<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Daivaradhane &#8211; Peepal Media</title>
	<atom:link href="https://peepalmedia.com/tag/daivaradhane/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sun, 04 Dec 2022 14:40:30 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Daivaradhane &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ತುಳುನಾಡಿನ ದೈವಾರಾಧನೆಗೆ ಸಂಸದ ತೇಜಸ್ವಿ ಸೂರ್ಯ ಅವರಿಂದ ಅವಮಾನ</title>
		<link>https://peepalmedia.com/tejaswi-surya-insults-the-deity-of-tulunad/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 04 Dec 2022 13:56:09 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[bengalure]]></category>
		<category><![CDATA[Daivaradhane]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[kanthara]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[tejaswi surya]]></category>
		<category><![CDATA[writing]]></category>
		<guid isPermaLink="false">https://peepalmedia.com/?p=17515</guid>

					<description><![CDATA[ಬೆಂಗಳೂರು: ಇತ್ತೀಚೆಗೆ ಎಲ್ಲೆಂದರಲ್ಲಿ ತುಳುನಾಡಿನ ದೈವಾರಾಧನೆ ಪ್ರದರ್ಶನಗಳು ಹೆಚ್ಚಾಗುತ್ತಿದ್ದು, ದೈವಗಳ ಹೆಸರಿನಲ್ಲಿ ದುಡ್ಡು ಮಾಡುತ್ತಿವೆ. ಈ ವಿರುದ್ಧ ದೈವಾರಾಧಕರು ಸಿಡಿದೇಳುತ್ತಿರುವ ಬೆನ್ನಲ್ಲೇ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಅವರಿಂದಲೂ ದೈವಾರಾಧನೆಗೆ ಅವಮಾನವಾಗಿರುವ ಘಟನೆ ನಡೆದಿದೆ. ಶುಕ್ರವಾರದಂದು ಬೆಂಗಳೂರಿನ ತಣಿಸಂದ್ರ ರಾಷ್ಟ್ರೀಯ ಸ್ವಯಂಸೇವಕ ಸಂಘ ಪ್ರೇರಿತ ರಾಷ್ಟ್ರೋತ್ಥನ ಪರಿಷತ್‌ನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ವಾರ್ಷಿಕೋತ್ಸವದ ವೇದಿಕೆಯಲ್ಲಿ ತುಳುನಾಡಿನ ದೈವಾರಾಧನೆ ಪ್ರದರ್ಶನ ನೀಡಿದ್ದು, ಸಂಸದ ತೇಜಸ್ವಿ ಸೂರ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಇತ್ತೀಚೆಗೆ ಎಲ್ಲೆಂದರಲ್ಲಿ ತುಳುನಾಡಿನ ದೈವಾರಾಧನೆ ಪ್ರದರ್ಶನಗಳು ಹೆಚ್ಚಾಗುತ್ತಿದ್ದು, ದೈವಗಳ ಹೆಸರಿನಲ್ಲಿ ದುಡ್ಡು ಮಾಡುತ್ತಿವೆ. ಈ ವಿರುದ್ಧ ದೈವಾರಾಧಕರು ಸಿಡಿದೇಳುತ್ತಿರುವ ಬೆನ್ನಲ್ಲೇ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಅವರಿಂದಲೂ ದೈವಾರಾಧನೆಗೆ ಅವಮಾನವಾಗಿರುವ ಘಟನೆ ನಡೆದಿದೆ. </p>



<p>ಶುಕ್ರವಾರದಂದು ಬೆಂಗಳೂರಿನ ತಣಿಸಂದ್ರ ರಾಷ್ಟ್ರೀಯ ಸ್ವಯಂಸೇವಕ ಸಂಘ ಪ್ರೇರಿತ ರಾಷ್ಟ್ರೋತ್ಥನ ಪರಿಷತ್‌ನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ವಾರ್ಷಿಕೋತ್ಸವದ ವೇದಿಕೆಯಲ್ಲಿ ತುಳುನಾಡಿನ ದೈವಾರಾಧನೆ ಪ್ರದರ್ಶನ ನೀಡಿದ್ದು, ಸಂಸದ ತೇಜಸ್ವಿ ಸೂರ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ತೇಜಸ್ವಿ ಅವರು ತನ್ನ ಕಾಲಿಗೆ ಹಾಕಿದ್ದ ಶೂ ತೆಗೆಯದೇ ದೈವ ನರ್ತನದಲ್ಲಿ ಬಳಸುವ ಜೀಟಿಗೆಯನ್ನು ಕೈಯಲ್ಲಿ ಹಿಡಿದಿದ್ದು, ದೈವಾರಾಧನೆಗೆ, ದೈವ ನರ್ತಕರಿಗೆ  ಅವಮಾನವಾಗುವಂತೆ ವರ್ತಿಸಿದ್ದಾರೆ.</p>



<p>ತೇಜಸ್ವಿ ಸೂರ್ಯ ಅವರ ಈ ವರ್ತನೆಯ ವಿರುದ್ಧ ದೈವಾರಾಧಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇಷ್ಟೆಲ್ಲಾ ಬೆಳವಣಿಗೆಗಳು ಮುಂದುವರೆಯುತ್ತಿದ್ದರೂ, ತುಳುನಾಡಿನ ಶಾಸಕರುಗಳು ಸಂಸದರು ಮೌನವಾಗಿರುವುದರ ಬಗ್ಗೆಯೂ ಕಿಡಿಕಾರಿದ್ದಾರೆ.</p>



<figure class="wp-block-image size-full"><img fetchpriority="high" decoding="async" width="616" height="512" src="https://peepalmedia.com/wp-content/uploads/2022/12/Screenshot-2022-12-04-191803.jpg" alt="" class="wp-image-17517" srcset="https://peepalmedia.com/wp-content/uploads/2022/12/Screenshot-2022-12-04-191803.jpg 616w, https://peepalmedia.com/wp-content/uploads/2022/12/Screenshot-2022-12-04-191803-300x249.jpg 300w, https://peepalmedia.com/wp-content/uploads/2022/12/Screenshot-2022-12-04-191803-150x125.jpg 150w" sizes="(max-width: 616px) 100vw, 616px" /></figure>



<p>ಸಂಸದ ತೇಜಸ್ವಿಯವರು ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದ ಬಗ್ಗೆ ಹಂಚಿಕೊಂಡಿದ್ದು, ಕೈಯಲ್ಲಿ ಜೀಟಿಕೆ ಹಿಡಿದು ಕಾಲಲ್ಲಿ ಶೂ ಹಾಕಿಕೊಂಡೇ ದೈವದ ಪಕ್ಕ ಫೋಟೋ ತೆಗೆಸಿಕೊಂಡಿರುವುದನ್ನು ಅದನ್ನು ತಮ್ಮ ಪೇಜ್‌ ಅಲ್ಲಿ ಹಾಕಿಕೊಂಡಿದ್ದರು. ಆದರೆ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದಂತೆ ರಾತ್ರೋರಾತ್ರಿ ಆ ಫೋಟೋವನ್ನು ಡಿಲೀಟ್‌ ಮಾಡಿದ್ದು, ಅನುಮಾನಕ್ಕೆ ಕಾರಣವಾಗಿದೆ. ಆದರೆ ಅದೇ ದಿನ ಅವರು ಶೂ ಹಾಕಿಕೊಂಡಿದ್ದ ಬೇರೆ ಫೋಟೋ ಅವರ ಫೇಸ್ಬುಕ್‌ ಪುಟದಲ್ಲಿ ಕಾಣಬಹುದು. </p>



<figure class="wp-block-image size-large is-resized"><img decoding="async" src="https://peepalmedia.com/wp-content/uploads/2022/12/318313295_697927118358738_4708263720483474075_n-1024x682.jpg" alt="" class="wp-image-17522" width="586" height="386"/></figure>



<p>ತೇಜಸ್ವಿಯವರ ಈ ನಡೆಯ ವಿರುದ್ಧ ಅಖಿಲ ಭಾರತ ಹಿಂದೂ ಮಹಾ ಸಭಾ ಆಕ್ರೋಶ ವ್ಯಕ್ತ ಪಡಿಸಿದ್ದು,</p>



<p>ಜೈ ಹಿಂದೂ ರಾಷ್ಟ್ರ…</p>



<p>ಇದೇನಾ ಸಂಸ್ಕೃತಿ???</p>



<p>ಇದೇನಾ ಪದ್ಧತಿ ???</p>



<p>ಭಾರತೀಯ ಜನತಾ ಪಕ್ಷಕ್ಕೆ ಹಿಂದೂ ಸಂಸ್ಕೃತಿಯ ಬಗ್ಗೆ/&nbsp; ದೈವರಾದನೆಯ ಬಗ್ಗೆ/ ಹಿಂದೂ ಸಮುದಾಯದ ಬಗ್ಗೆ, ಇರುವಂತಹ ಗೌರವವನ್ನು ನೋಡಿ….</p>



<p>ಆಡಳಿತದಲ್ಲಿರುವಂತಹ ಡಬಲ್ ಇಂಜಿನ್ ಸರಕಾರದ ಮಾನ್ಯ ಸಂಸದರಾದ ಶ್ರೀ ತೇಜಸ್ವಿ ಸೂರ್ಯ ರವರು ಚಪ್ಪಲಿಯನ್ನ ಧರಿಸಿ ನಿಂತಿರುವುದನ್ನ ಕಣ್ಣಾರೆ ನೋಡಿ&#8230;</p>



<p>ಇಂಥವರಿಂದ ಹಿಂದೂ ಸಮಾಜ ಏನನ್ನು ಅಪೇಕ್ಷಿಸಲು ಸಾಧ್ಯ???</p>



<p>ಎಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದು ಕಿಡಿಕಾರಿದೆ.</p>



<p>ಜೈ ಹಿಂದೂ ರಾಷ್ಟ್ರ&#8230;</p>



<p>ಇದೇನಾ ಸಂಸ್ಕೃತಿ ???</p>



<p>ಇದೇನ ಪದ್ಧತಿ ???</p>



<p>ಭಾರತೀಯ ಜನತಾ ಪಕ್ಷಕ್ಕೆ ಹಿಂದೂ ಸಂಸ್ಕೃತಿಯ ಬಗ್ಗೆ /ದೈವರಾದನೆಯ ಬಗ್ಗೆ /ಹಿಂದೂ ಸಮುದಾಯದ ಬಗ್ಗೆ, ಇರುವಂತಹ ಗೌರವವನ್ನು ನೋಡಿ &#8230;.</p>



<p>ಆಡಳಿತದಲ್ಲಿರುವಂತಹ ಡಬಲ್ ಇಂಜಿನ್ ಸರಕಾರದ ಮಾನ್ಯ ಸಂಸದರಾದ ಶ್ರೀ ತೇಜಸ್ವಿ ಸೂರ್ಯ ರವರು ಚಪ್ಪಲಿಯನ್ನ ಧರಿಸಿ ನಿಂತಿರುವುದನ್ನ ಕಣ್ಣಾರೆ ನೋಡಿ&#8230;</p>



<p>ಇಂಥವರಿಂದ ಹಿಂದೂ ಸಮಾಜ ಏನನ್ನು ಅಪೇಕ್ಷಿಸಲು ಸಾಧ್ಯ???</p>



<figure class="wp-block-image size-full"><img decoding="async" width="607" height="567" src="https://peepalmedia.com/wp-content/uploads/2022/12/Screenshot-2022-12-04-190842.jpg" alt="" class="wp-image-17516" srcset="https://peepalmedia.com/wp-content/uploads/2022/12/Screenshot-2022-12-04-190842.jpg 607w, https://peepalmedia.com/wp-content/uploads/2022/12/Screenshot-2022-12-04-190842-300x280.jpg 300w, https://peepalmedia.com/wp-content/uploads/2022/12/Screenshot-2022-12-04-190842-150x140.jpg 150w" sizes="(max-width: 607px) 100vw, 607px" /></figure>



<p>ಎಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದು ಕಿಡಿಕಾರಿದೆ.</p>
]]></content:encoded>
					
		
		
			</item>
		<item>
		<title>ತುಳುನಾಡಿನ &#8216;ಪರ್ಬ&#8217; &#8216;ದೊಡ್ಡಬ್ಬ&#8217; ಎಂಬ ಜನ ಮೂಲ ಹಬ್ಬ.</title>
		<link>https://peepalmedia.com/tulunaadina-parba-doddabba-emba-jana-mula-habba/</link>
		
		<dc:creator><![CDATA[Peepal Media]]></dc:creator>
		<pubDate>Tue, 25 Oct 2022 11:24:22 +0000</pubDate>
				<category><![CDATA[ಧರ್ಮ- ಸಂಸ್ಕೃತಿ]]></category>
		<category><![CDATA[Daivaradhane]]></category>
		<category><![CDATA[doddabba]]></category>
		<category><![CDATA[festival]]></category>
		<category><![CDATA[habba]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[parba]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[tulunadu]]></category>
		<category><![CDATA[writing]]></category>
		<guid isPermaLink="false">https://peepalmedia.com/?p=12906</guid>

					<description><![CDATA[ತುಳು ಹಾಗೂ ಅರೆಬಾಸೆಯವರ &#8216;ಪರ್ಬ&#8217;&#160; ಅಥವಾ&#160; &#8216;ದೊಡ್ಡಬ್ಬ&#8217; ವೇ ಇಂದು ಬಲೀಂದ್ರ ಪೂಜೆಯಾಯಿತೇ? ವ್ಯಾಪಕ ಆಚರಣೆಯಲ್ಲಿದ್ದ ಜನಪದೀಯ ಹಬ್ಬವೊಂದು ಪುರಾಣ ಕತೆಗೆ ಪ್ರೇರಣೆಯಾಯಿತೇ? ಓದಿ.. ಕೃಷಿಕ ಗೋಪಾಲ್‌ ಪೆರಾಜೆಯವರ ಲೇಖನ ಈ ಮೇಲಿನ ಎರಡು ಪದಗಳಲ್ಲಿ ಮೊದಲಿನದು &#8216;ತುಳು&#8217; ಭಾಷೆಗೆ ಸಂಬಂಧಿಸಿದರೆ ಎರಡನೆಯದು ಅರೆಬಾಸೆಗೆ ಸಂಬಂಧಿಸಿದೆ.&#160; &#8216;ಪರ್ಬ&#8217; ಅಥವಾ &#8216;ದೊಡ್ಡಬ್ಬ&#8217; ಇಂದು &#8216;ಬಲಿಂದ್ರ&#8217; ಅಥವಾ &#8216;ದೀಪಾವಳಿ&#8217; ಎಂದು ಕರೆಯಲ್ಪಡುತ್ತಿದೆ. ಬಹುಷ: ಪುರಾಣ ಕಥೆಯೊಂದರ ರಚನೆಯ ನಂತರ ಈ ಹೆಸರುಗಳು ಬಂದಿರಬೇಕು. ಅದರ ಬಗ್ಗೆ ಸ್ವಲ್ಪ ವಿವರಣೆಗಳನ್ನು ಮತ್ತೆ [&#8230;]]]></description>
										<content:encoded><![CDATA[
<p><strong>ತುಳು ಹಾಗೂ ಅರೆಬಾಸೆಯವರ &#8216;ಪರ್ಬ&#8217;</strong><strong>&nbsp;</strong><strong> ಅಥವಾ&nbsp; &#8216;ದೊಡ್ಡಬ್ಬ&#8217; ವೇ ಇಂದು ಬಲೀಂದ್ರ ಪೂಜೆಯಾಯಿತೇ? ವ್ಯಾಪಕ ಆಚರಣೆಯಲ್ಲಿದ್ದ ಜನಪದೀಯ ಹಬ್ಬವೊಂದು ಪುರಾಣ ಕತೆಗೆ ಪ್ರೇರಣೆಯಾಯಿತೇ?</strong><strong> </strong><strong>ಓದಿ.. ಕೃಷಿಕ ಗೋಪಾಲ್‌ ಪೆರಾಜೆಯವರ ಲೇಖನ</strong></p>



<p>ಈ ಮೇಲಿನ ಎರಡು ಪದಗಳಲ್ಲಿ ಮೊದಲಿನದು &#8216;ತುಳು&#8217; ಭಾಷೆಗೆ ಸಂಬಂಧಿಸಿದರೆ ಎರಡನೆಯದು ಅರೆಬಾಸೆಗೆ ಸಂಬಂಧಿಸಿದೆ.&nbsp; &#8216;ಪರ್ಬ&#8217; ಅಥವಾ &#8216;ದೊಡ್ಡಬ್ಬ&#8217; ಇಂದು &#8216;ಬಲಿಂದ್ರ&#8217; ಅಥವಾ &#8216;ದೀಪಾವಳಿ&#8217; ಎಂದು ಕರೆಯಲ್ಪಡುತ್ತಿದೆ. ಬಹುಷ: ಪುರಾಣ ಕಥೆಯೊಂದರ ರಚನೆಯ ನಂತರ ಈ ಹೆಸರುಗಳು ಬಂದಿರಬೇಕು. ಅದರ ಬಗ್ಗೆ ಸ್ವಲ್ಪ ವಿವರಣೆಗಳನ್ನು ಮತ್ತೆ ನೋಡೋಣ.</p>



<p><strong>ಹಬ್ಬದ ಆಚರಣೆಯ ಸಂದರ್ಭ&#8230;</strong></p>



<p>ಮೊದಲಿಗೆ ಈ ಹಬ್ಬದ ಆಚರಣೆಯ ಸಂದರ್ಭ ಮತ್ತು ಅದು ಜನಸಾಮಾನ್ಯರಲ್ಲಿ ಏಕೆ &#8216;ದೊಡ್ಡಬ್ಬ&#8217;ವಾಗಿ ಗುರುತಿಸಿಕೊಂಡಿತು ಎಂಬುದನ್ನು ನೋಡಬೇಕಾಗುತ್ತದೆ. ಒಂದು ಕಾಲದಲ್ಲಿ ಬತ್ತದ ಬೇಸಾಯವೇ ಪ್ರಧಾನವಾಗಿದ್ದ ತುಳುನಾಡಿಗೆ &#8216;ಕೆಡ್ಡಾಸ&#8217; &#8216;ಬಿಸು&#8217; &#8216;ಹೊಸ್ತು&#8217;&nbsp; &#8216;ಪರ್ಬʼ ಆಚರಣೆಗಳು ನಿಜಕ್ಕೂ ಪರ್ವ ದಿನಗಳೇ ಆಗಿದ್ದವು. ಫೆಬ್ರವರಿ &#8216;ಕೆಡ್ಡಾಸ&#8217; ದಲ್ಲಿ ಭೂಮಿತಾಯಿ ಮುಟ್ಟು ಆಗಿರುತ್ತಾಳೆ ನಂತರ ಬರುವ ಏಪ್ರಿಲ್ ನ&nbsp; &#8216;ಬಿಸು&#8217; ಹಬ್ಬಕ್ಕೆ ಭೂಮಿಗೆ ನೇಗಿಲು ಮುಖಾಂತರ ಉಳುಮೆ ಆರಂಭವಾಗುತ್ತದೆ. ಸೆಪ್ಟೆಂಬರ್ ಹೊತ್ತಿಗೆ ಬಸಿರಾದ ಭೂಮಿಯಿಂದ ಭತ್ತದ ತೆನೆಗಳು ಎದ್ದು ನಿಂತಿರುತ್ತವೆ. ಆಗ ಬರುವುದೇ &#8216;ಹೊಸ್ತು&#8217; ಮನೆ ತುಂಬಿಸುವ ಹಬ್ಬ. ಈಗ ಭತ್ತದ ಕಣಜ ಮನೆ ತುಂಬಿದೆ. ಒಕ್ಕಲಿನವರ ಸಂತೋಷ, ಖುಷಿಗಳು ಕಳೆಕಟ್ಟಿವೆ. ದೊಡ್ಡಬ್ಬ ಅಥವಾ ಪರ್ಬಕ್ಕೆ ರಂಗ ಸಜ್ಜುಗೊಳ್ಳುವ ಮೂಲಕ ತುಳುನಾಡಿನ ಬಹುದೊಡ್ಡ ಹಬ್ಬದ ಆಚರಣೆ ನಡೆಯುತ್ತದೆ.</p>



<p>ಹಲವು ಸಾಂಪ್ರದಾಯಿಕ ಕಟ್ಟಳೆಗಳೊಂದಿಗೆ ಮೂರು ದಿನಗಳ ನಿರಂತರ ಸಂಭ್ರಮಕ್ಕೆ ಸಾಕ್ಷಿಯಾಗುತ್ತದೆ ಹಬ್ಬ. ತುಳುನಾಡಿನ ಬೇರೆ ಬೇರೆ ಭಾಗಗಳು ಮತ್ತು ಜನಾಂಗಗಳು ಹೇಗೆ ಇದನ್ನು ಕಂಡವು ಎನ್ನುವ ವಿವರಕ್ಕೆ ಹೋಗದೆ ಮುಖ್ಯವಾಗಿ ಅರೆಬಾಸೆ ಗೌಡರ ಹಿನ್ನೆಲೆಯಲ್ಲಿ ಇದನ್ನು ನೋಡಲೆತ್ನಿಸುವೆ.</p>



<p><strong>ಅರೆಬಾಸೆ ಗೌಡರ ಹಬ್ಬದ ತಯಾರಿ</strong></p>



<p></p>



<figure class="wp-block-image size-full"><img loading="lazy" decoding="async" width="720" height="960" src="https://peepalmedia.com/wp-content/uploads/2022/10/IMG-20221023-WA0047.jpg" alt="" class="wp-image-12911" srcset="https://peepalmedia.com/wp-content/uploads/2022/10/IMG-20221023-WA0047.jpg 720w, https://peepalmedia.com/wp-content/uploads/2022/10/IMG-20221023-WA0047-225x300.jpg 225w, https://peepalmedia.com/wp-content/uploads/2022/10/IMG-20221023-WA0047-150x200.jpg 150w, https://peepalmedia.com/wp-content/uploads/2022/10/IMG-20221023-WA0047-300x400.jpg 300w, https://peepalmedia.com/wp-content/uploads/2022/10/IMG-20221023-WA0047-696x928.jpg 696w" sizes="auto, (max-width: 720px) 100vw, 720px" /></figure>



<p></p>



<p>ಕನಿಷ್ಠ  ಒಂದು ವಾರದ ಮೊದಲೇ ಹಬ್ಬಕ್ಕೆ ತಯಾರಿಯನ್ನು ಜನ ಶುರು ಮಾಡುತ್ತಾರೆ. ಅಂಗಳದ ಮಧ್ಯೆ ಪ್ರತಿಷ್ಠಾಪಿಸಲಿರುವ ಹಾಲು ಸುರಿಸುವ ಹಾಲೆಮರದ, ಅಂದರೆ  ಕಾಂಡದಲ್ಲಿ ಮೂರು ಗೆಲ್ಲುಗಳು ಟಿಸಿಲೊಡೆದ ಒಂದು ಗಿಡವನ್ನು ಆಯ್ಕೆ ಮಾಡುತ್ತಾರೆ. ಅಂತಹ ಮರದ ಕೊಂಬೆಯನ್ನು ಕತ್ತರಿಸಿ ತಂದು ಅಮಾವಾಸ್ಯೆಯ ದಿನ ಅಂಗಳದಲ್ಲಿ ನೆಡುತ್ತಾರೆ. ಕಾಡು ಬೆಟ್ಟಗಳಲ್ಲಿ ಸಿಗುವ  ಕೇಪ್ಳ ಹೂ, ಕೇನೆ ಕಾಯಿ, ಹಂದಿ ಬಳ್ಳಿ ಕಾಯಿ, ನರಿಕೊಂಬು, ನೆಲಗುಬ್ಬಿ, ಮಾರಾಟಿ ಮಲ್ಲಿಗೆ, ಚೆಂಡು ಹೂವು, ಇತ್ಯಾದಿ ಮಾಲೆಗಳಿಂದ ಮರವನ್ನು ಶೃಂಗರಿಸುವರು. ಈ ಶೃಂಗಾರಕ್ಕಾಗಿ ಮರದ ಕಂಠ ಭಾಗಕ್ಕೆ ಬಿದಿರ ಸಲಾಕೆಯೊಂದನ್ನು ಅಡ್ಡ ಕಟ್ಟಿ ಅದರ ಎರಡು ತುದಿಗಳಿಗೆ ವೀಳ್ಯದ ಎಲೆ ಮತ್ತು ಅಡಿಕೆ ಸುರಿದು ನೇತು ಹಾಕುತ್ತಾರೆ. ಮರಕ್ಕೆ ಅರ್ಧ ಚಂದ್ರಾಕೃತಿ ಅಥವಾ ತ್ರಿಕೋನ ಆಕಾರದಲ್ಲಿ ಮಾಡಿದ ಚೆಂಡು ಹೂಗಳನ್ನು ಸುರಿದ ಮುಡಿಯೊಂದನ್ನು ಕಿರೀಟ ರೀತಿಯಲ್ಲಿ ಕಟ್ಟುವರು. ಮರದ ಕೊರಳಿಗೆ ಅಂದರೆ ಕಂಠ ಭಾಗಕ್ಕೆ ಒಂದು ಹಿಡಿಯಷ್ಟು ದಪ್ಪದ ಭತ್ತದ ಕದಿರನ್ನು ಕಟ್ಟಬೇಕು. ಆ ಪವಿತ್ರ ಮರದ ಪೂಜ್ಯ ಭಾಗವೇ ಭತ್ತದ ಕದಿರು. ಇದಾದ ನಂತರ ಮೂರು ದಿನ ರಾತ್ರಿಗಳಲ್ಲಿ ಮರದ ಅಡಿ ಭಾಗದ ಅಂಗಳಕ್ಕೆ ಸೆಗಣಿ ಸಾರಿಸಿ,  ಮಣೆ ಇಟ್ಟು ಅದರ ಮೇಲೆ ಜೋಡು ಬಾಳೆಗಳ ಎಲೆ ಹಾಸಿ,  ಎಡೆ ಇರಿಸುವರು. ಮರದ ಟಿಸಿಲೊಡೆದ ಭಾಗದಲ್ಲಿ  ಹಣತೆ ಇಟ್ಟು,  ಕೈ ಮುಗಿಯುತ್ತ &#8216;ಪೊಲಿ ಪೊಲಿಯೇ ಬಾ&#8217; ಎಂದು ಮನೆ ಮಂದಿ ಕೂಗುವರು. ಅಂದರೆ &#8216;ಸಮೃದ್ಧಿಯೇ ಮನೆಯೊಳಗೆ ತುಂಬಿ ತುಂಬಿ ಬಾ&#8217; ಎಂಬ ಅರ್ಥ.  ಈ ಮರ ಹಾಕುವುದರಲ್ಲಿ ಕೆಲವೆಡೆ ಏಕಮರ, ಕೆಲವೆಡೆ ಜೋಡು ಮರ, ಮೂರು ಮರಗಳನ್ನು ನೆಡುವವರು ಇರುತ್ತಾರೆ. ಮನೆಯೊಳಗೆ ಬುಟ್ಟಿಗಳಲ್ಲಿ ಹುಳಿದೋಸೆ ( ಉದ್ದಿನ ದೋಸೆ) ಅಪ್ಪ ಮತ್ತು ಬಾಳೆಹಣ್ಣು  ತುಂಬಿರುತ್ತವೆ. ಹಬ್ಬದ ಊಟದಲ್ಲಿ ಮಾಂಸಾಹಾರ ಬಹು ಮುಖ್ಯ ಭಾಗ. ಇಲ್ಲಿ ಮರ ಹಾಕುವುದರಲ್ಲಿ ಮಾತ್ರವಲ್ಲ ಆಚರಣೆಯ ವಿಚಾರದಲ್ಲಿ ಕೂಡ ಮನೆಮನೆಗಳಲ್ಲಿ ಊರೂರುಗಳಲ್ಲಿ ವೈವಿಧ್ಯತೆ ತುಂಬಿರುತ್ತದೆ.</p>



<p><strong>ಇದೊಂದು ಆದಿಮ ಆಚರಣೆ&#8230;</strong></p>



<p>ಇದೊಂದು ಆದಿಮಕಾಲದ ಪ್ರಕೃತಿ ಪೂಜೆಯ ಭಾಗವೇ ಸರಿ. ಮರ, ಮಾಲೆ, ಫಲವಸ್ತುಗಳು ಎಲ್ಲವೂ&nbsp; ನೆಲದ ಪೂಜೆಯ ಭಾಗಗಳಾಗಿವೆ.&nbsp; ಮೂರು ದಿನಗಳಲ್ಲಿ ಫಲ ಕೊಡುವ ಹೊಲಗದ್ದೆಗಳು, ಉಳುಮೆಗೆ ಹೆಗಲುಕೊಟ್ಟ ಹಟ್ಟಿಯ ದನಗಳು, ಭೂತಗುಡಿಗಳು ಸೇರಿದಂತೆ ಗತಿಸಿದ ಹಿರಿಯರಿಗೆ ಎಡೆ ಇಡುವುದು ಎಲ್ಲ ಆರಾಧನೆಗಳು ರೂಢಿಯ ಕಟ್ಟಳೆಗಳಿಂದಲೇ ನೆರವೇರುತ್ತವೆ. ಒಂದು ಕಾಲದಲ್ಲಿ ಬೇಸಾಯದ ಪ್ರತಿ ಮನೆಗಳ ಮುಂದೆ ನಡೆಯುತ್ತಿದ್ದ ಈ ಪೂಜಾ ಪದ್ಧತಿಯಲ್ಲಿ ಪೂಜಾರಿ, ಪುರೋಹಿತ, ದೈವ ನರ್ತಕ, ಜೋಯಿಸ ಯಾರಿಗೂ ಪ್ರವೇಶವೇ ಇರಲಿಲ್ಲ. ಹಾಗಾಗಿಯೇ ಇದೊಂದು ಆದಿಮ ಆಚರಣೆ.&nbsp; ಅಗೋಚರ, ಆಧ್ಯಾತ್ಮ, ಧರ್ಮಶಾಸ್ತ್ರಗಳ ಸೋಂಕು ಇಲ್ಲಿಲ್ಲ.</p>



<p><strong>ದೀಪಾವಳಿ ಅಲ್ಲ.. ದೊಡ್ಡಬ್ಬ&#8230;</strong></p>



<p>ಈ ಹೊತ್ತು ದೀಪಾವಳಿ ಎಂದು ಕರೆಯಲ್ಪಡುವ ಈ ಹಬ್ಬಕ್ಕೆ ಒಂದೆರಡು ತಲೆಮಾರುಗಳ ಹಿಂದೆ ಈ ಹೆಸರು&nbsp; ಇರಲಿಲ್ಲ. ಈ ವಿಷಯ ಕುರಿತಂತೆ&nbsp; ಅಧ್ಯಯನ ನಡೆಸಿದ ಸಂದರ್ಭದಲ್ಲಿ ಅರೆಬಾಸೆಯ 80 ವರ್ಷ ದಾಟಿದ ಹಿರಿಯರು ಅದನ್ನು &#8216;ದೊಡ್ಡಬ್ಬ&#8217; ಎಂದು ಕರೆಯುತ್ತಿದ್ದ ಬಗ್ಗೆ ಪ್ರತಿಕ್ರಿಯಿಸಿದ್ದರು. ಅವರು ಬಲಿ ಚಕ್ರವರ್ತಿ, ವಾಮನ ಅವತಾರ ಕಥೆಯನ್ನು ಕೇಳಿರಲಿಲ್ಲ. ಅಂದರೆ <strong>ವ್ಯಾಪಕ ಆಚರಣೆಯಲ್ಲಿದ್ದ ಜನಪದೀಯ ಹಬ್ಬವೊಂದು ಪುರಾಣ ಕತೆಗೆ ಪ್ರೇರಣೆಯಾಗಿದೆ ಅಷ್ಟೆ.</strong> ಜನಪದ ಅಧ್ಯಯನಕಾರರು, ಇತಿಹಾಸಕಾರರು ಈಗಾಗಲೇ ನಡೆಸಿರುವ ಸಂಶೋಧನೆಗಳ ಆಧಾರದಲ್ಲಿ ಅನೇಕ ಜನಪದ ಆಚರಣೆಗಳು ಪುರಾಣಗಳ ಭಾಗವಾಗಿ ಕಥೆಗಳ ರೂಪವನ್ನು ಪಡೆದಿವೆ, ಮತ್ತು ಈಗ ಅವುಗಳನ್ನೇ ನಿಜವೆಂದು ಬಿಂಬಿಸಲಾಗುತ್ತಿದೆ.&nbsp; ಹೀಗಾದಾಗ ಜನಪದ ಆಚರಣೆಗಳಲ್ಲಿ ವೈದಿಕ ಕ್ರಮಗಳ ಅಳವಡಿಕೆ ಸುಸೂತ್ರವಾಗುತ್ತದೆ, ಸಲೀಸಾಗುತ್ತದೆ. ಬತ್ತದ ಕೃಷಿಯ ಕಣ್ಮರೆಯೊಂದಿಗೆ ಬಿಸು, ಹೊಸ್ತು, ದೊಡ್ಡಬ್ಬಗಳು ಜನರ ಮಧ್ಯೆ ಇಲ್ಲವಾಗುತ್ತಿದ್ದು ಅಥವಾ ನೆಪ ಮಾತ್ರಕ್ಕೆ ಎಂಬಂತೆ ಆಚರಣೆಯಲ್ಲಿದ್ದು ಅವುಗಳೆಲ್ಲ ದೇವಾಲಯಗಳಿಗೆ ಸೇರ್ಪಡೆಗೊಳ್ಳುತ್ತಿರುವುದು ನಮ್ಮ ಕಣ್ಣೆದುರಿಗೆ ನಡೆಯುತ್ತಿವೆ. ಅದರ ಪರಿಣಾಮಗಳು ಏನು ಎಂತು ಎಲ್ಲರಿಗೂ ತಿಳಿದ ಸಂಗತಿ.</p>



<figure class="wp-block-image size-full is-resized"><img loading="lazy" decoding="async" src="https://peepalmedia.com/wp-content/uploads/2022/10/gopala-peraje.jpg" alt="" class="wp-image-12910" width="157" height="133"/></figure>



<p><strong>ಗೋಪಾಲ್‌ ಪೆರಾಜೆ</strong><br>ಕೃಷಿಕರು, ಸಾಮಾಜಿಕ ಕಾರ್ಯಕರ್ತರು. ಸುಳ್ಯದ ನಿವಾಸಿ.</p>
]]></content:encoded>
					
		
		
			</item>
		<item>
		<title>ಬಿಳಿಮಲೆ ಕಂಡ ಕಾಂತಾರ: ಎಂಚಿನಲಾ ಆವಡ್‌, ಸಿನೇಮಾ ಎಡ್ಡೆ ಉಂಡುಯೇ, ಒರೊ ತೂವೊಲಿ</title>
		<link>https://peepalmedia.com/bilimale-kandante-kantara-enchinal-adav-cinema-edde-unduye-oru-tavoli/</link>
		
		<dc:creator><![CDATA[Purushothama Bilimale]]></dc:creator>
		<pubDate>Mon, 24 Oct 2022 03:31:29 +0000</pubDate>
				<category><![CDATA[ಧರ್ಮ- ಸಂಸ್ಕೃತಿ]]></category>
		<category><![CDATA[Daivaradhane]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[kannada cinema]]></category>
		<category><![CDATA[kannada movie]]></category>
		<category><![CDATA[kannada news]]></category>
		<category><![CDATA[Kantara]]></category>
		<category><![CDATA[karavali]]></category>
		<category><![CDATA[movie]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[purushottama bilimale]]></category>
		<category><![CDATA[Rishab Shetty]]></category>
		<category><![CDATA[sandalwood]]></category>
		<category><![CDATA[writing]]></category>
		<guid isPermaLink="false">https://peepalmedia.com/?p=12741</guid>

					<description><![CDATA[ಕಾಂತಾರ ಚಿತ್ರದ ಕುರಿತ ವಿಮರ್ಶೆಗಳ ಸುರಿಮಳೆ ನಿಲ್ಲುತ್ತಿಲ್ಲ. ಕರಾವಳಿಯ ಬೂತಾರಾಧನೆಗಳ ಕುರಿತು ಅಧಿಕೃತವಾಗಿ ಮಾತನಾಡಬಲ್ಲ, ಸಾಹಿತಿ-ಸಂಶೋಧಕ ಡಾ.ಪುರುಷೋತ್ತಮ ಬಿಳಿಮಲೆ ಕಾಂತಾರ ನೋಡಿದ ನಂತರ ಬರೆದಿರುವ ಬರೆಹ ಇಲ್ಲಿದೆ. ಕೊನೆಗೂ ಕಾಂತಾರ ಸಿನೇಮಾವನ್ನು ಕನ್ನಡದಲ್ಲಿಯೇ ನೋಡಿದೆ. ನನಗೆ ಖುಷಿಯಾಯಿತು. ಕರಾವಳಿಯ ಬದುಕಿನ ಎರಡು ಕಣ್ಣುಗಳಂತಿರುವ ಭೂತಾರಾಧನೆ ಮತ್ತು ಯಕ್ಷಗಾನಗಳನ್ನು ಅತ್ಯಂತ ಸೃಜನಶೀಲವಾಗಿ ಮರು ಸೃಷ್ಟಿಸಿದವರು ಕಡಿಮೆ ಎಂದೇ ಹೇಳಬೇಕು. ಎಷ್ಟೋ ಬಾರಿ ಈ ಪ್ರಕಾರಗಳು ಎಷ್ಟು ಸಶಕ್ತವಾಗಿರುತ್ತವೆ ಎಂದರೆ ಸೃಜನಶೀಲತೆಯ ಅನೇಕ ಸಾಧ್ಯತೆಗಳನ್ನು ಅವುಗಳೇ ಸೂರೆಗೊಂಡಿರುತ್ತವೆ. ಈ ನಿಟ್ಟಿನಲ್ಲಿ [&#8230;]]]></description>
										<content:encoded><![CDATA[
<p>ಕಾಂತಾರ ಚಿತ್ರದ ಕುರಿತ ವಿಮರ್ಶೆಗಳ ಸುರಿಮಳೆ ನಿಲ್ಲುತ್ತಿಲ್ಲ. ಕರಾವಳಿಯ ಬೂತಾರಾಧನೆಗಳ ಕುರಿತು ಅಧಿಕೃತವಾಗಿ ಮಾತನಾಡಬಲ್ಲ, ಸಾಹಿತಿ-ಸಂಶೋಧಕ ಡಾ.ಪುರುಷೋತ್ತಮ ಬಿಳಿಮಲೆ ಕಾಂತಾರ ನೋಡಿದ ನಂತರ ಬರೆದಿರುವ ಬರೆಹ ಇಲ್ಲಿದೆ.</p>



<p>ಕೊನೆಗೂ ಕಾಂತಾರ ಸಿನೇಮಾವನ್ನು ಕನ್ನಡದಲ್ಲಿಯೇ ನೋಡಿದೆ. ನನಗೆ ಖುಷಿಯಾಯಿತು. ಕರಾವಳಿಯ ಬದುಕಿನ ಎರಡು ಕಣ್ಣುಗಳಂತಿರುವ ಭೂತಾರಾಧನೆ ಮತ್ತು ಯಕ್ಷಗಾನಗಳನ್ನು ಅತ್ಯಂತ ಸೃಜನಶೀಲವಾಗಿ ಮರು ಸೃಷ್ಟಿಸಿದವರು ಕಡಿಮೆ ಎಂದೇ ಹೇಳಬೇಕು. ಎಷ್ಟೋ ಬಾರಿ ಈ ಪ್ರಕಾರಗಳು ಎಷ್ಟು ಸಶಕ್ತವಾಗಿರುತ್ತವೆ ಎಂದರೆ ಸೃಜನಶೀಲತೆಯ ಅನೇಕ ಸಾಧ್ಯತೆಗಳನ್ನು ಅವುಗಳೇ ಸೂರೆಗೊಂಡಿರುತ್ತವೆ. ಈ ನಿಟ್ಟಿನಲ್ಲಿ ಕಾಂತಾರವು ಕರಾವಳಿಯ ಬದುಕಿನ ಕೆಲವು ಆಯಾಮಗಳನ್ನು ಮೊದಲಬಾರಿಗೆ ತೆರೆಯಮೇಲೆ ತಂದಿದೆ.</p>



<p>ಪಂಜುರ್ಲಿ ದೈವ, ಅದರ ಗಗ್ಗರದ ನಿಗೂಢ ದನಿ, ಸೂಟೆ ( ದೊಂದಿ), ಹಸಿರು ಕಾಡು, ಕಂಬಳ, ಹೊಡೆದಾಟ, ಬೀಡಿ, ಶರಾಬು, ಕೋಳಿಕಟ್ಟ, ಯಕ್ಷಗಾನ, ಮೀನು, ವಿಭಿನ್ನ ಕನ್ನಡ ಇತ್ಯಾದಿಗಳನ್ನು ನಿರ್ದೇಶಕ_ರಿಷಭ್ ಶೆಟ್ಟಿಯವರು ಚೆನ್ನಾಗಿ ದುಡಿಸಿಕೊಂಡಿದ್ದಾರೆ. ಕರಾವಳಿಯ ಕಡಲಿನ ಅಬ್ಬರ, ದೈವ ನರ್ತಕರೇ ಸೃಷ್ಟಿಸುವ ಸಂಗೀತ, ಕಾಡೇ ಹುಟ್ಟಿಸುವ ನಿಗೂಢ ಧ್ವನಿ ಇತ್ಯಾದಿಗಳನ್ನು ಇಲ್ಲಿ ಹೆಚ್ಚಾಗಿ ಬಳಸಿಕೊಂಡಿಲ್ಲ. ಪಾಡ್ದನದ, ಕಬಿತಗಳ ಲಯಗಾರಿಕೆಯ ಮಾಧುರ್ಯವನ್ನು ಇಲ್ಲಿ ಕೇಳಲಾರೆವು. ಮೂಲತ: ಈ ಲಯಗಳು ದೈವವೊಂದರ ದುರಂತಕ್ಕೆ ಪರಿಣಾಮಕಾರಿಯಾದ ಹಿನ್ನೆಲೆಯನ್ನು ಒದಗಿಸಿಕೊಡುತ್ತವೆ. ಬಹುಶ: ಕಮರ್ಶಿಯಲ್‌ ಸಿನೇಮಾವೊಂದು ಇವನ್ನೆಲ್ಲ ಬಳಸಿಕೊಳ್ಳುವುದೂ ಕಷ್ಟ.</p>



<p>ಈ ಚಿತ್ರವು 1870, 1970 ಮತ್ತು 1990 ರ ಮೂರು ಅವಧಿಗಳಲ್ಲಿ ಕರಾವಳಿ ಕಂಡ ಸ್ತಿತ್ಯಂತರಗಳನ್ನು ಒಂದು ಚೌಕಟ್ಟಾಗಿ ಇರಿಸಿಕೊಂಡಿದೆ. ವಸಾಹತು ಕಾಲಘಟ್ಟದಲ್ಲಿ ಥಾಮಸ್‌ ಮುನ್ರೋ ಮೊದಲ ಬಾರಿಗೆ ಕಾಡಿನ ಮೇಲೆ ಪ್ರಭುತ್ವ ಸಾಧಿಸುವಂತ ಕಾನೂನುಗಳನ್ನು ತಂದ. ಈಸ್ಟ್‌ ಇಂಡಿಯಾ ಕಂಪೆನಿಯ ಹಡಗುಗಳು ಮರಗಳನ್ನು ಹೊತ್ತು ಸಾಗಿಸಲು ಸದಾ ಸಿದ್ಧವಾಗಿರುವಾಗ ಅದಕ್ಕೆ ಬೇಕಾದ ಕಾನೂನನ್ನು ಅವರೇ ತಂದುಕೊಂಡಿರುವುದು ಆಶ್ಚರ್ಯದ ವಿಷಯವೇನೂ ಅಲ್ಲ. ಕಾಡಿನ ಒತ್ತುವರಿ, ಕಾಡಿನ ಮಕ್ಕಳು ತಮ್ಮದೇ ಕಾಡಿನಲ್ಲಿ ಅನಾಥರಾಗುವುದು ಈ ಸಿನೇಮಾದಲ್ಲಿಯೂ ಬಂದಿದೆ.</p>



<p>೧೯೭೦ರ ದಶಕದಲ್ಲಿ ಭೂಮಸೂದೆ ಜ್ಯಾರಿಗೆ ಬಂದಾಗ ಭೂ ಸಂಬಂಧಗಳಲ್ಲಿ ಅಮೂಲಾಗ್ರ ಬದಲಾವಣೆಯಾಯಿತು. ದೈವ ನರ್ತಕರೂ ಅದರಿಂದ ಕೆಲವು ತೊಂದರೆಗಳಿಗೆ ಒಳಗಾದರು. ಸಿನೇಮಾದಲ್ಲಿ ಗುರುವನ ಕೊಲೆ ಅಂಥದ್ದರ ಒಂದು ಸಂಕೇತ. ಆ ಕಾಲದಲ್ಲಿ ಸ್ವಲ್ಪ ಬಿಕ್ಕಟ್ಟನ್ನೆದುರಿಸಿದ ಭೂತಾರಾಧನೆಯು, ೧೯೯೦ರ ಆನಂತರ ಮತ್ತೆ ವೈಭವದ ದಿನಗಳನ್ನು ಕಂಡಿತು. ತುಳುನಾಡಿನ ಹೊರಗಡೆಗೆ, ಮುಖ್ಯವಾಗಿ ಮುಂಬೈಗೆ ವಲಸೆ ಹೋದ ತುಳುವರು ಕಷ್ಟ ಪಟ್ಟು ದುಡಿದು ಶ್ರೀಮಂತರಾಗಿ ಮತ್ತೆ ಹುಟ್ಟಿದೂರಿನ ಭೂತಾರಾಧನೆ ಮತ್ತು ನಾಗಾರಾಧನೆಗೆ ಹಣದ ತೊಂದರೆಯಾಗದಂತೆ ನೋಡಿಕೊಂಡರು. ಇದರಿಂದ ಅವರಿಗೆಲ್ಲ ಊರಿನಲ್ಲೊಂದು ಗುರುತು ಕೂಡಾ ಪ್ರಾಪ್ತಿಸಿತು. ಈ ಹಿನ್ನಲೆಯಲ್ಲಿ ಕಾಂತಾರವು ಆಯ್ದುಕೊಂಡ ಕಾಲದ ಚೌಕಟ್ಟು ಅರ್ಥಪೂರ್ಣವಾಗಿದೆ.</p>



<p></p>


<div class="wp-block-image">
<figure class="aligncenter size-full is-resized"><img loading="lazy" decoding="async" src="https://peepalmedia.com/wp-content/uploads/2022/10/kantara.jpg" alt="" class="wp-image-8425" width="604" height="794"/></figure></div>


<p></p>



<p>ಸಿನೇಮಾವನ್ನು ಈಗಾಗಲೇ ಬಹುತೇಕ ಎಲ್ಲರೂ ನೋಡಿರುವುದರಿಂದ ಮತ್ತೆ ನಾನು ಕತೆ ಹೇಳುವುದಿಲ್ಲ.<br>ಚಿತ್ರದ ಕೊನೆಯಲ್ಲಿ ರಿಷಭ್ ಶೆಟ್ಟಿಯವರು ಮಾಡಿದ ಅಭಿನಯ ಅಮೋಘ. ದೈವಾರಾಧನೆಯಲ್ಲೂ ನಾಯಕರು ಅರ್ಧವಯಸ್ಸಿನಲ್ಲಿ ಸತ್ತು, ಆಮೇಲೆ ಮಾಯಕಗಳಾಗಿ ಕೊಂದವರ ಮೇಲೆ ಸೇಡು ತೀರಿಸಿಕೊಳ್ಳುತ್ತಾರೆ. ಉದಾಹರಣಗೆ ಕಲ್ಕುಡ -ಕಲ್ಲುರ್ಟಿಯವರು, ʼಜೀವ ಇರುವಾಗ ನೋಡಲಿಕ್ಕೆ ಆಗಲಿಲ್ಲ, ಸತ್ತು ನೋಡಿಕೊಳ್ಳುತ್ತೇವೆ; ಎಂದು ಹೇಳಿ ಮಾಯಕದಲ್ಲಿ ಅರಸನ ಮನೆಗೆ ಬೆಂಕಿ ಇಡುತ್ತಾರೆ, ಅರಸಿಯರಿಗೆ ಹುಚ್ಚು ಹಿಡಿಸುತ್ತಾರೆ. ಪಾಡ್ದನಗಳಲ್ಲಿ ಈ ಭಾಗ ಉಗ್ರವೇ ಆಗಿರುತ್ತದೆ. ಈ ವಿಷಯದಲ್ಲಿ ಅದು ಹಿಂದೂ ದೇವರುಗಳಿಗಿಂತ ಭಿನ್ನವೇ ಹೌದು. ನನಗೆ ಗೊತ್ತಿರುವ ಯಾವ ಹಿಂದೂ ದೇವರು ಕೂಡಾ ಅರ್ಧ ವಯಸ್ಸಿನಲ್ಲಿ ಸತ್ತು ಆನಂತರ ಮಾಯಕದಲ್ಲಿ ಸೇಡು ತೀರಿಸಿಕೊಳ್ಳುವುದನ್ನು ನಾನು ಓದಿಲ್ಲ. ದೈವವೊಂದರ ಮಾಯಕದ ಸೇಡಿನ ಭಾಗ , ಅದನ್ನು ಶೆಟ್ಟಿ ಅಭಿನಯಿಸಿದ ರೀತಿ ಕಾಂತಾರದ ಉತ್ಕೃಷ್ಟ ಭಾಗ ಎಂದು ನನ್ನ ಭಾವನೆ.</p>



<p>ಸಿನೇಮಾ ನೋಡಿ ಬಂದ ಮೇಲೆ ಈ ಸಿನೇಮಾ ಯಾಕಿಷ್ಟು ಚರ್ಚೆಗೆ ಒಳಗಾಯಿತು ಎಂಬುದು ನನಗೆ ಸ್ಪಷ್ಟವಾಗಲಿಲ್ಲ. ಪಂಜುರ್ಲಿಯನ್ನು ಕೊನೆಗೆ ವರಾಹ ರೂಪಿ ಎಂದು ಸಂಸ್ಕೃತದಲ್ಲಿ ನುತಿಸಿದ್ದು ಮತ್ತು ಅದಕ್ಕೆ ಪೂರಕವಾಗಿ ಪಾಡ್ದನಗಳಲ್ಲಿ ಇಲ್ಲದೇ ಇರುವ ಶಾಸ್ತ್ರೀಯಕ್ಕೆ ಹತ್ತಿರವಿರುವ ಸಂಗೀತ ಬಳಸಿದ್ದು ವಾಸ್ತವವಾಗಿ ಸಿನೇಮಾದ ಅತ್ಯಂತ ದುರ್ಬಲ ಭಾಗ. ಅದು ಆ ಕತೆಯ ಅಲ್ಲಿವರೆಗಣ ಬೆಳವಣಿಗೆಗೆ ಹೊಂದುವುದೇ ಇಲ್ಲ‌. ಆದರೆ ಈ ನಿಟ್ಟಿನಲ್ಲಿ ಸೃಜನಶೀಲ ಕಲಾವಿದನಿಗೆ ಇರಬೇಕಾದ ಸ್ವಾತಂತ್ರ್ಯವನ್ನು ನಾನಂತೂ ಪ್ರಶ್ನಿಸಲಾರೆ.</p>



<p>ಹೊಡೆದಾಟ, ಬಡಿದಾಟ, ಕೊಲೆ ಇತ್ಯಾದಿಗಳೆಲ್ಲ ಕರಾವಳಿಯಲ್ಲಿ ಸ್ವಲ್ಪ ಹೆಚ್ಚೇ ಇರುವುದರಿಂದಾಗಿ ರಿಷಭ ಶೆಟ್ಟಿಯವರು ಅದನ್ನು ಸ್ವಲ್ಪ ಜಾಸ್ತೀಯೇ ತೋರಿಸಿದಂತಿದೆ.<br>ಎಂಚಿನಲಾ ಆವಡ್‌, ಸಿನೇಮಾ ಎಡ್ಡೆ ಉಂಡುಯೇ, ಒರೊ ತೂವೊಲಿ</p>
]]></content:encoded>
					
		
		
			</item>
	</channel>
</rss>
