<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Electricity price hike &#8211; Peepal Media</title>
	<atom:link href="https://peepalmedia.com/tag/electricity-price-hike/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 28 Sep 2022 11:13:29 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Electricity price hike &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ವಿದ್ಯುತ್‌ ಬೆಲೆ ಏರಿಕೆಗೆ ಭಾಸ್ಕರ್‌ ರಾವ್‌ ವಿರೋಧ</title>
		<link>https://peepalmedia.com/bhaskar-rao-opposes-electricity-price-hike/</link>
		
		<dc:creator><![CDATA[Peepal Media]]></dc:creator>
		<pubDate>Wed, 28 Sep 2022 09:28:21 +0000</pubDate>
				<category><![CDATA[ರಾಜ್ಯ]]></category>
		<category><![CDATA[AAP]]></category>
		<category><![CDATA[bengalure]]></category>
		<category><![CDATA[Bhaskar Rao]]></category>
		<category><![CDATA[Electricity price hike]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=7726</guid>

					<description><![CDATA[ಬೆಂಗಳೂರು: ಅಕ್ಟೋಬರ್‌ 1ರಿಂದ ವಿದ್ಯುತ್‌ ದರವನ್ನು ಏರಿಕೆ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಶೀಘ್ರವೇ ಹಿಂಪಡೆಯಬೇಕು ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಆಗ್ರಹಿಸಿದರು. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಲ್ಲಿದ್ದಲು ಬೆಲೆಯಲ್ಲಿ ಸಣ್ಣ ಏರಿಕೆಯಾಗಿದ್ದನ್ನೇ ನೆಪ ಮಾಡಿಕೊಂಡು ಜನರಿಗೆ ವಿದ್ಯುತ್‌ ಶಾಕ್‌ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ಕಲಿದ್ದಲು ಬೆಲೆ ಇಳಿಕೆಯಾದಾಗ ಸರ್ಕಾರವು ವಿದ್ಯುತ್‌ ದರವನ್ನು ಇಳಿಕೆ ಮಾಡುವುದಿಲ್ಲ. ಹೀಗಿರುವಾಗ [&#8230;]]]></description>
										<content:encoded><![CDATA[
<p style="font-size:21px"><strong>ಬೆಂಗಳೂರು:</strong> ಅಕ್ಟೋಬರ್‌ 1ರಿಂದ ವಿದ್ಯುತ್‌ ದರವನ್ನು ಏರಿಕೆ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಶೀಘ್ರವೇ ಹಿಂಪಡೆಯಬೇಕು ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಆಗ್ರಹಿಸಿದರು.</p>



<p style="font-size:21px">ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಲ್ಲಿದ್ದಲು ಬೆಲೆಯಲ್ಲಿ ಸಣ್ಣ ಏರಿಕೆಯಾಗಿದ್ದನ್ನೇ ನೆಪ ಮಾಡಿಕೊಂಡು ಜನರಿಗೆ ವಿದ್ಯುತ್‌ ಶಾಕ್‌ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ಕಲಿದ್ದಲು ಬೆಲೆ ಇಳಿಕೆಯಾದಾಗ ಸರ್ಕಾರವು ವಿದ್ಯುತ್‌ ದರವನ್ನು ಇಳಿಕೆ ಮಾಡುವುದಿಲ್ಲ. ಹೀಗಿರುವಾಗ ಕಲ್ಲಿದ್ದಲು ಬೆಲೆ ಏರಿಕೆಯಾದಾಗ ವಿದ್ಯುತ್‌ ದರ ಏರಿಕೆ ಮಾಡುವುದು ಎಷ್ಟು ಸರಿ? ಸರ್ಕಾರಿ ಕಚೇರಿಗಳು ಬಾಕಿ ಉಳಿಸಿಕೊಂಡಿರುವ ಸಾವಿರಾರು ಕೋಟಿ ರೂಪಾಯಿಯನ್ನು ವಸೂಲಿ ಮಾಡದ ಕಾರಣಕ್ಕೆ ವಿದ್ಯುತ್‌ ಕಂಪನಿಗಳು ನಷ್ಟ ಅನುಭವಿಸುತ್ತಿವೆ. ಆ ನಷ್ಟವನ್ನು ಜನರ ತಲೆಗೆ ಕಟ್ಟುವುದು ಸರ್ಕಾರದ ಅಸಮರ್ಥತೆಯನ್ನು ತೋರಿಸುತ್ತಿದೆ ಎಂದು ಹೇಳಿದರು.</p>



<p style="font-size:21px">ದೆಹಲಿಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತದೆ. ಆದರೂ ದೆಹಲಿಯ ಆಮ್‌ ಆದ್ಮಿ ಪಾರ್ಟಿ ಸರ್ಕಾರವು ಪ್ರತಿ ಕುಟುಂಬಕ್ಕೂ ತಿಂಗಳಿಗೆ 200 ಯೂನಿಟ್‌ ಉಚಿತ ವಿದ್ಯುತ್‌ ಪೂರೈಸುತ್ತಿದೆ. ಸಿಎಂ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಎಎಪಿ ಸರ್ಕಾರ ಬಂದ ನಂತರ ಅಲ್ಲಿ ವಿದ್ಯುತ್‌ ದರವನ್ನು ಏರಿಕೆ ಮಾಡಲಾಗಿಲ್ಲ. ದೆಹಲಿಯಲ್ಲಿ ಸಾಧ್ಯವಾಗಿದ್ದು ಕರ್ನಾಟಕದಲ್ಲಿ ಏಕೆ ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ನಾವೆಲ್ಲ ಗಂಭೀರವಾಗಿ ಯೋಚಿಸಬೇಕಿದೆ. ಜನರು ಪಾವತಿಸುವ ಶುಲ್ಕವು ಭ್ರಷ್ಟರ ಪಾಲಾಗುತ್ತಿದ್ದರೆ, ಎಷ್ಟೇ ಶುಲ್ಕ ಏರಿಕೆ ಮಾಡಿದರೂ ಸಂಸ್ಥೆಗಳು ನಷ್ಟದಲ್ಲೇ ಮುಂದುವರಿಯುತ್ತವೆ ಎಂದು ಭಾಸ್ಕರ್‌ ರಾವ್‌ ಹೇಳಿದರು.</p>



<p style="font-size:21px">ಸಿಎಂ ಬೊಮ್ಮಾಯಿಯವರ ಬಿಜೆಪಿ ಸರ್ಕಾರವು ಕಳೆದ ಒಂದು ವರ್ಷದಲ್ಲಿ ಮೂರನೇ ಸಲ ವಿದ್ಯುತ್‌ ದರ ಏರಿಕೆ ಮಾಡುತ್ತಿದೆ. ಪದೇ-ಪದೇ ವಿದ್ಯುತ್‌ ದರ ಏರಿಕೆ ಮಾಡಿ ಜನಸಾಮಾನ್ಯರ ಜೊತೆ ಚೆಲ್ಲಾಟವಾಡುತ್ತಿರುವ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸಬೇಕು. ಅಗತ್ಯ ವಸ್ತುಗಳು ಹಾಗೂ ಅಗತ್ಯ ಸೌಲಭ್ಯಗಳ ಬೆಲೆ ಏರಿಕೆಯು ಮುಂದಿನ ಚುನಾವಣೆಗಳಲ್ಲಿ ಪ್ರಮುಖ ವಿಷಯವಾಗಬೇಕು ಎಂದು ಭಾಸ್ಕರ್‌ ರಾವ್‌ ಅಭಿಪ್ರಾಯಪಟ್ಟರು.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ವಿದ್ಯುತ್‌ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಹೆಚ್‌.ಡಿ.ಕೆ ಗರಂ</title>
		<link>https://peepalmedia.com/electricity-price-hike-in-the-state-hdk-garam-against-the-government/</link>
		
		<dc:creator><![CDATA[Peepal Media]]></dc:creator>
		<pubDate>Sat, 24 Sep 2022 11:42:49 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[Electricity price hike]]></category>
		<category><![CDATA[H D K]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=6972</guid>

					<description><![CDATA[ಬೆಂಗಳೂರು: ರಾಜ್ಯದಲ್ಲಿ ವಿದ್ಯತ್‌ ಬೆಲೆ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಕುರಿತು ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ &#160;ಹೆಚ್‌.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ [&#8230;]]]></description>
										<content:encoded><![CDATA[
<p class="has-medium-font-size"><strong>ಬೆಂಗಳೂರು:</strong> ರಾಜ್ಯದಲ್ಲಿ ವಿದ್ಯತ್‌ ಬೆಲೆ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಕುರಿತು ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ &nbsp;ಹೆಚ್‌.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>



<p class="has-medium-font-size">ಈ ಕುರಿತು ಟ್ವೀಟ್‌ ಮಾಡಿರುವ ಅವರು, ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಹೆಚ್‌.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ .</p>



<p class="has-medium-font-size">ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್‌ ದರ ಏರಿಕೆ ಆಗಿದೆ! ಏನೀ ಹುನ್ನಾರ?ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.‌ ಪ್ರತಿ ಯೂನಿಟ್‌ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ &amp; ಖಂಡನೀಯ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.</p>



<p class="has-medium-font-size">ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್‌ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.</p>



<p class="has-medium-font-size">ರಾಜ್ಯ ಬಿಜೆಪಿ ಸರ್ಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಬಜೆಪಿ ಸರ್ಕಾರದ ಹಾದಿಯಲ್ಲೇ ರಾಜ್ಯ ಬಿಜೆಪಿ ಸರಕಾರವೂ ಸಾಗಿದೆ. ಹೀಗಾಗಿ ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ ಎಂದು ಕುಮಾರಸ್ವಾಮಿ ಅವರು ದೂರಿದ್ದಾರೆ.</p>
]]></content:encoded>
					
		
		
			</item>
	</channel>
</rss>
