಾಡಿ ಪಂಜಾಳ (ಮಂಗಳೂರ ಸಮೀಪ), ಅಲ್ತಾರು (ಉಡುಪಿ), ಕಟಪಾಡಿ (ಉಡುಪಿ), ಅಡ್ವೆ, ನಂದಿಕೂರು, ಮೂಡುಬಿದಿರೆ, ಮುಲ್ಕಿ, ವೇಣೂರು, ಉಪ್ಪಿನಂಗಡಿ, ಪುತ್ತೂರು, ತೋನ್ಸೆಯಲ್ಲಿ ಕಂಬಳಗಳು ನಡೆಯುತ್ತಿದೆ. ಈ ಎಲ್ಲಾ ಕಂಬಳಗಳಲ್ಲಿ ಒಂದೋ ಬಂಟರು ಮುಖ್ಯಸ್ಥರಾಗಿರುತ್ತಾರೆ ಅಥವಾ ಜೈನರು ಸಂಚಾಲಕರಾಗಿರುತ್ತಾರೆ. ಕೋಣ ಓಡಿಸುವವರು, ಕೋಣದ ಚಾಕರಿ ಮಾಡುವವರು, ಕಂಬಳದ ಸ್ವಯಂಸೇವಕರೆಲ್ಲರೂ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದಾರೆ. ಮುಲ್ಕಿ ಪಯ್ಯೊಟ್ಟು ಸದಾಶಿವ ಸಾಲ್ಯಾನ್ ಹೊರತುಪಡಿಸಿದಲ್ಲಿ ಬಹುತೇಕ ಕೋಣಗಳ ಮಾಲಿಕರು ಮಾತ್ರ ಈಗಲೂ ಗುತ್ತಿನ ಬಂಟರೇ ಆಗಿದ್ದಾರೆ ಎಂಬುದು ಗಮನಾರ್ಹ. ಈಗಲೂ ಮಂಗಳೂರಿಗೊಂದು ರೌಂಡ್ ಹೊಡೆದರೆ ಚೌಟ, ಶೆಟ್ಟಿ, ಹೆಗ್ಡೆಗಳ ದೊಡ್ಡ ದೊಡ್ಡ ಬ್ಯಾನರ್, ಕಟೌಟ್ ಗಳು ಕಂಬಳ ಸಂಬಂಧ ರಾರಾಜಿಸುತ್ತಿದೆ. ಇದು ಕರಾವಳಿಯಲ್ಲಿ ಬಂಟರ ಅಧಿಪತ್ಯವನ್ನು ಸಾರಲು ಹಾಕಲಾಗಿದೆಯೇ ಎಂಬ ಅನುಮಾನ ಹುಟ್ಟಿಸುವಂತಿದೆ. ಸಮಸಮಾಜದ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯಲ್ಲ.<br>ಕಂಬಳ ಎಂಬುದು ಕೇವಲ ಕ್ರೀಡೆಯಾಗಿ ಪ್ರಾರಂಭವೂ ಆಗಿಲ್ಲ. ಮುಂದುವರಿಕೆಯೂ ಅಲ್ಲ. ಕಂಬಳ ಎಂಬುದು ಜಮೀನ್ದಾರಿಗಳ ಐಶಾರಾಮಿ ಬದುಕಿನ ಪಳಿಯುಳಿಕೆಯಾಗಿ ಮುಂದುವರೆಯುತ್ತಿದೆ. ಕಂಬಳ ಎಂಬುದು ಬಹುಜನರ ಸಂಸ್ಕೃತಿಯೂ ಅಲ್ಲ. ಜನಪದ ಕ್ರೀಡೆಯೂ ಅಲ್ಲ. ಕಂಬಳ ಎಂಬುದು ಪಕ್ಕಾ ಬಹುಜನ ವಿರೋಧಿ ಫ್ಯೂಡಲ್ ವರ್ಗದ ಮೋಜಿನ ಆಟವಷ್ಟೆ. ಕಂಬಳದಲ್ಲಿ ಜಾತಿ ಹೊರತುಪಡಿಸಿ ಇನ್ನೇನೂ ಇಲ್ಲ.</p>



<ul class="wp-block-list">
<li><strong>ನವೀನ್‌ ಸೂರಿಂಜೆ</strong></li>
</ul>



<p></p>
]]></content:encoded>
					
		
		
			</item>
		<item>
		<title>ದೇಶದ ವಿರೋಧಪಕ್ಷಗಳ ವಿರುದ್ಧ ಮೋದಿ ದ್ವೇಷ- ಬಿಜೆಪಿ ಜೆಡಿಎಸ್ ಪಿತೂರಿಗೆ ನಾನು ಹೆದರಲ್ಲ: ಸಿಎಂ ಸ್ಪಷ್ಟ ಎಚ್ಚರಿಕೆ</title>
		<link>https://peepalmedia.com/modi-has-hate-to-opposition-parties-i-dont-care-for-bjp-jds-conspiracy/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 24 Sep 2024 11:16:42 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[bjp]]></category>
		<category><![CDATA[Chief Minister]]></category>
		<category><![CDATA[CM]]></category>
		<category><![CDATA[CM siddaramaiah]]></category>
		<category><![CDATA[congress]]></category>
		<category><![CDATA[HD Kumaraswamy]]></category>
		<category><![CDATA[HDK]]></category>
		<category><![CDATA[JDS]]></category>
		<category><![CDATA[kumaraswamy]]></category>
		<category><![CDATA[modi]]></category>
		<category><![CDATA[narendra modi]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=46051</guid>

					<description><![CDATA[ಬೆಂಗಳೂರು, ಸೆಪ್ಟೆಂಬರ್ 24: ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯದ ಆದೇಶ ಹೊರಬಂದ ನಂತರ ಪತ್ರಿಕಾ ಗೋಷ್ಠಿ ನಡೆಸಿ, ತಮ್ಮ ಮೊದಲ ಪ್ರತಿಕ್ರಿಯೆ ನೀಡಿದರು. ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ , ಬಿಎನ್ ಎಸ್ ಎಸ್ ಪ್ರಕಾರ 218 ಹಾಗೂ ಪಿಸಿ ಕಾಯ್ದೆ [&#8230;]]]></description>
										<content:encoded><![CDATA[
<p><strong>ಬೆಂಗಳೂರು, ಸೆಪ್ಟೆಂಬರ್ 24:</strong> ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>



<p>ಅವರು ಇಂದು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯದ ಆದೇಶ ಹೊರಬಂದ ನಂತರ ಪತ್ರಿಕಾ ಗೋಷ್ಠಿ ನಡೆಸಿ, ತಮ್ಮ ಮೊದಲ ಪ್ರತಿಕ್ರಿಯೆ ನೀಡಿದರು.</p>



<p><strong>ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ</strong></p>



<p>ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ , ಬಿಎನ್ ಎಸ್ ಎಸ್ ಪ್ರಕಾರ 218 ಹಾಗೂ ಪಿಸಿ ಕಾಯ್ದೆ 19ರಂತೆ ತನಿಖೆಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17 ಎ ಪ್ರಕಾರ ತನಿಖೆಗೆ ಉಚ್ಛನ್ಯಾಯಾಲಯ ಆದೇಶ ನೀಡಿದೆ. ಈ ತೀರ್ಪಿನ ಮೇಲೆ ಕಾನೂನು ಹೋರಾಟದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ , ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.</p>



<p><strong>ಬಿಜೆಪಿ ಜೆಡಿಎಸ್ ನ ಪಿತೂರಿಗೆ ಹೆದರುವುದಿಲ್ಲ</strong></p>



<p>ಬಿಜೆಪಿ ಜೆಡಿಎಸ್ ನ ಪಿತೂರಿಗೆ ನಾನು ಎಂದೂ ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ಸಂಚು , ರಾಜಭವನ ದುರುಪಯೋಗ ಹಾಗೂ ದುರ್ಬಳಕೆಗೆ ನಾನು ಹೆದರುವುದಿಲ್ಲ. ರಾಜ್ಯದ ಜನ , ಪಕ್ಷದ ಹೈಕಮಾಂಡ್, ಶಾಸಕರು, ಸಚಿವರು, ಕಾರ್ಯಕರ್ತರು ನನ್ನೊಂದಿಗಿದ್ದಾರೆ. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಹಕಾರ ನೀಡಲಿದೆ. ನರೆಂದ್ರ ಮೋದಿಯವರ ಬಿಜೆಪಿ ಸರ್ಕಾರ , ಕೇವಲ ನನ್ನ ಮೇಲಷ್ಟೇ ಅಲ್ಲ , ಇಡೀ ದೇಶದ ವಿರೋಧಪಕ್ಷಗಳ ವಿರುದ್ಧ ಮೇಲೆ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಮಾಡುತ್ತಿದ್ದಾರೆ ಎಂದರು.</p>



<p><strong>ಆಪರೇಷನ್ ಕಮಲದ ಪ್ರಯತ್ನ ವಿಫಲ</strong></p>



<p>ಬಿಜೆಪಿ ಹಾಗೂ ಜೆಡಿಎಸ್ ನವರು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದಾರೆ. ಅವರು ಹಣಬಲದಿಂದ, ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದೊಂದಿಗೆ ಎಂದಿಗೂ ಬಿಜೆಪಿ-ಜೆಡಿಎಸ್ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಕ್ಷ ಬಂದಿದ್ದರಿಂದ ಆಪರೇಷನ್ ಕಮಲ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ದುಡ್ಡನ್ನು ಕೊಟ್ಟು ಶಾಸಕರನ್ನು ಖರೀದಿಸುವ ಪ್ರಯತ್ನ ಮಡಿದರು. ನಮ್ಮ ಯಾವ ಶಾಸಕರೂ ದುಡ್ಡಿನ ಹಿಂದೆ ಹೋಗದ ಕಾರಣ,ಅವರ ಪ್ರಯತ್ನ ವಿಫಲವಾಯಿತು ಎಂದರು.</p>



<p><strong>ಬಿಜೆಪಿಯವರು ಸಾಮಾಜಿಕ ನ್ಯಾಯ, ಬಡವರ ವಿರೋಧಿಗಳು</strong></p>



<p>ಕಾಂಗ್ರೆಸ್ ಸರ್ಕಾರದ ಬಡವರ ಪರ ಕಾರ್ಯಕ್ರಮಗಳನ್ನು ಬಿಜೆಪಿ ವಿರೋಧಿಸುತ್ತಾ ಬಂದಿದ್ದಾರೆ. ಶೂಭಾಗ್ಯ, ಪಶುಭಾಗ್ಯ, ಶಾದಿಭಾಗ್ಯ , ಕ್ಷೀರಭಾಗ್ಯ ಸೇರಿದಂತೆ ಹಲವು ಜನಪರ ಯೋಜನೆಗಳು ಹಾಗೂ ಈಗಿನ ಗ್ಯಾರಂಟಿ ಯೋಜನೆಗಳನ್ನು ಸಹ ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಸಾಮಾಜಿಕ ನ್ಯಾಯ, ಬಡವರ ವಿರೋಧಿಗಳು. ಸರ್ಕಾರಕ್ಕೆ ಕಪ್ಪು ಮಸಿ ಬಳಿಯುವುದು ಅವರ ದುರಾಲೋಚನೆ. ಹೈಕೋರ್ಟ್ ಆದೇಶದ ಪ್ರತಿಯನ್ನು ಸಂಪೂರ್ಣ ಪರಿಶೀಲಿಸಿ , ಮುಂದಿನ ಪ್ರತಿಕ್ರಿಯೆಯನ್ನು ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಇಡೀ ದೇಶದಲ್ಲಿ ಪಿತೂರಿ ಮಾಡಿದಂತೆ ಕರ್ನಾಟಕದಲ್ಲಿಯೂ ನನ್ನ ಹಾಗೂ ಸರ್ಕಾರದ ವಿರುದ್ಧ ಪಿತೂರಿ ಮಾಡಲಾಗಿದೆ ಎಂದರು.</p>



<p><strong>ಕಾನೂನಾತ್ಮಕ ಹೋರಾಟ:</strong><br>ಆದೇಶ ತೃಪ್ತಿ ತಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಇದೊಂದು ಕಾನೂನಾತ್ಮಕ ಹೋರಾಟ. ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು.</p>



<p><strong>ತಪ್ಪು ಮಾಡಿಲ್ಲ</strong><br>ನನ್ನ ಪ್ರಕಾರ ನಾನು ತಪ್ಪು ಮಾಡಿಲ್ಲ. 17 ಎ ರಡಿ ತನಿಖೆ ಮಾಡಲು ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ಬಿ ಎನ್.ಎಸ್.ಎಸ್ ಕಾಯ್ದೆಯಡಿ 218 ಆದೇಶ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದರು.</p>



<p><strong>ಸಚಿವ ಕುಮಾರಸ್ವಾಮಿಯವರಿಗೆ ಅನ್ವಯವಾಗುವುದಿಲವೇ</strong>?</p>



<p>ಬಿಜೆಪಿಯವರು ಮುಖ್ಯಮಂತ್ರಿಗಳು ರಾಜಿನಾಮೆ ಕೊಡಲು ಒತ್ತಾಯಿಸಿ ಪ್ರತಿಭಟನೆ ಮಾಡುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಅವರನ್ನು ನಾವು ಎದುರಿಸುತ್ತೇವೆ. ರಾಜಿನಾಮೆ ಏಕೆ ಕೊಡಬೇಕು ಎಂದು ಪ್ರಶ್ನಿಸಿದರು. ರಾಜಿನಾಮೆ ಕೇಳುವುದಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಹೇಳಿಕೆಗೆ ಪ್ರತಿಕ್ರಿಯಿಸಿ ಅವರ ಮೇಲೆ ಎಫ್.ಐ.ಆರ್ ಆಗಿದ್ದು ಅವರು ಜಾಮೀನಿನ ಮೇಲೆ ಇದ್ದಾರೆ.ಅವರು ರಾಜಿನಾಮೆ ಕೊಟ್ಟಿದ್ದಾರೆಯೇ? ಇದು ಅವರಿಗೆ ಅನ್ವಯವಾಗುವುದಿಲ್ಲವೇ? ತನಿಖೆ ಹಂತದಲ್ಲಿಯೇ ರಾಜಿನಾಮೆ ಕೊಡುವ ಬಗ್ಗೆ ಕುಮಾರಸ್ವಾಮಿಯವರನ್ನು ಕೇಳಿ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.</p>



<p>ನ್ಯಾಯಾಲಯದ ತೀರ್ಪನ್ನು ನಾನು ಪೂರ್ತಿ ಓದಿಲ್ಲ. ಮಾಧ್ಯಮಗಳಲ್ಲಿ ಬಿತ್ತರಿಸಿರುವುದನ್ನು ಮಾತ್ರ ಓದಿದ್ದೇನೆ ಎಂದರು. ಓದಿದ ನಂತರ ಪುನಃ ಪ್ರತಿಕ್ರಿಯೆ ನೀಡುತ್ತೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.</p>
]]></content:encoded>
					
		
		
			</item>
		<item>
		<title>ಚಾಮುಂಡಿ ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ &#8211; ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆ</title>
		<link>https://peepalmedia.com/special-taskforce-to-chamundi-hill-and-development-of-23-temple-belong-to-chamundi-temple/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 03 Sep 2024 12:13:31 +0000</pubDate>
				<category><![CDATA[ರಾಜ್ಯ]]></category>
		<category><![CDATA[chamundi hill]]></category>
		<category><![CDATA[chamundi temple]]></category>
		<category><![CDATA[Chief Minister]]></category>
		<category><![CDATA[CM]]></category>
		<category><![CDATA[CM siddaramaiah]]></category>
		<category><![CDATA[mysore]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=44869</guid>

					<description><![CDATA[ಮೈಸೂರು, ಸೆಪ್ಟೆಂಬರ್ 03: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಚಾಮುಂಡೇಶ್ವರಿ ಪ್ರಾಧಿಕಾರವನ್ನು ಸರ್ಕಾರ ರಚಿಸಿದ್ದು, ಹಿಂದೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯಡಿ ಕಾರ್ಯನಿರ್ವಾಹಕ ಅಧಿಕಾರಿಗಳು ದೇವಸ್ಥಾನದ ಅಭಿವೃದ್ಧಿ ಮತ್ತು ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತಿದ್ದರು. ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವೂ ರಚನೆಯಾಗಿದೆ. ಹುಲಿಗೆಮ್ಮ [&#8230;]]]></description>
										<content:encoded><![CDATA[
<pre class="wp-block-code"><code><strong>ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ, ಚಾಮುಂಡಿಬೆಟ್ಟ ಪ್ರದೇಶದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸಲು ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ</strong></code></pre>



<p><strong>ಮೈಸೂರು, ಸೆಪ್ಟೆಂಬರ್ 03</strong>: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>



<p>ಚಾಮುಂಡೇಶ್ವರಿ ಪ್ರಾಧಿಕಾರವನ್ನು ಸರ್ಕಾರ ರಚಿಸಿದ್ದು, ಹಿಂದೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯಡಿ ಕಾರ್ಯನಿರ್ವಾಹಕ ಅಧಿಕಾರಿಗಳು ದೇವಸ್ಥಾನದ ಅಭಿವೃದ್ಧಿ ಮತ್ತು ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತಿದ್ದರು. ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವೂ ರಚನೆಯಾಗಿದೆ. ಹುಲಿಗೆಮ್ಮ ದೇವಸ್ಥಾನ ಮಹದೇಶ್ವರ ದೇವಸ್ಥಾನÀ, ಸವದತ್ತಿಯ ಎಲ್ಲಮ್ಮ, ಘಾಟಿ ಸುಬ್ಮಣ್ಯ ದೇವಸ್ಥಾನಕ್ಕೂ ಪ್ರಾಧಿಕಾರವನ್ನು ಸರ್ಕಾರ ರಚಿಸಿದೆ. ವಿಶ್ವವಿಖ್ಯಾತ ದಸರಾ ಹಬ್ಬದ ಜೊತೆಗೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಾವಿರಾರು ಜನ ಭಕ್ತಾದಿಗಳು ಶುಕ್ತವಾರ, ಶನಿವಾರ ಭಾನುವಾರಗಳಂದು ಬಹಳ ಭಕ್ತಾದಿಗಳು ಭೇಟಿ ನೀಡುತ್ತಾರೆ. ಶ್ರೀಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಅವುಗಳ ಪೈಕಿ ಕೆಲವು ಪೂರ್ಣಗೊಂಡಿದ್ದರೆ ಕೆಲವು ಪೂರ್ಣಗೊಂಡಿಲ್ಲ ಎಂದರು.</p>



<p><strong>ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ</strong></p>



<p>ಪ್ರಾಧಿಕಾರವು ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ಧಿ, ಹಾಗೂ ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂಬ ಉದ್ದೇಶದಿಂದ ಪ್ರಾಧಿಕಾರ ರಚನೆಯಾಗಿದೆ. ಹಿಂದೆ ಬಸ್ ನಿಲ್ದಾಣ, ವಾಹನ ನಿಲುಗಡೆ ಮತ್ತು ಮಳಿಗೆಗಳ ನಿರ್ಮಾಣವಾಗಿದೆ. ಹಿಂದೆ ಕೈಗೆತ್ತಿಕೊಂಡಿರುವ ಕಾರ್ಯಕ್ರಮಗಳನ್ನು ಕೂಡಲೇ ಪೂಣಗೊಳಿಸಲು ಸೂಚನೆ ನೀಡಲಾಗಿದೆ. 2018 ರಲ್ಲಿ ಕುಡಿಯುವ ನೀರಿನ ಕಾಮಗಾರಿ ಮಂಜೂರಾಗಿದ್ದರೂ ಇನ್ನೂ ಪೂರ್ಣವಾಗಿಲ್ಲ. ಅದನ್ನು ಕೂಡಲೇ ಪೂರ್ಣಗೊಳಿಸಲು ನಗರಾಭಿವೃದ್ಧಿ ಪ್ರಾಧಿಕಾರದವರಿಗೆ ಸೂಚನೆ ನೀಡಲಾಗಿದೆ. ಕಸ ವಿಲೇವಾರಿ ಕಾಮಗಾರಿಯ ಸಿವಿಲ್ ಕಾಮಗಾರಿಗಳು ಪೂರ್ಣವಾಗಿದ್ದು, ಈ ತಿಂಗಳೊಳಗೆ ವಿದ್ಯುದ್ದೀಕರಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸವೇಕು. ಸ್ವಚ್ಛತೆಗೆ ಗಮನ ಹರಿಸಬೇಕೆಂದು ಸೂಚಿಸಲಾಗಿದೆ ಚಾಮುಂಡಿ ದೇವಸ್ಥಾನ ಮಾತ್ರವಲ್ಲದೇ ಎಲ್ಲಾ ದೇವಸ್ಥಾನಗಳಲ್ಲಿಯೂ ಸ್ವಚ್ಛತೆಯನ್ನು ಕಾಪಾಡಬೇಕು ಎಂದರು.</p>



<p><strong>ಪ್ರತಿ ವರ್ಷ ದೇವಾಲಯಯದ ಆದಾಯ ಹೆಚ್ಚಳ</strong></p>



<p>ಪ್ರಾಧಿಕಾರದಲ್ಲಿ ಒಟ್ಟು 169.22 ಕೋಟಿ ¯ಭ್ಯವಿದ್ದು, ದೇವಾಲಯದ ಉಳಿತಾಯ ಖಾತೆಯಲ್ಲಿ 20.24 ಕೋಟಿ ರೂ.ಗಳು ಲಭ್ಯವಿದೆ. 2023-24 ರಲ್ಲಿ 49.64 ಕೋಟಿ ರೂ.ಗಳ ಆದಾಯ 28.18 ಕೋಟಿ ನಿವ್ವಳ ಆದಾಯ ಬಂದಿದೆ. ಜುಲೈ ಕೊನೆಯವರೆಗೆ 17.4 ಕೋಟಿ ಆದಾಯ ಬಂದಿದ್ದು, 6.97 ಕೋಟಿ ವೆಚ್ಚವಾಗಿದೆ. ಪ್ರತಿ ವರ್ಷ ಆದಾಯ ಹೆಚ್ಚಾಗುತ್ತಿದೆ. ಅಂದರೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿರುವ ದೇವಿಕೆರೆ, ನಂದಿ ಪ್ರತಿಮೆ ಅಭಿವೃದ್ಧಿಗೆ ತೀರ್ಮಾನ ಮಾಡಲಾಗಿದೆ. ಶಾಸಕರು ಹಾಗೂ ಸಚಿವರು ವ್ಯಕ್ತ ಮಾಡಿರುವ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು ಪ್ರಾಧಿಕಾರ ಕೆಲಸ ಮಾಡುತ್ತದೆ ಎಂದು ತಿಳಿಸಿದರು.</p>



<p>ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ರೋಪ್ ವೇ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆಯಾಗಿಲ್ಲ. ಪರಿಸರವಾದಿಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಅದನ್ನು ಹಿಂದೆಯೇ ಸ್ಥಗಿತಗೊಳಿಸಲಾಗಿದೆ ಎಂದರು.</p>



<p><strong>ವಸ್ತ್ರ ಸಂಹಿತೆ ಇಲ್ಲ</strong></p>



<p>ಬೆಟ್ಟಕ್ಕೆ ಬರುವ ಮೆಟ್ಟಿಲುಗಳನ್ನು ಅಭಿವೃದ್ಧಿಪಡಿಲಾಗುವುದು ಎಂದ ಮುಖ್ಯಮಂತ್ರಿಗಳು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವವರಿಗೆ ಯಾವುದೇ ವಸ್ತ್ರ ಸಂಹಿತೆಯನ್ನು ಜಾರಿ ಮಾಡಿಲ್ಲ. ಎಲ್ಲಾ ಜಾತಿ , ಧರ್ಮದವರು ದೇವಸ್ಥಾನಕ್ಕೆ ಬರಬಹುದು ಎಂದರು.</p>



<p><strong>ಚಾಮುಂಡಿಬೆಟ್ಟ ಪ್ರದೇಶದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆ</strong></p>



<p>ದೇವಾಲಯಗಳಲ್ಲಿ ಅಗತ್ಯವಿರುವೆಡೆ ಸಿಸಿಟಿವಿ ಅಳವಡಿಸಬೇಕೆಂದು ತೀರ್ಮಾನಿಸಿ, ಯೂನಿಯನ್ ಬ್ಯಾಂಕ್ ನವರು ಸಿಎಸ್ ಆರ್ ನಿಧಿಯಿಂದ ಸಿಸಿಟಿವಿಗಳನ್ನು ಅಳವಡಿಕೆಗೆ ಸಹಕಾರ ನೀಡಲಿದ್ದಾರೆ. ದೇವಸ್ಥಾನದ ಸುತ್ತಮುತ್ತಲಿನ ದೀಪದ ವ್ಯವಸ್ಥೆಗೊಳಿಸುವ ಜೊತೆಗೆ ಈ ಪ್ರದೇಶದಲ್ಲಿ ಅಪರಾಧಗಳನ್ನು ನಿಗ್ರಹಿಸಲು ಒಂದು ಟಾಸ್ಕ್ ಫೋರ್ಸ್ ನ್ನು ರಚನೆ ಮಾಡಲಾಗುವುದು ಎಂದರು.</p>



<p><strong>ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಕ್ರಮ</strong></p>



<p>ಚಾಮುಂಡಿ ಬೆಟ್ಟದ ಮೇಲೆ ಧೂಮಪಾನ, ಮದ್ಯಪಾನ, ಗುಟ್ಕಾ ಪಾನ್ ಗಳನ್ನು ಸಂಪೂರ್ಣ ನಿಷೇದಿಸಲಾಗಿದೆ. ಬೆಟ್ಟದ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ತೀರ್ಮಾನಿಸಲಾಗಿದೆ. ಪ್ರಸಾದ ಯೋಜನೆಯನ್ನು ಕೇಂದ್ರ ಸರ್ಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದ್ದು, ಈ ಯೋಜನೆಗೆ ಹೆಚ್ಚುವರಿಯಾಗಿ ಬೇಕಾಗುವ 11 ಕೋಟಿ ರೂ.ಗಳನ್ನು ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದಿಂದ ಭರಿಸಲಾಗುವುದು. ದೇವಾಲಯದ ಒಳಗೆ ಛಾಯಾಗ್ರಹಣವನ್ನು ನಿಷೇದಿಸಲಾಗಿದ್ದು, ಮೊಬೈಲ್ ಗಳನ್ನು ಬಂದ್ ಮಾಡಿಕೊಳ್ಳುವ ಆದೇಶ ನೀಡಲಾಗುವುದು ಎಂದರು.</p>



<p><strong>ಐದು ದೇವಾಲಯ ಸಮೂಹದ ಜೀರ್ಣೋದ್ಧಾರ</strong></p>



<p>ಪ್ರಸನ್ನ ಕೃಷ್ಣ ಸ್ವಾಮಿ ದೇವಾಲಯ,ಗಾಯತ್ರಿಯಮ್ಮನವರ ದೇವಾಲಯ,ಭುವನೇಶ್ವರಿ ಅಮ್ಮನವರ ದೇವಾಲಯ , ಕೋಟೆ ಆಂಜನೀಯದೇವಾಲಯ, ವರಾಹ ಸ್ವಾಮಿ ದೇವಾಲಯಗಳ ಐದು ದೇವಾಲಯಗಳ ಸಮೂಹವನ್ನು ಜೀರ್ಣೋದ್ಧಾರ ಕಾರ್ಯವನ್ನು ಕೈಗೊಳ್ಳಲಾಗುವುದು. ಇಲ್ಲಿ ಕರ್ತವ್ಯನಿರ್ವಹಿಸುವ ಖಾಯಂ ಸಿಬ್ಬಂದಿಗಳಿಗೆ ವೈದ್ಯಕೀಯ ಸೌಲಭ್ಯ ಹಾಗೂಅವರ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದರು.</p>



<p><strong>ಚಾಮುಂಡೇಶ್ವರಿ ಕ್ಷೇತ್ರವನ್ನು ಆಕರ್ಷಕವಾಗಿಸಿ ಹೆಚ್ಚು ಸವಲತ್ತು ನೀಡಲು ತೀರ್ಮಾನ</strong></p>



<p>ಚಾಮುಂಡಿಬೆಟ್ಟ ಕ್ಷೇತ್ರವನ್ನು ಹೆಚ್ಚು ಆಕರ್ಷಣೀಯವಾಗಿ ಮಾಡುವ ಜೊತೆಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಇಲ್ಲಿನ ದಾಸೋಹ ಭವನದ ವ್ಯವಸ್ಥೆಗಳನ್ನು ಸುಧಾರಿಸಿ, ಭಕ್ತಾದಿಗಳಿಗೆ ಶುಚಿ ರುಚಿಯಿರುವಂತಹ ಊಟವ್ಯವಸ್ಥೆಗಳನ್ನು ಮಾಡಲು ವ್ಯವಸ್ಥೆಗೊಳಿಸಲು ತೀರ್ಮಾನಿಸಲಾಗಿದೆ. ಚಾಮುಂಡಿಕ್ಷೇತ್ರದ ಪ್ರಾದಿಕಾರದಲ್ಲಿ 169 ಕೋಟಿ ಖಾಯಂ ಠೇವಣಿ ಇದ್ದು, ಇದರ ಆದಾಯದಲ್ಲಿ ಈ ಎಲ್ಲ ವೆಚ್ಚಗಳನ್ನು ಭರಿಸಬಹುದಾಗಿದೆ ಎಂದರು.</p>



<p><strong>ದೇವಸ್ಥಾನದ ಆಸ್ತಿಗಳ ಸರ್ವೆ</strong></p>



<p>ದೇವಸ್ಥಾನದ ಆಸ್ತಿಯಾಗಿರುವ ಭೂಮಿ ಒತ್ತುವರಿ ಆಗಿರುವ ಸಾಧ್ಯತೆಯಿರುವುದರಿಂದ, ಅವುಗಳ ಸರ್ವೇ ಮಾಡಲು ತಿಳಿಸಲಾಗಿದ್ದು, ಸರ್ವೆ ನಡೆಸಿದ ವರದಿಯನ್ನು ಪ್ರಾಧಿಕಾರದ ಮುಂದಿನ ಸಭೆಯಲ್ಲಿ ಮಂಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಆರ್ ಎಸ್ ಎಸ್ ನವರು ಜಾತಿ ಜನಗಣತಿ ವರದಿ ದುರ್ಬಳಕೆಯಾಗಬಾರದು ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಜನಗಣತಿ ವರದಿಯನ್ನು ಆರ್ಥಿಕ ಹಾಗೂ ಸಾಮಾಜಿಕ ಕಾರ್ಯಗಳಿಗಾಗಿ ಮಾತ್ರ ಬಳಕೆಯಾಗಬೇಕೆಂಬ ಷರತ್ತಿದೆ ಎಂದರು.</p>



<p></p>
]]></content:encoded>
					
		
		
			</item>
		<item>
		<title>ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತದ ತೇಜಸ್ವಿ ಸೂರ್ಯ ಯಾವ ಮುಖ ಇಟ್ಕೊಂಡು ಮತ ಕೇಳ್ತಾರೆ? ಸಿಎಮ್‌ ಸಿದ್ಧರಾಮಯ್ಯ</title>
		<link>https://peepalmedia.com/tejaswi-surya-didnt-work-for-state-in-his-mp-period-cm/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 08 Apr 2024 06:56:38 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[CM]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<category><![CDATA[sowmya reddy]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=38070</guid>

					<description><![CDATA[ಬೆಂಗಳೂರಿನ ಕುಡಿಯುವ ನೀರಿಗೆ ಮೇಕೆದಾಟು ಆಗಬೇಕು. ಕೇಂದ್ರದಲ್ಲಿ ಮೇಕೆದಾಟುಗೆ ಅ‌ನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು: ಸಿ.ಎಂ ಕರೆ ಬೆಂಗಳೂರು ಏ 8: ಬೆಂಗಳೂರಿನ ಕುಡಿಯುವ ನೀರಿಗೆ ಮೇಕೆದಾಟು ಆಗಬೇಕು. ಕೇಂದ್ರದಲ್ಲಿ ಮೇಕೆದಾಟುಗೆ ಅ‌ನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಮುಖ್ಯಮಂತ್ರಿಗಳು ಸಂಸದ ತೇಜಸ್ವಿಸೂರ್ಯ ಅವರ ಸರಣಿ ವೈಫಲ್ಯಗಳನ್ನು ಜನರ ಮುಂದಿಟ್ಟು ಸೌಮ್ಯರೆಡ್ಡಿ ಗೆಲ್ಲಿಸುವಂತೆ ಕರೆ [&#8230;]]]></description>
										<content:encoded><![CDATA[
<h2 class="wp-block-heading"><strong>ಬೆಂಗಳೂರಿನ ಕುಡಿಯುವ ನೀರಿಗೆ ಮೇಕೆದಾಟು ಆಗಬೇಕು. ಕೇಂದ್ರದಲ್ಲಿ ಮೇಕೆದಾಟುಗೆ ಅ‌ನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು: ಸಿ.ಎಂ ಕರೆ</strong></h2>



<p>ಬೆಂಗಳೂರು ಏ 8: ಬೆಂಗಳೂರಿನ ಕುಡಿಯುವ ನೀರಿಗೆ ಮೇಕೆದಾಟು ಆಗಬೇಕು. ಕೇಂದ್ರದಲ್ಲಿ ಮೇಕೆದಾಟುಗೆ ಅ‌ನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.</p>



<p>ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ ಬಿರುಸಿನ ರೋಡ್ ಶೋ ನಡೆಸಿದ ಮುಖ್ಯಮಂತ್ರಿಗಳು ಸಂಸದ ತೇಜಸ್ವಿಸೂರ್ಯ ಅವರ ಸರಣಿ ವೈಫಲ್ಯಗಳನ್ನು ಜನರ ಮುಂದಿಟ್ಟು ಸೌಮ್ಯರೆಡ್ಡಿ ಗೆಲ್ಲಿಸುವಂತೆ ಕರೆ ನೀಡಿದರು.</p>



<p>ಬೆಂಗಳೂರು ದಕ್ಷಿಣದಲ್ಲಿ ಕುಡಿಯುವ ನೀರಿಗೆ ಕಾವೇರಿ ಸಂಪರ್ಕ ಇನ್ನಷ್ಟು ಆಗಬೇಕಿದೆ. ಈಗ ಆಗಿರುವುದು ಶೇ60 ರಷ್ಟು ಮಾತ್ರ. ಆದ್ದರಿಂದ ಮೇಕೆದಾಟು ಯೋಜನೆ ಜಾರಿಯಾಗಬೇಕಾದರೆ ಸೌಮ್ಯರೆಡ್ಡಿ ಅವರ ಗೆಲುವು ಅತ್ಯಗತ್ಯ ಎಂದರು.</p>



<p>ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ. ಕೋರ್ಟ್ ನಲ್ಲಿ ನ್ಯಾಯ ಸಿಗುತ್ತದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಜನತಾ ನ್ಯಾಯಾಲಯದಲ್ಲಿ ನೀವು ನ್ಯಾಯ ಕೊಡಿ ಎಂದು ಸಿ.ಎಂ.ಸಿದ್ದರಾಮಯ್ಯ ಮನವಿ ಮಾಡಿದರು.</p>



<p>ಕೇಂದ್ರದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿಯಲ್ಲ; ಮೋದಿ ಮತ್ತು ಅವರ ಚೇಲಾಗಳು: ಸುಬ್ರಮಣಿಯನ್‌ ಸ್ವಾಮಿ</p>



<figure class="wp-block-embed is-type-wp-embed is-provider-peepal-media wp-block-embed-peepal-media"><div class="wp-block-embed__wrapper">
<blockquote class="wp-embedded-content" data-secret="CUTNivhA5g"><a href="https://peepalmedia.com/india-has-emergency-likesituation-subramanian-swamy/">ಕೇಂದ್ರದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿಯಲ್ಲ; ಮೋದಿ ಮತ್ತು ಅವರ ಚೇಲಾಗಳು: ಸುಬ್ರಮಣಿಯನ್‌ ಸ್ವಾಮಿ</a></blockquote><iframe class="wp-embedded-content" sandbox="allow-scripts" security="restricted"  title="&#8220;ಕೇಂದ್ರದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿಯಲ್ಲ; ಮೋದಿ ಮತ್ತು ಅವರ ಚೇಲಾಗಳು: ಸುಬ್ರಮಣಿಯನ್‌ ಸ್ವಾಮಿ&#8221; &#8212; Peepal Media" src="https://peepalmedia.com/india-has-emergency-likesituation-subramanian-swamy/embed/#?secret=uZq2llLWYY#?secret=CUTNivhA5g" data-secret="CUTNivhA5g" width="600" height="338" frameborder="0" marginwidth="0" marginheight="0" scrolling="no"></iframe>
</div></figure>
]]></content:encoded>
					
		
		
			</item>
		<item>
		<title>ಬರ ಪರಿಹಾರ ನೀಡದೆ ಸುಳ್ಳು ಹೇಳಿದ ಅಮಿತ್ ಶಾ, ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು: ಮುಖ್ಯಮಂತ್ರಿ</title>
		<link>https://peepalmedia.com/state-should-teach-a-lesson-to-centre-and-liar-amit-shah-cm/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 03 Apr 2024 07:42:46 +0000</pubDate>
				<category><![CDATA[ಮೈಸೂರು]]></category>
		<category><![CDATA[CM]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37901</guid>

					<description><![CDATA[ಮೈಸೂರು, ಏಪ್ರಿಲ್ 03: ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯ ಪ್ರವಾಸ ಮಾಡಿ ಬರ ಕುರಿತಂತೆ ವರದಿ ನೀಡಿದೆ. ಈ ತಿಂಗಳಲ್ಲಿಯೇ ಮೂರು ಮನವಿಗಳನ್ನು ಸಲ್ಲಿಸಿದ್ದೇವೆ. ನಂತರ ಡಿಸೆಂಬರ್ 19ರಂದು [&#8230;]]]></description>
										<content:encoded><![CDATA[
<p>ಮೈಸೂರು, ಏಪ್ರಿಲ್ 03: ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>



<p>ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.</p>



<p>ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯ ಪ್ರವಾಸ ಮಾಡಿ ಬರ ಕುರಿತಂತೆ ವರದಿ ನೀಡಿದೆ. ಈ ತಿಂಗಳಲ್ಲಿಯೇ ಮೂರು ಮನವಿಗಳನ್ನು ಸಲ್ಲಿಸಿದ್ದೇವೆ. ನಂತರ ಡಿಸೆಂಬರ್ 19ರಂದು ನಾನು ಖುದ್ದು ಪ್ರಧಾನ ಮಂತ್ರಿಗಳನ್ನು ಹಾಗೂ 20ರಂದು ಅಮಿತ್ ಶಾ ಅವರನ್ನು ಭೇಟಿಯಾಗಿ, ರಾಜ್ಯದ ಬರ ಪರಿಸ್ಥಿತಿಯ ವಸ್ತುಸ್ಥಿತಿಯನ್ನು ತಿಳಿಸಿದ್ದೇನೆ. ಡಿಸೆಂಬರ್ 23ಕ್ಕೆ ಉನ್ನತ ಮಟ್ಟದ ಸಮಿತಿ ಸಭೆ ನಡೆಸುವುದಾಗಿ ಅಮಿತ್ ಶಾ ಅವರು ತಿಳಿಸಿದ್ದರು. ಮನವಿ ಸಲ್ಲಿಸಿ ಐದು ತಿಂಗಳು ಕಳೆದಿದ್ದರೂ ಅವತ್ತಿಂದ, ಇವತ್ತಿನವರೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರವನ್ನು ನೀಡದ ಇವರಿಗೆ ಯಾವ ನೈತಿಕತೆ ಇದೆ. ದೇಶದ ಗೃಹ ಸಚಿವರಾದ ಅಮಿತ್ ಶಾ ಸತ್ಯವನ್ನೂ ನಾಚಿಸುವಂತೆ ಅಪ್ಪಟ ಸುಳ್ಳು ಹೇಳಿದ್ದಾರೆ. ಈ ಎಲ್ಲ ಅಂಶಗಳನ್ನು ಸೂಕ್ತ ದಾಖಲಾತಿ ಗಳೊಂದಿಗೆ ನಿರೂಪಿಸಲು ಸಿದ್ಧವಿದ್ದು, ಕೇಂದ್ರದ ಈ ಧೋರಣೆಯನ್ನು ಪ್ರಶ್ನಿಸಿ, ನ್ಯಾಯಾಲಯದ ಕದವನ್ನೂ ತಟ್ಟಲಾಗಿದೆ ಎಂದರು.</p>



<p>ದೇಶದ ವಿವಿಧೆಡೆಗಳಲ್ಲಿ ಸಂಭವಿಸುವ ಪ್ರಕೃತಿ ವಿಕೋಪಗಳಿಗೆ ಪರಿಹಾರ ನೀಡಲೆಂದು 15ನೇ ಹಣಕಾಸು ಆಯೋಗದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯನ್ನು ಕೇಂದ್ರಕ್ಕೆ ನೀಡಲಾಗಿರುತ್ತದೆ. ಎನ್ ಡಿ ಆರ್ ಎಫ್ ಹಣ ರಾಜ್ಯಗಳಿಗೆ ಸೇರಿದ್ದು. ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದರು.</p>
]]></content:encoded>
					
		
		
			</item>
		<item>
		<title>ಅಮಿತ್ ಶಾ ಮಹಾನ್ ಸುಳ್ಳ: ಸಿ.ಎಂ. ಸಿದ್ದರಾಮಯ್ಯ</title>
		<link>https://peepalmedia.com/amit-shah-is-biggest-liar-says-cm/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 02 Apr 2024 14:36:22 +0000</pubDate>
				<category><![CDATA[ರಾಜ್ಯ]]></category>
		<category><![CDATA[amit shah]]></category>
		<category><![CDATA[CM]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37872</guid>

					<description><![CDATA[ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಮನಗರದಲ್ಲಿ ಬಹಿರಂಗವಾಗಿ ಹೇಳಿದ ಸುಳ್ಳನ್ನು ಕೇಳಿ ಶಾಕ್ ಆದ ಸಿದ್ದರಾಮಯ್ಯ ಅವರು, ಇಂಥಾ ಸುಳ್ಳನ್ನಾ ಹೇಳೋದು? ಎಂದು ಮೈಸೂರು ಸಭೆಯಲ್ಲಿ ಆಶ್ಚರ್ಯ ವ್ಯಕ್ತಪಡಿಸಿದರು. ಅಮಿತ್ ಶಾ ಅವರು ಸುಳ್ಳು ಹೇಳೋದು ನನಗೇನೂ ಆಶ್ಚರ್ಯ ಆಗಿಲ್ಲ, ಅವರ ಸುಳ್ಳುಗಳು ಹೊಸದೇನೂ ಅಲ್ಲ. ಆದರೆ ಇಂಥಾ ಸುಳ್ಳಾ ಹೇಳೋದು ಎಂದು ಮೈಸೈರಿನಲ್ಲಿ ನಡೆದ ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಅಮಿತ್ ಶಾ ಅವರನ್ನು ಲೇವಡಿ ಮಾಡಿದರು. ರಾಜ್ಯದಲ್ಲಿ ಬರ [&#8230;]]]></description>
										<content:encoded><![CDATA[
<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಮನಗರದಲ್ಲಿ ಬಹಿರಂಗವಾಗಿ ಹೇಳಿದ ಸುಳ್ಳನ್ನು ಕೇಳಿ ಶಾಕ್ ಆದ ಸಿದ್ದರಾಮಯ್ಯ ಅವರು, ಇಂಥಾ ಸುಳ್ಳನ್ನಾ ಹೇಳೋದು? ಎಂದು ಮೈಸೂರು ಸಭೆಯಲ್ಲಿ ಆಶ್ಚರ್ಯ ವ್ಯಕ್ತಪಡಿಸಿದರು.</p>



<p>ಅಮಿತ್ ಶಾ ಅವರು ಸುಳ್ಳು ಹೇಳೋದು ನನಗೇನೂ ಆಶ್ಚರ್ಯ ಆಗಿಲ್ಲ, ಅವರ ಸುಳ್ಳುಗಳು ಹೊಸದೇನೂ ಅಲ್ಲ. ಆದರೆ ಇಂಥಾ ಸುಳ್ಳಾ ಹೇಳೋದು ಎಂದು ಮೈಸೈರಿನಲ್ಲಿ ನಡೆದ ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಅಮಿತ್ ಶಾ ಅವರನ್ನು ಲೇವಡಿ ಮಾಡಿದರು.</p>



<p>ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯ ಪ್ರವಾಸ ಮಾಡಿ ಬರ ಕುರಿತಂತೆ ವರದಿ ನೀಡಿದೆ. ಆದರೂ ಅವತ್ತಿಂದ , ಇವತ್ತಿನವರೆಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಬರ ಪರಿಹಾರದ ಒಂದೇ ಒಂದು ರೂಪಾಯಿಯನ್ನೂ ಕೊಡಲಿಲ್ಲ. ಈಗ ಬಂದು ಎಂಥಾ ಸುಳ್ಳು ಭಾಷಣ ಮಾಡಿದ್ದಾರೆ ನೋಡಿ ಎಂದರು.</p>



<p>ಮೋದಿ ಮತ್ತು ಅಮಿತ್ ಶಾ ಜೋಡಿ ಪ್ರವಾಹ ಬಂದಾಗ ಬರಲಿಲ್ಲ, ಬರಗಾಲ ಬಂದರೂ ಬರಲಿಲ್ಲ. ರಾಜ್ಯಕ್ಕೆ ಸಮಸ್ಯೆ ಆದಾಗಲೆಲ್ಲಾ ರಾಜ್ಯಕ್ಕೆ ತಲೆ ಹಾಕದವರು ಚುನಾವಣೆ ಬಂದಾಗ ಮಾತ್ರ ಓಡೋಡಿ‌ ಓಡೋಡಿ ಬಂದಿದ್ದಾರೆ.</p>



<p>ಯಾವ ಮುಖ ಹೊತ್ತು ಮೋದಿ, ಅಮಿತ್ ಶಾ ರಾಜ್ಯದಲ್ಲಿ ಮೆರವಣಿಗೆ ಮಾಡ್ತಾರೆ ? ರಾಜ್ಯದ ಜನರಿಗೆ ಇಷ್ಟು ದೊಡ್ಡ ಮಟ್ಟದ ದ್ರೋಹ ಎಸಗಿದ ಇವರನ್ನು ಕರೆಸಿ ಮೆರವಣಿಗೆ ಮಾಡ್ತಾರಲ್ಲಾ , ಬಿಜೆಪಿ-ಜೆಡಿಎಸ್ ನವರಿಗೆ ಮರ್ಯಾದೆ ಇಲ್ವಾ ಎಂದು ಪ್ರಶ್ನಿಸಿದರು.</p>
]]></content:encoded>
					
		
		
			</item>
		<item>
		<title>ಮೋದಿ ಪ್ರವಾಹ ಬಂದಾಗ, ಬರಗಾಲ ಬಂದಾಗ, ತೆರಿಗೆಯಲ್ಲಿ ಅನ್ಯಾಯವಾದಾಗ ಬರಲಿಲ್ಲ, ಈಗ ಚುನಾವಣೆ ಬಂದಾಗ ಬಂದಿದ್ದಾರೆ: ಸಿಎಮ್</title>
		<link>https://peepalmedia.com/modi-come-to-karnataka-only-when-there-is-election/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 02 Apr 2024 10:30:08 +0000</pubDate>
				<category><![CDATA[ಮೈಸೂರು]]></category>
		<category><![CDATA[CM]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37867</guid>

					<description><![CDATA[ಮೈಸೂರು ಏ 2: ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಪಾರ್ಲಿಮೆಂಟಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.‌ ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ ಬಂದು ಶ್ರಮದಿಂದ ಮೇಲೆ ಬಂದ ಕಾರ್ಯಕರ್ತ. [&#8230;]]]></description>
										<content:encoded><![CDATA[
<p>ಮೈಸೂರು ಏ 2: ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಪಾರ್ಲಿಮೆಂಟಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.</p>



<p>ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.‌</p>



<p>ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ ಬಂದು ಶ್ರಮದಿಂದ ಮೇಲೆ ಬಂದ ಕಾರ್ಯಕರ್ತ. ಇವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರವನ್ನು ವ್ಯಾಪಕವಾಗಿ ಮಾಡುತ್ತಿದ್ದಾರೆ. ಆದರೆ, ಎಂ.ಲಕ್ಷ್ಮಣ್ ಅವರು ಅಪ್ಪಟ ಒಕ್ಕಲಿಗರು. ಬಿಜೆಪಿ ಒಕ್ಕಲಿಗರಿಗೆ ಟಿಕೆಟ್ ತಪ್ಪಿಸಿದೆ ಎನ್ನುವ ಅಸಮಾಧಾನ ಹಲವರಲ್ಲಿದೆ. ಆ ಕಾರಣಕ್ಕೇ ಲಕ್ಷ್ಮಣ್ ಅವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರ ಮಾಡುತ್ತಿದ್ದಾರೆ. ಈ ಸುಳ್ಳು ಮತ್ತು ಅಪಪ್ರಚಾರವನ್ನು ನಂಬಬೇಡಿ ಎಂದರು.</p>



<p>ಮೋದಿಯವರು ಈ ಹತ್ತು ವರ್ಷದಲ್ಲಿ ಸುಳ್ಳು ಹೇಳಿ ಭಾರತೀಯರನ್ನು ಮರಳು ಮಾಡಿದ್ದು ಬಿಟ್ಟರೆ, ಭಾರತೀಯರ ಬದುಕು ಸುಧಾರಿಸುವ ಒಂದೇ ಒಂದು ಕಾರ್ಯಕ್ರಮವನ್ನೂ ಮಾಡಲಿಲ್ಲ ಏಕೆ ? ಹತ್ತು ವರ್ಷದಲ್ಲಿ ಜನರ, ರಾಜ್ಯದ ಸಮಸ್ಯೆಗಳಲ್ಲಿ ಒಂದೇ ಒಂದನ್ನಾದರೂ ಬಗೆಹರಿಸಿದರಾ ? ಯಾವುದನ್ನೂ ಮಾಡದೆ ಹತ್ತು ವರ್ಷ ಮಾತಾಡ್ಕೊಂಡು ಕಾಲ ಕಳೆದರಲ್ಲಾ ಇದು ಸರಿನಾ ಎಂದು ಪ್ರಶ್ನಿಸಿದರು.</p>



<p>ವಿದೇಶದಿಂದ ಕಪ್ಪು ಹಣ ತಂದು ನಿಮ್ಮ ಖಾತೆಗೆ 15 ಲಕ್ಷ ರೂಪಾಯಿ ಹಾಕ್ತೀನಿ ಅಂದ್ರು ಹಾಕಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರು, ಹೊಸ ಉದ್ಯೋಗ ಬರುವುದಿರಲಿ, ಹಳೆ ಉದ್ಯೋಗಗಳೇ ನಷ್ಟ ಆದವು. ಇದೇ ಏನು ಅಚ್ಛೆ ದಿನ್ ? ಎಂದು ವ್ಯಂಗ್ಯವಾಡಿದರು.</p>



<p>ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಅಕ್ಕಿ, ಬೇಳೆ , ಎಣ್ಣೆ ಯಾವುದರ ಬೆಲೆಯೂ ಕಡಿಮೆ ಆಗಲಿಲ್ಲ. ಮೋದಿ ಪ್ರಕಾರ ಇದೇ ಅಚ್ಛೆ ದಿನ ಇರಬಹುದು. ಆದರೆ ನಿಜವಾದ ಅಚ್ಛೆ ದಿನ್ ನಿಮ್ಮಗಳಿಗೆ ಯಾರಿಗಾದರೂ, ಒಬ್ಬರಿಗಾದರೂ ಬಂದಿದೆಯಾ ಎಂದು ಪ್ರಶ್ನಿಸಿದರು.</p>



<p><strong>ಚುನಾವಣೆ ಬಂತು ನೋಡಿ- ರಾಜ್ಯಕ್ಕೆ ಮೋದಿ ಬಂದ್ರು ನೋಡಿ</strong></p>



<p>ನಮ್ಮ ನಾಡಿಗೆ ಪ್ರವಾಹ ಬಂದಾಗ ಮೋದಿ ಬರಲಿಲ್ಲ, ಬರಗಾಲ ಬಂದಾಗಲೂ ಮೋದಿ ಬರಲಿಲ್ಲ, ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ. ಚುನಾವಣೆ ಬಂತು ನೋಡಿ-ಮೋದಿ ರಾಜ್ಯಕ್ಕೆ ಬಂದ್ರು ನೋಡಿ ಎಂದರು.</p>



<p>ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ಸಿದ್ದರಾಮಯ್ಯರಿಗೆ ಗರ್ವ ಎನ್ನುತ್ತಿದ್ದಾರೆ ದೇವೇಗೌಡರು. ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ ಮಾಡುವ ವಿರೋಧ. ಯಾವುದೇ ಕಾರಣಕ್ಕೂ ನಮ್ಮದು ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ ಎಂದರು.</p>



<p>ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರನ್ನೂ ಬಳಸಿ ಬಿಸಾಲಿದ ಜೆಡಿಎಸ್, ನನ್ನನ್ನೂ ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ ಎಂದರು.</p>



<p>ಆದ್ದರಿಂದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ ಪ್ರಬುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಿ ಎಂದರು.</p>



<p>ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ ಅಭಿವೃದ್ಧಿ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಿ ಎಂದು ಪ್ರಶ್ನಿಸಿದರು.</p>



<p>ಬರೀ ಶ್ರೀಮಂತರು ಹೊಟ್ಟೆ ತುಂಬಿಸಿಕೊಂಡು ಮಲಗೋದಲ್ಲ. ಬಡವರೂ ರಾತ್ರಿ ಹೊಟ್ಟೆತುಂಬ ಊಟ ಮಾಡಿ ಮಲಗಬೇಕು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದೆವು. ನಮ್ಮ ಭಾಗ್ಯಗಳೆಲ್ಲಾ ಬಡವರ ಬದುಕಿಗೆ ಆಸರೆಯಾದವು ಎಂದರು.</p>
]]></content:encoded>
					
		
		
			</item>
		<item>
		<title>ಡಿಮಾನೆಟೈಸೇಷನ್‌ನಿಂದ ಲಾಭ ಆಗಿದ್ದು ಅಂಬಾನಿ-ಅದಾನಿಗೆ ಮಾತ್ರ: ಸಿಎಂ ಸಿದ್ಧರಾಮಯ್ಯ</title>
		<link>https://peepalmedia.com/only-ambani-adani-benefited-from-demonetisation-cm-siddaramaiah-1/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 01 Apr 2024 13:23:23 +0000</pubDate>
				<category><![CDATA[ರಾಜ್ಯ]]></category>
		<category><![CDATA[CM]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37857</guid>

					<description><![CDATA[ತಿ.ನರಸೀಪುರ ಏ 1: ದೇಶದ ಜನ ಈ ಬಾರಿ ನರೇಂದ್ರ ಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕ್ತಾರೆ. ಹೀಗಾಗಿ ಅವರಿಗೆ 200 ಸೀಟು ದಾಟುವುದೇ ಕಷ್ಟ ಎನ್ನುವ ವಾಸ್ತವದ ಮನವರಿಕೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿನ ನರಸೀಪುರ ವಿಧಾನಸಭಾ ಕ್ಷೇತ್ರದ ತಿ.ನರಸೀಪುರದಲ್ಲಿ ನಡೆದ ಸುನಿಲ್ ಬೋಸ್ ಪರ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ನರೇಂದ್ರ ಮೋದಿಯವರು‌ ಪ್ರಧಾನಿಯಾಗಿ 10 ವರ್ಷ ಆಯ್ತು. ಅವರು ಕೊಟ್ಟ ಭರವಸೆಯಲ್ಲಿ [&#8230;]]]></description>
										<content:encoded><![CDATA[
<p>ತಿ.ನರಸೀಪುರ ಏ 1: ದೇಶದ ಜನ ಈ ಬಾರಿ ನರೇಂದ್ರ ಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕ್ತಾರೆ. ಹೀಗಾಗಿ ಅವರಿಗೆ 200 ಸೀಟು ದಾಟುವುದೇ ಕಷ್ಟ ಎನ್ನುವ ವಾಸ್ತವದ ಮನವರಿಕೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.</p>



<p>ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿನ ನರಸೀಪುರ ವಿಧಾನಸಭಾ ಕ್ಷೇತ್ರದ ತಿ.ನರಸೀಪುರದಲ್ಲಿ ನಡೆದ ಸುನಿಲ್ ಬೋಸ್ ಪರ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.</p>



<p>ನರೇಂದ್ರ ಮೋದಿಯವರು‌ ಪ್ರಧಾನಿಯಾಗಿ 10 ವರ್ಷ ಆಯ್ತು. ಅವರು ಕೊಟ್ಟ ಭರವಸೆಯಲ್ಲಿ ಒಂದೇ ಒಂದನ್ನಾದ್ರೂ ಈಡೇರಿಸಿದ್ದಾರಾ ಹೇಳಿ. ಹೀಗಾಗಿ ದೇಶದ ಜನ ಈ ಬಾರಿ ನರೇಂದ್ರ ಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕ್ತಾರೆ. ಮೋದಿ ಬರೀ ಮಾತಲ್ಲಿ ಮನೆ ಕಟ್ಟಿದ್ದು ಸಾಕು ಎಂದು ದೇಶದ ಜನ ತೀರ್ಮಾನಿಸಿದ್ದಾರೆ ಎಂದರು.</p>



<p>ದೇಶದಲ್ಲಿರುವ ಕಪ್ಪು ಹಣವನ್ನೆಲ್ಲಾ ಕರಗಿಸ್ತೀನಿ ಎಂದು ಹೇಳಿ ಡಿಮಾನೆಟೈಸೇಷನ್ ಮಾಡಿದರು. ಆದರೆ ಇದರಿಂದ ಕಪ್ಪು ಹಣ ಕರಗಲಿಲ್ಲ. ಇದರಿಂದ ಲಾಭ ಆಗಿದ್ದು ಅಂಬಾನಿ-ಅದಾನಿಗೆ ಮಾತ್ರ. ನೋಟು ನಿಷೇಧಕ್ಕೂ ಮೊದಲು ಇವರ ಬಳಿ ಇದ್ದ ಆಸ್ತಿ, ನೋಟು ನಿಷೇಧದ ಬಳಿಕ ಅವರ ಆಸ್ತಿಯಲ್ಲಿ ಆದ ಏರಿಕೆಯನ್ನು ನೀವೇ ತುಲನೆ ಮಾಡಿ ಸರಿಯಾಗಿ ಅರ್ಥ ಮಾಡಿಕೊಳ್ಳಿ ಎಂದು ಕರೆ ನೀಡಿದರು.</p>



<p>ವಿದೇಶದಲ್ಲಿರುವ ಕಪ್ಪುಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು, ಹಾಕಿದ್ರಾ ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ್ರು, ಇವರ ಮಾತನ್ನು ನಂಬಿದ ದೇಶದ ಯುವಕ ಯುವತಿಯರು ಎಲ್ಲಿ ಉದ್ಯೋಗ ಎಂದರೆ ಪಕೋಡಾ ಮಾರಾಟ ಮಾಡಿ ಎಂದರು.</p>



<p>ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಅಂದ್ರು. ಆಯ್ತಾ ಯಾರದ್ದಾದರೂ ವಿಕಾಸ? ಅಚ್ಛೆ ದಿನ್ ಆಯೆಗಾ ಅಂದರು, ನಿಮ್ಮಲ್ಲಿ ಯಾರ ಬದುಕಲ್ಲಾದರೂ ಅಚ್ಚೆ ದಿನ್ ಬಂತಾ ಎಂದು ಪ್ರಶ್ನಿಸಿದರು.</p>



<p>ಭಾರತೀಯರನ್ನು ಕೇವಲ ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕನ್ನು ಹಾಳು ಮಾಡಿದ ಸುಳ್ಳುಕೋರರಿಗೆ ದೇಶದ ಪ್ರಜ್ಞಾವಂತ ಸಮುದಾಯ ತಕ್ಕ ಪಾಠ ಕಲಿಸಲಿದೆ ಎಂದರು.</p>



<p>ಕ್ಷೇತ್ರದ ಶಾಸಕರೂ ಸಮಾಜ ಕಲ್ಯಾಣ ಸಚಿವರೂ ಆದ ಹೆಚ್.ಸಿ‌.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ದ್ರುವನಾರಾಯಣ್ ಸೇರಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.</p>



<p>ಆಶ್ರಯ ಸಮಿತಿ ಅಧ್ಯಕ್ಷರಾದ ಯತೀಂದ್ರ ಸಿದ್ದರಾಮಯ್ಯ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್ ಸೇರಿ ವರುಣಾ ವಿಧಾನಸಭಾ ಕ್ಷೇತ್ರದ ಮುಖಂಡರು , ಬ್ಲಾಕ್ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಮತ್ತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸ್ಥಳೀಯ ನಾಯಕರುಗಳು ಸಭೆಯಲ್ಲಿ ಉಪಸ್ಥಿತರಿದ್ದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಶಪಥ ಮಾಡಿದರು.</p>
]]></content:encoded>
					
		
		
			</item>
	</channel>
</rss>
