<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>DYFI &#8211; Peepal Media</title>
	<atom:link href="https://peepalmedia.com/tag/dyfi/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sun, 31 Mar 2024 14:49:02 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>DYFI &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಜಿಲ್ಲೆಯ ಶಿಕ್ಷಣ, ಆರೋಗ್ಯ, ನಿರುದ್ಯೋಗದ ಸ್ಥಿತಿಗತಿಗಳ ಅರಿವಿಲ್ಲದ ಅಭ್ಯರ್ಥಿ ಬೃಜೇಶ್ ಚೌಟ: ಮುನೀರ್ ಕಾಟಿಪಳ್ಳ ಆರೋಪ</title>
		<link>https://peepalmedia.com/brijesh-chauta-knows-nothing-about-mangalore-munir-katipalla/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 31 Mar 2024 14:46:14 +0000</pubDate>
				<category><![CDATA[ದಕ್ಷಿಣ ಕನ್ನಡ]]></category>
		<category><![CDATA[cpim]]></category>
		<category><![CDATA[DYFI]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[muneer katipalla]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=37798</guid>

					<description><![CDATA[ಮೂರು ದಶಕಗಳ ಬಿಜೆಪಿ ದುರಾಡಳಿತದ ವಿರುದ್ದದ ಜನಾಕ್ರೋಶವನ್ನು ತಣಿಸಲು ಬಿಜೆಪಿ ನಳಿನ್ ಕುಮಾರ್ ಕಟೀಲ್ ರಿಗೆ ಟಿಕೇಟ್ ತಪ್ಪಿಸಿ ಬೃಜೇಶ್ ಚೌಟರನ್ನು ಕಣಕ್ಕಿಳಿಸಿದೆ. ವಿದ್ಯಾವಂತ, ಮಾಜಿ ಯೋಧ ಎಂಬ ಬಿರುದಾಂಕಿತ ಅಭ್ಯರ್ಥಿ ಮೂಲಕ ತನ್ನದು ಯೋಗ್ಯ ಅಭ್ಯರ್ಥಿ ಎಂದು ಜನರ ನಡುವೆ ಪ್ರಚಾರ ನಡೆಸುತ್ತಿದೆ. ಆ ಮೂಲಕ ಆಡಳಿತ ವಿರೋಧಿ ಅಲೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ. ಆದರೆ, ಬಿಜೆಪಿ ಹೊಸ ಮುಖ ಬೃಜೇಶ್ ಚೌಟರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಯಾವುದೇ ಸಮಸ್ಯೆಗಳ ಕುರಿತು ಅರಿವಿಲ್ಲ. ಇಲ್ಲಿನ ಜನರನ್ನು [&#8230;]]]></description>
										<content:encoded><![CDATA[
<p>ಮೂರು ದಶಕಗಳ ಬಿಜೆಪಿ ದುರಾಡಳಿತದ ವಿರುದ್ದದ ಜನಾಕ್ರೋಶವನ್ನು ತಣಿಸಲು ಬಿಜೆಪಿ ನಳಿನ್ ಕುಮಾರ್ ಕಟೀಲ್ ರಿಗೆ ಟಿಕೇಟ್ ತಪ್ಪಿಸಿ ಬೃಜೇಶ್ ಚೌಟರನ್ನು ಕಣಕ್ಕಿಳಿಸಿದೆ. ವಿದ್ಯಾವಂತ, ಮಾಜಿ ಯೋಧ ಎಂಬ ಬಿರುದಾಂಕಿತ ಅಭ್ಯರ್ಥಿ ಮೂಲಕ ತನ್ನದು ಯೋಗ್ಯ ಅಭ್ಯರ್ಥಿ ಎಂದು ಜನರ ನಡುವೆ ಪ್ರಚಾರ ನಡೆಸುತ್ತಿದೆ. ಆ ಮೂಲಕ ಆಡಳಿತ ವಿರೋಧಿ ಅಲೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ. ಆದರೆ, ಬಿಜೆಪಿ ಹೊಸ ಮುಖ ಬೃಜೇಶ್ ಚೌಟರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಯಾವುದೇ ಸಮಸ್ಯೆಗಳ ಕುರಿತು ಅರಿವಿಲ್ಲ. ಇಲ್ಲಿನ ಜನರನ್ನು ಕಿತ್ತು ತಿನ್ನುತ್ತಿರುವ ಆರೋಗ್ಯ, ಶಿಕ್ಷಣದ ವ್ಯಾಪಾರೀಕರಣದ ಸಮಸ್ಯೆಗಳು, ಉಲ್ಬಣಾವಸ್ಥೆಗೆ ತಲುಪಿರುವ ನಿರುದ್ಯೋಗ ಸ್ಥಿತಿಯ ಕುರಿತು ಚೌಟರಿಗೆ ಅರಿವೂ ಇಲ್ಲ, ಅಧ್ಯಯನವೂ ಇಲ್ಲ ಇಲ್ಲ ಎಂದು ಸಿಪಿಐ ಎಂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ. </p>



<p>ಹತ್ತು ವರ್ಷಗಳ ಅವರ ಸಾರ್ವಜನಿಕ ಜೀವನದಲ್ಲಿ ಚೌಟರು ಈ ಸಮಸ್ಯೆಗಳ ಕುರಿತು ಒಂದು ಶಬ್ದ ಮಾತಾಡಿದ್ದು ಯಾರೂ ಕಂಡಿಲ್ಲ. ಇಂತಹ ಅಭ್ಯರ್ಥಿನ್ನು ಗೆಲ್ಲಿಸಿದರೆ ದ.ಕ. ಜಿಲ್ಲೆಯಲ್ಲಿ ಬಿಜೆಪಿಯ 33 ವರ್ಷಗಳ ಸತತ ಆಳ್ವಿಕೆಯ ಕರಾಳ ಅಧ್ಯಾಯಕ್ಕೆ ಮತ್ತೆ ಐದು ವರ್ಷ ಸೇರ್ಪಡೆ ಮಾತ್ರ ಆಗಲಿದೆ. ಕೋಮುವಾದಕ್ಕೆ ಮಣೆ ಹಾಕುವ ಪಕ್ಷದಿಂದ ಸಮಸ್ಯೆಗಳು ಮತ್ತಷ್ಟು ಹೆಚ್ಚಲಿದೆ. ಜಿಲ್ಲೆಯ ಯುವಜನತೆ ಈಗಲಾದರು ಎಚ್ಚೆತ್ತು ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು, ಆ ಮೂಲಕ ಜಿಲ್ಲೆಯ ಮೂರು ದಶಕಗಳ ಬಿಜೆಪಿ ದುರಾಡಳಿತಕ್ಕೆ ಅಂತ್ಯ ಹಾಡಬೇಕು ಎಂದು ಅವರು ಜನರಲ್ಲಿ ಮನವಿ ಮಾಡಿಕೊಂಡರು. </p>



<p>ಅವರು ಕುಳಾಯಿ ಮಹಿಳಾ ಮಂಡಲ ಸಭಾಂಗಣದಲ್ಲಿ ಸಿಪಿಐಎಂ ವತಿಯಿಂದ ಅಯೋಜಿಸಲಾಗಿದ್ದ ಸುರತ್ಕಲ್ ವಿಭಾಗ ಮಟ್ಟದ ರಾಜಕೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಡಾ. ಕೃಷ್ಣಪ್ಪ ಕೊಂಚಾಡಿ ಮಾತನಾಡುತ್ತಾ ಹತ್ತು ವರ್ಷಗಳ ಮೋದಿ ಸರಕಾರದ ದುರಾಡಳಿತದಿಂದ ದೇಶದ ದುರಂತದತ್ತ ಚಲಿಸುತ್ತಿದೆ. ಚುನಾವಣಾ ಬಾಂಡ್ ಪಡೆಯುವ ಮೂಲಕ ಕಪ್ಪು ಪಟ್ಟಿಗೆ ಸೇರಬೇಕಾದ ಕಾರ್ಪೊರೇಟ್ ಕಂಪೆನಿಗಳಿಗೆ ರೆಡ್ ಕಾರ್ಪೆಟ್ ಹಾಕಲಾಗುತ್ತಿದೆ. ದೇಶದ ಆದಿವಾಸಿಗಳು, ದಲಿತರು, ಹಿಂದುಳಿದವರನ್ನು ಹಸಿವೆಗೆ ತಳ್ಳಲಾಗುತ್ತಿದೆ. ಈ ಭಾರಿಯ ಚುನಾವಣೆಯಲ್ಲಿ ಮೋದಿ ಸರಕಾರ ಸೋಲಿಸಲು ಈ ಎಲ್ಲಾ ವಿಭಾಗಗಳು ಒಟ್ಟಾಗಿ ದುಡಿಯಬೇಕು ಎಂದು ಹೇಳಿದರು.</p>



<p>ಪ್ರಾಸ್ತಾವಿಕವಾಗಿ ಜಿಲ್ಲಾ ಸಮಿತಿ ಸದಸ್ಯ ಬಿ ಕೆ ಇಮ್ತಿಯಜ್ ಮಾತನಾಡಿದರು.ಮಂಗಳೂರು ನಗರ ಸಮಿತಿ ಸದಸ್ಯರಾದ ಶ್ರೀನಾಥ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು, ಚರಣ್ ಶೆಟ್ಟಿ ವಂದಿಸಿದರು. ನಗರ ಉತ್ತರ ಸಮಿತಿ ಕಾರ್ಯದರ್ಶಿ ಪ್ರಮೀಳಾ ಕೆ, ಮಾಜಿ ಕಾರ್ಪೊರೇಟರ್ ಅಯಾಝ್, ಜೋಕಟ್ಟೆ ಪಂಚಾಯತ್ ಸದಸ್ಯ ಅಬೂಬಕ್ಕರ್ ಬಾವಾ, ಕಾರ್ಮಿಕ ನಾಯಕ ರವಿಚಂದ್ರ ಕೊಂಚಾಡಿ ಸಹಿತ ಹಲವು ಮುಖಂಡರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಉದ್ಯೋಗ ಸೃಷ್ಟಿಯಿಲ್ಲದ್ದರಿಂದ ಕೋಮವಾದ ಹೆಚ್ಚಳ: ನ್ಯಾ.ನಾಗಮೋಹನದಾಸ್ ಕಳವಳ</title>
		<link>https://peepalmedia.com/slow-increase-due-to-lack-of-job-creation-n-nagamohan-das-is-concerned/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 26 Feb 2024 08:15:48 +0000</pubDate>
				<category><![CDATA[ರಾಜ್ಯ]]></category>
		<category><![CDATA[DYFI]]></category>
		<category><![CDATA[hn nagamohandas]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mangaluru]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=36455</guid>

					<description><![CDATA[ಮಂಗಳೂರು: ದೇಶದಲ್ಲಿ ಸುಶಿಕ್ಷಿತರ ಸಂಖ್ಯೆ ಹೆಚ್ಚುತ್ತಿದೆ. ಆದರೆ, ಮೌಲ್ಯಯುತ ಶಿಕ್ಷಣ ಸಿಗುತ್ತಿಲ್ಲ. ಯುವಜನರಿಗೆ ಮಾಡಲು ಉದ್ಯೋಗಗಳು ಸಿಗುತ್ತಿಲ್ಲ. ಹೀಗಾಗಿ ಖಾಲಿ ಇರುವ ಯುವಜನರು ಕೋಮುವಾದಿ ಸಂಘಟನೆಗಳಿಗೆ ಬಲಿಯಾಗುತ್ತಿದ್ದಾರೆ ಎಂದು ರಾಜ್ಯ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಎಚ್.ನಾಗಮೋಹನದಾಸ್‌ ಕಳವಳ ವ್ಯಕ್ತಪಡಿಸಿದರು. ನಗರದಲ್ಲಿ ರವಿವಾರ ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾದ ಡಿವೈಎಫ್ಐ 12ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಐವತ್ತು ವರ್ಷಗಳಲ್ಲಿ ದೇಶ ಕಾಣದ ನಿರುದ್ಯೋಗ ಪ್ರಮಾಣ ಪ್ರಸ್ತುತ ದೇಶದಲ್ಲಿದೆ. ಐವತ್ತು ವರ್ಷಗಳಲ್ಲಿ [&#8230;]]]></description>
										<content:encoded><![CDATA[
<p>ಮಂಗಳೂರು: ದೇಶದಲ್ಲಿ ಸುಶಿಕ್ಷಿತರ ಸಂಖ್ಯೆ ಹೆಚ್ಚುತ್ತಿದೆ. ಆದರೆ, ಮೌಲ್ಯಯುತ ಶಿಕ್ಷಣ ಸಿಗುತ್ತಿಲ್ಲ. ಯುವಜನರಿಗೆ ಮಾಡಲು ಉದ್ಯೋಗಗಳು ಸಿಗುತ್ತಿಲ್ಲ. ಹೀಗಾಗಿ ಖಾಲಿ ಇರುವ ಯುವಜನರು ಕೋಮುವಾದಿ ಸಂಘಟನೆಗಳಿಗೆ ಬಲಿಯಾಗುತ್ತಿದ್ದಾರೆ ಎಂದು ರಾಜ್ಯ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಎಚ್.ನಾಗಮೋಹನದಾಸ್‌ ಕಳವಳ ವ್ಯಕ್ತಪಡಿಸಿದರು.</p>



<p><br>ನಗರದಲ್ಲಿ ರವಿವಾರ ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾದ ಡಿವೈಎಫ್ಐ 12ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಐವತ್ತು ವರ್ಷಗಳಲ್ಲಿ ದೇಶ ಕಾಣದ ನಿರುದ್ಯೋಗ ಪ್ರಮಾಣ ಪ್ರಸ್ತುತ ದೇಶದಲ್ಲಿದೆ. ಐವತ್ತು ವರ್ಷಗಳಲ್ಲಿ ದೇಶ ಕಾಣದ ನಿರುದ್ಯೋಗ ಪ್ರಮಾಣ ಪ್ರಸ್ತುತ ದೇಶದಲ್ಲಿದೆ. ನಮ್ಮಲ್ಲಿ ವಿದ್ಯೆ ಇದೆ, ಪದವಿ ಇದೆ ಆದರೆ ಉದ್ಯೋಗವಿಲ್ಲ. ನಮ್ಮ ವಿದ್ಯಾರ್ಹತೆಗೆ ತಕ್ಕ ಉದ್ಯೋಗವು ಸಿಗುತ್ತಿಲ್ಲ. ಪದವಿ ಇದ್ದರೂ ಏನು ಪ್ರಯೋಜನವಿಲ್ಲದಂತಾಗಿದೆ ಎಂದರು.</p>



<p><br>ಸ್ವಾತಂತ್ರ್ಯ ಸಿಕ್ಕ ಮೇಲೆ ಭಾರತ ಒಂದಿಷ್ಟು ಸಾಧನೆ ಮಾಡಿರುವುದು ನಿಜ. ಸ್ವಾಂತಂತ್ರ್ಯ ಪೂರ್ವದಲ್ಲಿ ಭಾರತ ಭಾರತವಾಗಿ ಉಳಿದಿರಲಿಲ್ಲ. ಸಣ್ಣಪುಟ್ಟ ಸಂಸ್ಥಾನಗಳಲ್ಲಿ ಹರಿದು ಹಂಚಿಹೋಗಿತ್ತು. ಸಂವಿಧಾನದ ಶಕ್ತಿಯ ಮೂಲಕ ಭಾರತವನ್ನು ಒಗ್ಗೂಡಿಸಲಾಯಿತು. ಈ ದೇಶದ ದಲಿತರಿಗೆ, ಅಲ್ಪಸಂಖ್ಯಾತರಿಗೆ, ಮಹಿಳೆಯರಿಗೆ ಒಂದಿಷ್ಟು ಅವಕಾಶಗಳನ್ನು ಕೊಟ್ಟು ಸರಿ ಸಮಾನರಾಗಲು ಅವಕಾಶ ಮಾಡಿಕೊಟ್ಟಿದ್ದೇವೆ. ಇದಕ್ಕೆ ಕಾರಣ ಭಾರತದ ಸಂವಿಧಾನ ಎನ್ನುವುದನ್ನು ನಾವು ಮರೆಯಬಾರದು ಎಂದರು.</p>



<p><br>ಶಿಕ್ಷಣ, ಆರೋಗ್ಯ, ಉದ್ಯೋಗ, ಸಾರಿಗೆ ವಸತಿ, ಬೀದಿದೀಪ, ಕುಡಿಯುವ ನೀರು, ಇತ್ಯಾದಿ ಮೂಲ ಸೌಕರ್ಯಗಳನ್ನು ಒದಗಿಸಿ ಜನಜೀವನ ಸುಧಾರಿಸುವಂತೆ ಮಾಡಿದ್ದೇವೆ. ಇದಕ್ಕೆ ಕಾರಣ ಭಾರತದ ಸಂವಿಧಾನ. ಹತ್ತು ಹಲವು ಕ್ಷೇತ್ರಗಳಲ್ಲಿ ಜಗತ್ತಿನ ಟಾಪ್‌ ಟೆನ್ ದೇಶಗಳಲ್ಲಿ ಇಷ್ಟು ಬೇಗ ಭಾರತಕ್ಕೂ ಒಂದು ಸ್ಥಾನ ಸಿಗುವುದಕ್ಕೆ ಕಾರಣ ನಮ್ಮ ದೇಶದ ಸಂವಿಧಾನ. ಈ ದೇಶದಲ್ಲಿನ ಎಲ್ಲ ಧರ್ಮಿಯರಿಗೆ ಅವರದೇ ಆದ ಧರ್ಮಗ್ರಂಥಗಳಿವೆ. ಆದರೆ, ಎಲ್ಲ ಭಾರತಿಯರಿಗೂ ಸಂವಿಧಾನವೇ ಒಂದು ಧರ್ಮಗ್ರಂಥ ಎಂದು ಅವರು ಪ್ರತಿಪಾದಿಸಿದರು.</p>



<p><br>ಅಬ್ಬಕ್ಕ ರಾಣಿಯಂತಹ ಕಿಚ್ಚಿನ ನಾಯಕಿಯ ಜಾಗದಲ್ಲಿ ಈ ಸಮ್ಮೇಳನ ನಡೆಯುತ್ತಿರುವುದು ಸಂತಸದ ಸಂಗತಿ. ಯುವಕರೆಂದರೆ ಬದಲಾವಣೆ, ಪ್ರಗತಿ, ಅನ್ಯಾಯ, ಶೋಷಣೆ, ದಬ್ಬಾಳಿಕೆ ವಿರುದ್ಧ ಹೋರಾಡುವ ಶಕ್ತಿಯಾಗಿದೆ. ಯಾವುದೇ ಅನ್ಯಾಯದ ವಿರುದ್ಧ ತಿರುಗಿ ಬಿಳುವ ಬಂಡಾಯ ಮನೋಭಾವ ಇರುವಂಥದ್ದು. ಯುವ ಶಕ್ತಿಗೆ ಮಾತ್ರ. ಅಂಥ ಯುವಜನರ ಸಂಘಟನೆ ಡಿವೈಎಫ್‌ಐನ 12ನೇ ಈ ಸಮ್ಮೇಳವನ್ನು ಉದ್ಘಾಟಿಸಲು ನನಗೆ ಬಹಳ ಹೆಮ್ಮೆ ಎನಿಸುತ್ತದೆ ಎಂದರು.</p>



<p><br>ಯುವ ಸಂಪನ್ಮೂಲ ಎಲ್ಲ ವಯೋಮಾನದ ಮಾನವ ಸಂಪನ್ಮೂಲದಲ್ಲೇ ಅತ್ಯಂತ ಶಕ್ತಿಯುತ ಸಂಪನ್ಮೂಲ. ಯುವ ಶಕ್ತಿ ಎಂದರೆ ಬದಲಾವಣೆಯ ಸಂಕೇತ. 1939ರಿಂದ 1945ರವರೆಗೆ ನಡೆದ 2ನೇ ಮಹಾ ಯುದ್ಧದಲ್ಲಿ 2 ಕೋಟಿ ಸೈನಿಕರು ಮತ್ತು 4 ಕೋಟಿ ನಾಗರಿಕರು ಸತ್ತು ಹೋದರು. ಆಸ್ತಿಪಾಸ್ತಿ ಎಲ್ಲವೂ ನಾಶವಾಯಿತು. ಅಂದೇ ಜಗತ್ತಿನ ಜನ ತೀರ್ಮಾನ ಮಾಡಿದರು. ಇನ್ನು ಮುಂದೆ ಯುದ್ಧ ಮಾಡುವುದು ಬೇಡ. ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ವಿಶ್ವಸಂಸ್ಥೆ ಸ್ಥಾಪಿಸಿಕೊಂಡರು. ಆದರೂ ಯುದ್ದಗಳು ನಿಂತಿಲ್ಲ. ಪ್ರತಿವರ್ಷ ಸರಾಸರಿ ಒಂದು ಲಕ್ಷದಷ್ಟು ಜನ ಯುದ್ದಗಳಿಂದಲೇ ಸಾಯುತ್ತಿದ್ದಾರೆ. ರಷ್ಯಾ ಮತ್ತು ಉಕ್ರೇನ್‌ ಯುದ್ದ ಈಗಲೂ ನಡೆಯುತ್ತಿದೆ. ವಿಶ್ವಸಂಸ್ಥೆಗೆ ಯುದ್ದಗಳನ್ನು ತಡೆಯಲು ಆಗುತ್ತಿಲ್ಲ.</p>



<p><br>ಇಂದು ಎಲ್ಲ ದೇಶಗಳು ಅತಿ ಹೆಚ್ಚು ವರಮಾನವನ್ನು ರಕ್ಷಣಾ ಇಲಾಖೆಗೆ ಖರ್ಚು ಮಾಡುತ್ತಿವೆ. ಯುದ್ದದ ಆಯುಧಗಳನ್ನು ತಯಾರಿಸುವ ಕಾರ್ಖಾನೆಗಳು ಅತಿ ಹೆಚ್ಚು ಲಾಭ ಮಾಡಿಕೊಳ್ಳುತ್ತಿವೆ. ಯುದ್ದಭೂಮಿಯಲ್ಲಿ ಅತಿ ಹೆಚ್ಚು ಪ್ರಾಣ ಕಳೆದುಕೊಳ್ಳುತ್ತಿರುವವರು ಯುವಜನರೇ ಆಗಿದ್ದಾರೆ. ಹಾಗಾಗಿ ಯುವಜನರು ಯುದ್ಧ ವಿರೋಧಿ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಮತ್ತು ಯುದ್ದಗಳನ್ನು ನಡೆಸದಂತೆ ಆಯಾ ದೇಶಗಳ ಯುವಜನರ ಸರ್ಕಾರಗಳ ಮೇಲೆ ಒತ್ತಡ ಹೇರಬೇಕಿದೆ ಎಂದು ಅಭಿಪ್ರಾಯಪಟ್ಟರು.</p>



<p><br>ಯುದ್ದಕ್ಕಾಗಿ ಖರ್ಚು ಮಾಡುತ್ತಾ ಹೋದರೆ, ಶಿಕ್ಷಣ, ಉದ್ಯೋಗ, ವಸತಿ, ಆರೋಗ್ಯದಂತಹ ಜನಕಲ್ಯಾಣಗಳು ಹಿನ್ನಡೆ ಅನುಭವಿಸುತ್ತವೆ.ಹಾಗಾಗಿ ಸಂವಿಧಾನದ ಮೂಲಕ ಪ್ರಜಾಪ್ರಭುತ್ವದಲ್ಲಿ ಬದಲಾವಣೆ ತರಲಾಗಿದೆ. ದಲಿತರು, ಮಹಿಳೆಯರು ಈ ದೇಶದ ಅಭಿವೃದ್ದಿಯಲ್ಲಿ ದುಡಿಯಲು ಸಾಧ್ಯವಾಗಿದೆ. ಭಾರತೀಯರಿಗೆ ಮಹಾನ್ ಗ್ರಂಥ ಸಂವಿಧಾನ. ಇದನ್ನು ಓದಬೇಕು, ಅರ್ಥೈಸಿಕೊಳ್ಳಬೇಕು, ಅದರಂತೆ ನಡೆದುಕೊಳ್ಳಬೇಕು&#8221; ಎಂದು ಕರೆ ನೀಡಿದರು.</p>



<p><br>ಎಲ್ಲಾ ಮಕ್ಕಳು ಒಂದೇ ಎನ್ನುತ್ತೇವೆ. ಆದರೆ ಶಿಕ್ಷಣದಲ್ಲಿ ಯಾಕೆ ತಾರತಮ್ಯ?. ಸಮಾನ ಶಿಕ್ಷಣದ ನೀತಿ ಜಾರಿಯಾಗಬೇಕಿದೆ. ಗುಣಾತ್ಮಕ ಶಿಕ್ಷಣ ನೀಡುವ ವ್ಯವಸ್ಥೆ ಜಾರಿ ಬರಬೇಕಾಗಿದೆ. ಹೊಸ ಶಿಕ್ಷಣ ನೀತಿಯ ಬಗ್ಗೆ ಚರ್ಚೆಯಾಗಬೇಕು. ಉದ್ಯೋಗ ಸೃಷ್ಟಿ ಕಡಿಮೆಯಾದಂತೆ ಅಪರಾಧೀಕರಣ, ಕೋಮುವಾದ, ಭಯೋತ್ಪಾದನೆ, ವೇಶ್ಯಾವಾಟಿಕೆ ಮೊದಲಾದವು ಹೆಚ್ಚಾಗುತ್ತದೆ. ನಿರುದ್ಯೋಗ ಸಮಸ್ಯೆಗೂ, ಕೋಮುವಾದ, ಅಪರಾಧಕ್ಕೂ ನಂಟಿದೆ. ಶಿಕ್ಷಣದಲ್ಲಿ ತಾರತಮ್ಯ ಹೆಚ್ಚಾಗುತ್ತಿದೆ. ಶ್ರೀಮಂತರಿಗೆ ಒಂದು, ಬಡವರಿಗೆ ಇನ್ನೊಂದು ಎಂಬ ಆಯ್ಕೆಯ ಮೂಲಕ ಮಕ್ಕಳಲ್ಲಿ ಅಸಮಾನತೆ, ಅಸೂಯೆ ಸೃಷ್ಟಿಯಗುತ್ತಿದೆ. ಈ ತಾರತಮ್ಯ ನಿಲ್ಲಬೇಕದರೆ, ಸಮಾನ ಗುಣಮಟ್ಟದ ಶಿಕ್ಷಣ ಸಿಗಬೇಕು, ಶಿಕ್ಷಣಕ್ಕೆ ತಕ್ಕಂತೆ ಉದ್ಯೋಗ ಸೃಷ್ಟಿಯಾಬೇಕು&#8221; ಎಂದರು.</p>



<p><br>ಡಿವೈಎಫ್‌ಐನಂಥ ಸಂಘಟನೆಗಳಿಗೆ ಮಾತ್ರ ಇಂದು ಮೌಲ್ಯಯುತ ಯುವಜನರನ್ನು ತಯಾರು ಮಾಡಲು ಸಾಧ್ಯವಾಗುತ್ತದೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ನಾನೇ. ನಾನು ಕೂಡ ಯುವಕನಾಗಿದ್ದಾಗ ಇಂಥ ಸಂಘಟನೆಗಳ ಸಂಗಾತಿಯಾಗಿದ್ದೆ ಎಂದು ಅವರು ತಮ್ಮ ಕಾಲೇಜು ದಿನಗಳನ್ನು ಸ್ಮರಿಸಿಕೊಂಡರು.</p>



<p><br>ವಿಶ್ರಾಂತ ಜಿಲ್ಲಾಧಿಕಾರಿ (ಐಎಎಸ್), ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಎ.ಬಿ. ಇಬ್ರಾಹಿಂ ಮಾತನಾಡಿ, &#8220;ಜನರು ಭ್ರಮಾಲೋಕದಲ್ಲಿದ್ದು ಮತ ಚಲಾಯಿಸುತ್ತಿದ್ದಾರೆ. ಕರಾವಳಿಯನ್ನು ಬುದ್ಧಿವಂತರ ಜಿಲ್ಲೆ ಎಂದು ಕರೆಯಲಾಗುತ್ತದೆ. ಆದರೆ ಪ್ರಸಕ್ತ ಸ್ಥಿತಿಯಲ್ಲಿ ನಾವು ಬುದ್ಧಿವಂತರು ಮತ್ತು ಅಕ್ಷರಸ್ಥರ ನಡುವೆ ಬೇರೆಯೇ ವ್ಯಾಖ್ಯಾನವನ್ನು ನೀಡಬೇಕಾಗಿದೆ&#8221; ಎಂದರು. &#8220;ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿದ ನೆಲವಿದು, ರಾಣಿ ಅಬ್ಬಕ್ಕರ ಮಾತೃ ಪ್ರಧಾನ ಸಮಾಜವಿದು. ಇದು ನಮಗೆ ಮಾದರಿಯಾಗಬೇಕಾದ ನೆಲ. ಆದರೆ ಕಳೆದ ಮೂರು ದಶಕಗಳಲ್ಲಿ ನಮ್ಮ ಜಿಲ್ಲೆ, ನಗರ ಕುಖ್ಯಾತಿ ಪಡೆಯುತ್ತಾ ಬಂದಿರುವ ನೆಲವಾಗಿದೆ. ಹೊರ ಜಿಲ್ಲೆಯವರು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯ ಜನರನ್ನು ಪ್ರಶ್ನಿಸುವಂತಾಗಿದೆ&#8221; ಎಂದು ವಿಷಾದ ವ್ಯಕ್ತಪಡಿಸಿದರು.</p>
]]></content:encoded>
					
		
		
			</item>
		<item>
		<title>ಪತ್ರಕರ್ತರಿಗೆ ದೀಪಾವಳಿ ಗಿಫ್ಟ್ ಹೆಸರಲ್ಲಿ ಹಣ ಸಂದಾಯ ಪ್ರಕರಣ : ಡಿವೈಎಫ್ಐ ಖಂಡನೆ</title>
		<link>https://peepalmedia.com/case-of-payment-of-money-to-journalists-in-the-name-of-diwali-gift-dyfi-condemns/</link>
		
		<dc:creator><![CDATA[Peepal Media]]></dc:creator>
		<pubDate>Fri, 28 Oct 2022 16:45:54 +0000</pubDate>
				<category><![CDATA[ರಾಜಕೀಯ]]></category>
		<category><![CDATA[cmofkarnataka]]></category>
		<category><![CDATA[DYFI]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[muneer katipalla]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=13395</guid>

					<description><![CDATA[ವಾಡಿಕೆಯಂತೆ ಮುಖ್ಯಮಂತ್ರಿ ಕಛೇರಿಯಿಂದ ದೀಪಾವಳಿ ಗಿಫ್ಟ್ ನಲ್ಲಿ ಆಯ್ದ ಪತ್ರಕರ್ತರಿಗೆ ಎರಡೂವರೆ ಲಕ್ಷ ರೂಪಾಯಿ ಗಿಫ್ಟ್ ಕಳುಹಿಸಿದ ಬಗ್ಗೆ ಇಂದು ಪೀಪಲ್ ಮೀಡಿಯಾ Exclusive ವರದಿ ಮಾಡಿತ್ತು. ಈ ವರದಿಯ ಬೆನ್ನಲ್ಲೇ ಕೆಲವಷ್ಟು ವೆಬ್ ಮಾದ್ಯಮಗಳೂ ಸಹ ವರದಿ ಮಾಡಿ ಸುದ್ದಿ ಎಲ್ಲೆಡೆ ವೈರಲ್ ಕೂಡಾ ಆಗಿತ್ತು. ಹಾಗೆಯೇ ಈಗ ಈ ಬಗ್ಗೆ ಸಾಮಾಜಿಕವಾಗಿ ಎಲ್ಲೆಡೆ ವ್ಯಾಪಕ ಜನಾಕ್ರೋಶ ಕೂಡಾ ವ್ಯಕ್ತವಾಗಿದೆ. ರಾಜ್ಯದ ಮುಖ್ಯಮಂತ್ರಿ ಕಛೇರಿಯಿಂದಲೇ ಭ್ರಷ್ಟಾಚಾರಕ್ಕೆ ಮುಂದಾಗಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌ (ಡಿವೈಎಫ್ಐ) ರಾಜ್ಯಾಧ್ಯಕ್ಷ [&#8230;]]]></description>
										<content:encoded><![CDATA[
<p></p>



<p>ವಾಡಿಕೆಯಂತೆ ಮುಖ್ಯಮಂತ್ರಿ ಕಛೇರಿಯಿಂದ ದೀಪಾವಳಿ ಗಿಫ್ಟ್ ನಲ್ಲಿ ಆಯ್ದ ಪತ್ರಕರ್ತರಿಗೆ ಎರಡೂವರೆ ಲಕ್ಷ ರೂಪಾಯಿ ಗಿಫ್ಟ್ ಕಳುಹಿಸಿದ ಬಗ್ಗೆ ಇಂದು <strong>ಪೀಪಲ್ ಮೀಡಿಯಾ </strong>Exclusive ವರದಿ ಮಾಡಿತ್ತು. ಈ ವರದಿಯ ಬೆನ್ನಲ್ಲೇ ಕೆಲವಷ್ಟು ವೆಬ್ ಮಾದ್ಯಮಗಳೂ ಸಹ ವರದಿ ಮಾಡಿ ಸುದ್ದಿ ಎಲ್ಲೆಡೆ ವೈರಲ್ ಕೂಡಾ ಆಗಿತ್ತು. ಹಾಗೆಯೇ ಈಗ ಈ ಬಗ್ಗೆ ಸಾಮಾಜಿಕವಾಗಿ ಎಲ್ಲೆಡೆ ವ್ಯಾಪಕ ಜನಾಕ್ರೋಶ ಕೂಡಾ ವ್ಯಕ್ತವಾಗಿದೆ.</p>



<p>ರಾಜ್ಯದ ಮುಖ್ಯಮಂತ್ರಿ ಕಛೇರಿಯಿಂದಲೇ ಭ್ರಷ್ಟಾಚಾರಕ್ಕೆ ಮುಂದಾಗಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌ (ಡಿವೈಎಫ್ಐ) ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮತ್ತು&nbsp; ರಾಜ್ಯ ಸಮಿತಿಯು ಖಂಡನೆ ವ್ಯಕ್ತಪಡಿಸಿ, ತನಿಖೆಗೆ ಆಗ್ರಹಿಸಿದೆ.</p>



<p>ರಾಜ್ಯದ ಜನತೆಯ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುವ ಶಕ್ತಿ ಕೇಂದ್ರವಾಗಬೇಕಾದ ಮುಖ್ಯಮಂತ್ರಿಗಳ ಕಛೇರಿ ಭ್ರಷ್ಟಾಚಾರದ ಕೇಂದ್ರವಾಗಿರುವುದು ಆತಂಕಕಾರಿಯಾಗಿದೆ. ಲೋಕಾಯುಕ್ತ ಸಂಸ್ಥೆ ಇತ್ತ ಗಮನ ಹರಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.</p>



<p>ಇಂದು ಬೆಳಗ್ಗಿನಿಂದ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಕಚೇರಿಯಿಂದ, ಸಚಿವರ ಕಚೇರಿಗಳಿಂದ ರಾಜ್ಯದ ಹಲವು ಪತ್ರಕರ್ತರಿಗೆ ದೀಪಾವಳಿ ಇನಾಮಿನ ಜೊತೆಯಲ್ಲಿ ನಗದು ಹಣವನ್ನು ನೀಡಲಾಗಿದೆ ಎಂಬುದನ್ನು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ನಿಜವಾಗಿ ಘಟಿಸಿದ್ದಲ್ಲಿ ಚುನಾವಣಾ ಪೂರ್ವ ಭ್ರಷ್ಟಾಚಾರ ಎಂದು ಇದನ್ನು ಪರಿಗಣಿಸುವುದು ಕರ್ನಾಟಕದ ಸಾರ್ವಜನಿಕ ಸ್ವಾಸ್ಥ್ಯದ ದೃಷ್ಟಿಯಿಂದ ಅತ್ಯಗತ್ಯ. ತಾವು ತಕ್ಷಣ ಈ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕು ಮತ್ತು ಭ್ರಷ್ಟಾಚಾರ ನಡೆದಿರುವುದು ಹೌದೆಂದಾದರೆ ಆ ಬಗ್ಗೆ ತಕ್ಷಣ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದೆ. ರಾಜ್ಯದ ಆಡಳಿತ ಚುಕ್ಕಾಣಿಯ ಕೇಂದ್ರದ ಈ ನಡೆಯನ್ನು ರಾಜ್ಯದ ಜನತೆ ತೀವ್ರವಾಗಿ ಪ್ರತಿರೋಧಿಸಬೇಕು ಎಂದು ಡಿವೈಎಫ್ಐ ಕರೆ ನೀಡಿದೆ.</p>



<p>ಮುಖ್ಯಮಂತ್ರಿ ಕಛೇರಿಯ ಈ ನಡೆಯನ್ನು ವಿರೋಧಿಸಿ ಹಣ ಹಿಂದಿರುಗಿಸಿದ ಪತ್ರಕರ್ತರು ಹಾಗೂ ಮಾಧ್ಯಮ ಸಂಸ್ಥೆಗಳಿಗೆ ಅಭಿನಂದನೆ ಸಲ್ಲಿಸುತ್ತದೆ ಎಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.</p>
]]></content:encoded>
					
		
		
			</item>
		<item>
		<title>ಅ.18 ಸುರತ್ಕಲ್ ಅಕ್ರಮ ಟೋಲ್ ತೆರವಿಗಾಗಿ ಟೋಲ್ ಗೇಟ್ ಮುತ್ತಿಗೆ: ಕುಂದಾಪುರದಲ್ಲಿ ಪೂರ್ವಭಾವಿ ಸಭೆ</title>
		<link>https://peepalmedia.com/toll-brake-on-october-18-at-suratkal/</link>
		
		<dc:creator><![CDATA[Peepal Media]]></dc:creator>
		<pubDate>Fri, 07 Oct 2022 06:16:14 +0000</pubDate>
				<category><![CDATA[ಉಡುಪಿ]]></category>
		<category><![CDATA[DYFI]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[muneerkatipalla]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[state politics]]></category>
		<category><![CDATA[strike]]></category>
		<guid isPermaLink="false">https://peepalmedia.com/?p=9180</guid>

					<description><![CDATA[ಕುಂದಾಪುರ:ಅ.06: ಅಕ್ಟೋಬರ್‌ 18ನೇ ತಾರೀಖಿನಂದು ಸಮಾನಮನಸ್ಕ ಸಂಘಟನೆಗಳ ವತಿಯಿಂದ ನಡೆಯಲಿರುವ ಟೋಲ್ ಗೇಟ್‌ ಮುತ್ತಿಗೆ ಪ್ರತಿಭಟನೆಯ ಪೂರ್ವಭಾವಿ ಸಭೆಯು ಮುನೀರ್‌ ಕಾಟಿಪಳ್ಳ ಇವರ ನೇತೃತ್ವದಲ್ಲಿ ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ಜರುಗಿತು. ಈ ಕುರಿತು ಮಾತನಾಡಿದ ಮುನೀರ್‌ ಕಾಟಿಪಳ್ಳ ಅವರು ಹತ್ತು ಕಿ.ಮೀ ಅಂತರದಲ್ಲಿ ಎರಡು ಕಡೆ ಟೋಲ್ ಸಂಗ್ರಹಿಸುವುದು ಹೆದ್ದಾರಿ ದರೋಡೆಗೆ ಸಮ. ಈ ರೀತಿ ಪ್ರಯಾಣಿಕರನ್ನು ಬಲವಂತವಾಗಿ ಸುಲಿಗೆ ಮಾಡುವುದು ನಿಯಮಗಳ ಉಲ್ಲಂಘನೆಯಾಗಿದೆ ಎಂದು ಅವರ ಆಕ್ರೋಶ ವ್ಯಕ್ತಪಡಿಸಿದರು. ಕುಂದಾಪುರ ಕಾಮಿ೯ಕ ಭವನದ ಸಬಾಂಗಣದಲ್ಲಿ [&#8230;]]]></description>
										<content:encoded><![CDATA[
<p>ಕುಂದಾಪುರ:ಅ.06: ಅಕ್ಟೋಬರ್‌ 18ನೇ ತಾರೀಖಿನಂದು ಸಮಾನಮನಸ್ಕ ಸಂಘಟನೆಗಳ ವತಿಯಿಂದ ನಡೆಯಲಿರುವ ಟೋಲ್ ಗೇಟ್‌ ಮುತ್ತಿಗೆ ಪ್ರತಿಭಟನೆಯ ಪೂರ್ವಭಾವಿ ಸಭೆಯು ಮುನೀರ್‌ ಕಾಟಿಪಳ್ಳ ಇವರ ನೇತೃತ್ವದಲ್ಲಿ ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ಜರುಗಿತು.</p>



<p>ಈ ಕುರಿತು ಮಾತನಾಡಿದ ಮುನೀರ್‌ ಕಾಟಿಪಳ್ಳ ಅವರು ಹತ್ತು ಕಿ.ಮೀ ಅಂತರದಲ್ಲಿ ಎರಡು ಕಡೆ ಟೋಲ್ ಸಂಗ್ರಹಿಸುವುದು ಹೆದ್ದಾರಿ ದರೋಡೆಗೆ ಸಮ. ಈ ರೀತಿ ಪ್ರಯಾಣಿಕರನ್ನು ಬಲವಂತವಾಗಿ ಸುಲಿಗೆ ಮಾಡುವುದು ನಿಯಮಗಳ ಉಲ್ಲಂಘನೆಯಾಗಿದೆ ಎಂದು ಅವರ ಆಕ್ರೋಶ ವ್ಯಕ್ತಪಡಿಸಿದರು.</p>



<figure class="wp-block-image size-large"><img fetchpriority="high" decoding="async" width="1024" height="461" src="https://peepalmedia.com/wp-content/uploads/2022/10/WhatsApp-Image-2022-10-07-at-11.09.49-AM-1-1024x461.jpeg" alt="" class="wp-image-9186" srcset="https://peepalmedia.com/wp-content/uploads/2022/10/WhatsApp-Image-2022-10-07-at-11.09.49-AM-1-1024x461.jpeg 1024w, https://peepalmedia.com/wp-content/uploads/2022/10/WhatsApp-Image-2022-10-07-at-11.09.49-AM-1-300x135.jpeg 300w, https://peepalmedia.com/wp-content/uploads/2022/10/WhatsApp-Image-2022-10-07-at-11.09.49-AM-1-768x345.jpeg 768w, https://peepalmedia.com/wp-content/uploads/2022/10/WhatsApp-Image-2022-10-07-at-11.09.49-AM-1-150x67.jpeg 150w, https://peepalmedia.com/wp-content/uploads/2022/10/WhatsApp-Image-2022-10-07-at-11.09.49-AM-1-696x313.jpeg 696w, https://peepalmedia.com/wp-content/uploads/2022/10/WhatsApp-Image-2022-10-07-at-11.09.49-AM-1-1068x480.jpeg 1068w, https://peepalmedia.com/wp-content/uploads/2022/10/WhatsApp-Image-2022-10-07-at-11.09.49-AM-1.jpeg 1156w" sizes="(max-width: 1024px) 100vw, 1024px" /><figcaption>ಚಿತ್ರ: ಸುರೇಶ ಕಲ್ಲಾಗರ</figcaption></figure>



<p><br>ಕುಂದಾಪುರ ಕಾಮಿ೯ಕ ಭವನದ ಸಬಾಂಗಣದಲ್ಲಿ ಜರುಗಿದ ಟೋಲ್ ಗೇಟ್ ಮುತ್ತಿಗೆ ಹೋರಾಟದ ಯಶಸ್ಸಿಗಾಗಿ ಏಪ‌೯ಡಿಸಿದ ಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಆರು ತಿಂಗಳ ತಾತ್ಕಾಲಿಕ ಅವಧಿಗೆ ಆರಂಭಗೊಂಡ ಸುರತ್ಕಲ್ ಟೋಲ್ ಗೇಟ್, ಜನರ ಪ್ರಬಲ ವಿರೋಧದ ಹೊರತಾಗಿಯೂ ಏಳು ವಷ೯ಗಳನ್ನು ಅಕ್ರಮವಾಗಿ ಪೂರೈಸಿದೆ. ಈ ಅವಧಿಯಲ್ಲಿ ಸುರತ್ಕಲ್,ಬಿ.ಸಿ. ರೋಡ್ ಹೆದ್ದಾರಿಯಲ್ಲಿ ಸುಂಕ ಸಂಗ್ರಹದ ಹೆಸರನಲ್ಲಿ ವಾಹನ ಸವಾರರಿಂದ ವಸೂಲಿ ಮಾಡಿದ ಮೊತ್ತ ಸರಿ ಸುಮಾರು 400 ಕೋಟಿ ರೂಪಾಯಿ. ಇಷ್ಟಾದರೂ ಆಳುವವರ ಹಣದ ದಾಹ ತಣಿಯುತ್ತಿಲ್ಲ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಆರೋಪಿಸಿದರು. </p>



<p>ಹೋರಾಟ‌‌ ಸಮಿತಿಯ ಮುಖಂಡ ಸಹಕಾರಿ ‌ದುರೀಣ ಕೊಳ್ಕೆಬೈಲ್ ಕಿಶನ್ ಹೆಗ್ಡೆ ಮಾತನಾಡಿ: ಟೋಲ್ ಗೇಟ್ ಮುತ್ತಿಗೆ ಹೋರಾಟಕ್ಕೆ ಬಸ್ಸ್ ಮಾಲಕರ ಸಂಘವು ಸಂಪೂಣ೯ ಬೆಂಬಲ ಕೊಡುತ್ತದೆ‌. ಉಡುಪಿ ಜಿಲ್ಲೆಯ ಬಡ ಮದ್ಯಮ ವರ್ಗದ ಹಾಗೂ ಟ್ಯಾಕ್ಸಿ ಚಾಲಕರನ್ನು ಟೋಲ್ ಗೇಟ್ ಹಿಂದಿರುವ ಶಕ್ತಿಗಳು ನಿರಂತರ ಶೋಷಿಸುತ್ತಿವೆ. ಈ ಶೋಷಣೆಯ ವಿರುದ್ಧದ ಹೋರಾಟದಲ್ಲಿ ನೂರಾರು ಮಂದಿ ಜಿಲ್ಲೆಯಿಂದ ಭಾಗವಹಿಸುವಂತೆ ಕರೆ ಅವರು ನೀಡಿದರು.</p>


<div class="wp-block-image">
<figure class="aligncenter size-large"><img decoding="async" width="1024" height="461" src="https://peepalmedia.com/wp-content/uploads/2022/10/WhatsApp-Image-2022-10-07-at-11.09.50-AM-1024x461.jpeg" alt="" class="wp-image-9187" srcset="https://peepalmedia.com/wp-content/uploads/2022/10/WhatsApp-Image-2022-10-07-at-11.09.50-AM-1024x461.jpeg 1024w, https://peepalmedia.com/wp-content/uploads/2022/10/WhatsApp-Image-2022-10-07-at-11.09.50-AM-300x135.jpeg 300w, https://peepalmedia.com/wp-content/uploads/2022/10/WhatsApp-Image-2022-10-07-at-11.09.50-AM-768x345.jpeg 768w, https://peepalmedia.com/wp-content/uploads/2022/10/WhatsApp-Image-2022-10-07-at-11.09.50-AM-150x67.jpeg 150w, https://peepalmedia.com/wp-content/uploads/2022/10/WhatsApp-Image-2022-10-07-at-11.09.50-AM-696x313.jpeg 696w, https://peepalmedia.com/wp-content/uploads/2022/10/WhatsApp-Image-2022-10-07-at-11.09.50-AM-1068x480.jpeg 1068w, https://peepalmedia.com/wp-content/uploads/2022/10/WhatsApp-Image-2022-10-07-at-11.09.50-AM.jpeg 1156w" sizes="(max-width: 1024px) 100vw, 1024px" /><figcaption>ಚಿತ್ರ: ಸುರೇಶ ಕಲ್ಲಾಗರ</figcaption></figure></div>


<pre class="wp-block-code has-white-background-color has-background"><code>ಸಿಐಟಿಯು ಜಿಲ್ಲಾ ಪ್ರಧಾನ ಕಾಯ೯ದಶಿ೯ ಸುರೇಶ ಕಲ್ಲಾಗರ, ಚಂದ್ರಶೇಖರ.ವಿ, ರಮೇಶ್ ವಿ, ರಾಜು ದೇವಾಡಿಗ ರವಿ.ವಿ.ಎಂ.‌, ದಲಿತ ಸಂಘಷ೯ ಸಮಿತಿ ಮುಖಂಡ ನಾಗರಾಜ, ಶ್ರೀನಿವಾಸ ಮಲ್ಯಾಡಿ, ಶ್ರೀನಾಥ ಕುಲಾಲ್, ಗಣೇಶ ಮೆಂಡನ್, ಬಾಲಕೃಷ್ಣ ಎಂ, ವೆಂಕಟೇಶ್ ಕೋಣಿ ಮತ್ತು ಇತರ ಸಮಾನ ಮನಸ್ಕ ಸಂಘಟನೆಗಳ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.</code></pre>



<pre class="wp-block-code"><code>ಟೋಲ್ ಗೇಟ್ ಮುತ್ತಿಗೆ ನೇರ ಕಾಯಾ೯ಚರಣೆಯ ಅಂಗವಾಗಿ ಕುಂದಾಪುರ ಪೇಟೆಯಲ್ಲಿ ಪಾದಯಾತ್ರೆ ಮೂಲಕ ಪ್ರಚಾರ ಜಾಥಾ ನಡೆಸಲು ನಿಧ೯ರಿಸಲಾಯಿತು.</code></pre>



<p>ಇಂಟಕ್ ಮುಖಂಡ ಲಕ್ಷ್ಮಣ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>
]]></content:encoded>
					
		
		
			</item>
		<item>
		<title>ಅಕ್ಟೋಬರ್‌ ಒಂದರಂದು ಕುಂದಾಪುರದಲ್ಲಿ ಮೌನ ಮೆರವಣಿಗೆ</title>
		<link>https://peepalmedia.com/candle-march-at-kundapura/</link>
		
		<dc:creator><![CDATA[Peepal Media]]></dc:creator>
		<pubDate>Fri, 30 Sep 2022 03:41:15 +0000</pubDate>
				<category><![CDATA[ಉಡುಪಿ]]></category>
		<category><![CDATA[DSS]]></category>
		<category><![CDATA[DYFI]]></category>
		<category><![CDATA[karnataka]]></category>
		<category><![CDATA[kundapur]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[samudaya]]></category>
		<category><![CDATA[samudayakundapura]]></category>
		<guid isPermaLink="false">https://peepalmedia.com/?p=8125</guid>

					<description><![CDATA[ಕುಂದಾಪುರ: ದೇಶ ಮತ್ತು ರಾಜ್ಯದ ಹಲವೆಡೆ ನಡೆಯುತ್ತಿರುವ ಮಹಿಳೆಯರು ಮತ್ತು ಶೋಷಿತ ಜನರ ಮೇಲಿನ ದೌರ್ಜನ್ಯವನ್ನು ವಿರೋಧಿಸುವ ನಿಟ್ಟಿನಲ್ಲಿ ಕುಂದಾಪುರದ ಹಲವು ಸಮಾನ ಮನಸ್ಕ ಸಂಘಟನೆಗಳು ಒಂದಾಗಿ ಅಕ್ಟೋಬರ್‌ 1ನೇ ತಾರೀಖಿನಂದು ಸಂಜೆ 6:30ಕ್ಕೆ ಮೌನ ಮೆರವಣಿಗೆಯನ್ನು ಹಮ್ಮಿಕೊಂಡಿವೆ. ಈ ಹಿನ್ನೆಲೆಯಲ್ಲಿ ಹೋರಾಟ ಸಮಿತಿಯು ಸಾರ್ವಜನಿಕರಿಗೆ ಭಾಗವಹಿಸುವಂತೆ ಆಹ್ವಾನವನ್ನು ನೀಡಿದ್ದು, ಅಂದು ಪ್ರಜ್ಞಾವಂತ ನಾಗರಿಕರು ಜೊತೆಗಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೇಳಿಕೊಂಡಿರುತ್ತಾರೆ. ಸಮಿತಿಯ ಪ್ರಕಟಣಾ ಹೇಳಿಕೆ ಹೀಗಿದೆ: ಮೋಂಬತ್ತಿಯ ಬೆಳಕಿನಲ್ಲಿ ಆತ್ಮಸಾಕ್ಷಿಯನ್ನು ಶೋಧಿಸಿಕೊಳ್ಳೋಣ! ದೇಶಪ್ರೇಮಿ ಬಂಧುಗಳೆ,ಮಹಿಳೆಯರ ಮೇಲಿನ ಅತ್ಯಾಚಾರ [&#8230;]]]></description>
										<content:encoded><![CDATA[
<p>ಕುಂದಾಪುರ: ದೇಶ ಮತ್ತು ರಾಜ್ಯದ ಹಲವೆಡೆ ನಡೆಯುತ್ತಿರುವ ಮಹಿಳೆಯರು ಮತ್ತು ಶೋಷಿತ ಜನರ ಮೇಲಿನ ದೌರ್ಜನ್ಯವನ್ನು ವಿರೋಧಿಸುವ ನಿಟ್ಟಿನಲ್ಲಿ ಕುಂದಾಪುರದ ಹಲವು ಸಮಾನ ಮನಸ್ಕ ಸಂಘಟನೆಗಳು ಒಂದಾಗಿ ಅಕ್ಟೋಬರ್‌ 1ನೇ ತಾರೀಖಿನಂದು ಸಂಜೆ 6:30ಕ್ಕೆ ಮೌನ ಮೆರವಣಿಗೆಯನ್ನು ಹಮ್ಮಿಕೊಂಡಿವೆ.</p>



<p>ಈ ಹಿನ್ನೆಲೆಯಲ್ಲಿ ಹೋರಾಟ ಸಮಿತಿಯು ಸಾರ್ವಜನಿಕರಿಗೆ ಭಾಗವಹಿಸುವಂತೆ ಆಹ್ವಾನವನ್ನು ನೀಡಿದ್ದು, ಅಂದು ಪ್ರಜ್ಞಾವಂತ ನಾಗರಿಕರು ಜೊತೆಗಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೇಳಿಕೊಂಡಿರುತ್ತಾರೆ.</p>


<div class="wp-block-image">
<figure class="aligncenter size-large is-resized"><img decoding="async" src="https://peepalmedia.com/wp-content/uploads/2022/09/ಸಮುದಾಯ-2-682x1024.webp" alt="" class="wp-image-8127" width="386" height="574"/></figure></div>


<p>ಸಮಿತಿಯ ಪ್ರಕಟಣಾ ಹೇಳಿಕೆ ಹೀಗಿದೆ:</p>



<p>ಮೋಂಬತ್ತಿಯ ಬೆಳಕಿನಲ್ಲಿ ಆತ್ಮಸಾಕ್ಷಿಯನ್ನು ಶೋಧಿಸಿಕೊಳ್ಳೋಣ!</p>



<p>ದೇಶಪ್ರೇಮಿ ಬಂಧುಗಳೆ,<br>ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ದೇಶಾದ್ಯಂತ ಹೆಚ್ಚುತ್ತಿವೆ. ದಲಿತ ಮಹಿಳೆಯರ ಮೇಲಿನ ಪ್ರತಿವರ್ಷ ವರದಿಯಾಗುವ ಅತ್ಯಾಚಾರ ಪ್ರಕರಣಗಳು ಹತ್ತು ವರ್ಷಗಳ ಹಿಂದಿಗಿಂತ ಈಗ ನಲವತ್ತೈದು ಶೇಕಡಾದಷ್ಟು ಹೆಚ್ಚಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆ ಸಂಸ್ಥೆಯ ಅಂಕಿಸಂಖ್ಯೆಗಳು ತಿಳಿಸುತ್ತವೆ. ಅಸ್ಪ್ರಶ್ಯತೆ, ಜಾತಿ ನಿಂದನೆಯ ಪ್ರಕರಣಗಳೂ ಹೆಚ್ಚುತ್ತಿವೆ. ತನ್ನ ನೀರಿನ ಮಡಕೆಯನ್ನು ಮುಟ್ಟಿದ್ದಕ್ಕಾಗಿ ಉತ್ತರ ಪ್ರದೇಶದ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಹೊಡೆದು ಕೊಂದಿದ್ದಾನೆ. ದೇವರ ಗುಜ್ಜು ಕೋಲನ್ನು ಎತ್ತಿದ್ದಕ್ಕಾಗಿ ಕರ್ನಾಟಕದಲ್ಲಿ ದಲಿತ ಹುಡುಗನೊಬ್ಬನನ್ನು ತಳಿಸಿ ಆ ಕುಟುಂಬಕ್ಕೆ ದಂಡ ವಿಧಿಸಿದ ಘಟನೆ ನಡೆದಿದೆ. ನಿತ್ಯವೂ ಇಂತಹ ನೂರಾರು ಘಟನೆಗಳು ನಡೆಯುತ್ತವೆ. ಎಲ್ಲವೂ ವರದಿಯಾಗುವುದಿಲ್ಲ. ಜಾತಿ- ಮತಗಳ ನಡುವೆ ಅಪನಂಬಿಕೆ ಉಂಟಾಗುವಂತಹ ದ್ವೇಷದ ವಾತಾವರಣವು ಉಂಟಾಗಿದೆ. ಸಹಬಾಳ್ವೆಯ ಭಾರತವನ್ನೀಗ ಮರುಕಟ್ಟಬೇಕಿದೆ. ಅಂತಹ ದೌಡೇನಿಲ್ಲ. ನಿಧಾನವಾಗಿ ಆದರೆ, ನಿಖರವಾಗಿ ನೆಮ್ಮದಿಯ ನಾಡನ್ನು ಕಟ್ಟುವ ಗುರಿ ತಲುಪುವುದಕ್ಕಾಗಿ, ನಾವು ಆತ್ಮಸಾಕ್ಷಿಯನ್ನು‌ ಪ್ರಶ್ನಿಸಿಕೊಳ್ಳಬೇಕಾಗಿದೆ. ಅಸಮಾನತೆ, ಅಸ್ಪ್ರಶ್ಯತೆ, ಅಸಹಿಷ್ಣುತೆ, ಅತ್ಯಾಚಾರಗಳು ನಮ್ಮನ್ನು ತಲೆತಗ್ಗಿಸುವಂತೆ ಮಾಡಿವೆ ಎಂಬುದನ್ನು ಬಹಿರಂಗವಾಗಿ ಹೇಳಿಕೊಳ್ಳಬೇಕಾಗಿದೆ.<br>ಈ ದೇಶದ ಜನರು ಸಂವಿಧಾನದ ಪೀಠಿಕೆಯಲ್ಲಿ ನೀಡಿರುವ ವಾಗ್ದಾನದಂತೆ ಸಮಾನತೆಯ, ಶೋಷಣೆರಹಿತ ಸಮಾಜವನ್ನು ಕಟ್ಟಲು ನಾವು ಕಟಿಬದ್ಧರಾಗಬೇಕಿದೆ. ಭ್ರಾತೃತ್ವದ ಭಾರತವನ್ನು ಹಂಬಲಿಸುವ ಎಲ್ಲರೂ ಶನಿವಾರ, ಅಕ್ಟೋಬರ್ 1 ರಂದು ಸಂಜೆ 6.30 ಕ್ಕೆ ಮೋಂಬತ್ತಿ ಹಿಡಿದು ಮೌನ ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕಾಗಿ ಕೋರಿಕೆ.<br>ಸ್ಥಳ: ಶಾಸ್ತ್ರಿ ವೃತ್ತದಿಂದ ಪಾರಿಜಾತ ಸರ್ಕಲ್, ಕುಂದಾಪುರ</p>



<p>ದಯವಿಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಜೊತೆಗೂಡಿ.</p>


<div class="wp-block-image">
<figure class="aligncenter size-large is-resized"><img loading="lazy" decoding="async" src="https://peepalmedia.com/wp-content/uploads/2022/09/ಸಮುದಾಯ-682x1024.webp" alt="" class="wp-image-8126" width="371" height="553"/></figure></div>


<p>  </p>
]]></content:encoded>
					
		
		
			</item>
	</channel>
</rss>
