<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>court &#8211; Peepal Media</title>
	<atom:link href="https://peepalmedia.com/tag/court/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 30 Nov 2024 04:35:50 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>court &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಡಿಸೆಂಬರ್ 6ರಂದು ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ</title>
		<link>https://peepalmedia.com/umar-khalids-bail-plea-to-be-heard-on-december-6/</link>
		
		<dc:creator><![CDATA[Peepal Media]]></dc:creator>
		<pubDate>Sat, 30 Nov 2024 04:35:49 +0000</pubDate>
				<category><![CDATA[ದೇಶ]]></category>
		<category><![CDATA[court]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[Supreme Court]]></category>
		<category><![CDATA[Umar Khalid]]></category>
		<guid isPermaLink="false">https://peepalmedia.com/?p=49900</guid>

					<description><![CDATA[ಹೊಸದೆಹಲಿ: ಯುಪಿಎ ಕಾಯ್ದೆಯಡಿ ಬಂಧಿತರಾಗಿರುವ ಉಮರ್ ಖಾಲಿದ್ ಜತೆಗೆ ಗುಲ್ಫಿಶಾ ಫಾತಿಮಾ ಮತ್ತು ಖಾಲಿದ್ ಸೈಫಿ ಜಾಮೀನು ಅರ್ಜಿಯ ವಿಚಾರಣೆ ಡಿಸೆಂಬರ್ 6ರಂದು ನಡೆಯಲಿದೆ. ನ್ಯಾಯಮೂರ್ತಿ ನವೀನ್ ಚಾವ್ಲಾ ಮತ್ತು ನ್ಯಾಯಮೂರ್ತಿ ಜೈಲಿಂದರ್ ಕೌರ್ ಅವರನ್ನೊಳಗೊಂಡ ದೆಹಲಿ ಹೈಕೋರ್ಟ್ ಪೀಠವು ಇದನ್ನು ಕೈಗೆತ್ತಿಕೊಳ್ಳಲಿದೆ. ಈ ಮೂವರೂ 2020ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಯುಪಿಎ ಅಡಿಯಲ್ಲಿ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ದೀರ್ಘ ಕಾಲದಿಂದ ಜೈಲಿನಲ್ಲಿ ಇರುವ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಈ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ, ಈ ಪೀಠವು [&#8230;]]]></description>
										<content:encoded><![CDATA[
<p>ಹೊಸದೆಹಲಿ: ಯುಪಿಎ ಕಾಯ್ದೆಯಡಿ ಬಂಧಿತರಾಗಿರುವ ಉಮರ್ ಖಾಲಿದ್ ಜತೆಗೆ ಗುಲ್ಫಿಶಾ ಫಾತಿಮಾ ಮತ್ತು ಖಾಲಿದ್ ಸೈಫಿ ಜಾಮೀನು ಅರ್ಜಿಯ ವಿಚಾರಣೆ ಡಿಸೆಂಬರ್ 6ರಂದು ನಡೆಯಲಿದೆ.</p>



<p>ನ್ಯಾಯಮೂರ್ತಿ ನವೀನ್ ಚಾವ್ಲಾ ಮತ್ತು ನ್ಯಾಯಮೂರ್ತಿ ಜೈಲಿಂದರ್ ಕೌರ್ ಅವರನ್ನೊಳಗೊಂಡ ದೆಹಲಿ ಹೈಕೋರ್ಟ್ ಪೀಠವು ಇದನ್ನು ಕೈಗೆತ್ತಿಕೊಳ್ಳಲಿದೆ. ಈ ಮೂವರೂ 2020ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಯುಪಿಎ ಅಡಿಯಲ್ಲಿ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ದೀರ್ಘ ಕಾಲದಿಂದ ಜೈಲಿನಲ್ಲಿ ಇರುವ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಈ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ, ಈ ಪೀಠವು ಅಕ್ಟೋಬರ್ 7ರಂದು ಉಮರ್ ಖಾಲಿದ್ ಅವರ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಳ್ಳಲಿದೆ.</p>



<p>ಆದರೆ, ಪೀಠ ಸಭೆ ವಿಫಲವಾದ ಕಾರಣ ಅದು ಸಾಧ್ಯವಾಗಲಿಲ್ಲ. ನಂತರ ಅರ್ಜಿಯನ್ನು ನವೆಂಬರ್ 25ರಂದು ವಿಚಾರಣೆಗೆ ಪಟ್ಟಿ ಮಾಡಲಾಯಿತು. ಈ ವರ್ಷದ ಸೆಪ್ಟೆಂಬರ್ 14ರಂದು ಉಮರ್ ಖಾಲಿದ್ ನಾಲ್ಕು ವರ್ಷ ಜೈಲಿನಲ್ಲಿ ಕಳೆದರು. ಉಮರ್ ಖಾಲಿದ್ ಅವರು ಕೆಳ ನ್ಯಾಯಾಲಯದಿಂದ ಸುಪ್ರೀಂ ಕೋರ್ಟ್‌ಗೆ ಜಾಮೀನಿಗಾಗಿ ಹಲವಾರು ಅರ್ಜಿಗಳನ್ನು ಸಲ್ಲಿಸಿದರು.</p>



<p>ಈ ವರ್ಷ ಮೇ 28ರಂದು ಕೆಳ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು. ನಾಲ್ಕು ವರ್ಷಗಳಲ್ಲಿ ಅವರ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ 14 ಬಾರಿ ಮುಂದೂಡಲಾಯಿತು. ಆ ಬಳಿಕ ವಿಚಾರಣಾ ನ್ಯಾಯಾಲಯದ ಮೊರೆ ಹೋಗಿದ್ದರು. ಈ ವರ್ಷದ ಫೆಬ್ರವರಿಯಲ್ಲಿ, ಉಮರ್ ಖಾಲಿದ್ ಅವರ ವಕೀಲ ಕಪಿಲ್ ಸಿಬಲ್ ಅವರು ಕೆಳ ನ್ಯಾಯಾಲಯದಲ್ಲಿ ಸಲ್ಲಿಸಲು ಸುಪ್ರೀಂ ಕೋರ್ಟ್‌ನಿಂದ ಅರ್ಜಿಯನ್ನು ಹಿಂತೆಗೆದುಕೊಂಡರು.</p>
]]></content:encoded>
					
		
		
			</item>
		<item>
		<title>ಜೈಲುಗಳಲ್ಲೂ ದಲಿತರ ಮೇಲೆ ಜಾತಿ ತಾರತಮ್ಯ: ಸುಪ್ರೀಂ ಕಳವಳ</title>
		<link>https://peepalmedia.com/caste-discrimination-against-dalits-in-jails-too-supreme-concern/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 11 Jul 2024 11:49:27 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[bengalure]]></category>
		<category><![CDATA[castism]]></category>
		<category><![CDATA[court]]></category>
		<category><![CDATA[india]]></category>
		<category><![CDATA[jail]]></category>
		<category><![CDATA[kannada]]></category>
		<category><![CDATA[news]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[suprim]]></category>
		<guid isPermaLink="false">https://peepalmedia.com/?p=42091</guid>

					<description><![CDATA[ನವದೆಹಲಿ: ಸರ್ಕಾರಿ ಜೈಲುಗಳಲ್ಲಿರುವ ಎಸ್‌ಸಿ, ಎಸ್ಟಿ ಸಮುದಾಯದವರ ಮೇಲೆ ದಿನನಿತ್ಯ ಕೆಲಸ ಮಾಡಿಸುವ ವಿಚಾರದಲ್ಲಿ ಜಾತಿ ತಾರತಮ್ಯ ಮಾಡಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಕಳವಳ ವ್ಯಕ್ತಪಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ಬಾರ್‌ ಅಂಡ್‌ ಬೆಂಚ್‌ ವರದಿ ಪ್ರಕಟಿಸಿದೆ. ಪತ್ರಕರ್ತರಾದ ಸುಕನ್ಯಾ ಶಾಂತಾ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಸರ್ಕಾರಿ ಕಾರಾಗೃಹ ಮಾರ್ಗಸೂಚಿಯಲ್ಲಿನ ಕೆಲ ನಿಬಂಧನೆಗಳು ಜಾತಿ ತಾರತಮ್ಯವನ್ನು ಉತ್ತೇಜಿಸುವ ರೀತಿಯಲ್ಲಿವೆ. ಅವುಗಳನ್ನು ಬದಲಾಯಿಸಬೇಕಿದೆ ಎಂದಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ನ್ಯಾಯಪೀಠ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿ [&#8230;]]]></description>
										<content:encoded><![CDATA[
<p><strong>ನವದೆಹಲಿ: </strong>ಸರ್ಕಾರಿ ಜೈಲುಗಳಲ್ಲಿರುವ ಎಸ್‌ಸಿ, ಎಸ್ಟಿ ಸಮುದಾಯದವರ ಮೇಲೆ ದಿನನಿತ್ಯ ಕೆಲಸ ಮಾಡಿಸುವ ವಿಚಾರದಲ್ಲಿ ಜಾತಿ ತಾರತಮ್ಯ ಮಾಡಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಕಳವಳ ವ್ಯಕ್ತಪಡಿಸಿದೆ. </p>



<p>ಇದಕ್ಕೆ ಸಂಬಂಧಿಸಿದಂತೆ ಬಾರ್‌ ಅಂಡ್‌ ಬೆಂಚ್‌ ವರದಿ  ಪ್ರಕಟಿಸಿದೆ.  ಪತ್ರಕರ್ತರಾದ ಸುಕನ್ಯಾ ಶಾಂತಾ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಸರ್ಕಾರಿ ಕಾರಾಗೃಹ ಮಾರ್ಗಸೂಚಿಯಲ್ಲಿನ ಕೆಲ ನಿಬಂಧನೆಗಳು ಜಾತಿ ತಾರತಮ್ಯವನ್ನು ಉತ್ತೇಜಿಸುವ ರೀತಿಯಲ್ಲಿವೆ. ಅವುಗಳನ್ನು ಬದಲಾಯಿಸಬೇಕಿದೆ ಎಂದಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ನ್ಯಾಯಪೀಠ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿ ತೀರ್ಪು ಕಾಯ್ದಿರಿಸಿದೆ. </p>



<p>ಭಾರತದ ಕಾರಾಗೃಹಗಳಲ್ಲಿ ಜಾತಿ ಆಧಾರದಲ್ಲಿ ಶ್ರಮ ವಿಭಜನಾ ಕೆಲಸಗಳನ್ನು ನೀಡಲಾಗುತ್ತಿದೆ. ಕೆಳಜಾತಿಯವರಿಗೆ ಜಾಸ್ತಿ ಶ್ರಮದಾಯಕ ಹಾಗೂ ಮೇಲ್ಜಾತಿಯವರಿಗೆ ಕಡಿಮೆ ಶ್ರಮದ ಕೆಲಸಗಳನ್ನು ನೀಡಲಾಗುವ ಮೂಲಕ ಜಾತಿ ತಾರತಮ್ಯ ಎಸಗಲಾಗುತ್ತಿದೆ ಎಂದು ಶಾಂತಾ  ತಮ್ಮ ಅರ್ಜಿಯಲ್ಲಿ ವಿವರಸಿದ್ದಾರೆ.</p>



<p> ಸರ್ಕಾರಿ ಕಾರಾಗೃಹ ಮಾರ್ಗಸೂಚಿಯಲ್ಲಿಯೇ ಈ ರೀತಿಯ ತಾರತಮ್ಯ ಮಾಡಲು ಅವಕಾಶ ನೀಡಲಾಗಿದೆ. ಅಧಿಸೂಚಿತ ಪಂಗಡಗಳಿಗೆ ಸೇರಿದವರಿಗೆ ಇಂಥಿಂಥ ಕೆಲಸ ಕೊಡಬಹುದು ಎಂದು ಮಾರ್ಗಸೂಚಿಯೇ ತಿಳಿಸುತ್ತದೆ.  ದಲಿತರನ್ನು ಅಪರಾಧಿಗಳು, ತಿರುಕರು, ವಲಸೆಯವರು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಶಾಂತಾ ತಿಳಿಸಿದ್ದಾರೆ.  ಗುರುವಾರ ಈ ಅರ್ಜಿಯ  ವಿಚಾರಣೆ ನಡೆಸಿದ ಕೋರ್ಟ್‌ ತೀರ್ಪನ್ನು ಕಾಯ್ದಿರಿಸಿದೆ. </p>
]]></content:encoded>
					
		
		
			</item>
		<item>
		<title>ದೊಡ್ಮನೆ ಕುಟುಂಬದ ನಟ ಯುವರಾಜ್‌ ಕುಮಾರ್ &#8211; ಶ್ರೀದೇವಿ ದಾಂಪತ್ಯದಲ್ಲಿ ಬಿರುಕು: ವಿಚ್ಚೇದನಕ್ಕೆ ಅರ್ಜಿ!</title>
		<link>https://peepalmedia.com/dodmane-family-actor-yuvraj-kumar-sridevi-rift-in-marriage-file-for-divorce/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 10 Jun 2024 08:45:46 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ಬೆಂಗಳೂರು]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[bengalure]]></category>
		<category><![CDATA[court]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[rajkumar]]></category>
		<category><![CDATA[state politics]]></category>
		<category><![CDATA[writing]]></category>
		<category><![CDATA[yuvarajkumar]]></category>
		<guid isPermaLink="false">https://peepalmedia.com/?p=40560</guid>

					<description><![CDATA[ಬೆಂಗಳೂರು: ಗಾಯಕ ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಚೇದನ ಪಡೆದುಕೊಂಡ ಬೆನ್ನಲ್ಲೇ ಮತ್ತೊಂದು ವಿಚ್ಛೇದನ ಸುದ್ದಿ ಬಂದಿದೆ. ರಾಜುಕುಮಾರ್‌ ಕುಟುಂಬದ ಕುಡಿ, ಕನ್ನಡ ಚಿತ್ರರಂಗದ ನಟ ಯುವರಾಜ್‌ ಕುಮಾರ್ ಮತ್ತು ಶ್ರೀದೇವಿ ಬೈರಪ್ಪ ಸಂಸಾರದಲ್ಲಿ ಬಿರುಕು ಮೂಡಿದ್ದು, ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯುವರಾಜ್‌ ಪತ್ನಿ ಶ್ರೀದೇವಿ ಭೈರಪ್ಪಗೆ ಕೋರ್ಟ್​ನಿಂದ ನೋಟಿಸ್ ಜಾರಿಯಾಗಿದೆ. ಜೂನ್ 6 ರಂದು ಯುವರಾಜ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಮುಂದಿನ ತಿಂಗಳು ಜುಲೈ 4ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ದೊಡ್ಮನೆ ಕುಟುಂಬದ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಗಾಯಕ ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಚೇದನ ಪಡೆದುಕೊಂಡ ಬೆನ್ನಲ್ಲೇ ಮತ್ತೊಂದು ವಿಚ್ಛೇದನ ಸುದ್ದಿ ಬಂದಿದೆ.  ರಾಜುಕುಮಾರ್‌ ಕುಟುಂಬದ ಕುಡಿ, ಕನ್ನಡ ಚಿತ್ರರಂಗದ ನಟ ಯುವರಾಜ್‌ ಕುಮಾರ್ ಮತ್ತು ಶ್ರೀದೇವಿ ಬೈರಪ್ಪ ಸಂಸಾರದಲ್ಲಿ ಬಿರುಕು ಮೂಡಿದ್ದು, ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. </p>



<p>ಈ ಹಿನ್ನೆಲೆಯಲ್ಲಿ ಯುವರಾಜ್‌ ಪತ್ನಿ ಶ್ರೀದೇವಿ ಭೈರಪ್ಪಗೆ ಕೋರ್ಟ್​ನಿಂದ ನೋಟಿಸ್ ಜಾರಿಯಾಗಿದೆ. ಜೂನ್ 6 ರಂದು ಯುವರಾಜ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಮುಂದಿನ ತಿಂಗಳು ಜುಲೈ 4ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ.</p>



<p>ದೊಡ್ಮನೆ ಕುಟುಂಬದ ಕುಡಿ, ರಾಘವೇಂದ್ರ ರಾಜ್‌ಕುಮಾರ್ ಅವರ ಕಿರಿಯ ಪುತ್ರನಾಗಿರುವ ಯುವ ರಾಜ್ ಕುಮಾರ್ ಮತ್ತು ಮೈಸೂರು ಮೂಲದ ಶ್ರೀದೇವಿ ಭೈರಪ್ಪ ಈ ಮೊದಲು ಸ್ನೇಹಿತರಾಗಿದ್ದರು. ಸ್ನೇಹ ಪ್ರೀತಿಗೆ ತಿರುಗಿತು. 7 ವರ್ಷಗಳ ಕಾಲ ಪ್ರೀತಿಸಿ, ಮನೆಯವರನ್ನು ಒಪ್ಪಿಸಿ  2019, ಮೇ 26ರಂದು ಅದ್ಧೂರಿಯಾಗಿ ವಿವಾಹವಾಗಿದ್ದರು.</p>



<p>ಈಗ ಇಬ್ಬರ ನಡುವೆ ಬಿರುಕು ಮೂಡಿದ್ದು, ಅಧಿಕೃತವಾಗಿ ವಿಚ್ಚೇದನ ಪಡೆಯಲು ದಂಪತಿ ನಿರ್ಧಾರ ಮಾಡಿದ್ದಾರೆ. ಸೆಕ್ಷನ್ (13 (1) (ia) ಅಡಿಯಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಪತ್ನಿ ವಿರುದ್ಧ ಕ್ರೌರ್ಯದ ಆರೋಪ ಮಾಡಿ ಯುವರಾಜ್ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಯಾವ ಕಾರಣಕ್ಕೆ ಇವರಿಬ್ಬರ ಮಧ್ಯೆ ಬಿರುಕಾಗಿದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.</p>



<p>ಶ್ರೀದೇವಿ  6-7 ತಿಂಗಳಿಂದ ದೊಡ್ಮನೆ ಕುಟುಂಬದಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ.  ಶ್ರೀದೇವಿ ಅಣ್ಣಾವ್ರ ಕುಟುಂಬದ ಒಡೆತನದ &#8216;ಡಾ.ರಾಜ್ ಕುಮಾರ್ ಸಿವಿಲ್ ಸರ್ವೀಸ್ ಅಕಾಡೆಮಿ&#8217; ಉಸ್ತುವಾರಿ ವಹಿಸಿಕೊಂಡು, ರುವಾರಿಯಾಗಿ ನಿರ್ವಹಣೆ ಮಾಡುತ್ತಿದ್ದರು. ಒಂದು ವರ್ಷದಿಂದ  ದಂಪತಿ ನಡುವೆ ಕಲಹ ಎನ್ನಲಾಗಿದೆ. ದಂಪತಿಗಳ ಕಲಹದ ಬಗ್ಗೆ ಎರಡೂ ಕುಟುಂಬದಿಂದ ಆಗಿರುವ ಭಿನ್ನಾಭಿಪ್ರಾಯ ಪರಿಹರಿಸಲು ಪ್ರಯತ್ನ ನಡೆದಿದೆ.</p>



<p>ಯುವರಾಜ್‌ಕುಮಾರ್ ಕಡೆಯಿಂದ &nbsp;ವಿಚ್ಚೇದನಕ್ಕೆ ಪಿಟಿಷನ್ ಅರ್ಜಿ ಹಾಕಿದ್ದು, ಶ್ರೀದೇವಿ ಭೈರಪ್ಪ ಅವರ ನಡೆ ಏನು? ಎಂಬುದು ಇನ್ನೂ ತಿಳಿದುಬಂದಿಲ್ಲ. ಯುವ ಸಿನಿಮಾದ ಮುಹೂರ್ತದಲ್ಲಿ ಇಬ್ಬರೂ ಕೂಡ ಒಟ್ಟಿಗೆ ಕಾಣಿಸಿಕೊಂಡಿದ್ದರು. ಯುವ ರಿಲೀಸ್ ಸಮಯದಲ್ಲಿ ಶ್ರೀದೇವಿ ಒಟ್ಟಿಗೆ ಇರಲಿಲ್ಲ.&nbsp;</p>



<p> ಪುನಿತ್‌ ರಾಜಕುಮಾರ್‌ ನೇತೃವದ ಮದುವೆ: ಇಬ್ಬರ ಮದುವೆಗೆ ರಾಘವೇಂದ್ರ ರಾಜ್‌ಕುಮಾರ್ ದಂಪತಿಯ ವಿರೋಧ ಇತ್ತು. ಆದ್ರೆ ಪುನೀತ್ ರಾಜ್ ಕುಮಾರ್ ಅವರು ಎಲ್ಲರನ್ನು ಒಪ್ಪಿಸಿ ಅವರೇ ಮುಂದೆ ನಿಂತು ಇಬ್ಬರಿಗೂ ಮದುವೆ ಮಾಡಿಸಿದ್ದರು. ಇದೀಗ ಕಳೆದ ಆರೇಳು ತಿಂಗಳಿಂದ ದೊಡ್ಮನೆಯಿಂದ ದೂರಾಗಿರೋ ಶ್ರೀದೇವಿ ಬೈರಪ್ಪ ವಿದೇಶದಲ್ಲಿದ್ದಾರೆ ಎಂದು ತಿಳಿದು ಬಂದಿದೆ. </p>
]]></content:encoded>
					
		
		
			</item>
		<item>
		<title>ಗಂಭೀರ ಖಾಯಿಲೆಯ ಲಕ್ಷಣಗಳಿವೆ, ಆದ್ರೂ ನಾಡಿದ್ದು ಜೈಲಿಗೆ ಹೋಗ್ತಿನಿ: ಕೇಜ್ರಿವಾಲ್‌</title>
		<link>https://peepalmedia.com/has-symptoms-of-serious-illness-but-will-go-to-jail-kejriwal/</link>
		
		<dc:creator><![CDATA[Hanumanth Halageri]]></dc:creator>
		<pubDate>Fri, 31 May 2024 10:16:45 +0000</pubDate>
				<category><![CDATA[Uncategorized]]></category>
		<category><![CDATA[ದೇಶ]]></category>
		<category><![CDATA[AAP]]></category>
		<category><![CDATA[AAP Bangalore Spokesperson Usha Mohan]]></category>
		<category><![CDATA[aap celebration]]></category>
		<category><![CDATA[aravind kejrival]]></category>
		<category><![CDATA[arvind kejriwal]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[court]]></category>
		<category><![CDATA[Court notice]]></category>
		<category><![CDATA[dehali]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[kejrival]]></category>
		<category><![CDATA[modi]]></category>
		<category><![CDATA[New Delhi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=40168</guid>

					<description><![CDATA[ನವದೆಹಲಿ: ನನ್ನ ದೇಹದೊಳಗೆ ಗಂಭಿರ ಖಾಯಿಲೆಗಳ ಲಕ್ಷಣಗಳಿವೆ. ಆದರೂ ನಾಡಿದ್ದು ಜೂನ್‌ 2ರಂದು ಜೈಲಿಗೆ ಹೋಗಿ ಶರಣಾಗ್ತಿನಿ. ದೇಶದ ಸರ್ವಾಧಿಕಾರಿಗೆ ಬುದ್ಧಿ ಕಲಿಸುವುದಕ್ಕಾಗಿ ನಾನು ಮತ್ತೆ ಜೈಲಿಗೆ ಹೋಗಲಿದ್ದೇನೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ‘ನನ್ನನ್ನು ಎಷ್ಟು ದಿನ ಜೈಲಿನಲ್ಲಿ ಇರಿಸಲಾಗುತ್ತದೆ ಎಂದು ನನಗೆ ತಿಳಿದಿಲ್ಲ. ನಾಡಿದ್ದು ತಿಹಾರ್ ಜೈಲಿನಲ್ಲಿ ಪೊಲೀಸರ ಮುಂದೆ ಶರಣಾಗುತ್ತೇನೆ ಎಂದು ಶುಕ್ರವಾರ ಹೇಳಿದ್ದಾರೆ. ಮೇ 10 ರಿಂದ ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವ ಕೇಜ್ರಿವಾಲ್ [&#8230;]]]></description>
										<content:encoded><![CDATA[
<p></p>



<p> <strong>ನವದೆಹಲಿ:</strong> ನನ್ನ ದೇಹದೊಳಗೆ ಗಂಭಿರ ಖಾಯಿಲೆಗಳ ಲಕ್ಷಣಗಳಿವೆ. ಆದರೂ ನಾಡಿದ್ದು  ಜೂನ್‌ 2ರಂದು ಜೈಲಿಗೆ ಹೋಗಿ ಶರಣಾಗ್ತಿನಿ. ದೇಶದ ಸರ್ವಾಧಿಕಾರಿಗೆ ಬುದ್ಧಿ ಕಲಿಸುವುದಕ್ಕಾಗಿ ನಾನು ಮತ್ತೆ ಜೈಲಿಗೆ ಹೋಗಲಿದ್ದೇನೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ. </p>



<p>ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ‘ನನ್ನನ್ನು ಎಷ್ಟು ದಿನ ಜೈಲಿನಲ್ಲಿ ಇರಿಸಲಾಗುತ್ತದೆ ಎಂದು ನನಗೆ ತಿಳಿದಿಲ್ಲ. ನಾಡಿದ್ದು ತಿಹಾರ್ ಜೈಲಿನಲ್ಲಿ ಪೊಲೀಸರ ಮುಂದೆ ಶರಣಾಗುತ್ತೇನೆ ಎಂದು ಶುಕ್ರವಾರ ಹೇಳಿದ್ದಾರೆ. </p>



<p>ಮೇ 10 ರಿಂದ ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವ ಕೇಜ್ರಿವಾಲ್ ಹೊರಗಿದ್ದರು. ಅವರ ದೇಹವು “ಗಂಭೀರ ಕಾಯಿಲೆ”ಯ ಕೆಲವು ಲಕ್ಷಣಗಳನ್ನು ಹೊಂದಿರಬಹುದು ಎಂದು ವೈದ್ಯರು ತಿಳಿಸಿದ್ದರು.</p>



<p><strong>ಚಿತ್ರಹಿಂಸೆಗೆ ತಲೆಬಾಗುವುದಿಲ್ಲ: </strong> ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕೇಜ್ರಿವಾಲ್, “ಅವರು ನನ್ನನ್ನು ಬಗ್ಗಿಸಲು ಮತ್ತು ನನ್ನ ಬಾಯಿ ಮುಚ್ಚಿಸಲು ಹಲವು ರೀತಿಯಲ್ಲಿ ಪ್ರಯತ್ನಿಸಿದರು. ಆದರೆ, ಯಶಸ್ವಿಯಾಗಲಿಲ್ಲ, ನಾನು ಜೈಲಿನಲ್ಲಿದ್ದಾಗ ಹಲವು ರೀತಿಯಲ್ಲಿ ಚಿತ್ರಹಿಂಸೆ ನೀಡಿದರು. ನನ್ನ ಔಷಧಿಗಳನ್ನು ನಿಲ್ಲಿಸಿದರು. ಆದರೂ ನಾನು ಸೋಲಲಿಲ್ಲ ಎಂದರು.</p>



<p>“ಜೈಲಿಗೆ ಹೋದಾಗ ನನ್ನ ತೂಕ 70 ಕೆ.ಜಿ. ಇವತ್ತು 64 ಕೆ.ಜಿ. ಇದೆ. ಜೈಲಿನಿಂದ ಬಿಡುಗಡೆಯಾದ ಮೇಲೂ ತೂಕ ಹೆಚ್ಚುತ್ತಿಲ್ಲ, ಇದು ದೇಹದಲ್ಲಿ ಯಾವುದೋ ಗಂಭೀರ ಕಾಯಿಲೆಯ ಲಕ್ಷಣವೂ ಆಗಿರಬಹುದು ಎಂದು ವೈದ್ಯರು ಹೇಳುತ್ತಿದ್ದಾರೆ. ಅನೇಕ ಪರೀಕ್ಷೆಗಳನ್ನು ಮಾಡಬೇಕಾಗಿದೆ” ಎಂದು ಅವರು ಹೇಳಿದರು.</p>



<p>“ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ನನಗೆ 21 ದಿನಗಳ ಕಾಲಾವಕಾಶ ನೀಡಿತ್ತು. ನಾಡಿದ್ದು ದಿನ ನಾನು ತಿಹಾರ್ ಜೈಲಿಗೆ ಹಿಂತಿರುಗುತ್ತೇನೆ, ಮಧ್ಯಾಹ್ನ 3 ಗಂಟೆ ಸುಮಾರಿಗೆ ನನ್ನ ಮನೆಯಿಂದ ಹೊರಡುತ್ತೇನೆ. ಈ ಬಾರಿ ಅವರು ನನಗೆ ಹೆಚ್ಚು ಚಿತ್ರಹಿಂಸೆ ನೀಡುವ ಸಾಧ್ಯತೆಯಿದೆ. ಆದರೆ ನಾನು ತಲೆಬಾಗುವುದಿಲ್ಲ&#8221; ಎಂದು ಹೇಳಿದರು.</p>



<p><strong>ಉಚಿತ ಯೋಜನೆಗಳ ಮುಂದುವರಿಕೆ:</strong> “ ಜನರಿಗಾಗಿ ಪ್ರಾರಂಭಿಸಲಾಗಿರುವ ಉಚಿತ ವಿದ್ಯುತ್, ಮೊಹಲ್ಲಾ ಚಿಕಿತ್ಸಾಲಯಗಳು, ಆಸ್ಪತ್ರೆಗಳು, ಉಚಿತ ಔಷಧಿಗಳು, ಚಿಕಿತ್ಸೆ, 24 ಗಂಟೆಗಳ ವಿದ್ಯುತ್ ಮತ್ತು ಇತರ ಹಲವು ವಿಷಯಗಳು ಮುಂದುವರಿಯುತ್ತದೆ. ಹಿಂದಿರುಗಿದ ನಂತರ, ನಾವು ದೆಹಲಿಯ ಪ್ರತಿ ತಾಯಿ ಮತ್ತು ಸಹೋದರಿಗೆ ಪ್ರತಿ ತಿಂಗಳು 1,000 ರೂಪಾಯಿಗಳನ್ನು ನೀಡಲು ಪ್ರಾರಂಭಿಸುತ್ತೇವೆ” ಎಂದು ಅವರು ಹೇಳಿದರು.</p>



<p>ನ<strong>ನ್ನ ತಾಯಿಗಾಗಿ ಪ್ರಾರ್ಥಿಸಿ: </strong> ಅಸ್ವಸ್ಥರಾಗಿರುವ ತಮ್ಮ ತಾಯಿಗಾಗಿ ಪ್ರಾರ್ಥಿಸುವಂತೆ ಕೇಜ್ರಿವಾಲ್ ಜನರಲ್ಲಿ ಮನವಿ ಮಾಡಿದ್ದಾರೆ.&nbsp;“ನನ್ನ ಹೆತ್ತವರಿಗೆ ತುಂಬಾ ವಯಸ್ಸಾಗಿದೆ, ನನ್ನ ತಾಯಿ ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ, ನಾನು ಜೈಲಿನಲ್ಲಿ ಅವಳ ಬಗ್ಗೆ ತುಂಬಾ ಚಿಂತೆ ಮಾಡುತ್ತೇನೆ.  ನನ್ನ ಹೆತ್ತವರನ್ನು ನೋಡಿಕೊಳ್ಳಿ ಮತ್ತು ಅವರಿಗಾಗಿ ಪ್ರಾರ್ಥಿಸಿ” ಎಂದು ಬೇಸರದಿಂದ ಹೇಳಿದರು.</p>



<p>ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಏಳು ದಿನಗಳ ವಿಸ್ತರಣೆಗೆ ಕೇಜ್ರಿವಾಲ್ ಅವರ ಮನವಿಯನ್ನು ಆಲಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು. </p>
]]></content:encoded>
					
		
		
			</item>
		<item>
		<title>ಧ್ರುವ್‌ ರಾಠಿ ವಿಡಿಯೋ ಹಂಚಿಕೆ: ಸುಳ್ಳು ಬಿಂಬಿಸುವ ವಿಡಿಯೋ ಎಂದು ಕೇಸ್‌ ದಾಖಲಿಸಿದ ಪೊಲೀಸರು</title>
		<link>https://peepalmedia.com/dhruv-rathi-video-sharing-the-police-registered-a-case-as-a-fake-video/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 30 May 2024 07:34:34 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[court]]></category>
		<category><![CDATA[druva rathi]]></category>
		<category><![CDATA[fir]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[modi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[police]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=40099</guid>

					<description><![CDATA[ಮುಂಬೈ: ಖ್ಯಾತ ಯುಟ್ಯೂಬರ್‌ ದ್ರುವ್‌ ರಾಠಿಯವರು ಮೋದಿ ಬಗ್ಗೆ ತಯಾರಿಸಿದ್ದ ವಿಡಿಯೋ ಒಂದನ್ನು ವಾಟ್ಸಪ್‌ ಗುಂಪಿನಲ್ಲಿ ಹಂಚಿಕೊಂಡ ಯುವ ವಕೀಲನ ಮೇಲೆ ಮಹಾರಾಷ್ಟ್ರದ ವಸಾಯಿ ಪೊಲೀಸರು ಸ್ವಯಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಲಿಬರೇಶನ್‌ನ ಮಹಾರಾಷ್ಟ್ರ ಕಾರ್ಯದರ್ಶಿಯೂ ಆಗಿರುವ ವಕೀಲ ಆದೇಶ್ ಬನ್ಸೋಡೆ ‘ಮೈಂಡ್ ಆಫ್ ಎ ಡಿಕ್ಟೇಟರ್’ ಎಂಬ ಶೀರ್ಷಿಕೆಯ ಧ್ರುವ್‌ ರಾಥಿ ಅವರ ವೀಡಿಯೊ ಲಿಂಕ್‌ನ್ನು ವಸಾಯಿಯ ಬಾರ್ ಅಸೋಸಿಯೇಷನ್ ವಾಟ್ಸಾಪ್‌ ಗ್ರೂಪ್‌ಗೆ ಮೇ.20 ರಂದು ಹಂಚಿಕೊಂಡಿದ್ದರು. ದಯವಿಟ್ಟು ​​ಮತದಾನ ಮಾಡುವ [&#8230;]]]></description>
										<content:encoded><![CDATA[
<p><strong> ಮುಂಬೈ:</strong> ಖ್ಯಾತ ಯುಟ್ಯೂಬರ್‌ ದ್ರುವ್‌ ರಾಠಿಯವರು ಮೋದಿ ಬಗ್ಗೆ ತಯಾರಿಸಿದ್ದ ವಿಡಿಯೋ ಒಂದನ್ನು ವಾಟ್ಸಪ್‌ ಗುಂಪಿನಲ್ಲಿ ಹಂಚಿಕೊಂಡ ಯುವ ವಕೀಲನ ಮೇಲೆ ಮಹಾರಾಷ್ಟ್ರದ ವಸಾಯಿ ಪೊಲೀಸರು ಸ್ವಯಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. </p>



<p>ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಲಿಬರೇಶನ್‌ನ ಮಹಾರಾಷ್ಟ್ರ ಕಾರ್ಯದರ್ಶಿಯೂ ಆಗಿರುವ ವಕೀಲ ಆದೇಶ್ ಬನ್ಸೋಡೆ ‘ಮೈಂಡ್ ಆಫ್ ಎ ಡಿಕ್ಟೇಟರ್’ ಎಂಬ ಶೀರ್ಷಿಕೆಯ ಧ್ರುವ್‌ ರಾಥಿ ಅವರ ವೀಡಿಯೊ ಲಿಂಕ್‌ನ್ನು ವಸಾಯಿಯ ಬಾರ್ ಅಸೋಸಿಯೇಷನ್ ವಾಟ್ಸಾಪ್‌ ಗ್ರೂಪ್‌ಗೆ ಮೇ.20 ರಂದು ಹಂಚಿಕೊಂಡಿದ್ದರು. ದಯವಿಟ್ಟು ​​ಮತದಾನ ಮಾಡುವ ಮೊದಲು ವೀಡಿಯೊವನ್ನು ಸರಿಯಾಗಿ ವೀಕ್ಷಿಸಿ ನಿರ್ಧಾರ ತೆಗೆದುಕೊಳ್ಳಿ ಎಂಬ ಸಂದೇಶದೊಂದಿಗೆ ವಿಡಿಯೋವನ್ನು ಶೇರ್‌ ಮಾಡಿದ್ದರು. ಮೇ 20ರಂದು ಐದನೇ ಹಂತದ ಲೋಕಸಭೆ ಚುನಾವಣೆ ವೇಳೆ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದರಿಂದ ಗುಂಪಿನಲ್ಲಿದ್ದ ಮತ್ತೋರ್ವ ವಕೀಲರು ಪೊಲೀಸರಿಗೆ ಪತ್ರ ಬರೆದಿದ್ದರು. ಈ ಪತ್ರದ ಆಧಾರದ ಮೇಲೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. </p>



<p>ಶೇರ್ ಮಾಡಿರುವ ವಿಡಿಯೋ ಮತ್ತು ಅದರ ಸಂದೇಶವು ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಕುರಿತು ಸುಳ್ಳು ಬಿಂಬಿಸುತ್ತದೆ. ಈ ಮೂಲಕ ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದೆ. ಎಂಬಿವಿವಿ ಪೊಲೀಸ್ ಕಮಿಷನರ್ ಮಧುಕರ್ ಪಾಂಡೆ ತಮ್ಮ ಕಮಿಷನರೇಟ್‌ಗೆ ಮೇ 18 ಮತ್ತು ಮೇ 20ರ ನಡುವೆ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆ ಇಂಥ ವಿಷಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುವ ಕುರಿತು ನಿಷೇಧಾಜ್ಞೆ ಹೊರಡಿಸಿದ್ದರು. ವಿಡಿಯೋ ಹಂಚಿಕೆಯು ಕಮಿಷನರ್‌ ಅವರ ಆದೇಶದ ಉಲ್ಲಂಘನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>



<p><strong>ಈ FIR ಕಾನೂನು ಬಾಹೀರ</strong></p>



<p> ನಿರ್ದಿಷ್ಟ ವೀಡಿಯೋವನ್ನು ಕೋಟ್ಯಂತರ ಜನರು ವೀಕ್ಷಿಸಿದ್ದಾರೆ ಮತ್ತು ಹಂಚಿಕೊಂಡಿದ್ದಾರೆ, ಅವರೆಲ್ಲರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದೇ? ಸಿಆರ್‌ಪಿಸಿ ಸೆಕ್ಷನ್ 195ರ ಪ್ರಕಾರ, ಐಪಿಸಿಯ ಸೆಕ್ಷನ್ 188ರಡಿಯಲ್ಲಿ ಎಫ್‌ಐಆರ್ ದಾಖಲಿಸುವ ಮೊದಲು ಪೊಲೀಸರು ಸಂಬಂಧಪಟ್ಟ ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಆದರೆ ಅನುಮತಿ ಪಡೆದಿಲ್ಲ. ಈ ಎಫ್‌ಐಆರ್ ಕಾನೂನುಬಾಹಿರ, ಇದು ಜನರ ಧ್ವನಿಯನ್ನು ಹತ್ತಿಕ್ಕುವ ರಾಜ್ಯದ ನಡೆಯ ಭಾಗ ಎಂದು ಆರೋಪಿಸಿದ್ದಾರೆ. </p>
]]></content:encoded>
					
		
		
			</item>
		<item>
		<title>ಅತ್ಯಾಚಾರಿ ಆರೋಪಿ, ಸ್ವಯಂಘೋಷಿತ ದೇವಮಾನವ ರಾಮ್ ರಹೀಂ ಗುರ್ಮೀತ್‌ ಸಿಂಗ್ ಕೊಲೆ ಕೇಸಿನಿಂದ ಬಚಾವ್‌</title>
		<link>https://peepalmedia.com/accused-rapist-self-proclaimed-godman-ram-rahim-gurmeet-singh-acquitted-in-murder-case/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 28 May 2024 10:58:09 +0000</pubDate>
				<category><![CDATA[ಅಪರಾಧ]]></category>
		<category><![CDATA[bihar]]></category>
		<category><![CDATA[court]]></category>
		<category><![CDATA[crime]]></category>
		<category><![CDATA[hariyana]]></category>
		<category><![CDATA[karnataka]]></category>
		<category><![CDATA[national]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[politics]]></category>
		<category><![CDATA[ramrahimgurmithsingh]]></category>
		<category><![CDATA[writing]]></category>
		<guid isPermaLink="false">https://peepalmedia.com/?p=40010</guid>

					<description><![CDATA[ತನ್ನ ಮ್ಯಾನೇಜರ್‌ ರಂಜಿತ್ ಸಿಂಗನ ಕೊಲೆ ಮಾಡಿದ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಖುಲಾಸೆಗೊಳಿಸಿದೆ. ತನ್ಮ ಮಹಿಳಾ ಅನುಯಾಯಿಗಳ ಮೇಲೆ ಗುರ್ಮೀತ್ ಸಿಂಗ್ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಿದ್ದ ಪತ್ರವೊಂದು 2001ರಲ್ಲಿ ಬಯಲಾಗಿತ್ತು. ಇದರ ಹಿಂದೆ ರಂಜಿತ್ ಸಿಂಗ್ ಪಾತ್ರವಿದೆ ಎಂದು ಶಂಕಿಸಿ, ಆತನನ್ನು ಜುಲೈ 10,2002ರಂದು ರಾಮ್‌ ರಹೀಮ್‌ ಗುರ್ಮೀತ್‌ ಸಿಂಗ್‌ ಗುಂಡಿಕ್ಕಿ ಕೊಂದಿದ್ದಾನೆ ಎಂದು ಆರೋಪಿಸಿ ಗುರ್ಮೀತ್ [&#8230;]]]></description>
										<content:encoded><![CDATA[
<p>ತನ್ನ ಮ್ಯಾನೇಜರ್‌ ರಂಜಿತ್ ಸಿಂಗನ ಕೊಲೆ ಮಾಡಿದ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಖುಲಾಸೆಗೊಳಿಸಿದೆ.</p>



<p>ತನ್ಮ ಮಹಿಳಾ ಅನುಯಾಯಿಗಳ ಮೇಲೆ ಗುರ್ಮೀತ್ ಸಿಂಗ್ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಿದ್ದ ಪತ್ರವೊಂದು 2001ರಲ್ಲಿ ಬಯಲಾಗಿತ್ತು. ಇದರ ಹಿಂದೆ ರಂಜಿತ್ ಸಿಂಗ್ ಪಾತ್ರವಿದೆ ಎಂದು ಶಂಕಿಸಿ, ಆತನನ್ನು ಜುಲೈ 10,2002ರಂದು ರಾಮ್‌ ರಹೀಮ್‌ ಗುರ್ಮೀತ್‌ ಸಿಂಗ್‌ ಗುಂಡಿಕ್ಕಿ ಕೊಂದಿದ್ದಾನೆ ಎಂದು ಆರೋಪಿಸಿ ಗುರ್ಮೀತ್ ವಿರುದ್ದ ಸಿಬಿಐ ಚಾರ್ಜ್‌ ಶೀಟ್‌ನಲ್ಲಿ ದಾಖಲಿಸಿತ್ತು. ಪಂಚಕುಲದ ಸಿಬಿಐ ನ್ಯಾಯಾಲಯ ಕೂಡ ಆತನನ್ನು ದೋಷಿ ಎಂದು ಘೋಷಿಸಿ ಶಿಕ್ಷೆ ಪ್ರಕಟಿಸಿತ್ತು.</p>



<p>ಇದರ ವಿರುದ್ದ ಗುರ್ಮೀತ್ ಸಿಂಗ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಸುರೇಶ್ ಠಾಕೂರ್ ಮತ್ತು ನ್ಯಾಯಮೂರ್ತಿ ಲಲಿತ್ ಬಾತ್ರಾ ಅವರ ಹೈಕೋರ್ಟ್ ವಿಭಾಗೀಯ ಪೀಠ ಐಪಿಸಿ ಸೆಕ್ಷನ್ 120-ಬಿ, 302, 506 ರ ಅಡಿಯಲ್ಲಿ ಅಂಗೀಕರಿಸಿತ್ತು. ಹರಿಯಾಣದ ಪಂಚಕುಲದ ಸಿಬಿಐ ನ್ಯಾಯಾಲಯವು 2022ರಲ್ಲಿ ಗುರ್ಮೀತ್ ಸಿಂಗ್ ಮತ್ತು ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.</p>



<p><strong>40 ವರ್ಷಗಳವರೆಗೆ ಜೀವವಾದಿ ಶಿಕ್ಷೆ</strong></p>



<p>ತನ್ನ ಇಬ್ಬರು ಶಿಷ್ಯಂದಿರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ಈಗಾಗಲೇ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ. ಪತ್ರಕರ್ತ ರಾಮ್ ಚಂದರ್ ಛತ್ರಪತಿಯನ್ನು ಹತ್ಯೆ ಮಾಡಿದ ಮತ್ತೊಂದು ಪ್ರಕರಣದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಈ 20 ವರ್ಷಗಳ ಅವಧಿ ಮುಗಿದ ನಂತರ ಇದು ಜಾರಿಯಾಗಲಿದೆ.</p>



<p>ಇತ್ತೀಚೆಗೆ ಹೈಕೋರ್ಟ್‌ನ ಅನುಮತಿಯಿಲ್ಲದೆ ಪೆರೋಲ್ ಮಂಜೂರು ಮಾಡದಂತೆ ಹರಿಯಾಣ ಸರ್ಕಾರಕ್ಕೆ ಸೂಚಿಸಿತ್ತು. ಈ ಆದೇಶವನ್ನು ತೆರವು ಮಾಡಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯು ಹೈಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. </p>
]]></content:encoded>
					
		
		
			</item>
		<item>
		<title>ಚುನಾವಣಾ ಬಾಂಡ್‌ಗಳ ಸಂಪೂರ್ಣ ಮಾಹಿತಿ ಬಿಟ್ಟುಕೊಡದ ಎಸ್‌ಬಿಐ: ಸುಪ್ರೀಂ ಕೋರ್ಟ್‌ ಮತ್ತೆ  ತರಾಟೆ</title>
		<link>https://peepalmedia.com/sbi-not-giving-complete-details-of-election-bonds-supreme-court-again/</link>
		
		<dc:creator><![CDATA[Peepal Media]]></dc:creator>
		<pubDate>Fri, 15 Mar 2024 08:11:32 +0000</pubDate>
				<category><![CDATA[ಅಪರಾಧ]]></category>
		<category><![CDATA[ಕೋರ್ಟು - ಕಾನೂನು]]></category>
		<category><![CDATA[ಚುನಾವಣೆ 2023]]></category>
		<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[court]]></category>
		<category><![CDATA[india]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[suprim]]></category>
		<category><![CDATA[suprim corut]]></category>
		<guid isPermaLink="false">https://peepalmedia.com/?p=37043</guid>

					<description><![CDATA[ನವದೆಹಲಿ:  ಎಸ್‌ಬಿಐ ಬ್ಯಾಂಕ್‌  ಚುನಾವಣಾ ಬಾಂಡ್‌ಗಳ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳದ್ದರಿಂದ ಸುಪ್ರೀಂ ಕೋರ್ಟ್ ಇಂದು ಮತ್ತೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. 5 ವರ್ಷಗಳಲ್ಲಿ ಮಾಡಿದ ದೇಣಿಗೆಗಳ ಎಲ್ಲಾ ವಿವರಗಳನ್ನು ಹಂಚಿಕೊಳ್ಳಲು ಬ್ಯಾಂಕ್‌ಗೆ ಸುಪ್ರೀಂ ನಿರ್ದೇಶಿಸಿದೆ. ಚುನಾವಣಾ ಆಯೋಗದ ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ಎಸ್‌ಬಿಐ ನೀಡಿರುವ ಅಂಕಿಅಂಶಗಳು ಅಪೂರ್ಣವಾಗಿವೆ. &#160;ದಾನಿಗಳು ಮತ್ತು ರಾಜಕೀಯ ಪಕ್ಷಗಳೊಂದಿಗಿನ ಸಂಬಂಧವನ್ನು ಹೇಳಿಕೆಯನ್ನು ಬಹಿರಂಗಪಡಿಸಿಲ್ಲ ಎಂದು ಛಿಮಾರಿ ಹಾಕಿತು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠ ವಿಚಾರಣೆ ನಡೆಸಿತು.  ಎಸ್‌ಬಿಐ [&#8230;]]]></description>
										<content:encoded><![CDATA[
<p>ನವದೆಹಲಿ:  ಎಸ್‌ಬಿಐ ಬ್ಯಾಂಕ್‌  ಚುನಾವಣಾ ಬಾಂಡ್‌ಗಳ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳದ್ದರಿಂದ ಸುಪ್ರೀಂ ಕೋರ್ಟ್ ಇಂದು ಮತ್ತೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. 5 ವರ್ಷಗಳಲ್ಲಿ ಮಾಡಿದ ದೇಣಿಗೆಗಳ ಎಲ್ಲಾ ವಿವರಗಳನ್ನು ಹಂಚಿಕೊಳ್ಳಲು ಬ್ಯಾಂಕ್‌ಗೆ ಸುಪ್ರೀಂ ನಿರ್ದೇಶಿಸಿದೆ.</p>



<p>ಚುನಾವಣಾ ಆಯೋಗದ ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ಎಸ್‌ಬಿಐ ನೀಡಿರುವ ಅಂಕಿಅಂಶಗಳು ಅಪೂರ್ಣವಾಗಿವೆ. &nbsp;ದಾನಿಗಳು ಮತ್ತು ರಾಜಕೀಯ ಪಕ್ಷಗಳೊಂದಿಗಿನ ಸಂಬಂಧವನ್ನು ಹೇಳಿಕೆಯನ್ನು ಬಹಿರಂಗಪಡಿಸಿಲ್ಲ ಎಂದು ಛಿಮಾರಿ ಹಾಕಿತು.</p>



<p>ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠ ವಿಚಾರಣೆ ನಡೆಸಿತು.  ಎಸ್‌ಬಿಐ ಈಗಾಗಲೇ ಹಂಚಿಕೊಂಡಿರುವ ವಿವರಗಳ ಜೊತೆಗೆ ಚುನಾವಣಾ ಬಾಂಡ್ ಸಂಖ್ಯೆಯನ್ನು ಬಹಿರಂಗಪಡಿಸಬೇಕು ಎಂದು ಆದೇಶ ನೀಡಿತು.</p>



<p>&#8220;ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪರವಾಗಿ ಯಾರು ಹಾಜರಾಗುತ್ತಿದ್ದಾರೆ? ಅವರು ಬಾಂಡ್ ಸಂಖ್ಯೆಗಳನ್ನು ಬಹಿರಂಗಪಡಿಸಿಲ್ಲ. ಅದನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಹಿರಂಗಪಡಿಸಬೇಕು&#8221; ಎಂದು ವಿಚಾರಣೆಯ ಆರಂಭದಲ್ಲಿಯೇ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ತಿಳಿಸಿದರು. ಆದರೆ, ಎಸ್‌ಬಿಐ ಅಧಿಕಾರಿಗಳು ಉತ್ತರಿಸಲು ತಡವರಿಸಿದರು. ಮಾರ್ಚ್ 18 ರಂದು ನಡೆಯಲಿರುವ ಮುಂದಿನ ವಿಚಾರಣೆಯ ಸಮಯದಲ್ಲಿ ಲೋಪವನ್ನು ವಿವರಿಸಲು ಬ್ಯಾಂಕ್‌ಗೆ ನಿರ್ದೇಶಿಸಿದೆ.</p>



<p>ಈ ಬಾಂಡ್‌ಗಳು ರಾಜಕೀಯ ಪಕ್ಷಗಳಿಗೆ ಹಣವನ್ನು ಘೋಷಿಸದೆ ದೇಣಿಗೆ ನೀಡಲು ವ್ಯಕ್ತಿಗಳಿಗೆ ಮತ್ತು ವ್ಯವಹಾರಗಳಿಗೆ ಅವಕಾಶ ಮಾಡಿಕೊಟ್ಟಿತ್ತು. 2018 ರಲ್ಲಿ ಬಿಜೆಪಿ ಸರ್ಕಾರವು ನಗದು ದೇಣಿಗೆಗೆ ಪರ್ಯಾಯವಾಗಿ ಚುನಾವಣಾ ಬಾಂಡ್‌ ಅನ್ನು ಪರಿಚಯಿಸಿತ್ತು. ಸುಪ್ರೀಂ ಕೋರ್ಟ್ ಕಳೆದ ತಿಂಗಳು ಈ ಯೋಜನೆಯನ್ನು ರದ್ದುಗೊಳಿಸಿದ್ದು, ಇದು ಅಸಂವಿಧಾನಿಕ ಎಂದು ತೀರ್ಪು ನೀಡಿತ್ತು.</p>
]]></content:encoded>
					
		
		
			</item>
		<item>
		<title>ಬಿಜೆಪಿ ಜೊತೆ ಸಂಬಂಧಿತ ಮೂವರಿಂದ ಮಹಿಳೆ ಮೇಲೆ ಹಲ್ಲೆ: ಜಾಮೀನು ಮಂಜೂರು</title>
		<link>https://peepalmedia.com/three-from-bjp-held-for-allegedly-assaulting-woman-get-bail/</link>
		
		<dc:creator><![CDATA[Charan Aivarnad]]></dc:creator>
		<pubDate>Tue, 19 Dec 2023 09:31:13 +0000</pubDate>
				<category><![CDATA[ಅಪರಾಧ]]></category>
		<category><![CDATA[assult]]></category>
		<category><![CDATA[bjp]]></category>
		<category><![CDATA[BJP leader]]></category>
		<category><![CDATA[case]]></category>
		<category><![CDATA[court]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[maharashtra]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=33878</guid>

					<description><![CDATA[ಮಹಾರಾಷ್ಟ್ರ: ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತನಾಗಿರುವ ಮಹಾರಾಷ್ಟ್ರದ ಹಿರಿಯ ಅಧಿಕಾರಿಯೊಬ್ಬರ ಮಗ ಸೇರಿದಂತೆ ಮೂವರಿಗೆ ಥಾಣೆ ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿದೆ ಮತ್ತು. ಈ ಗುಂಪು ಮಹಿಳೆಯನ್ನು ಕಾರಿನಿಂದ ಹಲ್ಲೆ ಮಾಡಲು ಯತ್ನಿಸಿತ್ತು.&#160; ಅಶ್ವಜಿತ್ ಗಾಯಕವಾಡ್, ರೊಮಿಲ್ ಪಾಟೀಲ್ ಮತ್ತು ಸಾಗರ್ ಶೆಡ್ಗೆ ಜಾಮೀನು ಸಿಕ್ಕಿದ ಆರೋಪಿಗಳು.&#160; ಭಾರತೀಯ ಜನತಾ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಅಶ್ವಜಿತ್ ಗಾಯಕವಾಡ ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನಿಲಕುಮಾರ ಗಾಯಕವಾಡ ಅವರ ಪುತ್ರ. [&#8230;]]]></description>
										<content:encoded><![CDATA[
<p><strong>ಮಹಾರಾಷ್ಟ್ರ:</strong> ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತನಾಗಿರುವ ಮಹಾರಾಷ್ಟ್ರದ ಹಿರಿಯ ಅಧಿಕಾರಿಯೊಬ್ಬರ ಮಗ ಸೇರಿದಂತೆ ಮೂವರಿಗೆ ಥಾಣೆ ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿದೆ ಮತ್ತು. ಈ ಗುಂಪು ಮಹಿಳೆಯನ್ನು ಕಾರಿನಿಂದ ಹಲ್ಲೆ ಮಾಡಲು ಯತ್ನಿಸಿತ್ತು.&nbsp;</p>



<p>ಅಶ್ವಜಿತ್ ಗಾಯಕವಾಡ್, ರೊಮಿಲ್ ಪಾಟೀಲ್ ಮತ್ತು ಸಾಗರ್ ಶೆಡ್ಗೆ ಜಾಮೀನು ಸಿಕ್ಕಿದ ಆರೋಪಿಗಳು.&nbsp; ಭಾರತೀಯ ಜನತಾ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಅಶ್ವಜಿತ್ ಗಾಯಕವಾಡ ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನಿಲಕುಮಾರ ಗಾಯಕವಾಡ ಅವರ ಪುತ್ರ.</p>



<p>ಪ್ರಿಯಾ ಸಿಂಗ್ ಎಂಬ ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಗರದ ಘೋಡ್‌ಬಂದರ್ ರಸ್ತೆಯ ಹೋಟೆಲ್‌ಗೆ ಗಾಯಕ್ವಾಡ್ ಅವರನ್ನು ಭೇಟಿಯಾಗಲು ಹೋಗಿದ್ದಾಗಿ ಹೇಳಿರುವ ಮಹಿಳೆಯ ಜೊತೆಗೆ ಅಶ್ವಜಿತ್‌ ಜಗಳವಾಡಿರುವ ಬಗ್ಗೆ&nbsp; ಪಿಟಿಐ ವರದಿ ಮಾಡಿದೆ.</p>



<p>ಗಾಯಕ್‌ವಾಡ್ ಅವರ ಕಾರಿನಿಂದ ಆಕೆ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸಿದಾಗ, ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಆಕೆಯನ್ನು ಕಾರಿನಿಂದ ಹೊರದಬ್ಬಲು ಪ್ರಯತ್ನಿಸಿದ್ದಾನೆ.</p>



<p>ಅಶ್ವಜಿತ್ ಗಾಯಕ್‌ವಾಡ್ ಜತೆ ಸಂಬಂಧ ಹೊಂದಿದ್ದ ಈಕಗೆ ಆತನ ವೈವಾಹಿಕ ಬದುಕಿನ ಬಗ್ಗೆ ಗೊತ್ತಿರಲಿಲ್ಲ ಎಂದು ಮಹಿಳೆ ಹೇಳಿದ್ದಾಳೆ. ಆದರೂ, <a href="https://timesofindia.indiatimes.com/city/thane/notice-issued-to-maha-babus-son-for-attack-on-woman-nishikant/articleshow/106055934.cms" data-type="link" data-id="https://timesofindia.indiatimes.com/city/thane/notice-issued-to-maha-babus-son-for-attack-on-woman-nishikant/articleshow/106055934.cms">ಗಾಯಕ್‌ವಾಡ್</a> ಆಕೆ ಕೇವಲ ಸ್ನೇಹಿತೆ ಮಾತ್ರ, ಅವಳು ತನ್ನಿಂದ ಹಣವನ್ನು ಸುಲಿಗೆ ಮಾಡಲು ಪ್ರಯತ್ನಿಸುತ್ತಿದ್ದಳು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.</p>



<p>ಭಾನುವಾರ ಪೊಲೀಸರು ಗಾಯಕ್‌ವಾಡ್, ಪಾಟೀಲ್ ಮತ್ತು ಶೆಡ್ಜ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 279 (ವೇಗದ ಚಾಲನೆ) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿ, ಭಾನುವಾರ ಬಂಧಿಸಿದ್ದರು.</p>



<p>ಸೋಮವಾರ, ಆರೋಪಿಗಳ ಪರ ವಕೀಲ ಬಾಬಾ ಶೇಖ್ ಅವರು ಮ್ಯಾಜಿಸ್ಟ್ರೇಟ್‌ಗೆ ಅರ್ಜಿ ಸಲ್ಲಿಸಿದ್ದರು, ಅವರ ಮೇಲಿನ ಎಲ್ಲಾ ಆರೋಪಗಳು ಜಾಮೀನು ನೀಡಬಹುದಾದವು ಮತ್ತು ವಿಚಾರಣೆಗಾಗಿ ಪೊಲೀಸರಿಗೆ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.</p>



<p>ಮತ್ತೊಂದೆಡೆ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 ರ ಅಡಿಯಲ್ಲಿ ಪೊಲೀಸರು ಏಕೆ ಕೊಲೆ ಯತ್ನದ ದೂರನ್ನು ದಾಖಲಿಸಿಲ್ಲ ಎಂದು ಮಹಿಳೆಯ ಪರ ವಕೀಲರು ಕೇಳಿದ್ದಾರೆ.</p>



<p>ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದ್ದು. ತಲಾ 15,000 ರೂ.ಗಳ ಬಾಂಡ್ ಅನ್ನು ನೀಡುವಂತೆ ಸೂಚಿಸಿದೆ.</p>
]]></content:encoded>
					
		
		
			</item>
		<item>
		<title>ಪೋಕ್ಸೋ : 2020 ರ ಪ್ರಕರಣದಲ್ಲಿ ಆರೋಪಿಗೆ 17 ವರ್ಷ ಕಠಿಣ ಶಿಕ್ಷೆ ಪ್ರಕಟ</title>
		<link>https://peepalmedia.com/punishment-under-pocso-to-17-year-old-in-shimoga/</link>
		
		<dc:creator><![CDATA[Charan Aivarnad]]></dc:creator>
		<pubDate>Mon, 06 Nov 2023 06:35:07 +0000</pubDate>
				<category><![CDATA[ಶಿವಮೊಗ್ಗ]]></category>
		<category><![CDATA[bengalure]]></category>
		<category><![CDATA[breaking news]]></category>
		<category><![CDATA[court]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[shivamogga]]></category>
		<category><![CDATA[state politics]]></category>
		<category><![CDATA[trending news]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=31247</guid>

					<description><![CDATA[ಶಿವಮೊಗ್ಗ: ಪೋಕ್ಸೋ ಪ್ರಕರಣದಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ನ್ಯಾಯಾಲಯ ಆದೇಶ ಹೊರಡಿಸಿದೆ. ಇದರ ಮಧ್ಯೆ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಶಿಕ್ಷೆಯ ಪ್ರಮಾಣ ಹೆಚ್ಚಿದೆ ಎಂದು ವರದಿಯಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಮನನೊಂದ ಬಾಲಕಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ ಎಂದು ಬಾಲಕಿಯ ತಂದೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲೂಕಿನ 23 ವರ್ಷದ ಯುವಕ ಶಿಕ್ಷೆಗೆ ಒಳಗಾಗಿದ್ದಾನೆ. [&#8230;]]]></description>
										<content:encoded><![CDATA[
<p><strong>ಶಿವಮೊಗ್ಗ: </strong>ಪೋಕ್ಸೋ ಪ್ರಕರಣದಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ನ್ಯಾಯಾಲಯ ಆದೇಶ ಹೊರಡಿಸಿದೆ. ಇದರ ಮಧ್ಯೆ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಶಿಕ್ಷೆಯ ಪ್ರಮಾಣ ಹೆಚ್ಚಿದೆ ಎಂದು ವರದಿಯಾಗಿದೆ.</p>



<p>ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಮನನೊಂದ ಬಾಲಕಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ ಎಂದು ಬಾಲಕಿಯ ತಂದೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲೂಕಿನ 23 ವರ್ಷದ ಯುವಕ ಶಿಕ್ಷೆಗೆ ಒಳಗಾಗಿದ್ದಾನೆ.</p>



<p>2020ರಲ್ಲಿ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.</p>



<p>ನ್ಯಾಯಾಧೀಶರಾದ ಲತಾ ಅವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 1.25 ಲಕ್ಷ ರೂ. ದಂಡ, ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿ ಆರು ತಿಂಗಳು ಸಾದಾ ಜೈಲು ಶಿಕ್ಷೆ, ಮೃತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ 17 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿದ್ದಾರೆ. ಸರ್ಕಾರದ ಪರವಾಗಿ ಹರಿಪ್ರಸಾದ್ ಮತ್ತು ಮಮತಾ ವಾದ ಮಂಡಿಸಿದ್ದರು.</p>
]]></content:encoded>
					
		
		
			</item>
		<item>
		<title>24 ವಾರಗಳ ಗರ್ಭದ ಅಬಾರ್ಷನ್‌ ನಿರಾಕರಿಸಿದ ಸುಪ್ರೀಂ ಕೋರ್ಟ್:‌ ಸರ್ಕಾರದ ಮೇಲೆ ಮಗುವಿನ ಜವಾಬ್ದಾರಿ</title>
		<link>https://peepalmedia.com/supreme-court-denies-womans-plea-to-terminate-26-week-pregnancy/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 16 Oct 2023 12:08:59 +0000</pubDate>
				<category><![CDATA[Uncategorized]]></category>
		<category><![CDATA[bengalure]]></category>
		<category><![CDATA[court]]></category>
		<category><![CDATA[high court]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[law]]></category>
		<category><![CDATA[legal]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[supreme court́]]></category>
		<category><![CDATA[writing]]></category>
		<guid isPermaLink="false">https://peepalmedia.com/?p=29932</guid>

					<description><![CDATA[ಬೆಂಗಳೂರು, ಅಕ್ಟೋಬರ್.‌16: &#160;ಮಹಿಳೆಯೊಬ್ಬರು ಪೋಸ್ಟ್‌ ಪಾರ್ಟಮ್ ಸೈಕೋಸಿಸ್ ಎಂಬ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣಕ್ಕೆ 26 ವಾರಗಳ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅಬಾರ್ಷನ್‌ಗಾಗಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಮಗು ಹುಟ್ಟಿದ ನಂತರ ರಾಜ್ಯವು ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 26 ವಾರಗಳ ಗರ್ಭಿಣಿ ಮಹಿಳೆ &#160;ಅಬಾರ್ಷನ್‌ಗಾಗಿ ಏಮ್ಸ್‌ಗೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. &#160; ಗರ್ಭಾವಸ್ಥೆಯ ಅವಧಿಯು 24 ವಾರಗಳನ್ನು ದಾಟಿದ ಕಾರಣ ನ್ಯಾಯಾಲಯವು ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದೆ. ಭಾರತದ [&#8230;]]]></description>
										<content:encoded><![CDATA[
<p><strong>ಬೆಂಗಳೂರು, ಅಕ್ಟೋಬರ್.‌16:</strong> &nbsp;ಮಹಿಳೆಯೊಬ್ಬರು ಪೋಸ್ಟ್‌ ಪಾರ್ಟಮ್ ಸೈಕೋಸಿಸ್ ಎಂಬ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣಕ್ಕೆ 26 ವಾರಗಳ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅಬಾರ್ಷನ್‌ಗಾಗಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಮಗು ಹುಟ್ಟಿದ ನಂತರ ರಾಜ್ಯವು ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 26 ವಾರಗಳ ಗರ್ಭಿಣಿ ಮಹಿಳೆ &nbsp;ಅಬಾರ್ಷನ್‌ಗಾಗಿ ಏಮ್ಸ್‌ಗೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. &nbsp;</p>



<p>ಗರ್ಭಾವಸ್ಥೆಯ ಅವಧಿಯು 24 ವಾರಗಳನ್ನು ದಾಟಿದ ಕಾರಣ ನ್ಯಾಯಾಲಯವು ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠವು, ಈ ಗರ್ಭಾವಸ್ಥೆಯು ಮಹಿಳೆಗೆ ತಕ್ಷಣದ ಸಮಸ್ಯೆಗಳನ್ನು ಉಂಟುಮಾಡುವುದಿಲ್ಲ, ಅಲ್ಲದೆ ಈ ಮನವಿ ಭ್ರೂಣದ ಅಸಹಜ ಬೆಳವಣಿಗೆಗೆ ಸಂಬಂಧಿಸಿಲ್ಲ ಎಂದು ಹೇಳಿದೆ.</p>



<p>ಮಗುವನ್ನು ಯಾರಿಗಾದರೂ ದತ್ತು ನೀಡಲು ಪೋಷಕರು ನಿರ್ಧರಿಸಬಹುದು ಮತ್ತು ತಾಯಿ ಏಮ್ಸ್‌ನಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಬೇಕು. ಈ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು &nbsp;ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ..</p>



<p>ಲ್ಯಾಕ್ಟೇಷನಲ್ ಅಮೆನೋರಿಯಾ ಎಂಬ ಖಾಯಿಲೆಯ ಕಾರಣದಿಂದಾಗಿ ತನ್ನ ಮೂರನೇ ಗರ್ಭಾವಸ್ಥೆಯ ಬಗ್ಗೆ ತಿಳಿದಿರಲಿಲ್ಲ. ಈ ಅಸ್ವಸ್ಥತೆ ರೋಗಿಯ ಮುಟ್ಟನ್ನು ತಡೆಯುವುದು, ಪ್ರಸವಾನಂತರದ ಖಿನ್ನತೆಯನ್ನು ಉಂಟು ಮಾಡುತ್ತದೆ. ಹೀಗಾಗಿ ಮಹಿಳೆಯು ಈ ತಿಂಗಳ ಆರಂಭದಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು.</p>



<p>ಮೆಡಿಕಲ್ ಟರ್ಮಿನೇಷನ್ ಆಫ್ ಪ್ರೆಗ್ನೆನ್ಸಿ (MTP) ಕಾಯಿದೆಯಡಿಯಲ್ಲಿ ವಿವಾಹಿತ ಮಹಿಳೆಯರಿಗೆ ಇರುವ ಅಬಾರ್ಷನ್‌ ಮಾಡಿಸಿಕೊಳ್ಳಲು ಇರುವ ಅವಧಿ ಗರಿಷ್ಠ ಮಿತಿ 24 ವಾರಗಳು. ಅತ್ಯಾಚಾರದಿಂದ ಬದುಕುಳಿದವರು ಸೇರಿದಂತೆ ವಿಶೇಷ ಅಗತ್ಯತೆಯುಳ್ಳವರು ಮತ್ತು ಅಪ್ರಾಪ್ತ ವಯಸ್ಕರು ಅವಕಾಶವಿದೆ.</p>



<p>ಆದಾಗ್ಯೂ, ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ವಾದ ಮಂಡಿಸಿ, ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿರುವಂತೆ 24 ವಾರಗಳ ಈ ಮಾರ್ಗಸೂಚಿ ಈಗ &#8216;ಬಳಕೆಯಲ್ಲಿಲ್ಲ&#8217; ಎಂದು ಹೇಳಿದ್ದಾರೆ.</p>
]]></content:encoded>
					
		
		
			</item>
	</channel>
</rss>
