<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Death case &#8211; Peepal Media</title>
	<atom:link href="https://peepalmedia.com/tag/death-case/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 26 Sep 2023 06:34:34 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Death case &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಪತ್ನಿ ನಿಧನ</title>
		<link>https://peepalmedia.com/former-chief-minister-virendra-patils-wife-passed-away/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 26 Sep 2023 06:31:20 +0000</pubDate>
				<category><![CDATA[ರಾಜ್ಯ]]></category>
		<category><![CDATA[Death case]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Veerendra Patil]]></category>
		<guid isPermaLink="false">https://peepalmedia.com/?p=28522</guid>

					<description><![CDATA[ಮಾಜಿ ಮುಖ್ಯಮಂತ್ರಿ ದಿವಂಗತ ವೀರೇಂದ್ರ ಪಾಟೀಲ ಅವರ ಪತ್ನಿ ಶಾರದಾ ವಿ.ಪಾಟೀಲ (93) ಅವರು ಮಂಗಳವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಚಿಂಚೋಳಿಯ ವೀರೇಂದ್ರ ಪಾಟೀಲ ಸಮಾಧಿ ಪಕ್ಕದಲ್ಲಿ ಬುಧವಾರ ಮಧ್ಯಾಹ್ನ 2 ಕ್ಕೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಪುತ್ರ ಮಾಜಿ ಶಾಸಕ ಕೈಲಾಸ ವೀರೇಂದ್ರ ಪಾಟೀಲ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮಾಜಿ ಸಂಸದ ಅಳಿಯ ಡಾ. ಬಿ.ಜಿ ಜವಳಿ ಸೇರಿದಂತೆ ಅಪಾರ ಬಂಧು ಬಳಗ ಹೊಂದಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ [&#8230;]]]></description>
										<content:encoded><![CDATA[
<p>ಮಾಜಿ ಮುಖ್ಯಮಂತ್ರಿ ದಿವಂಗತ ವೀರೇಂದ್ರ ಪಾಟೀಲ ಅವರ ಪತ್ನಿ ಶಾರದಾ ವಿ.ಪಾಟೀಲ (93) ಅವರು ಮಂಗಳವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.</p>



<p>ಮೃತರ ಅಂತ್ಯಕ್ರಿಯೆಯನ್ನು ಚಿಂಚೋಳಿಯ ವೀರೇಂದ್ರ ಪಾಟೀಲ ಸಮಾಧಿ ಪಕ್ಕದಲ್ಲಿ ಬುಧವಾರ ಮಧ್ಯಾಹ್ನ 2 ಕ್ಕೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>



<p>ಮೃತರಿಗೆ ಪುತ್ರ ಮಾಜಿ ಶಾಸಕ ಕೈಲಾಸ ವೀರೇಂದ್ರ ಪಾಟೀಲ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮಾಜಿ ಸಂಸದ ಅಳಿಯ ಡಾ. ಬಿ.ಜಿ ಜವಳಿ ಸೇರಿದಂತೆ ಅಪಾರ ಬಂಧು ಬಳಗ ಹೊಂದಿದ್ದಾರೆ.</p>



<figure class="wp-block-image size-large"><img fetchpriority="high" decoding="async" width="1024" height="1002" src="https://peepalmedia.com/wp-content/uploads/2023/09/IMG-20230926-WA0016-1024x1002.jpg" alt="" class="wp-image-28526" srcset="https://peepalmedia.com/wp-content/uploads/2023/09/IMG-20230926-WA0016-1024x1002.jpg 1024w, https://peepalmedia.com/wp-content/uploads/2023/09/IMG-20230926-WA0016-300x294.jpg 300w, https://peepalmedia.com/wp-content/uploads/2023/09/IMG-20230926-WA0016-768x752.jpg 768w, https://peepalmedia.com/wp-content/uploads/2023/09/IMG-20230926-WA0016-150x147.jpg 150w, https://peepalmedia.com/wp-content/uploads/2023/09/IMG-20230926-WA0016-696x681.jpg 696w, https://peepalmedia.com/wp-content/uploads/2023/09/IMG-20230926-WA0016-1068x1045.jpg 1068w, https://peepalmedia.com/wp-content/uploads/2023/09/IMG-20230926-WA0016.jpg 1080w" sizes="(max-width: 1024px) 100vw, 1024px" /></figure>



<p>ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ &#8216;X&#8217; ನಲ್ಲಿ ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಕಾಡಾನೆ &#8216;ಭೀಮ&#8217;ನ ಭೀಕರ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಶಾರ್ಪ್ ಶೂಟರ್ ವೆಂಕಟೇಶ್ ಸಾವು</title>
		<link>https://peepalmedia.com/forest-department-personnel-sharp-shooter-venkatesh-killed/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 31 Aug 2023 12:37:17 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[Death case]]></category>
		<category><![CDATA[Elephant attack]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sakaleshapura]]></category>
		<guid isPermaLink="false">https://peepalmedia.com/?p=26896</guid>

					<description><![CDATA[ಸಕಲೇಶಪುರ /ಆಲೂರು : ಆಲೂರು ತಾಲ್ಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಶಾರ್ಪ್ ಶೂಟರ್ ವೆಂಕಟೇಶ್ ಸಾವನ್ನಪ್ಪಿದ್ದಾರೆ. ಕಾಡಾನೆ &#8216;ಭೀಮ&#8217; ವೆಂಕಟೇಶ್ ಮೇಲೆ ಏಕಾಏಕಿ ದಾಳಿ ಮಾಡಿದ ಪರಿಣಾಮ ವೆಂಕಟೇಶ್ ಹಾಸನ ಆಸ್ಪತ್ರೆಯಲ್ಲಿ ಜೀವ ತೆತ್ತಿದ್ದಾರೆ. ಹಲವು ದಿನಗಳಿಂದ ಗಾಯಗೊಂಡು ಓಡಾಡುತ್ತಿದ್ದ &#8216;ಭೀಮ&#8217; ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿತ್ತು. ಇದೇ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಶಾರ್ಪ್ ಶೂಟರ್ ಗಳನ್ನು ಬಳಸಿಕೊಂಡು ಭೀಮನ ಸೆರೆ ಹಿಡಿಯಲು ಮುಂದಾಗಿದ್ದರು. ಈ ಸಂದರ್ಭದಲ್ಲಿ [&#8230;]]]></description>
										<content:encoded><![CDATA[
<p>ಸಕಲೇಶಪುರ /ಆಲೂರು : ಆಲೂರು ತಾಲ್ಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಶಾರ್ಪ್ ಶೂಟರ್ ವೆಂಕಟೇಶ್ ಸಾವನ್ನಪ್ಪಿದ್ದಾರೆ. ಕಾಡಾನೆ &#8216;ಭೀಮ&#8217; ವೆಂಕಟೇಶ್ ಮೇಲೆ ಏಕಾಏಕಿ ದಾಳಿ ಮಾಡಿದ ಪರಿಣಾಮ ವೆಂಕಟೇಶ್ ಹಾಸನ ಆಸ್ಪತ್ರೆಯಲ್ಲಿ ಜೀವ ತೆತ್ತಿದ್ದಾರೆ.</p>



<p>ಹಲವು ದಿನಗಳಿಂದ ಗಾಯಗೊಂಡು ಓಡಾಡುತ್ತಿದ್ದ &#8216;ಭೀಮ&#8217; ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿತ್ತು. ಇದೇ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಶಾರ್ಪ್ ಶೂಟರ್ ಗಳನ್ನು ಬಳಸಿಕೊಂಡು ಭೀಮನ ಸೆರೆ ಹಿಡಿಯಲು ಮುಂದಾಗಿದ್ದರು.</p>



<figure class="wp-block-image size-large"><img decoding="async" width="1024" height="998" src="https://peepalmedia.com/wp-content/uploads/2023/08/IMG-20230831-WA0023-1-1024x998.jpg" alt="" class="wp-image-26898" srcset="https://peepalmedia.com/wp-content/uploads/2023/08/IMG-20230831-WA0023-1-1024x998.jpg 1024w, https://peepalmedia.com/wp-content/uploads/2023/08/IMG-20230831-WA0023-1-300x292.jpg 300w, https://peepalmedia.com/wp-content/uploads/2023/08/IMG-20230831-WA0023-1-768x748.jpg 768w, https://peepalmedia.com/wp-content/uploads/2023/08/IMG-20230831-WA0023-1-150x146.jpg 150w, https://peepalmedia.com/wp-content/uploads/2023/08/IMG-20230831-WA0023-1-696x678.jpg 696w, https://peepalmedia.com/wp-content/uploads/2023/08/IMG-20230831-WA0023-1-1068x1040.jpg 1068w, https://peepalmedia.com/wp-content/uploads/2023/08/IMG-20230831-WA0023-1.jpg 1280w" sizes="(max-width: 1024px) 100vw, 1024px" /></figure>



<p>ಈ ಸಂದರ್ಭದಲ್ಲಿ ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಕಾಡಾನೆಗೆ ಅರೆವಳಿಕೆ ಮದ್ಧು ನೀಡಲು ಶಾರ್ಪ್ ಶೂಟರ್ ವೆಂಕಟೇಶ್ ಮುಂದಾದಾಗ ಏಕಾಏಕಿ ಬಂದ ಕಾಡಾನೆ ವೆಂಕಟೇಶ್ ರವರನ್ನು ತುಳಿದು ಹಾಕಿದೆ. ಇದರಿಂದ ವೆಂಕಟೇಶ್ ಗಂಭೀರ ಗಾಯಗೊಂಡಿದ್ದಾರೆ.</p>



<figure class="wp-block-image size-large is-resized"><img decoding="async" src="https://peepalmedia.com/wp-content/uploads/2023/08/IMG_20230831_141342-1-1024x472.jpg" alt="" class="wp-image-26899" style="width:437px;height:201px" width="437" height="201" srcset="https://peepalmedia.com/wp-content/uploads/2023/08/IMG_20230831_141342-1-1024x472.jpg 1024w, https://peepalmedia.com/wp-content/uploads/2023/08/IMG_20230831_141342-1-300x138.jpg 300w, https://peepalmedia.com/wp-content/uploads/2023/08/IMG_20230831_141342-1-768x354.jpg 768w, https://peepalmedia.com/wp-content/uploads/2023/08/IMG_20230831_141342-1-1536x708.jpg 1536w, https://peepalmedia.com/wp-content/uploads/2023/08/IMG_20230831_141342-1-150x69.jpg 150w, https://peepalmedia.com/wp-content/uploads/2023/08/IMG_20230831_141342-1-696x321.jpg 696w, https://peepalmedia.com/wp-content/uploads/2023/08/IMG_20230831_141342-1-1068x493.jpg 1068w, https://peepalmedia.com/wp-content/uploads/2023/08/IMG_20230831_141342-1.jpg 1600w" sizes="(max-width: 437px) 100vw, 437px" /></figure>



<p>ಇದನ್ನೂ ಓದಿ : <strong><a href="https://peepalmedia.com/serious-attack-by-kadane-bhima-on-sharp-shooter-venkatesh/" data-type="link" data-id="https://peepalmedia.com/serious-attack-by-kadane-bhima-on-sharp-shooter-venkatesh/">ಶಾರ್ಪ್ ಶೂಟರ್ ವೆಂಕಟೇಶ್ ಮೇಲೆ ಕಾಡಾನೆ ‘ಭೀಮ’ನ ಗಂಭೀರ ದಾಳಿ</a></strong></p>



<p>ತಕ್ಷಣವೇ ವೆಂಕಟೇಶ್ ಅವರನ್ನು ಹಾಸನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಕೆಲವು ಗಂಟೆಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿ ಅಸುನೀಗಿದ್ದಾರೆ.</p>



<p>ಅರಣ್ಯ ಇಲಾಖೆಯಲ್ಲಿ ಶಾರ್ಪ್ ಶೂಟರ್ ಆಗಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ರಾಜ್ಯದ ಎಲ್ಲೇ ಆನೆ ದಾಳಿ ಆದಾಗಲೂ ಅರೆವಳಿಕೆ ಚುಚ್ಚಲು ತೆರಳುತ್ತಿದ್ದರು ಎಂದು ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.</p>
]]></content:encoded>
					
		
		
			</item>
		<item>
		<title>ವಿದೇಶಗಳಲ್ಲಿ ನಿಷೇಧಕ್ಕೊಳಗಾದ ಕಳೆನಾಶಕ ನಮ್ಮಲ್ಲಿ ಯಾಕೆ? DRFO ಸಾವಿನ ನಂತರವಾದರೂ ಎಚ್ಚೆತ್ತುಕೊಳ್ಳುತ್ತಾ ಸರ್ಕಾರ?</title>
		<link>https://peepalmedia.com/even-after-the-death-of-drfo-the-government-is-waking-up/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 10 Jul 2023 13:48:29 +0000</pubDate>
				<category><![CDATA[ರಾಜ್ಯ]]></category>
		<category><![CDATA[Dandeli]]></category>
		<category><![CDATA[Death case]]></category>
		<category><![CDATA[forest department]]></category>
		<category><![CDATA[Herbicide]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[uttara kannada]]></category>
		<category><![CDATA[Yogesh Naika]]></category>
		<guid isPermaLink="false">https://peepalmedia.com/?p=23496</guid>

					<description><![CDATA[ಕಳೆದ ವಾರ ದಾಂಡೇಲಿ ತಾಲ್ಲೂಕಿನ ಕುಳಗಿ ವಲಯ ಅರಣ್ಯ ಶಾಖೆಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿದ್ದ ಯೋಗೇಶ್ ನಾಯ್ಕ ಅವರ ಅನಿರೀಕ್ಷಿತ ಮತ್ತು ಆಘಾತಕಾರಿ ಸಾವು ಎಲ್ಲರನ್ನೂ ಕಂಗೆಡಿಸಿತ್ತು. ಅರಣ್ಯ ಇಲಾಖೆ ಮಾತ್ರವಲ್ಲದೆ, ಸ್ಥಳೀಯ ಸಾರ್ವಜನಿಕ ಮಟ್ಟದಲ್ಲೂ ಒಳ್ಳೆಯ ಹೆಸರು ಉಳಿಸಿಕೊಂಡಿದ್ದ ಯೋಗೇಶ್ ನಾಯ್ಕ ಸ್ನೇಹಪರ ವ್ಯಕ್ತಿ ಎಂದೇ ಎಲ್ಲರ ಕಡೆಯಲ್ಲೂ ಹೆಸರು ಪಡೆದವರಾಗಿದ್ದರು. ಸಧ್ಯ ಇವರ ಅಗಲಿಕೆ ಯೋಗೇಶ್ ಅವರ ಕುಟುಂಬ ಮಾತ್ರವಲ್ಲದೆ ಅರಣ್ಯ ಇಲಾಖೆ, ಸುತ್ತಮುತ್ತಲಿನ ಜನರಲ್ಲೂ ಗಾಢ ಮೌನ ಎದುರಾಗಿದೆ. ಎರಡು ವಾರಗಳ ಹಿಂದೆ ಕುಳಗಿ [&#8230;]]]></description>
										<content:encoded><![CDATA[
<p>ಕಳೆದ ವಾರ ದಾಂಡೇಲಿ ತಾಲ್ಲೂಕಿನ ಕುಳಗಿ ವಲಯ ಅರಣ್ಯ ಶಾಖೆಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿದ್ದ ಯೋಗೇಶ್ ನಾಯ್ಕ ಅವರ ಅನಿರೀಕ್ಷಿತ ಮತ್ತು ಆಘಾತಕಾರಿ ಸಾವು ಎಲ್ಲರನ್ನೂ ಕಂಗೆಡಿಸಿತ್ತು. ಅರಣ್ಯ ಇಲಾಖೆ ಮಾತ್ರವಲ್ಲದೆ, ಸ್ಥಳೀಯ ಸಾರ್ವಜನಿಕ ಮಟ್ಟದಲ್ಲೂ ಒಳ್ಳೆಯ ಹೆಸರು ಉಳಿಸಿಕೊಂಡಿದ್ದ ಯೋಗೇಶ್ ನಾಯ್ಕ ಸ್ನೇಹಪರ ವ್ಯಕ್ತಿ ಎಂದೇ ಎಲ್ಲರ ಕಡೆಯಲ್ಲೂ ಹೆಸರು ಪಡೆದವರಾಗಿದ್ದರು. ಸಧ್ಯ ಇವರ ಅಗಲಿಕೆ ಯೋಗೇಶ್ ಅವರ ಕುಟುಂಬ ಮಾತ್ರವಲ್ಲದೆ ಅರಣ್ಯ ಇಲಾಖೆ, ಸುತ್ತಮುತ್ತಲಿನ ಜನರಲ್ಲೂ ಗಾಢ ಮೌನ ಎದುರಾಗಿದೆ.</p>



<p>ಎರಡು ವಾರಗಳ ಹಿಂದೆ ಕುಳಗಿ ಶಾಖೆಯಲ್ಲಿ ಅತ್ಯಂತ ವಿಷಕಾರಿ ಕಳೆನಾಶಕ ಸಿಂಪಡನೆ ಮಾಡಲು ಹೋಗಿ ಆನಂತರ ಸರಿಯಾಗಿ ಕೈ ತೊಳೆಯದೇ, ನೀರು ಆಹಾರ ಸೇವಿಸಿದ ಪರಿಣಾಮ ಯೋಗೇಶ್ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ದಾಂಡೇಲಿಯ ಖಾಸಗಿ ಕ್ಲಿನಿಕ್ ಗೆ ಹೋಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಆದರೆ ಆರೋಗ್ಯ ಮತ್ತೆ ಹದಗೆಡಲು ಶುರುವಾಗಿದೆ.</p>



<p>ಆ ನಂತರ ತಾನೇ ತನ್ನ ಕಾರನ್ನು ಚಲಾಯಿ‌ಸಿಕೊಂಡು ತನ್ನ ಪತ್ನಿ ಮತ್ತು ಮಗುವಿನ ಜೊತೆಯಲ್ಲಿ ಧಾರವಾಡದ ಎಸ್.ಜಿ.ಎಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿ ಎರಡ್ಮೂರು ದಿನಗಳ ಕಾಲ ಚಿಕಿತ್ಸೆ ಪಡೆದರೂ ಅನಾರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬಂದಿಲ್ಲ. ನಂತರ ಹುಬ್ಬಳ್ಳಿಯ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲಿಯೂ ಮೂರ್ನಾಲ್ಕು ದಿನ ಆಸ್ಪತ್ರೆಯಲ್ಲಿ ದಿನ ಕಳೆದರೂ ಅನಾರೋಗ್ಯ ಉಲ್ಬಣಿಸಿದೆಯೇ ಹೊರತು, ಯಾವುದೇ ಚೇತರಿಕೆ ಕಂಡುಬಂದಿಲ್ಲ.</p>



<p>ಈ ನಡುವೆ ಯೋಗೇಶ್ ನಾಯ್ಕರ ಸಹೋದ್ಯೋಗಿಗಳು ಮತ್ತು ಅರಣ್ಯಾಧಿಕಾರಿಗಳ ತಂಡ ಆಸ್ಪತ್ರೆ ವೈದ್ಯಾಧಿಕಾರಿಗಳನ್ನು ಭೇಟಿ ಮಾಡಿ ಯೋಗೇಶ್ ಅವರ ಚಿಕಿತ್ಸೆಗೆ ಎಷ್ಟು ಖರ್ಚಾದರೂ ಸರಿಯೇ&#8230; ನಾವು ಭರಿಸುತ್ತೇವೆ. ಏನಾದರೂ ಮಾಡಿ ಅವರನ್ನು ಉಳಿಸಿಕೊಡಿ ಎಂದು ಕೇಳಿಕೊಂಡಿದ್ದಾರೆ. ಜೊತೆಗೆ ಯೋಗೇಶ್ ಬದುಕಿಸಲು ಸಾಧ್ಯ ಎನ್ನುವುದಾದರೆ ಹೆಲಿಕಾಪ್ಟರ್ ಮೂಲಕವಾದರೂ ಎಲ್ಲಿಗೆ ಬೇಕಾದರೂ ಕರೆದುಕೊಂಡು ಹೋಗಿ ಅವರಿಗೆ ಚಿಕಿತ್ಸೆ ಕೊಡಿಸುತ್ತೇವೆ ಎಂದು, ಆಸ್ಪತ್ರೆ ಮೇಲೆ ಹೆಲಿಪ್ಯಾಡ್ ಇರುವುದನ್ನು ಖಾತ್ರಿಪಡಿಸಿಕೊಂಡಿದ್ದಾರೆ.</p>



<p>ಆದರೆ ಯೋಗೇಶ್ ನಾಯ್ಕ ಬದುಕುವ ಸಾಧ್ಯತೆ ತೀರಾ ಎಂದರೆ ತೀರಾ ಕಡಿಮೆ ಇದೆ ಎಂದು ಆಸ್ಪತ್ರೆ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಯಾಕೆಂದರೆ ಯೋಗೇಶ್ ದೇಹದ ಒಳಗೆ ಹೋದ ಕಳೆನಾಶಕದ ವಿಷ ಅತ್ಯಂತ ಅಪಾಯಕಾರಿಯಾದದ್ದು. ಈಗಾಗಲೇ ಅದು ದೇಹದ ನರನಾಡಿಗೇ ವಿಸ್ತರಿಸಿಯಾಗಿದೆ. ಅದೂ ಅಲ್ಲದೆ ಅವರ ದೇಹದ ಒಳಕ್ಕೆ ಹೋದ Paraquat Dichloride ಗೆ ಇಲ್ಲಿಯವರೆಗೆ Antidote ಔಷಧಿ ಈ ವರೆಗೂ ಬಂದಿಲ್ಲ. ಆ ಕಾರಣಕ್ಕಾಗಿ ಅವರನ್ನು ಉಳಿಸುವ ಸಾಧ್ಯತೆ ಬಗ್ಗೆ ಯಾವುದೇ ಗ್ಯಾರಂಟಿ ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.</p>



<p>ಅರಣ್ಯ ಇಲಾಖೆ, ಸರ್ಕಾರ, ಅಪಾರ ಪ್ರಮಾಣದ ಹಿತೈಷಿಗಳು ಎಷ್ಟೇ ಜನರು ಎಲ್ಲಾ ರೀತಿಯ ಸಹಕಾರ ನೀಡಿದರೂ ಬದುಕಿಸಲು ಸಾಧ್ಯವೇ ಇಲ್ಲ ಎನ್ನುವುದಾದರೆ ಎಂತಹ ಸಹಾಯವೂ ವ್ಯರ್ಥ ಎನ್ನಿಸಿದೆ. ಪ್ರೀತಿಸಿ ಮದುವೆಯಾದ ಪತ್ನಿ, ಎರಡು ವರ್ಷದ ಮಗು ಎಲ್ಲರನ್ನೂ ಯೋಗೇಶ್ ನಾಯ್ಕ ತೊರೆದಿದ್ದಾರೆ. ಒಂದು ಸಣ್ಣ ಅಜಾಗರೂಕತೆ ಒಂದು ಅಮೂಲ್ಯ ಜೀವವನ್ನು ಬಲಿ ಪಡೆದುಕೊಂಡಿದೆ ಎಂಬುದಷ್ಟೇ ಈಗ ಉಳಿದಿರುವ ಸತ್ಯ.</p>



<figure class="wp-block-image size-full"><img loading="lazy" decoding="async" width="620" height="373" src="https://peepalmedia.com/wp-content/uploads/2023/07/images-2023-07-10T190558.270.jpeg" alt="" class="wp-image-23498" srcset="https://peepalmedia.com/wp-content/uploads/2023/07/images-2023-07-10T190558.270.jpeg 620w, https://peepalmedia.com/wp-content/uploads/2023/07/images-2023-07-10T190558.270-300x180.jpeg 300w, https://peepalmedia.com/wp-content/uploads/2023/07/images-2023-07-10T190558.270-150x90.jpeg 150w" sizes="auto, (max-width: 620px) 100vw, 620px" /></figure>



<p>&#8220;<strong>Paraquat Dichloride ಕಳೆನಾಶಕ ಅದೆಷ್ಟು ಘೋರ ವಿಷ ಗೊತ್ತ?&#8221;</strong><br>ದಾಂಡೇಲಿ ತಾಲ್ಲೂಕಿನ ಕುಳಗಿ ವಲಯ ಅರಣ್ಯ ಶಾಖೆಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿದ್ದ ಯೋಗೇಶ್ ನಾಯ್ಕ ಅವರನ್ನು ಬಲಿ ಪಡೆದ Paraquat Dichloride ಕಳೆನಾಶಕದ ಬಗ್ಗೆ ಈಗ ಹೆಚ್ಚು ಚರ್ಚೆ ಶುರುವಾಗಿದೆ. ಯಾಕೆಂದರೆ ಯೋಗೇಶ್ ನಾಯ್ಕ ಅವರ ದೇಹದ ಒಳಗೆ ಸೇರಿದ್ದ ವಿಷಕ್ಕೆ Antidote ಔಷಧಿ ಯಾವುದೂ ಇಲ್ಲವೇ ಇಲ್ಲ ಎಂದರೆ ಆ ಕಳೆನಾಶಕ ಅದೆಷ್ಟು ದುಷ್ಪರಿಣಾಮಕಾರಿ ವಿಷ ಎಂಬುದು ಯೋಚಿಸುವಂತದ್ದು. ಮಾಹಿತಿಯ ಪ್ರಕಾರ ಇದುವರೆಗೂ ಈ ವಿಷಕ್ಕೆ&nbsp; ಔಷಧಿಯನ್ನೆ ಕಂಡು ಹಿಡಿಯಲಾಗಿಲ್ಲ!!!&nbsp; Paraquat Dichloride ಎಂಬ ರಸಾಯನಿಕ ಸಂಯೋಜನೆಯಿಂದ ಕೂಡಿದ ಈ ಕಳೆನಾಶಕವನ್ನು ಈಗಾಗಲೇ ಅನೇಕ ದೇಶಗಳು ನಿಷೇಧಿಸಿವೆ ಎಂಬುದು ಇನ್ನೊಂದು ಆಘಾತಕಾರಿ ವಿಚಾರ.</p>



<figure class="wp-block-image size-full"><img loading="lazy" decoding="async" width="468" height="655" src="https://peepalmedia.com/wp-content/uploads/2023/07/IMG_20230710_191705.jpg" alt="" class="wp-image-23499" srcset="https://peepalmedia.com/wp-content/uploads/2023/07/IMG_20230710_191705.jpg 468w, https://peepalmedia.com/wp-content/uploads/2023/07/IMG_20230710_191705-214x300.jpg 214w, https://peepalmedia.com/wp-content/uploads/2023/07/IMG_20230710_191705-150x210.jpg 150w, https://peepalmedia.com/wp-content/uploads/2023/07/IMG_20230710_191705-300x420.jpg 300w" sizes="auto, (max-width: 468px) 100vw, 468px" /></figure>



<p>Gramoxone, Firestorm, Helmquat,&nbsp; Parazone Uniquat&nbsp; All clear Milquat Sabaa Kapiq&nbsp; ಇತ್ಯಾದಿ ಬ್ರಾಂಡ್ ಹೆಸರಿನಿಂದ ಹತ್ತಾರು ಕಂಪನಿಗಳು ಈ ಉಗ್ರವಿಷವನ್ನು ನಮ್ಮ ದೇಶದಲ್ಲಿ ಉತ್ಪಾದಿಸುತ್ತಿವೆ. ಇದೊಂದು ಸಂಪರ್ಕ ಕಳೆನಾಶಕ (Contact Herbicide) ಅಂದರೆ, ಕಳೆನಾಶಕ ಸಿಂಪಡಿಸಿದ ಸಸ್ಯದ ಭಾಗಗಳಿಗೆ ಮಾತ್ರ ಪರಿಣಾಮ ಬೀರುತ್ತದೆ, ಬೇರೆ ಭಾಗಗಳಿಗೆ ಪರಿಣಾಮ ಬೀರುವುದಿಲ್ಲ. ಆದರೆ ಮನುಷ್ಯನ ದೇಹ ಹೊಕ್ಕರೆ ಎಲ್ಲಾ ಅಂಗಗಳಿಗೂ ವ್ಯಾಪಿಸಿ ಸಾವು ತರುತ್ತದೆ.&nbsp;</p>



<p>ಬಹಳ ಆತಂಕದ ಸಂಗತಿ ಎಂದರೆ ಈ ಘನಘೋರ ವಿಷಕ್ಕೆ ಇದುವರೆಗೂ&nbsp; ಪ್ರತ್ಯೌಷಧ(Antidote) ಲಭ್ಯವಿಲ್ಲ! ಕೇವಲ ಒಂದೆರಡು ಮಿಲಿ ಕಳೆನಾಶಕ ದೇಹ ಸೇರಿದರೂ ಸಾವು ಖಚಿತ. ಅಂದರೆ ಅದೆಷ್ಟು ಕಾರ್ಕೋಟಕ ವಿಷ ಈ ಕಳೆನಾಶಕದಲ್ಲಿ ಇರಬೇಕು. ಇಂತಹ ಕಳೆನಾಶಕ ವಿಷವನ್ನು ಶುಂಠಿ ಬೆಳೆಯಿಂದ ಹಿಡಿದು ಅನೇಕ ಬೆಳೆಗಳಲ್ಲಿ ಕಳೆಗಳನ್ನು ಕೊಲ್ಲಲು ವ್ಯಾಪಕವಾಗಿ ಇದನ್ನು ಬಳಸುತ್ತಾರೆ, ಒಂದೆರಡು ಹನಿ ವಿಷ ದೇಹ ಸೇರಿದರೂ ಬಹು ಅಂಗಾಂಗಗಳು ವೈಫಲ್ಯ ಉಂಟಾಗಿ ಸಾವು ಸಂಭವಿಸಬಹುದು, ಪಾರ್ಕಿನ್ಸನ್ ನಂತಹ ಅಪಾಯಕಾರಿ ಕಾಯಿಲೆಗಳಿಗೂ ಆಹ್ವಾನ ನೀಡಬಹುದು.</p>



<p>ರೈತರು ಇದನ್ನು ಉಪಯೋಗಿಸುವಾಗ  ಸುರಕ್ಷಿತ ವಿಧಾನ ಅನುಸರಿಸಿ ಬಳಸಬೇಕು. ಸಿಂಪಡಿಸುವ ಸಮಯದಲ್ಲಿ ಯಾವುದೇ ಕಾರಣಕ್ಕೂ ಆಹಾರ ನೀರನ್ನು ಸೇವಿಸಬಾರದು. ದೇಹಗಳಲ್ಲಿ ಗಾಯಗಳಿದ್ದರೆ ಕಳೆನಾಶಕದ ಸಂಪರ್ಕಕ್ಕೆ ಬರಲೇಬಾರದು. ಔಷಧಿಯೇ ಇಲ್ಲದ ಈ ವಿಷ ನಮ್ಮ ಜೀವಜಾಲದಲ್ಲಿ ಕಬಂಧ ಬಾಹುಗಳನ್ನು ಚಾಚುತ್ತಲೇ ಇದೆ.  (<strong>Paraquat Dichloride ಬಗೆಗಿನ ವಿವರ ನಾಗರಾಜ್ ಬೆಳ್ಳೂರು </strong>ಅವರ ಬರಹದ ಮೂಲ)</p>



<p><strong>ಯೋಗೇಶ್ ನಾಯ್ಕ ಸಾವಿನ ಹಿಂದೆ ಉದ್ಭವಿಸುವ ಪ್ರಶ್ನೆಗಳು</strong> :</p>



<p>ಈ ಪ್ರಕರಣದ ಅಡಿಯಲ್ಲಿ ಗಂಭೀರವಾಗಿ ಒಂದಷ್ಟು ಪ್ರಶ್ನೆಗಳು ಉದ್ಭವಿಸಿವೆ. ಅರಣ್ಯ ಇಲಾಖೆ ಉಪಯೋಗಿಸುವ Herbicides ಗಳು ಇಷ್ಟು ವಿಷಕಾರಿ ಎಂಬುದರ ಅರಿವು ಇಲಾಖಾ ಅಧಿಕಾರಿಗಳಿಗೆ ಇರಲಿಲ್ಲವೆ? Herbicides ಗಳಾಗಲಿ, ಔಷಧಿಗಳಾಗಲಿ ಅಥವಾ ಇನ್ನಾವುದೇ ಪದಾರ್ಥಗಳನ್ನು ಬಳಸುವುದಾದರೆ, ಅವುಗಳ ಹಿನ್ನೆಲೆ ಅರಿತು ಬಳಸುವುದು ಸಾಮಾನ್ಯ. ವಿಶೇಷವಾಗಿ ಅವುಗಳ ದುಷ್ಪರಿಣಾಮಗಳು ಅಲ್ಲಿ ಗಣನೆಗೆ ಬರಬೇಕು. ಆದರೆ ಈ Herbicides ಗಳ ಉಪಯೋಗದ ಹಿಂದೆ ಅರಣ್ಯ ಇಲಾಖೆ ಯಾವುದೇ ಮುನ್ನೆಚ್ಚರಿಕೆ ವಹಿಸದೇ ಒಬ್ಬ ಅಮಾಯಕ ಅಧಿಕಾರಿಯ ಸಾವಿಗೆ ಕಾರಣವಾಗಿದೆ. ಹಾಗಾಗಿ <strong>ಯೋಗೇಶ್ ನಾಯ್ಕ ಅವರ ಸಾವಿನ ಸಂಪೂರ್ಣ ಹೊಣೆಯನ್ನು ಅರಣ್ಯ ಇಲಾಖೆಯೇ ಹೊರಬೇಕು</strong>. ಅಷ್ಟೆ ಅಲ್ಲದೆ ಇಡೀ ವಲಯ ವ್ಯಾಪ್ತಿಯಲ್ಲೇ ಈ Herbicides ಬಳಸುತ್ತಿರುವ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದ ಟೆಂಡರ್ ಲಾಭಿ ಕೂಡಾ ನಡೆದಿರುವ ಅನುಮಾನ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಕರೆದ ಟೆಂಡರ್ ಗಳಲ್ಲಿ ನಾ ಮುಂದು ತಾ ಮುಂದು ಎಂದು ಬರುವ ಇಂತಹ ವಿಷ ಹಂಚುವ ಕಂಪನಿಗಳು ಉನ್ನತ ಅಧಿಕಾರಿಗಳ ಕಡೆಯಿಂದ ಲಾಭಿ ನಡೆಸುವುದು ಸಾಮಾನ್ಯ. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿ ಯೋಗೇಶ್ ನಾಯ್ಕ ಅವರ ಸಾವಿನ ಪ್ರಕರಣವನ್ನು ಅಪಘಾತ ಅಥವಾ ಅಜಾಗರೂಕತೆ ಅಡಿಯಲ್ಲಿ ಆದ ಸಾವು ಎಂದಷ್ಟೇ ಪರಿಗಣಿಸದೆ ಇದರ ಹಿಂದೆ ಎಂತಹ ಲಾಭಿ ನಡೆದಿರಬಹುದು ಎಂಬ ನಿಷ್ಪಕ್ಷಪಾತ ತನಿಖೆ ಅಗತ್ಯವಿದೆ. ಪ್ರತ್ಯೌಷಧವೇ ಇಲ್ಲದ ಇಂತಹ Herbicides ಗಳು ಈ ನೆಲಕ್ಕೆ ಅಷ್ಟು ಅಗತ್ಯವಾದರೂ ಏನಿತ್ತು.? ಒಬ್ಬ ಮನುಷ್ಯನ ಸಾವಿಗೇ ಈ ಕಳೆನಾಶಕಗಳು ಇಷ್ಟು ಪರಿಣಾಮಕಾರಿಯಾಗಿ ದುಷ್ಪರಿಣಾಮ ಬೀರಬೇಕಾದರೆ, ನೆಲದ ಮೇಲೆ ಇನ್ನೆಂತಹ ದುಷ್ಪರಿಣಾಮ ಬೀರಬಹುದು. ಒಟ್ಟಾರೆ ಕಳೆನಾಶಕಗಳ ಬಗ್ಗೆ ಪರಿಸರ ಪ್ರೇಮಿಗಳ ದೊಡ್ಡ ವಿರೋಧ ಇದ್ದರೂ, ಕಾಡು, ಪರಿಸರ ಉಳಿಸುವ ಅರಣ್ಯ ಇಲಾಖೆಯೇ ಬಳಸುವುದು ಸ್ಪಷ್ಟವಾಗಿ ಪರಿಸರ ನಾಶಕ್ಕೆ ದಾರಿ ಮಾಡಿದಂತೆ ಅಲ್ಲವೆ? ಜೊತೆಗೆ ಇಂತಹ ವಿಷಕಾರಿ ಕಳೆನಾಶಕ ಭಾರತದಲ್ಲಿ ಉತ್ಪಾದನೆ ಆಗುತ್ತಿರುವುದು ಯಾಕೆ.? ಪ್ರತ್ಯೌಷಧ (Antidote) ಇಲ್ಲದ ಇಂತಹ ಕಳೆನಾಶಕಗಳು ಇಂತಹ ಅದೆಷ್ಟು ಜೀವಗಳ ಬಲಿ ಪಡೆಯಬಹುದು ಎಂಬುದು ನಿಜಕ್ಕೂ ಆತಂಕಕಾರಿಯೇ ಸರಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಪ್ರಕರಣವನ್ನಾದರೂ ಗಂಭೀರವಾಗಿ ಪರಿಗಣಿಸಿ ಸ್ವಯಂ ದೂರು ದಾಖಲಿಸಿ ತನಿಖೆಗೆ ಮುಂದಾಗಬೇಕು. ಇಂತಹ ಕಳೆನಾಶಕಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸುವುದರ ಜೊತೆಗೆ ಯೋಗೇಶ್ ನಾಯ್ಕ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಬೇಕು. ಅವರ ಸಾವಿನ ಪ್ರಕರಣ ಕೂಡಾ ನಿಷ್ಪಕ್ಷಪಾತವಾಗಿ ತನಿಖೆ ಆಗಬೇಕು ಎಂಬುದು ಸಾರ್ವಜನಿಕ ವಲಯದ ಕಳಕಳಿಯ ಬೇಡಿಕೆಯಾಗಿದೆ.</p>
]]></content:encoded>
					
		
		
			</item>
		<item>
		<title>ವನಶ್ರೀ ಮಂಜಪ್ಪನ ವಿರುದ್ಧ ಎಫ್‌ ಐ ಆರ್‌ ನಲ್ಲಿ ಏನೇನಿದೆ?</title>
		<link>https://peepalmedia.com/what-is-in-the-fir-against-vanashree-manjappa/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 13 Jun 2023 11:35:49 +0000</pubDate>
				<category><![CDATA[ಸತ್ಯ ಶೋಧ]]></category>
		<category><![CDATA[Death case]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sagara]]></category>
		<category><![CDATA[Sexual Harassment]]></category>
		<category><![CDATA[SHIVAMOGGA POLICE]]></category>
		<category><![CDATA[Vanashree Manjappa]]></category>
		<guid isPermaLink="false">https://peepalmedia.com/?p=22350</guid>

					<description><![CDATA[ಶಿವಮೊಗ್ಗ ಜಿಲ್ಲೆ ಸಾಗರದ ವನಶ್ರೀ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹೊನ್ನೇಸರ ಪಿಣಿಯಜ್ಜಿ ಮಂಜಪ್ಪ ಆಲಿಯಾಸ್‌ ವನಶ್ರೀ ಮಂಜಪ್ಪ ಇದೀಗ ಪೋಕ್ಸೋ ಮತ್ತು ಎಸ್‌ ಸಿ, ಎಸ್‌ ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಜೈಲು ಪಾಲಾಗಿದ್ದಾನೆ. ವಸತಿ ನಿಲಯಕ್ಕೆ ಸೇರಿದ್ದ ವಿದ್ಯಾರ್ಥಿನಿಯೊಬ್ಬಳ ಸಾವಿಗೆ ಮಂಜಪ್ಪನ ಕೃತ್ಯಗಳು ಕಾರಣ ಎಂದು ಆರೋಪಿಸಲಾಗಿದೆ. ಇದರೊಂದಿಗೆ ಇನ್ನಿತರ ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೂ ಲೈಂಗಿಕ ಕಿರುಕುಳ ನೀಡಿರುವ ದೂರಿನ ಆಧಾರದ ಮೇರೆಗೆ ಪೋಕ್ಸೋ ಕಾಯ್ದೆ ಆಡಿ ಪ್ರಕರಣ ದಾಖಲಾಗಿದೆ. ತನ್ನ ವಸತಿ ನಿಲಯಕ್ಕೆ [&#8230;]]]></description>
										<content:encoded><![CDATA[
<p>ಶಿವಮೊಗ್ಗ ಜಿಲ್ಲೆ ಸಾಗರದ ವನಶ್ರೀ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹೊನ್ನೇಸರ ಪಿಣಿಯಜ್ಜಿ ಮಂಜಪ್ಪ ಆಲಿಯಾಸ್‌ ವನಶ್ರೀ ಮಂಜಪ್ಪ ಇದೀಗ ಪೋಕ್ಸೋ ಮತ್ತು ಎಸ್‌ ಸಿ, ಎಸ್‌ ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಜೈಲು ಪಾಲಾಗಿದ್ದಾನೆ. ವಸತಿ ನಿಲಯಕ್ಕೆ ಸೇರಿದ್ದ ವಿದ್ಯಾರ್ಥಿನಿಯೊಬ್ಬಳ ಸಾವಿಗೆ ಮಂಜಪ್ಪನ ಕೃತ್ಯಗಳು ಕಾರಣ ಎಂದು ಆರೋಪಿಸಲಾಗಿದೆ. ಇದರೊಂದಿಗೆ ಇನ್ನಿತರ ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೂ ಲೈಂಗಿಕ ಕಿರುಕುಳ ನೀಡಿರುವ ದೂರಿನ ಆಧಾರದ ಮೇರೆಗೆ ಪೋಕ್ಸೋ ಕಾಯ್ದೆ ಆಡಿ ಪ್ರಕರಣ ದಾಖಲಾಗಿದೆ.</p>



<p>ತನ್ನ ವಸತಿ ನಿಲಯಕ್ಕೆ ಸೇರಿದ ಕೂಡಲೇ ಏನೂ ತಿಳಿಯದ ಈ ಪರಿಶಿಷ್ಟ ಅಲೆಮಾರಿ ಸಮುದಾಯದ ವಿದ್ಯಾರ್ಥಿನಿಗೆ ಯೋಗಾಭ್ಯಾಸದ ಹೆಸರಿನಲ್ಲಿ ವಿಪರೀತ ದೇಹ ದಂಡಿಸಿದ್ದ ಮಂಜಪ್ಪ ನಂತರದಲ್ಲಿ ಅತಿರೇಕದ ಕೃತ್ಯಗಳನ್ನು ನಡೆಸಿ ಬಾಲಕಿಯ ದುರ್ಮರಣಕ್ಕೆ ಕಾರಣವಾಗಿರುವ ಕುರಿತು ಎಲ್ಲವನ್ನೂ ಖುದ್ದಾಗಿ ನೋಡಿರುವ ಬಾಲಕಿಯರು ದೂರಿದ್ದಾರೆ. ಈ ಪ್ರಕರಣ ದಾಖಲಿಸಿಕೊಂಡು 12.06.2023ರಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರೋಹನ್‌ ಜಗದೀಶ್‌ ನೇತೃತ್ವದ ತಂಡ ವಸತಿ ನಿಲಯಕ್ಕೆ ಭೇಟಿ ನೀಡಿ ಸಂತ್ರಸ್ತ ಬಾಲಕಿಯರ ಮಾತುಗಳನ್ನು ವಿಡಿಯೋ ದಾಖಲೀಕರಣ ಮಾಡಿಕೊಂಡಿದೆ. ಜೊತೆಯಲ್ಲಿ ಪಂಚನಾಮೆ ಪ್ರಕ್ರಿಯೆ ಸಹ ನಡೆಸಲಾಗಿದೆ.</p>



<p><strong>ಪೀಪಲ್‌ ಮೀಡಿಯಾ</strong>ಕ್ಕೆ ಲಭ್ಯವಾಗಿರುವ ಎಫ್‌ ಐ ಆರ್‌ (ಪ್ರಥಮ ವರ್ತಮಾನ ವರದಿ) ಪ್ರತಿಯಲ್ಲಿ ಉಲ್ಲೇಖವಾಗಿರುವಂತೆ ಸಾಗರದ ಗ್ರಾಮಾಂತರ ಠಾಣೆಯಲ್ಲಿ ದಿನಾಂಕ 10-06-2023ರಂದು ದೂರು ದಾಖಲಾಗಿದೆ.</p>



<p><strong>FIRನಲ್ಲಿ ಏನಿದೆ?</strong><br>ವನಶ್ರೀ ಮಂಜಪ್ಪ ನಡೆಸುವ ವಸತಿ ಶಾಲೆಗೆ ಸೇರಿದ್ದ ವಿದ್ಯಾರ್ಥಿನಿಯ ತಾಯಿಯು ನೀಡಿರುವ ದೂರಿನಲ್ಲಿ ಆಘಾತಕಾರಿ ಅಂಶಗಳಿವೆ. ದಿನಾಂಕ 04-06-23ರಂದು ಮೃತ ವಿದ್ಯಾರ್ಥಿನಿಯೂ ಸೇರಿದಂತೆ ಐದು ಮಂದಿ ವಿದ್ಯಾರ್ಥಿನಿಯರು ವಸತಿ ನಿಲಯಕ್ಕೆ ದಾಖಲಾಗಿದ್ದರು. ʼ07-06-23ರಂದು ಮದ್ಯಾಹ್ನ ಎರಡು ಗಂಟೆ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿದೆ. ಇದನ್ನು ಮಂಜಪ್ಪ ಅವರ ಗಮನಕ್ಕೆ ತಂದಾಗ ಅವರು ಅದನ್ನು ನಿರ್ಲಕ್ಷ್ಯ ಮಾಡಿದ್ದಲ್ಲದೆ ತಮಗೆ ತಿಳಿದ ಮಾತ್ರೆ ಹಾಗೂ ಕಷಾಯ ಕುಡಿಸಿದ್ದಾರೆ. ನಂತರ ಆಕೆ ಕಾಲು ನೋವು ಹಾಗೂ ತೊಡೆ ನೋವು ಎಂದು ತಮ್ಮ ಜೊತೆಯಲ್ಲಿದ್ದವರಿಗೆ ತಿಳಿಸಿದ್ದಳು. ಇದನ್ನು ಅವರು ಮಂಜಪ್ಪ ಅವರಿಗೆ ತಿಳಿಸಿದಾಗ ಮಂಜಪ್ಪ ಅವರು ಬಾಧಿತ ಬಾಲಕಿಯನ್ನು ಪ್ರತ್ಯೇಕವಾಗಿ ತಮ್ಮ ರೂಂಗೆ ಕರೆದುಕೊಂಡು ಹೋಗಿ ಮೊಣಕಾಲು, ತೊಡೆ ಹಾಗೂ ಇತರ ಕಡೆ ಮುಲಾಮು ಹಚ್ಚಿ ಹೊರ ಬಂದು ಉಳಿದವರಿಗೆ ಅವಳು ಹುಷಾರಾಗುತ್ತಾಳೆ, ನೀವು ಹೋಗಿ ಎಂದು ಹೇಳಿರುತ್ತಾರೆ. ಯಾವುದೇ ಆಸ್ಪತ್ರೆಗೆ ದಾಖಲಿಸಿರುವುದಿಲ್ಲ. ಮಾತ್ರವಲ್ಲದೇ ಮಕ್ಕಳಿಗೆ ಆ ವಿದ್ಯಾರ್ಥಿನಿಗೆ ಹುಷಾರಿಲ್ಲದ ವಿಷಯ ಯಾರಿಗೂ ಹೇಳಕೂಡದು ಎಂದು ಗದರಿಸಿದ್ದಾನೆ.</p>



<p>ಮರುದಿನ ಅಂದರೆ ʼ08-06-23ರಂದು ಬಾಲಕಿಯ ಆರೋಗ್ಯ ತೀರಾ ಹದಗೆಟ್ಟಿರುವಾಗ ಮಂಜಪ್ಪ ಬಲವಂತವಾಗಿ ತುಂಬಾ ನೀರು ಕುಡಿಸಿ ಆಕೆ ಸುಸ್ತಾಗಿ ಮಲಗಿದ್ದಳು. ನಂತರ ಆಕೆಯನ್ನು ಮಕ್ಕಳು ಮಾತಾಡಿಸಲು ಹೋದಾಗ ಅವಳು ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೇ ಇದ್ದಾಗ ಮಕ್ಕಳನ್ನು ಹೊರಕ್ಕೆ ಕಳಿಸಿ ಅವಳನ್ನು ಮಾತಾಡಿಸುವ ಪ್ರಯತ್ನ ಮಾಡಿದಾಗ ಆಕೆ ನಾಲಿಗೆ ಕಚ್ಚಿಕೊಂಡು ಯಾವುದೇ ಪ್ರತಿಕ್ರಿಯೆ ನೀಡದಂತಾಗಿದ್ದಳು. ಆ ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಆಗಲೂ ಸಹ ಬಾಲಕಿಯ ಪೋಷಕರಿಗೆ ವಿಷಯ ತಿಳಿಸಿರುವುದಿಲ್ಲ. ಆಸ್ಪತ್ರೆಯ ಆವರಣದಲ್ಲಿ ಮಕ್ಕಳು ಅಪರಿಚಿತರ ಸಾಯದಿಂದ ಪೋಷಕರಿಗೆ ವಿಷಯ ತಿಳಿಸಿರುತ್ತಾರೆ.</p>



<p>ನಂತರ ಪೋಷಕರು ತಮ್ಮ ಮಗಳ ಜೊತೆಗಿದ್ದ ನಾಲ್ಕು ಜನ ಮಕ್ಕಳನ್ನು ವಿಚಾರಿಸಿದಾಗ ಮಂಜಪ್ಪನ ಅಶ್ಲೀಲ ವರ್ತನೆ ಬಗ್ಗೆ, ಅವನು ಖಾಸಗಿ ಭಾಗಗಳನ್ನು ಮುಟ್ಟುವುದು, ಅಪ್ಪಿಕೊಳ್ಳುವುದು, ಅವಾಚ್ಯವಾಗಿ ಮಾತಾಡಿರುವ ಬಗ್ಗೆ ಮಾಹಿತಿ ನೀಡಿ ತಮಗಾದ ಅವಮಾನ ಹಿಂಸೆಯನ್ನು ಹೇಳಿಕೊಂಡು ಕಣ್ಣೀರು ಹಾಕಿರುತ್ತಾರೆ. ಇದೇ ರೀತಿಯ ಲೈಂಗಿಕ ದೌರ್ಜನ್ಯ ತಮ್ಮ ಮಗಳಿಗೂ ಆಗಿರಬಹುದುʼ ಎಂದು ಪೋಷಕರು ದೂರಿನಲ್ಲಿ ತಿಳಿಸಿರುತ್ತಾರೆ. ಮಂಜಪ್ಪನ ಈ ರೀತಿಯ ಲೈಂಗಿಕ ದೌರ್ಜನ್ಯದಿಂದ ತಮ್ಮ ಮಗಳು ಹೆದರಿಕೊಂಡು, ಮಾನಸಿಕವಾಗಿ, ದೈಹಿಕವಾಗಿ ಹಿಂಸೆ ಅನುಭವಿಸಿ ಭಯ ಹಾಗೂ ಬೇಸರದಲ್ಲಿ ಮನಸ್ಸಿಗೆ ಹಚ್ಚಿಕೊಂಡು ಇದರಿಂದ ಜ್ವರ ಸುಸ್ತು ವಾಂತಿ ಪ್ರಾರಂಭವಾಗಿ ಎರಡು ದಿನ ನರಳಾಡಿದ್ದಾಳೆʼ ಎಂದು ದೂರಿದ್ದಾರೆ. ʼಮಂಜಪ್ಪನ ಭಯದಿಂದ ಹಾಗೂ ಆಸ್ಪತ್ರೆಗೆ ತೋರಿಸದೇ ತಾನೇ ಮಾತ್ರೆ ಮುಲಾಮು ಕಷಾಯ ಕುಡಿಸಿ ಸಮಯ ವ್ಯರ್ಥಮಾಡಿ, ಆ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸದೇ, ಪೋಷಕರಿಗೂ ವಿಷಯ ತಿಳಿಸದೇ ಹೋಗಿದ್ದರಿಂದ ಕೊನೆ ಗಳಿಗೆಯಲ್ಲಿ ಆಸ್ಪತ್ರೆಗೆ ಸೇರಿಸಿದ್ದರಂತಿ ತಮ್ಮ ಮಗಳು ಮೃತಪಟ್ಟಿದ್ದಾಳೆ ಎಂದು ದೂರುದಾರರು ತಿಳಿಸಿದ್ದಾರೆ.</p>



<p>ಈ ಎಲ್ಲಾ ವಿಚಾರಗಳು ಪಿರ್ಯಾದುದಾರರಿಗೆ ಮಂಜಪ್ಪನವರ ಮೇಲೆ ಬಲವಾದ ಅನುಮಾನಕ್ಕೆ ಕಾರಣವಾಗಿರುತ್ತವೆ ಹಾಗೂ ತಮ್ಮ ಮಗಳಿಗೆ ಅವಾಚ್ಯವಾಗಿ ನಿಂದಿಸಿರುವುದು, ಭಯ ಹುಟ್ಟಿಸಿರುವುದು, ತಾನು ಹೇಳಿದಂತೆ ಕೇಳದಿದ್ದರೆ ನಿಮ್ಮನ್ನು ನೋಡಿಕೊಳ್ಳುತ್ತೇನೆ, ಈ ವಿಚಾರವಾಗಿ ಯಾರಿಗೂ ಹೇಳಬಾರದು ಎಂದು ಎಚ್ಚರಿಕೆ ನೀಡಿದ್ದನ್ನು ಮಕ್ಕಳು ಮನೆಗೆ ಬಂದು ಹೇಳಿರುವ ಹಿನ್ನೆಲೆಯಲ್ಲಿ ಮಂಜಪ್ಪ ಅವರ ಮೇಲೆ ಎಸ್‌ ಸಿ ಎಸ್‌ ಟಿ ದೌರ್ಜನ್ಯ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತಮ್ಮ ಮಗಳ ಸಾವಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು FIR ನಲ್ಲಿ ದಾಖಲಾಗಿರುತ್ತದೆ.</p>



<figure class="wp-block-embed is-type-video is-provider-youtube wp-block-embed-youtube wp-embed-aspect-16-9 wp-has-aspect-ratio"><div class="wp-block-embed__wrapper">
<div class="youtube-embed" data-video_id="UuYdq0sCyu4"><iframe loading="lazy" title="ಪರಿಶಿಷ್ಟ ಅಲೆಮಾರಿ ಬಾಲಕಿ ತೇಜಸ್ವಿನಿಯ ಅನುಮಾನಾಸ್ಪದ ಸಾವು. ಆರ್ ಎಸ್ ಎಸ್ ವ್ಯಕ್ತಿ ವನಶ್ರೀ ಮಂಜಪ್ಪನೇ ತಪ್ಪಿತಸ್ಥನೆ?" width="696" height="392" src="https://www.youtube.com/embed/UuYdq0sCyu4?feature=oembed&#038;enablejsapi=1" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" allowfullscreen></iframe></div>
</div></figure>
]]></content:encoded>
					
		
		
			</item>
	</channel>
</rss>
