<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Equality &#8211; Peepal Media</title>
	<atom:link href="https://peepalmedia.com/tag/equality/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 06 Mar 2025 16:05:19 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Equality &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಪ್ರಜಾಪ್ರಭುತ್ವದ ಆಶಯಗಳನ್ನು ಪೋಷಿಸುವ ಜಾಗದಲ್ಲಿಯೇ ಸಮಾನತೆ ಇಲ್ಲವಾಗಿದೆ-ಪೂಜಾ ಸಿಂಗೆ</title>
		<link>https://peepalmedia.com/equality-is-lacking-in-the-very-place-that-fosters-the-ideals-of-democracy/</link>
		
		<dc:creator><![CDATA[Peepal Media]]></dc:creator>
		<pubDate>Mon, 03 Mar 2025 12:41:38 +0000</pubDate>
				<category><![CDATA[ವಿಶೇಷ]]></category>
		<category><![CDATA[ಹೆಣ್ಣೋಟ]]></category>
		<category><![CDATA[democracy]]></category>
		<category><![CDATA[Equality]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Woman&#039;s right]]></category>
		<category><![CDATA[women empowerment]]></category>
		<guid isPermaLink="false">https://peepalmedia.com/?p=54691</guid>

					<description><![CDATA[‘ಶತಮಾನಗಳಿಂದ ಜಾತಿಯಿಂದ, ಹೆಣ್ಣು ಎಂಬ ಕಾರಣದಿಂದ ಇವತ್ತಿನವರೆಗೂ ಅವಳು ದ್ವಿತೀಯ ದರ್ಜೆಯ ಪ್ರಜೆಯೆ ಹೊರತು ಈ ಸಮಾಜದಲ್ಲಿ ಮಹಿಳೆಯು ಪ್ರಮುಖಳಾಗಿ ಕಾಣಿಸಿಕೊಳ್ಳುವುದೇ ಇಲ್ಲ’ ನಾಯಕತ್ವ ಪದದಲ್ಲಿ ನಾಯಕ‌ ಮಾತ್ರವಿದ್ದು,&#160; ನಾಯಕಿ ಕಾಣೆಯಾಗಿದ್ದಾಳೆ. ಆದರೂ, ಹೆಣ್ಣೊಬ್ಬಳ ಕಾಳಜಿ ನಾಯಕತ್ವದಲ್ಲಿಯೇ ಉಳಿದಿದೆ. ಪಿತೃಪ್ರಧಾನವಾದ ಸಮಾಜದಲ್ಲಿ ಹೆಣ್ಣು ಗಂಡಿನ ನಡುವೆ ಲಿಂಗ ತಾರತಮ್ಯ ಯತಾವತ್ತಾಗಿ ಪಾಲಿಸುವ ವ್ಯವಸ್ಥೆ ಜಾರಿಯಲ್ಲಿದೆ ಎಂಬುದಕ್ಕೆ ವಿಧಾನ ಸೌಧದ ಆವರಣದಲ್ಲಿ ಫೆಬ್ರುವರಿ 28 ರ ಮಧ್ಯಾಹ್ನ ಏರ್ಪಡಿಸಿದ್ದ, &#8216;ನಾಯಕತ್ವ ಇಂದು ಮತ್ತು ನಾಳೆʼ ಅನ್ನುವ ವಿಚಾರ ಸಂಕಿರಣದಲ್ಲಿ [&#8230;]]]></description>
										<content:encoded><![CDATA[
<p><strong><em><mark style="background-color:rgba(0, 0, 0, 0)" class="has-inline-color has-vivid-cyan-blue-color">‘ಶತಮಾನಗಳಿಂದ ಜಾತಿಯಿಂದ, ಹೆಣ್ಣು ಎಂಬ ಕಾರಣದಿಂದ ಇವತ್ತಿನವರೆಗೂ ಅವಳು ದ್ವಿತೀಯ ದರ್ಜೆಯ ಪ್ರಜೆಯೆ ಹೊರತು ಈ ಸಮಾಜದಲ್ಲಿ ಮಹಿಳೆಯು ಪ್ರಮುಖಳಾಗಿ ಕಾಣಿಸಿಕೊಳ್ಳುವುದೇ ಇಲ್ಲ’</mark></em></strong></p>



<p>ನಾಯಕತ್ವ ಪದದಲ್ಲಿ ನಾಯಕ‌ ಮಾತ್ರವಿದ್ದು,&nbsp; ನಾಯಕಿ ಕಾಣೆಯಾಗಿದ್ದಾಳೆ. ಆದರೂ, ಹೆಣ್ಣೊಬ್ಬಳ ಕಾಳಜಿ ನಾಯಕತ್ವದಲ್ಲಿಯೇ ಉಳಿದಿದೆ. ಪಿತೃಪ್ರಧಾನವಾದ ಸಮಾಜದಲ್ಲಿ ಹೆಣ್ಣು ಗಂಡಿನ ನಡುವೆ ಲಿಂಗ ತಾರತಮ್ಯ ಯತಾವತ್ತಾಗಿ ಪಾಲಿಸುವ ವ್ಯವಸ್ಥೆ ಜಾರಿಯಲ್ಲಿದೆ ಎಂಬುದಕ್ಕೆ ವಿಧಾನ ಸೌಧದ ಆವರಣದಲ್ಲಿ ಫೆಬ್ರುವರಿ 28 ರ ಮಧ್ಯಾಹ್ನ ಏರ್ಪಡಿಸಿದ್ದ, &#8216;ನಾಯಕತ್ವ ಇಂದು ಮತ್ತು ನಾಳೆʼ ಅನ್ನುವ ವಿಚಾರ ಸಂಕಿರಣದಲ್ಲಿ ಸಾಬೀತಾಗಿದ್ದೇ ಶೋಚನೀಯ.&nbsp;</p>



<p>ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸುನಿತಾ ವಿಲಿಯಮ್ಸ್, ಕಲ್ಪನಾ ಚಾವ್ಲಾ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ, ಚೆನ್ನ ಭೈರಾದೇವಿ, ಬೆಳವಾಡಿ ಮಲ್ಲಮ್ಮ, ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಇಂದಿನ ರಾಷ್ಟ್ರಾಧ್ಯಕ್ಷೆ ದ್ರೌಪದಿ ಮುರ್ಮು, ಮಮತಾ ಬ್ಯಾನರ್ಜಿ, ಪಿ. ಟಿ. ಉಷಾ, ಪಿ.ವಿ. ಸಿಂಧು, ಮಾಯಾವತಿ ಹೀಗೆ ಅನೇಕ ನಾಯಕಿರಿಯರಿದ್ದರೂ ಸಹ ವೇದಿಕೆಯ ಮೇಲಿದ್ದ ಸಂಪನ್ಮೂಲ ನಾಯಕರ ನಾಲಿಗೆ ಮೇಲೆ ಮಹಿಳಾ ಮಣಿಯರ ಮುಂದಾಳತ್ವದ ಬಗ್ಗೆ ತಪ್ಪಿಯೂ ಹೊರಳಲೇ ಇಲ್ಲ.</p>



<p>ಈ ಗೋಷ್ಠಿಯುದ್ದಕ್ಕೂ, ಪುರುಷರಿಂದ-ಪುರುಷರಿಗಾಗಿ, ಪುರುಷರೇ ನಡೆಸಿದ ಮಾತಿನ ಚಾವಡಿಯಂತೆ ಕಾಣಿಸಿತು. ಪಕ್ಕದಲ್ಲಿಯೇ ಉತ್ಸವಮೂರ್ತಿಯಂತೆ ಮಹಿಳೆಯೊಬ್ಬರು ಕುಳಿತುಕೊಂಡಿದ್ದರು. ಇಡೀ ಗೋಷ್ಠಿ ಬರೀ ಪುರುಷ ನಾಯಕತ್ವದ ಬಗ್ಗೆಯೇ. &#8216;ನಾಯಕನಾದವನಿಗೆ ಸ್ವಾಭಿಮಾನವಿರಬೇಕು, ಸ್ವಾರ್ಥವಿರಬಾರದು, ಎದೆ ಗುಂದಬಾರದು, ಸಮಾಜದ ಮೇಲೆ ಕಳಕಳಿ ಇರಬೇಕು&#8217; ಎನ್ನುವುದರ ಮೂಲಕ ಕುವೆಂಪು, ಕೊಲಂಬಸ್, ಗಾಂಧಿ, ನಂಜುಂಡಸ್ವಾಮಿ ಹೀಗೆ ಪುರುಷರದ್ದೇ ಉದಾಹರಣೆಗಳು ನೀಡಿದ್ದು ಬೇಸರ ತರಿಸಿತು.&nbsp;</p>



<p>ಮಾತುಗಳು ಮುಗಿದ ನಂತರ ಸಂವಾದ ಏರ್ಪಡಿಸಿದ್ದರು, ಮಹಿಳಾ ನಾಯಕಿಯರ ಪರವಾಗಿ ಮಾತನಾಡುವರು ಯಾರು ಇಲ್ಲವೆಂಬ ಪ್ರಶ್ನೆಗೆ ಥಟ್ಟಂತ ಉತ್ತರ ಬಂದಿದ್ದು, ಇಷ್ಟೆಲ್ಲ ಅಚ್ಚಕಟ್ಟಾಗಿ ಕಾರ್ಯಕ್ರಮ ನಿರ್ವಹಿಸುತ್ತಿರುವವರು ಮಹಿಳೆಯರೆ ಅವರೆ ನಿಮ್ಮ ಮಾತಿಗೆ ಉತ್ತರಿಸುತ್ತಾರೆ ಎಂದು ಮೈಕ್ ಅವರಿಗೆ ಕೊಟ್ಟರು. ಅವರು ಬೇರೇನೊ ಉತ್ತರ ನೀಡುವವರು ಎಂಬ ನಿರೀಕ್ಷೆ ಇತ್ತು. ಆದರೆ, ಹುಸಿಯಾಯಿತು.</p>



<p>&#8216;ನಾಯಕತ್ವ ಎನ್ನುವ ಪದದಲ್ಲಿಯೇ ನಾಯಕಿ ಇದ್ದಾಳೆ. ನೀವು ಬೇರೆ ಬೇರೆಯಾಗಿ ನೋಡ್ತಾ ಇದಿರಾ. ಗಂಡು &#8211; ಹೆಣ್ಣು ಸಮಾನರು ಆದರೆ, ಇವತ್ತಿನ ಶಾಲಾ, ಕಾಲೇಜುಗಳಲ್ಲಿ ಜಂಡರ್ ಬಗ್ಗೆ ತಪ್ಪಾಗಿ ಅರ್ಥೈಸುತ್ತಿದ್ದಾರೆ. ನನ್ನ ಅನುಭವದಲ್ಲಿ ಹೇಳಬೇಕೆಂದರೆ ಯಾವುದೇ ಅಸಮಾನತೆ ಇಲ್ಲ&#8217; ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಯವರ ಮಾತು ತುಂಬ ಚಿಂತೆಗೀಡು ಮಾಡಿತು. ಬೇರೆ ಕಡೆಗಳೆಲ್ಲ ಕಾರ್ಯಕ್ರಮಗಳಲ್ಲಿ ಮಹಿಳೆಯರು ಕಾಣಿಸುವುದೇ ಇಲ್ಲ. </p>



<p>ಆದರೆ, ಅವರಿಗೆಲ್ಲ ಅದು ಗಂಭೀರದ ವಿಷಯವೇ ಅಲ್ಲ. ಅಷ್ಟು ನಿರ್ಲಕ್ಷ್ಯಕ್ಕೊಳಗಾಗಿದ್ದಾಳೆ. ಆದರೆ, ವಿಧಾನಸೌಧ ಎಂಬುದು ಸಮಾನತೆಯ ಜಾಗ, ಇಲ್ಲಿ ಮಹಿಳಾ ನಾಯಕಿಯರೂ ಇದ್ದಾರೆ. ಪ್ರಜಾಪ್ರಭುತ್ವದ ಆಶಯಗಳನ್ನು ಪೋಷಿಸುವ ಜಾಗದಲ್ಲಿಯೇ ಮಹಿಳಾ ಮುಂದಾಳತ್ವದ ಕುರಿತು ಮಾತನಾಡಲು ಪ್ರತಿನಿಧಿಯಾಗಿ ಯಾರು ಇರಲ್ಲಿಲ್ಲ.&nbsp;</p>



<p>ಕಾರ್ಯಕ್ರಮಕ್ಕೆ ಬರುವ ಮುಂಚಿತವಾಗಿ, ಆಮಂತ್ರಣ ಪತ್ರಿಕೆ ನೋಡಿದ ಮೇಲಾದರು ಸಂಪನ್ಮೂಲ ವ್ಯಕ್ತಿಗಳಲ್ಲಿ ಸಣ್ಣ ಪ್ರಶ್ನೆ ಮೂಡಬೇಕಾಗಿತ್ತು. ಮಹಿಳೆಯರ ಪ್ರಾತಿನಿಧ್ಯವಿಲ್ಲದ ಕಾರ್ಯಕ್ರಮಕ್ಕೆ ನಾವು ಹೋಗುವುದರ ಕುರಿತು ಯೋಚಿಸಬೇಕಿತ್ತು.&nbsp;</p>



<p>ಈ ಸಮಾಜ ಎಷ್ಟು ಟ್ರೈನ್ ಮಾಡಿದೆ ಎಂದರೆ ಹೆಣ್ಣೊಬ್ಬಳು ತನ್ನ ವಿರುದ್ಧವಾಗಿ ತಾನೇ ಮಾತಾಡಿಕೊಂಡರು ಅದು ತಪ್ಪು ಅಂತ ಕಾಣಿಸುವುದಿಲ್ಲ. ಯಾಕೆಂದರೆ, ಬೆಟ್ಟದ ಮೇಲೆ ನಿಂತು ಕೆಳಗಡೆ ನೋಡಿದಾಗ ಕಾಣುವುದು ಸಪಾಟಾಗಿಯೇ; ಬೆಟ್ಟದ ಕೆಳಗಿಳಿದು ಬಂದು ನೋಡಿದಾಗ ಇಲ್ಲಿರುವ ಅಸಮಾನತೆ ಕಾಣುತ್ತೆ. </p>



<p>ಆದರೂ, ಶತಮಾನಗಳಿಂದ ಜಾತಿಯಿಂದ, ಹೆಣ್ಣು ಎಂಬ ಕಾರಣದಿಂದ ಇವತ್ತಿನವರೆಗೂ ಅವಳು ದ್ವಿತೀಯ ದರ್ಜೆಯ ಪ್ರಜೆಯೆ ಹೊರತು ಈ ಸಮಾಜದಲ್ಲಿ ಮಹಿಳೆಯು ಪ್ರಮುಖಳಾಗಿ ಕಾಣಿಸಿಕೊಳ್ಳುವುದೇ ಇಲ್ಲ.&nbsp;</p>



<p>ಬಹುತೇಕ ಮಹಿಳೆಯರು ಕೇವಲ ಪ್ರಾರ್ಥನಾ ಗೀತೆ, ಸ್ವಾಗತ ಗೀತೆ, ನಿರೂಪಣೆ, ಬೊಕ್ಕೆ ಕೊಡುವುದು ಇಂತಹವುಗಳಲ್ಲೇ ತೃಪ್ತಿಪಟ್ಟುಕೊಳ್ಳುತ್ತಿದ್ದಾರೆ. ಆದರೆ, ವೇದಿಕೆಗಳ ಮೇಲೆ ಕಾಣಿಸಿಕೊಳ್ಳುವುದು ವಿರಳ. ಒಂದು ವೇಳೆ ಕಾಣಿಸಿಕೊಂಡರೂ ಉತ್ಸವ ಮೂರ್ತಿಗಳಾಗಿರುತ್ತಾರೆ.</p>



<p><strong>ಪೂಜಾ ಸಿಂಗೆ, ಕಲಬುರಗಿ<br></strong></p>



<p></p>
]]></content:encoded>
					
		
		
			</item>
		<item>
		<title>ಅಂಬೇಡ್ಕರ್ ಅವರ ಸಮಾನತೆಯ ಚಿಂತನೆಗೆ ನಾವು ಬಲ ತುಂಬಬೇಕು : ಸಿದ್ದರಾಮಯ್ಯ</title>
		<link>https://peepalmedia.com/we-should-strengthen-ambedkars-thought-of-equality-siddaramaiah/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 17 Nov 2022 11:10:17 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[DR B R AMBEDKAR]]></category>
		<category><![CDATA[Equality]]></category>
		<category><![CDATA[india]]></category>
		<category><![CDATA[indian constitution]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[RSS]]></category>
		<category><![CDATA[siddaramayya]]></category>
		<guid isPermaLink="false">https://peepalmedia.com/?p=15766</guid>

					<description><![CDATA[ಬೆಂಗಳೂರು: ಡಾ. ಬಿ.ಆರ್‌ ಅಂಬೇಡ್ಕರ್‌ ಅವರು ನಮ್ಮೆಲ್ಲರಿಗೂ ಸಮಾನತೆ ತಂದುಕೊಡುವುದಾದರೆ ಅವರ ಚಿಂತನೆಗಳಿಗೆ ನಾವು ಬಲ ತುಂಬಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಬೆಂಗಳೂರಿನ ಡಾ.ಬಿ,ಆರ್‌ ಅಂಬೇಡ್ಕರ್‌ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪ್ರಜಾಪ್ರಭುತ್ವದ ಬಲವರ್ದನೆ ಎಂಬ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಪ್ರಸ್ತುತ ಪ್ರಜಾಪ್ರಭುತ್ವ ವ್ಯವಸ್ಥೆ, ಅದರ ಹುಟ್ಟು ಮತ್ತು ಬೆಳವಣಿಗೆ, ಈಗಿನ ಸವಾಲುಗಳು ಮತ್ತು ಮುಂದೇನು ಮಾಡಬೇಕು ಎಂಬ ಬಗ್ಗೆ ಶಿವಮಲ್ಲು ಅವರು ಬಹಳಷ್ಟು ಅಧ್ಯಯನ ನಡೆಸಿ, ಪುಸ್ತಕ [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ಡಾ. ಬಿ.ಆರ್‌ ಅಂಬೇಡ್ಕರ್‌ ಅವರು ನಮ್ಮೆಲ್ಲರಿಗೂ ಸಮಾನತೆ ತಂದುಕೊಡುವುದಾದರೆ ಅವರ ಚಿಂತನೆಗಳಿಗೆ ನಾವು ಬಲ ತುಂಬಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>



<p>ಈ ಕುರಿತು ಬೆಂಗಳೂರಿನ ಡಾ.ಬಿ,ಆರ್‌ ಅಂಬೇಡ್ಕರ್‌ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪ್ರಜಾಪ್ರಭುತ್ವದ ಬಲವರ್ದನೆ ಎಂಬ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಪ್ರಸ್ತುತ ಪ್ರಜಾಪ್ರಭುತ್ವ ವ್ಯವಸ್ಥೆ, ಅದರ ಹುಟ್ಟು ಮತ್ತು ಬೆಳವಣಿಗೆ, ಈಗಿನ ಸವಾಲುಗಳು ಮತ್ತು ಮುಂದೇನು ಮಾಡಬೇಕು ಎಂಬ ಬಗ್ಗೆ ಶಿವಮಲ್ಲು ಅವರು ಬಹಳಷ್ಟು ಅಧ್ಯಯನ ನಡೆಸಿ, ಪುಸ್ತಕ ರಚನೆ ಮಾಡಿದ್ದಾರೆ. ಇಂಜಿನಿಯರಿಂಗ್‌ ಪದವೀಧರರಾದ ಶಿವಮಲ್ಲು ಅವರು ರಾಜಕಾರಣದಲ್ಲಿ ಭಾಗವಹಿಸದೆ ಇದ್ದರೂ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ತುಂಬಾ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಎಂಬುದು ಅರ್ಥವಾಗುತ್ತದೆ. ಬಹಳ ಅಳೆದು ತೂಗಿ ಈ ದೇಶಕ್ಕೆ ಪ್ರಜಾಪ್ರಭುತ್ವ ಅಗತ್ಯವಿದೆ ಎಂಬ ಕಾರಣಕ್ಕೆ ಒಪ್ಪಿಕೊಂಡು, ಅಳವಡಿಸಿಕೊಂಡಿದ್ದೇವೆ. ಸ್ವಾತಂತ್ಯ್ರ ನಂತರ ನಮ್ಮ ಸಂವಿಧಾನ ರಚನೆಯಾಗಿದ್ದು, ನಮ್ಮನ್ನು ನಾವೇ ಆಳಿಕೊಳ್ಳುವುದು ಪ್ರಜಾಪ್ರಭುತ್ವ ಎಂದರು.</p>



<p>ಬಾಬಾ ಸಾಹೇಬ್‌ ಅಂಬೇಡ್ಕರರು ಸಂವಿಧಾನ ಸಭೆಯಲ್ಲಿ ಭಾಷಣ ಮಾಡುವಾಗ, ನಾವೇನೋ ಇಂದು ಸಂವಿಧಾನ ರಚನೆ ಮಾಡಿಕೊಂಡಿದ್ದೇವೆ, 1950 ಜನವರಿ 26ರಿಂದ ಈ ಸಂವಿಧಾನ ಜಾರಿಗೆ ಬರಲಿದೆ. ಅಂದಿನಿಂದ ನಾವು ವೈರುಧ್ಯದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ನಮಗೆ ಸಂವಿಧಾನದ ಮೂಲಕ ರಾಜಕೀಯ ಸಮಾನತೆ ಸಿಕ್ಕಿದೆ ಆದರೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಮಾನತೆಯನ್ನು ನಿರಾಕರಿಸಲಾಗಿದೆ. ನಮಗೆ ಕೇವಲ ಮತದಾನದ ಹಕ್ಕು ಇದ್ದರೆ ಸಾಲದು, ಇದರಿಂದ ಸ್ವಾತಂತ್ರ್ಯ ಸಾರ್ಥಕವಾಗಲ್ಲ, ಎಲ್ಲರಿಗೂ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ಬಂದಾಗ ಮಾತ್ರ ಸ್ವಾತಂತ್ರ್ಯ ಬಂದಿದ್ದು ಸಾರ್ಥಕವಾಗಲಿದೆ ಎಂದು ಹೇಳಿದ್ದರು. ಸಂವಿಧಾನ ಒಳ್ಳೆಯವರ ಕೈಲಿದ್ದರೆ ಒಳ್ಳೆಯದಾಗಲಿದೆ, ಕೆಟ್ಟವರ ಕೈಲಿದ್ದರೆ ಕೆಟ್ಟದ್ದಾಗಲಿದೆ. ಹಾಗಾಗಿ ಸಂವಿಧಾನ ಬದ್ಧತೆ ಇರುವವರ ಕೈಲಿ ಇದ್ದಾಗ ಮಾತ್ರ ಜನರಿಗೆ ಒಳ್ಳೆಯದಾಗಲಿದೆ. ಇಂದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವವರ ಕೈಲಿ ಸಂವಿಧಾನವಿದೆ. ಸಂಘಪರಿವಾರ ಯಾವತ್ತೂ ಕೂಡ ಅಂಬೇಡ್ಕರರ ಸಂವಿಧಾನವನ್ನು ಒಪ್ಪಿಕೊಂಡಿಲ್ಲ. ದೇಶದಲ್ಲಿ ಸಮಾನತೆ ಬರಬಾರದು ಎಂಬುದು ಅವರ ಉದ್ದೇಶ. ಸಮಾನತೆ ಬಂದಾಗ ಶೋಷಣೆ ಮಾಡಲು ಸಾಧ್ಯವಿಲ್ಲ ಎಂದು ಅವರಿಗೆ ಗೊತ್ತಿದೆ ಎಂದು ಹೇಳಿದರು.</p>



<p>ಬಾಬಾ ಸಾಹೇಬರು ರಚನೆ ಮಾಡಿರುವ ಸಂವಿಧಾನವನ್ನು ಬದಲಾವಣೆ ಮಾಡಲೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಅನಂತ ಕುಮಾರ್‌ ಹೆಗ್ಡೆ ಅವರು ಹೇಳಿದ್ದರು, ಅವರನ್ನು ನರೇಂದ್ರ ಮೋದಿ ಅವರಾಗಲೀ, ಅಮಿತ್‌ ಶಾ ಅವರಾಗಲೀ ಸಚಿವ ಸಂಪುಟದಿಂದ ವಜಾ ಮಾಡಿದ್ರಾ? ಕನಿಷ್ಠ ಅವರ ವಿರುದ್ಧ ಶಿಸ್ತುಕ್ರಮವನ್ನೂ ಕೈಗೊಂಡಿಲ್ಲ. ಇಂಥವರು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಣೆ ಮಾಡುತ್ತಾರಾ? ಎಂದು ಪ್ರಶ್ನಿಸಿದರು.</p>



<p>ಮೇಲ್ವರ್ಗದ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡುವುದು ಸರಿಯಾ? ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ಏನು ಹೇಳಿದೆ? ಈ ಮೀಸಲಾತಿ ಅಡಿ ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಮಾತ್ರ ಅವಕಾಶ ಇದೆ. ಹಿಂದುಳಿದ, ದಲಿತ ಸಮುದಾಯದ ಬಡವರಿಗೆ ಇದರಲ್ಲಿ ಮೀಸಲಾತಿ ಸೌಲಭ್ಯ ಸಿಗುವುದಿಲ್ಲ. ಈಗ ರಾಜ್ಯದಲ್ಲಿ ಶೇಕಡಾ 3 ರಷ್ಟು ಸಾಮಾನ್ಯ ವರ್ಗದ ಜನರಿದ್ದಾರೆ. ಅವರಿಗೆ 10% ಮೀಸಲು ಬೇಕಾ? ಆದರೂ ನಾವೆಲ್ಲ ಸುಮ್ಮನೆ ಇದ್ದೇವೆ. ಹೀಗಾದರೆ ಸಮಾನತೆ ಬಂದು ಬಿಡುತ್ತಾ? ಯಾವ ವರ್ಗದ ಜನರಿಗೆ ಶತಶತಮಾನಗಳ ಕಾಲ ಓದಲು, ಸಂಪತ್ತು ಅನುಭವಿಸಲು ಅವಕಾಶ ಇತ್ತು ಅಂಥವರಿಗೆ ಮೀಸಲಾತಿ ನೀಡುವುದು ಸರಿನಾ? ಅಂಬೇಡ್ಕರ್‌ ಅವರು ರಚನೆ ಮಾಡಿರುವ ಸಂವಿಧಾನದ ಆಶಯ ಇದರಿಂದ ಈಡೇರುತ್ತದಾ? ಸಂವಿಧಾನದ 15 ಮತ್ತು 16ನೇ ಪರಿಚ್ಛೇದದಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಲು ಮಾತ್ರ ಅವಕಾಶ ನೀಡಿದೆ. 3% ಜನರಿಗೆ 10% ಮೀಸಲಾತಿ, 52% ಜನರಿಗೆ 27% ಮೀಸಲಾತಿ ನೀಡಿದರೆ ಪ್ರಜಾಪ್ರಭುತ್ವ ಬಲಗೊಳ್ಳಲು ಸಾಧ್ಯವೇ? ಎಂದರು.</p>



<p>1983ರಲ್ಲಿ ಕೇವಲ 63,000 ಹಣ ಖರ್ಚು ಮಾಡಿ ಚುನಾವಣೆ ಗೆದ್ದಿದ್ದೆ, ಈಗ ಎಷ್ಟಾಗುತ್ತದೆ ಎಂದು ಹೇಳುವ ಹಾಗೆ ಇಲ್ಲ, ಹೇಳಿದ್ರೂ ಕಷ್ಟವಾಗುತ್ತದೆ. ಪಕ್ಷಾಂತರ ನಿಷೇಧ ಕಾಯ್ದೆ ಇದ್ದರೂ ರಾಜೀನಾಮೆ ನೀಡಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮತ್ತೆ ನಿಂತು ಗೆದ್ದು ಬರುತ್ತಾರೆ. ಕಳೆದ ಉಪಚುನಾವಣೆಯಲ್ಲಿ ನಾನೂ ಸಕ್ರಿಯವಾಗಿ ಭಾಗವಹಿಸಿದ್ದೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಈ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಒಬ್ಬೊಬ್ಬನು ಕನಿಷ್ಠ 25 ಕೋಟಿ ಖರ್ಚು ಮಾಡಿದ್ರು. ಹೀಗಾದರೆ ಪ್ರಜಾಪ್ರಭುತ್ವ ಗಟ್ಟಿಯಾಗುತ್ತಾ? ದುಡ್ಡಿಲ್ಲದವನು ಗೆಲ್ಲಲು ಸಾಧ್ಯವಾ? ಇದಕ್ಕೆ ಪರಿಹಾರ ಏನಿದೆ? ಎಂದು ವಾಗ್ದಾಳಿ ನಡೆಸಿದರು.</p>



<p>ಇಷ್ಟೆಲ್ಲಾ ಆಗುತ್ತಿದೆ ಎಂಬ ಕಾರಣಕ್ಕೆ ನಾವು ಅಧೈರ್ಯಗೊಂಡು ಸುಮ್ಮನೆ ಕೂರುವುದು ಸರಿಯಲ್ಲ. ಯಾವೆಲ್ಲಾ ಸುಧಾರಣೆ ಸಾಧ್ಯ ಅದನ್ನು ಮಾಡುವ ಪ್ರಯತ್ನ ಮಾಡಲೇ ಬೇಕು. ದೇಶಕ್ಕೆ ಸ್ವಾತಂತ್ರ್ಯ ಬಂದಾಗ ನಮ್ಮ ಸಾಕ್ಷರತೆ ಪ್ರಮಾಣ 14% ಇತ್ತು, ಇಂದು 74% ಆಗಿದೆ. ಆದರೆ ಎಲ್ಲರಿಗೂ ಸಮಾನತೆ, ಸಂಪತ್ತಿನ ಸಮಾನ ಹಂಚಿಕೆ ಆಗಿದೆಯಾ? ಉದ್ಯೋಗ ಎಲ್ಲರಿಗೂ ದೊರೆಯುತ್ತಿದೆ. ಚತುರ್ವರ್ಣ ವ್ಯವಸ್ಥೆಯಲ್ಲಿ ಶೂದ್ರ ವರ್ಗದವರಿಗೆ ಮತ್ತು ಮಹಿಳೆಯರಿಗೆ ಅಕ್ಷರ ಸಂಸ್ಕೃತಿಯಿಂದ ಹೊರಗಿಡಲಾಗಿತ್ತು. ನಾನು ಮುಖ್ಯಮಂತ್ರಿಯಾಗಲು, ಮೋದಿ ಅವರು ಪ್ರಧಾನಿಯಾಗಲು ಕೂಡ ಸಂವಿಧಾನ ಕಾರಣ. ಬಿಜೆಪಿಯವರು ಸರ್ವಾಧಿಕಾರದಲ್ಲಿ ನಂಬಿಕೆ ಹೊಂದಿರುವವರು, ಒಂದು ಕಾಲದಲ್ಲಿ ಇವರು ಹಿಟ್ಲರ್‌ ನನ್ನು ಹೊಗಳುತ್ತಿದ್ದರು ಎಂದು ಹೇಳಿದರು.</p>



<p>ದಲಿತರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸ್ವಾವಲಂಭಿಯಾಗಬೇಕು ಎಂಬ ಕಾರಣಕ್ಕೆ ನಮ್ಮ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದು. ಎಸ್‌,ಸಿ,ಪಿ/ಟಿ,ಎಸ್‌,ಪಿ ಕಾಯ್ದೆ ಜಾರಿ ಮಾಡಿದ್ದು ಕೂಡ ಇದೇ ಕಾರಣಕ್ಕೆ. ಈ ಕಾಯ್ದೆ ಕೇಂದ್ರ ಸರ್ಕಾರದಲ್ಲಿ ಇದೆಯಾ? ಅಥವಾ ಬೇರೆ ರಾಜ್ಯಗಳಲ್ಲಿ ಇದೆಯಾ? ಯಾಕೆ ಬೇರೆ ರಾಜ್ಯಗಳಲ್ಲಿ ಜಾರಿಯಾಗಿಲ್ಲ? 2013ರಲ್ಲಿ ನಾವು ಅಧಿಕಾರಕ್ಕೆ ಬಂದ ನಂತರ ಬೆಳಗಾವಿ ಅಧಿವೇಶನದಲ್ಲಿ ಈ ಕಾಯ್ದೆಯನ್ನು ಜಾರಿ ಮಾಡಿದ್ದೆವು. 2008ರಿಂದ 2013 ರವರೆಗೆ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗಾಗಿ ಖರ್ಚು ಮಾಡಿದ್ದ ಹಣ 22,000 ಕೋಟಿ ರೂಪಾಯಿ. ನಮ್ಮ ಸರ್ಕಾರ ಎಸ್‌,ಸಿ,ಪಿ/ಟಿ,ಎಸ್‌,ಪಿ ಕಾನೂನು ಜಾರಿ ಮಾಡಿದ ನಂತರ ಖರ್ಚಾದ ಹಣ 88,000 ಕೋಟಿ ರೂಪಾಯಿ. ಕಡೇ ಪಕ್ಷ ನೀವು ನಮ್ಮ ಬೆನ್ನು ತಟ್ಟಬೇಕಲ್ವ? 2018ರ ನಮ್ಮ ಸರ್ಕಾರದ ಕೊನೆಯ ಬಜೆಟ್‌ ನಲ್ಲಿ ಈ ಯೋಜನೆಗೆ ನೀಡಿದ್ದ ಅನುದಾನ 30,000 ಕೋಟಿ, ಈ ವರ್ಷದ ಬಜೆಟ್‌ ನಲ್ಲಿ 28,300 ಕೋಟಿ. ಬಜೆಟ್‌ ಗಾತ್ರ ಹೆಚ್ಚಿದ್ದರೂ ಅನುದಾನ ಕಡಿಮೆ ಮಾಡಿದ್ದಾರೆ. ಈಗಿನ ಬಜೆಟ್‌ ಗಾತ್ರಕ್ಕೆ ಅನುಗುಣವಾಗಿ ಕನಿಷ್ಠ 42,000 ಕೋಟಿಗೆ ಏರಿಕೆಯಾಗಬೇಕಿತ್ತು. ಈ ಯೋಜನೆಯ ಅನುದಾನದಲ್ಲಿ ಸುಮಾರು 7,885 ಕೋಟಿ ಹಣವನ್ನು ಬೇರೆ ಉದ್ದೇಶಗಳಿಗೆ ಬಳಕೆ ಮಾಡಿಕೊಂಡಿದ್ದಾರೆ. ಇಷ್ಟಾದರೂ ವಿದ್ಯಾವಂತ ಸಮುದಾಯದ ಜನ ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದರು.</p>



<p>ಅಂಬೇಡ್ಕರ್‌ ಅವರು ತಾವು ಸಾಮಾಜಿಕ ನ್ಯಾಯದ ರಥವನ್ನು ಇಷ್ಟುದೂರ ಎಳೆದುಕೊಂಡು ಬಂದಿದ್ದೇನೆ, ನಿಮ್ಮಿಂದ ಸಾಧ್ಯವಾದರೆ ಮುಂದಕ್ಕೆ ತಳ್ಳಿ ಇಲ್ಲದಿದ್ದರೆ ಅಲ್ಲಿಯೇ ಬಿಟ್ಟುಬಿಡಿ, ಹಿಂದಕ್ಕೆ ಮಾತ್ರ ತಳ್ಳುವ ಕೆಲಸ ಮಾಡಬೇಡಿ ಎಂದಿದ್ದರು. ಈಗ ಸಾಮಾಜಿಕ ನ್ಯಾಯದ ರಥವನ್ನು ಹಿಂದಕ್ಕೆ ತಳ್ಳುವ ಪ್ರಯತ್ನ ಆಗುತ್ತಿದೆ ಎಂದು ಆರೋಪಿಸಿದರು.</p>



<p>ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಭಡ್ತಿಯಲ್ಲಿ ಇದ್ದ ಮೀಸಲಾತಿಯನ್ನು ಸುಪ್ರೀಂಕೋರ್ಟ್‌ ತೆಗೆದುಹಾಕಿತ್ತು, ಆಗ ನಾನು ರತ್ನಪ್ರಭಾ ಅವರ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ರಚನೆ ಮಾಡಿ, ಅದರ ವರದಿಯನ್ನು ಆಧರಿಸಿ ಸುಪ್ರೀಂಕೋರ್ಟ್‌ ನಲ್ಲಿ ಮೇಲ್ಮನವಿ ಮಾಡಿದ್ದೆವು. ಅದೃಷ್ಟವಶಾತ್‌ ನಮ್ಮ ಕಾನೂನನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿಯಿತು. ಕರ್ನಾಟಕ ಒಂದನ್ನು ಬಿಟ್ಟರೆ ದೇಶದ ಬೇರೆ ರಾಜ್ಯದಲ್ಲಿ ಇಂಥಾ ಕಾನೂನನ್ನು ಜಾರಿ ಮಾಡಿದೆಯಾ ನೀವೇ ಒಮ್ಮೆ ಹುಡುಕಿ ನೋಡಿ. ಆದರೂ ಜನ ಮೋದಿ, ಮೋದಿ ಎನ್ನುತ್ತಾರೆ. ದುರ್ಬಲರು, ಅವಕಾಶ ವಂಚಿತ ಜನರು ಬಿಜೆಪಿ ಪಕ್ಷಕ್ಕೆ ಸೇರಿಕೊಂಡರೆ ಪ್ರಜಾಪ್ರಭುತ್ವ ಉಳಿಯುತ್ತಾ? ನಮ್ಮ ಸರ್ಕಾರ ಸರ್ಕಾರಿ ಗುತ್ತಿಗೆಕಾಮಗಾರಿಗಳಲ್ಲಿ ಮೀಸಲಾತಿ ಜಾರಿಗೆ ತಂದೆವು, ಈ ಕಾನೂನು ದೇಶದ ಬೇರೆ ರಾಜ್ಯಗಳಲ್ಲಿ ಇದೆಯಾ? ಇಲ್ಲ. ಅಸಮಾನತೆ ನಿರ್ಮಾಣವಾಗಿರುವ ಕಡೆ ಪ್ರಜಾಪ್ರಭುತ್ವ ಬಲಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.</p>



<p>ಒಬ್ಬ ಅಂಬೇಡ್ಕರ್‌ ಅವರು ನಮ್ಮೆಲ್ಲರಿಗೂ ಸಮಾನತೆ ತಂದುಕೊಡುವುದಾದರೆ ಅವರ ಚಿಂತನೆಗಳಿಗೆ ನಾವು ಬಲ ತುಂಬಬೇಕು ಅಲ್ವಾ? ಅಂಬೇಡ್ಕರ್‌ ಅವರ ಆಶಯಗಳ ಹಾದಿಯಲ್ಲಿ ನಾವು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗಲಿದೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಅದು ಸಂವಿಧಾನದ ರೀತಿ ಕೆಲಸ ಮಾಡಬೇಕು, ಇಲ್ಲದಿದ್ದರೆ ಜನರೇ ಅದನ್ನು ಕಿತ್ತುಬಿಸಾಕುವಷ್ಟು ಜಾಗೃತರಾಗಬೇಕು ಆಗ ಮಾತ್ರ ಸಂವಿಧಾನ ಉಳಿಯಲು ಸಾಧ್ಯ, ಪ್ರಜಾಪ್ರಭುತ್ವ ಬಲಗೊಳ್ಳಲು ಸಾಧ್ಯ ಎಂದರು.</p>



<p>ಯಾರೇ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡರೂ ಅದನ್ನು ಗಟ್ಟಿಯಾಗಿ ವಿರೋಧ ಮಾಡುವಷ್ಟು ದಾರ್ಷ್ಟ್ಯವನ್ನು ಬೆಳೆಸಿಕೊಳ್ಳಬೇಕು. ಈ ಜಾಗೃತಿ ಜನರಲ್ಲಿ ಮೂಡಬೇಕು ಎಂಬುದು ನನ್ನ ಆಶಯ ಎಂದು ಹೇಳಿದರು.</p>
]]></content:encoded>
					
		
		
			</item>
	</channel>
</rss>
