<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>devegowada &#8211; Peepal Media</title>
	<atom:link href="https://peepalmedia.com/tag/devegowada/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 07 Dec 2024 18:42:20 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>devegowada &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ನಮ್ಮ ನಾಯಕರನ್ನು ನಿಂದಿಸಲು ಮಾಡಿದ ಸಮಾವೇಶ: ಜಂಠಿ ಪತ್ರಿಕಾಗೋಷ್ಠಿಯಲ್ಲಿ ಹೆಚ್.ಕೆ. ಕುಮಾರಸ್ವಾಮಿ ಆಕ್ರೋಶ</title>
		<link>https://peepalmedia.com/convention-made-to-vilify-our-leaders-hk-at-janthi-press-conference-kumaraswamy-outraged/</link>
		
		<dc:creator><![CDATA[ರಮೇಶ್‌ ಹಾಸನ್‌]]></dc:creator>
		<pubDate>Sat, 07 Dec 2024 18:42:20 +0000</pubDate>
				<category><![CDATA[ರಾಜಕೀಯ]]></category>
		<category><![CDATA[ಹಾಸನ]]></category>
		<category><![CDATA[#Kumaraswamy #JDS #ramanagara #mysore #kodagu #kannadaexpress9 #prathapsimha #Simha #SaRaMahesh #GTDevegowda #DeveGowda #HDK H D Kumaraswamy]]></category>
		<category><![CDATA[devegowada]]></category>
		<category><![CDATA[dk shivakuma]]></category>
		<category><![CDATA[hdkumaraswamy]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=50401</guid>

					<description><![CDATA[ಹಾಸನ: ಕಳೆದ ಎರಡು ದಿನಗಳ ಹಿಂದೆ ಹಾಸನದಲ್ಲಿ ನಡೆದ ಸಮಾವೇಶವು ಸ್ವಾಭಿಮಾನಿ ಸಮಾವೇಶವು ಅಲ್ಲ, ಜನ ಕಲ್ಯಾಣ ಸಮಾವೇಶವು ಅಲ್ಲ ಅದೊಂದು ಸ್ವಾರ್ಥ ಸಮಾವೇಶ. ಕೇವಲ ನಮ್ಮ ಜೆಡಿಎಸ್ ನಾಯಕರನ್ನು ನಿಂದಿಸಲು ಮಾಡಿದ ಸಮಾವೇಶವಾಗಿದ್ದು, ಅವರಿಗೆ ಸ್ವಲ್ಪವಾದರು ಮಾನ ಮರ್ಯಾದೆ ಬೇಡವೆ? ಎಂದು ಮಾಜಿ ಸಚಿವ ಹೆಚ್.ಕೆ. ಕುಮಾರಸ್ವಾಮಿ ಆಕ್ರೋಶವ್ಯಕ್ತಪಡಿಸಿದರು. ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕೈ ನಾಯಕರಿಗೆ ಜೆಡಿಎಸ್ ತಿರುಗೇಟು ನೀಡಿದರು.. ಕೇವಲ ನಮ್ಮ ನಾಯಕರನ್ನು ನಿಂದಿಸಲು ಮಾಡಿದ ಸಮಾವೇಶವಾಗಿದ್ದು, ಅವರು ಜಿಲ್ಲೆಗೆ ರಾಜ್ಯಕ್ಕೆ ಕೊಟ್ಟ [&#8230;]]]></description>
										<content:encoded><![CDATA[
<p>ಹಾಸನ: ಕಳೆದ ಎರಡು ದಿನಗಳ ಹಿಂದೆ ಹಾಸನದಲ್ಲಿ ನಡೆದ ಸಮಾವೇಶವು ಸ್ವಾಭಿಮಾನಿ ಸಮಾವೇಶವು ಅಲ್ಲ, ಜನ ಕಲ್ಯಾಣ ಸಮಾವೇಶವು ಅಲ್ಲ ಅದೊಂದು ಸ್ವಾರ್ಥ ಸಮಾವೇಶ. ಕೇವಲ ನಮ್ಮ ಜೆಡಿಎಸ್ ನಾಯಕರನ್ನು ನಿಂದಿಸಲು ಮಾಡಿದ ಸಮಾವೇಶವಾಗಿದ್ದು, ಅವರಿಗೆ ಸ್ವಲ್ಪವಾದರು ಮಾನ ಮರ್ಯಾದೆ ಬೇಡವೆ? ಎಂದು ಮಾಜಿ ಸಚಿವ ಹೆಚ್.ಕೆ. ಕುಮಾರಸ್ವಾಮಿ ಆಕ್ರೋಶವ್ಯಕ್ತಪಡಿಸಿದರು.</p>



<p>ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕೈ ನಾಯಕರಿಗೆ ಜೆಡಿಎಸ್ ತಿರುಗೇಟು ನೀಡಿದರು.. ಕೇವಲ ನಮ್ಮ ನಾಯಕರನ್ನು ನಿಂದಿಸಲು ಮಾಡಿದ ಸಮಾವೇಶವಾಗಿದ್ದು, ಅವರು ಜಿಲ್ಲೆಗೆ ರಾಜ್ಯಕ್ಕೆ ಕೊಟ್ಟ ಕೊಡುಗೆ ಏನೆಂದು ಹೇಳಬೇಕಿತ್ತು. ರಾಜ್ಯದಲ್ಲಿ ಎಷ್ಟೆಲ್ಲಾ ಸಮಸ್ಯೆ ಇದ್ದರೂ ಆ ಬಗ್ಗೆ ಒಂದೆ ಒಂದು ಮಾತನಾಡಿಲ್ಲ. ಅವರಿಗೆ ಸ್ವಲ್ಪವಾದರು ಮಾನ ಮರ್ಯಾದೆ ಬೇಡವೆ? <strong>ಹಾಸನದಲ್ಲಿ ಮಹಿಳೆಯರಿಗೆ ಅನ್ಯಾಯ ಆಗಿದೆ ಅಂತಾರೆ. ಬಾಣಂತಿಯರ ಸಾವು ಆಗಿರುವುದು ಇದು ಯಾರಿಗೆ ಅನ್ಯಾಯ? ಮಹಿಳೆಯರು ಮಕ್ಕಳಿಗೆ ಮಾಡಿದ ಅನ್ಯಾಯ ಅಲ್ಲವೇ. ಎಲ್ಲಾ ಇಲಾಖೆ ಆಡಳಿತ ಇಲ್ಲಾ ಸರ್ಕಾರ ಸತ್ತು ಹೋಗಿದೆ. </strong>ಈ ಸಮಾವೇಶ ಅಕ್ಷ್ಯಮ್ಯ ಎಂದು ವಾಗ್ದಾಳಿ ನಡೆಸಿದರು. ಉಪ ಚುನಾವಣೆ ಫಲಿತಾಂಶ ಆಡಳಿತ ಪಕ್ಷದ ಪರ ಬರೋದು ಸಾಮಾನ್ಯ. ವಾಲ್ಮೀಕಿ ನಿಗಮದಲ್ಲಿ ಹಗರಣ ಆಗಿರುವ ಬಗ್ಗೆ ಸಿಎಂ ಅವರೇ ಹಗರಣ ಒಪ್ಪಿಕೊಂಡಿದ್ದಾರೆ. ಓರ್ವ ಅದಿಕಾರಿ ಆತ್ಮಹತ್ಯೆ ಮಾಡಿಕೊಂಡಿದಾರೆ. ಇದೆಲ್ಲದರ ಬಗ್ಗೆ ನಿಮ್ಮ ಕ್ರಮ ಆಗಿಲ್ಲ. ಜನ ಕುರುಡರಿಲ್ಲ, ೨೫ ವರ್ಷದಿಂದ ಇರೋ ಪಕ್ಷವನ್ನು ಕಿತ್ತೊಗೆಯೊದಾಗಿ ಹೇಳ್ತಾರೆ. ಅವರು ಆರು ಜಿಲ್ಲೆಯಿಂದ ಅಷ್ಟು ಜನ ಸೇರಿಸಿದಾರೆ. ನಾವು ಒಂದೇ ಜಿಲ್ಲೆಯಿಂದ ಅಷ್ಟು ಜನ ಸೇರಿಸ್ತೀವಿ. ಲೋಕಸಭಾ ಅದಿವೇಶನ ಮುಗಿಯಲಿ. ನಮ್ಮ ಕುಮಾರಸ್ವಾಮಿ ಬರ್ತಾರೆ ನಾವೂ ರಾಜಕೀಯ ಸಮಾವೇಶ ಮಾಡ್ತೇವೆ ಎಂದು ತಿರುಗೇಟು ನೀಡಿದರು. ಇದೆಲ್ಲ ಬಿಡಿ ಇನ್ನು ಮುಂದಾದರು ಕೆಲಸ ಮಾಡಿ ಎಂದು ಸಲಹೆ ನೀಡಿದರು. ಸುಳ್ಳು ಆಪಾದನೆ ಬಿಡಲಿ, ನಮ್ಮ ನಾಯಕರನ್ನ ನಿಂದಿಸಿರುವುದರ ವಿರುಧ್ಧ ಹೋರಾಟ ಮಾಡ್ತೇವೆ ಎಂದು ಎಚ್ಚರಿಸಿದರು.</p>



<p>&nbsp;&nbsp;&nbsp;&nbsp; ಶ್ರವಣಬೆಳಗೊಳ ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಸಿಎಂ ಮತ್ತು ಡಿಸಿಎಂ ಮಾತುಗಳನ್ನ ನೋಡಿದ್ರೆ ಇದು ಕೇವಲ ನಿಂದನೆಗೆ ಮಾಡಿದ ಸಮಾವೇಶವಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಆಗುತ್ತಿದೆ. ತಾವು ಮಾಡಿದ ಅಭಿವೃದ್ಧಿ ಏನೆಂದು ಹೇಳಬೇಕಿತ್ತು. ಅಭಿವೃದ್ಧಿ ಇಲ್ಲದೆ ಆಡಳಿತ ಪಕ್ಷದ ನಾಯಕರೆ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಅಸಮಾಧಾನ ಹೊರ ಹಾಕಿದವರ ಬಾಯಿ ಮುಚ್ಚಿಸೊ ಕೆಲಸ ಆಗ್ತಿದೆ. ಹಿಂದುಳಿದ ವರ್ಗಗಳಿಗೆ ನಾಮಕಾಸ್ತೆ ನಿಗಮ ಮಾಡಿದ್ದಾರೆ. ಯಾವುದೇ ನಿಮಗಳಿಂದ ಆ ಸಮುದಾಯಕ್ಕೆ ಉಪಯೋಗ ಆಗ್ತಿಲ್ಲ ಎಂದು ದೂರಿದರು.</p>



<figure class="wp-block-image size-full is-resized"><img fetchpriority="high" decoding="async" width="720" height="328" src="https://peepalmedia.com/wp-content/uploads/2024/12/a4309a66-1888-4b52-adb6-228fb16f7f06-1.jpg" alt="" class="wp-image-50403" style="width:822px;height:auto" srcset="https://peepalmedia.com/wp-content/uploads/2024/12/a4309a66-1888-4b52-adb6-228fb16f7f06-1.jpg 720w, https://peepalmedia.com/wp-content/uploads/2024/12/a4309a66-1888-4b52-adb6-228fb16f7f06-1-300x137.jpg 300w, https://peepalmedia.com/wp-content/uploads/2024/12/a4309a66-1888-4b52-adb6-228fb16f7f06-1-150x68.jpg 150w, https://peepalmedia.com/wp-content/uploads/2024/12/a4309a66-1888-4b52-adb6-228fb16f7f06-1-696x317.jpg 696w" sizes="(max-width: 720px) 100vw, 720px" /></figure>



<p><strong>ಸಮಾವೇಶದಲ್ಲಿ ದೇವೇಗೌಡರ ಬಗ್ಗೆ ಮಾತನಾಡೊ ನೈತಿಕತೆ ಕಾಂಗ್ರೆಸ್ ನಾಯಕರಿಗೆ ಇಲ್ಲ.</strong> ಈ ದೇಶಕ್ಕೆ ದೇವೇಗೌಡರಿಂದ ಅವರದೆ ಆದ ಕೊಡುಗೆ ಇದೆ. ಅವರು ಯಾವುದೆ ಸಮುದಾಯವನ್ನು ಕಡೆಗಣಿಸಿಲ್ಲ. ಎಲ್ಲಾ ಸಮುದಾಯದ ಜನರನ್ನು ಬೆಳೆಸಿದವರು ದೇವೇಗೌಡರು. ಸಾಲಾ ಮನ್ನ ಮಾಡೊ ತೀರ್ಮಾನ ಮಾಡೊ ತೀರ್ಮಾನ ಮಾಡಿದ್ದು ಕುಮಾರಸ್ವಾಮಿ. ಕುಮಾರಸ್ವಾಮಿ ಅವರು ಕೊಟ್ಟ ಯೋಜನೆಯಿಂದ ನಾವು ಮತ್ತೆ ಶಾಸಕರಾಗಿರೊದೆ ಸಾಕ್ಷಿ ಎಂದರು. ಮೆಡಿಕಲ್ ಇಂಜಿನಿಯರಿಂಗ್ ಕಾಲೇಜು, ದೇಶದ ದೊಡ್ಡ ಬಸ್ ನಿಲ್ದಾಣ, ಹೈಕೋರ್ಟ್ ಮಾದರಿಯ ಕೋರ್ಟ್ ಸಮಚ್ಚಯ. ದೇವೇಗೌಡರ ಕುಮಾರಸ್ವಾಮಿ ಅವರ ಕೆಲಸದ ಸಾಕ್ಷಿ ಗುಡ್ಡೆ ಎಲ್ಲಿದೆ ಎಂದಿದ್ದ ಡಿಸಿಎಂ ಗೆ ಜೆಡಿಎಸ್ ನಾಯಕರ ತಿರುಗೇಟು ಕೊಟ್ಟರು. ಹಾಸನ ಜಿಲ್ಲೆಯಲ್ಲಿ ನಡೆದಿರೊ ಅಭಿವೃದ್ಧಿ ಬಗ್ಗೆ ವಿವರಿಸಿ ಕಿಡಿಕಾಡಿದರು. ನಮ್ಮ ಅವದಿಯಲ್ಲಿ ಆಗಿರೊ ಕಟ್ಟಡಕ್ಕೆ ಇವರು ಸುಣ್ಣ ಬಣ್ಣ ಬಳಿಯಲು ಆಗಿಲ್ಲ. ಜಿಲ್ಲೆಯಲ್ಲಿ ನಮ್ಮ ಪಕ್ಷ ಗಟ್ಟಿಯಾಗಿದೆ. <strong>ದೇವೇಗೌಡರ ೫೫ ವರ್ಷಗಳ ರಾಜಕೀಯದಲ್ಲಿ ಹಳ್ಳಿ ಹಳ್ಳಿಯಲ್ಲಿ ಸಾಕ್ಷಿ ಗುಡ್ಡೆ ಇದೆ.</strong> ಬೇಕಿದ್ದರೆ ಬರಲಿ ತೋರಿಸೋಣ. ಆದರೆ ಅಭಿವೃದ್ಧಿ ಮಾಡಲಿ. ನಾವು ಎನ್ ಡಿ ಎ ಆಗಿ ಕೆಲಸ ಮಾಡುತ್ತಿದ್ದೇವೆ. ಉಪ ಚುನಾವಣೆಗಳು ಸಾರ್ವತ್ರಿಕ ಚುನಾವಣೆಯ ದಿಕ್ಸೂಚಿ ಅಲ್ಲ. ನಾವು ಬಿಜೆಪಿ ಅಣ್ಣ ತಮ್ಮರಂತೆ ಹೋಗ್ತಾ ಇದೀವಿ. ಮುಂದೆ ರಾಜ್ಯದಲ್ಲಿ ಜನರು ಎನ್.ಡಿ.ಎ. ಪರ ಇರ್ತಾರೆ. ಮುಂದಿನ ಬಜೆಟ್ ನಲ್ಲಿಯಾದರು ಅಭಿವೃದ್ಧಿ ಕಡೆಗೆ ಗಮನ ಹರಿಸುತ್ತಾರೊ ಗೊತ್ತಿಲ್ಲ. ಗುತ್ತಿಗೆ ದಾರರು ನೇಣುಹಾಕಿಕೊಳ್ಳೊ ಹಾಗಾಗಿದೆ. ಜಿಲ್ಲೆಯಲ್ಲಿ ನಮ್ಮ ಪಕ್ಷ ಗಟ್ಟಿಯಾಗಿದೆ. ನಮಗೆ ಯಾವುದೇ ಆತಂಕ ಇಲ್ಲ ಎಂದರು. ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್, ನಗರಸಭೆ ಅಧ್ಯಕ್ಷ ಎಂ. ಚಂದ್ರೇಗೌಡ. ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಜೆಡಿಎಸ್ ವಕ್ತಾರರಾದ ರಘು ಹೊಂಗೆರೆ ಇತರರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು</title>
		<link>https://peepalmedia.com/kidnapping-victim-case-bhavani-revanna-granted-anticipatory-bail/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 18 Jun 2024 07:09:26 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[bengalure]]></category>
		<category><![CDATA[bhavani revanna]]></category>
		<category><![CDATA[devegowada]]></category>
		<category><![CDATA[hasan]]></category>
		<category><![CDATA[hdd]]></category>
		<category><![CDATA[HDK]]></category>
		<category><![CDATA[hdrevanna]]></category>
		<category><![CDATA[jws]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[prajwalrevanna]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=40909</guid>

					<description><![CDATA[ಬೆಂಗಳೂರು: ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಮಹಿಳೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿರುವ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಈ ಆದೇಶವನ್ನು ಪ್ರಕಟಿಸಿದೆ. ‘ಮಹಿಳೆಯರ ರಕ್ಷಣೆ ವಿಚಾರದಲ್ಲಿ ಅವರನ್ನು ಅನಗತ್ಯವಾಗಿ ವಶಕ್ಕೆ ಪಡೆಯುವ ಅಗತ್ಯವಿಲ್ಲ. ಆದಾಗ್ಯೂ ಅವರನ್ನು ತನಿಖೆಗಾಗಿ ಮೈಸೂರು ಮತ್ತು ಹಾಸನ ಹಾಗೂ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಮಹಿಳೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿರುವ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ</p>



<p>‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಈ ಆದೇಶವನ್ನು ಪ್ರಕಟಿಸಿದೆ. </p>



<p>‘ಮಹಿಳೆಯರ ರಕ್ಷಣೆ ವಿಚಾರದಲ್ಲಿ ಅವರನ್ನು ಅನಗತ್ಯವಾಗಿ ವಶಕ್ಕೆ ಪಡೆಯುವ ಅಗತ್ಯವಿಲ್ಲ. ಆದಾಗ್ಯೂ ಅವರನ್ನು ತನಿಖೆಗಾಗಿ ಮೈಸೂರು ಮತ್ತು ಹಾಸನ ಹಾಗೂ ಅಗತ್ಯವಿದ್ದ ಕಡೆ ಕರೆದುಕೊಂಡು ಹೋಗಬಹುದಾಗಿದೆ. ಈಗಾಗಲೇ ಅರ್ಜಿದಾರರು ತನಿಖೆಗೆ ಸಹಕಾರ ನೀಡಿದ್ದಾರೆ. ಅವರಿಗೆ ತನಿಖೆಯ ವೇಳೆ 85 ಪ್ರಶ್ನೆಗಳನ್ನು ಕೇಳಲಾಗಿದೆ. ಅವರು ಎಲ್ಲವಕ್ಕೂ ಉತ್ತರಿಸಿದ್ದಾರೆ. ಪೊಲೀಸರು ಕೇಳಿದ ರೀತಿಯಲ್ಲೇ ಉತ್ತರಿಸಬೇಕು ಎಂದು ಹೇಳಲಾಗುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.</p>



<p><strong>ಮಾದ್ಯಮಗಳಿಗೆ ಬುದ್ಧಿ ಹೇಳಿದ ಕೋರ್ಟ್‌: </strong>ಸಾಮಾನ್ಯ ಜನರು ಮಾಧ್ಯಮಗಳನ್ನು ಗಮನಿಸಿ ಚರ್ಚೆ ನಡೆಸುತ್ತಾರೆ. ಆದರೆ, ಈ ಬಗ್ಗೆ ಯಾರೂ ನಿರ್ಧಾರ ಮಾಡುವುದಕ್ಕೆ ಸಾಧ್ಯವಿಲ್ಲ ಪತ್ರಿಕೆಗಳನ್ನು ನೋಡಿ ನಾವು ಆದೇಶ ನೀಡಲಾಗದು. ನಾಗರಿಕ ಸಮಾಜ ಸ್ವಲ್ಪ ಸಂಯಮ ಪ್ರದರ್ಶನ ಮಾಡಬೇಕು’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>



<p>‘ಸ್ತ್ರೀಯರು ಈ ರೀತಿಯ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಅಂಶಗಳಿರುವಾಗ ವಾರ್ತಾ ಪತ್ರಿಕೆಗಳು, ಎಲೆಕ್ಟ್ರಾನಿಕ್ ಮಾಧ್ಯಮಗಳು ಸಂಯಮದಿಂದ ಇರಬೇಕಾಗುತ್ತದೆ. ಈಗಲೇ ಅಪರಾಧಿ ಎಂದರೆ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆಯಾಗಲಿದೆ. ಮಾಧ್ಯಮಗಳ ವಿಚಾರಣೆ ಪರಿಗಣಿಸಲಾಗದು’ ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ನ್ಯಾಯಪೀಠ ಉಲ್ಲೇಖಿಸಿದೆ.</p>



<p>ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.</p>



<p>ಪ್ರಕರಣದ ಮೊದಲ ಆರೋಪಿ ಎಚ್‌.ಡಿ.ರೇವಣ್ಣ ಬಂಧನಕ್ಕೊಳಗಾಗಿದ್ದರು. ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದಲ್ಲಿ ಭವಾನಿ ಅವರ ಹೆಸರೂ ಕೇಳಿ ಬಂದ ಕಾರಣ ಭವಾನಿ ನಿರೀಕ್ಷಣಾ ಜಾಮೀನು ಕೋರಿದ್ದರು. ಅವರನ್ನು ಬಂಧಿಸದಂತೆ ಹೈಕೋರ್ಟ್‌ನ ಜನಪ್ರತಿನಿಧಿಗಳ ವಿಶೇಷ ನ್ಯಾಯಪೀಠ ಮಧ್ಯಂತರ ಜಾಮೀನು ನೀಡಿತ್ತು. ತನಿಖಾಧಿಕಾರಿ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ಇದೇ 7ರಂದು ಸೂಚಿಸಿತ್ತು.</p>
]]></content:encoded>
					
		
		
			</item>
		<item>
		<title>ಇಂದು ಪ್ರಜ್ವಲ್‌ ರೇವಣ್ಣನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್‌ಐಟಿ</title>
		<link>https://peepalmedia.com/sit-to-produce-prajwal-revanna-in-court-today/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 18 Jun 2024 06:44:19 +0000</pubDate>
				<category><![CDATA[ರಾಜಕೀಯ]]></category>
		<category><![CDATA[bengalure]]></category>
		<category><![CDATA[devegowada]]></category>
		<category><![CDATA[HDK]]></category>
		<category><![CDATA[hdrevanna]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Prajwal Revanna]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=40902</guid>

					<description><![CDATA[ಹಾಸನ: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಎಸ್‌ಐಟಿ ಕಸ್ಟಡಿ ಸೋಮವಾರಕ್ಕೆ ಅಂತ್ಯವಾಗಿದ್ದು, ಎಸ್‌ಐಟಿ ಅಧಿಕಾರಿಗಳು ಇಂದು ಮಂಗಳವಾರ ಮತ್ತೊಮ್ಮೆ ಪ್ರಜ್ವಲ್ ರೇವಣ್ಣ ಕೋರ್ಟ್‌ ಗೆ ಹಾಜರುಪಡಿಸಲಿದ್ದಾರೆ. ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ, ಅತ್ಯಾಚಾರ ಪ್ರಕರಣ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ. ಎಸ್ಐಟಿ ತನಿಖೆ ಮುಗಿದ ಹಿನ್ನೆಲೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ [&#8230;]]]></description>
										<content:encoded><![CDATA[
<p> ಹಾಸನ: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಎಸ್‌ಐಟಿ ಕಸ್ಟಡಿ ಸೋಮವಾರಕ್ಕೆ ಅಂತ್ಯವಾಗಿದ್ದು, ಎಸ್‌ಐಟಿ ಅಧಿಕಾರಿಗಳು ಇಂದು ಮಂಗಳವಾರ ಮತ್ತೊಮ್ಮೆ ಪ್ರಜ್ವಲ್ ರೇವಣ್ಣ ಕೋರ್ಟ್‌ ಗೆ ಹಾಜರುಪಡಿಸಲಿದ್ದಾರೆ.</p>



<p>ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ, ಅತ್ಯಾಚಾರ ಪ್ರಕರಣ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ. ಎಸ್ಐಟಿ ತನಿಖೆ ಮುಗಿದ ಹಿನ್ನೆಲೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುವುದು.</p>



<p>ಸಿಐಡಿಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ‌ದ ಹೆಚ್ಚಿನ ತನಿಖೆಗಾಗಿ ಪ್ರಜ್ವಲ್ ರೇವಣ್ಣನನ್ನು ಮತ್ತೆ ಎಸ್‌ಐಟಿ ಕಸ್ಟಡಿಗೆ ಪಡೆಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಕಸ್ಟಡಿಗೆ ಪಡೆಯಲು ಎಸ್ಐಟಿ ಕೋರ್ಟ್ ನಲ್ಲಿ ಸಿದ್ಧತೆ ನಡೆಸಿದೆ.</p>



<p>ಎರಡೆರಡು ಬಾರಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದರೂ ಪೊಲೀಸರಿಗೆ ತಲೆ ಬಿಸಿ ತಪ್ಪಿಲ್ಲ. ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಬಲ ಸಾಕ್ಷಿಗಳ ಸಂಗ್ರಹಕ್ಕೆ ಎಸ್‌ಐಟಿ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಈವರೆಗೆ ಆರೋಪಿ ವಿರುದ್ಧದ ಎರಡು ಪ್ರಕರಣಗಳ ತನಿಖೆಯನ್ನು ಅಧಿಕಾರಿಗಳು ಪೂರ್ಣಗೊಳಿಸಿದ್ದಾರೆ.</p>



<p>ಒಂದು ಪ್ರಕರಣ ಮುಗಿದ ಬೆನ್ನಲ್ಲೇ ಮತ್ತೊಂದು ಪ್ರಕರಣದ ತನಿಖೆ ನಡೆಯುತ್ತಿದೆ. ಪ್ರತಿಯೊಂದು ಪ್ರಕರಣದಲ್ಲಿ ಕಸ್ಟಡಿಗೆ ಪಡೆದು ಪ್ರತ್ಯೇಕವಾಗಿ ತನಿಖೆ ನಡೆಸಲಾಗುವುದು. ಇದೀಗ ಮತ್ತೊಂದು ಪ್ರಕರಣದಲ್ಲಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಎಸ್‌ಐಟಿ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. </p>
]]></content:encoded>
					
		
		
			</item>
	</channel>
</rss>
