<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>H D K &#8211; Peepal Media</title>
	<atom:link href="https://peepalmedia.com/tag/h-d-k/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 19 Oct 2022 09:52:02 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>H D K &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಬೆಂಗಳೂರು ರಸ್ತೆಗುಂಡಿಗಳ ಸಾಮ್ರಾಜ್ಯ: ಸರ್ಕಾರದ ವಿರುದ್ಧ  ಹೆಚ್‌.ಡಿ.ಕೆ ವಾಗ್ದಾಳಿ</title>
		<link>https://peepalmedia.com/bengaluru-roadblocks-empire-hdk-rant-against-govt/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 19 Oct 2022 09:52:00 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[bengalure]]></category>
		<category><![CDATA[bjp govt]]></category>
		<category><![CDATA[H D K]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[road pothole accident]]></category>
		<category><![CDATA[Silicon CITY]]></category>
		<guid isPermaLink="false">https://peepalmedia.com/?p=11925</guid>

					<description><![CDATA[ಬೆಂಗಳೂರು: ರಾಜ್ಯದ ಸಿಲಿಕಾನ್ ಸಿಟಿ (ಬೆಂಗಳೂರು) ಗುಂಡಿಗಳ ಸಾಮ್ರಾಜ್ಯವಾಗಿ ಮಾರ್ಪಟ್ಟಿದ್ದು, ಇದಕ್ಕೆ ಆಡಳಿತದಲ್ಲಿರುವ ಬಿಜೆಪಿ ಸರ್ಕಾರವೇ ಕಾರಣವೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಸೋಮವಾರ ದ್ವಿಚಕ್ರ ವಾಹನದಲ್ಲಿ ಉಮಾದೇವಿ (50) ಮತ್ತು ಅವರ ಮಗಳು ವನಿತಾ ಸೋಮವಾರಪೇಟೆ ವಾಟಾಳ್ ನಾಗರಾಜ್ ರಸ್ತೆಯಲ್ಲಿ ಸಂಚರಿಸುತ್ತಿರುವ ವೇಳೆ, ರಸ್ತೆಗುಂಡಿಯನ್ನು ತಪ್ಪಿಸುವ ಯತ್ನದಲ್ಲಿ ಬಿದ್ದು ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿದ್ದರು. ಘಟನೆಯಲ್ಲಿ ಉಮಾದೇವಿಯವರಿಗೆ ಗಂಭೀರ ಗಾಯವಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಂಗಳವಾರ ಬೆಳ್ಳಂಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಉಮಾದೇವಿ ಸಾವನ್ನಪ್ಪಿದ್ದರು. ಈ ಕುರಿತು [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು:</strong> ರಾಜ್ಯದ ಸಿಲಿಕಾನ್ ಸಿಟಿ (ಬೆಂಗಳೂರು) ಗುಂಡಿಗಳ ಸಾಮ್ರಾಜ್ಯವಾಗಿ ಮಾರ್ಪಟ್ಟಿದ್ದು, ಇದಕ್ಕೆ ಆಡಳಿತದಲ್ಲಿರುವ ಬಿಜೆಪಿ ಸರ್ಕಾರವೇ ಕಾರಣವೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.</p>



<p style="font-size:20px">ಸೋಮವಾರ ದ್ವಿಚಕ್ರ ವಾಹನದಲ್ಲಿ ಉಮಾದೇವಿ (50) ಮತ್ತು ಅವರ ಮಗಳು ವನಿತಾ ಸೋಮವಾರಪೇಟೆ ವಾಟಾಳ್ ನಾಗರಾಜ್ ರಸ್ತೆಯಲ್ಲಿ ಸಂಚರಿಸುತ್ತಿರುವ ವೇಳೆ, ರಸ್ತೆಗುಂಡಿಯನ್ನು ತಪ್ಪಿಸುವ ಯತ್ನದಲ್ಲಿ ಬಿದ್ದು ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿದ್ದರು. ಘಟನೆಯಲ್ಲಿ ಉಮಾದೇವಿಯವರಿಗೆ ಗಂಭೀರ ಗಾಯವಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಂಗಳವಾರ ಬೆಳ್ಳಂಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಉಮಾದೇವಿ ಸಾವನ್ನಪ್ಪಿದ್ದರು.</p>



<p style="font-size:20px">ಈ ಕುರಿತು ಬುಧವಾರ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ ಅವರು, ಗುಂಡಿಗಳಿಂದಾಗುವ ಸಾವುಗಳಿಗೆ ಬಿಜೆಪಿ ಸರ್ಕಾರವೇ ನೇರ ಹೊಣೆ. ಬಿಜೆಪಿ ಸರ್ಕಾರಕ್ಕೆ ಗುಂಡಿಗಳು ಬೇಕು, ಏಕೆಂದರೆ ಗುಂಡಿಗಳು ದೊಡ್ಡ ಪ್ರಮಾಣದಲ್ಲಿ ಕಾಣಿಸಿಕೊಂಡರೆ, ಹೆಚ್ಚಿನ ಪ್ರಮಾಣದಲ್ಲಿ ಲಾಭಗಳಿಸಬಹುದು, ಹೀಗಾಗಿ ಸರ್ಕಾರಕ್ಕೆ ಗುಂಡಿಗಳು ಬೇಕು ಎಂದು ಟೀಕಿಸಿದರು.</p>



<p style="font-size:20px">ಬೆಂಗಳೂರನ್ನು ಉದ್ಯಾನ ನಗರಿ ಮತ್ತು ಸಿಲಿಕಾನ್ ಸಿಟಿ ಎಂದು ಕರೆಯಲಾಗುತ್ತದೆ. ಆದರೆ ಈಗ ಈ ನಗರವನ್ನು ಗುಂಡಿಗಳ ಸಾಮ್ರಾಜ್ಯ ಎಂದು ಟೀಕಿಸಲಾಗುತ್ತಿದೆ. ಇದಕ್ಕೆ ಪರ್ಸೆಂಟೇಜ್ (40%) ವ್ಯವಸ್ಥೆಯೇ ಕಾರಣ ಎಂದು ದೂರಿದರು.</p>



<p style="font-size:20px">ಈ ಗುಂಡಿಗಳು ಜನರಿಗೆ ಸಾವಿಗೆ ಕಾರಣವಾದರೆ, ಕೆಲವರಿಗೆ ಅವು ಲಾಭದಾಯಕವಾಗಿವೆ. ರಸ್ತೆ ಗುಂಡಿಗಳ ಕುರಿತು ಕರ್ನಾಟಕ ಹೈಕೋರ್ಟ್ ಎಚ್ಚರಿಕೆ ನೀಡಿದರೂ ಸರ್ಕಾರಕ್ಕೆ ನಾಚಿಕೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವಂತೆ ನ್ಯಾಯಾಲಯ ಎಚ್ಚರಿಕೆ ನೀಡಿದರೂ ಅಧಿಕಾರಿಗಳು ಏನೂ ಮಾಡುತ್ತಿಲ್ಲ ಏಕೆ? ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ವಿದ್ಯುತ್‌ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಹೆಚ್‌.ಡಿ.ಕೆ ಗರಂ</title>
		<link>https://peepalmedia.com/electricity-price-hike-in-the-state-hdk-garam-against-the-government/</link>
		
		<dc:creator><![CDATA[Peepal Media]]></dc:creator>
		<pubDate>Sat, 24 Sep 2022 11:42:49 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[Electricity price hike]]></category>
		<category><![CDATA[H D K]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=6972</guid>

					<description><![CDATA[ಬೆಂಗಳೂರು: ರಾಜ್ಯದಲ್ಲಿ ವಿದ್ಯತ್‌ ಬೆಲೆ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಕುರಿತು ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ &#160;ಹೆಚ್‌.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ [&#8230;]]]></description>
										<content:encoded><![CDATA[
<p class="has-medium-font-size"><strong>ಬೆಂಗಳೂರು:</strong> ರಾಜ್ಯದಲ್ಲಿ ವಿದ್ಯತ್‌ ಬೆಲೆ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಕುರಿತು ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ &nbsp;ಹೆಚ್‌.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>



<p class="has-medium-font-size">ಈ ಕುರಿತು ಟ್ವೀಟ್‌ ಮಾಡಿರುವ ಅವರು, ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಹೆಚ್‌.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ .</p>



<p class="has-medium-font-size">ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್‌ ದರ ಏರಿಕೆ ಆಗಿದೆ! ಏನೀ ಹುನ್ನಾರ?ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.‌ ಪ್ರತಿ ಯೂನಿಟ್‌ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ &amp; ಖಂಡನೀಯ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.</p>



<p class="has-medium-font-size">ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್‌ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.</p>



<p class="has-medium-font-size">ರಾಜ್ಯ ಬಿಜೆಪಿ ಸರ್ಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಬಜೆಪಿ ಸರ್ಕಾರದ ಹಾದಿಯಲ್ಲೇ ರಾಜ್ಯ ಬಿಜೆಪಿ ಸರಕಾರವೂ ಸಾಗಿದೆ. ಹೀಗಾಗಿ ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ ಎಂದು ಕುಮಾರಸ್ವಾಮಿ ಅವರು ದೂರಿದ್ದಾರೆ.</p>
]]></content:encoded>
					
		
		
			</item>
		<item>
		<title>ಚುನಾವಣೆಗೂ ಮುನ್ನವೆ ರಾಜಕೀಯ ನಾಯಕರುಗಳ ʼಹೈ ಡ್ರಾಮʼ</title>
		<link>https://peepalmedia.com/chunavanegu-munnave-rajakiya-nayakarugala-hay-drama/</link>
		
		<dc:creator><![CDATA[Peepal Media]]></dc:creator>
		<pubDate>Tue, 26 Jul 2022 10:59:25 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[BASAVARAJ BOMMAYI]]></category>
		<category><![CDATA[bengalure]]></category>
		<category><![CDATA[D K shivakumar]]></category>
		<category><![CDATA[H D K]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[siddaramayya]]></category>
		<category><![CDATA[writing]]></category>
		<category><![CDATA[zameer ahemad]]></category>
		<guid isPermaLink="false">https://peepalmedia.com/?p=115</guid>

					<description><![CDATA[ಬೆಂಗಳೂರು; 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇವೆ. ಆದರೆ ಮುಂಬರುವ ಚುನಾವಣೆಯ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಏರಲು ಇಂದಿನಿಂದಲೇ ರಾಜಕೀಯ ನಾಯಕರುಗಳು ರೇಸ್ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು 10 ತಿಂಗಳುಗಳು ಬಾಕಿ ಇದ್ದು, ಅದರ ಸಲುವಾಗಿ ಈಗಾಗಲೇ ಕಾಂಗ್ರೆಸ್‌ ಪಕ್ಷದ ನಾಯಕರುಗಳಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಕಾದಾಟ ಶುರುವಾಗಿದೆ,ಕಳೆದ ವಾರ ನಡೆದ ಒಕ್ಕಲಿಗರ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. [&#8230;]]]></description>
										<content:encoded><![CDATA[
<p class="has-medium-font-size"><strong>ಬೆಂಗಳೂರು;</strong> 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇವೆ. ಆದರೆ ಮುಂಬರುವ ಚುನಾವಣೆಯ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಏರಲು ಇಂದಿನಿಂದಲೇ ರಾಜಕೀಯ ನಾಯಕರುಗಳು ರೇಸ್ ನಡೆಸುತ್ತಿದ್ದಾರೆ.</p>



<p class="has-medium-font-size">ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು 10 ತಿಂಗಳುಗಳು ಬಾಕಿ ಇದ್ದು, ಅದರ ಸಲುವಾಗಿ ಈಗಾಗಲೇ ಕಾಂಗ್ರೆಸ್‌ ಪಕ್ಷದ ನಾಯಕರುಗಳಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಕಾದಾಟ ಶುರುವಾಗಿದೆ,<br>ಕಳೆದ ವಾರ ನಡೆದ ಒಕ್ಕಲಿಗರ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಾತನಾಡಿದ್ದು, ಎಸ್.ಎಂ. ಕೃಷ್ಣ ಬಳಿಕ ಒಕ್ಕಲಿಗರೊಬ್ಬರಿಗೆ ಸಿಎಂ ಆಗುವ ಅವಕಾಶವಿದೆ, ಹಾಗಾಗಿ ಒಕ್ಕಲಿಗ ಸಮಾಜ ಈ ಅವಕಾಶ ತಪ್ಪಿಸಿಕೊಳ್ಳಬಾರದು ಎಂದು ಹೇಳುವ ಮೂಲಕ ಒಕ್ಕಲಿಗ ಸಮಾಜದ ಬೆಂಬಲವನ್ನ ಚುನಾವಣೆಗೆ ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ.</p>



<p class="has-medium-font-size">ಅದೇ ರೀತಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಸಿಎಂ ಆಗಬೇಕು ಎಂಬುದು ಅವರ ಬೆಂಬಲಿಗರ ಅಭಿಪ್ರಾಯ.ಆಗಸ್ಟ್‌ 12ಕ್ಕೆ 75 ವರ್ಷಕ್ಕೆ ಕಾಲಿಡಲಿರುವ ಸಿದ್ದರಾಮಯ್ಯ ಅವರ ಜನುಮದಿನದ ಅಮೃತ ಮಹೋತ್ಸವವನ್ನು ಅವರ ಅಭಿಮಾನಿಗಳು ದಾವಣಗೆರೆಯಲ್ಲಿ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ಈ ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಸೇರುತಿದ್ದು ಇದರ ಮುಖ್ಯ ಉದ್ದೇಶವೇ ಸಿದ್ದರಾಮಯ್ಯನವರನ್ನು ಇನ್ನೊಮ್ಮೆ ಮುಖ್ಯಮಂತ್ರಿ ಮಾಡಬೇಕೆಂಬುದಾಗಿದೆ. ಹೀಗಾಗಿ ಚುನಾವಣೆಗೂ ಮನ್ನವೆ ಸಿದ್ದರಾಮಯ್ಯ ಮತ್ತುಡಿಕೆಶಿ ಅಭಿಮಾನಿಗಳ ನಡುವೆ ದಿನದಿಂದ ದಿನಕ್ಕೆ ಮಾತಿನ ಸಮರ ಹೆಚ್ಚಾಗುತ್ತಿದೆ.</p>



<p class="has-medium-font-size">ಹಾಗೆಯೇ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಸಂಪೂರ್ಣ ಜನರ ಆರ್ಶೀವಾದದೊಂದಿಗೆ ಬಹುಮತದಿಂದ ಆಡಳಿತ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದ ಬಗ್ಗೆ ಬಿಜೆಪಿ ಟೀಕಿಸಿದ್ದುಇದು ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ ಅಷ್ಟೇ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಯ್ಯ ವಿರುದ್ಧ ಬಿಜೆಪಿ ವ್ಯಂಗ್ಯದ ಟ್ವೀಟ್ ಮಾಡಿದೆ.</p>



<p class="has-medium-font-size">ಕಳೆದ ವಾರ ರಾಮನಗರದಲ್ಲಿ ಚಾಮುಂಡೇಶ್ವರಿ ಕರಗ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಜೆಡಿಎಸ್‌ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ . ಕುಮಾರಸ್ವಾಮಿ, ನಾಡಿನಲ್ಲಿ ಬಹಳ ಜನ ಸಿಎಂ ಆಗಬೇಕೆಂದು ಆಸೆ ಪಟ್ಟಿದ್ದಾರೆ. ಆದರೆ ಅದರ ವಾಸ್ತವವೇ ಬೇರೆ ಇದೆ. ತಾಯಿ ಚಾಮುಂಡೇಶ್ವರಿ ಮತ್ತು ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ, ನಿಮ್ಮ ಆಶೀರ್ವಾದದಿಂದ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಬರುತ್ತೇನೆ ಎಂದಿದ್ದಾರೆ ಹೀಗೆ ದಿನದಿಂದ ದಿನಕ್ಕೆ ರಾಜಕೀಯ ನಾಯಕರುಗಳು ಮುಖ್ಯಮಂತ್ರಿ ಗಾದಿಯ ಮೇಲೆ ಕಣ್ಣಿಟ್ಟಿದ್ದು, ಮಗು ಹುಟ್ಟುವ ಮುನ್ನ ಕುಲಾಯಿ ಹೊಲೆಸುವ ಹಾಗೆ ಪರಿಸ್ಥಿತಿ ನಿರ್ಮಾಣವಾಗಿದೆ.</p>
]]></content:encoded>
					
		
		
			</item>
	</channel>
</rss>
