<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>covid cases &#8211; Peepal Media</title>
	<atom:link href="https://peepalmedia.com/tag/covid-cases/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 23 Dec 2023 02:47:57 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>covid cases &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಕೋವಿಡ್ ಹಾಟ್‌ಸ್ಪಾಟ್ ಆಗುವತ್ತ ಬೆಂಗಳೂರು : 78 ರಲ್ಲಿ 68 ಪ್ರಕರಣ ರಾಜಧಾನಿಯಲ್ಲೇ ದಾಖಲು</title>
		<link>https://peepalmedia.com/bangalore-to-become-a-covid-hotspot/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 23 Dec 2023 02:47:13 +0000</pubDate>
				<category><![CDATA[ಆರೋಗ್ಯ]]></category>
		<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[bengalure]]></category>
		<category><![CDATA[corona virus]]></category>
		<category><![CDATA[covid 19]]></category>
		<category><![CDATA[covid cases]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=33992</guid>

					<description><![CDATA[ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ಶುಕ್ರವಾರ ದಿನದ ಅಂತ್ಯಕ್ಕೆ, 78 ಹೊಸ ಪ್ರಕರಣ ದಾಖಲಾದರೆ, ಕೋವಿಡ್ ಕಾರಣಕ್ಕೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. 78 ಹೊಸ ಪ್ರಕರಣಗಳಲ್ಲಿ 68 ಪ್ರಕರಣ ಕೇವಲ ಬೆಂಗಳೂರಲ್ಲೇ ಪತ್ತೆಯಾಗಿದ್ದು ಈಗ ಸಿಲಿಕಾನ್ ಸಿಟಿ ಆತಂಕದಲ್ಲಿದೆ. ಶುಕ್ರವಾರ ದಿನದ ಅಂತ್ಯಕ್ಕೆ ರಾಜ್ಯದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳಲ್ಲಿ 176 ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಕನ್ನಡ ಮೂಲದ ವ್ಯಕ್ತಿಯ ಸಾವು ಸೇರಿ ಒಟ್ಟು ನಾಲ್ವರು ಮೃತಪಟ್ಟಿರುವ [&#8230;]]]></description>
										<content:encoded><![CDATA[
<p>ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ಶುಕ್ರವಾರ ದಿನದ ಅಂತ್ಯಕ್ಕೆ, 78 ಹೊಸ ಪ್ರಕರಣ ದಾಖಲಾದರೆ, ಕೋವಿಡ್ ಕಾರಣಕ್ಕೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. 78 ಹೊಸ ಪ್ರಕರಣಗಳಲ್ಲಿ 68 ಪ್ರಕರಣ ಕೇವಲ ಬೆಂಗಳೂರಲ್ಲೇ ಪತ್ತೆಯಾಗಿದ್ದು ಈಗ ಸಿಲಿಕಾನ್ ಸಿಟಿ ಆತಂಕದಲ್ಲಿದೆ.</p>



<p>ಶುಕ್ರವಾರ ದಿನದ ಅಂತ್ಯಕ್ಕೆ ರಾಜ್ಯದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳಲ್ಲಿ 176 ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಕನ್ನಡ ಮೂಲದ ವ್ಯಕ್ತಿಯ ಸಾವು ಸೇರಿ ಒಟ್ಟು ನಾಲ್ವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಕೊರೊನಾ ಸಕ್ರಿಯ ಕೇಸ್‌ಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದ್ದು, 162 ಸೋಂಕಿತರು ಹೋಂ ಐಸೋಲೇಷನ್‌ನಲ್ಲಿ ಇದ್ದರೆ, 13 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 3.29 ಕ್ಕೆ ಏರಿಕೆಯಾಗಿದೆ.</p>



<p>ಇನ್ನು ಸಿಲಿಕಾನ್ ಸಿಟಿ ಬೆಂಗಳೂರು ಕೋವಿಡ್ ನ ಹಾಟ್ ಸ್ಪಾಟ್ ಆಗಲಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಅದರಲ್ಲೂ ವಿಕ್ಟೋರಿಯಾ, ವಾಣಿ ವಿಲಾಸ, ಮಿಂಟೋ ಆಸ್ಪತ್ರೆಗಳಲ್ಲಿ ಹೆಚ್ಚು ಪ್ರಕರಣ ಕಂಡುಬಂದಿದ್ದು, ಆಸ್ಪತ್ರೆಯ ಒಪಿಡಿ ಬ್ಲಾಕ್​ಗಳಲ್ಲಿ ಟ್ರಯಾಜ್ ಸೆಂಟರ್ ನಿರ್ಮಾಣ ಮಾಡಲಾಗಿದೆ.</p>



<p>ಜ್ವರ, ಶೀತ ಹಾಗೂ ಉಸಿರಾಟಕ್ಕೆ ಸಂಬಂಧಿಸಿದ ಯಾವುದೇ ರೋಗ ಲಕ್ಷಣಗಳು ಕಂಡುಬಂದರೆ ಕಡ್ಡಾಯವಾಗಿ RT PCR ಪರೀಕ್ಷೆಗೆ ಆರೋಗ್ಯ ಇಲಾಖೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ನಿತ್ಯ ಆಸ್ಪತ್ರೆ ಕ್ಯಾಂಪಸ್​ನಲ್ಲಿ ಸಿಬ್ಬಂದಿಗಳು RT-PCR ಟೆಸ್ಟ್ ಮಾಡುತ್ತಿದ್ದಾರೆ. ಅದರಂತೆ ಶುಕ್ರವಾರ 200 ಜನರಿಗೆ ಟೆಸ್ಟ್ ಮಾಡಲಾಗಿದ್ದು, 10 ಜನರಿಗೆ ಪಾಸಿಟಿವ್​ ಕಂಡುಬಂದಿದೆ.</p>



<p><strong>ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ</strong><br>ಕೋವಿಡ್ ನಿರ್ವಹಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್​ ನಿರ್ವಹಣೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಮೂರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸಿದೆ. ಅದರಲ್ಲಿ ಸಚಿವರಾದ ಹೆಚ್. <a href="http://ಸಿ.ಮಹದೇವಪ್ಪ">ಸಿ.ಮಹದೇವಪ್ಪ</a>, <a href="http://ಡಾ.ಶರಣು">ಡಾ.ಶರಣು</a> ಪ್ರಕಾಶ್ ಪಾಟೀಲ್ ಹಾಗೂ ಎಂ. ಸಿ ಸುಧಾಕರ್ ಇದ್ದು, ಸಮಿತಿಯು ಕೊವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ತಜ್ಞರು, ಇಲಾಖೆಗಳ ಮುಖ್ಯಸ್ಥರೊಂದಿಗೆ ಪರಾಮರ್ಶಿಸಲಿದೆ.</p>
]]></content:encoded>
					
		
		
			</item>
		<item>
		<title>ಕೋವಿಡ್ ರೂಪಾಂತರಿ JN 1 ಸೋಂಕಿಗೆ ರಾಜ್ಯದಲ್ಲಿ ಮೊದಲ ಬಲಿ : ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ</title>
		<link>https://peepalmedia.com/jn-1-is-the-first-victim-of-the-infection-in-the-state/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 20 Dec 2023 07:13:57 +0000</pubDate>
				<category><![CDATA[ಆರೋಗ್ಯ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[covid cases]]></category>
		<category><![CDATA[JN 1]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[writing]]></category>
		<guid isPermaLink="false">https://peepalmedia.com/?p=33914</guid>

					<description><![CDATA[ಕೋವಿಡ್ ರೂಪಾಂತರಿ ವೈರಸ್ JN 1 ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ಜೆ ಎನ್ 1 ಉಪತಳಿ ಆತಂಕದ ನಡುವೆಯೇ ಕೊರೊನಾ ಸೋಂಕಿಗೆ ಮಂಗಳವಾರ 64 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಚಾಮರಾಜಪೇಟೆ ಖಾಸಗಿ ಆಸ್ಪತ್ರೆಯಲ್ಲಿ 64 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಯ ಸ್ಯಾಂಪಲ್ ನ್ನು ಜಿನೋವಿಕ್ ಸೀಕ್ವೆನ್ಸಿಂಗ್ ಕಳುಹಿಸಲಾಗಿತ್ತು. ಇಂದು ಬಂದಿರುವ ಮಾಹಿತಿಯಂತೆ ಮೃತ ವ್ಯಕ್ತಿ ಕೋವಿಡ್ ರೂಪಾಂತರಿ JN 1 ನಿಂದ ಮೃತಪಟ್ಟಿರುವುದು ದೃಢಪಟ್ಟಿದೆ. [&#8230;]]]></description>
										<content:encoded><![CDATA[
<p>ಕೋವಿಡ್ ರೂಪಾಂತರಿ ವೈರಸ್ JN 1 ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ಜೆ ಎನ್ 1 ಉಪತಳಿ ಆತಂಕದ ನಡುವೆಯೇ ಕೊರೊನಾ ಸೋಂಕಿಗೆ ಮಂಗಳವಾರ 64 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.</p>



<p>ಬೆಂಗಳೂರಿನ ಚಾಮರಾಜಪೇಟೆ ಖಾಸಗಿ ಆಸ್ಪತ್ರೆಯಲ್ಲಿ 64 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಯ ಸ್ಯಾಂಪಲ್ ನ್ನು ಜಿನೋವಿಕ್ ಸೀಕ್ವೆನ್ಸಿಂಗ್ ಕಳುಹಿಸಲಾಗಿತ್ತು. ಇಂದು ಬಂದಿರುವ ಮಾಹಿತಿಯಂತೆ ಮೃತ ವ್ಯಕ್ತಿ ಕೋವಿಡ್ ರೂಪಾಂತರಿ JN 1 ನಿಂದ ಮೃತಪಟ್ಟಿರುವುದು ದೃಢಪಟ್ಟಿದೆ.</p>



<p>ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೋವಿಡ್ ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಹಾಗೆಯೇ ಕೋವಿಡ್ ಪರೀಕ್ಷೆ ಹೆಚ್ಚು ನಡೆಸಲು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲೂ ಕಡ್ಡಾಯ ಸೂಚನೆ ನೀಡಲಾಗಿದೆ.</p>



<p>ಈ ನಡುವೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಹಾಗೂ ಸದ್ಯದ ಸ್ಥಿತಿ ಗತಿಗಳ ಬಗ್ಗೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವೀಯ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ವರ್ಚುವಲ್ ಮೂಲಕ ಮಹತ್ವದ ಸಭೆಯ ನಡೆಸುತ್ತಿದ್ದಾರೆ. ಸಭೆಯಲ್ಲಿ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾಗಿಯಾಗಿದ್ದಾರೆ.</p>
]]></content:encoded>
					
		
		
			</item>
		<item>
		<title>ದೇಶದಲ್ಲಿ ಮತ್ತೆ ಹೆಚ್ಚುತ್ತಿರುವ ಕೋವಿಡ್ ಸೋಂಕು ; ಒಂದೇ ದಿನದಲ್ಲಿ 335 ಪ್ರಕರಣ ದೃಢ</title>
		<link>https://peepalmedia.com/covid-infection-is-increasing-again-in-the-country/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 18 Dec 2023 06:20:06 +0000</pubDate>
				<category><![CDATA[ಆರೋಗ್ಯ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[covid 19]]></category>
		<category><![CDATA[covid cases]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=33824</guid>

					<description><![CDATA[ಭಾರತದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆ ಕಂಡುಬಂದಿದ್ದು, ಒಂದೇ ದಿನದಲ್ಲಿ 335 ಪ್ರಕರಣದಲ್ಲಿ ಕೋವಿಡ್ ಸೋಂಕು ಧೃಢಪಟ್ಟಿದೆ. ಈಗಾಗಲೇ ದೇಶಾದ್ಯಂತ ದಾಖಲಾದ ಪ್ರಕರಣದಲ್ಲಿ 1701 ಪ್ರಕರಣ ದೃಢವಾಗಿದೆ. ತಜ್ಞರ ಪ್ರಕಾರ ಈ ಬಾರಿ ಶುರುವಾಗಿರುವ ಕೋವಿಡ್ ತುಂಬಾ ಪರಿಣಾಮಕಾರಿಯಾಗಿದ್ದು ಕೇವಲ 1701 ಪ್ರಕರಣಗಳಲ್ಲೇ ಕೇರಳ, ಉತ್ತರ ಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ 5 ಮಂದಿ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ. ಭಾರತದಲ್ಲಿ ಈ ಹಿಂದೆ ಕಾಣಿಸಿಕೊಂಡ ಕೋವಿಡ್ ಗಿಂತ ಇದು ಹೆಚ್ಚು ಅಪಾಯ ಸೃಷ್ಟಿಸುವ [&#8230;]]]></description>
										<content:encoded><![CDATA[
<p>ಭಾರತದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಏರಿಕೆ ಕಂಡುಬಂದಿದ್ದು, ಒಂದೇ ದಿನದಲ್ಲಿ 335 ಪ್ರಕರಣದಲ್ಲಿ ಕೋವಿಡ್ ಸೋಂಕು ಧೃಢಪಟ್ಟಿದೆ. ಈಗಾಗಲೇ ದೇಶಾದ್ಯಂತ ದಾಖಲಾದ ಪ್ರಕರಣದಲ್ಲಿ 1701 ಪ್ರಕರಣ ದೃಢವಾಗಿದೆ.</p>



<p>ತಜ್ಞರ ಪ್ರಕಾರ ಈ ಬಾರಿ ಶುರುವಾಗಿರುವ ಕೋವಿಡ್ ತುಂಬಾ ಪರಿಣಾಮಕಾರಿಯಾಗಿದ್ದು ಕೇವಲ 1701 ಪ್ರಕರಣಗಳಲ್ಲೇ ಕೇರಳ, ಉತ್ತರ ಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ 5 ಮಂದಿ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ. ಭಾರತದಲ್ಲಿ ಈ ಹಿಂದೆ ಕಾಣಿಸಿಕೊಂಡ ಕೋವಿಡ್ ಗಿಂತ ಇದು ಹೆಚ್ಚು ಅಪಾಯ ಸೃಷ್ಟಿಸುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.</p>



<p>ದೇಶದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4.46 ಕೋಟಿಗೆ (4,44,69,799) ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆ ದರವನ್ನು 98.81 ಪ್ರತಿಶತಕ್ಕೆ ನಿಗದಿಪಡಿಸಲಾಗಿದೆ. ಇಲ್ಲಿಯವರೆಗೆ, ಕೋವಿಡ್ -19 ನಿಂದ 5,33,316 ಜನರು ಸಾವನ್ನಪ್ಪಿದ್ದಾರೆ ಮತ್ತು ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ ಎಂದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.</p>



<p>ಕೇರಳದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲೂ ಕೇರಳ ಗಡಿ ಭಾಗದ ಕರ್ನಾಟಕದ ಜಿಲ್ಲೆಗಳಾದ ಮೈಸೂರು, ಕೊಡಗು, ದಕ್ಷಿಣ ಕನ್ನಡ ಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದೆ. ಪ್ರಕರಣಗಳಲ್ಲಿ ಸ್ವಲ್ಪ ಮಟ್ಟಿಗೆ ಕಾಣುವ ಏರಿಕೆ ಮತ್ತು ಸೋಂಕಿತರ ಆರೋಗ್ಯ ನಿಭಾಯಿಸಲು ಕರ್ನಾಟಕವು ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಾರಂಭಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ.</p>



<p>ಪರಿಸ್ಥಿತಿ ಪ್ರಸ್ತುತ ನಿಯಂತ್ರಣದಲ್ಲಿದೆ ಎಂದು ಭರವಸೆ ನೀಡುವ ಮೂಲಕ ಜನರು ಭಯಭೀತರಾಗಬೇಡಿ ಎಂದು ಸಚಿವರು ಹೇಳಿದ್ದಾರೆ. ಆದರೆ ಯಾವುದೇ ಸಂದರ್ಭದಲ್ಲೂ ಪ್ರಕರಣ ಹೆಚ್ಚಿದರೆ ಸೂಕ್ತ ರೀತಿಯ ಕ್ರಮಕ್ಕೆ ರಾಜ್ಯದ ಎಲ್ಲಾ ಆಸ್ಪತ್ರೆಗಳು ಸಜ್ಜಾಗಬೇಕು ಎನ್ನುವ ಕರೆ ಆರೋಗ್ಯ ಇಲಾಖೆಯಿಂದ ನೀಡಲಾಗಿದೆ.</p>



<p>ಪರಿಸ್ಥಿತಿಯನ್ನು ನಿಭಾಯಿಸಲು ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆಯನ್ನು ನಿಗದಿಪಡಿಸಿದ್ದಾರೆ. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಕೆ.ರವಿ ಈ ಸಮಿತಿಯ ನೇತೃತ್ವ ವಹಿಸಿದ್ದಾರೆ. ಸಭೆಯಲ್ಲಿ, ಯಾವುದೇ ಸಂದರ್ಭದಲ್ಲೂ ಎದುರಾಗುವ ವಿಪತ್ತಿಗೆ ರಾಜ್ಯದ ಆರೋಗ್ಯ ಇಲಾಖೆ ಸಜ್ಜಾಗಲು ಕರೆ ನೀಡಲಿದ್ದಾರೆ.</p>



<p>ಪ್ರಸ್ತುತ, ಕರ್ನಾಟಕಲ್ಲಿ ಸೋಂಕು ಹರಡುವ ಪ್ರಮಾಣದಲ್ಲಿ ಅಷ್ಟು ಏರಿಕೆ ಇಲ್ಲದಿದ್ದರೂ 58 ಸಕ್ರಿಯ ಪ್ರಕರಣಗಳನ್ನು ವರದಿ ಮಾಡಿದೆ. 11 ಪ್ರಕರಣಗಳು ಆಸ್ಪತ್ರೆಗೆ ದಾಖಲಾಗಿದೆ ಮತ್ತು ಒಂದು ಕೋವಿಡ್-ಸಂಬಂಧಿತ ಸಾವು ಸಂಭವಿಸಿದೆ. ಸಾವಿಗೆ ಈಡಾದ ವ್ಯಕ್ತಿಗೆ ಕೋವಿಡ್ ಮಾತ್ರವಲ್ಲದೆ ಇತರೆ ಪರಿಣಾಮಕಾರಿ ಕಾಯಿಲೆಗಳೂ ಇದ್ದು, ಕೋವಿಡ್ ನಿಂದಲೇ ಆದ ಸಾವು ಎಂದು ನಿಖರವಾಗಿ ಹೇಳಲಾಗದು ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಭಾರತದಲ್ಲಿ 4,369  ಕೋವಿಡ್‌ ಹೊಸ ಪ್ರಕರಣಗಳು ದೃಢ : ಒಟ್ಟು 46 ಸಾವಿರ</title>
		<link>https://peepalmedia.com/bharathdalli-4369-covid-hosa-prakaranagalu-druda-ottu-46-saavira/</link>
		
		<dc:creator><![CDATA[Peepal Media]]></dc:creator>
		<pubDate>Tue, 13 Sep 2022 05:43:32 +0000</pubDate>
				<category><![CDATA[ಆರೋಗ್ಯ]]></category>
		<category><![CDATA[bengalure]]></category>
		<category><![CDATA[covid cases]]></category>
		<category><![CDATA[health]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[new covid cases]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[writing]]></category>
		<guid isPermaLink="false">https://peepalmedia.com/?p=5037</guid>

					<description><![CDATA[ನವದೆಹಲಿ : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 4,369 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದೆ. &#160; 5178 ಮಂದಿ ಕೋವಿಡ್‌ ನಿಂದ ಚೇತರಿಸಿಕೊಂಡಿದ್ದು ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 46,347 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. ಭಾರತವು ಕಳೆದ 24 ಗಂಟೆಗಳಲ್ಲಿ 3,50,468 ಕೋವಿಡ್‌ ಪರೀಕ್ಷೆಗಳನ್ನು ನಡೆಸಿದೆ,ಇದುವರೆಗೆ ನಡೆಸಲಾದ ಒಟ್ಟು ಪರೀಕ್ಷೆಗಳ ಸಂಖ್ಯೆ 88.99 ಆಗಿದೆ. ಭಾರತದಲ್ಲಿ ಒಟ್ಟು 4,39,30,417 ಮಂದಿ ಕೋವಿಡ್‌ ನಿಂದ ಚೇತರಿಸಿಕೊಂಡಿದ್ದು, ಪ್ರಸ್ತುತ &#160;ಚೇತರಿಕೆಯ ಪ್ರಮಾಣ [&#8230;]]]></description>
										<content:encoded><![CDATA[
<p class="has-medium-font-size"><strong>ನವದೆಹಲಿ </strong>: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 4,369 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದೆ. &nbsp;</p>



<p class="has-medium-font-size">5178 ಮಂದಿ ಕೋವಿಡ್‌ ನಿಂದ ಚೇತರಿಸಿಕೊಂಡಿದ್ದು ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 46,347 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.</p>



<p class="has-medium-font-size">ಭಾರತವು ಕಳೆದ 24 ಗಂಟೆಗಳಲ್ಲಿ 3,50,468 ಕೋವಿಡ್‌ ಪರೀಕ್ಷೆಗಳನ್ನು ನಡೆಸಿದೆ,ಇದುವರೆಗೆ ನಡೆಸಲಾದ ಒಟ್ಟು ಪರೀಕ್ಷೆಗಳ ಸಂಖ್ಯೆ 88.99 ಆಗಿದೆ.</p>



<pre class="wp-block-preformatted has-medium-font-size">ಭಾರತದಲ್ಲಿ ಒಟ್ಟು 4,39,30,417 ಮಂದಿ ಕೋವಿಡ್‌ ನಿಂದ ಚೇತರಿಸಿಕೊಂಡಿದ್ದು, ಪ್ರಸ್ತುತ &nbsp;ಚೇತರಿಕೆಯ ಪ್ರಮಾಣ ಶೇಕಡಾ 98.71 ರಷ್ಟಿದೆ. </pre>
]]></content:encoded>
					
		
		
			</item>
	</channel>
</rss>
