<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>dk shivakumar &#8211; Peepal Media</title>
	<atom:link href="https://peepalmedia.com/tag/dk-shivakumar/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 22 May 2025 08:00:13 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>dk shivakumar &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ನಗರದಲ್ಲಿ ಮಳೆ ಸಮಸ್ಯೆ, ಶಾಶ್ವತ ಪರಿಹಾರ ನಮ್ಮ ಆದ್ಯತೆ: ಡಿ.ಸಿ.ಎಂ</title>
		<link>https://peepalmedia.com/rain-problem-in-the-city-permanent-solution-is-our-priority-dcm/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 22 May 2025 08:00:13 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[dk shivakumar]]></category>
		<category><![CDATA[dks]]></category>
		<guid isPermaLink="false">https://peepalmedia.com/?p=59493</guid>

					<description><![CDATA[ಬೆಂಗಳೂರು: ರಾಜಧಾನಿಯಲ್ಲಿ ಮಳೆಯಿಂದಾಗಿರುವ ಸಮಸ್ಯೆ ಕುರಿತು ಜನರಿಗೆ ಆಕ್ರೋಶ ಇದೆ ನಿಜ. ಆದರೆ, ಮಳೆ ಪರಿಸ್ಥಿತಿ ನಿಭಾಯಿಸಲು ಶಾಶ್ವತ ಪರಿಹಾರ ನಮ್ಮ ಆದ್ಯತೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ನಾಡಿನಲ್ಲಿ ಮಳೆ ಹೆಚ್ಚಾಗಬೇಕು ಎಂದುಕೊಳ್ಳುತ್ತೇನೆ. ಅದರಿಂದ ಬೆಳೆ ಉತ್ತಮವಾಗಿ ನಾಡು ಸುಭಿಕ್ಷವಾಗಿರುತ್ತದೆ. ಆದರೆ, ಬೆಂಗಳೂರಿನಲ್ಲಿ ನಿರಂತರ ಮಳೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ನಮ್ಮ ಜವಾಬ್ದಾರಿ. ಹೀಗಾಗಿ ಮೂಲಸೌಕರ್ಯಗಳಲ್ಲಿನ ಬಹುಕಾಲದ ನ್ಯೂನ್ಯತೆಗಳನ್ನು ಸರಿಪಡಿಸುವ ಕಾರ್ಯ ಮಾಡುತ್ತಿದ್ದೇವೆ [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ರಾಜಧಾನಿಯಲ್ಲಿ ಮಳೆಯಿಂದಾಗಿರುವ ಸಮಸ್ಯೆ ಕುರಿತು ಜನರಿಗೆ ಆಕ್ರೋಶ ಇದೆ ನಿಜ. ಆದರೆ, ಮಳೆ ಪರಿಸ್ಥಿತಿ ನಿಭಾಯಿಸಲು ಶಾಶ್ವತ ಪರಿಹಾರ ನಮ್ಮ ಆದ್ಯತೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.</p>



<p>ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ನಾಡಿನಲ್ಲಿ ಮಳೆ ಹೆಚ್ಚಾಗಬೇಕು ಎಂದುಕೊಳ್ಳುತ್ತೇನೆ. ಅದರಿಂದ ಬೆಳೆ ಉತ್ತಮವಾಗಿ ನಾಡು ಸುಭಿಕ್ಷವಾಗಿರುತ್ತದೆ. ಆದರೆ, ಬೆಂಗಳೂರಿನಲ್ಲಿ ನಿರಂತರ ಮಳೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ನಮ್ಮ ಜವಾಬ್ದಾರಿ. ಹೀಗಾಗಿ ಮೂಲಸೌಕರ್ಯಗಳಲ್ಲಿನ ಬಹುಕಾಲದ ನ್ಯೂನ್ಯತೆಗಳನ್ನು ಸರಿಪಡಿಸುವ ಕಾರ್ಯ ಮಾಡುತ್ತಿದ್ದೇವೆ ಎಂದು ಹೇಳಿದರು.</p>



<p>ಇತ್ತೀಚಿಗೆ ಕೆರೆ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿ, ಅಗತ್ಯ ಕ್ರಮಗಳಿಗೆ ಸೂಚಿಸಿದಂತೆ ಅಧಿಕಾರಿಗಳು ಈಗಾಗಲೇ ಕಾರ್ಯೋನ್ಮುಖರಾಗಿದ್ದಾರೆ. ₹ 2,000 ಕೋಟಿಯಲ್ಲಿ ಇಡೀ ಬೆಂಗಳೂರಿನ ರಾಜಕಾಲುವೆಗಳ ಸಮಸ್ಯೆಗಳನ್ನು ಒಂದೇ ಸಾರಿ ಪೂರ್ಣಗೊಳಿಸಬೇಕೆಂದುಕೊಂಡು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದರು.</p>



<p>ಮಳೆ ಬಾಧಿತ ಪ್ರದೇಶಗಳಲ್ಲಿ ಬೇಸ್‌ಮೆಂಟ್ ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ ಟೌನ್ ಪ್ಲಾನಿಂಗ್‌ ನಲ್ಲಿ ಬದಲಾವಣೆ ತರುವ ಬಗ್ಗೆ ತೀರ್ಮಾನ ಮಾಡಿದ್ದೇವೆ. ಮಳೆ ನೀರು ನುಗ್ಗದಿದ್ದರೂ, ಕೆಲವೆಡೆ ನೆಲಮಹಡಿಗಳಲ್ಲಿ ಅಂತರ್ಜಲ ಬರುತ್ತಿದೆ. ಇದರಿಂದ ವಿದ್ಯುತ್‌ ಶಾರ್ಟ್‌ ಸರ್ಕೀಟ್‌ಗಳಾಗುತ್ತಿದೆ, ಇದರಿಂದ ಪ್ರಾಣ ಹಾನಿಗಳಾಗಿದೆ ಎಂದರು.</p>



<p>ಹೀಗಾಗಿ, ಹೊಸ ಕಟ್ಟಡಗಳಲ್ಲಿ ಈ ನೆಲಮಹಡಿಗಳಿಗೆ ಸಂಬಂಧಿಸಿದಂತೆ ತಾಂತ್ರಿಕವಾಗಿ ಸಮಾಲೋಚಿಸಿ, ತೀರ್ಮಾನ ಕೈಗೊಳ್ಳುತ್ತಿದ್ದೇವೆ. ಪರಿಹಾರ ಕ್ರಮಗಳು ಸದ್ಯಕ್ಕೆ ಸಮರೋಪಾದಿಯಲ್ಲಿದೆ. ಜನ ನೆಮ್ಮದಿಯಿಂದ ಬದುಕುವ, ಸುಸ್ಥಿರ ಬೆಂಗಳೂರು ನಿರ್ಮಾಣ ನಮ್ಮ ಕರ್ತವ್ಯವಾಗಿದ್ದು, ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.</p>
]]></content:encoded>
					
		
		
			</item>
		<item>
		<title>ಮನೆ-ಮನೆಗೆ ತೆರಳಿದ ಆರೋಗ್ಯ ಸಚಿವ: ಆರೋಗ್ಯ ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು</title>
		<link>https://peepalmedia.com/health-minister-goes-door-to-door-public-aware-of-health-safety-measures/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 22 May 2025 07:29:00 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[dk shivakumar]]></category>
		<category><![CDATA[dks]]></category>
		<category><![CDATA[flood]]></category>
		<guid isPermaLink="false">https://peepalmedia.com/?p=59490</guid>

					<description><![CDATA[ಬೆಂಗಳೂರು: ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ(ಬುಧವಾರ) ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆ ವ್ಯಾಪ್ತಿಯ ಕುಂಬಾರಗುಂಡಿ ಬಡಾವಣೆಯಲ್ಲಿ ,ಮನೆ ಮನೆಗೆ ತೆರಳಿ ಡೆಂಗ್ಯೂ ವಿರುದ್ಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್‌ ಗುಂಡೂರಾವ್‌ ಸಾರ್ವಜನಿಕರಿಗೆ ಅರಿವು ಮೂಡಿಸಿದ್ದಾರೆ. ನೀರಿನ ಘಟಕಗಳು, ನೀರಿನ ಟ್ಯಾಂಕ್, ಮನೆಯಲ್ಲಿನ ಬಿಂದಿಗೆ, ಮನೆಯ ಬಳಿಯ ಹಳೆಯ ಟೈರ್‌ಗಳು ಜೊತೆಗೆ ತೆಂಗಿನ ಚಿಪ್ಪುಗಳಲ್ಲಿ, “ಈಡಿಸ್ ಸೊಳ್ಳೆ”- “ಲಾರ್ವಾ” ಹುಳು ಹುಟ್ಟಲು ಕಾರಣವಾಗುತ್ತದೆ, ಆದ್ದರಿಂದ ಸಾಧ್ಯವಾದಷ್ಟು ಈ ಎಲ್ಲಾ [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ(ಬುಧವಾರ) ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆ ವ್ಯಾಪ್ತಿಯ ಕುಂಬಾರಗುಂಡಿ ಬಡಾವಣೆಯಲ್ಲಿ ,ಮನೆ ಮನೆಗೆ ತೆರಳಿ ಡೆಂಗ್ಯೂ ವಿರುದ್ಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್‌ ಗುಂಡೂರಾವ್‌ ಸಾರ್ವಜನಿಕರಿಗೆ ಅರಿವು ಮೂಡಿಸಿದ್ದಾರೆ.</p>



<p>ನೀರಿನ ಘಟಕಗಳು, ನೀರಿನ ಟ್ಯಾಂಕ್, ಮನೆಯಲ್ಲಿನ ಬಿಂದಿಗೆ, ಮನೆಯ ಬಳಿಯ ಹಳೆಯ ಟೈರ್‌ಗಳು ಜೊತೆಗೆ ತೆಂಗಿನ ಚಿಪ್ಪುಗಳಲ್ಲಿ, “ಈಡಿಸ್ ಸೊಳ್ಳೆ”- “ಲಾರ್ವಾ” ಹುಳು ಹುಟ್ಟಲು ಕಾರಣವಾಗುತ್ತದೆ, ಆದ್ದರಿಂದ ಸಾಧ್ಯವಾದಷ್ಟು ಈ ಎಲ್ಲಾ ತಾಣಗಳ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.</p>



<p>ನಗರದಲ್ಲಿ 40% ರಿಂದ 50ರಷ್ಟು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ನಾಗರಿಕರು ಸಹ ಹೆಚ್ಚಿನ ಮುನ್ನೆಚ್ಚರಿಕೆ ‌ ವಹಿಸುವುದು ಅಗತ್ಯವಾಗಿದೆ. ಸ್ವಚ್ಛತೆಯಿಂದ ಡೆಂಗಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ. ಮೊದಲು ನಮ್ಮ ಮನೆ ಸುತ್ತಾಮುತ್ತಾ ಪ್ರದೇಶಗಳು ಸ್ವಚ್ಚವಾಗಿಟ್ಟುಕೊಳ್ಳಬೇಕು ಎಂದು ಸಾರ್ವಜನಿಕರಿಗೆ ತಿಳಿಹೇಳಿದ್ದಾರೆ.</p>



<p>ಈ ಹಿನ್ನಲೆಯಲ್ಲಿ, ಡೆಂಗ್ಯೂ ನಿಯಂತ್ರಣಕ್ಕೆ ನಗರದಲ್ಲಿ 240 ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು 700 ಸ್ವಯಂ ಸೇವಕರನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>



<p>ನಮ್ಮ ಆರೋಗ್ಯಕ್ಕೆ ನಾವು ಮೊದಲ ಪ್ರಾಮುಖ್ಯ ನೀಡಬೇಕಿದೆ. ಉತ್ತಮ ಆರೋಗ್ಯಕ್ಕೆ ಉತ್ತಮ ವಾತಾವರಣ ನಿರ್ಮಾಣ ಅಗತ್ಯವಿದ್ದು ನಮ್ಮ ಸುತ್ತಮುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಅಲ್ಲಿ ಮಾತ್ರ ಮಳೆಹಾನಿ ಸಮಸ್ಯೆ: ಡಿ.ಕೆ.ಶಿ</title>
		<link>https://peepalmedia.com/rain-damage-problem-only-exists-wherever-there-are-bjp-mlas-d-k-s/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 22 May 2025 06:50:21 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[dk shivakumar]]></category>
		<category><![CDATA[dks]]></category>
		<category><![CDATA[flood]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=59487</guid>

					<description><![CDATA[ಬೆಂಗಳೂರು: ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆಹಾನಿ ಸಮಸ್ಯೆ ಎದುರಾಗಿದೆ. ಇದು ಅವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಟೀಕಿಸಿದ್ದಾರೆ. ರಾಜ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳು ಮಳೆ ನೀರಿನಿಂದ ಜಲಾವೃತವಾಗಿ, ಸಾವರ್ಜನಿಕರಿಗೆ ತೊಂದರೆಯಾಗಿರುವ ಹಿನ್ನಲೆಯಲ್ಲಿ, ರಾಜ್ಯದ ಮುಖ್ಯಮಂತ್ರಿ ಜೊತೆಗೆ ಉಪಮುಖ್ಯಮಂತ್ರಿಗಳು ಸಿಟಿ ರೌಂಡ್‌ ಹಾಕಿದ ಬಳಿಕ, ಈ ಕುರಿತು ರಾಜ್ಯ ಕಾಂಗ್ರೆಸ್‌ ಘಟಕ ತಮ್ಮ ʼಎಕ್ಸ್‌ʼ ಖಾತೆಯಲ್ಲಿ ಪೋಸ್ಟ್‌ ಮಾಡಿದೆ. ಪೋಸ್ಟ್‌ನಲ್ಲಿ, [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆಹಾನಿ ಸಮಸ್ಯೆ ಎದುರಾಗಿದೆ. ಇದು ಅವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಟೀಕಿಸಿದ್ದಾರೆ.</p>



<p>ರಾಜ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳು ಮಳೆ ನೀರಿನಿಂದ ಜಲಾವೃತವಾಗಿ, ಸಾವರ್ಜನಿಕರಿಗೆ ತೊಂದರೆಯಾಗಿರುವ ಹಿನ್ನಲೆಯಲ್ಲಿ, ರಾಜ್ಯದ ಮುಖ್ಯಮಂತ್ರಿ ಜೊತೆಗೆ ಉಪಮುಖ್ಯಮಂತ್ರಿಗಳು ಸಿಟಿ ರೌಂಡ್‌ ಹಾಕಿದ ಬಳಿಕ, ಈ ಕುರಿತು ರಾಜ್ಯ ಕಾಂಗ್ರೆಸ್‌ ಘಟಕ ತಮ್ಮ ʼಎಕ್ಸ್‌ʼ ಖಾತೆಯಲ್ಲಿ ಪೋಸ್ಟ್‌ ಮಾಡಿದೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆಹಾನಿ ಸಮಸ್ಯೆ ಎದುರಾಗಿದೆ. ಇದು ಅವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ.<br><br>ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ. ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಕ್ಷೇತ್ರದಲ್ಲೂ ಪರಿಶೀಲನೆ ಮಾಡಿದ್ದೇವೆ. ಅವರು ಈ… <a href="https://t.co/LNayDsCK0a">pic.twitter.com/LNayDsCK0a</a></p>&mdash; Karnataka Congress (@INCKarnataka) <a href="https://twitter.com/INCKarnataka/status/1925415832018202991?ref_src=twsrc%5Etfw">May 22, 2025</a></blockquote><script async src="https://platform.twitter.com/widgets.js" charset="utf-8"></script>
</div></figure>



<p>ಪೋಸ್ಟ್‌ನಲ್ಲಿ, ಬೆಂಗಳೂರಿನಲ್ಲಿ ಎಲ್ಲೇಲ್ಲಿ ಮಳೆ ಹಾನಿಯಾಗಿದೇಯೋ ಆ ಎಲ್ಲಾ ಪ್ರದೇಶಗಳು ಬಿಜೆಪಿ ಶಾಸಕರು ಇರುವಂತಹ ಸ್ಥಳಗಳು, ಇವು ಬಿಜೆಪಿ ಶಾಸಕರ ಕೆಲಸದ ವೈಕರಿಯನ್ನ ತಿಳಿಸುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಅವರು ವ್ಯಂಗಿಸಿದ್ದಾರೆ ಎಂದು ಹೇಳಿದೆ.</p>



<p>ಜೊತೆಗೆ ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ. ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಕ್ಷೇತ್ರದಲ್ಲೂ ಪರಿಶೀಲನೆ ಮಾಡಿದ್ದೇವೆ. ಅವರು ಈ ಭಾಗದ ರಸ್ತೆ ಅಗಲೀಕರಣ ವಿಚಾರವನ್ನು ಪ್ರಸ್ತಾಪಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಅವರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.</p>



<p>ಈ ವಿಚಾರವಾಗಿ ಎಲ್ಲೆಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಮಸ್ಯೆಯಾಗಿದೆಯೋ‌ ಆ ಜಾಗಗಳ ಫೋಟೊ, ವಿಡಿಯೊ ಮಾಡಿಕೊಂಡು ತುರ್ತು ವರದಿ ಸಲ್ಲಿಕೆ ಮಾಡುವಂತೆ ಡಿ.ಕೆ.ಶಿ ಅವರು ತಿಳಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಘಟಕ ತಮ್ಮ ಪೋಸ್ಟ್‌ ಹಂಚಿಕೊಂಡಿದೆ.</p>
]]></content:encoded>
					
		
		
			</item>
		<item>
		<title>ಸಂವಿಧಾನದ ಬಗ್ಗೆ ಡಿಕೆಶೀ ಹೇಳಿಕೆಗೆ ಬಿಜೆಪಿ ಮತ್ತು ಕಾಂಗ್ರೆಸ್ ವಾಗ್ವಾದ</title>
		<link>https://peepalmedia.com/bjp-and-congress-clash-over-dk-shees-statement-on-the-constitution/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 24 Mar 2025 10:02:22 +0000</pubDate>
				<category><![CDATA[ರಾಜಕೀಯ]]></category>
		<category><![CDATA[bharat jodo yatra]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[dk shivakumar]]></category>
		<category><![CDATA[kiran rijiju]]></category>
		<category><![CDATA[Mallikarjun Kharge]]></category>
		<guid isPermaLink="false">https://peepalmedia.com/?p=55639</guid>

					<description><![CDATA[ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂವಿಧಾನದ ಬಗ್ಗೆ ನೀಡಿದ ಹೇಳಿಕೆಗಳ ಕುರಿತು ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಾಯಕರು ವಾಗ್ವಾದ ನಡೆಸಿದ್ದರಿಂದ ಸೋಮವಾರ ಸಂಸತ್ತಿನಲ್ಲಿ ಕೋಲಾಹಲ ಉಂಟಾಯಿತು. ರಾಜ್ಯಸಭೆಯಲ್ಲಿ ಕಲಾಪ ಆರಂಭವಾದ ಕೂಡಲೇ, ಕೇಂದ್ರ ಸಚಿವ ಕಿರಣ್ ರಿಜಿಜು, ಮುಸ್ಲಿಮರಿಗೆ ಮೀಸಲಾತಿ ನೀಡುವ ಬಗ್ಗೆ ಕಾಂಗ್ರೆಸ್ ಮುಖ್ಯಸ್ಥ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಪಕ್ಷದ ನಿಲುವಿನ ಬಗ್ಗೆ ವಿವರಣೆ ನೀಡುವಂತೆ ಒತ್ತಾಯಿಸಿದರು. &#8220;ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡಲು ಕಾಂಗ್ರೆಸ್ ಸಂವಿಧಾನವನ್ನು ಬದಲಾಯಿಸುತ್ತದೆ,&#8221; ಎಂದು [&#8230;]]]></description>
										<content:encoded><![CDATA[
<p>ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂವಿಧಾನದ ಬಗ್ಗೆ ನೀಡಿದ ಹೇಳಿಕೆಗಳ ಕುರಿತು ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಾಯಕರು ವಾಗ್ವಾದ ನಡೆಸಿದ್ದರಿಂದ ಸೋಮವಾರ ಸಂಸತ್ತಿನಲ್ಲಿ ಕೋಲಾಹಲ ಉಂಟಾಯಿತು.</p>



<p>ರಾಜ್ಯಸಭೆಯಲ್ಲಿ ಕಲಾಪ ಆರಂಭವಾದ ಕೂಡಲೇ, ಕೇಂದ್ರ ಸಚಿವ ಕಿರಣ್ ರಿಜಿಜು, <a href="https://www.aninews.in/news/national/politics/bjp-demans-congress-explanation-on-dk-shivakumars-remarks-on-constitution-kharge-says-nobody-can-change-constitution20250324120913/" target="_blank" rel="noreferrer noopener">ಮುಸ್ಲಿಮರಿಗೆ ಮೀಸಲಾತಿ ನೀಡುವ</a> ಬಗ್ಗೆ ಕಾಂಗ್ರೆಸ್ ಮುಖ್ಯಸ್ಥ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಪಕ್ಷದ ನಿಲುವಿನ ಬಗ್ಗೆ ವಿವರಣೆ ನೀಡುವಂತೆ ಒತ್ತಾಯಿಸಿದರು.</p>



<p>&#8220;ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡಲು ಕಾಂಗ್ರೆಸ್ ಸಂವಿಧಾನವನ್ನು ಬದಲಾಯಿಸುತ್ತದೆ,&#8221; ಎಂದು ಶಿವಕುಮಾರ್ ಹೇಳಿದ್ದಾರೆ ಎಂದು ರಿಜಿಜು ಹೇಳಿದ್ದಾರೆ. ಯಾರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಖರ್ಗೆ ಉತ್ತರಿಸಿದರು.</p>



<p>ಶಿವಕುಮಾರ್ ಭಾನುವಾರ&nbsp;<a href="https://www.news18features.com/diamond-states-summit/" rel="noreferrer noopener" target="_blank"><em>ನ್ಯೂಸ್ 18 ಇಂಡಿಯಾ ಡೈಮಂಡ್ ಸ್ಟೇಟ್ಸ್ ಶೃಂಗಸಭೆ 2025</em></a>&nbsp;ರಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ಮಸೂದೆ, 2025 ಕುರಿತು ಮಾತನಾಡಿದ್ದರು .</p>



<p>ಸಾರ್ವಜನಿಕ ಗುತ್ತಿಗೆ ನೀಡಿಕೆಯಲ್ಲಿ <a href="https://www.thehindu.com/news/national/karnataka/bill-tabled-to-provide-4-quota-for-muslims-in-public-contracts-in-karnataka/article69344070.ece" target="_blank" rel="noreferrer noopener">ಮುಸ್ಲಿಮರು</a> ಮತ್ತು ಇತರ ಅಲ್ಪಸಂಖ್ಯಾತರಿಗೆ ಶೇ.4 ರಷ್ಟು ಮೀಸಲಾತಿ ಕಲ್ಪಿಸಲು ಈ ಮಸೂದೆ ಅವಕಾಶ ನೀಡುತ್ತದೆ . ಇದನ್ನು ಮಾರ್ಚ್ 14 ರಂದು ರಾಜ್ಯ ಸಚಿವ ಸಂಪುಟ ಅನುಮೋದಿಸಿ ಮಾರ್ಚ್ 18 ರಂದು ಕರ್ನಾಟಕ ವಿಧಾನಸಭೆಯಲ್ಲಿ ಮಂಡಿಸಲಾಯಿತು.</p>



<p><a href="https://www.thehindu.com/news/national/karnataka/dk-shivakumar-denies-bjps-claims-that-he-spoke-about-changing-constitution-to-provide-reservations-to-muslims/article69367816.ece" target="_blank" rel="noreferrer noopener">ಸಂವಿಧಾನವು</a> ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ಅನುಮತಿಸುವುದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, &#8220;ನಾನು ಒಪ್ಪುತ್ತೇನೆ, ನಾವು ಕಾದು ನೋಡೋಣ,&#8221; ಎಂದು ಹೇಳಿದರು ಎಂದು ವರದಿಯಾಗಿದೆ.</p>



<p>&#8220;ನ್ಯಾಯಾಲಯಗಳು ಏನು ಹೇಳುತ್ತವೆ ಎಂದು ನೋಡೋಣ. ಜನರು ನ್ಯಾಯಾಲಯದ ಮೊರೆ ಹೋಗುತ್ತಾರೆಂದು ನನಗೆ ತಿಳಿದಿದೆ. ಒಳ್ಳೆಯ ದಿನಕ್ಕಾಗಿ ಕಾಯೋಣ, ಒಳ್ಳೆಯ ದಿನ ಬರುತ್ತದೆ. ಬಹಳಷ್ಟು ಬದಲಾವಣೆಗಳಿವೆ ಮತ್ತು ಸಂವಿಧಾನವು ಬದಲಾಗುತ್ತಲೇ ಇರುತ್ತದೆ. ಸಂವಿಧಾನವನ್ನು ಬದಲಾಯಿಸುವ ತೀರ್ಪುಗಳೂ ಇವೆ,&#8221; ಎಂದು ಕಾಂಗ್ರೆಸ್ ನಾಯಕ ಹೇಳಿರುವುದಾಗಿ &#8216; <em>ದಿ ಹಿಂದೂ&#8217; ವರದಿ ಮಾಡಿದೆ.</em> </p>



<p>&#8220;ಈ ಹೇಳಿಕೆಯನ್ನು ನಾವು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ. ಇದು ನಾವು ಸಹಿಸಲಾಗದ ಅತ್ಯಂತ ಗಂಭೀರ ವಿಷಯ ಮತ್ತು ಇದು ಭಾರತದ ಸಂವಿಧಾನದ ಮೇಲಿನ ದಾಳಿಯಾಗಿದೆ. ಸದನದಲ್ಲಿ ಕುಳಿತಿರುವ ಕಾಂಗ್ರೆಸ್ ಅಧ್ಯಕ್ಷ [ಮಲ್ಲಿಕಾರ್ಜುನ ಖರ್ಗೆ] ಅವರಿಂದ ಸ್ಪಷ್ಟ ಉತ್ತರವನ್ನು ನಾನು ಬಯಸುತ್ತೇನೆ,&#8221; ಎಂದು ರಿಜಿಜು ಸೋಮವಾರ ಸಂಸತ್ತಿನಲ್ಲಿ ಹೇಳಿದರು. </p>



<p>&#8220;ಕಾಂಗ್ರೆಸ್ ಪಕ್ಷವು ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಘನತೆಯನ್ನು ಕಳಂಕಿತಗೊಳಿಸಿದೆ. ನಿಮಗೆ ಧೈರ್ಯವಿದ್ದರೆ, ಇಂದು ಉಪಮುಖ್ಯಮಂತ್ರಿ [ಶಿವಕುಮಾರ್] ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ,&#8221; ಎಂದು ರಿಜಿಜು ಹೇಳಿದ್ದಾರೆ. </p>



<p>ಸಂವಿಧಾನವನ್ನು ರಕ್ಷಿಸಲು ತಮ್ಮ ಪಕ್ಷವು ಭಾರತ್ ಜೋಡೋ ಯಾತ್ರೆಯನ್ನು ಆಯೋಜಿಸಿದೆ ಎಂದು ಖರ್ಗೆ ಉತ್ತರಿಸಿದರು.</p>



<p>ಭಾರತ್ ಜೋಡೋ ಯಾತ್ರೆ , ಸೆಪ್ಟೆಂಬರ್ 7, 2022 ರಂದು ಕನ್ಯಾಕುಮಾರಿಯಲ್ಲಿ ಪ್ರಾರಂಭವಾಯಿತು ಮತ್ತು ಜನವರಿ 30, 2023 ರಂದು ಶ್ರೀನಗರದಲ್ಲಿ ಮುಕ್ತಾಯಗೊಳ್ಳುವ ಮೊದಲು 3,000 ಕಿ.ಮೀ.ಗಳಿಗೂ ಹೆಚ್ಚು ಕ್ರಮಿಸಿತು. ಈ ಮೆರವಣಿಗೆಯ ನೇತೃತ್ವವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಹಿಸಿದ್ದರು.</p>



<p>&#8220;ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ. ಮೀಸಲಾತಿಯನ್ನು ಯಾರೂ ಕೊನೆಗೊಳಿಸಲು ಸಾಧ್ಯವಿಲ್ಲ. ಅದನ್ನು ರಕ್ಷಿಸಲು ನಾವು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತ್ ಜೋಡೋ ಯಾತ್ರೆ ಮಾಡಿದೆವು,&#8221; ಎಂದು ಖರ್ಗೆ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ. </p>



<p>ಬಿಜೆಪಿ ನೇತೃತ್ವದ ಎನ್‌ಡಿಎ ನಾಯಕರನ್ನು ಗುರಿಯಾಗಿಸಿಕೊಂಡು ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷರು, &#8220;ಅವರು ಭಾರತವನ್ನು ಒಡೆಯುತ್ತಾರೆ,&#8221; ಎಂದು ಹೇಳಿದರು.</p>



<p>ಗದ್ದಲದ ನಡುವೆ ರಾಜ್ಯಸಭಾ ಸಭಾಪತಿ ಜಗದೀಪ್ ಧನ್ಖ‌ರ್ ಅವರು ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.</p>



<p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು, ಆದರೆ <em>ದಿ ಹಿಂದೂ</em> ಪ್ರಕಾರ, ಹಲವಾರು ತೀರ್ಪುಗಳು ತಿದ್ದುಪಡಿಗಳಿಗೆ ಕಾರಣವಾಗಿವೆ ಎಂದು &#8220;ಆಕಸ್ಮಿಕವಾಗಿ&#8221; ಉಲ್ಲೇಖಿಸಿದ್ದಾರೆ.</p>



<p>&#8220;ಅವರು ಏನು ಹೇಳುತ್ತಿದ್ದಾರೋ ಅದು ತಪ್ಪು. ಅವರು ಅದನ್ನು ತಪ್ಪಾಗಿ ಉಲ್ಲೇಖಿಸುತ್ತಿದ್ದಾರೆ. ನಮ್ಮದು ರಾಷ್ಟ್ರೀಯ ಪಕ್ಷ, ಸಂವಿಧಾನ ಏನೆಂದು ನಮಗೆ ತಿಳಿದಿದೆ. ಇದರ ಮೇಲೆ ನಾನು ಹಕ್ಕುಚ್ಯುತಿ ಮಂಡಿಸುತ್ತೇನೆ. ನಾನು ಪ್ರಕರಣದ ವಿರುದ್ಧ ಹೋರಾಡುತ್ತೇನೆ, ಅವರು ನನ್ನನ್ನು ತಪ್ಪಾಗಿ ಉಲ್ಲೇಖಿಸುತ್ತಿದ್ದಾರೆ,&#8221; ಎಂದು ಡಿಕೆಶೀ ಹೇಳಿದ್ದಾರೆ.</p>



<p></p>
]]></content:encoded>
					
		
		
			</item>
		<item>
		<title>ಕ್ಷೇತ್ರ ಪುನರ್ ವಿಂಗಡನೆ&#124;ಚೆನ್ನೈನಲ್ಲಿ ನಡೆಯುತ್ತಿರುವ ಸ್ಟಾಲಿನ್ ನೇತೃತ್ವದ ಸಭೆಯಲ್ಲಿ ಡಿ.ಕೆ.ಶಿ ಭಾಗಿ</title>
		<link>https://peepalmedia.com/constituency-redistribution-d-k-s-participates-in-stalin-led-meeting-in-chennai/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 22 Mar 2025 08:16:57 +0000</pubDate>
				<category><![CDATA[ರಾಜಕೀಯ]]></category>
		<category><![CDATA[chennai]]></category>
		<category><![CDATA[congrees]]></category>
		<category><![CDATA[Constituency redistribution]]></category>
		<category><![CDATA[dk shivakumar]]></category>
		<category><![CDATA[dks]]></category>
		<category><![CDATA[karnartaka]]></category>
		<category><![CDATA[karnataka]]></category>
		<category><![CDATA[M K STALIN]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[politics]]></category>
		<guid isPermaLink="false">https://peepalmedia.com/?p=55578</guid>

					<description><![CDATA[ಕ್ಷೇತ್ರ ಪುನರ್ ವಿಂಗಡನೆ ಕುರಿತಾಗಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕರ್ನಾಟಕದ ಪರವಾಗಿ ಡಿ.ಕೆ ಶಿವಕುಮಾರ್ ಭಾಗಿಯಾಗಿದ್ದಾರೆ.&#160; ಈ ಸಭೆಯಲ್ಲಿ 2026ಕ್ಕೆ ನಡೆಯಲಿರುವ ಕ್ಷೇತ್ರ ಪುನರ್ ವಿಂಗಡನೆ ರಾಜ್ಯಗಳ ಮೇಲೆ ಬೀರುವ ಪ್ರಭಾವಗಳ ಬಗ್ಗೆ&#160; ಚರ್ಚೆ ನಡೆಯಲಿದ್ದು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸಭೆಯಲ್ಲಿ ಭಾಗಿಯಾಗಿದ್ದಾರೆ.&#160; ಇನ್ನು ತೆಲಂಗಾಣದ ಮಾಜಿ ಸಚಿವ ಕೆ. ಟಿ ರಾಮರಾವ್ ಬಿಆರ್‌ಎಸ್‌ ಅನ್ನು ಪ್ರತಿನಿಧಿಸಿದರೆ, ವೈಎಸ್‌ಆರ್‌ಸಿಪಿ, [&#8230;]]]></description>
										<content:encoded><![CDATA[
<p>ಕ್ಷೇತ್ರ ಪುನರ್ ವಿಂಗಡನೆ ಕುರಿತಾಗಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕರ್ನಾಟಕದ ಪರವಾಗಿ ಡಿ.ಕೆ ಶಿವಕುಮಾರ್ ಭಾಗಿಯಾಗಿದ್ದಾರೆ.&nbsp;</p>



<p>ಈ ಸಭೆಯಲ್ಲಿ 2026ಕ್ಕೆ ನಡೆಯಲಿರುವ ಕ್ಷೇತ್ರ ಪುನರ್ ವಿಂಗಡನೆ ರಾಜ್ಯಗಳ ಮೇಲೆ ಬೀರುವ ಪ್ರಭಾವಗಳ ಬಗ್ಗೆ&nbsp; ಚರ್ಚೆ ನಡೆಯಲಿದ್ದು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸಭೆಯಲ್ಲಿ ಭಾಗಿಯಾಗಿದ್ದಾರೆ.&nbsp;</p>



<p>ಇನ್ನು ತೆಲಂಗಾಣದ ಮಾಜಿ ಸಚಿವ ಕೆ. ಟಿ ರಾಮರಾವ್ ಬಿಆರ್‌ಎಸ್‌ ಅನ್ನು ಪ್ರತಿನಿಧಿಸಿದರೆ, ವೈಎಸ್‌ಆರ್‌ಸಿಪಿ, ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಬಿಜೆಡಿ ಮತ್ತು ಎಎಪಿಯಂತಹ ರಾಜಕೀಯ ಪಕ್ಷಗಳ ನಾಯಕರು ಕೂಡಾ ಸಭೆಯಲ್ಲಿ ಭಾಗಿಯಾಗಿದ್ದಾರೆ.</p>



<p>ಜನಸೇನಾ ಸಂಸದ ತಂಗೆಲ್ಲ ಉದಯ್ ಶ್ರೀನಿವಾಸ್ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಊಹಾಪೋಹಗಳಿದ್ದವು. ಆದರೆ ಅವರು ತಮ್ಮ ನಾಯಕ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಪತ್ರವನ್ನು ಸ್ಟಾಲಿನ್‌ ಅವರಿಗೆ ಹಸ್ತಾಂತರಿಸುವುದಾಗಿ ಹೇಳಿದ್ದಾರೆ.</p>



<p>ಈ ನಡುವೆ ಡಿಎಂಕೆ ತನ್ನ ದ್ವಿಭಾಷಾ ಸೂತ್ರಕ್ಕೆ ಅನುಗುಣವಾಗಿ ಭಾಗವಹಿಸುವ ನಾಯಕರ ಹೆಸರುಗಳನ್ನು ಅವರ ಮಾತೃಭಾಷೆ ಮತ್ತು ಇಂಗ್ಲಿಷ್‌ನಲ್ಲಿ ನಾಮಫಲಕಗಳಲ್ಲಿ ಮುದ್ರಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಸಂದೇಶವನ್ನು ರವಾನಿಸಿದೆ. ಲೋಕಸಭಾ ಚುನಾವಣೆಯ ನಂತರ ಬಿಜೆಪಿಯ ವಿಪಕ್ಷಗಳ ಮೊದಲ ಸಭೆ ಇದಾಗಿರುವುದರಿಂದ ಮಹತ್ವವನ್ನು ಪಡೆದಿದೆ.</p>



<p>ಕ್ಷೇತ್ರ ಪುನರ್ ವಿಂಗಡಣೆಯನ್ನು ಕೇವಲ ಜನಸಂಖ್ಯೆಯ ಆಧಾರದ ಮೇಲೆ ನಡೆಸಿದರೆ ಅನೇಕ ರಾಜ್ಯಗಳು ತಮ್ಮ ರಾಜಕೀಯ ಪ್ರಾತಿನಿಧ್ಯವನ್ನು ಕಳೆದುಕೊಳ್ಳುತ್ತವೆ ಎಂಬ ಬಗ್ಗೆ ಚರ್ಚೆ ನಡೆಯಲಿದ್ದು, ಈ ರಾಜ್ಯಗಳೆಲ್ಲ ಸೇರಿ ಕ್ಷೇತ್ರ ಮರುವಿಂಗಡಣೆ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವ ಸಾಧ್ಯತೆಗಳಿವೆ.&nbsp;</p>



<p>ಕರ್ನಾಟಕದ ಪ್ರತಿನಿಧಿಯಾಗಿ ಚೆನ್ನೈಗೆ ಆಗಮಿಸಿದ್ದ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದು, ಕ್ಷೇತ್ರ ಪುನರ್ ವಿಂಗಡಣೆ ವಿವಾದ ಕುರಿತ ದಕ್ಷಿಣ ರಾಜ್ಯಗಳ ಪ್ರತಿನಿಧಿಗಳನ್ನು ಒಗ್ಗೂಡಿಸುವಲ್ಲಿ ಎಂ.ಕೆ ಸ್ಟಾಲಿನ್ ಮೊದಲ ಹೆಜ್ಜೆ ಇಟ್ಟಿದ್ದಾರೆ. ಅವರು ಈ ದೇಶದ ಒಕ್ಕೂಟ ಮತ್ತು ಸಂವಿಧಾನವನ್ನು ರಕ್ಷಿಸುತ್ತಿದ್ದಾರೆ ಎಂಬ ಹೆಮ್ಮೆ ನಮಗಿದೆ. ಮುಂದೆ ಏನು ಅನುಸರಿಸಬೇಕು ಹಾಗೂ ಹೇಗೆ ಒಗ್ಗೂಡಿ ಕೆಲಸ ಮಾಡಬೇಕು ಎಂಬುದರ ಕುರಿತು ನಾವೆಲ್ಲರೂ ಚರ್ಚಿಸುತ್ತೇವೆ ಎಂದರು.</p>



<p>ತೆಲಂಗಾಣ, ಪಂಜಾಬ್, ಕೇರಳದ ನಾಯಕರು ಸೇರಿದಂತೆ ನಾವೆಲ್ಲರೂ ಇಲ್ಲಿ ಸೇರಿಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ನಾವು ನಮ್ಮ ದೇಶವನ್ನು ನಿರಾಸೆಗೊಳಿಸುವುದಿಲ್ಲ ಮತ್ತು ನಮ್ಮ ಸ್ಥಾನಗಳನ್ನು ಕಡಿಮೆ ಮಾಡಲು ಸಾಧ್ಯವಿಲ್ಲ. ನಮ್ಮದು ಬಹಳ ಪ್ರಗತಿಪರ ರಾಜ್ಯವಾಗಿದ್ದು, ಆರ್ಥಿಕವಾಗಿ ಮತ್ತು ಸಾಕ್ಷರತೆಯಲ್ಲಿ ಗಟ್ಟಿಯಾಗಿ ನಿಂತಿದ್ದೇವೆ ಎಂದು ಹೇಳಿದರು.</p>



<p></p>
]]></content:encoded>
					
		
		
			</item>
		<item>
		<title>ಕಾರಂಜಾ ಜಲಾಶಯ ಯೋಜನೆಯ ಮುಳುಗಡೆ ಪ್ರದೇಶದ ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ : ಸಿದ್ದರಾಮಯ್ಯ</title>
		<link>https://peepalmedia.com/technical-committee-formed-to-examine-demands-of-victims-of-karanja-reservoir-project-inundation-area-siddaramaiah/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 19 Dec 2024 08:10:49 +0000</pubDate>
				<category><![CDATA[ರಾಜ್ಯ]]></category>
		<category><![CDATA[BELAGAVI]]></category>
		<category><![CDATA[Chief Minister]]></category>
		<category><![CDATA[congress]]></category>
		<category><![CDATA[dk shivakumar]]></category>
		<category><![CDATA[karanja]]></category>
		<category><![CDATA[karnataka]]></category>
		<category><![CDATA[Karnataka assembly elections]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=50925</guid>

					<description><![CDATA[ಬೆಳಗಾವಿ, ಡಿ.19: ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಗುರುವಾರ ಸುವರ್ಣ ಸೌಧದಲ್ಲಿ ಕಾರಂಜಾ ಯೋಜನೆ ಸಂತ್ರಸ್ರರ ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ, ಸಂತ್ರಸ್ತರ ಬೇಡಿಕೆ ಅನುಷ್ಠಾನದ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದರು. ತಮ್ಮನ್ನು ಭೇಟಿ ಮಾಡಿದ ನಿಯೋಗ ಮತ್ತು ಮುಖಂಡರುಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ತಾಂತ್ರಿಕ ಸಮಿತಿಯೊಂದನ್ನು [&#8230;]]]></description>
										<content:encoded><![CDATA[
<p><strong>ಬೆಳಗಾವಿ, ಡಿ.19: </strong>ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.<br>ಅವರು ಗುರುವಾರ ಸುವರ್ಣ ಸೌಧದಲ್ಲಿ ಕಾರಂಜಾ ಯೋಜನೆ ಸಂತ್ರಸ್ರರ ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ, ಸಂತ್ರಸ್ತರ ಬೇಡಿಕೆ ಅನುಷ್ಠಾನದ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದರು.</p>



<p>ತಮ್ಮನ್ನು ಭೇಟಿ ಮಾಡಿದ ನಿಯೋಗ ಮತ್ತು ಮುಖಂಡರುಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ತಾಂತ್ರಿಕ ಸಮಿತಿಯೊಂದನ್ನು ರಚಿಸಿ, ಸಮಿತಿ ನೀಡುವ ವರದಿಯಾಧರಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.</p>



<p>ಕಾರಂಜಾ ಜಲಾಶಯ ನಿರ್ಮಾಣಕ್ಕೆ 1972-73ರಲ್ಲಿ ಭೂಸ್ವಾಧೀನ ವಾಗಿತ್ತು. ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಎಕರೆಗೆ ರೂ 3000 ದಂತೆ 1981-86ರಲ್ಲಿ ಆಗಿನ ಮಾರುಕಟ್ಟೆ ಬೆಲೆ ಆಧರಿಸಿ ಪರಿಹಾರ ನೀಡಲಾಗಿತ್ತು. ಆದರೆ ಪರಿಹಾರ ಧನದ ಬಗ್ಗೆ ತಕರಾರು ಎತ್ತಿ ನ್ಯಾಯಾಲಯದ ಮೊರೆ ಹೋದ ಸಂತ್ರಸ್ತರು ಹೆಚ್ಚು ಪರಿಹಾರ ಧನ ಪಡೆದಿದ್ದರು. ನ್ಯಾಯಾಲಯದ ಮೊರೆ ಹೋಗದ ರೈತರು ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸಿ ಕಳೆ 20 ಹೋರಾಟ ನಡೆಸುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದರು.<br>ಸಚಿವರಾದ ರಹೀಂ ಖಾನ್, ಕೆಕೆಡಿಬಿ ಅಧ್ಯಕ್ಷ ಅಜಯ ಸಿಂಗ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಡಿಕೆಶಿ ಅಕ್ರಮ ಆಸ್ತಿ ಪ್ರಕರಣದಲ್ಲಿ ಕರ್ನಾಟಕ ಲೋಕಾಯುಕ್ತ ತನಿಖೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಅಸಮ್ಮತಿ</title>
		<link>https://peepalmedia.com/supreme-court-refuses-to-stay-karnataka-lokayukta-probe-into-dks-disproportionate-assets-case/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 16 Dec 2024 12:18:22 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[ರಾಜ್ಯ]]></category>
		<category><![CDATA[basavanagowda patil yathnal]]></category>
		<category><![CDATA[bjp]]></category>
		<category><![CDATA[dk shivakumar]]></category>
		<category><![CDATA[dks]]></category>
		<category><![CDATA[karnataka congress]]></category>
		<category><![CDATA[karnataka supreme court]]></category>
		<category><![CDATA[Supreme Court]]></category>
		<guid isPermaLink="false">https://peepalmedia.com/?p=50779</guid>

					<description><![CDATA[ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ವಿಚಾರಣೆ ನಡೆಸಲು ಕರ್ನಾಟಕ ಸರ್ಕಾರ ನೀಡಿದ್ದ ಸಮ್ಮತಿಯನ್ನು ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯಲ್ಲಿ , ಕರ್ನಾಟಕ ಲೋಕಾಯುಕ್ತದಿಂದ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಆದೇಶವನ್ನು ನೀಡಲು ಸುಪ್ರೀಂ ಕೋರ್ಟ್ ಇಂದು ಅಸಮ್ಮತಿ ವ್ಯಕ್ತಪಡಿಸಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್&#160;ಮತ್ತು&#160;ಸಿಬಿಐ ಅವರು&#160;ಸಿಬಿಐ ಒಪ್ಪಿಗೆಯನ್ನು ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪಿನ ವಿರುದ್ಧ ಸಿಬಿಐ&#160;ಸಲ್ಲಿಸಿದ ಎರಡು ಅರ್ಜಿಗಳಿಂದ ಹುಟ್ಟಿಕೊಂಡಿರುವ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ <strong>ಕಾಂಗ್ರೆಸ್ ನಾಯಕ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್</strong> ವಿರುದ್ಧ ಸಿಬಿಐ ವಿಚಾರಣೆ ನಡೆಸಲು ಕರ್ನಾಟಕ ಸರ್ಕಾರ ನೀಡಿದ್ದ <a href="https://www.livelaw.in/top-stories/supreme-court-cbi-challenges-karnataka-govt-withdrawal-of-consent-for-probe-into-deputy-cm-dk-shivakumar-disproportionate-assets-case-274180" target="_blank" rel="noreferrer noopener">ಸಮ್ಮತಿಯನ್ನು ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯಲ್ಲಿ</a> , ಕರ್ನಾಟಕ ಲೋಕಾಯುಕ್ತದಿಂದ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಆದೇಶವನ್ನು ನೀಡಲು ಸುಪ್ರೀಂ ಕೋರ್ಟ್ ಇಂದು ಅಸಮ್ಮತಿ ವ್ಯಕ್ತಪಡಿಸಿದೆ.</p>



<p><strong>ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್</strong>&nbsp;ಮತ್ತು&nbsp;<strong>ಸಿಬಿಐ ಅವರು</strong>&nbsp;ಸಿಬಿಐ ಒಪ್ಪಿಗೆಯನ್ನು ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪಿನ ವಿರುದ್ಧ ಸಿಬಿಐ&nbsp;ಸಲ್ಲಿಸಿದ ಎರಡು ಅರ್ಜಿಗಳಿಂದ ಹುಟ್ಟಿಕೊಂಡಿರುವ ಈ ವಿಚಾರವನ್ನು&nbsp;<strong>ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್</strong>&nbsp;ಅವರ ಪೀಠವು  ಆಲಿಸಿತು.</p>



<p>ಸಂದರ್ಭಕ್ಕಾಗಿ, ರಾಜ್ಯ ಮತ್ತು ಕೇಂದ್ರದ ನಡುವಿನ ವಿವಾದವಾಗಿರುವುದರಿಂದ ಸುಪ್ರೀಂ ಕೋರ್ಟ್‌ನಿಂದ ಸಂವಿಧಾನದ 131 ನೇ ಪರಿಚ್ಛೇದದ ಅಡಿಯಲ್ಲಿ ಮಾತ್ರ ಈ ವಿಷಯವನ್ನು ನಿರ್ಣಯಿಸಬಹುದು ಎಂದು ಉಚ್ಚ ನ್ಯಾಯಾಲಯವು ಅರ್ಜಿಗಳನ್ನು ವಜಾಗೊಳಿಸಿತು.</p>



<p>ಇಂದಿನ ವಿಚಾರಣೆಯ ಆರಂಭದಲ್ಲಿ,&nbsp;<strong>ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ</strong>&nbsp;ಪರವಾಗಿ ಸಿಬಿಐ ವಕೀಲರು ಪಾಸ್-ಓವರ್ ಕೋರಿದರು . ಮತ್ತೊಂದೆಡೆ,&nbsp;<strong>ಹಿರಿಯ ವಕೀಲ ಕಪಿಲ್ ಸಿಬಲ್</strong>&nbsp;(ಕರ್ನಾಟಕ ಸರ್ಕಾರದ ಪರವಾಗಿ) ಉತ್ತರವನ್ನು ಸಲ್ಲಿಸಲು ಸಮಯ ಕೋರಿದರು. ಹಾಗಾಗಿ, ಬೇರೆಯದೇ ದಿನದಂದು ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿದೆ.</p>



<p>ಆದರೆ, ಸಿಬಿಐ ವಕೀಲರು ಪಾಸ್ ಓವರ್ ಗೆ ಒತ್ತಾಯಿಸಿ, ಮಧ್ಯಂತರ ಆದೇಶ ನೀಡಬೇಕಾಗಬಹುದು ಎಂದು ಹೇಳಿದರು. ಈ ಹಂತದಲ್ಲಿ, ನ್ಯಾಯಮೂರ್ತಿ ಕಾಂತ್ ಅವರು ಯಾವ ರೀತಿಯ ಮಧ್ಯಂತರ ಆದೇಶವನ್ನು ನೀಡಬೇಕು ಎಂದು ವಕೀಲರನ್ನು ಕೇಳಿದರು.</p>



<p>ಇದಕ್ಕೆ ಉತ್ತರವಾಗಿ,&nbsp;<strong>ಹಿರಿಯ ವಕೀಲ ಕೆ.ಪರಮೇಶ್ವರ್</strong>&nbsp;(ಯತ್ನಾಳ್ ಪರ) ಅವರು, ಸಿಬಿಐನಿಂದ ಹಿಂಪಡೆದ ನಂತರ ತನಿಖೆಯನ್ನು&nbsp;<em>&#8220;ದುಷ್ಕೃತ್ಯದಿಂದ&#8221;</em>&nbsp;ಲೋಕಾಯುಕ್ತಕ್ಕೆ ವಹಿಸಲಾಗಿದೆ, ಅದು ಎಫ್‌ಐಆರ್ ದಾಖಲಿಸಿದೆ ಎಂದು ಹೇಳಿದರು. ಇದು ಕೊನೆಯ ವರದಿಯನ್ನು ಸಲ್ಲಿಸಲು ಕಾರಣವಾದರೆ,&nbsp;<em>&#8220;ಅವರು ತಮ್ಮ ಸ್ವಂತ ಕ್ಯಾಬಿನೆಟ್ ಮಂತ್ರಿಯಾಗಿರುವುದರಿಂದ ಅವರು ಸಲ್ಲಿಸುವ ಸಾಧ್ಯತೆಯಿದೆ&#8221;</em>&nbsp;, ಇಡೀ ಪ್ರಕ್ರಿಯೆಯನ್ನು ನಿಷ್ಪ್ರಯೋಜಕಗೊಳಿಸಲಾಗುತ್ತದೆ ಎಂದು ಅವರು ಹೇಳಿದರು.</p>



<p>ಪರಮೇಶ್ವರ್ ಅವರ ಮಾತುಗಳನ್ನು ಆಲಿಸಿದ ನ್ಯಾಯಮೂರ್ತಿ ಕಾಂತ್,&nbsp;<em>&#8220;ಒಂದು ಪ್ರೊಸೀಡಿಂಗ್ ಅನ್ನು ಅನೂರ್ಜಿತಗೊಳಿಸುವುದಾಗಿ ಘೋಷಿಸಲು ಮತ್ತು ಇನ್ನೊಂದನ್ನು ಮುಂದುವರಿಸಲು ನಾವು ತುಂಬಾ ಶಕ್ತಿಹೀನರಾಗಿದ್ದೇವೆಯೇ? ಈ ನಂಬಿಕೆಯನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ನೀವು ನಮಗೆ  ಹೇಳುತ್ತಿದ್ದೀರಾ?&#8221;</em> ಎಂದು ಕೇಳಿದರು. ಪ್ರಕರಣವನ್ನು ಜನವರಿ 22 ಕ್ಕೆ ಮುಂದೂಡಲಾಯಿತು.</p>



<p><strong>ಹಿನ್ನೆಲೆ</strong></p>



<p>ಆದಾಯ ತೆರಿಗೆ ಇಲಾಖೆಯು ಆಗಸ್ಟ್ 2017 ರಲ್ಲಿ ಶಿವಕುಮಾರ್ ಅವರ ನವದೆಹಲಿ ಮತ್ತು ಇತರ ಸ್ಥಳಗಳಲ್ಲಿ ವಿವಿಧೆಡೆ ದಾಳಿ ನಡೆಸಿತ್ತು. ಒಟ್ಟು 8,59,69,100 ರೂ.ಗಳನ್ನು ಸಂಗ್ರಹಿಸಿದ್ದು, ಅದರಲ್ಲಿ 41 ಲಕ್ಷ ರೂ.ಗಳನ್ನು ಶಿವಕುಮಾರ್ ಅವರ ನಿವೇಶನದಿಂದ ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.</p>



<p>ತರುವಾಯ, ಆದಾಯ ತೆರಿಗೆ ಕಾಯಿದೆ, 1961 ರ ನಿಬಂಧನೆಗಳ ಅಡಿಯಲ್ಲಿ ಶಿವಕುಮಾರ್ ವಿರುದ್ಧ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಲಾಯಿತು. ಆದಾಯ ತೆರಿಗೆ ಪ್ರಕರಣದ ಆಧಾರದ ಮೇಲೆ, ಇಡಿ ಕೂಡ ಪ್ರಕರಣವನ್ನು ದಾಖಲಿಸಿತು ಮತ್ತು ಶಿವಕುಮಾರ್ ಅವರನ್ನು ಸೆಪ್ಟೆಂಬರ್ 3, 2019 ರಂದು ಬಂಧಿಸಲಾಯಿತು.</p>



<p>09.09.2019 ರಂದು, PMLA ಯ ಸೆಕ್ಷನ್ 66(2) ಅಡಿಯಲ್ಲಿ ED ಕರ್ನಾಟಕ ಸರ್ಕಾರಕ್ಕೆ ಪತ್ರವನ್ನು ನೀಡಿದೆ. ಇದರ ಬೆನ್ನಲ್ಲೇ ಶಿವಕುಮಾರ್ ವಿರುದ್ಧ ಸುಗ್ರೀವಾಜ್ಞೆ ಹೊರಡಿಸಲಾಗಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು.</p>



<p>ಶಿವಕುಮಾರ್ ತಮ್ಮ ವಿರುದ್ಧದ ಮಂಜೂರಾತಿ ಮತ್ತು ವಿಚಾರಣೆಯನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಏಪ್ರಿಲ್‌ನಲ್ಲಿ, ಏಕಸದಸ್ಯ ಪೀಠವು ಅವರ ಅರ್ಜಿಯನ್ನು ವಜಾಗೊಳಿಸಿತು, ಆದರೆ ವಿಚಾರಣೆಯ ಸಮಯದಲ್ಲಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರಿಗೆ ಸಿಬಿಐ ತನಿಖೆಗೆ ಅನೇಕ ಸಂದರ್ಭಗಳಲ್ಲಿ ತಡೆ ನೀಡುವ ಮೂಲಕ ತಾತ್ಕಾಲಿಕ ಪರಿಹಾರವನ್ನು ನೀಡಿತು. ಏಕಸದಸ್ಯ ನ್ಯಾಯಾಧೀಶರ ವಜಾಗೊಳಿಸಿದ್ದರಿಂದ ಶಿವಕುಮಾರ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದರು.</p>



<p>ಮಧ್ಯಂತರ ಆದೇಶಗಳನ್ನು ವಿಶೇಷ ರಜೆ ಅರ್ಜಿಯ ಮೂಲಕ ಸಿಬಿಐ ಪ್ರಶ್ನಿಸಿದೆ, ಆದರೆ ಜುಲೈನಲ್ಲಿ ಸುಪ್ರೀಂ ಕೋರ್ಟ್ &#8216;ಸಂಪೂರ್ಣ ಮಧ್ಯಂತರ&#8217; ಆದೇಶಗಳಿಂದ ಉದ್ಭವಿಸಿದ ಸಂಸ್ಥೆಯ ಮನವಿಯನ್ನು ಪರಿಗಣಿಸಲು ನಿರಾಕರಿಸಿತು.</p>



<p>ತರುವಾಯ, ಅಕ್ಟೋಬರ್‌ನಲ್ಲಿ, ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿವಕುಮಾರ್ ವಿರುದ್ಧ ತನಿಖೆಗೆ ತಡೆ ನೀಡಿದ ಕರ್ನಾಟಕ ಹೈಕೋರ್ಟ್‌ನ ಜೂನ್ 2023 ರ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಮನವಿಯ ಮೇಲೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿತು. ಈ ಅರ್ಜಿಯನ್ನು ಅಂತಿಮವಾಗಿ ನವೆಂಬರ್ 10 ರಂದು ವಜಾಗೊಳಿಸಲಾಯಿತು, ಹಾಗಿದ್ದೂ, ನೀಡಲಾದ ತಡೆಯಾಜ್ಞೆಯನ್ನು ತೆರವು ಮಾಡಲು ಸಿಬಿಐ ಸಲ್ಲಿಸಿದ ಅರ್ಜಿಯನ್ನು ಮತ್ತು ಅದರ ಮುಂದೆ ಬಾಕಿ ಉಳಿದಿರುವ ಮೇಲ್ಮನವಿಯನ್ನು 2 ವಾರಗಳಲ್ಲಿ ಪರಿಗಣಿಸಲು ಹೈಕೋರ್ಟ್‌ಗೆ ಕೋರಲಾಯಿತು.</p>



<p>ಮೇ 2023 ರಲ್ಲಿ ಕಾಂಗ್ರೆಸ್ ಪಕ್ಷವು ಕರ್ನಾಟಕ ಸರ್ಕಾರವನ್ನು ರಚಿಸಿದ ನಂತರ, ರಾಜ್ಯ ಸರ್ಕಾರವು ಸಿಬಿಐಗೆ ನೀಡಿದ ಒಪ್ಪಿಗೆಯನ್ನು ಹಿಂತೆಗೆದುಕೊಂಡಿತು ಮತ್ತು ಶಿವಕುಮಾರ್ ಅವರನ್ನು ವಿಚಾರಣೆಗೆ ಒಪ್ಪಿಗೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಹಿಂಪಡೆಯಲು ಹೈಕೋರ್ಟ್ ಅನುಮತಿ ನೀಡಿತು.</p>



<p>ಹಾಜರಾತಿ: ಹಿರಿಯ ವಕೀಲ ಕಪಿಲ್ ಸಿಬಲ್, ಎಜಿ ಕೆ ಶಶಿಕಿರಣ್ ಶೆಟ್ಟಿ ಮತ್ತು ವಕೀಲ ರಾಚೆಲ್ ರಾಜು ಆಲಿಸ್ (ಕರ್ನಾಟಕ ಸರ್ಕಾರದ ಪರವಾಗಿ); ಹಿರಿಯ ವಕೀಲರಾದ ಡಾ.ಎ.ಎಂ.ಸಿಂಘ್ವಿ, ರಂಜಿತ್ ಕುಮಾರ್ ಮತ್ತು ಪಿ.ಬಿ.ಸುರೇಶ್, ವಕೀಲರಾದ ಮಯಾಂಕ್ ಜೈನ್, ಪರಮಾತ್ಮ ಸಿಂಗ್, ಮಧುರ್ ಜೈನ್ ಮತ್ತು ಅರ್ಪಿತ್ ಗೋಯೆಲ್ (ಡಿಕೆ ಶಿವಕುಮಾರ್ ಪರ); ಹಿರಿಯ ವಕೀಲ ಕೆ ಪರಮೇಶ್ವರ್ (ಯತ್ನಾಳ್ ಪರ)</p>



<p><strong>ಪ್ರಕರಣದ ಶೀರ್ಷಿಕೆ: ಬಸನಗೌಡ ಆರ್. ಪಾಟೀಲ್ (ಯತ್ನಾಳ್) ವರ್ಸಸ್ ದಿ ಸ್ಟೇಟ್ ಆಫ್ ಕರ್ನಾಟಕ ಮತ್ತು ಓಆರ್ಎಸ್., ಎಸ್ಎಲ್ಪಿ(ಸಿಆರ್ಎಲ್) ಸಂಖ್ಯೆ. 12282/2024 (ಮತ್ತು ಸಂಬಂಧಿತ ವಿಷಯ)</strong></p>
]]></content:encoded>
					
		
		
			</item>
		<item>
		<title>ಸಂವಿಧಾನ ಬದಲಾಯಿಸುತ್ತೇವೆ ಎಂದ ಬಿಜೆಪಿಯನ್ನೇ ಜನ ಬದಲಾಯಿಸಿದರು: ಡಿಸಿಎಂ ಡಿ.ಕೆ.ಶಿವಕುಮಾರ್</title>
		<link>https://peepalmedia.com/people-changed-the-bjp-which-said-it-would-change-the-constitution-d-k-shivakumar/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 26 Nov 2024 09:45:55 +0000</pubDate>
				<category><![CDATA[ರಾಜಕೀಯ]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[constitution]]></category>
		<category><![CDATA[constitution day]]></category>
		<category><![CDATA[democracy]]></category>
		<category><![CDATA[dk shivakumar]]></category>
		<guid isPermaLink="false">https://peepalmedia.com/?p=49632</guid>

					<description><![CDATA[ಬೆಂಗಳೂರು, ನ.26: “ಸಂವಿಧಾನವನ್ನು ಕಿತ್ತು ಹಾಕುತ್ತೇವೆ, ಹರಿದು ಹಾಕುತ್ತೇವೆ, ಬದಲಾಯಿಸುತ್ತೇವೆ ಎಂದು ಬಿಜೆಪಿಯವರನ್ನೇ ಜನರು ಬದಲಾಯಿಸಿದರು. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿದವರೆಲ್ಲ ಮನೆಗೆ ಹೋಗಿದ್ದಾರೆ&#8221; ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ವಸಂತ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ʼಸಂವಿಧಾನ ದಿನಾಚರಣೆʼಯಲ್ಲಿ ಮಾತನಾಡಿದ ಅವರು, &#8220;ಸಂವಿಧಾನದ ಬದಲಾವಣೆ ಬಗ್ಗೆ ಮಾತನಾಡಿದ ಬಿಜೆಪಿಯವರಿಗೆ ತಿರುಗೇಟು ನೀಡಲು ರಾಹುಲ್ ಗಾಂಧಿ ಅವರು ತಮ್ಮ ಎಲ್ಲಾ ಭಾಷಣದ ವೇಳೆಯೂ ಸಂವಿಧಾನದ ಪ್ರತಿ ಹಿಡಿದು ಮಾತು ಪ್ರಾರಂಭಿಸುತ್ತಿದ್ದರು. ಇದರಿಂದ [&#8230;]]]></description>
										<content:encoded><![CDATA[
<p><strong>ಬೆಂಗಳೂರು, ನ.26: </strong>“ಸಂವಿಧಾನವನ್ನು ಕಿತ್ತು ಹಾಕುತ್ತೇವೆ, ಹರಿದು ಹಾಕುತ್ತೇವೆ, ಬದಲಾಯಿಸುತ್ತೇವೆ ಎಂದು ಬಿಜೆಪಿಯವರನ್ನೇ ಜನರು ಬದಲಾಯಿಸಿದರು. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿದವರೆಲ್ಲ ಮನೆಗೆ ಹೋಗಿದ್ದಾರೆ&#8221; ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.</p>



<p>ನಗರದ ವಸಂತ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ʼಸಂವಿಧಾನ ದಿನಾಚರಣೆʼಯಲ್ಲಿ ಮಾತನಾಡಿದ ಅವರು, &#8220;ಸಂವಿಧಾನದ ಬದಲಾವಣೆ ಬಗ್ಗೆ ಮಾತನಾಡಿದ ಬಿಜೆಪಿಯವರಿಗೆ ತಿರುಗೇಟು ನೀಡಲು ರಾಹುಲ್ ಗಾಂಧಿ ಅವರು ತಮ್ಮ ಎಲ್ಲಾ ಭಾಷಣದ ವೇಳೆಯೂ ಸಂವಿಧಾನದ ಪ್ರತಿ ಹಿಡಿದು ಮಾತು ಪ್ರಾರಂಭಿಸುತ್ತಿದ್ದರು. ಇದರಿಂದ ಪ್ರಧಾನ ಮಂತ್ರಿಗಳು ಸಂವಿಧಾನ ಪ್ರತಿಗೆ ನಮಸ್ಕರಿಸಿ ಪ್ರಮಾಣ ವಚನ ತೆಗೆದುಕೊಳ್ಳುವಂತಹ ಸಂದರ್ಭ ಸೃಷ್ಟಿಯಾಯಿತು. ನಮ್ಮ ಇಂಡಿಯಾ ಒಕ್ಕೂಟದ ಸಂಸದರು ಸಂವಿಧಾನದ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ್ದು ಇತಿಹಾಸ” ಎಂದರು.</p>



<p><strong>ಇತಿಹಾಸದಿಂದ ಪಾಠ ಕಲಿತು ಪ್ರತಿಯೊಬ್ಬರು ಸಾಕ್ಷಿಗುಡ್ಡೆಗಳನ್ನು ನಿರ್ಮಾಣ ಮಾಡಬೇಕು</strong></p>



<p>“ಹೋರಾಟ ಮಾಡದೇ ಇದ್ದರೂ ಪರವಾಗಿಲ್ಲ ಮಾರಾಟ ಮಾತ್ರ ಆಗಬೇಡ ಎನ್ನುವ ಕಿವಿಮಾತನ್ನು ರಾಜಕಾರಣಿಗಳಿಗೆ ಅಂಬೇಡ್ಕರ್ ಅವರು ಹೇಳಿದ್ದಾರೆ. ನಾವುಗಳು ಇತಿಹಾಸದಿಂದ ಪಾಠ ಕಲಿಯದೇ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ. ಆದ ಕಾರಣ ಪ್ರತಿಯೊಬ್ಬರು ಇತಿಹಾಸದಿಂದ ಪಾಠ ಕಲಿಯಬೇಕು ಎನ್ನುವ ಸಂದೇಶವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮಗೆ ನೀಡಿದ್ದಾರೆ” ಎಂದು ಹೇಳಿದರು.</p>



<p>“ಅನೇಕ ರಾಜ್ಯಗಳಲ್ಲಿ ಜನರಿಂದ ಆಯ್ಕೆಯಾದ ಶಾಸಕರು ಮಾರಾಟವಾಗಿರುವ ನಿದರ್ಶನಗಳನ್ನು ನೋಡಿದ್ದೇವೆ. ಇದು ನಮ್ಮೆಲ್ಲರ ಬದುಕಿಗೂ ಸಂಬಂಧ ಪಡುತ್ತದೆ ಎನ್ನುವ ಕಿವಿಮಾತನ್ನು ನಮಗೆ ಅಂಬೇಡ್ಕರ್ ಅವರು ಬಿಟ್ಟು ಹೋಗಿದ್ದಾರೆ” ಎಂದರು.</p>



<p>“ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ಧರ್ಮ ಗ್ರಂಥಗಳನ್ನು ಆಯಾಯ ಧರ್ಮದವರು ಪವಿತ್ರ ಎಂದು ಹೇಳುತ್ತಾರೆ. ಇಡೀ ಭಾರತಕ್ಕೆ ಸಂವಿಧಾನವೇ ಪವಿತ್ರ ಗ್ರಂಥ. ಇದು ನಮ್ಮೆಲ್ಲರನ್ನು ರಕ್ಷಣೆ ಮಾಡುತ್ತಿದೆ” ಎಂದು ಹೇಳಿದರು.</p>



<p><strong>ನಮ್ಮ ರಾಜಕೀಯ ಆಯಸ್ಸು ಇನ್ನು 10- 15 ವರ್ಷ</strong></p>



<p>“ನಮ್ಮ ರಾಜಕೀಯ ಆಯಸ್ಸು ಇನ್ನು 10- 15 ವರ್ಷ. ವಿದ್ಯಾರ್ಥಿಗಳು ಮುಂದಿನ 60- 70 ವರ್ಷಗಳ ಕಾಲ ಈ ದೇಶವನ್ನು ಮುನ್ನಡೆಸುವವರು. ಅವರಿಗೆ ಸಂವಿಧಾನದ ಬಗ್ಗೆ ಅಡಿಪಾಯ ಹಾಕಬೇಕು ಎನ್ನುವ ಕಾರಣಕ್ಕೆ ಜಾಗೃತಿ ಮೂಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಅಮೆರಿಕಾದ ಮಾಜಿ ಅಧ್ಯಕ್ಷರಾದ ಬರಾಕ್ ಬಬಾಮ ಅವರು ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.</p>



<p>“ಕಾಂಗ್ರೆಸ್ ಪಕ್ಷ ಈ ದೇಶದ ಚುಕ್ಕಾಣಿ ಹಿಡಿದ ಸಂದರ್ಭದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾದರು. ಅಂಬೇಡ್ಕರ್ ಅವರು ಇಡೀ ಪ್ರಪಂಚವೇ ಸ್ಮರಿಸಿಕೊಳ್ಳುವಂತಹ ಮಹಾನ್ ಗ್ರಂಥ ನಮಗೆ ನೀಡಿದ್ದಾರೆ” ಎಂದು ಹೇಳಿದರು.</p>



<p><strong>ಮಹದೇವಪ್ಪ ಅವರನ್ನು ಸಂದರ್ಶಕ ಉಪನ್ಯಾಸಕರನ್ನಾಗಿ ಕಳುಹಿಸಬೇಕು</strong></p>



<p>“ಸಚಿವರಾದ ಎಚ್.ಸಿ. ಮಹದೇವಪ್ಪ ಅವರು ಸಮಾಜ ಕಲ್ಯಾಣ ಇಲಾಖೆಗೆ ಹೊಸ ರೂಪವನ್ನು ನೀಡಿದ್ದಾರೆ. ರಾಜಕೀಯದಿಂದ ನಿವೃತ್ತಿ ಪಡೆದ ಮೇಲೆ ಮಹದೇವಪ್ಪ ಅವರನ್ನು ನಮ್ಮ ವಿಶ್ವವಿದ್ಯಾನಿಲಯಗಳಿಗೆ ಸಂದರ್ಶಕ ಉಪನ್ಯಾಸಕರನ್ನಾಗಿ ಕಳುಹಿಸಬೇಕು ಎನ್ನುವ ಅಭಿಲಾಷೆ ಅವರ ಮಾತುಗಳನ್ನು ಕೇಳಿದಾಗ ಅನ್ನಿಸಿತು” ಎಂದರು.</p>



<p>“ಗುಣಕ್ಕೆ ಮತ್ಸರವಿಲ್ಲ ಎನ್ನುವ ರೀತಿ ನಮ್ಮ ಸಂವಿಧಾನವೇ ನಮ್ಮ ಧರ್ಮ. ಈ ಚಿಕ್ಕ ಮಕ್ಕಳಿಗೂ ಅರ್ಥವಾಗುವ ರೀತಿ ಅವರು ಸಂವಿಧಾನದ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಸಂವಿಧಾನ ಪೀಠಿಕೆಯನ್ನು ಶಾಲಾ, ಕಾಲೇಜುಗಳಲ್ಲಿ ಪಠಿಸಬೇಕು ಎನ್ನುವ ಹೊಸ ಆಚರಣೆಗೆ ನಾಂದಿ ಹಾಡಿದವರು. ಇದಕ್ಕಾಗಿ ಅವರಿಗೆ ಅಭಿನಂದನೆ ತಿಳಿಸುತ್ತೇನೆ” ಎಂದರು.</p>



<p></p>
]]></content:encoded>
					
		
		
			</item>
		<item>
		<title>ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭಿವೃದ್ಧಿಗೆ ಪೂರಕ: ಡಿಸಿಎಂ ಡಿ ಕೆ ಶಿವಕುಮಾರ್</title>
		<link>https://peepalmedia.com/guarantee-schemes-are-conducive-to-womens-development-dcm-dk-shivakumar/</link>
		
		<dc:creator><![CDATA[Murali Maluru]]></dc:creator>
		<pubDate>Mon, 25 Nov 2024 10:01:00 +0000</pubDate>
				<category><![CDATA[ರಾಮನಗರ]]></category>
		<category><![CDATA[cp Yogeshwar]]></category>
		<category><![CDATA[dk shivakumar]]></category>
		<category><![CDATA[Guarantee schemes are conducive to women's development: DCM DK Shivakumar]]></category>
		<guid isPermaLink="false">https://peepalmedia.com/?p=49571</guid>

					<description><![CDATA[ನಮ್ಮ ಗೃಹಲಕ್ಷ್ಮಿ ಯೋಜನೆ ನಕಲು ಮಾಡಿದ ಪರಿಣಾಮ ಬಿಜೆಪಿಗೆ ಮಹಾರಾಷ್ಟ್ರದಲ್ಲಿ ಗೆಲುವು ಕನಕಪುರ, ನ. 24: &#8220;ಹೆಣ್ಣು ಪ್ರಗತಿ ಹೊಂದಿದರೆ ಒಂದು ಕುಟುಂಬ ಪ್ರಗತಿ ಹೊಂದಿದಂತೆ. ರಾಜ್ಯ, ಹಳ್ಳಿ ಪ್ರಗತಿಯಾದಂತೆ. ಆದ ಕಾರಣಕ್ಕೆ ನಮ್ಮ ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿರುವಂತೆ ರೂಪಿಸಲಾಗಿದೆ&#8221; ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಕನಕಪುರದಲ್ಲಿ ಭಾನುವಾರ ನಡೆದ ಕನಕಾಂಬರಿ ಮಹಿಳಾ ಒಕ್ಕೂಟದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು; ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿ ಇದ್ದ ಬಿಜೆಪಿ ಮೈತ್ರಿ [&#8230;]]]></description>
										<content:encoded><![CDATA[
<p>ನಮ್ಮ ಗೃಹಲಕ್ಷ್ಮಿ ಯೋಜನೆ ನಕಲು ಮಾಡಿದ ಪರಿಣಾಮ ಬಿಜೆಪಿಗೆ ಮಹಾರಾಷ್ಟ್ರದಲ್ಲಿ ಗೆಲುವು</p>



<p>ಕನಕಪುರ, ನ. 24:</p>



<p>&#8220;ಹೆಣ್ಣು ಪ್ರಗತಿ ಹೊಂದಿದರೆ ಒಂದು ಕುಟುಂಬ ಪ್ರಗತಿ ಹೊಂದಿದಂತೆ. ರಾಜ್ಯ, ಹಳ್ಳಿ ಪ್ರಗತಿಯಾದಂತೆ. ಆದ ಕಾರಣಕ್ಕೆ ನಮ್ಮ ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿರುವಂತೆ ರೂಪಿಸಲಾಗಿದೆ&#8221; ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.</p>



<p>ಕನಕಪುರದಲ್ಲಿ ಭಾನುವಾರ ನಡೆದ ಕನಕಾಂಬರಿ ಮಹಿಳಾ ಒಕ್ಕೂಟದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು;</p>



<p>ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿ ಇದ್ದ ಬಿಜೆಪಿ ಮೈತ್ರಿ ಸರ್ಕಾರ ನಮ್ಮ ಗೃಹಲಕ್ಷ್ಮೀ ಯೋಜನೆಯನ್ನೇ ನಕಲು ಮಾಡಿ &#8216;ಮಾಝಿ ಲಡಕಿ ಬಹಿನ್ ಯೋಜನಾ&#8217; ಎಂದು ಹೆಸರಿಟ್ಟು 1,500 ರೂಪಾಯಿಯನ್ನು ಕೊಟ್ಟಿದ್ದರು. ನಾವು ಮಹಾಲಕ್ಷ್ಮಿ ಎನ್ನುವ ಹೆಸರಿಟ್ಟು 3,000 ಸಾವಿರ ಕೊಡುವುದಾಗಿ ಭರವಸೆ ನೀಡಿದ್ದೆವು. ಆದರೆ ಅಲ್ಲಿನ ಬಿಜೆಪಿ ಮೈತ್ರಿ ಸರ್ಕಾರ ಚುನಾವಣೆಗೆ ಆರು ತಿಂಗಳು ಮುಂಚಿತವಾಗಿ ಹಣ ನೀಡಿದ ಪರಿಣಾಮ ನಮಗಿಂತ ಅವರಿಗೆ ಹೆಚ್ಚು ಮತಗಳು ಬಂದವು.</p>



<p>ಸಾಮಾನ್ಯ ಮಹಿಳೆಯರು ಮುಂದೆ ಬರಬೇಕು</p>



<p>ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ನೀಡಲಾಗಿದೆ. ಆದರೆ ಮುಖಂಡರುಗಳು ತಮ್ಮ ಹೆಂಡತಿ, ತಂಗಿ, ಅಕ್ಕ ಅಥವಾ ಸಂಬಂಧಿಕರನ್ನು ನಿಲ್ಲಿಸುತ್ತಿದ್ದಾರೆ. ಸಾಮಾನ್ಯ ಮಹಿಳೆಯರು ಅಧಿಕಾರದ ಗದ್ದುಗೆ ಇರಲು ಮುಂದಕ್ಕೆ ಬರಬೇಕು.</p>



<p>ಮಹಿಳೆಯರು ನಾಯಕತ್ವ ಗುಣ ಬೆಳೆಸಿಕೊಳ್ಳಿ</p>



<p>ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆಗೆ ಒಪ್ಪಿಗೆ ದೊರೆತಿದೆ. ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ ಶೇಕಡ 33ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ನೀಡಬೇಕಾಗಬಹುದು. ಅದಕ್ಕಾಗಿ ಸಾಮಾನ್ಯ ಮಹಿಳೆಯರು ಈಗಿನಿಂದಲೇ ತಮ್ಮಲ್ಲಿರುವ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಿ.</p>



<p>ಸ್ತ್ರೀಶಕ್ತಿ ಸಂಘಗಳಿಗೆ ಮುನ್ನುಡಿ ಬರೆದಿದ್ದೆ ನಾವು</p>



<p>ಎಸ್ಎಂ. ಕೃಷ್ಣ ಅವರ ಸಂಪುಟದಲ್ಲಿ ನಾನು ಸಹಕಾರ ಸಚಿವನಾಗಿದ್ದೆ. ಆಗ ಈ ಸ್ತ್ರೀ ಶಕ್ತಿ ಸಂಘಗಳಿಗೆ ಮುನ್ನುಡಿ ಬರೆದಿದ್ದೆ ನಾವು. ಸಹಕಾರ ಇಲಾಖೆಯ ಅಡಿಯಲ್ಲಿ ಬರುವ ಡಿಸಿಸಿ ಬ್ಯಾಂಕ್ ನೇತೃತ್ವದಲ್ಲಿ ಸ್ವಸಹಾಯ ಗುಂಪುಗಳಿದ್ದವು, ಇವುಗಳನ್ನೇ ಸ್ತ್ರೀಶಕ್ತಿ ಸಂಘಗಳೆಂದು ಪರಿವರ್ತಿಸಿ, ಸಚಿವರಾಗಿದ್ದ ಮೋಟಮ್ಮ ಅವರಿಗೆ ನೇತೃತ್ವ ನೀಡಲಾಯಿತು.</p>



<p>ಮಹಿಳೆಯರ ಆರ್ಥಿಕ ಸ್ಥಿತಿ ಆರೋಗ್ಯವಾಗಿರಬೇಕು</p>



<p>ಸ್ತ್ರೀ ಶಕ್ತಿ ಸಂಘಗಳು ಮಾಡಿದ ಪರಿಣಾಮವಾಗಿ ಹೆಣ್ಣು ಮಕ್ಕಳು ಮನೆಯಲ್ಲಿ ಇರುತ್ತಿಲ್ಲ ಇಂದು ಅನೇಕ ನಾಯಕರು ನನಗೆ ಬೈದರು. ಮನೆಯಲ್ಲಿ ಹೆಣ್ಣಿಗೆ ಆರ್ಥಿಕವಾಗಿ ಶಕ್ತಿ ಕೊಡಬೇಕು ಎಂದು ಈ ಕಾರ್ಯಕ್ರಮಕ್ಕೆ ಬೆನ್ನೆಲುಬಾಗಿ ನಿಂತೆ. ಹೆಣ್ಣು ಕುಟುಂಬದ ಕಣ್ಣು. ಕುಟುಂಬದಲ್ಲಿ ಹೆಣ್ಣಿನ ಮನಸ್ಥಿತಿ, ಪರಿಸ್ಥಿತಿ ಆರೋಗ್ಯವಾಗಿ ಇದ್ದರೆ, ನಾವೆಲ್ಲರೂ ಆರೋಗ್ಯವಾಗಿ ಇದ್ದಂತೆ. ಪುರುಷರೂ ಇದಕ್ಕೆ ಕೊಡುಗೆ ಕೊಡಬೇಕು.</p>



<p>ಮಹಿಳೆಯರು ಜಮೀನು ಮಾರಲು ಬಿಡಬೇಡಿ</p>



<p>ಯಾವುದೇ ಕಾರಣಕ್ಕೂ ತಮ್ಮ ಪಾಲಿನ ಭೂಮಿ ಮಾರಾಟ ಮಾಡದಂತೆ ಮನೆಯ ಪುರುಷರಿಗೆ ಮಹಿಳೆಯರು ಬುದ್ಧಿ ಮಾತು ಹೇಳಬೇಕು. ಏಕೆಂದರೆ ಭೂಮಿಯ ಬೆಲೆ ಹೆಚ್ಚಾಗಿದೆ. ನಾನು ಮೊದಲ ಬಾರಿಗೆ ಇಲ್ಲಿ ಚುನಾವಣೆಗೆ ನಿಂತಾಗ, ಒಂದು ಎಕರೆಗೆ ಎರಡರಿಂದ ಮೂರು ಲಕ್ಷ ಮಾತ್ರ ಇತ್ತು. ಈಗ 50 ಲಕ್ಷ ಬೆಲೆಬಾಳುತ್ತದೆ.</p>



<p>ಇದನ್ನು ರಾಮನಗರ ಜಿಲ್ಲೆ ಎಂದು ಕರೆಯಬಹುದು ಆದರೆ ಮೂಲತಃ ನಾವೆಲ್ಲರೂ ಬೆಂಗಳೂರು ಜಿಲ್ಲೆಗೆ ಸೇರಿದವರು. ಕನಕಪುರ ಎಷ್ಟರಮಟ್ಟಿಗೆ ಅಭಿವೃದ್ಧಿ ಆಗುತ್ತದೆ ಎಂಬುದನ್ನು ನಾನು ಬಹಿರಂಗವಾಗಿ ಹೇಳುವುದಿಲ್ಲ. ಭೂಮಿ ಕಳೆದುಕೊಂಡರೆ ನಿಮ್ಮ ಜೇಬಿಗೆ ದುಡ್ಡನ್ನು ನಾನು ಹಾಕಲು ಆಗುವುದಿಲ್ಲ. ಜಮೀನು ಮಾರಿದರೆ ಒಳ್ಳೆಯ ಬೆಲೆ ಬರುತ್ತದೆ ಎಂದು ಆಮಿಷಕ್ಕೆ ಒಳಗಾಗಬೇಡಿ. ಯಾವುದೇ ಕಾರಣಕ್ಕೂ ಒಂದು ಕುಂಟೆ ಜಮೀನನ್ನು ಕಳೆದುಕೊಳ್ಳಬೇಡಿ.</p>



<p>ಕನಕಪುರಕ್ಕೆ ಹೊಸ ರೂಪ ನೀಡಬೇಕಾಗಿದೆ</p>



<p>ನಾವು ಇನ್ನೂ ಅಭಿವೃದ್ಧಿಯ ಮೈಲಿಗಲ್ಲನ್ನು ಸಾಧಿಸಬೇಕಾಗಿದೆ. ಕನಕಪುರಕ್ಕೆ ಹೊಸ ರೂಪವನ್ನು ನೀಡಬೇಕಾಗಿದೆ. 2025 ಕ್ಕೆ ಕನಕಪುರದ ಅಭಿವೃದ್ಧಿಗೆ ಹೊಸ ಕಾರ್ಯಕ್ರಮಗಳನ್ನು ನೀಡಲಾಗುವುದು. ಸರ್ಕಾರದಲ್ಲಿ ಹೆಚ್ಚಿನ ಜವಾಬ್ದಾರಿ ಇರುವ ಕಾರಣ ನಿಮ್ಮನ್ನು ಭೇಟಿಯಾಗಲು ಆಗುತ್ತಿಲ್ಲ. ಮುಂದಿನ ದಿನಗಳಲ್ಲಿ ತಾಲೂಕು, ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮೆಲ್ಲರ ಅಹವಾಲುಗಳನ್ನು ಕೇಳಲಾಗುವುದು.</p>



<p>ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ</p>



<p>ನನಗೆ ಯುವಕರು ಹಾಗೂ ಮಹಿಳೆಯರ ಮೇಲೆ ನಂಬಿಕೆ ಹೆಚ್ಚು. ಪಕ್ಷ ಅಧಿಕಾರಕ್ಕೆ ಬಂದರೆ ಇವರಿಗೆ ಸಹಾಯ ಮಾಡಬೇಕು ಎಂಬುದು ನನ್ನ ಅಭಿಲಾಷೆಯಾಗಿತ್ತು. ನಾನು ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾದಾಗ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳ ಬಗ್ಗೆ ಭರವಸೆ ನೀಡಲಾಯಿತು. ಅದೇ ರೀತಿ ಅಧಿಕಾರಕ್ಕೆ ಬಂದ ತಕ್ಷಣ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ.</p>



<p>ಕೇವಲ ಸಾಲ ಪಡೆಯಬಾರದು, ಉದ್ಯೋಗ ನೀಡಬೇಕು</p>



<p>ಕನಕಾಂಬರಿ ಮಹಿಳಾ ಒಕ್ಕೂಟದ ಗೌರವ ಅಧ್ಯಕ್ಷ ಶ್ರೀಕಂಠು ಅವರ ನೇತೃತ್ವದಲ್ಲಿ ನಿಮಗೆ ಕೆನರಾ ಬ್ಯಾಂಕ್ ಮೂಲಕ ಆರ್ಥಿಕ ಸಹಾಯ ನೀಡಲಾಗುತ್ತಿದೆ. ಇವುಗಳನ್ನು ನೀವು ಬಳಸಿಕೊಂಡು ಉತ್ತಮ ಮಟ್ಟಕ್ಕೆ ಬೆಳೆದಿದ್ದೀರಿ ಎನ್ನುವುದು ನನ್ನ ಭಾವನೆ. ಸಾಲ ತೆಗೆದುಕೊಂಡವರು ಉತ್ತಮವಾಗಿ ಪಾವತಿ ಮಾಡುತ್ತಿದ್ದೀರಿ ಎಂಬುದನ್ನು ನಾನು ಕೇಳಲ್ಪಟ್ಟೆ.</p>



<p>ಈ ಸಂಸ್ಥೆಯಿಂದ ಸಾಲವನ್ನು ಪಡೆದವರು ತಮ್ಮ ಬದುಕನ್ನು ಗಟ್ಟಿಯಾಗಿ ಕಟ್ಟಿಕೊಳ್ಳಬೇಕು. ಕೇವಲ ಸಾಲ ಪಡೆಯುವವರಾಗಬಾರದು. ನೀವು ಸಾಲ ಪಡೆದು ಸ್ವಂತ ಉದ್ಯೋಗವನ್ನು ಕಟ್ಟಿ ನಾಲ್ಕು ಜನಕ್ಕೆ ಉದ್ಯೋಗ ಸೃಷ್ಟಿ ಮಾಡಬೇಕು.</p>



<p>ನಮ್ಮ ಸಂಸ್ಕೃತಿಯಲ್ಲಿ ಹೆಣ್ಣಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಯಾವುದೇ ದೇವರ ಹೆಸರನ್ನು ಕರೆಯುವಾಗ ಲಕ್ಷ್ಮೀ ವೆಂಕಟೇಶ್ವರ, ಶಿವ ಪಾರ್ವತಿ ಎಂದು ಕರೆಯಲಾಗುತ್ತದೆ. ಶ್ರೀಮತಿ ಹಾಗೂ ಡಿ. ಕೆ. ಶಿವಕುಮಾರ್ ಎಂದು ಲಗ್ನ ಪತ್ರಿಕೆಯಲ್ಲಿ ಬರೆಯುತ್ತಾರೆ.</p>



<p>ನಾನು ಈ ರಾಜ್ಯದ ಡಿಸಿಎಂ ಆಗಿರಬಹುದು ಆದರೆ ಮೊಟ್ಟ ಮೊದಲನೆಯದಾಗಿ ಈ ಕನಕಪುರದ ಮಗ. ನನ್ನ ಬೆಳೆಸಿದವರು ನೀವು. ನನ್ನ ಪರವಾಗಿ ಪ್ರತಿ ಚುನಾವಣೆಯಲ್ಲಿ ನಿಂತು ರಾಜಕೀಯವಾಗಿ ಬೆಳೆಸಿದವರು ನೀವು. ನನಗೆ ಶಕ್ತಿ ಕೊಟ್ಟವರು ಇಲ್ಲಿನ ಜನತೆ ಈ ಕಾರಣಕ್ಕೆ ಇಡೀ ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ಕೊಡುವಷ್ಟು ಅಧಿಕಾರ ನಮಗೆ ಸಿಕ್ಕಿದೆ.</p>



<p>ಶುಭಂ ಕರೋತಿ ಕಲ್ಯಾಣಂ, ಆರೋಗ್ಯ ಧನ ಸಂಪದಂ, ಜ್ಞಾನಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತಂ. ಎನ್ನುವ ಶ್ಲೋಕದ ಮಾತಿನಂತೆ ಗೆಳೆಯ ಹಾಗೂ ಕನಕಪುರ ರೂರಲ್ ಎಜುಕೇಷನ್ ಸೊಸೈಟಿ ಅಧ್ಯಕ್ಷ, ಹಾಗೂ ಕನಕಾಂಬರಿ ಮಹಿಳಾ ಒಕ್ಕೂಟದ ಗೌರವ ಅಧ್ಯಕ್ಷ ಶ್ರೀಕಂಠು ಅವರು ಹೆಚ್ಚಿನ ಜನ ಸೇವೆ ಮಾಡಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.</p>



<p>ಕನಕಪುರ ರೂರಲ್ ಎಜುಕೇಷನ್ ಸೊಸೈಟಿಯ ನಿರ್ದೇಶಕ ಮಂಡಳಿಯಲ್ಲಿ ನಾನೂ ಇದ್ದೇನೆ. ಈ ಹಿಂದೆ ಭೂಮಿಯ ಬೆಲೆ ಕಡಿಮೆ ಇದ್ದಾಗ ತೆಗೆದುಕೊಳ್ಳಿ ಎಂದು ಸಲಹೆ ನೀಡಿದ್ದೆ. ಈಗ ನನ್ನ ಮಾತಿನ ಬೆಲೆ ಇವರಿಗೆ ಅರ್ಥವಾಗಿದೆ. ಈ ಸಂಸ್ಥೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಯನ್ನು ಕೊಡಲಾಗಿದೆ. ಕೃಷಿ ಬಿಎಸ್ಸಿ ಸೇರಿದಂತೆ ಅನೇಕ ಕೋರ್ಸ್ ಗಳನ್ನು ಪ್ರಾರಂಭ ಮಾಡಲು ಅನುಮತಿ ಕೊಡಿಸಿದ್ದೇನೆ. ನಾನು ಸಹ ಒಂದು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದ್ದೇನೆ. ಇದರ ಜೊತೆ ಪೈಪೋಟಿ ನಡೆಸುವುದು ಬೇಡ ಎಂದು ನನ್ನ ದೊಡ್ಡ ಆಲಹಳ್ಳಿಯಲ್ಲಿ ಇದ್ದ ಜಮೀನನ್ನು ಸರ್ಕಾರಿ ಶಾಲೆಗೆ ಬರೆದುಕೊಟ್ಟಿದ್ದೇವೆ.</p>



<p>65 ವಸಂತಗಳನ್ನು ಪೂರೈಸಿರುವ ಕನಕಪುರ ರೂರಲ್ ಎಜುಕೇಷನ್ ಸೊಸೈಟಿಯ ಶ್ರೀಕಂಠು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಇನ್ನೂ ಹೆಚ್ಚು ಜನಸೇವೆ ಮಾಡುವ ಶಕ್ತಿ ಅವರಿಗೆ ದೊರಕಲಿ.</p>



<p>ದರ್ಶನ್ ಧ್ರುವ ನಾರಾಯಣ್ ಗೆ ಉತ್ತಮ ಭವಿಷ್ಯವಿದೆ</p>



<p>ದರ್ಶನ್ ಧ್ರುವನಾರಾಯಣ್ ಚಿಕ್ಕ ವಯಸ್ಸಿನಲ್ಲಿ ಶಾಸಕನಾಗಿ ನಮ್ಮ ಜೊತೆ ಕೆಲಸ ಮಾಡುತ್ತಿದ್ದಾನೆ. ಅವರ ತಂದೆ ಅಕಾಲಿಕವಾಗಿ ಮರಣ ಹೊಂದದೆ ಇದ್ದಿದ್ದರೆ, ನಮ್ಮ ಜೊತೆ ಸಂಪುಟದಲ್ಲಿ ಮಂತ್ರಿ ಆಗುವುದನ್ನು ಯಾರು ಕೂಡ ತಪ್ಪಿಸಲು ಆಗುತ್ತಿರಲಿಲ್ಲ. ದರ್ಶನ್ ಧ್ರುವ ನಾರಾಯಣ್ ಗೆ ಉತ್ತಮ ಭವಿಷ್ಯವಿದೆ.</p>
]]></content:encoded>
					
		
		
			</item>
		<item>
		<title>ಕುಮಾರಣ್ಣನ ಜೇಬಲ್ಲಿದ್ದ ಪೆನ್ ಡ್ರೈವ್ ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿಸಿಎಂ ಡಿ.ಕೆ. ಶಿವಕುಮಾರ್</title>
		<link>https://peepalmedia.com/now-we-know-what-was-in-the-pen-drive-in-kumarans-pocket/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 28 Apr 2024 02:14:25 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[dk shivakumar]]></category>
		<category><![CDATA[JDS Dirty Politics]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=38858</guid>

					<description><![CDATA[ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗಳ ಮುಂದೆ ತೋರಿಸಿ ತಮ್ಮ ಜೇಬಲ್ಲಿಟ್ಟುಕೊಂಡಿದ್ದ ಪೆನ್ ಡ್ರೈವ್ ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯಿತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಹಾಸನ ಸಂಸದರ ಪೆನ್ ಡ್ರೈವ್ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಶನಿವಾರ ಉತ್ತರಿಸಿದರು. ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಹಾಸನ ನಾಯಕರ ವಿರುದ್ಧ ಲೈಂಗಿಕ ಹಗರಣ ಆರೋಪ ಬರುತ್ತಿದ್ದು, ಈ ಬಗ್ಗೆ ಎಸ್ಐಟಿ ತನಿಖೆ [&#8230;]]]></description>
										<content:encoded><![CDATA[
<p></p>



<p>ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗಳ ಮುಂದೆ ತೋರಿಸಿ ತಮ್ಮ ಜೇಬಲ್ಲಿಟ್ಟುಕೊಂಡಿದ್ದ ಪೆನ್ ಡ್ರೈವ್ ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯಿತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.</p>



<p>ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಹಾಸನ ಸಂಸದರ ಪೆನ್ ಡ್ರೈವ್ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಶನಿವಾರ ಉತ್ತರಿಸಿದರು.</p>



<p>ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಹಾಸನ ನಾಯಕರ ವಿರುದ್ಧ ಲೈಂಗಿಕ ಹಗರಣ ಆರೋಪ ಬರುತ್ತಿದ್ದು, ಈ ಬಗ್ಗೆ ಎಸ್ಐಟಿ ತನಿಖೆ ಮಾಡಬೇಕು ಎಂದು ಕೇಳಿರುವ ಬಗ್ಗೆ ಪ್ರಶ್ನಿಸಿದಾಗ ಅವರು ಉತ್ತರಿಸಿದ್ದು ಹೀಗೆ;</p>



<p>“ಕುಮಾರಸ್ವಾಮಿ ಅವರು ತೋರಿಸುತ್ತಿದ್ದ ಪೆನ್ ಡ್ರೈವ್ ಯಾವುದು, ಅದರಲ್ಲಿ ಏನಿದೆ ಎಂಬುದು ಆಗ ನನಗೆ ಗೊತ್ತಿರಲಿಲ್ಲ. ಅದರಲ್ಲಿ ಏನಿದೆ ಎಂದು ಈಗ ಗೊತ್ತಾಯಿತು. ಈ ಪೆನ್ ಡ್ರೈವ್ ಬಗ್ಗೆ ಕುಮಾರಣ್ಣನಿಗೆ ಚೆನ್ನಾಗಿ ಗೊತ್ತು. ಅವರ ಜೇಬಿನಲ್ಲೇ ಇಟ್ಟುಕೊಂಡಿದ್ದನ್ನು ಮಾಧ್ಯಮದವರಿಗೆ ತೋರಿಸಿದ್ದರು. ಹೀಗಾಗಿ ಇದರ ಬಗ್ಗೆ ಕುಮಾರಸ್ವಾಮಿ ಅವರನ್ನು ನೀವು ಕೇಳಬೇಕು. ಇದಕ್ಕೆ ಉತ್ತರಿಸಲು ಅವರೇ ಸೂಕ್ತ ವ್ಯಕ್ತಿ ಎಂದರು.</p>



<p>ಮಾಧ್ಯಮಗಳು ಈ ಹಗರಣದ ವಿಚಾರದಲ್ಲಿ ಸುಳ್ಳು ಹೇಳುತ್ತಿವೆ. ಅದು ಬರೀ ಹಾಸನದ ನಾಯಕನದಲ್ಲ. ಹಾಸನ ಲೋಕಸಭಾ ಕ್ಷೇತ್ರದ ಎಡಿಎ ಮೈತ್ರಿ ಕೂಟದ ಅಭ್ಯರ್ಥಿಯದ್ದು, ಸಂಸದನದ್ದು. ಹೀಗಾಗಿ ಈ ವಿಚಾರವಾಗಿ ಪ್ರಧಾನಮಂತ್ರಿಗಳು, ವಿಜಯೇಂದ್ರ, ಶೋಭಕ್ಕ, ಅಶೋಕ್, ಕುಮಾರಣ್ಣ, ಗಂಡಸ್ಥನದ ಬಗ್ಗೆ ಮಾತನಾಡುತ್ತಿದ್ದ ಅಶ್ವತ್ಥ್ ನಾರಾಯಣ ಅವರು ಉತ್ತರ ನೀಡಬೇಕು. ನಮ್ಮ ಹೆಸರಿಗೆ ಮಸಿ ಬಳಿಯಲು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಅವರೇ ದೂರು ಕೊಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ಓದಿದೆ. ಮಹಿಳಾ ಆಯೋಗದ ಅಧ್ಯಕ್ಷರು ಇದೆಲ್ಲವನ್ನು ನೋಡಿ ರಾಜ್ಯ ಗೃಹ ಸಚಿವರು ಹಾಗೂ ಸಿಎಂಗೆ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ನೀವು (ಮಾಧ್ಯಮದವರು) ಯಾಕೆ ಮೌನ ತಾಳುತ್ತಿದ್ದೀರಿ? ಈ ವಿಚಾರದಲ್ಲಿ ನೀವು ರಾಜ್ಯದ ಜನತೆಗೆ ಬೆಳಕು ಚೆಲ್ಲಬೇಕು ಎಂದು ಮನವಿ ಮಾಡುತ್ತೇನೆ” ಎಂದರು.</p>



<p>ಎಸ್ಐಟಿ ತನಿಖೆ ಬಗ್ಗೆ ಸರ್ಕಾರದ ನಿಲುವೇನು ಎಂದು ಕೇಳಿದಾಗ, “ಈ ಬಗ್ಗೆ ಮುಖ್ಯಮಂತ್ರಿ, ಗೃಹಮಂತ್ರಿಗಳನ್ನು ಕೇಳಬೇಕು. ನಾನು ಸರ್ಕಾರದ ಭಾಗವಾಗಿದ್ದರು, ಇನ್ನೂ ಈ ಬಗ್ಗೆ ಸಂಬಂಧಪಟ್ಟ ಸಚಿವರು ಹಾಗೂ ಸಿಎಂ ಜತೆ ಚರ್ಚೆ ಮಾಡಲು ಆಗಿಲ್ಲ” ಎಂದರು.</p>



<p>ಸಂತ್ರಸ್ತ ಮಹಿಳೆಯರ ಪರವಾಗಿ ಕಾಂಗ್ರೆಸ್ ನಿಲ್ಲಲಿದೆಯೇ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳು ಬಹುಮುಖ್ಯ ಆಧಾರಸ್ತಂಭ. ನೀವು ನಿಮ್ಮ ನಡುವಣ ಪೈಪೋಟಿ, ಆಂತರಿಕ ವಿಚಾರಕ್ಕೆ, ಬೇರೆಯವರಿಗೆ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಇಂತಹ ದೊಡ್ಡ ವಿಚಾರಗಳನ್ನು ಮುಚ್ಚಿಹಾಕುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಭಾವಿಸುತ್ತೇನೆ. ನಮ್ಮ ಆತ್ಮಸಾಕ್ಷಿಗಾದರೂ ನಾವು ಕೆಲಸ ಮಾಡಬೇಕು ಅಲ್ಲವೇ” ಎಂದರು.</p>



<p><strong>ಕುಮಾರಸ್ವಾಮಿ ಈ ಪ್ರಕರಣದಲ್ಲಿ ನನ್ನ ಹೆಸರು ಹೇಳಲಿ: ಡಿಸಿಎಂ ಸವಾಲು</strong><br>ಮಹಿಳೆಯರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ, ಅವರಿಗೆ ಒಳ್ಳೆಯದಾಗುತ್ತಾ ಎಂದು ಕುಮಾರಸ್ವಾಮಿ ಅವರು ನಿಮ್ಮ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ ಎಂದು ಮಾಧ್ಯಮಗಳು ಕೇಳಿದಾಗ, “ಅವರು ನನ್ನ ಹೆಸರು ಹೇಳಿ ಮಾತನಾಡಲಿ. ಆಮೇಲೆ ನನ್ನ ಪುರಾಣ, ನನ್ನ ಕಥೆ, ನನ್ನ ನುಡಿಮುತ್ತುಗಳನ್ನು ಹೇಳುತ್ತೇನೆ. ಹಾಗಾದರೆ ಆ ಹೆಣ್ಣು ಮಕ್ಕಳ ಮಾನ ಹರಣವಾಗಿರುವುದನ್ನು ಕುಮಾರಸ್ವಾಮಿ ಅವರು ಈ ರೀತಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರಾ?” ಎಂದು ಮರುಪ್ರಶ್ನಿಸಿದರು.</p>



<p>ಸರ್ಕಾರ ಈ ವಿಚಾರದಲ್ಲಿ ಜವಾಬ್ದಾರಿ ನಿರ್ವಹಿಸಬೇಕಲ್ಲವೇ ಎಂದು ಕೇಳಿದಾಗ, “ಮಾಧ್ಯಮಗಳು ಮೊದಲು ಈ ಬಗ್ಗೆ ರಾಜ್ಯದ ಜನರಿಗೆ ಬೆಳಕು ಚೆಲ್ಲಲಿ. ಮಹಿಳಾ ಆಯೋಗ ಹಂತ ಹಂತವಾಗಿ ಏನು ಮಾಡಬೇಕೋ ಮಾಡಲಿ. ನೀವು ಈ ವಿಚಾರವಾಗಿ ಹೆಚ್ಚಿನ ತನಿಖೆ ಮಾಡಿ ಮಾಹಿತಿ ಒದಗಿಸಿಕೊಟ್ಟರೆ ನಾವು ಕೂಡ ಮುಂದಿನ ಹೆಜ್ಜೆ ಬಗ್ಗೆ ಗಮನ ಹರಿಸುತ್ತೇವೆ” ಎಂದು ತಿಳಿಸಿದರು.</p>



<p>ಇಬ್ಬರು ಸಂತ್ರಸ್ತೆಯರು ಡಿಜಿ ಅವರಿಗೆ ದೂರು ನೀಡಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ತಿಳಿದುಕೊಂಡು ಆಮೇಲೆ ಮಾತನಾಡುತ್ತೇನೆ. ಮಾಹಿತಿ ಇಲ್ಲದೆ ಮಾತನಾಡಬಾರದು” ಎಂದರು.</p>
]]></content:encoded>
					
		
		
			</item>
	</channel>
</rss>
