<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>drdo &#8211; Peepal Media</title>
	<atom:link href="https://peepalmedia.com/tag/drdo/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sun, 20 Aug 2023 12:31:34 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>drdo &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>DRDO &#124; ಹೊಲದಲ್ಲಿ ಬಂದು ಬಿದ್ದ ಡ್ರೋನ್ ವಿಮಾನ</title>
		<link>https://peepalmedia.com/drdo-drone-fals-in-chitradurga/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 20 Aug 2023 12:31:33 +0000</pubDate>
				<category><![CDATA[ಚಿತ್ರದುರ್ಗ]]></category>
		<category><![CDATA[chitradurga]]></category>
		<category><![CDATA[drdo]]></category>
		<category><![CDATA[drone]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=26005</guid>

					<description><![CDATA[ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದಲ್ಲಿ ಭಾನುವಾರ ಡ್ರೋನ್ ಮಾದರಿಯ ವಿಮಾನ ಒಂದು ನೆಲಕ್ಕೆ ಉರುಳಿದೆ. ಚಳ್ಳಕೆರೆಯ ಡಿಆರ್‌ಡಿಒ ಸಂಸ್ಥೆ ತಯಾರು ಮಾಡಿರುವ ಚಾಲಕ ರಹಿತ ಡ್ರೋನ್ ಪರಿಕ್ಷಾರ್ಥವಾಗಿ ಹಾರಾಟಕ್ಕೆ ಬಿಟ್ಟಿದ್ದು ನಿಯಂತ್ರಣ ತಪ್ಪಿ ವದ್ದಿಕೆರೆ ಗ್ರಾಮದ ಜಮೀನಿನಲ್ಲಿ ಬಿದ್ದಿದೆ. ಮಾನವ ರಹಿತ ವಿಮಾನ ನೋಡಲು ಗ್ರಾಮಸ್ಥರು ಮುಗಿಬಿದ್ದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇಲಾಖೆ ಹಾಗೂ ಡಿಆರ್‌ಡಿಒ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್​ಡಿಒ ಸಿದ್ಧಪಡಿಸಿದ್ದ ಪೈಲಟ್ ರಹಿತ ವಿಮಾನ ಪತನಗೊಂಡಿದೆ. ಪರೀಕ್ಷಾರ್ಥ [&#8230;]]]></description>
										<content:encoded><![CDATA[
<p><strong>ಚಿತ್ರದುರ್ಗ:</strong> ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದಲ್ಲಿ ಭಾನುವಾರ ಡ್ರೋನ್ ಮಾದರಿಯ ವಿಮಾನ ಒಂದು ನೆಲಕ್ಕೆ ಉರುಳಿದೆ. ಚಳ್ಳಕೆರೆಯ ಡಿಆರ್‌ಡಿಒ ಸಂಸ್ಥೆ ತಯಾರು ಮಾಡಿರುವ ಚಾಲಕ ರಹಿತ ಡ್ರೋನ್ ಪರಿಕ್ಷಾರ್ಥವಾಗಿ ಹಾರಾಟಕ್ಕೆ ಬಿಟ್ಟಿದ್ದು ನಿಯಂತ್ರಣ ತಪ್ಪಿ ವದ್ದಿಕೆರೆ ಗ್ರಾಮದ ಜಮೀನಿನಲ್ಲಿ ಬಿದ್ದಿದೆ. ಮಾನವ ರಹಿತ ವಿಮಾನ ನೋಡಲು ಗ್ರಾಮಸ್ಥರು ಮುಗಿಬಿದ್ದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇಲಾಖೆ ಹಾಗೂ ಡಿಆರ್‌ಡಿಒ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.</p>



<p>ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್​ಡಿಒ ಸಿದ್ಧಪಡಿಸಿದ್ದ ಪೈಲಟ್ ರಹಿತ ವಿಮಾನ ಪತನಗೊಂಡಿದೆ. ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಮಾನವ ರಹಿತ ಡ್ರೋನ್‌ &#8216;ತಪಸ್&#8217; ವಿಮಾನ ಹಿರಿಯೂರು ತಾಲ್ಲೂಕಿನ ವದ್ದಿಕೆರೆ ಗ್ರಾಮದ ಬಳಿ ಭಾನುವಾರ ಬೆಳಿಗ್ಗೆ ಧರೆಗುರುಳಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.</p>



<p>ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಸಿದ್ಧಪಡಿಸಿದ್ಧ ಯುದ್ಧ ವಿಮಾನ ನಾಯಕನಹಟ್ಟಿ ಸಮೀಪದ ಕುದಾಪುರ ವಾಯುನೆಲೆಯಿಂದ ಭಾನುವಾರ ಬೆಳಿಗ್ಗೆ ಹಾರಾಟ ಆರಂಭಿಸಿತ್ತು. ನಿಯಂತ್ರಣ ತಪ್ಪಿ ಜಮೀನಿನಲ್ಲಿ ಧರೆಗುರುಳಿದೆ.</p>



<figure class="wp-block-image size-full"><img fetchpriority="high" decoding="async" width="549" height="309" src="https://peepalmedia.com/wp-content/uploads/2023/08/0e45bff3-7467-4da0-a442-8d58367502cc.jpg" alt="" class="wp-image-26007" srcset="https://peepalmedia.com/wp-content/uploads/2023/08/0e45bff3-7467-4da0-a442-8d58367502cc.jpg 549w, https://peepalmedia.com/wp-content/uploads/2023/08/0e45bff3-7467-4da0-a442-8d58367502cc-300x169.jpg 300w, https://peepalmedia.com/wp-content/uploads/2023/08/0e45bff3-7467-4da0-a442-8d58367502cc-150x84.jpg 150w" sizes="(max-width: 549px) 100vw, 549px" /></figure>



<p>ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್‌ಡಿಒ ವಾಯುನೆಲೆಯಿಂದ ಬೆಳಿಗ್ಗೆ ಹಾರಾಟ ಆರಂಭಿಸಿದ್ದ ಕಣ್ಗಾವಲು ಡ್ರೋನ್‌ &#8216;ತಪಸ್&#8217; ನಿಯಂತ್ರಣ ತಪ್ಪಿ ಜಮೀನಿನಲ್ಲಿ ಬಿದ್ದಿದೆ. ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಮಾನದ ರೀತಿಯ ಪಳೆಯುಳಿಕೆಗಳನ್ನು ಕಂಡ ಗ್ರಾಮಸ್ಥರು ಕೆಲವು ಸಮಯ ಪೈಲಟ್‌ಗಾಗಿ ಹುಡುಕಾಟ ನಡೆಸಿದರು.</p>



<p>ಸುತ್ತಮುತ್ತಲಿನನ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿ ಡ್ರೋನ್‌ ಅವಶೇಷಗಳನ್ನು ಕುತೂಹಲದಿಂದ ವೀಕ್ಷಿಸಿದರು. ಎಂಜಿನ್‌ ಭಾಗ, ರೆಕ್ಕೆಗಳು, ಡ್ರೋನ್‌ನ ಹಿಂಬದಿಯ ಭಾಗವು ಬೇರೆ ಸ್ಥಳಗಳಲ್ಲಿ ಮುರಿದು ಬಿದ್ದಿದೆ. ಡಿಆರ್‌ಡಿಒ ಅಧಿಕಾರಿಗಳು ಸ್ಥಳಕ್ಕೆ ಬರುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.</p>



<p></p>
]]></content:encoded>
					
		
		
			</item>
		<item>
		<title>DRDO ವಿಜ್ಞಾನಿ, ಆರ್‌ಎಸ್‌ಎಸ್ ನಿಕಟವರ್ತಿ ಮೇಲೆ ಚಾರ್ಜ್ ಶೀಟ್ ಸಲ್ಲಿಸಿದ ಎಟಿಎಸ್</title>
		<link>https://peepalmedia.com/ats-files-charge-sheet-against-rss-close-friend/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 08 Jul 2023 08:09:01 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[drdo]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Pradeep Kurulkar]]></category>
		<category><![CDATA[RSS]]></category>
		<guid isPermaLink="false">https://peepalmedia.com/?p=23391</guid>

					<description><![CDATA[ಬೆತ್ತಲೆ ವಿಡಿಯೋಗಾಗಿ ಪಾಕಿಸ್ತಾನ ಮೂಲದ ಬೇಹುಗಾರಿಕೆಗೆ ಭಾರತದ ರಕ್ಷಣಾ ವ್ಯವಸ್ಥೆಯ ಗೌಪ್ಯ ಮಾಹಿತಿಗಳನ್ನು ಮಾರಿದ DRDO ವಿಜ್ಞಾನಿ, RSS ನಿಕಟವರ್ತಿ ಪ್ರದೀಪ್ ಕುರುಲ್ಕರ್ ಅವರ ಮೇಲೆ ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ ಜಾರ್ಜ್ ಶೀಟ್ ಸಲ್ಲಿಸಿದೆ. ಚಾರ್ಜ್ ಶೀಟ್ ನಲ್ಲಿ ಭಾರತದ ಕ್ಷಿಪಣಿ, ಡ್ರೋನ್ ಮತ್ತು ರೊಬೊಟಿಕ್ಸ್ ತಂತ್ರಜ್ಞಾನಗಳ ಕುರಿತ ಸೂಕ್ಷ್ಮ ವಿವರಗಳನ್ನು ಪಾಕಿಸ್ತಾನ ಮೂಲದ ಮಹಿಳಾ ಗುಪ್ತಚರ ಅಧಿಕಾರಿಯೊಂದಿಗೆ ಹಂಚಿಕೊಂಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಗೂಢಚರ್ಯೆ ಮತ್ತು ನೆರೆಯ ರಾಷ್ಟ್ರದ ಬೇಹುಗಾರಿಕಾ ಸಿಬ್ಬಂದಿಯೊಂದಿಗೆ ದೇಶದ ಗೌಪ್ಯ ಮಾಹಿತಿಗಳನ್ನು [&#8230;]]]></description>
										<content:encoded><![CDATA[
<p>ಬೆತ್ತಲೆ ವಿಡಿಯೋಗಾಗಿ ಪಾಕಿಸ್ತಾನ ಮೂಲದ ಬೇಹುಗಾರಿಕೆಗೆ ಭಾರತದ ರಕ್ಷಣಾ ವ್ಯವಸ್ಥೆಯ ಗೌಪ್ಯ ಮಾಹಿತಿಗಳನ್ನು ಮಾರಿದ DRDO ವಿಜ್ಞಾನಿ, <strong>RSS ನಿಕಟವರ್ತಿ ಪ್ರದೀಪ್ ಕುರುಲ್ಕರ್</strong> ಅವರ ಮೇಲೆ ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ ಜಾರ್ಜ್ ಶೀಟ್ ಸಲ್ಲಿಸಿದೆ. ಚಾರ್ಜ್ ಶೀಟ್ ನಲ್ಲಿ ಭಾರತದ ಕ್ಷಿಪಣಿ, ಡ್ರೋನ್ ಮತ್ತು ರೊಬೊಟಿಕ್ಸ್ ತಂತ್ರಜ್ಞಾನಗಳ ಕುರಿತ ಸೂಕ್ಷ್ಮ ವಿವರಗಳನ್ನು ಪಾಕಿಸ್ತಾನ ಮೂಲದ ಮಹಿಳಾ ಗುಪ್ತಚರ ಅಧಿಕಾರಿಯೊಂದಿಗೆ ಹಂಚಿಕೊಂಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.</p>



<p>ಗೂಢಚರ್ಯೆ ಮತ್ತು ನೆರೆಯ ರಾಷ್ಟ್ರದ ಬೇಹುಗಾರಿಕಾ ಸಿಬ್ಬಂದಿಯೊಂದಿಗೆ ದೇಶದ ಗೌಪ್ಯ ಮಾಹಿತಿಗಳನ್ನು ಹಂಚಿಕೊಂಡ ಆರೋಪದ ಮೇಲೆ 2023 ರ ಮೇ 3 ರಂದು ಭಾರತದ ಭಯೋತ್ಪಾದಕ ನಿಗ್ರಹ ದಳ ಬಂಧಿಸಿತ್ತು. ಈ ಪ್ರಕರಣದ ವಿಚಾರಣೆ ಅಡಿಯಲ್ಲಿ ಈಗಾಗಲೇ 203 ಸಾಕ್ಷಿಗಳನ್ನು ಎಟಿಎಸ್ ವಿಚಾರಣೆ ನಡೆಸಿದೆ.</p>



<p>ವಿಚಾರಣೆ ನಂತರ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ DRDO ವಿಜ್ಞಾನಿ ಪ್ರದೀಪ್ ಕುರುಲ್ಕರ್ ಬೆತ್ತಲೆ ವಿಡಿಯೋಗಾಗಿ ಜರಾ ದಾಸ್‌ಗುಪ್ತಾ ಮತ್ತು ಜೂಹಿ ಅರೋರಾ ಎಂಬ ಹೆಸರಿನಿಂದ ಈತನಿಗೆ ಗುರುತಿಸಲ್ಪಟ್ಟ ವ್ಯಕ್ತಿಗಳೊಂದಿಗೆ ಈಗಾಗಲೇ ಅನೇಕ ಸ್ಪೋಟಕ ಮತ್ತು ಗೌಪ್ಯ ಮಾಹಿತಿಗಳನ್ನು ಹಂಚಿಕೊಂಡದ್ದು ಬೆಳಕಿಗೆ ಬಂದಿದೆ. ಲಂಡನ್ ಕೋಡ್ ನಿಂದ ಆರಂಭವಾಗುವ +44 ನಂಬರ್‌ನ ಅಡಿಯಲ್ಲಿ ಈ ವ್ಯಕ್ತಿ ಸಂವಹನ ನಡೆಸಿದ್ದು ಅದರ ಸಂಪೂರ್ಣ ಆಪರೇಟಿಂಗ್ ಸಿಸ್ಟಮ್ ಪಾಕಿಸ್ತಾನದ ಮೂಲದ್ದು ಎಂದು ತನಿಖೆಯಿಂದ ತಿಳಿದು ಬಂದಿದೆ.</p>



<p>ಆಪಾದಿತ ಪ್ರದೀಪ್ ಕುರುಲ್ಕರ್ ಇಲ್ಲಿಯವರೆಗೆ ಜಾರಾ ದಾಸ್‌ಗುಪ್ತಾ ಎಂಬ ಹೆಸರಿನ ವ್ಯಕ್ತಿಯೊಂದಿಗಿನ ಸಂದೇಶಗಳಲ್ಲಿ, DRDO ನಲ್ಲಿ ಕೆಲಸ ಮಾಡುತ್ತಿರುವ ಉಲ್ಕಾಪಾತದ ಕ್ಷಿಪಣಿ, ಬ್ರಹ್ಮೋಸ್ ಕ್ಷಿಪಣಿಗಳು, ರಾಫೆಲ್, ಆಕಾಶ್ ಮತ್ತು ಅಸ್ತ್ರ ಕ್ಷಿಪಣಿ ವ್ಯವಸ್ಥೆಗಳ ಬಗ್ಗೆ ಮತ್ತು ಅದರ ಅಭಿವೃದ್ಧಿಯಲ್ಲಿ ಅಗ್ನಿ-6 ಕ್ಷಿಪಣಿ ಉಡಾವಣೆ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.</p>



<p>ಅಷ್ಟೆ ಅಲ್ಲದೆ ಮಾನವರಹಿತ ಯುದ್ಧ ವೈಮಾನಿಕ ವಾಹನ, ಭಾರತ್ ಕ್ವಾಡ್‌ಕಾಪ್ಟರ್ ಮತ್ತು DRDO ಅಭಿವೃದ್ಧಿಪಡಿಸುತ್ತಿರುವ ಮಧ್ಯಮ ಎತ್ತರದ ದೀರ್ಘ-ಸಹಿಷ್ಣುತೆಯ ಮಾನವರಹಿತ ಯುದ್ಧ ವಿಮಾನವಾದ ರುಸ್ತಮ್‌ನಲ್ಲಿ DRDO ನಡೆಯುತ್ತಿರುವ ಕೆಲಸದ ಬಗ್ಗೆ ಚರ್ಚಿಸಿದ್ದಾನೆ ಎಂದು ಜಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಿದ ಬಗ್ಗೆ ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.</p>



<p>ಈಗಾಗಲೇ ತಿಳಿದಿರುವ ಮಾಹಿತಿಯಂತೆ ಡಿಆರ್‌ಡಿಒ ಅಧಿಕಾರಿ ಪ್ರದೀಪ್ ಕುರುಲ್ಕರ್ ಹಲವು ವರ್ಷಗಳಿಂದ ಆರ್‌ಎಸ್‌ಎಸ್ ಸ್ವಯಂಸೇವಕರಾಗಿದ್ದಾರೆ. ಜೊತೆಗೆ ಅವರ ಕುಟುಂಬವು ನಾಲ್ಕು ತಲೆಮಾರುಗಳಿಂದ ಸಂಘದೊಂದಿಗೆ ಸಂಬಂಧ ಹೊಂದಿದೆ. ಇಲ್ಲಿಯವರೆಗೆ ಆರ್‌ಎಸ್‌ಎಸ್ ಮತ್ತು ಅದರ ಅಂಗಸಂಸ್ಥೆಗಳು ಆಯೋಜಿಸಿದ್ದ ಹಲವಷ್ಟು ಕಾರ್ಯಕ್ರಮಗಳಲ್ಲಿ ಪ್ರದೀಪ್ ಕುರುಲ್ಕರ್ ಭಾಗಿಯಾಗಿದ್ದು, ತಾನೊಬ್ಬ RSS ನಿಕಟವರ್ತಿ ಎಂಬುದನ್ನು ಹೇಳಿಕೊಂಡಿದ್ದಾರೆ.</p>
]]></content:encoded>
					
		
		
			</item>
		<item>
		<title>ಖ್ಯಾತ ವಿಜ್ಞಾನಿ ಸಮೀರ್‌ ಕಾಮತ್‌ ಡಿಆರ್‌ಡಿಒ ಮುಖ್ಯಸ್ಥರಾಗಿ ನೇಮಕ</title>
		<link>https://peepalmedia.com/kyatha-vijnani-sameer-kamath-drdo-mukyastharagi-nemaka/</link>
		
		<dc:creator><![CDATA[Peepal Media]]></dc:creator>
		<pubDate>Thu, 25 Aug 2022 12:50:01 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[drdo]]></category>
		<category><![CDATA[india]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[scientist]]></category>
		<guid isPermaLink="false">https://peepalmedia.com/?p=2967</guid>

					<description><![CDATA[ನವದೆಹಲಿ: ಖ್ಯಾತ ವಿಜ್ಞಾನಿ ಸಮೀರ್‌ ವಿ.ಕಾಮತ್‌ ಅವರು ರಕ್ಷಣಾ ಸಂಶೊಧನೆ ಮತ್ತು ಅಭಿವೃದ್ದಿ ಸಂಸ್ಥೆಯ(DRDO) ಮುಖ್ಯಸ್ಥ ಹಾಗೂ ರಕ್ಷಣಾ ಸಂಶೋಧನೆ ಮತು ಅಭಿವೃದ್ದಿ ವಿಭಾಗದ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಈ ಮೊದಲು ಕಾಮತ್‌ ಅವರು ಡಿಆರ್‌ಡಿಒದ ನೌಕಾ ವ್ಯವಸ್ಥೆ ಮತ್ತು ಸರಕು ವಿಭಾಗದ ಮಹಾ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಡಿಆರ್‌ಡಿಒ ಮುಖ್ಯಸ್ಥರಾಗಿದ್ದ ಸತೀಶ್‌ ರೆಡ್ಡಿ ಅವರನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ವೈಜ್ಞಾನಿಕ ಸಲಹೆಗಾರರನ್ನಾಗಿ ನೇಮಿಸಲಾಗಿತ್ತು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಕಾಮತ್‌ ನೇಮಕಗೊಂಡಿದ್ದಾರೆ. ಸಂಪುಟದ ನೇಮಕಾತಿ ಸಮಿತಿಯು [&#8230;]]]></description>
										<content:encoded><![CDATA[
<p class="has-medium-font-size"><strong>ನವದೆಹಲಿ: </strong>ಖ್ಯಾತ ವಿಜ್ಞಾನಿ ಸಮೀರ್‌ ವಿ.ಕಾಮತ್‌ ಅವರು ರಕ್ಷಣಾ ಸಂಶೊಧನೆ ಮತ್ತು ಅಭಿವೃದ್ದಿ ಸಂಸ್ಥೆಯ(DRDO) ಮುಖ್ಯಸ್ಥ ಹಾಗೂ ರಕ್ಷಣಾ ಸಂಶೋಧನೆ ಮತು ಅಭಿವೃದ್ದಿ ವಿಭಾಗದ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.</p>



<p class="has-medium-font-size">ಈ ಮೊದಲು ಕಾಮತ್‌ ಅವರು ಡಿಆರ್‌ಡಿಒದ ನೌಕಾ ವ್ಯವಸ್ಥೆ ಮತ್ತು ಸರಕು ವಿಭಾಗದ ಮಹಾ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಡಿಆರ್‌ಡಿಒ ಮುಖ್ಯಸ್ಥರಾಗಿದ್ದ ಸತೀಶ್‌ ರೆಡ್ಡಿ ಅವರನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ವೈಜ್ಞಾನಿಕ ಸಲಹೆಗಾರರನ್ನಾಗಿ ನೇಮಿಸಲಾಗಿತ್ತು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಕಾಮತ್‌ ನೇಮಕಗೊಂಡಿದ್ದಾರೆ.</p>



<p class="has-medium-font-size">ಸಂಪುಟದ ನೇಮಕಾತಿ ಸಮಿತಿಯು ಕಾಮತ್‌ ಅವರ ನೇಮಕಕ್ಕೆ ಒಪ್ಪಿಗೆ ಸೂಚಿಸಿದೆ. ಅಧಿಕಾರ ಸ್ವೀಕರಿಸಿದ ದಿನದಿಂದ 60 ವರ್ಷ ವಯಸ್ಸಾಗುವವರೆಗೂ ಕಾಮತ್‌ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>
]]></content:encoded>
					
		
		
			</item>
	</channel>
</rss>
