<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>dharawad &#8211; Peepal Media</title>
	<atom:link href="https://peepalmedia.com/tag/dharawad/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 28 Mar 2024 06:48:44 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>dharawad &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title> ಶ್ರೀಪಾದಭಟ್‌ ಅವರಿಗೆ ರಂಗಭೂಪತಿ ಪ್ರಶಸ್ತಿ: ಗೋಪಾಲ ವಾಜಪೇಯಿಯವರ ರಂಗಗೀತೆಗಳ ರಂಗಸಂಜೆ</title>
		<link>https://peepalmedia.com/rangabhupati-award-to-sripadabhat-an-evening-of-gopal-vajpayees-ranga-songs/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 28 Mar 2024 06:47:21 +0000</pubDate>
				<category><![CDATA[ಕಲೆ – ಸಾಹಿತ್ಯ]]></category>
		<category><![CDATA[ಧಾರವಾಡ]]></category>
		<category><![CDATA[ಸಿನಿಮಾ]]></category>
		<category><![CDATA[dharawad]]></category>
		<category><![CDATA[hubli - dharawad]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rangabhoomi]]></category>
		<category><![CDATA[sahitya]]></category>
		<category><![CDATA[theater]]></category>
		<guid isPermaLink="false">https://peepalmedia.com/?p=37637</guid>

					<description><![CDATA[ಧಾರವಾಡ: ಗೋವಾ ರಂಗ-ಸಂಗ ತಂಡ, ಆಟ-ಮಾಟ ಧಾರವಾಡ ಮತ್ತು ಬಹುರೂಪಿ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ಹಿರಿಯ ರಂಗ ನಿರ್ದೇಶಕ ಶ್ರೀಪಾದಭಟ್‌ ಅವರಿಗೆ 2024ರ ಸಾಲಿನ ರಂಗಭೂಪತಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕವಿ ರಾಜಕುಮಾರ್‌ ಮಡಿವಾಳರ ತಿಳಿಸಿದ್ದಾರೆ. ಧಾರವಾಡ ರಂಗಾಯಣ ಆವರಣದಲ್ಲಿರುವ ಪಂ.ಬಸವರಾಜ ರಾಜಗುರು ಬಯಲುರಂಗಮಂದಿರದಲ್ಲಿ ಮಾ.30ರಂದು ಸಂಜೆ 6ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ʼಪ್ರಶಸ್ತಿ ಪ್ರಧಾನದ ಜೊತೆಗೆ ಸಾಹಿತಿ ಗೋಪಾಲ ವಾಜಪೇಯಿ ಅವರ ನೆನಪಿನ ರಂಗಗೀತೆಗಳ “ರಂಗಸಂಜೆ” ಕಾರ್ಯಕ್ರಮವು ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. [&#8230;]]]></description>
										<content:encoded><![CDATA[
<p>ಧಾರವಾಡ: ಗೋವಾ ರಂಗ-ಸಂಗ ತಂಡ, ಆಟ-ಮಾಟ ಧಾರವಾಡ ಮತ್ತು ಬಹುರೂಪಿ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ಹಿರಿಯ ರಂಗ ನಿರ್ದೇಶಕ ಶ್ರೀಪಾದಭಟ್‌ ಅವರಿಗೆ 2024ರ ಸಾಲಿನ ರಂಗಭೂಪತಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕವಿ ರಾಜಕುಮಾರ್‌ ಮಡಿವಾಳರ ತಿಳಿಸಿದ್ದಾರೆ.</p>



<p>ಧಾರವಾಡ ರಂಗಾಯಣ ಆವರಣದಲ್ಲಿರುವ ಪಂ.ಬಸವರಾಜ ರಾಜಗುರು ಬಯಲುರಂಗಮಂದಿರದಲ್ಲಿ ಮಾ.30ರಂದು ಸಂಜೆ 6ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ʼಪ್ರಶಸ್ತಿ ಪ್ರಧಾನದ ಜೊತೆಗೆ ಸಾಹಿತಿ ಗೋಪಾಲ ವಾಜಪೇಯಿ ಅವರ ನೆನಪಿನ ರಂಗಗೀತೆಗಳ “ರಂಗಸಂಜೆ” ಕಾರ್ಯಕ್ರಮವು ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>



<p>ಗೋಪಾಲ್‌ ವಾಜಪೇಯಿಯವರು ಹಲವು ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸಿದವರು. ಜೊತೆಗೆ ಜಕವಿ, ನಾಟಕಕಾರ, ನಟ, ನಿರ್ದೇಶಕರಾಗಿ, ಆಕಾಶವಾಣಿ, ರಂಗಭೂಮಿ, ಸಿನಿಮಾ, ಜನಸಮುದಾಯ ಅತಿ ಇಷ್ಟದ ಮಾಧ್ಯಮಗಳ ಮೂಲಕ &nbsp;ಮೂರು ದಶಕಗಳಿಗೂ ಹೆಚ್ಚು ಕಾಲ ಒಂದಿಡಿ ತಲೆಮಾರನ್ನು ತಮ್ಮ ಬರಹದ ಮೂಲಕ ಪ್ರಭಾವಿಸಿದವರು. ಉತ್ತರ ಕರ್ನಾಟಕದ ಗಟ್ಟಿ ಆಡುಭಾಷೆಯಲ್ಲಿ ಸಾಹಿತ್ಯ ಕೃಷಿ ಮಾಡಿದ ಅವರು, ರಂಗಭೂಮಿಗೆ ನೀಡಿದ ಕೊಡುಗೆ ಅಪಾರ. ಅದೇನೋ ಕಾರಣಕ್ಕೆ ಅವರು ಅಜ್ಞಾತರಾಗಿಯೇ ಉಳಿದರು. ಮುಖ್ಯವಾಹಿನಿಗೆ ಬರಲಿಲ್ಲ. ಅವರಿಗೆ ದಕ್ಕಬೇಕಾದ ಗೌರವವೂ ದೊರೆಯಲಿಲ್ಲ.</p>



<p>ಅಂಥ ಅಪರೂಪದ ಸಾಧಕನನ್ನು ನೆನಪಿಸಿಕೊಳ್ಳುವ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ, ಕೊಡುಗೆ ನೀಡಿರುವ ಪ್ರತಿಭಾವಂತರೊಬ್ಬರಿಗೆ &#8220;ರಂಗಭೂಪತಿ&#8221; ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ರಾಜಕುಮಾರ್‌ ತಿಳಿಸಿದ್ದಾರೆ,</p>



<p>ಪ್ರಸಕ್ತ ಸಾಲಿನ ಮೊದಲ ಪ್ರಶಸ್ತಿಯನ್ನು ಪ್ರತಿಭಾವಂತ ನಿರ್ದೇಶಕ ಶ್ರೀ ಶ್ರೀಪಾದ ಭಟ್ ಅವರಿಗೆ ನೀಡಲಾಗುತ್ತಿದ್ದು, ಪ್ರಶಸ್ತಿ 5 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ. ವಿಶ್ವರಂಗ ಭೂಮಿ ದಿನದ ಪ್ರಯುಕ್ತ, ಈ ಕಾರ್ಯಕ್ರಮದಲ್ಲಿ ಗೋಪಾಲ ವಾಜಪೇಯಿ ಅವರು ರಚಿಸಿದ ರಂಗಗೀತೆಗಳ ಹಬ್ಬ ಆಯೋಜಿಸಲಾಗಿದೆ.</p>



<p>&nbsp;ರಂಗಾಯಣ ಕಲಾವಿದ ರಾಘವ ಕಮ್ಮಾರ, ಹೂವಿನ ಹಡಗಲಿಯ ಶಶಿಧರ.ಕೆ.ಎಮ್, ರವಿ ಯಲ್ಲಪ್ಪನವರ್,&nbsp; ಪರಶುರಾಮ ನಾಗೋಜಿ ರಂಗಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ. ಹಿರಿಯ ಸಾಹಿತಿ, ನಾಟಕಕಾರ ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಶ್ರೀ ಗೋಪಾಲ ವಾಜಪೇಯಿ ಕುಟುಂಬಸ್ತರು, ರಂಗಕರ್ಮಿ ಧನಂಜಯ ಕುಲಕರ್ಣಿ, &#8220;ಅವಧಿ ಈ-ಮ್ಯಾಗಜಿನ್&#8221; ಸಂಪಾದಕ ಶ್ರೀ ಜಿ,ಎನ್. ಮೋಹನ, ರವಿ ಕುಲಕರ್ಣಿ ಉಪಸ್ಥಿತರಿರುತ್ತಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. &nbsp;</p>
]]></content:encoded>
					
		
		
			</item>
		<item>
		<title>ಧಾರವಾಡ &#124; ಗ್ಯಾಸ್ ಟ್ಯಾಂಕರ್ ತಂದಿಟ್ಟ ಸಂಕಷ್ಟ</title>
		<link>https://peepalmedia.com/gas-tanker-struck-in-underpass/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 18 Aug 2023 03:55:52 +0000</pubDate>
				<category><![CDATA[ಧಾರವಾಡ]]></category>
		<category><![CDATA[dharawad]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=25765</guid>

					<description><![CDATA[ಧಾರವಾಡ ಬಳಿ ಅಂಡರ್‌ಪಾಸ್‌ ಒಂದರಲ್ಲಿ ಬೃಹತ್ ಎಲ್‌ಪಿಜಿ ಗ್ಯಾಸ್ ಟ್ಯಾಂಕರ್ ಸಿಲುಕಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಆತಂಕ ಮೂಡಿಸಿತ್ತು. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಿದ್ದರಿಂದ ಚಾಲಕರು ಹಾಗೂ ಪ್ರಯಾಣಿಕರು ಸಹ ಪರದಾಡುವಂತಾಯಿತು. 16 ಗಂಟೆಗಳ ಪ್ರಯತ್ನದ ನಂತರ, ಟ್ಯಾಂಕರ್ ಹೊರತೆಗೆದು ಹೈಡ್ರಾಮ ಅಂತ್ಯ ಕಂಡಿತು. ಧಾರವಾಡ ನಗರದ ಸಮೀಪದ ಹೆದ್ದಾರಿ-4ರ ಹೈಕೋರ್ಟ್ ಪೀಠದ ಬಳಿ ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಟ್ಯಾಂಕರ್ ಒಂದು ಅಂಡರ್ ಪಾಸ್ ಅಡಿಯಲ್ಲಿ [&#8230;]]]></description>
										<content:encoded><![CDATA[
<p>ಧಾರವಾಡ ಬಳಿ ಅಂಡರ್‌ಪಾಸ್‌ ಒಂದರಲ್ಲಿ ಬೃಹತ್ ಎಲ್‌ಪಿಜಿ ಗ್ಯಾಸ್ ಟ್ಯಾಂಕರ್ ಸಿಲುಕಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಆತಂಕ ಮೂಡಿಸಿತ್ತು. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಿದ್ದರಿಂದ ಚಾಲಕರು ಹಾಗೂ ಪ್ರಯಾಣಿಕರು ಸಹ ಪರದಾಡುವಂತಾಯಿತು.</p>



<p>16 ಗಂಟೆಗಳ ಪ್ರಯತ್ನದ ನಂತರ, ಟ್ಯಾಂಕರ್ ಹೊರತೆಗೆದು ಹೈಡ್ರಾಮ ಅಂತ್ಯ ಕಂಡಿತು.</p>



<p>ಧಾರವಾಡ ನಗರದ ಸಮೀಪದ ಹೆದ್ದಾರಿ-4ರ ಹೈಕೋರ್ಟ್ ಪೀಠದ ಬಳಿ ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಟ್ಯಾಂಕರ್ ಒಂದು ಅಂಡರ್ ಪಾಸ್ ಅಡಿಯಲ್ಲಿ ಸಿಲುಕಿಕೊಂಡಿತ್ತು. ಟ್ಯಾಂಕರ್ ಚಾಲಕ ಅರಿವಿಲ್ಲದೆ ಇನ್ನೊಂದು ಬದಿಗೆ ಹೋಗುವಾಗ ಟ್ಯಾಂಕರ್ ಎತ್ತರ ಹೆಚ್ಚಾಗಿದ್ದು ಅಂಡರ್ ಪಾಸ್ ಮೇಲ್ಛಾವಣಿಗೆ ಉಜ್ಜಿ ಸಿಲುಕಿಕೊಂಡಿದೆ. ಚಾಲಕ ಎಷ್ಟೇ ಪ್ರಯತ್ನಿಸಿದರೂ ಮುಂದೆ ಅಥವಾ ಹಿಂದೆ ಸರಿಯಲಾಗಲಿಲ್ಲ.</p>



<p>ವಿಷಯ ತಿಳಿದ ಜಿಲ್ಲಾಧಿಕಾರಿಗಳು, ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕ್ರೇನ್‌ಗಳೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಗ್ಯಾಸ್ ಸೋರಿಕೆಯಾದರೆ ಬೆಂಕಿ ಅನಾಹುತ ಸಂಭವಿಸುವ ಆತಂಕವಿತ್ದೆತು. ಮೊದಲು ಎಚ್ಚರಿಕೆಯಿಂದ ಸುತ್ತಮುತ್ತಲಿನ ವಿದ್ಯುತ್ ಕಡಿತಗೊಳಿಸಿ. ಯಾರೂ ಮನೆಗಳಲ್ಲಿ ಬೆಂಕಿಕಡ್ಡಿಗಳನ್ನು ಬಳಸಬಾರದು ಮತ್ತು ಅಡುಗೆ ಮಾಡಬಾರದು ಎಂದು ಘೋಷಿಸಲಾಯಿತು.</p>



<p>ಬೆಳಗಾವಿಯಿಂದ ಧಾರವಾಡಕ್ಕೆ ಬರುತ್ತಿದ್ದ ವಾಹನಗಳನ್ನು ತಡೆದು ನಿಲ್ಲಿಸಲಾಯಿತು. ಮತ್ತೊಂದು ಟ್ಯಾಂಕರ್ ತಂದು ಅದರಲ್ಲಿ ಗ್ಯಾಸ್ ತುಂಬಿಸಿದ ಬಳಿಕ ಕ್ರೇನ್ ಮೂಲಕ ಖಾಲಿ ಟ್ಯಾಂಕರ್ ಹೊರತೆಗೆಯಲಾಯಿತು.</p>



<p>ಇದೆಲ್ಲ ಕೆಲಸಕ್ಕೆ ಜನ ಸಹಕಾರ ನೀಡಿದ್ದಾರೆ ಎಂದು ಜಿಲ್ಲಾ ಎಸ್ಪಿ ಡಾ.ಸಂಜೀವ್ ಪಾಟೀಲ್ ಹೇಳಿದರು. 16 ಗಂಟೆಗಳ ಕಾಲ ಎಲ್ಲರನ್ನೂ ಉದ್ವಿಗ್ನಗೊಳಿಸಿದ್ದ ಗ್ಯಾಸ್ ಟ್ಯಾಂಕರ್ ಪ್ರಕರಣ ಗುರುವಾರ ಮಧ್ಯಾಹ್ನದ ಸುಮಾರಿಗೆ ಮುಕ್ತಾಯವಾಗುತ್ತಿದ್ದಂತೆ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗಂಟೆಗಟ್ಟಲೆ ವಾಹನಗಳನ್ನು ತಡೆದಿದ್ದರಿಂದ ಜನರು ಹಾಗೂ ನೌಕರರು ಕಾಲ್ನಡಿಗೆಯಲ್ಲಿ ಅಲೆದಾಡಿದರು. ಜನರು ಮನೆಯಲ್ಲಿ ಅಡುಗೆ ಮಾಡದೆ ಹಸಿವಿನಿಂದ ಬಳಲುತ್ತಿದ್ದರು.</p>
]]></content:encoded>
					
		
		
			</item>
	</channel>
</rss>
