<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>congress adhyaksha &#8211; Peepal Media</title>
	<atom:link href="https://peepalmedia.com/tag/congress-adhyaksha/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 30 Mar 2024 08:09:15 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>congress adhyaksha &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಚುನಾವಣೆ ಬಂದಾಗಲೆಲ್ಲ ಕುಮಾರಸ್ವಾಮಿಗೆ ಹಾರ್ಟ್‌ ಪ್ರಾಬ್ಲಮ್‌ ಬರುತ್ತೆ &#8211; ಶಾಸಕ ರಮೇಶ್ ಬಂಡಿಸಿದ್ದೇಗೌಡ ವ್ಯಂಗ್ಯ</title>
		<link>https://peepalmedia.com/kumaraswamy-always-gets-hospitalised-just-ahead-of-polls-taunts-karnataka-congress-mla/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 30 Mar 2024 08:09:14 +0000</pubDate>
				<category><![CDATA[ಮಂಡ್ಯ]]></category>
		<category><![CDATA[congress adhyaksha]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[kumaraswami]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37727</guid>

					<description><![CDATA[ಮಂಡ್ಯ, ಮಾರ್ಚ್ 30: ಕರ್ನಾಟಕದ ಕಾಂಗ್ರೆಸ್ ಶಾಸಕ ರಮೇಶ್ ಶನಿವಾರ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರನ್ನು ಲೇವಡಿ ಮಾಡಿದ್ದಾರೆ. ಚುನಾವಣೆಗೂ ಮುನ್ನ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗುತ್ತಾರೆ ಎಂದು ಅವರು ಸಭೆಯೊಂದರಲ್ಲಿ ಕುಮಾರಸ್ವಾಮಿಯವರ ಕಾಲೆಳೆದಿದ್ದಾರೆ. ಮಳವಳ್ಳಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ, &#8221;ಚುನಾವಣೆ ಹತ್ತಿರ ಬಂದಾಗಲೆಲ್ಲಾ ಕುಮಾರಸ್ವಾಮಿ ಅವರು ಹೃದಯ ಸಮಸ್ಯೆಯ ನೆಪದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಾರೆ&#8221; ಎಂದು ಹೇಳಿದರು ‘ಈ ಬಾರಿ ಕುಮಾರಸ್ವಾಮಿ ಅವರು ಹೃದಯ [&#8230;]]]></description>
										<content:encoded><![CDATA[
<p><br>ಮಂಡ್ಯ, ಮಾರ್ಚ್ 30: ಕರ್ನಾಟಕದ ಕಾಂಗ್ರೆಸ್ ಶಾಸಕ ರಮೇಶ್ ಶನಿವಾರ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರನ್ನು ಲೇವಡಿ ಮಾಡಿದ್ದಾರೆ. ಚುನಾವಣೆಗೂ ಮುನ್ನ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗುತ್ತಾರೆ ಎಂದು ಅವರು ಸಭೆಯೊಂದರಲ್ಲಿ ಕುಮಾರಸ್ವಾಮಿಯವರ ಕಾಲೆಳೆದಿದ್ದಾರೆ.</p>



<p>ಮಳವಳ್ಳಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ, &#8221;ಚುನಾವಣೆ ಹತ್ತಿರ ಬಂದಾಗಲೆಲ್ಲಾ ಕುಮಾರಸ್ವಾಮಿ ಅವರು ಹೃದಯ ಸಮಸ್ಯೆಯ ನೆಪದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಾರೆ&#8221; ಎಂದು ಹೇಳಿದರು</p>



<p>‘ಈ ಬಾರಿ ಕುಮಾರಸ್ವಾಮಿ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮೂರು ದಿನ ಆಸ್ಪತ್ರೆಯಲ್ಲಿದ್ದರು, ಇದಾದ ನಂತರ ಮರುದಿನವೇ ಪ್ರವಾಸಕ್ಕೆ ತೆರಳಿದರು. ಇದು ಹೇಗೆ ಸಾಧ್ಯ?’ ಎಂದು ಶಾಸಕ ರಮೇಶ್ ಪ್ರಶ್ನಿಸಿದರು.</p>



<p>&#8221;ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರಿಗೂ ಕುಮಾರಸ್ವಾಮಿಯಂತೆ ಹೃದಯ ಸಂಬಂಧಿ ಕಾಯಿಲೆ ಇದೆ. ಆದರೆ, ಚೆಲುವರಾಯಸ್ವಾಮಿ ಕಾಯಿಲೆಗೆ ಚಿಕಿತ್ಸೆ ಪಡೆದಾಗ ತಿಂಗಳುಗಟ್ಟಲೆ ಆಸ್ಪತ್ರೆಯಲ್ಲಿರಬೇಕಾಗುತ್ತದೆ.</p>



<p>ಅಷ್ಟಕ್ಕೂ ಎರಡು-ಮೂರು ದಿನದೊಳಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡು ಡಿಸ್ಚಾರ್ಜ್ ಆಗುವುದು ಸಾಧ್ಯವಾದರೆ ಅದರ ಬಗ್ಗೆ ತಿಳಿದುಕೊಳ್ಳಬೇಕು ಎಂದು ರಮೇಶ್ ಮತ್ತಷ್ಟು ವ್ಯಂಗ್ಯವಾಡಿದರು.</p>



<p>ಸಮಸ್ಯೆಗಳನ್ನು ಸೃಷ್ಟಿಸುವ ಜನರ ಮಾತಿಗೆ ಕಿವಿಗೊಡಬೇಡಿ, ಅಧಿಕಾರದಲ್ಲಿದ್ದಾಗ ಏನು ಮಾಡಿದ್ದೀರಿ ಎಂದು ಪ್ರಶ್ನಿಸಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಗಮನಾರ್ಹ ಅಂತರದಿಂದ ಗೆಲ್ಲಿಸಿ ಎಂದು ಅವರು ಮನವಿ ಮಾಡಿದರು.</p>



<p>ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಾರ್ಚ್ 21ರಂದು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದು ಅವರ ಮೂರನೇ ಶಸ್ತ್ರಚಿಕಿತ್ಸೆಯಾಗಿತ್ತು.</p>
]]></content:encoded>
					
		
		
			</item>
		<item>
		<title> ಕಾಂಗ್ರೆಸ್ಸಿನಿಂದ ಇಂದು 17 ಅಭ್ಯರ್ಥಿಗಳ ಪಟ್ಟಿ ಘೋಷಿಸುವ ಸಾಧ್ಯತೆ: ಕುಟುಂಬ ರಾಜಕಾರಣಕ್ಕೆ ಮಣೆ</title>
		<link>https://peepalmedia.com/congress-likely-to-announce-list-of-17-candidates-today-home-to-family-politics/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 20 Mar 2024 05:42:30 +0000</pubDate>
				<category><![CDATA[ಲೋಕಸಭೆ ಚುನಾವಣೆ -2024]]></category>
		<category><![CDATA[bengalure]]></category>
		<category><![CDATA[congress]]></category>
		<category><![CDATA[congress adhyaksha]]></category>
		<category><![CDATA[Congress candidate]]></category>
		<category><![CDATA[congress high command]]></category>
		<category><![CDATA[dk shivakumar]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[mallikarjun karge]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37218</guid>

					<description><![CDATA[ಬೆಂಗಳೂರು: ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗಾಗಿ ಮಂಗಳವಾರವಷ್ಟೇ ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ಚುನಾವಣಾ ಸಮಿತಿಯು ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮಗೊಳಿಸುವಲ್ಲಿ ಯಶಸ್ವಿಯಾಗಿದೆ ಎನ್ನಲಾಗಿದೆ. ಪಟ್ಟಿಯಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದ್ದು, ಐವರು ಸಚಿವರ ಮಕ್ಕಳಿಗೆ ಟಿಕೇಟ್‌ ನೀಡಲು ನಿರ್ಧರಿಸಲಾಗಿದೆ. ಇಂದು (ಬುಧವಾರ) ಬುಧವಾರ ಪಟ್ಟಿ ಪ್ರಕಟಿಸುವ ಸಾಧ್ಯತೆಯಿದೆ. ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕ್ಕರ್‌ ಪುತ್ರ ಮೃಣಾಲ್‌ಗೆ ಹಾಗೂ ಚಿಕ್ಕೋಡಿಯಿಂದ ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕಾಗೆ ಅವಕಾಶ ನೀಡಲಾಗಿದ್ದು, ಸಚಿವ ಶಿವಾನಂದ ಪಾಟೀಲ್‌ [&#8230;]]]></description>
										<content:encoded><![CDATA[
<p><strong>ಬೆಂಗಳೂರು</strong>: ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗಾಗಿ ಮಂಗಳವಾರವಷ್ಟೇ ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ಚುನಾವಣಾ ಸಮಿತಿಯು ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮಗೊಳಿಸುವಲ್ಲಿ ಯಶಸ್ವಿಯಾಗಿದೆ ಎನ್ನಲಾಗಿದೆ.</p>



<p>ಪಟ್ಟಿಯಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದ್ದು, ಐವರು ಸಚಿವರ ಮಕ್ಕಳಿಗೆ ಟಿಕೇಟ್‌ ನೀಡಲು ನಿರ್ಧರಿಸಲಾಗಿದೆ. ಇಂದು (ಬುಧವಾರ) ಬುಧವಾರ ಪಟ್ಟಿ ಪ್ರಕಟಿಸುವ ಸಾಧ್ಯತೆಯಿದೆ.</p>



<p> ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕ್ಕರ್‌ ಪುತ್ರ ಮೃಣಾಲ್‌ಗೆ ಹಾಗೂ ಚಿಕ್ಕೋಡಿಯಿಂದ ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕಾಗೆ ಅವಕಾಶ ನೀಡಲಾಗಿದ್ದು, ಸಚಿವ ಶಿವಾನಂದ ಪಾಟೀಲ್‌ ಪುತ್ರಿ ಸಂಯುಕ್ತ ಪಾಟೀಲ್‌ಗೆ ಬಾಗಲಕೋಟೆಯಿಂದ ಟಿಕೆಟ್‌ ನೀಡಲಾಗಿದೆ. ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನಗೆ ದಾವಣಗೆರೆಯಿಂದ ಹಾಗೂ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ಬೆಂಗಳೂರು ದಕ್ಷಿಣದಿಂದ ಟಿಕೆಟ್‌ ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>



<p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 21 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯಿತು. ಆದರೆ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬಳ್ಳಾರಿ ಈ ನಾಲ್ಕು &nbsp;ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ ಎಂದು ತಿಳಿದುಬಂದಿದೆ.</p>



<p>ಎಐಸಿಸಿ ನಾಯಕಿ ಸೋನಿಯಾ ಗಾಂಧಿ, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದ ಸಿಇಸಿ ಸಭೆಯಲ್ಲಿ ಒಟ್ಟು 17 ಕ್ಷೇತ್ರಗಳ ಟಿಕೆಟ್‌ ಅಂತಿಮಗೊಳಿಸಲಾಗಿದೆ. ಇನ್ನು ರಾಜ್ಯದ 7 ಕ್ಷೇತ್ರಗಳಿಗೆ ಕಾಂಗ್ರೆಸ್‌ ಮೊದಲ ಪಟ್ಟಿಯಲ್ಲಿ ಈಗಾಗಲೇ ಟಿಕೆಟ್‌ ಘೋಷಣೆಯಾಗಿತ್ತು.</p>



<p><strong> ಬಿಜೆಪಿ ಪಕ್ಷದಲ್ಲೂ ಕುಟುಂಬ ರಾಜಕಾರಣ:</strong> ಬಿಜೆಪಿ ಪಕ್ಷದಿಂದ ಯಡಿಯೂರಪ್ಪನವರ ಮಗ ಬಿ.ವೈ ವಿಜಯೇಂದ್ರ ಅವರಿಗೆ ಮತ್ತು ಡಾವಣಗೆರೆ ಕ್ಷೇತ್ರದ ಸಿದ್ದೇಶ್ವರ ಪತ್ನಿ ಗಾಯತ್ರಿ ಸಿದ್ದೇಶ್ವರ್‌ ಅವರಿಗೆ ಟಿಕೇಟ್‌ ನೀಡಿರುವುದಕ್ಕೂ  ವಿರೋಧ ಕೇಳಿ ಬಂದಿತ್ತು. ಅಪ್ಪ ಮಕ್ಕಳು ಇಬ್ಬರೇ ಸೇರಿಕೊಂಡು ಮನಸೋ ಇಚ್ಚೆ ರಾಜಕಾರಣ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪಕ್ಷದ ಒಳಗಡೆಯಿಂದಲೇ ವಿರೋಧ ಬುಗಿಲೆದ್ದಿತ್ತು. ಈಶ್ವರಪ್ಪನವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದರೆ, ಕೆಲವರು ಕಾಂಗ್ರೆಸ್ಸಿನತ್ತ ಮುಖ ಮಾಡಿದ್ದಾರೆ. ಹಾಗಾಗಿ ಕಾಂಗ್ರೆಸ್ಸಿನಲ್ಲಿ ಇಷ್ಟೊಂದು ಅಭ್ಯರ್ಥಿಗಳಿಗೆ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿರುವುದರಿಂದ ಈ ಪಕ್ಷದಲ್ಲೂ ವಿರೋಧ ದಟ್ಟವಾಗಿ ಕೇಳಿ ಬರಬಹುದು ಎನ್ನಲಾಗುತ್ತಿದೆ.</p>



<p><strong>ವಲಸಿಗರಿಗೆ ಮಣೆ: </strong>ಬಿಜೆಪಿ ಪಕ್ಷದಿಂದ ಟಿಕೇಟ್‌ ವಂಚಿತರಾಗಿ ಅಸಮಾದಾನಿತರಾಗಿವ ಮಾಜಿ ಸಿಎಂ ಸದಾನಂದಗೌಡರಿಗೆ ಹಾಗೂ ಮಾಜಿ ಸಚಿವ ಜಿ.ಸಿ. ಮಾಧುಸ್ವಾಮಿಯವರಿಗೆ 3ನೇ ಪಟ್ಟಿಯಲ್ಲಿ ಟಿಕೇಟ್‌ ನೀಡುವ ಸಾದ್ಯತೆ ಇದೆ. ಈ ಕಾರಣಕ್ಕಾಗಿಯೇ ಕೆಲವು ಕ್ಷೇತ್ರಗಳಿಗೆ ಇನ್ನು ಟಿಕೇಟ್‌ ಘೋಷಿಸದೇ ಉಳಿಸಿಕೊಳ್ಳಲಾಗಿದೆ ಎಂಬುದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.</p>



<p><strong>&nbsp;</strong><strong>ಇಂದು ಘೋಷಣೆಯಾಗಲಿರುವ ಸಂಭಾವ್ಯ </strong><strong>ಅಭ್ಯರ್ಥಿಗಳ ವಿವರ</strong></p>



<ul class="wp-block-list">
<li>ಚಿತ್ರದುರ್ಗ -ಬಿ.ಎನ್‌.ಚಂದ್ರಪ್ಪ</li>



<li>ಬೆಳಗಾವಿ &#8211; ಮೃಣಾಲ್‌ ಹೆಬ್ಬಾಳಕರ್‌</li>



<li>ಚಿಕ್ಕೋಡಿ &#8211; ಪ್ರಿಯಾಂಕಾ ಜಾರಕಿಹೊಳಿ</li>



<li>ಬಾಗಲಕೋಟೆ &#8211; ಸಂಯುಕ್ತಾ ಪಾಟೀಲ್‌</li>



<li>ಧಾರವಾಡ &#8211; ವಿನೋದ್‌ ಅಸುಟಿ</li>



<li>ದಾವಣಗೆರೆ &#8211; ಪ್ರಭಾ ಮಲ್ಲಿಕಾರ್ಜುನ</li>



<li>ಕೊಪ್ಪಳ &#8211; ರಾಜಶೇಖರ ಹಿಟ್ನಾಳ್‌</li>



<li>ಕಲಬುರಗಿ &#8211; ರಾಧಾಕೃಷ್ಣ ದೊಡ್ಡಮನಿ</li>



<li>ಬೀದರ್‌ &#8211; ರಾಜಶೇಖರ್‌ ಪಾಟೀಲ್‌</li>



<li>ದಕ್ಷಿಣ ಕನ್ನಡ &#8211; ಪದ್ಮರಾಜ್‌</li>



<li>ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್‌ ಹೆಗ್ಡೆ</li>



<li>ಬೆಂಗಳೂರು ದಕ್ಷಿಣ &#8211; ಸೌಮ್ಯ ರೆಡ್ಡಿ</li>



<li>ಬೆಂಗಳೂರು ಸೆಂಟ್ರಲ್‌ -ಮನ್ಸೂರ್‌ ಅಲಿಖಾನ್‌</li>



<li>ಬೆಂಗಳೂರು ಉತ್ತರ -ಪ್ರೊ.ರಾಜೀವ್‌ ಗೌಡ</li>



<li>ಮೈಸೂರು -ಎಂ.ಲಕ್ಷ್ಮಣ್‌</li>



<li>ರಾಯಚೂರು -ಜಿ.ಕುಮಾರ ನಾಯಕ್‌</li>



<li>ಉತ್ತರ ಕನ್ನಡ -ಡಾ.ಅಂಜಲಿ ನಿಂಬಾಳ್ಕರ್‌</li>
</ul>
]]></content:encoded>
					
		
		
			</item>
		<item>
		<title>40% ಕಮೀಷನ್ ಹಗರಣ ನ್ಯಾಯಾಂಗ ತನಿಖೆಗೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ</title>
		<link>https://peepalmedia.com/40-commission-scam-to-judicial-probe/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 11 Aug 2023 07:05:58 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[40% commission]]></category>
		<category><![CDATA[bjp govt]]></category>
		<category><![CDATA[bjp v/s congress]]></category>
		<category><![CDATA[congress adhyaksha]]></category>
		<guid isPermaLink="false">https://peepalmedia.com/?p=25294</guid>

					<description><![CDATA[ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘ ಇಂದು ಕಾಂಗ್ರೆಸ್ ಸರ್ಕಾರ ಬಾಕಿ ಬಿಲ್ ಪಾವತಿಗೆ ತೋರುತ್ತಿರುವ ವಿಳಂಬದ ಕಾರಣಕ್ಕೆ ಪತ್ರಿಕಾಗೋಷ್ಠಿ ಕರೆದಿತ್ತು. ಅದಕ್ಕೂ ಮುನ್ನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು (40% Scam) ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು&#160;ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಸುದೀರ್ಘ ಮಾಹಿತಿಯ ಮೂಲಕ ವಿವರಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಕೊಟ್ಟ ಮಾತಿನಂತೆ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ [&#8230;]]]></description>
										<content:encoded><![CDATA[
<p>ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘ ಇಂದು ಕಾಂಗ್ರೆಸ್ ಸರ್ಕಾರ ಬಾಕಿ ಬಿಲ್ ಪಾವತಿಗೆ ತೋರುತ್ತಿರುವ ವಿಳಂಬದ ಕಾರಣಕ್ಕೆ ಪತ್ರಿಕಾಗೋಷ್ಠಿ ಕರೆದಿತ್ತು. ಅದಕ್ಕೂ ಮುನ್ನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು (40% Scam) ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು&nbsp;ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಸುದೀರ್ಘ ಮಾಹಿತಿಯ ಮೂಲಕ ವಿವರಿಸಿದ್ದಾರೆ.</p>



<p>ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಕೊಟ್ಟ ಮಾತಿನಂತೆ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು ಸರ್ಕಾರದ ವಿರುದ್ಧ ತಿರುಗಿ ಬಿದ್ದ ಗುತ್ತಿಗೆದಾರರಿಗೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.</p>



<p>ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು ತಿಳಿಸಿದ್ದಾರೆ‌‌.</p>



<p>&#8220;ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯು ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ&#8221; ಎಂದು ಬಿಲ್ ಪಾವತಿ ವಿಳಂಬಕ್ಕೆ ಕಾರಣ ನೀಡಿದ್ದಾರೆ.</p>



<p>&#8220;ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ.. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ?&#8221; ಎಂದು ಕಿಚಾಯಿಸಿದ್ದಾರೆ.</p>



<p>&#8220;ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್. ಅಶೋಕ್ ಅವರು ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅವರ ಮನಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ&#8221; ಎಂದು ಬಿಜೆಪಿ ನಾಯಕರ ಧೋರಣೆ ಬಗ್ಗೆ ವ್ಯಂಗ್ಯವಾಡಿದ್ದಾರೆ.</p>



<p>&#8220;ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದುಬಂದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ ಜನತೆಯೆದುರು ಸಾಬೀತು ಮಾಡುತ್ತೇವೆ&#8221; ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದೇಶದಲ್ಲಿ ತಿಳಿಸಿದ್ದಾರೆ.</p>



<p>&#8220;ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯ ಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ, ನರೇಂದ್ರ ಮೋದಿ ಅವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದು ನೋಡಿದರೆ ಸ್ವತಃ ಬೊಮ್ಮಾಯಿಯವರಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ&#8221; ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದೋರಣೆ ಬಗ್ಗೆ ವ್ಯಂಗ್ಯವಾಡಿದ್ದಾರೆ.</p>



<p>&#8220;ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, P.O.W ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ&#8221; ಎಂದು ಗುತ್ತಿಗೆದಾರರಿಗೆ ಅಭಯ ನೀಡುವ ಮಾತನ್ನಾಡಿದ್ದಾರೆ.</p>



<p>&#8220;ಈ ನಡುವೆ ಕೆಲವೇ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು&#8221; ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.</p>



<p>ಒಟ್ಟಾರೆ ಸರ್ಕಾರ ಮತ್ತು ಗುತ್ತಿಗೆದಾರರ ನಡುವಿನ ತಿಕ್ಕಾಟ ನೋಡಿದರೆ, ಹಿಂದಿನ ಬಿಜೆಪಿ ಸರ್ಕಾರದ 40% ಕಮೀಷನ್ ನ ತನಿಖೆ ಮತ್ತೆ ಬಿಜೆಪಿ ಕೊರಳಿಗೇ ಉರುಳಾಗುವ ಸಾಧ್ಯತೆ ಇದೆ ಎನ್ನಲಾಗಿದೆ.</p>
]]></content:encoded>
					
		
		
			</item>
		<item>
		<title>AICC ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಪಕ್ಷದ ಮುಂದಿರುವ ಪ್ರಮುಖ ಸವಾಲುಗಳು</title>
		<link>https://peepalmedia.com/major-challenges-facing-the-new-aicc-president-mallikarjuna-kharge-and-the-congress-party/</link>
		
		<dc:creator><![CDATA[Peepal Media]]></dc:creator>
		<pubDate>Thu, 20 Oct 2022 12:25:11 +0000</pubDate>
				<category><![CDATA[ರಾಜಕೀಯ]]></category>
		<category><![CDATA[bjp]]></category>
		<category><![CDATA[BJP VS CNG]]></category>
		<category><![CDATA[congress]]></category>
		<category><![CDATA[congress adhyaksha]]></category>
		<category><![CDATA[congress vs bjp]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[Mallikarjun Kharge]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=12176</guid>

					<description><![CDATA[ಬಹುತೇಕರ ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆ ಹಿರಿಯ ಮುತ್ಸದ್ದಿ ನಾಯಕ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ ಮುಡಿಗೇರಿದೆ. ಸುಮಾರು 9,000 ಮತಗಳಲ್ಲಿ 7,000 ಕ್ಕೂ ಮಿಕ್ಕಿ ಮತಗಳನ್ನು ಪಡೆದ ಮಲ್ಲಿಕಾರ್ಜುನ ಖರ್ಗೆಯವರು ಪ್ರತಿಸ್ಪರ್ಧಿ ಶಶಿ ತರೂರ್ ಗೆ ಕೇವಲ 1,000 ಮತಗಳನ್ನಷ್ಟೇ ಬಿಟ್ಟು ಕೊಟ್ಟಿದ್ದಾರೆ. ಸುಮಾರು 24 ವರ್ಷಗಳ ನಂತರ, ಪಕ್ಷದ ಅಧಿಕಾರ ಗಾಂಧಿ ಕುಟುಂಬದ ಹೊರಗಿನ ಸದಸ್ಯನ ಕೈಗೆ ಹೋಗಿದೆ. ಇದು ಗಾಂಧಿ ಕುಟುಂಬವೇ ಬಿಟ್ಟು ಕೊಟ್ಟ ಹುದ್ದೆ ಎಂಬುದು ಸಧ್ಯಕ್ಕೆ ಎದ್ದಿರುವ ಅಪವಾದ. [&#8230;]]]></description>
										<content:encoded><![CDATA[
<figure class="wp-block-image size-full"><img fetchpriority="high" decoding="async" width="600" height="338" src="https://peepalmedia.com/wp-content/uploads/2022/10/images-2022-10-20T174414.286.jpeg" alt="" class="wp-image-12182" srcset="https://peepalmedia.com/wp-content/uploads/2022/10/images-2022-10-20T174414.286.jpeg 600w, https://peepalmedia.com/wp-content/uploads/2022/10/images-2022-10-20T174414.286-300x169.jpeg 300w, https://peepalmedia.com/wp-content/uploads/2022/10/images-2022-10-20T174414.286-150x85.jpeg 150w" sizes="(max-width: 600px) 100vw, 600px" /></figure>



<p style="font-size:20px">ಬಹುತೇಕರ ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆ ಹಿರಿಯ ಮುತ್ಸದ್ದಿ ನಾಯಕ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ ಮುಡಿಗೇರಿದೆ. ಸುಮಾರು 9,000 ಮತಗಳಲ್ಲಿ 7,000 ಕ್ಕೂ ಮಿಕ್ಕಿ ಮತಗಳನ್ನು ಪಡೆದ ಮಲ್ಲಿಕಾರ್ಜುನ ಖರ್ಗೆಯವರು ಪ್ರತಿಸ್ಪರ್ಧಿ ಶಶಿ ತರೂರ್ ಗೆ ಕೇವಲ 1,000 ಮತಗಳನ್ನಷ್ಟೇ ಬಿಟ್ಟು ಕೊಟ್ಟಿದ್ದಾರೆ.</p>



<p style="font-size:20px">ಸುಮಾರು 24 ವರ್ಷಗಳ ನಂತರ, ಪಕ್ಷದ ಅಧಿಕಾರ ಗಾಂಧಿ ಕುಟುಂಬದ ಹೊರಗಿನ ಸದಸ್ಯನ ಕೈಗೆ ಹೋಗಿದೆ. ಇದು ಗಾಂಧಿ ಕುಟುಂಬವೇ ಬಿಟ್ಟು ಕೊಟ್ಟ ಹುದ್ದೆ ಎಂಬುದು ಸಧ್ಯಕ್ಕೆ ಎದ್ದಿರುವ ಅಪವಾದ. ಇದರ ಜೊತೆಗೆ ಮಲ್ಲಿಕಾರ್ಜುನ ಖರ್ಗೆಯವರನ್ನೂ ಸಹ ಗಾಂಧಿ ಕುಟುಂಬದ ರಬ್ಬರ್ ಸ್ಟಾಂಪ್ ಎಂದೇ ವಿರೋಧಿಗಳು ಅಣಕಿಸುತ್ತಿದ್ದಾರೆ. ಹಾಗಾದರೆ ಇಂತಹ ಅಪವಾದಗಳ ಜೊತೆಗೆ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆಯವರ ಮುಂದಿರುವ ಪ್ರಮುಖ ಸವಾಲುಗಳು ಏನು? ಮಲ್ಲಿಕಾರ್ಜುನ ಖರ್ಗೆಯವರ ವ್ಯಕ್ತಿತ್ವ ಮತ್ತು ಹಿರಿತನದ ಅನುಭವದ ಅಡಿಯಲ್ಲಿ ಅವರು ಆ ಸವಾಲುಗಳನ್ನು ನಿಭಾಯಿಸಬಲ್ಲರೆ?</p>



<p style="font-size:20px"><strong>&#8216;ರಬ್ಬರ್ ಸ್ಟಾಂಪ್&#8217; ಅಪವಾದದಿಂದ ಹೊರಬರುವರೇ?</strong><br>ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಎಲ್ಲಕ್ಕಿಂತ ಮುಖ್ಯವಾಗಿ ಇರುವ ದೊಡ್ಡ ಸವಾಲೆಂದರೆ ಅದು ಕಾಂಗ್ರೆಸ್ ಪಕ್ಷ ಗಾಂಧಿ ಕುಟುಂಬದ ಸ್ವತ್ತು ಎಂಬ&nbsp; ಆಪಾದನೆಯಿಂದ ಹೊರ ತರುವುದು. ಕಾಂಗ್ರೆಸ್ ಪಕ್ಷ ಯಾವತ್ತೂ ಸಾಮೂಹಿಕ ನಾಯಕತ್ವದ ಅಡಿಯಲ್ಲಿ ರಾಜಕೀಯ ಮಾಡುತ್ತದೆ ಎಂದು ಹೇಳಿಕೊಂಡರೂ ಕಾಂಗ್ರೆಸ್ ನ &#8220;ಹೈಕಮಾಂಡ್ ಸಂಸ್ಕೃತಿ&#8221; ಮಾತ್ರ ತೆರೆದಿಟ್ಟ ಗುಟ್ಟು. ಹಾಗಾಗಿ ಪಕ್ಷವನ್ನು ಸಾಮೂಹಿಕ ನಾಯಕತ್ವದ ಕೆಳಗೆ ತರಬೇಕಿರೋದು ಖರ್ಗೆಯವರ ಮುಂದಿರುವ ಬಹು ದೊಡ್ಡ ಸವಾಲು.</p>



<figure class="wp-block-image size-full"><img decoding="async" width="706" height="434" src="https://peepalmedia.com/wp-content/uploads/2022/10/images-2022-10-20T174530.575.jpeg" alt="" class="wp-image-12183" srcset="https://peepalmedia.com/wp-content/uploads/2022/10/images-2022-10-20T174530.575.jpeg 706w, https://peepalmedia.com/wp-content/uploads/2022/10/images-2022-10-20T174530.575-300x184.jpeg 300w, https://peepalmedia.com/wp-content/uploads/2022/10/images-2022-10-20T174530.575-150x92.jpeg 150w, https://peepalmedia.com/wp-content/uploads/2022/10/images-2022-10-20T174530.575-696x428.jpeg 696w" sizes="(max-width: 706px) 100vw, 706px" /></figure>



<p style="font-size:20px">ಕಾಂಗ್ರೆಸ್ ನ ಆಂತರಿಕ ಮಟ್ಟದಲ್ಲೂ ಸಹ ಚುನಾವಣೆ ಘೋಷಣೆ ನಂತರ ಮಲ್ಲಿಕಾರ್ಜುನ ಖರ್ಗೆಯವರನ್ನು ಗಾಂಧಿ ಕುಟುಂಬದ ಅಭ್ಯರ್ಥಿ ಎಂದೇ ಬಿಂಬಿಸಲಾಗಿತ್ತು. ಸೈದ್ಧಾಂತಿಕವಾಗಿ ಗಟ್ಟಿ ಮತ್ತು ದಿಟ್ಟ ನಿಲುವು ಹೊಂದಿರುವ ಮಲ್ಲಿಕಾರ್ಜುನ ಖರ್ಗೆ ಈ ಅಪವಾದದಿಂದ ಹೇಗೆ ಹೊರಬರಬಹುದು ಎಂಬುದು ಕುತೂಹಲದ ಪ್ರಶ್ನೆ. ಜೊತೆಗೆ ಮೂಲದಿಂದಲೂ ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬಕ್ಕೆ ನಿಷ್ಠರಾಗಿರುವ ಖರ್ಗೆ ಸಿದ್ಧಾಂತದ ಅಡಿಯಲ್ಲಷ್ಟೆ ತಮ್ಮ ನಾಯಕರನ್ನು ಗಟ್ಟಿಗೊಳಿಸುವ ಅನಿವಾರ್ಯತೆಯಿದೆ.</p>



<p style="font-size:20px"><strong>ಪಕ್ಷದ ಒಳಗಿನ RSS ಐಡಿಯಾಲಜಿ ಮುಖಂಡರ ಬಗ್ಗೆ</strong><br>ಬಿಜೆಪಿ ಪಕ್ಷದಂತೆ ಕೇವಲ ಯಾವುದೇ ಒಂದು ಸಿದ್ಧಾಂತದ ಅಡಿಯಲ್ಲಿ ಎಂದೂ ಗುರುತಿಸಿಕೊಳ್ಳದ ಕಾಂಗ್ರೆಸ್ ಪಕ್ಷದ ಒಳಗೆ ಎಲ್ಲಾ ತರದ ಸಿದ್ಧಾಂತಿಗಳೂ ಇರುವುದು ಸ್ಪಷ್ಟ. ಆದರೆ ದೇಶದ ಐಕ್ಯತೆ, ಸಮಗ್ರತೆ, ಸಾರ್ವಭೌಮತ್ವ, ಜಾತ್ಯಾತೀತತೆಗೆ ವಿರುದ್ಧವಿರುವ, ಭಾರತದ ಸಂವಿಧಾನದ ಆಶಯಗಳಿಗೆ ವಿರುದ್ಧದ RSS ಸಿದ್ಧಾಂತದವರೂ ಇರುವುದು ಪಕ್ಷದ ಭವಿಷ್ಯದ ದೃಷ್ಟಿಯಲ್ಲಿ ಅತ್ಯಂತ ಅಪಾಯಕಾರಿ. ಇಂಥವರನ್ನು ಗುರುತಿಸುವುದು ಹೊಸ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಮುಂದಿರುವ ಮತ್ತೊಂದು ದೊಡ್ಡ ಸವಾಲು.</p>



<p style="font-size:20px">ಜೊತೆಗೆ ಅಷ್ಟೆ ಸಂಖ್ಯೆಯಲ್ಲಿ ಇರುವ ಮೃದು ಹಿಂದುತ್ವವಾದದ ಅಡಿಯಲ್ಲಿ ಬರುವ, ಸೈದ್ಧಾಂತಿಕ ಸ್ಪಷ್ಟತೆ ಇರುವ ಹಿಂದುತ್ವ ಸಿದ್ಧಾಂತದ ಕಡು ವಿರೋಧಿಗಳೂ ಸಹ ಕಾಂಗ್ರೆಸ್ ಪಕ್ಷದಲ್ಲಿ ಇದ್ದಾರೆ. ಜೊತೆಗೆ ಜಾತ್ಯತೀತ, ಧರ್ಮಾತೀತ ನಿಲುವನ್ನು ಹೊಂದಿದೆ ಎಂದು ಹೇಳುವ ಕಾಂಗ್ರೆಸ್ ಪಕ್ಷ ಇತರೆ ಧರ್ಮದ ನಾಯಕರಿಗೆ ಕೊಡಬಹುದಾದ ಪ್ರಾಮುಖ್ಯತೆ ಕೂಡ ಅಷ್ಟೆ ಮುಖ್ಯವಾಗಿದೆ. ಎಲ್ಲಾ ರೀತಿಯ ಸಿದ್ಧಾಂತ, ಜಾತಿ ಧರ್ಮದ ಕೆಳಗೆ ಗುರುತಿಸಿಕೊಳ್ಳುವ ನಾಯಕರೆಲ್ಲರನ್ನೂ ಒಗ್ಗೂಡಿಸಿ ಮುಂದೆ ಹೋಗಬೇಕಿರೋದು ಮಲ್ಲಿಕಾರ್ಜುನ ಖರ್ಗೆ ಅವರ ಎದುರಿಗಿರುವ ಇನ್ನೊಂದು ಸವಾಲು.</p>



<p style="font-size:20px"><strong>ಸಂಘಟನೆ, ಸಂಘಟನೆ ಮತ್ತು ಸಂಘಟನೆ</strong><br>ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಪಕ್ಷ ಮೇಲಿನ ಕೆಲವು ಸವಾಲುಗಳಿಂದ ಮುಕ್ತವಾಗುವಷ್ಟೇ ಪ್ರಾಮುಖ್ಯತೆ ಕೊಡಬೇಕಾದ್ದು ಪಕ್ಷದ ಸಂಘಟನೆ ಕಡೆಗೆ‌. ರಾಹುಲ್ ಗಾಂಧಿಯ ನಂತರ ತೆರವಾದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಗಾಧಿ ಇದಾಗಿದ್ದು, ಪಕ್ಷ ಕೆಲವು ರಾಜ್ಯಗಳಲ್ಲಂತೂ ಮುಖಂಡರೇ ಇಲ್ಲದಷ್ಟು ಸೊರಗಿ ಹೋಗಿದೆ. ಉತ್ತರ ಪ್ರದೇಶ, ಬಿಹಾರದಂತಹ ಹಿಂದಿ ಭಾಷಿಕ ರಾಜ್ಯಗಳಲ್ಲಿ ಕಾಂಗ್ರೆಸ್ ಬೇರು ಮಟ್ಟದಿಂದಲೇ ಕೆಲಸ ಮಾಡಬೇಕಿದೆ. ರಾಹುಲ್ ಗಾಂಧಿ ನೇತೃತ್ವದ ಭಾರತ ಐಕ್ಯತಾ ಯಾತ್ರೆ ಸಂಘಟನೆ ಹಿನ್ನೆಲೆಯಲ್ಲಿ ಒಂದಷ್ಟು ಕೆಲಸ ಆಗಬಹುದು ಎಂದು ನಿರೀಕ್ಷಿಸಿದರೂ ಮುಖಂಡರು, ಕಾರ್ಯಕರ್ತರು ಒಗ್ಗೂಡದ ಹೊರತು, ಪಂಚಾಯಿತಿ ಬೂತ್ ಮಟ್ಟದ ಕೆಲಸ ಆಗದ ಹೊರತು ಪಕ್ಷ ಮೇಲೆತ್ತಲು ಕಷ್ಟಸಾಧ್ಯ.</p>



<p style="font-size:20px">ಸಧ್ಯ ಮಲ್ಲಿಕಾರ್ಜುನ ಖರ್ಗೆಯವರ ದಲಿತ್ ಐಡೆಂಟಿಟಿ ಒಂದು ಹಂತಕ್ಕಷ್ಟೆ ಕೆಲಸ ಮಾಡಬಹುದು. ಆದರೆ ಬಿಜೆಪಿ ಮತ್ತು ಇತರೆ ಪ್ರಾದೇಶಿಕ ಪಕ್ಷಗಳ ಎದುರು ಕಾಂಗ್ರೆಸ್ ಈ ಸಂದರ್ಭದಲ್ಲಿ ಅತಿ ಹೆಚ್ಚು ಕೆಲಸ ಮಾಡಬೇಕು. ಮಲ್ಲಿಕಾರ್ಜುನ ಖರ್ಗೆಯವರಿಗೆ ಈ ಸಂದರ್ಭ &#8216;ಮಾಡು ಇಲ್ಲವೆ ಮಡಿ&#8217; ಪರಿಸ್ಥಿತಿ ಆಗಿದ್ದು, ಲೋಕಸಭಾ ಚುನಾವಣೆಗೆ ಈ ಕಾಲಾವಧಿಯಲ್ಲಿ ಉಸಿರು ಕಟ್ಟಿ ಕೆಲಸ ಮಾಡುವ ಸಂದರ್ಭವಾಗಿದೆ. ಅಕಸ್ಮಾತ್ ಕಾಂಗ್ರೆಸ್ ಹೀನಾಯ ಸ್ಥಿತಿಯಲ್ಲಿ ಇರುವ ರಾಜ್ಯಗಳಲ್ಲಿ ಕೊಂಚ ಮಟ್ಟಿಗೆ ಪಕ್ಷ ಚೇತರಿಸಿಕೊಂಡರೂ ಖರ್ಗೆ ಕಾಂಗ್ರೆಸ್ ಪಕ್ಷದ ಅತ್ಯಂತ ಪ್ರಭಾವಿ ನಾಯಕರಾಗಿ, ಗಾಂಧಿ ಕುಟುಂಬದ ಸರಿಸಮನಾದ ನಾಯಕನಾಗಿ ನಿಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ.</p>



<p style="font-size:20px"><strong>ಬಿಜೆಪಿ ಆಡಳಿತ ಲೋಪಗಳ ಕಾರಣಕ್ಕೆ ಬಿಜೆಪಿ ಸೋತರೆ ಅದು ಕಾಂಗ್ರೆಸ್ ಗೆಲುವಲ್ಲ</strong><br>ಈಗಾಗಲೇ ಬಿಜೆಪಿ ಎಲ್ಲಾ ಹಂತದಲ್ಲೂ ಅಧಿಕಾರ ನಿರ್ವಹಣೆ ವಿಚಾರದಲ್ಲಿ ತಾನು ಅಸಮರ್ಥ ಎಂದೇ ತೋರಿಸಿಕೊಳ್ಳುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಮುಟ್ಟುತ್ತಿದೆ. ಸಾಮಾನ್ಯ ಜನ ಬದುಕಲು ಹೆಣಗಾಡುತ್ತಿದೆ. ಸಣ್ಣಪುಟ್ಟ ಉದ್ದಿಮೆಗಳು ಹೇಳ ಹೆಸರಿಲ್ಲದಂತೆ ಹೋಗಿವೆ. ನಿರುದ್ಯೋಗ ತಾಂಡವವಾಡುತ್ತಿದೆ. ಭಾರತದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಭಾರತದ ಆರ್ಥಿಕತೆ ಮೂವತ್ತು ನಲವತ್ತು ವರ್ಷಗಳಷ್ಟು ಹಿಂದೆ ಹೋಗಿದೆ ಎಂದೇ ಆರ್ಥಿಕ ತಜ್ಞರು ಅಂದಾಜಿಸುತ್ತಿದ್ದಾರೆ. ಈ ಹಂತದಲ್ಲಿ ಬಿಜೆಪಿ ಪಕ್ಷದ ಅಧಿಕಾರ ನಿರ್ವಹಣೆ ಬಗ್ಗೆ ಸ್ವತಃ ಬಿಜೆಪಿ ಮಂದಿಯೇ ಬೇಸರ ವ್ಯಕ್ತಪಡಿಸಿದ್ದಾರೆ.</p>



<figure class="wp-block-image size-full"><img decoding="async" width="766" height="353" src="https://peepalmedia.com/wp-content/uploads/2022/10/IMG_20221020_175017.jpg" alt="" class="wp-image-12184" srcset="https://peepalmedia.com/wp-content/uploads/2022/10/IMG_20221020_175017.jpg 766w, https://peepalmedia.com/wp-content/uploads/2022/10/IMG_20221020_175017-300x138.jpg 300w, https://peepalmedia.com/wp-content/uploads/2022/10/IMG_20221020_175017-150x69.jpg 150w, https://peepalmedia.com/wp-content/uploads/2022/10/IMG_20221020_175017-696x321.jpg 696w" sizes="(max-width: 766px) 100vw, 766px" /></figure>



<p style="font-size:20px">ಇಂತಹ ಸಂದರ್ಭದಲ್ಲಿ ಜನತೆ ಪರ್ಯಾಯ ಪಕ್ಷಕ್ಕೆ ಹೊರಳುವುದೂ ಸಹಜ. ಹಾಗಾಗಿ ಬಿಜೆಪಿ ಪಕ್ಷದ ಲೋಪಗಳ ಅಡಿಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಪಡೆದುಕೊಂಡರೆ ಅದು ಕಾಂಗ್ರೆಸ್ ನ ನಿಜವಾದ ಗೆಲುವಲ್ಲ ಎಂದೇ ಅಂದಾಜಿಸಬಹುದು. ಯಾಕೆಂದರೆ ಬಿಜೆಪಿ ಈಗಾಗಲೇ ಸಂಘಟನೆ ದೃಷ್ಟಿಯಿಂದ ತುಂಬಾ ಬಲಿಷ್ಠವಾಗಿದೆ. ಹಾಗಾಗಿ ಅದು ಪಕ್ಷದ ತಾತ್ಕಾಲಿಕ ಗೆಲುವಾಗಬಹುದು. ಸಧ್ಯ &#8216;ಭಾರತ ಐಕ್ಯತಾ ಯಾತ್ರೆ&#8217; ಸಂಘಟನೆ ಹಿನ್ನೆಲೆಯಲ್ಲಿ ಒಂದಷ್ಟು ಪರಿಣಾಮಕಾರಿ ಕೆಲಸ ಮಾಡಬಹುದು ಎಂದು ಅಂದಾಜಿಸಬಹುದು. ಆದರೆ ಅದನ್ನು ರಾಜ್ಯ ನಾಯಕರು ಹೇಗೆ ನಿಭಾಯಿಸಬಲ್ಲರು ಮತ್ತು ಹೊಸ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಎಷ್ಟರ ಮಟ್ಟಿಗೆ ರಾಜ್ಯ ಮುಖಂಡರಿಗೆ ನೆರವಾಗಬಲ್ಲರು ಎಂಬುದು ಕುತೂಹಲದ ವಿಷಯ.</p>



<p style="font-size:20px"><strong>2024 ರ ಲೋಕಸಭಾ ಚುನಾವಣೆ ಮತ್ತು ಅದರ ಒಳಗೆ ಬರುವ ವಿಧಾನಸಭಾ ಚುನಾವಣೆಗಳು</strong><br>ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಮುಂದಿರುವ ಅತಿ ದೊಡ್ಡ ಸವಾಲೆಂದರೆ 2024 ರ ಲೋಕಸಭಾ ಚುನಾವಣೆ ಮತ್ತು ಅದರ ನಡುವೆ ಬರುವ ಗುಜರಾತ್, ಹಿಮಾಚಲ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಗಳು. ಇನ್ನೇನು ಕೆಲವೇ ದಿನಗಳಲ್ಲಿ ಘೋಷಣೆಯಾಗಬಹುದಾದ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆ ಖರ್ಗೆಯವರ ನಾಯಕತ್ವಕ್ಕೆ ತುರ್ತು ಸವಾಲೊಡ್ಡಬಹಹುದಾದ ಚುನಾವಣೆಗಳು. ಈ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಅಥವಾ ಅಲ್ಪ ಬಹುಮತ ಬಂದರೂ ಖರ್ಗೆಯವರು ಒಂದು ಹಂತಕ್ಕೆ ಗೆಲುವು ಕಂಡಂತೆ. ಇನ್ನು ಮುಂದಿರುವುದು ತೆಲಂಗಾಣ. ಕೆಲವೇ ದಿನಗಳ ಹಿಂದೆ ರಾಷ್ಟ್ರೀಯ ಪಕ್ಷವಾಗಿ ವಿಲೀನಗೊಂಡ &#8216;ತೆಲಂಗಾಣ ರಾಷ್ಟ್ರ ಸಮಿತಿ&#8217; ತೆಲಂಗಾಣದ ಅತಿ ದೊಡ್ಡ ಪಕ್ಷ. ಅದನ್ನು ಅಧಿಕಾರದಿಂದ ದೂರವಿಡಲು ಸಧ್ಯದ ಮಟ್ಟಿಗೆ ಅಸಾಧ್ಯ. ಆದರೆ ಸಂಘಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸ್ಥಳೀಯವಾಗಿ ತೆಲಂಗಾಣದಲ್ಲಿ ಹೆಚ್ಚು ಕೆಲಸ ಮಾಡಬೇಕಿದೆ.</p>



<figure class="wp-block-image size-full"><img loading="lazy" decoding="async" width="783" height="391" src="https://peepalmedia.com/wp-content/uploads/2022/10/images-2022-10-20T175202.632.jpeg" alt="" class="wp-image-12187" srcset="https://peepalmedia.com/wp-content/uploads/2022/10/images-2022-10-20T175202.632.jpeg 783w, https://peepalmedia.com/wp-content/uploads/2022/10/images-2022-10-20T175202.632-300x150.jpeg 300w, https://peepalmedia.com/wp-content/uploads/2022/10/images-2022-10-20T175202.632-768x384.jpeg 768w, https://peepalmedia.com/wp-content/uploads/2022/10/images-2022-10-20T175202.632-150x75.jpeg 150w, https://peepalmedia.com/wp-content/uploads/2022/10/images-2022-10-20T175202.632-696x348.jpeg 696w" sizes="auto, (max-width: 783px) 100vw, 783px" /></figure>



<p style="font-size:20px">ಇನ್ನು 2023 ರಲ್ಲಿ ಎದುರಾಗುವ ಕರ್ನಾಟಕ ವಿಧಾನಸಭಾ ಚುನಾವಣೆ ಖರ್ಗೆಯವರ ಬಲಪ್ರದರ್ಶನಕ್ಕೆ ಸಿಕ್ಕಿರುವ ಒಂದು ದೊಡ್ಡ ಅವಕಾಶ. ಸ್ವತಃ ಕರ್ನಾಟಕದ ಹಿನ್ನೆಲೆಯ ಮಲ್ಲಿಕಾರ್ಜುನ ಖರ್ಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅತಿ ಹೆಚ್ಚು ಸ್ಥಾನ ಗೆಲ್ಲಿಸಿಕೊಡಬೇಕಾದ ಅನಿವಾರ್ಯತೆ ಇದೆ. ಈಗಾಗಲೇ ಕರ್ನಾಟಕ ಕಾಂಗ್ರೆಸ್ ಮುಂಬರುವ ಚುನಾವಣೆ ಹಿನ್ನಲೆಯಲ್ಲಿ ಎಲ್ಲಾ ರೀತಿಯಲ್ಲೂ ಸಜ್ಜುಗೊಂಡಿದೆ ಎಂದೇ ಹೇಳಬಹುದು. ಆದರೆ ಸ್ಥಳೀಯ ಮುಖಂಡರ ಮಸುಕಿನ ಗುದ್ದಾಟವನ್ನು ಖರ್ಗೆ ಹೇಗೆ ನಿಭಾಯಿಸಬಲ್ಲರು ಎಂಬುದು ಕೂಡಾ ಸಧ್ರದ ಕುತೂಹಲ.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಖರ್ಗೆ: ಶುಭಕೋರಿದ ಹೆಚ್.ಡಿ.ಕೆ</title>
		<link>https://peepalmedia.com/noothan-acongress-adhyaksharagi-kharge-shubha-koridha-hdk/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 19 Oct 2022 13:31:54 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[bengalure]]></category>
		<category><![CDATA[congress adhyaksha]]></category>
		<category><![CDATA[HDK]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mallikarjuna kharge]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=12007</guid>

					<description><![CDATA[ಬೆಂಗಳೂರು : ಕಾಂಗ್ರೆಸ್‌ ಅಧ್ಯಕ್ಷ ಪದವಿಯನ್ನು ಇಂದು ಮಲ್ಲಿಕಾರ್ಜುನ ಖರ್ಗೆಯವರು ಚುನಾವಣೆಯಲ್ಲಿ ಆಯ್ಕೆಯಾಗಿದ್ದು, ಹೆಚ್‌.ಡಿ ಕುಮಾರಸ್ವಾಮಿಯವರು ಖರ್ಗೆ ಅವರಿಗೆ ಟ್ವೀಟ್‌ ಮುಖಾಂತರ ಶುಭಕೋರಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷ ಪದವಿಗಾಗಿ ನಡೆದಿದ್ದ ಚುನಾವಣೆಯ ಫಲಿತಾಂಶ ಹೊರಬಂದಿದ್ದು, ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಎದುರಾಳಿ ಶಶಿ ತರೂರ್‌ ಅವರನ್ನು 6,897 ಮತಗಳ ಬಹಳ ದೊಡ್ಡ ಅಂತರದಿಂದ ಸೋಲಿಸಿ ಇಂದು ಕಾಂಗ್ರೆಸ್‌ ಅಧ್ಯಕ್ಷ ಪದವಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿದ ಹೆಚ್.ಡಿ.ಕುಮಾರಸ್ವಾಮಿ, ʼಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾದ ರಾಜ್ಯದ ಹಿರಿಯ ರಾಜಕಾರಣಿ, ಕಾಂಗ್ರೆಸ್ ಪಕ್ಷದ [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು </strong>: ಕಾಂಗ್ರೆಸ್‌ ಅಧ್ಯಕ್ಷ ಪದವಿಯನ್ನು ಇಂದು ಮಲ್ಲಿಕಾರ್ಜುನ ಖರ್ಗೆಯವರು ಚುನಾವಣೆಯಲ್ಲಿ ಆಯ್ಕೆಯಾಗಿದ್ದು, ಹೆಚ್‌.ಡಿ ಕುಮಾರಸ್ವಾಮಿಯವರು ಖರ್ಗೆ ಅವರಿಗೆ ಟ್ವೀಟ್‌ ಮುಖಾಂತರ ಶುಭಕೋರಿದ್ದಾರೆ.</p>



<p style="font-size:20px">ಕಾಂಗ್ರೆಸ್‌ ಅಧ್ಯಕ್ಷ ಪದವಿಗಾಗಿ ನಡೆದಿದ್ದ ಚುನಾವಣೆಯ ಫಲಿತಾಂಶ ಹೊರಬಂದಿದ್ದು, ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಎದುರಾಳಿ ಶಶಿ ತರೂರ್‌ ಅವರನ್ನು 6,897 ಮತಗಳ ಬಹಳ ದೊಡ್ಡ ಅಂತರದಿಂದ ಸೋಲಿಸಿ ಇಂದು ಕಾಂಗ್ರೆಸ್‌ ಅಧ್ಯಕ್ಷ ಪದವಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.</p>



<p style="font-size:20px">ಈ ಕುರಿತು ಟ್ವೀಟ್‌ ಮಾಡಿದ ಹೆಚ್.ಡಿ.ಕುಮಾರಸ್ವಾಮಿ, ʼಎಐಸಿಸಿ ಅಧ್ಯಕ್ಷರಾಗಿ ಚುನಾಯಿತರಾದ ರಾಜ್ಯದ ಹಿರಿಯ ರಾಜಕಾರಣಿ, ಕಾಂಗ್ರೆಸ್ ಪಕ್ಷದ ಹಿರಿಯರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು. ಶ್ರೀ ಖರ್ಗೆ ಅವರದ್ದು ಸುದೀರ್ಘ ರಾಜಕೀಯ ಅನುಭವ. ಅಚಲವಾದ ಪಕ್ಷನಿಷ್ಠೆ ಅವರನ್ನು ಈ ಉನ್ನತ ಹುದ್ದೆವರೆಗೂ ತಂದಿದೆ. ಶ್ರೀ ಖರ್ಗೆ ಅವರಿಂದ ಆ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆʼ ಎಂದು ಹೇಳಿದ್ದಾರೆ.</p>
]]></content:encoded>
					
		
		
			</item>
	</channel>
</rss>
