<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>crackers &#8211; Peepal Media</title>
	<atom:link href="https://peepalmedia.com/tag/crackers/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 08 Nov 2023 02:27:52 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>crackers &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ದೇಶಾದ್ಯಂತ ಪಟಾಕಿ ನಿಷೇಧ : ಸುಪ್ರೀಂಕೋರ್ಟ್ ಆದೇಶಿಸಿದ ನಿಯಮಗಳಲ್ಲೇನಿದೆ?</title>
		<link>https://peepalmedia.com/what-are-the-rules-ordered-by-the-supreme-court/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 08 Nov 2023 02:27:11 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[crackers]]></category>
		<category><![CDATA[india]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=31487</guid>

					<description><![CDATA[ದೇಶದಲ್ಲಿ ನಿಷೇಧಿತ ರಾಸಾಯನಿಕಗಳು ಮತ್ತು ಬೇರಿಯಂ ಲವಣಗಳಿರುವ ಪಟಾಕಿ ಮಾರಾಟ, ಖರೀದಿ ಮತ್ತು ಬಳಕೆಯನ್ನು ರದ್ದು ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ತನ್ನ ಆದೇಶಗಳನ್ನು ಅನುಸರಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ಎಂಎಂ ಸುಂದರೇಶ್ ಅವರನ್ನೊಳಗೊಂಡ ಪೀಠವು ಪಟಾಕಿ ಸಿಡಿಸುವ ಕುರಿತು ಹಿಂದಿನ ಆದೇಶಗಳನ್ನು ಜಾರಿಗೊಳಿಸಲು ನಿರ್ದೇಶನ ಕೋರಿ ಸಲ್ಲಿಸಿದ್ದ ರಾಜಸ್ಥಾನ ರಾಜ್ಯದ ಅರ್ಜಿಗಳನ್ನು ಆಲಿಸಿದ ನಂತರ ಈ ತೀರ್ಪು ನೀಡಿದೆ. ದೇಶಾದ್ಯಂತ ಬೇರಿಯಂ ಹಾಗೂ [&#8230;]]]></description>
										<content:encoded><![CDATA[
<p>ದೇಶದಲ್ಲಿ ನಿಷೇಧಿತ ರಾಸಾಯನಿಕಗಳು ಮತ್ತು ಬೇರಿಯಂ ಲವಣಗಳಿರುವ ಪಟಾಕಿ ಮಾರಾಟ, ಖರೀದಿ ಮತ್ತು ಬಳಕೆಯನ್ನು ರದ್ದು ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ತನ್ನ ಆದೇಶಗಳನ್ನು ಅನುಸರಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.</p>



<p>ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ಎಂಎಂ ಸುಂದರೇಶ್ ಅವರನ್ನೊಳಗೊಂಡ ಪೀಠವು ಪಟಾಕಿ ಸಿಡಿಸುವ ಕುರಿತು ಹಿಂದಿನ ಆದೇಶಗಳನ್ನು ಜಾರಿಗೊಳಿಸಲು ನಿರ್ದೇಶನ ಕೋರಿ ಸಲ್ಲಿಸಿದ್ದ ರಾಜಸ್ಥಾನ ರಾಜ್ಯದ ಅರ್ಜಿಗಳನ್ನು ಆಲಿಸಿದ ನಂತರ ಈ ತೀರ್ಪು ನೀಡಿದೆ.</p>



<p>ದೇಶಾದ್ಯಂತ ಬೇರಿಯಂ ಹಾಗೂ ನಿಷೇಧಿತ ಲವಣಗಳಿರುವ ಪಟಾಕಿಗಳ ತಯಾರಿ, ಮಾರಾಟ ಹಾಗೂ ಖರೀದಿ ನಿಷೇಧಿಸುವಂತೆ ಕೋರಿ ಸುಪ್ರೀಂಕೋರ್ಟ್ ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ರಾಜಸ್ಥಾನದ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಪೀಠ ವಿಚಾರಣೆ ನಡೆಸಿ, ಈ ತೀರ್ಪು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಅನ್ವಯಿಸುತ್ತದೆ ಎಂದು ತಿಳಿಸಿದೆ.</p>



<p>ಇನ್ನೇನು ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಬಂದ ಆದೇಶದ ಹಿನ್ನೆಲೆಯಲ್ಲಿ ಪಟಾಕಿ ಅಂಗಡಿ ಮಾಲಿಕರು ಕಂಗಾಲಾಗಿದ್ದಾರೆ. ಇತ್ತೀಚೆಗೆ ದೇಶದ ನಾನಾ ಭಾಗಗಳಲ್ಲಿ ಆದ ಪಟಾಕಿ ಅವಘಡಗಳ ಅಡಿಯಲ್ಲಿ ಸುಪ್ರೀಂಕೋರ್ಟ್ ಈ ಅರ್ಜಿ ತಗೆದುಕೊಳ್ಳಲು ಕಾರಣ ಎಂದು ತಿಳಿಸಿದೆ.</p>



<p>ಇದೇ ಸಂದರ್ಭದಲ್ಲಿ ಪಂಜಾಬ್, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಬೆಳೆ ತ್ಯಾಜ್ಯವನ್ನು ಸುಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಸಂಬಂಧ ಪಂಜಾಬ್, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳ ಪ್ರತಿನಿಧಿಗಳು ಬುಧವಾರ ಸಭೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.</p>



<p>ಮಾಲಿನ್ಯ ತಡೆಯುವುದು ಕೇವಲ ನ್ಯಾಯಾಲಯದ ಕೆಲಸವಲ್ಲ. ಪಂಜಾಬ್‌ನಲ್ಲಿ ಹಾಗೂ ದೇಶದ ಇತರ ಭಾಗಗಳಲ್ಲಿ ಕೊಳೆಗಳನ್ನು ಸುಡುವಂತಹ ವಿವಿಧ ಕಾರಣಗಳಿಂದ ಮಾಲಿನ್ಯದ ಮಟ್ಟವು ಹೆಚ್ಚುತ್ತಿದೆ ಎಂದು ಗಮನಿಸಿದ ನ್ಯಾಯಾಲಯ, ಮಾಲಿನ್ಯವನ್ನು ತಡೆಯುವುದು ಕೇವಲ ನ್ಯಾಯಾಲಯದ ಕೆಲಸವಲ್ಲ, ಇದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿಶೇಷವಾಗಿ ಸರ್ಕಾರವು ಅತ್ಯುನ್ನತ ಹೊಣೆಗಾರಿಕೆಯನ್ನು ಹೊಂದಿದೆ ಎಂದು ತಿಳಿಸಿತು.</p>
]]></content:encoded>
					
		
		
			</item>
		<item>
		<title>ಪಟಾಕಿ ಗೋದಾಮಿಗೆಬೆಂಕಿ ಬಿದ್ದು 14 ಸಾವು: ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ</title>
		<link>https://peepalmedia.com/cm-orders-cid-investigation-on-attibele-incident/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 09 Oct 2023 07:00:58 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[attibele]]></category>
		<category><![CDATA[crackers]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=29461</guid>

					<description><![CDATA[ಬೆಂಗಳೂರು/ಹೊಸೂರು: ಕರ್ನಾಟಕ-ತಮಿಳುನಾಡಿನ ಬೆಂಗಳೂರು ಹೊರವಲಯದ ಅತ್ತಿಬೆಲೆಯಲ್ಲಿರುವ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡದಲ್ಲಿ 14 ಜನರು ಸಾವನ್ನಪ್ಪಿದ ಘಟನೆಯ ತನಿಖೆಯನ್ನು ಕರ್ನಾಟಕ ಸರ್ಕಾರವು ಅಪರಾಧ ತನಿಖಾ ಇಲಾಖೆ (CID)ಗೆ ಹಸ್ತಾಂತರಿಸಿದೆ. ಅತ್ತಿಬೆಲೆಯ ಪಟಾಕಿ ಗೋಡೌನ್ ಬೆಂಕಿ ಅವಘಡದ ಬಗ್ಗೆ ಸಿಐಡಿ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕರ್ನಾಟಕ-ತಮಿಳುನಾಡು ಗಡಿಯಿಂದ ನೂರಾರು ಮೀಟರ್ ದೂರದಲ್ಲಿರುವ ಶ್ರೀ ಬಾಲಾಜಿ ಟ್ರೇಡರ್ಸ್ (fireworks) ನಲ್ಲಿ ಶನಿವಾರ ಸಂಜೆ ಕಾರ್ಮಿಕರು ಲಾರಿಯಿಂದ ಪಟಾಕಿಗಳನ್ನು ಇಳಿಸುತ್ತಿದ್ದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ದೀಪಾವಳಿಗೂ ಮುನ್ನ ತಮಿಳುನಾಡಿನ ಪಟಾಕಿ [&#8230;]]]></description>
										<content:encoded><![CDATA[
<p>ಬೆಂಗಳೂರು/ಹೊಸೂರು: ಕರ್ನಾಟಕ-ತಮಿಳುನಾಡಿನ ಬೆಂಗಳೂರು ಹೊರವಲಯದ ಅತ್ತಿಬೆಲೆಯಲ್ಲಿರುವ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡದಲ್ಲಿ 14 ಜನರು ಸಾವನ್ನಪ್ಪಿದ ಘಟನೆಯ ತನಿಖೆಯನ್ನು ಕರ್ನಾಟಕ ಸರ್ಕಾರವು ಅಪರಾಧ ತನಿಖಾ ಇಲಾಖೆ (CID)ಗೆ ಹಸ್ತಾಂತರಿಸಿದೆ.</p>



<p>ಅತ್ತಿಬೆಲೆಯ ಪಟಾಕಿ ಗೋಡೌನ್ ಬೆಂಕಿ ಅವಘಡದ ಬಗ್ಗೆ ಸಿಐಡಿ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.</p>



<p>ಕರ್ನಾಟಕ-ತಮಿಳುನಾಡು ಗಡಿಯಿಂದ ನೂರಾರು ಮೀಟರ್ ದೂರದಲ್ಲಿರುವ ಶ್ರೀ ಬಾಲಾಜಿ ಟ್ರೇಡರ್ಸ್ (fireworks) ನಲ್ಲಿ ಶನಿವಾರ ಸಂಜೆ ಕಾರ್ಮಿಕರು ಲಾರಿಯಿಂದ ಪಟಾಕಿಗಳನ್ನು ಇಳಿಸುತ್ತಿದ್ದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ದೀಪಾವಳಿಗೂ ಮುನ್ನ ತಮಿಳುನಾಡಿನ ಪಟಾಕಿ ಕೇಂದ್ರ ಶಿವಕಾಶಿಯಿಂದ ಅತ್ತಿಬೆಲೆಗೆ ಪಟಾಕಿಗಳನ್ನು ಸಾಗಿಸಲಾಗುತ್ತಿತ್ತು ಎಂದು ಅಧಿಕಾರಿಗಳು ಹೇಳುತ್ತಾರೆ.</p>



<p>ಭದ್ರತಾ ಕ್ರಮಗಳನ್ನು ಪಾಲಿಸುವ ಪರವಾನಗಿದಾರರಿಗೆ ಒಂದೇ ಬಾರಿಗೆ 1,000 ಕೆಜಿ ಪಟಾಕಿ ಸಂಗ್ರಹಿಸಿ ಇಡಲು ಮತ್ತು ಮಾರಾಟ ಮಾಡಲು ಅವಕಾಶವಿದೆ ಮತ್ತು ಅದಕ್ಕಿಂತ ಹೆಚ್ಚು ಸಂಗ್ರಹಿಸಬಾರದು ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಹೇಳುವಂತೆ, ಅಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸಿಲ್ಲ, ಬೆಂಕಿ ನಂದಿಸುವ ಸಾಧನಗಳನ್ನು ಇಡಲಾಗಿಲ್ಲ ಮತ್ತು ಅದು ಹೆಚ್ಚು ಜನನಿಬಿಡ ಪ್ರದೇಶವಾಗಿದೆ.</p>



<p>ಪಟಾಕಿ ಗೋದಾಮು ಕೂಡ ವಿಸ್ತರಣೆಯಾಗಿದ್ದು, ಸೂಕ್ತ ಅನುಮತಿ ನೀಡಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು ಮತ್ತು ಸಂಪೂರ್ಣ ತನಿಖೆಯ ನಂತರ ಬೆಂಕಿಯ ನಿಜವಾದ ಕಾರಣ ತಿಳಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.</p>



<p>ವರದಿ ನೀಡಿದವರು ಪಟಾಕಿ ಕಾಯ್ದೆಯಡಿ ಪರವಾನಗಿ ಪಡೆದವರಾಗಿರುವುದರಿಂದ ಸರಿಯಾದ ಕ್ರಮ ಅನುಸರಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೃತರಲ್ಲಿ ಹೆಚ್ಚಿನವರು (ದೀಪಾವಳಿ) ವಿದ್ಯಾರ್ಥಿಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿದ್ಯಾರ್ಥಿಗಳು ಬಿಡುವಿನ ವೇಳೆಯಲ್ಲಿ ಒಂದಷ್ಟು ಹಣ ಸಂಪಾದಿಸಲು ಇಲ್ಲಿಗೆ ಬಂದಿದ್ದಾರೆ ಎಂದು ಅವರು ಹೇಳಿದರು.</p>



<p>ಅಧಿಕಾರಿಗಳ ತನಿಖೆಯಿಂದ ಅವರಲ್ಲಿ ಮ್ಯಾನೇಜರ್ ಹೊರತುಪಡಿಸಿ ಯಾರೂ ಖಾಯಂ ನೌಕರರಲ್ಲ ಮತ್ತು ಎಲ್ಲರೂ ಕಾರ್ಮಿಕರು ಎಂದು ತಿಳಿದುಬಂದಿದೆ. ಲೈಸನ್ಸ್ ಪಡೆದಿರುವ ರಾಮಸ್ವಾಮಿರೆಡ್ಡಿ, ಅಂಗಡಿ ನಡೆಸುತ್ತಿರುವ ಅವರ ಪುತ್ರ ನವೀನ್ ರೆಡ್ಡಿ, ಸ್ಥಳದ ಮಾಲೀಕ ಅನಿಲ್ ರೆಡ್ಡಿ ವಿರುದ್ಧ ಕೊಲೆ ಅಪರಾಧ ಹಾಗೂ ಐಪಿಸಿಯ ಹಲವು ಸೆಕ್ಷನ್ನುಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.</p>



<p>ಶನಿವಾರ ತಡರಾತ್ರಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (ಡಿಕೆಶಿ) ರೂ. 5 ಲಕ್ಷ ಪರಿಹಾರ ಘೋಷಿಸಿದರು. ಇದಲ್ಲದೇ ಗಾಯಗೊಂಡ ಮೂವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅತ್ತ, ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲರಿಗೂ ತಮಿಳುನಾಡು ಸರ್ಕಾರ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.</p>
]]></content:encoded>
					
		
		
			</item>
		<item>
		<title>ವಿಡಿಯೋ ನೋಡಿ: ಸುಟ್ಟು ಭಸ್ಮವಾದ ಪಟಾಕಿ ಅಂಗಡಿ</title>
		<link>https://peepalmedia.com/cracker-shop-in-vijayawada-caught-fire/</link>
		
		<dc:creator><![CDATA[Peepal Media]]></dc:creator>
		<pubDate>Sun, 23 Oct 2022 05:08:31 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[crackers]]></category>
		<category><![CDATA[Fire accident]]></category>
		<category><![CDATA[firecrackers]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=12624</guid>

					<description><![CDATA[ವಿಜಯವಾಡದ ಗಾಂಧಿನಗರ ಜಿಮ್ಖಾನಾ ಮೈದಾನದಲ್ಲಿ ಇಂದು ಬೆಳಗ್ಗೆ ಪಟಾಕಿ ಅಂಗಡಗಳಿಗೆ ಬೆಂಕಿ ತಗುಲಿದ್ದು ಅಂಗಡಿಗಳು ಪೂರ್ತಿಯಾಗಿ ಸುಟ್ಟು ಬೂದಿಯಾಗಿವೆ. ಈ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದ್ದು, ಯಾವುದೇ ಸಾವು-ನೋವಿನ ವರದಿಯಾಗಿಲ್ಲ.]]></description>
										<content:encoded><![CDATA[
<p>ವಿಜಯವಾಡದ ಗಾಂಧಿನಗರ ಜಿಮ್ಖಾನಾ ಮೈದಾನದಲ್ಲಿ ಇಂದು ಬೆಳಗ್ಗೆ ಪಟಾಕಿ ಅಂಗಡಗಳಿಗೆ ಬೆಂಕಿ ತಗುಲಿದ್ದು ಅಂಗಡಿಗಳು ಪೂರ್ತಿಯಾಗಿ ಸುಟ್ಟು ಬೂದಿಯಾಗಿವೆ. ಈ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದ್ದು, ಯಾವುದೇ ಸಾವು-ನೋವಿನ ವರದಿಯಾಗಿಲ್ಲ.</p>



<figure class="wp-block-video aligncenter"><video controls src="https://peepalmedia.com/wp-content/uploads/2022/10/WhatsApp-Video-2022-10-23-at-10.28.12-AM.mp4"></video><figcaption>ಬೆಂಕಿಗೆ ಬಲಿಯಾದ ಅಂಗಡಿಗಳು</figcaption></figure>
]]></content:encoded>
					
		
		<enclosure url="https://peepalmedia.com/wp-content/uploads/2022/10/WhatsApp-Video-2022-10-23-at-10.28.12-AM.mp4" length="4765082" type="video/mp4" />

			</item>
		<item>
		<title>ಕರ್ನಾಟಕ: ದೀಪಾವಳಿಯಲ್ಲಿ ಕೇವಲ ಎರೆಡು ಗಂಟೆಗಳ ಕಾಲ ಪಟಾಕಿ ಸಿಡಿಸುವಂತೆ ಕೆಎಸ್‌ಪಿಸಿಬಿ ಸೂಚನೆ</title>
		<link>https://peepalmedia.com/karnataka-kspcb-instructions-to-burst-firecrackers-for-only-two-hours-on-diwali/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 19 Oct 2022 12:18:26 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[bengalure]]></category>
		<category><![CDATA[crackers]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[KSPCB]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=11969</guid>

					<description><![CDATA[ಬೆಂಗಳೂರು: ಮುಂಬರುವ ದೀಪಾವಳಿಯಂದು ರಾಜ್ಯದ ಜನರು ಎರಡು ಗಂಟೆಗಳ ಕಾಲ ಮಾತ್ರ ಪಟಾಕಿ ಸಿಡಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿನ ನಿರ್ದೇಶನಗಳು ಸುಪ್ರೀಂ ಕೋರ್ಟ್‌ನ ಆದೇಶಗಳಿಗೆ ಅನುಗುಣವಾಗಿದ್ದು, &#160;ನಗರದ ವಾಯು ಮಾಲಿನ್ಯ ಮತ್ತು &#160;ಶಬ್ದ ಮಾಲಿನ್ಯ ತಡೆಗಟ್ಟುವ ಉದ್ದೇಶ ಹೊಂದಿವೆ. ಈ ನಿಟ್ಟಿನಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿಯಿಂದ ತಿಳಿದುಬಂದಿದೆ. ಕರ್ನಾಟಕ ರಾಜ್ಯ ಮಾಲಿನ್ಯ [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು:</strong> ಮುಂಬರುವ ದೀಪಾವಳಿಯಂದು ರಾಜ್ಯದ ಜನರು ಎರಡು ಗಂಟೆಗಳ ಕಾಲ ಮಾತ್ರ ಪಟಾಕಿ ಸಿಡಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಸುತ್ತೋಲೆ ಹೊರಡಿಸಿದೆ.</p>



<p style="font-size:20px">ಸುತ್ತೋಲೆಯಲ್ಲಿನ ನಿರ್ದೇಶನಗಳು ಸುಪ್ರೀಂ ಕೋರ್ಟ್‌ನ ಆದೇಶಗಳಿಗೆ ಅನುಗುಣವಾಗಿದ್ದು, &nbsp;ನಗರದ ವಾಯು ಮಾಲಿನ್ಯ ಮತ್ತು &nbsp;ಶಬ್ದ ಮಾಲಿನ್ಯ ತಡೆಗಟ್ಟುವ ಉದ್ದೇಶ ಹೊಂದಿವೆ. ಈ ನಿಟ್ಟಿನಲ್ಲಿ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿಯಿಂದ ತಿಳಿದುಬಂದಿದೆ.</p>



<p style="font-size:20px">ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ಜಿಲ್ಲಾಡಳಿತ ಮತ್ತು ಪೊಲೀಸ್‌ ಪಡೆಗಳಂತಹ ಸರ್ಕಾರಿ ಸಂಸ್ಥೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಪ್ರತ್ಯೇಕ ಪತ್ರಗಳನ್ನು ಬರೆದು ಎರೆಡು ಗಂಟೆಗಳ ನಿಯಮವನ್ನು ಜಾರಿಗೊಳಿಸಿಸಲು ಸೂಚಿಸಿದೆ.</p>



<p style="font-size:20px">ಪರಿಸರ ಸ್ನೇಹಿಯಲ್ಲದ ಪಟಾಕಿಗಳ ಮಾರಟವನ್ನು ನಿಯಂತ್ರಿಸಲು ಮತ್ತು ʼಹಸಿರು ಪಟಾಕಿʼಗಳ ಮಾರಾಟವನ್ನು ಉತ್ತೇಜಿಸಲು, ಮಂಡಳಿಯು ನೆಲದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಮಾರಾಟವಾಗುವ ಉತ್ಪನ್ನಗಳ ಗುಣಮಟ್ಟವನ್ನು ಪರಿಶೀಲಿಸಲು ʼವೈಜ್ಞಾನಿಕ ಅಧಿಕಾರಿʼಯನ್ನು ನೇಮಿಸಿದೆ.</p>



<p style="font-size:20px">ಸುಪ್ರೀಂ ಕೋರ್ಟ್ ರಾತ್ರಿ 8 ರಿಂದ ರಾತ್ರಿ 10 ರವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದ್ದು, ಹಬ್ಬದ ದಿನಗಳಲ್ಲಿ ಇತರ ಸಮಯಗಳಲ್ಲಿ ಅದನ್ನು ನಿಷೇಧಿಸಿದೆ. ಇದಲ್ಲದೆ, ಇದು ಹಸಿರು ಪಟಾಕಿ ಹೊರತುಪಡಿಸಿ ಎಲ್ಲಾ ರೀತಿಯ ಪಟಾಕಿಗಳನ್ನು ನಿಷೇಧಿಸಿದೆ. ಆದ್ದರಿಂದ, ಎಲ್ಲಾ ಜಾರಿ ಸಂಸ್ಥೆಗಳು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.</p>



<p style="font-size:20px">ಸುತ್ತೋಲೆಯ ಪ್ರಕಾರ ದೀಪಾವಳಿ ಹಬ್ಬದ ಮೊದಲು ಮತ್ತು ನಂತರ ಒಂದು ವಾರದ ಅವಧಿಗೆ ವಾಯುಮಾಲಿನ್ಯ ಮತ್ತು ಶಬ್ದ ಮಾಲಿನ್ಯದ ಗುಣಮಟ್ಟವನ್ನು ಮಾಲಿನ್ಯ ನಿಯಂತ್ರಕವು ಅಳೆಯುತ್ತದೆ. ಹೀಗಾಗಿ 2018 ರಲ್ಲಿ ಉನ್ನತ ನ್ಯಾಯಾಲಯದ ಆದೇಶವನ್ನು ಉಲ್ಲೇಖಿಸಿ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>
]]></content:encoded>
					
		
		
			</item>
	</channel>
</rss>
