<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>congrees &#8211; Peepal Media</title>
	<atom:link href="https://peepalmedia.com/tag/congrees/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 28 Apr 2025 13:06:05 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>congrees &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನು ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ: ಸಿದ್ದರಾಮಯ್ಯ ಗುಡುಗು</title>
		<link>https://peepalmedia.com/we-will-not-bowandnotdown-to-bjp-rss-threats-we-have-the-strength-to-confront-you-publicly-siddaramaiah-thunders/</link>
		
		<dc:creator><![CDATA[ಮಂಜುಳ ಹುಲಿಕುಂಟೆ]]></dc:creator>
		<pubDate>Mon, 28 Apr 2025 10:14:39 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[BELAGAVI]]></category>
		<category><![CDATA[central gover]]></category>
		<category><![CDATA[CM siddaramaiah]]></category>
		<category><![CDATA[congrees]]></category>
		<category><![CDATA[karnartaka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[price increase]]></category>
		<category><![CDATA[RSS]]></category>
		<guid isPermaLink="false">https://peepalmedia.com/?p=58008</guid>

					<description><![CDATA[ಬೆಳಗಾವಿ: ನಾವು ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ  ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು.  ಏಪ್ರಿಲ್ 28ರಂದು ಬೆಳಗಾವಿಯಲ್ಲಿ AICC ಆಯೋಜಿಸಿದ್ದ, ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.&#160; ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಪಡಿಸಿದ, ಬಿಜೆಪಿ [&#8230;]]]></description>
										<content:encoded><![CDATA[
<p><strong>ಬೆಳಗಾವಿ: </strong>ನಾವು ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ  ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. </p>



<p>ಏಪ್ರಿಲ್ 28ರಂದು ಬೆಳಗಾವಿಯಲ್ಲಿ AICC ಆಯೋಜಿಸಿದ್ದ, ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.&nbsp;</p>



<p>ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಪಡಿಸಿದ, ಬಿಜೆಪಿ ಕಿಡಿಗೇಡಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಬಿಜೆಪಿ-RSS ಗೆ ನೇರವಾಗಿ ಸವಾಲೆಸೆದು ಸೆಡ್ಡು ಹೊಡೆದರು.&nbsp;</p>



<p>ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ, ಭಾರತೀಯರ ಬದುಕನ್ನು ಬೆಲೆ ಏರಿಕೆಯಲ್ಲಿ ಬೇಯಿಸುತ್ತಾ, ಭಾರತೀಯ ಸಮಾಜವನ್ನು ಛಿದ್ರಗೊಳಿಸುತ್ತಾ, ಬಿರುಕು ಮೂಡಿಸುತ್ತಾ ಜನದ್ರೋಹಿಯಾಗಿ ವರ್ತಿಸುತ್ತಿರುವುದು ಬಿಟ್ಟರೆ ಜನರಿಗಾಗಿ ಬೇರೆ ಏನು ಮಾಡಿದ್ದೀರಿ ತೋರಿಸಿ ಎಂದು ಸವಾಲು ಹಾಕಿದರು.&nbsp;</p>



<p>ಭಾರತೀಯರು ಬ್ರಿಟೀಷರ ವಿರುದ್ಧ ಪ್ರಾಣತ್ಯಾಗ ಮಾಡಿ ಹೋರಾಡುತ್ತಿದ್ದಾಗ ನೀವು ಸಂಘ ಪರಿವಾರದವರು ಏನು ಕಡೆದು ಕಟ್ಟೆ ಹಾಕ್ತಿದ್ರಿ ? ಸ್ವಾತಂತ್ರ್ಯ. ಹೋರಾಟಕ್ಕೆ&nbsp; ಏಕೆ ಬರಲಿಲ್ಲ ? ಏನ್ ಮಾಡ್ತಾ ಕೂತಿದ್ರಿ ಆಗ ಎಂದು ಪ್ರಶ್ನಿಸಿದರು.&nbsp;</p>



<p>ಮೊನ್ನೆ ಕಾಶ್ಮೀರದಲ್ಲಿ ಅಮಾಯಕ ಭಾರತೀಯರನ್ನು, ಕರ್ನಾಟಕದ ಮೂವರು ಅಮಾಯಕರನ್ನು ರಾಜಾರೋಷವಾಗಿ ಗನ್ ಗಳ ಸಮೇತ ಬಂದು ಅಮಾನುಷವಾಗಿ ಹತ್ಯೆ ಮಾಡಿ ಹೋದರಲ್ಲಾ ಇದು ಕೇಂದ್ರ ಸರ್ಕಾರದ ಭದ್ರತಾ ಲೋಪ ಅಲ್ಲವಾ ? ಭಾರತೀಯರಿಗೆ ರಕ್ಷಣೆ ಕೊಡುವುದರಲ್ಲಿ ವಿಫಲ ಆಗಿರುವುದನ್ನು ನಾವು ಭಾರತೀಯರು&nbsp; ಪ್ರಶ್ನಿಸಬಾರದಾ ? ಪ್ರಶ್ನಿಸಿದರೆ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸ್ತೀರಾ ಎಂದು ಪ್ರಶ್ನಿಸಿದರು.&nbsp;</p>



<p>ಭಾರತಕ್ಕೆ ಸ್ವಾತಂತ್ರ್ಯ ಬಂದು 52 ವರ್ಷಗಳ ಕಾಲ RSS ಕಚೇರಿ ಮೇಲೆ ಭಾರತದ ಬಾವುಟ ಹಾರಿಸಲೇ ಇಲ್ಲ ನೀವು. ಇದಕ್ಕೂ ನಾಚಿಕೆ ಆಗುವುದಿಲ್ಲವೇ ನಿಮಗೆ ಎಂದು ಪ್ರಶ್ನಿಸಿದರು.&nbsp;</p>



<p>ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಆಧುನಿಕ ಭಾರತ ನಿರ್ಮಾಣದವರೆಗೂ ಬಿಜೆಪಿ, ಸಂಘ ಪರಿವಾರದ ಕೊಡುಗೆ ಏನಿದೆ ? ನಾಚಿಕೆ ಇಲ್ಲದೆ ದೇಶಭಕ್ತಿ ಬಗ್ಗೆ ಮಾತಾಡ್ತೀರಾ. ಭಾರತೀಯ ಸಮಾಜವನ್ನು ಬಿರುಕು ಮೂಡಿಸಿದ್ದು ಬಿಟ್ಟರೆ ಇಷ್ಟು ವರ್ಷಗಳ ನಿಮ್ಮ ಕೊಡುಗೆ ಭಾರತಕ್ಕೆ ಏನು ಕೊಟ್ಟಿದ್ದೀರಿ ಎಂದು ದೇಶದ ಜನಕ್ಕೆ ವಿವರಿಸಿ ಎಂದು ಸವಾಲು ಹಾಕಿದರು.</p>



<p>ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಅತ್ಯಂತ ಶ್ರೀಮಂತರ ಮೇಲೆ 32% ಟ್ಯಾಕ್ಸ್ ಇತ್ತು. ಮೋದಿ ಬಂದ ಮೇಲೆ ಅತ್ಯಂತ ಶ್ರೀಮಂತರ ಮೇಲಿನ ತೆರಿಗೆಯನ್ನು ಶೇ25 ಇಳಿಸಿದಿರಿ. ಬಡವರು, ಮಧ್ಯಮ ವರ್ಗದವರ ಮೇಲಿನ ತೆರಿಗೆಯನ್ನು ಹೆಚ್ಚಿಸಿದಿರಿ. ನಾಚಿಕೆ ಆಗುತ್ತಿಲ್ಲ ನಿಮಗೆ. ಬಡವರ, ಮಧ್ಯಮ ವರ್ಗದವರ ವಿರೋಧಿ ಬಿಜೆಪಿಯ ಆಡಳಿತವನ್ನು ಪ್ರಶ್ನಿಸಬಾರದಾ ? ಭಾರತೀಯರನ್ನು ನಿರಂತರ ಸುಳ್ಳುಗಳಲ್ಲಿ ಇನ್ನೂ ಎಷ್ಟು ವರ್ಷ ಮರಳು ಮಾಡ್ತೀರಿ. ಸತ್ಯ ಹೇಳಿ ಎಂದು ಪ್ರಶ್ನಿಸಿದರು.&nbsp;</p>



<p>ಭಾರತದ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಹೋರಾಟ ಹೊಸದಲ್ಲ. ಬ್ರಿಟೀಷರನ್ನೇ ಒದ್ದೋಡಿಸಿದ ನಮಗೆ ನೀವು ಬಿಜೆಪಿ-RSS ನ್ನೂ ಎದುರಿಸಿ ನಿಲ್ಲುವ ಶಕ್ತಿ ಇದೆ ಎಂದು ಎಚ್ಚರಿಕೆ ನೀಡಿದರು.&nbsp;</p>



<p>ನಾವು ಹಾಲಿನ ದರ 4 ರೂ ಹೆಚ್ಚಿಸಿ, ಇಡೀ 4 ರೂಪಾಯಿಯನ್ನು ಪೂರ್ತಿಯಾಗಿ ರೈತರಿಗೆ, ಗೋಪಾಲಕರಿಗೆ, ಗೋ ಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೀವಿ. ಇದರಲ್ಲಿ ಒಂದು ರೂಪಾಯಿ ಕೂಡ ಸರ್ಕಾರಕ್ಕೆ ಬರಲ್ಲ. ನಾವು 4 ರೂ ಹೆಚ್ಚಿಸಿದರೂ ಹಾಲಿನ‌ ದರ ಇಡೀ ದೇಶದಲ್ಲಿ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ಬಸ್ ದರ, ನೀರಿನ ದರ,&nbsp; ವಿದ್ಯುತ್ ದರ ಅಕ್ಕ ಪಕ್ಕದ ರಾಜ್ಯಗಳಿಗಿಂತ ಅತ್ಯಂತ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ನಿಮ್ಮ ಸುಳ್ಳು, ಅಪಪ್ರಚಾರ, ಬೆದರಿಕೆಗೆ ಈ ಸಿದ್ದರಾಮಯ್ಯ ಹೆದರುವವನಲ್ಲ. ನಿಮ್ಮನ್ನು ಮೆಟ್ಟಿ ನಿಲ್ತೀವಿ. ಕಾಂಗ್ರೆಸ್ ಸರ್ಕಾರಕ್ಕೆ ಆ ಶಕ್ತಿ ಇನ್ನೂ ಇದೆ ಎಂದರು.&nbsp;</p>



<p>ಅಕ್ಕಿ, ಎಣ್ಣೆ, ಚಿನ್ನ, ಬೆಳ್ಳಿ, ಗೊಬ್ಬರ, ಕಾಳು, ಬೇಳೆ, ಡೀಸೆಲ್, ಪೆಟ್ರೋಲ್, ಸಿಲಿಂಡರ್ ಎಲ್ಲದರ ಬೆಲೆ ಏರಿಸಿದ್ದೀರಿ. ಯಾವುದನ್ನು ಬಿಟ್ಟಿದ್ದೀರಿ ಹೇಳಿ ಎಂದರು.&nbsp;</p>



<p>ಕಚ್ಛಾ ತೈಲ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್, ಡೀಸೆಲ್ ಬೆಲೆ ಮಾತ್ರ ನಿರಂತರವಾಗಿ ಏರಿಕೆ ಮಾಡುತ್ತಲೇ ಇರುವುದು ಭಾರತೀಯರಿಗೆ ಬಿಜೆಪಿ ಬಗೆಯುತ್ತಿರುವ ಮಹಾ ದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದರು.&nbsp;</p>



<p>ಬಿಜೆಪಿ ನಿರಂತರವಾಗಿ ಭಾರತೀಯರನ್ನು ಸುಳ್ಳುಗಳ ಸರಮಾಲೆಯಲ್ಲಿ ಮುಳುಗಿಸಿ, ಸಮಾಜವನ್ನು ಬಿರುಕು ಮೂಡಿಸಿ ಕಾಲ ಕಳೆಯುತ್ತಿದೆ. ನಿಮಗೆ ತಕ್ಕ ಉತ್ತರ ಕೊಡುವ ಶಕ್ತಿ ನಮಗಿದೆ. ನಾವು ಉತ್ತರ ಕೊಡ್ತೀವಿ ಎಂದರು.</p>



<p>ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಎಚ್.ಸಿ. ಮಹದೇವಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಸತೀಶ್ ಜಾರಿಕಿಹೊಳಿ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಅನೇಕ ಸಚಿವರು, ಮುಖಂಡರು ಭಾಗಿಯಾಗಿದ್ದರು.&nbsp;</p>



<p></p>
]]></content:encoded>
					
		
		
			</item>
		<item>
		<title>ಕ್ಷೇತ್ರ ಪುನರ್ ವಿಂಗಡನೆ&#124;ಚೆನ್ನೈನಲ್ಲಿ ನಡೆಯುತ್ತಿರುವ ಸ್ಟಾಲಿನ್ ನೇತೃತ್ವದ ಸಭೆಯಲ್ಲಿ ಡಿ.ಕೆ.ಶಿ ಭಾಗಿ</title>
		<link>https://peepalmedia.com/constituency-redistribution-d-k-s-participates-in-stalin-led-meeting-in-chennai/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 22 Mar 2025 08:16:57 +0000</pubDate>
				<category><![CDATA[ರಾಜಕೀಯ]]></category>
		<category><![CDATA[chennai]]></category>
		<category><![CDATA[congrees]]></category>
		<category><![CDATA[Constituency redistribution]]></category>
		<category><![CDATA[dk shivakumar]]></category>
		<category><![CDATA[dks]]></category>
		<category><![CDATA[karnartaka]]></category>
		<category><![CDATA[karnataka]]></category>
		<category><![CDATA[M K STALIN]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[politics]]></category>
		<guid isPermaLink="false">https://peepalmedia.com/?p=55578</guid>

					<description><![CDATA[ಕ್ಷೇತ್ರ ಪುನರ್ ವಿಂಗಡನೆ ಕುರಿತಾಗಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕರ್ನಾಟಕದ ಪರವಾಗಿ ಡಿ.ಕೆ ಶಿವಕುಮಾರ್ ಭಾಗಿಯಾಗಿದ್ದಾರೆ.&#160; ಈ ಸಭೆಯಲ್ಲಿ 2026ಕ್ಕೆ ನಡೆಯಲಿರುವ ಕ್ಷೇತ್ರ ಪುನರ್ ವಿಂಗಡನೆ ರಾಜ್ಯಗಳ ಮೇಲೆ ಬೀರುವ ಪ್ರಭಾವಗಳ ಬಗ್ಗೆ&#160; ಚರ್ಚೆ ನಡೆಯಲಿದ್ದು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸಭೆಯಲ್ಲಿ ಭಾಗಿಯಾಗಿದ್ದಾರೆ.&#160; ಇನ್ನು ತೆಲಂಗಾಣದ ಮಾಜಿ ಸಚಿವ ಕೆ. ಟಿ ರಾಮರಾವ್ ಬಿಆರ್‌ಎಸ್‌ ಅನ್ನು ಪ್ರತಿನಿಧಿಸಿದರೆ, ವೈಎಸ್‌ಆರ್‌ಸಿಪಿ, [&#8230;]]]></description>
										<content:encoded><![CDATA[
<p>ಕ್ಷೇತ್ರ ಪುನರ್ ವಿಂಗಡನೆ ಕುರಿತಾಗಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕರ್ನಾಟಕದ ಪರವಾಗಿ ಡಿ.ಕೆ ಶಿವಕುಮಾರ್ ಭಾಗಿಯಾಗಿದ್ದಾರೆ.&nbsp;</p>



<p>ಈ ಸಭೆಯಲ್ಲಿ 2026ಕ್ಕೆ ನಡೆಯಲಿರುವ ಕ್ಷೇತ್ರ ಪುನರ್ ವಿಂಗಡನೆ ರಾಜ್ಯಗಳ ಮೇಲೆ ಬೀರುವ ಪ್ರಭಾವಗಳ ಬಗ್ಗೆ&nbsp; ಚರ್ಚೆ ನಡೆಯಲಿದ್ದು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸಭೆಯಲ್ಲಿ ಭಾಗಿಯಾಗಿದ್ದಾರೆ.&nbsp;</p>



<p>ಇನ್ನು ತೆಲಂಗಾಣದ ಮಾಜಿ ಸಚಿವ ಕೆ. ಟಿ ರಾಮರಾವ್ ಬಿಆರ್‌ಎಸ್‌ ಅನ್ನು ಪ್ರತಿನಿಧಿಸಿದರೆ, ವೈಎಸ್‌ಆರ್‌ಸಿಪಿ, ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಬಿಜೆಡಿ ಮತ್ತು ಎಎಪಿಯಂತಹ ರಾಜಕೀಯ ಪಕ್ಷಗಳ ನಾಯಕರು ಕೂಡಾ ಸಭೆಯಲ್ಲಿ ಭಾಗಿಯಾಗಿದ್ದಾರೆ.</p>



<p>ಜನಸೇನಾ ಸಂಸದ ತಂಗೆಲ್ಲ ಉದಯ್ ಶ್ರೀನಿವಾಸ್ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಊಹಾಪೋಹಗಳಿದ್ದವು. ಆದರೆ ಅವರು ತಮ್ಮ ನಾಯಕ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಪತ್ರವನ್ನು ಸ್ಟಾಲಿನ್‌ ಅವರಿಗೆ ಹಸ್ತಾಂತರಿಸುವುದಾಗಿ ಹೇಳಿದ್ದಾರೆ.</p>



<p>ಈ ನಡುವೆ ಡಿಎಂಕೆ ತನ್ನ ದ್ವಿಭಾಷಾ ಸೂತ್ರಕ್ಕೆ ಅನುಗುಣವಾಗಿ ಭಾಗವಹಿಸುವ ನಾಯಕರ ಹೆಸರುಗಳನ್ನು ಅವರ ಮಾತೃಭಾಷೆ ಮತ್ತು ಇಂಗ್ಲಿಷ್‌ನಲ್ಲಿ ನಾಮಫಲಕಗಳಲ್ಲಿ ಮುದ್ರಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಸಂದೇಶವನ್ನು ರವಾನಿಸಿದೆ. ಲೋಕಸಭಾ ಚುನಾವಣೆಯ ನಂತರ ಬಿಜೆಪಿಯ ವಿಪಕ್ಷಗಳ ಮೊದಲ ಸಭೆ ಇದಾಗಿರುವುದರಿಂದ ಮಹತ್ವವನ್ನು ಪಡೆದಿದೆ.</p>



<p>ಕ್ಷೇತ್ರ ಪುನರ್ ವಿಂಗಡಣೆಯನ್ನು ಕೇವಲ ಜನಸಂಖ್ಯೆಯ ಆಧಾರದ ಮೇಲೆ ನಡೆಸಿದರೆ ಅನೇಕ ರಾಜ್ಯಗಳು ತಮ್ಮ ರಾಜಕೀಯ ಪ್ರಾತಿನಿಧ್ಯವನ್ನು ಕಳೆದುಕೊಳ್ಳುತ್ತವೆ ಎಂಬ ಬಗ್ಗೆ ಚರ್ಚೆ ನಡೆಯಲಿದ್ದು, ಈ ರಾಜ್ಯಗಳೆಲ್ಲ ಸೇರಿ ಕ್ಷೇತ್ರ ಮರುವಿಂಗಡಣೆ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವ ಸಾಧ್ಯತೆಗಳಿವೆ.&nbsp;</p>



<p>ಕರ್ನಾಟಕದ ಪ್ರತಿನಿಧಿಯಾಗಿ ಚೆನ್ನೈಗೆ ಆಗಮಿಸಿದ್ದ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದು, ಕ್ಷೇತ್ರ ಪುನರ್ ವಿಂಗಡಣೆ ವಿವಾದ ಕುರಿತ ದಕ್ಷಿಣ ರಾಜ್ಯಗಳ ಪ್ರತಿನಿಧಿಗಳನ್ನು ಒಗ್ಗೂಡಿಸುವಲ್ಲಿ ಎಂ.ಕೆ ಸ್ಟಾಲಿನ್ ಮೊದಲ ಹೆಜ್ಜೆ ಇಟ್ಟಿದ್ದಾರೆ. ಅವರು ಈ ದೇಶದ ಒಕ್ಕೂಟ ಮತ್ತು ಸಂವಿಧಾನವನ್ನು ರಕ್ಷಿಸುತ್ತಿದ್ದಾರೆ ಎಂಬ ಹೆಮ್ಮೆ ನಮಗಿದೆ. ಮುಂದೆ ಏನು ಅನುಸರಿಸಬೇಕು ಹಾಗೂ ಹೇಗೆ ಒಗ್ಗೂಡಿ ಕೆಲಸ ಮಾಡಬೇಕು ಎಂಬುದರ ಕುರಿತು ನಾವೆಲ್ಲರೂ ಚರ್ಚಿಸುತ್ತೇವೆ ಎಂದರು.</p>



<p>ತೆಲಂಗಾಣ, ಪಂಜಾಬ್, ಕೇರಳದ ನಾಯಕರು ಸೇರಿದಂತೆ ನಾವೆಲ್ಲರೂ ಇಲ್ಲಿ ಸೇರಿಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ನಾವು ನಮ್ಮ ದೇಶವನ್ನು ನಿರಾಸೆಗೊಳಿಸುವುದಿಲ್ಲ ಮತ್ತು ನಮ್ಮ ಸ್ಥಾನಗಳನ್ನು ಕಡಿಮೆ ಮಾಡಲು ಸಾಧ್ಯವಿಲ್ಲ. ನಮ್ಮದು ಬಹಳ ಪ್ರಗತಿಪರ ರಾಜ್ಯವಾಗಿದ್ದು, ಆರ್ಥಿಕವಾಗಿ ಮತ್ತು ಸಾಕ್ಷರತೆಯಲ್ಲಿ ಗಟ್ಟಿಯಾಗಿ ನಿಂತಿದ್ದೇವೆ ಎಂದು ಹೇಳಿದರು.</p>



<p></p>
]]></content:encoded>
					
		
		
			</item>
		<item>
		<title>ಒಳಮೀಸಲಾತಿ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಹೆಚ್.ಸಿ. ಮಹದೇವಪ್ಪ ಅವರನ್ನು ಒತ್ತಾಯಿಸಿದ ಹೋರಾಟಗಾರರು</title>
		<link>https://peepalmedia.com/activists-urged-h-c-mahadevappa-to-discuss-internal-reservation-in-the-session/</link>
		
		<dc:creator><![CDATA[Peepal Media]]></dc:creator>
		<pubDate>Thu, 06 Mar 2025 08:49:04 +0000</pubDate>
				<category><![CDATA[ರಾಜ್ಯ]]></category>
		<category><![CDATA[congrees]]></category>
		<category><![CDATA[dalit activists]]></category>
		<category><![CDATA[HC Mahadevappa]]></category>
		<category><![CDATA[internal reservation]]></category>
		<category><![CDATA[karnartaka]]></category>
		<category><![CDATA[reservation]]></category>
		<guid isPermaLink="false">https://peepalmedia.com/?p=54871</guid>

					<description><![CDATA[ಒಳಮೀಸಲಾತಿ ಕುರಿತಂತೆ ಹೋರಾಟಗಾರರು ಸಮಾಜ ಕಲ್ಯಾಣ ಇಲಾಖೆಯ ಮಂತ್ರಿಗಳಾದ ಡಾ. ಹೆಚ್. ಸಿ ಮಹದೇವಪ್ಪರನ್ನು ಭೇಟಿ‌ ಮಾಡಿ ಒಳಮೀಸಲಾತಿ ಕುರಿತು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚಿಸಲು ಒತ್ತಾಯಿಸಿದರು.&#160; ಆಗಸ್ಟ್ 1 ರಂದು ಮಾನ್ಯ ಸುಪ್ರೀಂ ಕೋರ್ಟ್ ಒಳಮೀಸಲಾತಿ ಪರವಾದ ತೀರ್ಪು ನೀಡಿ, ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿತ್ತು.&#160; ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿ‌ಮಾಡುವಂತೆ ಕರ್ನಾಟಕ ಸರ್ಕಾರವನ್ನು ಒಳಮೀಸಲಾತಿ ಹೋರಾಟಗಾರರು ನಿರಂತರವಾಗಿ ಒತ್ತಾಯಿಸಿದ ಹಿನ್ನೆಲೆಯಲ್ಲಿ ಮಾನ್ಯ ನಿವೃತ್ತ ನ್ಯಾಯಾಧೀಶರಾದ ನಾಗಮೋಹನ್ ದಾಸ್ ರವರ ಏಕ‌ ಸದಸ್ಯ ಆಯೋಗವನ್ನು [&#8230;]]]></description>
										<content:encoded><![CDATA[
<p>ಒಳಮೀಸಲಾತಿ ಕುರಿತಂತೆ ಹೋರಾಟಗಾರರು ಸಮಾಜ ಕಲ್ಯಾಣ ಇಲಾಖೆಯ ಮಂತ್ರಿಗಳಾದ ಡಾ. ಹೆಚ್. ಸಿ ಮಹದೇವಪ್ಪರನ್ನು ಭೇಟಿ‌ ಮಾಡಿ ಒಳಮೀಸಲಾತಿ ಕುರಿತು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚಿಸಲು ಒತ್ತಾಯಿಸಿದರು.&nbsp;</p>



<p>ಆಗಸ್ಟ್ 1 ರಂದು ಮಾನ್ಯ ಸುಪ್ರೀಂ ಕೋರ್ಟ್ ಒಳಮೀಸಲಾತಿ ಪರವಾದ ತೀರ್ಪು ನೀಡಿ, ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿತ್ತು.&nbsp;</p>



<p>ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿ‌ಮಾಡುವಂತೆ ಕರ್ನಾಟಕ ಸರ್ಕಾರವನ್ನು ಒಳಮೀಸಲಾತಿ ಹೋರಾಟಗಾರರು ನಿರಂತರವಾಗಿ ಒತ್ತಾಯಿಸಿದ ಹಿನ್ನೆಲೆಯಲ್ಲಿ ಮಾನ್ಯ ನಿವೃತ್ತ ನ್ಯಾಯಾಧೀಶರಾದ ನಾಗಮೋಹನ್ ದಾಸ್ ರವರ ಏಕ‌ ಸದಸ್ಯ ಆಯೋಗವನ್ನು ರಚಿಸಿ 3 ತಿಂಗಳ ಕಾಲಾವಕಾಶ ನೀಡಿತ್ತು.&nbsp;</p>



<p>ಇದೀಗ ಆಯೋಗದ ಅವಧಿ ಮುಗಿಯುತ್ತಿರುವ‌ ಹಿನ್ನೆಲೆಯಲ್ಲಿ ಆಯೋಗದಿಂದ ಮಧ್ಯಂತರ ವರದಿಯನ್ನು ಸರ್ಕಾರ ಪಡೆದುಕೊಳ್ಳಬೇಕು, ಪ್ರಸ್ತುತ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಒಳಮೀಸಲಾತಿ ವರ್ಗೀಕರಣವನ್ನು ಮಾಡಬೇಕು ಹಾಗೂ ಶಾಶ್ವತ ಜಾರಿಗಾಗಿ ಸಮೀಕ್ಷೆ ನಡೆಸಲು ಸರ್ಕಾರ ಮುಂದಾಗಬೇಕೆಂದು ಸಚಿವರನ್ನು ಒತ್ತಾಯಿಸಿದರು.&nbsp;</p>



<p>ಇದೇ ಸಂದರ್ಭದಲ್ಲಿ ಬ್ಯಾಕ್ ಲಾಗ್ ಹುದ್ದೆಗಳನ್ನು ಒಳಮೀಸಲಾತಿ ಜಾರಿಯಾಗುವವರೆಗೂ ಯಾವ ಕಾರಣಕ್ಕೂ ಭರ್ತಿ‌ಮಾಡಲು ಮುಂದಾಗಬಾರದೆಂದು ಮನವಿ ಮಾಡಿಕೊಂಡರು.&nbsp;</p>



<p>ಇದಕ್ಕೆ ಸ್ಫಂದಿಸಿದ ಸಚಿವರು ಒಳಮೀಸಲಾತಿ ಜಾರಿಯಾಗುವವರೆಗೂ ಬ್ಯಾಕ್ ಹುದ್ದೆಗಳು ಸೇರಿದಂತೆ, ನೇಮಕಾತಿಗಳನ್ನು ಮಾಡುವುದಿಲ್ಲ ಎಂದು ಭರವಸೆ ನೀಡಿದರು, ಅಲ್ಲದೆ&nbsp; ಒಳಮೀಸಲಾತಿ‌ ಕುರಿತಂತೆ ಈಗ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚಿಸುವುದಾಗಿ ತಿಳಿಸಿದರು.</p>



<p>ಈ ವೇಳೆ ಒಳಮೀಸಲಾತಿ ಪರ ಹೋರಾಟಗಾರರಾದ ಬಸವರಾಜ್ ಕೌತಾಳ್, ಚಂದ್ರು ತರಹುಣಿಸೆ, ರಘು ಕಾಮಾಕ್ಷಿಪಾಳ್ಯ, ಮಂಜುನಾಥ್ ಮತ್ತಿತರರು ಹಾಜರಿದ್ದರು.</p>
]]></content:encoded>
					
		
		
			</item>
		<item>
		<title>ಕೊನೆಗೂ ಬಗೆಹರಿದ ಕೋಲಾರದ ಕಗ್ಗಂಟು: ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕೆ ವಿ ಗೌತಮ್‌ ಆಯ್ಕೆ</title>
		<link>https://peepalmedia.com/kolar-congress-mp-ticket-to-k-v-gautam/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 30 Mar 2024 06:24:08 +0000</pubDate>
				<category><![CDATA[ರಾಜಕೀಯ]]></category>
		<category><![CDATA[congrees]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[kolar]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37721</guid>

					<description><![CDATA[ಕೋಲಾರ: ಕಳೆದ ಕೆಲವು ದಿನಗಳಿಂದ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರ ಶನಿವಾರ ಅಂತಿಮವಾಗಿದೆ. ನಿನ್ನೆ ಅಭ್ಯರ್ಥಿಗಳ 9ನೇ ಪಟ್ಟಿ ಪ್ರಕಟವಾಗಿದ್ದು, ಈ ಪಟ್ಟಿಯಲ್ಲಿ ಕರ್ನಾಟಕ ಮೂರು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಘೋಷಣೆ ಮಾಡಲಾಗಿತ್ತು. ಇದರೊಂದಿಗೆ ರಾಜ್ಯದ 28 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು,ಕೋಲಾರದಿಂದ ಯಾರು ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಪ್ರಶ್ನೆಗೆ ಇಂದು ಕಾಂಗ್ರೆಸ್​​ ಉತ್ತರ ನೀಡಿದೆ. ಕೋಲಾರ ಕ್ಷೇತ್ರಕ್ಕೆ ಕೆ, ವಿ ಗೌತಮ್​​  ಅವರಿಗೆ ಕಾಂಗ್ರೆಸ್​​ [&#8230;]]]></description>
										<content:encoded><![CDATA[
<p>ಕೋಲಾರ: ಕಳೆದ ಕೆಲವು ದಿನಗಳಿಂದ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರ ಶನಿವಾರ ಅಂತಿಮವಾಗಿದೆ.</p>



<p>ನಿನ್ನೆ ಅಭ್ಯರ್ಥಿಗಳ 9ನೇ ಪಟ್ಟಿ ಪ್ರಕಟವಾಗಿದ್ದು, ಈ ಪಟ್ಟಿಯಲ್ಲಿ ಕರ್ನಾಟಕ ಮೂರು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಘೋಷಣೆ ಮಾಡಲಾಗಿತ್ತು. ಇದರೊಂದಿಗೆ ರಾಜ್ಯದ 28 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು,ಕೋಲಾರದಿಂದ ಯಾರು ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಪ್ರಶ್ನೆಗೆ ಇಂದು ಕಾಂಗ್ರೆಸ್​​ ಉತ್ತರ ನೀಡಿದೆ. ಕೋಲಾರ ಕ್ಷೇತ್ರಕ್ಕೆ ಕೆ, ವಿ ಗೌತಮ್​​  ಅವರಿಗೆ ಕಾಂಗ್ರೆಸ್​​ ಟಿಕೆಟ್​ ನೀಡಿದೆ.</p>



<p>ಪ್ರಸ್ತುತ ಕೆ ವಿ ಗೌತಮ್ ಸದ್ಯ ಬೆಂಗಳೂರು ಕೇಂದ್ರ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ. ಕೋಲಾರದ ಟಿಕೆಟ್‌ ವಿಷಯದಲ್ಲಿ ಎಚ್ಚರಿಕೆಯ ಹೆಜ್ಜೆಯಿಟ್ಟಿರುವ ಕಾಂಗ್ರೆಸ್‌ ಜಿಲ್ಲೆಯ ಯಾವುದೇ ಬಣಕ್ಕೆ ಸೇರದ ಮೂರನೇ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ರಾಜಕೀಯವಾಗಿ ಜಾಣ್ಮೆ ಪ್ರದರ್ಶಿಸಿದೆ.</p>


<div class="wp-block-image">
<figure class="aligncenter size-large is-resized"><img fetchpriority="high" decoding="async" width="774" height="1024" src="https://peepalmedia.com/wp-content/uploads/2024/03/image-7-774x1024.png" alt="" class="wp-image-37722" style="width:406px;height:auto" srcset="https://peepalmedia.com/wp-content/uploads/2024/03/image-7-774x1024.png 774w, https://peepalmedia.com/wp-content/uploads/2024/03/image-7-227x300.png 227w, https://peepalmedia.com/wp-content/uploads/2024/03/image-7-768x1016.png 768w, https://peepalmedia.com/wp-content/uploads/2024/03/image-7-1162x1536.png 1162w, https://peepalmedia.com/wp-content/uploads/2024/03/image-7-150x198.png 150w, https://peepalmedia.com/wp-content/uploads/2024/03/image-7-300x397.png 300w, https://peepalmedia.com/wp-content/uploads/2024/03/image-7-696x920.png 696w, https://peepalmedia.com/wp-content/uploads/2024/03/image-7-1068x1412.png 1068w, https://peepalmedia.com/wp-content/uploads/2024/03/image-7.png 1210w" sizes="(max-width: 774px) 100vw, 774px" /></figure></div>


<p><strong>ಕಾಂಗ್ರೆಸ್‌ ಅಭ್ಯರ್ಥಿಗಳ ಪೂರ್ಣ ಪಟ್ಟಿ ಇಲ್ಲಿದೆ</strong></p>



<p>ಚಿತ್ರದುರ್ಗ -ಬಿ.ಎನ್‌.ಚಂದ್ರಪ್ಪ<br>ಬೆಳಗಾವಿ – ಮೃಣಾಲ್‌ ಹೆಬ್ಬಾಳ್ಕರ್‌<br>ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ<br>ಬಾಗಲಕೋಟೆ – ಸಂಯುಕ್ತಾ ಪಾಟೀಲ್‌<br>ಧಾರವಾಡ – ವಿನೋದ್‌ ಅಸೂಟಿ<br>ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ<br>ಕೊಪ್ಪಳ – ರಾಜಶೇಖರ ಹಿಟ್ನಾಳ್‌<br>ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ<br>ಬೀದರ್‌ – ಸಾಗರ್‌ ಖಂಡ್ರೆ<br>ದಕ್ಷಿಣ ಕನ್ನಡ – ಪದ್ಮರಾಜ್‌<br>ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್‌ ಹೆಗ್ಡೆ<br>ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ<br>ಬೆಂಗಳೂರು ಸೆಂಟ್ರಲ್‌ -ಮನ್ಸೂರ್‌ ಅಲಿಖಾನ್‌<br>ಬೆಂಗಳೂರು ಉತ್ತರ -ಪ್ರೊ.ರಾಜೀವ್‌ ಗೌಡ<br>ಮೈಸೂರು -ಎಂ.ಲಕ್ಷ್ಮಣ್‌<br>ರಾಯಚೂರು -ಜಿ.ಕುಮಾರ ನಾಯಕ್‌<br>ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್‌<br>ಶಿವಮೊಗ್ಗ-ಗೀತಾ ಶಿವರಾಜ್​ ಕುಮಾರ್<br>ತುಮಕೂರು-ಎಸ್​ಪಿ ಮುದ್ದಹನುಮೇಗೌಡ<br>ಮಂಡ್ಯ-ವೆಂಕಟರಮಣೇ ಗೌಡ (ಸ್ಟಾರ್ ಚಂದ್ರು)<br>ಹಾಸನ- ಶ್ರೇಯಸ್ ಪಟೇಲ್<br>ಬೆಂಗಳೂರು ಗ್ರಾಮಾಂತರ-ಡಿಕೆ ಸುರೇಶ್<br>ವಿಜಯಪುರ- ರಾಜು​ ಅಲಗೂರು<br>ಹಾವೇರಿ- ಆನಂದ ಸ್ವಾಮಿ ಗಡ್ಡದೇವರ ಮಠ</p>



<p>ಚಿಕ್ಕಬಳ್ಳಾಪುರ -ರಕ್ಷಾ ರಾಮಯ್ಯ</p>



<p>ಚಾಮರಾಜನಗರ – ಸುನೀಲ್ ಬೋಸ್​</p>



<p>ಬಳ್ಳಾರಿ – ಇ. ತುಕರಾಂ</p>



<p>ಕೋಲಾರ- ಕೆ, ವಿ ಗೌತಮ್</p>
]]></content:encoded>
					
		
		
			</item>
		<item>
		<title>ತಾಂತ್ರಿಕ ದೋಷ: ಸೋನಿಯಾ ಮತ್ತು ರಾಹುಲ್ ಗಾಂಧಿ ವಿಮಾನ ಭೋಪಾಲದಲ್ಲಿ ತುರ್ತು ಭೂಸ್ಪರ್ಶ</title>
		<link>https://peepalmedia.com/technical-problem-in-flight-emergency-landing/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 18 Jul 2023 15:40:32 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[congrees]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Rahul Gandhi]]></category>
		<category><![CDATA[SoniaGandhi]]></category>
		<guid isPermaLink="false">https://peepalmedia.com/?p=23936</guid>

					<description><![CDATA[ಭೋಪಾಲ್: ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನವನ್ನು ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಈ ವಿಮಾನದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಇದ್ದರು. ತಾಂತ್ರಿಕ ದೋಷದಿಂದ ವಿಮಾನ ಭೋಪಾಲ್‌ನಲ್ಲಿ ಇಳಿಯಬೇಕಾಯಿತು. ಇನ್ನು ಇಬ್ಬರೂ ನಾಯಕರು ರಾತ್ರಿ 9.30ಕ್ಕೆ ನಿತ್ಯ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ಭೋಪಾಲ್‌ನ ರಾಜಾ ಭೋಜ್ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಈ ವಿಮಾನದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ [&#8230;]]]></description>
										<content:encoded><![CDATA[
<p>ಭೋಪಾಲ್: ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನವನ್ನು ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಈ ವಿಮಾನದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಇದ್ದರು. ತಾಂತ್ರಿಕ ದೋಷದಿಂದ ವಿಮಾನ ಭೋಪಾಲ್‌ನಲ್ಲಿ ಇಳಿಯಬೇಕಾಯಿತು.</p>



<p>ಇನ್ನು ಇಬ್ಬರೂ ನಾಯಕರು ರಾತ್ರಿ 9.30ಕ್ಕೆ ನಿತ್ಯ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ.</p>



<p>ಭೋಪಾಲ್‌ನ ರಾಜಾ ಭೋಜ್ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಈ ವಿಮಾನದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇದ್ದರು. ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ವಿಮಾನವನ್ನು ಭೋಪಾಲ್‌ನಲ್ಲಿ ಇಳಿಸಬೇಕಾಯಿತು. ಸೋನಿಯಾ ಮತ್ತು ರಾಹುಲ್ ಬೆಂಗಳೂರಿನಿಂದ ಚಾರ್ಟರ್ಡ್ ವಿಮಾನದಲ್ಲಿ ದೆಹಲಿಗೆ ತೆರಳುತ್ತಿದ್ದರು. ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೋಪಾಲ್ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ಇದೀಗ ಇಬ್ಬರೂ ನಾಯಕರು ಇಂಡಿಗೋ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.</p>



<p>ಇಂದು ಬೆಂಗಳೂರಿನಲ್ಲಿ ನಡೆದ 26 ವಿರೋಧ ಪಕ್ಷಗಳ ಸಭೆಯಲ್ಲಿ ಪಾಲ್ಗೊಂಡು ರಾಹುಲ್ ಮತ್ತು ಸೋನಿಯಾ ಗಾಂಧಿ ದೆಹಲಿಗೆ ವಾಪಸಾಗುತ್ತಿದ್ದರು.</p>
]]></content:encoded>
					
		
		
			</item>
		<item>
		<title>ಮಹದಾಯಿ ವಿವಾದಕ್ಕೆ ಕಾಂಗ್ರೆಸ್ ಕಾರಣ: ಸಿಎಂ ಬೊಮ್ಮಾಯಿ ಆರೋಪ</title>
		<link>https://peepalmedia.com/congress-is-responsible-for-the-mahadayi-controversy-cm-bommai-alleges/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 13 Dec 2022 12:37:04 +0000</pubDate>
				<category><![CDATA[ಚಾಮರಾಜನಗರ]]></category>
		<category><![CDATA[ರಾಜ್ಯ]]></category>
		<category><![CDATA[BASAVARAJ BOMMAYI]]></category>
		<category><![CDATA[chamarajanagara]]></category>
		<category><![CDATA[congrees]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Mahadayi controversy]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=18411</guid>

					<description><![CDATA[ಚಾಮರಾಜನಗರ: ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರಗಳ ನಡುವೆ ಹರಿಯುವ ಮಹಾದಾಯಿ ನದಿಯ ನೀರು ಹಂಚಿಕೆಗೆ ಸಂಬಂಧಿಸಿದಂತೆ ಮಹದಾಯಿ ವಿವಾದವಿದ್ದು, ಈ ವಿವಾದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ʼ ಮಹದಾಯಿ ವಿವಾದದ ಬಗ್ಗೆ ಜನರು ಮರೆತಿದ್ದಾರೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಅನಿಸುತ್ತದೆ, ಆದರೆ ಅವರಿಗೆ ಆ [&#8230;]]]></description>
										<content:encoded><![CDATA[
<p><strong>ಚಾಮರಾಜನಗರ:</strong> ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರಗಳ ನಡುವೆ ಹರಿಯುವ ಮಹಾದಾಯಿ ನದಿಯ ನೀರು ಹಂಚಿಕೆಗೆ ಸಂಬಂಧಿಸಿದಂತೆ ಮಹದಾಯಿ ವಿವಾದವಿದ್ದು, ಈ ವಿವಾದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.</p>



<p>ಈ ಕುರಿತು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ʼ ಮಹದಾಯಿ ವಿವಾದದ ಬಗ್ಗೆ ಜನರು ಮರೆತಿದ್ದಾರೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಅನಿಸುತ್ತದೆ, ಆದರೆ ಅವರಿಗೆ ಆ ಪಕ್ಷದ ಬಗ್ಗೆ ಚೆನ್ನಾಗಿ ತಿಳಿದಿದೆ. &#8216;ಮಹದಾಯಿʼ, ʼಕೃಷ್ಣಾʼ ಮತ್ತು ʼಎಸ್ಸಿ/ಎಸ್ಟಿʼ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಎರಡು ಸಮಾವೇಶಗಳನ್ನು ಘೋಷಿಸಿದೆ. ಆದರೆ ಮಹಾದಾಯಿ ಯೋಜನೆ ವಿವಾದಕ್ಕೀಡಾಗಲು ಕಾಂಗ್ರೆಸ್ ಪಕ್ಷವೇ ಕಾರಣ&#8217; ಎಂದು ಬೊಮ್ಮಾಯಿ ದೂರಿದ್ದಾರೆ.</p>



<p>ʼ ಕಾಂಗ್ರೆಸ್‌ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರು ಗೋವಾದಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ ಒಂದು ಹನಿ ನೀರನ್ನೂ ಸಹ ಎಲ್ಲಿಯೂ ತಿರುಗಿಸಲಾಗುವುದಿಲ್ಲ ಎಂದು ಘೋಷಿಸಿದ್ದರು. 2013 ರಿಂದ 2018 ರವರೆಗೆ ಅಧಿಕಾರದಲ್ಲಿದ್ದಾಗ ಅವರು ಏನನ್ನೂ ಮಾಡಲು ವಿಫಲರಾಗಿರುವ ಅವರಿಗೆ ಯಾವ ಹಕ್ಕುಗಳಿವೆ ಎಂದು ಕಿಡಿಕಾರಿದ್ದಾರೆ.</p>



<p>ʼಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಒಳ ಮೀಸಲಾತಿ ನೀಡುವುದಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಆದರೆ ಅವರು ಮುಖ್ಯಮಂತ್ರಿಯಾಗಿದ್ದಾಗ ವರದಿ ಮಂಡಿಸಲು ನಡೆದ ಸಮಾವೇಶದಲ್ಲಿ ಎಸ್ಸಿ/ಎಸ್ಟಿಯನ್ನು ಸಮುದಾಯದವರ ಸಮಸ್ಯೆ ನೋಡುವ ಗೋಜಿಗೆ ಹೋಗಲಿಲ್ಲ &nbsp;ಏಕೆ?ʼ ಎಂದು ಸಿಎಂ ಬೊಮ್ಮಾಯಿ ಪ್ರಶ್ನಿಸಿದ್ದಾರೆ.</p>



<p>ʼಅವರ ಎಲ್ಲಾ ಕಾರ್ಯಗಳು ಜನರ ಮನಸ್ಸಿನಲ್ಲಿವೆ. ಅದನ್ನು ಮುಚ್ಚಿಹಾಕಲು ಅಧಿವೇಶನವನ್ನು ನಡೆಸಲಾಯಿತು. ಅವರು ಜನರನ್ನು ಮತ್ತೆ ಮತ್ತೆ ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ. ಹಿಂದಿನ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಳ ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದರು, ಆದರೆ ಅದನ್ನು ಜಾರಿಗೆ ತರುವಂತೆ ಅವರು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆಯೇ? ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.</p>



<p>ನಂತರ ಎಸ್ಸಿ/ಎಸ್ಟಿ ಕೋಟಾದ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಹೇಳಿದ ಅವರು. ಪ್ರಸ್ತಾವನೆಯನ್ನು ಬುಧವಾರ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ಗುಜರಾತ್ ಫಲಿತಾಂಶದ ಬಗ್ಗೆ ರಾಜ್ಯ ಬಿಜೆಪಿ ಉತ್ಸಾಹ: 2023ಕ್ಕೆ ಸ್ಥಳೀಯ ಸಮಸ್ಯೆಗಳು ಮುಖ್ಯ ಎಂದ ಕಾಂಗ್ರೆಸ್</title>
		<link>https://peepalmedia.com/state-bjp-excited-about-gujarat-result-congress-says-local-issues-are-important-for-2023/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 09 Dec 2022 06:14:43 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[2023 Assembly Election]]></category>
		<category><![CDATA[B S YADIYURAPPA]]></category>
		<category><![CDATA[BASAVARAJ BOMMAYI]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[gujarath election]]></category>
		<category><![CDATA[himachal pradesh e;lection]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[siddaramayya]]></category>
		<guid isPermaLink="false">https://peepalmedia.com/?p=18009</guid>

					<description><![CDATA[ಬೆಂಗಳೂರು: ಗುಜತಾರ್‌ನಲ್ಲಿ ಬಿಜೆಪಿ ಗೆದ್ದಿರುವುದರಿಂದ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅಧಿಕಾರದ ಪಟ್ಟ ಏರುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಅಭಿಪ್ರಾಯ ಪಟ್ಟಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯ ಕಾಂಗ್ರೆಸ್‌ ಪಕ್ಷ, ಒಂದು ರಾಜ್ಯದ ಚುನಾವಣೆಗೂ, ಇನ್ನೊಂದು ರಾಜ್ಯದ ಚುನಾವಣೆಗೂ ಯಾವುದೇ ಸಂಬಂಧವಿಲ್ಲ, ಹೀಗಾಗಿ ಚುನಾವಣೆಗಳಿಗೆ ಮುಖ್ಯವಾಗಿ ಬೇಕಾಕಿರುವುದು ಅಲ್ಲಿನ ಸ್ಥಳಿಯ ಸಮಸ್ಯೆಗಳು ಎಂದು ಹೇಳಿದೆ. ಕರ್ನಾಟಕದ ಎರಡೂ ಪ್ರಮುಖ ಪಕ್ಷಗಳು ಗುರುವಾರದ ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಪ್ರೋತ್ಸಾಹವನ್ನು ಕಂಡಿವೆ. ಆಡಳಿತಾರೂಢ ಬಿಜೆಪಿ ಗುಜರಾತ್‌ನಲ್ಲಿ ತನ್ನ ಪ್ರಚಂಡ ಗೆಲುವಿನಿಂದ [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ಗುಜತಾರ್‌ನಲ್ಲಿ ಬಿಜೆಪಿ ಗೆದ್ದಿರುವುದರಿಂದ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅಧಿಕಾರದ ಪಟ್ಟ ಏರುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಅಭಿಪ್ರಾಯ ಪಟ್ಟಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯ ಕಾಂಗ್ರೆಸ್‌ ಪಕ್ಷ, ಒಂದು ರಾಜ್ಯದ ಚುನಾವಣೆಗೂ, ಇನ್ನೊಂದು ರಾಜ್ಯದ ಚುನಾವಣೆಗೂ ಯಾವುದೇ ಸಂಬಂಧವಿಲ್ಲ, ಹೀಗಾಗಿ ಚುನಾವಣೆಗಳಿಗೆ ಮುಖ್ಯವಾಗಿ ಬೇಕಾಕಿರುವುದು ಅಲ್ಲಿನ ಸ್ಥಳಿಯ ಸಮಸ್ಯೆಗಳು ಎಂದು ಹೇಳಿದೆ.</p>



<p>ಕರ್ನಾಟಕದ ಎರಡೂ ಪ್ರಮುಖ ಪಕ್ಷಗಳು ಗುರುವಾರದ ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಪ್ರೋತ್ಸಾಹವನ್ನು ಕಂಡಿವೆ. ಆಡಳಿತಾರೂಢ ಬಿಜೆಪಿ ಗುಜರಾತ್‌ನಲ್ಲಿ ತನ್ನ ಪ್ರಚಂಡ ಗೆಲುವಿನಿಂದ ಸ್ಫೂರ್ತಿ ಪಡೆದುಕೊಂಡಿದ್ದರೆ, ಕಾಂಗ್ರೆಸ್ ಪಕ್ಷವು ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಗೆಲುವಿನಿಂದ ಸ್ಪೂರ್ತಿ ಪಡೆದುಕೊಂಡಿದೆ ಎನ್ನಲಾಗಿದೆ.</p>



<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಕಾರ, ʼಗುಜರಾತ್ ಫಲಿತಾಂಶವು ಏಪ್ರಿಲ್ 2023 ರಲ್ಲಿ ಮತ ಚಲಾಯಿಸುವಾಗ ಕರ್ನಾಟಕದ ಚುನಾವಣಾ ಫಲಿತಾಂಶದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಹೀಗಾಗಿ ಇತರ ಪಕ್ಷಗಳು ಆಡಳಿತ ನಡೆಸುತ್ತಿರುವ ಸರ್ಕಾರಗಳ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದರೂ, ಜನರು ಬಿಜೆಪಿ ಸರ್ಕಾರಗಳನ್ನು ಬೆಂಬಲಿಸುವ ವಾತಾವರಣವಿದ. ಗುಜರಾತ್ ಫಲಿತಾಂಶವನ್ನು ನೋಡುವುದಾದರೆ, ಜನರು ಉತ್ತಮ ಆಡಳಿತಕ್ಕೆ ಪ್ರತಿಫಲ ನೀಡುತ್ತಾರೆ ಎಂದೆನಿಸುತ್ತಿದೆ ಎಂದು ಹೇಳಿದ್ದಾರೆ.</p>



<p>ʼಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಸಂಘಟನೆಯಿಂದಾಗಿ ಪಶ್ಚಿಮ ರಾಜ್ಯದಲ್ಲಿ ಸತತ ಏಳನೇ ಬಾರಿಗೆ ಬಿಜೆಪಿ ಅಧಿಕಾರ ಹಿಡಿಯಲು ಸಾಧ್ಯವಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.</p>



<p>ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಗುಜರಾತ್ ಫಲಿತಾಂಶವು ಮುಂದಿನ ಕರ್ನಾಟಕ &nbsp;ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಘಟಕಕ್ಕೆ 140 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆ ಮಾಡಿಸಿದೆ. ಹೀಗಾಗಿ ವಿರೋಧ ಪಕ್ಷಗಳು ಈಗಲಾದರೂ ರಾಜ್ಯದಲ್ಲಿ ಅಧಿಕಾರ ಪಡೆಯುವ ಬಗ್ಗೆ ಹಗಲುಗನಸು ಕಾಣುವುದನ್ನು ನಿಲ್ಲಿಸಬೇಕುʼ ಎಂದು ಹೇಳಿದ್ದಾರೆ.</p>



<p>ʼಗುಜರಾತ್ ಫಲಿತಾಂಶವು ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷವು ಯಾವುದೇ ಪ್ರಚಾರವಿಲ್ಲದೆ ಸುಲಭವಾಗಿ ಗೆಲ್ಲುತ್ತದೆ ಎಂದು ಅಭಿಪ್ರಾಪಟ್ಟಿದ್ದಾರೆ.</p>



<p>ʼಕರ್ನಾಟಕವು ಅತ್ಯಂತ ಭ್ರಷ್ಟ ಸರ್ಕಾರವನ್ನು ಹೊಂದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದು, &nbsp;ವಿಧಾನಸಭಾ ಚುನಾವಣೆಯ ಫಲಿತಾಂಶವು ಸ್ಥಳೀಯ ವಿಷಯಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಹೇಳಿದ್ದಾರೆ.</p>



<p>ಗುಜರಾತ್‌ ನಲ್ಲಿ ಆಮ್ ಆದ್ಮಿ ಪಕ್ಷವು ಕಾಂಗ್ರೆಸ್ ಮತಗಳನ್ನು ಕಬಳಿಸಿದೆ ಎಂದು ಆರೋಪಿಸಿದ ಸಿದ್ದರಾಮಯ್ಯನವರು, ʼಬಿಜೆಪಿಯೂ, ಎಎಪಿಗೆ ಹಣಕಾಸು ನೆರವು ನೀಡುವ ಮತ್ತು ಅದರ ಗೆಲುವನ್ನು ಖಚಿತಪಡಿಸಿಕೊಳ್ಳಲು ಮತಗಳನ್ನು ವಿಭಜಿಸುವ ತಂತ್ರವನ್ನು ಬಳಸಿದೆ ಎಂದು ಹೇಳಿದ್ದಾರೆ.</p>



<p>ಕರ್ನಾಟಕದಲ್ಲಿ &nbsp;ಜೆಡಿಎಸ್ ಅನ್ನು ಬಳಸುವ ಮೂಲಕ ಅದೇ ತಂತ್ರವನ್ನು ಅನುಸರಿಸಬಹುದು. ಆದರೆ ಅದು ಇಲ್ಲಿ ಕೆಲಸ ಮಾಡುವುದಿಲ್ಲʼ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಗುಜರಾತ್ ಚುನಾವಣೆ ಫಲಿತಾಂಶ: ಅನೇಕ ಕಾಂಗ್ರೆಸ್ ನಾಯಕರು ಬಿಜೆಪಿಗೆ ಪಲಾಯನ- ಸಚಿವ ಆರ್.ಅಶೋಕ್</title>
		<link>https://peepalmedia.com/gujarat-election-result-many-congress-leaders-fled-to-bjp-minister-r-ashok/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 09 Dec 2022 03:43:16 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[2023 Assembly Election]]></category>
		<category><![CDATA[B S YADIYURAPPA]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[gujarath election]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[r ashok]]></category>
		<guid isPermaLink="false">https://peepalmedia.com/?p=18000</guid>

					<description><![CDATA[ಬೆಂಗಳೂರು: 2023ರ ಮೊದಲಾರ್ಧದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದ್ದು, ಗುಜರಾತ್‌ ಚುನಾವಣೆಯಲ್ಲಿನ ಬಿಜೆಪಿಯ ಭರ್ಜರಿ ಗೆಲುವನ್ನು ನೋಡಿ, ಕಾಂಗ್ರೆಸ್ ನಾಯಕರು ಮತ್ತು ಶಾಸಕರು ಬಿಜೆಪಿಗೆ ಪಲಾಯನ ಮಾಡಲು ಬಯಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ʼಹಲವಾರು ಕಾಂಗ್ರೆಸ್ ನಾಯಕರಲ್ಲಿ ಸುಮಾರು 12 ಜನರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ, ಏಕೆಂದರೆ ಅವರು ತಮ್ಮ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಲು ಬಯಸುತ್ತಿದ್ದಾರೆʼ ಎಂದು ತಿಳಿಸಿದ್ದಾರೆ. ʼಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> 2023ರ ಮೊದಲಾರ್ಧದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದ್ದು, ಗುಜರಾತ್‌ ಚುನಾವಣೆಯಲ್ಲಿನ ಬಿಜೆಪಿಯ ಭರ್ಜರಿ ಗೆಲುವನ್ನು ನೋಡಿ, ಕಾಂಗ್ರೆಸ್ ನಾಯಕರು ಮತ್ತು ಶಾಸಕರು ಬಿಜೆಪಿಗೆ ಪಲಾಯನ ಮಾಡಲು ಬಯಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.</p>



<p>ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ʼಹಲವಾರು ಕಾಂಗ್ರೆಸ್ ನಾಯಕರಲ್ಲಿ ಸುಮಾರು 12 ಜನರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ, ಏಕೆಂದರೆ ಅವರು ತಮ್ಮ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಲು ಬಯಸುತ್ತಿದ್ದಾರೆʼ ಎಂದು ತಿಳಿಸಿದ್ದಾರೆ.</p>



<p>ʼಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಹಾಯ ಮಾಡಲಿಲ್ಲ.ಆದರ ಬದಲು ಎಎಪಿ ಕಾಂಗ್ರೆಸ್ ಮತಗಳನ್ನು ಪಡೆದುಕೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಎಎಪಿ ಸುಮಾರು 5 ಪ್ರತಿಶತದಷ್ಟು ಮತಗಳನ್ನು ಪಡೆದರೂ, ಕರ್ನಾಟಕದಲ್ಲೂ ಕಾಂಗ್ರೆಸ್ ನಿರ್ನಾಮವಾಗುತ್ತದೆʼ ಎಂದು ಟೀಕಿಸಿದ್ದಾರೆ.</p>



<p>ಗುರುವಾರ ಗುಜರಾತ್‌ ಚುನಾವಣೆಯ ಫಲಿತಾಂಶದ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರು,ʼ ಬಿಜೆಪಿ ಪಕ್ಷವು ರಾಜ್ಯದಲ್ಲೂ ತನ್ನ ಗುಜರಾತ್ ಸಾಧನೆಯನ್ನು ಪುನರಾವರ್ತಿಸಲಿದೆ, ಹಾಗೆಯೇ ಮುಂಬರುವ 224 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲೂ ಬಿಜೆಪಿ ಕಸದ ಬುಟ್ಟಿಗೆ: ರಾಜ್ಯ ಕಾಂಗ್ರೆಸ್‌ ಟೀಕೆ</title>
		<link>https://peepalmedia.com/like-himachal-pradesh-bjp-is-trash-in-karnataka-too-state-congress-criticizes/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 08 Dec 2022 13:59:08 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[gujarath election]]></category>
		<category><![CDATA[himachal pradesh election]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=17991</guid>

					<description><![CDATA[ಬೆಂಗಳೂರು: ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು(ಬಿಜೆಪಿ) ಜನರು ಹೇಗೆ ತಿರಸ್ಕರಿಸಿದ್ದಾರೆಯೋ, ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ರಾಜ್ಯದ ಜನತೆ ತಿರಸಕ್ಕರಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್‌ ಪಕ್ಷ ಟೀಕಿಸಿದೆ. ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕ, ಬಿಜೆಪಿ ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ. ಬಿಜೆಪಿಯ ದುರಾಡಳಿತವನ್ನು ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ ಎಂದು&#160; ವ್ಯಂಗಿಸಿದೆ. [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು(ಬಿಜೆಪಿ) ಜನರು ಹೇಗೆ ತಿರಸ್ಕರಿಸಿದ್ದಾರೆಯೋ, ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ರಾಜ್ಯದ ಜನತೆ ತಿರಸಕ್ಕರಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್‌ ಪಕ್ಷ ಟೀಕಿಸಿದೆ.</p>



<p>ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕ, ಬಿಜೆಪಿ ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ. ಬಿಜೆಪಿಯ ದುರಾಡಳಿತವನ್ನು ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ ಎಂದು&nbsp; ವ್ಯಂಗಿಸಿದೆ.</p>



<p>ಜನರ ಸ್ಪಂದನೆಯೇ ಇಲ್ಲದ ಖಾಲಿ ಕುರ್ಚಿಗಳ ಸಮಾವೇಶಗಳನ್ನು ಮಾಡಿದ ಬಿಜೆಪಿ ಪಕ್ಷ ಮತ್ತೆ ಗೆಲ್ಲುತ್ತೇವೆ ಎನ್ನುವುದು ಪರಮಹಾಸ್ಯ. ಕುರ್ಚಿಗಳು ಮತ ಹಾಕುವುದಿಲ್ಲ ಎಂಬುದನ್ನು ಬಿಜೆಪಿ ನಾಯಕರು ಮನಗಾಣಲಿ! ಪ್ರಧಾನಿಯ ಮೆಗಾ ರೋಡ್ ಶೋ ಹಿಮಾಚಲ ಪ್ರದೇಶದಲ್ಲಿ ವಿಫಲವಾಗಿದ್ದೇಕೆ? ತವರಿಗೆ ಮಾತ್ರ ಮೋದಿಯವರ ಪ್ರಭಾವ ಸೀಮಿತವಾಗಿದೆಯಲ್ಲವೇ ಎಂದು ರಾಜ್ಯ ಕಾಂಗ್ರೆಸ್‌ ಘಟಕ ಪ್ರಶ್ನಿಸಿದೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">&#39;<a href="https://twitter.com/BJP4Karnataka?ref_src=twsrc%5Etfw">@BJP4Karnataka</a> ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ.<br><br>ಬಿಜೆಪಿಯ ದುರಾಡಳಿತವನ್ನು<br>ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ.</p>&mdash; Karnataka Congress (@INCKarnataka) <a href="https://twitter.com/INCKarnataka/status/1600812627382665216?ref_src=twsrc%5Etfw">December 8, 2022</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
		<item>
		<title>ಕರ್ನಾಟಕದಲ್ಲಿ ಸುಮ್ಮನೆ ಚುನಾವಣೆ ಎದುರಿಸಿದರು ಕಾಂಗ್ರೆಸ್‌ ಗೆಲ್ಲುತ್ತೆ: ಸಿದ್ದರಾಮಯ್ಯ</title>
		<link>https://peepalmedia.com/siddaramaiah-congress-will-win-the-elections-in-karnatak/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 08 Dec 2022 08:00:59 +0000</pubDate>
				<category><![CDATA[ಮೈಸೂರು]]></category>
		<category><![CDATA[ರಾಜ್ಯ]]></category>
		<category><![CDATA[Aam Aadmi Party]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[gujarath election]]></category>
		<category><![CDATA[himachal pradesh election]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mysore]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[siddaramayya]]></category>
		<guid isPermaLink="false">https://peepalmedia.com/?p=17927</guid>

					<description><![CDATA[ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಸುಮ್ಮನೆ ಚುನಾವಣೆ ಎದುರಿಸಿದರೂ ಗೆಲ್ಲಲಿದೆ, ಇಲ್ಲಿ ಯಾವ ತಂತ್ರಗಾರಿಕೆಯ ಅವಶ್ಯಕತೆಯೂ ಇಲ್ಲ  ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಗುಜರಾತ್‌ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಮಾತನಾಡಿದ ಅವರು, ʼನನಗಿದ್ದ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇದೆ ಮತ್ತು ಗುಜರಾತ್‌ ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ [&#8230;]]]></description>
										<content:encoded><![CDATA[
<p><strong>ಮೈಸೂರು:</strong> ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಸುಮ್ಮನೆ ಚುನಾವಣೆ ಎದುರಿಸಿದರೂ ಗೆಲ್ಲಲಿದೆ, ಇಲ್ಲಿ ಯಾವ ತಂತ್ರಗಾರಿಕೆಯ ಅವಶ್ಯಕತೆಯೂ ಇಲ್ಲ  ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.</p>



<p>ಈ ಕುರಿತು ಗುಜರಾತ್‌ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಮಾತನಾಡಿದ ಅವರು, ʼನನಗಿದ್ದ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇದೆ ಮತ್ತು ಗುಜರಾತ್‌ ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬುದಾಗಿತ್ತು. ಗುಜರಾತ್‌ ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ, ಆಮ್‌ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ, ನಮ್ಮ ಮತಗಳನ್ನು ಪಡೆದುಕೊಂಡಿದ್ದಾರೆ, ಬಹುತೇಕ ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಕ್ಷ ನಮ್ಮ ಮತಗಳನ್ನೇ ಕಬಳಿಸಿದೆ. ಇದರಿಂದ ಗುಜರಾತ್‌ ನಲ್ಲಿ ಹಿನ್ನಡೆಯಾಗಿದೆ ಆದರೆ ಹಿಮಾಚಲ ಪ್ರದೇಶದಲ್ಲಿ ಈ ರೀತಿ ಆಗಿಲ್ಲ. ಕಾಂಗ್ರೆಸ್‌ ಪಕ್ಷ ಮುನ್ನಡೆಯಲ್ಲಿದೆ, ಹಾಗೆಯೇ ಕಾಂಗ್ರೆಸ್‌ ಬಹುಮತ ಪಡೆಯಲಿದೆ ಎಂಬ ಮಾಹಿತಿ ಇದೆ ಎಂದರು.&nbsp;</p>



<p>ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯದ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರಲ್ಲ. ಹಾಗೆ ಯೋಚಿಸುವುದಾದರೆ ದೆಹಲಿಯ ಪಾಲಿಕೆ ಚುನಾವಣೆಯ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪ್ರಭಾವ ಬೀರುತ್ತಾ? ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರದ ಚುನಾವಣೆಯ ಫಲಿತಾಂಶ ಬೇರೆ ಕಡೆ ಪ್ರಭಾವ ಬೀರುತ್ತದಾ? ಆಯಾ ರಾಜ್ಯದ ಸಮಸ್ಯೆಗಳು ಮತ್ತು ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ನಮ್ಮ ರಾಜ್ಯದಲ್ಲಿ ಅತೀ ಭ್ರಷ್ಟ ಸರ್ಕಾರವಿದೆ, ಇಲ್ಲಿ ಕಾಂಗ್ರೆಸ್‌ ಪಕ್ಷ ಸಂಘಟನಾ ದೃಷ್ಟಿಯಿಂದ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಗುಜರಾತ್‌ ಫಲಿತಾಂಶ ಇಲ್ಲಿನ ಚುನಾವಣೆಯ ಮೇಲೆ ಯಾವ ಪ್ರಭಾವ ಬೀರಲ್ಲ ಎಂದು ಸಿದ್ದರಾಮಯ್ಯ ಅಭಿಪ್ರಾಪಟ್ಟಿದ್ದಾರೆ.</p>



<p>ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇತ್ತು, ಬಿಜೆಪಿ ಸರ್ಕಾರದ ವಿರುದ್ಧ ಜನಾಕ್ರೋಶ ಇತ್ತು. ಹಾಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ ಸಿಗುವ ಸಾಧ್ಯತೆ ಇದೆ ಎಂಬ ಲೆಕ್ಕಾಚಾರ ಇತ್ತು, ಆದರೆ ಗುಜರಾತ್‌ ನಲ್ಲಿ ಆಮ್‌ ಆದ್ಮಿ ಪಕ್ಷ ಬಹಳಷ್ಟು ಹಣ ಖರ್ಚು ಮಾಡಿದೆ, ನನಗಿರುವ ಮಾಹಿತಿ ಪ್ರಕಾರ ಬಿಜೆಪಿ ಪಕ್ಷವೇ ಆಮ್‌ ಆದ್ಮಿ ಪಕ್ಷಕ್ಕೆ ಹಣ ನೀಡಿ ಕಾಂಗ್ರೆಸ್‌ ಮತಗಳನ್ನು ಒಡೆಯುವ ತಂತ್ರ ಮಾಡಿದೆ. ಕರ್ನಾಟಕದಲ್ಲಿ ಆಮ್‌ ಆದ್ಮಿ ಪಕ್ಷ ಇಲ್ಲ, ಹಾಗಾಗಿ ಜೆಡಿಎಸ್‌ ಜೊತೆ ಬಿಜೆಪಿ ರಾಜ್ಯದಲ್ಲಿ ತಂತ್ರಗಾರಿಕೆ ಮಾಡಬಹುದು, ಆದರೆ ಇದರಿಂದ ಯಾವ ಲಾಭ ಆಗಲ್ಲ ಎಂದರು.</p>



<p>ಕರ್ನಾಟಕದಲ್ಲೇ ಬೇರೆ ರೀತಿಯ ವಿಚಾರಗಳು ಇವೆ, ಎಲ್ಲಕ್ಕಿಂತ ಮುಖ್ಯವಾಗಿ ರಾಜ್ಯದಲ್ಲಿ ಪ್ರಬಲವಾದ ಆಡಳಿತ ವಿರೋಧಿ ಅಲೆ ಇದೆ. ಇಲ್ಲಿನ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ, ನಿಷ್ಕ್ರಿಯತೆ ಇವುಗಳು ಮುಖ್ಯವಾದುದು. ಲಂಚ ನೀಡದೆ ಯಾವ ಕೆಲಸಗಳು ಇಲ್ಲಿ ಆಗುತ್ತಿಲ್ಲ, 40% ಕಮಿಷನ್‌ ಗುಜರಾತ್‌ ನಲ್ಲಿ ಇದೆ ಎಂದು ಯಾರಾದರೂ ಹೇಳಿದ್ದರಾ? ಇದು ಇರುವುದು ರಾಜ್ಯದಲ್ಲಿ ಎಂದು ಟೀಕಿಸಿದ್ದಾರೆ.</p>



<p>ಜೆಡಿಎಸ್‌ ಪಕ್ಷ ರಾಜ್ಯದಲ್ಲಿ ಹೊಸದಾಗಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ, 1999 ರಿಂದಲೂ ಚುನಾವಣಾ ಅಖಾಡದಲ್ಲಿದೆ.</p>



<p>ಆಮ್‌ ಆದ್ಮಿ ಪಕ್ಷ ಗುಜರಾತ್‌ ನಲ್ಲಿ 10% ಮತ ಪಡೆದರೂ ಕೂಡ ಕಾಂಗ್ರೆಸ್‌ ನ ಗೆಲ್ಲುವ ಸೀಟುಗಳು ಕಡಿಮೆಯಾಗಿಬಿಡುತ್ತದೆ. ಆಮ್‌ ಆದ್ಮಿ ಪಕ್ಷ ಕಾಂಗ್ರೆಸ್‌ ಗಿಂತ ಹೆಚ್ಚು ಪ್ರಚಾರ ಮಾಡಿದರೂ ಕೇವಲ ಆರು ಸೀಟುಗಳನ್ನು ಗೆಲ್ಲಲಿದೆ. ಹೆಚ್ಚು ಹಣವನ್ನು ಆಮ್‌ ಆದ್ಮಿ ಪಕ್ಷ ಚುನಾವಣೆಗೆ ಖರ್ಚು ಮಾಡಿದೆ. ರಾಹುಲ್‌ ಗಾಂಧಿ ಅವರು ಭಾರತ ಐಕ್ಯತಾ ಯಾತ್ರೆಯಲ್ಲಿ ಇದ್ದುದ್ದರಿಂದ 2 ದಿನ ಅಷ್ಟೆ ಪ್ರಚಾರ ಮಾಡಲು ಹೋಗಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರು ಪ್ರಚಾರ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.</p>



<p>ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರಗಾರಿಕೆಯೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ. ನರೇಂದ್ರ ಮೋದಿ ಅವರ ಹವಾ ರಾಜ್ಯದಲ್ಲಿ ಇಲ್ಲ. ನರೇಂದ್ರ ಮೋದಿ ಅವರು ವಾಸ ಮಾಡುವ ದೆಹಲಿಯಲ್ಲೇ ಅವರ ಹವಾ ಇಲ್ಲ. ಇನ್ನು ಇಲ್ಲಿ ಇರುತ್ತಾ? ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.</p>
]]></content:encoded>
					
		
		
			</item>
	</channel>
</rss>
