<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>democracy &#8211; Peepal Media</title>
	<atom:link href="https://peepalmedia.com/tag/democracy/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 06 Mar 2025 16:05:19 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>democracy &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಪ್ರಜಾಪ್ರಭುತ್ವದ ಆಶಯಗಳನ್ನು ಪೋಷಿಸುವ ಜಾಗದಲ್ಲಿಯೇ ಸಮಾನತೆ ಇಲ್ಲವಾಗಿದೆ-ಪೂಜಾ ಸಿಂಗೆ</title>
		<link>https://peepalmedia.com/equality-is-lacking-in-the-very-place-that-fosters-the-ideals-of-democracy/</link>
		
		<dc:creator><![CDATA[Peepal Media]]></dc:creator>
		<pubDate>Mon, 03 Mar 2025 12:41:38 +0000</pubDate>
				<category><![CDATA[ವಿಶೇಷ]]></category>
		<category><![CDATA[ಹೆಣ್ಣೋಟ]]></category>
		<category><![CDATA[democracy]]></category>
		<category><![CDATA[Equality]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Woman&#039;s right]]></category>
		<category><![CDATA[women empowerment]]></category>
		<guid isPermaLink="false">https://peepalmedia.com/?p=54691</guid>

					<description><![CDATA[‘ಶತಮಾನಗಳಿಂದ ಜಾತಿಯಿಂದ, ಹೆಣ್ಣು ಎಂಬ ಕಾರಣದಿಂದ ಇವತ್ತಿನವರೆಗೂ ಅವಳು ದ್ವಿತೀಯ ದರ್ಜೆಯ ಪ್ರಜೆಯೆ ಹೊರತು ಈ ಸಮಾಜದಲ್ಲಿ ಮಹಿಳೆಯು ಪ್ರಮುಖಳಾಗಿ ಕಾಣಿಸಿಕೊಳ್ಳುವುದೇ ಇಲ್ಲ’ ನಾಯಕತ್ವ ಪದದಲ್ಲಿ ನಾಯಕ‌ ಮಾತ್ರವಿದ್ದು,&#160; ನಾಯಕಿ ಕಾಣೆಯಾಗಿದ್ದಾಳೆ. ಆದರೂ, ಹೆಣ್ಣೊಬ್ಬಳ ಕಾಳಜಿ ನಾಯಕತ್ವದಲ್ಲಿಯೇ ಉಳಿದಿದೆ. ಪಿತೃಪ್ರಧಾನವಾದ ಸಮಾಜದಲ್ಲಿ ಹೆಣ್ಣು ಗಂಡಿನ ನಡುವೆ ಲಿಂಗ ತಾರತಮ್ಯ ಯತಾವತ್ತಾಗಿ ಪಾಲಿಸುವ ವ್ಯವಸ್ಥೆ ಜಾರಿಯಲ್ಲಿದೆ ಎಂಬುದಕ್ಕೆ ವಿಧಾನ ಸೌಧದ ಆವರಣದಲ್ಲಿ ಫೆಬ್ರುವರಿ 28 ರ ಮಧ್ಯಾಹ್ನ ಏರ್ಪಡಿಸಿದ್ದ, &#8216;ನಾಯಕತ್ವ ಇಂದು ಮತ್ತು ನಾಳೆʼ ಅನ್ನುವ ವಿಚಾರ ಸಂಕಿರಣದಲ್ಲಿ [&#8230;]]]></description>
										<content:encoded><![CDATA[
<p><strong><em><mark style="background-color:rgba(0, 0, 0, 0)" class="has-inline-color has-vivid-cyan-blue-color">‘ಶತಮಾನಗಳಿಂದ ಜಾತಿಯಿಂದ, ಹೆಣ್ಣು ಎಂಬ ಕಾರಣದಿಂದ ಇವತ್ತಿನವರೆಗೂ ಅವಳು ದ್ವಿತೀಯ ದರ್ಜೆಯ ಪ್ರಜೆಯೆ ಹೊರತು ಈ ಸಮಾಜದಲ್ಲಿ ಮಹಿಳೆಯು ಪ್ರಮುಖಳಾಗಿ ಕಾಣಿಸಿಕೊಳ್ಳುವುದೇ ಇಲ್ಲ’</mark></em></strong></p>



<p>ನಾಯಕತ್ವ ಪದದಲ್ಲಿ ನಾಯಕ‌ ಮಾತ್ರವಿದ್ದು,&nbsp; ನಾಯಕಿ ಕಾಣೆಯಾಗಿದ್ದಾಳೆ. ಆದರೂ, ಹೆಣ್ಣೊಬ್ಬಳ ಕಾಳಜಿ ನಾಯಕತ್ವದಲ್ಲಿಯೇ ಉಳಿದಿದೆ. ಪಿತೃಪ್ರಧಾನವಾದ ಸಮಾಜದಲ್ಲಿ ಹೆಣ್ಣು ಗಂಡಿನ ನಡುವೆ ಲಿಂಗ ತಾರತಮ್ಯ ಯತಾವತ್ತಾಗಿ ಪಾಲಿಸುವ ವ್ಯವಸ್ಥೆ ಜಾರಿಯಲ್ಲಿದೆ ಎಂಬುದಕ್ಕೆ ವಿಧಾನ ಸೌಧದ ಆವರಣದಲ್ಲಿ ಫೆಬ್ರುವರಿ 28 ರ ಮಧ್ಯಾಹ್ನ ಏರ್ಪಡಿಸಿದ್ದ, &#8216;ನಾಯಕತ್ವ ಇಂದು ಮತ್ತು ನಾಳೆʼ ಅನ್ನುವ ವಿಚಾರ ಸಂಕಿರಣದಲ್ಲಿ ಸಾಬೀತಾಗಿದ್ದೇ ಶೋಚನೀಯ.&nbsp;</p>



<p>ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸುನಿತಾ ವಿಲಿಯಮ್ಸ್, ಕಲ್ಪನಾ ಚಾವ್ಲಾ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ, ಚೆನ್ನ ಭೈರಾದೇವಿ, ಬೆಳವಾಡಿ ಮಲ್ಲಮ್ಮ, ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಇಂದಿನ ರಾಷ್ಟ್ರಾಧ್ಯಕ್ಷೆ ದ್ರೌಪದಿ ಮುರ್ಮು, ಮಮತಾ ಬ್ಯಾನರ್ಜಿ, ಪಿ. ಟಿ. ಉಷಾ, ಪಿ.ವಿ. ಸಿಂಧು, ಮಾಯಾವತಿ ಹೀಗೆ ಅನೇಕ ನಾಯಕಿರಿಯರಿದ್ದರೂ ಸಹ ವೇದಿಕೆಯ ಮೇಲಿದ್ದ ಸಂಪನ್ಮೂಲ ನಾಯಕರ ನಾಲಿಗೆ ಮೇಲೆ ಮಹಿಳಾ ಮಣಿಯರ ಮುಂದಾಳತ್ವದ ಬಗ್ಗೆ ತಪ್ಪಿಯೂ ಹೊರಳಲೇ ಇಲ್ಲ.</p>



<p>ಈ ಗೋಷ್ಠಿಯುದ್ದಕ್ಕೂ, ಪುರುಷರಿಂದ-ಪುರುಷರಿಗಾಗಿ, ಪುರುಷರೇ ನಡೆಸಿದ ಮಾತಿನ ಚಾವಡಿಯಂತೆ ಕಾಣಿಸಿತು. ಪಕ್ಕದಲ್ಲಿಯೇ ಉತ್ಸವಮೂರ್ತಿಯಂತೆ ಮಹಿಳೆಯೊಬ್ಬರು ಕುಳಿತುಕೊಂಡಿದ್ದರು. ಇಡೀ ಗೋಷ್ಠಿ ಬರೀ ಪುರುಷ ನಾಯಕತ್ವದ ಬಗ್ಗೆಯೇ. &#8216;ನಾಯಕನಾದವನಿಗೆ ಸ್ವಾಭಿಮಾನವಿರಬೇಕು, ಸ್ವಾರ್ಥವಿರಬಾರದು, ಎದೆ ಗುಂದಬಾರದು, ಸಮಾಜದ ಮೇಲೆ ಕಳಕಳಿ ಇರಬೇಕು&#8217; ಎನ್ನುವುದರ ಮೂಲಕ ಕುವೆಂಪು, ಕೊಲಂಬಸ್, ಗಾಂಧಿ, ನಂಜುಂಡಸ್ವಾಮಿ ಹೀಗೆ ಪುರುಷರದ್ದೇ ಉದಾಹರಣೆಗಳು ನೀಡಿದ್ದು ಬೇಸರ ತರಿಸಿತು.&nbsp;</p>



<p>ಮಾತುಗಳು ಮುಗಿದ ನಂತರ ಸಂವಾದ ಏರ್ಪಡಿಸಿದ್ದರು, ಮಹಿಳಾ ನಾಯಕಿಯರ ಪರವಾಗಿ ಮಾತನಾಡುವರು ಯಾರು ಇಲ್ಲವೆಂಬ ಪ್ರಶ್ನೆಗೆ ಥಟ್ಟಂತ ಉತ್ತರ ಬಂದಿದ್ದು, ಇಷ್ಟೆಲ್ಲ ಅಚ್ಚಕಟ್ಟಾಗಿ ಕಾರ್ಯಕ್ರಮ ನಿರ್ವಹಿಸುತ್ತಿರುವವರು ಮಹಿಳೆಯರೆ ಅವರೆ ನಿಮ್ಮ ಮಾತಿಗೆ ಉತ್ತರಿಸುತ್ತಾರೆ ಎಂದು ಮೈಕ್ ಅವರಿಗೆ ಕೊಟ್ಟರು. ಅವರು ಬೇರೇನೊ ಉತ್ತರ ನೀಡುವವರು ಎಂಬ ನಿರೀಕ್ಷೆ ಇತ್ತು. ಆದರೆ, ಹುಸಿಯಾಯಿತು.</p>



<p>&#8216;ನಾಯಕತ್ವ ಎನ್ನುವ ಪದದಲ್ಲಿಯೇ ನಾಯಕಿ ಇದ್ದಾಳೆ. ನೀವು ಬೇರೆ ಬೇರೆಯಾಗಿ ನೋಡ್ತಾ ಇದಿರಾ. ಗಂಡು &#8211; ಹೆಣ್ಣು ಸಮಾನರು ಆದರೆ, ಇವತ್ತಿನ ಶಾಲಾ, ಕಾಲೇಜುಗಳಲ್ಲಿ ಜಂಡರ್ ಬಗ್ಗೆ ತಪ್ಪಾಗಿ ಅರ್ಥೈಸುತ್ತಿದ್ದಾರೆ. ನನ್ನ ಅನುಭವದಲ್ಲಿ ಹೇಳಬೇಕೆಂದರೆ ಯಾವುದೇ ಅಸಮಾನತೆ ಇಲ್ಲ&#8217; ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಯವರ ಮಾತು ತುಂಬ ಚಿಂತೆಗೀಡು ಮಾಡಿತು. ಬೇರೆ ಕಡೆಗಳೆಲ್ಲ ಕಾರ್ಯಕ್ರಮಗಳಲ್ಲಿ ಮಹಿಳೆಯರು ಕಾಣಿಸುವುದೇ ಇಲ್ಲ. </p>



<p>ಆದರೆ, ಅವರಿಗೆಲ್ಲ ಅದು ಗಂಭೀರದ ವಿಷಯವೇ ಅಲ್ಲ. ಅಷ್ಟು ನಿರ್ಲಕ್ಷ್ಯಕ್ಕೊಳಗಾಗಿದ್ದಾಳೆ. ಆದರೆ, ವಿಧಾನಸೌಧ ಎಂಬುದು ಸಮಾನತೆಯ ಜಾಗ, ಇಲ್ಲಿ ಮಹಿಳಾ ನಾಯಕಿಯರೂ ಇದ್ದಾರೆ. ಪ್ರಜಾಪ್ರಭುತ್ವದ ಆಶಯಗಳನ್ನು ಪೋಷಿಸುವ ಜಾಗದಲ್ಲಿಯೇ ಮಹಿಳಾ ಮುಂದಾಳತ್ವದ ಕುರಿತು ಮಾತನಾಡಲು ಪ್ರತಿನಿಧಿಯಾಗಿ ಯಾರು ಇರಲ್ಲಿಲ್ಲ.&nbsp;</p>



<p>ಕಾರ್ಯಕ್ರಮಕ್ಕೆ ಬರುವ ಮುಂಚಿತವಾಗಿ, ಆಮಂತ್ರಣ ಪತ್ರಿಕೆ ನೋಡಿದ ಮೇಲಾದರು ಸಂಪನ್ಮೂಲ ವ್ಯಕ್ತಿಗಳಲ್ಲಿ ಸಣ್ಣ ಪ್ರಶ್ನೆ ಮೂಡಬೇಕಾಗಿತ್ತು. ಮಹಿಳೆಯರ ಪ್ರಾತಿನಿಧ್ಯವಿಲ್ಲದ ಕಾರ್ಯಕ್ರಮಕ್ಕೆ ನಾವು ಹೋಗುವುದರ ಕುರಿತು ಯೋಚಿಸಬೇಕಿತ್ತು.&nbsp;</p>



<p>ಈ ಸಮಾಜ ಎಷ್ಟು ಟ್ರೈನ್ ಮಾಡಿದೆ ಎಂದರೆ ಹೆಣ್ಣೊಬ್ಬಳು ತನ್ನ ವಿರುದ್ಧವಾಗಿ ತಾನೇ ಮಾತಾಡಿಕೊಂಡರು ಅದು ತಪ್ಪು ಅಂತ ಕಾಣಿಸುವುದಿಲ್ಲ. ಯಾಕೆಂದರೆ, ಬೆಟ್ಟದ ಮೇಲೆ ನಿಂತು ಕೆಳಗಡೆ ನೋಡಿದಾಗ ಕಾಣುವುದು ಸಪಾಟಾಗಿಯೇ; ಬೆಟ್ಟದ ಕೆಳಗಿಳಿದು ಬಂದು ನೋಡಿದಾಗ ಇಲ್ಲಿರುವ ಅಸಮಾನತೆ ಕಾಣುತ್ತೆ. </p>



<p>ಆದರೂ, ಶತಮಾನಗಳಿಂದ ಜಾತಿಯಿಂದ, ಹೆಣ್ಣು ಎಂಬ ಕಾರಣದಿಂದ ಇವತ್ತಿನವರೆಗೂ ಅವಳು ದ್ವಿತೀಯ ದರ್ಜೆಯ ಪ್ರಜೆಯೆ ಹೊರತು ಈ ಸಮಾಜದಲ್ಲಿ ಮಹಿಳೆಯು ಪ್ರಮುಖಳಾಗಿ ಕಾಣಿಸಿಕೊಳ್ಳುವುದೇ ಇಲ್ಲ.&nbsp;</p>



<p>ಬಹುತೇಕ ಮಹಿಳೆಯರು ಕೇವಲ ಪ್ರಾರ್ಥನಾ ಗೀತೆ, ಸ್ವಾಗತ ಗೀತೆ, ನಿರೂಪಣೆ, ಬೊಕ್ಕೆ ಕೊಡುವುದು ಇಂತಹವುಗಳಲ್ಲೇ ತೃಪ್ತಿಪಟ್ಟುಕೊಳ್ಳುತ್ತಿದ್ದಾರೆ. ಆದರೆ, ವೇದಿಕೆಗಳ ಮೇಲೆ ಕಾಣಿಸಿಕೊಳ್ಳುವುದು ವಿರಳ. ಒಂದು ವೇಳೆ ಕಾಣಿಸಿಕೊಂಡರೂ ಉತ್ಸವ ಮೂರ್ತಿಗಳಾಗಿರುತ್ತಾರೆ.</p>



<p><strong>ಪೂಜಾ ಸಿಂಗೆ, ಕಲಬುರಗಿ<br></strong></p>



<p></p>
]]></content:encoded>
					
		
		
			</item>
		<item>
		<title>ಸಂವಿಧಾನ ಬದಲಾಯಿಸುತ್ತೇವೆ ಎಂದ ಬಿಜೆಪಿಯನ್ನೇ ಜನ ಬದಲಾಯಿಸಿದರು: ಡಿಸಿಎಂ ಡಿ.ಕೆ.ಶಿವಕುಮಾರ್</title>
		<link>https://peepalmedia.com/people-changed-the-bjp-which-said-it-would-change-the-constitution-d-k-shivakumar/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 26 Nov 2024 09:45:55 +0000</pubDate>
				<category><![CDATA[ರಾಜಕೀಯ]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[constitution]]></category>
		<category><![CDATA[constitution day]]></category>
		<category><![CDATA[democracy]]></category>
		<category><![CDATA[dk shivakumar]]></category>
		<guid isPermaLink="false">https://peepalmedia.com/?p=49632</guid>

					<description><![CDATA[ಬೆಂಗಳೂರು, ನ.26: “ಸಂವಿಧಾನವನ್ನು ಕಿತ್ತು ಹಾಕುತ್ತೇವೆ, ಹರಿದು ಹಾಕುತ್ತೇವೆ, ಬದಲಾಯಿಸುತ್ತೇವೆ ಎಂದು ಬಿಜೆಪಿಯವರನ್ನೇ ಜನರು ಬದಲಾಯಿಸಿದರು. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿದವರೆಲ್ಲ ಮನೆಗೆ ಹೋಗಿದ್ದಾರೆ&#8221; ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ವಸಂತ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ʼಸಂವಿಧಾನ ದಿನಾಚರಣೆʼಯಲ್ಲಿ ಮಾತನಾಡಿದ ಅವರು, &#8220;ಸಂವಿಧಾನದ ಬದಲಾವಣೆ ಬಗ್ಗೆ ಮಾತನಾಡಿದ ಬಿಜೆಪಿಯವರಿಗೆ ತಿರುಗೇಟು ನೀಡಲು ರಾಹುಲ್ ಗಾಂಧಿ ಅವರು ತಮ್ಮ ಎಲ್ಲಾ ಭಾಷಣದ ವೇಳೆಯೂ ಸಂವಿಧಾನದ ಪ್ರತಿ ಹಿಡಿದು ಮಾತು ಪ್ರಾರಂಭಿಸುತ್ತಿದ್ದರು. ಇದರಿಂದ [&#8230;]]]></description>
										<content:encoded><![CDATA[
<p><strong>ಬೆಂಗಳೂರು, ನ.26: </strong>“ಸಂವಿಧಾನವನ್ನು ಕಿತ್ತು ಹಾಕುತ್ತೇವೆ, ಹರಿದು ಹಾಕುತ್ತೇವೆ, ಬದಲಾಯಿಸುತ್ತೇವೆ ಎಂದು ಬಿಜೆಪಿಯವರನ್ನೇ ಜನರು ಬದಲಾಯಿಸಿದರು. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿದವರೆಲ್ಲ ಮನೆಗೆ ಹೋಗಿದ್ದಾರೆ&#8221; ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.</p>



<p>ನಗರದ ವಸಂತ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ʼಸಂವಿಧಾನ ದಿನಾಚರಣೆʼಯಲ್ಲಿ ಮಾತನಾಡಿದ ಅವರು, &#8220;ಸಂವಿಧಾನದ ಬದಲಾವಣೆ ಬಗ್ಗೆ ಮಾತನಾಡಿದ ಬಿಜೆಪಿಯವರಿಗೆ ತಿರುಗೇಟು ನೀಡಲು ರಾಹುಲ್ ಗಾಂಧಿ ಅವರು ತಮ್ಮ ಎಲ್ಲಾ ಭಾಷಣದ ವೇಳೆಯೂ ಸಂವಿಧಾನದ ಪ್ರತಿ ಹಿಡಿದು ಮಾತು ಪ್ರಾರಂಭಿಸುತ್ತಿದ್ದರು. ಇದರಿಂದ ಪ್ರಧಾನ ಮಂತ್ರಿಗಳು ಸಂವಿಧಾನ ಪ್ರತಿಗೆ ನಮಸ್ಕರಿಸಿ ಪ್ರಮಾಣ ವಚನ ತೆಗೆದುಕೊಳ್ಳುವಂತಹ ಸಂದರ್ಭ ಸೃಷ್ಟಿಯಾಯಿತು. ನಮ್ಮ ಇಂಡಿಯಾ ಒಕ್ಕೂಟದ ಸಂಸದರು ಸಂವಿಧಾನದ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ್ದು ಇತಿಹಾಸ” ಎಂದರು.</p>



<p><strong>ಇತಿಹಾಸದಿಂದ ಪಾಠ ಕಲಿತು ಪ್ರತಿಯೊಬ್ಬರು ಸಾಕ್ಷಿಗುಡ್ಡೆಗಳನ್ನು ನಿರ್ಮಾಣ ಮಾಡಬೇಕು</strong></p>



<p>“ಹೋರಾಟ ಮಾಡದೇ ಇದ್ದರೂ ಪರವಾಗಿಲ್ಲ ಮಾರಾಟ ಮಾತ್ರ ಆಗಬೇಡ ಎನ್ನುವ ಕಿವಿಮಾತನ್ನು ರಾಜಕಾರಣಿಗಳಿಗೆ ಅಂಬೇಡ್ಕರ್ ಅವರು ಹೇಳಿದ್ದಾರೆ. ನಾವುಗಳು ಇತಿಹಾಸದಿಂದ ಪಾಠ ಕಲಿಯದೇ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ. ಆದ ಕಾರಣ ಪ್ರತಿಯೊಬ್ಬರು ಇತಿಹಾಸದಿಂದ ಪಾಠ ಕಲಿಯಬೇಕು ಎನ್ನುವ ಸಂದೇಶವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ್ದಾರೆ” ಎಂದು ಹೇಳಿದರು.</p>



<p>“ಅನೇಕ ರಾಜ್ಯಗಳಲ್ಲಿ ಜನರಿಂದ ಆಯ್ಕೆಯಾದ ಶಾಸಕರು ಮಾರಾಟವಾಗಿರುವ ನಿದರ್ಶನಗಳನ್ನು ನೋಡಿದ್ದೇವೆ. ಇದು ನಮ್ಮೆಲ್ಲರ ಬದುಕಿಗೂ ಸಂಬಂಧ ಪಡುತ್ತದೆ ಎನ್ನುವ ಕಿವಿಮಾತನ್ನು ನಮಗೆ ಅಂಬೇಡ್ಕರ್ ಅವರು ಬಿಟ್ಟು ಹೋಗಿದ್ದಾರೆ” ಎಂದರು.</p>



<p>“ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ಧರ್ಮ ಗ್ರಂಥಗಳನ್ನು ಆಯಾಯ ಧರ್ಮದವರು ಪವಿತ್ರ ಎಂದು ಹೇಳುತ್ತಾರೆ. ಇಡೀ ಭಾರತಕ್ಕೆ ಸಂವಿಧಾನವೇ ಪವಿತ್ರ ಗ್ರಂಥ. ಇದು ನಮ್ಮೆಲ್ಲರನ್ನು ರಕ್ಷಣೆ ಮಾಡುತ್ತಿದೆ” ಎಂದು ಹೇಳಿದರು.</p>



<p><strong>ನಮ್ಮ ರಾಜಕೀಯ ಆಯಸ್ಸು ಇನ್ನು 10- 15 ವರ್ಷ</strong></p>



<p>“ನಮ್ಮ ರಾಜಕೀಯ ಆಯಸ್ಸು ಇನ್ನು 10- 15 ವರ್ಷ. ವಿದ್ಯಾರ್ಥಿಗಳು ಮುಂದಿನ 60- 70 ವರ್ಷಗಳ ಕಾಲ ಈ ದೇಶವನ್ನು ಮುನ್ನಡೆಸುವವರು. ಅವರಿಗೆ ಸಂವಿಧಾನದ ಬಗ್ಗೆ ಅಡಿಪಾಯ ಹಾಕಬೇಕು ಎನ್ನುವ ಕಾರಣಕ್ಕೆ ಜಾಗೃತಿ ಮೂಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಅಮೆರಿಕಾದ ಮಾಜಿ ಅಧ್ಯಕ್ಷರಾದ ಬರಾಕ್ ಬಬಾಮ ಅವರು ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.</p>



<p>“ಕಾಂಗ್ರೆಸ್ ಪಕ್ಷ ಈ ದೇಶದ ಚುಕ್ಕಾಣಿ ಹಿಡಿದ ಸಂದರ್ಭದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾದರು. ಅಂಬೇಡ್ಕರ್ ಅವರು ಇಡೀ ಪ್ರಪಂಚವೇ ಸ್ಮರಿಸಿಕೊಳ್ಳುವಂತಹ ಮಹಾನ್ ಗ್ರಂಥ ನಮಗೆ ನೀಡಿದ್ದಾರೆ” ಎಂದು ಹೇಳಿದರು.</p>



<p><strong>ಮಹದೇವಪ್ಪ ಅವರನ್ನು ಸಂದರ್ಶಕ ಉಪನ್ಯಾಸಕರನ್ನಾಗಿ ಕಳುಹಿಸಬೇಕು</strong></p>



<p>“ಸಚಿವರಾದ ಎಚ್.ಸಿ. ಮಹದೇವಪ್ಪ ಅವರು ಸಮಾಜ ಕಲ್ಯಾಣ ಇಲಾಖೆಗೆ ಹೊಸ ರೂಪವನ್ನು ನೀಡಿದ್ದಾರೆ. ರಾಜಕೀಯದಿಂದ ನಿವೃತ್ತಿ ಪಡೆದ ಮೇಲೆ ಮಹದೇವಪ್ಪ ಅವರನ್ನು ನಮ್ಮ ವಿಶ್ವವಿದ್ಯಾನಿಲಯಗಳಿಗೆ ಸಂದರ್ಶಕ ಉಪನ್ಯಾಸಕರನ್ನಾಗಿ ಕಳುಹಿಸಬೇಕು ಎನ್ನುವ ಅಭಿಲಾಷೆ ಅವರ ಮಾತುಗಳನ್ನು ಕೇಳಿದಾಗ ಅನ್ನಿಸಿತು” ಎಂದರು.</p>



<p>“ಗುಣಕ್ಕೆ ಮತ್ಸರವಿಲ್ಲ ಎನ್ನುವ ರೀತಿ ನಮ್ಮ ಸಂವಿಧಾನವೇ ನಮ್ಮ ಧರ್ಮ. ಈ ಚಿಕ್ಕ ಮಕ್ಕಳಿಗೂ ಅರ್ಥವಾಗುವ ರೀತಿ ಅವರು ಸಂವಿಧಾನದ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಸಂವಿಧಾನ ಪೀಠಿಕೆಯನ್ನು ಶಾಲಾ, ಕಾಲೇಜುಗಳಲ್ಲಿ ಪಠಿಸಬೇಕು ಎನ್ನುವ ಹೊಸ ಆಚರಣೆಗೆ ನಾಂದಿ ಹಾಡಿದವರು. ಇದಕ್ಕಾಗಿ ಅವರಿಗೆ ಅಭಿನಂದನೆ ತಿಳಿಸುತ್ತೇನೆ” ಎಂದರು.</p>



<p></p>
]]></content:encoded>
					
		
		
			</item>
		<item>
		<title>ಭಾರತೀಯ ಪ್ರಜಾಪ್ರಭುತ್ವದ ಸಾವನ್ನು ನೋಡುತ್ತಿದ್ದೇವೆ: ರಾಹುಲ್ ಗಾಂಧಿ</title>
		<link>https://peepalmedia.com/bharateeya-prajaprabhutvada-saavannu/</link>
		
		<dc:creator><![CDATA[Peepal Media]]></dc:creator>
		<pubDate>Fri, 05 Aug 2022 06:03:31 +0000</pubDate>
				<category><![CDATA[ದೇಶ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[congress]]></category>
		<category><![CDATA[democracy]]></category>
		<category><![CDATA[ED]]></category>
		<category><![CDATA[EnforcementDirectorate]]></category>
		<category><![CDATA[GDP]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[protest]]></category>
		<category><![CDATA[rahulgandhi]]></category>
		<category><![CDATA[SoniaGandhi]]></category>
		<guid isPermaLink="false">https://peepalmedia.com/?p=555</guid>

					<description><![CDATA[ನವದೆಹಲಿ: ಪ್ರತಿಪಕ್ಷ ನಾಯಕರ ವಿರುದ್ಧ ಎಲ್ಲ ಕೇಂದ್ರೀಯ ಸಂಸ್ಥೆಗಳನ್ನು ನರೇಂದ್ರ ಮೋದಿ ಸರಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ ರೀತಿಯು ಭಾರತದಲ್ಲಿ ಆರಂಭಗೊಂಡಿರುವ ಸರ್ವಾಧಿಕಾರದ ಯುಗವನ್ನು ತೋರಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏಳು ದಶಕಗಳಲ್ಲಿ ಹಂತಹಂತವಾಗಿ ಕಾಂಗ್ರೆಸ್ ಪಕ್ಷವು ಕಟ್ಟಿದ ಪ್ರಜಾಪ್ರಭುತ್ವದ ಸ್ಥಂಭವನ್ನು ಕೇವಲ ಐದು ವರ್ಷಗಳಲ್ಲಿ ನಾಶಪಡಿಸಲಾಗಿದೆ. ನಾವು ಈಗ ಭಾರತೀಯ ಪ್ರಜಾಪ್ರಭುತ್ವದ ಸಾವನ್ನು ನೋಡುತ್ತಿದ್ದೇವೆ. ಈ ಸರ್ಕಾರದ ಏಕೈಕ ಅಜೆಂಡಾ ಜನರ ಸಮಸ್ಯೆಗಳನ್ನು [&#8230;]]]></description>
										<content:encoded><![CDATA[
<pre class="wp-block-preformatted has-medium-font-size"><strong>ನವದೆಹಲಿ:</strong> ಪ್ರತಿಪಕ್ಷ ನಾಯಕರ ವಿರುದ್ಧ ಎಲ್ಲ ಕೇಂದ್ರೀಯ ಸಂಸ್ಥೆಗಳನ್ನು ನರೇಂದ್ರ ಮೋದಿ ಸರಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ ರೀತಿಯು ಭಾರತದಲ್ಲಿ ಆರಂಭಗೊಂಡಿರುವ ಸರ್ವಾಧಿಕಾರದ ಯುಗವನ್ನು ತೋರಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏಳು ದಶಕಗಳಲ್ಲಿ ಹಂತಹಂತವಾಗಿ ಕಾಂಗ್ರೆಸ್ ಪಕ್ಷವು ಕಟ್ಟಿದ ಪ್ರಜಾಪ್ರಭುತ್ವದ ಸ್ಥಂಭವನ್ನು ಕೇವಲ ಐದು ವರ್ಷಗಳಲ್ಲಿ ನಾಶಪಡಿಸಲಾಗಿದೆ. ನಾವು ಈಗ ಭಾರತೀಯ ಪ್ರಜಾಪ್ರಭುತ್ವದ ಸಾವನ್ನು ನೋಡುತ್ತಿದ್ದೇವೆ. ಈ ಸರ್ಕಾರದ ಏಕೈಕ ಅಜೆಂಡಾ ಜನರ ಸಮಸ್ಯೆಗಳನ್ನು ನಿರ್ಲಕ್ಷಿಸುವುದಾಗಿದೆ ಎಂದು ವಾಗ್ದಾಳಿ ನಡೆಸಿದರು.

ಏರುತ್ತಿರುವ ಬೆಲೆಗಳು, ನಿರುದ್ಯೋಗ ಮತ್ತು ಸರಕು ಮತ್ತು ಸೇವಾ ತೆರಿಗೆ ಅಥವಾ ಜಿಎಸ್ಟಿ ದರ ಏರಿಕೆ ವಿರುದ್ಧ ಕಾಂಗ್ರೆಸ್ ಇಂದು ಪ್ರತಿಭಟನೆ ಹಮ್ಮಿಕೊಂಡಿದೆ. ಪಕ್ಷದ ನಾಯಕರು ದೆಹಲಿಯ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ನಡೆಸಲು ಯೋಜಿಸಿದ್ದಾರೆ, ಅದೇ ರೀತಿ ಕಾಂಗ್ರೆಸ್‌ನ ರಾಜ್ಯ ಘಟಕಗಳು ದೇಶಾದ್ಯಂತ ಇದೇ ರೀತಿಯ ಪ್ರತಿಭಟನೆಗಳನ್ನು ನಡೆಸಲಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಂಡಿತ್ತು.

ಈ ಸರ್ಕಾರದ ವಿರುದ್ಧ ಮಾತನಾಡುವ ಯಾರಾದರೂ ಕೆಟ್ಟದಾಗಿ ದಾಳಿ ಮಾಡುತ್ತಾರೆ. ಜೈಲಿಗೆ ಹಾಕುತ್ತಾರೆ. ಜನರ ಸಮಸ್ಯೆಗಳನ್ನು ಎತ್ತಲು ಬಿಡುತ್ತಿಲ್ಲ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಇಂದು ಭಾರತದಲ್ಲಿ ಪ್ರಜಾಪ್ರಭುತ್ವವಿಲ್ಲ, ನಾಲ್ಕು ಜನರ ಸರ್ವಾಧಿಕಾರವಿದೆ ಎಂದು ಕಿಡಿಕಾರಿದರಲ್ಲದೆ, ಉಭಯ ಸದನಗಳ ಸ್ಪೀಕರ್‌ಗಳು ವಿರೋಧಪಕ್ಷದ ಧ್ವನಿಯನ್ನು ಹತ್ತಿಕ್ಕುತ್ತಿರುವುದು ವಿಷಾಧನೀಯ ಎಂದರು.

ರಾಹುಲ್ ಗಾಂಧಿ ಮತ್ತು ಅವರ ತಾಯಿ ಮತ್ತು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪಗಳನ್ನು ಎದುರಿಸುತ್ತಿದ್ದಾರೆ. ಜೂನ್‌ನಲ್ಲಿ ಆಪಾದಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಐದು ದಿನಗಳ ಕಾಲ ಸುಮಾರು 50 ಗಂಟೆಗಳ ಕಾಲ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ಪ್ರಶ್ನಿಸಿತ್ತು, ನಂತರ ಸೋನಿಯಾ ಗಾಂಧಿಯವರನ್ನೂ ಸಹ ವಿಚಾರಣೆಗೆ ಒಳಪಡಿಸಲಾಗಿತ್ತು.</pre>
]]></content:encoded>
					
		
		
			</item>
	</channel>
</rss>
