<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Gulbarga &#8211; Peepal Media</title>
	<atom:link href="https://peepalmedia.com/tag/gulbarga/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 22 May 2024 07:08:52 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Gulbarga &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>  ರೋಹಿಣಾಕ್ಷ ಶಿರ್ಲಾಲುರಿಂದ ಬೌದ್ಧ-ಮುಸ್ಲಿಮರಲ್ಲಿ ಕೋಮುಭಾವನೆ ಕೆರಳಿಸುವ ಬರಹ: ವಿವಿಗೆ ಪತ್ರ ಬರೆಯಲು ನಿರ್ಧಾರ</title>
		<link>https://peepalmedia.com/writing-by-rohinaksha-shirlalu-inciting-communal-feelings-among-buddhists-and-muslims-decision-to-write-letter-to-v-v/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 22 May 2024 07:08:52 +0000</pubDate>
				<category><![CDATA[ಇತಿಹಾಸ]]></category>
		<category><![CDATA[ಕಲೆ – ಸಾಹಿತ್ಯ]]></category>
		<category><![CDATA[ದಲಿತ ನೋಟ]]></category>
		<category><![CDATA[ಧರ್ಮ- ಸಂಸ್ಕೃತಿ]]></category>
		<category><![CDATA[ಸೈನ್ಸ್ + ಟೆಕ್ನಾಲಜಿ]]></category>
		<category><![CDATA[bengalure]]></category>
		<category><![CDATA[bhowdha]]></category>
		<category><![CDATA[Gulbarga]]></category>
		<category><![CDATA[hindu]]></category>
		<category><![CDATA[india]]></category>
		<category><![CDATA[kalaburagi]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Muslim]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=39774</guid>

					<description><![CDATA[ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ರೋಹಿಣಾಕ್ಷ ಶಿರ್ಲಾಲ ಎಂಬುವವರು ಬರೆದಿರುವ ಲೇಖನದಲ್ಲಿ &#160;ಬೌದ್ಧರು, ಮುಸ್ಲಿಮರು, ಅಂಬೇಡ್ಕರ್‌ವಾದಿಗಳಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ಲೇಖಕರು ಸುಳ್ಳು ಬರೆದಿದ್ದಾರೆ ಎಂದು ಕಲಬುರಗಿಯ ಸೌಹಾರ್ಧ ಬಳಗದ ದತ್ತಾತ್ರೆಯ ಇಕ್ಕಳಕಿ ಆರೋಪಿಸಿದ್ದಾರೆ. &#160;ರೋಹಿಣಾಕ್ಷ ಅವರು &#8216;ಅಂಬೇಡ್ಕರರನ್ನು ಬುದ್ಧನೇಕೆ ಸೆಳೆದ&#8217; ಶಿರ್ಷಿಕೆಯೊಂದಿಗೆ ಇಂದು ಬುಧವಾರ ವಿಜಯಕರ್ನಾಟಕ ದಿನಪತ್ರಿಕೆಯಲ್ಲಿ ಲೇಖನ ಪ್ರಕಟಿಸಿದ್ದಾರೆ. ಈ ಲೇಖನದಲ್ಲಿ &#8216;ಬೌದ್ಧಧಮ್ಮಕ್ಕೆ ಬಾರಿ ಪೆಟ್ಟು ಬಿದ್ದದ್ದು ಮುಸ್ಲಿಂ ಆಕ್ರಮಣದಿಂದ. &#160;ಮುಸ್ಲಿಮರು ಬೌದ್ಧ ವಿಗ್ರಹಗಳನ್ನು ನಾಶ ಮಾಡಿದರು, ಬಿಕ್ಕುಗಳನ್ನು ಕೊಂದುಬಿಟ್ಟರು, ನಳಂದವನ್ನು ಸುಟ್ಟುಹಾಕಿದರು, [&#8230;]]]></description>
										<content:encoded><![CDATA[
<p>ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ರೋಹಿಣಾಕ್ಷ ಶಿರ್ಲಾಲ ಎಂಬುವವರು ಬರೆದಿರುವ ಲೇಖನದಲ್ಲಿ &nbsp;ಬೌದ್ಧರು, ಮುಸ್ಲಿಮರು, ಅಂಬೇಡ್ಕರ್‌ವಾದಿಗಳಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ಲೇಖಕರು ಸುಳ್ಳು ಬರೆದಿದ್ದಾರೆ ಎಂದು ಕಲಬುರಗಿಯ ಸೌಹಾರ್ಧ ಬಳಗದ ದತ್ತಾತ್ರೆಯ ಇಕ್ಕಳಕಿ ಆರೋಪಿಸಿದ್ದಾರೆ.</p>



<p>&nbsp;ರೋಹಿಣಾಕ್ಷ ಅವರು &#8216;ಅಂಬೇಡ್ಕರರನ್ನು ಬುದ್ಧನೇಕೆ ಸೆಳೆದ&#8217; ಶಿರ್ಷಿಕೆಯೊಂದಿಗೆ ಇಂದು ಬುಧವಾರ ವಿಜಯಕರ್ನಾಟಕ ದಿನಪತ್ರಿಕೆಯಲ್ಲಿ ಲೇಖನ ಪ್ರಕಟಿಸಿದ್ದಾರೆ. ಈ ಲೇಖನದಲ್ಲಿ &#8216;ಬೌದ್ಧಧಮ್ಮಕ್ಕೆ ಬಾರಿ ಪೆಟ್ಟು ಬಿದ್ದದ್ದು ಮುಸ್ಲಿಂ ಆಕ್ರಮಣದಿಂದ. &nbsp;ಮುಸ್ಲಿಮರು ಬೌದ್ಧ ವಿಗ್ರಹಗಳನ್ನು ನಾಶ ಮಾಡಿದರು, ಬಿಕ್ಕುಗಳನ್ನು ಕೊಂದುಬಿಟ್ಟರು, ನಳಂದವನ್ನು ಸುಟ್ಟುಹಾಕಿದರು, ಭಾರತದಲ್ಲಿ ಮಾತ್ರವಲ್ಲ ಇಸ್ಲಾಂ ಹೋದಡೆಯಲ್ಲೆಲ್ಲಾ ನಾಶ ಮಾಡಿತು&#8217; ಎಂಬ ಸತ್ಯವನ್ನು ಅಂಬೇಡ್ಕರ್‌ ಅರ್ಥ ಮಾಡಿಕೊಂಡಿದ್ದರು ಎಂದು ರೋಹಿಣಾಕ್ಷ ಅಂಬೇಡ್ಕರ್‌ ಹೆಸರಲ್ಲಿ ಸುಳ್ಳು ಮಾಹಿತಿಯನ್ನು ಬಿತ್ತುತ್ತಿದ್ದಾರೆ ಎಂದು ಎಂದು ಇಕ್ಕಳಿಕೆ ಆರೋಪಿಸಿದ್ದಾರೆ.</p>



<p>ಬೌದ್ಧ ಧರ್ಮದ ಉದಯವನ್ನು ಒಂದು ಕ್ರಾಂತಿಯೆಂದೂ, ಬ್ರಾಹ್ಮಣರಿಂದ ಪ್ರಾರಂಭವಾದ ಪ್ರತಿಕ್ರಾಂತಿಯು ಬೌದ್ಧಧಮ್ಮದ ಅವನತಿ ಮತ್ತು ಪತನಕ್ಕೆ ಕಾರಣವಾಯಿತು ಎಂದು ಡಾ. ಅಂಬೇಡ್ಕರ್‌ ದಾಖಲಿಸಿರುವುದು (ಸಂ:3/2015, ಪುಟ:163) ಅಂಬೇಡ್ಕರ್‌ ಸಂಪುಟಗಳಲ್ಲಿ ದಾಖಲಾಗಿದೆ. ತಾವು ಬೌದ್ಧ ಧಮ್ಮಕ್ಕೆ ಮತಾಂತರ ಆಗಲು ಹಿಂದೂ ಧರ್ಮದ ಸನಾತನತೆಯೆ ಕಾರಣ ಎಂದು ಅಂಬೇಡ್ಕರ್‌ ಪದೆ ಪದೆ ಹೇಳುತ್ತಿದ್ದರು ಎಂದು ಇಕ್ಕಳಕಿ ತಿಳಿಸಿದ್ದಾರೆ.</p>



<p>3.10.1935 ರಲ್ಲಿ ನಾಸಿಕ್ ಜಿಲ್ಲೆಯ ಯಹೋಲ ಮುನಿಸಿಪಾಲಟಿಯು ಡಾ.ಅಂಬೇಡ್ಕರ್ ಅವರಿಗೆ ಬಿನ್ನವತ್ತಳೆ ಅರ್ಪಿಸಿತು. ಇದಕ್ಕೆ ಉತ್ತರಿಸುತ್ತಾ ಡಾ. ಅಂಬೇಡ್ಕರ್ &#8216;ಹಿಂದೂಧರ್ಮದಲ್ಲಿ ಬೇರೂರಿದ ಅಸಮಾನತೆಯು ಆ ಧರ್ಮವನ್ನು ತೊರೆಯುವಂತೆ ನನ್ನನ್ನು ಒತ್ತಾಯಿಸುತ್ತಿದೆ. ನನ್ನ ತಪ್ಪಿಲ್ಲದೆ ಇದ್ದರೂ ನಾನು&nbsp; ಅಸ್ಪೃಶ್ಯನಾಗಿ ಜನಿಸಿದೆ. ಈಗ ನಾನು ಹಿಂದೂವಾಗಿ ಸಾಯಲಾರೆ, ಇದರ ನಿರ್ಧಾರ ನನ್ನ ಕೈಯಲ್ಲಿದೆ&#8217; ಎಂದು ಹೇಳುತ್ತಾರೆ. ಹೀಗೆ ಬೌದ್ಧ ಧರ್ಮ ನಾಶವಾಗಲು ಬ್ರಾಹ್ಮಣರು ಕಾರಣ ಎಂಬ ಸತ್ಯ ಅಂಗೈಯಲ್ಲಿ ಇರುವಾಗ ರೋಹಿಣಾಕ್ಷ ಅವರು ಬೌದ್ಧ ಧರ್ಮದ ನಾಶಕ್ಕೆ ಮುಸ್ಲಿಮರು ಕಾರಣ ಎನ್ನುವ ಮೂಲಕ ಕೋಮು ಬಾವನೆ ಕೆರಳಿಸಲು ಕಾರಣರಾಗಿದ್ದಾರೆ. ಲೇಖಕರು ಇಡೀ ಲೇಖನದಲ್ಲಿ ಒಂದೇ ಒಂದು ಪದವನ್ನು ಹಿಂದೂ ಧರ್ಮದ ಸನಾತನೆಯ ಬಗ್ಗೆ ಉಲ್ಲೇಖ ಮಾಡದೆ ಲೇಖಕರು ದಿಡೀರ್ &#8216;ಮುಸ್ಲಿಮರೆ ಬೌದ್ಧಧರ್ಮದ ನಾಶಕರು&#8217; ಎಂದು ಬರೆದಿದ್ದಾರೆ ಎಂದು ದೂರಿದ್ದಾರೆ.</p>



<p>ಕಲಬುರಗಿ ಹಿಂದೂ-ಬೌದ್ಧ-ಮುಸ್ಲಿಂ ಧರ್ಮೀಯರು ಸಾಮರಸ್ಯದಿಂದ ಬದುಕುವ ಸೂಫಿ-ಶರಣರ ಸೌಹಾರ್ಧದ ನೆಲೆ. ಇಂತಹ ನೆಲೆಯಲ್ಲಿ ಬೌದ್ಧರು-ಮುಸ್ಲೀಮರ ಮಧ್ಯೆ ಕೋಮು ದ್ವೇಶವನ್ನು ಬಿತ್ತಲು ಈ ಲೇಖಕರು ಪ್ರಯತ್ನಿಸಿದ್ದಾರೆ. ಈ ಮೂಲದ ಸ್ವತಃ ಅಂಬೇಡ್ಕರ್ ಆಲೋಚನೆಗಳನ್ನು ತಪ್ಪಾಗಿ ಅರ್ಥೈಸಲು ಪ್ರಯತ್ನಿಸಿದ್ದಾರೆ. ಈ ಮೂಲಕ ಕಲಬುರಗಿಯ ಅಂಬೇಡ್ಕರ್ ವಾದಿಗಳಿಗೂ ಪರೋಕ್ಷವಾಗಿ ಅವಮಾನ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಜೈಭೀಮ್ ಬಂಧುಗಳು, ಬೌದ್ಧಾನುಯಾಯಿಗಳು, ಮುಸ್ಲೀಂ ಬಂಧುಗಳು ಒಟ್ಟಾಗಿ ಈ ಬರಹವನ್ನೂ, ಈ ಬರಹ ಬರೆದ ಲೇಖಕರಿಗೂ ಕಲಬುರಗಿಯ ಸೌಹಾರ್ಧ ಕದಡುವ ನೀಚತನಕ್ಕೆ ದಿಕ್ಕಾರ ಹೇಳಬೇಕಿದೆ. ಈ ಕುರಿತು ಸೆಂಟ್ರಲ್ ಯುನಿವರ್ಸಿಟಿಯ ಕುಲಪತಿಗಳಿಗೆ ಎಚ್ಚರಿಕೆಯ ಪತ್ರ ನೀಡಲಾಗುವುದು ಎಂದು ದತ್ರಾತ್ರೆಯ ಇಕ್ಕಳಕಿ ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಗಡಿಪಾರಿನ ಸೇಡಿಗೆ ಫೋನ್ ಆಡಿಯೋ ಹರಿಬಿಟ್ಟ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್!</title>
		<link>https://peepalmedia.com/bjp-candidate-manikanth-rathod-leaked-phone-audio-to-avenge-exile/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 04 Dec 2022 02:16:25 +0000</pubDate>
				<category><![CDATA[ರಾಜಕೀಯ]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[Gulbarga]]></category>
		<category><![CDATA[kalaburagi]]></category>
		<category><![CDATA[Kalburgi Commissioner]]></category>
		<category><![CDATA[karnataka]]></category>
		<category><![CDATA[Manikanta Ratod]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[priyanka kharge]]></category>
		<category><![CDATA[Singer Mangli]]></category>
		<category><![CDATA[Viral Audio]]></category>
		<guid isPermaLink="false">https://peepalmedia.com/?p=17425</guid>

					<description><![CDATA[ಕಾಂಗ್ರೆಸ್ ನಾಯಕ ಶಾಸಕ ಪ್ರಿಯಾಂಕ್ ಖರ್ಗೆ ಮತ್ತು ಚಿತ್ತಾಪುರ ಕ್ಷೇತ್ರದ ಮುಂದಿನ ಬಿಜೆಪಿ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿರುವ ಮಣಿಕಂಠ ರಾಠೋಡ್ ಅವರ ನಡುವಿನ ರಾಜಕೀಯ ಸಮರ ಈಗ ಹೊಸ ತಿರುವು ಪಡೆದುಕೊಂಡಿದೆ. ಅದರಲ್ಲಿ ಗುಲ್ಬರ್ಗ ಕಮೀಷನರ್ ರವಿಕುಮಾರ್ ಅವರ ಪತ್ನಿ ರೂಪಾಲಿ ನಾಯಕ್ ಅವರು ಮಣಿಕಂಠ ರಾಠೋಡ್ ಅವರ ಜೊತೆಗೆ ಮಾತಾಡಿರುವ ಆಡಿಯೋ ಈಗ ವೈರಲ್ ಆಗಿದ್ದು, ಅದರ ಸತ್ಯಾಸತ್ಯತೆ ಏನು ಎಂಬ ಬಗ್ಗೆ ಪೀಪಲ್ ಮೀಡಿಯಾ ನಡೆಸಿದ ಒಂದು FACT CHECK ತನಿಖಾ ವರದಿ ಹೀಗಿದೆ. [&#8230;]]]></description>
										<content:encoded><![CDATA[
<p style="font-size:20px">ಕಾಂಗ್ರೆಸ್ ನಾಯಕ ಶಾಸಕ ಪ್ರಿಯಾಂಕ್ ಖರ್ಗೆ ಮತ್ತು ಚಿತ್ತಾಪುರ ಕ್ಷೇತ್ರದ ಮುಂದಿನ ಬಿಜೆಪಿ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿರುವ ಮಣಿಕಂಠ ರಾಠೋಡ್ ಅವರ ನಡುವಿನ ರಾಜಕೀಯ ಸಮರ ಈಗ ಹೊಸ ತಿರುವು ಪಡೆದುಕೊಂಡಿದೆ. ಅದರಲ್ಲಿ ಗುಲ್ಬರ್ಗ ಕಮೀಷನರ್ ರವಿಕುಮಾರ್ ಅವರ ಪತ್ನಿ ರೂಪಾಲಿ ನಾಯಕ್ ಅವರು ಮಣಿಕಂಠ ರಾಠೋಡ್ ಅವರ ಜೊತೆಗೆ ಮಾತಾಡಿರುವ ಆಡಿಯೋ ಈಗ ವೈರಲ್ ಆಗಿದ್ದು, ಅದರ ಸತ್ಯಾಸತ್ಯತೆ ಏನು ಎಂಬ ಬಗ್ಗೆ <strong>ಪೀಪಲ್ ಮೀಡಿಯಾ </strong>ನಡೆಸಿದ ಒಂದು FACT CHECK ತನಿಖಾ ವರದಿ ಹೀಗಿದೆ.</p>



<p style="font-size:20px">ಮಣಿಕಂಠ ರಾಠೋಡ್ ಹಿನ್ನೆಲೆ ನೋಡಿದಾಗ ಈ ವ್ಯಕ್ತಿ ರಾಜಕೀಯವಾಗಿ ಬಿಜೆಪಿ ಪಕ್ಷದವರಾಗಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದಾರೆ. ಹಾಗಾಗೇ ಪ್ರಿಯಾಂಕ್ ಖರ್ಗೆ ವಿರುದ್ಧ ನಿರಂತರವಾಗಿ ಒಂದಿಲ್ಲೊಂದು ಆರೋಪ ಪ್ರತ್ಯಾರೋಪ ನಡೆಯುತ್ತಲೇ ಇದೆ. ಕಳೆದ ನವೆಂಬರ್ ನಲ್ಲೂ ಕೂಡಾ ಈ ವ್ಯಕ್ತಿ ಬಹಿರಂಗ ಪತ್ರಿಕಾಗೋಷ್ಠಿಯಲ್ಲೂ &#8216;ಪ್ರಿಯಾಂಕ್ ಖರ್ಗೆಗೆ ಶೂಟ್ ಮಾಡಲೂ ನಾವು ರೆಡಿ&#8217; ಎಂಬಂತೆ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು. </p>



<p style="font-size:20px">ರಾಜಕೀಯದ ಹೊರತಾಗಿಯೂ ಈ ವ್ಯಕ್ತಿ ಕಡೆಯಿಂದ ವಿವಾದಾತ್ಮಕ ವಿಚಾರಗಳಿವೆ. ಪೊಲೀಸ್ ಇತಿಹಾಸದಲ್ಲಿ ಇವರೊಬ್ಬ ರೌಡಿಶೀಟರ್ ಸಾಲಿಗೆ ಸೇರಿದ್ದು 30 ಕ್ಕೂ ಹೆಚ್ಚು ಕ್ರಿಮಿನಲ್ ಹಾಗೂ ಅಪರಾಧ ಪ್ರಕರಣಗಳಲ್ಲಿ ಇವರ ಹೆಸರು ಇದೆ ಎಂಬುದು ಪೊಲೀಸ್ ಮೂಲಗಳಿಂದ ಬಂದ ಮಾಹಿತಿಯಾಗಿದೆ. ಅಷ್ಟೆ ಅಲ್ಲದೇ ಇಂತಹ ಪ್ರಕರಣಗಳಿಗೇ ಸಂಬಂಧಿಸಿದಂತೆ ಪೊಲೀಸರ ಕಡೆಯಿಂದ ಒಂದು ವರ್ಷ ಕಾಲ ಶಿವಮೊಗ್ಗಕ್ಕೆ ಗಡಿಪಾರಿಗೆ ಗುರಿಯಾಗಿದ್ದಾರೆ. ಮತ್ತು ಪ್ರತಿನಿತ್ಯ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಜರಾಗಿ ಸಹಿ ಹಾಕಬೇಕಾದ ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿ ಕೂಡಾ ಇವರಾಗಿದ್ದಾರೆ.</p>



<p style="font-size:20px">ಮಣಿಕಂಠ ರಾಠೋಡ್ ಬಗ್ಗೆ ಇಷ್ಟು ವಿವರವಾದ ಮಾಹಿತಿ ಹಿಂದೆ ಪ್ರಮುಖ ಕಾರಣವಿದೆ. ಸಾಕಷ್ಟು ಕ್ರಿಮಿನಲ್ ಹಿನ್ನೆಲೆ, ರಾಜಕೀಯವಾಗಿಯೂ ಮೇಲಿಂದ ಮೇಲೆ ವಿವಾದಾತ್ಮಕ ಹೇಳಿಕೆ ನೀಡುತ್ತಾ ಜೊತೆಗೆ ಕ್ರಿಮಿನಲ್ ಪ್ರಕರಣಗಳ ಕಾರಣಕ್ಕೇ ಗಡಿಪಾರಿಗೆ ಒಳಗಾದ ಇಂತಹ ವ್ಯಕ್ತಿ ಕಳೆದ ಎರಡು ದಿನಗಳ ಹಿಂದೆ ಕಲಬುರಗಿ ಕಮೀಷನರ್ ರವಿಕುಮಾರ್ ಅವರ ಪತ್ನಿ ರೂಪಾಲಿ ನಾಯಕ್ ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಜೊತೆಗೆ ಅವರ ಜೊತೆಗೆ ಮಾತನಾಡಿದ್ದು ಎನ್ನಲಾದ ಆಡಿಯೋ ಒಂದರಲ್ಲಿ 3 ಲಕ್ಷ ಲಂಚ ಕೇಳಿದ ಗಂಭೀರ ಆರೋಪ ಮಾಡಿದ್ದಾರೆ. ಇದರ ಸತ್ಯಾಸತ್ಯತೆ ಬಗ್ಗೆ ವಿವರವಾಗಿ ಮಾಹಿತಿ ಕಲೆ ಹಾಕಲು <strong>ಪೀಪಲ್ ಮೀಡಿಯಾ </strong>ನೇರವಾಗಿ ಕಮೀಷನರ್ ರವಿಕುಮಾರ್ ಅವರ ಪತ್ನಿ ರೂಪಾಲಿ ನಾಯಕ್ ಅವರ ಬಳಿ ಮಾತನಾಡಿತು.</p>



<p style="font-size:20px">ರೂಪಾಲಿ ನಾಯಕ್ ಒಂದಷ್ಟು ಕಾಲದಿಂದ ಹಲವಷ್ಟು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ, ಯುವ, ಸ್ಥಳೀಯ ಪ್ರತಿಭೆಗಳಿಗೆ ಸಾಕಷ್ಟು ವೇದಿಕೆ ಕಲ್ಪಿಸಿದ ಹಿನ್ನೆಲೆಯವರು. ಮತ್ತು ಇವರ ಪತಿ ಕಮೀಷನರ್ ರವಿಕುಮಾರ್ ಕೂಡಾ ಇಲ್ಲಿಯವರೆಗೂ ಒಂದೇ ಒಂದು ಕಪ್ಪುಚುಕ್ಕೆ ಪಡೆಯದೇ ಒಳ್ಳೆಯ ಹೆಸರು ಗಳಿಸಿಕೊಂಡು ಬಂದ ಹಿನ್ನೆಲೆಯವರಾಗಿದ್ದವರು. ಈ ಹಿಂದೆ ಡಿಜಿಪಿ ಹುದ್ದೆಯಲ್ಲಿದ್ದು ದಕ್ಷ ಪ್ರಾಮಣಿಕ ಅಧಿಕಾರಿ ಎನಿಸಿಕೊಂಡವರು. ಆದರೆ ಕ್ರಿಮಿನಲ್ ಗಳ ಪಾಲಿಗೆ ಯಾವುದೇ ಕಾರಣಕ್ಕೂ ಮುಲಾಜಿಗೆ ಒಳಗಾಗುವ ವ್ಯಕ್ತಿಯಲ್ಲ ಎಂಬುದು ಇವರ ಪೊಲೀಸ್ ಟ್ರಾಕ್ ರೆಕಾರ್ಡ್ ನಲ್ಲೇ ಮನೆಮಾತಾದ ವ್ಯಕ್ತಿ.</p>



<p style="font-size:20px">ಇನ್ನು ಈ ಆಡಿಯೋ ಕಾಲ್ ವದಂತಿಗೆ ಸಂಬಂಧಿಸಿದಂತೆ ಕಲಬುರಗಿ ದಸರಾ ಹಿನ್ನೆಲೆಯ ದಾಂಡ್ಯಾ ಕಾರ್ಯಕ್ರಮಕ್ಕೆ ರೂಪಾಲಿ ನಾಯಕ್ ಹೆಚ್ಚಿನ ಜವಾಬ್ದಾರಿ ತಗೆದುಕೊಂಡಿರುತ್ತಾರೆ. ಹಾಗಾಗಿ ತೆಲುಗು ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಪ್ರಚಾರಕ್ಕೆ ಬಂದು ಮನೆಮಾತಾಗಿರುವ ಸೆಲೆಬ್ರಿಟಿ ಮಂಗ್ಲಿ ಬಾಯಿ ಅವರನ್ನು ಕರೆಸುವ ಬಗ್ಗೆಯೂ ಆಯೋಜಕರಲ್ಲಿ ಚರ್ಚೆ ನಡೆದಿದೆ. ಆ ಸಮಯಕ್ಕೆ ಒಂದಷ್ಟು ಕಾರ್ಯಕ್ರಮದ ಕಾರಣಕ್ಕೆ ಮಂಗ್ಲಿ ಬಾಯಿ ಅವರ ಸಂಪರ್ಕ ಗಿಟ್ಟಿಸಿದ್ದ ಮಣಿಕಂಠ ರಾಠೋಡ್ ಮಂಗ್ಲಿ ಬಾಯಿ ಅವರ ಕರೆಸುವ ಜವಾಬ್ದಾರಿ ನಾನು ತಗೆದುಕೊಳ್ಳುತ್ತೇನೆ. ಉಳಿದ ಪೇಮೆಂಟ್ ವಿಚಾರಗಳನ್ನ ನೀವುಗಳೇ ಮಾತನಾಡಬೇಕು ಎಂದಿದ್ದಾರೆ.</p>



<p style="font-size:20px">ನಂತರ ಮಂಗ್ಲಿ ಬಾಯಿ ಕಾರ್ಯಕ್ರಮಕ್ಕೆ ಒಪ್ಪಿ 3 ಲಕ್ಷ ಪೇಮೆಂಟ್ ಗೆ ಬರುವ ಬಗ್ಗೆ ಮಾತುಕತೆ ಮುಗಿದಿರುತ್ತದೆ. ಇದರ ಮಾಹಿತಿ ನೀಡಲು ರೂಪಾಲಿ ನಾಯಕ್ ಅವರು ಮಣಿಕಂಠ ರಾಠೋಡ್ ಅವರ ಜೊತೆಗೆ ಮಾತನಾಡಿದ ಆಡಿಯೋ ಈಗ ಕನ್ನಡದ ವಿವಿಧ ದೃಶ್ಯ ಮಾದ್ಯಮಗಳ ಮೂಲಕ ವೈರಲ್ ಆಗುತ್ತಿದೆ. ಈ ಬಗ್ಗೆ ಪೀಪಲ್ ಮೀಡಿಯಾಗೆ ಸ್ಪಷ್ಟನೆ ನೀಡಿದ ರೂಪಾಲಿ ನಾಯಕ್ ಇದಿಷ್ಟು ಬಿಟ್ಟರೆ ಮತ್ತೆ ಯಾವ ಭ್ರಷ್ಟಾಚಾರವೂ ಇಲ್ಲ, ಏನೂ ಇಲ್ಲ. ತನ್ನ ಕ್ರಿಮಿನಲ್ ಚಟುವಟಿಕೆಗೆ ಕಮೀಷನರ್ ರವಿಕುಮಾರ್ ಬ್ರೇಕ್ ಹಾಕಿದ ಮತ್ತು ಗಡಿಪಾರಿಗೆ ವ್ಯವಸ್ಥೆ ಮಾಡಿದ ಕಾರಣಕ್ಕೆ ರವಿಕುಮಾರ್ ಮೇಲೆ ಇಲ್ಲದ ಆರೋಪ ಮಾಡಿದ್ದಾರೆ. ಜೊತೆಗೆ ದಸರಾ ಸಂದರ್ಭದಲ್ಲಿ ಅತಿಥಿಗಳ ಕರೆಯಲು ಮಾತನಾಡಿದ ಆಡಿಯೋ ಇಟ್ಟು ಭ್ರಷ್ಟಾಚಾರದ ವಿಚಾರಕ್ಕೆ ತಳುಕು ಹಾಕುವುದು ಎಷ್ಟು ಸರಿ ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.</p>



<p style="font-size:20px">&#8216;ಬೇಕಾದರೆ ಈ ಬಗ್ಗೆ ತನಿಖೆ ಕೂಡಾ ನಡೆಯಲಿ. ಅದಕ್ಕೆ ಬೇಕಾದ ಸಾಕ್ಷ್ಯ ಕೊಡಲು ನಾನು ಸಿದ್ಧಳಿದ್ದೇನೆ. ಇವರ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ನನ್ನ ಹೆಸರು ಕೆಡಿಸುವ ಕಾರ್ಯ ದಯವಿಟ್ಟು ನಿಲ್ಲಿಸಲಿ ಎಂದು ಮಣಿಕಂಠ ರಾಠೋಡ್ ಮತ್ತು ಮಾಧ್ಯಮಗಳ ಬಗ್ಗೆ ರೂಪಾಲಿ ನಾಯಕ್&#8217; ಕಿಡಿಕಾರಿದ್ದಾರೆ.</p>



<p style="font-size:20px">ಇಲ್ಲಿ ಲಂಬಾಣಿ ನುಡಿಯಲ್ಲಿರುವ ಆಡಿಯೋ ತುಣುಕನ್ನು  ಪೀಪಲ್ ಮೀಡಿಯಾ ಪರಿಶೀಲಿಸಿದೆ. ಅದರಲ್ಲಿ   ರೂಪಾಲಿ ನಾಯಕ್ ಒಂದೆರಡು ಬಾರಿ ಕಾರ್ಯಕ್ರಮದ ಬಗ್ಗೆ ಮಾತಾಡಿದ್ದಾರೆ. ಸೆಲೆಬ್ರಿಟಿ ಎಂದು ಹೇಳಿದ್ದಾರೆ‌. ಅದು ಯಾವುದೋ ವೈಯಕ್ತಿಕ ವ್ಯವಹಾರ ಎನ್ನಲು ಯಾವುದೇ ಆಧಾರವಿಲ್ಲ. ಮಾಧ್ಯಮಗಳು ಈ ಆಡಿಯೋವನ್ನು ಸಂದರ್ಭದಿಂದ ಹೊರಗಿಟ್ಟು ಇದೊಂದು ಭ್ರಷ್ಟಾಚಾರ ಪ್ರಕರಣ ಎನ್ನುವಂತೆ ಪ್ರಸಾರ ಮಾಡಿವೆ. ಹಾಗಾದರೆ ಇದರಲ್ಲಿ ಮಣಿಕಂಠ ರಾಠೋಡ್ ಉದ್ದೇಶ ಏನಿರಬಹುದು.? ಸುಮಾರು ಎರಡು ತಿಂಗಳ ಹಿಂದೆ ಮಾತನಾಡಿದ ಆಡಿಯೋ ಇಟ್ಟು ಕಮೀಷನರ್ ಹೆಸರು ಕೆಡಿಸುವ ಉದ್ದೇಶದ ಬಗ್ಗೆ ಈಗ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಸಂಕ್ಷಿಪ್ತವಾಗಿ ರೂಪಾಲಿ ನಾಯಕ್ ಅವರು ಕೊಟ್ಟ ಮಾಹಿತಿಯಂತೆ ಸ್ಪಷ್ಟವಾಗಿ ಇದೊಂದು ಹಿಟ್ ಅಂಡ್ ರನ್ ಕೇಸ್ ಅನ್ನೋದರಲ್ಲಿ ಎರಡು ಮಾತಿಲ್ಲ.</p>



<p style="font-size:20px">ಈ ಮೂಲಕ ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಮಾಧ್ಯಮಗಳಿಗೆ ನೀಡಿದ ಮಣಿಕಂಠ ರಾಠೋಡ್ ಗೆ ರಾಜಕೀಯವಾಗಿ ತಲೆದಂಡ ತೆರಬಹುದೇ? ಗೊತ್ತಿಲ್ಲ. ಆದರೆ ಕಳೆದ ಒಂದು ವಾರದಿಂದ ಬಿಜೆಪಿ ಪಕ್ಷಕ್ಕೆ ಸೇರುತ್ತಿರುವ ಕ್ರಿಮಿನಲ್ ಗಳ ಪಟ್ಟಿ ಮಾಡ್ತಾ ಹೋದರೆ ಆ ಪಟ್ಟಿಯಲ್ಲಿ ಮಣಿಕಂಠ ರಾಠೋಡ್ ಹೆಸರೂ ಸೇರ್ಪಡೆ ಆಗಲಿದೆ. ಆಡಳಿತಾರೂಢ ಬಿಜೆಪಿಗೆ ಇಂತವರೇ ಬೇಕಾ ಎಂಬುದು ಪ್ರಶ್ನಾರ್ಹ ವಿಚಾರವಾಗಿದೆ.</p>
]]></content:encoded>
					
		
		
			</item>
	</channel>
</rss>
