<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>H D KUMARASWAMY &#8211; Peepal Media</title>
	<atom:link href="https://peepalmedia.com/tag/h-d-kumaraswamy/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 05 Dec 2024 11:03:40 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>H D KUMARASWAMY &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು: ಸಿ.ಎಂ</title>
		<link>https://peepalmedia.com/bjp-jds-are-the-ultimate-traitors-who-are-insulting-the-beneficiaries-of-five-guarantees/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 05 Dec 2024 11:03:40 +0000</pubDate>
				<category><![CDATA[ರಾಜ್ಯ]]></category>
		<category><![CDATA[ಹಾಸನ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[dks]]></category>
		<category><![CDATA[dkshivakumar]]></category>
		<category><![CDATA[H D KUMARASWAMY]]></category>
		<category><![CDATA[Hasana]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=50254</guid>

					<description><![CDATA[ಹಾಸನ ಡಿ. 5: ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಹಾಸನದಲ್ಲಿ ನಡೆದ ಬೃಹತ್ ಜನಕಲ್ಯಾಣೋತ್ಸವ ಸಮಾವೇಶವದಲ್ಲಿ ಮಾತನಾಡುತ್ತಾ, &#8220;ಡಾ.ರಾಜ್ ಅವರು ಅಭಿಮಾನಿ ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರರ ಬಂಧುಗಳೇ ದೇವರು,&#8221; ಎನ್ನುತ್ತಾ ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ʼಆಶೀರ್ವದಿಸಿದ್ದಕ್ಕೆʼ ಧನ್ಯವಾದ ಅರ್ಪಿಸಿದರು. ಹಾಸನದ ಮಹಾನ್ ನಾಯಕರ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯನ್ನು [&#8230;]]]></description>
										<content:encoded><![CDATA[
<ul class="wp-block-list">
<li>ಹಾಸನದ ಬೃಹತ್ ಜನ ಸಮಾವೇಶದ ಯಶಸ್ಸಿಗೆ ಸ್ವಾಭಿಮಾನಿ ಒಕ್ಕೂಟ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದಿಸಿದ ಸಿಎಂ</li>



<li>ಡಾ.ರಾಜ್ ಅವರಿಗೆ ಅಭಿಮಾನಿಗಳೇ ದೇವರು-ನಮಗೆ ಮತದಾರರೇ ದೇವರು: ಸಿ.ಎಂ</li>



<li>ಗ್ಯಾರಂಟಿ ಪಡೆದದ್ದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಜನದ್ರೋಹಿಗಳು: ಸಿ.ಎಂ ಆಕ್ರೋಶ</li>



<li>ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪ ಅವರ ಮಾತು ಈಗ ನಿಜವಾಗಿದೆ: ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ್ದರ ಫಲ ಈಗ ದೇವೇಗೌಡರು ನೋಡುವಂತಾಗಿದೆ: ಸಿಎಂ</li>
</ul>



<p><strong>ಹಾಸನ ಡಿ. 5: </strong>ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.</p>



<p>ಹಾಸನದಲ್ಲಿ ನಡೆದ ಬೃಹತ್ ಜನಕಲ್ಯಾಣೋತ್ಸವ ಸಮಾವೇಶವದಲ್ಲಿ ಮಾತನಾಡುತ್ತಾ, &#8220;ಡಾ.ರಾಜ್ ಅವರು ಅಭಿಮಾನಿ ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರರ ಬಂಧುಗಳೇ ದೇವರು,&#8221; ಎನ್ನುತ್ತಾ ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ʼಆಶೀರ್ವದಿಸಿದ್ದಕ್ಕೆʼ ಧನ್ಯವಾದ ಅರ್ಪಿಸಿದರು.</p>



<p>ಹಾಸನದ ಮಹಾನ್ ನಾಯಕರ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯನ್ನು ಚನ್ನಪಟ್ಟಣದಲ್ಲಿ , ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗನನ್ನು ಈಗ್ಗಾಂವಿಯಲ್ಲಿ ಜನ ಸೋಲಿಸಿ ನಮಗೆ ಆಶೀರ್ವದಿಸಿದ್ದಾರೆ ಮುಖ್ಯಮಂತ್ರಿ ಹೇಳಿದ್ದಾರೆ.</p>



<p>&#8220;ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಆಗುವಷ್ಟು ಬಹುಮತ ಈ ರಾಜ್ಯದ ಜನರೆ ಯಾವತ್ತೂ ಕೊಟ್ಟಿಲ್ಲ. ಒಮ್ಮೆ ಕಾಂಗ್ರೆಸ್ ಬೆಂಬಲದಲ್ಲಿ ಮತ್ತೊಮ್ಮೆ ಬಿಜೆಪಿ ಬೆಂಬಲದಲ್ಲಿ ಮುಖ್ಯಮಂತ್ರಿ ಆದರು. ಬಳಿಕ ಎರಡೂ ಪಕ್ಷಗಳಿಗೆ ವಂಚಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಸುಭದ್ರ ಸರ್ಕಾರ ಕೊಟ್ಟಿದೆ. ಮಾತ್ರವಲ್ಲ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. 2013 ರಲ್ಲಿ ಕೊಟ್ಟ ಮಾತಿನಂತೆ ಹಲವಾರು ಭಾಗ್ಯಗಳನ್ನು ಜಾರಿ ಮಾಡಿದೆವು‌. ಈ ಬಾರಿ ಐದಕ್ಕೆ ಐದೂ ಗ್ಯಾರಂಟಿಗಳ ಜೊತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನೂ ಈಡೇರಿಸುತ್ತಿದ್ದೇವೆ,&#8221; ಎಂದು ಸಿದ್ದರಾಮಯ್ಯ ಹೇಳಿದ್ದಾರೆ.</p>



<p>&#8220;ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಪ್ರಧಾನಿ ಮೋದಿ ಅವರ ಸರ್ಕಾರ ನಾವು ದುಡ್ಡು ಕೊಡ್ತೀವಿ ಅಂದರೂ ಅಕ್ಕಿ ಕೊಡಲಿಲ್ಲ. ಇಂಥಾ ಜನದ್ರೋಹಿ ಸರ್ಕಾರ ಬಿಜೆಪಿಯದ್ದು. ನಾವು ಐದು ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯದ ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಈ ಐದು ಗ್ಯಾರಂಟಿಗಳನ್ನು ಪಡೆಯುತ್ತಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ದೊಡ್ಡ ಜನದ್ರೋಹಿಗಳು. ಕೇಂದ್ರದಲ್ಲಿ ಮಂತ್ರಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿಯವರು ಮೇಕೆದಾಟು ವಿಚಾರದಲ್ಲಿ ಮೌನ ಆಗಿರುವುದು ಏಕೆ? ಬೆಂಗಳೂರಿನ ಜನತೆಗೆ ನೀರು ಬೇಕಾಗಿದೆ. ಕೊಡಿಸಲಿ,&#8221; ಎಂದು ಸವಾಲು ಹಾಕಿದರು.</p>



<p>&#8220;ಮಾಜಿ ಪ್ರಧಾನಿ ದೇವೇಗೌಡರು ನನಗಿಂತ 15 ವರ್ಷ ಹಿರಿಯರು. ಅವರು ಅಷ್ಟೆ ಘನತೆಯಿಂದ ಮಾತಾಡಬೇಕಿತ್ತು. ಯಾವತ್ತೂ ಗರ್ವ ತೋರಿಸದ ನನಗೆ, &#8220;ಸಿದ್ದರಾಮಯ್ಯ ಅವರ ಗರ್ವಭಂಗ ಮಾಡ್ತೀನಿ&#8221; ಎಂದರು. ಇದನ್ನು ನೀವು ಒಪ್ಪಿಕೊಳ್ಳುತ್ತೀರಾ, ಸಹಿಸುತ್ತೀರಾ? ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜನತೆ ಯಾವುದೇ ಕಾರಣಕ್ಕೂ ಸಹಿಸಲ್ಲ. ಹಾಸನದ ಹೆಣ್ಣು ಮಕ್ಕಳು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ರೈತರ ಪಾಲಿನ ಸಾಲದಲ್ಲಿ ಶೇ58 ರಷ್ಟನ್ನು ಕಡಿತಗೊಳಿಸಿದೆ. ಇದರಿಂದ ಹಾಸನದ ರೈತರು ಮತ್ತು ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಮಗ ಎಂದುಕೊಂಡಿರುವ ಕುಮಾರಸ್ವಾಮಿಯವರು ಏಕೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿಲ್ಲ. ನಬಾರ್ಡ್ ನಿಂದ ಆಗಿರುವ ಅನ್ಯಾಯವನ್ನು ಕುಮಾರಸ್ವಾಮಿ ಅವರು ಏಕೆ ಸರಿಪಡಿಸುತ್ತಿಲ್ಲ? ಕಳೆದ ಹಣಕಾಸು ವರ್ಷದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಆಗಿರುವ 11 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯಕ್ಕೆ ಕೊಡಿಸಲು ಬಿಜೆಪಿ-ಜೆಡಿಎಸ್ ಏಕೆ ಬಾಯಿ ಬಿಡುತ್ತಿಲ್ಲ?&#8221; ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.</p>



<p>&#8220;ದೇವೇಗೌಡರು ರಾಜಕೀಯವಾಗಿ ಒಕ್ಕಲಿಗ ನಾಯಕರನ್ನು ನಿರಂತರವಾಗಿ ಮುಗಿಸುತ್ತಿದ್ದಾರೆ. ಬಚ್ಚೇಗೌಡರು, ವೈ.ಕೆ.ರಾಮಯ್ಯ, ಬೈರೇಗೌಡರು, ಕೃಷ್ಣಪ್ಪ, ಚಲುವರಾಯಸ್ವಾಮಿ ಸೇರಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ದೇವೇಗೌಡರು ರಾಜಕೀಯವಾಗಿ ಮುಗಿಸಿದರು. ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪ ಅವರು ಆಗಲೇ ಈ ಪಾಪದ ಹೊರೆಯನ್ನು ಹೊರಬೇಕಾಗುತ್ತದೆ ಎಂದು ದೇವೇಗೌಡರಿಗೆ ಹೇಳಿದ್ದರು. ಈಗ ಒಕ್ಕಲಿಗ ನಾಯಕ ಕೃಷ್ಣಪ್ಪ ಅವರ ಮಾತು ನಿಜವಾಗಿದೆ. ನಾನು ಮತ್ತು ಜಾಲಪ್ಪ ಒಟ್ಟಾಗಿ ರಾಮಕೃಷ್ಣಹೆಗಡೆಯವರ ಬದಲಿಗೆ ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದೆವು. ಆಮೇಲೆ ನನ್ನನ್ನೇ ಪಕ್ಷದಿಂದ ಉಚ್ಚಾಟಿಸಿದರು,&#8221; ಎಂದು ಟೀಕಿಸಿದರು. </p>



<p><strong>ಹಾಸನ ಮತ್ತೆ ಕಾಂಗ್ರೆಸ್ ತೆಕ್ಕೆಗೆ</strong></p>



<p>&#8220;ಕಾಂಗ್ರೆಸ್ ಸರ್ಕಾರ ಮಾತ್ರ ಸುಭದ್ರ ಸರ್ಕಾರ ಕೊಡಲು ಸಾಧ್ಯ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿಗಳಿಸಲಿದೆ. ಇದು ಶತಸಿದ್ದ ಎಂದು ಭರವಸೆ. ಹಾಸನದಲ್ಲಿ ಈ ಮಟ್ಟದ ದೊಡ್ಡ ಜನ ಕಲ್ಯಾಣ ಕಾಂಗ್ರೆಸ್ ಸಮಾವೇಶ ಹಿಂದೆಂದೂ ಆಗಿರಲಿಲ್ಲ. ಇದರಲ್ಲಿ ಸ್ವಾಭಿಮಾನಿ ಒಕ್ಕೂಟಗಳು, ಕಾಂಗ್ರೆಸ್ಸೇತರ ಸಂಘಟನೆಗಳು ಮತ್ತು ಕಾಂಗ್ರೆಸ್ ಪಕ್ಷ ಒಟ್ಟಾಗಿ ಶ್ರಮಿಸಿದ್ದಾರೆ,&#8221; ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>



<p></p>



<p></p>



<p></p>
]]></content:encoded>
					
		
		
			</item>
		<item>
		<title>ನಾನು ಹೆದರಲ್ಲ, ರಾಜೀನಾಮೆ ನೀಡಲ್ಲ: BJP-JDS ಗೆ ಸವಾಲೆಸೆದ ಸಿ.ಎಂ.ಸಿದ್ದರಾಮಯ್ಯ</title>
		<link>https://peepalmedia.com/i-am-not-scared-i-will-not-resign-cm-siddaramaiah-challenges-bjp-jds/</link>
		
		<dc:creator><![CDATA[Murali Maluru]]></dc:creator>
		<pubDate>Tue, 24 Sep 2024 13:43:41 +0000</pubDate>
				<category><![CDATA[ರಾಜಕೀಯ]]></category>
		<category><![CDATA[bjp reaction on muda case]]></category>
		<category><![CDATA[CM siddaramaiah]]></category>
		<category><![CDATA[d k Shivakumar speech]]></category>
		<category><![CDATA[de notification case]]></category>
		<category><![CDATA[H D KUMARASWAMY]]></category>
		<category><![CDATA[high court]]></category>
		<category><![CDATA[muda]]></category>
		<category><![CDATA[muda case]]></category>
		<category><![CDATA[r ashok]]></category>
		<category><![CDATA[Siddaramaiah]]></category>
		<category><![CDATA[siddramaiah reacts on muda case]]></category>
		<category><![CDATA[yadiyurappa]]></category>
		<guid isPermaLink="false">https://peepalmedia.com/?p=46064</guid>

					<description><![CDATA[ಬೆಂಗಳೂರು ಸೆ24: ನಾನು ಹೆದರಲ್ಲ: ರಾಜೀನಾಮೆ ನೀಡಲ್ಲ. ನಾನು ಹೋರಾಟದಿಂದ ಬಂದವನು. ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP-JDS ಗೆ ನೇರ ಎಚ್ಚರಿಕೆ ನೀಡಿದರು. ಯಲಹಂಕದ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಾನು ರಾಜೀನಾಮೆ ಕೊಡ್ತೀನಿ ಅಂತ ಕಾಯ್ಕೊಂಡು ಕೂತಿದ್ದೀರಾ? ಯಾವ ತಪ್ಪನ್ನೂ ಮಾಡದ ನನ್ನನ್ನು ಷಡ್ಯಂತ್ರದಿಂದ ಇಳಿಸಲು ನೋಡುತ್ತಿದ್ದೀರ. ಇದು ಅಸಾಧ್ಯ. ನಾನು ಹೋರಾಟ ರಾಜಕಾರಣದಿಂದ ಬಂದವನು. [&#8230;]]]></description>
										<content:encoded><![CDATA[
<p><strong>ಬೆಂಗಳೂರು ಸೆ24:</strong> ನಾನು ಹೆದರಲ್ಲ: ರಾಜೀನಾಮೆ ನೀಡಲ್ಲ. ನಾನು ಹೋರಾಟದಿಂದ ಬಂದವನು. ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP-JDS ಗೆ ನೇರ ಎಚ್ಚರಿಕೆ ನೀಡಿದರು.</p>



<p>ಯಲಹಂಕದ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.</p>



<p>ನಾನು ರಾಜೀನಾಮೆ ಕೊಡ್ತೀನಿ ಅಂತ ಕಾಯ್ಕೊಂಡು ಕೂತಿದ್ದೀರಾ? ಯಾವ ತಪ್ಪನ್ನೂ ಮಾಡದ ನನ್ನನ್ನು ಷಡ್ಯಂತ್ರದಿಂದ ಇಳಿಸಲು ನೋಡುತ್ತಿದ್ದೀರ. ಇದು ಅಸಾಧ್ಯ. ನಾನು ಹೋರಾಟ ರಾಜಕಾರಣದಿಂದ ಬಂದವನು. ನಿಮ್ಮನ್ನು ರಾಜಕೀಯವಾಗಿ ಎದುರಿಗೆ ಗೆಲ್ತೀನಿ. ನಿಮ್ಮ ಷಡ್ಯಂತ್ರ ಸೋಲಿಸ್ತೀನಿ ಎಂದು ಬಹಿರಂಗವಾಗಿ ತೊಡೆತಟ್ಟಿದರು.</p>



<p>ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿ ಆಗಿದ್ದೇವೆ</p>



<p>ರಾಜ್ಯದ ಆರ್ಥಿಕ-ಸಾಮಾಜಿಕ ಪ್ರಗತಿಗೆ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಬೇಕು. ಕೃಷಿ, ಕೈಗಾರಿಕೆ ಬೆಳವಣಿಗೆ ಆದರೆ ಮಾತ್ರ GDP ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.</p>



<p>ಕೃಷಿ ಮತ್ತು ಕೈಗಾರಿಕೆ ಹಾಗೂ ವಸತಿಗೆ ಅಪಾರ ಪ್ರಮಾಣದ ವಿದ್ಯುತ್ ಅಗತ್ಯ. ಕೃಷಿ, ಕೈಗಾರಿಕೆ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯೋಗದಿಂದ ಜಿಡಿಪಿ ಪ್ರಗತಿಯಾಗುತ್ತದೆ. ಆದ್ದರಿಂದ ನಾವು ವಿದ್ಯುತ್ ಉತ್ಪಾದನೆಯಲ್ಲಿ ಸಂಪೂರ್ಣ ಸ್ವಾವಲಂಬಿಗಳಾಗುವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ. ಅದರ ಭಾಗವಾಗಿಯೇ ಈ ವಿದ್ಯುತ್ ಉತ್ಪಾದನಾ ತಯಾರಿಕಾ ಘಟಕ ಲೋಕಾರ್ಪಣೆ ಮಾಡಿದ್ದೇನೆ ಎಂದರು.</p>



<p>1500 ಮೌಲ್ಯದ ಕೋಟಿ ವಿದ್ಯುತ್ ಅನ್ನು ನಾವು ಹೊರಗಡೆಗೆ ಮಾರಾಟ ಮಾಡಿದ್ದೇವೆ. ಕಳೆದ ವರ್ಷ ಮಳೆ ಬರಲಿಲ್ಲ. ಬರಗಾಲ ಇತ್ತು. ಬರಗಾಲದಲ್ಲೂ ಕೂಡ ನಾವು ಅಗತ್ಯ ವಿದ್ಯುತ್ ಪೂರೈಸಿದೆವು.</p>



<p>2030 ಕ್ಕೆ 60000 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಗುರಿ ಇದೆ. ಇದನ್ನು ನಾನು ಬಜೆಟ್ ನಲ್ಲೇ ಘೋಷಿಸಿದ್ದೇನೆ. ವರ್ಷದಿಂದ ವರ್ಷಕ್ಕೆ ವಿದ್ಯುತ್ ಬಳಕೆ, ಬೇಡಿಕೆ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವಾಗಿ ನಾವು ಉತ್ಪಾದನೆ ಹೆಚ್ಚಿಸಿ ಸ್ವಾವಲಂಬಿ ಆಗಿದ್ದೇವೆ. ನಾವು ಹೊರಗಡೆಗೆ ವಿದ್ಯುತ್ ಮಾರಾಟ ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ ಎಂದರು.</p>



<p>ಯಲಹಂಕದ ವಿದ್ಯುತ್ ಸ್ಥಾವರಕ್ಕೆ ನಾವೇ ನಮ್ಮ ಸರ್ಕಾರದಲ್ಲೇ ಶಂಕು ಸ್ಥಾಪನೆ ಮಾಡಿದ್ದೆವು. ಈಗ ನಮ್ಮದೇ ಸರ್ಕಾರ ಇದನ್ನು ಲೋಕಾರ್ಪಣೆ ಕೂಡ ಮಾಡಿದ್ದೇವೆ.</p>



<p>ಬೋನಸ್ ಘೋಷಣೆ</p>



<p>ಯಲಹಂಕ ವಿದ್ಯುತ್ ಸ್ಥಾವರದ ಆರಂಭಕ್ಕೆ ಶ್ರಮಿಸಿದ ಎಲ್ಲಾ ಕಾರ್ಮಿಕರಿಗೆ 5000 ರೂಪಾಯಿ ಬೋನಸ್ ಅನ್ನು ಇದೇ ಸಂದರ್ಭದಲ್ಲಿ ಸಿಎಂ ಘೋಷಿಸಿದರು.</p>



<p>ವಿದ್ಯುತ್ ಸ್ಥಾವರದ ಶಬ್ದ ಸಂಪೂರ್ಣ ಕಡಿಮೆ ಮಾಡಲು ಶ್ರಮಿಸುತ್ತಿದ್ದೇವೆ.</p>



<p>ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಾಸಕರಾದ ಯಲಹಂಕ ವಿಶ್ವನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಮಂಡ್ಯದಲ್ಲಿ ಕುಮಾರಸ್ವಾಮಿ ಯಾಕೆ ಸೋಲಬೇಕು?: ಜಾಗೃತ ಮತದಾರರ ವೇದಿಕೆ ಹೇಳೋದೇನು?</title>
		<link>https://peepalmedia.com/why-should-kumaraswamy-lose-in-mandya/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 23 Apr 2024 07:55:53 +0000</pubDate>
				<category><![CDATA[ಮಂಡ್ಯ]]></category>
		<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[ಲೋಕಸಭೆ ಚುನಾವಣೆ -2024]]></category>
		<category><![CDATA[H D KUMARASWAMY]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=38631</guid>

					<description><![CDATA[ದೇಶದ ಭವಿಷ್ಯ ನಿರ್ಧಾರವಾಗುವ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ, ಮಂಡ್ಯದಲ್ಲಿ ಜಾಗೃತ ಮತದಾರರ ವೇದಿಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ&#160; ಅವರನ್ನು ಸೋಲಿಸಲು ಕರೆ ನೀಡಿದೆ. ಸುಮಾರು 12 ಕಾರಣಗಳನ್ನು ಕೊಟ್ಟಿರುವ ಈ ವೇದಿಕೆ ಕುಮಾರಸ್ವಾಮಿ ಸೋಲಿಸಲು ಕುಮಾರಸ್ವಾಮಿಯವರ ಜಾತ್ಯತೀತತೆಯ ಮುಖವಾಡ ಮಂಡ್ಯಕ್ಕೆ ಅದೆಂತಹ ಆಪತ್ತು ತರಬಹುದು ಎಂದು ತನ್ನ ಆತಂಕ ವ್ಯಕ್ತಪಡಿಸಿದೆ. 12 ಕಾರಣಗಳಿವು1. ಒಕ್ಕಲಿಗ ಸಮುದಾಯದ ಜೀತ ವಿಮುಕ್ತಿಗಾಗಿ ಕುಮಾರಸ್ವಾಮಿ ಸೋಲಬೇಕು ಮಂಡ್ಯ ಒಕ್ಕಲಿಗ ಸಮುದಾಯ ಸತತವಾಗಿ ಕುಮಾರಸ್ವಾಮಿ ಮತ್ತು ಅವರ [&#8230;]]]></description>
										<content:encoded><![CDATA[
<p></p>



<p>ದೇಶದ ಭವಿಷ್ಯ ನಿರ್ಧಾರವಾಗುವ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ, ಮಂಡ್ಯದಲ್ಲಿ ಜಾಗೃತ ಮತದಾರರ ವೇದಿಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ&nbsp; ಅವರನ್ನು ಸೋಲಿಸಲು ಕರೆ ನೀಡಿದೆ. ಸುಮಾರು 12 ಕಾರಣಗಳನ್ನು ಕೊಟ್ಟಿರುವ ಈ ವೇದಿಕೆ ಕುಮಾರಸ್ವಾಮಿ ಸೋಲಿಸಲು ಕುಮಾರಸ್ವಾಮಿಯವರ ಜಾತ್ಯತೀತತೆಯ ಮುಖವಾಡ ಮಂಡ್ಯಕ್ಕೆ ಅದೆಂತಹ ಆಪತ್ತು ತರಬಹುದು ಎಂದು ತನ್ನ ಆತಂಕ ವ್ಯಕ್ತಪಡಿಸಿದೆ.</p>



<p><strong>12 ಕಾರಣಗಳಿವು</strong><br>1. <strong>ಒಕ್ಕಲಿಗ ಸಮುದಾಯದ ಜೀತ ವಿಮುಕ್ತಿಗಾಗಿ ಕುಮಾರಸ್ವಾಮಿ ಸೋಲಬೇಕು</strong></p>



<p>ಮಂಡ್ಯ ಒಕ್ಕಲಿಗ ಸಮುದಾಯ ಸತತವಾಗಿ ಕುಮಾರಸ್ವಾಮಿ ಮತ್ತು ಅವರ ಕುಟುಂಬವನ್ನು ರಾಜಕೀಯ ಕಷ್ಟಕ್ಕೆ ಸಿಲುಕಿದಾಗೆಲ್ಲಾ ಸದಾ ಬೆಂಬಲಿಸುತ್ತಾ ಬಂದಿದೆ. ಮಂಡ್ಯದ ಒಕ್ಕಲಿಗ ಸಮುದಾಯ ಅವರ ಕೈಹಿಡಿದಿದೆ. ಆದರೆ ಮಂಡ್ಯದ ಒಕ್ಕಲಿಗ ನಾಯಕರನ್ನು ತುಳಿದು ಮೂಲೆಗುಂಪು ಮಾಡುವುದರಲ್ಲೇ ಕುಮಾರಸ್ವಾಮಿ ರವರ ಪೂಜ್ಯ ತಂದೆಯವರು ಮತ್ತು ಸ್ವತಃ ಕುಮಾರಸ್ವಾಮಿಯವರು ನಿರತರಾಗಿದ್ದಾರೆ. ಅಸಂಖ್ಯಾ ಉದಾಹರಣೆಗಳಲ್ಲಿ ಒಂದಾದ ಮಾನ್ಯ ಎಸ್.ಎಂ.ಕೃಷ್ಣ ರವರು ಎರಡನೇ ಬಾರಿ ಮುಖ್ಯಮಂತ್ರಿಯಾಗಬಹುದಾಗಿದ್ದ ಸುವರ್ಣ ಅವಕಾಶವನ್ನು ಹಾಳುಗೆಡವಿದ್ದನ್ನು ನೋಡಬಹುದು. ಮಂಡ್ಯದ ಒಕ್ಕಲಿಗ ಸಮುದಾಯ ನಾವು ಏನೇ ಮಾಡಿದರೂ ಜೀತದಾಳುಗಳಂತೆ ನಮ್ಮ ಜೊತೆ ಇರುತ್ತಾರೆ, ನಾವು ಹೇಳಿದಂತೆ ಕೇಳುತ್ತಾರೆ ಎಂಬ ಭಾವನೆಯಿಂದಲೇ ಒಕ್ಕಲಿಗ ಸಮುದಾಯವನ್ನು ಕಾಲಕಸದಂತೆ ಕಡೆಗಣಿಸಿದ್ದಾರೆ. ಇಲ್ಲಿಯ ಸ್ಥಳಿಯ ಒಕ್ಕಲಿಗ ನಾಯಕತ್ವವನ್ನು ಬೆಳೆಯಲು ಅವಕಾಶ ನೀಡದೆ ಮಂಡ್ಯದ ಅಭಿವೃದ್ಧಿಗೆ ಒತ್ತು ನೀಡದೆ ಮಂಡ್ಯದ ಒಕ್ಕಲಿಗರ ಪ್ರಾಮಾಣಿಕವಾದ ಪ್ರೀತಿ ವಿಶ್ವಾಸಗಳನ್ನು ಅಡವಿಟ್ಟಿದ್ದಾರೆ. ಮಂಡ್ಯ ಒಕ್ಕಲಿಗರ &#8216;ಜೀತ ವಿಮುಕ್ತಿ&#8217; ಆಗಬೇಕೆಂದರೆ, ಇಲ್ಲಿಯ ಸ್ಥಳೀಯ ನಾಯಕತ್ವ ಬೆಳೆಯಬೇಕಾದರೆ, ಮಂಡ್ಯದ ಅಭಿವೃದ್ಧಿ ಆಗಬೇಕೆಂದರೆ ಕುಮಾರಸ್ವಾಮಿ ಈ ಲೋಕಸಭಾ ಚುನಾವಣೆಯಲ್ಲಿ ಸೋಲಬೇಕು.</p>



<p>2) <strong>ಕುಲಗುರು ದ್ರೋಹಕ್ಕಾಗಿ ತಕ್ಕ ಶಿಕ್ಷೆ ಆಗಬೇಕೆಂದರೆ ಕುಮಾರಸ್ವಾಮಿ ಸೋಲಬೇಕು.</strong><br>ಒಕ್ಕಲಿಗ ಏಕೈಕ ಮಠದ <strong>ಶ್ರೇಯೋಭಿವೃದ್ಧಿಗಾಗಿ</strong> ಶ್ರಮಿಸಿ, ತಮ್ಮ ಅನಾರೋಗ್ಯವನ್ನು ಲೆಕ್ಕಿಸದೆ ದುಡಿದ ಒಕ್ಕಲಿಗರ ಆಧ್ಯಾತ್ಮ ಮಾರ್ಗದರ್ಶಕರು, ಕುಲಗುರುಗಳಾದ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಸ್ವಾಮಿಯವರನ್ನು ನೋಯಿಸಿ, ಮಠವನ್ನು ತಮ್ಮ ರಾಜಕೀಯ ಸ್ವಾರ್ಥ ಸಾಧನೆಗಾಗಿ ಒಡೆಯಲು ಯತ್ನಿಸಿ, ಕುಲಗುರುಗಳನ್ನು ಮಾನಸಿಕವಾಗಿ ಘಾಸಿಗೊಳಿಸಿದ್ದಕ್ಕಾಗಿ ಶಿಕ್ಷೆಯಾಗಬೇಕು. 2019 ರ ಲೋಕಸಭಾ ಚುನಾವಣೆಯ ವೇಳೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರು, ಮೇಧಾವಿಗಳು, ಸುಜ್ಞಾನಿಗಳೂ ಆದ ಶ್ರೀಶ್ರೀಶ್ರೀ ನಿರ್ಮಲಾನಂದ ಸ್ವಾಮಿಜಿಯವರನ್ನು ಕಳ್ಳಸಾಗಾಣಿಕೆದಾರರ ಪಟ್ಟಿಗೆ ಸೇರಿಸಿ ಅವರ ದೂರವಾಣಿ ಕರೆಯನ್ನು ಕದ್ದಾಲಿಸಿದ ಗುರುದ್ರೋಹಕ್ಕಾಗಿ ಕುಮಾರಸ್ವಾಮಿ ಸೋಲಲೇಬೇಕು. (ಈ ಬಗ್ಗೆ ಸಿಬಿಐ ಬಳಿ ಇರುವ ದಾಖಲೆಗಳನ್ನು ಯಾರಾದರೂ ಪರಿಶೀಲಿಸಬಹುದು)</p>



<p>3) <strong>ಮಂಡ್ಯಕ್ಕೆ ನೀಡಿದ್ದ ₹8750 ಕೋಟಿ ಅನುದಾನ ಹಿಂಪಡೆದದ್ದಕ್ಕಾಗಿ ಕುಮಾರಸ್ವಾಮಿ ಸೋಲಬೇಕು.</strong><br>ಮಂಡ್ಯಕ್ಕೆ ತಾವೇ ಸ್ವತಃ ಘೋಷಣೆ ಮಾಡಿದ್ದ ರೂ. 8750 ಕೋಟಿ ಅನುದಾನನ್ನು ತಮ್ಮ ಸುಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯದ ಜನ ಸೋಲಿಸಿದರು ಎಂಬ ದ್ವೇಷದಿಂದ ರದ್ದು ಮಾಡಿದ್ದಕ್ಕಾಗಿ ಕುಮಾರಸ್ವಾಮಿ ಸೋಲಬೇಕು.</p>



<p>4<strong>) ಮಾತು ತಪ್ಪಿದ ಕುಮಾರಸ್ವಾಮಿ ಸೋಲಬೇಕು.</strong><br>ಶ್ರೀ. ಬಿ.ಎಸ್.ಯಡಿಯೂರಪ್ಪನವರಿಗೆ ಮಾತಿನಂತೆ ಅಧಿಕಾರ ಹಸ್ತಾಂತರ ಮಾಡದೆ, ಒಕ್ಕಲಿಗ ಸಮುದಾಯ ಮಾತಿಗೆ ನಿಲ್ಲುವವರು. ಒಮ್ಮೆ ನುಡಿದರೆ ಅದರಂತೆ ನಡೆಯುವವರು ಎಂಬ ಹೆಗ್ಗಳಿಕೆಯನ್ನು ಅವಮಾನಿಸಿದ ಕುಮಾರಸ್ವಾಮಿ ಸೋಲಬೇಕು.</p>



<p>5) <strong>ಮೇಕೆದಾಟು ಹೋರಾಟ ವಿರೋಧಿಸಿದ್ದಕ್ಕಾಗಿ ಕುಮಾರಸ್ವಾಮಿ ಸೋಲಬೇಕು.</strong><br>ಕಾವೇರಿ ನೀರು ಹಂಚಿಕೆಯಲ್ಲಿ ಮಂಡ್ಯಕ್ಕೆ ಆಗುತ್ತಿರುವ ತೊಂದರೆ ನಿವಾರಣೆಗಾಗಿ ವೈಜ್ಞಾನಿಕವಾಗಿ ರೂಪಿತವಾದ &#8216;ಮೇಕೆದಾಟು ಯೋಜನೆ&#8217; ಹೋರಾಟವನ್ನು ಕುಮಾರಸ್ವಾಮಿ ಸತತವಾಗಿ ವಿರೋಧಿಸಿರುವುದು ಈಗ ಇತಿಹಾಸ, ಚುನಾವಣೆ ವೇಳೆ ಕಾವೇರಿ ನೀರಿನ ಹಕ್ಕಿಗಾಗಿ ಹೋರಾಡುತ್ತೇವೆ ಎಂದು ಮೂಗಿಗೆ ತುಪ್ಪ ಸವರುತ್ತಿರುವುದಕ್ಕಾಗಿ ಕುಮಾರಸ್ವಾಮಿ ಸೋಲಬೇಕು.</p>



<p>6) <strong>ಮೈಷುಗರ್ ಮುಚ್ಚಿಸಿದ್ದಕ್ಕಾಗಿ ಕುಮಾರಸ್ವಾಮಿ ಸೋಲಬೆಕು.</strong><br>ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಮಂಡ್ಯದ ರೈತರ ಹೆಮ್ಮೆಯ ಮೈಷುಗರ್ ಫ್ಯಾಕ್ಟರಿ ಮುಚ್ಚಿದಂತೆ, ಕಬ್ಬು ಬೆಳೆಗಾರರು ಕಷ್ಟಕ್ಕೆ ಸಿಲುಕದಂತೆ ಮಾಡಲು ವಿಫಲರಾಗಿದ್ದಕ್ಕಾಗಿ ಕುಮಾರಸ್ವಾಮಿ ಸೋಲಬೇಕು.</p>



<p>7) <strong>ಕುಮಾರಸ್ವಾಮಿ ಸೋಲು &#8211; ಶ್ರೀ ಬಸವಣ್ಣ ಮತ್ತು ಶ್ರೀ ಕುವೆಂಪು ರವರ ಗೆಲವು</strong><br>ಬಸವಣ್ಣ-ಕುವೆಂಪು ವಿರೋಧಿಗಳ ಜೊತೆ ಕೈಜೋಡಿಸಿದ್ದಕ್ಕಾಗಿ ಕುಮಾರಸ್ವಾಮಿ ಸೋಲಬೇಕು. ಶ್ರೀ ಬಸವಣ್ಣನವರ ತತ್ವಾದರ್ಶದಲ್ಲಿ ತಮ್ಮ ವೈಚಾರಿಕತೆಯನ್ನು ನೆಲೆಗೊಳಿಸಿದ ಶ್ರೀ ಕುವೆಂಪುರವರಿಗೆ ಅತ್ಯುನ್ನತ ಸ್ಥಾನ ನೀಡಿ ಗೌರವಿಸಿದ್ದು ಮಂಡ್ಯದ ನೆಲ. ಈ ನೆಲವನ್ನು ಅವಮಾನಗೊಳಿಸಲು ಬ್ರಿಟಿಷರೊಡನೆ ಕೈ ಜೋಡಿಸಿದವರೆಂದು ಉರಿಗೌಡ-ನಂಜೇಗೌಡರನ್ನು ಕಲ್ಪಿಸಿ ಒಂದು ಸಮುದಾಯವನ್ನು ದೇಶದ್ರೋಹಿಗಳೆಂದು ಬಿಂಬಿಸಲು ಯತ್ನಿಸಿದವರ ಜೊತೆ ಇವತ್ತು ಕುಮಾರಸ್ವಾಮಿ ಕೈ ಜೋಡಿಸಿದ್ದಾರೆ. ಶ್ರೀ ಕುವೆಂಪುರವರ ವೈಚಾರಿಕತೆಯನ್ನು ಅವಮಾನಿಸುತ್ತಿದ್ದಾರೆ. ತಮ್ಮ ಮತ್ತು ತಮ್ಮ ಕುಟುಂಬದ ಸ್ವಾರ್ಥ ಸಾಧನೆಗಾಗಿ ಸಮುದಾಯ ನಡೆಯಬೇಕಾದ ಹಾದಿ ತೋರಿದ ಶ್ರೀ ಕುವೆಂಪುರವರನ್ನು ಜಿಲ್ಲೆಯಿಂದ ಮರೆಮಾಡುವವರ ಜೊತೆ ನಿಂತಿದ್ದಾರೆ. ಇದಕ್ಕೆ ತಕ್ಕ ಪಾಠ ಕಲಿಸಲು ಶ್ರೀ ಬಸವಣ್ಣ ಮತ್ತು ಶ್ರೀ ಕುವೆಂಪುರವರನ್ನು ಗೆಲ್ಲಿಸಲು ಕುಮಾರಸ್ವಾಮಿಯನ್ನು ಸೋಲಿಸಬೇಕಿದೆ.</p>



<p>8) <strong>ಮಂಡ್ಯದ ಅಭಿವೃದ್ಧಿಗೆ ಕೊಡುಗೆ ನೀಡದ ಕುಮಾರಸ್ವಾಮಿ ಸೋಲಬೇಕು :</strong><br>ರಾಜಕೀಯಕ್ಕೆ ಮಂಡ್ಯದ ಜನ ಬೇಕು : ಅಭಿವೃದ್ಧಿಗೆ ಬೇಡ ಎಂಬ ಧೋರಣೆ ಕುಮಾರಸ್ವಾಮಿ ಕುಟುಂಬದವರದ್ದು. ಹಾಸನದ ಅಭಿವೃದ್ಧಿಯ ಜೊತೆ ಮಂಡ್ಯದ ಅಭಿವೃದ್ಧಿಯನ್ನು ಹೋಲಿಸಿದರೆ ಈ ಮಾತು ಸ್ಪಷ್ಟವಾಗುತ್ತದೆ. ಮಂಡ್ಯದ ಜನರನ್ನು ಉಪಯೋಗಿಸಿ ಎಸೆಯುವ ಬಾಳೆ ಎಲೆ ಎಂದು ಭಾವಿಸಿರುವ ಕುಮಾರಸ್ವಾಮಿಯನ್ನು ಸೋಲಿಸಬೇಕಿದೆ.</p>



<p>9) <strong>ಗ್ಯಾರಂಟಿ ಯೋಜನೆಗಳ ವಿರೋಧಿ- ಮಹಿಳೆಯರನ್ನು ಅವಮಾನಿಸಿದ ಕುಮಾರಸ್ವಾಮಿ ಸೋಲಬೇಕು:</strong><br>ಬಡ, ಕೆಳ ಮಧ್ಯಮ ಮತ್ತು ಮಧ್ಯಮ ವರ್ಗಗಳಿಗೆ ಸಂಜೀವಿನಿಯಂತಿರುವ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳನ್ನು ವಿರೋಧಿಸುತ್ತಿರುವ, ಈ ಯೋಜನೆಗಳು ಹೆಣ್ಣು ಮಕ್ಕಳನ್ನು ದಾರಿತಪ್ಪಿಸುತ್ತಿವೆ ಎಂದು ಹೇಳುತ್ತಾ ಈ ಎಲ್ಲಾ ವರ್ಗಗಳನ್ನು ಕುಮಾರಸ್ವಾಮಿ ಅವಮಾನಿಸುತ್ತಿದ್ದಾರೆ. ಜಾತಿ, ಮತ, ವರ್ಗ ಮೀರಿದ ಈ ಯೋಜನೆಗಳ ವಿರೋಧಿಯಾಗಿದ್ದಾರೆ. ವೈಯಕ್ತಿಕ ಜೀವನದಲ್ಲಿ, ಸಾರ್ವಜನಿಕ ಜೀವನದಲ್ಲಿ ನಮ್ಮ ತಾಯಂದಿರನ್ನು, ಅಕ್ಕತಂಗಿಯರನ್ನು ಸತತವಾಗಿ ಅವಮಾನಿಸುತ್ತಿರುವ ಕುಮಾರಸ್ವಾಮಿಯನ್ನು ಸೋಲಿಸಬೇಕಿದೆ.</p>



<p>10) <strong>ರೈತ ವಿರೋಧಿ ಕಾಯ್ದೆಗಳನ್ನು ಬೆಂಬಲಿಸಿದ್ದಕ್ಕಾಗಿ ಕುಮಾರಸ್ವಾಮಿ ಸೋಲಬೇಕು.</strong><br>ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ, ಬೆಳೆಗಳಿಗೆ ಕಾಯ್ದೆ ಬದ್ದ ಬೆಂಬಲ ಬೆಲೆಗೆ ಒತ್ತಾಯಿಸಿ ದೆಹಲಿಯ ಗಡಿಯಲ್ಲಿ ನಡೆದ ರೈತ ಹೋರಾಟದಲ್ಲಿ ನೂರಾರು ರೈತರು ಪ್ರಾಣ ಕಳೆದುಕೊಂಡಿದ್ದು, ಪೊಲೀಸರ ಲಾಟಿ, ಬೂಟು, ಗುಂಡಿನೇಟಿಗೆ ಬಲಿಯಾದದ್ದು ಭಾರತದ ಇತಿಹಾಸದ ಕರಾಳ ಅಧ್ಯಾಯ ಅಂತಹ ಕಾಯ್ದೆಗಳನ್ನು ಬೆಂಬಲಿಸಿ ವಿಧಾನಸಭೆಯಲ್ಲಿ ವಾದ ಮಂಡಿಸಿದ ಕುಮಾರಸ್ವಾಮಿ ಸೋಲಬೇಕು.</p>



<p>11) <strong>ಕುಟುಂಬ ರಾಜಕಾರಣದ ಪರಾಕಾಷ್ಠೆಗಾಗಿ ಕುಮಾರಸ್ವಾಮಿ ಸೋಲಬೇಕು.</strong><br>ಪ್ರಾದೇಶಿಕ ಪಕ್ಷವೊಂದನ್ನು ಸ್ಥಳೀಯ ಮತ್ತು ಕನ್ನಡ ನಾಡಿನ ಹಿತಕಾಯಲು ಬೆಳಸಬಹುದಾಗಿದ್ದ ಸುವರ್ಣಾವಕಾಶವನ್ನು ತಮ್ಮ ಕುಟುಂಬದ ಸ್ವಾರ್ಥ ಸಾಧನೆಗಾಗಿ ಬಲಿಕೊಟ್ಟು, ಮೈತ್ರಿಯಿಂದ ಪಡೆದ ನಾಲ್ಕು ಸ್ಥಾನಗಳಲ್ಲಿ ಮೂರರಲ್ಲಿ (ಮಗ. ಮೊಮ್ಮಗ, ಅಳಿಯ ಇನ್ನೊಂದು ಸ್ಥಾನ ಅದೃಷ್ಟವಶಾತ್ ಮೀಸಲು ಸ್ಥಾನ) ತಮ್ಮ ಕುಟುಂಬದವರನ್ನೇ ನಿಲ್ಲಿಸಿ ಕನ್ನಡ, ಕನ್ನಡಿಗ, ಕರ್ನಾಟಕ ಎಂದು ಬೊಗಳೆ ಮಾತನಾಡಿ ಕನ್ನಡಿಗರನ್ನು ಮೋಸಗೊಳಿಸಿದ್ದಕ್ಕಾಗಿ ಕುಮಾರಸ್ವಾಮಿ ಸೋಲಬೇಕು.</p>



<p>12) <strong>ಅಲೆಮಾರಿ ರಾಜಕಾರಣ ಸ್ಥಳೀಯ ನಾಯಕತ್ವವನ್ನು ನಾಶ ಮಾಡುವ ಕುಮಾರಸ್ವಾಮಿ ಸೋಲಬೇಕು.</strong><br>ಸಾತನೂರು, ರಾಮನಗರ, ಚಿಕ್ಕಬಳ್ಳಾಪುರ, ಚನ್ನಪಟ್ಟಣ ಈಗ ಮಂಡ್ಯ ಎಂದು ಅಲೆಮಾರಿ ರಾಜಕಾರಣ ಮಾಡುತ್ತಾ, ನನ್ನ ಕರ್ಮ ಭೂಮಿ, ನನ್ನ ಹೃದಯ&#8230;. ಇತ್ಯಾದಿ ಸುಳ್ಳುಗಳ ಮಾಲೆ ಎಣೆಯುತ್ತಾ ಸ್ಥಳೀಯರನ್ನು ಮೋಸಗೊಳಿಸಿ. ಸ್ಥಳೀಯ ನಾಯಕತ್ವವನ್ನು ನಾಶಗೊಳಿಸುವ ಕುಮಾರಸ್ವಾಮಿಯವರಿಗೆ ಒಂದು ಸವಾಲು. ಹಾಸನದಿಂದ ನಿಮ್ಮ ಪಕ್ಷದಿಂದ ಹೊರಗಿನವರೊಬ್ಬರನ್ನು ವಿಧಾನಸಭೆ, ವಿಧಾನಪರಿಷತ್, ಲೋಕಸಭೆಗೆ ನಿಲ್ಲಿಸಿ ಗೆಲ್ಲಿಸಿಕೊಂಡು ಬರುವ ವಿಶಾಲ ಹೃದಯ ನಿಮಗಿದೆಯೇ? ಖಂಡಿತಾ ಇಲ್ಲ ಎಂಬುದು ಸಾಬೀತಾಗಿದೆ. ಇಲ್ಲಿ ಬಂದು ನನ್ನನ್ನು ಗೆಲ್ಲಿಸಿ ಎಚಿದು ಕೇಳಲು ಯಾವ ನೈತಿಕತೆ ಅವರಿಗಿದೆ. ಇದಕ್ಕಾಗಿ ಕುಮಾರಸ್ವಾಮಿ ಸೋಲಬೇಕಿದೆ. ಹೀಗೆ ನೂರಾರು ಕಾರಣಗಳ ದೊಡ್ಡಪಟ್ಟಿಯನ್ನೇ ನೀಡುತ್ತಾ ಹೋಗಬಹುದು. ಒಟ್ಟಾರೆ ಕುಮಾರಸ್ವಾಮಿ ಏಕೆ ಸೋಲಬೇಕೆಂಬುದಕ್ಕೆ ನೂರಾರು ಕಾರಣಗಳಿವೆ ಆದರೆ ಗೆಲ್ಲಲು ಒಂದೇ ಕಾರಣ ಅವರ ಸ್ವಾರ್ಥ ಸಾಧನೆ.</p>



<p>ಈ ಎಲ್ಲಾ ಕಾರಣಗಳನ್ನು ಇಟ್ಟು ಕುಮಾರಸ್ವಾಮಿಯನ್ನು ಮಂಡ್ಯ ಜನತೆ ಸೋಲಿಸಬೇಕಿದೆ ಎಂದು ಜಾಗೃತ ಮತದಾರರ ವೇದಿಕೆ ಕರೆ ನೀಡಿದೆ.</p>
]]></content:encoded>
					
		
		
			</item>
		<item>
		<title>ಪ್ರಧಾನಮಂತ್ರಿಗಳೆಂದರೆ ಸರ್ವಾಧಿಕಾರಿಯೇ? : ಸಿಎಂ ಸಿದ್ದರಾಮಯ್ಯ</title>
		<link>https://peepalmedia.com/are-prime-ministers-dictators/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 07 Nov 2023 12:42:08 +0000</pubDate>
				<category><![CDATA[ರಾಜಕೀಯ]]></category>
		<category><![CDATA[Basanagowda Patil Yatnal]]></category>
		<category><![CDATA[H D KUMARASWAMY]]></category>
		<category><![CDATA[india]]></category>
		<category><![CDATA[narendra modi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=31433</guid>

					<description><![CDATA[ಹಾಸನ : ಪ್ರಧಾನಿ ನರೇಂದ್ರ ಮೋದಿ ವಿಚಾರದಲ್ಲಿ ಅವರ ಆಡಳಿತವನ್ನು ಟೀಕಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು, ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ದುರಹಂಕಾರದಿಂದ  ಮಾತನಾಡುತ್ತಾರೆ  ಎಂದು ಹೇಳಿದ ಬಗ್ಗೆ ಪ್ರಧಾನಿ ಏನು ಸರ್ವಾಧಿಕಾರಿಯೇ? ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.  ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ&#160; ಮಧ್ಯಪ್ರದೇಶದ ಚುನಾವಣೆಯಲ್ಲಿ ನನ್ನ ಬಗ್ಗೆಯೂ ಪ್ರಧಾನಿ ಮಾತನಾಡಿದ್ದಾರೆ. ಇದೂ ಸಹ ದುರಹಂಕಾರ ಅಲ್ಲವೇ ಎಂದು ಪ್ರಶ್ನಿಸಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸರ್ಕಾರ ಕೇವಲ ಶಾಸಕರನ್ನು ಸೆಳೆಯುವ ಕೆಲಸದಲ್ಲಿ [&#8230;]]]></description>
										<content:encoded><![CDATA[
<p>ಹಾಸನ : ಪ್ರಧಾನಿ ನರೇಂದ್ರ ಮೋದಿ ವಿಚಾರದಲ್ಲಿ ಅವರ ಆಡಳಿತವನ್ನು ಟೀಕಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು, ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ದುರಹಂಕಾರದಿಂದ  ಮಾತನಾಡುತ್ತಾರೆ  ಎಂದು ಹೇಳಿದ ಬಗ್ಗೆ ಪ್ರಧಾನಿ ಏನು ಸರ್ವಾಧಿಕಾರಿಯೇ? ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. </p>



<p>ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಧಾನಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ&nbsp; ಮಧ್ಯಪ್ರದೇಶದ ಚುನಾವಣೆಯಲ್ಲಿ ನನ್ನ ಬಗ್ಗೆಯೂ ಪ್ರಧಾನಿ ಮಾತನಾಡಿದ್ದಾರೆ. ಇದೂ ಸಹ ದುರಹಂಕಾರ ಅಲ್ಲವೇ ಎಂದು ಪ್ರಶ್ನಿಸಿದರು.</p>



<p>ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸರ್ಕಾರ ಕೇವಲ ಶಾಸಕರನ್ನು ಸೆಳೆಯುವ ಕೆಲಸದಲ್ಲಿ ಮಗ್ನವಾಗಿದೆ ಎಂದಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿಯವರು ಯಾವಾಗ ಸತ್ಯವನ್ನು ಹೇಳಿದ್ದಾರೆ ಎಂದರು. ಸುಳ್ಳು ಆರೋಪಗಳನ್ನು ಮಾಡುವುದು, ಸುಳ್ಳು ಹೇಳುವುದನ್ನು ಬಿಟ್ಟರೆ ಬೆರೆ ಏನೂ ಮಾಡುತ್ತಿಲ್ಲ. ವಿರೋಧ ಪಕ್ಷ ಎಂದ ಮೇಲೆ ಸಲಹೆಗಳನ್ನು ನೀಡಬೇಕು ಎಂದರು.</p>



<p><strong>ಪರಿಶೀಲನೆ ನಂತರ ಲೋಕಸಭಾ ಅಭ್ಯರ್ಥಿ ತೀರ್ಮಾನ</strong><br>ಹಾಸನದ ಲೋಕಸಭಾ ಚುನಾವಣಾ ಅಭ್ಯರ್ಥಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಹಾಸನ ಜಿಲ್ಲೆಗೆ ಸಚಿವರನ್ನು ವೀಕ್ಷಕರಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿನ&nbsp; ಜನನಾಯಕರ ಅಭಿಪ್ರಾಯಗಳ ವರದಿಯನ್ನು ಪಡೆದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.</p>



<p><strong>ಯತ್ನಾಳ್ ಶೇಮ್ ಲೆಸ್ ವ್ಯಕ್ತಿ</strong><br>ಶಾಸಕ ಬಸವರಾಜ ಯತ್ನಾಳ್ ಅವರು ಕಾಂಗ್ರೆಸ್ ಶೇಮ್‍ಲೆಸ್ ಸರ್ಕಾರ ಎಂದು ಹೇಳಿರುವ ಬಗ್ಗೆ ಮಾತನಾಡಿ ಯತ್ನಾಳ್ ಅವರೇ ಶೇಮ್‍ಲೆಸ್ ವ್ಯಕ್ತಿ. ಅವರ ನಡವಳಿಕೆ ಸರಿಯಿಲ್ಲದ ಕಾರಣ ಬಿಜೆಪಿ ಅವರಿಗೆ ನೋಟೀಸು ಜಾರಿ ಮಾಡಿತ್ತು ಎಂದರು.</p>
]]></content:encoded>
					
		
		
			</item>
		<item>
		<title>ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಖಳನಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ</title>
		<link>https://peepalmedia.com/hd-kumaraswamy-is-a-political-villain/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 25 Oct 2023 12:04:55 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[bjp]]></category>
		<category><![CDATA[H D KUMARASWAMY]]></category>
		<category><![CDATA[JDS]]></category>
		<category><![CDATA[Jds BJP alliance]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=30520</guid>

					<description><![CDATA[ಮೈಸೂರು : ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು  ಹೆಚ್.ಡಿ.ಕುಮಾರಸ್ವಾಮಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ&#160; ಮುಖ್ಯಮಂತ್ರಿಗಳನ್ನು ಮಹಾಭಾರತದ ಎಲ್ಲಾ ಖಳನಾಯಕರಿಗೆ ಹೋಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, &#8220;ಕ್ರಿಕೆಟ್ ನೋಡಲು ಹೋಗಿದ್ದರು ಎನ್ನುವ ಅವರು ಸರ್ಕಾರ ಬಿದ್ದುಹೋಗುವಾಗ ಅಮೆರಿಕದಲ್ಲಿ ಒಂದು ವಾರ ಕೂತಿದ್ದರು. ಒಂದು ವರ್ಷ 2 ತಿಂಗಳು ತಾಜ್ ವೆಸ್ಟ್ ಎಂಡ್ ನಲ್ಲಿ ಕಾಲಕಳೆಯುತ್ತಿದ್ದರು. ಇವರು ನಮಗೆ ಹೇಳಿಕೊಡಬೇಕೆ&#8221; ಎಂದರು. ತಪ್ಪುದಾರಿಗೆ [&#8230;]]]></description>
										<content:encoded><![CDATA[
<p>ಮೈಸೂರು : ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು  ಹೆಚ್.ಡಿ.ಕುಮಾರಸ್ವಾಮಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>



<p>ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ&nbsp; ಮುಖ್ಯಮಂತ್ರಿಗಳನ್ನು ಮಹಾಭಾರತದ ಎಲ್ಲಾ ಖಳನಾಯಕರಿಗೆ ಹೋಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, &#8220;ಕ್ರಿಕೆಟ್ ನೋಡಲು ಹೋಗಿದ್ದರು ಎನ್ನುವ ಅವರು ಸರ್ಕಾರ ಬಿದ್ದುಹೋಗುವಾಗ ಅಮೆರಿಕದಲ್ಲಿ ಒಂದು ವಾರ ಕೂತಿದ್ದರು. ಒಂದು ವರ್ಷ 2 ತಿಂಗಳು ತಾಜ್ ವೆಸ್ಟ್ ಎಂಡ್ ನಲ್ಲಿ ಕಾಲಕಳೆಯುತ್ತಿದ್ದರು. ಇವರು ನಮಗೆ ಹೇಳಿಕೊಡಬೇಕೆ&#8221; ಎಂದರು.</p>



<p><strong>ತಪ್ಪುದಾರಿಗೆ ಎಳೆಯುತ್ತಿದ್ದಾರೆ</strong><br>ಕುಮಾರಸ್ವಾಮಿ ಅವರ ಸರ್ಕಾರವನ್ನು ಸಿದ್ದರಾಮಯ್ಯ ಅವರೇ ಬೀಳಿಸಿದ್ದು, ಅದನ್ನು ಅವರು ಒಪ್ಪಿಕೊಳ್ಳಲಿ ಎಂದಿರುವ&nbsp; ಬಗ್ಗೆ&nbsp; ಮಾತನಾಡಿ ಅದನ್ನು ಅವರು ವಿಧಾನಮಂಡಲದ ವಿಶ್ವಾಸ ಮತಯಾಚನೆಯಾದ ಸಂದರ್ಭದಲ್ಲಿ ಉತ್ತರ ನೀಡಿದಾಗ ಈ ಸರ್ಕಾರವನ್ನು ಬೀಳಿಸಿದ್ದು ಬಿಜೆಪಿಯವರು ಎಂದಿರುವುದು ವಿಧಾನಮಂಡಲದ ರೆಕಾರ್ಡ್ ನಲ್ಲಿದೆ. ಅದನ್ನು ಬಿಡುಗಡೆ ಮಾಡುತ್ತೇನೆ.ಈಗ ಬೇರೆ ತರ ಹೇಳುತ್ತಿದ್ದಾರೆ. ಹಾಗಾದರೆ ವಿಧಾನಮಂಡಲವನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ.&nbsp; ಶಾಸಕರು, ಸಚಿವರನ್ನು ಭೇಟಿ ಮಾಡದೆ ಹೋಟೆಲಿನಲ್ಲಿ ಕುಳಿತಿದ್ದರು ಎಂದರು.</p>



<p><strong>ಬಿಜೆಪಿ ಅವರಿಗಿಂತ ಹೆಚ್.ಡಿ.ಕುಮಾರಸ್ವಾಮಿ ಹೆಚ್ಚು&nbsp; ಹತಾಶರಾಗಿದ್ದಾರೆ</strong><br>ಬಿಜೆಪಿ ಗಿಂತಲೂ ಕುಮಾರಸ್ವಾಮಿ ಅವರು ಹೆಚ್ಚು ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ರಾಜಕೀಯವಾಗಿ ಹತಾಶರಾದವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಹೆಚ್.ಡಿ ಕುಮಾರಸ್ವಾಮಿ ಅವರು ಹತಾಶರಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು. ಬಿಜೆಪಿಗಿಂತ ಜಾಸ್ತಿ ಹತಾಶರಾಗಿರುವುದು ಕುಮಾರಸ್ವಾಮಿ. ಬಿಜೆಪಿ ಜೊತೆ ಸೇರದೇ ಹೋಗಿದ್ದಾರೆ ಒಂದು ಸ್ಥಾನವನ್ನೂ ಗೆಲ್ಲಲು ಆಗುತ್ತಿರಲಿಲ್ಲ. ಕುರುಡರು, ಹೆಳವರ ರೀತಿ ಒಬ್ಬರಿಗೊಬ್ಬರು ಅವಲಂಬಿತರಾಗಿದ್ದಾರೆ ಎಂದರು.</p>



<p><strong>ಚುನಾವಣೆ ಪ್ರಯುಕ್ತ ಯಾವ ರಾಜ್ಯಗಳಿಗೂ ಹಣ ಕೊಟ್ಟಿಲ್ಲ</strong><br>ಹೈ ಕಮಾಂಡಿಗೆ ದೂರು ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ ಪಂಚ ರಾಜ್ಯಗಳ ಚುನಾವಣೆ ಬಂದಿರುವುದರಿಂದ ನೆಪಮಾಡಿಕೊಂಡು&nbsp; ಸುಳ್ಳು&nbsp; ಹೇಳುತ್ತಾರೆ. ಇಂದಿನವರೆಗೆ ನಾವು ಯಾವ ರಾಜ್ಯಗಳಿಗೂ ಹಣ ಕೊಟ್ಟಿಲ್ಲ. ಅದಕ್ಕಾಗಿ ಯಾರ ಬಳಿಯೂ ಹಣ ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.</p>



<p><strong>ವಿದ್ಯುತ್ ಕ್ಷಾಮ: ಕೃತಕ&nbsp; ಅಭಾವವಲ್ಲ</strong><br>ವಿದ್ಯುತ್ ಕ್ಷಾಮ&nbsp; ನೀಗಿಸಲು ಹೊರಗಿನಿಂದ ವಿದ್ಯುತ್ ಕೊಳ್ಳುವುದು, ಎಲ್ಲಾ ಸಕ್ಕರೆ ಕಾರ್ಖಾನೆ ಗಳು ಪ್ರಾರಂಭವಾಗುತ್ತಿದ್ದು, ಅಲ್ಲಿ ಕೋಜನರೇಷನ್ ಆಗುತ್ತದೆ. ಅದರಿಂದ ಕೊಂಡುಕೊಳ್ಳುತ್ತೇವೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿ ಸಂಸ್ಥೆಗಳು&nbsp;&nbsp;&nbsp; ರಾಜ್ಯಕ್ಕೆ ನೀಡಬೇಕೆಂದು ಆದೇಶ ಹೊರಡಿಸಿದ್ದೇವೆ ಎಂದರು.</p>



<p>ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳುವಂತೆ&nbsp; ಇದು ಕೃತಕವಾಗಿ ಆಗಿರುವ ಅಭಾವವಲ್ಲ. 2 ಬಾರಿ ಮುಖ್ಯಮಂತ್ರಿಯಾದವರು ಸತ್ಯ ಮರೆಮಾಚಿ ಸುಳ್ಳು ಹೇಳುತ್ತಿದ್ದಾರೆ.</p>



<p><strong>ಬೆಂಗಳೂರಿಗೆ ರಾಮನಗರ ಸೇರ್ಪಡೆ ಹೇಳಿಕೆ: ಡಿಸಿಎಂ ಜೊತೆ ಚರ್ಚೆ</strong><br>ರಾಮನಗರವನ್ನು ಬೆಂಗಳೂರಿಗೆ ಸೇ ರ್ಪಡೆ ಮಾಡುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಮುಖ್ಯಮಂತ್ರಿಗಳು ಈ&nbsp; ಪ್ರಶ್ನೆಯನ್ನು ಅವರನ್ನೇ ಕೇಳಿ ಎಂದರು.ಈ ಬಗ್ಗೆ ನನಗೆ ಗೊತ್ತಿಲ್ಲ. ನಾನು ಈ&nbsp; ಬಗ್ಗೆ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದರು.</p>



<p><strong>ಬಿಜೆಪಿಗೆ ಮಾನ, ಮರ್ಯಾದೆ ಇದೆಯೇ</strong><br>ಬಿಜೆಪಿ ಎಟಿಎಂ ಸರ್ಕಾರ ಎಂದು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ಸುಳ್ಳು ಆರೋಪ. ಆಪರೇಷನ್ ಕಮಲ ಕೈಗೊಂಡು 25 ಕೋಟಿ ಹಣ ನೀಡಿ, 25.ಕೋಟಿ ಚುನಾವಣೆ ಗೆ ಖರ್ಚು ಮಾಡಲು ಹಣ ಎಲ್ಲಿಂದ ಬಂತು. ಇವರಿಗೆ ಏನಾದರೂ ಮಾನ , ಮರ್ಯಾದೆ ಇದೆಯೇ ಎಂದು ಪ್ರಶ್ನಿಸಿದರು. ಕರ್ನಾಟಕ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿರುವುದಕ್ಕೆ ಯಾರು ಜವಾಬ್ದಾರರು. 5 ವರ್ಷಗಳಿಂದ ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. . ಬರದ ಸಂದರ್ಭದಲ್ಲಿ&nbsp; ವಿದ್ಯುತ್ ತೊಂದರೆಯಾಗಿರುವುದಕ್ಕೆ ಬಿಜೆಪಿ ಕಾರಣ. 16000 ಮೆಗಾ ವ್ಯಾಟ್ ಸೌರ ವಿದ್ಯುತ್ ನಾವು ಉತ್ಪಾದನೆ ಮಾಡಿದ್ದೆವು.&nbsp; ಬಿಜೆಪಿ ಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯಾವ ನೈತಿಕತೆಯೂ&nbsp; ಇಲ್ಲ. ಏನೂ ಮಾಡಿದ್ದಾರೆ 3 ವರ್ಷ 10 ತಿಂಗಳಲ್ಲಿ ಎಂದು ಪ್ರಶ್ನಿಸಿದರು.</p>



<p><strong>30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳು</strong><br>ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದ್ದಾರೆ. 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ. ಇದಕ್ಕೆ ಯಾರು ಹೊಣೆ. ನಮ್ಮ ಕಾಲದ ಹಾಗೂ ಬಿಜೆಪಿ ಕಾಲದ ಆರ್ಥಿಕಸ್ಥಿತಿ&nbsp; ಕುರಿತು ಶ್ವೇತಪತ್ರವನ್ನು&nbsp; ವಿಧಾನಮಂಡಲದಲ್ಲಿ ಮಂಡಿಸುತ್ತೇನೆ. ರಾಜ್ಯ ಹಾಳು ಮಾಡಿದ್ದಕ್ಕೆ ಜನ ತಿರಸ್ಕಾರ ಮಾಡಿದ್ದಾರೆ. ಈಗ&nbsp; ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಾರೆ ಹೊರತು ಅದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.</p>



<p><strong>ಮಂತ್ರಿಮಂಡಲ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ</strong><br>ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಸಚಿವರಾಗಬೇಕೆಂದು ಬಯಸುವುದರಲ್ಲಿ ತಪ್ಪಿಲ್ಲ.ಮಂತ್ರಿಮಂಡಲ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.</p>



<p><strong>ಖಾಲಿ ಡಬ್ಬಗಳು ಹೆಚ್ಚು ಶಬ್ದ ಮಾಡುತ್ತವೆ</strong><br>ಜಾತಿಜನಗಣತಿ ವರದಿ ಬಿಡುಗಡೆ&nbsp; ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಹೇಳಿಕೆಯ ನಂತರ ಅವರ ಮೇಲಿನ ವಿಪಕ್ಷಗಳ&nbsp; ಆರೋಪಗಳು ಹೆಚ್ಚಾಗಿದೆ ಎಂಬ ಬಗ್ಗೆ ಉತ್ತರಿಸಿ ರಾಜಕೀಯ ವಾಗಿ ಹತಾಶರಾಗಿಮಾತನಾಡುತ್ತಾರೆ. ಖಾಲಿ ಡಬ್ಬಗಳು ಹೆಚ್ಚು ಶಬ್ದ ಮಾಡುತ್ತವೆ ಎಂದರು.</p>
]]></content:encoded>
					
		
		
			</item>
		<item>
		<title>ಹೆಚ್.ಡಿ ಕುಮಾರಸ್ವಾಮಿಯಿಂದ ಸಿಎಂ ಮೇಲೆ ಕೀಳು ಮಟ್ಟದ ನಿಂದನೆ ; ಸೋಲಿನ ಹತಾಶೆಯೋ/ ಜಾತಿಯ ಅಹಮ್ಮಿಕೆಯೋ?</title>
		<link>https://peepalmedia.com/low-level-abuse-of-cm-by-hd-kumaraswamy/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 09 Aug 2023 06:59:53 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[H D KUMARASWAMY]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=25165</guid>

					<description><![CDATA[ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾದಾಗಿನಿಂದ ಜೆಡಿಎಸ್ ಪಕ್ಷದ ನಾಯಕ ಕುಮಾರಸ್ವಾಮಿ, ಬಿಜೆಪಿ ಪಕ್ಷಕ್ಕಿಂತ ಒಂದು ಹೆಜ್ಜೆ ಮುಂದೇ ನಿಂತು ಸರ್ಕಾರವನ್ನು ಟೀಕಿಸುತ್ತಿರುವುದು ರಾಜ್ಯದ ಜನತೆ ಗಮನಿಸಿರುವಂತದ್ದು. ಇದು ವಿರೋಧ ಪಕ್ಷದ ಜವಾಬ್ದಾರಿ ಕೂಡಾ. ಆದರೆ ಆ ಟೀಕೆ ಎನ್ನುವುದು ವಯಕ್ತಿಕ ನಿಂದನೆ, ಕೀಳು ಮಟ್ಟದ ಪದ ಪ್ರಯೋಗದ ಹಂತಕ್ಕೆ ಬಂದರೆ ಸಾಂವಿಧಾನಿಕ ಜವಾಬ್ದಾರಿ ಎನ್ನುವುದಕ್ಕಿಂತ ವಯಕ್ತಿಕ ದ್ವೇಷ ಎನ್ನದೇ ಇರಲು ಸಾಧ್ಯವೇ ಇಲ್ಲ. ಸಧ್ಯ ರಾಜಕೀಯ ವಲಯದಲ್ಲಿ ಹೆಚ್.ಡಿ.ಕುಮಾರಸ್ವಾಮಿಯವರು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಟ್ವಿಟ್ ಈಗ ತೀರಾ [&#8230;]]]></description>
										<content:encoded><![CDATA[
<p>ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾದಾಗಿನಿಂದ ಜೆಡಿಎಸ್ ಪಕ್ಷದ ನಾಯಕ ಕುಮಾರಸ್ವಾಮಿ, ಬಿಜೆಪಿ ಪಕ್ಷಕ್ಕಿಂತ ಒಂದು ಹೆಜ್ಜೆ ಮುಂದೇ ನಿಂತು ಸರ್ಕಾರವನ್ನು ಟೀಕಿಸುತ್ತಿರುವುದು ರಾಜ್ಯದ ಜನತೆ ಗಮನಿಸಿರುವಂತದ್ದು. ಇದು ವಿರೋಧ ಪಕ್ಷದ ಜವಾಬ್ದಾರಿ ಕೂಡಾ. ಆದರೆ ಆ ಟೀಕೆ ಎನ್ನುವುದು ವಯಕ್ತಿಕ ನಿಂದನೆ, ಕೀಳು ಮಟ್ಟದ ಪದ ಪ್ರಯೋಗದ ಹಂತಕ್ಕೆ ಬಂದರೆ ಸಾಂವಿಧಾನಿಕ ಜವಾಬ್ದಾರಿ ಎನ್ನುವುದಕ್ಕಿಂತ ವಯಕ್ತಿಕ ದ್ವೇಷ ಎನ್ನದೇ ಇರಲು ಸಾಧ್ಯವೇ ಇಲ್ಲ.</p>



<p>ಸಧ್ಯ ರಾಜಕೀಯ ವಲಯದಲ್ಲಿ ಹೆಚ್.ಡಿ.ಕುಮಾರಸ್ವಾಮಿಯವರು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಟ್ವಿಟ್ ಈಗ ತೀರಾ ಚರ್ಚೆಗೆ ಗುರಿ ಮಾಡಿದೆ. ಕುಮಾರಸ್ವಾಮಿಯವರ ಅಧಿಕೃತ ಟ್ವಿಟ್ಟರ್ ಮತ್ತು ಫೇಸ್ಬುಕ್ ಖಾತೆಯಲ್ಲಿ ಬಂದ ಬರಹ ಅದರಲ್ಲಿ ಬಳಸಿದ ಪದ ಪ್ರಯೋಗ ನೋಡಿದರೆ ಸಾಮಾಜಿಕ ಮತ್ತು ರಾಜಕೀಯ ಜವಾಬ್ದಾರಿಗಿಂತ ವಯಕ್ತಿಕ ದ್ವೇಷವೇ ಎದ್ದು ಕಾಣುತ್ತಿದೆ. ಒಂದು ಹಂತದಲ್ಲಿ ಇದು &#8216;ಮಾಜಿ ಮುಖ್ಯಮಂತ್ರಿ&#8217;ಯೊಬ್ಬರ ಅಧಿಕೃತ ಟ್ವಿಟ್ಟರ್ ಖಾತೆಯೇ ಎಂಬ ಅನುಮಾನ ಮೂಡದಿರದು.</p>



<p>ಅದರಲ್ಲೂ ಹೆಚ್.ಡಿ.ಕುಮಾರಸ್ವಾಮಿರವರು ಚುನಾವಣೆಯಿಂದ ಈಚೆಗೆ ಅವರ ಟ್ವೀಟ್ ಮತ್ತು ಜಾಲತಾಣದ ಆಚೆಗೆ ಸರ್ಕಾರದ ಮೇಲೆ ಮಾಡುತ್ತಿರುವ ಆಕ್ರಮಣ ಒಮ್ಮೊಮ್ಮೆ ಬಿಜೆಪಿ ಪಕ್ಷಕ್ಕಿಂತ ಕೆಳ ಮಟ್ಟಕ್ಕೆ ಇಳಿದು ದಾಳಿ ಇಡುತ್ತಿದ್ದಾರೆ. ಇದು ಅವರ ಪಕ್ಷದ ಕಳಪೆ ಮಟ್ಟದ ಸೀಟು ಗಳಿಕೆಯ ಒಂದು ಕಾರಣವಾದರೆ, ಇನ್ನೊಂದು ಸಿದ್ದರಾಮಯ್ಯ ಮೇಲಿನ ವಯಕ್ತಿಕ ದ್ವೇಷ. ಆ ದ್ವೇಷ ರಾಜಕೀಯದ ಹೊರತಾಗಿಯೂ ಅವರೊಳಗಿರುವ ಜಾತಿಯ ವೈಷಮ್ಯ ಎಂಬುದು ಅವರ ಮತ್ತು ಅವರ ಕಾರ್ಯಕರ್ತರು ಮಾಡುತ್ತಿರುವ ವಯಕ್ತಿಕ ಮಟ್ಟದ ಟೀಕೆಯಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.</p>



<p>ಸಧ್ಯ ಮಂಗಳವಾರದ ದಿನ ಕುಮಾರಸ್ವಾಮಿ ಮಾಡಿರುವ ಕೀಳು ಮಟ್ಟದ ಟ್ವಿಟ್ ಇಂತಹ ಹಲವು ಅನುಮಾನಗಳಿಗೆ ಪುಷ್ಟಿ ನೀಡುವಂತಿದೆ. ಸಿದ್ದರಾಮಯ್ಯನವರ ಮೇಲೆ ಬಳಸಿದ ಭಾಷಾ ಪ್ರಯೋಗಗಳಲ್ಲಿ.. ಮಾನಗೇಡಿ, ಲಜ್ಜೆಗೇಡಿ, ವಕ್ಕರಿಸು, &#8216;ಸಿದ್ದಕಲೆ&#8217;, ಸ್ವಯಂಘೋಷಿತ ನಕಲಿ ಸಂವಿಧಾನ ತಜ್ಞ, ಎತ್ತುವಳಿ ಗಿರಾಕಿ, ನಕಲಿ ರಾಮ, ಅಪ್ಪಯ್ಯ ಮತ್ತು ಅತೀಂದ್ರ, ಟಿಕ್ ಟಿಕ್ ಸಿದ್ದರಾಮಯ್ಯ ಹೀಗೆ ಇವೆಲ್ಲವುಗಳಲ್ಲಿ ಯಾವುದಾದರೂ ರಾಜಕೀಯ ಟೀಕೆ ಮಾತ್ರ ಎನ್ನಿಸುವುದೇ?</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ &#39;ಸಿದ್ದಕಲೆ&#39; ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ. 1/5<a href="https://twitter.com/hashtag/YstTax?src=hash&amp;ref_src=twsrc%5Etfw">#YstTax</a> <a href="https://twitter.com/hashtag/CashForPosting?src=hash&amp;ref_src=twsrc%5Etfw">#CashForPosting</a></p>&mdash; ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) <a href="https://twitter.com/hd_kumaraswamy/status/1688719770718552064?ref_src=twsrc%5Etfw">August 8, 2023</a></blockquote><script async src="https://platform.twitter.com/widgets.js" charset="utf-8"></script>
</div></figure>



<p>ಕುಮಾರಸ್ವಾಮಿಯವರು ಮಾಡಿರುವ ಈ ಟ್ವಿಟ್ ಈಗ ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚಿತವಾಗುತ್ತಿದೆ. ಇದೇ ಟ್ವಿಟ್ ಗೆ ಪ್ರತಿಕ್ರಿಯೆಗಳಾಗಿ ಬಂದ ಬಹುತೇಕ ಎಲ್ಲಾ ಟ್ವಿಟ್ ಗಳು ಕುಮಾರಸ್ವಾಮಿಯ ಭಾಷಾ ಪ್ರಯೋಗದ ಬಗ್ಗೆಯೇ ಪಾಠ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿ ಈ ಮಟ್ಟದ ಭಾಷೆ ನಿಮಗೆ ಶೋಭೆ ತರುವಂತದ್ದಲ್ಲ ಎಂದು ಕುಮಾರಸ್ವಾಮಿಗೆ ಕೆಲವರು ತಿಳಿ ಹೇಳಿ, ಇನ್ನೂ ಕೆಲವರು ಕುಟುಕಿ ಹೇಳಿದ್ದಾರೆ.</p>



<p>ಇದೇ ಟ್ವಿಟ್ ನ್ನು ರಿಟ್ವಿಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಈ ಮಟ್ಟಿಗಿನ ಭಾಷಾ ಪ್ರಯೋಗ ಸರಿಯೇ ಎಂದು ನೇರವಾಗಿ ಕುಮಾರಸ್ವಾಮಿಯವರನ್ನು ಪ್ರಶ್ನಿಸಿದ್ದಾರೆ. ಚುನಾವಣಾ ಸೋಲಿನ ಸುಳಿಯಲ್ಲಿ ಕುಮಾರಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿರಬಹುದು ಎಂದೂ ಸಿದ್ದರಾಮಯ್ಯ ತಮ್ಮ ಟ್ವೀಟ್ ಮೂಲಕ ಸಣ್ಣ ಅಸಮಾಧಾನ ಹೊರಹಾಕಿದ್ದಾರೆ.಼</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಸನ್ಮಾನ್ಯ <a href="https://twitter.com/hd_kumaraswamy?ref_src=twsrc%5Etfw">@hd_kumaraswamy</a> ಅವರೇ,<br><br>ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ.<br>ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ.<br><br>ಇನ್ನು ನೀವು… <a href="https://t.co/dXtacPzEHE">https://t.co/dXtacPzEHE</a></p>&mdash; Siddaramaiah (@siddaramaiah) <a href="https://twitter.com/siddaramaiah/status/1688887005395173377?ref_src=twsrc%5Etfw">August 8, 2023</a></blockquote><script async src="https://platform.twitter.com/widgets.js" charset="utf-8"></script>
</div></figure>



<p>ಈ ವಿವಾದವನ್ನು ಇನ್ನೊಂದು ಆಯಾಮದಿಂದ ನೋಡುವುದಾದರೆ ಹಲವು ದಿನಗಳಿಂದ ಹೆಚ್.ಡಿ.ಕುಮಾರಸ್ವಾಮಿ ಬಳಸುತ್ತಿರುವ ಟ್ವಿಟ್ ಆಗಿರಬಹುದು, ಅದರಾಚೆಗೆ ಸಿದ್ದರಾಮಯ್ಯನವರ ಮೇಲಿನ ಆಕ್ರಮಣದಲ್ಲಿ, ಜಾತಿಯ ಅಹಮ್ಮಿಕೆ ಕೂಡಾ ಎದ್ದು ಕಾಣುತ್ತಿದೆ ಎಂಬುದು ಪಕ್ಷಗಳ ಹೊರತಾಗಿ ಇರುವ ರಾಜಕೀಯ ಪಂಡಿತರ ಲೆಕ್ಕಾಚಾರ. ಅಹಿಂದ ಸಮುದಾಯಗಳ ಪ್ರತಿನಿಧಿಯಾಗಿ ಗುರುತಿಸಿಕೊಂಡ ಸಿದ್ದರಾಮಯ್ಯ ತನಗಿಂತ ಜಾತಿಯಲ್ಲಿ ಕೆಳಗಿನವರು ಎಂಬ ಜಾತಿಯ ತಾರತಮ್ಯ ಕೂಡಾ ಕುಮಾರಸ್ವಾಮಿಗೆ ಇದೆ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.</p>



<p>ಇನ್ನು ಎದ್ದಿರುವ ವಿವಾದದ ಅಡಿಯಲ್ಲಿ ನೋಡುವುದಾದರೆ ಒಂದು ಕಾಲದಲ್ಲಿ ಜೆಡಿಎಸ್ ಭದ್ರಕೋಟೆಯಂತಿದ್ದ ಮಂಡ್ಯ ಜಿಲ್ಲೆ ಈಗ ಬಹುತೇಕ ಕಾಂಗ್ರೆಸ್ ಪಾಲಾಗಿದೆ. ಪಕ್ಕದ ರಾಮನಗರ ಕೂಡ, ಚನ್ನಪಟ್ಟಣ ಹೊರತುಪಡಿಸಿ ಪೂರ್ತಿ ಕಾಂಗ್ರೆಸ್ ಮಯ. ರಾಮನಗರ ಕ್ಷೇತ್ರದಲ್ಲಿ ಸ್ವತಃ ತಮ್ಮ ಮಗ ನಿಖಿಲ್ ನನ್ನು ಗೆಲ್ಲಿಸಲೂ ಹೆಣಗಾಡಿ ಸೋತ ಕುಮಾರಸ್ವಾಮಿ ಈಗ ಅಕ್ಷರಶಃ ಹತೋಶ ಭಾವವನ್ನು ಹೊರ ಹಾಕುತ್ತಿರಬಹುದು ಎಂದು ಮೇಲ್ನೋಟಕ್ಕೆ ಕಾಣುತ್ತಿದೆ. ಇನ್ನು ರಾಜ್ಯಪಾಲರಿಗೆ ಬರೆದ ನಕಲಿ ಪತ್ರ ಕೂಡಾ ಕುಮಾರಸ್ವಾಮಿ ಸೃಷ್ಟಿ ಎಂಬುದು ರಾಜಕೀಯ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿವೆ.</p>



<p>ಕಾಂಗ್ರೆಸ್ ಸರ್ಕಾರದ ಮೇಲೆ ಶತಾಯಗತಾಯ ಕುಮಾರಸ್ವಾಮಿ ಏನೇ ತಂತ್ರ ಹೆಣೆದರೂ ಅದು ತನಗೇ ತಿರುಮಂತ್ರವಾಗುತ್ತಾ ಸಾಗುವುದು ಕೂಡಾ ಕುಮಾರಸ್ವಾಮಿ ನಿದ್ದೆಗೆಡಿಸಿದೆ. ಅಕಸ್ಮಾತ್ &#8216;ನಕಲಿ ದೂರು ಪತ್ರ&#8217;ದ ಬಗ್ಗೆ ಎದ್ದಿರುವ ಅನುಮಾನದ ಹಿಂದೆ ಕುಮಾರಸ್ವಾಮಿ ಕೈವಾಡ ಇದ್ದರೂ ಇದೂ ಸಹ ಉಲ್ಟಾ ಹೊಡೆದರೆ ಕುಮಾರಸ್ವಾಮಿ ಸ್ಪಷ್ಟವಾಗಿ ತಾಳ್ಮೆ ಕಳೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.</p>



<p>ಏನೇ ಇರಲಿ, ಕುಮಾರಸ್ವಾಮಿ ತನ್ನ ರಾಜಕೀಯ ವಿರೋಧಿ ಎಂದೇ ಗುರುತಿಸಿಕೊಂಡಿರುವ ಸಿದ್ದರಾಮಯ್ಯನವರ ಮೇಲೆ ಈ ರೀತಿಯ ವಯಕ್ತಿಕ ಕೀಳು ಅಭಿರುಚಿಯ ನಿಂದನೆಯಿಂದ ಜನರ ಗಮನ ಸೆಳೆಯಬಹುದೇ ಹೊರತು, ರಾಜಕೀಯವಾಗಿ ಕುಮಾರಸ್ವಾಮಿಯ ಹೆಸರೇ ಕೆಡುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಇನ್ನು ಈ ಕೆಸರೆರಚಾಟ ಯಾವ ಮಟ್ಟಕ್ಕೆ ತಲುಪಬಹುದು ಎಂಬುದು ಮಾತ್ರ ಕುತೂಹಲ ಹುಟ್ಟಿಸಿದೆ.</p>
]]></content:encoded>
					
		
		
			</item>
		<item>
		<title>ಜೆಡಿಎಸ್ ಬಿಜೆಪಿ ಮೈತ್ರಿ : ಎತ್ತು ಏರಿಗೆ, ಕೋಣ ನೀರಿಗೆ ಅಂತಾಗ್ತಿದೆ ಜೆಡಿಎಸ್ ನಾಯಕರ ನಡೆ</title>
		<link>https://peepalmedia.com/the-jds-party-itself-is-unhappy-about-the-jds-bjp-alliance/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 21 Jul 2023 13:24:11 +0000</pubDate>
				<category><![CDATA[ರಾಜಕೀಯ]]></category>
		<category><![CDATA[basavaraja bommai]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[H D KUMARASWAMY]]></category>
		<category><![CDATA[JDS]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=24155</guid>

					<description><![CDATA[ಪ್ರಾದೇಶಿಕ ಪಕ್ಷವಾದ ಜೆಡಿಎಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ಯಿಂದ ಸಮಾನ ಅಂತರ ಉಳಿಸಿಕೊಳ್ಳಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಅಭಿಪ್ರಾಯ ಪಟ್ಟಿದ್ದಾರೆ. ಆದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತ್ರ ಇಂದೂ ಕೂಡಾ ಬಿಜೆಪಿಯ ಬಸವರಾಜ ಬೊಮ್ಮಾಯಿಯವರ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ದೇವೇಗೌಡರ ನಿಲುವಿಗೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ. ಕುಮಾರಸ್ವಾಮಿಯವರ ಈ ನಡೆ ಈಗ ಜೆಡಿಎಸ್ ಕಾರ್ಯಕರ್ತರಿಗೂ ಇರಿಸುಮುರಿಸು ಉಂಟುಮಾಡಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಇನ್ನೇನು ಬಿಜೆಪಿ [&#8230;]]]></description>
										<content:encoded><![CDATA[
<p>ಪ್ರಾದೇಶಿಕ ಪಕ್ಷವಾದ ಜೆಡಿಎಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ಯಿಂದ ಸಮಾನ ಅಂತರ ಉಳಿಸಿಕೊಳ್ಳಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಅಭಿಪ್ರಾಯ ಪಟ್ಟಿದ್ದಾರೆ. ಆದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತ್ರ ಇಂದೂ ಕೂಡಾ ಬಿಜೆಪಿಯ ಬಸವರಾಜ ಬೊಮ್ಮಾಯಿಯವರ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ದೇವೇಗೌಡರ ನಿಲುವಿಗೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ. ಕುಮಾರಸ್ವಾಮಿಯವರ ಈ ನಡೆ ಈಗ ಜೆಡಿಎಸ್ ಕಾರ್ಯಕರ್ತರಿಗೂ ಇರಿಸುಮುರಿಸು ಉಂಟುಮಾಡಿದೆ.</p>



<figure class="wp-block-image size-full"><img fetchpriority="high" decoding="async" width="739" height="415" src="https://peepalmedia.com/wp-content/uploads/2023/07/images-2023-07-21T184754.424.jpeg" alt="" class="wp-image-24156" srcset="https://peepalmedia.com/wp-content/uploads/2023/07/images-2023-07-21T184754.424.jpeg 739w, https://peepalmedia.com/wp-content/uploads/2023/07/images-2023-07-21T184754.424-300x168.jpeg 300w, https://peepalmedia.com/wp-content/uploads/2023/07/images-2023-07-21T184754.424-150x84.jpeg 150w, https://peepalmedia.com/wp-content/uploads/2023/07/images-2023-07-21T184754.424-696x391.jpeg 696w" sizes="(max-width: 739px) 100vw, 739px" /></figure>



<p>2024 ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಇನ್ನೇನು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಹಂತದಲ್ಲೇ NDA ಮೈತ್ರಿಕೂಟದ ಸಭೆಯಿಂದ ದೂರ ಉಳಿದಿತ್ತು. ಜೆಡಿಎಸ್ ಹಿರಿಯ ನಾಯಕ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಯಾವ ಪಕ್ಷ ಅಥವಾ ಒಕ್ಕೂಟಕ್ಕೂ ನಮ್ಮ ಬೆಂಬಲವಿಲ್ಲ ಎಂದು ಹೇಳಿದ್ದಾರೆ.</p>



<p>ಆದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತ್ರ ದಿನಕ್ಕೊಂದು ಬಾರಿಯಾದರೂ ಬಿಜೆಪಿ ಜೊತೆಗೆ ಗುರುತಿಸಿಕೊಳ್ಳುವುದನ್ನ ನಿಲ್ಲಿಸಿಲ್ಲ. ಇಂದೂ ಸಹ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಟಿ ಪತ್ರಿಕಾಗೋಷ್ಠಿ, ಬೆಂಕಿ ಇಲ್ಲದೇ ಹೊಗೆ ಆಡುತ್ತಿಲ್ಲ ಎಂಬುದನ್ನು ಸಾಕ್ಷೀಕರಿಸುತ್ತಿದೆ. ಕಾಂಗ್ರೆಸ್ ವಿರುದ್ಧ ರಾಜ್ಯಪಾಲರಿಗೆ ಸಲ್ಲಿಸಿದ ಬಿಜೆಪಿ ಪಕ್ಷದ ದೂರಿನ ಅರ್ಜಿಯಲ್ಲೂ ಕುಮಾರಸ್ವಾಮಿಯವರ ಸಹಿ ಇವೆಲ್ಲಾ ಬೆಳವಣಿಗೆಯನ್ನು ಪುಷ್ಠೀಕರಿಸಿದಂತಿದೆ.</p>



<p>ಈ ನಡುವೆ ಬಿಜೆಪಿ ಜೊತೆಗಿನ ಮೈತ್ರಿ ಕಾರಣಕ್ಕೆ ಜೆಡಿಎಸ್ ಪಾಳಯದಲ್ಲೇ ಬಿರುಕು ಮೂಡಿದೆ. ಹೆಚ್.ಡಿ.ಕುಮಾರಸ್ವಾಮಿ ನಡೆಯ ಬಗ್ಗೆ ಸ್ವತಃ ಜೆಡಿಎಸ್ ಶಾಸಕರೇ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಜೆಡಿಎಸ್‌ ನಾಯಕರಲ್ಲಿ ಒಮ್ಮತ ಮೂಡುತ್ತಿಲ್ಲ ಎಂಬುದು ಸ್ಪಷ್ಟವಾಗಿ ಗೊತ್ತಾಗಿದೆ. ಈಗಿರುವ ಜೆಡಿಎಸ್‌ನ 19 ಶಾಸಕರ ಪೈಕಿ ಕೆಲವು ಶಾಸಕರಿಗೆ ಬಿಜೆಪಿ ಮೈತ್ರಿ ಕುರಿತು ಭಿನ್ನಾಭಿಪ್ರಾಯವಿದೆ ಎಂದು ತಿಳಿದುಬಂದಿದೆ.</p>



<p>ಈ ಬಗ್ಗೆ ಎರಡು ದಿನಗಳ ಹಿಂದೆ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಕೂಡಾ &#8216;ಕುಮಾರಸ್ವಾಮಿ ನಡೆಯಿಂದ ಬೇಸತ್ತ ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ. ಯಾವುದೇ ಕಂಡೀಶನ್ ಹೊರತುಪಡಿಸಿ ಅವರು ನಮ್ಮ ಜೊತೆಗೆ ಕೈ ಜೋಡಿಸಲು ತಯಾರಿದ್ದಾರೆ&#8217; ಎಂದು ಹೊಸ ಬಾಂಬ್ ಎಸೆದದ್ದು ಜೆಡಿಎಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಮತ್ತೊಂದು ಸಾಕ್ಷಿ.</p>



<p>ಎರಡು ದಿನಗಳ ಹಿಂದೆ ವಿಧಾನಸಭೆಯ ಸ್ಪೀಕರ್ ಕುರ್ಚಿಗೆ ಹರಿದ ಪೇಪರ್ ಎಸೆದು ಅಸಭ್ಯವಾಗಿ ವರ್ತಿಸಿ, ಸದನದಿಂದ ಅಮಾನತುಗೊಂಡ 10 ಮಂದಿ ಬಿಜೆಪಿ ಶಾಸಕರ ಪರವಾಗಿ ಕುಮಾರಸ್ವಾಮಿ ನಿಂತಿದ್ದು ಸಹ ಕುಮಾರಸ್ವಾಮಿಗೆ ಬಿಜೆಪಿ ಪರ ಒಲವನ್ನು ತೋರ್ಪಡಿಸಿದಂತಿದೆ. ಆದರೆ ಮಾಜಿ ಸಚಿವ, ಜೆಡಿಎಸ್ ಹಿರಿಯ ನಾಯಕ ಜಿ ಟಿ ದೇವೇಗೌಡ ಸೇರಿದಂತೆ ಹಲವು ಜೆಡಿಎಸ್ ನಾಯಕರು ಇದಕ್ಕೆ ವಿರೋಧವಾಗಿ ನಿಂತಿದ್ದಾರೆ. ಬಿಜೆಪಿ ಶಾಸಕರ ನಿಲುವು ಸಮ್ಮತವಲ್ಲ. ಸ್ಪೀಕರ್ ಜೊತೆಗೆ ನಡೆದುಕೊಂಡ ರೀತಿ ಸರಿಯಲ್ಲ ಎಂದು ಮಾಜಿ ಸಚಿವ ಜಿ.ಟಿ.ಡಿ ಅಭಿಪ್ರಾಯ ಪಟ್ಟಿದ್ದಾರೆ.</p>



<figure class="wp-block-image size-large"><img decoding="async" width="1024" height="538" src="https://peepalmedia.com/wp-content/uploads/2023/07/pic-1024x538.jpg" alt="" class="wp-image-24157" srcset="https://peepalmedia.com/wp-content/uploads/2023/07/pic-1024x538.jpg 1024w, https://peepalmedia.com/wp-content/uploads/2023/07/pic-300x158.jpg 300w, https://peepalmedia.com/wp-content/uploads/2023/07/pic-768x403.jpg 768w, https://peepalmedia.com/wp-content/uploads/2023/07/pic-150x79.jpg 150w, https://peepalmedia.com/wp-content/uploads/2023/07/pic-696x365.jpg 696w, https://peepalmedia.com/wp-content/uploads/2023/07/pic-1068x561.jpg 1068w, https://peepalmedia.com/wp-content/uploads/2023/07/pic.jpg 1200w" sizes="(max-width: 1024px) 100vw, 1024px" /></figure>



<p>ಇನ್ನು ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದುಪಡಿಸಲು ಕಾಂಗ್ರೆಸ್ ಪಕ್ಷವು ಮಸೂದೆಯನ್ನು ಅಂಗೀಕರಿಸಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಸದನದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಇದು ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರಿಗೆ ಸರಿ ಕಂಡುಬರಲಿಲ್ಲ ಎಂದು ಮುಖಂಡರೊಬ್ಬರು ತಿಳಿಸಿದ್ದಾರೆ‌. ಜೆಡಿಎಸ್ (ಕುಮಾರಸ್ವಾಮಿ) ನಡೆ ಸರಿಯಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿದ್ದರು ಎನ್ನುವ ಮಾತು ಕೇಳಿ ಬರುತ್ತಿದೆ.2024 ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳಬೇಕೆಂದು ಕುಮಾರಸ್ವಾಮಿ ಬಯಸಿದ್ದಾರೆ. ಆದರೆ, ಎಚ್‌ಡಿ ರೇವಣ್ಣ ಅವರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.</p>



<figure class="wp-block-image size-full"><img decoding="async" width="739" height="415" src="https://peepalmedia.com/wp-content/uploads/2023/07/images-2023-07-21T184937.556.jpeg" alt="" class="wp-image-24158" srcset="https://peepalmedia.com/wp-content/uploads/2023/07/images-2023-07-21T184937.556.jpeg 739w, https://peepalmedia.com/wp-content/uploads/2023/07/images-2023-07-21T184937.556-300x168.jpeg 300w, https://peepalmedia.com/wp-content/uploads/2023/07/images-2023-07-21T184937.556-150x84.jpeg 150w, https://peepalmedia.com/wp-content/uploads/2023/07/images-2023-07-21T184937.556-696x391.jpeg 696w" sizes="(max-width: 739px) 100vw, 739px" /></figure>



<p>ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುಮಾರಸ್ವಾಮಿ ಅವರ ಬಯಕೆಗೆ ಸುಮಾರು 12 ಜೆಡಿಎಸ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ರಾಜಕೀಯ ವಿರೋಧಗಳೇನೇ ಇದ್ದರೂ ಹೊಸ ಮೈತ್ರಿಕೂಟ, ಹಳೆಯ ದೋಸ್ತಿಗಳ ಜೊತೆಗೆ ಕೈಜೋಡಿಸಿ, &#8220;INDIA&#8221; ಮೈತ್ರಿಕೂಟದ ನಾಯಕರೊಂದಿಗೆ ಮಾತುಕತೆ ನಡೆಸಬಹುದಿತ್ತು ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ. ಹೇಗಿದ್ದರೂ ಮಾಜಿ ಪ್ರಧಾನಿ ದೇವೇಗೌಡರಿಗೆ ಅಲ್ಲಿ ವಿಶೇಷ ಸ್ಥಾನಮಾನ ಕೂಡಾ ಸಿಗುತ್ತಿತ್ತು. ಆದರೆ ಕುಮಾರಸ್ವಾಮಿಯವರ ನಡೆಯಿಂದಾಗಿ ಇವೆಲ್ಲವನ್ನೂ ಕಳೆದುಕೊಳ್ಳಬೇಕಾಗಿದೆ ಎಂಬ ಅಸಮಾಧಾನ ಕೂಡಾ ಜೆಡಿಎಸ್ ನಲ್ಲಿ ಇದೆ ಎನ್ನಲಾಗಿದೆ.</p>



<p>ರಾಜಕೀಯವಾಗಿ ಹೆಚ್.ಡಿ.ಕುಮಾರಸ್ವಾಮಿಯವರ ದಿನಕ್ಕೊಂದು ನಡೆ, ಪಕ್ಷದ ನಿಲುವಿನ ಬಗ್ಗೆ ಹೆಚ್.ಡಿ.ದೇವೇಗೌಡರ ಹೇಳಿಕೆ, ಒಂದೇ ಕುಟುಂಬವಾದರೂ ಹೆಚ್.ಡಿ.ರೇವಣ್ಣನವರ ವ್ಯತಿರಿಕ್ತ ನಿಲುವು, ಕುಮಾರಸ್ವಾಮಿ ನಡೆಯಿಂದ ಬೇಸತ್ತ ಶಾಸಕರು.. ಎಲ್ಲಕ್ಕಿಂತ ಹೆಚ್ಚಾಗಿ ಅತಂತ್ರ ಸ್ಥಿತಿಯಲ್ಲಿರುವ ಕಾರ್ಯಕರ್ತರು.. ಇವೆಲ್ಲವನ್ನೂ ನೋಡುತ್ತಿದ್ದರೆ ಮೇಲಿನ ಸಾಲು ಜೆಡಿಎಸ್ ನ ಇಂದಿನ ಸ್ಥಿತಿಗೆ ಸೂಕ್ತ ಅನ್ನಿಸದಿರದು.</p>
]]></content:encoded>
					
		
		
			</item>
		<item>
		<title>ಬಿಜೆಪಿ ಲೆಟರ್ ಹೆಡ್ ನಲ್ಲಿ ಕುಮಾರಸ್ವಾಮಿ ಸಹಿ : ಜೆಡಿಎಸ್ ಅಸ್ತಿತ್ವಕ್ಕೆ ಮುಳುವಾದ ಕುಮಾರಸ್ವಾಮಿ ನಡೆ</title>
		<link>https://peepalmedia.com/kumaraswamys-signature-on-bjp-letterhead/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 20 Jul 2023 11:12:18 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[bjp]]></category>
		<category><![CDATA[H D KUMARASWAMY]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<guid isPermaLink="false">https://peepalmedia.com/?p=24067</guid>

					<description><![CDATA[&#8216;ಜಾತ್ಯತೀತ&#8217; ಜನತಾದಳದ ಇತ್ತೀಚಿನ ನಿಲುವು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಿಜೆಪಿ ಕಡೆಗಿನ ಒಲವು ಎಲ್ಲಾ ಸೇರಿದಂತೆ ಕಳೆದ ಕೆಲವು ದಿನಗಳಿಂದ ಕುಮಾರಸ್ವಾಮಿ ಬಹಳಷ್ಟು ಚರ್ಚೆಗೆ ಗ್ರಾಸವಾಗುತ್ತಿದ್ದಾರೆ. ಅದಕ್ಕೆ ಪೂರಕ ಎಂಬಂತೆ ಈಗ ಹೆಚ್.ಡಿ.ಕುಮಾರಸ್ವಾಮಿಯವರದ್ದೇ ಎನ್ನಲಾಗುವ &#8216;ಸಹಿ&#8217; ಒಂದು ಮತ್ತೊಂದು ಚರ್ಚೆ ಹುಟ್ಟಲು ಕಾರಣವಾಗಿದೆ. ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಅಗತ್ಯಕ್ಕಿಂತ ಹೆಚ್ಚು ಬಿಜೆಪಿ ಮೇಲೆ ಒಲವು ತೋರುತ್ತಿರುವುದು ಈಗ ರಾಜಕೀಯ ವಲಯದಲ್ಲಿ ಟ್ರೆಂಡಿಂಗ್ ವಿಚಾರ. ಅದು ಕಾಂಗ್ರೆಸ್ ಮೇಲಿನ ದ್ವೇಷಕ್ಕೋ ಅಥವಾ ತಮ್ಮ ಮಗ ನಿಖಿಲ್ [&#8230;]]]></description>
										<content:encoded><![CDATA[
<p>&#8216;ಜಾತ್ಯತೀತ&#8217; ಜನತಾದಳದ ಇತ್ತೀಚಿನ ನಿಲುವು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಿಜೆಪಿ ಕಡೆಗಿನ ಒಲವು ಎಲ್ಲಾ ಸೇರಿದಂತೆ ಕಳೆದ ಕೆಲವು ದಿನಗಳಿಂದ ಕುಮಾರಸ್ವಾಮಿ ಬಹಳಷ್ಟು ಚರ್ಚೆಗೆ ಗ್ರಾಸವಾಗುತ್ತಿದ್ದಾರೆ. ಅದಕ್ಕೆ ಪೂರಕ ಎಂಬಂತೆ ಈಗ ಹೆಚ್.ಡಿ.ಕುಮಾರಸ್ವಾಮಿಯವರದ್ದೇ ಎನ್ನಲಾಗುವ &#8216;ಸಹಿ&#8217; ಒಂದು ಮತ್ತೊಂದು ಚರ್ಚೆ ಹುಟ್ಟಲು ಕಾರಣವಾಗಿದೆ.</p>



<p>ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಅಗತ್ಯಕ್ಕಿಂತ ಹೆಚ್ಚು ಬಿಜೆಪಿ ಮೇಲೆ ಒಲವು ತೋರುತ್ತಿರುವುದು ಈಗ ರಾಜಕೀಯ ವಲಯದಲ್ಲಿ ಟ್ರೆಂಡಿಂಗ್ ವಿಚಾರ. ಅದು ಕಾಂಗ್ರೆಸ್ ಮೇಲಿನ ದ್ವೇಷಕ್ಕೋ ಅಥವಾ ತಮ್ಮ ಮಗ ನಿಖಿಲ್ ನ ಸೋಲಿನ ಪ್ರತೀಕಾರದ ಕಾರಣಕ್ಕೋ.</p>



<p>ಅದೇನೇ ಇರಲಿ. ಹಿಂದೆ ಬಿಜೆಪಿ ಜೊತೆಗೆ ಕೈ ಜೋಡಿಸಿ ಸರ್ಕಾರ ರಚಿಸಿದಾಗಲೂ ಕುಮಾರಸ್ವಾಮಿ ಒಂದು ಕಡೆ ಜೆಡಿಎಸ್ ಪಕ್ಷ ಕಟ್ಟುವ ಬಗ್ಗೆಯೂ ಅಷ್ಟೆ ಆಸಕ್ತಿ ತೋರಿದ್ದರು. ಆದರೆ ಈಗ ಮಾತ್ರ ತಮ್ಮದೇ ಪಕ್ಷದ ಮೇಲಿನ ಆಸೆಯೂ ಕಡಿಮೆಯಾಗಿ, ಕಾಂಗ್ರೆಸ್ ಮೇಲಿನ ದ್ವೇಷ ಮತ್ತು ಬಿಜೆಪಿ ಮೇಲಿನ ಒಲವು ಮಾತ್ರ ಹೆಚ್ಚಾದಂತೆ ಅವರ ಮಾತುಗಳಲ್ಲಿ ಕೇಳಿ ಬರುತ್ತಿದೆ.</p>



<p>ಅದೇ ಕಾರಣಕ್ಕೆ ಈಗ ಪದೇಪದೆ ದೆಹಲಿ ಭೇಟಿ, ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆಗೆ ಕ್ಷೇತ್ರದ ಹೊಂದಾಣಿಕೆಯ ಮಾತುಗಳು ಹೆಚ್ಚು ಕೇಳಿ ಬರುತ್ತಿದೆ. ಈಗ ಒಂದು ಹೆಜ್ಜೆ ಮುಂದೆ ಹೋದಂತೆ ಸಧ್ಯ ಕುಮಾರಸ್ವಾಮಿಯವರದ್ದೇ ಎನ್ನಲಾದ ಸಹಿಯೊಂದು ಈಗ ಬಿಜೆಪಿ ಲೆಟರ್ ಹೆಡ್ ನಲ್ಲಿ ಕಂಡಿದ್ದು, ಕುಮಾರಸ್ವಾಮಿಯವರ ಬಿಜೆಪಿ ಸೇರ್ಪಡೆಗೆ ಇದೊಂದು ಮೆಟ್ಟಿಲು ಎನ್ನಲಾಗಿದೆ.</p>



<figure class="wp-block-image size-large"><img loading="lazy" decoding="async" width="707" height="1024" src="https://peepalmedia.com/wp-content/uploads/2023/07/IMG_20230720_163831-707x1024.jpg" alt="" class="wp-image-24069" srcset="https://peepalmedia.com/wp-content/uploads/2023/07/IMG_20230720_163831-707x1024.jpg 707w, https://peepalmedia.com/wp-content/uploads/2023/07/IMG_20230720_163831-207x300.jpg 207w, https://peepalmedia.com/wp-content/uploads/2023/07/IMG_20230720_163831-768x1113.jpg 768w, https://peepalmedia.com/wp-content/uploads/2023/07/IMG_20230720_163831-150x217.jpg 150w, https://peepalmedia.com/wp-content/uploads/2023/07/IMG_20230720_163831-300x435.jpg 300w, https://peepalmedia.com/wp-content/uploads/2023/07/IMG_20230720_163831-696x1009.jpg 696w, https://peepalmedia.com/wp-content/uploads/2023/07/IMG_20230720_163831.jpg 797w" sizes="auto, (max-width: 707px) 100vw, 707px" /></figure>



<p>ಜುಲೈ 18 ಮತ್ತು 19 ಕ್ಕೆ ಹೊಸದಾಗಿ ಘೋಷಣೆಯಾದ &#8216;INDIA&#8217; ಒಕ್ಕೂಟದ ಪ್ರತಿಪಕ್ಷಗಳ ನಾಯಕರ ಬೆಂಗಳೂರು ಸಭೆಗೆ IAS ದರ್ಜೆಯ ಅಧಿಕಾರಿಗಳನ್ನು ಬಳಸಿಕೊಂಡ ಬಗ್ಗೆ ಬಿಜೆಪಿ ಪಕ್ಷ ದೂರು ಸಿದ್ದಪಡಿಸಿತ್ತು. ರಾಜ್ಯದ ರಾಜ್ಯಪಾಲರಿಗೆ ಸೂಚಿಸಿದ ಈ ಪತ್ರ ಬಿಜೆಪಿ ಪಕ್ಷದ ಲೆಟರ್ ಹೆಡ್ ನಲ್ಲಿ ಸಿದ್ದಗೊಂಡಿತ್ತು. ಪತ್ರದಲ್ಲಿ IAS ದರ್ಜೆಯ ಅಧಿಕಾರಿಗಳನ್ನು ಪಕ್ಷದ ಅಥವಾ ಪಕ್ಷಗಳ ಒಕ್ಕೂಟದ ಕೆಲಸಕ್ಕೆ ಬಳಸಿಕೊಂಡ ಬಗ್ಗೆ, ಅಲ್ಲಿನ ಭದ್ರತೆ ವ್ಯವಸ್ಥೆ ನೋಡಿಕೊಳ್ಳಲು ಬಳಸಿಕೊಂಡ ಬಗೆಗಿನ ದೂರು ಅದಾಗಿತ್ತು. ಆದರೆ ಬಿಜೆಪಿ ಸಿದ್ದಪಡಿಸಿದ ದೂರಿನಲ್ಲಿ ಕುಮಾರಸ್ವಾಮಿ ಸಹಿ ಮಾಡಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.</p>



<figure class="wp-block-image size-large is-resized"><img loading="lazy" decoding="async" src="https://peepalmedia.com/wp-content/uploads/2023/07/IMG_20230720_163921-768x1024.jpg" alt="" class="wp-image-24070" width="359" height="525"/></figure>



<p>ಕುಮಾರಸ್ವಾಮಿ ಮಾತ್ರವಲ್ಲ, ಶಾಸಕರಾದ ಜಿ.ಟಿ.ದೇವೇಗೌಡ, ಪರಿಷತ್ ಸದಸ್ಯ ಬೋಜೇಗೌಡ ಹಾಗೂ ಟಿ.ಎ.ಸರವಣ ಅವರ ಸಹಿ ಸಹ ಈ ಲೆಟರ್ ಹೆಡ್ ನಲ್ಲಿ ಕಂಡುಬಂದಿದೆ. ಜೊತೆಗೆ ಬಿಜೆಪಿ ನಾಯಕರುಗಳಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್ ಅಶೋಕ್, ಸುನಿಲ್ ಕುಮಾರ್, ಅಶ್ವಥ್ ನಾರಾಯಣ್, ಕೋಟ ಶ್ರೀನಿವಾಸ ಪೂಜಾರಿ ಹೆಸರುಗಳೂ ಸಹ ಪತ್ರದಲ್ಲಿದೆ.</p>



<p>ಮಾಜಿ ಮುಖ್ಯಮಂತ್ರಿಯಾಗಿ, ಒಂದು ರಾಜಕೀಯ ಪಕ್ಷದ ದೊಡ್ಡ ನಾಯಕರಾಗಿ, ರಾಜ್ಯದಲ್ಲಿ ತಮ್ಮದೇ ಪಕ್ಷವೊಂದು ಅಸ್ತಿತ್ವದಲ್ಲಿ ಇದ್ದರೂ ಕುಮಾರಸ್ವಾಮಿ ರಾಜ್ಯಪಾಲರಿಗೆ ಪ್ರತ್ಯೇಕ ದೂರೊಂದನ್ನು ಸಲ್ಲಿಸಬಹುದಿತ್ತು. ಅಲ್ಲಿ ತಮ್ಮ ಪಕ್ಷದ ಅಸ್ಥಿತ್ವಕ್ಕೂ ಒಂದು ಘನತೆ ಇರುತ್ತಿತ್ತು. ಆದರೆ ಅದ್ಯಾವುದನ್ನೂ ಯೋಚಿಸದೆ ಕುಮಾರಸ್ವಾಮಿ ಕಣ್ಮುಚ್ಚಿಕೊಂಡು ಬಿಜೆಪಿ ಲೆಟರ್ ಹೆಡ್ ನಲ್ಲಿ ಸಹಿ ಮಾಡಿದರೇ ಎಂಬ ಪ್ರಶ್ನೆ ಉದ್ಭವಿಸಿದೆ.</p>



<p>ರಾಜಕೀಯ ಪಂಡಿತರ ಪ್ರಕಾರ ಜೆಡಿಎಸ್ ಪಕ್ಷ ಬಿಜೆಪಿ ಜೊತೆಗೆ ವಿಲೀನಗೊಳ್ಳಲು ಇದು ಒಂದು ಮೆಟ್ಟಿಲು ಎನ್ನಲಾಗಿದೆ. ಈ ನಡುವೆ ಕುಮಾರಸ್ವಾಮಿ ನಡೆಯಿಂದ ಬೇಸತ್ತ 9 ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಪಕ್ಷದ ಕದ ತಟ್ಟುತ್ತಿದ್ದಾರೆ ಎಂಬ ಮಾತುಗಳು ಈ ಬೆಳವಣಿಗೆ ನಡುವೆ ಮಹತ್ವ ಪಡೆದುಕೊಳ್ಳುತ್ತಿದೆ. ಒಟ್ಟಾರೆ ಮುಂಬರುವ ಲೋಕಸಭೆ ಚುನಾವಣೆ ವೇಳೆಗೆ ಜೆಡಿಎಸ್ ಪಕ್ಷದ ಅಳಿವು ಉಳಿವನ್ನು ಹೆಚ್.ಡಿ.ಕುಮಾರಸ್ವಾಮಿಯವರ ಇತ್ತೀಚಿನ ನಡೆ ನಿರ್ಧರಿಸಲಿಗೆ ಎಂಬುದು ಸ್ಪಷ್ಟ.</p>
]]></content:encoded>
					
		
		
			</item>
		<item>
		<title>ನಾಳೆಯಿಂದ ಪಂಚರತ್ನ ರಥಯಾತ್ರೆ ಪುನರಾರಂಭ: ಹೆಚ್‌.ಡಿ.ಕೆ</title>
		<link>https://peepalmedia.com/pancharatna-rath-yatra-to-resume-from-tomorrow-h-d-k/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 14 Dec 2022 13:19:03 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[H D KUMARASWAMY]]></category>
		<category><![CDATA[HDK birth day]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[Pancharatna Rath Yatra]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=18532</guid>

					<description><![CDATA[ಬೆಂಗಳೂರು: ಮಳೆಯ ಕಾರಣಕ್ಕೆ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಪಂಚರತ್ನ ರಥಯಾತ್ರೆ ಗುರುವಾರ (ನಾಳೆ) ದಿಂದ ರಾಮನಗರ ಜಿಲ್ಲೆಯ ಮಾಗಡಿ ವಿಧಾನಸಭೆ ಕ್ಷೇತ್ರದಲ್ಲಿ ಪುನಾರಂಭ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸೆಂಬರ್ 6ರಂದು ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದಲ್ಲಿ ರಥಯಾತ್ರೆ ನಡೆಸಿದ ನಂತರ ಡಿಸೆಂಬರ್ 11ರವರೆಗು ಮುಂದಕ್ಕೆ ಹಾಕಲಾಗಿತ್ತು. ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ವ್ಯಾಪಕ ಮಳೆ ಸುರಿಯುತ್ತಿತ್ತು. ಈ ಕಾರಣಕ್ಕೆ ಡಿಸೆಂಬರ್ 14ರವರೆಗು ಯಾತ್ರೆಯನ್ನು ಮತ್ತೊಮ್ಮೆ [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ಮಳೆಯ ಕಾರಣಕ್ಕೆ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಪಂಚರತ್ನ ರಥಯಾತ್ರೆ ಗುರುವಾರ (ನಾಳೆ) ದಿಂದ ರಾಮನಗರ ಜಿಲ್ಲೆಯ ಮಾಗಡಿ ವಿಧಾನಸಭೆ ಕ್ಷೇತ್ರದಲ್ಲಿ ಪುನಾರಂಭ ಆಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.</p>



<p>ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸೆಂಬರ್ 6ರಂದು ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದಲ್ಲಿ ರಥಯಾತ್ರೆ ನಡೆಸಿದ ನಂತರ ಡಿಸೆಂಬರ್ 11ರವರೆಗು ಮುಂದಕ್ಕೆ ಹಾಕಲಾಗಿತ್ತು. ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ವ್ಯಾಪಕ ಮಳೆ ಸುರಿಯುತ್ತಿತ್ತು. ಈ ಕಾರಣಕ್ಕೆ ಡಿಸೆಂಬರ್ 14ರವರೆಗು ಯಾತ್ರೆಯನ್ನು ಮತ್ತೊಮ್ಮೆ ಮುಂದಕ್ಕೆ ಹಾಕಲಾಗಿತ್ತು ಎಂದರು.</p>



<p>ಮಳೆ ಬಿಡುವು ಕೊಟ್ಟ ಹಿನ್ನೆಲೆಯಲ್ಲಿ ನಾಳೆಯಿಂದ (ಗುರುವಾರ) ರಾಮನಗರ ಜಿಲ್ಲೆಯಲ್ಲಿ ರಥಯಾತ್ರೆ ನಡೆಯಲಿದೆ. 15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.</p>



<p>ಮಾಹಿತಿ ಪ್ರಕಾರ,ಮಾಗಡಿಯ ಶ್ರೀ ರಂಗನಾಥ ಸ್ವಾಮಿ ದೇವಾಲಯ ಮತ್ತು ಶ್ರೀ ಸೋಮೇಶ್ವರ ದೇವಾಲಯದಲ್ಲಿ ಸಂಜೆ ಮಾಜಿ ಮುಖ್ಯಮಂತ್ರಿಗಳು ಪೂಜೆ ಸಲ್ಲಿಸುವರು. ನಂತರ ಮಾಗಡಿ ಪಟ್ಟಣದ ಜೆಡಿಎಸ್ ಭವನದಲ್ಲಿ ಬೃಹತ್ ಸಭೆ ನಡೆಯಲಿದೆ. ಅದಾದ ಮೇಲೆ ಶ್ರೀ ಕಲ್ಯಾ ಗೇಟ್ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಮೆರವಣಿಗೆ ನಡೆಯಲಿದೆ. ಅಂತಿಮವಾಗಿ ಮಾಗಡಿಯ ಕೋಟೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ತಿಳಿದು ಬಂದಿದೆ.</p>



<p>ಮಾಗಡಿ ಕ್ಷೇತ್ರದ ರಥಯಾತ್ರೆಯಲ್ಲಿ ಶಾಸಕ ಮಂಜುನಾಥ್ ಅವರು ಇರಲಿದ್ದು, ಡಿಸೆಂಬರ್ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದ್ದು, 20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದ್ದಾರೆ.</p>



<p>ಡಿಸೆಂಬರ್ 27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ. ಜನವರಿ 3ರಂದು ಬೀದರ್ ವಿಧಾನಸಭೆ ಕ್ಷೇತ್ರದ ಮೂಲಕ ಕಲ್ಯಾಣ ಕರ್ನಾಟಕವನ್ನು ರಥಯಾತ್ರೆ ಪ್ರವೇಶ ಮಾಡಲಿದೆ ಎಂದು ಕುಮಾರಸ್ವಾಮಿಯವರು ತಿಳಿಸಿದ್ದಾರೆ.</p>



<p><strong>ಶ್ರೀನಿವಾಸ </strong><strong>ಕಲ್ಯಾಣ </strong><strong>ಮತ್ತು </strong><strong>ಹೆಚ್‌ಡಿಕೆ </strong><strong>ಹುಟ್ಟುಹಬ್ಬ</strong></p>



<p>ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ನಿಮಿತ್ತ 16ರಂದು ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೆಗೌಡರ ಕುಟುಂಬ ಹಾಗೂ ಮಾಜಿ ಮುಖ್ಯಮಂತ್ರಿಗಳ ಕುಟುಂಬದ ಸದಸ್ಯರು ಭಾಗಿಯಾಗಲಿದ್ದಾರೆ.</p>
]]></content:encoded>
					
		
		
			</item>
		<item>
		<title>ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ: ಎಚ್‌.ಡಿ.ಕೆ ಆಕ್ರೋಶ</title>
		<link>https://peepalmedia.com/attack-on-student-who-hoisted-kannada-flag-hdk-outraged/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 01 Dec 2022 11:02:23 +0000</pubDate>
				<category><![CDATA[ಬೆಳಗಾವಿ]]></category>
		<category><![CDATA[ರಾಜ್ಯ]]></category>
		<category><![CDATA[attack]]></category>
		<category><![CDATA[BELAGAVI]]></category>
		<category><![CDATA[Gogte College of Commerce]]></category>
		<category><![CDATA[H D KUMARASWAMY]]></category>
		<category><![CDATA[kannada]]></category>
		<category><![CDATA[Kannada flag]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<guid isPermaLink="false">https://peepalmedia.com/?p=17174</guid>

					<description><![CDATA[ಬೆಳಗಾವಿ: ಬೆಳಗಾವಿಯ ಗೋಗ್ಟೆ ಕಾಲೇಜ್‌ ಆಫ್‌ ಕಾಮರ್ಸ್‌ʼನ ಶ್ರೇಯಸ್‌ ಎಂಬ ವಿದ್ಯಾರ್ಥಿ, ಜಿಲ್ಲೆಯ ಅಂತರ್‌ ಕಾಲೇಜು ಉತ್ಸವದಲ್ಲಿ ಕನ್ನಡ ಧ್ವಜವನ್ನು ಹಾರಿಸಿದ ವಿಧ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆದಿದೆ. ನಂತರ ವಿದ್ಯಾರ್ಥಿಯು ಹಲ್ಲೆ ನಡೆಸಿದವರ ಮೇಲೆ ಪೊಲೀಸರಿಗೆ ದೂರು ನೀಡಲು ಹೋದಾಗ, ಪೊಲೀಸರು ಕೂಡ ಆತನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವುದರ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ [&#8230;]]]></description>
										<content:encoded><![CDATA[
<p><strong>ಬೆಳಗಾವಿ:</strong> ಬೆಳಗಾವಿಯ ಗೋಗ್ಟೆ ಕಾಲೇಜ್‌ ಆಫ್‌ ಕಾಮರ್ಸ್‌ʼನ ಶ್ರೇಯಸ್‌ ಎಂಬ ವಿದ್ಯಾರ್ಥಿ, ಜಿಲ್ಲೆಯ ಅಂತರ್‌ ಕಾಲೇಜು ಉತ್ಸವದಲ್ಲಿ ಕನ್ನಡ ಧ್ವಜವನ್ನು ಹಾರಿಸಿದ ವಿಧ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆದಿದೆ. ನಂತರ ವಿದ್ಯಾರ್ಥಿಯು ಹಲ್ಲೆ ನಡೆಸಿದವರ ಮೇಲೆ ಪೊಲೀಸರಿಗೆ ದೂರು ನೀಡಲು ಹೋದಾಗ, ಪೊಲೀಸರು ಕೂಡ ಆತನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವುದರ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>



<p>ಈ ಕುರಿತು ಟ್ವೀಟ್‌ ಮಾಡಿರುವ ಅವರು, ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಕೂಡ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ ಎಂದು ಕಿಡಿಕಾರಿದ್ದಾರೆ.</p>



<p>ಡಿಸಿಪಿ ಹಾಗೂ ಎಸಿಪಿ ಮಟ್ಟದ ಅಧಿಕಾರಿಗಳು ಇಬ್ಬರು ಬಾಲಕನ ವಿಷಯದಲ್ಲಿ ಕ್ರೂರವಾಗಿ ವರ್ತಿಸಿ ದರ್ಪ ತೋರಿಸಿರುವುದು ಸರಿಯಲ್ಲ. ಡಿಸಿಪಿ ಅಧಿಕಾರಿ ಆ ಬಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಪಾಳಮೋಕ್ಷ ಮಾಡಿ, ಬೂಟು ಕಾಲಿನಿಂದ ಒದ್ದಿರುವುದು ಅಕ್ಷಮ್ಯ ಹಾಗೂ ಅನಾಗರಿಕ ವರ್ತನೆ ಎಂದು ಗಡುಗಿದ್ದಾರೆ.</p>



<p>ಈ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ಬಾಲಕನ ಮೇಲೆ ಹಲ್ಲೆ ನಡೆಸಿದ ಇತರೆ ಬಾಲಕರನ್ನು ವಶಕ್ಕೆ ಪಡೆದು, ಅವರಿಗೆ ಚಿತಾವಣೆ ನೀಡಿದವರನ್ನು ಬಂಧಿಸಬೇಕು ಹಾಗೂ ಕನ್ನಡ ಬಾವುಟ ಹಾರಿಸಿದ ಬಾಲಕನ ಮೇಲೆ ದುಂಡಾವರ್ತನೆ ತೋರಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.</p>



<p>ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಬೆಳಗಾವಿಯಲ್ಲಿ ಗೊಂದಲ ಹೆಚ್ಚಾಗುತ್ತಿದೆ. ಪ್ರತಿ ಸೂಕ್ಷ್ಮ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಬಿಜೆಪಿಯ ಕೈಯ್ಯಲ್ಲಿ ಕನ್ನಡ ಮತ್ತು ಕನ್ನಡಿಗರು ಸುರಕ್ಷಿತವಾಗಿಲ್ಲ ಎನ್ನುವುದು ಸ್ಪಷ್ಟ. ಬೆಳಗಾವಿ ವಿಷಯ ಗಮನಿಸಿದರೆ ಅದು ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತೇನೆ.<br>ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಕೂಡ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ.1/4<a href="https://twitter.com/hashtag/%E0%B2%95%E0%B2%A8%E0%B3%8D%E0%B2%A8%E0%B2%A1?src=hash&amp;ref_src=twsrc%5Etfw">#ಕನ್ನಡ</a> <a href="https://twitter.com/hashtag/%E0%B2%AC%E0%B3%86%E0%B2%B3%E0%B2%97%E0%B2%BE%E0%B2%B5%E0%B2%BF?src=hash&amp;ref_src=twsrc%5Etfw">#ಬೆಳಗಾವಿ</a></p>&mdash; ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) <a href="https://twitter.com/hd_kumaraswamy/status/1598211515060195329?ref_src=twsrc%5Etfw">December 1, 2022</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
	</channel>
</rss>
