<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>deaths by elephants &#8211; Peepal Media</title>
	<atom:link href="https://peepalmedia.com/tag/deaths-by-elephants/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 20 Jan 2023 15:36:37 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>deaths by elephants &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಮನುಷ್ಯ, ಆನೆ ಮತ್ತು ಇತರ ಜೀವಿಗಳು: ಸಹಬಾಳ್ವೆಯ ಪ್ರಶ್ನೆ</title>
		<link>https://peepalmedia.com/man-elephant-and-other-creatures-a-question-of-coexistence/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 20 Jan 2023 14:24:27 +0000</pubDate>
				<category><![CDATA[ಅಂಕಣ]]></category>
		<category><![CDATA[deaths by elephants]]></category>
		<category><![CDATA[forest department]]></category>
		<category><![CDATA[Government]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[writing]]></category>
		<guid isPermaLink="false">https://peepalmedia.com/?p=19172</guid>

					<description><![CDATA[ಪ್ರಕೃತಿಯ ನಿರಂತರ ಶೋಷಣೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದು, ಅದರಿಂದ ಉಂಟಾದ ಮತ್ತು ಆಗುತ್ತಿರುವ ಪ್ರಾಕೃತಿಕ ಅಸಮತೋಲನ ಹಾಗೂ ವಿನಾಶಗಳಿಗೂ ಮತ್ತು ಇಂದಿನ ಮಾನವ ಪ್ರಾಣಿ ಸಂಘರ್ಷಕ್ಕೂ ನೇರವಾದ ಸಂಬಂಧವಿದೆ ಎನ್ನುತ್ತಾರೆ ರಂಗಕರ್ಮಿ ಪ್ರಸಾದ್‌ ರಕ್ಷಿದಿ. ಈ ಹಿನ್ನೆಲೆಯಲ್ಲಿ ಅವರು ಮಾನವ ಮತ್ತು ಪ್ರಾಣಿ ಸಂಘರ್ಷವನ್ನು ವಿಶ್ಲೇ಼ಷಿಸುವ ಪ್ರಯತ್ನ ಮಾಡಿದ್ದಾರೆ. ಪ್ರತಿ ಶುಕ್ರವಾರ ಅವರ ಅಂಕಣ ʼಕಾಡು ಹೆಜ್ಜೆಯ ಜಾಡು ಹಿಡಿದುʼ ಓದಿ ನಿಮ್ಮ ಅಭಿಪ್ರಾಯ ಬರೆಯಿರಿ. ಮಾನವ ಮತ್ತು ಪ್ರಾಣಿ ಸಂಘರ್ಷ ಎಲ್ಲಾ ಕಡೆಗಳಲ್ಲಿ ಕಾಡಾನೆಗಳಿಂದ, ಇತರ [&#8230;]]]></description>
										<content:encoded><![CDATA[
<p><strong>ಪ್ರಕೃತಿಯ ನಿರಂತರ ಶೋಷಣೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದು</strong><strong>, </strong><strong>ಅದರಿಂದ ಉಂಟಾದ ಮತ್ತು ಆಗುತ್ತಿರುವ ಪ್ರಾಕೃತಿಕ ಅಸಮತೋಲನ ಹಾಗೂ ವಿನಾಶಗಳಿಗೂ ಮತ್ತು ಇಂದಿನ ಮಾನವ ಪ್ರಾಣಿ ಸಂಘರ್ಷಕ್ಕೂ ನೇರವಾದ ಸಂಬಂಧವಿದೆ ಎನ್ನುತ್ತಾರೆ ರಂಗಕರ್ಮಿ ಪ್ರಸಾದ್‌ ರಕ್ಷಿದಿ. </strong><strong>ಈ </strong><strong>ಹಿ</strong><strong>ನ್ನೆ</strong><strong>ಲೆಯಲ್ಲಿ ಅವರು ಮಾನವ ಮತ್ತು ಪ್ರಾಣಿ ಸಂಘರ್ಷವನ್ನು ವಿಶ್ಲೇ಼ಷಿಸುವ ಪ್ರಯತ್ನ ಮಾಡಿದ್ದಾರೆ. ಪ್ರತಿ ಶುಕ್ರವಾರ ಅವರ ಅಂಕಣ </strong><strong>ʼ</strong><strong>ಕಾಡು ಹೆಜ್ಜೆಯ ಜಾಡು ಹಿಡಿದು</strong><strong>ʼ</strong><strong> ಓದಿ ನಿಮ್ಮ ಅಭಿಪ್ರಾಯ ಬರೆಯಿರಿ. </strong></p>



<p><strong>ಮಾನವ ಮತ್ತು ಪ್ರಾಣಿ ಸಂಘರ್ಷ</strong></p>



<p>ಎಲ್ಲಾ ಕಡೆಗಳಲ್ಲಿ ಕಾಡಾನೆಗಳಿಂದ, ಇತರ ಪ್ರಾಣಿಗಳಿಂದ ಧಾಳಿಗೊಳಗಾಗುತ್ತಿರುವವರ ಸಂಖ್ಯೆ ಏರುತ್ತಲೇ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳು ಆನೆಗಳ ಉಪಟಳದಿಂದ ತೊಂದರೆಗೆ ಒಳಗಾಗಿವೆ. ಹಾಸನ ಜಿಲ್ಲೆಯೊಂದರಲ್ಲೇ ಇದುವರೆಗೆ ಆನೆಗಳಿಂದ ಹತರಾದವರ ಸಂಖ್ಯೆ ಎಪ್ಪತ್ತೈದನ್ನು ದಾಟಿದೆ. ಪ್ರತಿ ಸಲ ಯಾರಾದರೂ ಸತ್ತಾಗ ಜನರು ಪ್ರತಿಭಟನೆ ಮಾಡುತ್ತಾರೆ. ಆಗ ಸ್ಥಳಕ್ಕೆ ಓಡಿಬರುವ ರಾಜಕಾರಣಿಗಳು, ಅಧಿಕಾರಿಗಳು ಮಾಮೂಲಾಗಿ ಒಂದಷ್ಟು ಹೇಳಿಕೆ, ಆಶ್ವಾಸನೆಗಳನ್ನು ನೀಡುತ್ತಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ಮೃತರ ಕುಟುಂಬದವರಿಗೆ ಸ್ಥಳದಲ್ಲೇ ಒಂದಷ್ಟು ಪರಿಹಾರ ನೀಡಿ ಧಾರಾಳವಾಗಿ ಅನುಕಂಪ ತೋರಲಾಗುತ್ತದೆ ಮತ್ತು ಭರವಸೆಗಳನ್ನು ನೀಡಲಾಗುತ್ತದೆ. ಯಥಾಪ್ರಕಾರ ರಾಜಕಾರಣಿಗಳು ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಆದೇಶ ನೀಡುತ್ತಾರೆ. ಮತ್ತು ಸ್ಥಳದಿಂದ ಹೊರಡುವ ವೇಳೆಗೇ ಆ ಆದೇಶಗಳು ಏನೆಂಬುದು ಅವರಿಗೇ ಮರೆತು ಹೋಗಿರುತ್ತದೆ !</p>



<p>ಇತ್ತೀಚೆಗೆ ಸಕಲೇಶಪುರ ತಾಲ್ಲೂಕಿನಲ್ಲಿ ಹಾನಿಗೊಳಗಾದ ರೈತರು ಪ್ರತಿಭಟನೆ ಮಾಡಿದರು. ಅಲ್ಲಿಗೆ ಬಂದ ಮಾಜಿ ಮತ್ತು ಹಾಲಿ ಶಾಸಕರ ನಡುವೆ ಮಾತಿನ ಚಕಮಕಿಯೂ ನಡೆಯಿತು. ಅವೆಲ್ಲ ಪರಸ್ಪರ ಟೀಕೆ ಟಿಪ್ಪಣಿಗಳಲ್ಲಿ, ಮತ್ತು ವಿಷಯಕ್ಕೆ ಸಂಬಂಧಿಸದ ಶಾಸಕರ ಸಂಬಳ ಸಾರಿಗೆಗಳ ವಿಚಾರದಲ್ಲಿ ವಾಗ್ವಾದಗಳಿಗೆ ಸೀಮಿತವಾಯಿತೇ ವಿನಃ, ಪ್ರಸ್ತುತ ಸಮಸ್ಯೆಯ ವಿಚಾರಕ್ಕೆ ಅವರು ಬರಲೇ ಇಲ್ಲ. ತಮ್ಮ ತಮ್ಮ ಅಧಿಕಾರದ ಅವಧಿಯಿಂದ ಹಿಡಿದು ಸ್ಥಳಾಂತರಿಸಿದ ಆನೆಗಳ ಸಂಖ್ಯೆ, ಸತ್ತವರ ಕುಟುಂಬಕ್ಕೆ ಕೊಡಿಸಿದ ಪರಿಹಾರದ ಹಣ, ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಸಾಧನೆಗಳೆಂಬಂತೆ ಬಿಂಬಿಸಿದರೇ ಹೊರತು, ಹಾಗೆ ಸ್ಥಳಾಂತರಿಸಿದ ಆನೆಗಳು ಏನಾಗಿವೆ? ಎಲ್ಲಿವೆ? ಎನ್ನುವ ಸಂಗತಿಯನ್ನು ವಿವರಿಸಲಿಲ್ಲ. ಈ ಮಾನವ ಪ್ರಾಣಿ ಸಂಘರ್ಷಕ್ಕೆ ತಾವೂ ಅಷ್ಟೇ ಹೊಣೆಗಾರರು ಎನ್ನುವ ವಿಚಾರವನ್ನೇ ಬಹಳ ನಾಜೂಕಾಗಿ ಪಕ್ಕಕ್ಕೆ ಸರಿಸಿ ಮಾತನಾಡಿದರು.</p>



<figure class="wp-block-image size-large"><img fetchpriority="high" decoding="async" width="1024" height="594" src="https://peepalmedia.com/wp-content/uploads/2023/01/IMG-20230120-WA0031-1024x594.jpg" alt="" class="wp-image-19174" srcset="https://peepalmedia.com/wp-content/uploads/2023/01/IMG-20230120-WA0031-1024x594.jpg 1024w, https://peepalmedia.com/wp-content/uploads/2023/01/IMG-20230120-WA0031-300x174.jpg 300w, https://peepalmedia.com/wp-content/uploads/2023/01/IMG-20230120-WA0031-768x445.jpg 768w, https://peepalmedia.com/wp-content/uploads/2023/01/IMG-20230120-WA0031-150x87.jpg 150w, https://peepalmedia.com/wp-content/uploads/2023/01/IMG-20230120-WA0031-696x403.jpg 696w, https://peepalmedia.com/wp-content/uploads/2023/01/IMG-20230120-WA0031.jpg 1042w" sizes="(max-width: 1024px) 100vw, 1024px" /></figure>



<p>ನಗರ ಪ್ರದೇಶಕ್ಕೆ ಆನೆಗಳು ಅಥವಾ ಇನ್ನಾವುದೇ ಪ್ರಾಣಿಗಳು ಬಂದು ತೊಂದರೆ ಮಾಡಿದಾಗ ನಮ್ಮ ಮಾಧ್ಯಮಗಳಲ್ಲಿ ಸಿಕ್ಕುವ ಪ್ರಚಾರ, ಹಳ್ಳಿಗಳಲ್ಲಿ ರೈತರು, ಕೂಲಿ ಕಾರ್ಮಿಕರು ಸತ್ತಾಗಲಾಗಲೀ, ರೈತರ ಬೆಳೆ ನಾಶವಾದಾಗಲಾಗಲೀ ಸಿಕ್ಕುವುದಿಲ್ಲ. ಬದಲಿಗೆ ಇದೊಂದು ಮಾಮೂಲಿ ಸಂಗತಿಯಾಗಿ ಸುದ್ದಿಯಾಗುತ್ತದೆ ಅಷ್ಟೆ.&nbsp; ಇಂತಹ ವಿದ್ಯಮಾನ ನಮ್ಮ ಬದುಕಿನ ಎಲ್ಲಾ ಸಂಗತಿಗಳ ವಿಚಾರಕ್ಕೂ ಅನ್ವಯಿಸುತ್ತದೆ.</p>



<p>ಇದನ್ನು ಬರಿಯ ಮಾಧ್ಯಮಗಳ ಸಮಸ್ಯೆಯೆಂದು ನೋಡಬಾರದು. ಇದು ನಮ್ಮ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ವಲಯದ ಎಲ್ಲಾ ಚಟುವಟಿಕೆಗಳು ನಗರ ಕೇಂದ್ರಿತವಾಗಿರುವುದರ ಭಾಗವಾಗಿಯೇ ನೋಡಬೇಕು. ನಮ್ಮ ಎಲ್ಲಾ ಚಟುವಟಿಕೆಗಳು ನಗರ ಕೇಂದ್ರಿತವಾಗಿ ಇರುವುದರಿಂದಲೇ, ಪ್ರಕೃತಿಯಲ್ಲಿರುವ ಎಲ್ಲಾ ಸಂಪತ್ತಿನ ಸಿಂಹಪಾಲನ್ನು ನಗರಗಳೇ ಕಬಳಿಸುತ್ತವೆ.&nbsp; ಅದರಿಂದಾಗಿಯೇ ಪ್ರಕೃತಿಯ ನಿರಂತರ ಶೋಷಣೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದು, ಅದರಿಂದ ಉಂಟಾದ ಮತ್ತು ಆಗುತ್ತಿರುವ ಪ್ರಾಕೃತಿಕ ಅಸಮತೋಲನ ಹಾಗೂ ವಿನಾಶಗಳಿಗೂ ಮತ್ತು ಇಂದಿನ ಮಾನವ ಪ್ರಾಣಿ ಸಂಘರ್ಷಕ್ಕೂ ನೇರವಾದ ಸಂಬಂಧವಿದೆ.</p>



<p>ಈ ಎಲ್ಲ ಸಂಗತಿಗಳ ಹಿನ್ನೆಲೆಯಲ್ಲಿ ಮಾನವ ಪ್ರಾಣಿ ಸಂಘರ್ಷವನ್ನು ನೋಡಬೇಕು.</p>



<p>ಈ ಬರಹಗಳಲ್ಲಿ ಆನೆ&nbsp; ಮತ್ತು ಮನುಷ್ಯನ ನಡುವಿನ ಸಮಸ್ಯೆಗಳನ್ನು ಪ್ರಮುಖವಾಗಿ ಇಟ್ಟುಕೊಂಡಿದ್ದರೂ ಬೇರೆ ಎಲ್ಲಾ ಪ್ರಾಣಿಗಳಿಗೂ ಬಂದಿರುವ ಆಪತ್ತಿಗೂ&nbsp; ಮನುಷ್ಯನೇ ಕಾರಣ ಎನ್ನುವುದನ್ನು ಇದರೊಂದಿಗೆ ನಾವು ಗಮನಿಸಬೇಕು.</p>



<p><strong>ದಶಕಗಳ ಹಿಂದೆ</strong></p>



<p>ಸುಮಾರು ಐದು ದಶಕಗಳ ಹಿಂದೆ, ನಮ್ಮಂತವರು ಶಾಲಾ ಬಾಲಕರಾಗಿದ್ದಾಗ ವರ್ಷಕ್ಕೋ ಎರಡು ವರ್ಷಗಳಿಗೋ ಒಮ್ಮೆ ತೋಟಕ್ಕೆ ಆನೆ ಬಂದ ಸುದ್ದಿಯಾಗುತ್ತಿತ್ತು.&nbsp; ಸಾಮಾನ್ಯವಾಗಿ ಆನೆಯನ್ನು ಯಾರೂ ನೋಡಿರುತ್ತಿರಲಿಲ್ಲ. ತೋಟದಲ್ಲಿ ಮುರಿದಿರುವ ಒಂದೆರಡು ಬೈನೆ ಅಥವಾ ಬಾಳೆ, ಗದ್ದೆಯಲ್ಲಿ ಆನೆಯ ಹೆಜ್ಜೆಗುರುತುಗಳು ಮಾತ್ರ ಕಾಣಸಿಗುತ್ತಿದ್ದವು. ರಾತ್ರಿ ಬೇಕಾದ್ದನ್ನು ತಿಂದು ಹಗಲು ಹೊತ್ತಿನಲ್ಲಿ ಆನೆ ತನ್ನ ವಿಶ್ರಾಂತಿ ಸ್ಥಳವನ್ನು ತಲಪಿರುತ್ತಿತ್ತು. ಇಲ್ಲವೇ ಮುಂದೆ ಎಲ್ಲಿಗೋ ಹೋಗಿರುತ್ತಿತ್ತು.</p>



<p>ಮಾರನೆಯ ದಿನ&nbsp; ಊರಲ್ಲೆಲ್ಲ&nbsp; ತೋಟಗಳಿಗೆ ಆನೆ ಬಂದಿರುವ ಸುದ್ದಿಯಾಗುವುದು. ಯಾರ ಯಾರ ತೋಟಕ್ಕೆ ಬಂದಿದೆ? ಏನೇನು ತಿಂದಿದೆ? ಎಷ್ಟು ಆನೆಗಳಿವೆ ? ಅವುಗಳ ಹೆಜ್ಜೆಯ ಗಾತ್ರವೇನು? ಅದು ಎಷ್ಟು ಎತ್ತರ ಇರಬಹುದು ಇತ್ಯಾದಿ ತರ್ಕ, ಪುರಾವೆಗಳಿಂದ ಹಿಡಿದು ಆನೆಯನ್ನು ನೋಡದಿದ್ದರೂ ಕಣ್ಣಾರೆ ನೋಡಿದಂತೆ ವರ್ಣಿಸುವ ಸುದ್ದಿ ವೀರರು ಹುಟ್ಟಿಕೊಳ್ಳುತ್ತಿದ್ದರು. ನಾನೇ ನೋಡಿದೆ ಆನೆ ಎರಡಾಳು ಎತ್ತರವಿತ್ತು ಎನ್ನುವವರೂ ಇದ್ದರು. ಆನೆಯ ಬಗ್ಗೆ, ಆನೆಯ ಶಕ್ತಿಯ ಬಗ್ಗೆ ಉತ್ಪ್ರೇಕ್ಷಿತ ಕತೆಗಳು ಹುಟ್ಟಿಕೊಳ್ಳುತ್ತಿದ್ದವು.</p>



<p>ತಮ್ಮ ತೋಟಗಳಿಗೆ ಆನೆ ಬಂದಿದೆ ಎನ್ನುವುದೇ ರೈತರಿಗೆ ಒಂದು ವಿಶೇಷವಾದ ಖುಷಿಯ ಸಂಗತಿಯಾಗುತ್ತಿತ್ತು. ಇದಕ್ಕೆ ಕಾರಣಗಳಿವೆ.</p>



<p>ಆನೆ ಗಣಪತಿಯ ಪ್ರತಿರೂಪ ಎನ್ನುವ ಧಾರ್ಮಿಕ ಕಾರಣ ಒಂದೆಡೆಯಾದರೆ, ಆನೆ ಮೆಟ್ಟಿದ ನೆಲ ಬಹಳ ಫಲವತ್ತಾದುದು ಎನ್ನುವ ನಂಬಿಕೆ ರೈತರಲ್ಲಿ ವ್ಯಾಪಕವಾಗಿತ್ತು. ತಮ್ಮ ತೋಟಕ್ಕೇ ಆನೆ ಬಾರದಿದ್ದರೂ “ನಮ್ ತೋಟದಲ್ಲೂ ಒಂದು ಬೈನೆ ಮುರಿದಿತ್ತು” ಎಂದು ಹೇಳಿಕೊಳ್ಳುವವರೂ ಇರುತ್ತಿದ್ದರು. ಆನೆ ಬೈನೆ ಮುರಿದ ಜಾಗದಲ್ಲಿ ಕೆಲವು ಸಲ ಆನೆಯ ಬಾಲದ ತುದಿಯ ರೋಮ ಮುರಿದ ಬೈನೆಯ ಸಿಬರಿಗೆ ಸಿಕ್ಕಿಕೊಂಡಿದ್ದು ಅದು ರೈತರಿಗೋ ಕಾರ್ಮಿಕರಿಗೋ ಸಿಗುವುದು. ಅದು ಬಹಳ ಅದೃಷ್ಟದ ಸಂಗತಿ, ಅದನ್ನು ಕೆಲವರು ಉಂಗುರ ಮಾಡಿ ಬೆರಳಲ್ಲಿ ಧರಿಸುವರು, ಆನೆಯ ರೋಮ ಧರಿಸಿದರೆ ಸಂಪತ್ತು ಹೆಚ್ಚುತ್ತದೆ, ಗಂಡಸರಲ್ಲಿ&nbsp; ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಮುಂತಾದ ನಾನಾ ವೈದ್ಯಕೀಯ ಮತ್ತು ಮಾಂತ್ರಿಕ ಗುಣಗಳು ಆರೋಪಿಸಲ್ಪಟ್ಟಿವೆ. ಅವು ಯಾವುವೂ ನಿಜವಲ್ಲ.</p>



<p>ಆನೆಗಳು ಯಾವಾಗಲೂ ಸಂಚರಿಸುವ ಆನೆದಾರಿಗಳು ಅದಕ್ಕೆ ಮಾತ್ರವಲ್ಲ ಆನೆಗಳೊಂದಿಗೆ ಅದರ ಹಿಂದಿನಿಂದ ಬರುವ ಅನೇಕ ಪ್ರಾಣಿಗಳಿಗೆ ಆಹಾರ ನೀಡುವ ಸ್ಥಳಗಳಾಗಿದ್ದು ಸಹಜವಾಗಿಯೇ ಫಲವತ್ತತೆಯನ್ನು ಹೊಂದಿರುವ ತಾಣಗಳಾಗಿರುತ್ತವೆ. ಆನೆ ತೋಟಕ್ಕೆ ಬಂದು ಹೋದ ಮರುದಿನ ಸಾಮಾನ್ಯವಾಗಿ ಆ ತೋಟದ ಮಾಲೀಕರ ಮನೆಯ ಹಿರಿಯರಿಂದ ಆನೆಯ ಹೆಜ್ಜೆಗೆ ಹಣ್ಣುಕಾಯಿ ಅರ್ಪಿಸಿ, ಊದುಕಡ್ಡಿ ಹಚ್ಚಿ, ಆರತಿ ಬೆಳಗುವ ಕಾರ್ಯಕ್ರಮ ನಡೆಯುವುದು. ಮಕ್ಕಳಿಗೆ ಚರುಪು ಸಿಗುವುದು. ಎಪ್ಪತ್ತರ ದಶಕದಲ್ಲೂ ಈ ವಿದ್ಯಮಾನವನ್ನು ನಾವು ಮಲೆನಾಡಿನಲ್ಲಿ ಕಾಣಬಹುದಿತ್ತು.</p>



<figure class="wp-block-image size-full"><img decoding="async" width="991" height="510" src="https://peepalmedia.com/wp-content/uploads/2023/01/IMG-20230120-WA0030.jpg" alt="" class="wp-image-19175" srcset="https://peepalmedia.com/wp-content/uploads/2023/01/IMG-20230120-WA0030.jpg 991w, https://peepalmedia.com/wp-content/uploads/2023/01/IMG-20230120-WA0030-300x154.jpg 300w, https://peepalmedia.com/wp-content/uploads/2023/01/IMG-20230120-WA0030-768x395.jpg 768w, https://peepalmedia.com/wp-content/uploads/2023/01/IMG-20230120-WA0030-150x77.jpg 150w, https://peepalmedia.com/wp-content/uploads/2023/01/IMG-20230120-WA0030-696x358.jpg 696w" sizes="(max-width: 991px) 100vw, 991px" /></figure>



<p>ಇಂದಿಗೂ ಆನೆಗಳಿಂದ ಇಷ್ಟೊಂದು ಜನರು ಸಾವಿಗೀಡಾದ ನಂತರವೂ ರೈತರಿಗೆ ಆನೆಗಳ ಬಗ್ಗೆ ಭಯವಿದ್ದರೂ ವಿಶೇಷವಾದ ಪ್ರೀತಿಯೂ ಇದೆ. ಟಿಂಬರ್ ಎಳೆಯುವ ಆನೆಗಳು ಬಂದಾಗಲೂ, ಆನೆ ಮನೆ ಬಾಗಿಲಿಗೆ ಬಂದರೆ ಒಂದು ತೆಂಗಿನ ಕಾಯಿ, ಎರಡಚ್ಚು&nbsp; ಬೆಲ್ಲ, ಇದ್ದರೆ ಬಾಳೆಗೊನೆಯನ್ನು ತಿನ್ನಲು ಕೊಡುವರು. ಇತ್ತೀಚಿನ ವರ್ಷಗಳಲ್ಲಿ ಟಿಂಬರ್ ಎಳೆಯಲು ಮತ್ತು ಲಾರಿಗೆ ತುಂಬಿಸುವ ಕೆಲಸವನ್ನು ಯಂತ್ರಗಳು ಮಾಡುತ್ತಿವೆ. ಕೆಲಸಗಳಿಗಾಗಿ ಆನೆ ಸಾಕಿದ ಹಲವರು ಆ ಆನೆಗಳನ್ನೂ ಕಾಡಿಗೆ ಬಿಟ್ಟಿದ್ದಾರೆ. ಕೆಲವು ಸಲ ಕಾಡಾನೆಗಳ ಜೊತೆ ಅವೂ ನಾಡಿಗೆ ಬರುತ್ತವೆ.</p>



<p>ರೈತರಿಗೆ ಆನೆಗಳ ಬಗ್ಗೆ ಇರುವಂತಹ ಈ&nbsp; ಭಾವನಾತ್ಮಕ ಸಂಬಂಧವನ್ನು ಇತರ ಕಾಡು ಪ್ರಾಣಿಗಳ ಜೊತೆ ನಾವು ಅಷ್ಟಾಗಿ ಕಾಣಲಾರೆವು.</p>



<p><strong>ಪ್ರಸಾದ್‌ ರಕ್ಷಿದಿ</strong></p>



<p>ರಂಗಕರ್ಮಿ, ಪರಿಸರ ಲೇಖಕ,</p>
]]></content:encoded>
					
		
		
			</item>
		<item>
		<title>ಸಕಲೇಶಪುರ ದುರಂತ: ಕಾಡಾನೆ ಸಮಸ್ಯೆಗೆ ಪ್ರತಿಕ್ರಿಯಿಸಿದ ಸಿಎಮ್‌</title>
		<link>https://peepalmedia.com/sakaleshpur-tragedy-cm-promised-a-permanent-solution-to-the-forest-problem/</link>
		
		<dc:creator><![CDATA[Peepal Media]]></dc:creator>
		<pubDate>Wed, 02 Nov 2022 08:11:56 +0000</pubDate>
				<category><![CDATA[ರಾಜ್ಯ]]></category>
		<category><![CDATA[deaths by elephants]]></category>
		<category><![CDATA[hassan]]></category>
		<category><![CDATA[hebbana halli]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[manu]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[sakaleshapura]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=13688</guid>

					<description><![CDATA[ಸಕಲೇಶಪುರ: ನಿನ್ನೆ ಸಕಲೇಶಪುರದ ಹೆಬ್ಬನ ಹಳ್ಳಿಯ ಮನು ಎನ್ನುವ 32 ವರ್ಷದ ಯುವಕ ಹತ್ತಿರ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಪೂಜೆಗೆಂದು ಬೆಳಗಿನ ಜಾವ ತೆರಳಿದ್ದಾಗ ಆನೆ ತುಳಿತಕ್ಕೊಳಗಾಗಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಅಲ್ಲಿನ ಜನರು ಶವವನ್ನು ಎದುರಿಗಿಟ್ಟುಕೊಂಡು ಪ್ರತಿಭಟನೆಯಲ್ಲಿ ತೊಡಗಿಕೊಂಡಿದ್ದರು. ಸಿಎಮ್‌ ಈ ಕುರಿತು ಸ್ಥಳಕ್ಕೆ ಬಂದು ಪ್ರತಿಕ್ರಿಯೆ ನೀಡುವ ತನಕ ತಾವು ಸ್ಥಳದಿಂದ ಕದಲುವ ಪ್ರಶ್ನೆಯೇ ಇಲ್ಲ ಎಂದು ಪಟ್ಟು ಹಿಡಿದಿದ್ದ ಜನರನ್ನು ಸಮಾಧಾನಗೊಳಿಸುವ ಪ್ರಯತ್ನವಾಗಿ, ಮಾಜಿ ಶಾಸಕ ಎಚ್‌ ಎಮ್‌ ವಿಶ್ವನಾಥ್‌ ಅವರೊಡನೆ ಮುಖ್ಯಮಂತ್ರಿಯವರು [&#8230;]]]></description>
										<content:encoded><![CDATA[
<p>ಸಕಲೇಶಪುರ: ನಿನ್ನೆ ಸಕಲೇಶಪುರದ ಹೆಬ್ಬನ ಹಳ್ಳಿಯ ಮನು ಎನ್ನುವ 32 ವರ್ಷದ ಯುವಕ ಹತ್ತಿರ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಪೂಜೆಗೆಂದು ಬೆಳಗಿನ ಜಾವ ತೆರಳಿದ್ದಾಗ ಆನೆ ತುಳಿತಕ್ಕೊಳಗಾಗಿ <a href="https://peepalmedia.com/hassan-forestwild-attack-youth-killed/">ಮೃತಪಟ್ಟಿದ್ದರು</a>. ಈ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಅಲ್ಲಿನ ಜನರು ಶವವನ್ನು ಎದುರಿಗಿಟ್ಟುಕೊಂಡು ಪ್ರತಿಭಟನೆಯಲ್ಲಿ ತೊಡಗಿಕೊಂಡಿದ್ದರು. ಸಿಎಮ್‌ ಈ ಕುರಿತು ಸ್ಥಳಕ್ಕೆ ಬಂದು ಪ್ರತಿಕ್ರಿಯೆ ನೀಡುವ ತನಕ ತಾವು ಸ್ಥಳದಿಂದ ಕದಲುವ ಪ್ರಶ್ನೆಯೇ ಇಲ್ಲ ಎಂದು ಪಟ್ಟು ಹಿಡಿದಿದ್ದ ಜನರನ್ನು ಸಮಾಧಾನಗೊಳಿಸುವ ಪ್ರಯತ್ನವಾಗಿ, ಮಾಜಿ ಶಾಸಕ ಎಚ್‌ ಎಮ್‌ ವಿಶ್ವನಾಥ್‌ ಅವರೊಡನೆ ಮುಖ್ಯಮಂತ್ರಿಯವರು ಫೋನ್‌ ಮೂಲಕ ಸಂಪರ್ಕಕ್ಕೆ ಬಂದಿದ್ದರು.</p>



<p>ವಿಶ್ವನಾಥ ಅವರೊಡನೆ ಮಾತನಾಡುತ್ತಾ ಮುಖ್ಯಮಂತ್ರಿ ಬೊಮ್ಮಾಯಿಯವರು, &#8220;ನಾನು ಈ ಕುರಿತು [ಕಾಡಾನೆ ಸಮಸ್ಯೆ ಪರಿಹಾರಕ್ಕಾಗಿ] ಬಜೆಟ್ಟಿನಲ್ಲಿ ನೂರು ಕೋಟಿ ಎತ್ತಿಟ್ಟಿದ್ದೇನೆ. ಅಲ್ಲದೆ ಇಂತಹ ಘಟನೆಗಳಲ್ಲಿ ಮೃತಪಟ್ಟವರಿಗೆ ಪರಿಹಾರ ಮೊತ್ತವನ್ನು ಸಹ ಹೆಚ್ಚಿಸಿದ್ದೇನೆ,&#8221; ಎಂದ ಅವರು ಹಣವೇ ಮುಖ್ಯವಲ್ಲವೆನ್ನುವುದು ನಿಜವಲ್ಲವಾದರೂ ಇದು ನನಗೆ ಆ ಜನರ ಕುರಿತು ಇರುವ ಕಾಳಜಿಯನ್ನು ತೋರಿಸುತ್ತದೆ ಎಂದು ಹೇಳಿದರು. </p>



<p>ಎಚ್‌ ಎಮ್‌ ವಿಶ್ವನಾಥ ಅವರು ಮುಖ್ಯಮಂತ್ರಿಯವರೊಡನೆ ಹಂಚಿಕೊಂಡ ಮಾಹಿತಿಯ ಪ್ರಕಾರ ಜನರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳದಿಂದ ಕೇವಲ ಐನೂರು ಮೀಟರ್‌ ದೂರದಲ್ಲಿ 30 ಆನೆಗಳಿದ್ದವು. ಒಟ್ಟಾರೆ ಈ ವಲಯದಲ್ಲಿ ಜನ ವಸತಿ ಪ್ರದೇಶದಲ್ಲೇ ಸುಮಾರು 100-120 ಆನೆಗಳಿರುವುದಾಗಿ ಹೇಳಿದ್ದಾರೆ. ಅಲ್ಲದೆ ಇಲ್ಲಿರುವ ಜನರೆಲ್ಲ ಸಣ್ಣ-ಪುಟ್ಟ ರೈತರಾಗಿದ್ದು ಈ ಪ್ರದೇಶದಲ್ಲಿ ಇದುವರೆಗೆ ಸುಮಾರು 77 ಜನರು ಸತ್ತಿದ್ದು, ವಾರ-ಹದಿನೈದು ದಿನಗಳಿಗೊಮ್ಮೆ ಜನರು ಸಾಯುತ್ತಿದ್ದಾರೆ ಎಂದು ಅತಂಕದಿಂದ ಹೇಳಿಕೊಂಡರು.</p>



<p>ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಇನ್ನೆರಡು ದಿನಗಳಲ್ಲಿ ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಜನರ ಅಹವಾಲುಗಳನ್ನು ಆಲಿಸಿ ನಂತರ ಅದಕ್ಕೆ ಸಂಬಂಧಿಸಿದಂತೆ ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ದೊಡ್ಡ ಪ್ರಮಾಣದಲ್ಲಿ ಬಂದೋಬಸ್ತ್‌ ವ್ಯವಸ್ಥೆ ಮಾಡಿ, ಫೆನ್ಸಿಂಗ್‌ ವ್ಯವಸ್ಥೆ ಮಾಡಿಸುವುದಾಗಿ ಹೇಳಿದರು.</p>



<p>ಸ್ಥಳಕ್ಕೆ ಸಚಿವ ಗೋಪಾಲಯ್ಯ ಅವರನ್ನು ರಾತ್ರಿಯ ಒಳಗೆ ಕಳುಹಿಸುವುದಾಗಿ ತಿಳಿಸಿದರಾದರೂ ಜನರು ಮುಖ್ಯಮಂತ್ರಿಯವರು ಇಲ್ಲಿಗೆ ಬರಬೇಕೆಂದು ಪಟ್ಟುಹಿಡಿದು ಕುಳಿತಿದ್ದರು. ನಂತರ ಜನರೊಡನೆ ಫೋನ್‌ ಮೂಲಕ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿಯವರು, &#8220;ನಿಮ್ಮ ಮನೆಯಲ್ಲಿ ಸಂಭವಿಸಿರುವ ನಮ್ಮ ಮನೆಯದೂ ಹೌದು, ಈ ಕುರಿತು ನಾನು ಎಲ್ಲ ಕ್ರಮಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಲಿದ್ದೇವೆ. ನಾವು ನಿಮ್ಮೊಡನಿದ್ದೇವೆ,&#8221; ಎಂದು ಭರವಸೆ ನೀಡಿದರು. </p>



<p>ಆದರೆ ಜನರು ಸಚಿವರು ಸ್ಥಳಕ್ಕೆ ಬಾರದೆ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದರು. ಸ್ಥಳೀಯ ಶಾಸಕ ಎಚ್‌ ಕೆ ಕುಮಾರಸ್ವಾಮಿ ಮತ್ತು ಮಾಜಿ ಶಾಸಕರು, ಜಿಲ್ಲಾಧಿಕಾರಿ, ಎಸ್ ಪಿ, ಎಲ್ಲಾ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿದ್ದು ಪ್ರತಿಭಟನಕಾರರ ಮನವೊಲಿಸಲು ಮಾಡಿದ ಪ್ರಯತ್ನಗಳು ಫಲ ನೀಡದೆ ಹೋದವು.</p>


<div class="wp-block-image">
<figure class="aligncenter size-full is-resized"><img decoding="async" src="https://peepalmedia.com/wp-content/uploads/2022/11/gOpalayya.jpg" alt="" class="wp-image-13704" width="576" height="573" srcset="https://peepalmedia.com/wp-content/uploads/2022/11/gOpalayya.jpg 720w, https://peepalmedia.com/wp-content/uploads/2022/11/gOpalayya-300x298.jpg 300w, https://peepalmedia.com/wp-content/uploads/2022/11/gOpalayya-150x150.jpg 150w, https://peepalmedia.com/wp-content/uploads/2022/11/gOpalayya-696x692.jpg 696w, https://peepalmedia.com/wp-content/uploads/2022/11/gOpalayya-24x24.jpg 24w, https://peepalmedia.com/wp-content/uploads/2022/11/gOpalayya-48x48.jpg 48w, https://peepalmedia.com/wp-content/uploads/2022/11/gOpalayya-96x96.jpg 96w" sizes="(max-width: 576px) 100vw, 576px" /><figcaption class="wp-element-caption">ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಗೋಪಾಲಯ್ಯ</figcaption></figure></div>


<p>ನಂತರದ ಬೆಳವಣಿಗೆಯಲ್ಲಿ ನಿನ್ನೆ ತಡರಾತ್ರಿ ಸ್ಥಳಕ್ಕೆ ಸಚಿವ ಗೋಪಾಲಯ್ಯ ಅವರು ಭೇಟಿ ನೀಡಿ, ಮೃತ ಪಟ್ಟ ಮನುವಿನ ಮನೆಯವರಿಗೆ 15 ಲಕ್ಷ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೆ ಒಂದು ವಾರದಲ್ಲಿ ಆನೆಗಳ ಸ್ಥಳ ಬದಲಾವಣೆಗೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.</p>



<p>ಒಬ್ಬರ ನಂತರ ಒಬ್ಬರಂತೆ ತಮ್ಮ ಊರಿನ ಜನರನ್ನು, ಸಂಬಂಧಿಕರನ್ನು ಕಳೆದುಕೊಳ್ಳುತ್ತಿರುವ ಈ ಪ್ರದೇಶದ ಜನರ ಸಮಸ್ಯೆಗೆ ಒಂದು ಶಾಶ್ವತ ಪರಿಹಾರ ದೊರೆತು ಆನೆಗಳು ಮತ್ತು ಜನರು ನೆಮ್ಮದಿಯಿಂದ ಬದುಕುವಂತಹ ವಾತಾವರಣ ನಿರ್ಮಾಣವಾಗಲಿಯೆನ್ನುವುದು ಪೀಪಲ್‌ ಮೀಡಿಯಾದ ಕಾಳಜಿಯಾಗಿದೆ.</p>



<p>ಮುಖ್ಯಮಂತ್ರಿಯವರೊಡನೆ ನಡೆದ ಮಾತುಕತೆಯ ಆಡಿಯೋ ಕ್ಲಿಪ್‌ ಕೇಳಲು ಇಲ್ಲಿ <a href="https://youtu.be/gbsRGUI3YAo">ಕ್ಲಿಕ್‌</a> ಮಾಡಿ.</p>
]]></content:encoded>
					
		
		
			</item>
		<item>
		<title>ಆನೆಗಳ ದಾಳಿಗೆ ಇಬ್ಬರ ಬಲಿ  </title>
		<link>https://peepalmedia.com/aanegala-daalige-ibbaru-bali/</link>
		
		<dc:creator><![CDATA[Peepal Media]]></dc:creator>
		<pubDate>Sun, 18 Sep 2022 08:18:59 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[aanegala daali]]></category>
		<category><![CDATA[bengalure]]></category>
		<category><![CDATA[chattiisgarh]]></category>
		<category><![CDATA[deaths by elephants]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=6031</guid>

					<description><![CDATA[ಛತ್ತೀಸ್ಗಢ : ಆನೆಗಳು ದಾಳಿ ಮಾಡಿರುವ ಕಾರಣ ಇಬ್ಬರು ಮೃತ ಪಟ್ಟಿರುವ ಘಟನೆ ಸೂರಜ್‌ಪುರದ ಪ್ರೇಮನಗರದಲ್ಲಿ ನಡೆದಿದೆ. ಸೂರಜ್‌ಪುರದ ಪ್ರೇಮ್‌ನಗರದಲ್ಲಿ ಇಂದು ಓರ್ವ ಮಹಿಳೆ ಮತ್ತು ಪುರುಷ ಮೇಲೆ ಆನೆಗಳು ದಾಳಿ ನಡೆಸಿದ್ದು ಘಟನೆಯಲ್ಲಿ ಸಿಲುಕಿದ ಇಬ್ಬರೂ ಮೃತ ಪಟ್ಟಿದ್ದಾರೆ. ವಿಷಯ ತಿಳಿದ ಅರಣ್ಯ ಸಿಬ್ಬಂದಿ ಪರಿಶೀಲನೆ ಕೈಗೊಂಡಿದ್ದಾರೆ ಎಂದು ಅಲ್ಲಿನ ವ್ಯಾಪ್ತಿಯ ಅರಣ್ಯ ರಕ್ಷಕ ರಾಮಚಂದ್ರ ಪ್ರಜಾಪತಿಯವರು ಮಾಹಿತಿ ನೀಡಿದ್ದಾರೆ. &#160;]]></description>
										<content:encoded><![CDATA[
<p class="has-medium-font-size"><strong>ಛತ್ತೀಸ್ಗಢ</strong> : ಆನೆಗಳು ದಾಳಿ ಮಾಡಿರುವ ಕಾರಣ ಇಬ್ಬರು ಮೃತ ಪಟ್ಟಿರುವ ಘಟನೆ ಸೂರಜ್‌ಪುರದ ಪ್ರೇಮನಗರದಲ್ಲಿ ನಡೆದಿದೆ.</p>



<p class="has-medium-font-size">ಸೂರಜ್‌ಪುರದ ಪ್ರೇಮ್‌ನಗರದಲ್ಲಿ ಇಂದು ಓರ್ವ ಮಹಿಳೆ ಮತ್ತು ಪುರುಷ ಮೇಲೆ ಆನೆಗಳು ದಾಳಿ ನಡೆಸಿದ್ದು ಘಟನೆಯಲ್ಲಿ ಸಿಲುಕಿದ ಇಬ್ಬರೂ ಮೃತ ಪಟ್ಟಿದ್ದಾರೆ. ವಿಷಯ ತಿಳಿದ ಅರಣ್ಯ ಸಿಬ್ಬಂದಿ ಪರಿಶೀಲನೆ ಕೈಗೊಂಡಿದ್ದಾರೆ ಎಂದು ಅಲ್ಲಿನ ವ್ಯಾಪ್ತಿಯ ಅರಣ್ಯ ರಕ್ಷಕ ರಾಮಚಂದ್ರ ಪ್ರಜಾಪತಿಯವರು ಮಾಹಿತಿ ನೀಡಿದ್ದಾರೆ. &nbsp;</p>
]]></content:encoded>
					
		
		
			</item>
	</channel>
</rss>
