<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>defraud over Rs 100 crore &#8211; Peepal Media</title>
	<atom:link href="https://peepalmedia.com/tag/defraud-over-rs-100-crore/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 29 Nov 2025 14:26:45 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>defraud over Rs 100 crore &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ರಾಜ್ಯ ರಾಜಧಾನಿಯಲ್ಲಿ ಜಿಎಸ್‌ಟಿ-ಐಟಿ ಅಧಿಕಾರಿಗಳ ದಾಳಿ, 100 ಕೋಟಿಗೂ ಅಧಿಕ ವಂಚನೆ</title>
		<link>https://peepalmedia.com/gst-it-officials-raid-state-capital-defraud-over-rs-100-crore/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Sat, 29 Nov 2025 14:26:44 +0000</pubDate>
				<category><![CDATA[ಅಪರಾಧ]]></category>
		<category><![CDATA[ಬೆಂಗಳೂರು]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ಮೀಡಿಯ]]></category>
		<category><![CDATA[ರಾಜ್ಯ]]></category>
		<category><![CDATA[defraud over Rs 100 crore]]></category>
		<category><![CDATA[GST-IT officials raid state capital]]></category>
		<category><![CDATA[news]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=69866</guid>

					<description><![CDATA[ಬೆಂಗಳೂರು :  ಆದಾಯ ತೆರಿಗೆ (Income Tax) ಹಾಗೂ ಜಿಎಸ್​ಟಿ (GST)  ಇಲಾಖೆಗಳು ಅಧಿಕಾರಿಗಳು ಬೆಂಗಳೂರಿನ (Bengaluru) ಅನೇಕ ಪ್ರದೇಶಗಳಲ್ಲಿ ದಾಳಿ ಮಾಡಿದ್ದು, ಮುಚ್ಚಿಡಲಾಗಿದ್ದ 100 ಕೋಟಿ ರೂ. ಮೌಲ್ಯದ ವಹಿವಾಟುಗಳನ್ನ ಪತ್ತೆ ಮಾಡಿದ್ದಾರೆ. ಬಯಲಾದ ತೆರಿಗೆ ವಂಚನೆ ಪ್ರಕರಣಅಧಿಕಾರಿಗಳ ದಾಳಿಯಲ್ಲಿ ಮುಚ್ಚಿಡಲಾಗಿದ್ದ ವಹಿವಾಟುಗಳು ಪತ್ತೆ ಆಗಿದ್ದು, ಅಧಿಕಾರಿಗಳ ದಾಳಿಯಿಂದ ವ್ಯಾಪಕ ತೆರಿಗೆ ವಂಚನೆ ಜಾಲ ಬೆಳಕಿಗೆ ಬಂದಿದೆ. ಮಾಹಿತಿಗಳ ಪ್ರಕಾರ, ಚಿಕ್ಕಪೇಟೆ, ಅವೆನ್ಯೂ ರಸ್ತೆ, ಬಿವಿಕೆ ರಸ್ತೆ, ಜೆಸಿ ರಸ್ತೆ, ಎಸ್‌ಪಿ ರೋಡ್ ಪ್ರದೇಶಗಳಲ್ಲಿನ ಹಲವು [&#8230;]]]></description>
										<content:encoded><![CDATA[
<p><strong>ಬೆಂಗಳೂರು :</strong>  ಆದಾಯ ತೆರಿಗೆ (Income Tax) ಹಾಗೂ ಜಿಎಸ್​ಟಿ (GST)  ಇಲಾಖೆಗಳು ಅಧಿಕಾರಿಗಳು ಬೆಂಗಳೂರಿನ (Bengaluru) ಅನೇಕ ಪ್ರದೇಶಗಳಲ್ಲಿ ದಾಳಿ ಮಾಡಿದ್ದು, ಮುಚ್ಚಿಡಲಾಗಿದ್ದ 100 ಕೋಟಿ ರೂ. ಮೌಲ್ಯದ ವಹಿವಾಟುಗಳನ್ನ ಪತ್ತೆ ಮಾಡಿದ್ದಾರೆ.</p>



<p><strong>ಬಯಲಾದ ತೆರಿಗೆ ವಂಚನೆ ಪ್ರಕರಣ<br></strong>ಅಧಿಕಾರಿಗಳ ದಾಳಿಯಲ್ಲಿ ಮುಚ್ಚಿಡಲಾಗಿದ್ದ ವಹಿವಾಟುಗಳು ಪತ್ತೆ ಆಗಿದ್ದು, ಅಧಿಕಾರಿಗಳ ದಾಳಿಯಿಂದ ವ್ಯಾಪಕ ತೆರಿಗೆ ವಂಚನೆ ಜಾಲ ಬೆಳಕಿಗೆ ಬಂದಿದೆ. ಮಾಹಿತಿಗಳ ಪ್ರಕಾರ, ಚಿಕ್ಕಪೇಟೆ, ಅವೆನ್ಯೂ ರಸ್ತೆ, ಬಿವಿಕೆ ರಸ್ತೆ, ಜೆಸಿ ರಸ್ತೆ, ಎಸ್‌ಪಿ ರೋಡ್ ಪ್ರದೇಶಗಳಲ್ಲಿನ ಹಲವು ವ್ಯಾಪಾರದ ಮಳಿಗೆಗಳ ಮೇಲೆ ದಾಳಿ ಮಾಡಿದ್ದು, ಎಲೆಕ್ಟ್ರಾನಿಕ್ಸ್, ವಾಹನ ಬಿಡಿಭಾಗಗಳು, ಗಿಫ್ಟ್ ಐಟಂಗಳು, ಡ್ರೈ ಫ್ರೂಟ್ಸ್‌ ಸೇರಿದಂತೆ ವಿವಿಧ ಸಾಮಗ್ರಿಗಳ ಖರೀದಿ–ಮಾರಾಟದಲ್ಲಿ ತೆರಿಗೆ ವಂಚನೆ ಆಗಿರುವುದನ್ನ ವಶಕ್ಕೆ ಪಡೆಯಲಾಗಿದೆ.</p>



<p><strong>ಏನೆಲ್ಲಾ ಅಕ್ರಮಗಳು ಪತ್ತೆ ಆಗಿದೆ?<br></strong>ಈ ದಾಳಿಯಲ್ಲಿ ಖರೀದಿ ಬಿಲ್‌ಗಳಿಗಿಂತ ಜಾಸ್ತಿ ಸರಕಿನ ಬಿಲ್‌ ಸಿಕ್ಕಿದೆ. ಇದಲ್ಲದೇ ತೆರಿಗೆ ಇಲ್ಲದೇ ಸರಕು ಖರೀದಿ ಮಾಡುವುದು ಸಹ ಪತ್ತೆ ಆಗಿದೆ. ಹಾಗೆಯೇ, ಬಿಲ್‌ ಕೊಡಲೇ ವಸ್ತುಗಳನ್ನ ಮಾರಾಟ ಮಾಡುವುದು ಜೊತೆಗೆ ಕಬ್ಬಿಣ, ಉಕ್ಕು, ಹಾರ್ಡ್‌ವೇರ್, ಸಿಮೆಂಟ್ ವ್ಯಾಪಾರಿಗಳು ತೆರಿಗೆಯಿಂದ ತಪ್ಪಿಸಿಕೊಳ್ಳಲು ನಕಲಿ ಬಿಲ್‌ ಕೊಟ್ಟಿರುವುದು ಸಹ ಸಿಕ್ಕಿ ಬಿದ್ದಿದೆ. 40 ಲಕ್ಷಕ್ಕಿಂತ ಜಾಸ್ತಿ ವಹಿವಾಟು ಇದ್ದರೂ ಸಹ ಜಿಎಸ್‌ಟಿ ನೋಂದಣಿ ಮಾಡದೇ ವ್ಯಾಪಾರ ಮಾಡುತ್ತಿದ್ದಾರೆ. ಇನ್ನು ಈ ಸಮಯದಲ್ಲಿ ಯಾವುದೇ ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 1 ಸಾವಿರ ಚೀಲ ಗುಟ್ಕಾ ಮತ್ತು ಪಾನ್ ಮಸಾಲಾ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಹಾಗೆಯೇ, ಬಿಲ್‌ ಇಲ್ಲದೇ ಸಾಗಾಟ ಮಾಡುತ್ತಿದ್ದ ಕಬ್ಬಿಣದ ಸ್ಕ್ರ್ಯಾಪ್ ಸಾಗಿಸುತ್ತಿದ್ದ 75 ವಾಹನಗಳನ್ನ ಸಹ ವಶಕ್ಕೆ ಪಡೆಯಲಾಗಿದೆ.</p>



<p><strong>100 ಕೋಟಿಗೂ ಹೆಚ್ಚು ತೆರಿಗೆ ವಂಚನೆ</strong></p>



<p>ಇನ್ನು ಕಳೆದ 15 ದಿನಗಳಲ್ಲಿ ಬೆಂಗಳೂರಿನಲ್ಲಿ ಐಟಿ ಹಾಗೂ ಜಿಎಸ್​ಟಿ ಅಧಿಕಾರಿಗಳು&nbsp; ಕಾರ್ಯಾಚರಣೆ ಮಾಡಿದ್ದು, 500ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದ್ದು, 100 ಕೋಟಿಗೂ ಹೆಚ್ಚು ತೆರಿಗೆ ವಂಚನೆ ಆಗಿರುವುದನ್ನ ಪತ್ತೆ ಮಾಡಿದೆ.</p>



<p><strong>ಕರ್ನಾಟಕದಲ್ಲಿ 5 ಪಟ್ಟು ಹೆಚ್ಚಾದ ತೆರಿಗೆ ವಂಚನೆ</strong></p>



<p>2024-25ರಲ್ಲಿ ಕರ್ನಾಟಕದಲ್ಲಿ ಸರಕು ಮತ್ತು ಸೇವಾ ತೆರಿಗೆ ವಂಚನೆಯಲ್ಲಿ ಐದು ಪಟ್ಟು ಏರಿಕೆಯಾಗಿದೆ ಎಂದು ಕೇಂದ್ರ ಜಿಎಸ್‌ಟಿ ಅಧಿಕಾರಿಗಳು ಪತ್ತೆ ಮಾಡಿದ್ದರು. ಈ ವಿಚಾರವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಲೋಕಸಭೆಯಲ್ಲಿ ಲಿಖಿತ ರೂಪದಲ್ಲಿ ಅಂಕಿಅಂಶಗಳನ್ನು ಹಂಚಿಕೊಂಡಿದ್ದು, ಮೂರು ವರ್ಷಗಳಲ್ಲಿ ಅತಿ ಹೆಚ್ಚು ಅಂದರೆ 39,577 ಕೋಟಿಗೆ ತಲುಪಿದೆ ಎಂದು ಹೇಳಿದ್ದಾರೆ. 2025ನೇ ಹಣಕಾಸು ವರ್ಷದಲ್ಲಿ ದಾಖಲಾಗಿದ್ದ 1,254 ಪ್ರಕರಣಗಳಲ್ಲಿ, ಸಿಜಿಎಸ್‌ಟಿ ಅಧಿಕಾರಿಗಳು ಒಂಬತ್ತು ಜನರನ್ನು ಬಂಧಿಸಿ, ಸ್ವಯಂಪ್ರೇರಿತ ತೆರಿಗೆ ಪಾವತಿಗಳ ಮೂಲಕ 1,623 ಕೋಟಿ ರೂ.ಗಳನ್ನು ಸಂಗ್ರಹಿಸಿದ್ದಾರೆ ಎನ್ನಲಾಗಿದೆ.</p>



<p></p>
]]></content:encoded>
					
		
		
			</item>
	</channel>
</rss>
