<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Fire accident &#8211; Peepal Media</title>
	<atom:link href="https://peepalmedia.com/tag/fire-accident/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 30 Oct 2023 09:41:12 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Fire accident &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಅಗ್ನಿ ದುರಂತಗಳ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು: ಸಚಿವ ಕೃಷ್ಣ ಬೈರೇಗೌಡ</title>
		<link>https://peepalmedia.com/precautionary-measures-should-be-taken-regarding-fire-disasters/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 30 Oct 2023 09:40:38 +0000</pubDate>
				<category><![CDATA[ರಾಜ್ಯ]]></category>
		<category><![CDATA[Fire accident]]></category>
		<category><![CDATA[Krishna Byregowda]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=30767</guid>

					<description><![CDATA[ನಗರದಲ್ಲಿ ಹೆಚ್ಚುತ್ತಿರುವ ಅಗ್ನಿ ದುರಂತಗಳಿಂದ ಪ್ರಾಣಾಪಾಯಗಳು ಹೆಚ್ಚುತ್ತಿದೆ. ಜನಸಾಮಾನ್ಯರಲ್ಲೂ ಆತಂಕ ಮನೆಮಾಡಿದೆ. ಹೀಗಾಗಿ ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಹಿಸಬೇಕು, ಅಗ್ನಿ ಶಾಮಕದಳವನ್ನೂ ಉನ್ನತೀಕರಣಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು. ಸೋಮವಾರ ವಿಕಾಸಸೌಧದಲ್ಲಿ ಅಗ್ನಿ ಶಾಮಕದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್ ಅವರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕಳೆದ 20 ದಿನಗಳ ಅವಧಿಯಲ್ಲಿ ಬೆಂಗಳೂರಿನಲ್ಲೇ ಮೂರು ಕಡೆಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸಿವೆ. ಅಗ್ನಿ ದುರಂತಗಳಿಂದ ಜನರೂ ಭಯಭೀತರಾಗಿದ್ದಾರೆ. [&#8230;]]]></description>
										<content:encoded><![CDATA[
<p>ನಗರದಲ್ಲಿ ಹೆಚ್ಚುತ್ತಿರುವ ಅಗ್ನಿ ದುರಂತಗಳಿಂದ ಪ್ರಾಣಾಪಾಯಗಳು ಹೆಚ್ಚುತ್ತಿದೆ. ಜನಸಾಮಾನ್ಯರಲ್ಲೂ ಆತಂಕ ಮನೆಮಾಡಿದೆ. ಹೀಗಾಗಿ ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಹಿಸಬೇಕು, ಅಗ್ನಿ ಶಾಮಕದಳವನ್ನೂ ಉನ್ನತೀಕರಣಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.</p>



<p>ಸೋಮವಾರ ವಿಕಾಸಸೌಧದಲ್ಲಿ ಅಗ್ನಿ ಶಾಮಕದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್ ಅವರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕಳೆದ 20 ದಿನಗಳ ಅವಧಿಯಲ್ಲಿ ಬೆಂಗಳೂರಿನಲ್ಲೇ ಮೂರು ಕಡೆಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸಿವೆ. ಅಗ್ನಿ ದುರಂತಗಳಿಂದ ಜನರೂ ಭಯಭೀತರಾಗಿದ್ದಾರೆ. ಹೀಗಾಗಿ ನಗರ ಭಾಗಗಳೂ ಸೇರಿದಂತೆ ರಾಜ್ಯಾದ್ಯಂತ ಅಗ್ನಿ ದುರಂತಗಳು ಸಂಭವಿಸಿದಂತೆ ಅಗ್ನಿಶಾಮಕ ದಳ ತಡೆಯುವಂತಾಗಬೇಕು&#8221; ಎಂದು ಸಲಹೆ ನೀಡಿದರು.</p>



<p>&#8220;ಅತ್ತಿಬೆಲೆ ಪಠಾಕಿ ಗೋದಾಮಿನ ದುರಂತದಲ್ಲಿ ತಮಿಳುನಾಡು ಮೂಲದ ರಾಜೇಶ್, ದಿನೇಶ್, ಸಂತೋಷ್ ಕುಮಾರ್, ನಿತೀಶ್, ವೇದಪ್ಪನ್, ಆದಿಕೇಶವನ್, ವಿಜಯರಾಘವನ್, ಆಕಾಶ್ ರಾಜ್, ಗಿರಿ, ಇಂಬರ್ತಿ, ಮುನಿವೇಲ್, ಪ್ರಕಾಶರಾಜ್, ಆಂಥೋನಿ ಪೌಲಾರಾಜ್ ಸೇರಿ 13 ಕಾರ್ಮಿಕರು ಮೃತಪಟ್ಟಿದ್ದರು.</p>



<p>ಅಕ್ಟೋಬರ್ 19 ರಂದು ಕೋರಮಂಗಲದ ಮಡ್‌ಪೈಪ್ ಅನ್ನೋ ರೆಸ್ಟೋಕೆಫೆ ಅಗ್ನಿ ದುರಂತಕ್ಕೆ ಈಡಾಗಿತ್ತು. ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದರೆ, ಹಲವರು ಗಾಯಾಳುಗಳಾಗಿದ್ದರು. ಇದರ ಬೆನ್ನಿಗೆ ಕಳೆದ ಶನಿವಾರ ಹಜ್ ಭವನವೂ ಬೆಂಕಿಗೆ ಆಹುತಿಯಾಗಿದ್ದು ಕನಿಷ್ಟ 3 ಕೋಟಿ ನಷ್ಟವಾಗಿದೆ. ಎಂದು ಆತಂಕ ಹೊರಹಾಕಿದ ಸಚಿವರು, ಇಂತಹ ದುರಂತಗಳಿಗೆ ಕಾರಣವೇನು? ಇದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳೇನು? ಎಂಬ ಕುರಿತು ಅಗ್ನಿಶಾಮಕ ದಳ ಚಿಂತನೆ ನಡೆಸಬೇಕಿದೆ&#8221; ಎಂದರು.</p>



<p>ಅಲ್ಲದೆ, ಅಗ್ನಿಶಾಮಕ ದಳದ ಉನ್ನತೀಕರಣಗಳ ಬಗ್ಗೆಯೂ ಗಮನವಹಿಸಬೇಕಿದೆ. ಇದರ ಜೊತೆಗೆ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಾಗಲೇ ಅಗ್ನಿದುರಂತ ತಡೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳ ಬಗ್ಗೆಯೂ ಪರಿಶೀಲಿಸಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>



<p>ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಉನ್ನತೀಕರಣ ಹಾಗೂ ಹೊಸ ಅಗ್ನಿಶಾಮಕ ದಳಗಳನ್ನು ಸ್ಥಾಪಿಸುವ ಕುರಿತ ಕ್ರಿಯಾ ಯೋಜನೆ ಮಂಡಿಸಿದ ಅಗ್ನಿಶಾಮಕ ದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್, &#8220;ಉಡುಪಿ ಜಿಲ್ಲೆಯ ಮಣಿಪಾಲ್, ದಾವಣಗೆರೆಯ- ನ್ಯಾಮತಿ, ವಿಜಯಪುರ ಜಿಲ್ಲೆಯ ನಿಡಗುಂದಿ-ಬಬಲೇಶ್ವರ್, ರಾಯಚೂರಿನ ಮಸ್ಕಿ, ಬೆಳಗಾವಿಯ ಮುದಲಗಿ, ಬಳ್ಳಾರಿಯ ಕಂಪ್ಲಿ ಹಾಗೂ ಕಲಬುರಗಿ ಷಹಾಬಾದ್ ಭಾಗದಲ್ಲಿ ನೂತನ ಅಗ್ನಿಶಾಮಕ ದಳ ಸ್ಥಾಪಿಸುವ ಸಂಬಂಧ ಯೋಜನೆ ಮಂಡಿಸಿದರು.</p>



<p>ಅಲ್ಲದೆ, ಬೆಂಗಳೂರು ಸೇರಿದಂತೆ ನಗರ ಭಾಗದಲ್ಲಿ ಸಂಭವಿಸುತ್ತಿರುವ ಅಗ್ನಿ ಅವಘಡಗಳ ತಡೆಗೆ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬಹುದು? ಎಂಬ ಕುರಿತು ಶೀಘ್ರದಲ್ಲೇ ಇಲಾಖೆಗೆ ವರದಿ ನೀಡುವುದಾಗಿಯೂ ತಿಳಿಸಿದರು.</p>
]]></content:encoded>
					
		
		
			</item>
		<item>
		<title>ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಇಬ್ಬರ ಸಾವು</title>
		<link>https://peepalmedia.com/karkaneyalli-benki-avaghada-ibbara-saavu/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 01 Nov 2022 07:00:08 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[bengalure]]></category>
		<category><![CDATA[death]]></category>
		<category><![CDATA[Delhi]]></category>
		<category><![CDATA[Fire accident]]></category>
		<category><![CDATA[india]]></category>
		<category><![CDATA[industries]]></category>
		<category><![CDATA[kannada]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[writing]]></category>
		<guid isPermaLink="false">https://peepalmedia.com/?p=13541</guid>

					<description><![CDATA[ಹೊಸದಿಲ್ಲಿ: ಪಾದರಕ್ಷೆ ಕಾರ್ಖಾನೆಯಲ್ಲಿ ಬೆಂಕಿ ಅವಘಡದಿಂದ ಇಬ್ಬರು ಮೃತಪಟ್ಟಿದ್ದು, ಕೆಲವರು ಗಾಯಗೊಂಡಿದ್ದಾರೆ. ಇನ್ನೂ ಕೆಲವರು ಕಾರ್ಖಾನೆಯಲ್ಲೇ ಸಿಕ್ಕಿಬಿದ್ದಿರುವ ಘಟನೆ ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಕೆಲವರು ಕಾರ್ಖಾನೆಯಲ್ಲೇ ಸಿಕ್ಕಿಬಿದ್ದಿರುವ ಆತಂಕದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ದೆಹಲಿ ಪೊಲೀಸರು, ʼಬೆಂಕಿ ಅವಘಡದಿಂದ ಇಬ್ಬರು ಸಾವನಪ್ಪಿದ್ದುಕೆಲವರಿಗೆ ಸಣ್ಣಪುಟ್ಟ [&#8230;]]]></description>
										<content:encoded><![CDATA[
<p style="font-size:20px"><strong>ಹೊಸದಿಲ್ಲಿ</strong>: ಪಾದರಕ್ಷೆ ಕಾರ್ಖಾನೆಯಲ್ಲಿ ಬೆಂಕಿ ಅವಘಡದಿಂದ ಇಬ್ಬರು ಮೃತಪಟ್ಟಿದ್ದು, ಕೆಲವರು ಗಾಯಗೊಂಡಿದ್ದಾರೆ. ಇನ್ನೂ ಕೆಲವರು ಕಾರ್ಖಾನೆಯಲ್ಲೇ ಸಿಕ್ಕಿಬಿದ್ದಿರುವ ಘಟನೆ ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.</p>



<p style="font-size:20px">ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, </p>



<p style="font-size:20px">ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಕೆಲವರು ಕಾರ್ಖಾನೆಯಲ್ಲೇ ಸಿಕ್ಕಿಬಿದ್ದಿರುವ ಆತಂಕದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.</p>



<p style="font-size:20px">ಈ ಕುರಿತು ಮಾಹಿತಿ ನೀಡಿರುವ ದೆಹಲಿ ಪೊಲೀಸರು, ʼಬೆಂಕಿ ಅವಘಡದಿಂದ ಇಬ್ಬರು ಸಾವನಪ್ಪಿದ್ದುಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.  ಮೃತಪಟ್ಟವರ ಗುರುತನ್ನು ಪತ್ತೆಹಚ್ಚಲಾಗುತ್ತಿದೆʼ ಎಂದು ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ವಿಡಿಯೋ ನೋಡಿ: ಸುಟ್ಟು ಭಸ್ಮವಾದ ಪಟಾಕಿ ಅಂಗಡಿ</title>
		<link>https://peepalmedia.com/cracker-shop-in-vijayawada-caught-fire/</link>
		
		<dc:creator><![CDATA[Peepal Media]]></dc:creator>
		<pubDate>Sun, 23 Oct 2022 05:08:31 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[crackers]]></category>
		<category><![CDATA[Fire accident]]></category>
		<category><![CDATA[firecrackers]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=12624</guid>

					<description><![CDATA[ವಿಜಯವಾಡದ ಗಾಂಧಿನಗರ ಜಿಮ್ಖಾನಾ ಮೈದಾನದಲ್ಲಿ ಇಂದು ಬೆಳಗ್ಗೆ ಪಟಾಕಿ ಅಂಗಡಗಳಿಗೆ ಬೆಂಕಿ ತಗುಲಿದ್ದು ಅಂಗಡಿಗಳು ಪೂರ್ತಿಯಾಗಿ ಸುಟ್ಟು ಬೂದಿಯಾಗಿವೆ. ಈ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದ್ದು, ಯಾವುದೇ ಸಾವು-ನೋವಿನ ವರದಿಯಾಗಿಲ್ಲ.]]></description>
										<content:encoded><![CDATA[
<p>ವಿಜಯವಾಡದ ಗಾಂಧಿನಗರ ಜಿಮ್ಖಾನಾ ಮೈದಾನದಲ್ಲಿ ಇಂದು ಬೆಳಗ್ಗೆ ಪಟಾಕಿ ಅಂಗಡಗಳಿಗೆ ಬೆಂಕಿ ತಗುಲಿದ್ದು ಅಂಗಡಿಗಳು ಪೂರ್ತಿಯಾಗಿ ಸುಟ್ಟು ಬೂದಿಯಾಗಿವೆ. ಈ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದ್ದು, ಯಾವುದೇ ಸಾವು-ನೋವಿನ ವರದಿಯಾಗಿಲ್ಲ.</p>



<figure class="wp-block-video aligncenter"><video controls src="https://peepalmedia.com/wp-content/uploads/2022/10/WhatsApp-Video-2022-10-23-at-10.28.12-AM.mp4"></video><figcaption>ಬೆಂಕಿಗೆ ಬಲಿಯಾದ ಅಂಗಡಿಗಳು</figcaption></figure>
]]></content:encoded>
					
		
		<enclosure url="https://peepalmedia.com/wp-content/uploads/2022/10/WhatsApp-Video-2022-10-23-at-10.28.12-AM.mp4" length="4765082" type="video/mp4" />

			</item>
		<item>
		<title>ದುರ್ಗಾಪೂಜೆ ವೇಳೆ ಅಗ್ನಿ ಅವಘಡ: ಮೂವರ ಸಾವು 64ಕ್ಕೂ ಹೆಚ್ಚು ಮಂದಿಗೆ ಗಾಯ</title>
		<link>https://peepalmedia.com/fire-accident-during-durga-puja-3-dead-more-than-64-injured/</link>
		
		<dc:creator><![CDATA[Peepal Media]]></dc:creator>
		<pubDate>Mon, 03 Oct 2022 08:32:17 +0000</pubDate>
				<category><![CDATA[ದೇಶ]]></category>
		<category><![CDATA[Durga Puja]]></category>
		<category><![CDATA[Fire accident]]></category>
		<category><![CDATA[india]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Rajasthan]]></category>
		<guid isPermaLink="false">https://peepalmedia.com/?p=8715</guid>

					<description><![CDATA[ಭದೋಹಿ: ದುರ್ಗಾ ದೇವಿ ಪೂಜೆ ವೇಳೆ ಪೆಂಡಾಲ್‌ಗೆ ಬೆಂಕಿ ಹತ್ತಿ ಮೂವರು ಸಾವನ್ನಪ್ಪಿದ್ದು, 64 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಭದೋಹಿ ಜಿಲ್ಲೆಯ ಔರಾಯ್‌ನಲ್ಲಿ ನಡೆದಿದೆ. ಔರಾಯ್‌ ನಲ್ಲಿ ದುರ್ಗಾಪೂಜೆ ನಿಮಿತ್ತ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 300 ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಈ ವೇಳೆ ಹಾಲೊಜೆನ್‌ ಲೈಟ್‌ ಹೆಚ್ಚು ಬಿಸಿಯಾದ ಕಾರಣ ಪೆಂಡಾಲ್‌ಗೆ ಬೆಂಕಿ ಹತ್ತಿಕೊಂಡಿದೆ. ಹೀಗಾಗಿ 67 ಮಂದಿ ಗಾಯಗೊಂಡಿದ್ದಾರೆ, ಅದರಲ್ಲಿ ಮೂವರ ಪರಿಸ್ಥಿತಿ ಗಂಭೀರವಾಗಿದ್ದು, ಮೂರು [&#8230;]]]></description>
										<content:encoded><![CDATA[
<p style="font-size:20px"><strong>ಭದೋಹಿ:</strong> ದುರ್ಗಾ ದೇವಿ ಪೂಜೆ ವೇಳೆ ಪೆಂಡಾಲ್‌ಗೆ ಬೆಂಕಿ ಹತ್ತಿ ಮೂವರು ಸಾವನ್ನಪ್ಪಿದ್ದು, 64 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಭದೋಹಿ ಜಿಲ್ಲೆಯ ಔರಾಯ್‌ನಲ್ಲಿ ನಡೆದಿದೆ.</p>



<p style="font-size:20px">ಔರಾಯ್‌ ನಲ್ಲಿ ದುರ್ಗಾಪೂಜೆ ನಿಮಿತ್ತ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 300 ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಈ ವೇಳೆ ಹಾಲೊಜೆನ್‌ ಲೈಟ್‌ ಹೆಚ್ಚು ಬಿಸಿಯಾದ ಕಾರಣ ಪೆಂಡಾಲ್‌ಗೆ ಬೆಂಕಿ ಹತ್ತಿಕೊಂಡಿದೆ. ಹೀಗಾಗಿ 67 ಮಂದಿ ಗಾಯಗೊಂಡಿದ್ದಾರೆ, ಅದರಲ್ಲಿ ಮೂವರ ಪರಿಸ್ಥಿತಿ ಗಂಭೀರವಾಗಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.</p>



<p style="font-size:20px">ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ರಾತ್ರಿ 9 ಗಂಟೆ ಸುಮಾರಿಗೆ &nbsp;ಆರತಿ ಮಾಡುತ್ತಿದ್ದಾಗ ಪೆಂಡಾಲ್‌ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಪೆಂಡಾಲ್‌ಗೆ ವ್ಯಾಪಿಸಿದೆ. ಈ ಸಂದರ್ಭದಲ್ಲಿ ಜನರು ಅವಘಡದಿಂದ ತಪ್ಪಿಸಿಕೊಳ್ಳಲು ಓಡಲು ಶುರುಮಾಡಿದ್ದು, ಪೆಂಡಾಲ್‌ ಒಳಗೆ ಕಡಿಮೆ ಸ್ಥಳ ಇರುವುದರಿಂದ ಕಾಲ್ತುಳಿತಕ್ಕೆ ಸಿಲುಕಿ ಪೆಂಡಾಲ್‌ನಿಂದ ಹೊರಬರಲಾಗದೆ ಬೆಂಕಿಗೆ ಸಿಕ್ಕಿ ಗಾಯಗೊಂಡಿದ್ದಾರೆ ಎಂದು ತಿಳಿಸಿದರು.</p>



<p style="font-size:20px">ಗಾಯಗೊಂಡವರಲ್ಲಿ ಹೆಚ್ಚಿನ ಮಂದಿ ಮಹಿಳೆಯರು ಮತ್ತು ಮಕ್ಕಳೇ ಆಗಿದ್ದು. ಅದರಲ್ಲಿ 45 ವರ್ಷದ ಮಹಿಳೆ, 12 ಮತ್ತು 10 ವರ್ಷದ ಬಾಲಕರಿಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.</p>
]]></content:encoded>
					
		
		
			</item>
	</channel>
</rss>
