<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Govt of Karnataka &#8211; Peepal Media</title>
	<atom:link href="https://peepalmedia.com/tag/govt-of-karnataka/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sun, 16 Jul 2023 12:12:48 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Govt of Karnataka &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>&#8220;ಬಿಸಿಯೂಟದ ಕಾರ್ಯಕರ್ತರು ಕೈಬಳೆ ತೊಡುವಂತಿಲ್ಲ!&#8221; ; ಸತ್ಯ ಎಷ್ಟು ಸುಳ್ಳೆಷ್ಟು?</title>
		<link>https://peepalmedia.com/bisyuta-activists-cannot-wear-handcuffs-fact-check/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 16 Jul 2023 12:12:24 +0000</pubDate>
				<category><![CDATA[ಸತ್ಯ ಶೋಧ]]></category>
		<category><![CDATA[Govt of India]]></category>
		<category><![CDATA[Govt of Karnataka]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=23798</guid>

					<description><![CDATA[ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರ್ಕಾರ ಹೊರಡಿಸಿದೆ ಎನ್ನಲಾದ ಮಾರ್ಗಸೂಚಿ ಬಗ್ಗೆ ಹಲವಷ್ಟು ಚರ್ಚೆಗಳು ಹುಟ್ಟಿಕೊಂಡಿತ್ತು. ಹೆಚ್ಚಿನ ಮಂದಿ ಅದಕ್ಕೆ ವಿರೋಧ ವ್ಯಕ್ತಪಡಿಸಿ ಧಾರ್ಮಿಕ ಲೇಪನ ಹಚ್ಚುವ ಪ್ರಯತ್ನದಲ್ಲಿದ್ದರು. ಆದರೆ ಅಧಿಕೃತವಾಗಿ ಸರ್ಕಾರವೇ ಇದೊಂದು ಸುಳ್ಳು ಸುದ್ದಿ ಎನ್ನುವ ಮೂಲಕ ವಿರೋಧಿಗಳ ಬೆಂಕಿಗೆ ನೀರು ಸುರಿದು ತಣ್ಣಗೆ ಮಾಡಿದೆ. ರಾಜ್ಯದ ಅಂಗನವಾಡಿ ಕೇಂದ್ರ ಹಾಗೂ ಬಿಸಿಯೂಟದ ಅಡುಗೆ ಕೆಲಸ ಮಾಡುವ ಹೆಂಗಸರು ಕೈಗೆ ಬಳೆ ತೊಡುವಂತಿಲ್ಲ ಎನ್ನುವ ಮಾರ್ಗಸೂಚಿ ಬಗ್ಗೆ ಎರಡು ದಿನಗಳಿಂದ ಬಿಸಿ [&#8230;]]]></description>
										<content:encoded><![CDATA[
<p>ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರ್ಕಾರ ಹೊರಡಿಸಿದೆ ಎನ್ನಲಾದ ಮಾರ್ಗಸೂಚಿ ಬಗ್ಗೆ ಹಲವಷ್ಟು ಚರ್ಚೆಗಳು ಹುಟ್ಟಿಕೊಂಡಿತ್ತು. ಹೆಚ್ಚಿನ ಮಂದಿ ಅದಕ್ಕೆ ವಿರೋಧ ವ್ಯಕ್ತಪಡಿಸಿ ಧಾರ್ಮಿಕ ಲೇಪನ ಹಚ್ಚುವ ಪ್ರಯತ್ನದಲ್ಲಿದ್ದರು. ಆದರೆ ಅಧಿಕೃತವಾಗಿ ಸರ್ಕಾರವೇ ಇದೊಂದು ಸುಳ್ಳು ಸುದ್ದಿ ಎನ್ನುವ ಮೂಲಕ ವಿರೋಧಿಗಳ ಬೆಂಕಿಗೆ ನೀರು ಸುರಿದು ತಣ್ಣಗೆ ಮಾಡಿದೆ.</p>



<p>ರಾಜ್ಯದ ಅಂಗನವಾಡಿ ಕೇಂದ್ರ ಹಾಗೂ ಬಿಸಿಯೂಟದ ಅಡುಗೆ ಕೆಲಸ ಮಾಡುವ ಹೆಂಗಸರು ಕೈಗೆ ಬಳೆ ತೊಡುವಂತಿಲ್ಲ ಎನ್ನುವ ಮಾರ್ಗಸೂಚಿ ಬಗ್ಗೆ ಎರಡು ದಿನಗಳಿಂದ ಬಿಸಿ ಬಿಸಿ ಸುದ್ದಿ ಹರಿದಾಡಿತ್ತು. ರಾಜ್ಯ ಶಿಕ್ಷಣ ಇಲಾಖೆಯೇ ಈ ಒಂದು ಮಾರ್ಗಸೂಚಿ ಹೊರಡಿಸಿದೆ. ಇದು ಸ್ಪಷ್ಟವಾಗಿ ಹಿಂದೂ ಧರ್ಮದ ವಿರೋಧಿ ಸರ್ಕಾರ ಎನ್ನುವ ಮೂಲಕ ಕಾಂಗ್ರೆಸ್ ವಿರೋಧಿಗಳು ಜಾಲತಾಣಗಳಲ್ಲಿ ದೊಡ್ಡ ವಿರೋಧವನ್ನೇ ವ್ಯಕ್ತಪಡಿಸಿದ್ದರು.</p>



<p>ಇಲ್ಲಿ ಕಾಂಗ್ರೆಸ್ ವಿರೋಧಿಗಳು ಮಾತ್ರವಲ್ಲದೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದೇ ಗುರುತಿಸಿಕೊಂಡಿರುವ ಮಾಧ್ಯಮದ ಅನೇಕರು ಈ ಸುದ್ದಿಯ ಸತ್ಯಾಸತ್ಯತೆ ಅರಿಯದೇ ಇದೇ ಸತ್ಯ ಎಂಬಂತಹ ವರದಿ ಬಿತ್ತರಿಸಿದ್ದವು. ಮಾಧ್ಯಮಗಳೇ ವರದಿ ಮಾಡಿದ ಮೇಲೆ ಇನ್ನು ಜನ ಹಿಂದು ಮುಂದು ಯೋಚಿಸದೇ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದರು. ಆದರೆ ಅಸಲಿ ವಿಚಾರದ ಬಗ್ಗೆ ಸರ್ಕಾರವೇ ಈಗ ಮಾಹಿತಿಯನ್ನು ಸ್ಪಷ್ಟಪಡಿಸಿದೆ.</p>



<figure class="wp-block-image size-large"><img fetchpriority="high" decoding="async" width="724" height="1024" src="https://peepalmedia.com/wp-content/uploads/2023/07/IMG-20230716-WA0019-724x1024.jpg" alt="" class="wp-image-23799" srcset="https://peepalmedia.com/wp-content/uploads/2023/07/IMG-20230716-WA0019-724x1024.jpg 724w, https://peepalmedia.com/wp-content/uploads/2023/07/IMG-20230716-WA0019-212x300.jpg 212w, https://peepalmedia.com/wp-content/uploads/2023/07/IMG-20230716-WA0019-768x1086.jpg 768w, https://peepalmedia.com/wp-content/uploads/2023/07/IMG-20230716-WA0019-1086x1536.jpg 1086w, https://peepalmedia.com/wp-content/uploads/2023/07/IMG-20230716-WA0019-150x212.jpg 150w, https://peepalmedia.com/wp-content/uploads/2023/07/IMG-20230716-WA0019-300x424.jpg 300w, https://peepalmedia.com/wp-content/uploads/2023/07/IMG-20230716-WA0019-696x985.jpg 696w, https://peepalmedia.com/wp-content/uploads/2023/07/IMG-20230716-WA0019-1068x1511.jpg 1068w, https://peepalmedia.com/wp-content/uploads/2023/07/IMG-20230716-WA0019.jpg 1131w" sizes="(max-width: 724px) 100vw, 724px" /></figure>



<p>ಅಷ್ಟೆ ಅಲ್ಲದೆ ಮುಖ್ಯಮಂತ್ರಿಗಳ ಕಚೇರಿ ಸಹ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಇದು ರಾಜ್ಯ ಸರ್ಕಾರ ಹೊರಡಿಸಿದ ಸುತ್ತೋಲೆ ಅಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗ ಸೂಚಿಯನ್ನು ಪ್ರಕಟಿಸಿದೆ ಎನ್ನುವ ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. <br>ವಾಸ್ತವದಲ್ಲಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ  ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ. <br>&#8211; ಮುಖ್ಯಮಂತ್ರಿ… <a href="https://t.co/qyNtB93fpu">pic.twitter.com/qyNtB93fpu</a></p>&mdash; CM of Karnataka (@CMofKarnataka) <a href="https://twitter.com/CMofKarnataka/status/1680502754173698051?ref_src=twsrc%5Etfw">July 16, 2023</a></blockquote><script async src="https://platform.twitter.com/widgets.js" charset="utf-8"></script>
</div></figure>



<p>ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ ಎಂಬ ಮಾರ್ಗಸೂಚಿ ಸುಳ್ಳು ಎಂದು ಕರ್ನಾಟಕ ರಾಜ್ಯ ಸರ್ಕಾರ ಹೇಳಿದೆ. ಆದರೆ ಈ ಮಾರ್ಗಸೂಚಿ ಹೊರಡಿಸಿದ್ದು ಕೇಂದ್ರ ಸರ್ಕಾರ ಎಂಬುದನ್ನೂ ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಅಸಲಿ ವಿಚಾರ ಹೊರಹಾಕಿದೆ.</p>



<p>ಕೇಂದ್ರ ಸರ್ಕಾರ ಪೋಷಣ್ ಅಭಿಯಾನದ ಅಡಿಯಲ್ಲಿ 2020 ರ ಅಕ್ಟೋಬರ್ ತಿಂಗಳಿನಲ್ಲೇ ಇಂತದ್ದೊಂದು ಮಾರ್ಗಸೂಚಿ ಹೊರಡಿಸಿತ್ತು. ಬಿಸಿಯೂಟದ ಕಾರ್ಯಕರ್ತೆಯರು ಅಡುಗೆ ಮಾಡುವಾಗ ಮತ್ತು ಬಡಿಸುವಾಗ ಏನೇನು ಇರಬಾರದು ಎಂದು ಮಾಹಿತಿ ನೀಡುವ ಮಾರ್ಗಸೂಚಿ ನೀಡಿತ್ತು. ಸುಮಾರು ಏಳೆಂಟು ಅಂಶಗಳನ್ನು ಒಳಗೊಂಡಂತಹ ಮಾರ್ಗಸೂಚಿಯಲ್ಲಿ ನೈಲ್ ಪಾಲಿಷ್, ಕೃತಕ ಉಗುರನ್ನು ಅಡುಗೆ ಮಾಡುವಾಗ ಮತ್ತು ಊಟ ಬಡಿಸುವಾಗ ಬಳಸಬಾರದು ಎಂದಾಗಿದೆ‌. ಜೊತೆಗೆ ಕೈಗಡಿಯಾರ, ಉಂಗುರ, ಬಂಗಾರ, ಕೈಬಳೆ ಇವುಗಳನ್ನೂ ಸಹ ಕೆಲಸ ಮಾಡುವಾಗ ತಗೆದಿಡಬೇಕು ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ.</p>



<figure class="wp-block-image size-large is-resized"><img decoding="async" src="https://peepalmedia.com/wp-content/uploads/2023/07/IMG_20230716_173340-1024x930.jpg" alt="" class="wp-image-23800" width="377" height="342" srcset="https://peepalmedia.com/wp-content/uploads/2023/07/IMG_20230716_173340-1024x930.jpg 1024w, https://peepalmedia.com/wp-content/uploads/2023/07/IMG_20230716_173340-300x273.jpg 300w, https://peepalmedia.com/wp-content/uploads/2023/07/IMG_20230716_173340-768x698.jpg 768w, https://peepalmedia.com/wp-content/uploads/2023/07/IMG_20230716_173340-150x136.jpg 150w, https://peepalmedia.com/wp-content/uploads/2023/07/IMG_20230716_173340-696x632.jpg 696w, https://peepalmedia.com/wp-content/uploads/2023/07/IMG_20230716_173340-1068x970.jpg 1068w, https://peepalmedia.com/wp-content/uploads/2023/07/IMG_20230716_173340.jpg 1080w" sizes="(max-width: 377px) 100vw, 377px" /></figure>



<figure class="wp-block-image size-full"><img decoding="async" width="540" height="776" src="https://peepalmedia.com/wp-content/uploads/2023/07/IMG_20230716_173527.jpg" alt="" class="wp-image-23801" srcset="https://peepalmedia.com/wp-content/uploads/2023/07/IMG_20230716_173527.jpg 540w, https://peepalmedia.com/wp-content/uploads/2023/07/IMG_20230716_173527-209x300.jpg 209w, https://peepalmedia.com/wp-content/uploads/2023/07/IMG_20230716_173527-150x216.jpg 150w, https://peepalmedia.com/wp-content/uploads/2023/07/IMG_20230716_173527-300x431.jpg 300w" sizes="(max-width: 540px) 100vw, 540px" /></figure>



<p>2020 ರಲ್ಲೇ ಕೇಂದ್ರ ಸರ್ಕಾರ ಹೊರಡಿಸಿದ ಈ ಸುತ್ತೋಲೆ ಈಗ ಚರ್ಚೆಗೆ ಬಂದಿದೆ. ಆದರೆ ಚರ್ಚೆ ರಾಜ್ಯ ಸರ್ಕಾರವನ್ನು ಗುರಿ ಮಾಡಿ ನಡೆದದ್ದು ಮಾತ್ರ ವಿಪರ್ಯಾಸವೇ ಸರಿ. ಸತ್ಯಾಸತ್ಯತೆಯನ್ನು ಅಳೆದು ತೂಗಿ ವರದಿ ಮಾಡಬೇಕಾದ ಮಾಧ್ಯಮಗಳು ಕೂಡಾ ಇತ್ತೀಚೆಗೆ Biased ಆಗಿರುವುದನ್ನು ಈ ಸುದ್ದಿಯನ್ನು ನೋಡಿ ಉದಾಹರಿಸಬಹುದು.</p>
]]></content:encoded>
					
		
		
			</item>
		<item>
		<title>ಬಜರಂಗದಳದ ರೌಡಿಶೀಟರ್ ಸಕಲೇಶಪುರ ರಘು ಬಂಧನಕ್ಕೆ ಸಿಪಿಐಎಂ ಹಾಗೂ ಎಸ್ಡಿಪಿಐ ಆಗ್ರಹ</title>
		<link>https://peepalmedia.com/cpim-and-sdpi-demand-for-raghus-arrest-in-sakleshpur/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 01 Jul 2023 09:37:21 +0000</pubDate>
				<category><![CDATA[ರಾಜ್ಯ]]></category>
		<category><![CDATA[cpim]]></category>
		<category><![CDATA[Govt of Karnataka]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Raghu sakaleshpura]]></category>
		<category><![CDATA[SDPI]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=22980</guid>

					<description><![CDATA[&#8216;ಮುಸ್ಲಿಂ ವ್ಯಾಪಾರಿಗಳು ಬಂದರೆ ಗುಂಡಿಟ್ಟು ಸಾಯಿಸಿ&#8217; ಎನ್ನುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗಲು ಕಾರಣನಾದ ಬಜರಂಗದಳದ ಮಾಜಿ ರಾಜ್ಯ ಸಂಚಾಲಕ, ರೌಡಿಶೀಟರ್ ಸಕಲೇಶಪುರ ರಘು ಬಂಧನಕ್ಕೆ ರಾಜ್ಯಾದ್ಯಂತ ಹಲವು ಜನಪರ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಸರ್ಕಾರವನ್ನು ಆಗ್ರಹಿಸಿವೆ. ಈ ಹಿಂದೆಯೂ ಕೂಡಾ ಹಲವು ಬಾರಿ ಹಿಂದುತ್ವದ ಸಂಘಟನೆಗಳ ಹೆಸರಿನಲ್ಲಿ ಈ ವ್ಯಕ್ತಿ ಸಮಾಜದಲ್ಲಿ ಶಾಂತಿ ಕೆಡಿಸಲು ಪ್ರಯತ್ನಿಸಿದ್ದು, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈತನ ಆಟಾಟೋಪಕ್ಕೆ ಲಂಗು ಲಗಾಮು ಇಲ್ಲದಂತಾಗಿತ್ತು. ಆದರೆ ಇದನ್ನೇ ಮುಂದುವರೆಸಿಕೊಂಡು ಬಂದ [&#8230;]]]></description>
										<content:encoded><![CDATA[
<p>&#8216;ಮುಸ್ಲಿಂ ವ್ಯಾಪಾರಿಗಳು ಬಂದರೆ ಗುಂಡಿಟ್ಟು ಸಾಯಿಸಿ&#8217; ಎನ್ನುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗಲು ಕಾರಣನಾದ ಬಜರಂಗದಳದ ಮಾಜಿ ರಾಜ್ಯ ಸಂಚಾಲಕ, ರೌಡಿಶೀಟರ್ ಸಕಲೇಶಪುರ ರಘು ಬಂಧನಕ್ಕೆ ರಾಜ್ಯಾದ್ಯಂತ ಹಲವು ಜನಪರ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಸರ್ಕಾರವನ್ನು ಆಗ್ರಹಿಸಿವೆ.</p>



<p>ಈ ಹಿಂದೆಯೂ ಕೂಡಾ ಹಲವು ಬಾರಿ ಹಿಂದುತ್ವದ ಸಂಘಟನೆಗಳ ಹೆಸರಿನಲ್ಲಿ ಈ ವ್ಯಕ್ತಿ ಸಮಾಜದಲ್ಲಿ ಶಾಂತಿ ಕೆಡಿಸಲು ಪ್ರಯತ್ನಿಸಿದ್ದು, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈತನ ಆಟಾಟೋಪಕ್ಕೆ ಲಂಗು ಲಗಾಮು ಇಲ್ಲದಂತಾಗಿತ್ತು. ಆದರೆ ಇದನ್ನೇ ಮುಂದುವರೆಸಿಕೊಂಡು ಬಂದ ಸಕಲೇಶಪುರ ರಘುಗೆ ಈಗ ಬಂಧನದ ಭೀತಿ ಎದುರಾಗಿದೆ. ನಿನ್ನೆಯ ದಿನ ತಡರಾತ್ರಿ ಪೊಲೀಸರು ಬಂಧಿಸಲು ಹೋದಾಗ ಸುಳಿವು ಅರಿತು ಅಜ್ಞಾತ ಸ್ಥಳಕ್ಕೆ ಈತ ಪರಾರಿಯಾಗಿದ್ದಾನೆ. ಸಧ್ಯ ಈತನ ಸಮಾಜಘಾತುಕ ಚಟುವಟಿಕೆಗಳ ಬಗ್ಗೆ ಪ್ರಸ್ತಾಪಿಸಿ ಸಿಪಿಎಂ ಹಾಸನ ಜಿಲ್ಲಾ ಘಟಕ ರಘು ಬಂಧನಕ್ಕೆ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದೆ.</p>



<p>&#8220;ಮುಸ್ಲಿಮರನ್ನು ಗುಂಡು ಹಾರಿಸಿ ಕೊಲ್ಲುವುದಾಗಿ ಬಹಿರಂಗವಾಗಿ ಘೋಷಿಸಿರುವ ಸಕಲೇಶಪುರದ ರಘು ಎಂಬ ಸಮಾಜಘಾತಕನನ್ನು ಪೋಲೀಸರು ಕೂಡಲೇ ಬಂಧಿಸುವಂತೆ ಸಿಪಿಐಎಂ ಹಾಸನ ಜಿಲ್ಲಾ ಸಮಿತಿಯು ಆಗ್ರಹಿಸುತ್ತದೆ. ಹಾಗೂ ಆತನ ಮೇಲೆ ಕೊಲೆಗೆ ಪ್ರಚೋದನೆ, ಭಯೋತ್ಪಾದನೆ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡಿಕೆಗೆ ಸಂಬಂಧಿಸಿದ ಕಾಯ್ದೆಗಳನ್ವಯ ಕೇಸು ದಾಖಲಿಸಿ ಜೈಲಿಗೆ ಕಳುಹಿಸಬೇಕೆನ್ನುವುದು ಸಿಪಿಐಎಂ ಒತ್ತಾಯವಾಗಿದೆ.</p>



<p>ಸಕಲೇಶಪುರದ ರಘು ಎಂಬ ಸಮಾಜಘಾತುಕ ಭಜರಂಗದಳದ ಹೆಸರಿನಲ್ಲಿ ಹಲವಾರು ಅಕ್ರಮ ಹಾಗೂ ಕುಕೃತ್ಯಗಳನ್ನು ನಡೆಸಿರುತ್ತಾನೆ. ಅವನ ಮೇಲೆ ಈಗಾಗಲೇ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. &#8216;ಗೋರಕ್ಷಣೆ&#8217;, &#8216;ಹಿಂದೂ&#8217; ಧರ್ಮ ರಕ್ಷಣೆ ಹೆಸರಿನಲ್ಲಿ ರೋಲ್‌ಕಾಲ್, ಗೂಂಡಾಗಿರಿಯಂತಹ ಹಲವಾರು ಕಾನೂನು ಭಾಹಿರ ಚಟುವಟಿಕೆಯಲ್ಲಿ ತೊಡಗಿದ್ದಾನೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವನ ವಿರುದ್ಧ ಪೋಲೀಸರು ಕಠಿಣ ಕ್ರಮ ಜರುಗಿಸಲು ವಿಫಲರಾಗಿದ್ದರು. ಸಕಲೇಶಪುರ ತಾಲ್ಲೂಕಿನಲ್ಲಿ ಕೆಲವು ಪೋಲೀಸರೂ ಅವನೊಂದಿಗೆ ಶಾಮೀಲಾಗಿರುವ ಮಾತುಗಳಿವೆ. ಈಗ ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಆಯ್ಕೆಯಾಗಿರುವುದು ಆತನಿಗೆ ಮತ್ತಷ್ಟು ಉತ್ತೇಜನ ಸಿಕ್ಕಂತಾಗಿದೆ. ಸಕಲೇಶಪರ ಕ್ಷೇತ್ರದ ಬಿಜೆಪಿ ಶಾಸಕ ಸಿಮೆಂಟ್ ಮಂಜು ಬೆಂಬಲಿಗನಾಗಿರುವ ರಘು ವಿರುದ್ಧ ಪೋಲೀಸರು ಅತ್ಯಂತ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕಿದೆ.</p>



<p>ನಾಗರಿಕ ಸಮಾಜ ಮತ್ತು ಸರ್ಕಾರಕ್ಕೆ ಸವಾಲಾಗಿರುವ ಇಂತಹ ದುಷ್ಟ ಶಕ್ತಿಗಳ ನಿಗ್ರಹಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು. ಸಂವಿಧಾನದ ಕಾನೂನುಗಳ ಆಡಳಿತದ ಸರಾಗವಾಗವಾಗಿ ನಡೆಯಬೇಕಿದ್ದರೆ ರಘುನಂತಹ ದುಷ್ಟರ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸುವ ಮುಖಾಂತರ ಅಂತಹ ದುಷ್ಟ ಶಕ್ತಿಗಳಿಗೆ ಸ್ಪಷ್ಟ ಸಂದೇಶವನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೋಲೀಸು ಇಲಾಖೆಯ ವಿರುದ್ಧ ತೀವ್ರ ಹೋರಾಟಕ್ಕೆ ಇಲಿಯುವಯದು ಅನಿವಾರ್ಯವಾಗಲಿದೆ ಎಂದು ಸಿಪಿಐಎಂ ಮನವರಿಕೆ ಮಾಡಿಕೊಡಲು ಬಯಸುತ್ತದೆ.&#8221; ಎಂದು ಸಿಪಿಐಎಂ ಪಕ್ಷದ ಹಾಸನ ಜಿಲ್ಲಾ ಘಟಕದ ಕಾರ್ಯದರ್ಶಿ ಧರ್ಮೇಶ್ ಆಗ್ರಹಿಸಿದ್ದಾರೆ.</p>



<p>ಇದರ ಜೊತೆಗೆ ರಾಜ್ಯ ಎಸ್ಡಿಪಿಐ ಪಕ್ಷ ಕೂಡಾ ಈತನ ಕುಕೃತ್ಯಗಳ ಬಗ್ಗೆ ಪ್ರಸ್ತಾಪಿಸಿ ಶೀಘ್ರದಲ್ಲೇ ಈತನ ಬಂಧನವಾಗಲಿ ಎಂದು ಆಗ್ರಹಿಸಿದೆ‌. ಅದರಂತೆ<br>&#8220;ಗುಂಡು ಹೊಡೆದು ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡಿರುವ ರಘು ಸಕಲೇಶಪುರ ನನ್ನು ತಕ್ಷಣ ಬಂಧಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಲು ಗೃಹಮಂತ್ರಿ ಜಿ.ಪರಮೇಶ್ವರ್ ಅವರಲ್ಲಿ ಆಗ್ರಹಿಸುತ್ತೇನೆ. ಈತ ಈ ಹಿಂದೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಶಾಲೆಯೊಂದರಲ್ಲಿ ನಡೆದಿದ್ದ ಸಂಘದ ಕಾರ್ಯಕರ್ತರಿಗೆ ಕಾನೂನು ಬಾಹಿರ ಬಂದೂಕು ತರಬೇತಿ ಹಾಗೂ ಶಸ್ತ್ರ ದೀಕ್ಷೆಯಲ್ಲಿ ಭಾಗವಹಿಸಿ ಸಕಲೇಶಪುರದಿಂದ ನಿರಂತರವಾಗಿ ಕೊಡಗು ಜಿಲ್ಲೆಗೆ ಆಗಮಿಸಿ ಕೋಮು ವೈಷಮ್ಯವನ್ನು ಮೂಡಿಸಿ ಸಮಾಜದ ಶಾಂತಿ ಕದಡಲು ಯತ್ನಿಸಿದ್ದ ಸಂಧರ್ಭದಲ್ಲೇ ಬಂಧಿಸಿ ಅಕ್ರಮ ಶಸ್ತ್ರಾಸ್ತ್ರಗಳ ಸಂಗ್ರಹ ಮತ್ತು ತರಬೇತಿ ಬಗ್ಗೆ ಕೂಲಂಕಷ ತನಿಖೆ ನಡೆಸುವಂತೆ ಎಸ್ಡಿಪಿಐ ಪಕ್ಷ ಅಂದೇ ಪೋಲಿಸ್ ಇಲಾಖೆಯನ್ನು ಆಗ್ರಹಿಸಿತ್ತು. ತ್ರಿಶೂಲ ದೀಕ್ಷೆ ನೀಡಿದ ಬಳಿಕ ತ್ರಿಶೂಲ ದೀಕ್ಷೆ ನೀಡಿದ ಬಳಿಕ ಭಜರಂಗದಳ ಗೂಂಡಗಳು ಅದನ್ನು ನಾಗರಿಕರ ಮತ್ತು ವಿಧ್ಯಾರ್ಥಿಗಳ ವಿರುದ್ಧ ಬಳಸಿ ಕೊಲೆಯತ್ನದಂತಹ ಕೃತ್ಯವನ್ನು ನಡೆಸಿರುವ ಉದಾಹರಣೆಗಳು ಇವೆ, ಅಲ್ಲದೇ ನೆರೆಯ ಕೇರಳದಲ್ಲಿ ಕೂಡ ಸಂಘಪರಿವಾರ ಈ ರೀತಿಯ ಬಂದೂಕು,ಪೆಟ್ರೋಲ್ ಬಾಂಬ್ ತರಬೇತಿ ನೀಡಿ ಪೋಲಿಸ್ ಠಾಣೆಗಳ ಮೇಲೆಯೇ ದಾಳಿ ನಡೆಸಿದ ಹಲವಾರು ನಿದರ್ಶನಗಳು ಇವೆ.&#8221; ಎನ್ನುವ ಮೂಲಕ SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಸರ್ಕಾರವನ್ನು ಆಗ್ರಹಿಸಿದ್ದಾರೆ.</p>
]]></content:encoded>
					
		
		
			</item>
	</channel>
</rss>
