<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>corona virus &#8211; Peepal Media</title>
	<atom:link href="https://peepalmedia.com/tag/corona-virus/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 23 Dec 2023 02:47:57 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>corona virus &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಕೋವಿಡ್ ಹಾಟ್‌ಸ್ಪಾಟ್ ಆಗುವತ್ತ ಬೆಂಗಳೂರು : 78 ರಲ್ಲಿ 68 ಪ್ರಕರಣ ರಾಜಧಾನಿಯಲ್ಲೇ ದಾಖಲು</title>
		<link>https://peepalmedia.com/bangalore-to-become-a-covid-hotspot/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 23 Dec 2023 02:47:13 +0000</pubDate>
				<category><![CDATA[ಆರೋಗ್ಯ]]></category>
		<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[bengalure]]></category>
		<category><![CDATA[corona virus]]></category>
		<category><![CDATA[covid 19]]></category>
		<category><![CDATA[covid cases]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=33992</guid>

					<description><![CDATA[ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ಶುಕ್ರವಾರ ದಿನದ ಅಂತ್ಯಕ್ಕೆ, 78 ಹೊಸ ಪ್ರಕರಣ ದಾಖಲಾದರೆ, ಕೋವಿಡ್ ಕಾರಣಕ್ಕೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. 78 ಹೊಸ ಪ್ರಕರಣಗಳಲ್ಲಿ 68 ಪ್ರಕರಣ ಕೇವಲ ಬೆಂಗಳೂರಲ್ಲೇ ಪತ್ತೆಯಾಗಿದ್ದು ಈಗ ಸಿಲಿಕಾನ್ ಸಿಟಿ ಆತಂಕದಲ್ಲಿದೆ. ಶುಕ್ರವಾರ ದಿನದ ಅಂತ್ಯಕ್ಕೆ ರಾಜ್ಯದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳಲ್ಲಿ 176 ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಕನ್ನಡ ಮೂಲದ ವ್ಯಕ್ತಿಯ ಸಾವು ಸೇರಿ ಒಟ್ಟು ನಾಲ್ವರು ಮೃತಪಟ್ಟಿರುವ [&#8230;]]]></description>
										<content:encoded><![CDATA[
<p>ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ಶುಕ್ರವಾರ ದಿನದ ಅಂತ್ಯಕ್ಕೆ, 78 ಹೊಸ ಪ್ರಕರಣ ದಾಖಲಾದರೆ, ಕೋವಿಡ್ ಕಾರಣಕ್ಕೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. 78 ಹೊಸ ಪ್ರಕರಣಗಳಲ್ಲಿ 68 ಪ್ರಕರಣ ಕೇವಲ ಬೆಂಗಳೂರಲ್ಲೇ ಪತ್ತೆಯಾಗಿದ್ದು ಈಗ ಸಿಲಿಕಾನ್ ಸಿಟಿ ಆತಂಕದಲ್ಲಿದೆ.</p>



<p>ಶುಕ್ರವಾರ ದಿನದ ಅಂತ್ಯಕ್ಕೆ ರಾಜ್ಯದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳಲ್ಲಿ 176 ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಕನ್ನಡ ಮೂಲದ ವ್ಯಕ್ತಿಯ ಸಾವು ಸೇರಿ ಒಟ್ಟು ನಾಲ್ವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಕೊರೊನಾ ಸಕ್ರಿಯ ಕೇಸ್‌ಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದ್ದು, 162 ಸೋಂಕಿತರು ಹೋಂ ಐಸೋಲೇಷನ್‌ನಲ್ಲಿ ಇದ್ದರೆ, 13 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 3.29 ಕ್ಕೆ ಏರಿಕೆಯಾಗಿದೆ.</p>



<p>ಇನ್ನು ಸಿಲಿಕಾನ್ ಸಿಟಿ ಬೆಂಗಳೂರು ಕೋವಿಡ್ ನ ಹಾಟ್ ಸ್ಪಾಟ್ ಆಗಲಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಅದರಲ್ಲೂ ವಿಕ್ಟೋರಿಯಾ, ವಾಣಿ ವಿಲಾಸ, ಮಿಂಟೋ ಆಸ್ಪತ್ರೆಗಳಲ್ಲಿ ಹೆಚ್ಚು ಪ್ರಕರಣ ಕಂಡುಬಂದಿದ್ದು, ಆಸ್ಪತ್ರೆಯ ಒಪಿಡಿ ಬ್ಲಾಕ್​ಗಳಲ್ಲಿ ಟ್ರಯಾಜ್ ಸೆಂಟರ್ ನಿರ್ಮಾಣ ಮಾಡಲಾಗಿದೆ.</p>



<p>ಜ್ವರ, ಶೀತ ಹಾಗೂ ಉಸಿರಾಟಕ್ಕೆ ಸಂಬಂಧಿಸಿದ ಯಾವುದೇ ರೋಗ ಲಕ್ಷಣಗಳು ಕಂಡುಬಂದರೆ ಕಡ್ಡಾಯವಾಗಿ RT PCR ಪರೀಕ್ಷೆಗೆ ಆರೋಗ್ಯ ಇಲಾಖೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ನಿತ್ಯ ಆಸ್ಪತ್ರೆ ಕ್ಯಾಂಪಸ್​ನಲ್ಲಿ ಸಿಬ್ಬಂದಿಗಳು RT-PCR ಟೆಸ್ಟ್ ಮಾಡುತ್ತಿದ್ದಾರೆ. ಅದರಂತೆ ಶುಕ್ರವಾರ 200 ಜನರಿಗೆ ಟೆಸ್ಟ್ ಮಾಡಲಾಗಿದ್ದು, 10 ಜನರಿಗೆ ಪಾಸಿಟಿವ್​ ಕಂಡುಬಂದಿದೆ.</p>



<p><strong>ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ</strong><br>ಕೋವಿಡ್ ನಿರ್ವಹಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್​ ನಿರ್ವಹಣೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಮೂರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸಿದೆ. ಅದರಲ್ಲಿ ಸಚಿವರಾದ ಹೆಚ್. <a href="http://ಸಿ.ಮಹದೇವಪ್ಪ">ಸಿ.ಮಹದೇವಪ್ಪ</a>, <a href="http://ಡಾ.ಶರಣು">ಡಾ.ಶರಣು</a> ಪ್ರಕಾಶ್ ಪಾಟೀಲ್ ಹಾಗೂ ಎಂ. ಸಿ ಸುಧಾಕರ್ ಇದ್ದು, ಸಮಿತಿಯು ಕೊವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ತಜ್ಞರು, ಇಲಾಖೆಗಳ ಮುಖ್ಯಸ್ಥರೊಂದಿಗೆ ಪರಾಮರ್ಶಿಸಲಿದೆ.</p>
]]></content:encoded>
					
		
		
			</item>
		<item>
		<title>ದೇಶದಲ್ಲಿ ಹೊಸದಾಗಿ 5,221 ಕೋವಿಡ್‌ ಪ್ರಕರಣಗಳು ವರದಿ: 15 ಮಂದಿ ಮೃತ</title>
		<link>https://peepalmedia.com/5221-new-covid-cases-reported-in-country-15-deaths/</link>
		
		<dc:creator><![CDATA[Peepal Media]]></dc:creator>
		<pubDate>Mon, 12 Sep 2022 06:57:47 +0000</pubDate>
				<category><![CDATA[ಆರೋಗ್ಯ]]></category>
		<category><![CDATA[corona virus]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=4913</guid>

					<description><![CDATA[ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,221 ಹೊಸ ಕೋವಿಡ್‌ ಪ್ರಕರಣಗಳು ದೃಢವಾಗಿದ್ದು, &#160;15 ಮಂದಿ ಮೃತವಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ ಮಾಡಿದೆ. ದೇಶದಲ್ಲಿ ಇದುವರೆಗೆ 4, 45,00,580 ಮಂದಿಗೆ&#160; ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟು 5,28, 165 ಮಂದಿ ಮೃತಪಟ್ಟಿದ್ದಾರೆ. ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ದೈನಂದಿನ ಕೋವಿಡ್‌ ದೃಢ ಪ್ರಕರಣಗಳ ಪ್ರಮಾಣ ಶೇ 2,82 ಮತ್ತು ವಾರದ ದೃಢ ಪ್ರಕರಣಗಳ ಪ್ರಮಾಣ &#160;ಶೇ 1.72ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ. ದೇಶದಲ್ಲಿ [&#8230;]]]></description>
										<content:encoded><![CDATA[
<p class="has-medium-font-size"><strong>ನವದೆಹಲಿ: </strong>ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,221 ಹೊಸ ಕೋವಿಡ್‌ ಪ್ರಕರಣಗಳು ದೃಢವಾಗಿದ್ದು, &nbsp;15 ಮಂದಿ ಮೃತವಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ ಮಾಡಿದೆ.</p>



<p class="has-medium-font-size">ದೇಶದಲ್ಲಿ ಇದುವರೆಗೆ 4, 45,00,580 ಮಂದಿಗೆ&nbsp; ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟು 5,28, 165 ಮಂದಿ ಮೃತಪಟ್ಟಿದ್ದಾರೆ.</p>


<div class="wp-block-image">
<figure class="aligncenter size-full is-resized"><img fetchpriority="high" decoding="async" src="https://peepalmedia.com/wp-content/uploads/2022/09/corona-123.jpg" alt="" class="wp-image-4915" width="309" height="365" srcset="https://peepalmedia.com/wp-content/uploads/2022/09/corona-123.jpg 576w, https://peepalmedia.com/wp-content/uploads/2022/09/corona-123-254x300.jpg 254w" sizes="(max-width: 309px) 100vw, 309px" /><figcaption><strong>ಕೇಂದ್ರ ಆರೋಗ್ಯ ಸಚಿವಾಲಯದ ಕೋವಿಡ್‌ ವರದಿ</strong></figcaption></figure></div>


<p class="has-medium-font-size">ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ದೈನಂದಿನ ಕೋವಿಡ್‌ ದೃಢ ಪ್ರಕರಣಗಳ ಪ್ರಮಾಣ ಶೇ 2,82 ಮತ್ತು ವಾರದ ದೃಢ ಪ್ರಕರಣಗಳ ಪ್ರಮಾಣ &nbsp;ಶೇ 1.72ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.</p>



<p class="has-medium-font-size">ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 47,176 ಕ್ಕೆ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 5,975 ಮಂದಿ&nbsp; ಚೇತರಿಸಿಕೊಂಡಿದ್ದಾರೆ. ಈ ಹಿನ್ನಲೆ 4,39,25,239 ಮಂದಿ ಗುಣಮುಖರಾಗಿದ್ದಾರೆ ಎಂದು ವರದಿ ಹೇಳಿದೆ.</p>
]]></content:encoded>
					
		
		
			</item>
		<item>
		<title>ಒಂದೇ ಚುಚ್ಚುಮದ್ದಿನಿಂದ 39 ಮಕ್ಕಳಿಗೆ ಕೋವಿಡ್‌ ಲಸಿಕೆ..!</title>
		<link>https://peepalmedia.com/onde-cucchumaddininda-39-makkalige-covid-lasike/</link>
		
		<dc:creator><![CDATA[Peepal Media]]></dc:creator>
		<pubDate>Fri, 29 Jul 2022 07:08:37 +0000</pubDate>
				<category><![CDATA[ಆರೋಗ್ಯ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[breaking news]]></category>
		<category><![CDATA[corona virus]]></category>
		<category><![CDATA[covid-19]]></category>
		<category><![CDATA[health]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[Madya pradesha]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[saagar]]></category>
		<guid isPermaLink="false">https://peepalmedia.com/?p=273</guid>

					<description><![CDATA[ಸಾಗರ್‌ (ಮಧ್ಯ ಪ್ರದೇಶ): ಮಧ್ಯ ಪ್ರದೇಶದ ಖಾಸಗಿ ಶಾಲೆಯೊಂದರಲ್ಲಿ&#160; ಒಂದೇ ಸಿರಿಂಜ್​ನಿಂದ 39 ಮಕ್ಕಳಿಗೆ ಕೋವಿಡ್​-19 ಲಸಿಕೆಯನ್ನು ನೀಡಿದ್ದು. ಚುಚ್ಚುಮದ್ದು ನೀಡುವ ವ್ಯಕ್ತಿ ಎಲ್ಲಾ ಮಕ್ಕಳಿಗೂ ಒಂದೇ ಸಿರಂಜ್‌ ಉಪಯೋಗಿಸಿರುವ ಘಟನೆ ಬೆಳಕಿಗೆ ಬಂದಿದೆ. &#160; &#160;ಬೃಹತ್‌ ಲಸಿಕೆ ಅಭಿಯಾನದ ಭಾಗವಾಗಿ ನಗರದ ಜೈನ್‌ ಹೈಯರ್ ಸೆಕಂಡರಿ ಶಾಲೆಯಲ್ಲಿ ಲಸಿಕೆ ನೀಡಲಾಗುತ್ತಿದ್ದ ಸಂದರ್ಭದಲ್ಲಿ, ಜಿತೇಂದ್ರ ಅಹಿರ್ವಾರ್‌ ಎಂಬ ವ್ಯಕ್ತಿ ಮಕ್ಕಳಿಗೆ ಒಂದೇ ಚುಚ್ಚು ಮದ್ದಿನಲ್ಲಿ ಲಸಿಕೆ ಹಾಕುತ್ತಿದ್ದುದನ್ನು ಗಮನಿಸಿದ ಪೋಷಕರು, ಆತನ ಮೇಲೆ ಮತ್ತು ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ [&#8230;]]]></description>
										<content:encoded><![CDATA[
<p class="has-medium-font-size"><strong>ಸಾಗರ್‌ (ಮಧ್ಯ ಪ್ರದೇಶ): </strong>ಮಧ್ಯ ಪ್ರದೇಶದ<strong> </strong>ಖಾಸಗಿ ಶಾಲೆಯೊಂದರಲ್ಲಿ&nbsp; ಒಂದೇ ಸಿರಿಂಜ್​ನಿಂದ 39 ಮಕ್ಕಳಿಗೆ ಕೋವಿಡ್​-19 ಲಸಿಕೆಯನ್ನು ನೀಡಿದ್ದು. ಚುಚ್ಚುಮದ್ದು ನೀಡುವ ವ್ಯಕ್ತಿ ಎಲ್ಲಾ ಮಕ್ಕಳಿಗೂ ಒಂದೇ ಸಿರಂಜ್‌ ಉಪಯೋಗಿಸಿರುವ ಘಟನೆ ಬೆಳಕಿಗೆ ಬಂದಿದೆ. &nbsp;</p>



<p class="has-medium-font-size">&nbsp;ಬೃಹತ್‌ ಲಸಿಕೆ ಅಭಿಯಾನದ ಭಾಗವಾಗಿ ನಗರದ ಜೈನ್‌ ಹೈಯರ್ ಸೆಕಂಡರಿ ಶಾಲೆಯಲ್ಲಿ ಲಸಿಕೆ ನೀಡಲಾಗುತ್ತಿದ್ದ ಸಂದರ್ಭದಲ್ಲಿ, ಜಿತೇಂದ್ರ ಅಹಿರ್ವಾರ್‌ ಎಂಬ ವ್ಯಕ್ತಿ ಮಕ್ಕಳಿಗೆ ಒಂದೇ ಚುಚ್ಚು ಮದ್ದಿನಲ್ಲಿ ಲಸಿಕೆ ಹಾಕುತ್ತಿದ್ದುದನ್ನು ಗಮನಿಸಿದ ಪೋಷಕರು, ಆತನ ಮೇಲೆ ಮತ್ತು ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳ ಮೇಲೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ನಂತರ ಲಸಿಕೆ ನೀಡುತ್ತಿದ್ದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದು. ಲಸಿಕೆ ನೀಡುವ ಸಿಬ್ಬಂದಿಯ ಬೇಜವಾಬ್ದಾರಿತನದಿಂದ ಈ ಪ್ರಕರಣ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>



<p class="has-medium-font-size">ಈ ವಿಚಾರವಾಗಿ ಕ್ಷಿತಿಜ್ ಸಿಂಘಾಲ್, ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಮತ್ತು ಆರೋಗ್ಯ ಅಧಿಕಾರಿಯಾಗಿರುವ ಡಾ. ಡಿ.ಕೆ. ಗೋಸ್ವಾಮಿ ಅವರನ್ನು ಕಳುಹಿಸಿ ಘಟನೆಯ ಪರಿಶೀಲನೆ ಮಾಡುವಂತೆ ಸೂಚಿಸಿದ್ದು, ಭಾರತೀಯ ದಂಡ ಸಂಹಿತೆ ಸೆಕ್ಷನ್ 336 ಅಡಿ ಯಲ್ಲಿ ಜಿತೇಂದ್ರ ಅಹಿರ್ವಾರ್‌ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಗೋಪಾಲ್ ಗಂಜ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. .</p>



<p class="has-medium-font-size">&nbsp;ವಿಭಾಗೀಯ ಆಯುಕ್ತರು ಇಲಾಖಾ ತನಿಖೆ ಮತ್ತು ಜಿಲ್ಲಾ ಲಸಿಕೆ ಅಧಿಕಾರಿ ಡಾ.ರಾಕೇಶ್ ರೋಷನ್ ವಿರುದ್ಧ ಕ್ರಮಕ್ಕೆ ಮುಂದಾಗಿದ್ದು. ಸಿಎಂಎಚ್‌ಒ ವರದಿಯ ಆಧಾರದ ಮೇಲೆ ಜಿಲ್ಲಾಧಿಕಾರಿ ಶಿಫಾರಸು ಮಾಡಿದ್ದಾರೆ.</p>



<p class="has-medium-font-size">ಲಸಿಕೆ ಪಡೆದ ಲ್ಲಾ ಮಕ್ಕಳುಗಳು 15 ವರ್ಷ ಮೇಲ್ಪಟ್ಟವರಾಗಿದ್ದು, 9ರಿಂದ 12ನೇ ತರಗತಿ ಒಳಗಿನವರಾಗಿದ್ದರೆ. ಎಲ್ಲ ಮಕ್ಕಳ ತಪಾಸಣೆ ನಂತರ 19 ಮಕ್ಕಳ ಆರೋಗ್ಯ ಸ್ಥಿರವಾಗಿದ್ದು, ಉಳಿದ ಮಕ್ಕಳ ವರದಿಗಳು ಬರಬೇಕಿದೆ ಎಂದು ಸಾಗರ್​ ವಿಭಾಗೀಯ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>
]]></content:encoded>
					
		
		
			</item>
	</channel>
</rss>
