<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>dr k sudhakar &#8211; Peepal Media</title>
	<atom:link href="https://peepalmedia.com/tag/dr-k-sudhakar-3/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 14 Dec 2022 11:39:50 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>dr k sudhakar &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಮೊಹಲ್ಲಾ ಕ್ಲಿನಿಕ್‌ಗಳನ್ನು ನಕಲು ಮಾಡುವುದರಲ್ಲೂ ಬಿಜೆಪಿ ಸರ್ಕಾರ ವಿಫಲ: ಆಮ್‌ ಆದ್ಮಿ ಪಾರ್ಟಿ ಆರೋಪ</title>
		<link>https://peepalmedia.com/bjp-govt-failed-to-duplicate-mohalla-clinics-aam-aadmi-party-alleges/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 14 Dec 2022 11:39:49 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[Aam Aadmi Party]]></category>
		<category><![CDATA[BASAVARAJ BOMMAYI]]></category>
		<category><![CDATA[bengalure]]></category>
		<category><![CDATA[dr k sudhakar]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[karnataka govt]]></category>
		<category><![CDATA[Mohalla Clinic]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=18515</guid>

					<description><![CDATA[ಬೆಂಗಳೂರು:ದೆಹಲಿಯ ಎಎಪಿ ಸರ್ಕಾರದ ʻಮೊಹಲ್ಲಾ ಕ್ಲಿನಿಕ್‌ʼ ಯೋಜನೆಯನ್ನು ಸರಿಯಾಗಿ ನಕಲು ಮಾಡುವುದರಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ʻನಮ್ಮ ಕ್ಲಿನಿಕ್‌ʼ ಯೋಜನೆಯು ಕಾಟಾಚಾರ ಹಾಗೂ ಕಳಪೆ ಗುಣಮಟ್ಟಕ್ಕೆ ಸಾಕ್ಷಿಯಾಗಿವೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಆರೋಪಿಸಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡಿದ ಜಗದೀಶ್‌ ವಿ ಸದಂರವರು, ʼದೆಹಲಿಯಲ್ಲಿ ಅರವಿಂದ್‌ ಕೇಜ್ರಿವಾಲ್‌ ಸರ್ಕಾರ ತೆರೆದಿರುವ 500ಕ್ಕೂ ಹೆಚ್ಚು ಮೊಹಲ್ಲಾ ಕ್ಲಿನಿಕ್‌ಗಳು ಉತ್ತಮ ಗುಣಮಟ್ಟಕ್ಕೆ ಹೆಸರುವಾಸಿಯಾಗಿವೆ. ಅಲ್ಲಿ ಪ್ರಸ್ತುತ 212 ರೀತಿಯ [&#8230;]]]></description>
										<content:encoded><![CDATA[
<p>ಬೆಂಗಳೂರು:ದೆಹಲಿಯ ಎಎಪಿ ಸರ್ಕಾರದ ʻಮೊಹಲ್ಲಾ ಕ್ಲಿನಿಕ್‌ʼ ಯೋಜನೆಯನ್ನು ಸರಿಯಾಗಿ ನಕಲು ಮಾಡುವುದರಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ʻನಮ್ಮ ಕ್ಲಿನಿಕ್‌ʼ ಯೋಜನೆಯು ಕಾಟಾಚಾರ ಹಾಗೂ ಕಳಪೆ ಗುಣಮಟ್ಟಕ್ಕೆ ಸಾಕ್ಷಿಯಾಗಿವೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಆರೋಪಿಸಿದ್ದಾರೆ.</p>



<p>ಮಾಧ್ಯಮಗಳಿಗೆ ಹೇಳಿಕೆ ನೀಡಿದ ಜಗದೀಶ್‌ ವಿ ಸದಂರವರು, ʼದೆಹಲಿಯಲ್ಲಿ ಅರವಿಂದ್‌ ಕೇಜ್ರಿವಾಲ್‌ ಸರ್ಕಾರ ತೆರೆದಿರುವ 500ಕ್ಕೂ ಹೆಚ್ಚು ಮೊಹಲ್ಲಾ ಕ್ಲಿನಿಕ್‌ಗಳು ಉತ್ತಮ ಗುಣಮಟ್ಟಕ್ಕೆ ಹೆಸರುವಾಸಿಯಾಗಿವೆ. ಅಲ್ಲಿ ಪ್ರಸ್ತುತ 212 ರೀತಿಯ ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಜನವರಿ 1ರಿಂದ ಇವುಗಳಿಗೆ ಇನ್ನೂ 238 ಸೇರ್ಪಡೆಯಾಗಿ ಸೇವೆಗಳ ಸಂಖ್ಯೆ 450 ತಲುಪಲಿವೆ. ಆದರೆ ಕರ್ನಾಟಕದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸುಣ್ಣಬಣ್ಣ ಬಳಿದು ʻನಮ್ಮ ಕ್ಲಿನಿಕ್‌ʼ ಎಂದು ಕರೆಯಲಾಗುತ್ತಿದೆ. ಯಾವುದೇ ಆಧುನಿಕ ಉಪಕರಣಗಳು ಹಾಗೂ ಅಗತ್ಯ ಸಂಖ್ಯೆಯ ವೈದ್ಯರಿಲ್ಲದೇ, ಕಾಟಾಚಾರಕ್ಕಾಗಿ ಯೋಜನೆಯನ್ನು ಜಾರಿಗೆ ತರಲಾಗಿದೆʼ ಎಂದು ಹೇಳಿದರು.</p>



<p>ʼಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿಯಿರುವ ಈ ಹೊತ್ತಿನಲ್ಲಿ ರಾಜ್ಯ ಬಿಜೆಪಿಗೆ ಆಮ್‌ ಆದ್ಮಿ ಪಾರ್ಟಿಯ ಭಯ ಶುರುವಾಗಿದೆ. ಇಲ್ಲಿನ ಆರೋಗ್ಯ ಇಲಾಖೆಯ ನಿಷ್ಕ್ರಿಯತೆ ಬಗ್ಗೆ ಅರವಿಂದ್‌ ಕೇಜ್ರಿವಾಲ್‌ರವರು ಪ್ರಶ್ನಿಸುವ ಮೊದಲೇ ಏನಾದರೂ ಮಾಡಬೇಕೆಂದು, ದೆಹಲಿ ಮಾದರಿಯಲ್ಲಿ ಕ್ಲಿನಿಕ್‌ಗಳನ್ನು ತೆರೆಯಲು ಸರ್ಕಾರ ಪ್ರಯತ್ನಿಸಿದೆ. ಕೋವಿಡ್‌ ಸಮಯದಲ್ಲಿ ಭಾರೀ ಅವ್ಯವಹಾರ ಮಾಡಿದ ಕಳಂಕ ಹೊತ್ತಿರುವ ಆರೋಗ್ಯ ಸಚಿವ ಡಾ. ಸುಧಾಕರ್‌ರವರಿಂದ ಕಳಪೆ ಗುಣಮಟ್ಟದ ನಮ್ಮ ಕ್ಲಿನಿಕ್‌ಗಳಲ್ಲದೇ ಮತ್ತೇನನ್ನು ನಿರೀಕ್ಷಿಸಲು ಸಾಧ್ಯ? ಬಡ ಹಾಗೂ ಮಧ್ಯಮ ವರ್ಗದ ರೋಗಿಗಳ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲದೇ, ಕೇವಲ ಪ್ರಚಾರಕ್ಕಾಗಿ ನಮ್ಮ ಕ್ಲಿನಿಕ್‌ಗಳನ್ನು ಸರ್ಕಾರ ತೆರೆದಿದೆʼ ಎಂದು ಜಗದೀಶ್‌ ವಿ ಸದಂ ಕಿಡಿಕಾರಿದ್ದಾರೆ.</p>



<p>ʼಆಮ್‌ ಆದ್ಮಿ ಪಾರ್ಟಿಯಿಂದಾಗಿ ಬೇರೆ ಪಕ್ಷಗಳ ಯೋಚನೆಯಲ್ಲಿ ದೇಶಾದ್ಯಂತ ಬದಲಾವಣೆಗಳು ಆಗುತ್ತಿವೆ. ತಮ್ಮ ರಾಜಕೀಯ ಜೀವನದಲ್ಲಿ ಎಂದೂ ಕೂಡ ಸರ್ಕಾರಿ ಶಾಲೆಗೆ ಭೇಟಿ ನೀಡದ ಕೇಂದ್ರ ಗೃಹ ಸಚಿವ ಅಮಿತ್‌ ಷಾರವರು ಕೆಲವು ತಿಂಗಳ ಹಿಂದೆ ಗುಜರಾತ್‌ನಲ್ಲಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದರು. ಕರ್ನಾಟಕದ ಬಿಜೆಪಿ ಸರ್ಕಾರವು ಅಧಿಕಾರ ಸಿಕ್ಕಿ ಮೂರು ವರ್ಷಗಳ ನಂತರ ಶಾಲೆಗಳ ಶೌಚಾಲಯಗಳ ಬಗ್ಗೆ ಯೋಚಿಸುತ್ತಿದೆ ಹಾಗೂ ಜನಸಾಮಾನ್ಯರ ಆರೋಗ್ಯದ ಬಗ್ಗೆ ಯೋಚಿಸುತ್ತಿದೆ. ಆದರೆ ಭ್ರಷ್ಟ ಬಿಜೆಪಿಯು ಆಮ್‌ ಆದ್ಮಿ ಪಾರ್ಟಿಯ ಮಾರ್ಗ ಅನುಸರಿಸಲು ಕೇವಲ ಪ್ರಯತ್ನ ಪಡಬಹುದೇ ಹೊರತು, ಆಮ್‌ ಆದ್ಮಿ ಪಾರ್ಟಿಯಂತೆ ಪಾರದರ್ಶಕತೆ ಹಾಗೂ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಿಲ್ಲʼ ಎಂದು ಜಗದೀಶ್‌ ವಿ ಸದಂ ಹೇಳಿದರು.</p>
]]></content:encoded>
					
		
		
			</item>
		<item>
		<title>ಡಿ.14ರಂದು 114 &#8216;ನಮ್ಮ ಕ್ಲಿನಿಕ್&#8217;ಗಳು ಉದ್ಘಾಟನೆ: ಸಚಿವ ಡಾ.ಕೆ.ಸುಧಾಕರ್</title>
		<link>https://peepalmedia.com/inauguration-of-114-namma-clinic-on-december-14-minister-dr-k-sudhakar/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 13 Dec 2022 07:36:50 +0000</pubDate>
				<category><![CDATA[ಆರೋಗ್ಯ]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[dr k sudhakar]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[namma Clinics]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=18378</guid>

					<description><![CDATA[ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ನಗರಗಳಲ್ಲಿನ ಸಾವಿರಾರು ಬಡಜನರಿಗೆ ಸಹಾಯ ಮಾಡುವ ಗುರಿ ಹೊಂದಿರುವ ʼನಮ್ಮ ಕ್ಲಿನಿಕ್ʼ ಗಳನ್ನು ಉದ್ಘಾಟಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೋಮವಾರ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʼಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 14 ರಂದು ನಮ್ಮ ಕ್ಲಿನಿಕ್‌ಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹೀಗಾಗಿ ಆರಂಭಿಕ ಹಂತದಲ್ಲಿ ರಾಜ್ಯಾದ್ಯಂತ ಏಕಕಾಲದಲ್ಲಿ 114 ಕ್ಲಿನಿಕ್ ಗಳನ್ನು ಆರಂಭಿಸಲಾಗುವುದು&#8217;ಎಂದು ಹೇಳಿದ್ದಾರೆ. ರಾಜ್ಯಾದ್ಯಂತ ಎಲ್ಲಾ 438 [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ನಗರಗಳಲ್ಲಿನ ಸಾವಿರಾರು ಬಡಜನರಿಗೆ ಸಹಾಯ ಮಾಡುವ ಗುರಿ ಹೊಂದಿರುವ ʼನಮ್ಮ ಕ್ಲಿನಿಕ್ʼ ಗಳನ್ನು ಉದ್ಘಾಟಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್  ಸೋಮವಾರ ತಿಳಿಸಿದ್ದಾರೆ.</p>



<p>ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʼಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 14 ರಂದು ನಮ್ಮ ಕ್ಲಿನಿಕ್‌ಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹೀಗಾಗಿ ಆರಂಭಿಕ ಹಂತದಲ್ಲಿ ರಾಜ್ಯಾದ್ಯಂತ ಏಕಕಾಲದಲ್ಲಿ 114 ಕ್ಲಿನಿಕ್ ಗಳನ್ನು ಆರಂಭಿಸಲಾಗುವುದು&#8217;ಎಂದು ಹೇಳಿದ್ದಾರೆ.</p>



<p>ರಾಜ್ಯಾದ್ಯಂತ ಎಲ್ಲಾ 438 ನಮ್ಮ ಕ್ಲಿನಿಕ್ ಗಳನ್ನು ಶೀಘ್ರದಲ್ಲೇ ಕಾರ್ಯಾರಂಭ ಮಾಡಲು ಸರ್ಕಾರ ಕಾರ್ಯೋನ್ಮುಖವಾಗಿದೆ ಮತ್ತು ಉಳಿದ ಎಲ್ಲಾ ಕ್ಲಿನಿಕ್ ಗಳು ಜನವರಿ 2023 ರೊಳಗೆ ಕಾರ್ಯಾರಂಭ ಮಾಡಲಿವೆ ಎಂದು ಸುಧಾಕರ್‌ ತಿಳಿಸಿದ್ದಾರೆ.</p>



<p>ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 243 ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸಲಿದ್ದು, ಜನವರಿ ಎರಡನೇ ವಾರದೊಳಗೆ ಅವುಗಳನ್ನು ಸಾರ್ವಜನಿಕ ಸೇವೆಗೆ ಬಳಸಿಕೊಳ್ಳುವ ಕೆಲಸ ನಡೆಯುತ್ತಿದೆ. ಕನಿಷ್ಠ 150 ಕ್ಲಿನಿಕ್ ಗಳು ಸಾರ್ವಜನಿಕ ಸೇವೆಗೆ ಖಂಡಿತವಾಗಿಯೂ ಲಭ್ಯವಾಗಲಿವೆ ಎಂದರು.</p>



<p>ಈ ಕ್ಲಿನಿಕ್‌ಗಳು ಸಮಾಜದ ದುರ್ಬಲ ವರ್ಗಗಳಿಗೆ, ವಿಶೇಷವಾಗಿ ದಿನಗೂಲಿ ಕಾರ್ಮಿಕರು ಮತ್ತು ಸಮಾಜದ ಇತರ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ಹೀಗಾಗಿ ಪ್ರತಿ ನಮ್ಮ ಚಿಕಿತ್ಸಾಲಯವು 10,000 ದಿಂದ 20,000 ಜನಸಂಖ್ಯೆಯನ್ನು ಪೂರೈಸುತ್ತದೆ ಎಂದು ಸಚಿವ ಸುಧಾಕರ್ ಹೇಳಿದರು.</p>



<p>ʼನಮ್ಮ ಕ್ಲಿನಿಕ್‌ʼಗಳಲ್ಲಿ 12 ರೀತಿಯ ಆರೋಗ್ಯ ಸೇವೆಗಳು ಲಭ್ಯವಿರುತ್ತವೆ. ಪ್ರತಿ ನಮ್ಮ ಕ್ಲಿನಿಕ್ ಒಬ್ಬ ವೈದ್ಯಾಧಿಕಾರಿ, ನರ್ಸ್, ಲ್ಯಾಬ್ ಟೆಕ್ನಿಷಿಯನ್ ಮತ್ತು ಗ್ರೂಪ್ ಡಿ ಉದ್ಯೋಗಿಯನ್ನು ಒಳಗೊಂಡಿರುತ್ತದೆ. ಗರ್ಭಧಾರಣೆ, &nbsp;ನವಜಾತ ಶಿಶುಗಳ ಆರೈಕೆ, ಬಾಲ್ಯ ಮತ್ತು ಹದಿಹರೆಯದವರ ಆರೈಕೆ, ಸಾರ್ವತ್ರಿಕ ರೋಗನಿರೋಧಕ ಸೇವೆಗಳು, ಕುಟುಂಬ ಕಲ್ಯಾಣ, ಗರ್ಭನಿರೋಧಕ, ಸಾಂಕ್ರಾಮಿಕ ರೋಗ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಕಾಯಿಲೆಗಳ ಆರೈಕೆ, ಮಧುಮೇಹ, ರಕ್ತದೊತ್ತಡ ನಿರ್ವಹಣೆ, ದೀರ್ಘಕಾಲದ ರೋಗಗಳು, ಬಾಯಿಯ ಕಾಯಿಲೆಗಳು ಇತ್ಯಾದಿಗಳು ಈ 12 ರೀತಿಯ ಸೇವೆಗಳಲ್ಲಿ ಸೇರಿವೆ. ಸ್ತನ ಮತ್ತು ಗರ್ಭಾಶಯದ ಕ್ಯಾನ್ಸರ್ ನಂತಹ ತೃತೀಯ ಹಂತದ ಆರೈಕೆ ಅಗತ್ಯವಿರುವ ಕಾಯಿಲೆಗಳಿಗೆ ಮತ್ತು ಕಣ್ಣಿನ ತಪಾಸಣೆಗಾಗಿ ಇತರ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಸೇವೆ ದೊರಕುವ ಹಾಗೆ ಮಾಡಲಾಗುವುದುʼ ಎಂದರು.</p>



<p>ವೃದ್ಧರ ಆರೈಕೆ, ತುರ್ತು ವೈದ್ಯಕೀಯ ಸೇವೆಗಳು, ಆರೋಗ್ಯ ತಪಾಸಣೆಗಳು ಮತ್ತು ಔಷಧಿಗಳು ಸಂಪೂರ್ಣವಾಗಿ ಉಚಿತವಾಗಿರುತ್ತವೆ. 14 ಲ್ಯಾಬ್ ಪರೀಕ್ಷೆಗಳು, ದೂರ ಸಂಪರ್ಕ ಸೇವೆಗಳು ಮತ್ತು ಸ್ವಾಸ್ಥ್ಯ ಚಟುವಟಿಕೆಗಳು ನಮ್ಮ ಕ್ಲಿನಿಕ್ ಗಳಲ್ಲಿ ಉಚಿತವಾಗಿ ಲಭ್ಯವಿರುತ್ತವೆ ಎಂದು ಮಾಹಿತಿ ನೀಡಿದ್ದಾರೆ.</p>



<p>ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 9 ರಿಂದ ಸಂಜೆ 4.30 ರವರೆಗೆ ಎಲ್ಲಾ ಸೇವೆಗಳು ಲಭ್ಯವಿವೆ. ಈ ಚಿಕಿತ್ಸಾಲಯಗಳನ್ನು ಹಲವಾರು ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವುದರಿಂದ ಆರೋಗ್ಯ ರಕ್ಷಣಾ ಸೇವೆಗಳು ಸುಲಭವಾಗಿ ಲಭ್ಯವಾಗುತ್ತವೆ. ಹೀಗಾಗಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ 100ಕ್ಕೂ ಹೆಚ್ಚು ಕ್ಲಿನಿಕ್ ಗಳನ್ನು ಉದ್ಘಾಟಿಸುತ್ತಿರುವುದು ಹೆಮ್ಮೆಯ ವಿಷಯ. ಇದು ಸಾರ್ವಕಾಲಿಕ ದಾಖಲೆಯಾಗಲಿದೆ&#8217; ಎಂದರು.</p>



<p>ಇದು ಒಟ್ಟು 150 ಕೋಟಿ ರೂಪಾಯಿಗಳ ವೆಚ್ಚದ ಯೋಜನೆಯಾಗಿದೆ ಮತ್ತು ಹೆಚ್ಚಿನ ಕ್ಲಿನಿಕ್ ಗಳು ಸರ್ಕಾರಿ ಕಟ್ಟಡಗಳಲ್ಲಿ ಕೆಲಸ ಮಾಡಲು ಪ್ರಾರಂಭಿಸುತ್ತವೆ. ಈಗಾಗಲೇ 300 ವೈದ್ಯರನ್ನು ನೇಮಿಸಲಾಗಿದೆ ಮತ್ತು ಕೆಲವು ಸ್ಥಳಗಳಲ್ಲಿ ವೈದ್ಯರ ಕೊರತೆ ಇದೆ. ಅಂತಹ ಸ್ಥಳಗಳಲ್ಲಿ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಮತ್ತು ಅಂತಹ ಸ್ಥಳಗಳಲ್ಲಿ ಕಡ್ಡಾಯ ಗ್ರಾಮೀಣ ಸೇವೆಯಲ್ಲಿರುವ 80-100 ವೈದ್ಯರನ್ನು ನೇಮಿಸಲಾಗುವುದು ಎಂದು ಸುಧಾಕರ್‌ ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ರಾಯಚೂರಿನಲ್ಲಿ ಝೀಕಾ ವೈರಸ್‌: ಮೊದಲ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕರ್ನಾಟಕದಲ್ಲಿ ಕಟ್ಟೆಚ್ಚರ</title>
		<link>https://peepalmedia.com/zika-virus-in-raichur-karnataka-on-high-alert-as-first-case-comes-to-light/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 13 Dec 2022 06:39:50 +0000</pubDate>
				<category><![CDATA[ಆರೋಗ್ಯ]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[dr k sudhakar]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[zika virus]]></category>
		<guid isPermaLink="false">https://peepalmedia.com/?p=18373</guid>

					<description><![CDATA[ಬೆಂಗಳೂರು: ಉತ್ತರ ಕರ್ನಾಟಕದ ರಾಯಚೂರು ಜಿಲ್ಲೆಯ ಐದು ವರ್ಷದ ಬಾಲಕಿಗೆ ಝೀಕಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೆಚ್ಚಿನ ಕಟ್ಟೆಚ್ಚರ ವಹಿಸಿದೆ. ವೈರಸ್‌ ದೃಢಪಟ್ಟಿರುವುದನ್ನು ಮನಗಂಡಿರುವ ರಾಜ್ಯ ಸರ್ಕಾರ, ರೋಗವನ್ನು ನಿಯಂತ್ರಿಸಲು ಮಂಗಳವಾರದಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಾರಂಭಿಸುವಂತೆ ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದೆ. ತಜ್ಞರ ಪ್ರಕಾರ, ಮಾಂಡೌಸ್ ಚಂಡಮಾರುತದಿಂದಾಗಿ ರಾಜ್ಯದಲ್ಲಿ ಶೀತ, ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯು ಪರಿಸ್ಥಿತಿಯು ಮತ್ತಷ್ಟು ಜಟಿಲಗೊಂಡಿದ್ದು, [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಉತ್ತರ ಕರ್ನಾಟಕದ ರಾಯಚೂರು ಜಿಲ್ಲೆಯ ಐದು ವರ್ಷದ ಬಾಲಕಿಗೆ ಝೀಕಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೆಚ್ಚಿನ ಕಟ್ಟೆಚ್ಚರ ವಹಿಸಿದೆ.</p>



<p>ವೈರಸ್‌ ದೃಢಪಟ್ಟಿರುವುದನ್ನು ಮನಗಂಡಿರುವ ರಾಜ್ಯ ಸರ್ಕಾರ, ರೋಗವನ್ನು ನಿಯಂತ್ರಿಸಲು ಮಂಗಳವಾರದಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಾರಂಭಿಸುವಂತೆ ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದೆ.</p>



<p>ತಜ್ಞರ ಪ್ರಕಾರ, ಮಾಂಡೌಸ್ ಚಂಡಮಾರುತದಿಂದಾಗಿ ರಾಜ್ಯದಲ್ಲಿ ಶೀತ, ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯು ಪರಿಸ್ಥಿತಿಯು ಮತ್ತಷ್ಟು ಜಟಿಲಗೊಂಡಿದ್ದು, ಈ ಪರಿಸ್ಥಿತಿಗಳಲ್ಲಿ ವೈರಸ್ ವೇಗವಾಗಿ ಹರಡುತ್ತದೆ ಎಂದು ಎಚ್ಚರಿಸಿದ್ದಾರೆ.</p>



<p>ಅಧಿಕಾರಿಗಳು ಬಾಲಕಿಯ ಪ್ರಯಾಣದ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ ಮತ್ತು ಬಾಲಕಿಯ ಮನೆಯ ನೆರೆಹೊರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈಗಾಗಲೇ ಮುನ್ನೆಚ್ಚರಿಕೆಗಳನ್ನು ನೀಡಲು ಪ್ರಾರಂಭಿಸಲಾಗಿದ್ದು, ಪೋಷಕರು ಮತ್ತು ಕುಟುಂಬ ಸದಸ್ಯರ ರಕ್ತ ಮತ್ತು ಮೂತ್ರದ ಮಾದರಿಗಳನ್ನು ಸಂಗ್ರಹಿಸಲಾಗಿದೆ ಮತ್ತು ಇಲ್ಲಿಯವರೆಗೆ ಐದು ಜನರ ಪರೀಕ್ಷೆ ನೆಗೆಟಿವ್ ಬಂದಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.</p>



<p>ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಸಿದ್ಧವಾಗಿದೆ. ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ನಡೆಸಿದ ಪರೀಕ್ಷೆಗಳಲ್ಲಿ ರೋಗವು ದೃಢಪಟ್ಟಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.</p>



<p>ನವೆಂಬರ್ 13 ರಂದು ಬಾಲಕಿಗೆ ಜ್ವರದಿಂದ ಸೋಂಕು ತಗುಲಿತ್ತು. ಪೋಷಕರು ಆಕೆಯನ್ನು ಸಿಂಧನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಅವಳು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾಳೆ ಎಂದು ತಿಳಿದುಬಂದಿದೆ. ನಂತರ, ಬಾಲಕಿಯನ್ನು ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ವಿಮ್ಸ್) ಸ್ಥಳಾಂತರಿಸಲಾಯಿತು ಮತ್ತು ನವೆಂಬರ್ 15 ರಿಂದ 18 ರವರೆಗೆ ಚಿಕಿತ್ಸೆ ನೀಡಲಾಯಿತು ಎಂದು ತಿಳಿಸಿದ್ದಾರೆ.</p>



<p>ದೇಶದ ಮೊದಲ ಝೀಕಾ ವೈರಸ್ 2020 ರಲ್ಲಿ ಕೇರಳದಲ್ಲಿ ಕಂಡುಬಂದಿದೆ. ಜ್ವರ, ದೇಹದ ನೋವು ಮತ್ತು ಕೀಲುಗಳಲ್ಲಿ ನೋವು, ದದ್ದು ಮತ್ತು ಕಂಜಂಕ್ಟಿವೈಟಿಸ್ ನ ತೀವ್ರ ರೋಗಲಕ್ಷಣಗಳು ಜಿಕಾ ವೈರಸ್ ಪೀಡಿತ ವ್ಯಕ್ತಿಗಳಲ್ಲಿ ಕಂಡುಬರುತ್ತವೆ. ಝೀಕಾ ವೈರಸ್ ಪ್ರಾಥಮಿಕವಾಗಿ ಸೋಂಕಿತ ಈಡಿಸ್ ಜಾತಿಯ ಸೊಳ್ಳೆಯ ಕಡಿತದ ಮೂಲಕ ಜನರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ. ಈ ರೋಗವು ಅಸುರಕ್ಷಿತ ಸಂಭೋಗ ಮತ್ತು ರಕ್ತ ಪ್ರಸರಣದ ಮೂಲಕವೂ ಹರಡುತ್ತದೆ ಎಂದು ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಅಪೌಷ್ಟಿಕತೆ ಹಾಗೂ ಅನೀಮಿಯಾ ನಿವಾರಣೆಗಾಗಿ ಮಕ್ಕಳ ತಪಾಸಣೆ ಮಾಡಿ, ಅಂಕಿ ಅಂಶದ ವಿಚಾರದಲ್ಲಿ ಆತ್ಮಾವಲೋಕನ ಮಾಡಿಕೊಳ್ಳಿ: ಸಚಿವ ಡಾ.ಕೆ.ಸುಧಾಕರ್‌</title>
		<link>https://peepalmedia.com/check-the-children-to-prevent-malnutrition-and-anemia-take-a-look-at-the-statistics-minister-dr-k-sudhakar/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 07 Dec 2022 12:06:22 +0000</pubDate>
				<category><![CDATA[ಆರೋಗ್ಯ]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[dr k sudhakar]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[malnutrition and anemia]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=17839</guid>

					<description><![CDATA[ಬೆಂಗಳೂರು: ಅಪೌಷ್ಟಿಕತೆ ಹಾಗೂ ಅನೀಮಿಯಾ ನಿವಾರಣೆಗಾಗಿ ಆರಂಭಿಕ ಹಂತದಲ್ಲೇ ಮಕ್ಕಳ ಆರೋಗ್ಯ ತಪಾಸಣೆ ಮಾಡುವುದು ಮುಖ್ಯ. ಇದಕ್ಕಾಗಿ ಗ್ರಾಮೀಣ ಭಾಗಗಳಲ್ಲಿ ಶಾಲೆ ಸೇರಿದಂತೆ ಮಕ್ಕಳಿರುವ ಜಾಗಗಳಲ್ಲಿ ಸರ್ಕಾರಿ ಆರೋಗ್ಯ ಕೇಂದ್ರಗಳ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸೂಚನೆ ನೀಡಿದರು. ಈ ಕುರಿತು ನಗರದ ಖಾಸಗಿ ಹೋಟೆಲ್‌ನಲ್ಲಿ, ಅಪೌಷ್ಟಿಕತೆ ಮತ್ತು ಅನಿಮೀಯ ಮುಕ್ತ ಕರ್ನಾಟಕ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರನ್ನು ಒಟ್ಟುಗೂಡಿಸಿ ಆರೋಗ್ಯ [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ಅಪೌಷ್ಟಿಕತೆ ಹಾಗೂ ಅನೀಮಿಯಾ ನಿವಾರಣೆಗಾಗಿ ಆರಂಭಿಕ ಹಂತದಲ್ಲೇ ಮಕ್ಕಳ ಆರೋಗ್ಯ ತಪಾಸಣೆ ಮಾಡುವುದು ಮುಖ್ಯ. ಇದಕ್ಕಾಗಿ ಗ್ರಾಮೀಣ ಭಾಗಗಳಲ್ಲಿ ಶಾಲೆ ಸೇರಿದಂತೆ ಮಕ್ಕಳಿರುವ ಜಾಗಗಳಲ್ಲಿ ಸರ್ಕಾರಿ ಆರೋಗ್ಯ ಕೇಂದ್ರಗಳ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸೂಚನೆ ನೀಡಿದರು.</p>



<p>ಈ ಕುರಿತು ನಗರದ ಖಾಸಗಿ ಹೋಟೆಲ್‌ನಲ್ಲಿ, ಅಪೌಷ್ಟಿಕತೆ ಮತ್ತು ಅನಿಮೀಯ ಮುಕ್ತ ಕರ್ನಾಟಕ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರನ್ನು ಒಟ್ಟುಗೂಡಿಸಿ ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಬೇಕು. ನಮ್ಮ ಇಲಾಖೆಯಿಂದ ತಪಾಸಣೆ ನಡೆಸಿ ಗುರಿಗಳನ್ನು ಮುಟ್ಟಿರುವುದನ್ನು ತೋರಿಸುತ್ತೇವೆ. ಆದರೆ ಈ ಬಗ್ಗೆ ನಿಜವಾಗಿಯೂ ಆತ್ಮಾವಲೋಕ ಮಾಡಿಕೊಂಡರೆ ನಾವು ಸಂಪೂರ್ಣವಾಗಿ ತಪಾಸಣೆ ನಡೆಸುತ್ತಿಲ್ಲ ಎಂದೇ ಹೇಳಬೇಕು. ಪಿಎಚ್‌ಸಿ ವ್ಯಾಪ್ತಿಯಲ್ಲಿ ವೈದ್ಯರು ಶಾಲೆಗಳಿಗೆ ಹೋಗುವುದು ಅಥವಾ ಮಕ್ಕಳೇ ಪಿಎಚ್‌ಸಿ ಬಂದು ತಪಾಸಣೆ ಮಾಡಿಸಿಕೊಳ್ಳಬೇಕು. ಇದಕ್ಕಾಗಿ ಶಿಕ್ಷಣ ಇಲಾಖೆಯಿಂದ ಗಂಭೀರ ಕ್ರಮ ವಹಿಸಬೇಕು ಎಂದರು.</p>



<p>ಇಂದಿನ ಕಾಲದಲ್ಲೂ ಮಾತೃ ಮರಣವಾಗುತ್ತಿರುವುದು ಅತ್ಯಂತ ಅಪಮಾನದ ಸಂಗತಿ. ರಾಜ್ಯದ ಪ್ರತಿ ಮಹಿಳೆಯರು ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆಗೆ ಮುಂದೆ ಬರುವಂತಾಗಬೇಕು. ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸುವುದು ಒಂದು ಪರಂಪರೆಯ ರೂಢಿಯಾಗಿ ಬೆಳೆದುಬಂದಿದೆ. ಇದೇ ರೀತಿ ರಾಜ್ಯದಲ್ಲಿ ಮಹಿಳೆಯರು, ತಾಯಂದಿರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದನ್ನು ಪರಂಪರೆಯಂತೆ ಬೆಳೆಸಬೇಕು. ಇದಕ್ಕಾಗಿ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಹೆಚ್ಚು ಪ್ರಚಾರ ಮಾಡಬೇಕು ಎಂದು ಹೇಳಿದರು.</p>



<p><strong>ಅಪೌಷ್ಟಿಕತೆ ನಿವಾರಣೆಗೆ ಇನ್ನಷ್ಟು ಕೆಲಸಗಳಾಗಲಿ</strong></p>



<p>ಕರ್ನಾಟಕವು ಆರೋಗ್ಯ ವಲಯದಲ್ಲಿ ಉತ್ತಮ ಸುಧಾರಣೆ ಮಾಡಿದೆ. ಆರೋಗ್ಯ ಸೂಚ್ಯಂಕದಲ್ಲೂ ಉತ್ತಮ ಪ್ರಗತಿಯಾಗಿದೆ. ಆದರೆ ಅಪೌಷ್ಟಿಕತೆ ಹಾಗೂ ಅನೀಮಿಯಾ ವಿಚಾರ ಬಂದಾಗ ನಾವು ಇನ್ನಷ್ಟು ಕೆಲಸಗಳನ್ನು ಮಾಡಬಹುದು ಎಂದೆನಿಸುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ನಮ್ಮ ಸರ್ಕಾರ ಈ ಸಮಸ್ಯೆಯ ನಿವಾರಣೆಗೆ ಅತ್ಯಂತ ಬದ್ಧತೆ ಹೊಂದಿದೆ ಎಂದರು.</p>



<p>ರಿಜಿಸ್ಟರ್‌ ಜನರಲ್‌ ಆಫ್‌ ಇಂಡಿಯಾದವರು ಹೇಳಿದಂತೆ, 2018-2020 ರಲ್ಲಿ ದೇಶದ ತಾಯಿ ಮರಣ ಪ್ರಮಾಣ 97 ಆಗಿತ್ತು. 2001-2003 ರಲ್ಲಿ 301 ಆಗಿತ್ತು. ಅದೇ ರೀತಿ, ಶಿಶು ಮರಣ ಪ್ರಮಾಣ 2005 ರಲ್ಲಿ 58 ಆಗಿದ್ದು, 2021 ರಲ್ಲಿ 27 ಆಗಿದೆ. ಈ ಬಗ್ಗೆ ಸ್ವಲ್ಪ ಸಮಾಧಾನ ಇದ್ದರೂ, ಮುಂದುವರಿಯಬೇಕಾದ ದಾರಿ ಇನ್ನಷ್ಟು ಇದೆ ಎಂದು ತಿಳಿಸಿದರು.</p>



<p>ಮಗು ಜನಿಸಿದ ನಂತರದ ಎರಡು ವರ್ಷಗಳಲ್ಲೇ ಅಪೌಷ್ಟಿಕತೆ ಕಾಣಿಸಿಕೊಳ್ಳುತ್ತದೆ. ಈ ಸಮಯದಲ್ಲೇ ಸಮಸ್ಯೆ ಪತ್ತೆ ಮಾಡಿ ಪರಿಹರಿಸದಿದ್ದರೆ ಅದು ಮೆದುಳಿನ ಆರೋಗ್ಯ ಮೇಲೆ ಹಾಗೂ ಶರೀರದ ಬೆಳವಣಿಗೆ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಮಗು ಜನಿಸಿದ ಮೊದಲ 1,000 ದಿನಗಳಲ್ಲಿ ಅಪೌಷ್ಟಿಕತೆ ಹಾಗೂ ಅನೀಮಿಯಾವನ್ನು ನಿವಾರಣೆ ಮಾಡಲು ಕ್ರಮ ವಹಿಸಬೇಕಾಗುತ್ತದೆ. ಅದರಲ್ಲೂ ಹೆಣ್ಣುಮಕ್ಕಳು ಅಪೌಷ್ಟಿಕತೆಗೆ ಒಳಗಾದರೆ, ಅವರು ಬೆಳೆದು ಮಗುವಿಗೆ ಜನ್ಮ ನೀಡುವಾಗ ಆ ಮಗು ಕಡಿಮೆ ತೂಕ ಹೊಂದಿರುವ ಸಮಸ್ಯೆ ಎದುರಾಗುತ್ತದೆ ಎಂದು ಹೇಳಿದರು.</p>



<p>ʼಸ್ವಸ್ಥ ಕರ್ನಾಟಕ, ಸುಸ್ಥಿರ ಕರ್ನಾಟಕʼ ಎಂಬ ಘೋಷಣೆಯೊಂದಿಗೆ ಪ್ರತಿ ಕನ್ನಡಿಗ ಆರೋಗ್ಯವಾಗಿರಬೇಕೆಂಬುದು ಸರ್ಕಾರದ ಆಶಯ. ಅಪೌಷ್ಟಿಕತೆ ನಿವಾರಣೆಯಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಕೂಡ ಕೆಲಸ ಮಾಡುತ್ತಾರೆ. ಹಾಗೆಯೇ ಗ್ರಾಮೀಣಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮೊದಲಾದ ಇಲಾಖೆಗಳ ನಡುವೆ ಸಮನ್ವಯ ಬೇಕಾಗುತ್ತದೆ. ಇಲ್ಲದಿದ್ದರೆ ಅಪೌಷ್ಟಿಕತೆ ನಿವಾರಣೆ ಸಾಧ್ಯವಿಲ್ಲ. ಆರೋಗ್ಯ ಇಲಾಖೆಯಲ್ಲಿ ಪ್ರತಿ ಬಾರಿ ಸಭೆ ಮಾಡುವಾಗಲೂ, ಐಇಸಿ ಚಟುವಟಿಕೆ ಬಗ್ಗೆ ಹೇಳುತ್ತಿರುತ್ತೇನೆ. ನಮ್ಮಲ್ಲಿ ಅನೇಕ ರಾಷ್ಟ್ರಿಯ, ರಾಜ್ಯ ಆರೋಗ್ಯ ಕಾರ್ಯಕ್ರಮಗಳಿವೆ. ಆದರೆ ಐಇಸಿ ಚಟುವಟಿಕೆಗೆ ಹೆಚ್ಚು ಗಮನ ನೀಡುತ್ತಿಲ್ಲ ಎಂಬುದು ನನ್ನ ಅಭಿಪ್ರಾಯ ಎಂದರು.</p>



<p>ಬಜೆಟ್‌ನಲ್ಲಿ ಶೇ.8 ರಷ್ಟು ಪಾಲನ್ನು ಆರೋಗ್ಯ ವಲಯಕ್ಕೆ ಮೀಸಲಿಡಬೇಕು ಎಂಬುದು ತಜ್ಞರ ಅಭಿಪ್ರಾಯ. ಕರ್ನಾಟಕ ಬಜೆಟ್‌ನಲ್ಲಿ ಶೇ.5 ರಷ್ಟನ್ನು ಆರೋಗ್ಯಕ್ಕೆ ಮೀಸಲಿಡಲಾಗಿದೆ. ಕಳೆದ 2-3 ವರ್ಷಗಳಲ್ಲಿ ಕೋವಿಡ್‌ ಅವಧಿಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನ ದೊರೆತಿದ್ದು, ಆರೋಗ್ಯ ಮೂಲಸೌಕರ್ಯವನ್ನು 5-6 ಪಟ್ಟು ಹೆಚ್ಚಿಸಲಾಗಿದೆ. ಉಪಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ನೀಡಿದೆ. ರಾಜ್ಯದಲ್ಲಿ 6,000 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಕಳೆದ ವರ್ಷ ಗುರಿ ನೀಡಿದ್ದು, ರಾಜ್ಯದಲ್ಲಿ 8,250 ಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್‌ನಂತೆ ಬಿಜೆಪಿ ಪಕ್ಷವು ಎಂದಿಗೂ ಓಲೈಕೆ ರಾಜಕಾರಣ ಮಾಡಿಲ್ಲ: ಡಾ.ಕೆ.ಸುಧಾಕರ್‌</title>
		<link>https://peepalmedia.com/unlike-congress-bjp-has-never-done-politics-of-appeasement-dr-k-sudhakar/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 08 Nov 2022 08:28:12 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[B S YADIYURAPPA]]></category>
		<category><![CDATA[BASAVARAJ BOMMAYI]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[dr k sudhakar]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[narendramodi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sathish jarakiholi]]></category>
		<category><![CDATA[siddaramayya]]></category>
		<guid isPermaLink="false">https://peepalmedia.com/?p=14767</guid>

					<description><![CDATA[ದೇವನಹಳ್ಳಿ: ಬಿಜೆಪಿ ಎಂದಿಗೂ ಜಾತಿ, ಲಿಂಗ, ಧರ್ಮ ಆಧಾರಿತವಾದ ರಾಜಕಾರಣ ಮಾಡಿಲ್ಲ ಅಥವಾ ಅದರ ಆಧಾರಿತವಾಗಿ ಯೋಜನೆ ರೂಪಿಸಿಲ್ಲ. ಆದರೆ ಕಾಂಗ್ರೆಸ್‌ ನಾಯಕರು 60 ವರ್ಷಗಳಿಂದ ಓಲೈಕೆ ರಾಜಕಾರಣವನ್ನೇ ಮಾಡಿಕೊಂಡು ಬಂದಿದ್ದು, ಈಗ ಬಿಜೆಪಿಯ ಅಭಿವೃದ್ಧಿ ಕಾರ್ಯಗಳಿಂದ ನಿರಾಶರಾಗಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ದೇವನಹಳ್ಳಿಯ ಸಮೀಪದ ನಾಡಪ್ರಭು ಕೆಂಪೇಗೌಡರ ಕಂಚಿನ ʼಪ್ರಗತಿಯ ಪ್ರತಿಮೆʼ ಹಾಗೂ ಉದ್ಘಾಟನಾ ಕಾರ್ಯಕ್ರಮದ ಸಿದ್ಧತೆಯನ್ನು ಸಚಿವರು ಪರಿಶೀಲನೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ [&#8230;]]]></description>
										<content:encoded><![CDATA[
<p><strong>ದೇವನಹಳ್ಳಿ: </strong>ಬಿಜೆಪಿ ಎಂದಿಗೂ ಜಾತಿ, ಲಿಂಗ, ಧರ್ಮ ಆಧಾರಿತವಾದ ರಾಜಕಾರಣ ಮಾಡಿಲ್ಲ ಅಥವಾ ಅದರ ಆಧಾರಿತವಾಗಿ ಯೋಜನೆ ರೂಪಿಸಿಲ್ಲ. ಆದರೆ ಕಾಂಗ್ರೆಸ್‌ ನಾಯಕರು 60 ವರ್ಷಗಳಿಂದ ಓಲೈಕೆ ರಾಜಕಾರಣವನ್ನೇ ಮಾಡಿಕೊಂಡು ಬಂದಿದ್ದು, ಈಗ ಬಿಜೆಪಿಯ ಅಭಿವೃದ್ಧಿ ಕಾರ್ಯಗಳಿಂದ ನಿರಾಶರಾಗಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.</p>



<p>ದೇವನಹಳ್ಳಿಯ ಸಮೀಪದ ನಾಡಪ್ರಭು ಕೆಂಪೇಗೌಡರ ಕಂಚಿನ ʼಪ್ರಗತಿಯ ಪ್ರತಿಮೆʼ ಹಾಗೂ ಉದ್ಘಾಟನಾ ಕಾರ್ಯಕ್ರಮದ ಸಿದ್ಧತೆಯನ್ನು ಸಚಿವರು ಪರಿಶೀಲನೆ ಮಾಡಿದರು.</p>



<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉದ್ಘಾಟನೆ, ವಿಮಾನ ನಿಲ್ದಾಣದ ಟರ್ಮಿನಲ್‌-2, ವಂದೇ ಭಾರತ್‌ ರೈಲು ಚಾಲನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಮುನ್ನ ಸ್ಥಳ ಪರಿಶೀಲನೆ ಮಾಡಿ, ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.</p>



<p>ಸರ್ವ ವ್ಯಾಪಿ, ಸರ್ವ ಸ್ಪರ್ಶಿ, ಸರ್ವರ ಕಲ್ಯಾಣ ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಮಂತ್ರ. ಬಿಜೆಪಿ ಎಂದಿಗೂ ಯಾವುದೇ ಸಮುದಾಯ, ಜಾತಿ, ಧರ್ಮ, ಲಿಂಗದ ಆಧಾರಿತವಾಗಿ ಯೋಜನೆಗಳನ್ನು ರೂಪಿಸಲು ಮುಂದಾಗುವುದಿಲ್ಲ. ಕಾಂಗ್ರೆಸ್‌ ಪಕ್ಷ ಹಿಂದಿನಿಂದಲೂ ಓಲೈಕೆ ರಾಜಕಾರಣ ಮಾಡಿಕೊಂಡು ಬಂದಿದೆ. ಈಗಲೂ ಅದನ್ನೇ ಮುಂದುವರಿಸುತ್ತಿದೆ. ಹೀಗಾಗಿ ಶ್ರೇಷ್ಠವಾದ ರಾಜಕಾರಣವನ್ನು ಅವರು ಎಂದೂ ಮಾಡಿಲ್ಲ ಎಂದರು.</p>



<p>ಆರ್ಥಿಕವಾಗಿ ಹಿಂದುಳಿದವರಿಗೆ ಕೇಂದ್ರ ಬಿಜೆಪಿ ಸರ್ಕಾರ ನೀಡಿರುವ ಮೀಸಲಾತಿಯನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಇಂತಹ ಕ್ರಮವನ್ನು ತರಲು ಬಿಜೆಪಿಗೆ ಮಾತ್ರ ಸಾಧ್ಯವಾಗುತ್ತದೆ. ಇಂತಹ ಆಲೋಚನೆಗಳು ಕಾಂಗ್ರೆಸ್‌ ಅಥವಾ ಜೆಡಿಎಸ್‌ ಬರಲು ಸಾಧ್ಯವಿಲ್ಲ ಎಂದರು.</p>



<p>ನಾಡಪ್ರಭು ಕೆಂಪೇಗೌಡರು ಒಕ್ಕಲಿಗ ಸಮುದಾಯಕ್ಕೆ ಸೇರಿದ್ದರೂ, ಅವರು ಎಲ್ಲರ ನಾಯಕರು. ಆದರೆ ಒಕ್ಕಲಿಗ ಸಮುದಾಯಕ್ಕೆ ಕಾಂಗ್ರೆಸ್‌ನವರು ಏನೂ ಮಾಡಿಲ್ಲ. ಜನಪ್ರಿಯ ನಾಯಕರಾದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಸೇರಿದಂತೆ ಹಿರಿಯ ಒಕ್ಕಲಿಗ ನಾಯಕರನ್ನು ಕಾಂಗ್ರೆಸ್‌ ಅಪಮಾನ ಮಾಡಿದೆ. ಅವರನ್ನು ಅಧಿಕಾರದಿಂದ ಒಂದೇ ಬಾರಿಗೆ ತೆಗೆದುಹಾಕಲು ಇದುವರೆಗೂ ಕಾರಣ ನೀಡಿಲ್ಲ ಎಂದರು.</p>



<p>ನಾಡಪ್ರಭು ಕೆಂಪೇಗೌಡರ ʼಪ್ರಗತಿಯ ಪ್ರತಿಮೆʼ ನಿರ್ಮಾಣದ ಚಿಂತನೆಯನ್ನು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಚರ್ಚೆಗೆ ತಂದಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಇಚ್ಛಾಶಕ್ತಿಯಿಂದ ಇಂತಹ ಸುಂದರ ಐತಿಹಾಸಿಕ ಪ್ರತಿಮೆ ನಿರ್ಮಾಣವಾಗಿದೆ ಎಂದರು.</p>



<p>ಕಾಂಗ್ರೆಸ್‌ನವರ ರಾಜಕೀಯ ಮಾತುಗಳನ್ನು ಗಂಭೀರವಾಗಿ ಪರಿಗಣಿಸಬಾರದು. ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬರುವ ಕಾಂಗ್ರೆಸ್‌ನವರಿಗೂ ಸ್ವಾಗತ ನೀಡುತ್ತೇವೆ ಎಂದು ನಾವು ಕೂಡ ಹೇಳುತ್ತೇವೆ. ಕಾಂಗ್ರೆಸ್‌ನವರು ಲೋಕಾರೂಢಿಯಾಗಿ ಹೇಳಿದ್ದಾರೆ. ಅನ್ಯಪಕ್ಷಗಳಿಂದ ಬಂದವರ ಜೊತೆಗೆ ಬಿಜೆಪಿಗೆ ಇನ್ನಷ್ಟು ನಾಯಕರು ಸೇರ್ಪಡೆಯಾಗುತ್ತಾರೆಯೇ ಹೊರತು, ಮೈನಸ್‌ ಆಗುವುದಿಲ್ಲ. ಹಿರಿಯ ಐಎಎಸ್‌ ಅಧಿಕಾರಿ,&nbsp; ಇಬ್ಬರು ಮಾಜಿ ಸಂಸದರು, ಕೋಲಾರ ಜಿಲ್ಲೆಯ ಇಬ್ಬರು ಮಾಜಿ ಶಾಸಕರು, ಚಿಕ್ಕಬಳ್ಳಾಪುರದಲ್ಲಿ ಒಬ್ಬ ಮಾಜಿ ಶಾಸಕರು ಬಿಜೆಪಿಗೆ ಬಂದಿದ್ದಾರೆ ಎಂದರು.</p>



<p><strong>ಸತೀಶ್‌ </strong><strong>ಜಾರಕಿಹೊಳಿ </strong><strong>ಅರಿವು </strong><strong>ಮೂಡಿಸಿಕೊಳ್ಳಲಿ</strong></p>



<p>ಸತೀಶ್‌ ಜಾರಕಿಹೊಳಿ ಅವರು ಇತಿಹಾಸದ ಬಗ್ಗೆ ಇರುವ ತಪ್ಪು ಕಲ್ಪನೆಯನ್ನು ಪ್ರದರ್ಶನ ಮಾಡಿದ್ದಾರೆ. ಹಿಂದೂ ಪದದ ಬಗ್ಗೆ, ಹಿಂದುತ್ವದ ಬಗ್ಗೆ, ದೇಶದ ಇತಿಹಾಸದ ಬಗ್ಗೆ ಅವರು ಪರಿಚಯ ಮಾಡಿಕೊಂಡು, ಅರಿವು ಮೂಡಿಸಿಕೊಳ್ಳುವ ಕೆಲಸ ಮಾಡಬೇಕಾಗುತ್ತದೆ. ಇಡೀ ವಿಶ್ವದಲ್ಲಿ ಹಿಂದೂ ಧರ್ಮದ ಬಗ್ಗೆ ವಿಶೇಷ ಗೌರವ ಇದೆ. ಸನಾತನ ಹಿಂದೂ ಧರ್ಮ ಒಂದು ಜೀವನಶೈಲಿ. ಇದು ಅತಿ ಉನ್ನತ ಆದರ್ಶವಾಗಿದೆ ಎಂದು ಸುಧಾಕರ್‌ ಹೇಳಿದರು.</p>
]]></content:encoded>
					
		
		
			</item>
		<item>
		<title>ದೈಹಿಕ, ಮಾನಸಿಕ ಮತ್ತು ಆಹಾರ ಪದ್ಧತಿಗಳ ಮೂಲಕ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು: ಡಾ. ಕೆ. ಸುಧಾಕರ್‌</title>
		<link>https://peepalmedia.com/high-blood-pressure-can-be-controlled-through-physical-mental-and-dietary-practices-dr-k-sudhakar/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 22 Oct 2022 09:59:15 +0000</pubDate>
				<category><![CDATA[ಆರೋಗ್ಯ]]></category>
		<category><![CDATA[ಬೆಂಗಳೂರು]]></category>
		<category><![CDATA[Bangalore Stroke Nursing Conclave 2022]]></category>
		<category><![CDATA[bengalure]]></category>
		<category><![CDATA[dr k sudhakar]]></category>
		<category><![CDATA[High blood pressure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Psychological and dietary habits]]></category>
		<category><![CDATA[World Stroke Day]]></category>
		<guid isPermaLink="false">https://peepalmedia.com/?p=12560</guid>

					<description><![CDATA[ಬೆಂಗಳೂರು: ಅಭಿವೃದ್ಧಿ ಹೊಂದುತ್ತಿರುವ ದೇಶ, ಬಡವರು ಹಾಗೂ ಮಧ್ಯಮ ವರ್ಗದ ಜನರಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆಗಳ ಪ್ರಮಾಣ ಹೆಚ್ಚಾಗಿ ಕಂಡು ಬರುತ್ತಿದೆ. ಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಸಾವಿನ ಪ್ರಮಾಣಕ್ಕಿಂತ, ಅಸಾಂಕ್ರಾಮಿಕ ರೋಗದಿಂದ ಎದುರಾಗುತ್ತಿರುವ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್‌ ಕಳವಳ ವ್ಯಕ್ತಪಡಿಸಿದ್ದಾರೆ. ವಿಶ್ವ ಪಾರ್ಶ್ವವಾಯು ದಿನದ ಅಂಗವಾಗಿ ಆಯೋಜಿಸಲಾಗಿದ್ದ ಬೆಂಗಳೂರು ಮೆಡಿಕಲ್ ಕಾಲೇಜ್ ಸಭಾಂಗಣದಲ್ಲಿ ನಡೆದ &#8221; ಬೆಂಗಳೂರು ಸ್ಟ್ರೋಕ್ ನರ್ಸಿಂಗ್ ಕಾನ್ ಕ್ಲೈವ್ 2022&#8243; ಕಾರ್ಯಕ್ರಮವನ್ನು [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು:</strong> ಅಭಿವೃದ್ಧಿ ಹೊಂದುತ್ತಿರುವ ದೇಶ, ಬಡವರು ಹಾಗೂ ಮಧ್ಯಮ ವರ್ಗದ ಜನರಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆಗಳ ಪ್ರಮಾಣ ಹೆಚ್ಚಾಗಿ ಕಂಡು ಬರುತ್ತಿದೆ. ಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಸಾವಿನ ಪ್ರಮಾಣಕ್ಕಿಂತ, ಅಸಾಂಕ್ರಾಮಿಕ ರೋಗದಿಂದ ಎದುರಾಗುತ್ತಿರುವ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್‌ ಕಳವಳ ವ್ಯಕ್ತಪಡಿಸಿದ್ದಾರೆ.</p>



<p style="font-size:20px">ವಿಶ್ವ ಪಾರ್ಶ್ವವಾಯು ದಿನದ ಅಂಗವಾಗಿ ಆಯೋಜಿಸಲಾಗಿದ್ದ ಬೆಂಗಳೂರು ಮೆಡಿಕಲ್ ಕಾಲೇಜ್ ಸಭಾಂಗಣದಲ್ಲಿ ನಡೆದ &#8221; ಬೆಂಗಳೂರು ಸ್ಟ್ರೋಕ್ ನರ್ಸಿಂಗ್ ಕಾನ್ ಕ್ಲೈವ್ 2022&#8243; ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿವಿಧ ಕಾರಣಗಳಿಂದಾಗಿ ಶೇ. 70ರಷ್ಟು ಪ್ರಕರಣಗಳು ಬಡತನ ರೇಖೆಗಿಂತ ಕೆಳಗಡೆ ಇರುವ ಮತ್ತು ಮಧ್ಯಮ ವರ್ಗದವರಲ್ಲಿ ಅಧಿಕ ರಕ್ತದೊತ್ತಡ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಬಡ ಹಾಗೂ ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಇದು ದೊಡ್ಡ ಸವಾಲಾಗಿ ಪರಿಣಮಿಸುತ್ತಿದೆ ಎಂದು ಹೇಳಿದರು.</p>



<p style="font-size:20px">ಅಕ್ಟೋಬರ್‌ 29 ರಂದು ವಿಶ್ವ ಸ್ಟ್ರೋಕ್‌ ದಿನವನ್ನಾಚರಿಸಲಾಗುತ್ತಿದೆ. ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಈ ಸಮಸ್ಯೆ ಪರಿಹಾರ ಕಂಡುಕೊಳ್ಳುವ ಪ್ರಯತ್ನಗಳು ಸತತವಾಗಿ ನಡೆಯುತ್ತಿವೆ. ಅಚ್ಚರಿ ಅಂದರೆ ಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಸಾವಿಗಿಗಿಂತ ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ ಸೇರಿದಂತೆ ಇತರೆ ಅಸಾಂಕ್ರಮಿಕ ರೋಗಗಳಿಂದ ಉಂಟಾಗುತ್ತಿರುವುದರಿಂದ ಸಾವು ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಕ್ರಮಗಳನ್ನು ಕೈಗೊಂಡಿವೆ.&nbsp; ರೋಗ ಬಂದ ಮೇಲೆ ಚಿಕಿತ್ಸೆ ನೀಡುವುದಕ್ಕಿಂತ ರೋಗ ಬಾರದೆ ಇರುವ ಹಾಗೇ ನೋಡಿಕೊಳ್ಳುವುದೇ ಉತ್ತಮ.&nbsp; ಹೀಗಾಗಿ ಆರೋಗ್ಯದ ಬಗ್ಗೆ ತಿಳುವಳಿಕೆ ನೀಡುವ ಕಾರ್ಯಗಳು ಸರ್ಕಾರದಿಂದಲೇ ನಡೆಯುತ್ತಿದೆ ಎಂದರು.</p>



<p style="font-size:20px">ಬಡತನ ರೇಖೆಗಿಂತ ಕೆಳಗಿರುವ, ಕಡಿಮೆ ಶಿಕ್ಷಣ ಹೊಂದಿರುವ, ಆರೋಗ್ಯ ಕ್ಷೇತ್ರದ ಬಗ್ಗೆ ಹೆಚ್ಚು ತಿಳುವಳಿಕೆ ಹೊಂದಿರದ ಗ್ರಾಮೀಣ ಜನರಿಗೆ ಆರೋಗ್ಯದ ಮಹತ್ವವನ್ನು ತಿಳಿ ಹೇಳುವುದು ದಾದಿಯರ ಪಾಲಿನ ಅತಿದೊಡ್ಡ ಕೆಲಸವಾಗಿದೆ. ಸ್ಟ್ರೋಕ್‌ ರೋಗಿಗೆ ವೈದ್ಯರು ಚಿಕಿತ್ಸೆ ಮಾತ್ರ ನೀಡುತ್ತಾರೆ. ಆದರೆ ಉಳಿದ ಕೆಲಸಗಳನ್ನು ಆರೈಕೆ ಮೂಲಕವೇ ದಾರಿಯರು ಮಾಡುತ್ತಾರೆ. ಹೀಗಾಗಿ ಸರಿಯಾದ ಆರೈಕೆ, ಕಾಯಿಲೆ ಬಗ್ಗೆ ತಿಳಿ ಹೇಳುವುದು ಮತ್ತು ರೋಗಿಗೆ ಆತ್ಮವಿಶ್ವಾಸ ತುಂಬುವುದು ದಾದಿಯರ ಮೊದಲ ಕೆಲಸವಾಗಿದೆ. ಇದರಿಂದಲೇ ಚಿಕಿತ್ಸೆ ಪಡೆಯುತ್ತಿರುವವರು ಗುಣಮುಖರಾಗಲು ಸಾಧ್ಯ ಎಂದು ಹೇಳಿದರು.</p>



<p style="font-size:20px">ದೇಶದಲ್ಲಿ ಖಿನ್ನತೆ, ಹೈಪರ್‌ ಟೆನ್ಷನ್‌ಗೆ ಒಳಗಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತ ಸಕ್ಕರೆ ಕಾಯಿಲೆಯಲ್ಲಿ ವಿಶ್ವಕ್ಕೆ ರಾಜಧಾನಿ ಯಾಗುತ್ತಿದೆ. ಎಷ್ಟು ರಕ್ತದೊತ್ತಡ ಕಡಿಮೆ ಮಾಡುತ್ತೇವೆಯೋ ಅಷ್ಟು ಸ್ಟ್ರೋಕ್‌ಗೆ ಒಳಗಾಗುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಸ್ಸ್ಟ್ರೋಕ್‌ಗೆ ಮೊದಲ ಕಾರಣವೇ ಹೈಪರ್‌ ಟೆನ್ಷನ್‌ ಆಗಿದೆ. ಜೀವನ ಶೈಲಿ, ಆಹಾರ ಪದ್ಧತಿ, ದೈಹಿಕ, ಮಾನಸಿಕ ಹಾಗೂ ಸಾಮಾಜಿಕವಾಗಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಮೂಲಕ ಸ್ಟ್ರೋಕ್‌ಗೆ ಒಳಗಾಗುವುದನ್ನು ತಪ್ಪಿಸಬಹುದು ಎಂದು ತಿಳಿಸಿದರು.</p>



<p style="font-size:20px">ಸರ್ಕಾರ ಈಗಾಗಲೇ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಎನ್‌ಸಿಡಿ ಕ್ಲಿನಿಕ್‌ಗಳ 9000 ಸಬ್‌ ಸೆಂಟರ್‌ಗಳು ರಾಜ್ಯದಲ್ಲಿ ಸ್ಥಾಪಿಸಲಾಗಿದೆ. ಇದಕ್ಕಾಗಿ 6000 ಸಿಎಚ್‌ಒಗಳನ್ನು ನೇಮಕ ಮಾಡಲಾಗಿದೆ. ನಮ್ಮ ಕ್ಲಿನಿಕ್‌ಗಳ ಸ್ಥಾಪನೆಯ ಮೂಲ ಉದ್ದೇಶವೂ ಇದಾಗಿದೆ. ಈ ಮೂಲಕ ಸಕ್ಕರೆ ಕಾಯಿಲೆ ಹೈಪರ್‌ ಟೆನ್ಷನ್‌ ಸೇರಿದಂತೆ ಎಲ್ಲಾ ಅಸಾಂಕ್ರಾಮಿಕ ರೋಗಿಗಳ ಚಿಕಿತ್ಸೆಗೆ ನೆರವು ನೀಡಲಾಗುತ್ತಿದೆ. ಅವರ ಡೇಟಾಗಳನ್ನು ಸಂಗ್ರಹಿಸಿ, ರೋಗಿಗಳ ಡಯಟ್‌, ಪೋಷಕಾಂಶಯುಕ್ತ ಆಹಾರ ಸೇವನೆ ಬಗ್ಗೆ ಪರಿಣಾಮಕಾರಿಯಾಗಿ ತಿಳಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.</p>



<p style="font-size:20px">ಸ್ಟೋಕ್‌ ಆದಾಗ ಸಮಯ ಪ್ರಜ್ಞೆ ತುಂಬಾ ಪ್ರಮುಖ. ಡಾಕ್ಟರ್‌ ಹತ್ತಿರ ಹೇಗೆ ಮತ್ತು ಎಷ್ಟು ಬೇಗ ಹೋಗುತ್ತಿರಾ ಅನ್ನುವುದು ತುಂಬಾ ಮುಖ್ಯವಾಗುತ್ತದೆ. ಚಿಕಿತ್ಸೆ ಎಷ್ಟು ಬೇಗನೆ ಸಿಗುತ್ತದೆ ಅನ್ನುವುದೇ ನಿರ್ಣಾಯಕ. ವೈದ್ಯರು ಹಾಗೂ ಸಿಬ್ಬಂದಿಗಳು ರೋಗಿಯನ್ನು ಹಾಗೂ ಅವರ ಸಂಬಂಧಿಕರನ್ನು ನಿಭಾಯಿಸುವುದು ಕೂಡ ಪ್ರಮುಖವಾಗುತ್ತದೆ. ಆರೈಕೆ ಹಾಗೂ ಚಿಕಿತ್ಸೆ ಎರಡೂ ಕೂಡ ಸರಿಯಾದ ಕ್ರಮದಲ್ಲಿ ಹಾಗೂ ಸರಿಯಾದ ಸಮಯಕ್ಕೆ ಸಿಕ್ಕರೆ ಬೇಗನೆ ಗುಣಮುಖವಾಗಲು ಸಾಧ್ಯವಾಗುತ್ತದೆ. ಹೀಗಾಗಿ ತಂತ್ರಜ್ಞಾನದ ಬಳಕೆ ಮೂಲಕ ಆರೋಗ್ಯ ಕರ್ನಾಟಕವನ್ನು ಕಟ್ಟಬೇಕಿದೆ ಎಂದು ಸಚಿವರು ಹೇಳಿದರು.</p>
]]></content:encoded>
					
		
		
			</item>
	</channel>
</rss>
