<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Dr. K. Sudhakar &#8211; Peepal Media</title>
	<atom:link href="https://peepalmedia.com/tag/dr-k-sudhakar-2/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 18 Oct 2022 08:15:27 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Dr. K. Sudhakar &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಕರ್ನಾಟಕದಲ್ಲಿನ ಬಿಜೆಪಿ ನಿಲುವು ಕುರಿತು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ</title>
		<link>https://peepalmedia.com/sarcasm-on-social-media-about-bjp-stand-in-karnataka/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 18 Oct 2022 08:15:24 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[BASAVARAJ BOMMAYI]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[Dr. K. Sudhakar]]></category>
		<category><![CDATA[india]]></category>
		<category><![CDATA[K. S. Eshwarappa]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Mehroz Khan]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[twitter]]></category>
		<guid isPermaLink="false">https://peepalmedia.com/?p=11750</guid>

					<description><![CDATA[ಬೆಂಗಳೂರು: ಸಾಮಾಜಿಕ ಜಾಲಾತಾಣದಲ್ಲಿ ಕರ್ನಾಟಕ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ನಿಲುವನ್ನು ಕುರಿತು ವ್ಯಂಗ್ಯಮಾಡಲಾಗಿದೆ. ಕೆಟ್ಟದ್ದನ್ನು ಮಾತನಾಡಬಾರದು, ಕೆಟ್ಟದ್ದನ್ನು ನೋಡಬಾರದು, ಕೆಟ್ಟದ್ದನ್ನು ಕೇಳಬಾರದು ಎನ್ನುವುದು ಸಾಮಾನ್ಯವಾಗಿ ಎಲ್ಲರಿಗು ತಿಳಿದರುವ ವಿಚಾರ. ಆದರೆ ಇದಕ್ಕೆ ವಿರುದ್ಧವಾಗಿ ಸಾಮಾಜಿಕ ಜಾಲತಾಣವೊಂದರಲ್ಲಿ ಬಿಜೆಪಿ ನಾಯಕರುಗಳ ಪೋಟೋ ಅಂಟಿಸಿ ಪೋಸ್ಟ್‌ ಮಾಡಲಾಗಿದೆ. ಪೋಸ್ಟ್‌ನಲ್ಲಿ ಕಂಡುಬಂದಿರುವಂತೆ ಬಿಜೆಪಿ ಪಕ್ಷದ ನಾಯಕರುಗಳಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್ ಅವರ ಭಾವಚಿತ್ರಗಳನ್ನು ಅಂಟಿಸಿ [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು: </strong>ಸಾಮಾಜಿಕ ಜಾಲಾತಾಣದಲ್ಲಿ<strong> </strong>ಕರ್ನಾಟಕ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ನಿಲುವನ್ನು ಕುರಿತು ವ್ಯಂಗ್ಯಮಾಡಲಾಗಿದೆ. </p>



<p style="font-size:20px">ಕೆಟ್ಟದ್ದನ್ನು ಮಾತನಾಡಬಾರದು, ಕೆಟ್ಟದ್ದನ್ನು ನೋಡಬಾರದು, ಕೆಟ್ಟದ್ದನ್ನು ಕೇಳಬಾರದು ಎನ್ನುವುದು ಸಾಮಾನ್ಯವಾಗಿ ಎಲ್ಲರಿಗು ತಿಳಿದರುವ ವಿಚಾರ. ಆದರೆ ಇದಕ್ಕೆ ವಿರುದ್ಧವಾಗಿ ಸಾಮಾಜಿಕ ಜಾಲತಾಣವೊಂದರಲ್ಲಿ ಬಿಜೆಪಿ ನಾಯಕರುಗಳ ಪೋಟೋ ಅಂಟಿಸಿ ಪೋಸ್ಟ್‌ ಮಾಡಲಾಗಿದೆ.</p>



<p style="font-size:20px">ಪೋಸ್ಟ್‌ನಲ್ಲಿ ಕಂಡುಬಂದಿರುವಂತೆ ಬಿಜೆಪಿ ಪಕ್ಷದ ನಾಯಕರುಗಳಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್ ಅವರ ಭಾವಚಿತ್ರಗಳನ್ನು ಅಂಟಿಸಿ ಸತ್ಯವನ್ನು ಹೇಳುವುದಿಲ್ಲ, ನುಡಿಯುವುದಿಲ್ಲ, ಕೇಳುವುದಿಲ್ಲ ಎಂದು ಬರೆಯಲಾಗಿದ್ದು, ಇದು ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ನಿಲುವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮೆಹ್ರೋಜ್ ಖಾನ್ ಟ್ವಿಟರ್ ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="en" dir="ltr">Bjp&#39;s stand in Karnataka <a href="https://twitter.com/BJP4Karnataka?ref_src=twsrc%5Etfw">@BJP4Karnataka</a> <a href="https://twitter.com/BJP4India?ref_src=twsrc%5Etfw">@BJP4India</a> <a href="https://twitter.com/BSBommai?ref_src=twsrc%5Etfw">@BSBommai</a> <a href="https://t.co/VlFxtpVUXv">pic.twitter.com/VlFxtpVUXv</a></p>&mdash; Mehroz Khan (@themehrozkhan) <a href="https://twitter.com/themehrozkhan/status/1582203942485704704?ref_src=twsrc%5Etfw">October 18, 2022</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
		<item>
		<title>ಉತ್ತರ ಕನ್ನಡಕ್ಕೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರಿಂದ ಸ್ಥಳ ಪರಿಶೀಲನೆ</title>
		<link>https://peepalmedia.com/superspeciality-hospital-for-uttarakannada/</link>
		
		<dc:creator><![CDATA[Peepal Media]]></dc:creator>
		<pubDate>Tue, 11 Oct 2022 17:15:00 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[Dr. K. Sudhakar]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[Super Specialty Hospital]]></category>
		<category><![CDATA[uttarakannada]]></category>
		<guid isPermaLink="false">https://peepalmedia.com/?p=10161</guid>

					<description><![CDATA[ಉತ್ತರ ಕನ್ನಡ ಜಿಲ್ಲೆಯ ಜನರ ಒತ್ತಾಸೆಯಂತೆಯೇ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಕುಮಟದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಯೋಜನೆಗೆ ಅನುಮೋದನೆ ನೀಡಿ ಅನುದಾನ ನಿಗದಿ ಮಾಡಲಾಗುವುದು. ಈ ಹಿಂದೆ ಆಯ್ಕೆ ಮಾಡಿದ್ದ 3 ಸ್ಥಳಗಳ ಪೈಕಿ ಮಿರ್ಜಾನ್‌ ಬಳಿಯಿರುವ ಸ್ಥಳವನ್ನು ಅಂತಿಮ ಮಾಡಲು ಚರ್ಚೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸಂಬಂಧ ಹಾಗೂ [&#8230;]]]></description>
										<content:encoded><![CDATA[
<p>ಉತ್ತರ ಕನ್ನಡ ಜಿಲ್ಲೆಯ ಜನರ ಒತ್ತಾಸೆಯಂತೆಯೇ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಕುಮಟದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಯೋಜನೆಗೆ ಅನುಮೋದನೆ ನೀಡಿ ಅನುದಾನ ನಿಗದಿ ಮಾಡಲಾಗುವುದು. ಈ ಹಿಂದೆ ಆಯ್ಕೆ ಮಾಡಿದ್ದ 3 ಸ್ಥಳಗಳ ಪೈಕಿ ಮಿರ್ಜಾನ್‌ ಬಳಿಯಿರುವ ಸ್ಥಳವನ್ನು ಅಂತಿಮ ಮಾಡಲು ಚರ್ಚೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.</p>



<p>ಉತ್ತರ ಕನ್ನಡ ಜಿಲ್ಲೆಯ ಕುಮಟದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸಂಬಂಧ ಹಾಗೂ ಆರೋಗ್ಯ ಇಲಾಖೆ ಪರಿಶೀಲನೆ ಸಂಬಂಧ ಸಚಿವ ಡಾ.ಕೆ.ಸುಧಾಕರ್‌ ಅವರು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಕಾರವಾರದಲ್ಲಿ ಸಭೆ ನಡೆಸಿದರು. ಜೊತೆಗೆ ಕುಮಟದಲ್ಲಿ ಸ್ಥಳ ಪರಿಶೀಲನೆ ನಡೆಸಿದರು. ಇದೇ ವೇಳೆ ಸುದ್ದಿಗಾರರಿಗೆ ಮಾಹಿತಿ ನೀಡಿದರು.</p>



<p>ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಜನರು ಹೋರಾಟ ಮಾಡಿದ್ದರು. ಅಧಿವೇಶನದಲ್ಲಿ ಸರ್ಕಾರ ಭರವಸೆಯನ್ನು ನೀಡಿತ್ತು. ಈಗ ಬಿಜೆಪಿ ಸರ್ಕಾರ ನುಡಿದಂತೆ ನಡೆದಿದೆ. ಅಷ್ಟೇ ಅಲ್ಲ ಕಾರಾವಾರ ವೈದ್ಯಕೀಯ ಕಾಲೇಜನ್ನು ಮೇಲ್ದರ್ಜೆಗೆ ಏರಿಸಿ, ಎಂಆರ್ಐ ಉಪಕರಣಗಳಿಗೆ ಸ್ಥಳದಲ್ಲೇ ಮಂಜೂರಾತಿ ಮಾಡಲಾಗಿದೆ. ಕ್ರಿಟಿಕಲ್ ಕೇರ್ ಆಸ್ಪತ್ರೆಯನ್ನು ಕೂಡ ವೈದ್ಯಕೀಯ ಕಾಲೇಜು ಆವರಣದಲ್ಲಿ ಮಾಡುವ ಉದ್ದೇಶವಿದೆ ಎಂದು ತಿಳಿಸಿದರು.</p>



<p>ಸೂಪರ್‌ ಸ್ಪೆಶಲೈಸೇಶನ್‌ ಆರೋಗ್ಯ ವ್ಯವಸ್ಥೆ ಉತ್ತರ ಕನ್ನಡದಲ್ಲಿ ಇಲ್ಲ. ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಎಂಟು ಹುದ್ದೆಗಳ ನೇಮಕಕ್ಕೆ ಅನುಮತಿ ನೀಡಲಾಗಿದೆ. ಆದರೆ ನೆಫ್ರಾಲಜಿಸ್ಟ್‌ ಮಾತ್ರ ಭರ್ತಿಯಾಗಿದೆ.</p>



<p>ಜಯದೇವ, ಕಿದ್ವಾಯಿ, ನಿಮ್ಹಾನ್ಸ್‌ ಆಸ್ಪತ್ರೆಗಳಲ್ಲಿರುವಂತೆ ಮಲ್ಟಿ ಸ್ಪೆಶಲೈಸೇಶನ್‌ ತಜ್ಞರು ಇರುವಂತಹ ವ್ಯವಸ್ಥೆಯನ್ನು ಇಲ್ಲಿ ತರಲಾಗುವುದು ಎಂದು ತಿಳಿಸಿದರು.</p>



<p><strong>11.50 ಲಕ್ಷ ಆಯುಷ್ಮಾನ್‌ ಕಾರ್ಡ್‌ ನೀಡುವ ಗುರಿ</strong></p>



<p>ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ 2 ಲಕ್ಷ ಆಯುಷ್ಮಾನ್‌ ಕಾರ್ಡ್‌ಗಳನ್ನು ನೀಡಿದ್ದು, ಡಿಸೆಂಬರ್‌ ಅಂತ್ಯದೊಳಗೆ 11.50 ಲಕ್ಷ ಕಾರ್ಡ್‌ ವಿತರಿಸಲಾಗುವುದು. ಈವರೆಗೆ ರಾಜ್ಯದಲ್ಲಿ 38.75 ಲಕ್ಷ ಜನರಿಗೆ ಈ ಯೋಜನೆಯಡಿ ವಿಮೆ ಸೇವೆ ದೊರೆತಿದ್ದು, 5,133 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.</p>



<p>ಕಾರವಾರ ಆಸ್ಪತ್ರೆಗೆ ಎಂಆರ್‌ಐ ಯಂತ್ರವನ್ನು ಕೂಡಲೇ ಮಂಜೂರು ಮಾಡಲಾಗಿದೆ. ಹಾಗೆಯೇ, ಡಯಾಲಿಸಿಸ್‌ ಯಂತ್ರ, 10 ಐಸಿಯು, ಆರ್ಥೊಸ್ಕೋಪಿ ಉಪಕರಣ ಮಂಜೂರು ಮಾಡಲಾಗಿದೆ. ಹಾಗೆಯೇ ಕ್ರಿಟಿಕಲ್‌ ಕೇರ್‌ ಆಸ್ಪತ್ರೆ ಮಂಜೂರು ಮಾಡಿದ್ದು, ಶೀಘ್ರ ಭೂಮಿ ಪೂಜೆ ನಡೆಯಲಿದೆ. ಶಿರಸಿ ತಾಲೂಕು ಕೇಂದ್ರದಲ್ಲಿ 250 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಲಿದ್ದು, ಕೆಲವೇ ವಾರಗಳಲ್ಲಿ ಭೂಮಿ ಪೂಜೆ ನಡೆಯಲಿದೆ ಎಂದರು.</p>



<p>ಶಿರಸಿ, ಅಂಕೋಲ, ಯಲ್ಲಾಪುರ, ಕಾರವಾರ, ಸಿದ್ದಾಪುರದಲ್ಲಿ ಮೆಡಿಕಲ್‌ ಮೊಬೈಲ್‌ ಘಟಕ ಮಾಡಲಾಗುತ್ತಿದೆ. ಕೋವಿಡ್‌ ಸಂದರ್ಭದಲ್ಲಿ 37 ಎಂಬಿಬಿಎಸ್‌, 15 ತಜ್ಞ ವೈದ್ಯರನ್ನು ನಿಯೋಜಿಸಲಾಗಿದೆ. ಕಡ್ಡಾಯ ಸೇವೆಯಡಿ 81 ಎಂಬಿಬಿಎಸ್‌, 10 ತಜ್ಞ ವೈದ್ಯರನ್ನು ಸೆಪ್ಟೆಂಬರ್‌ನಿಂದ ನಿಯೋಜಿಸಲಾಗಿದೆ. 27 ತಜ್ಞ ವೈದ್ಯರ ಕೊರತೆ ಇದ್ದು, ಇದಕ್ಕೂ ಕ್ರಮ ವಹಿಸಲಾಗುವುದು ಎಂದರು.</p>



<p>ಎರಡು ತಾಲೂಕು ಆಸ್ಪತ್ರೆಗಳಲ್ಲಿ ಮಾತ್ರ ಜನ ಔಷಧಿ ಕೇಂದ್ರವಿದ್ದು, ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಜನ ಔಷಧಿ ಕೇಂದ್ರಗಳನ್ನು ಒಂದು ತಿಂಗಳೊಳಗೆ ಆರಂಭಿಸಲು ಸೂಚಿಸಲಾಗಿದೆ ಎಂದರು.</p>



<p><strong>ಕಾಂಗ್ರೆಸ್ ಆಶ್ವಾಸನೆಗೆ ಮಾತ್ರ ಸೀಮಿತ</strong></p>



<p>ಸಂಕಲ್ಪ ಮತ್ತು ಮಹಾತ್ವಕಾಂಕ್ಷೆ ಇಟ್ಟುಕೊಂಡು ಜನರ ಸ್ಥಿತಿಗತಿಯನ್ನು ಬದಲಾವಣೆ ಮಾಡುವ ಎಲ್ಲಾ ಕೆಲಸಗಳನ್ನು ಯಶಸ್ವಿಯಾಗಿ ಸರ್ಕಾರ ಮಾಡುತ್ತಿದೆ. ಕಾಂಗ್ರೆಸ್ ಅನೇಕ ವರ್ಷಗಳಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳನ್ನು ಉದ್ದಾರ ಮಾಡುವ ಆಶ್ವಾಸನೆ ಮಾತ್ರ ಕೊಟ್ಟಿತ್ತು. ಆದರೆ ಬಿಜೆಪಿ ಸರ್ಕಾರ ತರ್ಕಬದ್ಧವಾಗಿ ಈ ಕೆಲಸವನ್ನು ಮಾಡಿದೆ. ಜನರು ಮೋದಿ ನಾಯಕತ್ವವನ್ನು ಮತ್ತು ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದ್ದಾರೆ. ಪ್ರಧಾನಿಯವರು ಅಹಿಂದಾದ ದೊಡ್ಡ ನಾಯಕರು. ಆದರೆ ಅದನ್ನು ಎಲ್ಲೂ ಹೇಳಿಕೊಳ್ಳದೆ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುತ್ತಿದ್ದಾರೆ. ಅದೇ ದಾರಿಯಲ್ಲಿ ರಾಜ್ಯ ಸರ್ಕಾರ ನಡೆಯುತ್ತಿದೆ ಎಂದು ಹೇಳಿದರು.</p>



<p><strong>ಬಿಜೆಪಿಗೆ ಬಹುಮತ</strong></p>



<p>ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಲಿದೆ. ಜನರು ಕೋವಿಡ್ ಸಮಯದಲ್ಲಿ ಸರ್ಕಾರ ಹೇಗೆ ನಡೆದುಕೊಂಡಿತ್ತು ಅನ್ನುವುದನ್ನು ನೋಡಿದ್ದಾರೆ. ಆರ್ಥಿಕ ದುಃಸ್ಥಿತಿಯಿಂದ ಚೇತರಿಕೆ ಕಡೆಗೆ ಸಾಗುತ್ತಿದ್ದೇವೆ. ಕಾಂಗ್ರೆಸ್ 1947ರಲ್ಲಿ ಭಾರತ್ ತೋಡೋ ಕಾರ್ಯಕ್ರಮ ಆರಂಭಿಸಿತ್ತು. ಆದರೆ ಈಗ ಭಾರತ್ ಜೋಡೋ ನಾಟಕ ಮಾಡುತ್ತಿದೆ ಎಂದು ಸಚಿವರು ಟೀಕಿಸಿದರು.</p>



<p></p>
]]></content:encoded>
					
		
		
			</item>
		<item>
		<title>ಕೇಂದ್ರ ಸರ್ಕಾರದಿಂದ ಟಿ-ಮನಸ್ ಯೋಜನೆ ಜಾರಿ, ಕರ್ನಾಟಕದ ಇ-ಮನಸ್‌ ಯೋಜನೆಯೇ ಇದಕ್ಕೆ ಮಾದರಿ: ಡಾ.ಕೆ.ಸುಧಾಕರ್</title>
		<link>https://peepalmedia.com/implementation-of-t-manas-yojana-by-central-government-e-manas-yojana-of-karnataka-is-a-model-for-this-dr-k-sudhakar/</link>
		
		<dc:creator><![CDATA[Peepal Media]]></dc:creator>
		<pubDate>Mon, 10 Oct 2022 12:27:48 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[bengalure]]></category>
		<category><![CDATA[Central Government]]></category>
		<category><![CDATA[Dr. K. Sudhakar]]></category>
		<category><![CDATA[E-Manas Yojana]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=9926</guid>

					<description><![CDATA[ಬೆಂಗಳೂರು: ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ, ಕೇಂದ್ರ ಸರ್ಕಾರವು ಟಿ-ಮನಸ್‌ ಎಂಬ ಯೋಜನೆ ಜಾರಿ ಮಾಡಿದೆ. ಕರ್ನಾಟಕದ ಇ-ಮನಸ್‌ ಯೋಜನೆಯೇ ಇದಕ್ಕೆ ಪ್ರೇರಣೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಈ ಕುರಿತು ನಿಮ್ಹಾನ್ಸ್‌ ಸಂಸ್ಥೆಯಲ್ಲಿ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇ-ಮನಸ್‌ ಕಾರ್ಯಕ್ರಮದಡಿ, ತಂತ್ರಾಂಶ ಬಳಸಿ ಮಾನಸಿಕ ಆರೋಗ್ಯ ಚಟುವಟಿಕೆಗಳ ನಿರ್ವಹಣೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮ ಬಿಗ್‌ ಹಿಟ್‌ ಆಗಿದ್ದು, ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿದರು. ನರರೋಗ [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು:</strong> ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ, ಕೇಂದ್ರ ಸರ್ಕಾರವು ಟಿ-ಮನಸ್‌ ಎಂಬ ಯೋಜನೆ ಜಾರಿ ಮಾಡಿದೆ. ಕರ್ನಾಟಕದ ಇ-ಮನಸ್‌ ಯೋಜನೆಯೇ ಇದಕ್ಕೆ ಪ್ರೇರಣೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.</p>



<p style="font-size:20px">ಈ ಕುರಿತು ನಿಮ್ಹಾನ್ಸ್‌ ಸಂಸ್ಥೆಯಲ್ಲಿ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇ-ಮನಸ್‌ ಕಾರ್ಯಕ್ರಮದಡಿ, ತಂತ್ರಾಂಶ ಬಳಸಿ ಮಾನಸಿಕ ಆರೋಗ್ಯ ಚಟುವಟಿಕೆಗಳ ನಿರ್ವಹಣೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮ ಬಿಗ್‌ ಹಿಟ್‌ ಆಗಿದ್ದು, ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿದರು.</p>



<p style="font-size:20px">ನರರೋಗ ಸಂಬಂಧಿ ಸಮಸ್ಯೆಗಳು ದೇಶದ ಅಭಿವೃದ್ಧಿಗೆ ದೊಡ್ಡ ಅಡ್ಡಿಯಾಗಿವೆ. ಇದಕ್ಕಾಗಿ ಇದೇ ವರ್ಷ ರಾಜ್ಯದಲ್ಲಿ ಬ್ರೈನ್‌ ಹೆಲ್ತ್‌ ಇನೀಶಿಯೇಟಿವ್‌ ಜಾರಿ ಮಾಡಲಾಗಿದೆ. ಇದರಡಿ, ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಆಸ್ಪತ್ರೆಗಳಲ್ಲಿ ಮಾನಸಿಕ ಅನಾರೋಗ್ಯಕ್ಕೊಳಗಾದವರ ಆರೈಕೆಗಾಗಿ ವಾರಕ್ಕೆ ಒಂದು ದಿನ ಮೀಸಲಿಡಲಾಗುತ್ತಿದೆ. ಈ ಕಾರ್ಯಕ್ರಮಗಳ ಮೂಲಕ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಗೆ ಬಂದಿದೆ. ಈ ಎಲ್ಲಾ ಕಾರ್ಯಕ್ರಮಗಳನ್ನೇ ಮಾದರಿಯಾಗಿಸಿಕೊಂಡು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ, ಟಿ-ಮನಸ್‌ ಯೋಜನೆ ಜಾರಿ ಮಾಡಿ ಮಾನಸಿಕ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದೆ ಎಂದರು.</p>



<p style="font-size:20px">ಮಾನಸಿಕ ಆರೋಗ್ಯದ ಬಗ್ಗೆ ಬಹಳ ಕಾಲದಿಂದ ನಮ್ಮ ಸಮಾಜದಲ್ಲಿ ಚರ್ಚೆ ನಡೆಯುತ್ತಿದೆ. ದೈಹಿಕ ಆರೋಗ್ಯ ಉತ್ತಮವಾಗಿರುವುದರ ಜೊತೆಗೆ ಮಾನಸಿಕ ಆರೋಗ್ಯ ಕೂಡ ಉತ್ತಮವಾಗಿರಬೇಕು. ಇತ್ತೀಚೆಗೆ ಜನರು ಈ ಬಗ್ಗೆ ಹೆಚ್ಚು ಜಾಗೃತರಾಗಿದ್ದಾರೆ. ಈ ಎರಡೂ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ವ್ಯವಸ್ಥೆ ಸದೃಢವಾಗಿರುತ್ತದೆ. ಸರ್ಕಾರ ಈ ಸಮತೋಲನ ಕಾಯ್ದುಕೊಳ್ಳಲು ಅನೇಕ ಕ್ರಮಗಳನ್ನು ವಹಿಸಿದೆ. ಕೋವಿಡ್‌ ಸಂದರ್ಭದಲ್ಲಿ ನಿಮ್ಹಾನ್ಸ್‌ ಸಂಸ್ಥೆ ಬಹಳ ಉತ್ತಮವಾಗಿ ಕಾರ್ಯ ನಿರ್ವಹಿಸಿತ್ತು ಎಂದು ಸುಧಾಕರ್‌ ಶ್ಲಾಘಿಸಿದರು.</p>



<p style="font-size:20px"><strong>23 </strong><strong>ಲಕ್ಷ </strong><strong>ಟೆಲಿ </strong><strong>ಕನ್ಸಲ್ಟೇಶನ್‌</strong></p>



<p style="font-size:20px">ಕೋವಿಡ್‌ ಸಮಯದಲ್ಲಿ ಅನೇಕರು ಮಾನಸಿಕ ಒತ್ತಡಕ್ಕೆ ಒಳಗಾದರು. ಇದಕ್ಕಾಗಿ ನಿಮ್ಹಾನ್ಸ್‌ ಮತ್ತು ರಾಜ್ಯ ಸರ್ಕಾರದಿಂದ ಟೆಲಿ ಕೌನ್ಸಿಲಿಂಗ್‌ ಸೇವೆ ಆರಂಭಿಸಲಾಯಿತು. ಈವರೆಗೆ 23 ಲಕ್ಷ ಟೆಲಿ ಕನ್ಸಲ್ಟೇಶನ್‌ಗಳನ್ನು ನಡೆಸಲಾಗಿದೆ ಎಂಬುದು ಗಮನಾರ್ಹ. ಕ್ವಾರಂಟೈನ್‌ನಲ್ಲಿರುವವರಿಂದ ಆರಂಭವಾಗಿ ವಲಸೆ ಕಾರ್ಮಿಕರವರೆಗೂ ಎಲ್ಲರೂ ಈ ಸೇವೆ ಪಡೆದಿದ್ದಾರೆ ಎಂದರು.</p>



<p style="font-size:20px">ಮಾನಸಿಕ ಆರೋಗ್ಯ ಸೇವೆ ಕೋವಿಡ್‌ ಸಮಯಕ್ಕೆ ಮಾತ್ರ ಸೀಮಿತವಾಗಿಲ್ಲ. ಟೆಲಿ ಮೆಂಟಲ್‌ ಹೆಲ್ತ್‌ ಎಂಬ ಕಾರ್ಯಕ್ರಮವನ್ನೂ ಸರ್ಕಾರ ಆರಂಭಿಸಿದ್ದು, ಇದರಡಿ ನಿಮ್ಹಾನ್ಸ್‌ ಪ್ರತಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೆ ಮಾನಸಿಕ ಆರೋಗ್ಯ ನಿರ್ವಹಣೆ ಕುರಿತು ತರಬೇತಿ ನೀಡುತ್ತಿದೆ. ಮಾನಸಧಾರ ಕಾರ್ಯಕ್ರಮದಡಿ, ಮಾನಸಿಕ ಅನಾರೋಗ್ಯಕ್ಕೊಳಗಾದವರಿಗೆ ಸೂಕ್ತ ಹಗಲು ಆರೈಕೆ ಸೇವೆ ನೀಡಲಾಗುತ್ತಿದೆ ಎಂದು ವಿವರಿಸಿದರು.</p>



<p style="font-size:20px">ವೃತ್ತಿ ಜೀವನವು ವಿದ್ಯಾರ್ಥಿ ಜೀವನಕ್ಕಿಂತ ಬಹಳ ವಿಭಿನ್ನವಾದುದು. ಅನೇಕ ಸಂದರ್ಭದಲ್ಲಿ ನಾವು ವಿಫಲರಾಗಬಹುದು. ಆದರೆ ಸೋಲಿನಿಂದಲೇ ಕಲಿತು ಮುಂದೆ ಸಾಗಬೇಕು. ಹೊಸ ಆಲೋಚನೆಗಳಿಗೆ ಸದಾ ಮನಸ್ಸನ್ನು ತೆರೆದಿಟ್ಟಿರಬೇಕು. ರಾಜ್ಯದಲ್ಲಿ ಉತ್ತಮ ಮಾನಸಿಕ ಆರೋಗ್ಯ ಸೇವೆ ಪಡೆಯಲು ಎಲ್ಲರೂ ಕೊಡುಗೆ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಸಚಿವರು ಸಲಹೆ ನೀಡಿದರು.</p>
]]></content:encoded>
					
		
		
			</item>
	</channel>
</rss>
