<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>filmindusty &#8211; Peepal Media</title>
	<atom:link href="https://peepalmedia.com/tag/filmindusty/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 30 May 2024 08:06:26 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>filmindusty &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ವೇದಿಕೆ ಮೇಲೆಯೇ ಹಿರೋಯಿನ್ ತಳ್ಳಿದ ಬಾಲಯ್ಯ: ನೆಟ್ಟಿಗರಿಂದ ಆಕ್ರೋಶ</title>
		<link>https://peepalmedia.com/balayya-pushed-the-actress-on-the-stage-outrage-from-netizens/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 30 May 2024 08:06:25 +0000</pubDate>
				<category><![CDATA[ಸಿನಿಮಾ]]></category>
		<category><![CDATA[anjali]]></category>
		<category><![CDATA[film]]></category>
		<category><![CDATA[filmindusty]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[movie]]></category>
		<category><![CDATA[nandamuribalakrishnan]]></category>
		<category><![CDATA[nehashetty]]></category>
		<category><![CDATA[news]]></category>
		<category><![CDATA[peepalmedia]]></category>
		<category><![CDATA[writing]]></category>
		<guid isPermaLink="false">https://peepalmedia.com/?p=40102</guid>

					<description><![CDATA[ಹಿರಿಯ ನಟ ನಂದಮೂರಿ ಬಾಲಕೃಷ್ಣ (ಬಾಲಯ್ಯ) ಅವರು ‘ಗ್ಯಾಂಗ್ ಆಫ್ ಗೋದಾವರಿ’ ಚಿತ್ರದ ಈವೆಂಟ್​ ಸಮಯದಲ್ಲಿ ವೇದಿಕೆಯ ಮೇಲೆಯೇ ಆ ಚಿತ್ರದ ಮುಖ್ಯನಟಿ ಅಂಜಲಿಯವರನ್ನು ಜೋರಾಗಿ ತಳ್ಳಿದ ವಿಡಿಯೋ ಸಾಕಷ್ಟು ವೈರಲ್‌ ಆಗುತ್ತಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಬಾಲಯ್ಯ ನಟನೆಯ ಅಂಜಲಿ ನಟನೆಯ ‘ಗ್ಯಾಂಗ್ ಆಫ್ ಗೋದಾವರಿ’ ಚಿತ್ರದ ಈವೆಂಟ್​ ನಡೆಯುತ್ತಿತ್ತು. ಈ ಕಾರ್ಯಕ್ರಮ ಚಿತ್ರದ ಮತ್ತೋರ್ವ ನಟಿ ನೇಹಾಶೆಟ್ಟಿ ಸಹ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಸಿನಿಮಾದ ಕಾರ್ಯಕ್ರಮದ ವೇದಿಕೆ ಮೇಲೆ ನಡೆದ ಘಟನೆ ಅನೇಕರನ್ನು [&#8230;]]]></description>
										<content:encoded><![CDATA[
<p> ಹಿರಿಯ ನಟ <strong>ನಂದಮೂರಿ ಬಾಲಕೃಷ್ಣ</strong> (ಬಾಲಯ್ಯ) ಅವರು ‘ಗ್ಯಾಂಗ್ ಆಫ್ ಗೋದಾವರಿ’ ಚಿತ್ರದ ಈವೆಂಟ್​ ಸಮಯದಲ್ಲಿ ವೇದಿಕೆಯ ಮೇಲೆಯೇ ಆ ಚಿತ್ರದ ಮುಖ್ಯನಟಿ ಅಂಜಲಿಯವರನ್ನು ಜೋರಾಗಿ ತಳ್ಳಿದ ವಿಡಿಯೋ ಸಾಕಷ್ಟು ವೈರಲ್‌ ಆಗುತ್ತಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. </p>



<p>ಬಾಲಯ್ಯ ನಟನೆಯ ಅಂಜಲಿ ನಟನೆಯ ‘ಗ್ಯಾಂಗ್ ಆಫ್ ಗೋದಾವರಿ’ ಚಿತ್ರದ ಈವೆಂಟ್​ ನಡೆಯುತ್ತಿತ್ತು. ಈ ಕಾರ್ಯಕ್ರಮ ಚಿತ್ರದ ಮತ್ತೋರ್ವ ನಟಿ ನೇಹಾಶೆಟ್ಟಿ ಸಹ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಸಿನಿಮಾದ ಕಾರ್ಯಕ್ರಮದ ವೇದಿಕೆ ಮೇಲೆ ನಡೆದ ಘಟನೆ ಅನೇಕರನ್ನು ದಂಗಾಗಿಸಿದೆ.</p>



<p> ಹಿರಿಯ ನಟ ಬಾಲಯ್ಯ ಅವರ ಮುಂಗೋಪ ಮತ್ತು ಅವರ ಅಹಂಕಾರದ ಕುರಿತು ಆಗಾಗ ಸುದ್ದಿಗಳು ಕೇಳಿ ಬರುತ್ತಲೇ ಇರುತ್ತವೆ.  ಅವರಿಗೆ ಕೋಪ ಜಾಸ್ತಿ. ಅವರು ಸಹ ನಟರ ಮೇಲೆ, ಫ್ಯಾನ್ಸ್ ಮೇಲೆ ರೇಗಾಡಿದ ಸಾಕಷ್ಟು ಉದಾಹರಣೆಗಳಿವೆ. ಈಗ ಅವರು ನಟಿ ಅಂಜಲಿ ಅವರನ್ನು ತಳ್ಳಿದ ವಿಡಿಯೋ ವೈರಲ್ ಆಗಿದೆ. <a href="https://twitter.com/OutOfContextTel/status/1795779182082785657" data-type="link" data-id="https://twitter.com/OutOfContextTel/status/1795779182082785657">ಆ ವಿಡಿಯೋ ಲಿಂಕ್‌ ಇಲ್ಲಿದೆ.</a></p>



<p>ಅಂಜಲಿ, ನೇಹಾ ಶೆಟ್ಟಿ ಮೊದಲಾದವರು ವೇದಿಕೆ ಮೇಲೆ ನಿಂತಿದ್ದರು. ಬಾಲಯ್ಯ ಅವರು ಅಂಜಲಿಗೆ ಏನನ್ನೋ ಹೇಳುವ ಪ್ರಯುತ್ನ ಮಾಡಿದ್ದಾರೆ. ಆದರೆ, ಅವರಿಗೆ ಇದು ಕೇಳಿಲ್ಲ. ಇದರಿಂದ ಸಿಟ್ಟಾದ ಬಾಲಯ್ಯ ಅವರು ಅಂಜಲಿಯವರ ಭುಜ ಹಿಡಿದು ತಳ್ಳಿದ್ದಾರೆ.  ಅಂಜಲಿ ಇನ್ನೇನು ಬೀಳಲಿದ್ದವರು ಸಾವರಿಸಿಕೊಂಡು ಗಟ್ಟಿಯಾಗಿ ನಿಂತರು. ಅಲ್ಲೇ ಇದ್ದ ನೇಹಾ ಶೆಟ್ಟಿ ಈ ಘಟನೆಯಿಂದ ಶಾಕ್ ಆದರು. ಆದರೆ, ಅಂಜಲಿ ಅವರು ಏನನ್ನೂ ತೋರಿಸಿಕೊಳ್ಳದೆ ಜೋರಾಗಿ ನಗುವ ಮೂಲಕ ಆಗಲಿರುವ ಅನಾಹುತವನ್ನು ಶಾಂತಗೊಳಿಸಿದ್ದಾರೆ. . ಸದ್ಯ ಈ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಅನೇಕರು ಟೀಕೆ ವ್ಯಕ್ತಪಡಿಸಿದ್ದಾರೆ.</p>



<p>‘ಬಾಲಯ್ಯ ಅವರು ಈ ರೀತಿ ಮಾಡಿದ್ದು ಸರಿ ಅಲ್ಲ ಎಂದು ಕೆಲವರು ಹರಿಹಾಯ್ದಿದ್ದರೆ, ಇನ್ನು ಹಲವರು ‘ಬಾಲಯ್ಯ ಅವರು ಈ ರೀತಿ ನಡೆದುಕೊಳ್ಳುತ್ತಿರುವುದು ಹೊಸದಲ್ಲ’ ಎಂದಿದ್ದಾರೆ. ‘ಹಿರಿಯ ನಟನಾಗಿ ಹೇಗೆ ನಡೆದುಕೊಳ್ಳಬೇಕು ಅನ್ನೋದು ಗೊತ್ತಿಲ್ಲ’ ಎಂದು ಅನೇಕರು ಬಾಲಯ್ಯ ಅವರನ್ನು ಬೈದಿದ್ದಾರೆ. </p>



<p>ಬಾಲಯ್ಯ ಅವರು 100ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟ. ‘ಅಖಂಡ’, ‘ವೀರಸಿಂಹ ರೆಡ್ಡಿ, ‘ಭಗವಾನ್ ಕೇಸರಿ’ ಮೊದಲಾದ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿವೆ. 2023ರಲ್ಲಿ ರಿಲೀಸ್ ಆದ ‘ವೀರಸಿಂಹ ರೆಡ್ಡಿ’ ಅವರ ನಟನೆಯ ಕೊನೆಯ ಸಿನಿಮಾ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 132 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ‘ಅಖಂಡ 2’ ಚಿತ್ರದಲ್ಲಿ ಬಾಲಯ್ಯ ನಟಿಸಲಿದ್ದಾರೆ. ಇತ್ತೀಚೆಗೆ ಬೇರೊಂದು ಸಿನಿಮಾ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಅವರು, ‘ಹೊಸ ಚಿತ್ರದ ಕೆಲಸ ಆರಂಭ ಆಗಿಲ್ಲ. ಚುನಾವಣಾ ಫಲಿತಾಂಶ ಬಂದ ಬಳಿಕವೇ ಕೆಲಸ ಶುರು ಮಾಡುತ್ತೇನೆ’ ಎಂದಿದ್ದರು. </p>
]]></content:encoded>
					
		
		
			</item>
		<item>
		<title>ಕಳಚಿದ ಚಿತ್ರರಂಗದ ಹಳೆಯ ಕೊಂಡಿ ದ್ವಾರಕೀಶ್‌  </title>
		<link>https://peepalmedia.com/dwarkeesh-is-an-old-link-of-the-lost-film-industry/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 16 Apr 2024 08:30:17 +0000</pubDate>
				<category><![CDATA[ಚಿತ್ರ ಪಟ]]></category>
		<category><![CDATA[ಸಿನಿಮಾ]]></category>
		<category><![CDATA[bengalure]]></category>
		<category><![CDATA[dwarkish]]></category>
		<category><![CDATA[filmindusty]]></category>
		<category><![CDATA[kannada]]></category>
		<category><![CDATA[kannadafilm]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[writing]]></category>
		<guid isPermaLink="false">https://peepalmedia.com/?p=38389</guid>

					<description><![CDATA[ಕನ್ನಡ ಚಲಚಿತ್ರರಂಗದ ಹಿರಿಯ ನಟ, ನಿರ್ದೇಶಕ ನಿರ್ಮಾಪಕ, ಕಳ್ಳ ಕುಳ್ಳ ಎಂದೇ ಹೆಸರಾಗಿದ್ದ ದ್ವಾರಕೀಶ್‌ ಅವರು ಇಂದು ನಮ್ಮನ್ನು ಅಗಲಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳತ್ತಿದ್ದ ಅವರಿಗೆ ಅವರಿಗೆ 81 ವರ್ಷ ವಯಸ್ಸಾಗಿತ್ತು. ಕನ್ನಡ ಸಿನಿಮಾ ರಂಗಕ್ಕೆ, ಕನ್ನಡ-ನಾಡು- ನುಡಿ-ಸಂಸ್ಕೃತಿಗೆ ಅವರ ಕೊಟ್ಟ ಕೊಡುಗೆ ಅಪಾರ. ಕನ್ನಡದ ಕುಳ್ಳ ಎಂದೇ ಜನಪ್ರಿಯರಾದ ದ್ವಾರಕೀಶ್ ರವರು ಆಗಸ್ಟ್ 19-1942 ರಂದು ಹುಣಸೂರು ನಲ್ಲಿ ಶಮಾರಾವ್ ಮತ್ತು ಜಯಮ್ಮರವರಿಗೆ ಜನಿಸಿದರು. ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು [&#8230;]]]></description>
										<content:encoded><![CDATA[
<p>ಕನ್ನಡ ಚಲಚಿತ್ರರಂಗದ ಹಿರಿಯ ನಟ, ನಿರ್ದೇಶಕ ನಿರ್ಮಾಪಕ, ಕಳ್ಳ ಕುಳ್ಳ ಎಂದೇ ಹೆಸರಾಗಿದ್ದ ದ್ವಾರಕೀಶ್‌ ಅವರು ಇಂದು ನಮ್ಮನ್ನು ಅಗಲಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳತ್ತಿದ್ದ ಅವರಿಗೆ ಅವರಿಗೆ 81 ವರ್ಷ ವಯಸ್ಸಾಗಿತ್ತು. ಕನ್ನಡ ಸಿನಿಮಾ ರಂಗಕ್ಕೆ, ಕನ್ನಡ-ನಾಡು- ನುಡಿ-ಸಂಸ್ಕೃತಿಗೆ ಅವರ ಕೊಟ್ಟ ಕೊಡುಗೆ ಅಪಾರ.</p>



<p>ಕನ್ನಡದ ಕುಳ್ಳ ಎಂದೇ ಜನಪ್ರಿಯರಾದ ದ್ವಾರಕೀಶ್ ರವರು ಆಗಸ್ಟ್ 19-1942 ರಂದು ಹುಣಸೂರು ನಲ್ಲಿ ಶಮಾರಾವ್ ಮತ್ತು ಜಯಮ್ಮರವರಿಗೆ ಜನಿಸಿದರು. ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್‌ ನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು. ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರು ಮಾಡಿದರು. ಮೈಸೂರಿನ ಗಾಂಧೀ ಚೌಕದಲ್ಲಿ ಭಾರತ್ ಆಟೋ ಸ್ಪೇರ್ಸ್ ಎಂಬ ಅಂಗಡಿ ಹೊಂದಿದ್ದ ದ್ವಾರಕೀಶ್ ಸಿನಿಮಾಗಳಲ್ಲಿ ನಟಿಸುವ ಕನಸು ಕಂಡಿದ್ದರು. 1963ರಲ್ಲಿ ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು. ಸೋದರಮಾವ ಹುಣಸೂರು ಕೃಷ್ಣಮೂರ್ತಿ ಅವರ ಸಹಾಯದಿಂದ ಬಣ್ಣದ ಲೋಕಕ್ಕೆ ಕಾಲಿಟ್ಟರು.</p>



<p>ನಟ ದ್ವಾರಕೀಶ್‌ ಅವರು ಕನ್ನಡ ಚಿತ್ರರಂಗದಲ್ಲಿ ಬಹುದೊಡ್ಡ ಹೆಸರು ಮಾಡಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್‌ ನೀಡಿದೆ.</p>



<p>ನಟರಾಗಿ, ನಿರ್ದೇಶಕ, ನಿರ್ಮಾಪಕರಾಗಿ ಹಲವಾರು ಚಿತ್ರಗಳ ಕೊಡುಗೆ ನೀಡಿರುವ ಅವರು ಕನ್ನಡ ಚಿತ್ರರಂಗಕ್ಕೆ ಕಲಾಸೇವೆ ಸಲ್ಲಿಸಿದ್ದಾರೆ. ಡಾ. ವಿಷ್ಣುವರ್ಧನ್‌, ಡಾ. ರಾಜ್‌ಕುಮಾರ್‌ ಹಾಗೂ ಅಂಬರೀಶ್‌ರಂತಹ ಮೇರು ನಟರೊಂದಿಗೆ ಹಿರಿಯ ತೆರೆಯಲ್ಲಿ ಮಿಂಚಿರುವ ನಟ ದ್ವಾರಕೀಶ್‌ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬರೋಬ್ಬರಿ 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಸೈ ಎನಿಸಿಕೊಂಡವರು.</p>



<figure class="wp-block-image size-large"><img fetchpriority="high" decoding="async" width="1024" height="576" src="https://peepalmedia.com/wp-content/uploads/2024/04/maxresdefault-1024x576.jpg" alt="" class="wp-image-38392" srcset="https://peepalmedia.com/wp-content/uploads/2024/04/maxresdefault-1024x576.jpg 1024w, https://peepalmedia.com/wp-content/uploads/2024/04/maxresdefault-300x169.jpg 300w, https://peepalmedia.com/wp-content/uploads/2024/04/maxresdefault-768x432.jpg 768w, https://peepalmedia.com/wp-content/uploads/2024/04/maxresdefault-150x84.jpg 150w, https://peepalmedia.com/wp-content/uploads/2024/04/maxresdefault-696x392.jpg 696w, https://peepalmedia.com/wp-content/uploads/2024/04/maxresdefault-1068x601.jpg 1068w, https://peepalmedia.com/wp-content/uploads/2024/04/maxresdefault.jpg 1280w" sizes="(max-width: 1024px) 100vw, 1024px" /></figure>



<p><strong>ದಾಖಲೆಗಳ ನಿರ್ಮಾತೃ</strong></p>



<p>ಭಾರತದ ಹೊರಗೆ ಅಂದರೆ ವಿದೇಶಗಳಲ್ಲಿ &nbsp;ಕನ್ನಡ ಚಲನ ಚಿತ್ರಗಳ ಚಿತ್ರೀಕರಣ ಮಾಡಿದ ನಿರ್ಮಾಪಕರು ಈ ದ್ವಾರಕೀಶ್‌, ಅವರು ನಿರ್ಮಿಸಿದ ಆಪ್ತಮಿತ್ರ ಕನ್ನಡ ಚಿತ್ರರಂಗದಲ್ಲಿ ಆಪ್ತಮಿತ್ರ ದಾಖಲೆ ನಿರ್ಮಿಸಿದೆ. ಬೆಂಗಳೂರಿನ ಸಂತೋಷ್ ಮತ್ತು ಮೈಸೂರಿನ ರಣಜಿತ್‌ನಲ್ಲಿ ಎರಡು ಚಿತ್ರಮಂದಿರಗಳಲ್ಲಿ ಒಂದು ವರ್ಷ ಪ್ರದರ್ಶನವನ್ನು ಆಚರಿಸಿದ ಮೊದಲ ಕನ್ನಡ ಚಲನಚಿತ್ರ ಇದಾಗಿದೆ. ಪ್ರತಿದಿನ ನಾಲ್ಕು ಪ್ರದರ್ಶನಗಳೊಂದಿಗೆ ಒಂದು ವರ್ಷ ಪ್ರದರ್ಶನವನ್ನು ಯಶಸ್ವಿಯಾಗಿ ಪೂರೈಸಿದ ಮೊದಲ ಕನ್ನಡ ಚಲನಚಿತ್ರ ಎಂದು ಆಪ್ತಮಿತ್ರ ಹೆಸರು ಮಾಡಿದೆ.</p>



<p>ದ್ವಾರಕೀಶ್ 1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ದ್ವಾರಕೀಶ್, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಕನ್ನಡ ಸಿನಿ ಅಭಿಮಾನಿಗಳ ಹೃದಯದಲ್ಲಿ ಕುಳ್ಳನಾಗಿ, ಕಿಟ್ಟಿಯಾಗಿ ವಿಶೇಷ ಸ್ಥಾನ ಗಿಟ್ಟಿಸಿಕೊಂಡಿದ್ದರು. ದಿವಂಗತ ನಟ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರೂ ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಚಿತ್ರಗಳಲ್ಲಿ ತೆರೆ ಹಂಚಿಕೊಂಡಿದ್ದರು.</p>



<p>&nbsp;1966ರಲ್ಲಿ ಮಮತೆಯ ಬಂಧನ ಸಿನಿಮಾವನ್ನು ದ್ವಾರಕೀಶ್ ಅವರು ಮತ್ತಿಬ್ಬರು ನಿರ್ಮಾಪಕರ ಜೊತೆ ಸೇರಿ ತುಂಬಾ ಪಿಕ್ಚರ್ಸ್ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಿದ್ದರು. 1969ರಲ್ಲಿ ಡಾ.ರಾಜ್‌ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾಗೆ ಬಂಡವಾಳ ಹಾಕುವ ಮೂಲಕ ಸ್ವತಂತ್ರ ನಿರ್ಮಾಪಕರಾಗಿ ಯಶಸ್ವಿಯಾದರು. 1985ರಲ್ಲಿ ನೀ ಬರೆದ ಕಾದಂಬರಿ ಎಂಬ ಚಿತ್ರಕ್ಕೆ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟರು. ಇದು ಸೂಪರ್‌ ಹಿಟ್ ಆಗಿತ್ತು. ಕ್ಯಾಮೆರಾ ಹಿಂದೆಯೂ ದ್ವಾರಕೀಶ್ ಯಶಸ್ವಿಯಾದರು.ಡಾನ್ಸ್ ರಾಜ ಡಾನ್ಸ್, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಸೇರಿ ಸುಮಾರು&nbsp; ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.</p>



<figure class="wp-block-image size-large"><img decoding="async" width="1024" height="576" src="https://peepalmedia.com/wp-content/uploads/2024/04/dsfd-1024x576.jpg" alt="" class="wp-image-38393" srcset="https://peepalmedia.com/wp-content/uploads/2024/04/dsfd-1024x576.jpg 1024w, https://peepalmedia.com/wp-content/uploads/2024/04/dsfd-300x169.jpg 300w, https://peepalmedia.com/wp-content/uploads/2024/04/dsfd-768x432.jpg 768w, https://peepalmedia.com/wp-content/uploads/2024/04/dsfd-150x84.jpg 150w, https://peepalmedia.com/wp-content/uploads/2024/04/dsfd-696x392.jpg 696w, https://peepalmedia.com/wp-content/uploads/2024/04/dsfd-1068x601.jpg 1068w, https://peepalmedia.com/wp-content/uploads/2024/04/dsfd.jpg 1280w" sizes="(max-width: 1024px) 100vw, 1024px" /></figure>



<p>ವಿಷ್ಣು ವರ್ಧನ್ ಮತ್ತು ದ್ವಾರಕೀಶ್ ಜೋಡಿಯಾಗಿ ನಟಿಸಿದ ಸೂಪರ್‌ ಹಿಟ್ ಚಿತ್ರಗಳ ಸಾಲೇ ಇದೆ. ಆಪ್ತಮಿತ್ರ, ಕಳ್ಳ ಕುಳ್ಳ, ಕಿಲಾಡಿಗಳು, ಸಿಂಗಾಪುರದಲ್ಲಿ ರಾಜ ಕುಳ್ಳ, ಕಿಟ್ಟು ಪುಟ್ಟು ರಾಯರು ಬಂದರು ಮಾವನ ಮನೆಗೆ, ಆಪ್ತಮಿತ್ರ ಮುತಾದವು ಜನ್ಮರಹಸ್ಯ, ಮಂಕುತಿಮ್ಮ,ಪೆದ್ದ ಗೆದ್ದ,ಕಿಟ್ಟು ಪುಟ್ಟು, , ಮನೆ ಮನೆ ಕಥೆ, ಆಫ್ರಿಕಾದಲ್ಲಿ ಶೀಲಾ, ಭಲೇ ಹುಡುಗ, ಬಂಗಾರದ ಮನುಷ್ಯ, ಗಲಾಟೆ ಸಂಸಾರ,ಪ್ರಚಂಡ ಕುಳ್ಳ, , ಗುರುಶಿಷ್ಯರು, ವಿಷ್ಣುವರ್ಧನ, ಮುದ್ದಿನ ಮಾವ,&nbsp; ಮನೆಗೆ, ಆಟಗಾರ, ಚೌಕ, ಪ್ರೀತಿ ಮಾಡು ತಮಾಷೆ ನೋಡು ಮುಂತಾದ ಚಿತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಅದರಲ್ಲಿಯೂ ಗುರು ಶಿಷ್ಯರು ಚಿತ್ರದಲ್ಲಿ ಇವರ ಅಭಿನಯ ಇಂದಿಗೂ ಕನ್ನಡ ಚಿತ್ರ ರಸಿಕರ ಮನಸ್ಸಿನಲ್ಲಿದ್ದು, ಚಿತ್ರದ ಕೆಲವು ದೃಶ್ಯಗಳನ್ನು ನೆನಪಿಸಿಕೊಂಡು ಬಿದ್ದು ಬಿದ್ದು ನಗುವವರಿದ್ದಾರೆ. &nbsp;</p>



<p>ದ್ವಾರಕೀಶ್&nbsp; ಕೆಲವು ಸಿನಿಮಾಗಳ&nbsp; ಗಲ್ಲಾಪೆಟ್ಟಿಗೆಯ ವೈಫಲ್ಯಗಳಿಂದ ದೊಡ್ಡ ನಷ್ಟವಾಗಿ ತೀವ್ರ&nbsp; ಆರ್ಥಿಕ ಸಮಸ್ಯೆ ಎದುರಿಸಿದರು.ಇಷ್ಟೆಲ್ಲಾ ವೈಫಲ್ಯಗಳ ನಡುವೆಯೂ ದ್ವಾರಕೀಶ್ ಹತಾಶರಾಗಲಿಲ್ಲ. ಕನ್ನಡ ಚಿತ್ರರಂಗಕ್ಕೆ ಹೊಸ ಮುಖಗಳನ್ನು ಪರಿಚಯಿಸುವ ಸಿನಿಮಾಗಳನ್ನು ಮಾಡುವುದನ್ನು ಮುಂದುವರೆಸಿದರು. ನಿರ್ಮಾಪಕರಾಗಿ ಅನೇಕ ಹೊಸಬರನ್ನು ಚಿತ್ರರಂಗಕ್ಕೆ ಕರೆತಂದಿದ್ದಾರೆ. ನಟ-ನಟಿಯರಷ್ಟೇ ಅಲ್ಲ- ಹೊಸ ನಿರ್ದೇಶಕರು ಮತ್ತು ಇತರ ತಂತ್ರಜ್ಞರಿಗೂ ಅವಕಾಶ ಕೊಟ್ಟಿದ್ದಾರೆ. ಅವರೆಲ್ಲರೂ ಅವರನ್ನು ತಮ್ಮ &#8220;ಗಾಡ್ ಫಾದರ್&#8221; ಎಂದು ಪರಿಗಣಿಸುತ್ತಾರೆ.</p>










]]></content:encoded>
					
		
		
			</item>
	</channel>
</rss>
