<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>free bus pass &#8211; Peepal Media</title>
	<atom:link href="https://peepalmedia.com/tag/free-bus-pass/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 21 Jun 2023 13:41:40 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>free bus pass &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ವಿಶೇಷ ಆದೇಶ ಹೊರಡಿಸಿದ ರಾಜ್ಯ ಸರ್ಕಾರ ; ಏನದು ಹೊಸ ಆದೇಶ?</title>
		<link>https://peepalmedia.com/the-state-government-has-issued-a-special-order-for-religious-endowment-department-temples-what-is-the-new-order/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 21 Jun 2023 13:40:40 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[Devote center]]></category>
		<category><![CDATA[free bus pass]]></category>
		<category><![CDATA[karnataka]]></category>
		<category><![CDATA[karnataka govt]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Shakthi yojane]]></category>
		<guid isPermaLink="false">https://peepalmedia.com/?p=22579</guid>

					<description><![CDATA[ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಡುವ ಎಲ್ಲಾ ಹಿರಿಯ ನಾಗರೀಕರಿಗೂ ನೇರ ದೇವರ ದರ್ಶನಕ್ಕೆ ಅವಕಾಶ ಕೊಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರ ವಿಶೇಷ ಆದೇಶ ಹೊರಡಿಸಿದೆ. ಕೆಲವು ಪ್ರಮುಖ ಅಂಶಗಳನ್ನು ಒಳಗೊಂಡಂತೆ ಹೊರಡಿಸಿದ ಆದೇಶ ಪತ್ರದಲ್ಲಿ ಈ ವಿಶೇಷ ಅಂಶವೂ ಒಳಗೊಂಡಿದೆ. ಇತ್ತೀಚೆಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆಯಲ್ಲಿ ಕರ್ನಾಟಕದ ಮಹಿಳೆಯರು, ವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕೇಂದ್ರಗಳಿಗೆ ಹೋಗುತ್ತಿರುವುದು ಕಂಡುಬಂದಿದೆ. ಕರ್ನಾಟಕದ ಧಾರ್ಮಿಕ [&#8230;]]]></description>
										<content:encoded><![CDATA[
<p>ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಡುವ ಎಲ್ಲಾ ಹಿರಿಯ ನಾಗರೀಕರಿಗೂ ನೇರ ದೇವರ ದರ್ಶನಕ್ಕೆ ಅವಕಾಶ ಕೊಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರ ವಿಶೇಷ ಆದೇಶ ಹೊರಡಿಸಿದೆ. ಕೆಲವು ಪ್ರಮುಖ ಅಂಶಗಳನ್ನು ಒಳಗೊಂಡಂತೆ ಹೊರಡಿಸಿದ ಆದೇಶ ಪತ್ರದಲ್ಲಿ ಈ ವಿಶೇಷ ಅಂಶವೂ ಒಳಗೊಂಡಿದೆ.</p>



<p>ಇತ್ತೀಚೆಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆಯಲ್ಲಿ ಕರ್ನಾಟಕದ ಮಹಿಳೆಯರು, ವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕೇಂದ್ರಗಳಿಗೆ ಹೋಗುತ್ತಿರುವುದು ಕಂಡುಬಂದಿದೆ. ಕರ್ನಾಟಕದ ಧಾರ್ಮಿಕ ಕೇಂದ್ರಗಳಿಗೆ ಪ್ರವಾಸಿಗರು, ಭಕ್ತಾದಿಗಳ ಸಂಖ್ಯೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಈ ವಿಶೇಷ ಆದೇಶವನ್ನು ಸರ್ಕಾರ ಹೊರಡಿಸಿದೆ.</p>



<p>65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಸರತಿ ಸಾಲಿನಲ್ಲಿ ನಿಲ್ಲಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ವಯಸ್ಸಿನ ಆಧಾರದಲ್ಲಿ ಸರತಿ ಸಾಲಿನಲ್ಲಿ ನಿಲ್ಲದೇ ನೇರವಾಗಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಬೇಕು ಎಂದು ಹೊರಡಿಸಿದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.</p>



<p>ಹಿರಿಯ ನಾಗರಿಕರು ಅವರ ವಯಸ್ಸಿನ ದಾಖಲೆಯಾದ ಆಧಾರ್ ಕಾರ್ಡ್, ಓಟರ್ ಐಡಿಯಂತಹ ದಾಖಲೆಗಳನ್ನು ತೋರಿಸಿ ನೇರ ದೇವರ ದರ್ಶನಕ್ಕೆ ಹೋಗಬಹುದು. ಹಾಗೆಯೇ ದೇವಾಲಯಗಳಲ್ಲಿ ಹೆಚ್ಚಿನ ಸ್ಥಳಾವಕಾಶ ಇದ್ದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸ್ಥಳ ಕಾಯ್ದಿರಿಸಲೂ ಸೂಚಿಸಿದೆ.</p>



<p>ದೇವಾಲಯಗಳಲ್ಲಿ ಹಿರಿಯ ನಾಗರೀಕರಿಗೆ ಸಹಾಯ ಕೇಂದ್ರಗಳನ್ನು ಸ್ಥಾಪಿಸಿ, ಅವರೊಂದಿಗೆ ಸಹಕರಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು. ಸದರಿ ಸಹಾಯ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿಗಳನ್ನು ನೇಮಿಸಿ, ಹಿರಿಯ ನಾಗರೀಕರಿಗೆ ತ್ವರಿತ ದರ್ಶನ ವ್ಯವಸ್ಥೆ ಕಲ್ಪಿಸಲು ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳಿಗೆ ಆದೇಶ ಹೊರಡಿಸಿದೆ.</p>
]]></content:encoded>
					
		
		
			</item>
		<item>
		<title>&#8220;ಶಕ್ತಿ&#8221;ಗೆ ಚಾಲನೆ ; ಕಂಡೀಶನ್ ಗಳೇನು? ಮುಖ್ಯಮಂತ್ರಿ ಏನಂದ್ರು?</title>
		<link>https://peepalmedia.com/what-drives-shakti-is-the-chief-minister/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 09 Jun 2023 09:00:58 +0000</pubDate>
				<category><![CDATA[ರಾಜ್ಯ]]></category>
		<category><![CDATA[free bus pass]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Shakthi]]></category>
		<category><![CDATA[Shakthi yojane]]></category>
		<category><![CDATA[Siddaramaiah]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=22218</guid>

					<description><![CDATA[ಬೆಂಗಳೂರು, ಜೂನ್ 9: ಕೇಂದ್ರ ಸರ್ಕಾರದ ಬೆಲೆಯೇರಿಕೆಯ ಬಿಸಿ ತಪ್ಪಿಸಲು ಕರ್ನಾಟಕ ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಘೋಷಿಸಿದ 5 ಗ್ಯಾರಂಟಿಗಳು ಇನ್ನೇನು ಅನುಷ್ಠಾನದ ಹಂತಕ್ಕೆ ಬಂದು ನಿಂತಿದೆ. ಅದರ ಮೊದಲ ಹೆಜ್ಜೆಯಾಗಿ ರಾಜ್ಯ ಸರ್ಕಾರ &#8220;ಶಕ್ತಿ&#8221; ಯೋಜನೆಯನ್ನು ಜೂನ್ 11 ರ ಭಾನುವಾರ ರಾಜ್ಯದ ಮಹಿಳಾ ಸಮೂಹಕ್ಕೆ ಅರ್ಪಣೆ ಆಗಲಿದೆ. ರಾಜ್ಯದಲ್ಲಿ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ &#8216;ಶಕ್ತಿ&#8217; ಯೋಜನೆಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು ಈ ಕುರಿತು [&#8230;]]]></description>
										<content:encoded><![CDATA[
<p>ಬೆಂಗಳೂರು, ಜೂನ್ 9: ಕೇಂದ್ರ ಸರ್ಕಾರದ ಬೆಲೆಯೇರಿಕೆಯ ಬಿಸಿ ತಪ್ಪಿಸಲು ಕರ್ನಾಟಕ ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಘೋಷಿಸಿದ 5 ಗ್ಯಾರಂಟಿಗಳು ಇನ್ನೇನು ಅನುಷ್ಠಾನದ ಹಂತಕ್ಕೆ ಬಂದು ನಿಂತಿದೆ. ಅದರ ಮೊದಲ ಹೆಜ್ಜೆಯಾಗಿ ರಾಜ್ಯ ಸರ್ಕಾರ &#8220;ಶಕ್ತಿ&#8221; ಯೋಜನೆಯನ್ನು ಜೂನ್ 11 ರ ಭಾನುವಾರ ರಾಜ್ಯದ ಮಹಿಳಾ ಸಮೂಹಕ್ಕೆ ಅರ್ಪಣೆ ಆಗಲಿದೆ.</p>



<p>ರಾಜ್ಯದಲ್ಲಿ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ &#8216;ಶಕ್ತಿ&#8217; ಯೋಜನೆಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು ಈ ಕುರಿತು ಸಚಿವರು ಮತ್ತು ಶಾಸಕರಿಗೆ ನಿಮ್ಮ ನಿಮ್ಮ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಚಾಲನೆ ನೀಡುವಂತೆ ಕರೆ ನೀಡಿದ್ದಾರೆ.<br>&#8220;<strong>ಶಕ್ತಿ&#8221;ಯಲ್ಲಿ ಏನಿದೆ?</strong><br>* ರಾಜ್ಯ ಸರ್ಕಾರದ ಸಾರಿಗೆಯಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ<br>* ಜೂನ್ 11 ರಿಂದ ರಾಜ್ಯಾದ್ಯಂತ ಯೋಜನೆ ಜಾರಿ<br>* ರಾಜ್ಯದ ಒಳಗೆ ಸಂಚರಿಸುವ ಬಿಎಂಟಿಸಿ, ಕೆಎಸ್ಆರ್ಟಿಸಿ (ಲಕ್ಷುರಿ, ಎಸಿ, ಸ್ಲೀಪರ್ ಹೊರತುಪಡಿಸಿ) ಬಸ್ ಗಳಿಗೆ ಅನ್ವಯ<br>* ಕರ್ನಾಟಕ ರಾಜ್ಯದ ಮಹಿಳೆಯರು, ವಿದ್ಯಾರ್ಥಿನಿಯರು, ಮಂಗಳಮುಖಿಯರಿಗೆ ಈ ಯೋಜನೆ ಅನ್ವಯ<br>* ಬಿಎಂಟಿಸಿ ಹೊರತುಪಡಿಸಿ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಶೇ 50 ರಷ್ಟು ಆಸನ ಪುರುಷರಿಗೆ ಮೀಸಲು<br>* ಸೇವಾಸಿಂಧು ಪೋರ್ಟಲ್ ಮೂಲಕ 3 ತಿಂಗಳ ಒಳಗೆ ಸ್ಮಾರ್ಟ್ ಕಾರ್ಡ್ ಲಭ್ಯ<br>* ಸ್ಮಾರ್ಟ್ ಕಾರ್ಡ್ ಸಿಗುವ ವರೆಗೂ ಆಧಾರ್ ಕಾರ್ಡ್ ಅಥವಾ ಓಟರ್ ಐಡಿ ತೋರಿಸಿ ಪ್ರಯಾಣಿಸಬಹುದು</p>



<figure class="wp-block-image size-large"><img fetchpriority="high" decoding="async" width="932" height="1024" src="https://peepalmedia.com/wp-content/uploads/2023/06/20230609_141750-932x1024.jpg" alt="" class="wp-image-22219" srcset="https://peepalmedia.com/wp-content/uploads/2023/06/20230609_141750-932x1024.jpg 932w, https://peepalmedia.com/wp-content/uploads/2023/06/20230609_141750-273x300.jpg 273w, https://peepalmedia.com/wp-content/uploads/2023/06/20230609_141750-768x843.jpg 768w, https://peepalmedia.com/wp-content/uploads/2023/06/20230609_141750-1399x1536.jpg 1399w, https://peepalmedia.com/wp-content/uploads/2023/06/20230609_141750-150x165.jpg 150w, https://peepalmedia.com/wp-content/uploads/2023/06/20230609_141750-300x329.jpg 300w, https://peepalmedia.com/wp-content/uploads/2023/06/20230609_141750-696x764.jpg 696w, https://peepalmedia.com/wp-content/uploads/2023/06/20230609_141750-1068x1173.jpg 1068w, https://peepalmedia.com/wp-content/uploads/2023/06/20230609_141750.jpg 1457w" sizes="(max-width: 932px) 100vw, 932px" /></figure>



<p>ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ&nbsp; ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿ ನಡೆಸಬೇಕು. ಸರ್ಕಾರ ತನ್ನ ಮೇಲೆ ಬೀಳುವ ಆರ್ಥಿಕ ಹೊರೆಯ ಹೊರತಾಗಿಯೂ ಜನ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅಸ್ತಿತ್ವಕ್ಕೆ ಬಂದ ತಿಂಗಳ ಒಳಗೇ ಜಾರಿಗೆ ತರುತ್ತಿದೆ. ಯಾವುದೇ ಜಾತಿ, ಧರ್ಮದ ಮಿತಿಗೆ ಒಳಪಡದ ಶಕ್ತಿ ಯೋಜನೆಯ ಅನುಕೂಲ ಅರ್ಹರಿಗೆಲ್ಲಾ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಮತ್ತು ಶಾಸಕರುಗಳಿಗೆ ಸೂಚನೆ ನೀಡಿದ್ದಾರೆ.<br>ಸದ್ಯದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಲಾಗುವುದು. ನೇಮಕವಾದ ತಕ್ಷಣ ಎಲ್ಲಾ ಸಚಿವರೂ ಕಾರ್ಯೋನ್ಮುಖರಾಗಿ ಯೋಜನೆಯ ಅರ್ಥಪೂರ್ಣ ಚಾಲನೆ ನೀಡಬೇಕು ಎಂದು ತಿಳಿಸಿದ್ದಾರೆ.<br>ಜೂನ್ 11 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡುತ್ತಾರೆ. ಅದೇ ಹೊತ್ತಲ್ಲಿ ಶಾಸಕರು ಮತ್ತು ಜಿಲ್ಲಾ ಸಚಿವರುಗಳು ತಮ್ಮ ತಮ್ಮ ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಯೋಜನೆಗೆ ಚಾಲನೆ ನೀಡಬೇಕು ಎಂದು ತಮ್ಮ ಸಂಪುಟ ಸಚಿವರು ಮತ್ತು ಶಾಸಕರಿಗೆ ಕರೆ ನೀಡಿದ್ದಾರೆ.</p>
]]></content:encoded>
					
		
		
			</item>
		<item>
		<title>ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಡಿ.17ರಂದು ಎನ್ಎಸ್‌ಯೂಐ ಮುಂದಾಳತ್ವದಲ್ಲಿ ರಾಜ್ಯ ಮಟ್ಟದ ಬಂದ್</title>
		<link>https://peepalmedia.com/state-level-bandh-under-the-leadership-of-nssui-on-december-17-to-explain-the-problem-of-students/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 05 Dec 2022 13:30:03 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[free bus pass]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Kirti Ganesh]]></category>
		<category><![CDATA[Lakshyaraj]]></category>
		<category><![CDATA[news]]></category>
		<category><![CDATA[NSSUI]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Result Delay]]></category>
		<category><![CDATA[scholarship]]></category>
		<category><![CDATA[State level bandh]]></category>
		<category><![CDATA[Transport Arrangement]]></category>
		<guid isPermaLink="false">https://peepalmedia.com/?p=17597</guid>

					<description><![CDATA[ಬೆಂಗಳೂರು: ವಿದ್ಯಾರ್ಥಿ ವೇತನ, ಸಾರಿಗೆ ವ್ಯವಸ್ಥೆ, ಫಲಿತಾಂಶ ವಿಳಂಬ, ಉಚಿತ ಬಸ್ ಪಾಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.17ರಂದು ರಾಜ್ಯ ಮಟ್ಟದ ಬಂದ್ ಗೆ ವಿದ್ಯಾರ್ಥಿಗಳು ಬಂದ್ ಮಾಡುತ್ತಿದ್ದು, ಈ ಹೋರಾಟಕ್ಕೆ ಎನ್ಎಸ್‌ಯೂಐ ನೇತೃತ್ವ ವಹಿಸುತ್ತಿದೆ ಎಂದು ಎನ್ಎಸ್‌ಯೂಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಅವರು ತಿಳಿಸಿದ್ದಾರೆ. ಈ ಕುರಿತು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ನಾಡಿನ ಪ್ರಗತಿಗೆ ಮುಖ್ಯವಾದುದು ವಿದ್ಯಾರ್ಥಿಗಳು ಹಾಗೂ ಅವರಿಗೆ ಶಿಕ್ಷಣ ನೀಡುವುದಾಗಿದೆ. ಇಂದು ವಿದ್ಯಾರ್ಥಿಗಳು [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ವಿದ್ಯಾರ್ಥಿ ವೇತನ, ಸಾರಿಗೆ ವ್ಯವಸ್ಥೆ, ಫಲಿತಾಂಶ ವಿಳಂಬ, ಉಚಿತ ಬಸ್ ಪಾಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.17ರಂದು ರಾಜ್ಯ ಮಟ್ಟದ ಬಂದ್ ಗೆ ವಿದ್ಯಾರ್ಥಿಗಳು ಬಂದ್ ಮಾಡುತ್ತಿದ್ದು, ಈ ಹೋರಾಟಕ್ಕೆ ಎನ್ಎಸ್‌ಯೂಐ ನೇತೃತ್ವ ವಹಿಸುತ್ತಿದೆ ಎಂದು ಎನ್ಎಸ್‌ಯೂಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಅವರು ತಿಳಿಸಿದ್ದಾರೆ.</p>



<p>ಈ ಕುರಿತು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ನಾಡಿನ ಪ್ರಗತಿಗೆ ಮುಖ್ಯವಾದುದು ವಿದ್ಯಾರ್ಥಿಗಳು ಹಾಗೂ ಅವರಿಗೆ ಶಿಕ್ಷಣ ನೀಡುವುದಾಗಿದೆ. ಇಂದು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡದಂತೆ ಸರ್ಕಾರ ನೀತಿ ರೂಪಿಸುತ್ತಿವೆ. ಹಿಂದೆ ಎಲ್ಲ ಸರ್ಕಾರಗಳು ವಿದ್ಯಾರ್ಥಿಗಳು ಓದಬೇಕು ಎಂದು ವಿದ್ಯಾರ್ಥಿ ವೇತನ, ಬ್ಯಾಂಕ್ ಸಾಲ, ಸಾರಿಗೆ ವ್ಯವಸ್ಥೆ, ಬಸ್ ಪಾಸ್ ನೀಡುತ್ತಿದ್ದವು. ಆದರೆ ಇಂದು ವಿದ್ಯಾಭ್ಯಾಸ ಆಗದಂತೆ ಮಾಡುತ್ತಿದ್ದಾರೆ ಎಂದರು.</p>



<p>ಈ ಹಿಂದೆ ಫಲಿತಾಂಶಗಳು ನಿಗದಿತ ಅವಧಿಗಿಂತ ಕೆಲ ದಿನ ಮುಂಚಿತವಾಗಿ ಅಥವಾ ಕೆಲ ದಿನ ತಡವಾಗಿ ಬರುತ್ತಿದ್ದವು. ಆದರೆ ಈಗ ಪರೀಕ್ಷೆ ನಡೆದು ಒಂದು ವರ್ಷವಾಗಿದ್ದರೂ ಫಲಿತಾಂಶ ನೀಡಲು ತಯಾರಿಲ್ಲ. ಇದನ್ನು ಪ್ರಶ್ನಿಸಿದರೆ ಒಬ್ಬರೂ ಮತ್ತೊಬ್ಬರ ಮೇಲೆ ಆರೋಪ ಮಾಡುತ್ತಿದ್ದಾರೆ. ನೀವು ಯಾವುದೇ ಕಾಲೇಜು, ವಿವಿಗೆ ಹೋಗಿ ಎನ್ಇಪಿ ಅಂದರೆ ಏನು ಎಂದು ಹೋಗಿ ಕೇಳಿ. ಅವರು ನಮಗೆ ಗೊತ್ತಿಲ್ಲ. ಸರ್ಕಾರ ಜಾರಿಗೆ ತಂದಿದೆ ಸರ್ಕಾರ ನೌಕರರು ನಾವು ಇದರ ಬಗ್ಗೆ ಧ್ವನಿ ಎತ್ತುವಂತಿಲ್ಲ ಎಂದು ಪ್ರಾಂಶುಪಾಲರು ಹೇಳುತ್ತಾರೆ.ಇನ್ನು ವಿದ್ಯಾರ್ಥಿ ವೇತನ ವಿಚಾರಕ್ಕೆ ಬಂದರೆ ಕೋವಿಡ್ ಸಮಯದಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿಲ್ಲ. ಆ ಮೊತ್ತ ಸರ್ಕಾರದ ಬಳಿಯೇ ಇದೆ. ಕೋವಿಡ್ ನಂತರವೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿಲ್ಲ. ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿಲ್ಲ. ಈ ಸಮಸ್ಯೆಯಿಂದ ವಿದ್ಯಾರ್ಥಿಗಳು ಶಿಕ್ಷಣ ನಿಲ್ಲಿಸಿ ಕೆಲಸಕ್ಕೆ ಹೋಗುತ್ತಿದ್ದಾರೆ. ಕಾಲೇಜಿನಲ್ಲಿ ನಿನ್ನ ವಿದ್ಯಾರ್ಥಿ ವೇತನ ಹಣ ಬಂದಿಲ್ಲ, ನೀನೇ ಶುಲ್ಕ ಪಾವತಿ ಮಾಡು ಎಂದು ಒತ್ತಡ ಹಾಕುತ್ತಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಣ ನಿಲ್ಲಿಸಬೇಕಾಗುತ್ತದೆ. ಈ ಸಮಯದಲ್ಲಿ 10ನೇ ಹಾಗೂ ಪಿಯುಸಿ ಅಂಕಪಟ್ಟಿಯನ್ನು ನೀಡದೇ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ. ಶುಲ್ಕ ನೀಡಿದರೆ ಹಿಂದಿರುಗಿಸುವುದಾಗಿ ಹೇಳುತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>



<p>ಇನ್ನು ರಾಜ್ಯದ ಶೇ.90ರಷ್ಟು ವಿದ್ಯಾರ್ಥಿಗಳು ಸರ್ಕಾರಿ ಸಾರಿಗೆಯನ್ನೇ ಅವಲಂಬಿಸಿದ್ದಾರೆ. ಹಿಂದಿನ ಸರ್ಕಾರಗಳು ಉಚಿತ ಬಸ್ ಪಾಸ್ ನೀಡಿದ್ದವು. ಆದರೆ ಈಗ ಪರಿಶಿಷ್ಟ ಸಮುದಾಯದವರಿಗೆ ಉಚಿತ ಪಾಸ್ ನೀಡಿದ್ದು, ಇದರ ಬಗ್ಗೆ ನಮಗೆ ಆಕ್ಷೇಪವಿಲ್ಲ. ಎಲ್ಲ ವರ್ಗಗಳ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಬೇಕು. ಬಸ್ ಕೊರತೆಯಿಂದ ಕಾಲೇಜು ಸರಿಯಾದ ಸಮಯಕ್ಕೆ ಸಿಗುತ್ತಿಲ್ಲ, ಇನ್ನು ಸರ್ಕಾರಿ ಕಾಲೇಜುಗಳಲ್ಲಿ ಖಾಸಗಿ ಕಾಲೇಜು ರೀತಿಯಲ್ಲಿ ಶುಲ್ಕ ಏರಿಕೆ ಮಾಡಲಾಗಿದೆ. ಖಾಸಗಿ ಕಾಲೇಜಿನ ಜತೆ ಸ್ಪರ್ಧೆಗಿಳಿದು ಶುಲ್ಕ ಏರಿಕೆ ಮಾಡುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸರ್ಕಾರ, ವಿವಿಗಳಿಂದ ಸರಿಯಾದ ಸ್ಪಂದನೆ ಸಿಗುತ್ತಿಲ್ಲ. ಹೀಗಾಗಿ ರಾಜ್ಯದ ಎಲ್ಲ ವಿದ್ಯಾರ್ಥಿಗಳ ಅಭಿಪ್ರಾಯ ಪಡೆದು ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಲು ರಾಜ್ಯಾದ್ಯಂತ ಡಿ.17ರಂದು ರಾಜ್ಯ ಮಟ್ಟದ ಬಂದ್ ಗೆ ಕರೆ ನೀಡಲಾಗುತ್ತಿದೆ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ವಿದ್ಯಾರ್ಥಿಗಳ ಆಕ್ರೋಶ ಮತ್ತಷ್ಟು ಹೆಚ್ಚಲಿದೆ ಎಂದು ಎಚ್ಚರಿಸಿದರು.</p>



<p>ಬೆಂಗಳೂರು ವಿವಿ ಎನ್ಎಸ್‌ಯೂಐ ಅಧ್ಯಕ್ಷ ಲಕ್ಷ್ಯರಾಜ್ ಮಾತನಾಡಿ, ರಾಜ್ಯದಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಫಲಿತಾಂಶ ಸಿಗುತ್ತಿಲ್ಲ, ವಿದ್ಯಾರ್ಥಿ ವೇತನ ನೀಡುತ್ತಿಲ್ಲ. ಉಚಿತ ಬಸ್ ಪಾಸ್ ನೀಡುತ್ತಿಲ್ಲ, ಸರ್ಕಾರಿ ಶಿಕ್ಷಣ ಕೇಂದ್ರಗಳಲ್ಲಿ ಶುಲ್ಕ ಏರಿಕೆ, ವಿದ್ಯಾರ್ಥಿ ನಿಲಯಗಳ ಸೌಲಭ್ಯಗಳಿಲ್ಲ. ಇದೆಲ್ಲದರ ಜತೆಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸಾಕಷ್ಟು ಸಮಸ್ಯೆಗಳು ಉದ್ಭವಿಸಿವೆ. ಇದೆಲ್ಲದರಿಂದ ಮನನೊಂದು ಹಲವು ವಿದ್ಯಾರ್ಥಿಗಳು ರಾಜ್ಯಾದ್ಯಂತ ಎನ್ಎಸ್ ಯೂಐಗೆ ದೂರು ಸಲ್ಲಿಸಿದ್ದಾರೆ. ಇದನ್ನು ಮಾಧ್ಯಮಗಳ ಮುಂದೆ ಇಟ್ಟು ವಿದ್ಯಾರ್ಥಿಗಳ ಧ್ವನಿಯಾಗುತ್ತಿದ್ದೇವೆ ಎಂದರು.</p>



<p>ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಎರಡು ರೀತಿಯ ವಿದ್ಯಾರ್ಥಿ ವೇತನ ಸಿಗುತ್ತಿವೆ. ಎನ್ಎಸ್ ಪಿ (ನ್ಯಾಷನಲ್ ಸ್ಕಾಲರ್ ಶಿಪ್) ಹಾಗೂ ಎಸ್ಎಸ್ ಪಿ (ಸ್ಟೇಟ್ ಸ್ಕಾಲರ್ ಶಿಪ್) ಮೂಲಕ ವಿದ್ಯಾರ್ಥಿ ವೇತನ ಸೀಗುತ್ತಿವೆ. ಎನ್ಎಸ್ ಪಿ ಮೂಲಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು. ಒಬ್ಬ ವಿದ್ಯಾರ್ಥಿ 2019ರಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಿದ್ದು, ನಾಲ್ಕು ವರ್ಷಗಿಳಿಂದ ಈ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ. ಪ್ರತಿ ಬಾರಿ ಅರ್ಜಿ ಸಲ್ಲಿಸುವಾಗ ಜಾಲತಾಣಗಳಲ್ಲಿ ಸಮಸ್ಯೆ ಎದುರಾಗುತ್ತಿವೆ. ಫಲಿತಾಂಶ ವಿಳಂಬದಿಂದ ಈ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಅರ್ಜಿ ಹಾಕಲು ಸಾಧ್ಯವಾಗಿಲ್ಲ. ಇದು ಕೇವಲ ಒಬ್ಬ ವಿದ್ಯಾರ್ಥಿ ಸಮಸ್ಯೆಯಲ್ಲ ರಾಜ್ಯದ ಹಲವು ವಿದ್ಯಾರ್ಥಿಗಳ ಸಮಸ್ಯೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.</p>



<p>ಇನ್ನು ಎಸ್ಎಸ್ ಪಿ ಮೂಲಕ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಒಬ್ಬ ವಿದ್ಯಾರ್ಥಿನಿ 2020 ಜನವರಿಯಲ್ಲಿ ಅರ್ಜಿ ಹಾಕಿದ್ದು, ಇದುವರೆಗೂ ವಿದ್ಯಾರ್ಥಿ ವೇತನ ಸಿಕ್ಕಿಲ್ಲ. ಇನ್ನು ಇತ್ತೀಚೆಗೂ ಅವರು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಿದ್ದು, ಇದಕ್ಕೂ ಯಾವುದೇ ಉತ್ತರ ಸಿಕ್ಕಿಲ್ಲ. ಇನ್ನು ಅರ್ಜಿ ಹಾಕುವಾಗ ನಿಮ್ಮ ವಿವಿಯು ನಿಮ್ಮ ಫಲಿತಾಂಶ, ನಿಮ್ಮ ಅಡ್ಮಿಷನ್ ದಿನಾಂಕವನ್ನು ಫೋರ್ಟಲ್ ಗೆ ಸಲ್ಲಿಕೆ ಮಾಡಿಲ್ಲ ಹೀಗಾಗಿ ನೀವು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಸಾಧ್ಯವಾಗುವುದಿಲ್ಲ ಎಂಬ ಸಂದೇಶವನ್ನು ಪೋರ್ಟಲ್ ನಲ್ಲಿ ತೋರಿಸಲಾಗುತ್ತಿದೆ. ಇನ್ನು ವಿನಾಕಾರಣ ಅರ್ಜಿ ತಿರಸ್ಕರಿಸಲಾಗುತ್ತಿದೆ. ಇನ್ನು ಎನ್ಇಪಿ ವಿಚಾರದಲ್ಲಿ ರಾಜ್ಯ ಸರ್ಕಾರ ದೊಡ್ಡ ಸಾಧನೆ ಮಾಡಿರುವುದಾಗಿ ಹೇಳುತ್ತಿದ್ದಾರೆ. ಈ ನೀತಿ ಯಾವ ರೀತಿ ಜಾರಿಯಾಗಬೇಕು ಎಂಬ ವ್ಯವಸ್ಥಿತ ತಯಾರಿ ಇಲ್ಲದೇ ತರಾತುರಿಯಲ್ಲಿ ಜಾರಿಗೆ ತಂದ ಪರಿಣಾಮ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ. ಬೆಂಗಳೂರು ನಗರ ವಿವಿಯಲ್ಲಿ ಪರೀಕ್ಷೆ 20-05-2022ಕ್ಕೆ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆಯು 15-06-2022 ಮುಕ್ತಾಯವಾಗಿದೆ. ಈ ಹಿಂದೆ ಆಯಾ ವಿವಿಗೆ ಪ್ರತ್ಯೇಕ ಆಪ್ ಸೌಲಭ್ಯವಿತ್ತು. ಇದರ ಬಳಕೆ ಅವಕಾಶ ವಿದ್ಯಾರ್ಥಿ, ಪ್ರಾದ್ಯಾಪಕರು, ಪ್ರಾಂಶುಪಾಲರಿಗೆ ಇತ್ತು. ಆದರೆ ಎನ್ ಇಪಿ ಜಾರಿ ನಂತರ ರಾಜ್ಯ ಸರ್ಕಾರ ಯುಯುಸಿಎಂಎಸ್ ಎಂಬ ಪೋರ್ಟಲ್ ಮಾಡಿ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡಲು ಮುಂದಾಗುತ್ತದೆ. ಇದರ ಪರಿಣಾಮವಾಗಿ ಎನ್ಇಪಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಫಲಿತಾಂಶ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>



<p>ಇತ್ತೀಚೆಗೆ ಬೆಂಗಳೂರು ವಿವಿ ಹಾಗೂ ಬೆಂಗಳೂರು ಉತ್ತರ ವಿವಿಯಲ್ಲಿ ಫಲಿತಾಂಶ ಸಿಕ್ಕಿದ್ದು, ಬಿಕಾಂ ಪರೀಕ್ಷೆ ಇನ್ನು ಕೊಟ್ಟಿಲ್ಲ. ಬೆಂಗಳೂರು ನಗರ ವಿವಿಯಲ್ಲಿ ಇದುವರೆಗೂ ಯಾವುದೇ ಎನ್ಇಪಿ ಪರೀಕ್ಷೆ ಫಲಿತಾಂಶ ನೀಡಿಲ್ಲ. ರಾಜ್ಯದ ಎಲ್ಲ ವಿವಿಗಳು ಎನ್ಇಪಿ ಪರೀಕ್ಷೆಗಳ ಫಲಿತಾಂಶವನ್ನು ನಿಗದಿತ ಸಮಯಕ್ಕೆ ನೀಡುತ್ತಿಲ್ಲ. ವಿದ್ಯಾರ್ಥಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕುವಾಗ ತನ್ನ ಪರೀಕ್ಷೆಯ ಫಲಿತಾಂಶದ ಪಟ್ಟಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ. ಆದರೆ ಇವರು ಒಂದು ವರ್ಷಗಳಿಂದ ಫಲಿತಾಂಶ ನೀಡುತ್ತಿಲ್ಲ ಎಂದರೆ ಅವರು ವಿದ್ಯಾರ್ಥಿ ವೇತನ ಪಡೆಯುವುದಾದರೂ ಹೇಗೆ? ವಿವಿಗಳಿಗೆ ಫಲಿತಾಂಶವನ್ನು ನೀಡಲು ಸಾಧ್ಯವಾಗದಿದ್ದರೆ ಇವರು ಏನು ಮಾಡಲು ಹೊರಟಿದ್ದಾರೆ? ವಿದ್ಯಾರ್ಥಿ ಪರೀಕ್ಷಾ ಶುಲ್ಕವನ್ನು ಪಾವತಿ ಮಾಡುವುದು ತಡವಾದರೆ ಪ್ರತಿನಿತ್ಯ 200ರಿಂದ 500 ರೂ ದಂಡ ಹಾಕುತ್ತಾರೆ. ಆದರೆ ಇವರು ಫಲಿತಾಂಶವನ್ನು ಒಂದು ವರ್ಷಗಳಿಂದ ನೀಡಿಲ್ಲವಾದರೆ ವಿದ್ಯಾರ್ಥಿಗಳು ಇವರಿಗೆ ಎಷ್ಟು ದಂಡ ಹಾಕಬೇಕು ಎಂದು ಶಿಕ್ಷಣ ಸಚಿವರು ಉತ್ತರ ನೀಡಬೇಕು ಎಂದರು.</p>



<p>ವಿದ್ಯಾರ್ಥಿ ಸಂಘಟನೆಗಳ ಮೂಲಕ ವಿವಿಗಳಿಗೆ ಹಲವು ಬಾರಿ ಮನವಿ ಮಾಡಿದ್ದು, ಮಾನವಸಂಪನ್ಮೂಲ ಕೊರತೆ ಇದೆ ಎಂದು ಹೇಳುತ್ತಾರೆ. ರಾಜ್ಯದ ಎಲ್ಲ ವಿವಿಗಳಲ್ಲಿ ಮರುಮೌಲ್ಯಮಾಪನಕ್ಕೆ ಸುಮಾರು 1500-1800 ರೂ.ವರೆಗೆ ಶುಲ್ಕ ಪಡೆಯುತ್ತಿವೆ. ಆದರೆ ಬೆಂಗಳೂರು ನಗರ ವಿವಿಯು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 3065 ರೂ. ಶುಲ್ಕ ಪಡೆಯುತ್ತಿದ್ದಾರೆ. ಈ ದುಬಾರಿ ಶುಲ್ಕ ಯಾಕೆ ಎಂದು ಕೇಳಿದರೆ ಅದಕ್ಕೆ ಸ್ಪಷ್ಟನೆ ನೀಡುತ್ತಿಲ್ಲ. ಇಂದು ಈ ಶುಲ್ಕ ಕಟ್ಟಲು ಕಡೇ ದಿನಾಂಕವಾಗಿವೆ ಎಂದು ಕಳವಳ ವ್ಯಕ್ತಪಡಿಸಿದರು.</p>



<p>ಬೆಂಗಳೂರು ವಿವಿಯ ಅಫಿಲಿಯೇಟೆಡ್ ಕಾಲೇಜಿನಲ್ಲಿ ಪರೀಕ್ಷೆ ಬರೆದ ಕೃತಿಕಾ ಎಂಬ ವಿದ್ಯಾರ್ಥಿನಿ ಅಡ್ವಾನ್ಸ್ ಕಾರ್ಪೊರೇಟಿಂಗ್ ಅಕೌಂಟ್ ಪತ್ರಿಕೆಯಲ್ಲಿ ಫಲಿತಾಂಶದ ದಿನ ಆಕೆ ಅನುತ್ತೀರ್ಣರಾಗಿದ್ದಾರೆ ಎಂದು ಫಲಿತಾಂಶ ಬರುತ್ತದೆ. ಮತ್ತೊಂದು ಪೋರ್ಟಲ್ ನಲ್ಲಿ ಆಕೆ ಪರೀಕ್ಷೆಗೆ ಗೈರಾಗಿದ್ದಾರೆ ಎಂದು ತೋರಿಸುತ್ತಿದೆ. ಇನ್ವಿಜಿಲೇಟರ್ ಸಹಿಮಾಡಿರುವ ಬುಕ್ ಲೆಟ್ ಹಾಗೂ ಹಾಲ್ ಟಿಕೆಟ್ ಇರುವಾಗ ಈ ವಿದ್ಯಾರ್ಥಿ ಗೈರಾಗಿರುವುದು ಹೇಗೆ? ವಿವಿಗಳು ಫಲಿತಾಂಶ ಹಾಗೂ ಪೋರ್ಟಲ್ ಗಳನ್ನು ಹೇಗೆ ನಿಭಾಯಿಸುತ್ತಿವೆ ಎಂಬುದು ಇದರಿಂದ ತಿಳಿಯುತ್ತದೆ. ಇದು ಕೇವಲ ಈಕೆಯ ಸಮಸ್ಯೆ ಮಾತ್ರವಲ್ಲ. ಇದೇ ರೀತಿ ಹಲವು ವಿದ್ಯಾರ್ಥಿಗಳು ಸಮಸ್ಯೆಗೆ ಸಿಲುಕಿದ್ದಾರೆ ಎಂದು ಹೇಳಿದರು.</p>



<p>ರಾಜ್ಯದಲ್ಲಿ ಗ್ರಾಮೀಣ ಹಾಗೂ ನಗರ ಭಾಗದಲ್ಲಿ ವಿದ್ಯಾರ್ಥಿಗಳು ಬಸ್ ಸಾರಿಗೆ ವ್ಯವಸ್ಥೆ ವಿಚಾರವಾಗಿ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ರಾಜ್ಯ ಸರ್ಕಾರ ತನ್ನ ಕಾರ್ಯಕ್ರಮಕ್ಕೆ ಸಾಕಷ್ಟು ವಿದ್ಯಾರ್ಥಿಗಳನ್ನು ಸರ್ಕಾರಿ ಬಸ್ ಗಳಲ್ಲಿ ಕರೆದುಕೊಂಡು ಹೋಗುತ್ತಾರೆ. ಮರುದಿನ ಬಸ್ ಕೊರತೆ ಎದುರಾಗಿ ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಾರೆ. ಇದರಿಂದಾಗಿ ಇರುವ ಬಸ್ ಗಳಲ್ಲಿ ಸಾಮರ್ಥ್ಯಕ್ಕೂ ಮೀರಿದ ಸಂಖ್ಯೆಯಲ್ಲಿ ಪ್ರಯಾಣಿಕರು ಪ್ರಯಾಣ ಮಾಡಬೇಕಾಗುತ್ತದೆ. ಇದೇ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಇನ್ನು ಸರ್ಕಾರ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುತ್ತಿದೆ. ಅದೇ ರೀತಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ನಮ್ಮ ಸರ್ಕಾರದ ಅವಧಿಯಲ್ಲೂ ನಾವು ಇದನ್ನು ಆಗ್ರಹ ಮಾಡಿದ್ದೆವು. ಈಗಲೂ ನಾವು ನಮ್ಮ ಬೇಡಿಕೆಯನ್ನು ಮುಂದಿಡುತ್ತಿದ್ದೇವೆ. ಸರ್ಕಾರಿ ಕಾಲೇಜುಗಳಲ್ಲಿ ಎನ್ ಇಪಿ ಬಂದ ನಂತರ ವಿವಿಧ ಕಾಲೇಜುಗಳಲ್ಲಿ ಶುಲ್ಕ ಪ್ರಮಾಣ 3-4 ಸಾವಿರ ಇತ್ತು. ಆದರೆ ಇಂದು ಎರಡು ಮೂರು ಪಟ್ಟು ಹೆಚ್ಚಿನ ಶುಲ್ಕ ನಿಗದಿ ಮಾಡಲಾಗಿದೆ. ಶುಲ್ಕ ಏರಿಕೆ ಯಾಕೆ ಮಾಡಲಾಗಿದೆ ಎಂದು ಪ್ರಶ್ನಿಸಿದರೆ ಉತ್ತರ ನೀಡುತ್ತಿಲ್ಲ. ರಾಜ್ಯದಲ್ಲಿ ಖಾಸಗಿ ಕಾಲೇಜುಗಳಿಗೆ ಹೋಗಲು ಸಾಧ್ಯವಾಗದ ಮಕ್ಕಳು ಸರ್ಕಾರಿ ಕಾಲೇಜುಗಳಿಗೆ ಹೋಗುತ್ತಿದ್ದಾರೆ. ಆದರೆ ವರ್ಷದಿಂದ ವರ್ಷ ಸಾವಿರಾರು ರೂ ಹೆಚ್ಚಳ ಮಾಡುತ್ತಿದ್ದರೆ. 2020ರಲ್ಲಿ 8 ಸಾವಿರ ಇದ್ದ ಶುಲ್ಕ ಈ ಬಾರಿ 13-14 ಸಾವಿರಕ್ಕೆ ಏರಿಸಿದ್ದಾರೆ ಎಂದರು.</p>



<p>ಹೀಗಾಗಿ ಎನ್ಎಸ್ ಯುಐ ಸಂಘಟನೆಯು ಪ್ರಮುಖ ಆಗ್ರಹವನ್ನು ಸರ್ಕಾರದ ಮುಂದೆ ಇಡುತ್ತಿದೆ. ರಾಜ್ಯದ ಎಲ್ಲಾ ವಿವಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷೆ ಫಲಿತಾಂಶ ನೀಡಬೇಕು. ವಿದ್ಯಾರ್ಥಿಗಳು ಸಾರಿಗೆ ಸಮಸ್ಯೆ ಅನುಭವಿಸುತ್ತಿದ್ದು, ಇದನ್ನು ಸರಿಪಡಿಸಬೇಕು. ಸರ್ಕಾರಿ ಕಾಲೇಜು ಶುಲ್ಕ ಏರಿಕೆ ಮಾಡಲಾಗಿದ್ದು, ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.</p>
]]></content:encoded>
					
		
		
			</item>
		<item>
		<title>ನೋಂದಾಯಿತ ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕ ಮಕ್ಕಳಿಗೆ ಉಚಿತ ಬಸ್ ಪಾಸ್</title>
		<link>https://peepalmedia.com/free-bus-pass-for-children-of-registered-building-other-construction-workers/</link>
		
		<dc:creator><![CDATA[Peepal Media]]></dc:creator>
		<pubDate>Tue, 04 Oct 2022 06:38:49 +0000</pubDate>
				<category><![CDATA[ದಾವಣಗೆರೆ]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[Davangere Divisional Controlling Officer]]></category>
		<category><![CDATA[free bus pass]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[ksrtc davanagere diviision]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=8858</guid>

					<description><![CDATA[ದಾವಣಗೆರೆ:&#160;ನೋಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೊಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕ ಮಕ್ಕಳಿಗೆ ರಾಜ್ಯಾದ್ಯಂತ ವಾಸಸ್ಥಳದಿಂದ 45 ಕಿ.ಮೀ ವರೆಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ದಾವಣಗೆರೆ ವಿಭಾಗೀಯ ನಿಯಂತ್ರಣಧಿಕಾರಿ ಸಿದ್ದೇಶ್‌ ಹೆಬ್ಬಾರ್‌ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ದಾವಣಗೆರೆ ವಿಭಾಗದ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನಗರ ಹಾಗೂ ಗ್ರಾಮಾಂತರ ಪ್ರದೇಶದ [&#8230;]]]></description>
										<content:encoded><![CDATA[
<p style="font-size:20px"><strong>ದಾವಣಗೆರೆ:</strong>&nbsp;ನೋಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೊಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕ ಮಕ್ಕಳಿಗೆ ರಾಜ್ಯಾದ್ಯಂತ ವಾಸಸ್ಥಳದಿಂದ 45 ಕಿ.ಮೀ ವರೆಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.</p>



<p style="font-size:20px">ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ದಾವಣಗೆರೆ ವಿಭಾಗೀಯ ನಿಯಂತ್ರಣಧಿಕಾರಿ ಸಿದ್ದೇಶ್‌ ಹೆಬ್ಬಾರ್‌ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ದಾವಣಗೆರೆ ವಿಭಾಗದ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನಗರ ಹಾಗೂ ಗ್ರಾಮಾಂತರ ಪ್ರದೇಶದ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನಲೆ ನಗರ ವ್ಯಾಪ್ತಿಯಲ್ಲಿನ ಕರ್ನಾಟಕ ಒನ್ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿನ ಗ್ರಾಮ ಒನ್ ಮೂಲಕ ಉಚಿತ ಬಸ್‍ಪಾಸ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿರುತ್ತದೆ ಎಂದು ತಿಳಿಸಿದರು.</p>



<p style="font-size:20px">ಬಸ್‍ಪಾಸ್ ಪಡೆಯಲು ಕಾರ್ಮಿಕ ಇಲಾಖೆಯ ನೊಂದಾಯಿತ ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಗೂ ಆಧಾರದ ಕಾರ್ಡ್‍ಗೆ ಲಿಂಕ್ ಇರುವ ಮೊಬೈಲ್ ನಂಬರ್ ಮಾಹಿತಿಯೊಂದಿಗೆ ಬಸ್‌ಪಾಸ್‌ಗೆ ಅರ್ಜಿ ಸಲ್ಲಿಸಬೇಕು ಎಂದು ಮಾಹಿತಿ ನೀಡಿದರು.</p>
]]></content:encoded>
					
		
		
			</item>
	</channel>
</rss>
