<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Devendra Fadnavis &#8211; Peepal Media</title>
	<atom:link href="https://peepalmedia.com/tag/devendra-fadnavis/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 28 Jul 2023 15:44:23 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Devendra Fadnavis &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>&#8216;ಮಹಾ&#8217; ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಿಲ್ಲ ; ಅಜಿತ್ ಪವಾರ್ ತಗಾದೆ ಏನು?</title>
		<link>https://peepalmedia.com/all-is-not-well-in-the-maha-alliance/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 28 Jul 2023 15:43:41 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ajith pawar]]></category>
		<category><![CDATA[Devendra Fadnavis]]></category>
		<category><![CDATA[Ekanath Shinde]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=24550</guid>

					<description><![CDATA[ಇನ್ನೇನು ಎಲ್ಲಾ ತಿಳಿಯಾಯಿತು ಎನ್ನುವಾಗಲೇ ಮಹಾರಾಷ್ಟ್ರ ಸರ್ಕಾರದ ಬುಡ ಮತ್ತೆ ಅಲುಗಾಡಲು ಶುರುವಾಗಿದೆ. ಏಕನಾಥ್ ಶಿಂಧೆ ಬಣದ ಶಿವಸೇನೆ ಹಾಗೂ ಅಜಿತ್ ಪವಾರ್ ಬಣದ NCP ಸೇರಿ ಇತ್ತೀಚೆಗೆ ಸರ್ಕಾರ ರಚನೆಯ ಭಾಗವಾಗಿದ್ದವು. ಆದರೆ ಅಧಿಕಾರ ಹಂಚಿಕೆ ವಿಚಾರದಲ್ಲಿ ಈಗ ಮತ್ತೆ ಈ ಎರಡು ಬಣಗಳ ನಡುವೆ ಶೀತಲ ಸಮರ ಏರ್ಪಟ್ಟಿದೆ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರಕ್ಕೆ ಹೊಸದಾಗಿ ಸೇರಿಕೊಂಡಿರುವ NCPಯ ಅಜಿತ್‌ ಪವಾರ್‌ ಬಣ ಇಡುತ್ತಿರುವ ಬೇಡಿಕೆಗಳು ಈಗ ಏಕನಾಥ್ ಶಿಂಧೆ ಬಣಕ್ಕೆ ಅರಗಿಸಿಕೊಳ್ಳಲಾಗದ ತುತ್ತಾಗಿ ಪರಿಣಮಿಸಿದೆ. [&#8230;]]]></description>
										<content:encoded><![CDATA[
<p>ಇನ್ನೇನು ಎಲ್ಲಾ ತಿಳಿಯಾಯಿತು ಎನ್ನುವಾಗಲೇ ಮಹಾರಾಷ್ಟ್ರ ಸರ್ಕಾರದ ಬುಡ ಮತ್ತೆ ಅಲುಗಾಡಲು ಶುರುವಾಗಿದೆ. ಏಕನಾಥ್ ಶಿಂಧೆ ಬಣದ ಶಿವಸೇನೆ ಹಾಗೂ ಅಜಿತ್ ಪವಾರ್ ಬಣದ NCP ಸೇರಿ ಇತ್ತೀಚೆಗೆ ಸರ್ಕಾರ ರಚನೆಯ ಭಾಗವಾಗಿದ್ದವು. ಆದರೆ ಅಧಿಕಾರ ಹಂಚಿಕೆ ವಿಚಾರದಲ್ಲಿ ಈಗ ಮತ್ತೆ ಈ ಎರಡು ಬಣಗಳ ನಡುವೆ ಶೀತಲ ಸಮರ ಏರ್ಪಟ್ಟಿದೆ.</p>



<p>ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರಕ್ಕೆ ಹೊಸದಾಗಿ ಸೇರಿಕೊಂಡಿರುವ NCPಯ ಅಜಿತ್‌ ಪವಾರ್‌ ಬಣ ಇಡುತ್ತಿರುವ ಬೇಡಿಕೆಗಳು ಈಗ ಏಕನಾಥ್ ಶಿಂಧೆ ಬಣಕ್ಕೆ ಅರಗಿಸಿಕೊಳ್ಳಲಾಗದ ತುತ್ತಾಗಿ ಪರಿಣಮಿಸಿದೆ. ಸಂಪುಟ ವಿಸ್ತರಣೆಯಿಂದ ಹಿಡಿದು, ರಾಜ್ಯದ ವಿವಿಧ ಭಾಗಗಳಲ್ಲಿ ತನಗೆ ಬೇಕಾದ ಅಧಿಕಾರದ ವಿಚಾರದಲ್ಲಿ NCP ಪದೇಪದೆ ಕಿರಿಕ್ ತಗೆಯುತ್ತಿರುವುದು ಶಿವಸೇನೆಗೆ ನುಂಗಲಾರದ ತುತ್ತಾಗಿದೆ.</p>



<p>ಇತ್ತ ಏಕನಾಥ್ ಶಿಂಧೆ ಬಣದ ಜೊತೆಗೆ ಸರ್ಕಾರ ರಚನೆಗೆ ಪ್ರಮುಖ ಪಾತ್ರ ವಹಿಸಿದ್ದ ಬಿಜೆಪಿ ಪಕ್ಷ, ಸರ್ಕಾರಕ್ಕೆ NCP ಪಕ್ಷದ ಆಗಮನದ ನಂತರ ಹೇಳ ಹೆಸರಿಲ್ಲದಂತೆ ಮೂಲೆಗುಂಪಾಗಿದೆ. ಇದೇ ಕಾರಣಕ್ಕೆ ದೇವೇಂದ್ರ ಫಡ್ನವೀಸ್ ಕೂಡಾ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅಲ್ಲಿಗೆ ಬಿಜೆಪಿ ಯಾವ ಉದ್ದೇಶ ಇಟ್ಟು ಅಜಿತ್ ಪವಾರ್ ಬಣವನ್ನು ಆಪರೇಷನ್ ಮಾಡಿತೋ, ಅದರ ಸಂಪೂರ್ಣ ಲೆಕ್ಕಾಚಾರ ಉಲ್ಟಾ ಆದಂತಿದೆ.</p>





<p>ಸಧ್ಯ ಎದ್ದಿರುವ ಹೊಸ ತಲೆನೋವು ಅಂದರೆ, ಉಪ ಮುಖ್ಯಮಂತ್ರಿಯಾಗಿರುವ ಅಜಿತ್‌ ಪವಾರ್‌ ಈಗ ಸಿಎಂ ಸ್ಥಾನಕ್ಕೆ ಹಠ ಹಿಡಿದಿದ್ದಾರೆ ಎನ್ನಲಾಗಿದೆ. ಇದು ಜಿಗರಿ ದೋಸ್ತ್ ನಂತೆ ಇದ್ದ ಶಿವಸೇನೆ ಮತ್ತು ಬಿಜೆಪಿ ಮಧ್ಯೆ ಬಿರುಕು ಮೂಡಿಸಿದೆ. &#8216;ಅಜಿತ್ ಪವಾರ್ ಹಿರಿಯ ನಾಯಕರಿದ್ದಾರೆ. ನಮ್ಮದೂ ತಕ್ಕ ಮಟ್ಟಿಗೆ ಹೆಚ್ಚು ಶಾಸಕರ ಬಲವಿದೆ. ಅಜಿತ್ ಪವಾರ್ ಮುಖ್ಯಮಂತ್ರಿ ಆಗುವುದರಲ್ಲೂ ನ್ಯಾಯ ಇದೆ&#8217; ಎನ್ನುವಂತೆ NCP ನಾಯಕರು ತೆರೆಮರೆಯಲ್ಲಿ ಬ್ಯಾಟ್ ಬೀಸುತ್ತಿದ್ದಾರೆ.</p>



<p>ಮುಖ್ಯಮಂತ್ರಿ ಸ್ಥಾನದ ಬೇಡಿಕೆ ಈಗ ಯಾವ ಮಟ್ಟಕ್ಕೆ ಏರಿದೆ ಎಂದರೆ ತಮಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕೆಂದು ಅಜಿತ್‌ ಪವಾರ್‌ ಹಠ ಹಿಡಿದಿದ್ದಾರೆ ಎಂಬ ಸುದ್ದಿ ಮಹಾರಾಷ್ಟ್ರ ಕಡೆಯಿಂದ ಕೇಳಿ ಬಂದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಕೇಂದ್ರ ಸಚಿವ ಪ್ರಫುಲ್ ಪಟೇಲ್, ಅಜಿತ್ ಪವಾರ್ ಜನಪ್ರಿಯ ನಾಯಕರಾಗಿದ್ದಾರೆ. ಅವರು ಮಹಾರಾಷ್ಟ್ರದ ಸಿಎಂ ಆಗುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.</p>



<p>ಅಜಿತ್‌ ಪವಾರ್‌ ಅವರ ದೀರ್ಘ ಕಾಲದ ಕನಸಾಗಿದೆ. ಅದನ್ನು ನನಸು ಮಾಡಿಕೊಳ್ಳಲು ಅವರು ಮಹಾರಾಷ್ಟ್ರ ಸರ್ಕಾರದ ಭಾಗವಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಶರದ್ ಪವಾರ್ ನಾಯಕತ್ವದಲ್ಲಿ ಇದ್ದಾಗ ಮುಖ್ಯಮಂತ್ರಿ ಗಾದಿ ಕನಸಿನ ಮಾತಾಗಿತ್ತು. ಮೇಲಾಗಿ ಸೈದ್ಧಾಂತಿಕ ವಿರೋಧಿಗಳ ಜೊತೆಗೆ ಕೈ ಜೋಡಿಸಲು ಶರದ್ ಪವಾರ್ ಅಡ್ಡಗಾಲಾಗಿದ್ದರು. ಹಾಗಾಗಿ ಈಗ ಸಿಕ್ಕ ಅವಕಾಶವನ್ನು ಪಡೆದೇ ತೀರುವ ನಿರ್ಧಾರಕ್ಕೆ ಅಜಿತ್ ಪವಾರ್ ಬಂದಿದ್ದಾರೆ ಎನ್ನಲಾಗಿದೆ.</p>



<figure class="wp-block-image size-full"><img fetchpriority="high" decoding="async" width="706" height="434" src="https://peepalmedia.com/wp-content/uploads/2023/07/images-2023-07-28T210349.360.jpeg" alt="" class="wp-image-24552" srcset="https://peepalmedia.com/wp-content/uploads/2023/07/images-2023-07-28T210349.360.jpeg 706w, https://peepalmedia.com/wp-content/uploads/2023/07/images-2023-07-28T210349.360-300x184.jpeg 300w, https://peepalmedia.com/wp-content/uploads/2023/07/images-2023-07-28T210349.360-150x92.jpeg 150w, https://peepalmedia.com/wp-content/uploads/2023/07/images-2023-07-28T210349.360-696x428.jpeg 696w" sizes="(max-width: 706px) 100vw, 706px" /></figure>



<p>ಕೆಲ ದಿನಗಳ ಹಿಂದೆ ಪವಾರ್‌ ಅವರು ಶಿಂಧೆ ಅವರ ಸ್ಥಾನಕ್ಕೆ ಬಂದು ಕುಳಿತುಕೊಳ್ಳುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ದೇವೇಂದ್ರ ಫಡ್ನವೀಸ್‌ ಅವರು ಇದೆಲ್ಲವೂ ಊಹಾಪೋಹವೆಂದು ಹೇಳಿದ್ದರು. ಆದರೆ, ಈಗ ಮತ್ತೆ ಅಜಿತ್‌ ಪವಾರ್‌ ಮುಖ್ಯಮಂತ್ರಿಯಾಗುವ ಕುರಿತು ವರದಿಗಳು ಪ್ರಕಟವಾಗಿವೆ.</p>



<p>ಈ ನಡುವೆ ಈ ಬಿಕ್ಕಟ್ಟಿಗೆ ಬಿಜೆಪಿಯೇ ನೇರ ಕಾರಣ ಎನ್ನಲಾಗಿದೆ. NCP ಪಕ್ಷವನ್ನು ಇಬ್ಬಾಗ ಮಾಡುವ ಉದ್ದೇಶ ಹೊಂದಿದ್ದ ಬಿಜೆಪಿ ಅಜಿತ್ ಪವಾರ್ ಗೆ ಮುಖ್ಯಮಂತ್ರಿ ಹುದ್ದೆಯ ಆಸೆ ತೋರಿಸಿಯೇ ಆಪರೇಷನ್ ಮಾಡಲಾಗಿತ್ತು ಎಂಬ ಇನ್ನೊಂದು ಸುದ್ದಿ ಎದುರಾಗಿದೆ. ಅಜಿತ್‌ ಪವಾರ್‌ ಅವರನ್ನು ಮುಖ್ಯಮಂತ್ರಿಯಾಗಿ ಮಾಡುತ್ತೇವೆಂದು ಬಿಜೆಪಿ ಕೇಂದ್ರ ನಾಯಕತ್ವ ಭರವಸೆ ನೀಡಿದೆ ಎಂಬ ಮಾತುಗಳು ಕೇಳಿಬಂದಿವೆ. ಇದು ಬಿಕ್ಕಟ್ಟನ್ನು ಮತ್ತಷ್ಟು ಜಠಿಲಗೊಳಿಸಿದೆ.</p>



<figure class="wp-block-image size-full"><img decoding="async" width="600" height="338" src="https://peepalmedia.com/wp-content/uploads/2023/07/images-2023-07-28T210443.678.jpeg" alt="" class="wp-image-24553" srcset="https://peepalmedia.com/wp-content/uploads/2023/07/images-2023-07-28T210443.678.jpeg 600w, https://peepalmedia.com/wp-content/uploads/2023/07/images-2023-07-28T210443.678-300x169.jpeg 300w, https://peepalmedia.com/wp-content/uploads/2023/07/images-2023-07-28T210443.678-150x85.jpeg 150w" sizes="(max-width: 600px) 100vw, 600px" /></figure>



<p>&#8216;ಬಿಜೆಪಿಯ ಉನ್ನತ ನಾಯಕತ್ವವು ಅಜಿತ್ ಪವಾರ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡುವುದಾಗಿ ಭರವಸೆ ನೀಡಿದೆ. ಕೇಂದ್ರ ಸರ್ಕಾರದಲ್ಲಿ ಎರಡು ಕ್ಯಾಬಿನೆಟ್ ಮಂತ್ರಿಗಳ ಸ್ಥಾನಗಳನ್ನು ಎನ್‌ಸಿಪಿಗೆ ನೀಡಬೇಕೆಂದು ಬೇಡಿಕೆ ಕೂಡಾ NCP ಇಟ್ಟಿತ್ತು. ಅದಕ್ಕೂ ಬಿಜೆಪಿ ನಾಯಕತ್ವ ಒಪ್ಪಿಕೊಂಡಿದೆ&#8217; ಎಂದು ಎನ್‌ಸಿಪಿ ನಾಯಕರೊಬ್ಬರು ತಿಳಿಸಿದ್ದಾರೆ.</p>



<p>ಈ ನಡುವೆ ಈ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ಬಣ ಅವಕಾಶವನ್ನು ನಿಧಾನಕ್ಕೆ ಉಪಯೋಗಿಸಿಕೊಳ್ಳಲು ಶುರು ಮಾಡಿವೆ. ಕಾಂಗ್ರೆಸ್ ಕೂಡಾ &#8216;ಆಗಸ್ಟ್‌ 10 ರಂದು ಅಜಿತ್‌ ಪವಾರ್‌ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ನಿರ್ಧರಿಸಿದೆ. ಲೋಕಸಭೆ ಚುನಾವಣೆಯನ್ನು ಎದುರಿಸಲು ಏಕನಾಥ ಶಿಂಧೆ ಅನರ್ಹರು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಂಡಿದೆ&#8217; ಎಂಬ ಹೇಳಿಕೆಯನ್ನು ಹರಿಬಿಟ್ಟಿದೆ. ಇನ್ನೊಂದು ಕಡೆ ಶಿಂಧೆ ಅವರ ಪರಮಾಧಿಕಾರವನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಶಿವಸೇನಾ ನಾಯಕರು ಆಕ್ರೋಶಗೊಂಡಿದ್ದಾರೆ.</p>



<p>ಒಟ್ಟಾರೆ ಈ ಎಲ್ಲಾ ಬೆಳವಣಿಗೆ ನೋಡಿದರೆ ಸರ್ಕಾರದ ಭಾಗವಾಗಿರುವ ಶಿವಸೇನೆ ಬಿಜೆಪಿ ಮತ್ತು NCP ಮೂರೂ ಪಕ್ಷಗಳು ಮೂರು ದಿಕ್ಕಿಗೆ ಮುಖ ಮಾಡಿವೆ. ಮೂರೂ ಪಕ್ಷಗಳ ಒಳಗೂ &#8216;ವಚನ ಭ್ರಷ್ಟತೆ&#8217; ಮಾತುಗಳು ಕೇಳಿ ಬಂದಿವೆ. ಇವೆಲ್ಲಕ್ಕೂ ಸೂತ್ರದಾರನಾಗಿದ್ದ ಬಿಜೆಪಿ ಅಷ್ಟೂ ಲೆಕ್ಕಾಚಾರ ಇನ್ನು ಕೆಲವೇ ದಿನಗಳಲ್ಲಿ ತಲೆಕೆಳಗಾದರೂ ಆಶ್ಚರ್ಯವಿಲ್ಲ.</p>
]]></content:encoded>
					
		
		
			</item>
		<item>
		<title>ಗಡಿ ವಿವಾದ: ಸಮಸ್ಯೆಯನ್ನು ಸಾಂವಿಧಾನಿಕ ರೀತಿಯಲ್ಲಿ ಪರಿಹರಿಸಲು ಇಬ್ಬರು ಸಿಎಂಗಳು ಸಮ್ಮತಿ- ಅಮಿತ್‌ ಶಾ</title>
		<link>https://peepalmedia.com/border-dispute-two-cms-agree-to-resolve-issue-constitutionally-amit-shah/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 15 Dec 2022 04:56:59 +0000</pubDate>
				<category><![CDATA[ರಾಜ್ಯ]]></category>
		<category><![CDATA[amithsha]]></category>
		<category><![CDATA[araga jnanendhra]]></category>
		<category><![CDATA[BASAVARAJ BOMMAYI]]></category>
		<category><![CDATA[bengalure]]></category>
		<category><![CDATA[Devendra Fadnavis]]></category>
		<category><![CDATA[Ekanath Shinde]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[New Delhi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=18548</guid>

					<description><![CDATA[ಹೊಸದಿಲ್ಲಿ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ ಬುಧವಾರ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಸಮಸ್ಯೆಯನ್ನು ಸಾಂವಿಧಾನಿಕ ರೀತಿಯಲ್ಲಿ ಪರಿಹರಿಸಲು ಎರೆಡು ರಾಜ್ಯಗಳ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾಗವಹಿಸಿದ್ದ ಈ ಸಭೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು. ನಂತರ [&#8230;]]]></description>
										<content:encoded><![CDATA[
<p><strong>ಹೊಸದಿಲ್ಲಿ:</strong> ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ ಬುಧವಾರ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಸಮಸ್ಯೆಯನ್ನು ಸಾಂವಿಧಾನಿಕ ರೀತಿಯಲ್ಲಿ ಪರಿಹರಿಸಲು ಎರೆಡು ರಾಜ್ಯಗಳ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.</p>



<p>ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾಗವಹಿಸಿದ್ದ ಈ ಸಭೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು.</p>



<p>ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅಮಿತ್ ಶಾ ಅವರು, ʼಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ನಡೆಯುತ್ತಿರುವ ಗಡಿ ವಿವಾದಗಳ ಬಗ್ಗೆ ನಾವು ಸಕಾರಾತ್ಮಕ ಚರ್ಚೆ ನಡೆಸಿದ್ದೇವೆ. ಎರಡೂ ಕಡೆಯವರು ಸಕಾರಾತ್ಮಕ ಮನೋಭಾವವನ್ನು ಉಳಿಸಿಕೊಂಡಿದ್ದಾರೆ ಮತ್ತು ಗಡಿ ವಿವಾದಗಳನ್ನು ರಸ್ತೆಗಳಲ್ಲಿ ಪರಿಹರಿಸಲು ಸಾಧ್ಯವಿಲ್ಲ ಮತ್ತು ಸಾಂವಿಧಾನಿಕ ವಿಧಾನಗಳ ಮೂಲಕ ಮಾತ್ರ ಮಾಡಬಹುದು ಎಂದು ಸರ್ವಾನುಮತದಿಂದ ನಿರ್ಧರಿಸಲಾಯಿತು ಎಂದು ಹೇಳಿದ್ದಾರೆ.</p>



<p>ʼಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಎರಡೂ ರಾಜ್ಯಗಳ ತಲಾ ಮೂವರು ಸಚಿವರು ಸೇರಿದಂತೆ ಒಟ್ಟು 6 ಸಚಿವರ ಸಮಿತಿಯು ವಿವರವಾದ ಮಾತುಕತೆ ನಡೆಸಲಿದೆ. ಇದಲ್ಲದೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು, ಹಿರಿಯ ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗುವುದುʼ ಎಂದು ಹೇಳಿದ್ದಾರೆ.</p>



<p>ಉದ್ವಿಗ್ನತೆಯನ್ನು ಸೃಷ್ಟಿಸಲು ಟ್ವಿಟರ್ ಮೂಲಕ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಎಂದು ಉಲ್ಲೇಖಿಸಿದ ಶಾ, ʼಹಿರಿಯ ನಾಯಕರ ಹೆಸರಿನ ನಕಲಿ ಟ್ವಿಟರ್ ಖಾತೆಗಳು ಈ ವಿಷಯವನ್ನು ಪ್ರಚೋದಿಸುವಲ್ಲಿ ಬಹಳ ದೊಡ್ಡ ಪಾತ್ರ ವಹಿಸಿವೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಇದರ ಹಿಂದಿರುವ ಜನರ ವಿರುದ್ಧ ಎಫ್ಐಆರ್‌ಗಳನ್ನು ದಾಖಲಿಸಲು ನಿರ್ಧರಿಸಲಾಗಿದೆ ಮತ್ತು ಅವುಗಳನ್ನು ಆದಷ್ಟು ಬೇಗ ಬಹಿರಂಗಪಡಿಸಲಾಗುವುದುʼ ಎಂದರು.</p>



<p>ವಿರೋಧ ಪಕ್ಷಗಳು ಸಹಕರಿಸುವಂತೆ ಮನವಿ ಮಾಡಿದ ಅಮಿತ್ ಶಾ ಅವರು, ʼಈ ವಿಷಯವನ್ನು ರಾಜಕೀಯಗೊಳಿಸದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕದ ವಿರೋಧ ಪಕ್ಷಗಳನ್ನು ನಾನು ಒತ್ತಾಯಿಸುತ್ತೇನೆ. ಈ ಸಮಸ್ಯೆಯನ್ನು ಪರಿಹರಿಸಲು ರಚಿಸಲಾದ ಸಮಿತಿಯ ಚರ್ಚೆಗಳ ಫಲಿತಾಂಶಕ್ಕಾಗಿ ಮತ್ತು ಸರ್ವೋಚ್ಚ ನ್ಯಾಯಾಲಯದ ನಿರ್ಧಾರಕ್ಕಾಗಿ ನಾವು ಕಾಯಬೇಕು. ಎನ್ಸಿಪಿ, ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ಗುಂಪು ಸಹಕರಿಸುತ್ತವೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.</p>
]]></content:encoded>
					
		
		
			</item>
		<item>
		<title>ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಬಿಜೆಪಿ vs ಬಿಜೆಪಿ ಜಟಾಪಟಿ</title>
		<link>https://peepalmedia.com/karnataka-maharashtra-border-dispute-bjp-vs-bjp-tussle/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 24 Nov 2022 09:11:15 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[BASAVARAJ BOMMAYI]]></category>
		<category><![CDATA[bjp vs bjp]]></category>
		<category><![CDATA[Devendra Fadnavis]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Karnataka-Maharashtra border dispute]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Supreme Court]]></category>
		<guid isPermaLink="false">https://peepalmedia.com/?p=16372</guid>

					<description><![CDATA[ಬೆಂಗಳೂರು: ದಶಕಗಳಷ್ಟು ಹಳೆಯದಾದ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಈಗ ಮತ್ತೆ ಮುನ್ನೆಲೆಗೆ ಬರುತ್ತಿರುವುದರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ಭಾರತೀಯ ಜನತಾ ಪಕ್ಷಗಳು (ಬಿಜೆಪಿ) ಮತ್ತೆ ಇಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಎರಡೂ ರಾಜ್ಯ ಸರ್ಕಾರಗಳು ಪ್ರಾದೇಶಿಕ ಭಾವನೆಗಳನ್ನು ಕೆರಳಿಸಲು ಪ್ರಯತ್ನಿಸುತ್ತಿರುವಾಗ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಕ್ಷ್ಮ ರಾಜಕೀಯ ವಿಷಯದ ಬಗ್ಗೆ ಬಲವಾದ ಮಾತುಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರದ ಯಾವುದೇ ಗ್ರಾಮವು ಇತ್ತೀಚೆಗೆ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸಿಲ್ಲ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ದಶಕಗಳಷ್ಟು ಹಳೆಯದಾದ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಈಗ ಮತ್ತೆ ಮುನ್ನೆಲೆಗೆ ಬರುತ್ತಿರುವುದರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ಭಾರತೀಯ ಜನತಾ ಪಕ್ಷಗಳು (ಬಿಜೆಪಿ) ಮತ್ತೆ ಇಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸುತ್ತಿವೆ.</p>



<p>ಎರಡೂ ರಾಜ್ಯ ಸರ್ಕಾರಗಳು ಪ್ರಾದೇಶಿಕ ಭಾವನೆಗಳನ್ನು ಕೆರಳಿಸಲು ಪ್ರಯತ್ನಿಸುತ್ತಿರುವಾಗ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಕ್ಷ್ಮ ರಾಜಕೀಯ ವಿಷಯದ ಬಗ್ಗೆ ಬಲವಾದ ಮಾತುಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.</p>



<p>ಮಹಾರಾಷ್ಟ್ರದ ಯಾವುದೇ ಗ್ರಾಮವು ಇತ್ತೀಚೆಗೆ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸಿಲ್ಲ ಮತ್ತು ಯಾವುದೇ ಗಡಿ ಗ್ರಾಮವು ʼಎಲ್ಲಿಗೂ ಹೋಗುವʼ ಪ್ರಶ್ನೆಯೇ ಇಲ್ಲ ಎಂದು ಫಡ್ನವೀಸ್ ಬುಧವಾರ ಹೇಳಿದ್ದರು. ಮಹಾರಾಷ್ಟ್ರ ಬಿಜೆಪಿ ನಾಯಕನ ಹೇಳಿಕೆಯನ್ನು ʼಪ್ರಚೋದನಕಾರಿʼ ಎಂದು ಬಣ್ಣಿಸಿದ ಬಸವರಾಜ ಬೊಮ್ಮಾಯಿಯವರು, ʼಅವರ ಕನಸು ಎಂದಿಗೂ ನನಸಾಗುವುದಿಲ್ಲʼಎಂದು ತಿರುಗೇಟು ನೀಡಿದ್ದಾರೆ.</p>



<p>ಹೆಚ್ಚಿನ ಸಂಖ್ಯೆಯ ಕನ್ನಡ ಭಾಷಿಕರನ್ನು ಹೊಂದಿರುವ ಮಹಾರಾಷ್ಟ್ರದ ಸೋಲಾಪುರದಂತಹ ಪ್ರದೇಶಗಳನ್ನು ಕರ್ನಾಟಕದ ಭಾಗವನ್ನಾಗಿ ಮಾಡಬೇಕು ಎಂಬುದು ಕರ್ನಾಟಕದ ಬೇಡಿಕೆಯಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.</p>



<p>ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕೆಲವು ಗ್ರಾಮ ಪಂಚಾಯಿತಿಗಳು ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿರುವಾಗ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಈ ಹಿಂದೆ ನಿರ್ಣಯಿಸಿದ್ದವು. ಈ ಕಾರಣ ಕರ್ನಾಟಕ ಸರ್ಕಾರವು ಅವರಿಗೆ ಸಹಾಯ ಮಾಡಲು ಯೋಜನೆಗಳನ್ನು ಯೋಜಿಸಿದೆ ಮತ್ತು ಮಹರಾಷ್ಟ್ರ ಸರ್ಕಾರವು ಅವರ ವಿಲೀನದ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.</p>



<p>ಕರ್ನಾಟಕ ಮುಖ್ಯಮಂತ್ರಿಯವರ ಹೇಳಿಕೆಗಳ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಫಡ್ನವೀಸ್, ಈ ಗ್ರಾಮಗಳು 2012 ರಲ್ಲಿ ನೀರಿನ ಬಿಕ್ಕಟ್ಟಿನ ಬಗ್ಗೆ ನಿರ್ಣಯವನ್ನು ಅಂಗೀಕರಿಸಿದ್ದವು, ಆದರೆ ಇತ್ತೀಚಿನ ಯಾವುದೇ ಬೆಳವಣಿಗೆಗಳು ನಡೆದಿಲ್ಲ ಎಂದು ಹೇಳಿದರು.</p>



<p>ತಮ್ಮ ನೇತೃತ್ವದ ಹಿಂದಿನ ಮಹಾರಾಷ್ಟ್ರ ಸರ್ಕಾರವು ಸಮಸ್ಯೆಯನ್ನು ಪರಿಹರಿಸಲು ಕರ್ನಾಟಕದೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಈ ಗ್ರಾಮಗಳಿಗೆ ನೀರು ಸರಬರಾಜು ಯೋಜನೆಯನ್ನು ಸಹ ರೂಪಿಸಲಾಗಿದೆ ಎಂದು ಸಹ ಅವರು ಹೇಳಿದ್ದಾರೆ. ʼನಾವು ಈಗ ಆ ಯೋಜನೆಯನ್ನು ಅನುಮೋದಿಸಲಿದ್ದೇವೆ. ಬಹುಶಃ ಕೋವಿಡ್ ಕಾರಣದಿಂದಾಗಿ, ಹಿಂದಿನ (ಉದ್ಧವ್ ಠಾಕ್ರೆ ನೇತೃತ್ವದ) ಸರ್ಕಾರವು ಅದನ್ನು ಅನುಮೋದಿಸಲು ಸಾಧ್ಯವಾಗಲಿಲ್ಲʼ ಎಂದು ಫಡ್ನವೀಸ್ ತಿಳಿಸಿದ್ದಾರೆ.</p>



<p>ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ಎನ್ಸಿಪಿಯೊಂದಿಗಿನ ಮೈತ್ರಿಯ ಬಗ್ಗೆ ಠಾಕ್ರೆ ನಾಯಕತ್ವದ ವಿರುದ್ಧ ಬಂಡಾಯವೆದ್ದ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಬಣದೊಂದಿಗೆ ಬಿಜೆಪಿ ಜೂನ್‌ನಲ್ಲಿ ಮತ್ತೆ ಅಧಿಕಾರಕ್ಕೆ ಮರಳಿತು.</p>



<p>ಕರ್ನಾಟಕವು ರಾಜ್ಯದ ಗಡಿಗೆ ಹತ್ತಿರವಿರುವ ಮತ್ತು ಕನ್ನಡ ಮಾತನಾಡುವ ಪ್ರದೇಶಗಳನ್ನು ಕರ್ನಾಟದ ಭಾಗವನ್ನಾಗಿ ಮಾಡಬೇಕೆಂದು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರವು ಬೆಳಗಾವಿ ಜಿಲ್ಲೆ ಮತ್ತು ಕರ್ನಾಟಕದ ಇತರ ಮರಾಠಿ ಬಹುಸಂಖ್ಯಾತ ಪ್ರದೇಶಗಳ ವಿವಾದವನ್ನು ಪರಿಹರಿಸಲು ಒತ್ತಾಯಿಸುತ್ತಿದೆ.</p>



<p>2004 ರಲ್ಲಿ ಅಂದಿನ ಮಹಾರಾಷ್ಟ್ರ ಸರ್ಕಾರವು ಬೆಳಗಾವಿ ನಗರ ಮತ್ತು 865 ಗ್ರಾಮಗಳನ್ನು ವಶಪಡಿಸಿಕೊಂಡಾಗ ಈ ವಿಷಯವು ಸುಪ್ರೀಂ ಕೋರ್ಟ್‌ಗೆ ತಲುಪಿತು. ಆದರೆ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದದ ಈ ಪ್ರಕರಣ ಇನ್ನೂ ಬಾಕಿ ಇದೆ ಎನ್ನಲಾಗಿದೆ.</p>



<p>ಇತ್ತೀಚೆಗೆ, ಮಹಾರಾಷ್ಟ್ರ &nbsp;ಸರ್ಕಾರವು ಎಲ್ಲಾ ಪಕ್ಷಗಳ ನಾಯಕರನ್ನು ಒಳಗೊಂಡ 19 ಸದಸ್ಯರ ಸಮಿತಿಯು ಸಭೆ ಸೇರಿ, ವಿಚಾರಣೆಯನ್ನು ತ್ವರಿತಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲು ನಿರ್ಧರಿಸಿತು. ಈ ಹಿನ್ನಲೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಈ ವಿಷಯವನ್ನು ಮೇಲ್ವಿಚಾರಣೆ ಮಾಡಲು ಇಬ್ಬರು ಹಿರಿಯ ಸಚಿವರನ್ನು ಒಳಗೊಂಡ ಸಮಿತಿಯನ್ನು ರಚಿಸಿದೆ.</p>



<p>ಅದರಂತೆ ಗಡಿ ವಿವಾದವು ಸುಪ್ರೀಂ ಕೋರ್ಟಿನಲ್ಲಿ ಬಂದಾಗ ಅದನ್ನು ನಿಭಾಯಿಸಲು ರಾಜ್ಯ ಸರ್ಕಾರವು ಪ್ರಬಲ ಕಾನೂನು ತಂಡವನ್ನು ರಚಿಸಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.</p>
]]></content:encoded>
					
		
		
			</item>
	</channel>
</rss>
