<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Dharmastala &#8211; Peepal Media</title>
	<atom:link href="https://peepalmedia.com/tag/dharmastala/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 31 Jul 2025 09:59:31 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Dharmastala &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಧರ್ಮಸ್ಥಳ: 6 ನೇ ಪಾಯಿಂಟ್‌ನಲ್ಲಿ ಕಳೇಬರದ ಅವಶೇಷಗಳು ಪತ್ತೆ!</title>
		<link>https://peepalmedia.com/dharmasthala-remains-of-a-body-found-at-point-6/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 31 Jul 2025 09:26:40 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[belthangadi]]></category>
		<category><![CDATA[bengaluru]]></category>
		<category><![CDATA[Dharmastala]]></category>
		<category><![CDATA[karnataka]]></category>
		<category><![CDATA[Soujanya murder case]]></category>
		<category><![CDATA[ujire]]></category>
		<guid isPermaLink="false">https://peepalmedia.com/?p=63423</guid>

					<description><![CDATA[ಬೆಳ್ತಂಗಡಿ, ಜು.31: ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೇರೆ ಬೇರೆ ಕಾಲಘಟ್ಟದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಶವಸಂಸ್ಕಾರಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ನಡೆಸುತ್ತಿರುವ ಶೋಧಕಾರ್ಯದ ಮೂರನೇ ದಿನದಂದು ಸಾಕ್ಷಿ-ದೂರುದಾರ ತೋರಿಸಿದ ಆರನೇ ಪಾಯಿಂಟ್‌ನಲ್ಲಿ ಮೃತದೇಹದ ಅವಶೇಷಗಳು ಪತ್ತೆಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ದೂರುದಾರ ಗುರುತಿಸಿರುವ ಈ ಆರನೇ ಪಾಯಿಂಟ್‌ ನೇತ್ರಾವತಿ ಸ್ನಾನ ಘಟ್ಟದ ಸಮೀಪದಲ್ಲಿದ್ದು ಉತ್ಖನನದ ವೇಳೆ ಕೆಲವು ಎಲುಬಿನ ಚೂರುಗಳು ಸಿಕ್ಕಿರುವ ಬಗ್ಗೆ ಮಾಹಿತಿಗಳು ಹೊರಬರುತ್ತಿವೆ. ಈ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. [&#8230;]]]></description>
										<content:encoded><![CDATA[
<p><strong>ಬೆಳ್ತಂಗಡಿ, ಜು.31:</strong> ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೇರೆ ಬೇರೆ ಕಾಲಘಟ್ಟದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಶವಸಂಸ್ಕಾರಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ನಡೆಸುತ್ತಿರುವ ಶೋಧಕಾರ್ಯದ ಮೂರನೇ ದಿನದಂದು ಸಾಕ್ಷಿ-ದೂರುದಾರ ತೋರಿಸಿದ ಆರನೇ ಪಾಯಿಂಟ್‌ನಲ್ಲಿ ಮೃತದೇಹದ ಅವಶೇಷಗಳು ಪತ್ತೆಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.   </p>



<p>ದೂರುದಾರ ಗುರುತಿಸಿರುವ ಈ ಆರನೇ ಪಾಯಿಂಟ್‌ ನೇತ್ರಾವತಿ ಸ್ನಾನ ಘಟ್ಟದ ಸಮೀಪದಲ್ಲಿದ್ದು ಉತ್ಖನನದ ವೇಳೆ ಕೆಲವು ಎಲುಬಿನ ಚೂರುಗಳು ಸಿಕ್ಕಿರುವ ಬಗ್ಗೆ ಮಾಹಿತಿಗಳು ಹೊರಬರುತ್ತಿವೆ. ಈ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಂದ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.</p>



<figure class="wp-block-embed is-type-video is-provider-youtube wp-block-embed-youtube wp-embed-aspect-16-9 wp-has-aspect-ratio"><div class="wp-block-embed__wrapper">
<iframe title="ಮೂರನೇ ದಿನದ SIT ಶೋಧ | 6ನೇ ಪಾಯಿಂಟ್‌ನಲ್ಲಿ ಅಸ್ಥಿಪಂಜರದ ಅವಶೇಷಗಳು  ಪತ್ತೆ | ಧರ್ಮಸ್ಥಳ ಕೇಸ್‌" width="696" height="392" src="https://www.youtube.com/embed/KTAvzA-in9M?feature=oembed" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" referrerpolicy="strict-origin-when-cross-origin" allowfullscreen></iframe>
</div></figure>



<p>ಎಸ್‌ಐಟಿ ತಂಡ ಇಂದು ಬೆಳಗ್ಗೆ  11:30ರ ಸುಮಾರಿಗೆ ಈಗಾಗಲೇ ದೂರುದಾರ ತೋರಿಸಿರುವ 13 ಸ್ಥಳಗಳಲ್ಲಿ ನೇತ್ರಾವತಿ ನದಿಯ ತೀರದ 6ನೇ ಜಾಗದಲ್ಲಿ ಅಗೆಯುವ ಕಾರ್ಯಾಚರಣೆ ನಡೆಸಿದ್ದಾರೆ. ಮೊದಲೆರಡು ದಿನಗಳಲ್ಲಿ ಯಾವುದೇ ಅವಶೇಷಗಳು ಲಭ್ಯವಾಗಿರಲಿಲ್ಲ. ಮೂರನೇ ದಿನವಾದ ಇಂದು, ಗುರುವಾರ ಆರನೇ ಪಾಯಿಂಟ್‌ನಲ್ಲಿ ಮೂರು ಅಡಿ ಆಳದಲ್ಲಿ ಕಳೇಬರದ ಅವಶೇಷಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಹೊರಬರುತ್ತಿದೆ. ಈ ಬಗ್ಗೆ ಎಸ್‌ಐಟಿ ಯಾವುದೇ ಅಧಿಕೃತ ಹೇಳಿಕೆಗಳನ್ನು ನೀಡಿಲ್ಲ.</p>



<p>ಎಸ್‌ಐಟಿ ತಂಡದ ಜೊತೆಗೆ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಮಂಗಳೂರಿನ ಕೆಎಂಸಿ ವೈದ್ಯರ ತಂಡ, ಎಫ್.ಎಸ್.ಎಲ್. ತಂಡ, ಐ.ಎಸ್.ಡಿ. ಹಾಗೂ ಇತರ ಅಧಿಕಾರಿಗಳು ಇದ್ದರು. </p>



<p></p>
]]></content:encoded>
					
		
		
			</item>
		<item>
		<title>ಸೌಜನ್ಯ ಪರ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಗೆ ಪೊಲೀಸ್ ನೋಟಿಸ್</title>
		<link>https://peepalmedia.com/police-notice-issued-to-youtuber-sameer-for-making-pro-civility-video/</link>
		
		<dc:creator><![CDATA[Peepal Media]]></dc:creator>
		<pubDate>Thu, 06 Mar 2025 08:36:23 +0000</pubDate>
				<category><![CDATA[ರಾಜ್ಯ]]></category>
		<category><![CDATA[Dharmastala]]></category>
		<category><![CDATA[karnataka congrees]]></category>
		<category><![CDATA[murder]]></category>
		<category><![CDATA[rape]]></category>
		<category><![CDATA[sowjanya case]]></category>
		<category><![CDATA[youtube]]></category>
		<guid isPermaLink="false">https://peepalmedia.com/?p=54866</guid>

					<description><![CDATA[ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಡಿಯೋ ಮಾಡಿದ್ದ ಸಮೀರ್ ಎಂ.ಡಿ. ಅವರ ಮನೆಗೆ ಮಾರ್ಚ್ 6ರ, ಬುಧವಾರ ತಡರಾತ್ರಿ ಪೊಲೀಸರು ಪ್ರವೇಶಿಸಿದ್ದಾರೆ. ಬಂಧಿಸಲು ಯತ್ನಿಸಿ, ಆನಂತರ ನೋಟಿಸ್ ನೀಡಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಬುಧವಾರ ರಾತ್ರಿ 1ಗಂಟೆ ಸುಮಾರಿ ತಮ್ಮ ಫೇಸ್ ಬುಕ್ ಲೈವ್ ನಲ್ಲಿ ಮಾಹಿತಿ ನೀಡಿರುವ ಸಮೀರ್ ತಮ್ಮ ಮೇಲಾಗುತ್ತಿರುವ ಟ್ರೋಲ್ ಗಳು, ಮತ್ತು ಅವರ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ.  ಸಮೀರ್ ತಮ್ಮ ಯೂಟ್ಯೂಬ್ ನಲ್ಲಿ ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ [&#8230;]]]></description>
										<content:encoded><![CDATA[
<p>ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಡಿಯೋ ಮಾಡಿದ್ದ ಸಮೀರ್ ಎಂ.ಡಿ. ಅವರ ಮನೆಗೆ ಮಾರ್ಚ್ 6ರ, ಬುಧವಾರ ತಡರಾತ್ರಿ ಪೊಲೀಸರು ಪ್ರವೇಶಿಸಿದ್ದಾರೆ. ಬಂಧಿಸಲು ಯತ್ನಿಸಿ, ಆನಂತರ ನೋಟಿಸ್ ನೀಡಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಬುಧವಾರ ರಾತ್ರಿ 1ಗಂಟೆ ಸುಮಾರಿ ತಮ್ಮ ಫೇಸ್ ಬುಕ್ ಲೈವ್ ನಲ್ಲಿ ಮಾಹಿತಿ ನೀಡಿರುವ ಸಮೀರ್ ತಮ್ಮ ಮೇಲಾಗುತ್ತಿರುವ ಟ್ರೋಲ್ ಗಳು, ಮತ್ತು ಅವರ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ. </p>



<p>ಸಮೀರ್ ತಮ್ಮ ಯೂಟ್ಯೂಬ್ ನಲ್ಲಿ ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಇತ್ತೀಚೆಗೆ ಮಾಡಿದ್ದ ವೀಡಿಯೊವೊಂದು ಹೆಚ್ಚು ವೈರಲ್ ಆಗಿತ್ತು, ಆ ಮೂಲಕ ರಾಜ್ಯದಾದ್ಯಂತ ಮತ್ತೆ ಸೌಜನ್ಯ ಪ್ರಕರಣ ಮುನ್ನಲೆಗೆ ಬಂದಿದೆ. ಈ ನಡುವೆ ಸಮೀರ್ ಅವರ ಧರ್ಮವನ್ನು ಮುನ್ನಲೆಗೆ ತಂದು ಅವರನ್ನು ಅವಮಾನಿಸುತ್ತಿರುವವರಿಗೆ ಪ್ರತಿಕ್ರಿಯೆ ನೀಡಿರುವ ಸಮೀರ್, ಜನರು ಜಾತಿ ಮತ್ತು ಧರ್ಮವನ್ನು ಈ ವಿಷಯಕ್ಕೆ ಏಕೆ ಎಳೆದು ತರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಈ  ನಡುವೆ ಎಡಿಜಿಪಿ ( ಕಾನೂನು ಮತ್ತು ಸುವ್ಯವಸ್ಥೆ) ಅವರು ಹೊರಡಿಸಿದ್ದಾರೆ ಎನ್ನಲಾದ ಆದೇಶದ ಪ್ರತಿಯೊಂದು ಬುಧವಾರ ಸಂಜೆಯಿಂದ ವೈರಲ್ ಆಗಿದೆ. ಈ ಆದೇಶದಲ್ಲಿ “ಸಮೀರ್ ವೀಡಿಯೊದಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದ್ದು, ಸಾಮಾಜಿಕ ಮಾಧ್ಯಮ ಮಾನಿಟರಿಂಗ್ ಸೆಲ್ ಚುರುಕುಗೊಳಿಸಿ ಕ್ರಮ ಕೈಗೊಳ್ಳಬೇಕು” ಎಂಬ ಆದೇಶ ನೀಡಲಾಗಿದ್ದು, ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. </p>



<p>ಎಡಿಜಿಪಿ ಹೊರಡಿಸಿದ್ದಾರೆ ಎನ್ನಲಾದ ಈ ಆದೇಶದಲ್ಲಿ, “ಇತ್ತೀಚಿಗೆ ಸಮೀರ್ ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಹರಿಬಿಟ್ಟದ್ದು, ಘಟಕಾಧಿಕಾರಿಗಳು ಈ ವಿಷಯವನ್ನು ತಮ್ಮ ಘಟಕಗಳಲ್ಲಿರುವ Social Media Monitoring Cell ಮುಖೇನ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ವಿಫಲರಾಗಿರುತ್ತೀರಿ. ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ/ವಿರೋಧ ಅನಿಸಿಕೆಗಳು ಉದ್ಭವಿಸಿ ಸಾಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿರುತ್ತದೆ. ಆದ್ದರಿಂದ, Social Media Monitoring Cell ಚುರುಕುಗೊಳಿಸುವುದು ಹಾಗೂ ಈ ಕುರಿತಂತೆ ಕೈಗೊಂಡ ಕ್ರಮದ ಬಗ್ಗೆ ಮಾನ್ಯ ಎಡಿಜಿಪಿ, ಕಾನೂನು ಮತ್ತು ಸುವ್ಯವಸ್ಥೆ ರವರಿಗೆ ಮಾಹಿತಿ ನೀಡುವುದು” ಎಂದು ಹೇಳಿದೆ.</p>



<p>ಮಾಜಿ ಪೊಲೀಸ್ ಅಧಿಕಾರಿ, ಸೌಜನ್ಯ ಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ಗಿರೀಶ್ ಮಟ್ಟಣ್ಣನವರ್ ಅವರ ಜೊತೆಗೆ ಸಮೀರ್ ಅವರು ಬುಧವಾರ ತಡರಾತ್ರಿ ಫೇಸ್‌ಬುಕ್ ಲೈವ್‌ನಲ್ಲಿ ತನಗೆ ವ್ಯಾಪಕ ಜೀವ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಹೇಳಿದ್ದಾರೆ.</p>



<p>ಲೈವ್‌ನಲ್ಲಿ ಮಾತನಾಡಿದ ಸಮೀರ್, “ಪ್ರಸ್ತುತ ನನ್ನ ಪರಿಸ್ಥತಿ ತುಂಬಾ ಕೆಟ್ಟದಾಗಿದ್ದು, ಈಗಾಗಲೆ ಪೊಲೀಸ್ ನೋಟಿಸ್ ಬಂದಿದೆ. ಸುಮಾರು ರಾತ್ರಿ 10;45ರ ಹೊತ್ತಿಗೆ ಪೊಲೀಸರು ಬಂದು ನೋಟಿಸ್ ಕೊಟ್ಟು ಹೋಗಿದ್ದಾರೆ. ಅದಾಗ್ಯೂ ನನಗೆ ಯಾವುದೇ ಭಯವಿಲ್ಲ. ನಾನು ವಿಡಿಯೊದಲ್ಲಿ ಹೇಳಿರುವ ಎಲ್ಲಾ ವಿಚಾರಗಳಿಗೂ ಸಾಕ್ಷಿಯಿದೆ. ನನಗೆ ಕಾನೂನಿನ ಮೇಲೆ ನಂಬಿಕೆಯಿದ್ದು, ಕೋರ್ಟ್‌ನ ಮುಂದೆ ಮತ್ತಷ್ಟು ವಿಸೃತವಾಗಿ ಮಂಡಿಸುತ್ತೇನೆ. ಈ ಬಗ್ಗೆ ಯಾವುದೇ ತೊಂದರೆಯಿಲ್ಲ” ಎಂದು ಹೇಳಿದ್ದಾರೆ.</p>



<p>ಪ್ರಸ್ತುತ ತನಗೆ ತೊಂದರೆ ಆಗುತ್ತಿರುವುದು, ಮುಸ್ಲಿಮನೊಬ್ಬ ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ್ದೆ ತಪ್ಪು ಹಾಗೂ ಹಿಂದೂ ವಿರೋಧಿ ಎಂದು ಬಿಂಬಿಸಲಾಗುತ್ತಿದೆ ಆದರೆ, ನಾನು ಅನ್ಯಾಯದ ವಿರುದ್ಧ ಧ್ವನಿಯೆತ್ತಿದ್ದೇನೆ, ಅದು ನನ್ನ ಧರ್ಮ, ಅದನ್ನು ನಾನು ಪಾಲಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.</p>



<p>“ಒಂದು ವೇಳೆ ನಾನು ಹಿಂದೂ ವಿರೋಧಿ ಆಗಿದ್ದರೆ, ಒಬ್ಬ ಹಿಂದೂ ಹುಡುಗಿಗೆ ಆಗಿರುವ ಅನ್ಯಾಯದ ಬಗ್ಗೆ ನಾನು ಯಾಕೆ ಧ್ವನಿ ಎತ್ತಬೇಕು? ನ್ಯಾಯದ ಬಗ್ಗೆ ಮಾತನಾಡೋಣ. ಅದುವೇ ಧರ್ಮ” ಎಂದು ಸಮೀರ್ ಅವರು ಫೇಸ್‌ಬುಕ್ ಲೈವ್‌ನಲ್ಲಿ ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>&#8220;ಸೌಜನ್ಯಳ ಪ್ರಕರಣ ಮುಗಿದ ಅಧ್ಯಾಯವಲ್ಲ. ಮುಚ್ಚಲ್ಪಟ್ಟದ್ದು ಮತ್ತೆ ಆರಂಭವಾಗಿದೆ&#8221;</title>
		<link>https://peepalmedia.com/saujanyas-case-is-not-a-finished-chapter-what-was-closed-is-open-again/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 19 Aug 2023 13:37:46 +0000</pubDate>
				<category><![CDATA[ವಿಶೇಷ]]></category>
		<category><![CDATA[Dharmastala]]></category>
		<category><![CDATA[news]]></category>
		<category><![CDATA[Odanadi Stanley]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Soujanya murder case]]></category>
		<category><![CDATA[writing]]></category>
		<guid isPermaLink="false">https://peepalmedia.com/?p=25977</guid>

					<description><![CDATA[ಅಪಹರಣ ಹಾಗೂ ಅತ್ಯಾಚಾರಕ್ಕೊಳಗಾಗಿ ಕೊಲೆಗೈಯ್ಯಲ್ಪಟ್ಟ ಹದಿನಾರರ ಬಾಲೆ ಸೌಜನ್ಯಳ ಚೈತನ್ಯವು ಕರುನಾಡಿನ ಹಾಗೂ ತುಳುನಾಡಿನ ಜನರ ತಾಯ್ತನ ಹಾಗೂ ನಾಗರಿಕ ಪ್ರಜ್ಞೆಯನ್ನು ಬಡಿದೆಬ್ಬಿಸಿ, ಎಲ್ಲಾ ಮಾನವ ಮಿತಿಗಳನ್ನು ದಾಟಿ , ಹಳ್ಳ ಕೊಳ್ಳಗಳ ನಡುವೆ ಓಡುತ್ತಾ , ಧುಮು ಧುಮುಕಿ ಹರಿದು, ಹೋರಾಟದ ಸಾಗರದಲ್ಲಿ ಮಿಲನಗೊಂಡು ರೂಪ ಕಳೆದುಕೊಳ್ಳುತ್ತಿರುವ ಹಲವು ನದಿಗಳ ಆವೇಗವಾಗಿ, ಆ ಸಾಗರದ ಅಲೆಗಳ ಮೇಲೆ ಏರುಜವ್ವನೆಯಾಗಿ ನರ್ತಿಸುತ್ತಾ ಭೋರ್ಗರೆದು ಅಪ್ಪಳಿಸುತ್ತಿರುವುದನ್ನು ನೋಡಿ ಅನುಭವಿಸಿದವರಾರೂ &#8220;ಆಕೆ ಕಳೆದು ಹೋಗಿದ್ದಾಳೆ&#8221; ಎನ್ನುವ ಅವಿವೇಕದ ಜಾಣತನವನ್ನು ಪ್ರದರ್ಶಿಸಲೆತ್ನಿಸಲಾರಾರು. [&#8230;]]]></description>
										<content:encoded><![CDATA[
<p>ಅಪಹರಣ ಹಾಗೂ ಅತ್ಯಾಚಾರಕ್ಕೊಳಗಾಗಿ ಕೊಲೆಗೈಯ್ಯಲ್ಪಟ್ಟ ಹದಿನಾರರ ಬಾಲೆ ಸೌಜನ್ಯಳ ಚೈತನ್ಯವು ಕರುನಾಡಿನ ಹಾಗೂ ತುಳುನಾಡಿನ ಜನರ ತಾಯ್ತನ ಹಾಗೂ ನಾಗರಿಕ ಪ್ರಜ್ಞೆಯನ್ನು ಬಡಿದೆಬ್ಬಿಸಿ, ಎಲ್ಲಾ ಮಾನವ ಮಿತಿಗಳನ್ನು ದಾಟಿ , ಹಳ್ಳ ಕೊಳ್ಳಗಳ ನಡುವೆ ಓಡುತ್ತಾ , ಧುಮು ಧುಮುಕಿ ಹರಿದು, ಹೋರಾಟದ ಸಾಗರದಲ್ಲಿ ಮಿಲನಗೊಂಡು ರೂಪ ಕಳೆದುಕೊಳ್ಳುತ್ತಿರುವ ಹಲವು ನದಿಗಳ ಆವೇಗವಾಗಿ, ಆ ಸಾಗರದ ಅಲೆಗಳ ಮೇಲೆ ಏರುಜವ್ವನೆಯಾಗಿ ನರ್ತಿಸುತ್ತಾ ಭೋರ್ಗರೆದು ಅಪ್ಪಳಿಸುತ್ತಿರುವುದನ್ನು ನೋಡಿ ಅನುಭವಿಸಿದವರಾರೂ &#8220;ಆಕೆ ಕಳೆದು ಹೋಗಿದ್ದಾಳೆ&#8221; ಎನ್ನುವ ಅವಿವೇಕದ ಜಾಣತನವನ್ನು ಪ್ರದರ್ಶಿಸಲೆತ್ನಿಸಲಾರಾರು.</p>



<p>ಪ್ರಜಾಸತ್ತೆಯಲ್ಲಿ ಸೇವಕರಾಗಿ ಆಯ್ಕೆಯಾದವರು ಎಚ್ಚರಿಕೆಯಿಂದ ಮಾತುಗಳನ್ನಾಡಬೇಕಾಗಿದೆ. ನಿಮ್ಮ ಮಾತುಗಳನ್ನು ಈ ನೆಲದ ಜನ ಸೂಕ್ಷ್ಮವಾಗಿ ಗಮನಿಸಿ ಗಂಭೀರವಾಗಿ ಪರಿಗಣಿಸಲಿದ್ದಾರೆ. ಸೌಜನ್ಯ ಈಗಾಗಲೇ ಈ ನೆಲದ ಮಗಳಾಗಿ ಹೋಗಿದ್ದಾಳೆ. ಆ ಎಳೆ ಬಾಳೆಯ ಸುಳಿಯ ಮೇಲೆ ಬಿರುಗಾಳಿಯಂತೆ ಎರಗಿ ಭಕ್ಷಿಸಿದವರನ್ನು ರಕ್ಷಿಸಿ, ನ್ಯಾಯ ದೇವತೆಯನ್ನು ಹೂತು ಮಣ್ಣು ಮಾಡಿದ ಅಧಿಕಾರಿಗಳು ನಿಮ್ಮ ಇಲಾಖೆಯಲ್ಲೇ ಇನ್ನೂ ಸೇವೆಯಲ್ಲಿರುವುದನ್ನು ಮರೆಯದಿರಿ. ಒಬ್ಬ ಬಡ ಬ್ರಾಹ್ಮಣ ಮೇಷ್ಟ್ರ ಮಗನನ್ನು ಈ ಪ್ರಕರಣದಲ್ಲಿ ನೇಣುಗಂಬದವರೆಗೆ ತಂದು ನಿಲ್ಲಿಸಿದ ಕ್ರೂರಿಗಳು ಇನ್ನೂ ಉಸಿರಾಡುತ್ತಿದ್ದಾರೆ. ಯಾವತ್ತು ಮಾನ್ಯ ನ್ಯಾಯಾಲಯ ಸಂತೋಷ್ ರಾವ್ ಗೂ ಈ ಅಪರಾಧಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತೀರ್ಪು ನೀಡಿತೋ ಅಂದೇ ಸೌಜನ್ಯಳ ಪ್ರಕರಣ ಮರು ಹುಟ್ಟು ಪಡೆದಿದೆ. ಸಂತೋಷ್ ರಾವ್ ನ ಮೇಲಾದ ದೌರ್ಜನ್ಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯನ್ನು ರಾಜ್ಯ ಮಾನವ ಹಕ್ಕುಗಳ ಆಯೋಗವು ಗಂಭೀರವಾಗಿ ಪರಿಗಣಿಸಿ, ದೂರನ್ನು ದಾಖಲಿಸಿಕೊಂಡಿದೆ ಎಂಬುದು ನಿಮ್ಮ ಗಮನದಲ್ಲಿರಲಿ. ಸೌಜನ್ಯಳ ಪ್ರಕರಣಕ್ಕೆ ಪ್ರಾಣವಾಯು ತುಂಬುವ ಕಾರ್ಯ ಗೃಹ ಇಲಾಖೆಯಲ್ಲಿರುವ ತಮ್ಮಂತಹ ವೈದ್ಯರಿಂದ ತುರ್ತಾಗಿ ಆಗಬೇಕಿದೆ. ಈ ಚದುರಂಗವನ್ನು ಗೆಲ್ಲಲು ಇನ್ನೂ ಕೆಲವು ವಿಫುಲ ಅವಕಾಶಗಳು ಸರ್ಕಾರಕ್ಕಿದೆ. ದಕ್ಷ ಕಮಿಷನರೇಟ್ ರಚಿಸಿ, ವರದಿ ಕೇಳಿ ಪಡೆಯಿರಿ. ಅದರ ಆಧಾರದ ಮೇಲೆ ಮರು ತನಿಖೆ ಸೇರಿದಂತೆ ಇನ್ನಿನ್ಯಾವ ಕಾನೂನಿನ ಹೆಜ್ಜೆಗಳನ್ನು ಇರಿಸಬೇಕೋ ಯೋಚಿಸಿ. ಇದಕ್ಕೆ ಬೇಕಿರುವುದು ತಜ್ಞರ ಕಾನೂನು ಸಲಹೆ, ಒಂದು ದಕ್ಷ ತನಿಖಾ ತಂಡ ಹಾಗೂ ನಿಮ್ಮ ರಾಜಕೀಯ ಇಚ್ಛಾಶಕ್ತಿಯ ಪ್ರಯೋಗ! ಸರ್ಕಾರದ ಸಂಬಳ ತಿಂದು , ಪ್ರಕರಣಕ್ಕೆ ಗೋರಿ ಕಟ್ಟಿ, ಅಮಾಯಕರನ್ನು ಸೆರೆಮನೆಗೆ ತಳ್ಳಿ, ನಿಜವಾದ ಪಾತಕಿಗಳನ್ನು ರಕ್ಷಿಸಿದ ವೈದ್ಯರು ಹಾಗೂ ಪೊಲೀಸ್ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು ಎಂದು ಮಾನ್ಯ ಸಿಬಿಐ ನ್ಯಾಯಾಲಯ ಹೇಳಿರುವಾಗ ಹೇಗೆ ಅದು ಮುಗಿದ ಅದ್ಯಾಯವಾಗುತ್ತೆ ಹೇಳಿ? ನಿಜವಾದ ಪಾಪಿಗಳನ್ನು ಪತ್ತೆ ಹಚ್ಚಿ ಕುಣಿಕೆಯನ್ನೂ ಬಿಗಿಗೊಳಿಸಬೇಕಾದ ನೀವು ಈ ಮಾತನ್ನು ಆಡಿದಲ್ಲಿ ಬೇರೆ ಅರ್ಥವನ್ನು ನೀಡೀತು ಜೋಪಾನ! ಆ ಪಾಪಿಗಳ ಹೇಸಿಗೆಯು ಇಲಾಖೆಯ ಹೊಸ ಮೇಟಿಯಾಗಿರುವ ನಿಮ್ಮ ಮೆಟ್ಟುಗಳಿಗೆ ಅಂಟಿಕೊಂಡಿದೆ. ತೊಳೆಯಲಂಜಿದಲ್ಲಿ ನಿಮ್ಮ ಗೌರವಕ್ಕೇ ಚ್ಯುತಿಯಾದೀತು. ನೀವು ಸುಲಭವಾಗಿ ನುಡಿದಂತೆ ಸೌಜನ್ಯಳಿಗೆ ನ್ಯಾಯ ದೊರಕಿಸುವ ಹೋರಾಟ ಮುಗಿದ ಅಧ್ಯಾಯವಲ್ಲ. ಆರಂಭವಷ್ಟೇ. ನಿಮ್ಮ ನಡೆ ಹಾಗೂ ನುಡಿಯಲ್ಲಿ ಕಾನೂನಿನ ಜ್ಞಾನ ಮತ್ತು ರಾಜಕೀಯ ಇಚ್ಛಾಶಕ್ತಿಯ ಕೊರತೆ ಕಾಣದಿರಲಿ.</p>



<p>&#8220;ಸೌಜನ್ಯಳಿಗಾಗಿ ನ್ಯಾಯ&#8221; ಎಂಬುದು 11 ವರ್ಷಗಳ ಬಳಿಕ ಭ್ರಷ್ಟರು ಕಟ್ಟಿದ ಗೋರಿಯ ಎದೆಯ ಸೀಳಿ ಹೊರಬಂದು ಮೊಳಗಿದ ನೊಂದವರ ಕೂಗು. ಹೋರಾಟ ಕವಿ ಸಿದ್ದಲಿಂಗಯ್ಯ ಹೇಳಿದ್ದನ್ನು ನೀವಿನ್ನೂ ಮರೆತಿರಲಾರಿರಿ ಎಂದು ಅಂದುಕೊಂಡಿದ್ದೆನೆ.</p>



<p><strong>ನೆನ್ನೆ ದಿನ ನನ್ನ ಜನ ಬೆಟ್ಟದಂತೆ ಬಂದರು</strong><br>ಕಪ್ಪು ಮುಖ, ಬೆಳ್ಳಿ ಗಡ್ಡ, ಉರಿಯುತ್ತಿರುವ ಕಣ್ಣುಗಳು! ಹಗಲು ರಾತ್ರಿಗಳನ್ನು ಸೀಳಿ ನಿದ್ದೆಯನ್ನು ಒದ್ದರು. ಕಂಬಳಿಗಳು ಕೊರಗಿದವು ಎದ್ದೇಳುವ ರೊಚ್ಚಿಗೆ. ಭೂಕಂಪನವಾಯಿತು ಅವರು ಕುಣಿವ ಹುಚ್ಚಿಗೆ. ಬೀದಿಯಲ್ಲಿ ಗಲ್ಲಿಯಲ್ಲಿ ಬೇಲಿ ಮರೆಯ ಮೆಳೆಗಳಲ್ಲಿ , ಯಜಮಾನನ ಅಟ್ಟದಲ್ಲಿ, ಧಣಿ ಕೂರುವ ಪಟ್ಟದಲ್ಲಿ ಎಲ್ಲೆಲ್ಲೂ ನನ್ನ ಜನ ನೀರಿನಂತೆ ನಿಂತರು&#8221;</p>



<p>ಮೊನ್ನೆ ದಿನ ಸುಳ್ಯದಲ್ಲಿ ಕಪ್ಪು ಸಾಗರವೇ ನಿಂತಿತ್ತು. ನನ್ನ ಸ್ನೇಹಿತರೂ, ಪ್ರೀತಿಯ ಗುರುಗಳಾದ &#8220;ಜನ್ನಿ&#8221;ಯ ನೋವಿನ ಕೂಗಿನಂತಿದ್ದ ಹಾಡುಗಳು ನನ್ನ ಹಾಗೂ ಅಲ್ಲಿಯ ಜನಗಳ ಎದೆಯ ಬಡಿತ ಹೆಚ್ಚಿಸುತಲಿತ್ತು. ಎಲ್ಲಾ ಜಾತಿ, ಮತ ಪಂಥಗಳ ಆ ಜನ ಸಾಗರದಲ್ಲಿ ನೈಜವಾದ ಮನುಜ ಧರ್ಮವೊಂದು ಸೌಜನ್ಯಳಿಗಾಗಿ ಸಮರವನ್ನು ಸಾರಿತ್ತು. ಈ ನೆರೆ ಬಂದ ಹೊಳೆಯು ನಿಜವಾದ ಧಾರ್ಮಿಕರು, ದಲಿತ, ಮಹಿಳಾಪರ, ಜನಪರ, ಪ್ರಗತಿಪರ, ಹಾಗೂ ಸಜ್ಜನರಿಂದ ಕೂಡಿದೆ. ಡೊಂಗಿಗಳೂ ಕೂಡಾ ಇಲ್ಲಿ ಬೆತ್ತಲಾಗುತ್ತಿದ್ದಾರೆ. ಇಲ್ಲಿ ರಾಜ್ಯದ ಸಕಲ ಜನರೂ ಸೌಜನ್ಯಗಳಿಗಾಗಿ ನ್ಯಾಯವನ್ನು ಅಪೇಕ್ಷಿಸುತ್ತಿದ್ದಾರೆ. ಆರೋಪ ಹೊತ್ತವರು ಹಾಗೂ ಆರೋಪಿಗಳ ಪಡೆಯವರು ಮಾತ್ರ ಈ ಹೋರಾಟವನ್ನು ವಿರೋಧಿಸುತ್ತಿದ್ದಾರೆ. ಇದೊಂದು ದುರ್ಜನ &#8211; ಸಜ್ಜನರ ಸಂಗ್ರಾಮವೂ ಹೌದು! ಇಂತಹದೊಂದು ಚಳುವಳಿ ಕರುನಾಡಿನಲ್ಲಿ ಜೀವ ತಳೆದಿರುವುದ್ದಕ್ಕೆ ನಿಮಗೂ ಹೆಮ್ಮೆ ಇರಲಿ.</p>



<p>ಆದ್ದರಿಂದ ಈ ಬರಹವನ್ನು ಜನಸಾಮಾನ್ಯನ ಅರಿಕೆ ಎಂದೇ ತಿಳಿಯಿರಿ. ನಿಮ್ಮಗಳ ಮೇಲೆ ಜನಸಾಮಾನ್ಯ ಇಟ್ಟಿರುವ ನಂಬಿಕೆಯನ್ನು ದಯಮಾಡಿ ಹುಸಿ ಮಾಡದಿರಿ. ಇದು ರಾಜಕಾರಣದ ದಾಳವಲ್ಲ. ಕರುನಾಡಿನ ಹೆಣ್ಣು ಮಕ್ಕಳ ಮಾನ ಹಾಗೂ ಪ್ರಾಣದ ವಿಚಾರ. ಸೂತಕದ ಮನೆಯಲ್ಲಿ ನೀವಾಡುವ ಮಾತುಗಳು ನ್ಯಾಯ ಸಮ್ಮತವಾಗಿರಲಿ. ಸಾಂತ್ವನ ನೀಡಿ ಹೆತ್ತ ಒಡಲ ಉರಿಯನ್ನು ಆರಿಸುವಂತಿರಲಿ ಮತ್ತು ವಿವೇಕ ಹಾಗೂ ವಿವೇಚನೆಯ ದ್ಯೋತಕವಾಗಿರಲಿ.</p>



<p>ಬರಹ : ಒಡನಾಡಿ ಸ್ಟ್ಯಾನ್ಲಿ</p>
]]></content:encoded>
					
		
		
			</item>
		<item>
		<title>ಸೌಜನ್ಯ ಹತ್ಯೆ ಪ್ರಕರಣದ ಆರೋಪಿ ಖುಲಾಸೆ : ಸಿಬಿಐ ಮರು ತನಿಖೆಗೆ ಕುಟುಂಬಸ್ಥರ ಒತ್ತಾಯ</title>
		<link>https://peepalmedia.com/accused-acquitted-in-courtesy-killing-case-family-members-demand-re-investigation-by-cbi/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 20 Jun 2023 02:51:03 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[CBI]]></category>
		<category><![CDATA[cbi court]]></category>
		<category><![CDATA[Dharmastala]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Soujanya murder case]]></category>
		<guid isPermaLink="false">https://peepalmedia.com/?p=22534</guid>

					<description><![CDATA[ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಏಕೈಕ ಆರೋಪಿಯನ್ನೂ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದ ಒಂದು ದಿನದ ನಂತರ, ಇಂತಹ ಅಪರಾಧದ ಹಿಂದಿರುವ ನಿಜವಾದ ಆರೋಪಿಗಳನ್ನು ಪತ್ತೆಹಚ್ಚಲು ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಸಂತ್ರಸ್ತೆಯ ಕುಟುಂಬ ಒತ್ತಾಯಿಸಿದೆ. 2012ರಲ್ಲಿ ಧರ್ಮಸ್ಥಳದ ನಿರ್ಜನ ಸ್ಥಳದಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯಳನ್ನು ಕತ್ತು ಹಿಸುಕಿ ಶಾಲಿನಿಂದ ಕೈ ಕಟ್ಟಿ ಅಮಾನುಷವಾಗಿ ಅತ್ಯಾಚಾರ ಎಸಗಲಾಗಿತ್ತು. ನಂತರ ಆಕೆಯನ್ನು ಹತ್ಯೆ ಮಾಡಲಾಗಿತ್ತು. ಘಟನೆ ಬಳಿಕ ಬೆಳ್ತಂಗಡಿ ಪೊಲೀಸರು [&#8230;]]]></description>
										<content:encoded><![CDATA[
<p>ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಏಕೈಕ ಆರೋಪಿಯನ್ನೂ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದ ಒಂದು ದಿನದ ನಂತರ, ಇಂತಹ ಅಪರಾಧದ ಹಿಂದಿರುವ ನಿಜವಾದ ಆರೋಪಿಗಳನ್ನು ಪತ್ತೆಹಚ್ಚಲು ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಸಂತ್ರಸ್ತೆಯ ಕುಟುಂಬ ಒತ್ತಾಯಿಸಿದೆ.</p>



<p>2012ರಲ್ಲಿ ಧರ್ಮಸ್ಥಳದ ನಿರ್ಜನ ಸ್ಥಳದಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯಳನ್ನು ಕತ್ತು ಹಿಸುಕಿ ಶಾಲಿನಿಂದ ಕೈ ಕಟ್ಟಿ ಅಮಾನುಷವಾಗಿ ಅತ್ಯಾಚಾರ ಎಸಗಲಾಗಿತ್ತು. ನಂತರ ಆಕೆಯನ್ನು ಹತ್ಯೆ ಮಾಡಲಾಗಿತ್ತು. ಘಟನೆ ಬಳಿಕ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಸಂತೋಷ್ ರಾವ್​ನನ್ನು ಬಂಧಿಸಿದ್ದರು. ಮಾನಸಿಕ ಸ್ಥಿಮಿತ ಕಳೆದುಕೊಂಡು ಕೃತ್ಯ ನಡೆಸಿದ್ದ ಎನ್ನಲಾಗಿತ್ತು. ಆ ನಂತರ ಆರೋಪಿಯು ಜಾಮೀನುನಲ್ಲಿ ಬಿಡುಗಡೆಗೊಂಡಿದ್ದ. ಹಲವು ಹೋರಾಟದ ಬಳಿಕ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಇದೀಗ 11 ವರ್ಷಗಳ ನಂತರ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಆರೋಪಿ ಸಂತೋಷ್ ರಾವ್ ದೋಷ ಮುಕ್ತ ಎಂದು ಹೇಳಿದೆ.</p>



<p>ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಸೌಜನ್ಯ ತಾಯಿ ಕುಸುಮಾವತಿ ಪ್ರತಿಕ್ರಿಯಿಸಿದ್ದು “ನ್ಯಾಯಾಲಯದ ತೀರ್ಪಿನಿಂದ ನಮಗೆ ಕೊಂಚ ಮಟ್ಟಿಗೆ ಸಮಾಧಾನವಿದೆ. ನಿಜವಾದ ಅಪರಾಧಿ ಸಂತೋಷ್ ರಾವ್ ಅಲ್ಲ ಎಂಬುದನ್ನು ನಾವು ಕಳೆದ 11 ವರ್ಷಗಳಿಂದ ಹೇಳುತ್ತಾ ಬಂದಿದ್ದೇವೆ. ಅವನು ಅತ್ಯಾಚಾರಿ ಅಥವಾ ಕೊಲೆಗಾರನೂ ಅಲ್ಲ. ಈ ಮೂಲಕ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ಹೊರಹಾಕಿದೆ. ಆದರೆ ನಿಜವಾದ ಅಪರಾಧಿ ಯಾರು ಎಂಬುದನ್ನು ಸಿಬಿಐ ಮರು ತನಿಖೆ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದಿದ್ದಾರೆ.</p>



<p>&#8220;ಈಗಾಗಲೇ ನಾವು ಶಂಕಿತರ ನಾಲ್ಕು ಹೆಸರುಗಳನ್ನು ನೀಡಿದ್ದೇವೆ. ಅವರನ್ನು ವಿಚಾರಣೆಗೆ ಒಳಪಡಿಸಬೇಕು. ನನ್ನ ಮಗಳ ನಿಜವಾದ ಕೊಲೆಗಾರರು ಯಾರೆಂದು ತಿಳಿಯಲು ನಾವು ಬಯಸುತ್ತೇವೆ. ನನ್ನ ಮಗಳ ಹತ್ಯೆಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ&#8221; ಎಂದು ಮೃತ ಸೌಜನ್ಯ ತಾಯಿ ಕುಸುಮಾವತಿ ಪ್ರತಿಕ್ರಿಯಿಸಿದ್ದಾರೆ.</p>



<p>&#8220;ನನ್ನ ಮಗಳು ಸೌಜನ್ಯ ಕಾಲೇಜು ಮುಗಿಸಿ ಎಷ್ಟು ಹೊತ್ತಾದರೂ ಮನೆಗೆ ಬಾರದೇ ಇದ್ದಾಗ ರಾತ್ರಿ 2 ಗಂಟೆಯವರೆಗೂ ಹಡುಕಾಟ ನಡೆಸಿದ್ದೆವು. ಸುಮಾರು 2,000 ಜನರು ಹುಡುಕಾಟದಲ್ಲಿ ಜೊತೆಯಾಗಿದ್ದರು. ಒಂದು ದಿನದ ನಂತರ ಆಕೆಯ ಶವ ಪತ್ತೆಯಾಯಿತು. ಕೊಲೆಗೂ ಮುನ್ನ ದುಷ್ಕರ್ಮಿಗಳು ಆಕೆಗೆ ಚಿತ್ರಹಿಂಸೆ ನೀಡಿದ್ದಾರೆ ಎಂಬುದನ್ನು ಮೇಲ್ನೋಟಕ್ಕೆ ಗಮನಿಸಿದವರೂ ಹೇಳುತ್ತಾರೆ. ನನಗೆ ನನ್ನ ಕಣ್ಣುಗಳಿಂದ ಮಗಳನ್ನು ಆ ಸ್ಥಿತಿಯಲ್ಲಿ ನೋಡಲು ಮನಸ್ಸಾಗಿಲ್ಲ&#8221; ಎಂದರು. ಹಾಗೆಯೇ &#8220;ಶುರುವಿನ ದಿನಗಳಲ್ಲಿ ತನಿಖಾಧಿಕಾರಿಗಳ ಕಡೆಯಿಂದಲೇ ಸಾಕ್ಷ್ಯ ನಾಶವಾಗಿತ್ತು. ಅವಳು ಸತ್ತ ದಿನ, ಮಳೆ ಬೀಳುತ್ತಿತ್ತು ಮತ್ತು ಅವಳ ದೇಹ ಮತ್ತು ಬಟ್ಟೆ ನೀರಿನಲ್ಲಿ ನೆನೆಸಿರಬಹುದು. ಆದರೆ ಅದರ ಯಾವುದೇ ಕುರುಹು ಅವಳ ದೇಹದ ಮೇಲೆ ಅಥವಾ ಆ ಜಾಗದಲ್ಲಿ ಇರದಂತೆ ತನಿಖಾಧಿಕಾರಿಗಳು ಮಾಡಿದ್ದರು.&#8221;</p>



<p>&#8220;ಅಷ್ಟೆ ಅಲ್ಲದೆ ನಮ್ಮ ದೈನಂದಿನ ಚಟುವಟಿಕೆಗಳನ್ನು ಗಮನದಲ್ಲಿಡಲು, ನಮ್ಮನ್ನು ನಿರಂತರವಾಗಿ ಗಮನಿಸಲು ಅಪರಾಧಿ ಕಡೆಯವರೇ ನಮ್ಮ ಸುತ್ತಲೂ ಹಿಂಬಾಲಿಸುತ್ತಿದ್ದಾರೆ. ನಾವು ಪ್ರತಿನಿತ್ಯ ಇಂತಹ ಕಿರುಕುಳ ಅನುಭವಿಸುತ್ತೇವೆ, ಆದರೆ ನಾವು ಯಾರಿಗೂ ಹೆದರುವುದಿಲ್ಲ. ಈ ವರ್ಷದ ಜನವರಿಯಲ್ಲಿ ಹೊಸ ಗೃಹಪ್ರವೇಶ ಸಮಾರಂಭ ನಡೆದಿದೆ. ಹಾಗೆ ನಾವು ಅವಳ ಸಮಾಧಿಯ ಬಳಿ ಮರವನ್ನು ಬೆಳೆಸಿದ್ದೇವೆ. ಮುಂಬರುವ ಅವಳ ಹುಟ್ಟು ಹಬ್ಬದ ದಿನ ಅಕ್ಟೋಬರ್ 18 ರಂದು ನಾವು ಈ ವರೆಗೂ ಆರೋಪಿಸಿಕೊಂಡು ಬಂದಿರುವ ಶಂಕಿತರಾದ ಉದಯ್ ಜೈನ್, ಮಲ್ಲಿಕ್ ಜೈನ್, ಆಶ್ರಿತ್ ಜೈನ್ ಮತ್ತು ನಿಶ್ಚಲ್ ಜೈನ್ ವಿರುದ್ಧ ತನಿಖೆ ನಡೆಸುವಂತೆ ನಾವು ಅಧಿಕಾರಿಗಳಿಗೆ ಒತ್ತಾಯಿಸುತ್ತೇವೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಒತ್ತಡಕ್ಕೆ ಮಣಿದು ತನಿಖೆ ಬೇರೆಡೆಗೆ ತಿರುಗುತ್ತಿದೆ. ಇದು ಈ ಪ್ರಕರಣವನ್ನು ಮುಚ್ಚಿ ಹಾಕುವ ತಂತ್ರ. ಬೇರೆ ಯಾವ ಮಹಿಳೆಯೂ ಈ ರೀತಿ ಆಗದಂತೆ ನಾವು ಹೋರಾಟ ರೂಪಿಸುತ್ತೇವೆ ಎಂದು ಗಂಭೀರ ಆರೋಪ ಮಾಡಿದ್ದಾರೆ.</p>
]]></content:encoded>
					
		
		
			</item>
	</channel>
</rss>
